ಒಟ್ಟು 501 ಕಡೆಗಳಲ್ಲಿ , 76 ದಾಸರು , 406 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏತಕೆ ಒಣಭ್ರಾಂತಿ ತಿಳಿಯದು ಮೂರುದಿನದ ಸಂತಿ ನೀತಿಗೆಟ್ಟು ಸತಿಮೋಹದಿ ಕುಳಿತೆಮದೂತರೆಳೆಯುವಾಗೇನಂತಿ ಪ ಬರುವಾಗೊರ್ವಬಂದಿ ಬರುತಲೆ ಮಂದಿ ಮಕ್ಕಳೆಂದಿ ಇರು ಇರುತೆಲ್ಲ ನನ್ನದೆಂದಿ ಮರೆವಿನ ಆಲಯದೊಳು ನಿಂದಿ ಕರುಣವಿಲ್ಲದೆತುಸು ಹೆಡತಲೆಮೃತ್ಯು ಮುರಿದು ತಿನ್ನುವಾಗ್ಯಾರಿಲ್ಲ ಹಿಂದೆ 1 ತನುಜನರು ಇವರು ಧನಕನಕಿರುವತನಕ ಹಿತರು ಜನಕಜನನಿಯರು ಕೊನೆಗೆ ಸಂಗಡ ಬರರ್ಯಾರು ಕನಿಕರವಿಲ್ಲದೆ ಕಾಲದೂತರು ಘನಬಾಧೆಪಡಿಸಲು ಬಿಡಿಸರೋರ್ವರು 2 ಭೂಮಿ ಸೀಮೆಯೆಲ್ಲ ಈ ಮಹರಾಜ್ಯ ಭಂಡಾರ ಸುಳ್ಳು ಪಾಮರ ಸಂಸಾರ ಕಾಮಿಸಿ ಕೆಡಬೇಡೇಲೆ ಮಳ್ಳ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಭಜಿಸಿ ಭವಗೆಲಿದು ನೀ ಬಾಳೋ3
--------------
ರಾಮದಾಸರು
ಏನಿದು ಎಲೆ ಮನ ಏನು ಇದು ನೆನೆಸಿದರೆದೆ ಝಲ್ಲೆನುವುದು ಪ ನಾನು ಯಾರೆಂಬುವ ಖೂನವ ತಿಳಿಯದೆ ಶ್ವಾನನಂದದಿ ಕೆಟ್ಟ ಹೀನಭವಕೆ ಬಿದ್ದು ಅ.ಪ ಏತಕ ಬಂದದ್ದೀ ಜನುಮಕ್ಕೆ ತಲೆಯೆತ್ತಿ ನೋಡದೆ ಕೂತಿಮುಂದಕೆ ನೀತಿಗೇಡಿ ಮಹಪಾತಕನು ಯಮ ದೂತರು ನಿಂತಾರೊ ಎಳಿಲಿಕ್ಕೆ 1 ಬೀಳಬೇಡೋ ಮಾಯದ ಜಾಲಕ್ಕೆ ಘಳಿಲನೆ ತಿಳಿತಿಳಿ ಸುಲಭದಿ ಸಮಯವು ಬಲಿಸಿ ಹರಿಯ ಧ್ಯಾನ ಕಾಲನ ನೂಕೋ 2 ಹುಟ್ಟಿಬಂದಿ ಶಿಷ್ಟಪದ ಪಡಿಲಿಕ್ಕೆ ಮರ್ತುಬಿಟ್ಟಿ ನಿಂತಿ ಬಿಟ್ಟಗಂಟ್ಹೊರಲಿಕ್ಕೆ ಭ್ರಷ್ಟಗುಣವ ಬಿಟ್ಟು ದಿಟ್ಟರಾಮನ ಗಟ್ಟ್ಯಾಗಿ ನಂಬಿ ಮುಟ್ಟು ಮುಕ್ತಿಪದಕೆ3
--------------
ರಾಮದಾಸರು
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ
ಏನು ಬರುವುದೊ ಸಂಗಡೇನು ಬರುವುದೊ ಪ ದಾನ ಧರ್ಮ ಮಾಡಿ ಬಹು ನಿಧಾನಿ ಎನಿಸಿಕೊಳ್ಳೊ ಮನುಜಅ ಮಂಡೆ ತುಂಬ ಬಂಧುಬಳಗಕಂಡು ಬಿಡಿಸಿಕೊಂಬರಾರೊ ದುಂಡ ಯಮನ ದೂತರೆಳೆಯೆಬಂಡಿ ತುಂಬ ಇದ್ದ ಧನವು ಹಿಂದೆ ಉಳಿವುದಲ್ಲೊ ನಿನ್ನಅಂಡಿಕೊಂಡು ಬರುವ ವಸ್ತು ಕೀರ್ತಿ ಅಪಕೀರ್ತಿ ಎರಡೆ1 ಎನ್ನದೆಂದು ತನ್ನದೆಂದು ಹೊನ್ನು ಹೆಣ್ಣು ಮಣ್ಣಿಗಾಗಿಬನ್ನಪಟ್ಟು ಬಾಯಿಬಿಡುವೆ ಬರಿದೆ ಮೋಹದಿಚೆನ್ನ ಮನದಿ ಪರಹಿತಾರ್ಥ ಮಾಡಿ ಪುಣ್ಯಪಡೆಯೊ ನೀನುಇನ್ನು ಮುಂದೆ ಕಿತ್ತು ತಿಂಬ ಕೂಪದಲ್ಲಿ ಕೆಡಲು ಬೇಡ ಮನುಜ2 ಬತ್ತಲಿಂದ ಬರುತ್ತಿಹರು ಬತ್ತಲಿಂದ ಹೋಗುತಿಹರುಕತ್ತಲೆ ಕಾಲವನು ಬೆಳಕು ಮಾಡಿ ಹೊತ್ತುಗಳೆವರುಸತ್ತರಿಲ್ಲ ಅತ್ತರಿಲ್ಲ ಹೊತ್ತುಕೊಂಡು ಹೋಹರಿಲ್ಲಿಮತ್ತೆ ದೇಹ ಮಣ್ಣುಗೂಡಿದಂತೆ ಕೆಡಲು ಬೇಡ ಮನುಜ3 ಬಟ್ಟೆ ನಿನಗೆ ಹೊಂದಲಿಲ್ಲಕಟ್ಟ ಕಡೆಗೆ ದೃಷ್ಟಿ ನೋಟ ಬಟ್ಟ ಬಯಲು ಆಗುತಿಹುದು 4 ಕಾಲ ಕಳೆದೆ - ಮುಂ-ದರಿದು ನೋಡು ನರರ ತನುವು ದೊರಕಲರಿಯದುನೆರೆ ಮಹಾಮೂರ್ತಿ ಒಡೆಯ ಬಾಡದಾದಿಕೇಶವನಲಿಟ್ಟು ಭಕುತಿಚರಣ ಭಜಿಸಿ ಚಂಚಲಳಿಸಿ ವರವ ಪಡೆದು ಹೊಂದು ಮುಕುತಿ 5
--------------
ಕನಕದಾಸ
ಏಳಯ್ಯ ಗುರುವೆ ಬೆಳಗಾಯಿತು ಏಳಯ್ಯ ಗುರುರಾಯ ಏಳಯ್ಯ ಶುಭಕಾಯ ಏಳು ಮಹರಾಯ ಏಳು ಎನ ಜೀಯಾ ಪ ಶೀಲ ನಿನ್ನ ಭಕ್ತರು ಸಾಲು ಸಾಲಾಗಿ ನಿಂತಿಹರೋ ಅ.ಪ ಉದಯಾದ್ರಿ ಶೃಂಗದಲಿ ಉದಿಸಿದನು ಭಾಸ್ಕರನು ಸದಮಲ ಬುಧರೆಲ್ಲ ಮುದದಿಂದಲೀ ಎದ್ದು ನದಿಯ ಸ್ನಾನವ ಮಾಡಿ ಉದಕ ಪುಷ್ಪಗಳಿಂದ ಪಾದ - ಸಂದರುಶನಕೆ ಬಂದಿಹರೋ 1 ನಿತ್ಯ ಭಜಿಸುವ ಜನರೆಲ್ಲ ಹೊತ್ತು ಮೀರಿತು ಎಂದು ಚಿತ್ತ ಶುದ್ಧಿಯಲಿಂದ ಉತ್ತುಮಾರ್ಹಣೆಗಳಾ ತಮ್ಮ ನೆತ್ತಿಯಿಂದಾ ಪೊತ್ತು ಜತ್ತಾಯುತಾಗಿ ನಿಂತಿಹರೋ ಉತ್ತಮಾ ನಿನ ನಿದ್ರೆ ಹೊತ್ತು ಮೀರ್ಯಾಯಿತೊ ಪಾದ ಒತ್ತಿ ಬೋಧಿಸುತಿಹರೋ ಚಿತ್ತಕ್ಕೆ ತಂದು ತ್ವರಿತದಿ ಏಳೋ 2 ವಿಮತಾದ್ರಿ ಕುಲಿಶನೇ ವಿಮಲ ಗಾತ್ರನೇ ಏಳೋ ದಾತ ದಿವಿಜದೃಮನೆ ವಾರಿಧಿ ಎಳೋ ತಾಮರಸಾಂಬಕನೆ ಏಳೋ ಆಮಯ ಧ್ವಂಸಕÀ ನೀನೇಳೋ ಗೋಮತೀ ಕುಮುದ ಸೋಮ ಸಾಂದ್ರನೆ ಏಳೋ - ಶ್ರೀ ಪಾದ ಭೃಂಗನೇ ಏಳೋ ಯಾಮ ಮೀರಿತು ವಿಶ್ವನಿಯಾಮಕ ದೂತನೇ ಸಾಮಗಾಯನ ಲೋಲ ರಮಾ ವಲ್ಲಭಪ್ರೀಯ ಗುರುರಾಜವರ್ಯ 3 ಮೌನಿ ಕುಲರನ್ನ ಮಾನ ನಿಧಿಯೇ ಎನ್ನ ಬಿನ್ನಪವ ಕೇಳಯ್ಯ ಜೀಯಾ ನಿನ್ನ ಭೋಧಿಪಕನ್ಯ ಜನರುಂಟೆ ನಿನ್ನಿಂದ ನೀ ಚನ್ನಾಗಿ ಏಳೋ ಮುನೆÀ್ನ ಮಹ ಕಾರ್ಯಂಗಳೂ ಘನ್ನವಾಗಿರುತಿಹವು ನಿನ್ಹೊರತು ಇನ್ನಾರು ಮಾಳ್ಪರು ಎನ್ನ ನುಡಿ ಈಗ ಚನ್ನಾಗಿ ಮನದಿ ತಂದು ಮನ್ನಿಸೀ ಪೊರೆಯೊ ಧ್ವರಿಯೇ 4 ಸೋತು ಮಲಗಿದೆಯಾ ಪಾತಕಾಂಬುಧಿ ಪೋತನೇ ಮಾತರಿಶ್ವನ ತಾತ ಪಾದ ಭವ ಯುಗ್ಮದಲಿ ಸಂ - ಜಾತವಾಗಿಹ ಸುಧಾ - ಪೀತ ಕಾರಣ ಮದಾ ಸಂ - ಭೂತದಿಂದ ಮಲಗಿದೆಯಾ ಭೂತನಾಥನ ಗುರು ಜಗ - ನ್ನಾಥ ವಿಠಲನ ದೂತ ನಾನೆಂಬ ಗರುವಿಂದ ಮಲಗಿದೆಯಾ 5
--------------
ಗುರುಜಗನ್ನಾಥದಾಸರು
ಏಳು ಲೋಕದಲಿ ಹೇಳುವರು ಅವರಕೀರ್ತಿಕೇಳಿ ಕೇಳಿ ಬಲ್ಲೆವಮ್ಮ ದೂತೆ ಬಹಳ ಬಹಳ ಭಾಗ್ಯವೇನೆ ದೂತೆ ಹೇಳಲ್ವಶವಲ್ಲವೇನೆ ದೂತೆ ಪ. ಕೃಷ್ಣನಂಘ್ರಿ ಕಮಲದಲೆ ನಿಷ್ಠನಾಗಿ ಧರ್ಮರಾಯ ಅಷ್ಟು ರಾಜ್ಯನಾಳುವನೇನ ದೂತೆ 1 ದಿಟ್ಟ ಧರ್ಮರಾಯ ದ್ರವ್ಯ ಶ್ರೇಷ್ಟ ದ್ವಿಜರಿಗೆ ಕೋಟಿಕೊಟ್ಟು ಕೊಟ್ಟು ಕಳಿಸೋನೇನೆ ದೂತೆ 2 ಮಾಧವನ ಭಕ್ತರಿಗೆ ಆದರದಿ ದ್ರವ್ಯ ಸಹಿತಗೋದಾನಗಳು ಕೊಡುವೊನೇನೆ ದೂತೆ 3 ನೀಲವರ್ಣನ ಭಕ್ತರಿಗೆ ಸಾಲಿಗ್ರಾಮ ಕೋಟಿ ಲಕ್ಷಮ್ಯಾಲೆ ದ್ರವ್ಯ ಕೊಡುವೋನೇನೆ ದೂತೆ 4 ಶ್ಯಾಮವರ್ಣನ ಭಕ್ತರಿಗೆ ಪ್ರೇಮದಿಂದ ದ್ರವ್ಯ ಸಹಿತ ಭೂಮಿದಾನ ಕೊಡುವೊನೇನೆ ದೂತೆ5 ಪನ್ನಂಗಶಯನನ ಭಕ್ತರ ಮನ್ನಿಸಿ ದ್ರವ್ಯಗಳಿಂದ ಕನ್ಯಾದಾನ ಮಾಡೋನೇನೆ ದೂತೆ 6 ಉತ್ತಮ ದ್ವಿಜರಿಗೆ ರಾಯ ಮುತ್ತು ಮಾಣಿಕರತ್ನ ಸಹಿತಛತ್ರ ಚಾಮರ ಕೊಡುವೋನೇನೆ ದೂತೆ 7 ಆನೆ ಕುದುರೆ ಅಂದಣವು ನಾನಾ ಭೂಷಣಗಳು ವಸ್ತ್ರಜ್ಞಾನಿಗಳಿಗೆ ಕೊಡುವೊನೇನೆ ದೂತೆ 8 ಸಂಪತ್ತು ದ್ವಿಜರಿಗೆ ಕೊಟ್ಟು ದಂಪತ್ತು ಪೂಜೆಗಳ ಮಾಡಿಗುಂಪು ಗುಂಪು ಕಳುಹೋನೇನೆ ದೂತೆ 9 ಮಿತಿ ಇಲ್ಲದೆ ಅನ್ನ ಮಧ್ವಮತದ ಜನಕೆ ಕೊಟ್ಟುಲಕ್ಷ್ಮೀಪತಿಗೆ ಅರ್ಪಿಸುವನೇನೆ ದೂತೆ 10 ಯದುಪತಿಯ ಭಕ್ತರಿಗೆ ಉದಕ ಪಾತ್ರೆ ಕೊಟ್ಟುರಾಯ ಅಧಿಕ ಕೀರ್ತಿ ಪಡೆಯುವನೇನೆ ದೂತೆ11 ತುಷ್ಟರಾಗಿ ಆಶೀರ್ವಾದ ಕೊಟ್ಟುರಾಯಗೆ ದ್ವಿಜರು ಕೃಷ್ಣಗರ್ಪಿಸೆಂಬೋರೇನೆ ದೂತೆ 12 ರತಿ ಇಟ್ಟು ರಾಮೇಶನಲ್ಲೆ ವ್ರತವ ಕೋಟಿ ಮಾಡಿರಾಯಕೃತ ಕೃತ್ಯನಾಗುವನೇನ ದೂತೆ13
--------------
ಗಲಗಲಿಅವ್ವನವರು
ಒಡಿಯಾ ನಿನ್ನಡಿಗಳಿಗೆ ಬಿಡದೆ ನಾ ನಮೋ ಎಂಬೆ ಕೊಡು ಎನಗೆ ದೃಢ ಪದವಿ ಕಡಲಶಯನಾ ಪ ಪಿತನ ತೊಡಿಯ ಮೇಲೆ ಕುಳಿತಿರಲು ಮಲತಾಯಿ ಅತಿ ರೋಷದಿಂದವನ ಹೊಯಿದೆಬ್ಬಿಸೆ ಖತಿಯಿಂದ ವನಕೆ ಪೋಗಿ ನಿನ್ನ ಪೂಜಿಸಲು ಮತಿವಂತನ ಮಾಡಿ ಧ್ರುವಪದವಿ ಕೊಡಲಿಲ್ಲವೆ 1 ತಂದೆ ಬಾಧಿಸೆ ಧೃತಿಗೆಡದೆ ನರಹರಿ ಗೋ ವಿಂದ ನಾರಾಯಣ ಕೃಷ್ಣ ವಿಷ್ಣು ಇಂದಿರಾರಮಣ ಇನಕುಲತಿಲಕ ಎಂದೆನಲು ಕಂದನಿಗೆ ಕೈವಲ್ಯಪದವಿ ಕೊಡಲಿಲ್ಲವೇ2 ಜಾತಿಧರ್ಮವ ಬಿಟ್ಟು ಅಜಮಿಳನು ಚಂಡಾಲ ಜಾತಿ ವಧುವಿಗೆ ಸೋತು ಕೆಟ್ಟು ಯಮನ ದೂತರನ ನೋಡಿ ಕಂಗೆಟ್ಟು ಮಗನನು ಕರಿಯೆ ಪ್ರೀತಿಯಲಿ ವೈಕುಂಠ ಪದವಿ ಕೊಡಲಿಲ್ಲವೇ 3 ವನಿತೆ ಪತಿವ್ರತವಾನಂತನನುಚರಿಸಿ ಬಂದಿರಲು ಮನದ ಖೇದವ ತಾಳಿ ಹರಿದು ಬಿಸುಟೆ ಮುನಿಪುಂಗ ಅಡವಿಯನು ತೊಳಲಿ ನೆಂದು ಬಿದ್ದಿರಲು ಪುನರ್ವಸು ಸ್ಥಾನವು ಕೊಡಲಿಲ್ಲವೆ4 ಶೌರ್ಯದಲಿ ಅಬ್ಧಿಯನು ಹಾರಿ ಲಂಕೆಯ ಸುಟ್ಟು ಧೂರ್ಯದಲಿ ರಕ್ಕಸರನೊರಿಸಿ ಬಿಸುಟೂ ಕಾರ್ಯದಲಿ ಹನುಮಂತ ನಿನ್ನ ಮೆಟ್ಟಿಸೆ ಒಲಿದು ಸೂರ್ಯಭಾಂದವಗೆ ಜನಪದವಿ ಕೊಡಲಿಲ್ಲವೆ 5 ಸೋದರಗೆ ಬುದ್ದಿಯನು ಪೇಳೆ ಕೇಳದೆಯಿರಲು ಪಾಧಾರಿ ದಾಟಿ ನಿಮ್ಮ ಸೇವಿಸಿ ಕಾದಿ ರಾವಣನ ಛೇದಿಸಿ ಲಂಕಾಪುರ ಪದವಿ ಪರಿಯಂತ ಕೊಡಲಿಲ್ಲವೆ 6 ಚಿತ್ತದೊಳು ಆವಾಗ ನಿನ್ನ ಧ್ಯಾನವ ಮಾಡಿ ವಿತ್ತಾದಿ ದಾನಗಳು ಮಿತಿಯಿಲ್ಲದೇ ಅತ್ಯಂತ ಕೊಡುವವನ ಮೂರು ಪಾದವ ಬೇಡಿ ಭಕ್ತಗೆ ನಲಿದು ಸುರಪದವಿ ಕೊಡಲಿಲ್ಲವೆ 7 ಮಾನಿನಿಯ ಸೀರಿಯನು ಸಭೆಯೊಳಗೆ ದುರುಳರು ಅಭಿ ಮಾನ ಭಂಗವ ಮಾಡಿ ಸುಲಿವುತಿರಲು ಶ್ರೀನಾಥ ಕೇಶವ ಮುಕುಂದನೆಂದು ಮೊರೆ ಇಡೆ ನೀನರಿತು ಅಕ್ಷಯಾಂಬರ ಕೊಡಲಿಲ್ಲವೆ8 ಬಡತನ ಉಳ್ಳವನಾಗಿ ಕ್ಲೇಶದಲಿ ಸುಧಾಮ ನಡುಗುತಲಿ ನಿನ್ನ ಪಟ್ಟಣಕೆ ಬರಲು ಹಿಡಿತುಂಬಿ ಅವಲಕ್ಕಿಗೆ ಸಂತೃಪ್ತನಾಗಿ ಕಡೆಯಿಲ್ಲದೈಶ್ವರ್ಯ ಪದವಿ ಕೊಡಲಿಲ್ಲವೆ 9 ಸರಸಿಯೊಳು ಬಾಲಕನ ನೆಗಳಿ ಪಿಡಿದು ನುಂಗೆ ಗುರುದಕ್ಷಿಣವ ಬೇಡೆ ಸಾಂದೀಪನು ಭರದಿಂದ ಪೋಗಿ ಕೃತಾಂತನೊಳು ಭೂ ಸುರಗೆ ಸುಪುತ್ರ ಪದವಿ ಕೊಡಲಿಲ್ಲವೆ 10 ಭುಜಕರೆಲ್ಲರು ನಿನಗೆ ಭಾಗ್ಯವನು ಕೊಡಲಿಲ್ಲ ಭಜಿಸಿದರವರು ತಮ್ಮ ತಕ್ಕ ತೆರದಿ ಭಜಿಸುವೆನು ನಿನ್ನ ತಕ್ಕಂತೆ ದೃಢ ಪದವಿಕೊಡು ಸಿರಿ ವಿಜಯವಿಠ್ಠಲನೆ11
--------------
ವಿಜಯದಾಸ
ಒಂದಾನು ಒಂದು ದಿನ ಶಿಂಧುವಿನೊಳ್ ನೆರೆದು ಬಂದಾರು ದೇವತೆಗಳುವೃಂದಾವು ದುಷ್ಟ ಜನರಿಂದಾಲೆ ಭೂಮಿ ನೊಂದಾಳುಎಂದುಸುರಿತಾ ಪ ಕಂದರ್ಪತಾತ ನಿನಗೊಂದಿಸಿ ಬೇಡುವೆನು ಛಂದಾದಸೂರ್ಯಸುತನಾಮಂದಿರದೋಳ್ ಜನಿಸಿ ನಂದಾದಿ ಗೋಕುಲದಿ ನಿಂದಾತ್ಮಲೀಲೆ ತೋರೊ ಅ.ಪ. ಅಂದಾಡಿದೂತ ಸುರವೃಂದಾರ ವಾಕ್ಯಗಳ ಕಿವಿಯಿಂದಾಲೆಕೇಳಿ ಹರಿಯುಛಂದಾದಿ ನೀವುಗಳು ಮುಂದಾಗಿ ಜನಿಸುವದು ಹಿಂದಾಗಿನಾ ಜನಿಸುವೇಅಂದಾಡಿದಂಥ ಹರಿ ಸುಂದರಾ ಮಾತವನು ತಂದಾನುಬ್ರಹ್ಮ ಮನದೀಇಂದ್ರಾದಿಗಳಿಗೆಲ್ಲ ಅವನಂದದ್ದು ಪೇಳೆ ನಿಜಮಂದಿರಖೋಗಿರೆಂದಾ 1 ಎಲ್ಲಾ ಅಮರರೂ ನಿಜವಲ್ಲಾಭಿಯರು ಸಹ ಅಲ್ಲಲ್ಲೆಜನಿಸುತಿಹರೂಫುಲ್ಲಾಕ್ಷತಾ ಮಥುರೆಯಲಿಟ್ಟು ಗೋಕುಲದಿ ಮೆಲ್ಲಾನೆಬೆಳೆಯುತಿರಲುಅಲ್ಲಿದ್ದ ಗೋಪಿಯರು ಯಲ್ಲಾರು ತಾವು ನಿಜವಲ್ಲಾಭೆರೆಂದು ಹರಿಯೋಳ್‍ಎಲ್ಲಾನು ಬಿಟ್ಟು ಅವನಲ್ಲಿಗೆ ಸ್ನೇಹವನು ಉಲ್ಹಾಸಮಾಡುತಿರಲು 2 ವ್ರಜ ಕರ ವೃಂದಾವನದಲ್ಲಿಳುಹಿದಾ 3 ವಂದೀನ ರಾತ್ರಿ ರವಿನಂದಿನಿಯೋಳ್ ಹರಿಯುನಿಂದೂದಲಾಗ ಕೊಳಲುವೃಂದಾದರಾಗಗಳಿಂದಾಲೆ ಕೇಳಿ ವ್ರಜದಿಂದಾವರಾನಿಹರೂಮಂದೀರದೊಳಗೆ ನಿಜ ಕಂದಾರು ನಾಥಗಳು ಛಂದಾದವಸ್ತ್ರಂಗಳುವಂದಾನು ನೋಡದಲೆ ವಂದಾರು ಯಮುನೆಯಲಿಂದಾರುಮೈಯ್ಯ ಮರೆತು 4 ಬಂದೇವು ನಾವು ನಿಜ ಮಂದೀರ ಬಿಟ್ಟು ನಿಮ್ಮ ಸುಂದರಕೊಳಲ ಧ್ವನಿಗೇಛಂದಾದ ಸ್ಮರಣೆ ಸುಖದಿಂದಿತ್ತು ನಮಗೆ ದ್ವಿಜೇಂದ್ರೇತಕಾಯೋ ಯನಲುಅಂದಾವರಾಮಾತು ನಂದಾನುಸೂನ ದಯದಿಂದಾಲೆಕೇಳಿ ಹರಿಯೂಮುಂದಣಿಯಾಗ ಅವರಿಂದಾಲೆ ಕೂಡಿ ದಯದಿಂದಾಲೆನಲಿದು ಮರೆದೂ 5 ಬಂದಾನು ಮಥುರೆಯಲಿ ಕೊಂದಾನು ಮಾತುಳನೆತಂದೀಯಾ ಬಂಧನವ ಬಿಡಿಸೀಸಾಂದೀಪಗಿತ್ತು ಕಂದಾನಸೂನ ಕುರು ನಂದಾರಕೊಲ್ಲಿಸಿದನೂಇಂದ್ರತ್ವ ಜ್ವಾಲೆಗಳೂ ಅಂತಿತ್ತು ರಾಜ ಸುಖ ಸಂದೇಹ ಸಂತೋಷದೀಇಂದ್ರಾದಿ ಸರ್ವಸುರ ಸಂದೇಹ ಪ್ರಾರ್ಥಿಸಿದ ಒಂದೊಂದೆ ಮಹಿಮೆಗಳನೂ 6 ಛಂದಾಗಿ ಮಾಡಿದ್ವಶ ಮಡುಹಿಕರ ವೃಂದಾವಪಾಲಿಸಿದನೂನಂದಾತ್ಮ ಜಾತವು ಒಂದೊಂದೆ ಮಹಿಮೆಗಳ ತಂದೊಮ್ಮೆಮನದಿ ಸ್ಮರಿಸೀಬೆಂದಾವು ಪಾಪಗಳು ಬಂದಾವು ಸೌಖ್ಯಗಳುಸಂದೇಹವಿಲ್ಲನಿದರೋಳ್‍ಕಂದಾರ ಕೊಡುವ ಧನ ವೃಂದಾವು ಪೊರೆವಾ ಮಂದೀರವಿತ್ತು ಸಲಹುವ 7 ಇಂದೆನ್ನ ಮಾನಸದಿ ತಂದಾತ್ಮ ರೂಪವನೂ ಛಂದಾಗಿ ಸಂತೈಸಲೀನಂದಬಾಲಾಷ್ಟಕವನೂ ಇಂದುವಾವರು ಪಠಿಸುವಾ ಇಂದಿರೇಶನು ಪಾಲಿಸುವನೂ 8
--------------
ಇಂದಿರೇಶರು
ಕಂದ ಭೀಮಗೆ ಸರಿಯಿಲ್ಲ ಎಂದೆಂದಿಗೆ ಬಿಡದೆ ಬಂದಾ ಪ್ರತಿಬಂಧಕಗಳ ನಿತ್ಯ ಅರಿತುಳಿವಾ ಸತ್ಕೀರ್ತಿ ಪೊಳವ ಪ ಪ್ರಳಯಾಂತದಲ್ಲಿ ತಾನು ತಿಳಿದು ಸತ್ವ ಜೀವರ ನೆಲೆ ಗೊಳಿಸುವೆನೆಂದು ಬಲುಹರುಷದಲಿ ಜಲಜನಾಭನ ಚರಣಾಬ್ಜಕರಿಗೆ ಹಸ್ತ ಮುಗಿದು ಶ್ರುತಿವಿನುತ ಇದೇ ಕಾಯವನಿತ್ತ 1 ಮಂಡೆ ಮೇಲೆ ಭಾರವ ಕೊಂಡಾ ಸಹಸ್ರ ಫಣ ಕುಂಡಲಿಯ ಪೊತ್ತಾ ಗಂಡುಗಲಿ ಕೂರ್ಮನಾ ಕೊಂಡಾಡಲು ನಮಗೆ ಸಗುಣಾಖ್ಯಾ ಗುರುವೀತನೇ ಮುಖ್ಯಾ 2 ಭೀಮನೆ ಭೀಮಸೇನಾ ಭೀಮರಾಯನೆಂದು ನೇಮದಿಂದಲಿ ನಾಮವ ನೆನೆದಡೆ ಪಾಮರ ಬುಧ್ಧಿಯನ್ನು ನಿತ್ಯ ಸತ್ಪುಣ್ಯ ಅನುಗಣ್ಯ ಬಲು ಗುಣ್ಯಮಾಡಿಸುವನನ್ಯ 3 ಹಿಂದೆ ರಘುನಾಥನ ಛಂದದ ದೂತನಾಗಿ ಇಂದು ವಂಶದಲಿಂದು ಮಂದಹಾಸದಲುದಿಸಿ ನಂದದಿಂದಲಿ ಕುರುಬಲವ ಗೆದ್ದ ಚಲುವ ಭಕ್ತಗೊಲಿವ ಮೂಲೋಕವ ಗೆಲುವ 4 ಜ್ಞಾನ ಭಕ್ತಿ ವೈರಾಗ್ಯ ನಾನಾ ಪ್ರಕಾರ ಭೀಷ್ಟೆ ಮಾಣದೆ ಕೊಡುವನು ಅನಂತ ಕಾಲಕೂ ಆನಂದತೀರ್ಥನೀತಾ ಪ್ರಾಣಾದಿ ಪಂಚರೂಪ ಶ್ರೀನಾಥ ವಿಜಯ ವಿಠ್ಠಲಾ ಸಿರಿನಲ್ಲಾ ಪೊರೆವೆಲ್ಲಾ ಒಂದೆಂಬದಲ್ಲಾ 5
--------------
ವಿಜಯದಾಸ
ಕದವನಿಕ್ಕಿದ ಕಾರಣೇನೆ ಮುದದಿ ಕೇಳೆ ಮೋಹನಾಂಗಿ ಸದನಕ್ಕಾಗಿ ಬಂದೆ ನಾನು ಸರಸವ್ಯಾತಕೆ ಸುಂದರಾಗಿ ಪ ಇಂದು ನಾನು ಬಂದೆ ದ್ರೌಪದಿ ಬಂದು ಬಾಗಿಲನ್ಹಾಕುವೋದು ಚೆಂದವೇನೆ ಚಂದ್ರಮುಖಿಯೆ ಬಂದು ಬಾಗಿಲು ತೆಗೆಯೆ ನೀನು 1 ಅಂಧಕಾರ ರಾತ್ರಿಯಲಿ ಬಂದವರ್ಯಾರೆಂದು ಅರಿಯೆ ನಿಂದು ಗುರುತೇನೆಂದು ಪೇಳಲು ಬಂದು ಬಾಗಿಲು ತೆಗೆವೆ ನಾನು 2 ಕಂಡರಿಯೆ ಎನ್ನ ಪರಾಕ್ರಮ ಖಾಂಡವವನವ ದಹಿಸಿದೆನೆ ಗಾಂಡೀವಾರ್ಜುನರಾಯ ನಾನು 3 ಗಾಂಡೀವಾರ್ಜುನರಾಯನಾದರೆ ದುಂಡು ಬಳೆ ಕಂಕಣಗಳಿಟ್ಟು ಗೊಂಡ್ಯ ರಾಗಟೆ ಹೆರಳಲ್ಹಾಕಿ ನೀ ಷÀಂಡರೂಪವ ಧರಿಸ್ಹೋಗೊ 4 ಕ್ಷೀರಸಾಗರದಲ್ಲೆ ತಾ ಮಂ- ದರ ಪೊತ್ತಮೃತವನೆ ತಂದ ಧೀರ ಕೂರ್ಮಗೆ ಮೈದುನಾದಂಥ ಶೂರ ಫಲ್ಗುಣರಾಯ ನಾನೆ 5 ಫಲ್ಗುಣರಾಯನಾದರೇನೊ ಸದ್ಗುಣ ಸಂಪನ್ನ ಬಿರುದು ಭದ್ರದೇವಿಯ ಕದ್ದು ತರುವಾಗ ಬುದ್ಧಿ ದಾರಲ್ಲಿಟ್ಟೆದ್ದಿರ್ಹೇಳೊ 6 ಪರಮೇಶ್ವರನ ಒಲಿಸಿಕೊಂಡು ಪಾಶುಪತಾಸ್ತ್ರ ಪಡೆದೆ ನಾನು ಪರಮ ಆಪ್ತ ವರಾಹನ ಕರುಣಕ್ಕೆ ಪಾತ್ರನಾದಂಥ ಪಾರ್ಥರಾಯನೆ 7 ಪಾಶುಪತಾಸ್ತ್ರ ಪಡೆದರೇನು ದೇಶ- ದೇಶ್ಯಾತ್ರೆತೀರ್ಥ ಚರಿಸಿ ಆಸೆ ಬಿಡದೆ ಸನ್ಯಾಸಿಯಾದಂಥ ಮೋಸಗಾರನೆ ಮನೆಗೆ ಪೋಗು 8 ಕೋಟಿ ದೈತ್ಯರ ಕೊಂದೆ ಎನ್ನಸರಿ- ಸಾಟಿಯಾರೀ ಲೋಕದೊಳಗೆ ಆ- ರ್ಭಟದವತಾರ ನಾರಸಿಂಹನೆ ನೀಟಾದಭಕ್ತ ಕಿರೀಟಿಯಲ್ಲವೆ 9 ಕೋಟಿ ದೈತ್ಯರ ಕೊಂದು ಜೂಜಿ- ನಾಟ ಸೋತ್ವನ ತೋಟ ತಿರುಗಿ ಪಾಟುಬಟ್ಟು ವಿರಾಟನಲ್ಲೆ ನಾ(ನ?)ಟರಾಟಕೆ ನಿಂತಿರ್ಯಾಕೊ 10 ಮಾತಿಗೆ ಮಾತಾಡೋರೇನೆ ಅ- ಭೂತಳವ ಬೇಡಿದ್ವಾಮನಗೆ ದೂತ ನಾ ಶ್ವೇತೂವಾಹನನೆ 11 ಶ್ವೇತೂವಾಹನ ನಿಮ್ಮ ಸತಿಗೆ ನಾಥರಿದ್ದೂ ಅನಾಥಳಂತೆ ಅ- ಜ್ಞಾತದಲ್ಲಿ ಸುದೇಷ್ಣೆ ಸೇವೆಗೆ ದೂತಿಯಾದ ಪ್ರಖ್ಯಾತಿ ದಾರದೊ 12 ಹೆತ್ತತಾಯಿ ಶಿರವನಳಿದ ಕ್ಷತ್ರೇ- ರಂತಕ ಭಾರ್ಗವಗೆ ನಿತ್ಯದಲಿ ನಿಜಸೇವಕ ಭೀ- ಭತ್ಸುರಾಯ ನಾನಲ್ಲವೇನೆ 13 ಧೀರ ಭೀಭತ್ಸುರಾಯ ನಿನ್ನ ನಾರಿಯ ಸಭೆಗೆಳೆದು ತಂದು ಸೀರೆ ಸೆಳೆವಾಗ ಶೂರರಾದರೆ ದಾರದಾರಂತೆ ನೋಡಿರ್ಯಾಕೊ 14 ಕಾಮ ಮೋಹಗಳಿಂದ ನಿನ್ನಲ್ಲೆ ಪ್ರೇಮದಿ ನಾ ಬಂದೆನೀಗ ರಾಮರಾಜÉ್ಞಗೆ ನಿಜ ಸೇವಕ- ನಾದ ವಿಜಯರಾಯ ನಾನೆ 15 ವಿಜಯರಾಯ ನೀನ್ಹೌದೊ ತೇಜಿದಿ- ಗ್ವಿಜಯಕೆನುತದರ್ಹಿಂದೆ ಪೋಗಿ ಮಗನ ಕೈಯಿಂದ ವಧೆಯು ನೀತವೆ ಮೊದಲೆ ಪರಾಜಿತನಾದಿರ್ಯಾಕೊ 16 ಶ್ರೇಷ್ಠರೊಳು ಮಹಾಶ್ರೇಷ್ಠ ನಾನೆ ಅಸ್ತ್ರವಿದ್ಯದಲ್ಲಧಿಕನೆಂದು ಕೃಷ್ಣಮೂರುತಿ ಒಲಿಸಿಕೊಂಡಂಥ ಕೃಷ್ಣೆ ನಲ್ಲನೆ ಕೃಷ್ಣೆ ಕೇಳೆ 17 ಸಾರಥಿ ಆದ್ದರಿಂದ ಹಸ್ತಿನಾವತಿ ಪಟ್ಟಣಾಳ್ವುದು ಇಷ್ಟು ದಾರ ದಯದಿಂದ್ಹೇಳೊ 18 ಅಂಗನಾಮಣಿ ನಿನ್ನ ಅಂಗ- ಸಂಗ ಬಯಸಿ ನಾ ಬಂದೆನೀಗ ಅಂಗದ್ವಸ್ತ್ರವಬಿಟ್ಟ ಬೌದ್ಧಗೆ ಸಖನು ನಾ ಸವ್ಯಸಾಚಿ ಅಲ್ಲವೆ 19 ಭುಜ ಪರಾಕ್ರಮಿ ಸವ್ಯಸಾಚಿ ನಿನ್ನೆರಡು ಕೈದಡ್ಡಿನ್ಯಾತಕೇಳೊ ದ್ವಿಜರ ಸುತರ ತಂದುಕೊಡದೆ ಮೊದಲೆ ಮಾಡಿದ ಪ್ರತಿಜ್ಞವೇನೊ 20 ಅಂಜೋನಲ್ಲ ನಾನರಿಗಳಿಗೆ ಕಲಿ- ಭಂಜನ ಕಲ್ಕ್ಯಾವತಾರಗೆ ಕಂಜಚರಣಕ್ಕೆ ವಂದಿಸುವೆ ಧ- ನಂಜಯ ನಾನಲ್ಲವೇನೆ 21 ಸೈಯೊ ನೀ ಧನಂಜಯರೇಯ ಸುರಪತಿಗೆ ಪತ್ರವನೆ ಬರೆದು ಶರದ ಪಂಜರ ಕಟ್ಟಿ ನೀ ಕುಂ- ಜರವನಿಳಿಸಿದ ಕಾರಣೇನೊ 22 ನಿನ್ನ ಸರಿ ಮಾತಾಡುವೋರ ಧನ್ಯರ ನಾ ಕಾಣೆನೆಲ್ಲು ಳನ್ನು ಕೇಳಿದಿನ್ಯಾಕೆ ತಡೆವೆ 23 ದಶ ನಾಮಗಳ ಕೇಳಿ ದ್ರೌಪದಿ <ಈಔಓಖಿ ಜಿಚಿ
--------------
ಹರಪನಹಳ್ಳಿಭೀಮವ್ವ
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರುಣೆ ತೋರಿಸೊ ದೇವಾ ಕರಿವರದನೆ ಪ. ಕರುಣ ತೋರಿಸೊ ದೇವ ಗರುಡಗಮನ ನಿನ್ನ ಕಮಲ ಧ್ಯಾನ ನಿರುತ ನೆನೆವ ಹರಿಅ.ಪ. ವೇದಾಂತ ವೇದ್ಯ ನೀನೆ ಆದಿನಾರಾಯಣ ಸಾಧುವಂದಿತನು ನೀನೆ ದೇವೇಶನೆ ವೇದವ್ಯಾಸನು ನೀನೆ ಬಾದರಾಯಣ ನೀನೆ ಭವ ಭಯಹರ ನೀನೆ 1 ಚಿಂತೆ ಕೊಡುವ ನೀನೆ ಚಿಂತಿತಾರ್ಥನು ನೀನೆ ಅಂತಕ ದೂತರಿಂದೆಳೆಸುವ ನೀನೆ ಸರ್ವ ಅಂತರ್ಯಾಮಿ ಅಂತÀರಂಗದಿ ನಿಂತು ಪ್ರೇರಿಸಿ ನಿನ ಪಾದ ಪಂಥದಿ ಸ್ತುತಿಗೊಂಡು ಸಂತಸ ಪಡುವವ ನೀನೆ2 ಮಾನುನಿ ದ್ರೌಪದಿಯಾ ಮೊರೆಯ ಕೇಳಕ್ಷಯ ನೀನೆ ಪಾಲಿಸಲಿಲ್ಲವೆ ಶ್ರೀ ಕೃಷ್ಣ ನೀನಿತ್ತು ಸಲಹಿದ ಶ್ರೀ ಶ್ರೀನಿವಾಸ ದೊರೆ ಗಾನಲೋಲನೆ ಭಕ್ತರ ಸಲಹುವೆನೆಂಬುವ ಆಭಯ ಹಸ್ತವ ನೀನಿತ್ತು ಸಲಹೆನ್ನದೇವಾಧಿದೇವ 3
--------------
ಸರಸ್ವತಿ ಬಾಯಿ
ಕಲುಷಗಳ ಪರಿಹರಿಸು ಕಲುಷಕಂಠಾ ಪ ಸುಮ ಶರಗಳಿಂದಲಿ ಬೆಂದು ನೊಂದು ತವ ದ್ವಂದ್ವಗಳಿಗಭಿವಂದಿಸುವೆನೊ ರಾಜ ಅ.ಪ. ತಾಪಗಳಿಗೊಳಗಾಗಿ ಪರರ ತಾಪವನು ಕಾಣದೆ ಆಲಾಪನೆಯ ಮಾಡುತಲಿ ಕೂಪದೊಳು ಪೋಪ ನೋಡುವೆನಯ್ಯ ಜೀಯ್ಯಾ 1 ಬರುವದೆಂತೆಂದು ಬಯಸಬಾರದ ವಿಷಯಗಳ ಬಯಸಿ ಭವದೊಳಗೆ ಬವಣೆ ಬಡುವೆನು ಪರಿಹರಿಸು ಭವಕೆ ಭೀಮಾ 2 ಕಾಮನಯ್ಯನೆ ಕೇಳು ಕಾಮಗಳ ಪೂರೈಸು ಕಾಮಿನಿಯರಾ ಕಂಡು ಮೋಹಿಸಿದ ಕಾರಣದಿ ಪೂರೈಸು ಮನಾಧಿಪ ತಂದೆವರದಗೋಪಾಲವಿಠಲನ ದೂತಾ 3
--------------
ತಂದೆವರದಗೋಪಾಲವಿಠಲರು
ಕವಿ ಕವಿದು ಪೊಳೆವ ಭುವನಪಾವನ ಚರಿತ ಇಂದೀವರಾಕ್ಷ ಪ ತವಪೂರ್ಣ ನಿಜ ಒಲಿಮೆ ಪ್ರಭುಪೂರ್ಣ ಕವನದಲಿ ಮೋದ ಕರಿವರದ ಭವಭಂಗ ಪರಿಹಾರ ಕವನ ವೋದಿದ ಮಾತ್ರ ಧವಳ ಕೀರುತಿ ಬೆಳುದಿಂಗಳನು ಮೀರಿಹುದೊ 1 ತವಪೂರ್ಣ ಗುಣ ಕ್ರಿಯೆ ರೂಪ ಘನ ಭಾವಗಳು ಲವಲವಿಕೆ ಎಮ್ಮ ಚೇತನಕೆ ಕೊಟ್ಟು ಭವಭೀತಿಗೆ ಭೀತಿ ತಂದೊಡ್ಡುವುದೊ ಕಮಲೇಶ ಸವಿದುಣ್ಣುವಾ ಜನಕೆ ಜಡದಲ್ಲೂ ನೀ ಬರುವೆ 2 ಶ್ರವಣ ಮಾತ್ರಕೆ ಮೈಮರೆಸುವುದು ಮಹಸಿರಿಯು ಶುಕ ಪಿತ ಸವಿದ ರುಚಿಯು ಇಹುದು ಪವಮಾನ ಕೃಷ್ಣಾರ್ಯ ರಾಮಾರ್ಯರತಿ ವಲುಮೆ | ಶ್ರವಿಸುವುದು ಪಠಿಪರನು ಭಕ್ತಿಮತ್ತರ ಮಾಡಿ 3 ಕವಲುಮತಿಯಲಿ ಮುಳುಗಿ ಚಲಿಸದಿರು ಇದರಿಂದ ಭವಮೂಲಕುನ್ಮೂಲ ಇದರ ಮಹಿವi ಅವಲಿಯನು ತಿಂದವನು ಅಗಲಿರದೆ ಒಡನಿಹನು ಜವನ ದೂತರು ತಲೆಮಣಿದು ಓಡುವರೊ 4 ತತ್ವಾಭಿಮಾನಿಗಳಿಗಾಹಾರವಿದು ಸತ್ಯ ತತ್ವಾರ್ಥ ಬಲು ಸುಲಭದಲ್ಲೆ ಮನಕವಗಾಹ್ಯ ಸತ್ಕøತಿಯ ಮಾಡಿ ಚಿತ್ಸುಖವ ಉಣು ನಿತ್ಯ ವಾತಾತ್ಮ ಗುರು ಶ್ರೀ ಜಯೇಶವಿಠಲನ ನೋಡು 5
--------------
ಜಯೇಶವಿಠಲ