ಒಟ್ಟು 179 ಕಡೆಗಳಲ್ಲಿ , 40 ದಾಸರು , 161 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿಗೆ ಒಂದು ಶರಣಾರ್ಥಿ ಗುರು ಭಕ್ತರಿಗೊಂದು ಶರಣಾರ್ಥಿ ಪ ಸಾಧನ ನಾಲ್ಕನು ಸಾಧಿಸುತಿರುತಿಹ ಸಾಧಕರಿಗೆ ಒಂದು ಶರಣಾರ್ಥಿವಾದವ ವರ್ಜಿಸಿ ವಸ್ತುವ ಧ್ಯಾನಿಪ ಉತ್ತಮರಿಗೆ ಒಂದು ಶರಣಾರ್ಥಿ1 ಯೋಗಗಳಿಂದಲೆ ಯೋಗ್ಯರಾಗಿಹ ಯೋಗೀಶರಿಗೊಂದು ಶರಣಾರ್ಥಿರಾಗ ಪೋಗಿ ರಂಜಿಸುತಿರುತಿಹ ರಂಜಕರಿಗೆ ಒಂದು ಶರಣಾರ್ಥಿ 2 ದೂಷಣ ಭೂಷಣ ದೂರ ಮಾಡಿಹ ದೃಢವಂತರಿಗೆ ಒಂದು ಶರಣಾರ್ಥಿಆಸೆಗಳೆಂಬ ಅಳಿದು ಇರುತಿಹ ಆನಂದರಿಗೊಂದು ಶರಣಾರ್ಥಿ3 ಪ್ರಪಂಚವೆಲ್ಲವ ಪರಮಾರ್ಥ ಮಾಡಿಹ ಪಂಡಿತರಿಗೆ ಒಂದು ಶರಣಾರ್ಥಿತಾಪವನೀಗಿ ತಮ್ಮನೆ ಮರೆತಿಹ ತಾಪಸರಿಗೆ ಒಂದು ಶರಣಾರ್ಥಿ4 ಜನನ ಮರಣಗಳ ಜಡರನೆ ಕಳೆದಿಹ ಜನಪತಿಗಳಿಗೊಂದು ಶರಣಾರ್ಥಿಚಿನುಮಯಾತ್ಮಕ ಚಿದಾನಂದನ ಬೆರೆದಿಹ ಚಿದ್ರೂಪರಿಗೆ ಒಂದು ಶರಣಾರ್ಥಿ 5
--------------
ಚಿದಾನಂದ ಅವಧೂತರು
ಗುರುಸ್ತುತಿ ದಾಸರ ಭಜಿಸುತ ಕ್ಲೇಶವ ಕಳೆಯಿರೊ ವಾಸುದೇವನ ಭಕ್ತರಾದ ಶ್ರೀಪುರಂದರ ಪ ಮೀಸಲ ಮನದಲಿ ಕೇಶವನಡಿಗಳ ಆಸೆಲಿ ಪೂಜಿಪ ದಾಸರೊಳಗೆ ಶ್ರೇಷ್ಠ ಅ.ಪ ಪುರಂದರ ಗಡದೊಳು ಹಿರಿಯನೆಂದೆನಿಸಿದ ವರದಪ್ಪನಿಗೆ ವರಕÀುವರ ನೆಂದೆನಿಸಿದೀ ಧರೆಯೊಳು ತನಗ್ಯಾರು ಸರಿಯಿಲ್ಲದಂತೆ ಮೆರೆಯೆ ಸಿರಿಯರಸನು ಶೀಘ್ರದಲಿ ತಾನರಿಯುತ 1 ಬಂದನು ಮಗನಿಗೆ ಮುಂಜಿಯೆಂದೆನುತಲಿ ಚಂದದಿಂದಲಿ ಬೇಡಲು ಧಣಿಯ ಬಂದೆಯಾತಕೆ ನಮ್ಮ ಚಂದದ ಬೀದಿಲಿ ಹಿಂದಕೆ ತೆರಳೆನೆ ಬಂದನು ಬಾರಿ ಬಾರಿ 2 ಹರಿಯೆಂದು ತಿಳಿಯದೆ ಜರಿಯುತ ನುಡಿಯಲು ಮರಳಿ ಮರಳಿ ಯಾಚಿಸೆ ಬಿಡದೆ ತೆರಳನು ಈ ವೃದ್ಧ ತೆರಳಿಪೆನೆನುತಲಿ ಸರಸರ ತೆಗೆಯುತ ಸುರಿದನು ನಾಣ್ಯವ 3 ನೋಡುತ ಶ್ರೀಹರಿ ಗಾಡದಿ ಕೈನೀಡೆ ನೀಡಿದ ಸವೆದ ರೊಕ್ಕವ ನೋಡೀ ಗಾಡನೆ ಬಂದು ನಾಯಕನ ಸತಿಯಳನು ಬೇಡಿದ ಪುಣ್ಯವು ಬಾಹೋದೆನುತಲಿ 4 ಏನು ನೀಡಲಿ ಎನಗೇನಿಹುದೆನ್ನಲು ಮಾನಿನಿ ಮೂಗುತಿ ನೀಡೆಂದೆನಲು ಮಾನಿನಿ ಮಾಡಲು ಜ್ಞಾನಿಗಳರಸನು ಗಾಡ ಹಿಂತಿರುಗುತ 5 ಗಾಡನೆ ಮೂಗುತಿ ನೀಡುತ ದ್ರವ್ಯವ ಬೇಡಲು ಬೇಗದಿ ನೀಡುತ ನುಡಿದನು ನೋಡುತ ವಡವೆಯ ನೀಡಿದ ಭರಣಿಲಿ ಸತಿ ಮುಖವಾ 6 ಮೂಗುತಿ ಎಲ್ಲೆನೆ ಬೇಗದಿ ನಡುಗುತ ನಾಗವೇಣಿಯು ಪ್ರಾರ್ಥಿಸಿ ಹರಿಯ ಆಗ ಕುಡಿವೆ ವಿಷವೆನ್ನುತ ಕರದಲಿ ನಾಗವಿಷದ ಬಟ್ಲಲಿ ಇರಲು 7 ತೋರಿದಳಾಗಲೆ ತನ್ನಯ ರಮಣಗೆ ತೋರದಿರಲು ಮುಂದಿನ ಕಾರ್ಯ ಭಾರಿ ಆಲೋಚನೆಯ ಮಾಡುತ ಮನದಲಿ ಸಾರಿದ ತನ್ನ ವ್ಯಾಪಾರದ ಸ್ಥಳಕೆ 8 ತೆರೆದು ನೋಡಲು ಆ ವಡವೆಯ ಕಾಣದೆ ಮಿಗೆ ಚಿಂತೆಯು ತಾಳುತ ಮನದಿ ನಗಧರನ ಬಹು ಬಗೆಯಲಿ ಪೊಗಳುತೆ ತೆಗೆದ ಅಸ್ಥಿರ ರಾಜ್ಯದಿ ಮನವ 9 ಕಳವಳ ಪಡುತಲಿ ಆ ಲಲನೆಯ ಸಹಿತದಿ ತನುಮನ ಧನ ಹರಿಗರ್ಪಿಸುತಾ ಕ್ಷಣ ಬಿಡದಲೆ ಹರಿ ಚರಣವ ಸ್ಮರಿಸುತ ಕಮಲನಾಭ ವಿಠ್ಠಲನೆನ್ನುವ ಹರಿ 10
--------------
ನಿಡಗುರುಕಿ ಜೀವೂಬಾಯಿ
ಗೋಪಿ ಎನ್ನ ಕೊಲ್ಲಬೇಕೆಂಬ ಬಗೆಯ ಪ ಹರವಿಯ ಹಾಲು ಕುಡಿಯಲು ಎನ್ನ ಹೊಟ್ಟೆಕೆರೆಯೇನೆ ಹೇಳಮ್ಮಯ್ಯಕರೆದು ಅಣ್ಣನ ಕೇಳಮ್ಮ ಉಂಟಾದರೆಒರಳಿಗೆ ಕಟ್ಟಮ್ಮಯ್ಯ 1 ಮೀಸಲು ಬೆಣ್ಣೆಯನು ಮೆಲುವುದು ಎನಗೆದೋಷವಲ್ಲವೇನಮ್ಮಯ್ಯಆಸೆ ಮಾಡಿದರೆ ದೇವರು ಕಣ್ಣಮೋಸದಿ ಕುಕ್ಕೋನಮ್ಮಯ್ಯ 2 ಅಟ್ಟವನ್ನೇರಿ ಹಿಡಿವುದು ಅದು ಎನಗೆಕಷ್ಟವಲ್ಲವೆ ಹೇಳಮ್ಮಯ್ಯ ನೀಕೊಟ್ಟ ಹಾಲು ಕುಡಿಯಲಾರದೆ ನಾನುಬಟ್ಟಲೊಳಗಿಟ್ಟು ಪೋದೆನೆ 3 ಪುಂಡುತನವ ಮಾಡಲು ನಾನು ದೊಡ್ಡಗಂಡಸೇನೆ ಪೇಳಮ್ಮಯ್ಯ ಎನ್ನಕಂಡವರು ದೂರುತಾರೆ ಗೋಪಮ್ಮ ನಾ ನಿನ್ನಕಂದನಲ್ಲವೇನೆ ಅಮ್ಮಯ್ಯ 4 ಉಂಗುರದ ಕರದಿಂದ ಗೋಪಮ್ಮ ತನ್ನಶೃಂಗಾರದ ಮಗನೆತ್ತಿರಂಗವಿಠಲನ ಪಾಡಿ ಉಡುಪಿಯ ಉ-ತ್ತುಂಗ ಕೃಷ್ಣನ ತೂಗಿದಳು 5
--------------
ಶ್ರೀಪಾದರಾಜರು
ಚರಣವನೀಗ ಹೊಂದಬೇಡ ಕೇಡಿಗಗುರುವಿನ ಚರಣವನೀಗ ಹೊಂದಬೇಡ ಪ ಜಾರಣ ಮಾರಣ ಬೋಧಿಸಿ ಗುರುವಜೀವನ ನೀಗಲೆ ತಿನ್ನುವ ಗುರುವಕಾರಣಿಕವನೆ ನುಡಿಯುವ ಗುರುವಕಾಮಿತವನೆ ಹೇಳುವ ಗುರುವ ಕೇಡಿಗ ಗುರುವ 1 ಮಹಿಮೆ ಗಿಹಿಮೆ ತೋರುವ ಗುರುವಮರಳಿ ಜನ್ಮಕೆ ತರುವ ಗುರುವದಹಿಸಿ ಮನೆಯ ಹೋಹ ಗುರುವದಂಡಣೆಯ ಗುರುವ ಕೇಡಿಗ ಗುರುವ 2 ಹರಿದು ತಿನ್ನುವ ಮೋಸದ ಗುರುವಬರಕತವಿಲ್ಲದ ಗುರುವಕರಕೊಳ್ಳುತಲಿರುವ ಕರ್ಮಿತಾಗುರುವ ಕೇಡಿಗ ಗುರುವ 3 ಶಾಂತಿ ಶಮೆ ದಮೆಗಳು ದೊರಕದ ಗುರುವಸೈರಣೆ ಎಂದಿಗು ನಿಲುಕದ ಗುರುವಕರುಣೆಯ ತಾತೋರದ ಗುರುವ ದಯವಿಲ್ಲದಗುರುವ ಕೇಡಿಗ ಗುರುವ4 ಆಸೆಯನು ಬಿಡದಿಹ ಗುರುವಅಂಗದ ಹಸಿವನು ತಿಳಿಯದ ಗುರುವಬಾಸ ಚಿದಾನಂದನ ನರಿಯದ ಗುರುವಬ್ರಹ್ಮನಾಗದ ಕೇಡಿಗ ಗುರುವ 5
--------------
ಚಿದಾನಂದ ಅವಧೂತರು
ಚೆನ್ನಕೇಶವದೇವರಾಯಇನ್ನು ಸುಖಿಪೆನೆಂತೆನಗೆ ಅನ್ಯಥಾ ಗತಿಯಿಲ್ಲ ಪ. ಅನುದಿನ ಸಂದಣಿಸೆ 1 ಉಡುವಾಸೆ ನುಡಿವಾಸೆ ಬೇಡುವಾಸೆ ಕೊಡುವಾಸೆಒಡಲ ತುಂಬಬೇಕೆಂಬ ಆಸೆಕೊಡದವನ ಬಡಿದು ಜಡಿವಾಸೆ ಬಿಡದಿರಲು 2 ಹಯವದನನೆ ದೇವ ನಿನ್ನ ನೆನೆಯದಿದ್ದೀಮನಕೆಭಯವೆಲ್ಲಿಹುದು ಜಗನ್ನಾಥ ನಿನ್ನದಯವನೆ ಬೀರಿ ನಿರ್ದಯನನ್ನುದ್ಧರಿಸೊ 3
--------------
ವಾದಿರಾಜ
ಜನ್ಮವ್ಯರ್ಥವಾಯಿತು ಶಾಙ್ರ್ಗಧನ್ವ ನಿನ್ನನಂಬದೆ ಪ ಮನ್ಮಥನಾಟದಲ್ಲಿ ಮರೆತು ಹೋಗಿಕಾಲ ನಾಕಳದೇ ಅ.ಪ ಹೊಟ್ಟೆಗೋಸಗ ಕಾಡಿಬೇಡಿ ನಿಷ್ಟುರಗಳನಾಡುತಾ ಕೆಟ್ಟವನಿವನೆನಿಸಿ ಕೊಂಡು ಕೀರ್ತಿಶೂನ್ಯನಾಗುತಾ 1 ನಿತ್ಯಕರ್ಮಮಾಡದೆ ಗೃಹಕೃತ್ಯದಲ್ಲಿ ಬಳಲುವೆ ಸತ್ಯವೆಂಬುದು ಸ್ವಪ್ನದಲ್ಲಿಯು ಸಾಧ್ಯವಾಗದು ಜನರಿಗೆ2 ಸುಳ್ಳು ಹೇಳುವವನ ಜನರು ಒಳ್ಳೆವನಿವನೆಂಬರು ಬಲ್ಲ ಹಿರಿಯರಾಡುವ ನುಡಿ ಭಕ್ತಿಯಿಂದನಂಬರು 3 ಖಲರು ನಡಿಯಲಾರದೆಯಿದು ಕಲಿಯುಗವೆಂದು ನಿಂದಿಸೀ ಕೊಲೆಗೆ ಗುರಿಯಾಗಿ ಕಾಮ ಕ್ರೋಧಗಳಿಂದ ಬಂಧಿಸಿ 4 ಹೀನ ವಿದ್ಯಗಳೆಚ್ಚಿತು ಸುಜ್ಞಾನಬೋಧೆ ತಗ್ಗಿತು ಸ್ವಾನುಭವಕೆ ಹಾನಿಕರ ನಿಧಾನಿಸೇ ಧರ್ಮ ಕುಗ್ಗಿತು 5 ದುರ್ಗುಣಿಗಳ ತೃಪ್ತಿಪಡಿಸೆ ಭರ್ಗಗಾದರು ಸಾಧ್ಯವೇ ನಿರ್ಗಮಿಸುವಧ್ಹ್ಯಾಗೆ ನಾವಿನ್ನಿರುವುದು ಭೂಮಿಭಾರವೆ6 ಲೇಶ ಸಾಧನವಾಗುವದಿಲ್ಲ ಆಸೆ ಅಧಿಕವಾದುದರಿಂದ ಘಾಶಿಪಡುವದಲ್ಲದೆ ದೇಹಾಯ್ಸವೇಕೆ ಪಡುವೆನಾಂ 7 ಮಾನವಿಲ್ಲ ಜ್ಞಾನವಿಲ್ಲ ಮಮತೆಯೆಂಬೋದು ಬಿಡದಲ್ಲಾ ಹೀನಾರನಾಸೇವಿಸಲಾರೆ ಹಿತವ ಕಾಣೆ ಸಿರಿನಲ್ಲಾ8 ಇರುಳು ಹಗಲು ನಿನ್ನ ದಿವ್ಯ ಚರಣಸೇವೆ ಪಾಲಿಸೊಗುರುರಾಮ ವಿಠಲನೆ ಪಾಮರರ ಬಿನ್ನಹ ಲಾಲಿಸೊ9
--------------
ಗುರುರಾಮವಿಠಲ
ಜಯ ಜಯ ಮಂಗಳಜಯ ಮಂಗಳ ಅಮರಾಧೀಶನಿಗೆ ಪ ಕಪ್ಪು ಗೊರಳನಿಗೆ ಕರುಣಾಸಮುದ್ರಗೆ ಕಾಮ ಸಂಹಾರ ಮಾಡಿದಗೆಮುಪ್ಪುರ ಗೆಲಿದಗೆ ಮೂಜಗದೊಡೆಯಗೆ ಮೂರನೆಯ ಗುಣದಾ ಮನೆಯವಗೆಒಪ್ಪುವ ದಶಭುಜ ತೋಳಲಿ ಡಮರುಗ ವಿಡಿದಿಹ ಪಾಶಾಂಕುಶಧರಗೆತಪ್ಪದೆ ಭಕ್ತರಿಗೊಲಿವಗೆ ಪಾಲಿಪ ಕರುಣಕೋಟಿ ಪ್ರಕಾಶನಿಗೆ 1 ಸುರನದಿ ಧರಿಸುತ ಮೆರೆದವಗೆಕೊರಳೊಳು ರುಂಡದ ಮಾಲೆಯ ಹಾಕಿಹಕೋಮಲ ಸ್ಫಟಿಕ ಪ್ರಕಾಶನಿಗೆಕರದಲಿ ಕಂಕಣ ಧರಿಸಿಹ ಮೂರ್ತಿಗೆ ಕಣ್ಣುರಿಭಾಳದಿ ರಂಜಿಪಗೆ 2 ದೇಶದಿ ಪೆಸರಾಗಿರುತಿಹ ಅಮರಾಧೀಶನು ಎನಿಪ ನಾಯಕಗೆಮಾಸದ ಮಂಜಿನ ಮಲೆಯೊಳು ನೆಲಸಿಯೆ ಆಸೆಯನೆಲ್ಲವ ಸಲಿಸುವಗೆಶ್ರೀಸಚ್ಚಿದಾನಂದಾವಧೂತ ದೊರೆ ಶಿರತಾರಕ ಅಮರೇಶನಿಗೆ 3
--------------
ಚಿದಾನಂದ ಅವಧೂತರು
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು
ಜಲಧಿ | ನಿಮ್ಮ ಮೊರೆಹೊಕ್ಕವರ ಕಾಯ್ದು ಪೊರೆಯುವಿರಿ ದಯದಿ ಪ. ಅರಿಯರು ಜಗದೊಳಗೆ ನರರು ನಿವಿ್ಮೂ ಮಹಿಮೆ ಕರಕರೆಪಡುತಿಹರು ಭವದೊಳಗೆ ಪರಮ ನಮ್ರತೆಯಿಂದ ಚರಣಕೆರಗಲು ಬಂದು ಉರುತರದ ಕಾರುಣ್ಯದಿಂದ ಪೊರೆಯುವಿರಿ 1 ಇಲ್ಲವೊ ಆಸೆ ಆಡಂಬರದ ದ್ರೌವ್ಯದಲಿ ಎಲ್ಲೆಲ್ಲಿ ನೊಡಲು ತತ್ವಬೋಧೆ ಉಲ್ಲಾಸದಿಂದ ಸಜ್ಜನರಿಗರುಹುತ ಮೋದ ಎಲ್ಲೆ ಕಾಣಿಸದಂಥ ಆನಂದವೀವ ಗುರು 2 ತಂದೆ ಮುದ್ದುಮೋಹನವಿಠ್ಠಲನೆಂದೆಂಬ ಬಹು ಚಂದದ ಅಂಕಿತದಿ ಜಗದಿ ಉದಿಸಿ ಮಂದರಿಗೆ ಸುಜ್ಞಾನ ತಂದು ರಕ್ಷಿಸುವಂಥ ಒಂದೊಂದು ಮಹಿಮೆಗಳ ಪೇಳಲೆನ್ನೊಶವೆ 2 ಅನಾದಿಯಿಂದಲಿ ಹೀನ ದೆಸೆಯೊಳಗಿದ್ದು ನಾನಾ ಜನ್ಮದಿ ಬಂದು ಕರ್ಮದಲಿ ತೊಳಲಿ ದೀನತ್ವವೈದುವ ಮಾನವನ ಕರುಣಿಸಿ ಸಾನುರಾಗದಿ ಹರಿಯ ಪದಕೆ ಸೇರಿಸುವಂಥ 3 ಸೃಷ್ಟಿ ಸ್ಥಿತಿ ಲಯಗಳಿಗೆ ಕರ್ತ ಹರಿ ಎಂತೆಂದು ಶ್ರೇಷ್ಠ ಕನಿಷ್ಠದ ಅರ್ಥ ತತ್ವ ತಿಳಿಸಿ ಕಷ್ಟ ಬಿಡಿಸುವ ಜಗತ್ಕರ್ತ ಒಬ್ಬನೆ ಹರಿಯು ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆನುವ 5
--------------
ಅಂಬಾಬಾಯಿ
ಡಿಂಬದಲ್ಲಿ ಇರುವ ಜೀವ ಕಂಬಸೂತ್ರ ಗೊಂಬೆಯಂತೆಎಂದಿಗಿದ್ದರೊಂದು ದಿನ ಸಾವು ತಪ್ಪದು ಪ ಬಟ್ಟೆ ಕಾಣದು1 ಹತ್ತು ಎಂಟು ಲಕ್ಷ ಗಳಿಸಿ ಮತ್ತೆ ಸಾಲದೆಂದು ಪರರಅರ್ಥಕಾಗಿ ಆಸೆಪಟ್ಟು ಸುಳ್ಳು ನ್ಯಾಯ ಮಾಡ್ವರುಬಿತ್ತಿ ಬೆಳೆದು ತನ್ನದೆಂಬ ವ್ಯರ್ಥಚಿಂತೆಯನ್ನು ಮಾಡೆಸತ್ತು ಹೋದ ಮೇಲೆ ಅರ್ಥ ಯಾರಿಗಾಹುದೊ 2 ಹೊನ್ನು ಹೆಣ್ಣು ಮಣ್ಣು ಮೂರು ತನ್ನಲಿದ್ದು ಉಣ್ಣಲಿಲ್ಲಅಣ್ಣತಮ್ಮ ತಾಯಿ ತಂದೆ ಬಯಸಲಾಗದುಅನ್ನ ವಸ್ತ್ರ ಭೋಗಕಾಗಿ ತನ್ನ ಸುಖವ ಕಾಣಲಿಲ್ಲಮಣ್ಣುಪಾಲು ಆದಮೇಲೆ ಯಾರಿಗಾಹುದೊ 3 ಬೆಳ್ಳಿ ಬಂಗರಿಟ್ಟುಕೊಂಡು ಒಳ್ಳೆ ವಸ್ತ್ರ ಹೊದ್ದುಕೊಂಡುಅಳ್ಳಾಚಾರಿ ಗೊಂಬೆಯಂತೆ ಆಡಿ ಹೋಯಿತುಹಳ್ಳ ಹರಿದು ಹೋಗುವಾಗ ಗುಳ್ಳೆ ಬಂದು ಒಡೆಯುವಂತೆಉಳ್ಳೆ ಪೊರೆಯಂತೆ ಕಾಣೊ ಸಂಸಾರದಾಟವು 4 ವಾರ್ತೆ ಕೀರ್ತಿಯೆಂಬುವೆರಡು ಸತ್ತ ಮೇಲೆ ಬಂದವಯ್ಯವಸ್ತು ಪ್ರಾಣನಾಯಕನು ಎಲ್ಲಿ ದೊರಕ್ಯಾನುಕರ್ತೃ ಕಾಗಿನೆಲೆಯಾದಿಕೇಶವನ ಚರಣಕಮಲನಿತ್ಯದಲ್ಲಿ ಭಜಿಸಿ ಸುಖಿಯಾಗಿ ಬಾಳೆಲೊ 5
--------------
ಕನಕದಾಸ
ತಂದೆ ನಿನ್ನೊಲುಮೆಯೊಂದೆ ಎನ್ನ ಬಯಕೆ ಪ ಬಂದ ಕಷ್ಟಗಳೆಲ್ಲ ಎನ್ನಭ್ಯುದಯಕೆ ಅ.ಪ ಆಸೂರಿಯಾದರೂ ಈ ಸೂರಿಯಾದರೂ ಏಸೂರಿಗ್ಹೋದರೂ ವಾಸಿಯಿಲ್ಲ ಕೂಸುಗಳ ಪಡೆದರೂ ಆಸೆಗಳ ತೋರಿದರೂ ಹೇಸಿಕೆ ಬೇಳಲೆದರೂ ಲೇಸಾಗಲಿಲ್ಲ 1 ಈ ವೂರಿನೈವತ್ತು ಆ ವೂರಿನೈವತ್ತು ದೇವರ್ಕಳಿಗೆ ನಾಮ ಹರಕೆ ಹೊತ್ತು ಬೇವಿನಲಿ ಸಿಹಿಯ ನೀನೀವುದೆಂದತ್ತತ್ತು ಜೀವಿತವು ಬರಿದಾಯ್ತ ಬಾಧಿಸುವುದೈಮುಪ್ಪು 2 ತಂದೆ ಗೋವಿಂದನಯ್ಯ ಒಂದುನೂರ್ವಂದನೆಯ ಇಂದರ್ಪಿಸುವೆನಯ್ಯ ಕೈಹಿಡಿಯಯ್ಯ ಕುಂದ ಕಳೆಗಾಣಿಸಯ್ಯ ಬಂಧನವ ಬಿಡಿಸಯ್ಯ ಇಂದಿರಾನಂದ ಮಾಂಗಿರಿಯ ರಂಗಯ್ಯ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಂದೆ ಶ್ರೀನಿವಾಸ ನೀನು ಬಂದು ಕಾಯೊ ಎನ್ನ ಸ್ವಾಮಿ ನಿಂತು ಕಾಯೋ ಎನ್ನ ಪ. ಇಂದಿರೆ ರಮಣನೆ ಬಂಧನ ಬಿಡಿಸೆನ್ನ ತಂದೆ ಗೋವಿಂದ ಅ.ಪ. ಖಗವಾಹನ ದೇವಾ ಸ್ವಾಮಿ ನಗೆಮೊಗದೊಡೆಯನೆ ನಾಗಶಯನನೆ ಯೋಗಿಗಳರಸನೆ ಬೇಗದಿ ಬಂದು ಕಾಯೋ ಎನ್ನನು 1 ಶೇಷಾಚಲ ನಿವಾಸ ಸ್ವಾಮಿ ಆಸೆಯ ಬಿಡಿಸೆನ್ನಾ ವಾಸುದೇವ ನಿನ್ನ ಲೇಸು ಕರುಣವ ತೋರಿ ನಿನ್ನ ದಾಸರ ಸಂಗದೊಳು ಇರಿಸೋ ಎನ್ನ 2 ರಾಮ ರಾಮ ಎಂಬೋ ನಿನ್ನ ನಾಮನೇಮದಿ ನುಡಿಸೆನೆಗೆ ರಮಾವಲ್ಲಭವಿಠಲ ಭಾಮೆಯರರಸನೆ ಪ್ರೇಮವ ತೋರೋ 3
--------------
ಸರಸಾಬಾಯಿ
ತನ್ನ ತಿಳಿದು ತಾನಾದಂಥ ಗುರುವಿನ ಪಾದವ ಹೊಂದುತನ್ನನರಿಯದ ಗುರುವ ಹೊಂದಬೇಡೆಂದೆಂದು ಪ ನಿನ್ನನು ದೇವನೆಂದೆನ್ನುವಗೆ ಈಗ ಶರಣು ಮಾಡೋಅನ್ಯ ದೇವರನೆಂದೆನ್ನುವನ ಹಾದಿ ಹೋಗಬೇಡೋ 1 ಕೋಟಿರವಿ ತೇಜವ ಕಣ್ಣಲಿ ನೋಡುಬೂಟಿಕ ಕಾಯಕಗಳ ದೂರಮಾಡು 2 ಸೋಹಂ ಮಂತ್ರವ ಹೇಳದವನ ಸೆರಗ ಬಿಟ್ಟು ನೀನುಊಹಿಸುವ ಬೇರೆ ಗುರುವನು ಉತ್ತಮ ಅವನು3 ವಾಸನೆ ಕಳೆದಾತಂಗೆ ಒಪ್ಪಿಸಯ್ಯ ತನುವಆಸೆ ಹಚ್ಚುವವನತ್ತ ಬಿಡಲಿ ಬೇಡ ಮನವ 4 ಚಿದಾನಂದ ಗುರುವ ಹೊಂದು ಚಿನ್ಮಾತ್ರನಹೆ ಮದಮುಖ ಗುರುವ ಹೊಂದದಿರು ತಿಳಿ ಮುಂದೆ ನೀನು ಕೆಡುವೆ 5
--------------
ಚಿದಾನಂದ ಅವಧೂತರು
ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ತಪಿಸಲಾರೆ ನಾನು ಪರಿಪರಿ ತಾಪದಲಿ ಕೃಪೆಮಡಿ ಸಲಹಿರಿ ಶ್ರೀ ಗುರುಗಳೆ ಪ. ಸುಪಥ ಕಾಣದೆ ನಿಮ್ಮ ಪಾದವನೆ ನಂಬಿದೆನು ಗುಪಿತ ಮಹಿಮರೆ ಇನ್ನು ಭವಪಾಶ ಬಿಡಿಸುತ್ತ ಅ.ಪ. ಬಂಧು ವರ್ಗಗಳನ್ನ ಬದುಕಿಸುವರು ಎಂದು ಬಂಧನದೊಳು ಬಿದ್ದು ಬೆಂದು ನೊಂದೆ ಮುಂದೆ ದಾರಿಯ ಕಾಣೆ ಮುಕ್ತಿ ಮಾರ್ಗವನರಿಯೆ ಬಂಧು ಬಳಗಗಳೆಲ್ಲ ನೀವೆಂದು ನಂಬಿದೆ 1 ಅಶನವಸನಗಳಲ್ಲಿ ಆಸೆಯನು ತೊರೆಯದೆ ವಸುಮತಿಯೊಳು ಜ್ಞಾನ ಹೀನವಾಗಿ ಪಶುವಿನಂದದಿ ತಿರುಗಿ ಕಾಲವ್ಯರ್ಥ ಕಳೆದೆ ಅಸಮ ಮಹಿಮರೆ ಇನ್ನು ಅಜ್ಞಾನ ಪರಿಹರಿಸಿ 2 ಮಮತೆಯನು ತೊರೆಯದೆ ಮಾಯ ಪಾಶಕೆ ಸಿಲುಕಿ ಮಮಕಾರದಿಂದ ನಾ ಮೈಮರೆತೆನು ನಮಿಸುವೆನು ದೈನ್ಯದಲಿ ನಾನೀಗ ನಿಮ್ಮ ಪದಕೆ ರಮೆಯರಸನ ತೋರಿ ಎನ್ನ ಮನ ಮಧ್ಯದಿ 3 ಪಾವನರೂಪರೆ ಪಾಪರಾಹಿತ್ಯರೆ ಪಾವಿನಶಯನಗೆ ಪರಮಪ್ರಿಯರೆ ದೇವತೆಗಳೊಡೆಯರೆ ದೇವಾಂಶ ಸಂಭವರೆ ಪಾವಮಾನಿಗೆ ಪ್ರಿಯರೆ ಪಾವನ್ನಗಾತ್ರರೆ 4 ಆಪತ್ತು ಕಳೆಯುವರೆ ಶ್ರೀಪತಿಯ ತೋರ್ವರೆ ಕೋಪಿಸದೆ ಎನ್ನೊಳು ಕೃಪೆಗೈಯ್ಯರಿ ಗೋಪಾಲಕೃಷ್ಣವಿಠ್ಠಲ ತಾನು ಹೃದಯದಲಿ ತೋರ್ಪುತೆ ಕರುಣಿಸುತ ಈ ಪರಿಯಿಂ ಸಲಹಿರಿ5
--------------
ಅಂಬಾಬಾಯಿ