ಒಟ್ಟು 504 ಕಡೆಗಳಲ್ಲಿ , 85 ದಾಸರು , 457 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂಥಾ ಗುರುಗಳ ಕಾಣೆನೋ ಈ ಜಗದೊಳು ನಾ ಪ ಇಂಥಾ ಗುರುಗಳನೆಂದು ಕಾಣೆನಾ ನಂತ ಚೇತನರಂತರ ಬಹಿರದಿ ನಿಂತು ಕರ್ಮವವರಂತೆ ಮಾಳ್ಪಾ - ನಂತ ಮಹಿಮಾನಂತನಾಂಶಜರಿಂಥಾಅ.ಪ ತುಂಗಾತೀರದಿ ನಿವಾಸಾ ಮಂತ್ರಾಲಯಕೀಶ ತುಂಗ ವಿಕÀ್ರಮ ಜಗದೀಶಾ ಶ್ರೀಹರಿ ದಾಸಾ ಮಂಗಲ್ಮಾತಕ ವೃಂದಾವನ ದೇಶಾ ಸಾರಿದ ವ್ರತೀಶಾ ಮಂಗಲ ಮಹಿಮ ರಂಗನ ಕರುಣಾಪಾಂಗ ಪಡೆದ ಕೃ - ಪಾಂಗ ಯತಿಕುಲೋತ್ತುಂಗ ಮಾಯಿ ಮಾ - ತಂಗ ಸಂಘಕೆ ಸಿಂಗ ದುಷ್ಟ ಭು - ವಿಹಂಗ ಸ್ವಮತೋ - ಭೃಂಗ ಮನ್ಮನೋ - ರಂಗ ಬಿಂಬನ ಇಂಗಿತಙ್ಞರ ಸಂಗ ನೀಡಿ ಕಂಗಳಿಗೆ ತಾವು ಕಂಗೊಳಿಪರಿಂಥಾ 1 ಮೇದಿನಿ ತಳದಲಿ ಜನಿಸೀ ಸುಖತಿರ್ಥರ ಭಜಿಸೀ ಭೇಧಮತವನೆ ಸಾಧಿಸೀ ವಾದದಿ ಜೈಸಿ ಮಾಧವನೆ ಸರ್ವೋತ್ತಮನೆನಿಸಿ ಸ್ವಮತವ ಸ್ಥಾಪಿಸಿ ಭೋಧಿಸಿ ತತ್ತ್ವವ ಭೇಧಿಸಿ ಪರಮತ ಛೇಧಿಸಿ ಕುಮತಿಯ ಶೋಧಿಸಿ ತತ್ತ್ವದ ಹಾದಿಯ ಹಿಡಿಸಿ - ಮೋದಕೊಡುವ ಪಂಚ ಭೇದವ ತಿಳಿಸೀ ಸಾದರ ತನ್ನಯ ಪಾದಸೇವೆಯ ಮೋದವ ನೀಡುವ ಮೇದಿನೀ ದಿವಿಜಾರಾಧಿತ ಪದಯುಗ ಶೋಧಿಸಿ ಜನಮನೋ ಖೇದಗೊಳಿಪ ಭ - ವೋಧಧಿ ದಾಟಿಸಿ ಶ್ರೀದÀನ ತೆರದಲಿ ಮೇದಿನಿಯಾಳುವರಿಂಥಾ 2 ಧಿಟ್ಟ ಗುರು ಜಗನ್ನಾಥ ವಿಠಲದೂತಾ ಸೃಷ್ಟಯೊಳಗತಿ ವಿಖ್ಯಾತಾನೆನಿಸಿದ ಯತಿನಾಥಾ ಕುಷ್ಟಾದಿ ರೋಗದ ಘಾತಾ ಮಾಡುವೊದಾತಾ ಇಷ್ಟಾರ್ಥವಾ ತಾ ಸೃಷ್ಠಿಗೆ ಬೀರುವ ಶಿಷ್ಟಜನರನುತ್ನøಷ್ಟದಿ ಪಾಲಿಪ ಎಷ್ಟು ಪೇಳುವುದೋ ಉತ್ಕøಷ್ಟನ ಗುಣಗಳ ಭ್ರಷ್ಟರರಿಯರೆಲೆ ಶಿಷ್ಟರು ಬಲ್ಲರು ಇಷ್ಟೇ ಅಲ್ಲವೀತನ ವಿಶಿಷ್ಟ ಮಹಿಮೆಗ - ಳೆಷ್ಟು ಪೇಳಲವಶಿಷ್ಟವೆನಿಪವೋ ದೃಷ್ಟಿಹೀನರಿಗೆ ದೃಷ್ಟಿ ನೀಡುವ ದೃಷ್ಟಿ ಮಾತ್ರದಿ ತುಷ್ಟಿಬಡಿಸುವೊರಿಂಥಾ 3
--------------
ಗುರುಜಗನ್ನಾಥದಾಸರು
ಇಂಥಾ ಪ್ರಭುವ ಕಾಣೆನೋ ಈಜಗದೊಳ- ಗಿಂಥಾ ಪ್ರಭುವ ಕಾಣೆನೋ ಪ ಇಂಥಾ ಪ್ರಭುವ ಕಾಣೆ ಶಾಂತ ಮೂರುತಿ ಜಗ- ದಂತರಂಗನು ಲಕ್ಷ್ಮೀಕಾಂತ ಸರ್ವಾಂತರ್ಯಾಮಿ ಅ.ಪ. ಬೇಡಿದಿಷ್ಟವ ಕೊಡುವ-ಭಕ್ತರ ತಪ್ಪು ನೋಡದೆ ಬಂದು ಪೊರೆವ ಗಾಡಿಕಾರನು ಗರುಡಾ - ರೂಢ್ಯ ಗುಣವಂತ ಮಹಾ ಪ್ರೌಢ ಪ್ರತಾಪಿ ಜಗದಿ ಪಾಡಿ ಪೊಗಳಿ ಕೊಂಡಾಡುವವರ ಮುಂ- ಕೇಡಿಗನೇ ನಾಡಾಡಿಗಳಂದದಿ ಈಡುಂಟೇನೋ ಈ ವೆಂಕಟಗೆ-ಇಂಥಾ 1 ನಿಗಮ ತತಿಗಳರಿಯದ- ನೀರಜಭವಾ- ಸುರರು ಕಾಣದ ಜಗದೊಡೆಯನು ಭಕ್ತ- ರುಗಳಿಗೊಲಿದು ತ್ರಿಸ್ಥಾ- ನಗಳತ್ಯಜಿಸಿ ಕಲಿ ಅಗಣಿತ ಸುಗುಣಾರ್ಣವ- ಶ್ರೀ ಹರಿಯೇ ಜಗದೊಳು ಸೇವಾದಿಗಳನು ಕೊಳುತಿಹ ಅಘಹರ ಮೋಕ್ಷಾದಿಗಳನೆ ನೀಡುತ ನಗೆಮೊಗದಲಿ ಚನ್ನಿಗನಿಂತಹನೊ - ಇಂಥಾ 2 ಭಾರ್ಗವಿ ಭೂಮಿವಲ್ಲಭ - ಭವದೂರ ಭಕ್ತ ವರ್ಗಕೆ ಇವಸುಲಭ ನಿರ್ಗುಣ ನಿರ್ವಿಕಾರ- ಸ್ವರ್ಗದೈಶ್ವರ್ಯದಿಂದಾ- ನಘ್ರ್ಯದ ಪದವನೀವ ದೀರ್ಘಾಯುವಂತನೀತ ಭಾರ್ಗವರಾಮ ನೃಪರ್ಗಳನೆಲ್ಲರ - ಣಾಗ್ರದಿ ಜಯಿಸಿದ ಉಗ್ರಪ್ರತಾಪಿ ಅಗ್ರಗಣ್ಯ ಸದ್ವಿಗ್ರಹ ಶ್ರೀಮದ - ನುಗ್ರಹ ಮಾಡುತ ದುರ್ಗುಣ ಕಳೆವ 3 ನಿರ್ದುಃಖಾನಂದ ಭರಿತಾ - ನಿರ್ವಾಣ ಸುಖಕೆ ಆದ್ರ್ರಹೃದಯ ತೋರುತ ನಿದ್ರೆಯೊಳಿದ್ದವಗು - ಪದ್ರಬಡಿಸಿ ದೈತ್ಯ ಕ್ಷುದ್ರನಂಕೊಲಿಸಿ ಸು ಭದ್ರ ಜಗಕೆ ಇತ್ತ ನಿರ್ದಯನಲ್ಲ ಸಮುದ್ರಶಯನ ಗೋ- ವರ್ಧನ ಗಿರಿಯನು ಉದ್ಧರಿಸಿದ ಯದು ವರ್ಧನ ದನುಜ ವಿಮರ್ದನ ಲಕ್ಷ್ಮೀ ಜ - ನಾರ್ದನ ವರ ಶೇಷಾದ್ರಿ ನಿವಾಸ - ಇಂಥಾ 4 ವಾರಿಜಾಸನ ಮನೋಜಾ ಈರ್ವರು ಸುತರು ಸುರತರಂಗಿಣಿ ತನುಜಾ ಪುರವೇ ವೈಕುಂಠ ಇಂದ್ರಾದ್ಯ ಮರರು ಕಿಂಕರರು ಗರುಡವಾಹನ ಉರಗ ಪರಿಯಂಕ ನಿಷ್ಕಳಂಕ ಸರಿದೊರೆಗಳ ನಾನರಿಯೆನು ವೆಂಕಟ ಗಿರಿಯಲಿ ಇರುತಿಹ ಕರುಣೆಗಳರಸನೆ ಮರೆಯದೆ ಸಲಹೋ ಶರಣಾಗತರನು ಸಿರಿ ವಿಜಯವಿಠ್ಠಲಾ - ಇಂಥಾ 5
--------------
ವಿಜಯದಾಸ
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇದು ಏನೋ ನಿನ್ನ ಗುಡೀ ಗುಡೀ |ಒಳಗಿನ ಕಸವನು ಹೊಡೀ ಹೊಡೀ ಪ ಹಗಲಿರುಳೊ ನೀ ಬದುಕ ಮಾಡಿ |ಏನು ಗಳಿಸಿದ್ಯೋ ಹುಡೀ ಹುಡೀ ||ಜಗದೊಳು ದೇವನ ತಿಳಿಯಲೊಲ್ಲಿ |ತಿಳಿದೀತೊ ಅಲ್ಲಿಗೆ ನಡೀ ನಡೀ 1 ಹಸಿದು ಬಂದು ನೀ ವಸ್ತಿಯಾಗಿಳಿದರೆ |ಮತ್ತೇನಾರ ಕೊಡೂ ಕೊಡೂ ||ಅಸ್ತಮಯಾದಿತು ಉದಯದಲೆದ್ದು |ತಪ್ಪದೆ ಇಲ್ಲೆಂಬೊ ನುಡೀ ನುಡೀ 2 ನಾಕು ಕಾಯದೊಳು ಎರಡಿಟ್ಟನು ನೀ |ಎರಡನೆ ದೇವರಿಗೊಡೀ ಒಡೀ ||ಲೋಕಪಾಲಕ ಭವತಾರಕನಂಘ್ರಿಯ |ಈ ಕಾಯದಿ ದಯಾ ಪಡೀ ಪಡೀ 3
--------------
ಭಾವತರಕರು
ಇದು ನಿಜ ಮತವೇ ನಿಜ ಮತವೇ ಆವನ ಪದ ಜಲ ಮೌಳಿಯಲ್ಲಿಟ್ಟ ಮಹ ಪ ದೇವನು ಹರಿಸಮನೆಂತು ಪರಿ ಜಗದೊಳಾಡುವ ಶಕ್ತಿ 1 ಭುವನೇಶ ಸರಿಯೆ ಹೇಳೆಂತು ಅವನ ಗ್ರಂಥದ ಲೇಖಕ ಗಣಪನು 2 ಕಾವನಯ್ಯನ ಸಮನೆಂತು ಅವನ ತೇಜದಿ ಬೆಳಗುವ ದಿನಪನು ಗೋವಿಂದ ಸರಿಯನೆಂತು 3 ಗುರು ಮಹಿಪತಿ ಪ್ರಭು ಹರಿಪರವೆನ್ನದ ನರರಿಗೆ ಮುಕ್ತಿಯಹದೆಂತು4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಶ್ರೀ ಗುರುಪಾದಪದ್ಮ ನೋಡುವ ಎಂದೆಂದು ಬಿಡದೆ ಭಾವಭಕ್ತಿ ಮಾಡುವ ಧ್ರುವ ಮನವೆಂಬ ಮನಮಂಟಪವನಾಡುವ ನೆನವು ನವರತ್ನದ ಸಿಂಹಾಸನಿಡುವ ಙÁ್ಞನಧ್ಯಾನದಡಬಲದಿ ಪಿಡಿವ ಅನುವಾಗಿ ಅನಿಮಿಷದಲಿ ನೋಡುವ 1 ತನುವೆಂಬ ತಾರತಮ್ಯಭಾವ ಮಾಡುವ ಅನುಭದಿಂದನುಪಮನ ನೋಡುವ ಆನಂದವೆಂಬ ಅಭಿಷೇಕವ ಮಾಡುವ ಮನೋ ಅಭೀಷ್ಟೆಯ ಸುವಸ್ತ್ರನೀಡುವ 2 ಬುದ್ಧಿ ಭಾವನೆಯ ಗಂಧಾಕ್ಷತಿಡುವ ಶುದ್ಧ ಸುವಾಸನೆ ಪರಿಮಳ ಮಾಡುವ ಶಬ್ದ ಸುವಾಕ್ಯವೇ ಪುಷ್ಪವ ನೀಡುವ ಸಿದ್ಧಾಂತವೆಂಬುದೇ ಸುಸೇವೆ ಮಾಡುವ 3 ಪ್ರಾಣ ಪಂಚವೇ ಪಾದಪೂಜೆಯ ಮಾಡುವ ಪುಣ್ಯಪೂರ್ವಾರ್ಜಿತ ಫಲಗಳಿಡುವ ಅನೇಕವಾದ ಪರಿಪೂಜೆ ಮಾಡುವ ಧನ್ಯ ಧನ್ಯವಾಗುವ ಮುಕ್ತಿಬೇಡುವ 4 ನಿರ್ವಿಕಲ್ಪ ನಿಜಮೂರುತಿ ನೋಡುವ ಪೂರ್ವಕರ್ಮವೆಂಬ ಧೂಪಾರ್ತಿ ಮಾಡುವ ಅರುವೆಂಬ ದೀಪದಿ ಏಕಾರ್ತಿ ಮಾಡುವ ಸರ್ವಕಾಲದಲಿ ಸಂತೋಷಬಡುವ 5 ಜೀವ ಭಾವನೆಂಬ ನೈವೇದ್ಯವಿಡುವ ವಿವೇಕುದಕ ಸಮರ್ಪಣೆ ಮಾಡುವ ತ್ರಿವಿಧಗುಣವೆಂಬ ತಾಂಬೋಲನಿಡುವ ಅವಾವಪರಿಯು ಪ್ರಾರ್ಥನೆ ಮಾಡುವ 6 ಪಂಚತತ್ವದ ಪಂಚಾರತಿ ಮಾಡುವ ಚಂಚಲವಿಲ್ಲದೆ ಚಿದ್ಛನ ನೋಡುವ ಪಂಚಭೂತವೆಂಬಾರತಿ ಮಾಡುವ ಸಂಚಿತಕ್ರಿಯ ಮಂತ್ರಪುಷ್ಪನೀಡುವ 7 ದಿವ್ಯ ಯೋಗ ಭೋಗ ಚೌರ ಢಾಳಿಸುವ ಅವಲೋಕನೆಯ ಬೀಸಣಿಕೆ ಬೀಸುವ ಪಾದ ನಮಿಸುವ ಭವಬಂಧನದ ಮೂಲ ಛೆÉೀದಿಸುವ 8 ನಮ್ರತವೆಂಬ ಸಮಸ್ಕಾರ ಮಾಡುವ ಸಂಭ್ರಮದಿಂದ ಸ್ವಸ್ವರೂಪ ನೋಡುವ ಪ್ರೇಮಪ್ರೀತೆಂಬ ಪ್ರದಕ್ಷಿಣಿ ಮಾಡುವ ಜನ್ಮ ಮರಣದ ಹಾದಿಯು ಬಿಡುವ 9 ನಿರ್ಗುಣದಿಂದ ಸ್ವರೂಪ ನೋಡುವ ನಿಗಮಗೋಚರನೆಂದು ಸ್ತುತಿ ಪಾಡುವ ಅಗಣಿತಗುಣ ಸುಕೀರ್ತಿ ಸೂರ್ಯಾಡುವ ಜಗದೊಳಾನಂದದಿಂದ ನಲಿದಾಡುವ 10 ಅನಾಹತವೆಂಬ ಧ್ವನಿವಾದ್ಯ ಮಾಡುವ ಅನಂದೋ ಬ್ರಹ್ಮದೊಳು ಮುಳಗ್ಯಾಡುವ ಭಾನುಕೋಟಿತೇಜ ಪ್ರಕಾಶ ನೋಡುವ ದೀನಮಹಿಪತಿ ಸ್ವಾಮ್ಯೆಂದು ಕೊಂಡಾಡುವ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸುದಿವಸ ನೋಡಿ ಕಂಡೆವು ಕಣ್ಣಾರೆ ಚಂದವಾಗಿ ಗುರು ಪೂರ್ಣಮಾಡಿದ ಮನೋಹರ ಧ್ರುವ ಕೇಳದಾ ಕೇಳಿದೆವು ಫೇಳಿಸುವದೆನ್ನೊಳಗೆ ಹೇಳೇನೆಂದರೆ ಬಾರದು ಸುಳವು ಇನ್ನೊಬ್ಬರಿಗೆ ತಾಳಮೃದಂಗ ಭೇರಿ ಭೋರಿಡುತ ಒಳ ಹೊರಗೆ ತಿಳಿದೇನಂದರದೇ ನೋಡಿ ಉಲುವು ತಾ ತನ್ನೊಳಗೆ 1 ಕಾಣದ ಕಂಡೆವು ಖೂನ ತಾ ಕಣ್ಣಿನ ಕೊನೆಯೊಳಗೆ ಪ್ರಾಣ ಪಾವನ್ನವಾಯಿತು ಪುಣ್ಯ ಪ್ರಭೆಯೊಳಗೆ ಭಾನುಕೋಟಿತೇಜ ಧನ್ಯಗೈಸಿದ ಎನಗೆ ಸ್ವಾನುಭವದ ಸುಖ ಎದುರಿಟ್ಟಿತು ಜಗದೊಳಗೆ 2 ನುಡಿಯು ಕೇಳಿದಂಥ ನುಡಿಗೇಳಿದೆವಿಂದು ಕಡಿಗಾಯಿತು ನೋಡಿ ಹುಟ್ಟಿಬಾಯ ಜನ್ಮಸಂದು ವಿಡಿದು ಗುರುಪಾದ ಜನ್ಮಸಾರ್ಥಕಾಯಿತಿಂದು ಪಡೆದ ಮಹಿಪತಿ ನಿಜಾನಂದ ವಸ್ತುವಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ ಖುಲ್ಲ ಜನರುಗಳಿಗಿಲ್ಲಿಲ್ಲ ಪ ಸತಿಸುತರುಗಳೆಲ್ಲ ಅತಿಹಿತರೆನ್ನುತ ರತಿಪತಿಪಿತನ ಮರೆತು ಇಪ್ಪ ಜನರಿಗೆ 1 ಮಿಗಿಲಾದ ಮಹಿಮೆಯ ಜಗದೊಳು ತೋರುವ ಅಗಣಿತ ಮಹಿಮಗೆ ಸೊಗಸದ ಜನರಿಗೆ 2 ಶರಧಿಶಯನನಾದ ಶ್ರೀವತ್ಸಾಂಕಿತನನ್ನು ಮರೆತು ಮರಳುಗೊಂಡು ಕರಗಿ ಕುಂದುವ ಜನರಿಗಿಲ್ಲಿಲ್ಲ 3
--------------
ಸಿರಿವತ್ಸಾಂಕಿತರು
ಇಲ್ಲೆವೆ ನಿಧಾನವು ಶ್ರೀಗುರುವೆ ನಿಮ್ಮಲ್ಲೆವೆ ನಿಧಾನವು ಎಲ್ಲರಿಗಿದು ತಾ ದುರ್ಲಭವಾಗಿಹ್ಯ ಸುಲಭದಲಿ ಒಲಿದಿಹ್ಯ ಸದ್ಗುರು ನಮಗಿಲ್ಲೆ ನಿಧಾನವು ಧ್ರುವ ಪಾದ ಪದ್ಮವ ತಿಳಿದು ವೇದಕಗೋಚರವು ಸದ್ಗತಿ ಸುಖ ಸಾಧಿಸುವವ ಧನ್ಯನು ಶೋಧಿಸಿ ಅತ್ಮದಿ ಬೋಧೆಯಲಿ ನಿಜ ಅದಿತತ್ವದ ಗತಿ ಭೇದಿಸಿ ತಿಳಿದವಗಿಲ್ಲಿವೆ 1 ಖುಲ್ಲ ಮನುಜರಿಗಿದು ತಿಳಿಯದೆ ಇಲ್ಲದಂತಾಗಿಹುದು ಎಲ್ಲಾ ದೈವದ ಮೂಲವು ಬಲ್ಲವಗಿದು ಸೊಲ್ಲಿನೊಳಗಿಹುದು ಕಲ್ಲಿನೊಳಿಹ ದೈವಿಲ್ಲವೆ ಇಹ್ಯ ಪ್ರಾಣದೊಲ್ಲಭ ಗುರುನೆಂದಿಲ್ಲೆವೆ ತಿಳಿದುವಗಿಲ್ಲೆವೆ 2 ಸುತ್ತೇಳು ಸಾಗರದ ಪೃಥ್ವಿಲಿಹ್ಯ ನಿತ್ಯವುಳ್ಳ ದೈವೀತನು ಸುತ್ತ ಸನಕಾದಿಗಳು ಮತ್ತೆ ದೇವರು ತೆತ್ತೀಸ ಕೋಟಿಗಳು ಹತ್ತಿಲೆ ಹೊಳೆಯುತ್ತ ಚಿತ್ತದ ತುದಿಯಲಿ ಸತ್ಯಕೈಲಾಸವೆ ಇತ್ತ ವೈಕುಂಠವು ಇಲ್ಲೆವೆ 3 ಕಾಶಿ ರಾಮೇಶ್ವರವು ಸಕಲ ಕ್ಷೇತ್ರವಾಸವಾಗಿಲ್ಲಿಹವು ದೋಷನಾಶನ ಕೃಷ್ಣೆಯು ಮಿಗಿಲಾದ ಏಸು ತೀರ್ಥಗಳಿಹ್ಯವು ವಾಸವಾಗಿಹವು ಸೂಸುತ ನದಿಗಳು ಈಶನ ಚರಣದಲಿ ಭಾಸುದು ಕಂಡವಗಿಲ್ಲೆವೆ 4 ಚೆಂದುಳ್ಳ ದ್ವಾರಕೆಯು ಗೋಕುಲ ವೃಂದಾವನ ಕುರುಕ್ಷೇತ್ರವು ಒಂದೊಂದೇ ಕ್ಷೇತ್ರದಲಿ ವಾಸವಾಗಿ ನಿಂದು ಮಾಡಿದ ಪುಣ್ಯವು ಹಿಂದಿನ ಕರ್ಮವು ಹೊಂದದೆ ಗಳಿಸುವ ಮಂದಾಕಿನಿ ನದಿಯಿಂದ ಫಲಿಲ್ಲಿವೆ 5 ಬ್ರಹ್ಮಾಂಡ ನಾಯಕನು ಅದ್ವೈತ ಸುಖವು ಉಂಡವಗಿದು ಪಿಂಡ ಬ್ರಹ್ಮಾಂಡೈಕ್ಯವು ಮಂಡಲದೊಳು ಪಿಂಡಾಂಡದಿ ಕಂಡವಗಿಲ್ಲ್ಲೆವೆ 6 ಸಂದೇಹ ವೃತ್ತಿ ಹರಿದು ಸದಮಲಾನಂದ ಮುಕ್ತಿಯಲಿ ಬೆರೆದು ಒಂದು ಪಥsÀವನರಿದು ಜಗದೊಳು ದ್ವಂದ್ವಗಳನೆ ಮರೆದು ಎಂದಿಗಗಲದಂತೆ ಶ್ರೀಪಾದವನಿಂದ ಮಹಿಪತಿಗೆ ಇಲ್ಲೆವೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವನ ಪಾಲಿಸಿದರೆ ನಿನಗೆ ಪುಣ್ಯ ಪ ಅವನಿಯೊಳೆಂದೆಂದಿಗೂ ನಾನೆ ಧನ್ಯ ಅ.ಪ ನೆಟ್ಟ ಮುಳ್ಳು ಕಿತ್ತು ಬಿಸುಟಂತೆ ಮಾಡು | ಘಟ್ಟಿಯಾಗಿ ಭಕುತನ್ನ ಕಾಪಾಡು1 ಸಾಧನ ಪ್ರಾಣಿಗಳಿರಲಿ ಬೇಕು | ವಾಕು 2 ತ್ರಿಜಗದೊಳಗೆ ನಿ£ಗ್ಯಾರೆಣೆಯೆ | ವಿಜಯವಿಠ್ಠಲ ಕೇಳೆನ್ನ ದೊರೆಯೆ 3
--------------
ವಿಜಯದಾಸ
ಇಷ್ಟೇಕೆ ಎನ್ನ ಮೇಲೆ ಈ ಸಿಟ್ಟು ಹರಿಯೆ ಸೃಷ್ಟಿಗೆ ನೀ ಕರ್ತನಾಗಿ ಶ್ರೀನಿವಾಸಧೊರಿಯೆ ಪ ಇನ್ಯಾರು ಹರಿ ಎನಗಿನ್ನು ಈ ಜಗದೊಳಗೆ ಎನ್ನ ದೂರು ಯಾರಿಗೆ ಮೊರೆಯಿಡಲಿ ಎನಗೆ ಮನ್ನಿಸಿ ದಯಮಾಡಿ ಸುಮತಿಯ ನೀ ತಂದು ಕೈಯನ್ನೇ ಹಿಡಿದು ಇನ್ನು ಈಗ ರಕ್ಷಿಸದಲೆ 1 ಸಕಲ ಜೀವ ರಕ್ಷಕÀನು ಸಾಧುಜನ ಪೋ- ಷಕನು ಸಕಲ ಲೋಕಗಳೆಲ್ಲ ಸಲಹುತಿಹನೊ ಅಕಳಂಕ ಮಹಿಮ ಶ್ರೀ ಆದಿದೇವರ ದೇವ ಭಕುತ ವತ್ಸಲನೆಂಬ ಬಿರುದು ನಿನ್ನಲ್ಲಿ 2 ಇಂದು ಮಾಡಿದ ಪಾಪಗಳು ಇಂದು ಪರಿಹಾರ ಮಾಡಿ ಎನ್ನ ಮುಂದೆ ಧನ್ಯನ ಮಾಡಿ ಮುಕ್ತಾನಂತೆನಿಸಿ ತಂದೆ ' ಹೊನ್ನಯ ವಿಠಲ’ ದಯಮಾಡಿ ಸಲಹದಲೆ 3
--------------
ಹೆನ್ನೆರಂಗದಾಸರು
ಇಹವಸ್ತುವೊಂದೇ ಜಗದೊಳಗೆ ಇಹವಸ್ತುವೊಂದೇಸೋಹಂ ಸೋಹಂ ಸೋಹಂ ಸೋಹಂಸೋಹಂ ಸೋಹಂ ಸೋಹಂ ಎಂದೇ ಪ ಸಂಗ ದೂರೆನಿಸಿ ಸಂಗವೆ ತಾನೆನಿಸಿಮಂಗಳ ಮಂಗಳ ಮಂಗಳ ಮಂಗಳಮಂಗಳ ಮಂಗಳ ಮಂಗಳವೆಂದೇ 1 ಜ್ಞಾನವೆ ತಾನಾಗಿ ಅಜ್ಞಾನಕೆ ತಾದೂರಾಗಿತಾನೇ ತಾನೇ ತಾನೇ ತಾನೇತಾನೇ ತಾನೇ ತಾನೇ ಎಂದು2 ವರ್ಣಂಗಳು ಆರು ಮೀರುವರ ಚಿದಾನಂದ ಗುರುಪೂರಣ ಪೂರಣ ಪೂರಣ ಪೂರಣಪೂರಣ ಪೂರಣ ಪೂರಣವೆಂದು 3
--------------
ಚಿದಾನಂದ ಅವಧೂತರು
ಈಡುಗಾಣೆನಯ್ಯ ಜಗದೊಳಗೆ ಪ. ಬೇಡಿದಭೀಷ್ಟಗಳ ಕೊಡುವ ಹನುಮ ಭೀಮ ಮಧ್ವರಾಯ ಅ.ಪ. ಅಷ್ಟದಿಕ್ಕಲಿ ಭೂಪರಾಳಿದ ದುಷ್ಟರಾವಣನ್ನ ಪುರವ ದೃಷ್ಟಿಸಿ ನೋಡಿ ಸಮರದಲಿ ಪ್ರಹಾರವನೆ ಕೊಡಲು ಕಷ್ಟದಿ ಮೂಛ್ರ್ಯಕೃತನಾಗಿಯೆದೆ ಹಿಟ್ಟಾಗಿಸನಂತಕಂದಿಸಿಯೆ ಕಂಗೆಟ್ಟು ಹತ್ತು ದಿಸೆಗೆ ಓಡಿಸಿದ್ಯೊ ದಿಟ್ಟನಾಗಿ ನಿರಂತರದಿ ಹನುಮಾ 1 ನಾರದ ಅಯೋಧ್ಯದಿ ಪೇಳಲು ಶ್ರೀ ರಾವಣ ಸೈನ್ಯಗಳ ಓಡಿಸಿ ವಾರಿಧಿಗಳ ದಾಟಿ ಬೇಗ ನೂರುತಲೆ ಅಸುರನ ಪಟ್ಟಣದ ದ್ವಾರ ಬಂಧಿಸಿ ಸಕಲದ್ವೀಪದಲ್ಲಿದ್ದ ಕ್ರೂರ ಅಸುರನ್ನ ಕಾಲಲೊದ್ದು ವರ ವಿಭೀಷಣ ಸುಗ್ರೀವರ ಪುಚ್ಛದಲಿ ತರುಬಿದಿಯೊ ಸಮರ್ಥ ಹನುಮಾ 2 ರುದ್ರ ಬ್ರಹ್ಮರ ವರದಲವಧ್ಯನಾದ ಜರಾಸಂಧನಾ ಖಳರ ಸೀಳಿದ್ಯೊ ನೃಪರ ನಿಂದೆ ಯುದ್ಧದಲಿ ದುರ್ಯೋಧನನ ಕೊಂದ ಪ್ರಸಿದ್ಧ ಭೀಮರಾಯ ನಿಮಗೆ3 ವಾದಿಗಜಕೆ ಮೃಗೇಂದ್ರ ವಾದಿವಾರುಧಿ ಬಡಿವ ಮಾಯಾ ವಜ್ರ ಭೇದ ಮತಾಂಬುಧಿಗೆ ಚಂದ್ರ ಮೋದತೀರ್ಥಾನಂದಗೆ ಕೃಷ್ಣಾ ಅಷ್ಟವಾಳುಕ ಮುಷ್ಟಿ ತಂದೆ ಸಾಧುಜನರಿಗೆ ತತ್ವಬೋಧಿಸಿದೆ ಮೇದಿನಿಯೊಳು ಮಧ್ವರಾಯ ನಿಮಗೆ 4 ಇಂದುಮುಖಿ ಸೀತೆಗೆ ಮುದ್ರಿಕೆಯನಿತ್ತು ವಂದಿಸಿ ರಾಮಕಥೆಯ ಪೇಳಿದೆ ಅಂದು ರೋಮಕೋಟಿ ಶಿವರಮಾಡಿ ಪುರುಷಮೃಗವನೆ ತಂದೆ ಚಂದದಿಂ ಮಣಿಮಂತನ ಕೊಂದು ಸೌಗಂಧಿಕವ ತಂದೆ ನಂದತೀರ್ಥರಾದ ಅಚಲಾನಂದ ವಿಠಲನ ದಾಸ ನಿಮಗೆ5
--------------
ಅಚಲಾನಂದದಾಸ
ಉಗಾಭೋಗ ಭಕ್ತಿದಾಯಕ ಕೇಳೊ ನಿನ್ನನು ಒಲಿಸಲು ಶಕ್ತಿ ಎನಗೆ ಇಲ್ಲ ಸರ್ವೇಶ್ವರ ಭಕ್ತಿಪಾಶದಿ ನಿನ್ನನುಕ್ತಿಯಿಂದಲಿ ಬಿಗಿವೆ ಮುಕ್ತಿಗೊಡೆಯ ಹೃದಯ ಮಧ್ಯದಿ ಬಂಧಿಸುವೆ ಶಕ್ತಿ ನಿನಗಿಲ್ಲ ಬಿಡಿಸಿಕೊಳ್ಳಲು ಇನ್ನು ಯುಕ್ತಾಯುಕ್ತ ತಿಳಿಸಿ ಉದ್ಧರಿಸಬೇಕಿನ್ನು ಶಕ್ತನಿಲ್ಲವೊ ನಿನಗೆ ಸರಿ ಜಗದೊಳು ಮಹ ಸಿರಿ ಗೋಪಾಲಕೃಷ್ಣವಿಠ್ಠಲಾ
--------------
ಅಂಬಾಬಾಯಿ