ಒಟ್ಟು 115 ಕಡೆಗಳಲ್ಲಿ , 21 ದಾಸರು , 110 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಾಣ ಗುರು ಜಯ ವಿಠಲ ಕಾಪಾಡು ಇವಳ ಪ ಪ್ರಣತಾರ್ತಿ ಹರನೆಂದು ಭಿನ್ನವಿಪೆ ಸತತಾ ಅ.ಪ. ಪತಿವ್ರತಾಮಣಿ ಎನಿಸಿ ಪತಿಸೇವೆಯೊಳುನಿರತೆಸತತ ಸದ್ಭಕ್ತಿ ಶ್ರೀ ಹರಿಗುರುಗಳಲ್ಲೀ |ಅತಿಶಯದಿ ಮಾಡುತಲಿ ವಿಹಿತವನು ತೊರೆಯದಲೆಕೃತಕಾರ್ಯಳಾಗಿಹಳ ಸತಿಯ ಸಲಹುವುದೂ 1 ತೈಜಸ ದಯಾಪಯೋನಿಧಿ ಹರಿಯೆಆ ಪರಿಮಳಾರ್ಯ ಯತಿರೂಪವನೆ ಕೊಂಡುಕೈ ಪಿಡಿದು ಕಾಯ್ವೆನೆಂಬಭಯ ಹಸ್ತವ ತೋರಿರೂಪವನು ಮರೆಮಾಡ್ಡೆ ಬೃಂದಾವನಾಂತ 2 ಮೋಚಕೇಚ್ಛೆಯೊಳ್ಸವ್ಯ ಸಾಚಿಗೇ ಅತಿಪ್ರೀಯಖೇಚರೋತ್ತಮ ಪ್ರಾಣಗೊಪ್ಪಿಸುತ ಇವಳಾನೀಚೋಚ್ಚತರತಮ ಜ್ಞಾನ ಸ್ಥಿರಪಡಿಸುತ್ತಪ್ರಾಚೀನ ದುಷ್ಕರ್ಮ ಪರಿಹರಿಸೊ ಹರಿಯೇ 3 ಪ್ರಣತಜನ ಪರಿಪಾಲಎನುತ ಭಿನ್ನೈಸುವೆನೊ ವೇಣುಗೋಪಾಲ 4 ಬದಿಗ ನೀನಾಗಿರಲು ಭಯವೇನೊ ಬುಧವಂದ್ಯವದಗಿ ಹೃದ್ಗುಹದೊಳಗೆ ತೋರಿತವ ರೂಪಮುದದಿಂದ ಕಳೆ ಇವಳನಾದಿ ರೋಗವನೆಂಬೆಇದನೇವೆ ಸಲಿಸೊ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪ್ರಾಣಸನ್ನುತ ವಿಠಲ | ನೀನೆ ಪೊರೆ ಇವನಾ ಪ ಮೌನಿಕುಲ ಸನ್ಮಾನ್ಯ | ದೀನ ಮಂದಾರಾ ಅ.ಪ. ಯೋನಿ ಅನೇಕ ದೊಳು | ಜ್ಞಾನರಹಿತನಾಗಿಮಾನುಷತ್ವದಿ ಬಂದು | ಜ್ಞಾನ ಬಯಸೀಗಾನ ಲೋಲನ ದಾಸ್ಯ | ಕಾಂಕ್ಷಿಸುತ್ತಿರುವನಿಗೆಶ್ರೀನಿವಾಸನೆ ನಿನ್ನ | ದಾಸ್ಯ ವಿತ್ತಿಹೆನೋ 1 ಪಂಕೇರುಹಜನು ವಿiÁ | ನಾಂಕಷಿತನು ಸರ್ವಸಂಖ್ಯೆರಹಿತಾ ದೇವಾ | ಸಂಕುಲಗಳೆಲ್ಲಾಪಂಕಜಾಕ್ಷನು ಹರಿಸಿ | ಕಿಂಕರರು ತಾವಾಗಿಅಂಕೆಯಲ್ಲಿಹರೆಂಬ | ತರತಮನ ತಿಳಿಸೋ 2 ಸತ್ಯ ಜಗತೀನೊಳಗೆ | ನಿತ್ಯಹರಿ ಸುವ್ಯಾಪ್ತಕರ್ತೃ ಕರ್ಮವು ಕರಣ | ತಾ ಸೇವೇ ಆಗೀನಿತ್ಯರಿಗೆ ಕರ್ಮಗಳ | ತುತ್ತು ಮಾಡ್ಯಣಿಸುತ್ತಾಭತೃವೆಂದೆನಿಸಿಹನೆ | ಉತ್ತಮೋತ್ತಮನೆ 3 ಸಾಧನಸುಜೀವಿ ಇವೆ | ಬಾಧೆಗೊಳಗಾಗಿಹನುಮೋದತೀರ್ಥರಮತದಿ | ಸಾಧನೇಯ ಗೈಸೀಮೋದಪ್ರದನೆಂದೆನಿಸೊ | ಸಾಮವಂದಿತ ಹರಿಯೆಹೇದಯಾ ಪರಿಪೂರ್ಣ | ಆದಿ ಜಗಕರ್ತಾ 4 ಲೌಕೀಕ ಸುಖದಲ್ಲಿ | ಕಾಕುಮತಿಯನು ಕೊಟ್ಟಾಬೇಕಾದ ವೈರಾಗ್ಯ | ಭಾಗ್ಯ ಪ್ರದನಾಗೋನಾಕನದಿ ವಂದ್ಯ ಗುರು | ಗೋವಿಂದ ವಿಠಲನೆನೂಕಿಸಂತಾಪಗಳ | ಮೋಕ್ಷಪ್ರದನಾಗೋ 5
--------------
ಗುರುಗೋವಿಂದವಿಠಲರು
ಪ್ರಿಯ ಪಾಂಡುರಂಗ ವಿಠಲ | ದಯದೋರೊ ಇವಗೆ ಪ ನಯವಿನಯದಿಂ ಬೇಡ್ವ | ಹರಿದಾಸದೀಕ್ಷಾ ಅ.ಪ. ಸದ್ವಂಶದಲಿ ಬಂದು | ಮಧ್ವಮತದೀಕ್ಷೆಯಲಿವಿದ್ಯೆಯನು ತಾ ಕಲಿತು | ಹರಿದಾಸ್ಯದಿ ಮನವಬುದ್ಧಿ ಮಾಡ್ಡವ ನೀನೆ | ಮಧ್ವಾಂತರಾತ್ಮಕನೆಸದ್ವಿಧ್ಯೆತರತಮವ | ಬುದ್ದಿಗೆಟಕಿಸೊ ದೇವಾ 1 ಪಂಚಬೇಧವನರುಹಿ | ಪಂಚಾತ್ಮ ನಿನಕಾಂಬಸಂಚುಗಳ ತಿಳಿಸುತ್ತ | ಕಾಪಾಡೊ ಇವನಾಅಂಚೆಗಮನನೆ ಪಿತನೆ | ನಿಷ್ಕಿಂಚನಾರಾಧ್ಯಹೆಂಚು ಹಾಟಕದಿ ಸಮ | ಬುದ್ದಿಯನೆ ಈಯೋ2 ಭಕ್ತಿ ವೆಗ್ಗಳವಾಗಿ | ನಿತ್ಯತವ ಪದಮಹಿಮೆಸತ್ಕೀರ್ತಿ ಪಾಡುತಲಿ | ಹರಿಗುರು ಸೇವಾ ಕೃತ್ಯದಲಿ ಸನ್ಮೋದ | ಚಿತ್ತದಲಿ ಆನಂದಬಿತ್ತುತಲಿ ಪೊರೆ ಇವನ | ಚಿತ್ತಜನಪಿತನೆ 3 ಗುಣರೂಪ ಕ್ರಿಯೆಗಳಲಿ | ಅನಗುತನು ವ್ಯಾಪ್ತನೂಎನುವ ಸುಜ್ಞಾನವನು | ಕರುಣಿಸೊ ಹರಿಯೇಕನುಕರಣ ಮನಮೂಲ | ಗುಣಭೋಗದನುಭವನಉಣಿಸಿ ಸಾಧನಗೈಸಿ | ಪೊರೆ ಇದನ ಹರಿಯೇ 4 ನೋವು ಸುಖಗಳ ಸಮತೆ | ಭಾವವನೆ ಕರುಣಿಸುತಶ್ರೀ ವರನೆ ಪೊರೆ ಇದನ | ಸರ್ವಾಂತರಾತ್ಮಾಶ್ರೀ ವಲ್ಲಭನೆ ಗುರು | ಗೋವಿಂದ ವಿಠಲನೆಓದಿಮದ್ಭಿನಪವ | ಪಾಲಿಸೊ ಹರಿಯೇ5
--------------
ಗುರುಗೋವಿಂದವಿಠಲರು
ಬಂದೆ ನಾ ನಿಂದೆ ಇಂದೇ | ವಂದಿಸಿದೆನೊ ವಂದೆ | ಮಾಧವ ತಂದೆ | ಆನಂದ ಇಂದಿರೇಶ ಬಂದೆ ಪ ಪುರುಹೂತ ಜಾತ ಸೂತ | ಸರಸಿಜ ತಾತಾ | ಪರಮ ಪುರುಷ ಖ್ಯಾತ | ಸರವಂದ್ಯ ದೈತ್ಯ ಘಾತಾ | ಹಾಹಾ ಚರಣವ ನಿರುತರ ನೆರೆನಂಬಿದೆ | ದು ಸ್ತರ ಭವಶರಧಿ ಉತ್ತರಿಸೊ ಉರಗಶಾಯಿ 1 ಮೂರ್ತಿ ವರದೇಶಾ ಶರಣರ ಪರಿತೋಷಾ | ತರತಮ್ಯ ಜ್ಞಾನ ಕೋಶ | ಹಹ | ಪುರಹರಗೀಕಾಶಿಪುರ ಕರುಣಿಸಿದ ಸುಂ | ದರಗಾತುರ ಗೋತುರ ಧರ ಧರಣೀಶಾ 2 ಅವಿಮುಕ್ತಿ ಕ್ಷೇತ್ರವಾಸಾ | ನವನವ ಗುಣಭೂಷಾ | ಅವಿಕಾರ ನಾನಾ ವೇಷಾ | ರವಿಜವನ ಪೊರೆವ ಮಿರುವ ಮಹಸತ್ಕಥಾ ಶ್ರವಣವೆ ಕೊಡು ಕೇಶವ ವಿಜಯವಿಠ್ಠಲಾ 3
--------------
ವಿಜಯದಾಸ
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ ಕುಜನರೊಳಾಡದಲೆ ನಿಜ ಭಕುತಿಯಿಂದ ಭುಜಬಲವುಳ್ಳ ಪರಜರಟ್ಟುವ ದಿ ಗ್ವಿಜಯ ಸತ್ಯಪೂರ್ಣರ ಸುಜನರೊಂದಾಗಿಪ ಭರದಿಂದ ಬಂದು ನಿಂದು ನಿರೀಕ್ಷಿಸಿ ನಿರ್ಮಳ ಕರಯುಗಳ ಮುಗಿದು ಶಿರವಾನಿಲ್ಲದೆ ಧರಣಿಯಾ ಮ್ಯಾಲೊಂದು ತೀವರ ಸಾಷ್ಟಾಂಗ ನಮ ಸ್ಕರಿಸಿ ಕೊಂಡಾಡಿ ನಿಂದಿರಲಾನರರಿಗೆಲ್ಲ ಪರಿಹರವೊ ಬಂದರಘಳಿಗೆಯಲಿ ದುರುಳರಿಗಾಯ್ತು ಮರಿಯದೆ ಚೆನ್ನಾಗಿ1 ನೆರೆನಂಬಿ ನಿಮ್ಮಯ ಗೋತುರ ಸಹಿತಕ್ಕೆ ಜ್ಞಾನಾಂ ಕುರವಾಗುವುದು ಇದು ಉರುಕಾಲ ಸಿದ್ಧವೆನ್ನಿ ತರತಮ್ಯ ತತ್ವ ತಾತ್ಪರಿಯ ವಿಧ ತಿಳಿದು ಸುರರು ಮೆಚ್ಚುತಲಿರೆ ಮುರರಿಪು ಚತುರ್ದಶ ಧರಣಿಗೆ ಪರನೆಂದು ಬಿರಿದನು ಎತ್ತಿ ಡಂಗುರವ ಹೊಯಿಸಿ ಡಿಂಗರರಿಗೆ ಸಚ್ಛಾಸ್ತ್ರ ಕೊಡುವ ಯತಿಶಿರೋಮಣಿ ಕರ್ನಾ 2 ಪಾದಾಂಬುಜಾತ ಕೃಷ್ಣಾ ತನು ಭವಸರಿತ ನಿವಾಸಾ ದಿವಿಜೇಶನಾಯುಧ ಕವಚದಿಂದಲಿ ತನ್ನವರನ ಪೊರೆದೆತ್ತಿ ನವವಿಧ ಬಗೆ ತೋರಿ ತವಕದಿ ಕೋಲುಪುರ ಪವಿತುರ ಸ್ಥಳದಲ್ಲಿ ರವಿಯಂತೆ ಪೊಳವರು ಭವದೋಷ ಕಳೆವುತಾ ಕವಿಗಳ ಮನೋಹರ ವಿಜಯವಿಠ್ಠಲನ ಶ್ರವಣ ಮನನ ಧ್ಯಾನವನು ಬಲ್ಲವರಾ3
--------------
ವಿಜಯದಾಸ
ಭಾರತೀ ಪತಿನುತ ವಿಠಲ ನೀನಿವಳ ಉದ್ಧಾರ ಮಾಡುವುದು ಹರಿಯೇ ಪ ತಾರಕನು ನಿನಗನ್ಯ ಉಂಟೇ ಈರೇಳು ಲೋಕದಲಿ ಧೊರೆಯೇ ಅ.ಪ. ಜನ್ಮಜನ್ಮದಲಿ ಬಲುನೊಂದು ಸತ್ಪುಣ್ಯಗಳನೇ ಮಾಡಿಜನ್ಮಪೊಂದುತಲಿ ಸತ್ಕುಲದಿ ಸನ್ಮತದವನ ಕೈಯ ಪಿಡಿದು |ಸನ್ಮಧ್ವಮತ ದೀಕ್ಷೆಗಳ - ಒಮ್ಮನದಿ ತಾಳುತ್ತನಿಮ್ಮಡಿಯ ನಾಶ್ರಯಿಸಿ ಬಂದಿಹಳ ಸಲಹುವುದು 1 ತರತಮ ಜ್ಞಾನದಲಿ - ಉರುತರೋತ್ಸುಕತೆಯನುನಿರತ ಹರಿಗುರುಗಳಲಿ ಉರುತರದ ಭಕ್ತಿಯನೂ |ಹಿರಿಯರನು ವಿನಯದಿಂ ಪರಿಚರಿಪ ಮತಿಯನ್ನುಕರುಣಿಸೀ ಸಲಹಯ್ಯ ಮರುತಾಂತರಾತ್ಮಾ 2 ಪಂಚಭೇಧದ ಜ್ಞಾನ ಸಂಚಿಂತನೆಯನೇ ಕೊಟ್ಟುಮಿಂಚಿನಂದದಿ ತೋರೊ - ಹೃತ್ಪಂಕಜನಲೀಅಂಚೆವಹಪಿತ ನಿನ್ನ ಪದಕಮಲ ಭಜಿಪಳಿಗೆವಾಂಛಿತಾರ್ಥದನಾಗಿ - ಸಲಹ ಬೇಕಿವಳಾ 3 ಪತಿ ನೀನೆ ಎಂಬಂಥಮತಿಯಿತ್ತು ಭವಗಳನ ಉತ್ತರಿಸು ಹರಿಯೇ 4 ನಿನ್ನ ಪದ ಕಮಲದಲಿ ಜ್ಞಾನಭಕುತಿಗಳಿತ್ತುನನ್ನೆ ಯಿಂದಿವಳ ಚೆನ್ನಾಗಿ ಸಲಹೊ ಹರಿಯೇ |ಸನ್ನುತಿಸಿ ಪ್ರಾರ್ಥಿಸುವೆ - ಮನ್ನಿಸೆನ ಬಿನ್ನಪವಘನ್ನ ಮಹಿಮನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭಾರತೀ ಭವಹಾರಿಯೆ | ಭಕ್ತರಪ್ರಿಯೆ | ಭಾರತೀ ಭವಹಾರಿಯೇ ಪ ಈರೈದು ಇಂದ್ರಿಯಗಳುಗಾರು | ಮಾಡದಂತೆ ಸಾಕಾರವಾಗಿ ಪಾಲಿಸು ಅ.ಪ. ಮತಿವಂತನ ಮಾಳ್ಪುದು | ಇದಕೆ ನಿನ್ನ | ಪತಿಯ ಈಗಲೆ ಕೇಳ್ವುದು | ಕ್ಷಿತಿಯೊಳು ಹೀನರ ಸ್ತುತಿಸಲರಿಯೆ | ಮು- ಕುತಿ ಮಾರ್ಗವ ತೋರಿ ಭಕುತಿ ಬೇಗ ಒದಗಿಸು 1 ಮಹತ್ತತ್ವದಭಿಮಾನಿ ನೀ | ಕಲಿರಹಿತೆ | ಅಹಿಪತಿ ಅಪ್ಪ ಖಗಪ ಜನನೀ || ಮಹಾಪ್ರಮಾಣು ವ್ಯಾಪುತೆ ಸರ್ವಜೀವರ | ದೇಹದಲಿ ನಿಂದು ಶ್ರೀಹರಿ ಆರಾಧನೆಯ ರಹಸ್ಯವ 2 ಶರಣು ಶರಣು ಗುಣಮಣಿ | ಚಂದ್ರಪ್ರಕಾಶೆ | ಪಾವನಿ ಕಲ್ಯಾಣಿ ತರತಮ್ಯ ಭಾವದಿ || ಅರಿದು ಕೊಂಡಾಡುವ ಚಿಂತೆ ಇರಲಿ | ವಿ- | ಸ್ಮರಣೆಯಾಗದಂತೆ ವಿಜಯವಿಠ್ಠಲನ್ನ ನಿರುತ ಪೊಂದಿಸು 3
--------------
ವಿಜಯದಾಸ
ಭಾರತೀಶ ಪ್ರಿಯ | ವಿಠಲ ಪೊರೆ ಇವಳ ಪ ನೆರೆನಂಬಿ ಬಂದಿಹಳ | ಪೊರೆಯೊ ಶ್ರೀಹರಿಯೇ ಅ.ಪ. ದಾಸ ದೀಕ್ಷೆಯ ಜ್ಞಾನ | ಲೇಸು ಪಡೆದವಳಲ್ಲಆಶೆಪಳು ತವದಾಸ್ಯ | ಮೇಶ ಮಧ್ವೇಶಆಶೆ ಮಾತ್ರಕೆ ಒಲಿದು | ಪೋಷಿಸಲಿ ಬೇಕಯ್ಯಹೇ ಸದಾಶಿವ ವಂದ್ಯ | ವಾಸ ವಾನುಜನೆ 1 ಪತಿಸುತರು ಬಾಂಧವರ | ಹಿತದಲ್ಲಿ ಮತಿಯಿತ್ತುಅತುಳ ವಿಭವದಿ ಮೆರೆಸಿ | ಕೀರ್ತಿಕೊಡಿಸೋಕೃತಿ ಪತಿಯೆ ತವಚರಣ | ಸತತ ನೆನೆಯುವ ಭಾಗ್ಯಪಥದಲ್ಲಿ ಇರಿಸಿ ಕೃತ | ಕೃತ್ಯಳೆಂದೆನಿಸೋ 2 ಉದಧಿ ಶಯನಾ |ಹದುಳದಲಿ ಮೂರೆರಡು | ಭೇದ ತರತಮಜ್ಞಾನವದಗಿಸುತ ಪೊರೆ ಇವಳ | ಮಧು ಮಥನ ಹರಿಯೇ 3 ನಿನ್ನ ನಾಮವ ಬಿಟ್ಟು | ಅನ್ಯ ಸಾಧನ ಕಾಣೆಚೆನ್ನ ಈ ಕಲಿಯುಗದಿ | ಅನ್ನಂತ ಮಹಿಮಾಘನ್ನ ದಯವನಧಿ ಆ| ಪನ್ನ ಜನರಕ್ಷಕನೆನಿನ್ನೊಲಿಮೆ ಉಳ್ಳನಕ | ಇನ್ನಾವ ಭಯವೋ 4 ಭಾವಜ್ಞ ನೀನಾಗಿ | ಪಾವಕಳೆ ಸಲಹೋ5
--------------
ಗುರುಗೋವಿಂದವಿಠಲರು
ಭೀಮಾತಟ ಹರಿ ವಿಠಲ | ಪೊರೆಯ ಬೇಕಿವಳಾ ಪ ಸಾಮಸನ್ನುತ ಹರಿಯೆ | ನಿಸ್ಸೀಮ ಮಹಿಮಾ ಅ.ಪ. ಗುರು ಕರುಣ ಇವಳಿಗಿದೆ | ಮರಳಿ ಹರಿ ಗುರುಭಕ್ತಿನೆರೆ ವೃದ್ಧಿ ಗೈಸುತಲಿ | ಪೊರೆಯೊ ಇವಳಾ |ಕರುಣನಿಧಿ ನೀನೆಂದು | ಆರು ಮೊರೆಯ ನಿಡುವೆನಾಪರಿ ಪರಿಯಲಿಂದಿವಳ | ಕೈ ಪಿಡಿಯೆ ಹರಿಯೇ 1 ಸಜ್ಜನರ ಸಂಗ ಕೊಡು | ದುರ್ಜನರ ದೂರಿರಿಸುಅರ್ಜುನನ ಸಾರಥಿಯೆ | ಮೂರ್ಜಗಕೆ ಒಡೆಯಾ |ಬೊಜ್ಜೆಯಲಿ ಬ್ರಹ್ಮಾಂಡ | ಸಜ್ಜು ಗೊಳಿಸಿಹ ಹರಿಯೆ |ಅರ್ಜುನಾಗ್ರಜ ವಂದ್ಯ | ಸಜ್ಜನರ ಪಾಲಾ 2 ತರತಮದ ಸುಜ್ಞಾನ | ಹರಿಯ ಸರ್ವೋತ್ತಮತೆಕರುಣಿಸೋ ಇವಳೀಗೆ | ಪರಮ ಪಾವನ್ನಾ |ಗರುಡ ಗಮನನೆ ಗುರೂ | ಗೋವಿಂದ ವಿಠ್ಠಲನೆಮೊರೆಯ ಲಾಲಿಸಿ ಇವಳ | ಪೊರೆಯೊ ಶ್ರೀ ಹರಿಯೇ 3
--------------
ಗುರುಗೋವಿಂದವಿಠಲರು
ಭೇದ ಪೇಳುವೆನೆ ತಮೊ ಯೋಗ್ಯ ಪೂರ್ಣ ಬೊಧರ ಮತ ಬಿಡುವನೆ ಮುಕ್ತಿಯೋಗ್ಯ ಪ ಸತ್ಯ ನುಡಿವನೆ ಅಪಕಾರಿ ಪರರ ವಿತ್ತಪಹರಿಸುವನೆ ಬಲು ಉದಾರಿ ಹತ್ಯ ಮಾಡುವನೆ ಉಪಕಾರಿ ನಿತ್ಯ ಚಿತ್ತ ಚಂಚಲಿಸುವನೆ ಧರ್ಮದಾದಿ 1 ಪರನಾರಿ ಸಹೋದರ ಹೀನ ಕಂಡಾ ಉ ತ್ತರಗಳನಾಡುವನೆ ಆವಾಗ ಮೌನ ತರತಮ್ಮ ಪೇಳುವನೆ ಕೋಣ ತನ್ನ ಹರಣವೊಪ್ಪಿಸಿಕೊಂಬುವನೆ ಪ್ರವೀಣಾ 2 ಭ್ರಷ್ಟನೆನೆಸುವನೆ ಧನ್ಯ ಪರರ ಇಷ್ಟಾರ್ಥ ಕೆಡಿಸುವನೆ ಬಲು ಮಾನ್ಯ ಕಷ್ಟ ಬೇಡುವನೆ ರಾಜನ್ಯ ವಿಜಯ ವಿಠ್ಠಲನ್ನ ಪೂಜೆ ಮಾಡುವನೆ ಗುಣಶೂನ್ಯ 3
--------------
ವಿಜಯದಾಸ
ಮಧ್ವವರದಾ ಕೃಷ್ಣಾ ವಿಠಲ ಪೊರೆಯಿವಳ ಪ ಅಧ್ವರೇಡ್ಯನೆ | ದೇವ ಕಾರುಣ್ಯ ಮೂರ್ತೇ ಅ.ಪ. ಸುಸ್ತೇಶ ಸೂಚಿಸಿದ ಕ್ಲುಪ್ತಿಯನ್ನನುಸರಿಸಿಇತ್ತಿಹೆನು ಉಪದೇಶ ಚಿತ್ತಜನಪಿತನೆಅರ್ಥಿಯಲಿ ಮನ್ನಿಸುತ ಚಿತ್ತೈಸು ಬಿನ್ನಪವಕೃತ್ತಿವಾಸನ ತಾತ ಸ್ತುತ್ಯ ಸರ್ವೇಶ 1 ಸನ್ನುತ ಚರಣ ಸೀಮೆ ಮೀರಿದ ಮಹಿಮಭಾಮಿನಿಯ ಪೊರೆಯೆಂದು ಪ್ರಾರ್ಥಿಸುವೆ ಹರಿಯೇ2 ತರತಮದ ಸುಜ್ಞಾನ ಎರಡು ಮೂರ್ಭೇದಗಳುಅರಿವನೇ ಇತ್ತಿವಳ ಪೊರೆವುದೈ ಹರಿಯೆಮರುತ ಮತದಲ್ಲಿಹಳ ನಿರುತ ಕಾಯಲಿ ಬೇಕುಕರಿವರದ ಧೃವವರದ ತರಳೆಹಲ್ಯಯ ವರದ 3 ಪತಿಸೇವೆ ಹಿತದಿಂದ ಕೃತನಾಗಿಯಿವಳಿಂದಗತಿಗೆ ಸಾಧನವೆನಿಸೋ ಮರುತಾಂತರಾತ್ಮಹಿತ ವಹಿತವೆರಡರಲಿ ರತಿ ಸಮತೆ ಪ್ರದನಾಗಿಕೃತ ಕೃತ್ಯಳೆಂದೆನಿಸೊ | ಕೃತಿರಮಣದೇವ 4 ಜೀವ ಅಸ್ವಾತಂತ್ರ ದೇವ ನಿಜ ಸ್ವಾತಂತ್ರಜೀವ ಜಡರೂ ದೇವರಾಧೀನ ವೆಂಬಭಾವನೆ ತಿಳಿಸು ಗುರುಗೋವಿಂದ ವಿಠಲಯ್ಯಸಾವಧಾನದಿಯಿವಳ ಕೈಯನೇ ಪಿಡಿಯೋ 5
--------------
ಗುರುಗೋವಿಂದವಿಠಲರು
ಮನುಜ ಮೃಗವೇಷ | ವಿಠಲ ಪೊರೆ ಇವಳಾ ಪ ಅನಘ ಅನಿಲಾಂತಸ್ಥ | ಗುಣಪೂರ್ಣ ಹರಿಯೇ ಅ.ಪ. ಗುರುಮಹಿಮೆ ಅರಿಯದಲೆ | ಚಿರಕಾಲ ಬಾಳಿಹಳೊಮರುತಾಂತರಾತ್ಮಹರಿ | ವರಭೋಗಿ ಶಯನಾತರತಮದ ಸುಜ್ಞಾನ | ಎರಡು ಮೂರ್ಭೇದಗಳಅರುಹಿ ನೀ ಪೊರೆ ಇವಳ | ಸರ್ವ ಸುಲುಭಾಖ್ಯ 1 ಬದಿಗ ನೀನಾಗಿದ್ದು | ಮುದುಡ ಜೀವಿಯ ಮನಕೆವದಗಿ ಬಾರದಲೇವೆ | ಅಜ್ಞಾನ ಮುಸುಕೀಸದಮಲಾಂತಃ ಕರಣ | ದುದಯವನೆ ಕಳಕೊಂಡುವಿಧವಿಧದಿ ಪರಿತಪಿಸಿ | ನೊಂದಿಹಳ ಪೊರೆಯೋ 2 ಸರ್ವ ಬಗೆಯಲಿ ವಂದ್ಯ | ಸರ್ವಂತರಾತ್ಮಕನೆನಿರ್ವಿಕಾರನೆ ನಿನ್ನ | ನಾಮ ಸುಧೆಯಾಸರ್ವದಾ ಉಣಿಸಿ ಪೊರೆ | ಇವಳ ಎನೆ ಬಿನ್ನವಿಪೆಸರ್ವಸುಂದರ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಮನ್ಮಥಪಿತ ವಿಠಲ ನೀನಿವಳ ಸಲಹೊ ಹರಿಯೇಮನ್ಮನೋರಥ ಭಿನ್ನಪವ ಸಲಿಸೋ ಪ ಜನ್ಮಜನ್ಮಾಂತರದ ಪುಣ್ಯ ಸಂಚಯ ಫಲಿಸಿನಿನ್ನ ದಾಸತ್ವದಲಿ ಕಾಂಕ್ಷೆ ಬಹುಯಿರಿಸೆನನ್ನೆಯಿಂದಲಿ ಪೂಜೆ ಪರಿಕರಂಗಳ ಕೊಂಡುಸ್ವಪ್ನ ಸೂಚಕದಂತೆ ನಿನ್ನರ್ಚನೆಯ ಕಾತುರಳ 1 ತರತಮದಿ ಸುಜ್ಞಾನ ಹರಿಗುರೂ ಸದ್ಭಕ್ತಿಪರಮ ವೈರಾಗ್ಯವನು ವಿಷಯಾದಿಗಳಲೀಪರತತ್ವ ಹರಿಯೆಂಬ ವರಮತಿಯ ನೀನಿತ್ತುಗುರುಮಧ್ವ ಮತದಲ್ಲಿ ಪರಮದೀಕ್ಷೆಯನೀಯೋ 2 ಪತಿ ಸುತರು ಹಿತರಲ್ಲಿ | ಗತಿದಾತ ಗುರುವಿನೊಳುಕ್ಷಿತಿರಮಣ ತವವ್ಯಾಪ್ತಿ ಮತಿಯ ಪಾಲಿಸುತಗತಿ ದೋರೊ ಸನ್ಮುಕುತಿ ಪಥವನೀ ಸಲಿಸುತ್ತಹುತವಹಕ್ಷಾಂತರ್ಗತ ಮನದಿ ನೆಲಸುತಲೀ 3 ಸಂಜೀವ ಪಿತನೇ |ನಂಜು ಸಂಸ್ಕøತಿ ಬಂಧ ಮೋಚಕೇಚ್ಛೆಯ ಮಾಡಿಅಂಜಿಕೆಯನೆ ಕಳೆಯೊ | ಕಂಜಾಕ್ಷ ಹರಿಯೇ 4 ಪಾವಮಾನಿಯ ಪ್ರೀಯ ಭಾವುಕಳ ಹೃದ್ಗತನೆನೀವೊಲಿದು ತವಸ್ಮರಣೆ ಸರ್ವದಾ ಸರ್ವತ್ರಈವುದಿವಳಿಗೆ ಎನ್ನ ಬಿನ್ನಪವ ಸಲ್ಲಿಪುದುಗೋವಿದಾಂಪತಿಯೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು