ಒಟ್ಟು 89 ಕಡೆಗಳಲ್ಲಿ , 31 ದಾಸರು , 84 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆನೆವೆನಾ ನೆನೆವರಿಗೊಲಿವನಾ ಅನುದಿನಾ ನೆನೆವನಾ| ಕಾವನಾ ಪಾವನಾ ದೇವನಾ ಪ ಗಜರಾಜ ಧ್ರವ ಪ್ರಲ್ಹಾದಂಬರೀಷನ| ಅಜಮಿಳ ವಿಭೀಷಣ ರುಕ್ಮಾಂಗದರ್ಜುನ| ಸುಜನ ಭೀಷ್ಮ ವಿದುರನ| ನಿಜವ ದೋರಿಧನ್ಯ ಗೈಸಿದವನಾ1 ಮುರಾರಿ ವಾರಿಜಾರಿ ವಂಶ ವೀರಧೀರನಾ ಪಾರ ವಾರನಾ ಸುರ ಸಹಕಾರನಾ ಕರುಣಾಳು ಮೂರುತಿ ಪರಮೋದಾರನ ಗುರು ಮಹಿಪತಿಜ ಮನೋಹರನಾ2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಂಕಜ ಮಧುಪ ನಮೋ ಪ ಮೋದ ಮೋದ ಬೋಧ ಶಾಸ್ತ್ರದುರ್ವಾದಿಗಳ್ ಜೈಸಿದ ಯತಿಯೆ ನಮೋ 1 ಯೋಗಿ ನಮೋ 2 ಭೂಸುರ ಋಣ ಕ್ಲೇಶಾಪಹ ನಮೊ ನಮೊಮೂಷಕ ಬಹು ಭಯ ನಾಶ ನಮೋ ||ಕಾಶಿ ಬದರಿ ರಾಮೇಶ್ವರ ಕ್ಷೇತ್ರ ಪ್ರವಾಸಿಸಿ ಸತ್ಕಥೆ ಕರ್ತೃ ನಮೋ ||ಲೇಶ ಮಣ್ಣು ತಾ ಕೊಡುತಲಿ ವಿಪ್ರಗೆದೋಷವ ಕಳೆದಗೆ ನಮೊ ನಮೋ ||ಮೀಸಲ ಮನದಿ ನಿಷೇವಿಸೆ ಸಂಸೃತಿಶೋಷಿಪ ಶ್ರೀ ಲಾತವ್ಯ ನಮೋ 3 ಎರ್ಡು ಭುಜದಿ ಹಯವದನನ ಚರಣವಬಿಡದೆ ಧರಿಸುವಗೆ ನಮೊ ನಮೋ ||ಮೃಡನುತ ನಾ ಹರಿಘ್ಹರಿ ವಾಣದಿಕಡಲೆ ಪೂರ್ಣ ಬಿಡದೀವಗೆ ನಮೋ ||ನಡುಮನೆ ದ್ವಿಜಸುತ ನಿಲಿಸ್ಯರ್ಚಿಸಿದಾಉಡುಪಿನ ಕೃಷ್ಣಾರ್ಚಕಗೆ ನಮೊ ||ಸಡಗರದಲಿ ಪರ್ಯಾಯಗಳನು ಮಾರ್ಪಡಿಸಿರುವಾತಗೆ ನಮೋ ನಮೋ 4 ಪತಿ ವಿಜಯವ ತಾಬರೆದು ಪೂಣೆಯಲಿ ಮೆರೆದಗೆ ನಮೋ ||ಎರಡೆರಡೊಂದು ವೃಂದಾವನ ಸ್ವಾದಿಲಿಸುರನದಿ ತಟ ನಿಲಿಸಿದವಗೆ ನಮೋ ||ಎರಡೊಂದು ವಿಕ್ರಮನುತ್ಸವ ಗೈಸಿದಗುರು ಗೋವಿಂದ ವಿಠಲಾರ್ಚಕಗೆ ನಮೋ 5
--------------
ಗುರುಗೋವಿಂದವಿಠಲರು
ಪರಿ ಏನೋ ಬಾಲ ಹನುಮ ಪ. ಬಂಧಿಸಿದರಾರಿಲ್ಲಿ ನಿನ್ನ ಹನುಮ ಅ.ಪ. ಒಂದು ಸಲ ನೋಡುವೆನೆ ಬ್ರಹ್ಮಾಸ್ತ್ರವಲ್ಲವಿದು ಒಂದು ಸಲ ನೋಡುವೆನೆ ಅಜಗರವಿದಲ್ಲ ಒಂದು ಸಲ ನೋಡುವೆನೆ ಕಳ್ಳ ಗುಂಪಲ್ಲವಿದು ಒಂದೆರಡು ಕೋಣವೆರಡರ ಮಧ್ಯೆ ಇರುವ 1 ಕ್ಷಣಕೆ ಪರಿಹರವಾಯ್ತು ಹಿಂದೆ ಆ ಬಂಧಗಳು ಕ್ಷಣಕ್ಷಣಕು ಇದ್ದಂತೆ ಇರುವುದೀ ತೊಡಕು ಗುಣದಂತೆ ಆವರಣ ವರ್ತುಳಾಕಾರದಲಿ ತೆನೆಗಳಲಿ ಕೋತಿಗಳ ಕಾವಲಿನ ಕಟ್ಟು 2 ಬೀಸಿದೀ ಬಲೆ ತೆಗೆಯೆ ಶ್ರೀ ಶನಿಗು ಅಳವಲ್ಲ ವಾಸುದೇವನೆÀ ಬಲ್ಲ ಈ ಮರ್ಮವ ದಾಸಜನ ಪ್ರಿಯ ಶ್ರೀಗೋಪಾಲಕೃಷ್ಣವಿಠ್ಠಲ ವ್ಯಾಸರಿಂದಲಿ ನಿನಗೆ ಮೋಸಗೈಸಿದನೋ 3
--------------
ಅಂಬಾಬಾಯಿ
ಪಾದ | ನಿತ್ಯದಿ ಭಜಿಸುವ ಭೃತ್ಯನೆ ಬಲು ಧನ್ಯನೋ ಪ ಭೃತ್ಯ ಜನಕೊತ್ತೊತ್ತಿ ಪೇಳುವ ಅ.ಪ. ಮುನಿಕುಲ ಸನ್ಮಾನ್ಯ ಸತ್ಯಜ್ಞಾನರ ಕರಜಮಾನ ಮೇಯ ಜ್ಞಾನ ನಿಪುಣಾಹೀನ ಮಾಯ್ಗಳ ಗೋಣ ಮುರಿಸು | ಸ್ವಾನುಭಾವದಿ ಬ್ರಹ್ಮ ಸತ್ಯಜ್ಞಾನ ಆನಂದನೆನುತಲಿ | ಆನುಪೂರ್ವ ವೇದಾರ್ಥ ಪೇಳ್ದ 1 ಈ ಮಹಿಯೊಳು ಭರತ | ಭೂಮಿಯೊಳಖಿಳ ಸುಸೀಮೆಯ ಚರಿಸುತಲೀ ||ನೇಮದಿಂದಲಿ ವಾದ ಭಿಕ್ಷೆಯ | ಪ್ರೇಮದಿಂದಲಿ ಬಯಸಿ ಬರುತಗ್ರಾಮ ಗ್ರಾಮದ ಭ್ರಾಮಕ ಜನ | ಸ್ತೋಮವ ನಿಸ್ತೇಜ ಗೈಸಿದ 2 ಪರಮ ಹಂಸೋತ್ತಮ | ಪರವಾದಿ ಗಜಸಿಂಹಗರುವ ರಹಿತ ಸಾರ್ವಭೌಮಾ ||ವರ ಸುವತ್ಸರ ಚಿತ್ರ ಭಾನುವು | ಚೈತ್ರ ಶುಕ್ಷದಿ ಅಷ್ಟಮೀ ದಿನಸಿರಿ ಗುರು ಗೋವಿಂದ ವಿಠಲನ | ಚರಣ ಸರಸಿಜ ಸೇರಿ ಮೆರೆದ 3
--------------
ಗುರುಗೋವಿಂದವಿಠಲರು
ಪಾಲಿಸೋಯನ್ನ ಪರಾತ್ಪರಾ - ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನ ಘಣಿಶೈಲ ನಿಲಯ-ಹರಿ ಅ.ಪ ಜಲಜಭವನ ನಿಜಕುಕ್ಷಿಯೊಳಿದ್ದ ಸುಲಲಿತ ವೇದಾಪಹಾರಿಯ ಕಂಡು ಜಲಜರೂಪಿನಿಂದಾ ಖಳ ಸಂಹರ ಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಅಂದು ದೂರ್ವಾಸನ ಶಾಪದಿ ಜಗವು ಇಂದಿರೆ ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ಧರಣಿಯನಪಹಾರಗೈಯ್ಯಲು ಬೇಗ ಸೂಕರ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ3 ಸರಸಿಜಜನ ವರದರ್ಪದಿ ಜಗವನುರುಹಿ ತರಳನ ಬಾಧೆಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ 4 ಬಲಿಯ ಮೂರಡಿಭೂಮಿ ದಾನವ ಬೇಡಿ ಅಳೆದು ಈರಡಿಮಾಡಿ ಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯ ಪೆತ್ತ ಚೆಲುವ ವಾಮನರೂಪ5 ಚಕ್ರಾಂಶನಾದ ಕಾರ್ತಿವೀರ್ಯನ ಭುಜ ಚಕ್ರದೊಡನೆ ದುಷ್ಟ ಭೂಪರ ಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ಕ್ರೂರ ರಾವಣ ಕುಂಭಕರ್ಣರ ಬಲು ಘೋರತನಕೆ ತ್ರಿವೇಶರ ದೊಡ್ಡ ದೂರ ಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀರಾಮ ಮೂರುತಿ 7 ಬಲಭದ್ರನೆಂಬುವ ನಾಮದಿ ಧುರದಿ ಹಲ ನೇಗಿಲುಗಳನು ಹಸ್ತದಿ ಪಿಡಿದು ಬಲವಂತರಾದ ದೈತ್ಯಕುಲವ ತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರನಿಭಚೇಲ 8 ಭಾರ ಸೃಷ್ಟೀಶನಲ್ಲಿ ದೂರಿಡೆ ಬಲು ಭ್ರಷ್ಟ ಕೌರವ ಯುಧಿಷ್ಠಿರಗೆ ವೈರ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ 9 ಕಲಿಯಿಂದ ಕಿಡೆ ನಿಜಧರ್ಮವು ಬಹು ಖಳರಿಂದ ವ್ಯಾಪಿಸೆ ಲೋಕವು ಆಗ ಲಲಿತ ತೇಜಿಯನೇರಿ ಕಲುಷಾತ್ಮಕರ ಕೊಂದು ವಿಲಸಿತ ಧರ್ಮವನು ಸಲಹಿದ ಕಲ್ಕಿರೂಪ 10 ಗಿರಿಜಾವಿವಾಹದಿ ತ್ವಷ್ಟ್ರನ ಶಾಪ ಶರಧಿಯೀಂಟಿದ ಮುನಿಗೈದಲು ಬೇಗ ವರವ್ಯಾಘ್ರ ಗಿರೀಶನೆ ಶರಣೆಂದ ಮುನಿಪಗೆ ವರವಿತ್ತು ಸಲಹಿದ ವರದವಿಠಲಹರಿ11
--------------
ವೆಂಕಟವರದಾರ್ಯರು
ಪಾಲಿಸೋಯನ್ನ ಪರಾತ್ಪರಾ ಹರಿ ಪ ಪಾಲಿಸೊ ಬುಧಹಿತ ಫಾಲನಯನನುತ ಲೀಲಾನಟನಫಣಿ ಶೈಲ ನಿಳಯ-ಹರಿ ಅ.ಪ. ವೇದಾಪಹಾರಿಯಕಂಡು ಜಲಚರ ರೂಪಿನಿಂದಾ ಖಳನ ಸಂಹರಗೈದು ಜಲಜಸಂಭವನಿಗೆ ಒಲಿದ ಮತ್ಸ್ಯಾವತಾರ 1 ಕರುಣಾವಿಹೀನದಿ ಬಲು ನೊಂದು ಕಂಗೆಡುತಲಿರೆ ಸಿಂಧುಮಥನಗೈದು ಕೂರ್ಮ 2 ದುರುಳ ಹಿರಣ್ಯಾಕ್ಷನೆಂಬುವ-ದೈತ್ಯ-ಧರಣಿಯನ ಪಹಾರಗೈಯಲು ಬೇಗ ಪರಮೇಷ್ಟಿಗೊಲಿದು ಸೂಕರನ ರೂಪವ ತಾಳಿ ಧರಣೀಚೋರನ ಕೊಂದ ಸರಸೀರುಹಾಂಬಕ 3 ಗೈಸಿದ ಬಲು ದುರುಳ ಹಿರಣ್ಯಕನುರವ ನಖದಿಂದ ಸೀಳಿ ಕರುಳಮಾಲೆಯನಿಟ್ಟ ಧುರಧೀರ ನರಹರಿ4 ಅಳೆದು ಈರಡಿಮೂಡಿಲೋಕವ ಮತ್ತೆ ಉಳಿದೊಂದು ಪಾದದಿ ಬಲಿಯ ತಲೆಯನು ಮೆಟ್ಟಿ ನಲಿದು ಗಂಗೆಯಪೆತ್ತ ಚಲುವ ವಾಮನ ರೂಪ 5 ಚಕ್ರದೊಡನೆದುಷ್ಟಭೂಪರಅತಿ ಅಕ್ರಮವನು ಕಂಡು ವಿಕ್ರಮಾನ್ವಿತ ನೃಪ ಚಕ್ರವ ಮುರಿದ ಮುನಿಚಕ್ರರಕ್ಷಕ ರಾಮ 6 ತ್ರಿದಿವೇಶರದೊಡ್ಡ ದೂರಕೇಳುತ ಮನುಜಾಕಾರವ ಧರಿಸಿ ದೈತ್ಯ ವೀರರ ಮಡುಹಿದ ಶ್ರೀ ರಾಮ ಮೂರುತಿ 7 ನೇಗಿಲುಗಳನು ಹಸ್ತದಿಪಿಡಿದು ಬಲವಂತರಾದ ದೈತ್ಯಕುಲವತರಿದು ದಿವಿಜ ಕುಲವ ಸಂರಕ್ಷಿಸಿದ ಜಲಧರ ನಿಭಚೇಲ 8 ಭಾರ ತಾಳದೆ-ಧರಣೀ-ಸೃಷ್ಟೀಶನಲ್ಲಿದೂರಿಡೆ ವೈರಿ ಪುಟ್ಟಿಸಿ ಭೂಭಾರ ಮಟ್ಟುಮಾಡಿದ ಕೃಷ್ಣ9 ವ್ಯಾಪಿಸೆಲೋಕವು ಆಗ ಲಲಿತತೇಜಿಯನೇರಿ ಕಲುಷಾತ್ಮಕರಕೊಂದು ವಿಲಸಿತ ಧರ್ಮವನ್ನು ಸಲಹಿದ ಕಲ್ಕಿರೂಪ 10 ಮುನಿಗೈದಲುಬೇಗ ವರವ್ಯಾಘ್ರಗಿರೀಶನೆ ಶರಣೆಂದಮುನಿಪಗೆ ವರವಿತ್ತು ಸಲಹಿದ ವರದ ವಿಠಲ ಹರಿ11
--------------
ಸರಗೂರು ವೆಂಕಟವರದಾರ್ಯರು
ಪುಟ್ಟಿ ಬಂದಿಹೆಯಾ ಕಿಟ್ಟಯ್ಯಾ ಪ ಕೆಟ್ಟ ಲೋಕವನೆಲ್ಲ ನೆಟ್ಟನೆ ತಿದ್ದಲುಕಟ್ಟಿ ನೋಡು ಶ್ರಾವಣದಷ್ಟಮಿ ದಿನದಲ್ಲಿ 1 ಹೀನಾದ ಧರ್ಮದ ಜ್ಞಾನೋದಯ ಗೈಸಿದೀನರನುದ್ಧರಿಸಿ ಮಾನವನಾಗಿ 2 ಬಾಧಿಪ ಕುಜನರ ಛೇದಿಸಿ ಜಗದೊಳುಸಾಧು ಸುಜನರನು ಮೋದದಿ ಸಲುಹಲುಮೇದಿನಿಯೊಳು ನೀ ಉದಿಸಿ ಬಂದೆಯಾ 3 ಭಕ್ತರ ಮೊರೆ ಕೇಳಿ ಯುಕ್ತಿಯಿಂದ ಸಲುಹಲುಮುಕ್ತಿಯ ಸ್ಥಾನ ವೈಕುಂಠವ ಬಿಟ್ಟು 4 ಸುರ ಮುನಿಗಳಿಗಿಂತು ವರವಿತ್ತ ಕಾರಣ ಧರೆಯೊಳು ಗದುಗಿನ ವೀರನಾರಾಯಣ5
--------------
ವೀರನಾರಾಯಣ
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಮುಂಚೆ ನೋಡಣು ಬನ್ನಿ ಜನಗಳೆ ಹಂಚಿನಾಳಿನವ ಹನುಮನ ವಾಂಛಿತಾರ್ಥಗಳೀವ ಭಾವಿ ವಿರಂಚಿದೇವ ಪದಾರ್ಹನಾ ಪ ಅಂದು ಕಪಿಕುಲದಿಂದ ದುಸ್ತರ ಸಿಂಧು ದಾಟಿದ ಧೀರನ ವಂದಿಸುತ ಭೂನಂದನೆಯು ಕ್ಷೇಮೆಂದು ರಾಮಗೆ ಪೇಳ್ದನ 1 ಧಾರುಣಿಯೊಳವತರಿಸಿ ಕುಂತಿ ಕುಮಾರನೆನಿಸಿದ ಧೀರನ ಕೌರವಾಂತಕನೆನಿಸಿ ಕೃಷ್ಣನ ಭೂರಿ ಕರುಣವ ಪಡೆದನ 2 ವಾದಿಗಳ ನಿರ್ವಾದ ಗೈಸಿದ ಬಾದರಾಯಣನ ಶಿಷ್ಯನ ಭೇದಮತವನು ಸ್ಥಾಪಿಸಿದ ಗುರು ಮೋದ ತೀರ್ಥ ಯತೀಂದ್ರನಾ 3 ಪಾಲಕಿಯ ಉತ್ಸವದಿ ಮೆರೆಯುತ ವಾಲಗವ ಕೈಕೊಳುವನ ಕಾಲಕಾಲಗಳಲ್ಲಿ ಭಜಕರ ಮ್ಯಾಳವನು ಪಾಲಿಸುವನಾ 4 ಶೇಷಭೂಷಣ ವಾಸವಾದಿಸು ರೇಶ ಭಕುತರ ಪೋಷನ ಶ್ರೀಶ ಕಾರ್ಪರವಾಸ ಸಿರಿನರ ಕೇಸರಿಗೆ ಪ್ರಿಯ ದಾಸನ5
--------------
ಕಾರ್ಪರ ನರಹರಿದಾಸರು
ಮುದ್ದು ಮೋಹನ ರಾಯಾ | ಸುಜನರಉದ್ಧರಿಸಿದ್ಯೊ ಜೀಯಾ | ಪ ಶ್ರದ್ಧಾಳುತನದಲಿ | ಬದ್ಧ ದೀಕ್ಷಿತನೆಮಧ್ವಮತವು ಎನೆ | ದುಗ್ಧಾಬ್ದಿ ಚಂದಿರ ಅ.ಪ. ಚಿಪ್ಪಗಿರಿ ಸುಕ್ಷೇತ್ರಾ | ದೊಳಗೆಅಪ್ಪ ಶ್ರೀ ವರರಿಂದಾ |ಗೊಪ್ಪ ಸದುಪ ದೇಶ | ಅಪ್ಪುತದಾಸನೆನೆಪ್ಪು ಕೊಡುತ ತಿ | ಮ್ಮಪ್ಪನೊಳಗೆಮನ 1 ತೀರ್ಥಕ್ಷೇತ್ರ ಚರಿಸೆ | ದೇಹವುಸಾರ್ಥಕಾಯಿತು ಎನಿಸೀ |ಯಾತ್ರೆ ಮಾಡಿದೆ ಸ | ತ್ಪಾತ್ರರ ಸೇರುತಗಾತ್ರ ಗೈಸಿದೆ ಪಾವಿ | ತ್ರ್ಯ ಬಾಹ್ಯಾಂತರ 2 ಗುರುಗೋವಿಂದ ವಿಠಲನೇ | ಪರತತ್ವಸರ್ವೋತ್ತಮನವನೇ |ಒರೆಯುತ ಸುಜನರ | ಪರಿಪಾಲಿಸಿದಿಯೊವರಬಳ್ಳಾಪುರದಲಿ | ವಿಠಲನ ಸನಿಯ 3
--------------
ಗುರುಗೋವಿಂದವಿಠಲರು
ರಾಮನಾಮದಿ ಪಾಮರರಿಗೆ ಪ್ರೇಮ ಪುಟ್ಟುವುದೆ ಪ. ಭೃತ್ಯ ನ್ಯಾಯವರಿಯದ ಕಾಮಿಗಿದರೊಳು ನೇಮ ಬಪ್ಪುದೆ ಅ.ಪ. ದಾಶರಥಿ ಎನಿಸಿ ಜಗದೊಳು ಶ್ರೀಶನವತರಿಸೆ ಕೌಶಿಕನ ಮಖ ಘಾಸಿಗೈಯ್ಯುವ ದೋಷಿಗಳ ತಾ ನಾಶಗೈಸಿದ 1 ಶಿಲೆಯ ಪೆಣ್ಗೈದು ಲಲನೆ ಸೀತೆಯ ಒಲುಮೆಯಿಂ ವರಿಸಿ ಕುಲವನಳಿದನ ಛಲವ ಭಂಗಿಸಿ ಲಲನೆ ಸಹಿತದಿ ನೆಲಸೆ ಪುರದಲಿ 2 ಅನುಜ ಸ ಹಿತ ವನಕೆ ಬರೆ ಖ್ಯಾತಿ ರಾವಣನಾ ತಳೋದರಿ ಪ್ರೀತಿಸಲು ವಿಘಾತಿಗೈಸಿದ 3 ಮಾಯಾಮೃಗ ಕಂಡು ಪ್ರಿಯ ನೀಡೆನೆ ಸಾಯಕವನೆಸೆಯೆ ಕಾಯ ಬಿಡುತಿರೆ ಹೇಯ ರಾವಣ ಪ್ರಿಯಳನುಯ್ಯೆ ನೋಯ್ದ ಮನದಲಿ 4 ಬೆಟ್ಟವನೆ ಕಂಡು ಕುಟ್ಟಿ ವಾಲಿಯ ಪಟ್ಟ ಕಪಿಗಿತ್ತು ಶ್ರೇಷ್ಠ ಹನುಮಗೆ ಕೊಟ್ಟು ಉಂಗುರ ಪಟ್ಟದರಸಿಗೆ ಮುಟ್ಟಿಸೆಂದ 5 ಕೇಳಿ ಶ್ರೀ ವಾರ್ತೆ ತಾಳೀ ಹರುಷವ ಬೀಳು ಕೊಂಡಲ್ಲಿಂ ತಾಳೆ ಕೋಪವ ಕೇಳಿ ವನಧಿ ಸೀಳು ಆಗಲು ಶಿಲೆಯ ಬಿಗಿದ 6 ದುಷ್ಟ ರಾವಣನ ಕುಟ್ಟಿ ಶಿರವನು ಪಟ್ಟದರಸಿ ಕೂಡಿ ಶ್ರೇಷ್ಠ ಭರತಗೆ ಕೊಟ್ಟು ದಶರ್Àನ ಪಟ್ಟವಾಳಿದ ದಿಟ್ಟಯೋಧ್ಯೆದಿ 7 ರಾಮ ರಾಮನೆಂಬಾ ಹನುಮಗೆ ಪ್ರೇಮದಿಂದೊಲಿದು ಧಾಮ ಅಜಪದ ನೇಮಿಸಿ ಮುಂದೆ ಸೋಮನೆನಿಸಿದ ಭಾನು ವಂಶಕೆ8 ಬೆಟ್ಟದೊಡೆಯನ ಇಷ್ಟು ಮಹಿಮೆಯ ಮುಟ್ಟಿಮನ ಭಜಿಸಿ ದಿಟ್ಟ ಗೋಪಾಲಕೃಷ್ಣವಿಠ್ಠಲ ಶ್ರೇಷ್ಠನೆನ್ನುವ ಶ್ರೇಷ್ಠಗಲ್ಲದೆ 9
--------------
ಅಂಬಾಬಾಯಿ
ರಾಮರಾಮ ರಾಮರಾಮ ರಘುಕುಲಾಬ್ಧಿಸೋಮ ಪ ಪರವಾದಿಭೀಕರ ವೈಷ್ಣವಾಸ್ತ್ರಧಾರಿಯಸುರಧೂಮಾ ಅ.ಪ ಕಾರ್ಯಕಾರಣಕಿಂತು ತ್ರಿಗುಣಧರಿಸಿಕೊಂಡದೇವಾ ಆರ್ಯನಾಗಿ ಬಂದಿರುವೆಯೊ ನೀನೆ ಮಹಾನುಭಾವ ರಘುರಾಮ 1 ಪ್ರಣವರೂಪ ಪಕ್ಷಿಗಮನ ತ್ರಿಣೆಯ ಸಖನದ್ಯಾರೊ ಫಣಿವಿಯಾಸನೆ ನೀನೆನ್ನ ಹೃದಯದಲ್ಲಿ ಕಂಡುಬಾರೊ 2 ವೀರರಾಜನಗರದೊಡೆಯ ಹರಿಯೆ ನಿನ್ನ ನೋಡುವೆ ದಾರಿಗೈಸಿದ ಶ್ರೀಗುರುವು ತುಳಶಿಭಜನೆಯ ಮಾಡುವೆ 3
--------------
ಚನ್ನಪಟ್ಟಣದ ಅಹೋಬಲದಾಸರು
ಲಕ್ಷುಮೀನಾರಾಯಣ ಜಯಲಕ್ಷುಮೀ ನಾರಾಯಣ ಲಕ್ಷುಮೀನಾರಾಯಣ ಜಯ ಲಕ್ಷುಮೀ ನಾರಾಯಣ ಪ. ಪಾದ ದಾನವ ಗರ್ವಹರಣ ಗದಾದಿ ಧಾರಣ ಪರ್ವತಾರಿ ವರ ಪ್ರದ 1 ನಂಬಿಕೊಂಡಿಹೆ ನಿನ್ನ ದಿವ್ಯ ಪದಾಂಬುಜಗಳನು ಸರ್ವಕಾಲದಿ ಮನದೊಳಗಿಂಬುಗೊಳು ಕಮಲಾಂಬಕ 2 ಆರು ಸಂಖ್ಯೆಯ ಕಳ್ಳರೆನ್ನನು ಗಾರುಮಾಡುವರಾದರಿಂದತಿ ಧೀರ ನಿನ್ನ ಪದಾರವಿಂದಕೆ ದೂರುವೆನು ರಘುವೀರನೆ 3 ದುರ್ಮತಿಗಳಾದಸುರಹರಣಕೆ ಭರ್ಮಗರ್ಭನು ಬಂದು ಸ್ತುತಿಸಲು ಧರ್ಮಸಂಸ್ಥಾಪಿಸುತ ಬಹು ಶುಭಕರ್ಮ ತೋರುವ ಕರುಣಿಯೆ 4 ಸಪ್ತ ಋಷಿಗಳ ಕೂಡಿಕೊಂಡತಿ ಭಕ್ತಿಯಿಂದಲಿ ನಿನ್ನ ಭಜಿಸಿದ ಸತ್ಯವ್ರತನಿಗೆ ಸಕಲ ಶ್ರುತಿಗಳ ತತ್ವ ತಿಳಿಸಿದ ಮತ್ಸ್ಯನೆ 5 ಮುಳುಗಿಕೊಂಡಿಹ ಅಮಿತಗುರು ಮಂದರವ ಧರಿಸುತ ಅಮೃತರಸ ತೆಗೆದಿತ್ತನೆ 6 ದೈತ್ಯನ ತರಿದು ಬಿಸುಟು ವಿ- ಜನಿತ ಪವಿತ್ರ ಯಜ್ಞ ವರಾಹನೆ 7 ಘಡುಘಡಿಸಿ ಕಂಬದೊಳು ಬಂದ ಸಿಡಿಲಿನಂತಿಹ ನಖದಿ ದೈತ್ಯನ ಒಡಲ ಬಗೆದನು ಕೋಪದಿಂದ 8 ದಾನಕೊಂಡನಾನೆವನದಿ ದಾನವಾಹೃತ ಧರೆಯ ಕಸ್ಯಪಸೂನುಗಳಿಗೊಲಿದಿತ್ತನೆ 9 ದುಷ್ಟಭೂಭುಜಭಾರದಿಂದತಿ ಕಷ್ಟಪಡುತಿಹ ಧರೆಯ ಕರುಣಾ ನೃಪರ ಕಡಿದ 10 ನೀರಜಾವದನಾರವಿಂದ ಮಹಾ ರಸಾಸ್ವಾದನ ಪದ ಕಪಿವೀರನಿಗೆ ಸ್ವಾರಾಜ್ಯ ನೀಡಿದ ಮಾರುತಿಗೆ ದಯ ಮಾಡಿದ 11 ಬಾಲ ಲೀಲೆಯ ತೋರಿ ಗೋಪಕ ಬಾಲೆಯರ ಕೂಡಾಡಿದೆ ಖೂಳಕಂಸನ ಕೆಡಹಿ ದಾನವಮೂಲ ಕಿತ್ತು ಬಿಸಾಡಿದೆ 12 ಜೈನರನು ಮೋಹಿಸುವೆನೆಂದನುಮಾನವಿಲ್ಲದೆ ನಗ್ನನಾಗಿ ಹೀನ ಬುದ್ಧಿಯ ತಿಳಿಸಿ ತ್ರಿಪುರವ ಹಾನಿಗೈಸಿದ ಬೌದ್ಧನೆ 13 ಸುಧೆಯನು ಕರೆದು ಶಿರದಲಿ ತುಂಗ ವಿಷಯ ತರಂಗ ತಪ್ಪಿಸು ಅಂಗಭಂಗವ ಶಿಂಗನೆ 14 ಮಿಂಚಿನೊಡ್ಡಿದ ಮೇಷನಂದದಿ ಪಂಚವರ್ಣದ ತುರಗವೇರಿ ಸಂಚರಿಸಿ ಮ್ಲೇಂಛರನು ಕೊಲ್ಲಿಸಿ ಲಾಂಛಜೀವನ ವರದನೆ 15 ಮಂದಿರದಿ ನೀ ಬಂದು ರಕ್ಷಿಪೆ ಎಂದು ಸಕಲಾನಂದಗೊಂಡಿಹೆ ಇಂದಿರೇಶನೆ ಎಂದಿಗೂ ಈ ಅಂದದಿಂದಲಿನಿಂದ ಸಲಹು 16 ಕೇಶವಾದಿ ದ್ವಿದಶರೂಪವು ಮಾಸಗಳಿಧಿಷ್ಠಾನನಿಗೆ ಪ- ರೇಶ ಕಡೆಯಲಿರುವ ಕಾರ್ತಿಕವಾಸ ದಾಮೋದರ ಹರನೆ 17 ಬಳಲಿ ಕರ್ಮವ ಮಾಡಲಾರೆ ನಳಿನಜಾರ್ಜಿತ ನಿನ್ನ ಪಾದದ ನೆಳಲನಂಬಿ ಸುಮ್ಮನಿರುವೆ 18 ಅಖಿಳದೋಷ ನಿವಾರಣಾದ್ಭುತ ಸಕಲಸದ್ಗುಣಧಾರಣಾ ಕುಂಡಲ ಧಾರಿ ವೆಂಕಟಶಿಖರ ವರ ಸುಖಕಾರಣಾ 19
--------------
ತುಪಾಕಿ ವೆಂಕಟರಮಣಾಚಾರ್ಯ
ಲೇಸು ಲೇಸಾಯಿತು ನೋಡಿ ಭಾಸ್ಕರನ ಕೂಡಿ ಧ್ರುವ ಲೇಸು ಲೇಸಾಯಿತು ನೋಡಿ ಸ್ವಸುಖಗೂಡಿ ಆಶೆ ಪೂರಿಸಿದ ನೋಡಿ ಭಾಸಿ ನೀಡಿ 1 ಶಿರದಲಿ ಅಭಯನಿಟ್ಟ ಹರುಷವ ಕೊಟ್ಟ ಹರಿದು ಭವಜೀವ ಸುಟ್ಟ ಸ್ಮರಣಿಯೊಳಿಟ್ಟ 2 ಮಾಯದ ಮೊನೆ ಮುರಿದ ಭಯ ಹರಿದ ಸಾಯೋಜ್ಯಪದ ತೋರಿದ ದಯ ಬೀರಿದ 3 ಸದ್ವಾಕ್ಯವೆ ಬೋಧಿಸಿದ ಸದ್ಗುಣದ ಸದ್ಭಾವ ಭಕ್ತಿ ತೋರಿದ ಸದ್ಗೈಸಿದ 4 ಅನುಭವ ಸುಖದೋರಿದ ಸ್ವಾನುಭವದ ಮನವಿಗ್ಯೆನುಕೂಲಾದ ತಾನೆ ತಾನಾದ 5 ಸವಿಸುಖವನುಣಿಸಿದ ಸುವಿದ್ಯದ ರವಿ ಕೋಟಿ ಪ್ರಭೆಯ ತೋರಿದ ಅವಿನಾಶದ 6 ತರಳ ಮಹಿಪತಿ ಪ್ರಾಣ ಗುರುನಿಧಾನ ಹರುಷಗೈಸಿದ ಜೀವನ ಪರಮಪಾವನ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಲೇಸು ಲೇಸಾಯಿತೆನ್ನ ಜನುಮ ನೋಡಿ ವಾಸುದೇವನೆ ಬಂದು ಕೈಗೂಡಿ ಧ್ರುವ ಎನ್ನ ಮಾನಾಭಿಮಾನ ಆದ ಹರಿಯೆ ಇನ್ನು ಇಂಥ ಪುಣ್ಯಕ ನೋಡಿ ಸರಿಯೆ ಧನ್ಯಗೈಸಿದುತ್ತೀರ್ಣಾಗಲರಿಯೆ ಇನ್ನೊಬ್ಬರಿಗೇನು ಮುಚ್ಚುಮರಿಯೆ 1 ಕೋಟಿ ಜನ್ಮದಲಿ ಮಾಡಿದ ಸುಪುಣ್ಯ ನಾಟಿ ಬಂತೆನ್ನೊಳಗಸು ತಾರ್ಕಣ್ಯ ನೀಟದೋರಿತು ಘನ ಸುಚೈತನ್ಯ ನೋಡ ನೆಲೆಗೊಂಡಾಯಿತು ಧನ್ಯ 2 ತಾನೆ ತಾನಾದೆನ್ನೊಳು ಬಂದು ನೋಡಿ ಭಾನುಕೋಟಿಪ್ರಕಾಶ ದಯಮಾಡಿ ದೀನ ಮಹಿಪತಿಗೆ ಸ್ವಸುಖ ನೀಡಿ ಮನೋಹರ ಮಾಡಿದ ಮನಗೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು