ಒಟ್ಟು 110 ಕಡೆಗಳಲ್ಲಿ , 51 ದಾಸರು , 91 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೋಡಿ ಧನ್ಯನಾದೆನಾ ಗಜಾನನಾ ಪುನೀತನಾ ಪಾಡಿ ಭಜನೆ ಮಾಡಿ ಇಡುವೆ ಅಡಿಗಳಲ್ಲಿ ಶಿರವಾ ಪ ಭಾರತಾರ್ಥ ಬರೆದ ದೇವ ಮಿತ್ರನಾ ಸುಪುತ್ರನಾ ಮಾರನಾಸ್ತ್ರ ಗೆಲಿದ ನಿಟಿಲನೇತ್ರನಾ ವಿರಕ್ತನ 1 ಸಕಲ ಶಾಸ್ತ್ರ ತಿಳಿಸೋ ಏಕದಂತನೇ ಬಲವಂತನ ಮುಕುತಿ ಮಾರ್ಗವ ತೋರೋ ವಕ್ರತುಂಡ ವಿಘ್ನದಂತನೇ 2 ಜ್ಞಾನವಿತ್ತು ನುಡಿದು ನುಡಿಸೋ ನೀನೆ ನಿಂದು ವದನದಿ ಮನವಾ ಹನುಮೇಶವಿಠಲನೊಳು ನಿಲಿಸೋ ಬೇಗದಿ 3
--------------
ಹನುಮೇಶವಿಠಲ
ನೋಡಿ ನಾ ಧನ್ಯನಾದೆನೊ ತೋತಾದ್ರೀಶನ ನೋಡಿ ಧನ್ಯನಾದೆ ನಾಡೊಳು ತನಗೆಲ್ಲಿ ಈಡಿಲ್ಲೆನಿಸುವನ ನೋಡಿ ಧನ್ಯನಾದೆನೊ ಪ ಆರೊ ಮಹಾರೂಪ ಬಂದು ಏಕಾಂತದಲ್ಲಿ ಆರಾಧಿಸಿದಾತನಂದು ಭಕುತಿ ಬಿಡದೆ ವಾರವಾರಕ್ಕೆ ಗತಿಯೆಂದು ಈ ರೀತಿಯಲ್ಲಿ ಇರೆ ತೋರಿದ ಕರುಣ ನಿನ್ನಾ 1 ಭಕುತನ್ನ ತಪಸಿಗೊಲಿದು ವೇಗದಿಂದಲಿ ಲಕುಮಿ ರಮಣ ಸುಳಿದು ಬೇಡಿದಂಥಾ ಧಿಕವಿತ್ತು ರೋಷವಳಿದು ಸುಖದ ಭಾರತ ಪೇಳೊ ದಕ್ಕೆ ಮುನಿ ಮಾಡಿದ ದಾನಾ 2 ಧರಿಗೆ ದಕ್ಷಿಣ ದಿಕ್ಕಿಲಿ ಮಾಹೇಂದ್ರಿ ಮಹಿ ಧರನ ಸಮೀಪದಲ್ಲಿ ಪ್ರತಿದಿನ ಮೆರೆವ ವೈಭೋಗದಿಂದಲಿ ಕರುಣಿ ವಿಜಯವಿಠ್ಠಲ ವರಧೇನು ಎನಿಸುವನಾ3
--------------
ವಿಜಯದಾಸ
ಪಲಿಮಾರು ಮಠದ ಶ್ರೀರಘುವರ್ಯರ ಕೃತಿಗಳು ಯುಗ್ಮ ಉಡುಪಿನ ಕೃಷ್ಣನೇ 1 ದ್ವಾರಕಾಪುರದಲ್ಲಿ ದೇವಕಿ ಸರಸ ಬಾಲಕ ಲೀಲೆಯಾ ತೋರು ಎನುತಲಿ ದಧಿಯ ಮಥಿಸಲು ಕರುಣಿ ಬಾಲ್ಯವ ತೋರಿದೆ2 ತೊಡೆಯನೇರಿ ಸ್ತನ್ಯಪಾನವ ಮಾಡಿ ಮೋದವ ತಾಯಿಗೆ ಕೊಡುತ ಕಡೆಗೋಲ್ ನೇಣು ಸಹಿತಲಿ ಪ್ರೌಢ ನೀನಪಹರಿಸಿದೆ 3 ಮೊಸರು ಭಾಂಡವನೊಡೆದು ಬೆಣ್ಣೆಯನಸುನಗುತಲೀ ಭಕ್ಷಿಸೀ ಶೇಷಶಯನನೆ ನೀನು ಕುಣಿಯೆ ಸಂ- ತೋಷಪಟ್ಟಳು ದೇವಕಿ4 ಸತಿ ನುಡಿದಳು 5 ವಿತತ ವೈಭವ ಈ ಪರಿಯಲಿಪ್ರತಿಮೆಯನ್ನೇ ಮಾಡಿಸಿ ಸತತ ಪೂಜೆಯ ಮಾಳ್ಪರೀ ಅತಿ ಪ್ರೀತಿಯಿಂದಲಿ ಕೊಡು ಎನಗೆ 6 ಪರಿ ಪೇಳೆ ವಿಶ್ವ-ಕರ್ಮನಿಂದಾ ಮಾಡಿಸಿ ಕಮಲನಾಭನು ಇತ್ತು(ದ್ದು) ಅದರಲಿ ವಿಮಲ ಪೂಜೆಯ ಕೊಂಡನು 7 ಶರಧಿ ತೀರದಲಿತ್ತನು8 ನಾವೆಯಲ್ಲಿ ಗೋಪಿಚಂದನ ಸಂವೃತಾರ್ಚಯು ಬರುತಿರೆ ನಾವೆಯೊಡೆಯಲು ಮಧ್ವಮುನಿಪನು ಭಾವದಿಂದಲೆ ತಂದನು 9 ಅವರರೊಡೆಯ ಶ್ರೀ ಮರುತಪತಿತತ್ ಪ್ರತಿಷ್ಠೆಯ ವಿರಚಿಸಿ ಕುಮುದ ಬಂಧು ಕ್ಷೇತ್ರದಲಿ ನಿ-ನ್ನಮಿತ ಪೂಜೆಯ ಮಾಡಿದ 10 ನನ್ನ ಹಿರಿಯರ ಪುಣ್ಯ ಫಲಿಸಲು ನಿನ್ನ ಪೂಜೆಯ ಮಾಡುತಧನ್ಯನಾದೆನು ಮುಕ್ತಿ ಕರಗತ ಎನ್ನಗಾಯಿತು ಕೃಷ್ಣನೇ 11 ಮಧ್ವಪೂಜಿತ ರಕ್ಷಿಸೆನ್ನನು ಸಾಧ್ವಸೋಝ್ಝಿತ ಸದ್ಗುಣ ಸಾಧ್ವಲಂಕೃತ ವೇಷ ಮುಕ್ತಿ ಪ-ದಾಬ್ಜನೇ ರಘುತಿಲಕನೇ 12
--------------
ಅನ್ಯದಾಸರು
ಪಾದುಕೆಗಳ ಭಾಗ್ಯಶ್ರೀಗುರುವು ಶ್ರೀರಂಗಪಟ್ಟಣಕಾಗಿ ಬಿಜಯಂಗೈದು ಮಠದಲಿಯೋಗಪೀಠದಲಿರ್ದ ಸಮಯದಿ 'ಪ್ರಕುಲ ಬಂದುಆಗ ಚಾತುರ್ಮಾಸ್ಯ ಒದಗಿರಲಾಗಿ ಪ್ರಾರ್ಥನೆಗೈದ ಕಾರಣರಾಗರ'ತನು ವಾಸುದೇವನು ನೆಲಸಿದನು ದಯದಿ 1ತೀರಿ ವ್ರತವನು 'ಶ್ವರೂಪದ ದಾರಿಯಲಿ ಸಂಚರಿಸಿ ಪುನರಪಿಮಾರಹರನಾಲಯದ ಮುಂದಣ ಮಠಕೆ ಬಂದಿರುತಾಸಾರಿ ಸಾಯಂಕಾಲದಲಿ ಕಾವೇರಿಯಲಿ ಸ್ನಾನವನು ಮಾಡಿಯೆನಾರೆಯಣನಾಮವನು ಸ್ಮರಿಸುತ ಬಹುದ ನಾಂ ಕಂಡೆಂ 2ಕಂಡ ಬಳಿಯಲೆ ಭಕ್ತಿಭಾವದಿ ದಂಡದಂತಾನೆರಗೆ ಕೃಪೆುಂಮಂಡೆಯೆತ್ತೇಳಾರು ನೀನೆಂದಾಗ ಮಂದಲಿಸಿಪುಂಡಾರೀಕಾಂಬಕನ ದಾಸನೆ ಗಂಡುಗಲಿಯಾಗಿಹೆಯ ಕ್ಷೇಮವೆಕಂಡೆ'ಂದಿಗೆ ಬಹುದಿವಸಕೆಂದಾಗ ನುಡಿಯುತಿರೆ 3ಆ ಬಳಿಯ ಮನೆುರಲು ಮಾಳಿಗೆ ಶೋಭಿಸುತ ಬೆಳುದಿಂಗಳಿಗೆ ಬಲುಗಾಬರಿಯ ಸಂದಣಿ ಮಹಾನವ'ುಯ ಮಹೋತ್ಸವದಾಕಾಬರಿದ ಮೇಲಿದ್ದ 'ಪ್ರನು ತಾ ಭುಜಿಸಿ ತಾಂಬೂಲಶೇಷವತೂಬಿರಿಯೆ ಮುಕ್ಕುಳಿಸಿ ಗುರುಶಿರದೊಳಗೆ ಬಿದ್ದುದದು4ಹರಹರಾಗುರುಕೃಪೆಯೆಕೋಪವುಬರಬಹುದುನಿನಗೆನುತನುಡಿಯಲು ಗುರುವು ಕಂಡಾ ಬಳಿಯ ಕೇಶವಮೂರ್ತಿಯೆಂಬವನುಅರಿಯದಾದೈ ಮೇಲೆ ಕುಳಿತೀ ಬರುವ ಯತಿಗಳ ನ್ಯಾಯವೇಯೆಂದರುಹಲಾ ದ್ವಿಜಬೆದರಿ ಧುಂ'ುಕ್ಕಿದನು ಭೂತಳಕೆ 5ತಪ್ಪಿದೆನು ದಮ್ಮೈಯ ಗರ್ವವನೊಪ್ಪಿಕೊಳಬೇಕೆನಗೆ ಗತಿಯೇನಪ್ಪುದೋ ಕಂಗಾಣದಾದೆನು ವಾಸುದೇವಾರ್ಯಾತಪ್ಪಿದೆನು ತಪ್ಪಿದೆನು ತಪ್ಪಿದೆ ತಪ್ಪಿದೆನು ತಪ್ಪಿದೆನೆನುತ್ತಲಿಧೊಪ್ಪನಡಗೆಡ'ದರ ತನುವನು ನೋಡ್ದ ಗುರುವರನು 6ತಂದೆ ಬಾ ಯನ್ನಯ್ಯ ಬೆದರದಿರೆಂದಭಯವನು ಕೊಡುತ ಕರುಣಾಸಿಂಧು ವಾಗಮೃತದಲಿ ನೆನಸಿದ ಪರಿಯನೇನೆಂಬೆಕಂದನಪ್ಪನು ಸುಗುಣವಂತನು ಮುಂದಣೀ ದಿವಸಕ್ಕೆ ನಿನಗೆನುತೆಂದು ಮತ್ತವರಾಡಿದುಕ್ತಿಯನೆಂತು ಬಣ್ಣಿಪೆನು 7ಸಹಜ ತಂಬುಲ ಶಿರದ ಮೇಲಕೆ ಬಹುದು ಗುರುಕೃಪೆ ರೂಪವೆತ್ತೀ''ತ ಪ್ರಾಯಶ್ಚಿತ್ತಗೈದುರು 'ರತಿಯನು ಕಲಿಸಿಸಹಜ ಸುಖಸಂ'ತ್ಪದ' ತಾ ಬಹುದುನೊದಗಿಸಿತಾಗಿ ಮುಂದೀಬಹು ಜನರ ಗ್ಠೋಯನು ಬಿಡಿಸಿದುದೆಂದರುತ್ತರವಾ 8ಇರುವುದನುಚಿತ ಜನಸಮೂಹದಿ ಬರುವುದನುಚಿತ ಬರದ ಮಾರ್ಗದಿಕರದು ಮನ್ನಿಸಿ ಜನರ ಕ್ಷೇಮವ ಕೇಳ್ವುದನುಚಿತವುಅರಿಕೆದಟ್ಟಿತು ಮನಕೆ ಗುರು ತಾನುರುಹು ಸಂನ್ಯಾಸವನು ಥೂಯೆಂದಿರದೆ ಮೋರೆಯ ಮೇಲೆ ತಾನುಗುಳಿದನು ಸಿದ್ಧ'ದೂ 9ಪ್ರೇಷೆ ತಾ ಜ್ಞಾನಕ್ಕೆ ಮಾತೃವು ಪ್ರೇಷೆಯೇ ಜ್ಞಾನಕ್ಕೆ ತಂದೆಯುಪ್ರೇಷೆ ಭವಸಾಗರವ ದಾಂಟಿಪ ನಾವೆ ಸುಖಕರವೂಪ್ರೇಷೆ ಸರ್ವೋತ್ಕರುಷವಪ್ಪುದು ಪ್ರೇಷೆಯನ್ನುಚ್ಚರಿಸಿ ಮತ್ತಭಿಲಾಷೆುಂ ಜನಸಂಗಗೈಯ್ಯಲ್ಕಾಯ್ತೆ ನಿಗ್ರಹವೂ 10ಭಲರೆ ಗುರುವರ ಧನ್ಯನಾದೆನು ಮರೆತೆ ತಪ್ಪಿದೆ ಮುಂದೆ ಜನರೊಳಗಿರೆನು ಗುಹೆಯನು ಪೊಕ್ಕು ಮೌನವ್ರತ ಸಮಾಧಿಯಲಿುರುವವೋಲ್ ವೈರಾಗ್ಯವನು ನೀ ಕುರುಣಿಸಿದೆಯೆಂದೆನುತ ನಗುತಲಿಹರುಷದಿಂ ಕಾವೇರಿಗೈತಂದನು ಗುರೂತ್ತಮನು11ಸಾ'ರದ ಸಂಖ್ಯೆಯಲಿ ಮೃತ್ತಿಕೆ ುೀವುದಕ್ಕೆನ್ನುವನು ನೇ'ುಸಿಭಾ'ಸುತ ಪ್ರಣವವನು ಸ್ನಾನವ ಮಾಡಿ ನಿಯಮದಲಿಭಾವವಳಿಸಿ ಕಮಂಡಲವ ಜಲಕೀವ ಸಮಯದಲುಗುಳ್ದ 'ಪ್ರನಭಾವದಲಿ ನಡುಗದಿರು ಸುತನಹನೆಂದ ಗುರುವರನು 12ಏನನೆನ್ನುವೆನಾ ದ್ವಿಜನು ಸುತ 'ೀನನತಿ ಯತ್ನಗಳ ಮಾಡುತಭಾನು'ಂಗೆರಗುತ್ತಲಿದ್ದನು ಪುತ್ರಕಾಮುಕನುಏನು ಕೃಪೆಯೋ ತಿಂಗಳೆರಡಕೆ ಮಾನಿನಿಯು ತಾ ಗರ್ಭದಾಳಿಯೆಸೂನುವನು ತಾ ಪಡೆದಳೀ ಗುರು ಪೇಳ್ದ ದಿವಸದಲಿ 13'ುಂದು ಕಾವೇರಿಯಲಿ ಗುರುವರ ಬಂದು ಮಠಕಾಕ್ಷಣವೆ 'ಪ್ರರಸಂದಣಿಯ ನೆರೆ ಕಳು'ಯೆನಗಪ್ಪಣೆಯ ಕೊಡಲಾಗಿಬಂದು ಮನೆಯೊಳಗಿದ್ದು ರಾತ್ರಿಯು ಸಂದ ಬಳಿಕಾನೈದಿ ನದಿಯೊಳು'ುಂದು ಗುರವರಗೆರಗಲೈದಿಯೆ ಕಾಣೆ ನಾನಲ್ಲಿ 14ಸ್ನಾನಕೈದಿದರೇನೊ ಬಂದರೆ ಕಾಣುವೆನು ನ'ುಸುವೆನುಯೆಂದೇನಾನು ನೋಡಿದೆ ಬಾರದಿರೆ ಮಧ್ಯಾಹ್ನ ಪರಿಯಂತಭಾನು'ಂಗಘ್ರ್ಯವನು ಕೊಟ್ಟು ಮಹಾನುಭಾವರ ನೆನನೆನದು ದುಂಮಾನದಿಂದಿರುತಿದ್ದೆ ಸಾಯಂಕಾಲ ಪರಿಯಂತ 15ಇರುಳಿಗೂ ಬರದಿರಲು ಪಾದುಕೆುರಲು ಪೂಜಿಸಿ ನ'ುಸಿಯಗಲಿದಪರಮ ತಾಪದಿ ಕುದಿದು ರೋದನಗೈದೆ ಪಂಬಲಿಸಿಗುರುವರನೆ ನಿನ್ನಂಘ್ರಿಕಮಲದ ದರುಶನವು ಮರೆಯಾಯ್ತೆ ದೀನನಕರೆದು ಮನ್ನಿಸಿ ಕಾಯ್ದೆಯಲ್ಲೈ ವಾಸುದೇವಾರ್ಯಾ 16ಏನು ಗತಿ ಮುಂದೆನಗೆ ಮಾರ್ಗವದೇನನುಗ್ರ'ಸಿಪ್ಪ ಮಂತ್ರ 'ದೇನು ಜಪಿಸುವ ಮಾನವೆಂತಿದರರ್ಥವೇನಹುದುನಾನರಿಯದವನೆಂಬುದನು ನೀ ಜ್ಞಾನದ್ಟೃಯೊಳರಿದು ರಕ್ಷಿಸುದೀನನನು ಕೈ'ಡಿದು ಬಿಡುವರೆ ವಾಸುದೇವಾರ್ಯಾ 17ಭವಸಮುದ್ರದಿ ಮುಳುಗುತೇಳುತ ಲವಚಿ ತೆಗೆವರ ಕಾಣದಳಲುತಕ'ದು ತಮ ಕಂಗಾಣದಿರೆ ನೀನಾಗಿ ದಯತೋರಿಭವಭವಾಂತರದುರಿತಗಳ ಪರಿಭ'ಸಿಯಭಯವನಿತ್ತು ಸಲ'ದದಿ'ಜವಂದ್ಯನೆಯಗಲಿದೈ ಶ್ರೀ ವಾಸುದೇವಾರ್ಯಾ 18ಅರಿಯೆ ಹೃತ್ಕಮಲದಲಿ ಭಾ'ಪ ಪರಿಯನಿದಿರಿಟ್ಟಿರಲು ನೀ ಶುಭಕರದ ಮೂರುತಿಯಾಗಿ ಗ್ರಂಥಾರ್ಥಗಳ ಶೋಧಿಸಿಯೆಅರಿಯಬೇಕೆಂಬಿಚ್ಛೆ ಬರಲಿಲ್ಲುರುವ ನಿನ್ನಯ ವಾಗಮೃತ ರಸಸುರಿಯೆ ತಾನೇ ಪಾನಗೈಯುತ ಮತ್ತನಾಗಿದ್ದೆ 19ಜೀ'ಸುವೆ ನಾನೆಂತು ಧರೆಯೊಳು ಪಾವನದ ಮೂರುತಿಯ ಕಾಣದೆಭಾವದಲಿ ಸುಖಗೊಳಿಪ ವಾಕ್ಸುಧೆಯರತ ಕಾರಣದಿಂದೇವ ಮರೆಯಪರಾಧ'ದ್ದರು ಕಾವ ಕರುಣೆಗೆ ಕೋಪವೇ ಸಂಜೀವ ನೀ ಭುವನಕ್ಕೆ ತೋರೈ ವಾಸುದೇವಾರ್ಯಾ 20ಮೊರೆುಡುತಲೀ ರೀತಿುಂದಿರುತಿರಲು ಪಾದುಕೆಗಳಿಗೆ ನ'ುಸುತಬರಲು ಪಲ್ಲವ ಬಾಯ್ಗೆ ಗುರುಕೃಪೆುಂದ ತಾನಾಗಿತಿರುಪತಿಯ ವೆಂಕಟನೆ ಮೂರ್ತಿಯ ಧರಿಸಿ ಯತಿವರನೆನಿಸಿದುದನಾಹರುಷದಿಂ ಪಾಡಿದೆನು ಕೀರ್ತನ ನೆವದಿ ಮೈಮರೆದೂ 21
--------------
ತಿಮ್ಮಪ್ಪದಾಸರು
ಪೊರೆಯೇ ಕರುಣದಿ ಪ ರೂಪಿನಿಂದ ಶೋಭಿಪರು 1 ಕಮಲದಲ್ಲಿ ನಿನ್ನ ಭಾವಿಪೆ2 ಪಾದವನ್ನು ನಂಬಿದೆ 3 ನೋಡಿ ನಾನು ಧನ್ಯನಾಗುವೆ 4 ಧೇನುನಗರ ಪತಿಯೆ ಭಂಜಿಸೈ 5
--------------
ಬೇಟೆರಾಯ ದೀಕ್ಷಿತರು
ಬಂದೆ ಭಗವತ್ಪಾದಯುಗಾರ ವಿಂದಕೆ ಮಿಳಿಂದನಾಗಿ ವಂದನೀಯರೆ ಯತಿಕುಲಾಬ್ಧಿ ಚಂದ್ರರ ಭುವನೇಂದ್ರತೀರ್ಥರೆ1 ಪರಮ ಪಾವನ ಭುವನೇಂದ್ರರ ಕರಸಂಜಾತ ವರದೇಂದ್ರರ ಕರಸರೋರುಹಭವರೆ ಮಹಾ ಕರುಣಾಂತಃಕರಣ ಧೀರರೆ2 ಸುಮತೀಂದ್ರಾದಿ ಯತೀಂದ್ರರ ವಿಮಲ ಹೃದಯಕಮಲಭಾಸ್ಕರ ಅಮಮ ನಿಮ್ಮ ಕಾಂಬ ಯೋಗ ಸುಕೃತ ಭೋಗಪೂಗ3 ಪೂರ್ಣಪ್ರಜ್ಞಾಚಾರ್ಯವರ್ಯ ಸನ್ನುತ ಮತಧೈರ್ಯ ಧುರ್ಯ ಧನ್ಯನಾದೆನು ನಾನಿಂದು ಸನ್ನಿಧಾನವನು ಕಂಡೆನು4 ಶ್ರೀಶ ಲಕ್ಷ್ಮೀನಾರಾಯಣ ವ್ಯಾಸ ರಘುಪತಿಯ ಚರಣೋ- ಪಾಸಕರೆ ಪಾವನರೆ ಕಾಶೀವiಠಾಧೀಶ್ವರರೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬನ್ನವನಾ ನೀಗಿದೆ ಜವದಿ ಧನ್ಯನಾದೆ ಶ್ರೀ ಗುರುವೆ ಧನ್ಯನಾದೆ ಸದ್ಗುರುವೇ ಧನ್ಯನಾದೆ ಪ ಭವಸಾಗರವಾ ದಾಟಿದೆ ಜವನ ಬಾಧೆಯ ನೀಗಿದೆ ಜೀವಭಾವವು ಸಟಿಯೆಂದೆನಿಸಿ ದೇವನಾದೆ ಪಾವನನೆ ಧನ್ಯನಾದೆ 1 ಅರಿತೆನೆನ್ನಯ ನಿಜರೂಪವನಾ ದುರಿತವ ನೀಗಿದೆ ಅರಿವಿನ ಬಲದಿ ದೊರಕಿತು ಮುಕುತಿ ಧನ್ಯನಹುದು ನಾ ನೀನೆ ನಾನೈ ಶಂಕರನೇ ಧನ್ಯನಾದೆ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಬಾರೋ ಮನೆಗೆ ಭಾಗವತರ ಭಾಗದೇಯನೆ ಚಾರುವದನ ತಾಮರಸವ ತೋರು ಪ್ರೀಯನೆ ಪ ಹಗಲು ಇರುಳು ನೆನಹು ಬಿಡದು ಸುಗುಣ ಸುಂದರ ಬಗೆಯೊಳಿನ್ನ ಮರೆಯಬಹುದೆ ನಿಗಮಗೋಚರ 1 ಕಣ್ಣಿನಿಂದ ನಿನ್ನ ನೋಡಿ ಧನ್ಯನಾಗುವೆ ನಿನ್ನ ಚರಣಕೆನ್ನ ಶಿರದಿ ಮುನ್ನಬಾಗುವೆ 2 ನಿತ್ಯತೃಪ್ತನಿನಗೆ ನಾನೇ ಭೃತ್ಯನಾಗುವೆ ನೃತ್ಯಗೈದು ಪಾಡಿ ಕೃತಕೃತ್ಯನಾಗುವೆ 3 ಶ್ರೀನಿವಾಸ ನಿನ್ನ ದಾಸ ನಾನೇನಲ್ಲವೆ ಮಾನಪ್ರಾಣಗಳಿಗೆ ದೊರೆಯು ನೀನೆಯಲ್ಲವೆ 4 ಶರಣ ಜನರ ಭರಣಗೈವ ಕರುಣಿಯಾರೆಲಾ ಹರಣ ಹರಧರದೊಳಿರುವ ವರದ ವಿಠಲಾ 5
--------------
ವೆಂಕಟವರದಾರ್ಯರು
ಬಾರೋಮನೆಗೆ ಭಾಗವತರ ಭಾಗದೇಯನೆ ಚಾರುವದನ ತಾಮರಸವ ತೋರು ಪ್ರೀಯನೆ ಪ ಹಗಲುಯಿರಳು ನೆನಹುಬಿಡದು ಸುಗುಣಸುಂದರ ಬಗೆಯೊಳೆನ್ನ ಮರೆಯಬಹುದೆ ನಿಗಮಗೋಚರ 1 ಕಣ್ಣಿನಿಂದ ನಿನ್ನ ನೊಡಿಧನ್ಯನಾಗುವೆ ನಿನ್ನ ಚರಣಕೆನ್ನ ಶಿರದಿ ಮುನ್ನಬಾಗುವೆ 2 ನಿತ್ಯ ತೃಪ್ತನಿನಗೆ ನಾನೇ ಭೃತ್ಯನಾಗುವೆ ನೃತ್ಯಗೈದು ಪಾಡಿಕೃತಕೃತ್ಯನಾಗುವೆ 3 ಶ್ರೀನಿವಾಸ ನಿನ್ನ ದಾಸನಾನೇನಲ್ಲವೆ ಮಾನಪ್ರಾಣಗಳಿಗೆ ಧೊರೆಯು ನೀನೇಯಲ್ಲವೆ 4 ಶರಣ ಜನರ ಭರಣಗೈವ ಕರುಣಿಯಾರೆಲಾ ಹರಿಣಹರಧರದೊಳಿರುವ ವರದವಿಠಲಾ 5
--------------
ಸರಗೂರು ವೆಂಕಟವರದಾರ್ಯರು
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಭಜಿಸಿ ಧನ್ಯನಾದೆ ನಾನು ಭುಜಗಶಯನನಂಘ್ರಿಯನ್ನು ಪ ಕುಸುಮ ತರಲು ಸರಸಿಧುಮುಕಿ ಮೊಸಳೆಬಾಯಿಗೆ ಸಿಲುಕಿ ಕರಿಯು ಕಂಟಕ ಗೆಲಿದು ಅಸಮಸೌಖ್ಯ ಪೊಂದಿದ್ದು ಕೇಳಿ 1 ಪಾಪಿ ಕುರುಪನೋಲಗದಲ್ಲಿ ದ್ರೌಪದಿಗೊದಗಿಬರಲು ಭಂಗ ಆಪತ್ತು ಗೆಲಿದಳೆಂಬುದ ಕೇಳಿ 2 ಇಳೆಯೊಳ್ಪತಿಯ ಶಾಪದಿಂದ ಶಿಲೆಯ ರೂಪದಿ ಬಿದ್ದ ಯುವತಿ ಗೊಲಿದು ಪಾವನಾಂಗಿಯೆನಿಸಿ ಕುಲಕೆ ತಂದ ಸುದ್ದಿ ಕೇಳಿ 3 ತ್ಯಜಿಸಿ ತನ್ನ ಬ್ರಹ್ಮಕುಲವ ಕುಜಕುಲದ ನಾರಿಗೆ ಕೆಟ್ಟ ಅಜಮಿಳನ ಅಂತ್ಯಕ್ಕೆ ಒದಗಿ ನಿಜಪದವಿ ನೀಡಿದ್ದು ಕೇಳಿ 4 ಅಂಬುಧಿನಿಲಯ ಅಸಮ ಮಹಿಮ ಕಂಬುಕಂಧರಮಿತ್ರ ಭಕುತ ಬೆಂಬಲ ಶ್ರೀರಾಮ ಪ್ರಭುವೆ ನಿನ್ನ ನಂಬಿದವರ ಸಂಭ್ರಮ ಕೇಳಿ 5
--------------
ರಾಮದಾಸರು
ಭವ ಎನಗೆ ಹರಿುತುಸದಯ ಗೋಪಾಲಾರ್ಯನ ಪದ ಕರುಣವಾಯ್ತೆನಗೆ ಪಮೊದಲು ಬಹು ಜನ್ಮಂಗಳಲ್ಲಿ ಮಾಡಿದ ಪುಣ್ಯಒದಗಿತೀ ಸಮಯದಲಿ ಧನ್ಯನಾದೆಸದಸದ್ವಿವೇಕ ಸಂಪತ್ತಿ ಮುಂತಾದ ಸತ್ವದ ಸಾಧನಂಗಳೊದಗಿದವೀಗಲೆನಗೆ 1ದೇವ ಋ ಪಿತೃ ಋಣಂಗಳು ತಿದ್ದಿದವು ಶುದ್ಧಭಾವನಾದೆನು ಕುಲ ಪವಿತ್ರವಾುತೆನ್ನಾಪಾವನತೆಯಾಗಿ ಜನನೀ ಜನಕರಿಗೆ ದೇವದೇವ ಪದವಾುತು ಕೃತಕತ್ಯ ನಾನಾದೆ 2ಸಕಲ ಸಂದೇಹಗಳಳಿದು ದೇಹಾತ್ಮ ಮತಿವಿಕಲವಾದುದು ನಿತ್ಯ ತೃಪ್ತಿಯಾುತುಪ್ರಕಟ ಗೋಪಾಲಾರ್ಯ ಪದವ ಸಾಕ್ಷಾತ್ಕರಿಸಿಸುಕರ ಸತ್ಯಾನಂದ ರೂಪ ನಾನಾದೆ 3
--------------
ಗೋಪಾಲಾರ್ಯರು
ಭಾಗವತರ ಭಾಗ್ಯನಿಧಿಯೆ ಭೋಗಿಶಯನ ಭೋ ಶ್ರೀರಾಮ ಪ ವೇದಾಗಮಕೆ ಸಿಲುಕದಂಥ ನಾದಬ್ರಹ್ಮಾಯೋಧ್ಯ ರಾಮ ಸಾಧುಜನಸಂಪ್ರೀತ ಭವರೋಗ್ವೈದ್ಯ ಸಾಧನ ಸಾಧ್ಯ ರಾಮ 1 ಬೋಧ ರಾಮ ಮಹದಾದಿ ರಾಮ 2 ಕಂಟಕ ದೂರ ರಾಮ ಪರಕೆಪರಮ ಪರಮಪುರುಷ ಸರುವ ಜಗದಾಧಾರ ರಾಮ 3 ಹತ್ತು ಅವತಾರೆತ್ತಿ ಭೂಭಾರ್ಹೊತ್ತು ಇಳುಹಿದ ಸತ್ಯ ರಾಮ ಜಗತ್ಕರ್ಮ ರಾಮ 4 ದಾಸಜನರಭಿಲಾಷೆಯನು ಪೂರೈಸಲೋಸುಗ ಈಶ ರಾಮ ಶೇಷಾಚಲನಿವಾಸನಾದ ದಾಸಗಣ ಸಂತೋಷ ರಾಮ 5 ಅಸಮ ಪಾದಕುಸುಮಗಳನಿಟ್ಟೊಸುಧೆ ವೈಕುಂಠೆನಿಸಿ ರಾಮ ಜನರಿಂಗೊಸೆದು ರಾಮ6 ಬ್ರಹ್ಮಾದಿಗಳ ಹಮ್ಮನಳಿದ ಕರ್ಮಚರ ಪರಬ್ರಹ್ಮ ರಾಮ ಸುಖಧಾಮ ರಾಮ 7 ದಾತ ರಾಮ ಗುರುನಾಥ ರಾಮ 8 ತತ್ವದರ್ಥ ಉತ್ತರಿಸೆನ್ನ ಕಟ್ಟುಮಾಡೊ ಶಿಷ್ಟರಾಮ ಮೂರ್ತಿ ರಾಮ 9 ಹುಟ್ಟಿಬರುವ ಕಷ್ಟದ್ಹಾದಿ ಕಟ್ಟುಮಾಡೊ ಶಿಷ್ಟರಾಮ ನಿಷ್ಠೆಯಿಂ ನಿಮ್ಮ ಮುಟ್ಟಿ ಭಜಿಪ ಪಟ್ಟಗಟ್ಟೆಲೊ ದಿಟ್ಟ ರಾಮ 10 ದಾಸಜನರ ವಾಸದಿರಿಸೊ ಕೇಶವ ಜಗದೀಶ ರಾಮ ದೋಷರಾಶಿ ನಾಶಗೈದು ಪೋಷಿಸೆನ್ನನನುಮೇಷ ರಾಮ 11 ವೇದ ವಿದ್ಯದ್ಹಾದಿಸಾಧನ ಭೋಧಿಸೆನಗ್ವಿನೋದ ರಾಮ ಪಾದಭಕ್ತಿ ಮೋದದಿತ್ತು ಭವಬಾಧೆಯಳಿ ಸುಖಸ್ವಾದ ರಾಮ 12 ಕಳಿ ಮಮಜೀವ ರಾಮ ಬಿಡಿಸೆನ್ನಯ ರಾಮ 13 ಮತ್ತೆ ಮತ್ತೆ ಪೃಥ್ವಿ ಮೇಲೆ ಸತ್ತು ಹುಟ್ಟಿ ಬೇಸತ್ತೆ ರಾಮ ಕರ್ತು ನಿನ್ನ ಗುರ್ತು ಅರಿಯದನರ್ಥವಾದೆನಾತ್ಮ ರಾಮ 14 ಆಸೆಯೆಂಬ ಪಾಶದಿಂದ ಘಾಸಿಯಾದೆ ಭವನಾಶ ರಾಮ ದೋಷದೂರೆನ್ನ ಕ್ಲೇಶಗಳನು ನಾಶಿಸೈ ದಯಭೂಷ ರಾಮ 15 ಅರಿದು ಅರಿದು ಉರಿವದೀಪದೆರಗುವ ಹುಳದಿರವು ರಾಮ ಸಿರಿಯ ರಾಮ 16 ಮರೆದು ನಾನು ಧರೆಗೆ ಬಿದ್ದು ದುರಿತದೊಳಗೆ ಬೆರೆದೆ ರಾಮ ಪೊರೆಯೊ ರಾಮ 17 ಕರುಣಿಸುತ ತಂದೆ ರಾಮ ಬಯಲ್ಹರಿಸು ರಾಮ 18 ಮಾನ ಅಭಿಮಾನ ನಿನ್ನದು ಧ್ಯಾನಿಪರ ಸುರಧೇನು ರಾಮ ಜ್ಞಾನವಿತ್ತು ಮಾನದಿಂದ ನೀನೆ ಪೊರೆ ಜಗತ್ರಾಣ ರಾಮ 19 ಭಿನ್ನವಿಲ್ಲದೆ ನಿನ್ನ ನಂಬಿ ಧನ್ಯನಾದೆನಿನ್ನು ರಾಮ ಎನ್ನ ಮನಸಿಗಿನ್ನು ಸಂತಸವನ್ನು ಕೊಡು ಪಾವನ್ನ ರಾಮ 20 ಭೃತ್ಯನ ಮಹ ಚಿತ್ತಭ್ರಮೆ ಮುರಿದೊತ್ತಿ ಕರಪಿಡಿದೆತ್ತು ರಾಮ ಭಕ್ತಿಯುಕ್ತಿ ಮುಕ್ತಿ ಸುಖವನಿತ್ತು ಪೊರೆ ಗುರುದತ್ತ ರಾಮ 21 ನಿಖಿಲವ್ಯಾಪಕ ಅಖಿಲರಕ್ಷಕ ಸಕಲಬಲ ನೀನೇಕ ರಾಮ ಮುಕುತಿಸಂಪದ ಸಿದ್ಧಿ ನೀನೆ ಭಕುತಪ್ರಿಯ ಲೋಕೈಕ ರಾಮ 22 ಭಿನ್ನವಿಲ್ಲದೆ ನಿನ್ನ ನಾಮವನ್ನು ಪೊಗಳುವರಿನ್ನು ರಾಮ ಮಾನ್ಯರಾಗನನ್ಯ ಸುಖಸಂಪನ್ನರೆನಿಪನನ್ಯ ರಾಮ 23 ಉದಯದೆದ್ದು ಪದುಳದೀನಾಮ ಓದಿಕೇಳಲು ಸದಾ ರಾಮ ಸದಯ ರಾಮ 24 ನಿತ್ಯ ಭಕ್ತಿಯಿಂ ಬರೆಯುತ್ತ ಪಠಿಸಲು ಕರ್ತುರಾಮ ಮುಕ್ತಿಯೆಂಬ ಸಂಪತ್ತನಿತ್ತು ಬಿಡದ್ಹತ್ತಿರಿರುವನು ಸತ್ಯ ರಾಮ 25
--------------
ರಾಮದಾಸರು
ಮನವೇ ನೀ ಬರಿದೆಜನ್ಮ ವ್ಯರ್ಥಗಳೆವರೆ ಬಂಗಾರದಥಾ ಪ ಮನವೇ ನೀ ಬರಿದೇ ಜನ್ಮ ವ್ಯರ್ಥಗಳೆವರೆ ಬಂಗಾರದಂಥಾ | ಮರೆವ ದಿನಗಳ ಜರಿವರೇ ನರದೇಹವಿದು ಅ.ಪ ದೊರೆಯದಿನ್ನು ಮತ್ತ ತರುವರ ಏನಾದರೇನೀ | ಹರಿಯ ಸ್ಮರಣೆಯ ಬಿಡುವರೇ | ಅರಿವ ಪಂಥ ವಿಡಿದು ಜನ್ಮ ಮರಣ ಬಲಿಯಾ ತಪ್ಪಿಸದೇ | ತಿಗಳಿ ಹುಳುವಿನಂತೆ ಸಿಕ್ಕ ತನ್ನ ತಾ ಮರೆವರೇ 1 ಕೇಳೆಲೋ ನೀ ಪೊಡವಿಯೊಳಗಿದ್ದ ಸಾಯಸಾ | ಉದಯದಲೆದ್ದು ಬಿಡುವದೆ ಮಲಮೂತ್ರ ಕೆಲಸಾ | ಮಧ್ಯಾನ್ಹದಲಿ ವಡಲ ತುಂಬುವ ಕೆಲಸಾ | ನಿಶಿಕಾಲದಲ್ಲಿ ವಡನೆ ಮಲಗುವ ಕೆಲಸಾ | ಪಡೆದ ತಾಯಿಯವ್ವನೆಂಬ ದೃಢವನವಾ ಕಡಿಯಲು | ಕೊಡಲಿಯಂತೆ ಹುಟ್ಟಿ ಬಂದೆ ಮಡದಿ ಮಕ್ಕಳುದ್ದೇಶಾ 2 ಮನವೇ ನೀ ಹಿಂದಿನವ ಗುಣ ಜರಿದು ಸದ್ಭಾವ ಭಕು | ತಿಂದ ನಡುವಳಿ ಬಿರಿದು | ಸದ್ಗುರುವೀನ | ದ್ವಂದ್ವ ಪಾದಗಳ ವಿಡಿದು | ಅವರ ದಯ | ದಿಂದ ಗತಿ ಮುಕ್ತಿ ಪಡೆದು | ಇಂದು ಧನ್ಯನಾಗೆಲೋ ಮುಕುಂದ ನಾಮ ನೆನೆದು ನೀ | ತಂದೆ ಮಹಿಪತಿ ನಿಜನಂದನುಸುರಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮನ್ಮನೋಜ್ಞಾ ಮನ್ನಿಸಿಲ್ಲಿಗೇ ಪ ಕಷ್ಟ ಪರಂಪರೆ ಕಳೆಯುವಾ ಇಷ್ಟಮೂರ್ತಿ ನಿನ್ನ ನೋಡದಾ 1 ಸಾಧುಗಳು ಸಾಧಿಸುತ್ತಿಹಾ ವೇದವೇದ್ಯ ಧನ್ಯನಾಗದಾ 2 ಪ್ರೇಮ ರೂಪಾ ಜಾಜೀಕೇಶವಾ ಸ್ವಾಮಿನಿನ್ನ ಪಾದಸೇರದಾ 3
--------------
ಶಾಮಶರ್ಮರು