ಒಟ್ಟು 106 ಕಡೆಗಳಲ್ಲಿ , 44 ದಾಸರು , 98 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣದೇವನೆ ನಿನ್ನ ಧ್ಯಾನಿಸದೆ ಮನದಿ ಬಲು ಹೀನನಾದೆನೊ ಲೋಕದಿ ಪ ಪಾದ ಧ್ಯಾನಮಾಡುವ ಮುಖ್ಯ- ಪ್ರಾಣನೀನೆಂದು ಮನಸಾರ ಪೂಜಿಸದೆ ಶ್ರೀ ಅ.ಪ ಶರಧಿ ಬಂಧಿಸಿ ದಶಶಿರನಳಿದ ಪಾದ ಸ್ಮರಣೆ ಮಾಡುತಲಿ ನಿತ್ಯ ಧರಣಿಸುತೆಯಳ ತಂದು ಪರಮ ಸಂಭ್ರಮದಿಂದ ಮೆರೆವದೇವನ ಸ್ಮರಿಸುತ ನರರೂಪದಿಂದ ದಶರಥನ ಪುರದಲಿ ನಿಂತ ಪರಮಾತ್ಮನಿಗೆ ನಮಿಸುತ ಸುರರು ಸ್ತುತಿಸಲು ಪರಮಹರುಷದಿಂದಾಲಿಸುತ ಹರಿಯ ಮೆಚ್ಚಿಪ ನಮ್ಮ ಗುರುಪವಮಾನ ಶ್ರೀ 1 ಅಂದು ಆ ಬಕನ ಭಯದಿಂದ ಸಜ್ಜನರೆಲ್ಲ ಕುಂದಿರಲು ಭಯವ ಹರಿಸಿ ಅಂಧಕನ ಸುತನ ಬಂಧಿಸುತ ರಣದೊಳಗೆ ಯದು- ನಂದನಗೆ ಪ್ರೀತಿ ಪಡಿಸಿ ಕೊಂದು ಬಿಸುಡಲು ಜರಾಸಂಧನನು ವಸುದೇವ ಕಂದ ನೋಡುತಲಿ ಸುಖಿಸಿ ಇಂದಿರಾರಮಣ ಮುಕುಂದನನು ಪೂಜಿಸುವ ಸುಂದರ ಭೀಮ ನಿಸ್ಸೀಮನಹುದೆಂದು ಶ್ರೀ2 ಪತಿತ ಸಂಕರದಿಂದ ಮತವೆಲ್ಲ ಕೆಡಲು ಶ್ರೀ- ಪತಿಯ ಧ್ಯಾನವು ಮಾಡುತ ಯತಿ ಶಿರೋಮಣಿಯಾಗಿ ಶ್ರುತಿ ಸ್ಮøತಿಗಳಣಿ ಮಾಡಿ ಹಿತವ ಜನರಿಗೆ ತೋರುತ ಎಸೆವ ಘನಗಿರಿಯಲ್ಲಿ ಅಸದಳ ಹನುಮರೆಂ- ದೆಸೆದು ಮಿಗೆ ಶೋಭಿಸುತಲಿ ವಾರಿ ದಡದಲಿ ಕಮಲನಾಭ ವಿಠ್ಠಲನ ಸ್ಮರಿಸಿ ಧೀರ ಹನುಮಂತನಪಾರ ಮಹಿಮನೆಂದು ವನಗಿರಿಯ ಗುಹೆಗಳಲಿ ಹನುಮಂತನೆಂದೆನುತ ಎಣಿಸಲಳವಲ್ಲವೋ ಘನಪರಾಕ್ರಮಿ ಮುಖ್ಯ 3
--------------
ನಿಡಗುರುಕಿ ಜೀವೂಬಾಯಿ
ಬಂದನು ಸರದಾರ ಸರದಾರ ಅಂಧಕರಿಪು ಸುಕುಮಾರಪ. ಶರಣಾಗತಜನಸುರಮಂದಾರ ದುರಿತಾರಣ್ಯಕುಠಾರ ಸುರನರಾದಿತ್ರೈಲೋಕೋದ್ಧಾರ ಗಿರಿಜಾಂಕಾಲಂಕಾರ1 ವಲ್ಲೀದೇವಿಮನೋಹಾರ ಒಲ್ಲದಜನಕತಿದೂರ ಸಾರ ಖುಲ್ಲದನುಜ ಸಂಹಾರ2 ಸುಕ್ಷೇತ್ರಪಾವಂಜಾಖ್ಯಪುರವರ ಸುಜ್ಞಾನನಿಧಿ ಗಂಭೀರ ಲಕ್ಷ್ಮೀನಾರಾಯಣನ ಕಿಂಕರ ರಕ್ಷಿಸು ನಮಿತಕುಬೇರ3
--------------
ತುಪಾಕಿ ವೆಂಕಟರಮಣಾಚಾರ್ಯ
ಬೆಳಗಾಯಿತೇಳಿರಯ್ಯಾ ಜನರೆ ಪ ಒಳಹೊರಗೆ ಅಂಧಕಾರವು ವ್ಯಾಪಿಸಿರೆ ರಾತ್ರಿ ಲಲನೆಯರ ತೆಕ್ಕೆಯಲಿ ನಿದ್ರಾಭರದಿ ಕಾಲ ತಳಮಳದೆ ತಮ್ಮ ಸ್ಥಳಗಳನು ಬಿಟ್ಟು ತಾವ್ ಕಲಕಲಧ್ವನಿಯಿಂದ ದೆಸೆದೆಸೆಗೆ ಪೋಗುತವೆ ಮಲಗಿರುವುದುಚಿತವಲ್ಲ ಜನರೆ 1 ಮರೆವೆಯನು ಬಿಟ್ಟು ಕಣ್ದೆರದು ಕೈಯುಜ್ಜಿ ಶ್ರೀ- ಹರಿಯ ಸಂಸ್ಮರಿಸಿ ಗುರುಹಿರಿಯರಡಿಗಳಿಗೆರಗಿ ದೊರೆಭಾಗ್ಯವಂತಗೋಸತಿಯರಿಗೆ ನಮಿಸಿ ದರ್ಪಣ ನೋಡಿನಿತ್ಯ ಕೃತ್ಯ ಹರುಷದಲಿ ನಿಮ್ಮ ನಿಮ್ಮನುಕೂಲದಂತೆ ಆ- ಸುಖಂಗಳ ಪಡಿಯಿರೈ 2 ವ್ಯರ್ಥಕಾಲಕ್ಷೇಪ ಮಾಡದಿರಿಯಿದರಿಂದ- ನರ್ಥ ಬರದಂತೆ ಯೋಚಿಸಿ ಈಗ ನಾವೇ ಕೃ- ಜನ್ಮವು ದುರ್ಲಭ ತೀರ್ಥಪಾದಗೆ ಸಮರ್ಪಣೆಗೈಯ್ಯೆಮನದಿಷ್ಟ ಸಜ್ಜನರು ಸಾಕ್ಷಿ 3 ನೆರೆಹೊರೆಯ ನೋಡುತಾಭರಣ ವಸ್ತ್ರಗಳು ಬಹು ದೊರೆತ ಮಟ್ಟಿಗೆ ಭೋಗ ಭಾಗ್ಯಗಳನನುಭವಿಸಿ ಪರಮಧರ್ಮವ ಘಳಿಸಿರೈ 4
--------------
ಗುರುರಾಮವಿಠಲ
ಮಂಗಳಾರತಿಯ ಪಾಡಿರೆ ಮಾನಿನಿಯರು ಪ ಅಂಧಕನನುಜನ ಕಂದನ ತಂದೆಯಕೊಂದನ ಶಿರದಲಿ ನಿಂದವನಚಂದದಿ ಪಡೆದವನ ನಂದನೆಯಳ ನಲವಿಂದ ಧರಿಸಿದ ಮುಕುಂದನಿಗೆ 1 ರಥವನಡರಿ ಸುರ ಪಥದಲಿ ತಿರುಗುವನಸುತನಿಗೆ ಶಾಪವನಿತ್ತವನಖತಿಯನು ತಡೆದನ ಸತಿಯ ಜನನಿ ಸುತನಸತಿಯರನಾಳಿದ ಚತುರನಿಗೆ 2 ಹರಿಯ ಮಗನ ಶಿರ ತರಿದನ ತಂದೆಯಹಿರಿಯ ಮಗನ ತಂದೆಯ ಪಿತನಭರದಿ ಭುಜಿಸಿದವನ ಶಿರದಲಿ ನಟಿಸಿದವರ ಕಾಗಿನೆಲೆಯಾದಿಕೇಶವಗೆ 3
--------------
ಕನಕದಾಸ
ಮದಲಗಟ್ಟಿ ಪ್ರಾಣನಾಥಾ ಮುದವನಿತ್ತು ಪಾಲಿಸಯ್ಯ ಪ ಮದನಜನಕ ಮಾಧವಾನಬೋಧವಿತ್ತು ಕರುಣಿಸಯ್ಯ ಅ.ಪ. ತಾಪ ಮೂರ್ತಿ ನೀನುದೀಪದಂತೆ ಹೊಳೆದು ಭವದಕೂಪ ದಾಟಿಸಯ್ಯಾ ಭೂಪ 1 ದೇವ ದೇವೋತ್ತಮನೆ ನೀನುಜೀವದಾನ ಮಾಡಿಸಯ್ಯಪಾವಮಾನಿ ಪರಿಕೆಸೆಮ್ಮಾನೋವನದೂರ ಮಾಡಿಸಯ್ಯಾ 2 ಅಂಧ ಬಧಿರ ಮೂರ್ಖ ಜನರುಬಂದು ನಿನ್ನ ವಂದಿಸಲುಛಂದದಿಂದ ಅವರ ದುರಿತವೃಂದವನ್ನು ನಾಶಗೈವೆ 3 ಭೂಸುರೇಂದ್ರ ವ್ಯಾಸರಿಂದಆರು ತುಂಗಾ ಹೃದವ ಬಿಟ್ಟುಭಾವಿಸುವೆ ಇಲ್ಲದೇವಆ ಸಮೀರ ಜಾತ ಶೂರ 4 ಮುದದಿನಾಥ ಜ್ಞಾನ ವಾತಾಕಂದಧೀಮಂಧ ರಾಮ ದೂತಾಹೃದಯ ಸದನದಲ್ಲಿ ತೋರೋತಂದೆಶ್ರೀನರಹರಿಯ ರೂಪ 5
--------------
ತಂದೆ ಶ್ರೀನರಹರಿ
ಮನವೆ ಶ್ರೀಗುರು ಪಾದವ ನಂಬು ನಿನಗಲ್ಯಾಹುದು ಘನ ಸುಖದಿಂಬು 1 ಅನುದಿನ ನೋಡಾ ನಂಬದೆ ನಿಜವನು ನೀ ಕೆಡಬ್ಯಾಡ 2 ಬ್ಯಾಡೆಂಬುದು ಈ ಮಾತನೆ ಕೇಳು ಬೇಡದೆ ಬಯಸದೆ ನಿಜದಲಿ ಬಾಳು 3 ಬಾಳುವದೀಪರಿ ಜನದಲಿ ಲೇಸು ತಿಳಿಯದೆ ಬಯಸುವದ್ಯಾತಕೆ ಸೋಸು 4 ಸೋಸ್ಹಿಡಿದರ ಬೇಕಾಹುದು ಜನ್ಮ ಕರ್ಮ 5 ಭವ ಬಂಧ ಮರ್ಮವ ತಿಳಿಯದವನೆ ತಾ ಅಂಧ 6 ಅಂಧಗ ತಿಳಿಯದು ಆತ್ಮದ ಗೂಢ ಸಂಧಿಸಿ ಬೀಳಲು ವಿಷದಲಿ ಮೂಢ 7 ಮೂಢಗೆಲ್ಲಿಹ್ಯ ಆತ್ಮದ ವಿಚಾರ ನೋಡುವ ನೋಟವು ಇದು ಬಲುದೂರ 8 ದೂರಕೇ ನೀ ದೂರಾಗಿಬ್ಯಾಡ ಅರಿಯಲು ತನ್ನೊಳು ಸಾರವೆ ನೋಡಾ 9 ನೋಡುವುದಿದು ಗುರುಙÁ್ಞನದ ಗುಟ್ಟು ಆಡಿದ ಅನುಭವ ಮಾತಿಗೆ ಮುಟ್ಟು 10 ಮುಟ್ಟಿದ ಖೂನವು ಮಿಸುಕಲಿ ಬ್ಯಾಡ ಘಟ್ಯಾಗಿ ನಿಜಘನ ಬೆರೆ ಗಾಢಾ 11 ಗಾಢಾಗಿಹುದು ನಿಜಗುರು ಙÁ್ಞನ ಮಾಡುವ ಧ್ಯಾನಕೆ ಅನುಸಂಧಾನ 12 ಉನ್ಮನದಲಿ ತಿಳಿವುದು ಗುರುಮುಖ 13 ಗುರು ಮುಖದಲಿ ಬೆಳಗಾಹುದು ಪೂರ್ಣ ಬೀರುವ ಪ್ರಭೆ ಸದ್ಗುರು ಕರುಣ 14 ಕರುಣದ ಸಾಗರ ಗುರುವರ ಮೂರ್ತಿ ಇರುಳ್ಹಗಲೆ ಕೊಂಡಾಡುವೆ ಕೀರ್ತಿ 15 ಕೀರ್ತಿಯ ಕೊಂಡಾಡುವನೀ ಮಹಿಪತಿ ಸಾರ್ಥಕವಿದು ಅನುಭವ ಮನೆಮೂರ್ತಿ 16
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಮಾಡಬಾರದೇ ಸಂಗಾ | ಸಂತರ | ಮಾಡಬಾರದೇ ಸಂಗ | ಕೂಡಿ ಶ್ರವಣವ ಮಾಡಲು ಮನದೊಳು | ಮಾಡಿಬಹುನು ಶ್ರೀರಂಗಾ ಪ ದೇಶ ತಿರುಗುವದ್ಯಾಕ | ಕಾಸಿ ಆರಿದ ಹಾಲವು ಇದರಿಡೇ | ಆ ಶಿವಧ್ಯಾನವು ಬೇಕ 1 ನಾನಾ ಸಾಧನದಿಂದಾ | ಬಾಹು | ದೇನೆಲೋ ಮತಿಮಂದಾ | ಮನಿಯೊಳಗಿನ ಗಿಡ ಸಂಜೀವನಾಗಿರೆ | ಕಾನನ ತಿರುಗುವದೇ ಅಂಧಾ 2 ಲೋಹ ಪರುಷವ ಬಿಟ್ಟು | ಕಾಷ್ಟದ ಲಾಹುದೇ ಚಿನ್ನದ ಗಂಟು | ಮಹಿಪತಿ ನಂದನು ಸಾರಿದ ಸ್ವಹಿತಕ | ಮಹಾನುಭಾವದಾ ನಿಜಗುಟ್ಟು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಮ ತನ್ನ ಪುರದಿ ಸಾರಿದನು ಎಮ್ಮ ಕಮಲನಾಭನ ದಾಸರ ಮುಟ್ಟದಿರಿಯೆಂದು ಪ. ಭುಜದಲೊತ್ತಿದ ಶಂಖಚಕ್ರಾಂಕಿತವನ್ನು ನಿಜ ದ್ವಾದಶನಾಮ ಧರಿಸಿಪ್ಪರಾ ತ್ರಿಜಗವಂದಿತ ತುಲಸಿಯ ಮಾಲೆ ಹಾಕಿದ ಸುಜನರಂಗಣವ ಪೊಗದೆ ಬನ್ನಿರೆಂದು 1 ಗೋಪಿಚಂದನ ಬಿಟ್ಟು ದೇಹಕ್ಕೆ ಭಸ್ಮವ ಲೇಪಿಸಿ ಹರಿಹರರೊಂದೆಂಬ ಪಾಪಿಗಾಳೆಳತಂದು ಕಣ್ಣು ಕಳಚಿ ಅಂಧ ತಾಮಸಿನೊಳಗ್ಹಾಕಿ ಕಲ್ಲು ದಬ್ಬಿರೊ ಎಂದು 2 ತಾಳದಂಡಿಗೆ ನೃತ್ಯಗೀತ ಸಮ್ಮೇಳದಿ ಊಳಿಗವನು ಮಾಳ್ಪ ಹರಿದಾಸರ ಕೇಳುತಲೊಮ್ಮೆ ಕರಗಳ ಮುಗಿದು ನ - ಮ್ಮಾಳುಗಳೆನುತ ಪೇಳದೆ ಬನ್ನಿರೆಂದು 3 ಗುರುಮುದ್ರೆಯವನು ತಾನೆಂದು ಪ್ರಾಣಿಗಳ ಮಂ- ದಿರಕೆ ಪೋಗಿ ಪೋಗಿ ನಿರ್ಬಂಧಿಸಿ ಬರಿದೆ ಬೈದು ಬಳಲಿಸುವ ಪಾಪಿಗಳ ಕೊರೆದು ಕುಟ್ಟಿತಂದು ಮುರಿದು ಕೊಲ್ಲಿರೊ ಎಂದು 4 ಅನ್ಯದೈವ ಅನ್ಯಮಂತ್ರ ತಂತ್ರವ ಬಿಟ್ಟು ಪನ್ನಗಶಯನನೆ ಗತಿಯೆನುತ ಉನ್ನತ ಹರಿದಿನ ವ್ರತವನಾಚರಿಪ ಪ್ರ- ಸನ್ನರ ಗುಣವ ಕೆಣಕದೆ ಬನ್ನಿರೆಂದು 5 ಚರ್ಮಕ್ಕೆ ಸಿಡಿ ಊರಿ ಬೇವಿನುಡುಗೆವುಟ್ಟು ಚಿಮ್ಮುತ ಚೀರುತ ಬೊಬ್ಬೆಗಳಿಡುತ ಕರ್ಮ ಕೂಗುರಿಯಾಗಿ ಪ್ರಾಣಹಿಂಸೆಯ ಮಾಳ್ಪ ಬ್ರಹ್ಮೇತಿಕೋರನ ಬ್ಯಾಗನೆ ಎಳತನ್ನಿ 6 ಕೇಶವ ಹರಿ ಅಚಲಾನಂದವಿಠಲನ್ನ ಶೇಷಗಿರಿಯ ತಿರುಮಲೇಶನ ದಾಸರ ದಾಸರ ದಾಸನೆಂದೆನಿಸುವ ದಾಸರ ಗುಣವ ಕೆಣಕದೆ ಬನ್ನಿರಿ ಎಂದು 7
--------------
ಅಚಲಾನಂದದಾಸ
ಯಾಕೆ ನಿರ್ದಯವೋ ದೇವ ದೇವ ಸ್ವಭಾವ ಯಾಕೆ ಮರೆತೆ ದೇವಾ [ಎನ್ನನು] ಪ ಯಾಕೆಂಬುದರಿಯೆನಾ ಶ್ರೀಕರಾಂಬುಜನೇತ್ರ ಕಾಕುಮನುಜನೆಂದು ನೀಕರಿಸಿದೆಯೋ ಅ.ಪ ಉದರ ಪೋಷಣೆಗಾಗಿ ವಿಧ ವಿಧ ದೇಶದಿ ಬಧಿರ ಹೆಳವ ಮೂಗ ಅಧಿಕರೋಗಿಯು ಅಂಧಾ ವಿದಿತ ವೇಷಗಳಿಂದ ಅಧಿಕ ಬಳಲಿದೆನಯ್ಯ ಪದುಮಾಕ್ಷ ಪರಂಧಾಮ ಮುದದೆ ಪೋಷಿಸಲು1 ಪರರ ನಿಂದನೆ ಗೈದೆ ನೆರೆಯವರನು ಕೊಂದೆ ಪರರ ಸ್ವತ್ತನು ತಂದೆ ಪರರನ್ನವನು ತಿಂದೆ ದುರಿತಕಾರ್ಯವಗೈದೆ ನರಹರಿ ನಿನ್ನ ಮರೆದೆ ಪರರು ಕಾವವರಿಲ್ಲ ನೆರೆನಂಬಿದೇ ನಿನ್ನ 2 ಸಾವು ಜನ್ಮಂಗಳಿಂದ ನೋವು ಬಂಧನವಡೆದು ಬೇವಿನಂದದೆ ದುರ್ಗುಣಭಾವವ ತಳೆದೆನೋ ಕಾವರಿಲ್ಲವೋಯೆನ್ನ ಶ್ರೀವನಿತಾರನ್ನ ಸಾವುನೋವನು ಬಿಡಿಸೊ ಮಾವಿನಕೆರೆರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಯಾತರವನೆಂದುಸುರಲಿ - ಜಗನ್ನಾಥ ಮಾಡಿದ ಒಂದು ನರರೂಪವಯ್ಯ ಪ ಮುಟ್ಟು ಹುಟ್ಟಿನೊಳು ನೆಟ್ಟನೆ ನಾ ಬಂದೆತೊಟ್ಟಿದ್ದೆನಾಗ ತೊಗಲಬಕ್ಕಣಇಷ್ಟರೊಳಗೆ ಒಂದು ವಿವರವರಿಯದಂಥಭ್ರಷ್ಟಗೆ ನನಗಿನ್ಯಾತರ ಕುಲವಯ್ಯ 1 ಸೂತಕ ದುರ್ಗಂಧದ ಮಲಮೂತ್ರನಿಂದ ಠಾವಲಿ ತನ್ನ ನಿಜವರಿಯದೆಬಂದದ್ದು ಬಚ್ಚಲ ಗುಣಿ ತಿಂದದ್ದು ಮೊಲೆ ಮಾಂಸ - ಇಂಥಅಂಧಕಗೆ ನನಗಿನ್ಯಾತರ ಕುಲವಯ್ಯ 2 ಒಂಬತ್ತು ಎಜ್ಜದೊಳೊಸರುವ ಹೊಲಸದುತುಂಬಿ ತುಳುಕುವ ಕೊಡವಾಗಿರಲುಇಂಬಿಲ್ಲದೆ ಹೊಲೆಗೊಂಡ ಠಾವಿನಲಿ ಬಂದಂಥಡಂಬಕ ನನಗಿನ್ಯಾತರ ಕುಲವಯ್ಯ3 ಕರುಳು ಖಂಡ ನಾರುವ ಚರ್ಮರೋಹಿತನರಪಂಜರದೀ ಹುರುಳಿಲ್ಲದನರದೇಹ ಹೊತ್ತು ತಿರುಗುವಂಥತಿರುಕ ನನಗಿನ್ಯಾತರ ಕುಲವಯ್ಯ 4 ಹಚ್ಚಡದ ಮೇಲೆ ಲಚ್ಚಿಕೆಯಿಟ್ಟಂತೆಹೆಚ್ಚು ಕಡಮೆ ಎಂದು ಹೆಣಗಾಡುತನಿಚ್ಚ ಕಾಗಿನೆಲೆಯಾದಿಕೇಶವನಹುಚ್ಚಗೆ ನನಗಿನ್ಯಾತರ ಕುಲವಯ್ಯ 5
--------------
ಕನಕದಾಸ
ಯೆಂದಿಗೆ ಬರುತೀಯೆ ಸುಂದರ ಭಾರತಿ ಮಂದರೋದ್ಧರನ ತೋರಿಸೆಂದೆ ನಾ ಬಂದೆ ಪ. ಅಂಧಕಾರಣ್ಯದೊಳು ನಿಂದು ತತ್ತರಿಸುವೆನು ತಾಯೆ ಕುಂದುಗಳೆಣಿಸಾದಿರು ಆನಂದ ತೋರು ಅ.ಪ. ಹರಿಗೆ ಕಿರಿಯ ಸೊಸಿ ವಾತನಸತಿಯು ನೀನು ಪ್ರಖ್ಯಾತಿವಂತಳೇ ಏಕಾಂತ ಭಕ್ತಳೇ ತ್ರಿವಿಧ ಜೀವರೊಳಗೆ ನಿಂತು ತ್ರೀವಿಧ ಪ್ರೇರಣೆ ಮಾಡುವಿ ದೇನಿ ನಿನ್ನಾ ಮಹಿಮೆಗೆ ನಮೋ ಎಂಬೆ ಪುತ್ಥಳಿಯಾ ಬೊಂಬೆ 1 ಮಂದರೋದ್ಧರನ ಪಾದಸೇವಕಳೇ ನಿನಗೀಡೆ ನಲಿದಾಡೆ ಒಂದನಾದರೂ ಮಾತನಾಡೆ ವರಗಳ ನೀಡೆ ದಯಮಾಡಿ ನೋಡೆ ತವಪಾದವ ಕೊಡೆ ಕರವ ಜೋಡಿಸಿ ಬೇಡುವೆನಿಂದು ನಾ ಬಂದು 2 ಗರುಡ, ಶೇಷ ರುದ್ರಾದಿಗಳೊಡೆಯಳೇ ನೀನು ನಿನ್ನಡಿಗಳಿಗೆರಗುವೆ ನಾನು ತಡಮಾಡ ಬ್ಯಾಡಮ್ಮಾ ನಡೆದು ಬಾರಮ್ಮ ಭವ ಮಡುವಿನೊಳಗಿರುವೆನು ತೋರಿಸೋ ದಯಪಾಲಿಸೋ 3
--------------
ಕಳಸದ ಸುಂದರಮ್ಮ
ರುದ್ರದೇವರ ಸ್ತೋತ್ರ ಇಂದುಧರನೆ ಬಾರೊ | ಸುರ | ವೃಂದವಂದ್ಯನೆ ಬಾರೊಕುಂದಾದೆನ್ನ ಮನಸಿಗೇ ಮುಕುಂದ ಪ್ರಿಯನೆ ಬಾರೋ ಪ ರಜತಾದ್ರಿ ನಿವಾಸನೆ ಬಾರೋಗಜದೈತ್ಯ ವಿನಾಶನೆ ಬಾರೋ ||ಅಜಸುತನಧ್ವರ ಭಜನೆಯ-ಗೆಡೆಸಿದ ಗಜಮುಖನಯ್ಯನೆ ಬಾರೋ 1 ಅಗಣಿತ ಶೌರ್ಯನೆ ಬಾರೋಸರ್ಪ ಭೂಷಣನೆ ಬಾರೋ 2 ಕಂದನ ತಲೆ ಕೆಡಹಿದವನೆ ಬಾರೋಇಂದ್ರ ಅಜಗೊರಳಗೊಲಿದನೆ ಬಾರೋ ||ಅಂಧಕಾಂತಕ ಇಂದ್ರವಂದಿತನಂದಿವಾಹನನೆ ಬಾರೋ 3 ಅಂಬರ ಪುರಹರನೆ ಬಾರೋ ತ್ರಿ-ಯಂಬಕ ಮಹದೇವನೆ ಬಾರೋ ||ಅಂಬಿಕೆ ವಲ್ಲಭ ಸಿಂಧೂರ ಮುಖ ಪಿತಶಂಭು ಮೂರುತಿಯೆ ಬಾರೋ 4 ಸುರ ನದಿಯ ಪೊತ್ತವನೆ ಬಾರೋವರ ಪಂಪಾಪುರ ನಿಲಯನೆ ಬಾರೋ ||ಶಿರಿ ಮೋಹನ್ನ ವಿಠಲನ್ನಪರಮ ದಾಸನೆ ಬಾರೋ 5
--------------
ಮೋಹನದಾಸರು
ವಿಶೇಷ ಎಂಥ ರಾಸಿಯೊ ಶ್ರೀಕಾಂತನ ಮುಖಸೂನು ನಿಂತು ಏರುವೋ ರಾಶಿನ್ಯಾವುದೊ ಇದನೆಲ್ಲರು ಪೇಳಿರಿ 1 ರಂಗ ಮೂರುತಿ ಸುತನ್ವೊೈರಿ ಏರಿಪೋ ಹೆಸ- ರೆಂದುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 2 ಹರಿಸುತನಟ್ಟುಳಿಯಿಂದ ಪುಟ್ಟುವುದೇನು ಪರಮ ಗುಪ್ತದ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 3 ಇರುಳು ಹಗಲು ಮೈಯ್ಯ ತೊಳೆಯುತ ಮಣ್ಣಿನ ಲ್ಲೊ ್ಹರಳುತಿಪ್ಪುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 4 ಒದ್ದು ಮಾತಂಗನ ಗದ್ರಿಸ್ತಮುರಿದ ಪ್ರ- ಸಿದ್ಧನೆನಿಪ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 5 ಜೋಡು ವಂಶುದ್ಧಾರ ಮಾಡುವುದೀ ರತ್ನೆಂ- ದಾಡಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 6 ಜಗದೊಳಗೆಲ್ಲ ಭಾರಕರ್ತನಾಗಿ ಏರಿಸಿಳುಹೋ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 7 ಅಂಧಕಾರದಲಿದ್ದು ಬಂದ ಜನರ ಮುಟ್ಟಿ ದುಂದೆಬ್ಬಿಸುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 8 ದೊರೆಸುತ ತಾ ಬಂದು ಸರುವ ಜನರ ಮುಂದೆ ಮುರಿದುಬಿಷ್ಠುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 9 ಭರದಿ ಬಂದು ಕಾಲಕೆದರುತ ತನ್ನ ್ಹಲ್ಲು ಮುರಿಸಿಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 10 ರುಂಡ ಮಾಲೆಗಳೆಲ್ಲ ಗುಂಡಿನಂಥ ದೇಹ- ಕ್ಕ್ಹೊಂದೇರಿಳಿವೊ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 11 ಹತ್ತರೊಳಗೆ ಒಂಬತ್ತು ಬಿಟ್ಟ ಹೆಸ ರಿಟ್ಟುಕೊಂಬುವ ರಾಸಿನ್ಯಾವುದೊ ಇದನೆಲ್ಲರು ಪೇಳಿರಿ 12 ಯೋಚನೆ ಮಾಡಿ ಆಲೋಚಿಸಿ ನೋಡರನೇಕ ಮೂಢಜ್ಞಾನಿಗೆ ತಿಳಿವೊದೆ ಇದನೆಲ್ಲರು ಪೇಳಿರಿ 13 ಈಸು ರಾಶಿಗಳು ಭೀಮೇಶಕೃಷ್ಣನ ದಯ- ದೀಕ್ಷಣದಲ್ಲೆ ತಿಳಿದು ಪೇಳಿ ಇದನೆಲ್ಲರು ಪೇಳಿರಿ 14
--------------
ಹರಪನಹಳ್ಳಿಭೀಮವ್ವ
ವೆಂಕಟಾ ಹರಿವಿಠಲ | ಪಂಕಕಳೆದಿವನಾ ಪ ಪಂಕಜಾಕ್ಷನೆ ದೇವ | ಕಾಪಾಡ ಬೇಕೋ ಅ.ಪ. ಅಂಧಕಾರದಲಿಪ್ಪ | ಮಂದಮತಿಯುದ್ಧರವಮಂದರೋದ್ಧಾರಿ ಹರಿ | ಮಾಡಿ ಪೊರೆಯಿವನಾ |ನಂದಮುನಿ ಮತ ತಿಳಿಸಿ | ಸಂದೇಹಗಳ ಕಳೆದುಸಂದೋಹ ಸಂಸ್ಥಿತನ | ಉದ್ಧರಿಸೊ ಬೇಕೋ 1 ಸೃಷ್ಟ್ಯಾದಿ ತವ ಮಹಿಮೆ | ನಿಷ್ಠೆಯಿಂದಲಿ ಭಜಿಪಸುಷ್ಠುಮನವನೆಯಿತ್ತು | ಕಾಪಾಡೊ ಹರಿಯೇಕೃಷ್ಣಮಾರುತಿ ಇವನ | ಕಷ್ಟ ಸಂಚಯ ಕಳೆದುಶ್ರೇಷ್ಠ ತವದಾಸ್ಯದಲಿ | ಇಟ್ಟು ಪೊರೆ ಇವನಾ 2 ಸತ್ಸಂಗ ಸದ್ವ್ಯಸನ | ಸನ್ಮಾರ್ಗದಲಿ ಇಟ್ಟುಕುತ್ಸಿತರ ಸಂಗವನು | ದೊರಗೈ ಹರಿಯೇ ಮತ್ಸ ಕೇತನ ಜನಕ | ಭಕ್ತವತ್ಸಲನಾಗಿವತ್ಸನ್ನ ಪೊರೆವವರು | ಮತ್ತಾರು ಇಹರೋ 3 ಹರಿಗುರುಗಳಾ ಸೇವಾ | ಪರಮ ಪ್ರೀತಿಲಿ ಮಾಳ್ವವರಮತಿಯನೇ ಕೊಟ್ಟು | ಪೊರೆಯ ಬೇಕಿವನಾ |ಹರಿಯ ನಾಮಾಮೃತವ | ನಿರುತದಲಿ ಸವಿದುಂಬಪರಮ ಸೌಭಾಗ್ಯವನೆ | ಕರುಣಿಸೋ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವ ಸ್ವಾತಂತ್ರನೇಭವವನದಿ ಉತ್ತರಿಸಿ | ಪೊರೆಯ ಬೇಕಿವನಾ |ದುರ್ವಿಭಾವ್ಯನೆ ಗುರು | ಗೋವಿಂದ ವಿಠಲನೇದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು