ಒಟ್ಟು 229 ಕಡೆಗಳಲ್ಲಿ , 47 ದಾಸರು , 186 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಸೇವೆ ನಿರತರಿಗೆ ನಮೋ ನಮೋ ಪ ಅರಿವು ನಿಲ್ಲಿಸಿ ಪರಸಾಧನದಿರುತಿಹ್ಯ ಪರಮಪಾವನರಿಗೆ ನಮೋ ನಮೋ ಅ.ಪ ತಾಪಸಾರ್ಯರಿಗೆ ನಮೋ ನಮೋ ಮಹ ಪಾಪ ದೂರರಿಗೆ ನಮೋ ನಮೋ ಕೋಪಲೋಪರಿಗೆ ನಮೋ ನಮೋ ಇಹ ವ್ಯಾಪಾರರಿತವರಿಗೆ ನಮೋ ನಮೋ ತಾಪತ್ರಯವ ನೀಗಿ ಶ್ರೀಪತಿ ಚರಣವ ಗೌಪ್ಯದಿ ನೆನೆವರ್ಗೆ ನಮೋ ನಮೋ 1 ವೇದ ಸಂಪನ್ನರಿಗೆ ನಮೋ ನಮೋ ಭವ ಬಾಧೆ ಗೆಲಿದವರಿಗೆ ನಮೋ ನಮೋ ಸಾಧನ ಚತುಷ್ಟರಿಗೆ ನಮೋ ನಮೋ ಮಹ ಸಾಧುಸಂತರಿಗೆ ನಮೋ ನಮೋ ವಾದಿ ಮೂರ್ಖರೊಳು ವಾದಿಸದಂಥ ಸು ಬೋಧ ಗುರುವರಗೆ ನಮೋ ನಮೋ 2 ಭಾಗವತರಿಗೆ ನಮೋ ನಮೋ ಇಹ ಭೋಗನಿರಾಸ್ಯರಿಗೆ ನಮೋ ನಮೋ ಯೋಗಸಾಧಕರಿಗೆ ನಮೋ ನಮೋ ಮಹ ಯೋಗಿ ಮಹಾತ್ಮರಿಗೆ ನಮೋ ನಮೋ ಆಗಯೀಗೆನ್ನದೆ ಸಾಗರನಿಲಯನನ್ನ ಬಾಗಿಭಜಿಪರಿಗೆ ನಮೋ ನಮೋ 3 ಭಕ್ತಜನರಿಗೆ ನಮೋ ನಮೋ ವಿ ರಕ್ತ ಪುರುಷರಿಗೆ ನಮೋ ನಮೋ ಸತ್ಯಶೀಲರಿಗೆ ನಮೋ ನಮೋ ತಮ್ಮ ಗುರ್ತು ಅರ್ತವರಿಗೆ ನಮೋ ನಮೋ ಭಕ್ತಿಯುಕ್ತಿ ವಹಿಸೆತ್ತಗಲದಂಥ ಚಿತ್ತಶುದ್ಧರಿಗೆ ನಮೋ ನಮೋ 4 ನಿತ್ಯ ನಿರ್ಮಲರಿಗೆ ನಮೋ ನಮೋ ಭವ ಮರ್ತ ನಿರ್ತರಿಗೆ ನಮೋ ನಮೋ ತ ತ್ವರ್ಥಿಕರಿಗೆ ನಮೋ ನಮೋ ಮಹ ಮುಕ್ತಿ ಸಾಧ್ಯರಿಗೆ ನಮೋ ನಮೋ ಮೃತ್ಯುವ ಗೆಲಿದು ಕರ್ತ ಶ್ರೀರಾಮನ ಅರ್ತವರಿಗೆ ಬಹು ನಮೋ ನಮೋ 5
--------------
ರಾಮದಾಸರು
ಗೂಳ್ಯಾಗಿ ಮೆರೆಯಣ್ಣ ಶ್ರೀಹರಿ ಗೂಳ್ಯಾಗಿ ಮೆರೆಯಣ್ಣ ಪ ಗೂಳ್ಯಾಗಿ ಮೆರೆಯೆಲೊ ಮೂಳಮಾನವರ ಆಳಾಗಿ ಕೆಡದ್ಯಮದಾಳಿಯ ಗೆಲಿದು ಅ.ಪ ಅದ್ರಿಧರನಡಿಯ ಪ್ರೇಮವೆಂಬ ಮುದ್ರೆಯನ್ನು ಪಡೆಯೋ ಕ್ಷುದ್ರದಾನವ ಹರರುದ್ರಾದಿನುತ ಸ ಮುದ್ರಶಾಯಿಧ್ಯಾನ ಭದ್ರಮಾಡಿಟ್ಟುಕೊಂಡು 1 ಕುಜನರ ಸಂಗ ತಳ್ಳೋ ಸುಸಂಗ ಭುಜವ ಬೆಳೆಸಿಕೊಳ್ಳೋ ಭುಜಗಶಯನನ ನಿಜಚರಣದ ಮಹ ಭಜನೆವೆಂದೆಂಬುವ ಝಾಲ ಧರಿಸಿಕೊಂಡು 2 ತಾಮಸವನ್ನು ನೀಗಿ ಸುಜನರ ಪ್ರೇಮಪಾತ್ರನಾಗಿ ಶಾಮಸುಂದರ ಶ್ರೀರಾಮನಾಮ ತ್ರಿ ಭೂಮಿಗಧಿಕೆಂದು ನಿಸ್ಸೀಮ ಡುರುಕಿ ಹೊಡಿ 3
--------------
ರಾಮದಾಸರು
ಗೋವಿಂದ ಹರಿ ಗೋವಿಂದ ಪ ಗೋವಿಂದ ಪರಮಾನಂದ ಮುಕುಂದಅ ಮಚ್ಛ್ಯಾವತಾರದೊಳಾಳಿದನೆ - ಮಂದರಾಚಲ ಬೆನ್ನೊಳು ತಾಳಿದನೆಅಚ್ಛ ಸೂಕರನಾಗಿ ಬಾಳಿದನೆ - ಮದಹೆಚ್ಚೆ ಹಿರಣ್ಯಕನ ಸೀಳಿದನೆ1 ಕುಂಭಿನಿ ದಾನವ ಬೇಡಿದನೆ - ಕ್ಷಾತ್ರ-ರೆಂಬುವರನು ಹತ ಮಾಡಿದನೆಅಂಬುಧಿಗೆ ಶರ ಹೂಡಿದನೆ - ಕಮ-ಲಾಂಬಕ ಗೊಲ್ಲರೊಳಾಡಿದನೆ 2 ವಸುದೇವನುದರದಿ ಪುಟ್ಟಿದನೆ - ಪಲ್‍ಮಸೆವ ದನುಜರೊಡೆಗುಟ್ಟಿದನೆಎಸೆವ ಕಾಳಿಂಗನ ಮೆಟ್ಟಿದನೆ - ಬಾ-ಧಿಸುವರ ಯಮಪುರಕಟ್ಟಿದನೆ 3 ಪೂತನಿಯ ಮೈ ಸೋಕಿದನೆ - ಬಲುಘಾತದ ಮೊಲೆಯುಂಡು ತೇಕಿದನೆಘಾತಕಿಯನತ್ತ ನೂಕಿದನೆ - ಗೋಪವ್ರಾತ ಗೋಗಳನೆಲ್ಲ ಸಾಕಿದನೆ4 ಸಾಧಿಸಿ ತ್ರಿಪುರರ ಗೆಲಿದವನೆ - ಮ್ಲೇಚ್ಛರಛೇದಿಸೆ ಹಯವೇರಿ ಕೆಲೆದವನೆಸಾಧುಸಂತರೊಡನೆ ನಲಿದವನೆ - ಬಾಡದಾದಿಕೇಶವ ಕನಕಗೊಲಿದವನೆ 5
--------------
ಕನಕದಾಸ
ಜಯ ಜಯ ಮಂಗಳಜಯ ಮಂಗಳ ಅಮರಾಧೀಶನಿಗೆ ಪ ಕಪ್ಪು ಗೊರಳನಿಗೆ ಕರುಣಾಸಮುದ್ರಗೆ ಕಾಮ ಸಂಹಾರ ಮಾಡಿದಗೆಮುಪ್ಪುರ ಗೆಲಿದಗೆ ಮೂಜಗದೊಡೆಯಗೆ ಮೂರನೆಯ ಗುಣದಾ ಮನೆಯವಗೆಒಪ್ಪುವ ದಶಭುಜ ತೋಳಲಿ ಡಮರುಗ ವಿಡಿದಿಹ ಪಾಶಾಂಕುಶಧರಗೆತಪ್ಪದೆ ಭಕ್ತರಿಗೊಲಿವಗೆ ಪಾಲಿಪ ಕರುಣಕೋಟಿ ಪ್ರಕಾಶನಿಗೆ 1 ಸುರನದಿ ಧರಿಸುತ ಮೆರೆದವಗೆಕೊರಳೊಳು ರುಂಡದ ಮಾಲೆಯ ಹಾಕಿಹಕೋಮಲ ಸ್ಫಟಿಕ ಪ್ರಕಾಶನಿಗೆಕರದಲಿ ಕಂಕಣ ಧರಿಸಿಹ ಮೂರ್ತಿಗೆ ಕಣ್ಣುರಿಭಾಳದಿ ರಂಜಿಪಗೆ 2 ದೇಶದಿ ಪೆಸರಾಗಿರುತಿಹ ಅಮರಾಧೀಶನು ಎನಿಪ ನಾಯಕಗೆಮಾಸದ ಮಂಜಿನ ಮಲೆಯೊಳು ನೆಲಸಿಯೆ ಆಸೆಯನೆಲ್ಲವ ಸಲಿಸುವಗೆಶ್ರೀಸಚ್ಚಿದಾನಂದಾವಧೂತ ದೊರೆ ಶಿರತಾರಕ ಅಮರೇಶನಿಗೆ 3
--------------
ಚಿದಾನಂದ ಅವಧೂತರು
ಜಯ ಜಯ ವೈಷ್ಣವ ಪಯನಿಧಿ ಚಂದ್ರಗೆ ಜಯ ಜಯ ವ್ಯಾಸಯತೀಂದ್ರರಿಗೆ ಪ ಜಯ ಜಯ ವರ ಕರ್ಣಾಟಕ ಪತಿಗೆ ಜಯ ಸಿಂಹಾಸನವೇರಿದಗೆ ಅ.ಪ ನಾಕು ಶಾಸ್ತ್ರಗಳ ಪಾರಂಗತರಿಗೆ ಕಾಕುಮತಗಳನು ತುಳಿದವಗೆ ಆ ಕಮಲಾಪತಿ ಭಕುತವರೇಣ್ಯಗೆ ಶ್ರೀಕರ ಚಂದ್ರಿಕಾಚಾರ್ಯರಿಗೆ 1 ಹನುಮನ ಭಾಷ್ಯವ ಅಣಿಮಾಡಿದಗೆ ಹನುಮಗೆ ಭವನಗಳನು ಕಟ್ಟಿದಗೆ ಹನುಮನ ಯಂತ್ರದಿ ಬಿಗಿದಪ್ಪಿದಗೆ ಮುನಿತ್ರಯದಲಿ ಸೇರಿದ ದೊರೆಗೆ 2 ಮಾಯಾವಾದಗಳನು ಗೆಲಿದವಗೆ ನ್ಯಾಯಾಮೃತಧಾರೆಯ ಅಭಿಷೇಕದಿ ಆ ಯದುಪತಿಯನು ಕುಣಿಸಿದಗೆ 3 ಚಕ್ರಧರನ ಸುಳುಗಳ ತಿಳಿದವಗೆ ಮಿಕ್ಕಮತಗಳನು ಅಳಿದವಗೆ ವಕ್ರಯುಕುತಿಗಳನು ತುಕ್ಕುಡಗೈಯ್ಯವ ತರ್ಕ ತಾಂಡವದಿ ನಲಿದವಗೆ 4 ಕೃಷ್ಣದೇವರಾಯನ ಕುಲಪತಿಗೆ ಕಷ್ಟದ ಕುಹಯೋಗವ ಕೊಂದವಗೆ ಶಿಷ್ಟಜನಗಳಿಗೆ ಇಷ್ಟಾರ್ಥಗಳನು ವೃಷ್ಟಿಯಗೈವ ಪ್ರಸನ್ನರಿಗೆ 5
--------------
ವಿದ್ಯಾಪ್ರಸನ್ನತೀರ್ಥರು
ಜಯವೆನ್ನಿ ಜನರೆಲ್ಲ ಸ್ವಾಮಿ ಭವರೋಗವ್ಶೆದ್ಯಗೆ ಭಾವಜನಯ್ಯಗೆ ಕುವಲಯಧರಸ್ವಾಮಿಗೆ ನಾರಾಯಣ ಪ. ಆಗಮಚೋರನ ಗೆಲಿದ ರಾಮ ಬೇಗನೆ ಸುರರಿಗೆ ಸುಧೆಯೆರೆದ ಕೃಷ್ಣ ನಾಗಲೋಕವ ಹೊಕ್ಕವನ ಕೊಂದಾಗ ಶಿಶು ಕೂಗೆ ಕಂಬದಿ ಬಂದಗೆ ನಾರಾಯಣ 1 ಭಾಗೀರಥಿಯ ಪಡೆದೆ ರಂಗ ಬಾಗಿಸಿ ತಾಯ ಶಿರವ ಕಡಿದೆ ರಾಮ ನೀಗಿದಶ್ವವಾಹಕಗೆ ನಾರಾಯಣ 2 ಜಲದೊಳಗಾಳ್ದನ ಸೀಳ್ದ ರಾಮ ಅಲಸದೆ ಗಿರಿಯ ಬೆನ್ನಲಿ ತಾಳ್ದ ಕೃಷ್ಣ ನೆಲನ ಕದ್ದೊಯ್ದಸುರನ ಮರ್ದಿಸಿದ ಶಿಶು- ಗೊಲಿದು ಬಲಿಯ ತುಳಿದೆ ನಾರಾಯಣ 3 ಛಲಪದದಿ ರಾಯರ ಕಡಿದೆ ರಾಮ ಬಲು ಬಿಲ್ಲನು ಕರದಲ್ಲಿ ಪಿಡಿದೆ ಕೃಷ್ಣ ಕೋ- ಡುಳ್ಳವ ಕೋಪದ ಮುಖ ದೈನ್ಯದಿ ಬೇಡುವೆ ಕೊಡಲಿಗಾರ ನಾರಾಯಣ 4 ರೂಢಿಯೊಳು ರಾಯರ ಗೆಲಿದ ರಾಮ ಓಡಿ ಹೊಕ್ಕನೆ ದುರ್ಗದ ಜಲ ಕೃಷ್ಣ ನೋಡೆ ನಾರಿಯರ ವ್ರತವಳಿದೆ ಹಯವದನ ರೂಢರಾವುತನಾದ ನಾರಾಯಣ5
--------------
ವಾದಿರಾಜ
ಜೋಜೋ ಕಂದÀರ್ಪಕೋಟಿ ಲಾವಣ್ಯಜೋಜೋ ವೃಂದಾರಕ ಶಿರೋರನ್ನ ಪ . ಜೋಜೋ ನಂದನ ಸುಕೃತದ ಫಲವೆಜೋಜೋ ಮುನಿಮನಮಧುಪ ಕಮಲವೆಅ.ಪ. ಪೊನ್ನ ತೊಟ್ಟಿಲ ಮೇಲೆ ಮಣಿಮಯವಾದ ವಿತಾನ್ನವ ಕಟ್ಟ್ಟಿ ಪಟ್ಟೆಯ ಮೇಲ್ವಾಸಿನಲಿಚಿನ್ನ ಶ್ರೀಕೃಷ್ಣನ ಮಲಗಿಸಿ ಗೋಕುಲದಕನ್ನೆಯರೆಲ್ಲ ತೂಗುತ ಪಾಡಿದರೆ 1 ಶಶಿಯ ಚೆಲುವ ಪೋಲ್ವ ಮೊಗದ ಚೆನ್ನಿಗನೆಎಸೆವ ಕಿರುಡೊಳ್ಳಿನ ಸೊಬಗ ಬಾಲಕನೆಪೊಸಕೆಂದಾವರೆಯಂದದಿ ಮೃದುಪದನೆಬಿಸರುಹನಯನ ಬಿಡದಿರೆಮ್ಮ ಕಂದ 2 ಪೂತನಿ ಅಸುವನೀಂಟಿದ ಪೋತ ಶಿಶುವೆವಾತದೈತ್ಯನ ಗೆಲಿದದುಭುತ ಬಾಲಭೂತಗಳನಂಜಿಸುವರ್ಭಕನೆಓತೆಮ್ಮ ಶಿಶುಗಳ ಸಲಹೊ ಶ್ರೀಹರಿಯೆ 3 ಅಮೃತವನೂಡಿ ಸುರರ ಬೆಳೆಸಿದನೆಭ್ರಮಿತನಾದ ಕರಿವರನ ಕಾಯ್ದವನೆಸುಮುಖತನದಿ ಪರೀಕ್ಷಿತನ ಪೊರೆದನೆಮಮತೆಯಿಂದೆಮ್ಮ ಶಿಶುಗಳ ನೀ ಸಲಹೊ 4 ಪೊಳೆÀವ ಮೂಲರೂಪದಿ ತೋರಿದೆ ನೀ-ನುಳಿದ ಶಿಶುಗಳಂತೆ ಶಿಶುವೆನ್ನಬಹುದೆಲಲನೆ ಬೇಡಿಕೊಳ್ಳೆ ತನ್ನ ತಾನೆ ಶಿಶು-ಗಳ ಭಾವವಿಡಿದೆಯೆಂದೆಂಬರು ನಿನ್ನ5 ಈ ಮಹಿಯೊಳು ಹರಿ ಶಿಶುವಾಗೆ ತನ್ನ ಮ-ಹಿಮೆಯ ತುತಿಸುವ ಶ್ರುತಿವನಿತೆಯರುವ್ಯಾಮೋಹದಿ ಬಂದು ಲಲನೆಯರಾದರುಆ ಮುಗ್ಧೆಯರು ಪಾಡುತ ತೂಗಿದರೆ 6 ನೀ. ಶಿಶುವಾದರೆ ನಿನ್ನುದರದೊಳಿರ್ದ ಶ್ರುತಿಮುಕ್ತರು ಶಿಶುಗಳೆಂತಾಹರೊವೇಷಧರನಾಗಿ ಶಿಶುಗಳ ವಾಸಿನೊಲಿದೆವಾಸುದೇವ ನಮ್ಮ ಬಿಡದಿರು ಶ್ರೀ ಕೃಷ್ಣ 7 ಆವಳಿಸಲು ನಿನ್ನ ಗರ್ಭದೊಳಗೆ ಭುವ-ನಾವಳಿ ಗೋಪಗೋಪಿಯರನ್ನು ತೋರಿದೆಶ್ರೀವರ ನೀನೆಲ್ಲರ ತಂದೆಯಲ್ಲದೆಭಾವಜ್ಞರ ಮತದಿ ಶಿಶುವೆಂತಪ್ಪೆ 8 ಹಯವದನನಾಗಿ ವೇದವÀ ತಂದುಪ್ರಿಯಸುತ ಚತುರಮುಖಗೆ ಪೇಳಿದಖಿಳ ವಿ-ದ್ಯೆಯ ಖನಿ ನೀನೀಗಳೇನೆಂದು ನುಡಿಯಲ-ರಿಯದ ಬಾಲಕನಾದ ಬಗೆ ಪೊಸತಯ್ಯ
--------------
ವಾದಿರಾಜ
ತಂಗಳೊಡೆಯರು ತಂಗಳೊಡೆಯರೇ ನಿಮ್ಮ | ಮಹಿಮೆಗೇನೆಂಬೆಅಂಗವನೆ ಮರೆಮಾಚಿ | ಮಂಗಳವಕೊಂಡಾ ಪ. ನಾಮ ನಿರ್ದೇಶ ಜನ | ಸ್ತೋಮಕಾಕರವೆಂದುನಾಮವನೆ ತೊರೆಯುತ್ತ | ಗೂಢಭಾವದಲೀ |ಭೀಮ ತೀರದಿ ನಿಂದು | ತಪವ ಗೈಯ್ಯುತಲಿರುವೆಸೀಮೆ ಮೀರಿದ ಮಹಿಮ | ದಯೆದೋರೊ ಎನಗೆ 1 ಬೋಧ | ಮೋದದಿಂ ತಿಳಿಸುತ್ತಸಾಧನವ ಗೈಸೆನಗೆ | ಹೇದಯಾ ಪೂರ್ಣ 2 ವೈರಾಗ್ಯ ಹರಿ ಭಕುತಿ | ವೀರಮೂರುತಿ ಎನಿಸಿಮಾರನ್ನ ನೀ ಗೆಲಿದು | ಮೋಕ್ಷಕಾಮೀಸಾರತಮನೂ ಗುರೂ | ಗೋವಿಂದ ವಿಠಲೆಂದುಬಾರಿಬಾರಿಗೆ ಸ್ಮರಿಸಿ ಆನಂದ ಗೊಳ್ವಾ 3
--------------
ಗುರುಗೋವಿಂದವಿಠಲರು
ತಾತ್ವಿಕ ಹಿನ್ನೆಲೆಯ ಪದಗಳು ಗೌರಿವರನೆ ಕಾಯೊ ಎನ್ನ ಧಾರುಣಿಯೊಳು ರಾಯಕುಪ್ಪಿಸುಸದನ ಪ ಮೂರುಲಿಂಗ ಸ್ವರೂಪದಲಿಯನ್ನ ಮೂರು ತಾಪಗಳ ನೋಡಿಸಿ ಕರುಣದಲಿ ಮೂರು ಸಾಧನವ ನೀಡುತಲಿ ಬಿಂಬಾ ಮೂರುತಿಯನುಮನದಿ ಕಾಂಬುವಂದದಲಿ 1 ಕರುಣಾ ಕಟಾಕ್ಷದಿ ನೋಡೋ ಸದಾ ಕರಿವರದನ ಗುಣಗಳನೆ ಕೊಂಡಾಡೋ ಹರಿ ಭಕುತರ ಸಂಗ ನೀಡೋ ಭವ ಶರಧಿಯಿಂದೆನ್ನನುದ್ಧರಿಸಿ ಕಾಪಾಡೋ 2 ಪಂಚಬಾಣನಗೆಲಿದಧೀರಾ ದ್ವಿ ಪಂಚ ಕರಣಗಳಿಂ ಮಾಡಿಸು ಸದ್ವ್ಯಾಪಾರಾ ಪಂಕಜ ಮಧುಕರ 3
--------------
ಕಾರ್ಪರ ನರಹರಿದಾಸರು
ತೂಗಿರೆ ಗುರುಗಳ ತೂಗಿರೆ ಯತಿಗಳ ತೂಗಿರೆ ದಾಸಗ್ರೇಸರರ ನಾಗಶಯನನು ರಾಗವ ಪಡೆದಂಥ ಯೋಗಿವರೇಣ್ಯರ ತೂಗಿರೆ ಪ ಈ ಮಹಿಯೊಳು ಪುಟ್ಟಿ ಶ್ರೀಮುದತೀರ್ಥ ಸು- ನಾಮದಿ ಕರೆಸುವರ ತೂಗಿರೆ ಆ ಮುದತೀರ್ಥ ಪದ್ಮನಾಭ ನಾಮದಿಂದಿರುವರ ತೂಗಿರೆ1 ರಾಮನ ತಂದಿತ್ತ ನರಹರಿ ಮುನಿಪರ ಮಾಧವ ತೀರ್ಥರ ತೂಗಿರೆ ಆಮ- ಹಾವಿದ್ಯಾರಣ್ಯರನ ಗೆಲಿದಂಥ ಶ್ರೀ ಮದಕ್ಷೋಭ್ಯರ ತೂಗಿರೆ 2 ಕಾಕಿಣಿತೀರಸ್ಥ ಟೀಕಾಚಾರ್ಯರೆಂಬೊ ನಾಕಪಾಂಶಜರನ ತೂಗಿರೆ ಶ್ರೀಕೃಷ್ಣ ತಟದಿ ಜಿತಾಮಿತ್ರರೆಂಬೊ ಪಿ- ನಾಕಿ ಅಂಶಜರನ ತೂಗಿರೆ 3 ರಾಜರಂದದಿ ಸುಖಭೋಜನ ಕೃದ್ಯತಿ ರಾಜ ಶ್ರೀಪಾದರ ತೂಗಿರೆ ವ್ಯಾಜದಿ ವಿಜಯ ಸಾಮ್ರಾಜ್ಯರೆನಿಸಿ ವ್ಯಾಸರಾಜರು ಮಲಗ್ಯಾರ ತೂಗಿರೆ 4 ವಾದಿಗಳನು ಯುಕ್ತಿವಾದದಿ ಗೆಲಿದಂಥ ವಾದಿರಾಜರನ್ನ ತೂಗಿರೆ ಮೇದಿನಿಯೊಳು ಕೃಷ್ಣದ್ವೈಪಾಯನರೆಂಬೊ ವೇದವ್ಯಾಸಾತ್ಮಜರ ತೂಗಿರೆ 5 ಪರಿಮಳ ರಚಿಸಿದ ವರಹಜ ತೀರಸ್ಥ ಇರುಳು ಕಾಲದಲಿ ತರಣಿಯ ತೋರಿದ ಗುರುಸತ್ಯ ಬೋಧರ ತೂಗಿರೆ 6 ಪರಮತ ಖಂಡನ ನಿರುತದಿ ಮಾಡಿದ ಗುರುವರದೇಂದ್ರರ ತೂಗಿರೆ ಗುರು ಭುವನೇಂದ್ರರ ಕರಜವ್ಯಾಸತತ್ವ ವರಿತ ಯತೀಶರ ತೂಗಿರೆ 7 ವರಭಾಗವತಸಾರ ಸರಸದಿ ರಚಿಸಿದ ಗುರುವಿಷ್ಣು ತೀರ್ಥರ ತೂಗಿರೆ ಪರಮ ಕ್ಷೇತ್ರಕೂಡಲಿಯೊಳಗಿರುವಂಥ ಗುರುರಘುವೀರರ ತೂಗಿರೆ 8 ಹರಿಯ ಮಹಿಮೆಯನ್ನು ಸರಸದಿ ಪೇಳಿದ ಪುರಂದರ ದಾಸರ ತೂಗಿರೆ ಹರಿಸರ್ವೋತ್ತಮನೆಂದು ಸುರಮುನಿ ಗರುಹಿದ ಗುರು ವಿಜಯದಾಸರ ತೂಗಿರೆ 9 ಬನ್ನವ ಬಿಡಿಸಿ ಶಿಷ್ಯನ್ನ ಪಾಲಿಸಿದ ಭಾಗಣ್ಣ ದಾಸರನ್ನು ತೂಗಿರೆ ಘನ್ನ ಹರಿಯಗುಣ ವರ್ಣಿಸಿದಂಥ ಜ ಗನ್ನಾಥ ದಾಸರ ತೂಗಿರೆ 10 ಮಾನವಿರಾಯರ ಪ್ರಾಣಪದಕರಾದ ಪ್ರಾಣೇಶದಾಸರ ತೂಗಿರೆ ವೇಣುಗೋಪಾಲನ್ನ ಗಾನದಿ ತುತಿಸಿದ ಆನಂದದಾಸರ ತೂಗಿರೆ 11 ವಾಸ ಆದಿಶಿಲಾಧೀಶನ್ನ ಭಜಿಸಿದ ಶೇಷ್ಠ ದಾಸರನ್ನ ತೂಗೀರೆ ಶ್ರೇಷ್ಠ ಕಾರ್ಪರ ನರಕೇಸರಿಗತಿಪ್ರೀಯ ದಾಸೋತ್ತಮರನ್ನ ತೂಗೀರೆ 12
--------------
ಕಾರ್ಪರ ನರಹರಿದಾಸರು
ದಂಡವ್ಯಾತಕಯ್ಯ ಹರಿ ಹರಿ ದಂಡವ್ಯಾತಕಯ್ಯ ಪ ದಂಡವ್ಯಾತಕಯ್ಯ ಪಾಂಡುಪಕ್ಷ ಮಹ ಪಾದ ಮರೆಯ ಬಿದ್ದವರಿಗೆ ಅ.ಪ ಭಾರನಿನ್ನದೆಂಬ ಭಕ್ತರ ಭಾರವಹಿಸಿಕೊಂಬ ಪಾರಕರುಣಾನಿಧಿ ಧೀರ ನಿನ್ನ ಪಾದ ಸೇರೆ ಭಜಕರಿಗೆ ಧಾರುಣಿ ಜನರ 1 ಅಜಾಮಿಳನಂತ್ಯದಿ ತವನಾಮ ನಿಜವಾದೊಂದಕ್ಷರದಿ ಮಜೆದು ಗೆಲಿದು ಕಷ್ಟ ನಿಜಪದ ಪಡೆದದ್ದು ನಿಜವನರಿತು ನಿಮ್ಮ ಭಜಿಸುವ ಜನರಿಗೆ 2 ಸಿಂಧುಶಯನನೆನಲು ಅನ್ಯರ ಬಂಧುವೆ ಕರುಣಾಳು ಮಂದರಪರ್ವತ ಮಂದಿರ ಶ್ರೀರಾಮ ಪಾದ ವಂದಿಸಿ ಸುಖಿಪರಿಗೆ 3
--------------
ರಾಮದಾಸರು
ದಶಾವತಾರದ ಲೀಲೆಗಳು ಅಂಬುಜದಳಾಕ್ಷಗೆ ಮಂಗಳ ಪ ಸರ್ವ ಜೀವರಕ್ಷಕಗೆ ಮಂಗಳ ಅ ಜಲಧಿಯೊಳಾಮ್ನಾಯ ತಂದಗೆ ಮಂಗಳಕುಲಗಿರಿ ತಾಳ್ದಗೆ ಜಯಮಂಗಳನೆಲನ ಕದ್ದಸುರನ ಗೆಲಿದಗೆ ಮಂಗಳಚೆಲುವ ನರಸಿಂಹಗೆ ಶುಭಮಂಗಳ1 ಶುಭ ಮಂಗಳ 2 ಶುಭ ಮಂಗಳ 3
--------------
ಕನಕದಾಸ
ದಾಸನಾಗೋ ಪ್ರಾಣಿ ಬರಿದೆ ಕಾಣಿ ಪ ದಾಸನಾಗು ರಮೇಶನ ಪಾದ ಹೇಸಿಮನಸಿನ ಕ್ಲೇಶವ ನೀಗಿ ಅ.ಪ ಹಮ್ಮು ಬಿಟ್ಟುಬಿಡೋ ಈಶತ್ವ ಸುಮ್ಮನಲ್ಲ ನೋಡೋ ಸಮ್ಮತ್ಹೇಳಬೇಡೋ ಮಹವಾಕ್ಯ ಮರ್ಮಶೋಧ ಮಾಡೋ ಹಮ್ಮು ಅಹಂಕಾರ ದೂಡಿ ನಿರ್ಮಲಮತಿಗೂಡಿ ಒಮ್ಮನದಿಂ ಪರಬ್ರಹ್ಮನ ಪಾಡಿ 1 ಶಂಕೆಯನೀಡ್ಯಾಡೋ ಚಿತ್ತದ ಕ ಲಂಕ ದೂರ ಮಾಡೋ ಓಂಕಾರರ್ಥ ಮಾಡೋ ಬ್ರಹ್ಮದ ಅಂಕಿತಿಟ್ಟು ಪಾಡೋ ಕಿಂಕರನಾಗದೆ ಶಂಕರ ನಿನಗೆಲ್ಲಿ ಮಂಕುತವನವ ಬಿಟ್ಟು ಸಂಕರುಷಣನ 2 ಹಾಳು ವಾಸನೆ ತೂರಿ ನಿಜವಾದ ಶೀಲಜನರ ಸೇರಿ ಮೂಲತತ್ತ್ವದಾರಿ ಅನುಭವ ಕೀಲಿ ತಿಳಿದು ಭೇರಿ ತಾಳನಿಕ್ಕುತ ಮಮಶೀಲ ಶ್ರೀರಾಮನ ಮೇಲೆಂದು ನಂಬಿ ಭವಮಾಲೆ ಗೆಲಿದು ನಿಜ 3
--------------
ರಾಮದಾಸರು
ದಾಸರ ಸಖ ಮಾಡಂದೆ ಎನ್ನ ಧ್ಯಾಸದಿರಗಲದೆ ಶ್ರೀಹರಿ ತಂದೆ ಪ ಕನಕರಾಯನು ನಿಜದಾಸ ನಿನ್ನ ಘನತರ ಪ್ರಸನ್ನತೆ ಪಡೆದನುಮೇಷ ಅನುದಿನ ನಿಮ್ಮಯ ಘನಮಹಿಮೆಯನು ತೋರಿ ಮುನಿವ್ಯಾಸರಾಯರ ಮನವ ತಣಿಸಿದಂಥ 1 ಘನ ಸತ್ಯ ಕಬೀರದಾಸ ತನ್ನ ತನುಮನಧನವನ್ನು ನಿನಗರ್ಪಿಸೀತ ವನಿತೆಯನೊತ್ತಿಟ್ಟು ತನುಜಾತನನು ಕೊಂದು ಉಣಿಸಿ ಸಂತರಿಂ ಸುತನ ಪ್ರಾಣವ ಪಡೆದಂಥ 2 ವಾಸನಳಿದು ಪುರಂದಾಸ ತನ್ನ ನಾಶಬುದ್ಧಿಗೆ ನಾಚಿ ನೀಗಿ ಮನದಾಸೆ ಸೋಸಿಲಿಂ ತವಪಾದಧ್ಯಾಸ ಬಲಿಸಿ ಜಗದೀಶ ಹೇಸದೆ ನಿಮ್ಮನು ಗಿಂಡಿಲ್ಹೊಡೆದಂಥ 3 ವರನಾಮದೇವ ನಿಜದಾಸ ತನ್ನ ಪರಮಸಂತರಿಗೆಲ್ಲ ಪಾಲಿಸಿ ಭಾಷ ಸಮ ಗೌಪ್ಯದಿಂ ಪಂಪಾಪುರಿಗೈದಿರಲು ನಿನ್ನ ತಿರುಗಿ ಕರೆದೊಯ್ದು ಇರವ ಪೂರೈಸಿದಂಥ 4 ಬಲ್ಲಿದ ತುಕಾರಾಮದಾಸ ಬಲು ಕ್ಷುಲ್ಲಕರುಪಟಳ ಸಹಿಸಿ ಮನದಕ್ಲೇಶ ಎಲ್ಲವ ನೀಗಿ ಹರಿ ಪುಲ್ಲನಾಭನ ಪಾದ ದಲ್ಲೆ ಮನ ನಿಲ್ಲಿಸಿ ಉಲ್ಲಾಸದಿರುವಂಥ 5 ಬಗೆಯ ತಿಳಿದು ಜಗನ್ನಾಥ ನಿಮ್ಮ ಸುಗುಣದರಿದು ವ್ಯಾಧಿ ಕಳೆದುಕೊಂಡು ಪ್ರಮಥ ನಿಗಮಗೋಚರ ನಿನ್ನ ಬಗೆಬಗೆ ಪೊಗಳುತ ಜಗದಮಾಯವ ಗೆಲಿದು ಸೊಗಸಿನಿಂ ನಲಿವಂಥ 6 ಉದಧಿಜಿಗಿದ ಹನುಮಂತ ಮಹ ಪದುಮಾಕ್ಷಿಯಳ ಕಂಡು ನಮಿಸಿದ ಬಲವಂತ ಸದಮಲಾಂಗಿಗೆ ತನ್ನ ಹೃದಯಸೀಳಿದ್ಹಟದಿಂ ಪಾದ ತೋರಿಸಿದಂಥ 7
--------------
ರಾಮದಾಸರು
ದಾಸರಾಯರಾ ಚರಣಕಮಲ ಭಜಿಸೋ |ದುರ್ವಿಷಯವ ತ್ಯಜಿಸೋ ||ಶ್ರೀಶ ಭಜಕ ಗುರು ಪ್ರಾಣೇಶದಾಸಾರ್ಯ |ಹರಿದಾಸ ವರ್ಯಾ ಪ ಸದ್ವೈಷ್ಣವ ಅಧ್ಯಕ್ಷರೆಂದೆನಿಪರೊ |ಕರ್ಮಠರೆನಿಪರೋ |ಮಧ್ವಮತ ಪ್ರವರ್ತಕರೆನಿಪರೋ |ಜ್ಞಾನಿಗಳೆನಿಪರೊ ||ಪದ್ಧತಿ ಪೂರ್ವಕ ಕವನವ ಪೇಳುವರೊ |ಹರಿ ಪರನೆಂಬುವರೊ |ಶುದ್ಧಾತ್ಮರಿಗತಿ ಪ್ರಿಯರೆಂದೆನಿಸುವರೋ |ಸತ್ಕಥಾಲಾಪರೋ 1 ಕಾಮಕ್ರೋಧ ಮದಮತ್ಸರವನು ಗೆಲಿದೂ |ತಾಮಸರನು ಹಳಿದೂ |ನೇಮದಿಂದ ಯಮನಿಯಮಗಳನು ವಹಿಸೀ |ಇಂದ್ರಿಯಗಳ ಜೈಸೀ |ತಾಮುದದಿಂದಲಿ ಹರಿಗುಣ ಕೀರ್ತನೆಯಾ |ಮಾಡುತ ನರ್ತನೆಯಾ ||ಪ್ರೇಮದಿಂದ ಮಾಡಿ ದೇಶದಲ್ಲಿ ಮೆರೆದಾ |ನಾಮ ಸುಧೆಯನ್ನೆರದಾ 2 ಏಸು ಪೇಳಲಿ ಇವರ ಚರಿತೆಯನ್ನು |ಆ ಪಾರವು ಇನ್ನೂ |ಸೋಸಿನೋಡಲು ಎನಗೆ ವಶವಲ್ಲಾ |ಇದು ಪುಸಿಯೂ ಅಲ್ಲಾ ||ಮೀಸಲ ಮನದಲಿ ತುತಿಸಲು ಸಂತಾಪಾ |ಪೋಪದು ನಿರ್ಲೇಪಾ |ಶ್ರೀಶ ಪ್ರಾಣೇಶ ವಿಠಲ ತಾ ಬಲ್ಲಾ |ವಲಿದಿಹನಲ್ಲಾ 3
--------------
ಶ್ರೀಶಪ್ರಾಣೇಶವಿಠಲರು