ಒಟ್ಟು 670 ಕಡೆಗಳಲ್ಲಿ , 76 ದಾಸರು , 507 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರುಣೋದಯಕೆ ಮುಂಚೆ ಬಲು ಕತ್ತಲಂತೆ ಪ ಸಿರಿ ಬರುವುದಕೆ ಮುಂಚೆ ಮುಖ ಸುತ್ತು ಜನಕೆ ಅ.ಪ ಹೊಟ್ಟಿ ಹಸಿದರೆ ಅನ್ನ ಬಹಳ ರುಚಿಯಂತೆ ಕೆಟ್ಟು ಬದುಕುವ ಮನುಜ ಬಲು ಘಟ್ಟಿಯಂತೆ ಸಿಟ್ಟು ಮಾಡುವ ಮನುಜ ಕೊನೆಗೆ ಕುರಿಯಂತೆ ಬಿಟ್ಟಿ ಬಯಸುವ ನರನು ಬಲು ಮೋಸವಂತೆ 1 ಸುಳ್ಳು ಹೇಳುವ ನರಗೆ ಪರದಾಟವಂತೆ ಜಳ್ಳುರಾಶಿಯ ನೋಡೆ ದೊಡ್ಡಗಿರಿಯಂತೆ ಕಳ್ಳ ಒಳಗಿರಲಲ್ಲಿ ಶಾಂತಿಯಿಲ್ಲಂತೆ ಕುಳ್ಳ ಹೋರಾಡಿದರೆ ಜಯವಿಲ್ಲವಂತೆ 2 ಭಾರಿ ಮಳೆ ಸುರಿಯಲಿರೆ ಬಹಳ ಬಿಸಿಲಂತೆ ಊರು ಸೇರುವ ಮುನ್ನ ಬಹಳ ದಣಿಯಂತೆ ಕೀರುತಿಯ ಪಡೆಯುವಗೆ ಬಹು ಶತ್ರುವಂತೆ ಮೂರು ಜ್ಞಾನಿಗಳಿರಲು ಭಾರಿ ಸಭೆಯಂತೆ 3 ಮುಳ್ಳಿರುವ ಗಿಡಗಳಲಿ ಬಹು ಪುಷ್ಪವಂತೆ ಹಳ್ಳದಲಿ ಸಿಗುವ ಜಲ ಬಹಳ ರುಚಿಯಂತೆ ಹಳ್ಳಿಗಾರನ ಸತ್ಯ ಬಹಳ ಒರಟಂತೆ ಎಳ್ಳು ಕಾಳುಗಳು ಶನಿಯ ಓಡಿಸುವುದಂತೆ 4 ಮುಟ್ಟಲಾಗದ ನಾಯಿ ದಾಸಾನುದಾಸ ಶ್ರೇಷ್ಠರೆಂದರಿತಿರುವರೆಲ್ಲ ಬಲು ಮೋಸ ಧಟ್ಟನೆ ಹೊಳೆಯುವಗೆ ಬಲು ಮನವಿಕಾಸ ಬಿಟ್ಟಿರುವ ಮನುಜನಿಗೆ ಜಗದಿ ಸುಖವಾಸ 5 ಮುದಿತನವು ಭೂಷಣವು ಸ್ಥಾನವಿರುವವರಿಗೆ ಕುದಿಯುವುದೆ ಭೂಷಣವು ಕ್ಷೀರಜಲದಲ್ಲಿ ಹೆದರುವುದೆ ಭೂಷಣವು ದುಷ್ಟಸಂಗದಲಿ ಗದಗದವೆ ಭೂಷಣವು ಭಕ್ತಿರಸದಲ್ಲಿ 6 ತನ್ನ ತಾ ಶೋಧಿಸಲು ಬಲು ದುಃಖವಂತೆ ಅನ್ಯರನು ಶೋಧಿಸಲು ಸಂತೋಷವಂತೆ ಕನ್ನಡಿಯ ನೋಡದಿರೆ ಬಲು ಚೆಲುವನಂತೆ ಕನ್ನಡಿಯ ನೋಡಿದರೆ ತಾನಳುವನಂತೆ 7 ನಗರ ಸುಂದರಲ್ಲಂತೆ ಬಚ್ಚಿಟ್ಟ ಧನವು ತಾ ಕದ್ದವನಿಗಂತೆ ಸ್ವಚ್ಛ ಬಡತನದವಗೆ ಬಲು ಭಕುತಿಯಂತೆ ಬಿಚ್ಚೊಲೆ ಗಿರಿಜೆಗತಿ ಪ್ರಿಯವಸ್ತುವಂತೆ 8 ಗುಂಡು ಬ್ರಾಹ್ಮಣ ಬರಲು ಅಪಶಕುನವಂತೆ ಹೆಂಡದಾ ಪೀಪಾಯಿ ಬಲು ಶಕುನವಂತೆ ಮಂಡೆ ಬೋಳಿರುವವಳು ಬರಬಾರದಂತೆ ತೊಂಡು ಸೂಳೆಯು ಬರಲು ಬಹಳ ಶಕುನವಂತೆ 9 ಖ್ಯಾತಿ ಬಾರದು ನರಗೆ ಬದುಕಿರುವ ತನಕ ಗೋತ ಹೊಡೆದವನು ಬಲು ಗುಣಶಾಲಿಯಂತೆ ನೀತಿ ಹೇಳುವ ಸ್ಥಳದಲೊಬ್ಬರಿಲ್ಲಂತೆ ಕೋತಿ ಕುಣಿಯುತಿರಲು ನೂರು ಜನರಂತೆ 10 ಬಹು ಧನಿಕ ಬಲು ಬಲಗೆ ಮಕ್ಕಳಿಲ್ಲಂತೆ ದಹಿಸುತಿಹ ದಾರಿದ್ರಗೆ ವರ್ಷಕೊಂದಂತೆ ಅಮೃತ ಸಮವಂತೆ ಸಿಹಿಯಾದ ಕ್ಷೀರ ಮಕ್ಕಳಿಗೆ ಬೇಡಂತೆ 11 ಸಾಲಿಗ್ರಾಮ ತೊಳೆಯಲತಿ ಬೇಸರಂತೆ ಸಾಲು ಎಮ್ಮೆಯ ತೊಳೆಯಲಿ ಉತ್ಸಾಹವಂತೆ ಶೀಲವಾಡುವ ನುಡಿಗೆ ಸಂದೇಹವಂತೆ ಗಾಳಿ ಸುದ್ದಿಗಳೆಲ್ಲ ಬಲು ಸತ್ಯವಂತೆ 12 ಒಳಿತವನು ಜಗದಲ್ಲಿ ತಲೆ ಎತ್ತನಂತೆ ಕಲಿಪುರುಷನಂಥವನು ಬಲು ಮೇಲೆಯಂತೆ ಹುಲಿ ಚಿರತೆ ಕರಡಿಗಳ ಬಲಿಯ ಕೊಡರಂತೆ ಗೆಳತಿ ಮಾರಿಗೆ ಕುರಿಯ ಬಲಿಯೆ ಬೇಕಂತೆ 13 ಅತಿ ಚೆಲುವೆ ಸತಿಯಲ್ಲಿ ಹಿತವಿಲ್ಲವಂತೆ ಗತಿಗೆಟ್ಟ ನಾರಿಯಲಿ ಅತಿ ಮೋಹವಂತೆ ಇತರ ಜನರೇಳಿಗೆಗೆ ಹೊಟ್ಟಿಯುರಿಯಂತೆ ಪ್ರತಿಕ್ಷಣವು ತನಗಾಗಿ ಹಂಬಲಕೆಯಂತೆ 14 ಭೂಮಿ ಎಲ್ಲವು ಇನ್ನು ಉಳುವಾತಗಂತೆ ಭೂಮಿಯೊಡೆಯಗೆ ದೊಡ್ಡನಾಮ ಬಿತ್ತಂತೆ ರಾಮರಾಜ್ಯದಿ ಕಾರು ಓಡಿಸುವವಗಂತೆ ಆ ಮದುವೆ ಕನ್ಯೆಯು ಪುರೋಹಿತಗಂತೆ 15 ಬಕಳಿಸುವ ನಾಯಕರೆ ಸರಕಾರವಂತೆ ಪ್ರಕೃತಿ ನಡೆನುಡಿ ನೀತಿಗೆ ಧಿಕ್ಕಾರವಂತೆ ಸುಖದ ಅನುಭವ ಜನಕೆ ಕುದುರೆ ಕೊಂಬಂತೆ ಮುಖವಿಲ್ಲ ಕಣ್ಣಿಲ್ಲ ಸುಖರಾಜ್ಯವಂತೆ 16 ಚಂದ್ರಲೋಕಕೆ ಪಯಣ ಕಾದಿರುವುದಂತೆ ಮುಂದಲ್ಲಿ ನೆಲಕೆ ಬಲು ಕಟ್ಟು ನಿಟ್ಟಂತೆ ಮುಂದರಿದ ಜನಕಲ್ಲಿ ಸ್ಥಾನವಿಹುದಂತೆ ಹಿಂದುಳಿದ ಗುಂಪಿಗವಕಾಶವಿಲ್ಲಂತೆ 17 ಪುಷ್ಪಾಕ್ಷತೆಯ ಪೂಜೆ ಗೋಮಾತೆಗಂತೆ ಶುಷ್ಕ ತೃಣವನಕೆಲ್ಲ ಮಳೆಗಳ ಕಂತೆ ನಿಷ್ಫಲದ ಗಿಡಬಳ್ಳಿ ತೋಟದಲ್ಲಂತೆ ಪುಷ್ಕಳದ ಫಲ ವೃಕ್ಷಗಳು ಸೌದೆಗಂತೆ 18 ಬರಿಯ ಪಾತ್ರೆಗಳಲಿ ಬಹಳ ಸದ್ದಂತೆ ಅರಿಯುವಜ್ಞಾನಿಗಳು ತಲೆಹರಟೆಯಂತೆ ಅರಿತವನು ನುರಿತನಾದರು ಬೇಡವಂತೆ ಬದಿಯ ಬಹು ದಡ್ಡನಿಗೆ ಮಾರ್ಯಾದೆಯಂತೆ19 ರೈಲು ಉರುಳಿಸೆ ರಾಜ್ಯಕಧಿಕಾರಿಯಂತೆ ಥೈಲಿಯಿದ್ದರೆ ಖೂನಿ ಮಾಡಬಹುದಂತೆ ಶೈಲವೇರುವ ನರನು ಮೇಧಾವಿಯಂತೆ 20 ನರಬಲಿಯ ಕೊಡುವವರು ಹಿರಿಯ ಜನರಂತೆ ಹಿರಿಯ ಮಾರ್ಗದ ಜನರು ಧರೆ ಭಾರವಂತೆ ಗುರುಗಳಿಗೆ ತಿರುಮಂತ್ರ ಹೇಳಬೇಕಂತೆ ಸುರಿಸುವರು ಧನಧಾನ್ಯ ಸುರಿಮಳೆಗಳಂತೆ21 ಮಂತ್ರವಾದಿಯು ನೋಡಿ ಗ್ರಹಭಯವಿದೆಂದ ಯಂತ್ರದಲಿ ನೋಡಿದವ ಹೃದಯರೋಗೆಂದ ಚಿಂತಿಸುತ ಪಂಡಿತನು ಮೋಹಿನಿಯಿದೆಂದ ಅಂತ್ಯದಲಿ ರೋಗಿ ತನಗೊಂದಿಲ್ಲವೆಂದ 22 ಶಿಂಗಪ್ಪ ಕದ್ದು ತಾ ಜೈಲು ಸೇರಿದನು ಕಾಂಗ್ರಪ್ಪ ಜೈಲಿನಿಂದ ಬಂದು ಕುಳತಿಹನು ಹೇಂಗ್ರಪ್ಪ ಬದುಕುವುದು ಎಂದು ಫಲವೇನು ನುಂಗ್ರಪ್ಪ ಸುಖ ದು:ಖಗಳನು ಸಹಿಸುತಲಿ 23 ವೇದಾಂತಿಯಾಗೆನಲು ಹೊಟ್ಟೆಗಿಲ್ಲಂತೆ ಕಾದಾಡಿ ಬದುಕಲನುಭವವಿಲ್ಲವಂತೆ ಓದು ಬದುಕೆಂದರವಕಾಶವಿಲ್ಲಂತೆ ಆದುದಾಯಿತು ಹರಿಗೆ ಶರಣು ಹೊಡಿ ತಮ್ಮ25 ಯಮನು ತಲ್ಲಣಿಸುವನು ಸ್ಥಳವಿಲ್ಲವಂತೆ ಸುಮನಸರು ಆಳುತಿಹರು ಜನವಿಲ್ಲವಂತೆ ಕಮಲೆರಮಣಗೆ ಬಂತು ಪೀಕ್ಲಾಟವಂತೆ ಎಮಗೆಂಥ ಕಷ್ಟವು ಪ್ರಸನ್ನ ಹರಿಯಿರಲು26
--------------
ವಿದ್ಯಾಪ್ರಸನ್ನತೀರ್ಥರು
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಅಹಹ ಮರುಳನಾದೆ ಸುಮ್ಮನೆ ಪೂರ್ವ ಮಹಿಮ ಹರಿಯ ಸೇವೆಯನ್ನು ಸಹಿಸಿಕೊಂಡು ಗ್ರಹದೊಳಿರದೆ ಪ. ಇಂದಿರೇಶನಿರವನರಿಯದ ಮೂರ್ಖರಾದ ಮಂದಮತಿಗಳಾದ ಕುಜನರ ಬಂದು ಸೇರಿ ಬುದ್ಧಿಹೀನರೆಂದ ನುಡಿಯ ಕೇಳಿ ಬಹಳ ಮೂರ್ತಿ ಬಿಟ್ಟು 1 ತರಣಿ ತಿಮಿರವಟ್ಟಿಲಿರುವದೆ ಸಿಂಹರಾಜ ಮರಿಯ ಕೂಡೆ ನರಿಯು ಬರುವುದೆ ಮರುಳತನದ ಭಾಗ್ಯವೆಂಬೀ ನರಕ ಪಾತ್ರರಾದ ಜನರು ಪಾದ ಪದ್ಮದಾಸ ಚರಿಯವೆಂದು ತಿಳಿವರುಂಟೆ 2 ನೀರಗುಳ್ಳೆಕಿಂತ ಲಘುತರವಾದ ಸಂಸಾರ ಸಂಬದ್ಧ ಪರಿಸರ ಸೇರಿ ಹಿಂದೆ ನಡೆದ ತಪ್ಪ ನೀರಜಾಕ್ಷ ಕ್ಷಮಿಸಿ ಮಹಾ- ದ್ವಾರದೆಡೆಗೆ ಕರಸಿಕೊಳ್ಳೊ ಭೂರಮೇಶ ವೆಂಕಟೇಶ 3
--------------
ತುಪಾಕಿ ವೆಂಕಟರಮಣಾಚಾರ್ಯ
ಆಂಜನೇಯನೆ ಅಮರವಂದಿತ ಕಂಜನಾಭನÀ ದೂತನೆ ಪ. ಮಂಜಿನೋಲಗದಂತೆ ಶರಧಿಯ ದಾಂಟಿದ ಮಹಾಧೀರನೆಅ.ಪ. ಆಂಜನೇಯನೆ ನಿನ್ನಗುಣಪರಾಕ್ರಮ ಪೊಗಳಲಳವೆ ಪ್ರಖ್ಯಾತನೆಸಂಜೀವನವ ತಂದು ಕಪಿಗಳ ನಂಜು ಕಳೆದ ಪ್ರಖ್ಯಾತನೆ 1 ಕಾಮನಿಗ್ರಹನೆನಿಸಿ ಸುರರಭಿಮಾನಿ ದೇವತೆಯೆನಿಸಿದೆರಾಮಪಾದಕ್ಕೆರಗಿ ನಡೆದು ನಿಸ್ಸೀಮ ನೀನೆಂದೆನಿಸಿದೆ 2 ಸಿಂಧು ಹಾರಿದೆ ಶೀಘ್ರದಿಂದಲಿ ಬಂದು ಸೀತೆಗೆ ನಮಿಸಿದೆತಂದು ಮುದ್ರೆಯನಿತ್ತು ಮಾತೆಯ ಮನವ ಸಂತೊಷಪಡಿಸಿದೆ 3 ಜನಕತನುಜೆಯ ಮನವ ಹರುಷಿಸಿ ವನವ ಕಿತ್ತೀಡಾಡಿದೆದನುಜರನ್ನು ಸದೆದು ಲಂಕೆಯ ಅನಲಗಾಹುತಿ ಮಾಡಿದೆ 4 ಶ್ರೀರಾಮಕಾರ್ಯವ ವಹಿಸಿ ಅಕ್ಷಕುಮಾರನನು ಸಂಹರಿಸಿದೆಘೋರ ರಕ್ಕಸರೆಂಬುವರನು ಮಾರಿವಶವನು ಗೈಸಿದೆ 5 ಭರದಿ ಬಂದು ಶ್ರೀರಾಮಪಾದಕ್ಕೆರಗಿ ಬಿನ್ನಹ ಮಾಡಿದೆಉರಗಗಿರಿ ಹಯವದನನ ಪರಮಭಕ್ತನೆಂದೆನಿಸಿದೆ6
--------------
ವಾದಿರಾಜ
ಆತ್ಮ ನಿವೇದನೆ ಅನಾಥ ಬಂಧೋ ಆದಿ ಪುರುಷ ಪ. ಅನಾಥ ಬಂಧೋ ಗುಣ ಗಣ ಸಿಂಧೋ ಮನಸಿಜ ಜನಕನೆ ಮರೆಯದಿರೆಂದೂ ಅ.ಪ. ಅನುಚಿತ ಕರ್ಮದ ಬಲೆಯಲಿ ಸಿಕ್ಕಿ ದಿನಗಳ ಕಳೆದನು ಮನೆಯಲ್ಲಿ ತನುವಿನ ಸ್ಥಿತಿಯನು ಪೇಳಲೇನು ಶ್ರೀ- ವನಜ ಭವಾರ್ಚಿತ ಒದಗುವಿ ಸಮಯದಿ 1 ವಿಧಿ ನಿಮಯಗಳನುಸರಿಸದೆ ಕ- ಣ್ಣಿದಿರಲಿ ಕಾಂಬುದ ಗ್ರಹಿಸದೆ ಮಧುಮಥನನೆ ತ್ವತ್ಪರ ಪದ್ಮವ ನಂ- ಬಿದೆ ಕರುಣೋದಧಿ ಕಾಯೊ ಬೇಗದಲಿ 2 ಸರ್ವಭಾರವು ನಿನ್ನ ಮೇಲಿಹುದು ಮ ತ್ತೋರ್ವಗುಂಟೆ ನಿನ್ನಯ ಬಿರುದು ಮರ್ವನೀಯದೆ ಮನದಲ್ಲಿರು ವೆಂಕಟ ಪರ್ವತೇಂದ್ರ ಪೂರ್ಣಾನಂದಪ್ರದ 3
--------------
ತುಪಾಕಿ ವೆಂಕಟರಮಣಾಚಾರ್ಯ
ಆನಂದಾದ್ರಿ ವಾಸ | ವಿಠಲ ಪೊರೆ ಇವನಾ ಪ ಮಾನಮೇಯ ಜ್ಞಾನ | ಸಾನುಕೂಲಿಸಿ ಇವಗೆನೀನಾಗಿ ಪೊರೆಯೊ ಹರಿ | ಕೋನೇರಿವಾಸಾ ಅ.ಪ. ಚಿತ್ರ ಚಾರಿತ್ರ | ಶುಭಗಾತ್ರನೇ ಶತಪತ್ರನೇತ್ರಕರವಾದ ದ್ವಂದ್ವ | ಸೂತ್ರಾಂತರಾತ್ಮ |ಮಿತ್ರನಾನುಗ್ರಹಕೆ | ಪಾತ್ರನ ಸಲಹೊ ಮಾಕಳತ್ರನೇ ನಿನ್ನ ಸುಪ | ವಿತ್ರ ಪದ ನಮಿಪೇ 1 ಕರುಣವೆಂತುಟೊ ನಿನಗೆ | ಶರಣಜನ ವತ್ಸಲನೇಕರೆದೊಯ್ದು ಸ್ವಪ್ನದಲಿ | ಹರ ಗಿರಿಜೆ ತೋರೀ |ಮರಳಿ ಬ್ರಹ್ಮನ ಲೋಕ | ದರುಶನಾನಂದದಲಿಕರೆದೊಯ್ದು ಕರುಣಾಳು | ಸುರಸೇವ್ಯ ಬದರಿಗೆ 2 ದಶಮತಿಗೆ ಬೋಧಿಸುವ | ವ್ಯಾಸದರ್ಶನ ಭಾವಿದಶಮತಿಯ ಸಹವಿರುವ | ವ್ಯಾಸ ಭಕ್ತನ್ನಾ |ಹಸನಾಗಿ ತೋರಿ ನೀ | ವಸುಮತಿಗೆ ಕರೆತಂದುಬೆಸಸಿದೆಯಾ ಫಲದೈವ | ದರ್ಶನಕೆ ಇವನಾ 3 ಬದ್ಧನಾದರು ಇಹದಿ | ಶುದ್ಧ ಸಂಸ್ಕøತನಿಹನುಮಧ್ವಮತ ದಾಸತ್ವ | ಶ್ರದ್ಧೆಯುಳ್ಳವನೇಬುದ್ಧಿಯಲಿ ಎನಗೆ ಉ | ದ್ಬುದ್ಭವನೆ ಮಾಡ್ದ ಪರಿತಿದ್ದಿ ಅಂಕಿತವಿತ್ತು | ಬುದ್ಧಿ ಪೇಳಿಹೆನೋ 4 ಸಂಚಿತ ಕರ್ಮ | ತೀವ್ರದಲಿ ದಹಿಸೇಗೋವುಗಳ ಪಾಲ ಗುರು | ಗೋವಿಂದ ವಿಠ್ಠಲನೆಭಾವದಲಿ ಬಿನ್ನವಿಪೆ | ನೀ ವೊಲಿದು ಸಲಿಸೋ 5
--------------
ಗುರುಗೋವಿಂದವಿಠಲರು
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆಭರಣಗಳರ್ಪಿಸುವೆನು ಶೋಭನ ಚರಿತಾ ಪ ಮಹಾಭಾಗ್ಯಪ್ರದೆ ನಿನ್ನರಸಿ ಯುಗುಣಭರಿತಾ ಅ.ಪ ಪದನೂಪುರಗಳು ಘಂಟೆ ನಿನದದುಡಿದಾರಾ ಪರಿಯಂತ ವಿಧವಿಧಕರ ಕಂಕಣ ಹತ್ತು ಬೆರಳಿಗುಂಗೂರಾ ಕೌಸ್ತುಭ ಶ್ರೀ ವತ್ಸದ ಶೃಂಗಾರಾ 1 ಕುಂಡಲ ಕರ್ಣದಲ್ಲಿ ತುಳಸಿಯ ವನಮಾಲೆ ಶೋಭಿಪುದು ಕಂಠದಲೀ ಥಳಥಳಿಪುದು ರವಿಯಂತೆ ಕಿರೀಟಶಿರದಲ್ಲಿ ಬೆಳಗುವ ತೇಜೋಮಯ ಗಾನಾವದು ಕೊಡಲಿ 2 ಸ್ಮರ ಶತ ಸುಂದರ ವಿಗ್ರಹ ಕರುಣಾಕರನೇ ಸರಸಿಜಭವ ಜನಕ ಪರಾತ್ಪರ ಮಾಧವನೆ ಶರದಿಂದುನಿಭಾನನ ಸರ್ವತ್ಪ್ರಕಾಶನೇ ಗುರುರಾಮ ವಿಠಲ ಹರಿ ಸರ್ವೋತ್ತಮನೇ 3
--------------
ಗುರುರಾಮವಿಠಲ
ಆಮಿತ ಮಹಿಮೋಪೇತ ವಿಠಲ ಸಲಹೋ ಪ. ವಿಮಲಮತಿ ಇತ್ತಿವಗೆ ಕಾಮಿತಾರ್ಥವನೇಅ.ಪ. ತೈಜಸನೆ ನೀನಾಗಿ ನಿಜಯಾರ್ಯನುಗ್ರಹವಯೋಜಿಸಿಹೆ ಸ್ವಪ್ನದಲಿ ಕಾರುಣ್ಯಮೂರ್ತೇಭ್ರಾಜಿಷ್ಣು ಸುಜ್ಞಾನ | ವೈರಾಗ್ಯ ಭಾಗ್ಯಗಳಮಾಜದಲೆ ಕರುಣಿಸೆಂದಾನಮಿಪೆ ಹರಿಯೇ 1 ಹೇ ಸದಾಶಿವ ವಂದ್ಯ | ಕ್ಲೇಶತೋಷಗಳಲ್ಲಿಭಾಸಿಸಲಿ ತವನಾಮ | ಮೀಸಲದ ಮನದೀ |ಆಶುಗತಿಮತ ಪೊಂದಿ | ದಾಸದೀಕ್ಷಾಕಾಂಕ್ಷಿವಾಸವಾನುಜ ಇವನ | ದಾಸನೆಂದೆನಿಸೋ 2 ಭವ ಉತ್ತರಿಪಸದ್ವಿದ್ಯ ಪಾಲಿಪುದು ಮಧ್ವಾಂತರಾತ್ಮಾ 3 ಹರಿಗುರೂ ಸದ್ಭಕ್ತಿ | ದುರ್ವಿಷಯನಾಸಕ್ತಿಎರಡು ಮೂರ್ಭೇದಗಳ | ಅರಿವ ನೀನಿತ್ತೂತರತಮದ ಸುಜ್ಞಾನ | ಕರುಣಿಸುವುದೆಂದೆನುತಕರಿವರದ ಭಿನ್ನವಿಪೆ ಪ್ರಾರ್ಥನೆಯ ಸಲಿಸೋ 4 ಕಾಯ ಬೇಕೋ 5
--------------
ಗುರುಗೋವಿಂದವಿಠಲರು
ಆರು ಪೇಳಿದರೊ ಜೀವಾ ನಿನಗಾರು ಪೇಳಿದರೋ ಪ ಆರು ಪೇಳಿದರೋ ಈ ಸೋರುವ ಮನೆಯೊಳು ಇರುವುದು ಒಳಿತಲ್ಲಾ ತೆರಳುವುದುಚಿತನೇ ಅ.ಪ. ದುಷ್ಟರಿರುವರೋ ಈ ಗ್ರಹದೊಳು ಕಟ್ಟಿ ಸುಲಿಯುವರೋ ಇಟ್ಟಿದ್ದ ಅನ್ನದಿ ಕೆಟ್ಟ ಕ್ರಿಮಿಗಳುಂಟು ಮುಟ್ಟಿ ಬಳಸುವರಿಲ್ಲ ಹೊಟ್ಟೆ ತುಂಬಿದೋ ಅಲ್ಲಿ 1 ಛಾಯಾವೂ ಇಲ್ಲಾ ಈ ಮನೆಯೊಳು ದಾಯಾವೂ ಇಲ್ಲಾ ಬಾಯ ಬಿಡಿಸುವರೋ ಅನ್ಯಾಯ ಮಾಡುವರೋ ಉಪಾಯದಿಂದಲಿ ಬಿಟ್ಟು ಹಯವದನನ ಶೇರೋ 2 ತರುಣರಿರುವರೋ ಈ ಮನೆಯೊಳು ಮರುಳು ಮಾಡುವರೋ ಪರುಮ ಹರುಷ ನಮ್ಮ ಹನುಮೇಶ ವಿಠಲನ ನೆರೆ ನಂಬಿ ಸ್ಮರಿಸುವ ಸ್ಥಿರ ಪದವನು ಸೇರೊ 3
--------------
ಹನುಮೇಶವಿಠಲ
ಆಶಾ ಪಾಶದಲಿ ಬಿದ್ದು ಘಾಸಿಯಾಯಿತು ಜೀವ ವಾಸುದೇವನೆ ನಿಮ್ಮ ಆಶೆಗೆನ್ನ ಮನವಿಲ್ಲ ಪ ಮಡದಿಯಾಗಲು ಮತ್ತೆ ಮನೆಯಾ ಮಾಡುವದಾಶಾ ಒಡಗೂಡಲದು ಮಕ್ಕಳಾಗುವಾಶಾ ಬಿಡದೆ ಕುಟುಂಬ ಪೋಷಣೆಯಾಗುವಾದಾಶಾ ಕಡಲ ಶಯನಾ ನಿಮ್ಮ ಆಶೆಗೆನ್ನ ಮನವಿಲ್ಲ 1 ಅನ್ನವಾಗಲು ವಸ್ತ್ರ ಅಲಂಕಾರದಾಶಾ ಇನ್ನು ಮಕ್ಕಳ ಮುಂಜಿ ಮದುವಿಯಾಶಾ ತನ್ನ ನೆಂಟರಸರಿಯಾ ಮಾಡುವದಾಶಾ ಪನ್ನಗಾಶನವಾಹನಾಶೆಗೇ ಮನವಿಲ್ಲ 2 ನಡೆವಕಾಲಕೆ ದೊಡ್ಡ ಕುದುರೆ ಏರುವದಾಶಾ ಅಡರಲು ರಥದಿಂದ ಆಂದಣಾಶಾ ಕಡಿಗೆ ತೀರದ ಹೊನ್ನು ಹಣದ ಸಂಗ್ರಹದಾಶಾ ಪೊಡವಿಧರನೇ ನಿಮ್ಮ ಆಶೆಗೆ ಮನವಿಲ್ಲ 3 ಒಂದೊದಗಲು ಮತ್ತೆ ಒಂದು ಬಯಸುದಾಶಾ ಎಂದಿಗೇ ಸರಿಯದು ವಿಷಯದಾಶಾ ಕುಂದಿದ ತನುವಿನ ಬಲವಾಗುವದಾಶಾ ಇಂದಿರೇಶನ ಆಶೆಗೆನ್ನ ಮನವಿಲ್ಲ 4 ಆಶೆಯೆಂಬಾ ನದಿಯ ಸುಳಿಯ ಬಿಡಿಸಿ ನಿಜ ದಾಸರಾ ಸಂಗ ಮನವ ತಿದ್ದೀ ಲೇಸಾಗಿ ಮಹಿಪತಿ ಸುತ ಪ್ರಭು ಭಕುತಿಯಾ ಆಶೆ ಹೆಚ್ಚಿಸಿ ಎನ್ನ ದಯದಿ ಪಾಲಿಸೋ ದೇವಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಸೆ ಎಂಬೋ ನದಿ ಆಸೆ ಎಂಬೋ ನದಿಆಸೆ ಎಂಬೋ ನದಿಯಿರೆ ಮಹಾ-ತೃಷೆಯ ಆರು ದಾಟಲಳವಲ್ಲ ಪ ಮನೋರಥ ನೀರು ಮನೋರಥ ನೀರುಮನೋರಥ ನೀರು ಇರೆ ಮಹಾತೃಷೆ ಅಲೆಗಳಯ್ಯ 1 ಸುಳಿ ಮೋಹವೆಂಬೋ ಸುಳಿಮೋಹವೆಂಬಾ ಸುಳಿಯಿರೆ ಮಹಾತೊರೆ ಹರಿಯಯ್ಯಾ 2 ಸತಿ ಎಂಬಾ ಮೊಸಳೆಸತಿ ಎಂಬ ಮೊಸಳೆಯಿರೆ ಸುತರೆಂಬರು ಏಡಿಗಳಯ್ಯ 3 ಬಂಧಗಳು ಗ್ರಹ ಬಂಧುಗಳು ಗ್ರಹಬಂಧಗಳು ಗ್ರಹ ಇರೆ ಬಡಿದಾಟ ನೀರು ಗುಳ್ಳೆಯಯ್ಯ4 ಗುರು ದಯವೇ ನಾವೆ ಗುರುದಯವೇ ನಾವೆಗುರುದಯವೆ ನಾವೆಯಿರೆ ಗುರು ಚಿದಾನಂದನ ಸೇರಬೇಕಯ್ಯ 5
--------------
ಚಿದಾನಂದ ಅವಧೂತರು
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು