ಒಟ್ಟು 297 ಕಡೆಗಳಲ್ಲಿ , 60 ದಾಸರು , 273 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕಾಮವೈರಿಜಾಯೆ ಪಾಹಿ ಕೋಮಲಾಂಗಿಯೇ ಶಿವೆ ಪ ಹೇಮಕನಕ ದಾಮಭೂಷೆ ಕಾಮಿನೀಪ್ರಿಯೆ ಶಿವೆ ಅ.ಪ. ಅಷ್ಟಬಾಹು ಶೋಭಿತಾಂಗಿ ದುಷ್ಟನಾಶಿನಿ ಶಿವೆ ಅಷ್ಟಮೂರ್ತಿ ವಾಮರೂಪೆ ಇಷ್ಟದಾಯಕಿ ಶಿವೆ1 ಬಾಲಚಂದ್ರ ಭಾಸಮಾನ ಫಾಲಶೋಭಿತೆ ಶಿವೆ ನೀಲವೇಣಿ ವಿಮಲವಾಣಿ ಕಾಲರೂಪಿಣಿ ಶಿವೆ 2 ಚಕ್ರರಾಜ ಮಧ್ಯವರ್ತಿ ಶಕ್ತಿಕಾರಿಣಿ ಶಿವೆ ವಕ್ರಕೇಶಿ ಮುಖ್ಯದನುಜ ಶಕ್ತಿಹಾರಿಣಿ ಶಿವೆ3 ಕರುಣಿಸಿಂದು ವರವ ದೇವಿ ಚರಣಕೊಂದಿಪೆ ಶಿವೆ ಸುರನರಾದಿ ಗೀಯಮಾನ ಪಾದಪಲ್ಲವೆ ಶಿವೆ 4 ನಾಗವೇಣಿ ಧೇನುನಗರ ಸರ್ವಮಂಗಳ ಶಿವೆ ಭೋಗ ಭಾಗ್ಯ ಸುಖಗಳಿತ್ತು ಪೊರೆಯೆ ಪಾರ್ವತಿ ಶಿವೆ 5
--------------
ಬೇಟೆರಾಯ ದೀಕ್ಷಿತರು
ಕಾಯಯ್ಯಾ ನೀ ಎನ್ನ ರನ್ನಾ | ದಯದಲಿ ಸಂಪನ್ನಾ ಪ ಮಂದರಧರ ದಶಕಂದರ ಹರಿ ಅತಿ- | ಸುಂದರ ಸದ್ಗುಣ ಮಂದಿರ ಈಶಾ | ಕುಂದರದನ ಕಂಬುಕಂದರ ಐದೊಂದು | ಕಂದರ ಪಿತ ಸಖ ಇಂದಿರೆಯರಸಾ 1 ತುಂಗ ವಿಕ್ರಮ ದನುಜಾಂತ ಮದಗಜಕ | ಹರಣ ರಂಗ ನಿಸ್ಸೀಮಾ | ಇಂಗಿತಜನ ಭವಭಂಗ ಕಮಲದಳ | ಕಂಗಳಲೊಪ್ಪುವ ಮಂಗಳ ಮಹಿಮಾ 2 ಅಂಬುಜ ಭವನುತ ಅಂಬುಧಿಜಾನನ | ಅಂಬುಜ ಸುಚಕೋರಾಂಬುಜ ಚರಣ | ಅಂಬುಧಿವಾಸ ವಿಶ್ವಂಭರ ಮಹಿಪತಿ- | ನಂಬಿದ್ದವರಿಗಿಂಬಾಗಿಹೆ ಕೃಷ್ಣಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೀಳಬಾರದೇ ಹಲ್ಲ | ಆಳುವಾಡತಿನ್ನುಮತವ ಏಳಲ ಮಾಡುವವರ ಪ ಮೂರು ಮೂರ್ತಿಗಳನೆ ಕರೆದು | ಸಾಯದಂಥ ದನುಜರನ್ನು | ತಾಯಿ ನೀನೆ ಕೊಂದು ಸುರ ನಿ- | ಕಾಯವನ್ನು ಕಾಯಲಿಲ್ಲ 1 ಇಂದು 2 ಇಂದು ನೀನು ಸುಮ್ಮನಿರಲು | ಮುಂದೆ ದಾರಿಗುಸುರಲಿನ್ನು |ತಂದೆ ಭವತಾರಕನ | ನಿಂದೆ ಮಾಡುವವರ ಹಲ್ಲ 3
--------------
ಭಾವತರಕರು
ಕೃಷ್ಣ ಭವರೋಗದ ಮದ್ದುಕೃಷ್ಣ ಅಭಿಮಾನವ ಕಾಯ್ವಾತ ನಿಂದಲ್ಲಿದ್ದುಪ. ದುಷ್ಟ ದನುಜರ ಹುಡಿಗುಟ್ಟಿ ನಂಬಿದ ಸುರರದಿಟ್ಟರ ಮಾಡಿದ ಜಗಜಟ್ಟಿ ರಂಗ ಧೀರ1 ಪಾದ 2 ಮಧ್ವರ ಪೂಜಿತ ಪಯೋಬ್ಧಿ ತನುಜೆಯರಸಹೃದ್ಯ ಹಯವದನ ಸಮೃದ್ಧ ವೈಕುಂಠಾಧೀಶ 3
--------------
ವಾದಿರಾಜ
ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು
ಕೇಶಿದನುಜನ ನಾಶಗೊಳಿಸಿದ ಕೇಶವನೆ | ಕಾಯೋ ಶ್ರೀಧರ ಪ ನಾಶರಹಿತ ಪರೇಶ ದಿನಪಸಂಕಾಶ | ಕ್ಲೇಶವಿನಾಶ ಭೂಧರ ಅ.ಪ ದೀನಪಾಲನೆ ಗಾನಲೋಲನೆ ಧೇನುಕಾಸುರ ಸೂದನೆ ಸಾನುರಾಗ ವಿನೋದನೆ 1 ರಥಾಂಗ ವೈರಿ ಗೋಪಾಲನೆ ಮಂಗಳಾಂಗ ಶುಭಾಂಗ ಮಾಂಗಿರಿ ರಂಗ ಗೋಪೀ ಬಾಲನೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೈಲಾಸವಾಸ ಗೌರೀಶ ಈಶ ಪ ತೈಲ ಧಾರೆಯಂತೆ ಮನಸುಕೊಡು ಹರಿಯಲ್ಲಿ ಶಂಭೋ ಅ ಅಹೋ ರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೊ ಮಹದೇವನೆ ಅಹಿಭೂಷಣನೆ ಎನ್ನವಗುಣಗಳೆಣಿಸದಲೆ ವಿಹಿತ ಧರ್ಮದಿ ಕೊಡು ವಿಷ್ಣುಭಕುತಿಯ ಶಂಭೋ 1 ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ ಅನಲಾಕ್ಷ ನಿನ್ನ ಪ್ರೇರಣೆಯಲ್ಲದೆ ದನುಜ ಗಜಮದ ಹರಿಯೆ ದಂಡ ಪ್ರಣಾಮವ ಮಾಳ್ಪೆ ಮಣಿಸು ಈ ಮನವ ಸಜ್ಜನರ ಚರಣದಿ ಶಂಭೋ2 ಭಾಗೀರಥೀಧರನೆ ಭಯವ ಪರಿಹರಿಸೈಯ ಲೇ ಸಾಗಿ ಒಲಿದು ಸಂತತ ಶರ್ವದೇವ ಭಾಗವತ ಜನಪ್ರೀಯ ವಿಜಯವಿಠ್ಠಲನಂಘ್ರಿ ಜಾಗುಮಾಡದೆ ಭಜಿಪ ಭಾಗ್ಯವನು ಕೊಡೋ ಶಂಭೋ3
--------------
ವಿಜಯದಾಸ
ಕೌಸಲ್ಯಾಗರ್ಭಾಬ್ಧಿಸೋಮಾ ಸ್ವಾ'ು ಕೌಶಿಕ ಮಖಪಾಲ ರಾಮ ಪಆಶಯೇಶಯ ಜನಕ ಪಾಪ'ನಾಶ ತಾಪಸಹೃದಯ ಕಮಲಾವಾಸ ಭದ್ರ ಗರೀಶ ರಘುಕುಲಭೂಷ ದಶ'ಧ ವೇಷಧಾರಿ 1ತೃತಿಯರಾಮಕೋಟಿ ಕೂಡು ಭಕ್ತತತಿಗೆ ಲಭಿಸುವಂತೆಮಾಡುಪತಿತಪಾವನ ಪದ್ಮನಯನ ಶತಧೃತಿ ಶಿವಸೇವ್ಯಚರಣಾಸತತವೂ ತವಸೇವೆಗೆ ಮನ 'ತವತೋರಿಸಿ ಸಲಹೋ ಶೌರಿ 2ಭರತಪೂರ್ವಜ ದೀನಪ್ರೇಮಾ ದನುಜಹರಣಧುರೀಣ ನಿಸ್ಸೀಮಕರಿಧ್ರುವ ಪ್ರಹ್ಲಾದ ಶಬರೀ ನರಸತಿಪರಮಾರ್ಥದಾಯಕನಿರುಪಮಾನದ ರಾಮಕೋಟಿಯಾಚರಣ ಕೀರ್ತಿಯ ನಿಲಿಸು ಧೊರೆಯೆ 3ಧಾರುಣೀ ಚನ್ನಪಟ್ಣೇಶಾ ಲಕ್ಷ್ಮೀನಾರಾಯಣ ಕಾಯೊ ಶ್ರೀಶಾಮಾರಸುಂದರ ರಾಮನಾಮವ ಹಾರವಾಯಾಗಿ ಸಮರ್ಪಿಸಿದೆವುಕೋರಿಕೆ ಸಪ್ತೋತ್ಸವಂಗಳು ಪೂರ್ತಿಮಾಡುವರೆಂದು ನಂಬಿದೆ 4ಗುರುತುಲಸೀರಾಮಸ್ವರೂಪ ನಿಮ್ಮಕರುಣದಿಂದಲಿಸಾರಿಭೂಪಾಜರುಗಿಸಿದಿರೀ ಜಪಾಧ್ವರವನು ಮುರಹರೀಮದ್ದುರಿತ ಹರಣನೆನಿರತಭಕ್ತಿಯ ಕೊಟ್ಟು ಪ್ರಜಗಳುನುದ್ಧರಿಸುವ ಕರ್ತವ್ಯ ನಿನದೇ 5ಭೂ'ುಜನರ ಗರುಡುತುರಗಾ ರಂಗಸ್ವಾ'ುದಾಸೊಲ್ಲಾಸಾ ಈಗಪ್ರೇಮ ತೋರಿಸಬೇಕು ಬೇಡುವೆ ಕಾ'ುತಾರ್ಥದ ಕಲ್ಪಭೂಜಸೋಮಜಿತಮುಖ ಸಕಲ ಸುಗುಣಸ್ತೋಮ ತುಲಸೀದಾಮ ಧರಣಾ * 6* 20-8-1933 ಎಂದು ದಿನಾಂಕ ಇದೆ.(ಈ) ರಂಗಸ್ವಾ'ುದಾಸರನ್ನು ಕುರಿತ ಕೆಲವು ಕೃತಿಗಳು
--------------
ಮಳಿಗೆ ರಂಗಸ್ವಾಮಿದಾಸರು
ಗಣೇಶ ವಂದಿಸುವೆ ಕರದ್ವಂದ್ವ ಜೋಡಿಸಿ ಪ ವಂದಿಸುವೆ ಒಂದೆ ಮನದಲಿ ನಂದಿವಾಹನ ಕಂದ ಗಣಪಗೆಬಂದ ಭಯಗಳ ಹಿಂದೆ ಮಾಡುತ ಸಿಂಧುಶಯನನ ತೋರಿಸೆಂದು ಅ.ಪ. ಅನುದಿನ ಪಾಶ ಅಂಕುಶದಾರನೇ 1 ವಾಕು ಲಾಲಿಸಬೇಕೊ ಪ್ರಭುವೇಕಾಕುಜನ ಸಹವಾಸದಿಂದಲಿ ನೂಕಿಸೆನ್ನನು ಏಕದಂತನೆಏಕಭಾವದಿ ಭಜಿಪ ಭಕುತರೋಳ್ಹಾತನೆನ್ನಗಜವದನನೆ ಬಾ ತೈಜ ವಿಶ್ವಭಾಜಕನೆ ತೋರೋ ಪಾದಭುಜ ಚತುಷ್ಟನೆ ತ್ರಿಜಗವಂದ್ಯನೆ ಭಜಿಪ ಭಕುತರ ಅಘವ ಕಳೆವನೆನಿಜೆ ಸುಜನರ ...ಭುಜಗ ಭೂಷಣ ಕಾಮನನುಜನೆ 2 ವಾರಿಬಂಧನ ಪೂರ್ವದಿ ಶ್ರೀ ರಾಮಚಂದ್ರನು ಪ್ರೀತಿಲಿ ಪೂಜಿಸಿದದುರುಳ ರಾವಣ ಮೆರೆದು ಕೆಟ್ಟನು ಧರೆಯಗೆದ್ದನುಜರಿದು ಚಂದ್ರನುವಿದ್ಯ ಪ್ರದಾಯಕನೆ ಮನ ತಿದ್ದು ಬೇಗನೆ ಬಿದ್ದು ಬೇಡುವೆ ಸಾಧುವಂದ್ಯನೆಮಧ್ವ ಮತದೊಳು ಶ್ರದ್ಧೆ ಪುಟ್ಟಿಸೊ ಮಧ್ವವಲ್ಲಭತಂದೆ ವರದ ವಿಠಲ ಪ್ರಿಯ ಸಿದ್ಧಿದಾಯಕ
--------------
ಸಿರಿಗುರುತಂದೆವರದವಿಠಲರು
ಗಿರಿಯ ತಿಮ್ಮಪ್ಪ ವಾಹನಗಳೇರಿ ನಿತ್ಯಾ ಮೆರೆದು ಚತುರ ಬೀದಿ ತಿರುಗಿ ಬಪ್ಪುದು ನೋಡೆ ಪ ಸರಸಿಜಭವಾಗ್ರಜರುಳಿದವಾರು ವರ ಸಕಲ ಮನೋಭೀಷ್ಟ ಕೈಕೊಳುತಾ ನೆರೆದು ಸುತ್ತಲು ತಮ್ಮ ಭಕುತಿಯಲಿ ಸೂಸುತ್ತ ಹರುಷ ವಾರಿಧಿಯಾಳು ಮುಳಗಿದಟ್ಟಿಡಿಯಿಂದಾ 1 ಸುತ್ತಲುದರೆ ಬಿಂದುಗಳೊಂದು ಮುತ್ತಿನ ಸೂರ್ಯಪಾನಾ ಪತಾಕೆಗಳು ಬೀ ಸುತ್ತಲಿಪ್ಪದು ಚಾಮರ ಪಂಜುಗಳೆಸೆಯೆ 2 ದಂಡಿಗೆ ತಾಳ ಬೆತ್ತವ ಪಿಡಿದು ನಿಂದು ತಂಡ ತಂಡದಲಿಂದ ಮಹಿಮೆಯನ್ನು ಕೊಂಡಾಡುತ ಮನ ಉಬ್ಬಿ ಮಹೋತ್ಸವದಲ್ಲಿ ತೊಂಡರು ಹರಿದಾಡಿ ಹಾಡಿ ಪಾಡುತಲಿರೆ3 ಪವನ ಗರುಡ ಶೇಷ ಸಿಂಹ ಮಂಟಪ ಮತ್ತೆ ರವಿ ಶಶಿ ತುರಗ ಅಂದಣ ಮಿಕ್ಕಾದ ನವರಾತ್ರಿಯೊಳಗೆಲ್ಲ ವಾಹನನಾದ ಅಂ ದವನಾರು ಬಣ್ಣಿಪರು ಸಕಲ ಭೂಷಿತವಾಗೆ 4 ಚಿನುಮಯ ರೂಪ ವಿಚಿತ್ರ ಮಹಿಮ ದೇವ ನೆನೆದವರ ಹಂಗಿಗೆ ಸಿಲುಕುವಾ ಘನಗಿರಿ ತಿರ್ಮಲ ವಿಜಯವಿಠ್ಠಲರೇಯಾ ದನುಜದಲ್ಲಣನೆಂಬೊ ಬಿರಿದು ಪೊಗಳಿಸುತ್ತ 5
--------------
ವಿಜಯದಾಸ
ಗುಂಜಾ ನರಸಿಂಹಾ-ಪಾಹಿ ಮಾಂ ಪಾಹಿ ಪ ಅಜಭವ ಫÀಣಿ ದ್ವಿಜರಾಜ ಸುಪೂಜಿತ ತ್ರಿಜಗದೊಡೆಯ ನರಹರಿಯೆ-ದುರಿತ ಹರಾ ಅ.ಪ ಪಟುತರ ಭಾಧೆ ಸಂಕಟಪಡುತಲಿ ಸುರ- ಕಟಕ ನುತಿಸಿ ಕೋಟಿತಟಿತ್ಕಾಯನೆ ಕೋಟಿ ಖಳರೆದೆ ಕುಟ್ಟಿ ಯಮಪುರ ಕಟ್ಟಿ ದಿಟ್ಟತನದಲಿ ನಿಶಾಚರನಳುಹಿದ 1 ಸಿಡಿಲೋಪಮ ಘುಡು ಘುಡಿಸುತ ಕಿಡಿಯ ಕಡೆಗಣ್ಣಿಂದಲಡಿಗಡಿಗುಗುಳುತ ಕೂಡಿನಖಗಳ ನೀಡಿಶಿರವನ- ಲ್ಲಾಡಿಸಿ ಜಡಜಂಗಮರ ನಡುಕ ಬಿಡಿಸಿದೆಯೊ2 ಅಡಿಗಡಿಗೆಡರನು ಪಡುತಿಹ ಹುಡುಗನ ದೃಢತರ ಭಕುತಿಯ ನುಡಿಯುನು ಕೆÉೀಳುತ ನೋಡಿ ಅಭಯವ ನೀಡಿ ನೀ ದಯ ಮಾಡಿ ಬಿಡುಗಣ್ಣರನು ಬಿಡದೆ ಸಲಹಿದೆಯೊ 3 ಕೇಳಿ-ಹರುಷವ ತಾಳಿ-ದನುಜರ ಧೂಳೀಪಟಮಾಡಿ ನಲಿದು ನಿಂದಾಡಿದೆ 4 ಸಿಂಧುಶಯನ ಭವಬಂಧವಿಮೋಚಕ ಇಂದಿರೆಯರಸ ಶ್ರೀ ವೇಂಕಟೇಶ ನೀ ಬಂದೂ ಸ್ತಂಭದಿ ನಿಂದೂ ಭಕುತರ ಬಂಧೂ ಸುರವೃಂದಕೆ ಆನಂದವ ನೀಡಿದ 5 ಕಡಲುಗಳೇಳಡಿಗಡಿಗುಕ್ಕುತ ಪಥ ತಪ್ಪಿ ಬೀಳುತಲಿರೆ ದಾಡಿ ಕುಣಿದಾಡೀ ಸ್ಮಶ್ರುಗಳ ತೀಡಿ ಬಡಬಾನಲಲ್ಲಾಡಿಸಿ ನಿಂದ 6 ಪರಿಪರಿ ಸುರರವಯವಗಳನು ಧರಿಸಿ ಉರುತರ ಕ್ರೀಡೆಯ ಮಾಡಿ ಪ್ರಳಯದಿ ತೋರಿ ಧಿಕ್ಕರಿಸಿ ತಾಳಿ ಹರುಷದಿ ಕೇಳಿಯೊಳು ಉರಗಾದ್ರಿವಾಸವಿಠಲ ನೀ ನಿಂದೆಯೊ 7
--------------
ಉರಗಾದ್ರಿವಾಸವಿಠಲದಾಸರು
ಗೋಕುಲ ಆನಂದ ಲೀಲಾ | ಘನ ಸುಂದರ ರುಕ್ಮಿಣಿಲೋಲ ಶ್ರೀಕರ ಶುಭದಾಯಕ ವರ | ಗೋಪಾಲ ಬಾಲ ಪ ಮಣಿರಂಜಿತ ಭೋಗರಾಗವಿಮಲ ಶೃಂಗಾರಶೀಲ ಸುರಪಾಲ ಸಂಸೇವ್ಯ ಗಾನಲೋಲ ಅ.ಪ ಪದ್ಮಲೋಚನ ಪರಿವೃತ ಶರಣವತ್ಸಲ ಸರ್ವಜ್ಞ ಸುಭಾಷಿತ ಸದ್ಭಾವ ವಿನಯಾದಿ ಭೂಷಿತ ಚಿತ್ರ ವಿಚಿತ್ರ ಕರ್ಷಿತ ಸೂತ್ರಾ ಮನಸಿಜ ಗಾತ್ರಾ | ಸುವಿನೀತ ಗೋಪೀನಂದನ 1 ಮಣಿಪೀಠ ಮಂಡಿತಾ | ಕಿರೀಟ ಮಣಿಮಯ ರಾರಾಜಿತ | ಗೋಪಿಕಾನತ ಪಾಂಡವಪಕ್ಷ ದನುಜವಿಪಕ್ಷ |ಕಮಲದಳಾಕ್ಷ ದಾನವಶಿಕ್ಷ ಶ್ರೀವನಮಾಲಿಕಾವಕ್ಷ | ಮಾಂಗಿರಿನಾಥಾ ದೀನರಕ್ಷ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋವಿಂದ ಹರಿ ಗೋವಿಂದ ಪ ಗೋವಿಂದ ಪರಮಾನಂದ ಮುಕುಂದಅ ಮಚ್ಛ್ಯಾವತಾರದೊಳಾಳಿದನೆ - ಮಂದರಾಚಲ ಬೆನ್ನೊಳು ತಾಳಿದನೆಅಚ್ಛ ಸೂಕರನಾಗಿ ಬಾಳಿದನೆ - ಮದಹೆಚ್ಚೆ ಹಿರಣ್ಯಕನ ಸೀಳಿದನೆ1 ಕುಂಭಿನಿ ದಾನವ ಬೇಡಿದನೆ - ಕ್ಷಾತ್ರ-ರೆಂಬುವರನು ಹತ ಮಾಡಿದನೆಅಂಬುಧಿಗೆ ಶರ ಹೂಡಿದನೆ - ಕಮ-ಲಾಂಬಕ ಗೊಲ್ಲರೊಳಾಡಿದನೆ 2 ವಸುದೇವನುದರದಿ ಪುಟ್ಟಿದನೆ - ಪಲ್‍ಮಸೆವ ದನುಜರೊಡೆಗುಟ್ಟಿದನೆಎಸೆವ ಕಾಳಿಂಗನ ಮೆಟ್ಟಿದನೆ - ಬಾ-ಧಿಸುವರ ಯಮಪುರಕಟ್ಟಿದನೆ 3 ಪೂತನಿಯ ಮೈ ಸೋಕಿದನೆ - ಬಲುಘಾತದ ಮೊಲೆಯುಂಡು ತೇಕಿದನೆಘಾತಕಿಯನತ್ತ ನೂಕಿದನೆ - ಗೋಪವ್ರಾತ ಗೋಗಳನೆಲ್ಲ ಸಾಕಿದನೆ4 ಸಾಧಿಸಿ ತ್ರಿಪುರರ ಗೆಲಿದವನೆ - ಮ್ಲೇಚ್ಛರಛೇದಿಸೆ ಹಯವೇರಿ ಕೆಲೆದವನೆಸಾಧುಸಂತರೊಡನೆ ನಲಿದವನೆ - ಬಾಡದಾದಿಕೇಶವ ಕನಕಗೊಲಿದವನೆ 5
--------------
ಕನಕದಾಸ