ಒಟ್ಟು 139 ಕಡೆಗಳಲ್ಲಿ , 49 ದಾಸರು , 130 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನರ್ತನಗೋಪ ಕೃಷ್ಣ | ವಿಠಲ ಪೊರೆ ಇವನಾ ಪ ಅರ್ತು ನಿನ್ನಂಘ್ರಿಯಲಿ | ದಾಸ್ಯ ಕಾಂಕ್ಷಿಪನಾ ಅ.ಪ. ಪತಿ ಸುಪ್ರೀಯ | ಮಧ್ವಾಂತರಾತ್ಮಸದ್ಧರ್ಮರತಿಯಿತ್ತು | ತಿದ್ದಿ ಸಂಸ್ಕತಿಗಳನುಶ್ರದ್ಧಾಳು ವೆಂದಿನಿಸು | ಸಿದ್ಧಾಂತ ಸಥದೀ 1 ಬೋಧ ಓದಗಿಸಿಕಾಯೋ | ಬಾದರಾಯಣದೇವಮೋದದಿಂ ಪ್ರಾರ್ಥಿಸುವೆ | ಹೇ ದಯಾಪೂರ್ಣ 2 ಧ್ಯಾನುಪಾಸನವಿತ್ತು | ಶ್ರೀನಿವಾಸನಮನದಿಕಾಣುವ ಸುವಿಜ್ಞಾನ | ನಿನಾಗಿ ಕೊಡುತಾಮೌನಿಕುಲ ಸನ್ಮಾನ್ಯ | ಜ್ಞಾನದಾಯಕ ಹರಿಯೆದೀನಜನ ಮಂದಾರ | ನೀನಾಗಿ ಪೊರೆಯೊ 3 ಪಿತೃ ಮಾತೃ ಪರಿವಾರ | ವ್ಯಾಪ್ತ ಹರಿಮೂರ್ತಿಯನುಅರ್ಥಿಯಿಂದಲಿ ಭಜಿಪ | ಮತಿಯ ಪಾಲಿಸುತಾಕರ್ತೃತ್ವ ಭ್ರಾಂತಿಯನು | ಹತಮಾಡಿ ಶ್ರೀಹರಿಯೆಕೀರ್ತಿವಂತನ ಗೈಯ್ಯೋ | ಆರ್ತರುದ್ಧರಣಾ 4 ಮುನ್ನವೇ ತ್ಯೆಜಸನು | ನನ್ನೆಯಿಂ ಸೂಚಿಸಿಹಚೆನ್ನ ಅಂಕಿತವನ್ನೆ | ಇನ್ನು ಸ್ಥಿರಪಡಿಸೀಘನ್ನ ಉಪದೇಶವನು | ಚಿತ್ಗಾನಿಗೆ ಇತ್ತಿಹೆನೋಮನ್ನಿಸೀಕೃತ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಾನು ನಿನ್ನ ಸೇವಕ ಏನಾದರೂ ಬರಲಿ ನಿನ್ನ ಬಿಡುವನೆ ರಂಗಾ ಪ ಅಪತ್ತೆ ಬರಲಿ ಅತಿಶಯದ ಕ್ಲೇಶವೇ ಬರಲಿ ಕೋಪ ಕಾಮಾದಿಗಳು ವೆಗ್ಗಳಿಸಲಿ ಪಾಪದ ರಾಶಿಗಳು ಬಂದು ಬೆನ್ನಟ್ಟಲಿ ಶ್ರೀಪತಿ ನಿನ ಪಾದವನು ಬಿಡಬಲ್ಲನೆ 1 ಬಟ್ಟೆ ಅತಿ ಕಠಿಣವಾಗಲಿ ಯಮನಾಳು ಬಲು ಭಯಂಕರರಾಗಲಿ ಯಮನು ದಂಡಿಸಿ ತೀವ್ರ ನಿರಯದೊಳಗೆ ಇಡಲಿ ಕಮಲನಾಭನೆ ನಿನ್ನ ಪಾದವನು ಬಿಡಬಲ್ಲನೆ2 ಲೋಕದೊಳಗಿದ್ದ ಜನರಿಗೆ ಬಪ್ಪ ದೋಷಗಳು ಏಕವಾಗಿ ಎನಗೆ ಬರಲಿ ಇಂದೆ ನಾ ಕಳವಳಿಸಿದರು ನಿನ್ನಂಘ್ರಿಯಗಳಾಣೆ ಶ್ರೀಕಾಂತ ವಿಜಯವಿಠ್ಠಲರಂಗ ಕೇಳೊ3
--------------
ವಿಜಯದಾಸ
ನಿರ್ತದೊಡ್ಡದೈಯ್ಯಾ | ಅರ್ತವರಿಗೆಲ್ಲಿದೆ ಭಯವು ಪ ಗುರುವಿನಂಘ್ರಿಯ ಕಂಡು | ಗುರುದಯ ಪಡಕೊಂಡು | ಚರಿಸುವರಾನಂದ ನುಂಡು 1 ಘನದೆಚ್ಚರುಳ್ಳವಗ | ಬಿನಗುದೈವದ ಸಂಗ | ಆನಿಯೇರಿ ಕುನ್ನಿಯ ಹಂಗ 2 ಮೊಮ್ಮಕ್ಕಳ ಕಂಡಿರೆ | ಗುಮ್ಮನೆಂದರಂಜುವರೆ | ತಮ್ಮನುಭವ ಬಿಡುವರೆ 3 ಮುಂದಾಗುವ-ಹಿತೊಂದು | ಇಂದಿವೆ ಬಾರದ್ಯಾಕೆಂದು | ಮುಂದಗಿಡನು ಎಂದೆಂದು 4 ಮದಿರೆಕೊಂಡವನಂತೆ | ಮದವೇರಿಹ ನಗುತ | ಮಧುಹರನ ಕೊಂಡಾಡುತ 5 ತಂದೆ ಮಹಿಪತಿದಯಾ | ನಂದ ಕವಚದಿ ಕಾಯಾ | ಛಂದ ಮಾಡಿದಾ ಉತ್ಸಾಯಾ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಿ ನೋಡಿ ಸತ್ಯಪ್ರಿಯರ ನಾ ನಿಂದು ನಿಂದು ಪಾಡಿ ಪಾಡಿ ಯೋಗಿವರ್ಯರ ನಾ ಪಾಡಪಂಥದಲಿ ಬಂದ ಮೂಢ ಮಿಥ್ಯಾವಾದಿಗಳ ಓಡಿಸಿ ತನ್ನನು ಕೊಂ ಡಾಡಿದವರ ಪೊರೆವ ಯತಿಯ ಪ ನಾಗಸರ ನಾಗಬಂಧ ಕೊಂಬು ಕೊಳಲು ರಾಗದಿಂದ ಪಾಡುವ ಸನಾಯಿಸುತಿಗಳು ಬೇಗಿ ಕೂಗುವ ಹೆಗ್ಗಾಳೆ ದುಂದುಭಿ ಎಸಿಯೆ ಚತು ಪರಿಯಂತ ಮೆರೆದ ಯೋಗಿಗಳಾಗ್ರಣ್ಯನ1 ವಾದಿಗಳೆದೆಯು ಬಿರಿಯೆ ಧವಳ ಶಂಖದಾ ನಾದ ಒಪ್ಪ್ಪಿಸುತ್ತಿ ಮೆರೆವ ಬಿರಿದು ಸಮುದಾಯ ಮೇದಿನಿ ಸುರರು ಬಲದಾರಿಯಲಿ ಬರೆ ಆಶೀ ರ್ವಾದವನ್ನು ಕೊಡುವ ಧೀರನು 2 ಗಜ ಪಾಯಿದಳನೇಕಸಂದಣಿ ಯೋಜನದಗಲಕೆ ಘೋಷಣವಾಗಲು ರಾಜಾಧಿರಾಜರು ಪೂಜೆಯನ್ನು ಮಾಡುತಿರೆ ಈ ಜಗದೊಳಗೆ ಸಿದ್ಧ ತೇಜಪುಂಜರನ್ನ 3 ಅದ್ವೈತಮತಶಾಸ್ತ್ರ ವದ್ದು ಕಳವುತ ಮಧ್ವಮತವ ಎಂಬೊ ಸುಧಾಬ್ಧಿಗೆ ರಾಕೇಂದುನಂತೆ ಇದ್ದು ಭವರೋಗಳಿಗೆ ಮದ್ದು ಅಹುದೋ ಸುಗುಣದವರ4 ಹಿಂಡು ಬರಲಾಗಿ ಕಂಡು ಹರುಷದಿಂದ ಸಭಾಮಂಡಿತರಾಗಿ ಖಂಡ ತುಂಡು ಮಾಡಿ ಅವರ ದಿಂಡುಗೆಡಹಿ ಮಂಡಲಕೆ ಪುಂಡರಿಕಾಕ್ಷನೆ ಉದ್ದಂಡನೆಂದು ಸಾರಿದರನ5 ಬಿಜವಾಡದಲಿ ಕೃಷ್ಣ ತಜ್ಜಲದೊಳು ದುರ್ಜಂತುಗಳು ನರರಾ ಬೆಚ್ಚರಿಸಲು ಪ್ರಜ್ವಲಿಸುತ ಪೋಗಿ ಮಾರ್ಜನೆ ಯನ್ನು ಗೈದು ಭೀತ ರಾಜಝರವ ಬಿಡಿಸಿ ಕಾಯಿದ ಸಜ್ಜನರ ಮನೋಹರ 6 ದೇಶÀದೊಳೀ ಶೇಷವಾದ ದಾಸರ ಪ್ರಿಯ ಸಿರಿ ವಿಜಯವಿಠ್ಠಲೇಶನಂಘ್ರಿಯ ಸಾಸಿರ ದಳದ ಧ್ಯಾನ ಮೀಸಲಾಗಿ ಮಾಡುತಿಪ್ಪ ದೋಷರಹಿತರಾದ ಸಂ ನ್ಯಾಸ ಕುಲಭೂಷಣನಾ 7
--------------
ವಿಜಯದಾಸ
ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುರಾಘವೇಂದ್ರರ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳಅ.ಪ ಗಾಂಗೇಯ ಶಯ್ಯಜನು ಈ ನದಿಯ ತೀರದಲ್ಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ ಲದನು ತಮ್ಮೊಳು ತಿಳಿದು ತವಕದಿ ಹೃದಯ ನಿರ್ಮಲರಾಗಿ ರಾಗದಿ ಬುಧಜನರ ಸಮ್ಮೆಳದಲಿ ಸಿರಿ ವದನನಂಘ್ರಿಯ ತಿಳಿದು ನೆನೆವರ ಉದಿತ ಭಾಸ್ಕರನಂತೆ ಪೊಳೆವರ 1 ಆಲವಬೋಧ ಮಿಕ್ಕಾದ ಮಹಮುನಿ ಗಳು ಸಅಂಶರು ಒಂದು ರೂಪದಿ ನೆಲೆಯಾಗಿ ನಿತ್ಯದಲಿ ಇಪ್ಪರು ಒಲಿಸಿಕೊಳುತಲಿ ಹರಿಯ ಗುಣಗಳ ತಿಳಿದು ತಿಳಿಸುತ ತಮ್ಮ ತಮಗಿಂ ರಧಿಕರಿಂದುಪದೇಶ ಮಾರ್ಗದಿ ಕಲಿಯುಗದೊಳು ಕೇವಲ ಕ ತ್ತಲೆಯ ಹರಿಸುವ ಸೊಬಗ ಸಂತತ 2 ರಾಮ ನರಹರಿ ಕೃಷ್ಣ ಕೃಷ್ಣರ ನೇಮದಿಂದೀ ಮೂರ್ತಿಗಳ ಪದ- ತಾಮರಸ ಭಜನೆಯನು ಮಾಳ್ಪರು ಕೋಮಲಾಂಗರು ಕಠಿನಪರವಾದಿ ಸ್ತೋಮಗಳ ಮಹಮಸ್ತಕಾದ್ರಿಗೆ ಭೂಮಿಯೊಳು ಪವಿಯೆನಿಸಿದ ಯತಿ ಯಾಮ ಯಾಮಕೆ ಎಲ್ಲರಿಗೆ ಶುಭ ಕಮಿತಾರ್ಥವ ಕರೆವ ಗುರುಗಳ 3 ನೂರು ಪರ್ವತ ವರುಷ ಬಿಡದಲೆ ಚಾರು ವೃಂದಾವನದಲಿ ವಿ ಸ್ತಾರ ಆರಾಧನೆಯು ತೊಲಗದೆ ವಾರವಾರಕೆ ಆಗುತ್ತಿಪ್ಪುದು ಸಾರೆ ಕಾರುಣ್ಯದಲಿ ಲಕುಮೀ ನಾರಾಯಣ ತಾ ಚಕ್ರರೂಪದಿ ಸಾರಿದವರಘವ ಕಳೆದು ಇವರಿಗೆ ಕೀರುತಿಯ ತಂದಿಪ್ಪುದನುದಿನ4 ಮಿತವು ಎನದಿರಿ ಇಲ್ಲಿ ದಿನ ದಿನ- ಕತಿಶಯದೆ ಆಗುವುದು ಭೂಸುರ ತತಿಗೆ ಭೋಜನ ಕಥಾಶ್ರವಣ ಭಾ- ರತ ಪುರಾಣಗಳಿಂದಲೊಪ್ಪುತ ಕ್ಷಿತಿಯೊಳಗೆ ಮಂಚಾಲೆ ಗ್ರಾಮಕೆ ವ್ರತಿಯ ಇಲ್ಲವೆಂದೆನಿಸಿಕೊಂಬುದು ಪತಿತಪಾವನ ವಿಜಯವಿಠಲನ ತುತಿಸಿಕೊಳ್ಳುತ ಮೆರೆವ ಗುರುಗಳ 5
--------------
ವಿಜಯದಾಸ
ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ
ನೋಡು ನಿನ್ನೊಳು ನೀ ನೋಡು | ಸಾಕು ಸಾಕು ಈ ಲೋಕದ ನಡವಳಿ | ಯಾಕಬೇಕು ಪಿನಾಕಿಯ ಭಜಿಸೋ ಪ ಅಗಣಿತ ಸಂಪದ ಕೈಗೂಡುವದೋ ಅದ | ಬೇಡದೆ ಬೇಗನೆ 1 ಘಾಸಿ ಕ್ಲೇಶ ಬಡುವಿ ಜಗದೀಶನು ಒಲಿವನೆ ? 2 ಹಿಂದೆ ಜನ್ಮ ನೊಂದೆ ಸದ್ಗತಿ ಪಡೆಯದೆ | ಮುಂದೆ ಸಾಧಿಸು ಶಿವ ತತ್ತ್ವವ ಒಂದೇ | ತಂದೆ ಸದ್ಗುರು ಭವತಾರಕನಂಘ್ರಿಯ |ಹೊಂದಿ ನಿಜಾನಂದ ಬೋಧದಲಿರು ನೀ3
--------------
ಭಾವತರಕರು
ನೋಡು ನೋಡು ನಿನ್ನ ಹಿತವಾ ಪ ಇಂದು ನರದೇಹದಲ್ಲಿ ಬಂದುದೇನೋ | ಒಂದು ಪಥವರಿಯದಾ ಛಂದವೇನೋ ಅ.ಪ ಗುರುವಿನಂಘ್ರಿಯ ಕಂಡ ಗುರುತ ಅನುಭವನುಂಡ ಸೈಸ್ಯೆ | ಕರುವೇ ಬಾರೆನ್ನುತಾ ಸೈಸ್ಯೆ | ಶರಣ ಬಾರೆನ್ನುತಾ ಸೈಸ್ಯೆ | ಹರಿಯ ಭಕ್ತ ನೆನ್ನುತಾ ಧರಿಯೊಳ್ಹೀಂಗ ಹಿರಿಯರಿಂದ | ಕರಿಸ ಕೊಳ್ಳಲಾಗದೇ | ಬರಿದೆ ಭ್ರಾಂತಿಗೆ ಬಿದ್ದು | ಬರಡ ಜನ್ಮ ಮಾಡ ಬ್ಯಾಡಾ 1 ನೀಗಿ ಕೇಳು ಕೇಳು | ಆದಿ ಸನ್ಮಾರ್ಗವ ಕೇಳು ಕೇಳು | ಸಾಧನವ ಬಲಿಯೋ ನೀ | ಕಂದ ಭೂಮಿಯ ಮೇಲೆ ಹನಿ ಮಾಡದೇ 2 ಗುರುಮಹಿಪತಿಸ್ವಾಮಿ ಅರ್ಹವಿನೊಳಗೆರಕವಾದ ಧೀರ ಧೀರ| ನೀರು ಪದ್ಮ ಹೋಲುವಾ ಎರಡು ಸಮನಿನಿಸಿ ಸುಖ | ಭರಿತರಾದ ಪರಿಯಲಿ ಹರಿಯ ಧ್ಯಾನ ಬಲಿಯೋ ಮೈಯ್ಯ | ಮರೆಯಬೇಡಾ ಮನವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪದ್ಮನಾಭ ಪದ್ಮನಾಭ ಉಡುಪಿನ ಶ್ರೀಕೃಷ್ಣಜಯ ದುರ್ಜನರಿಗೆ ಅತಿದೂರ ಸುವ್ವಿಸುವ್ವಿ ಸುವ್ವಾಲೆ ಪ. ಸುರರ ಶಿರೋರನ್ನ ಗರುಡವಾಹನನೆ ಕರುಣಸಂಪನ್ನ ಉಡುಪಿನಕರುಣಸಂಪನ್ನ ಉಡುಪಿನ ಶ್ರೀಕೃಷ್ಣಶರಣಾಗು ಧನ್ಯ ಜನರಿಗೆ1 ಮುಖ್ಯಪ್ರಾಣ ಭಾರತೀರಮಣಗೆ ಎರಗುವೆ 2 ರಾಮನಂಘ್ರಿಯ ಸೇವೆ ಪ್ರೇಮದಿಂ ಮಾಡಿದಶ್ರೀಮಂತ ನಮ್ಮ ಹನುಮಂತಶ್ರೀಮಂತ ನಮ್ಮ ಹನುಮಂತನೆಂದವಗೆಕಾಮಿತಾರ್ಥಗಳ ಕೊಡುವನೆ 3 ಭಾರತ ಯುದ್ಧದಲಿ ಬಾಹುಬಲ ತೋರಿದಧಾರಿಣೀಶ್ವರ ತಿಲಕನೆಧಾರಿಣೀಶ್ವರ ತಿಲಕನೆ ಶ್ರೀ ಭೀಮಸಾರಿದ ಜನರ ಸಲಹುವ 4 ಶುದ್ಧಶಾಸ್ತ್ರಗಳಿಂದ ಗೆದ್ದು ವಾದಿಗಳನು ಹೊದ್ದಿದ ಜನರ ಕರುಣದಲಿಹೊದ್ದಿದ ಜನರ ಕರುಣದಲಿ ಹೊರೆವ ಶ್ರೀಮಧ್ವಮುನಿಪನ ಭಜಿಸುವೆ 5 ಹರಿಯ ಸತ್ಕರದಲ್ಲಿ ಕರುಣಂಗಳೊಡನೆದುರುಳ ವಾದಿಗಳ ಗೆಲಿದನೆÀದುರುಳ ವಾದಿಗಳ ಗೆಲಿದನೆ ಹೃಷಿಕೇಶಗುರುಗಳಂಘ್ರಿಗೆ ನಮಿಸುವೆ 6 ದೇಶ ದೇಶದೊಳುಳ್ಳ ದೂಷಿವಾದಿಗಳನ್ನು ದೂಷಿಸಿ ಹರಿಯ ಮಹಿಮೆಯನುದೂಷಿಸಿ ಹರಿಯ ಮಹಿಮೆಯ ಮೆರೆದ ಶ್ರೀನೃಸಿಂಹತೀರ್ಥಯತಿರಾಯ7 ಅದ್ವೈತವಾದಿಗಳ ಗೆದ್ದು ನಿರ್ಮಲವಪ್ಪಮಧ್ವಮಾರ್ಗವನು ಜಗಕೆಲ್ಲಮಧ್ವಮಾರ್ಗವನು ಜಗಕೆಲ್ಲ ತೋರಿದ ಜ-ನಾರ್ದನತೀರ್ಥಯತಿರಾಯ8 ಇಂದಿರೆಯರಸನ ಎಂದೆಂದು ಪೂಜಿಸಿಮಂದಮಾಯಿಗಳ ಕುಮತವಮಂದಮಾಯಿಗಳ ಕುಮತವ ಗೆಲಿದ ಉ-ಪೇಂದ್ರÀತೀರ್ಥಯತಿರಾಯ9 ಈ ಮಹಿಯೊಳಗುಳ್ಳ ತಾಮಸ ಜನರನ್ನುಶ್ರೀಮಧ್ವ ಮುನಿಪನ್ನ ಮತದಿಂದಶ್ರೀಮಧ್ವಮುನಿಪನ್ನ ಮತದಿಂದ ಖಂಡಿಸಿವಾಮನತೀರ್ಥರೆಸೆದರು 10 ಧೀರ ತಾಪಸರಾಗಿ ಗುರುಮಧ್ವಮುನಿಯಚಾರುಚರಣಂಗಳ ಪಿಡಿದಿರ್ದಚಾರುಚರಣಂಗಳ ಪಿಡಿದಿರ್ದ ಶ್ರೀವಿಷ್ಣು-ತೀರ್ಥರಡಿಗೆ ನಮಿಸುವೆ11 ಕಾಮನ ನೆರೆ ಅಟ್ಟಿ ಶ್ರೀಮಹಾವಿಷ್ಣುವೇ ಸ್ವಾಮಿ ಎಂಬುದನು ಜಗಕ್ಕೆಲ್ಲ ಸ್ವಾಮಿ ಎಂಬುದನು ಜಗಕ್ಕೆಲ್ಲ ತೋರಿದ ರಾಮತೀರ್ಥಯತಿರಾಯ12 ಮನುಮಥನಯ್ಯನ ಘನತೆಯ ತೋರಿಸಿನರ ಮೋಹಗಳ ಬಿಡಿಸಿದಜನರ ಮೋಹಗಳ ಬಿಡಿಸಿದ ಅಧೋಕ್ಷಜಮುನಿಕುಲಾಗ್ರಣಿಗೆ ನಮಿಸುವೆ13 ಮಧ್ವಕಿಂಕರರಾದ ಪದ್ಮನಾಭಾರ್ಯರವಿದ್ಯಾವೈಭವಗಳ ಪೊಗಳುವವಿದ್ಯಾವೈಭವಗಳ ಪೊಗಳುವ ಕವಿಯಾರುಶುದ್ಧ ಮುನಿಗಳಿಗೆ ಅಳವಲ್ಲ 14 ಸ್ವದೇವ ಹಯವದನನ ಆವಾಗ ಪೂಜಿಪ ಪಾವನ್ನ ಮಧ್ವಮುನಿಪನಪಾವನ್ನ ಮಧ್ವಮುನಿಪನ ಶಿಷ್ಯರಾದದೇವತೆಗಳ ಮರೆಹೊಕ್ಕೆ 15
--------------
ವಾದಿರಾಜ
ಪಾಂಡುನಂದನರಂತೆ ತೋರುತಿಹರು ಪಂಡಿತೋತ್ತುಮ ಸತ್ಯಧ್ಯಾನ ತೀರ್ಥರು ಪ ನಿಜಜ್ಞಾನ ಚಿಹ್ನದಿ ವಿಜಯಾದಿ ಸುದ್ಣುಣದಿ ಸುಜನ ಗಣದಿ | ವೃಜಿನ ವರ್ಜಿತರಾಗಿ ಗಜವರದನಂಘ್ರಿಯುಗ ಭಜನ ತತ್ಪರರಾಗಿ 1 ಧರಮ ಬಲ್ಲವರಾಗಿ ಗುರುಭಕ್ತಿ ಯುತರಾಗಿ ವರ ಸುಗೀತಾರ್ಥ ತತ್ವಜ್ಞರಾಗಿ ಧರಣಿ ಮೇಲುಳ್ಳ ಸುಕ್ಷೇತ್ರ ತತ್ತೀರ್ಥ ಚರಿಸುತಲಿ ಕರಿತುರಗ ಪರಿಪಾಲಿಸುವರಾಗಿ 2 ಋಷಿ ವ್ಯಾಸರುಕ್ತಿಯಲಿ ನಿಶೆಹಗಲು ಮನವಿರಿಸಿ ವಸುಧಿ ಸುರರಿಗೆ ಸನ್ಮೋದಗೊಳಿಸಿ ವಸುದೇವಸುತ ಶಾಮಸುಂದರನ ವಶಗೊಳಿಸಿ ದಶ ದಿಶದಿ ಜಯಭೇರಿ ಅಸಮರೆಂಡೊಡೆಸುತಲಿ 3
--------------
ಶಾಮಸುಂದರ ವಿಠಲ
ಪಾಲಿಸೆನ್ನನು ನಿರುತ ಪವನರಾಯ | ಫಾಲಲೋಚನ ನಮಿತ ಪಾವನ್ನಕಾಯ ಪ ಅಭಿನಮಿಸಿ ಭಜಿಪರಿಗೆ ಉಭಯ ಕಷ್ಟವ ಕಳೆದಿ | ಶುಭವಿಭವನೆಗರಿದು ಪೊರಿಯುವಲ್ಲಿ | ಪ್ರಭುವನಧಿ ನಿನ್ನಂಥ ಪ್ರಬಲ ಪ್ರಭುಗಳ ಕಾಣಿ ಸನ್ನುತ ಮಹಿಮ ಅಭಿಗಾರಪುರವಾಸ 1 ನಿನ್ನನೆ ನೆರೆನಂಬಿ ನಿನ್ನನೆ ಧ್ಯಾನಿಸುತ ನಿನ್ನ ಸನ್ನಿಧಿಯಲ್ಲಿ ನೆಲೆಸಿಪ್ಪೆ ನಾ | ಬಿನ್ನಪವ ಲಾಲಿಸಿ ಬನ್ನಗಳ ಪರಿಹರಿಸಿ ನಿನ್ನೊಡೆಯನಂಘ್ರಿಯಲಿ ಘನ್ನ ಭಕುತಿಯ ಕೊಟ್ಟು 2 ಭೂಮಿಜಾತೆಯ ರಮಣ ಶಾಮಸುಂದರ | ಬದರಿ ಧಾಮ ಮೂರುತಿತ್ರಯ ಪ್ರೇಮ ಪಾತ್ರ | ಕಾಮಿತಪ್ರದ ಹನುಮ ಭೀಮ ಗುರುಸುಖತೀರ್ಥ ಯಾಮ ಯಾಮಕೆ ಹರಿಯ ನಾಮ ಜಿಂಹ್ವೆಯೊಳಿಟ್ಟು 3
--------------
ಶಾಮಸುಂದರ ವಿಠಲ
ಪಾವಮಾನಿಯೆ ತವ | ಯಾವ ಮಹಿಮೆಯೊಳೇಕಭಾವ ಪೊಗಳಲು ಆವ | ದೇವತೆಗಳಿಗಳವೇ ಪ ಶ್ರೀವರನಂಘ್ರಿಯ | ಸೇವೆಗೈವಲಿ ಬಹು | ಧಾವಿಸೀ |ಬಹು ಎಚ್ಚರದಿ ಸೇವಿಸೀ ||ನಿರುತ ಭಕ್ತಿಯ | ಭಾವದಲಿ ದುರಿ | ತಾವಳಿ ವಿಭಾವಸುನೀ ವೊಲಿದು ಭೃ | ತ್ಯಾವಳಿಯ ಪಾಲಿಪೆ | ಸಾರ್ವಕಾಲ ಮ-ತ್ತೋರ್ವರಿಲ್ಲವೊ | ದೇವರೊತ್ತಮ | ದೇವ ನೀನೇ ಅ.ಪ. ಸೂರ್ಯ ಮೋಚನ |ಆಶಿಸುತಲಿ ಹಾರಿ | ದೋಷವ ಕಳೆಯಲು | ಯತ್ನೀಸೆ ಆ ಸುಮಹದಾಕಾರ ಶೃಣಗೈದೀವಾಸವನು ನಿನ ಘಾತಿಸಲು ಕುಲಿಶದೀ ಅದಕಂಡು ತವ ಪಿತಶ್ವಾಸಗಳ ಬಲು ಪರಿಯ ರುದ್ಧಿಸಲು | ಮೂರ್ಲೋಕ ತಪಿಸೇಅಸುರರು ವಿಧಿವಿಧದಿ ಮೊರೆ ಇಡಲೂ | ಆಲೈಸ ನಾಲ್ಮೊಗಶ್ವಾಸ ಸತಿಯನು ಸೂಸಿ ಸೂಚಿಸಲೂ | ಅದಕೇಳಿ ಮತ್ತೆಲೇಸುಗೈಯ್ಯಲು ಮನವ ಮಾಡಲೂ ವಾಸವಾದ್ಯರಶ್ವಾಸ ಮಾಡುವ ತೆರನ ಮಾಡೆಯ್ದೊಕ್ಲೇಶನಾಶನ ಶ್ವಾಸಮಾನಿ ಮಹಾ ಕೃಪಾಳೊ 1 ವ್ರಾತ ಮಣಿ ರಘು | ಜಾತಗಿತ್ತೆಯೊ | ಮಾತರಿಶ್ವಾ 2 ಪುಂಡರೀಕಾಕ್ಷ ಉರ ಬಗೆದು ಕರುಳಕೊಂಡು ಕೊರಳಲಿ ಧರಿಸೀ | ನರ ಮೃಗನ ಲೀಲೆಕಂಡು ದ್ವಯೆ ಬಲ ತಪಿಸೀ | ಅರಕ್ಷೌಹಿಣಿ ಮುಂ-ಕೊಂಡು ನೀನೆ ಸಂಹರಿಸೀ | ಕೌರವನ ತೊಡೆಖಂಡಿಸುತವನ ಛೇದಿಸೀ |ಅಂಡಜಾಧಿಪವಹಗೆ ಅರ್ಪಿಸಿ | ನಿಂದೆ ಭೀಮಾ 3 ಅದ್ವೈತ ಸಿದ್ಧಿಲಿಹೇಯ ಬಹಳವ ನೀನೆ ತೋರಿಸೀ | ಬದರಿಯಲಿ ಬಾದರಾಯಣರಿಂದ ಉಪದೇಶೀಸಿ | ಮತ್ತಿಲ್ಲಿ ಬರುತಲಿಧೇಯ ಸಾಧಿಸೆ ಗ್ರಂಥ ಬಹು ರಚಿಸೀ | ಕುಭಾಷ್ಯಗಳ ಬಹುಹೇಯತ್ವವನೆ ಸಾಧಿಸೀ | ವಾದ ಕಥೆಯಲಿಮಾಯಿಗಳ ಬಲುಪರಿಯ ಸೋಲಿಸೀ |ಕಾರ್ಯ ಸರ್ವವ | ರಾಯ ಕೃಷ್ಣಗೆ ಅರ್ಪಿಸಿದೆ ಮಧ್ವಾ 4 ಪರಿ ವ್ಯಾಪ್ತನೆ | ಅಧ್ಯರ್ಥ ರೂಪಿಅಪ್ರಾಪ್ಯ ಅಶಕ್ತಿ ರಹಿತಾನೇ |ವ್ಯಾಪಿಸುತ ಜಗ | ವೀಪರೀಯಲಿ | ಮಾಳ್ಪೆ ಪ್ರಾಣಾ 5 ಮೋಕ್ಷಾಧೀಚ್ಛೆಯ ವರ್ಜ | ಅಚ್ಛಿನ್ನ ಭಕುತಾನೇದಕ್ಷಿಣಾಕ್ಷಿ ಗೋ | ವತ್ಸ ರೂಪಾನೇ ||ಅಕ್ಷಿಯೋಳಿಹ ತ್ರಿದಶಾ | ದ್ಯಕ್ಷರಿಂದಲಿ ಸಂ | ಸೇವ್ಯಾನೇ |ಕಂಠದಲಿ ನೀ ಹಂಸೋಪಾಸಕನೇ |ಶಬ್ದಗಳ ನುಡಿದು ನುಡಿಸುತಿರುವಾನೆ | ಕೂರ್ಮರೂಪಿ ಸಲಕ್ಷಣದಿ ಬ್ರಹ್ಮಾಂಡ ಧಾರಕನೆ | ಸಪುತ ಸ್ಕಂದಗತಇಚ್ಛೆಯಲಿ ಲೋಕಧಾರಕನೆ | ಬೃಹತಿ ಸಾಸಿರವಾಚ್ಯನೆಂದೆನಿಸುತ್ತ ಸ್ತುತ್ಯಾನೆ | ಪತ್ಯಬಿಂಬ ಮುಖ್ಯನೆಈಕ್ಷಿಸುವೆ ಸರ್ವತ್ರ ಹರಿಯನ್ನೆ | ಮುಂದಿನಜ ಅಪರೋಕ್ಷವನು ಪಾಲಿಸೆಂಬೇನೆ ||ಮೋಕ್ಷದನೆ ಕರುಣಾ ಕಟಾಕ್ಷದಿ | ಈಕ್ಷಿಪುದು ಪವನ 6 ಜೇಷ್ಠ ಶ್ರೇಷ್ಠನೆ ಸ | ಮಷ್ಟಿ ರೂಪನೆ ಪವನ |ವ್ಯಷ್ಟಿರೂಪದಿ ಜಗದಿ | ವರೀಷ್ಟನೇ ||ನಿಷ್ಠೇಲಿ ಭಜಿಪರಿ | ಗಿಷ್ಟಾರ್ಥವನೆ | ಸಲಿಸೂವೇ |ಅತಿರೋಹಿತ ವಿಜ್ಞಾನಿ ಎನಿಸಿರುವೆ ||ಸಕಲ ಗುಣಗಣ ಭೋಕ್ತøವೆನಿಸಿರುವೆ | ಸಕಲ ಜ್ಞಾನೋಪದೇಷ್ಟನೆಂದೆನಿಸಿ ಕರೆಸೂವೆ | ಶಿವ ಶೇಷ ಖಗಪರಿನಿಷ್ಟ ಗುರು ನೀನೆ ಎನಿಸಿರುವೆ ಸಜಾತಿ ಗುಣ ಅಯುತವರಿಷ್ಟನು ನೀನು ಆಗಿರುವೆ | ವಿಜಾತ್ಯನಂತ ಗುಣಗರಿಷ್ಟ ರೂಪಿ ಎನಿಸಿರುವೇ | ವೇದಾನುಕ್ತ ಗುಣವಿಶಿಷ್ಟ ರೂಪದಲಿಂದ ಮೆರೆಯುವೇ ||ಇಷ್ಟ ಗುರು ಗೋವಿಂದ ವಿಠ್ಠಲ | ಪ್ರೀತಿ ಪಾತ್ರನು ಆದ ಪ್ರಾಣ 7
--------------
ಗುರುಗೋವಿಂದವಿಠಲರು
ಪಾಹಿ ಪಾಹಿ ಮೋಹನ್ನರೆ | ಲೋಹಲೊಷ್ಟ ಸಮೇಕ್ಷಣ ಪ ಪಾದ ಸೇವೆ | ವಿಹಿತದಿ ನೀಡೆನಗೆ ಅ.ಪ. ಪಾದ | ಬಂಡುಣಿಯಂದದಲೀಮಾಂಡವ್ಯರಾಗಿರುವಾಗ | ಚಂಡತಪ ಮಾಡಿದಿರಿ 1 ಗಾಣಿಗನುದರದೀ | ಜನಿಸುತ ಪೂರ್ವದೀಧನ ಬಹುಗಳಿಸುತ | ಜನುಮವ ನೂಕಿದಿರಿ2 ಗಳಿಸಿದ ಧನವನೂ | ಲಲನೆಗೂ ಪೇಳದೇಮಲಿನ ದೇಹವನೀಗಿ | ಕಳೆದಿರಿ ಪ್ರಾರಬ್ಧವ 3 ಸತಿಸುತ ಬಂಧು ಜನ | ಗತಿತಪ್ಪಿ ಭ್ರಾಂತರಾಗೀಅತಿ ಅತಿ ವ್ಯಥೆಯಿಂದ | ಪಾಥೇಯವ ಕಾಣಲಿಲ್ಲ 4 ಚಿನಿವಾರ ನೂದರದೀ | ಪುನರಪಿ ಜನಿಸಲೂಜನನಿಯು ಅನುವನು | ಕಾಣದಲೆ ಚಿಂತಿಸಿದಳ್ 5 ಆರ್ತಳಾಗುತ ಚಕ್ರ | ತೀರ್ಥವ ಪೊಗಲೂ ಬರೇಪಾರ್ಥ ಸಖನ ಭಕ್ತ | ಆರ್ತೆಯನು ತಡೆದರು 6 ಆಕೆಯ ಶಿಶು ಸಹಾ | ಸಾಕುವೆನೆನುತಲೀಶ್ರೀಕರ ವಾಕ್ಯವಿತ್ತು | ಭೀಕರವ ತಪ್ಪಿಸಿದ 7 ವಿಜಯರಾಯರು ಬಂದೂ | ನಿಜಸತಿ ಮಡುವಿನೊಳ್‍ತೇಜಸ್ಸಿನಿಂ ಮೆರೆವಂಥ | ದ್ವಿಜಸುತನರ್ಪಿಸಿದರ್ 8 ಮೋಹನ ಬಾಲನಿಗೆ | ಮೋಹನ ವಿಠಲನಾಮೋಹದಂಕಿತವಿತ್ತು | ಮಾಹಿತಾಂಘ್ರಿ ನೆನೆಸಿದರ್ 9 ಮುಂಜಿ ಮದುವೆ ಮಾಡೀ | ಹಂಜರದಿ ನಿಲಿಸುತಾಕಂಜಾಕ್ಷನಂಘ್ರಿಯನು | ಅಂಜಾದಲೆ ಭಜಿಸೆಂದರ್10 ಚಿನಿವಾರತನದಿಂದ | ಧನವನು ಗಳಿಸಿದಾಜನುಮ ಪೂರ್ವದಸ್ಮøತಿ | ಮನದೊಳು ನೆನೆದೆಯೋ11 ಗಾನವ ಮಾಡುತಲೀ | ಗಾಣಿಗತನಯರನೂಕಾಣುತಲೀ ಪೇಳಿದೆಯೊ | ಧನವಿಟ್ಟ ಸ್ಥಳವನು 12 ಗುರುಗಳ ಕರುಣಿಯಿಂ | ಹರಿದೆಯೊ ಅಪಮೃತೀನೆರೆದಿದ್ದ ಜನರುಗಳ್ | ಅರೀಯರು ಸೋಜಿಗವ 13 ಮೋದ ತೀರ್ಥರ ಮತ | ಸಾಧಿಸಿದೆ ಜಗದೊಳು14 ಪವನಾಂತರಾತ್ಮ ಗುರು | ಗೊವಿಂದ ವಿಠಲನಾಪಾವನಾ ಸ್ಮರಣೆಯಿಂ | ಭವವನು ಕಳೆದೆಯೋ 15
--------------
ಗುರುಗೋವಿಂದವಿಠಲರು
ಪುರಂದರ ಗುರುರಾಯಾ ಸತ್ಪ್ಪುಣ್ಯ ಕಾಯಾ ಪ ನಿರುತ ನಿನ್ನ ಚರಣ ಸೇವೆ ಕರುಣ ಮಾಳ್ಪದೋ ಜೀಯಾಅ.ಪ. ಬಹು ಜನ್ಮಗಳಲ್ಲಿ ನಾನು ಮಹ ಪುಣ್ಯ ಮಾಡಿದವರ ಸಹವಾಸದಲಿದ್ದು ಗ್ರಹದ ಮುಂದೆ ಗ್ರಹದಿಂದೆನಗೆ ಮಹಿಸುರ ಜನ್ನವಿತ್ತೆ 1 ಶ್ವಾನ ಸೂಕರನೊ ನಾನದನು ಕಾಣೆನೊ ಮತ್ತಾವನೊ ನಾನಾ ಜೀವನೊ ಆನು ಒಂದು ತಿಳಿಯೆ ಗುರುವೆ ನೀನೆ ಬಲ್ಲಿ ಎನಗೆ ಬಂದ ಅನಾದಿ ಶರೀರವ ಅಜ್ಞಾನವನ್ನೇ ತೆಜಿಸುವುದು2 ಯಾಚನೆ ದೇಹದಲ್ಲಿ ಊಚು ಭಾಗ್ಯವ ಜಯಸದಿಪ್ಪ ಯೋಚನೆಯಿಂದಲಿ ಕಮಲಲೋಚನ ನಿನ್ನಂಘ್ರಿಯಾ ಕರವ ಬಾಚೆನೊ ಹೀನರಿಗೆ ನಿನ್ನ ಪಾಚಕರ ಮನೆಯ ಪರಿಚಾರ ಸಿದ್ಧÀ್ದವಾಗಲಿ 3 ಹಿಂದೆ ಏನು ಪ್ರೇರಿಸಿದಿಯೊ ನಂದವ ನಾನರಿಯೆನೊ ತಂದೆ ತಾಯಿ ನೀನೆ ಎಂದು ಪೊರದಿ ಸಂದೇಹವಿಲ್ಲ ಯೆಂದು ಪೊರೆದದ್ದು ನಿನ ಕರುಣವಲ್ಲವೆ ಮತ್ತೆ ಭಾರವು ನಿನದೆಂದು ನಾ ಪ್ರಾರ್ಥಿಸುವೆ 4 ತಿರುಗುವುದು ಕುಳ್ಳಿರುವುದು ಬರುವುದು ಮತ್ತೇಳುವದು ಮರಳೆ ಮಾತನಾಡುವುದು ವಾಸರದಲ್ಲಿ ಬಿಡದೆ ಸಿರಿ ವಿಜಯವಿಠ್ಠಲನ್ನ ಕರದೊಳಿಪ್ಪಂತೆ ಮಾಳ್ಪದೊ ಜೀಯಾ 5
--------------
ವಿಜಯದಾಸ
ಪೂಜಿಸ ಬಲ್ಲೆನೆ ನಾನು ನಿನ್ನಂಘ್ರಿಯ ರಾಜೀವದಳ ನಯನ ಪ ಭಂಜನ ಭವ ರಾಮಚಂದ್ರ ಸೀತಾ ಹೃತ್ಕುಮುದ ಚಂದ್ರ ಅ.ಪ ಪಾರಿಜಾತ ಪುನ್ನಾಗ ಬಕುಳ ಮಂ- ದಾರ ಮಲ್ಲಿಕ ಕೇತಕೀ- ಸಾರಸ ಜಾಜಿ ಚಂಪಕ ತುಳಸಿಯುಕರ- ವೀರವೇ ಮೊದಲಾದ ದಿವ್ಯ ಪುಷ್ಪಗಳಿಂದ 1 ವಿಶ್ವಾದಿ ಸಾಹಸ್ರನಾಮಂಗಳಿಂ ನಿನ್ನ ಶಾಶ್ವದ್ರೂಪವ ತಿಳಿದು ಅಶ್ವಮುಖಾನಂದಮಯ ಪರಮಾತ್ಮ ನಿ- ನ್ನರ್ಚಿಸುವಡೆ ಚಪಲ ಚಿತ್ತಗೆ ಸಾಧ್ಯವೆ 2 ಸೂರ್ಯ ಚಂದ್ರರು ದೀಪ ನೀರೆಲ್ಲ ಅಭಿಷೇಕವೂ ತೋರೂವದಿಗ್ವಸ್ತ್ರ ಪೃಥ್ವಿಗಂಧವು ಸರ್ವ ಸಾರ ಭೋಕ್ತಗೆ ಗುಣಗಳ ತಾಂಬೂಲಾದಿಗಳಿಂದ3 ಕಮಲ ಸದನ ಹಂಸಾಖ್ಯ ಕು- ಡಿದ ನೀರು ಅಭಿಷೇಕವೂ ಮುದದಿ ನಿತ್ಯದಿ ಉಂಬುವುದೆ ನೈವೇದ್ಯವು ಪ್ರತಿ ಪದ ಪ್ರದಕ್ಷಣೆ ಮಲಗುವದೆ ವಂದನೆಯೆಂದು 4 ಒಂದು ಅರಿಯದ ಉಭಯಾಂಧನು ನಾನು ಗೋ- ವಿಂದ ನಿನ್ನಯ ಭಕ್ತಾರಾ ಸಂದೋಹದೊಳಗಿಟ್ಟೆನ್ನರ್ಚನೆ ಕೈಕೊಂಡು ತಂದೆ ಪಾಲಿಸೋ ಗುರುರಾಮ ವಿಠಲ ಸ್ವಾಮಿ 5
--------------
ಗುರುರಾಮವಿಠಲ