ಒಟ್ಟು 568 ಕಡೆಗಳಲ್ಲಿ , 86 ದಾಸರು , 494 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರು ಕೊಟ್ಟರು ಕೊಟ್ಟರಾರುಂಡರಾರಿಲ್ಲಿಬೇರೆ ನಾ ನೀ ನಾನೆಂದು ಕೆಡುವುದೀ ಲೋಕ ಪಕಾಲ ಚ್ಟೇಸಿತು ಕರ್ಮವು ಕೊಟ್ಟಿತೀ ಕಿವಿಗಳಾಲಿಸಿತು ಕಂಡಿತಕ್ಷಿಗಳೆಂದಿತಂಘ್ರಿಲೀಲೆಯಲಿ ಕೈಪಿಡಿಯುತಾ ಘ್ರಾಣಿ ಘ್ರಾಣವೀ ಲೋಲ ಚಿತ್ತವನುಸಂಧಾನಗೆಯ್ತು 1ಪ್ರಾಣ ಒಳಕೊಂಡಿತನ್ನವನು ಸಂಕಲ್ಪಿಸಿತುದೀನ ಮನಮತಿಗೆ ನಿಶ್ಚಯವಾುತೂತಾನಿದರೊಳಾರು ಕೊಂಬವನೊ ಕೊಡುವನೊ ದುರಭಿಮಾನದಿಂ ಕೆಡುತಿಹರು ನೀನು ನಾನೆಂದು 2ಭಾನು ಜಲದಲಿ ಪೊಳೆಯಲದರ ಕಂಪಾದಿಗಳುಭಾನುವಿನದೆಂದು ಭ್ರಮಿತರು ಬಗೆವ ತೆರದಿಜ್ಞಾನಮಯ ನಾದಾತ್ಮ ಹಮ್ಮಿನೊಳ್ಪೊಳೆಯಲಜ್ಞಾನದಿಂದೀ ರಾಸಿ ನಾನೆನ್ನುತಿಹರೊ 3ಈಯನಿರ್ವಚನೀಯ ಜೀವತ್ವವೆಂದರಿದುಕಾಯದಲಿ ಕೂಟಸ್ಥ ಸತ್ಯವೆಂದೂಮಾಯದಿಂದ ತೋರಿ ತಾನೀ ವಿಶ್ವಪುಸಿ ಎಂದುಹೇಯ ಭೋಗದಲನಾಸಕ್ತನಾಗಿರದೆ 4ತಾನು ನಿರ್ಲೇಪನೆಂದರಿಯದೆ ಶರೀರಾಭಿಮಾನದಿಂ ಗೋಪಾಲ ಯತಿಯ ಚರಣವನೂಸಾನುರಾಗದಲಿ ಸೇವಿಸದೆ ಮಿಥ್ಯಾವಿಷಯದೀನತೆಯನೈದಿ ರಾಗಾದಿಗಳ ಬಿಡದೆ 5
--------------
ಗೋಪಾಲಾರ್ಯರು
ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ಆವ ಕರ್ಮವಿಲ್ಲ ಆವ ಧರ್ಮವಿಲ್ಲವೋ |ಕೇವಲಾನಂದಭಾವ ಬೋಧದಲ್ಲಿ ಬೆರೆಯಲು ಪ ತನುವು ಬೇರೆ ಮನವು ಬೇರೆ | ಮನದ ಒಳಗೆ ನೆನಹು ಬೇರೆ | ತನುವು ಮನವು ನೆನವಿಗಿನ್ನು | ಸಾಕ್ಷಿಯಾಗಿಹ | ಚಿನುಮಯಾತ್ಮ ತಾನೆ ತನಗೆ | ಜನನ ಮರಣ ಎಂಬುದೆಲ್ಲ | ಮನದ ಆಟವೆಂದು ತಿಳಿದು | ಉನ್ಮನದಿ ಘನದಿ ನಲಿವಗೆ 1 ಸತ್ಯ ಶರಣರಡಿಯ ಪಿಡಿದು | ತತ್ತ್ವ ಶಾಸ್ತ್ರವನ್ನು ತಿಳಿದು |ನಿತ್ಯಾನಿತ್ಯವನು ವಿವರಿಸುತಲಿ | ಭಕ್ತಿಯಿಂದಲಿ ||ನಿತ್ಯ ಪೂರ್ಣ ವಸ್ತು ತಾನೆ | ಮತ್ತೆ ಬೇರೆ ಇಲ್ಲವೆಂದು |ಚಿತ್ತದಲ್ಲಿ ತಿಳಿದುಕೊಂಡು | ಮಿಥ್ಯವೆಲ್ಲ ಕಳೆದಗೆ 2 ಹಿಂದಾದುದ ನೆನಿಸಲಿಲ್ಲ | ಮುಂದೆ ಒಂದು ಬಯಸಲಿಲ್ಲ |ಬಂದುದೆಲ್ಲ ಸುಖವು ಎಂದು ಶಾಂತದಿಂದಲಿ ||ತಂದೆ ಭವತಾರಕನ | ಹೊಂದಿ ಪೂರ್ಣ ವಸ್ತುವಾಗಿ |ಬಂಧನವನು ಕಡಿದು ಕೊಂಡು | ಆನಂದದಲಿರುವವಗೆ 3
--------------
ಭಾವತರಕರು
ಆವಪರಿಯಿಂದಲಾದರೂ ರಾಮನಾಮವನು ಆವ ಪರಿಯಲಿ ನೆನೆದು ಸುಖಿಯಾಗು ಮನವೆ ಪ ಪಿತನಾಜ್ಞೆ ಲಕ್ಷಿಸದೆ ದೃಢದಿ ಪ್ರಹ್ಲಾದನು ಅತಿಶಯದಿ ಹರಿಯ ಧ್ಯಾನವ ಮರೆಯದೆ ಮತಿಗೇಡಿಯಾದ ಮಗನೆನುತ ಕುಲಗೆಡಿಸೆ ಶ್ರೀ ಪತಿಯು ತಾ ಬಂದು ಕಾಯ್ದುದೇ ಸಾಕ್ಷಿ 1 ದೋಷಹಿತನಾದ ದಶಶಿರನ ಒಡಹುಟ್ಟಿ ಕೇಶವನ ಧ್ಯಾನವನು ಮರೆಯದಿರಲು ಸಾಸಿರ ರಾಮಕಥೆಯುಳ್ಳನಕಾ ವಿ- ಭೀಷಣಗೆ ಸಾಮ್ರಾಜ್ಯವಿತ್ತುದೇ ಸಾಕ್ಷಿ 2 ಗಂಡರೈವರು ಸುತ್ತ ಕೆಲದಲಿರಲಾ ಸತಿಯ ಲಂಡ ದುಶ್ಶಾಸನ ಹಿಡಿದೆಳೆಯುತಿರಲು ಪುಂಡರೀಕಾಂಬಕನೆ ಸಲಹೆನಲು ಕರೆಯಲು ದ್ದಂಡನಾಭನೆ ಬಂದು ಕಾಯ್ದುದೇ ಸಾಕ್ಷಿ 3 ಯುದ್ಧಕೆ ನಡೆದಾಗ ಹಂಸಧ್ವಜಸುತನು ತನ್ನ ಬೇ ಕಾದ ಸತಿಯ ಆಜ್ಞೆಯ ನಡೆಸಲು ಪಿತನು ಕಾದೆಣ್ಣೆ ಕೊಪ್ಪರಿಗೆಯೊಳಗೆ ಸುಧನ್ವನ ಹಾಕೆ ಹರಿ ಕಾಯ್ದನೆಂಬುದ ಲೋಕವರಿದುದೆ ಸಾಕ್ಷಿ 4 ಉರ್ವಿಯೊಳು ವಿಪ್ರಜನ್ಮದಿ ಜನಿಸಿದಜಮಿಳಗೆ ಪೂರ್ವಸಂಚಿತ ಪಾಪಶೇಷವಿರಲು ಓರ್ವ ಸತಿಗಾಗಿ ಚಂಡಾಲತಿಯೊಳಗಾಗಿರೆ ಗೀರ್ವಾಣಪುರಿ ಲಕ್ಷ್ಮೀಶನೊಲಿದುದೇ ಸಾಕ್ಷಿ 5
--------------
ಕವಿ ಲಕ್ಷ್ಮೀಶ
ಇಂದಿನಾಜನ್ಮದಲಿ ದರಿದ್ರನು ಇಂದು ಕೊಡಲಿಕೆ ಇಲ್ಲ ಎಂದೆಂದಿಗೂ ಹುಟ್ಟು ದರಿದ್ರನು ಪ ಅನ್ನವನು ಅತಿಥಿಗಿಕ್ಕದಕಾರಣ ಕೈಯಾರೆ ಮಾಡದಕಾರಣ 1 ಇಲ್ಲದ ಕಾರಣ ದರಿದ್ರವದುಕಾರಣ 2 ಮಾಡುವುದು ಕೋಪವನು ಅದು ಕಾರಣ ರೂಢಿಯೊಳು ದರಿದ್ರವದುಕಾರಣ 3 ಬಂಗಾರವಿಲ್ಲದು ಕಾರಣ ಮುನ್ನದಾನವನು ಮಾಡದಿಹಕಾರಣ 4 ನೆರೆಮಾಡಿ ಭಕ್ತೀಯೊಳುದಾರಿದ್ರವ ಪರಿಹರಿಸಿ ನೊಲಿದವರಿಗೆ ಭಾಗ್ಯ ಬಹುದದುಕಾರಣ 5
--------------
ಕವಿ ಪರಮದೇವದಾಸರು
ಇಂದಿರೇಶನ ಪದದ್ವಂದ್ವಕಮಲ ಭಜಿಪ ಶ್ರೀ ಗುರುವರ ಭೂಪ ಪ. ಬಂದೆನು ನಿಮ್ಮ ಪದ ಸಂದರುಶನಕೀಗ ನೀಗಿರಿ ಭವರೋಗ ಅ.ಪ. ಬಂದವರಯೋಗ್ಯತೆ ಅರಿತಂಕಿತವೀವ | ಕರುಣಾಳುವೆ ದೇವ ನೊಂದೆನೀಗ ಈ ಅಜ್ಞಭವದಿ ಬಿದ್ದು | ಎಂದಿಗೆ ನಾ ಗೆದ್ದು ಇಂದಿರೇಶನ ಹೃತ್ಕಮಲದಲಿ ಕಾಂಬೆ | ಗುರುವೆ ತೋರೆಂಬೆ ಬಂದ ಬಂದ ಕಷ್ಟ ಹಿಂದು ಮಾಡಿ ಪೊರೆದು | ಕೃಪೆಗೈಯ್ಯಲಿ ಬೇಕಿಂದು 1 ಮುಖ ಕಮಲದಿ ಹೊರಡುವ ವಾಕ್ಸರಣಿಗಳು | ಗಂಗಾ ಪ್ರವಾಹಂಗಳು ಅಕಳಂಕದ ತತ್ವಾರ್ಥದಿ ನಾ ಮುಳುಗಿ | ದುರಿತದ ಭವನೀಗಿ ಸುಖ ಸಾರೂಪ್ಯದ ಮುಕುತಿ ಮಾರ್ಗ ಕಂಡೆ | ಭವ ತುಂಡೆ ಭಕುತಿ ಭಾಗ್ಯವ ನಿತ್ಯದಿ ಕರುಣಿಪುದು | ಸುಜ್ಞಾನವ ನೀಡುವುದು 2 ಇಳೆಯೊಳಿಲ್ಲ ಈ ಚರ್ಯೆ ತೋರುವವರು | ಉದ್ಧರಿಪರಿನ್ಯಾರು ಪರಿ ಕರುಣಿಪುದು | ನ್ಯಾಯವೆ ನೂಕುವುದು ಪೊಳಲೊಡೆಯನ ಪರಿಪರಿ ಮಹಿಮಾದಿಗಳ | ರೂಪ ಜಾಲಗಳ ತಿಳಿದಾನಂದಪಡುವ ಗುರುವರೇಣ್ಯ | ಪೊರೆಯ ಬೇಕೀಗೆನ್ನ 3 ಕರಿಗಿರಿ ನರಹರಿ ಪದಕಮಲಗಳನ್ನು | ಹೃದ್ವನಜದೊಳಿನ್ನು ಪರಿಪರಿ ಪೂಜಿಸಿ ಪರಮಾದರದಲ್ಲಿ | ಸಂಕರ್ಷಣನಲ್ಲಿ ಇರಿಸಿಹ ಮನವನು ನರರಿಗೆ ತೋರದಲೆ | ಚರಿಸುವ ಈ ಲೀಲೆ ಅರಿತು ಪೇಳೆ ಈ ಪಾಮರಳಿಗೆ ಅಳವೇ | ಆನಂದದಲಿರುವೆ 4 ತಂದೆ ಮುದ್ದು ಮೋಹನವಿಠಲ ದೇವ | ಹೃದ್ವನಜದಲಿ ಕಾವ ಸುಂದರ ಗೋಪಾಲಕೃಷ್ಣವಿಠ್ಠಲ ನಿಮ್ಮೊಳು | ರಮಿಸುವ ನಿತ್ಯದೊಳು ಮಂದಬುದ್ಧಿಗೆ ಇಂತು ಮತಿಯನಿತ್ತು | ಸಲಹಲಿ ಬೇಕಿಂತು ತಂದೆ ಧರೆಯೊಳು ಮತ್ತೊಬ್ಬರ ಕಾಣೆ | ಕಾಪಾಡಬೇಕೆನ್ನಾಣೆ 5
--------------
ಅಂಬಾಬಾಯಿ
ಇಂದು ನೋಡಿದೆ ನಂದಕರ ಯೋ- ಗೀಂದ್ರ ವಂದಿತ ಚರಣನಾ ಪ ವಂದನೀಯ ಶುಭೋರು ಗುಣ ಗಣ ಸಾಂದ್ರಗುರುರಾಘವೇಂದ್ರನಾ ಅ.ಪ ವೇದತತಿ ಶತಮೋದಗಿತ್ತ(ನ) - ಆದಿ ಮತ್ಸ್ಯನ ತೆರದಲಿ ವೇದವಾದವ ಶೋಧಮಾಡಿ ಮೇದಿನೀಸುರಗಿತ್ತನಾ 1 ಕಮಠರೂಪದಲಮರ - ತತಿಗೆ ಅಮೃತ ನೀಡಿದ - ತೆರದಲಿ ಸ್ವಮತ ಸುಧೆಯನು ಪ್ರಮಿತಗಿತ್ತಿಹ ಅಮಿತ ಸುಮಹಾಮಹಿಮನ 2 ಧರಣಿಮಂಡಲ ಧುರುದಿ ದಾಡಿಲಿ ಧರಿಸಿ ತಂದನ ತೆರದಲಿ ಧರಣಿ - ಜನರಿಗೆ ಧರೆಯ ಮೊದಲಾದ ಪರಮಭೀಷ್ಟೆಯನಿತ್ತು ಪೊರೆವನ 3 ತರುಳಪಾಲನ ತೆರದಲಿ ದುರಿತರಾಶಿಯ ತರಿದು ತನ್ನಯ ಶರಣಜನಪರಿಪಾಲನ 4 ಬಲಿಯ ಯಙ್ಞದÀ ಸ್ಥಳದಿ ಭೂಮಿಯ ನಳೆದರೂಪನÀತೆರದಲಿ ಖಳರ ವಂಚಕÀ ತನ್ನ ತಿಳಿವಗೆ ಸುಲಭದಿಂದಲಿ ಒಲಿವನ 5 ಕೆಟ್ಟರೋಗವು ಶ್ರೇಷ್ಠಭೂತದ ಅಟ್ಟುಳಿಯನೆ ಕಳೆವನ 6 ಜನಕನಾಜ್ಞದಿ ವನವ ಚರಿಸಿದ ಇನಕುಲೇಶನ ತೆರದಲಿ ಜನರಿಗೀಪ್ಸಿತ ತನಯ ಮೊದಲಾದ ಮನದಪೇಕ್ಷೆಯ ನೀಡೊನ 7 ಕನಲಿ ದ್ರೌಪದಿ ನೆನೆಸಲಾಕೆಯ ಕ್ಷಣಕೆ ಬಂದನ ತೆರದಲಿ ಮನದಿ ತನ್ನನು ನೆನೆವ ಜನರನು ಜನುಮ ಜನುಮದಿ ಪೊರೆವನ 8 ಮುದ್ದು ಸತಿಯರ ಬುದ್ಧಿ ಕೆಡಿಸಿ(ದ) ಗೆದ್ದು - ಬಂದನ ತೆರದಲಿ ಮದ್ದು ಮತಿಯನು ತಿದ್ದಿ ಭಕುತಗೆ ಶುದ್ಧ ಙÁ್ಞನವ ನೀಡೊನ 9 ಕಂಟಕ ಕಲಿಯವೈರಿ ಕಲಿಕಿರೂಪನ ತೆರದಲಿ ಹುಳುಕು ಮನವನು ಕಳೆದು ತನ್ನಲಿ ಹೊಳೆವ ಮನವನು ಕೊಡುವನಾ 10 ನೀತ ಗುರುಜಗನ್ನಾಥ ವಿಠಲ ಭೂತಳಕ್ಕಧಿನಾಥನು ಆತನಂತ್ಯತಿನಾಥ ಜಗಕೆ ಪ್ರೀತಿಶುಭಫಲದಾತನ 11
--------------
ಗುರುಜಗನ್ನಾಥದಾಸರು
ಇಂದು ಶೇಖರ ರಕ್ಷಿಸೋ ಎನ್ನ ತಂದೆ ಶಂಕರ ಹಿಂದೆ ಪೊಂದಿದ ದೇಹದ ಮತ್ತಿಂದು ಹಿಡಿಯುತ ಪ ಹಿಂದೆ ಬಿಸುಟೊಡಲು ಮರು ಕೊಳಿಸಿ ಸಾರಿ ಬಂದುದು ತಂದೆ ತಾಯಿಯ ಗಣನೆ ಉರ್ವಿಸಿಕವನು ಮೀರಿತು ಅಂದು ಮೊದಲು ಜನನೀಸ್ತನವನುಂಡು ಪಾಲಸವಿದುದು ಇಂದು ಕಂದು ಗೊರಳನೆ 1 ಕಾಲ ಬಾಲವನಿತೆ ಬಾಳು ಬದುಕಿನೊಳಗೆ ತೊಳಲಿ ಬಳಲಲು ಕಾಯದೊಳಗೆ ಮುಸುಕಲು ಕೊಳುವೋದೆ ಯಮಗೆ ಶೂಲ ಪಾಣಿ ನೀಲಕಂಠನೆ 2 ಎನ್ನದಾನದೆಂಬ ಹಮ್ಮವಶದಿ ಸುಮ್ಮನೆ ಹೊನ್ನು ಹೆಣ್ಣು ಮಣ್ಣು ಮೂರು ತನ್ನದೆಂದು ನಂಬುತ ಬನ್ನ ಬಟ್ಟು ಸಾಯುತ ಭವದಶರಧಿ ಬೇಗೆಯನ್ನು ಈಸಲಾರೆನೋ 3 ಸಿಂಧು ತೆರೆಯೊಳು ಮಂದ ಗಜವು ಕುಣಿಯೋಳ್ ಬಿದ್ದು ಏಳಲಾರದಂದದಿ ಇಂದ್ರಜಾಲದೊಳಗೆ ಸಿಲುಕಿಮಂದಗೆಟ್ಟು ನೊಂದೆನೋ 4 ದುರಿತ ಮರಣ ಕಾಲದೊಳಗೆ ನಾಮಸ್ಮರಣೆ ಯಾದಗುವಂದದಿ ತರಣಿ ತಮವ ಕಡಿಸಿ ಧರೆಯ ಬೆಳಗುವಂತೆ ಹೃದಯದಿ ಕರುಣದಿಂದಲಿ ನಿರುತಸಲಹೋ ಇಕ್ಕೆರಿ ಅಘೋರೇಶಲಿಂಗನೆ 5
--------------
ಕವಿ ಪರಮದೇವದಾಸರು
ಇದೇ ಇದೇ ಸದ್ವಸ್ತು ನಮ್ಮ ಇದೇ ಇದೇ ಧ್ರುವ ನಿಗಮ ತಂದುಳುಹಿದ ಸುಗಮ ಸುವಸ್ತು ಇದೆ ಜಗವು ಬೆನ್ನಿಲೆ ಪೊತ್ತು ನೆಗದದಿದೆ 1 ಧೀರತನವನುದೋರಿ ಧಾರುಣಿಗೆದ್ದದು ಇದೆ ನರಮೃಗನಾದ ನಿಜವಸ್ತುವಿದೆ 2 ಮೇದಿನಿ ಅಳೆದು ಮೂರುಪಾದವ ಬೇಡಿದದಿದೆ ಸಾಧಿಸಿ ಸಾಸಾರ್ಜುನನ ಮರ್ದಿಸಿದಿದೆ 3 ರಾಕ್ಷಸರನೆಲ್ಲ ಕೊಂದು ಶಿಕ್ಷೆಯುಗೈಸಿದಿದೆ ಪಕ್ಷಪಾಂಡವರಿಗ್ಯಾಗಿ ರಕ್ಷಿಸಿದಿದೆ4 ಬತ್ತಲೆ ಸುಳಿದು ಸತಿಯರ ವೃತವಳಿದುದಿದೆ ಉತ್ತಮ ತೇಜಿನೇರುವ ರಾವುತನಿದೆ 5 ಸಗುಣ ನಿರ್ಗುಣನಾದ ಜಗಜ್ಜೀವನವಿದೆ ಅಗಣಿತಗುಣಗಮ್ಯ ಗೋಚರಿವಿದೆ 6 ವಿಶ್ವತೋಮುಖನಾದ ವಿಶ್ವತೋಬಾಹುವಿದೆ ವಿಶ್ವತೋಚಕ್ಷು ವಿಶ್ವರೂಪವಿದೆ 7 ಮುನಿಗಳ ಪ್ರಿಯವಸ್ತು ಪರಾತ್ಪರವಿದೆ ವಾಸವಾಗಿ ವಿಶ್ವದೊಳು ಭಾಸುವದಿದೆ 8 ಭಾಸ್ಕರ ಕೋಟಿ ಪ್ರಕಾಶ ವಸ್ತುವಿದೆ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಲ್ಲವೋ ಮುಕ್ತಿ ಇಲ್ಲವಿಲ್ಲವೋ ಮೆಲ್ಲ ಮೆಲ್ಲನೆ ದೃಷ್ಟಿನಿಲ್ಲಿಸಿಮೇರು ಶಿಖರವ ನೋಡುವತನಕ ಪ ಚಕ್ರವಾರ ಮೆಟ್ಟಿನಿಂತು ಚಂಚಲಿಸದಂತೆ ದೃಷ್ಟಿಯಿಟ್ಟುವಿಕ್ರಮದಲಿ ಬ್ರಹ್ಮರಂದ್ರ ಪೊಕ್ಕು ತೇಜ ಕಾಣುವತನಕ 1 ದೃಢಚಿತ್ತದಲಿದ್ದು ಮಾರುತನ ಮೇಲಕೆ ಊದಿಒಡನೆ ಕೂಡಿಸಿ ವಾಯುಮನವನು ಅಸುವನು ಕಾಣುವತನಕ2 ಓಂಕಾರ ಧ್ವನಿಯ ಕೇಳಿ ಒತ್ತೊತ್ತು ಬೆಳಗಿನೊಳುಶಂಕರನೆನಿಪ ಚಿದಾನಂದ ಬ್ರಹ್ಮವನೆ ಕಾಣುವ ತನಕ 3
--------------
ಚಿದಾನಂದ ಅವಧೂತರು
ಇವನೆವೆ ಮಾನವನು ನೋಡಿರೋ ಇವನೆವೆ ಮಾನವನು ಪ ದಾವನು ಶ್ರಿ ಹರಿ ಪಾವನ ನಾಮವ ಆವಾಗ ನೆನೆವುತ ಸಾವಧನಾದಾ ಅ.ಪ ಹಿಂದಿನ ಪುಣ್ಯದಲಿ ನಾನೀಗ ಬಂದೆನು ನರದೇಹದಲಿ | ಮುಂದಾವ ಗತಿಗಳೋ ಛಂದದ ತಿಳಿಯದು | ಮಂದರ ಧರ ಸಲಹೆಂದು ಮೊರೆಯಿಡುವ 1 ಇದ್ದಷ್ಟರೊಳುದಾವ ಶೇವೆಗೆ ಕದ್ದಿರ ತನುಮನವಾ | ಸಿದ್ಧರ ನೆರೆಯಲಿ ಶಿದ್ಧ ಬೋಧಾಮೃತ | ಬುದ್ಧಿಲಿ ಸೇವಿಸಿ ಗದ್ದಳವಾಗಾ 2 ಗುರು ಮಹಿಪತಿ ಸ್ವಾಮಿ ಚರಣಕ ಶರಣೆಂದವನು ಪ್ರೇಮಿ | ಗುರು ವಚನವನಂದದಿ ಧರೆಯೊಳು ನಡೆಯುತ | ಗುರು ಭಕ್ತಿ ಜಾಗಿಸಿ ಗುರುತನಕ ಬಂದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈ ಸುಖವ ಬಿಟ್ಟನ್ನು ಬೇರೆ ಸುಖವುಂಟೆ ವಾಸುದೇವನ ಭಜಿಸಿ ಸುಖಿಯಾಗು ಮನವೆ ಈ ಸುಖವ ಬಿಟ್ಟಿನ್ನು ಬೇರೆ ಸುಖವುಂಟೆ ಪ ಕಾಮಕ್ರೋಧಾದಿಗಳ ಕಡೆಗೊತ್ತಿ ನಿರತ ನಿ ಷ್ಕಾಮನಾಗಿಯೆ ತುಲಸಿ ಕುಸುಮಗಳ ತಂದು ಪ್ರೇಮಪೂರಿತನಾಗಿ ಸರ್ವಪರಿಪೂರ್ಣ ಶ್ರೀ ರಾಮಪೂಜೆಯಗೈದು ಸುಖಿಯಾಗು ಮನವೆ 1 ಸೂನು ಮನೆ ಮೊದಲಾದ ಮಮಕಾರವನು ಬಿಟ್ಟು ಧ್ಯಾನವನು ಶ್ರೀಹರಿಯ ಮೂರ್ತಿಯೊಳಗಿಟ್ಟು ಸಾನುರಾಗದಿ ಹರಿಯ ನಾಮಸುಧೆಯನು ನೀನು ಪಾನವನುದಿನ ಗೈದು ಸುಖಿಯಾಗು ಮನವೆ 2 ಧರೆಯೊಳತ್ಯಧಿಕವೆಂದೆನಿಪ ಚಿಕ್ಕನಾಗಾಖ್ಯ ಪುರದೊಳಗೆ ಮಹಿಮೆಯಿಂ ಭಕ್ತರನು ಪೊರೆವ ಗುರು ವಾಸುದೇವಾರ್ಯರೂಪ ವೆಂಕಟಪತಿಯ ಚರಣದಾಸ್ಯವ ಪಡೆದು ಸುಖಿಯಾಗು ಮನವೆ3
--------------
ನಾರಾಯಣದಾಸರು
ಈಗುಂಟೋ ಆಗುಂಟೋ ಈ ದೇಹ ಏಗಬಲ್ಲರು ಯಾರು ಈ ಜಗದ ಗುಂಟ ಪ ನಾಲ್ಕು ದಿನ ಇರುವಾಗ ಚೆನ್ನಾಗಿ ಇರಬೇಕು ನಾಲ್ಕಾರು ಜನರಿಗೆ ಉಪಕಾರ ಮಾಡಬೇಕು ಬಾಲೆ ಸರಸತಿಗೆ ಪರಧನಕೆ ವಸ್ತುವಿಗೆ ಏಕೆ ಹಾಳು ಮನವನು ನಿಲಿಸಿ ಕೆಡಿಸಬೇಕು 1 ಹಾರುವ ಮನವನ್ನು ಕಟ್ಟಿ ಹಾಕಬೇಕು ಹಾರುವನ ಕಂಡರೆ ತಡೆಯಬೇಕು ಹಾರಲೇಕೆ ಪರರ ಒಡವೆ ಕಂಡೊಡನೆಯೆ ಬಾರಿಬಾರಿಗೆ ಬರಿದೆ ಕೆಣಕಲೇಕೆ 2 ವಿಚಾರಿಸಿಕೋ ದೇವ ಶಿಷ್ಟರ ಭಂಟ ಊರೊಳಗೆ ಉಚಾಯಿಸುತಿದ್ದಾರೆ ಐದಾರು ಮಂದಿ ಎಚ್ಚರಿಕೆ ಹಾಕುತ್ತ ಇದ್ದಾರೆ ದುಷ್ಟ ಮಂದಿ ಎಚ್ಚರಿಸೊ ಉದ್ಧರಿಸೊ ನೆಂಟ ಜಾಜಿಪುರೀಶ3
--------------
ನಾರಾಯಣಶರ್ಮರು
ಉಣಲೊಲ್ಲೆ ಯಾಕೋ ಅಣ್ಣಯ್ಯ ಉಣದೆ ಹೀಗೇಕೆ ಹಟ ಮಾಡುವಯ್ಯ ಪ ಉಣದಿರೆ ನನ್ನೆದೆ ತಳಮಳಗೊಳುವುದು ತಣಿಸೋ ಮನವನು ಉಂಡು ಕಂದಯ್ಯ ಅ.ಪ ನೀನನುದಿನವೂ ಉಣದಿದ್ದರೂ ಹೀಗೆ ಏನೂ ಹಸಿವಿಲ್ಲದೆ ಆಟವಾಡುವೆ ಹೇಗೆ ಏನಿದರ ಗುಟ್ಟು ಎಲ್ಲೂಟ ಮಾಡುವೆ ನಾನೇನ ಮಾಡಿಹೆನು ಉಣದಿರಲು ಹೀಗೆ 1 ಗೋಪಾಲಿಕೆಯರಲಿ ಆಕಳ ಹಾಲುಂಡು ಗೋಪಾಲಕರ ಕೂಡೆ ಬೆಣ್ಣೆಯ ಕದ್ದುಂಡು ಪಾಪಿಷ್ಠ ಬಲನೊಡನೆ ಮಣ್ಣನಾದರು ತಿಂದು ಅಪಾಟಿ ಹೊಟ್ಟೆಯ ತುಂಬಿಕೊಂಡಿಹೆಯೇನೊ 2 ಪೂತನಿಯ ಮೊಲೆಯುಂಡು ಜಡಗಟ್ಟಿತೊ ಪ್ರೀತಿಯಲಿ ಆ ಗೋಪಿಯರ ದಿಟ್ಟಿ ತಾಕಿತೊ ಆತುಕೊಂಡಾವ ಗೋಪಿಯು ಕೊಟ್ಟಳೆದೆಹಾಲ ಸೋತು ಹೋದೆನಯ್ಯ ನಿನಗುಣಿಸಲಾಗದೆ 3 ಅಣ್ಣಯ್ಯ ಕುಚೇಲ ನೀಡಿದ ಅವಲಕ್ಕಿಯುಂಡು ಕೃಷ್ಣೆ ಕೊಟ್ಟುಳಿದ ಅಗುಳನ್ನವುಂಡು ಚಿಣ್ಣ ಕಡುಭಕ್ತ ವಿದುರನ ಮನೆಯಲಿ ಹಾಲುಂಡು ಸಣ್ಣ ಹೊಟ್ಟೆ ತುಂಬಿತೆ ಕಂದ ಉಣಲೊಲ್ಲೆ ಯಾಕೊ4 ವಸುಧೆಯೊಳಗೆ ದಾಸರು ನಿನ್ನ ಪೂಜಿಸೆ ಏಸು ಪರಿಯಲಿ ನೈವೇದ್ಯ ನೀಡುವರೊ ಬಿಸಿಬಿಸಿ ಪರಮಾನ್ನ ಸಣ್ಣಕ್ಕಿಯೋಗರವು ಹಸಿದ ನಿನಗೆ ಬಲು ಇಷ್ಟವಾಯಿತೆ ಕೃಷ್ಣ 5 ವರಮಹಾಋಷಿಗಳ ವೇದ ಮಂತ್ರಗಳ ಪರಮ ಭಾಗವತರ ಪಲ್ಲಾಂಡುಗಳು ವರಜಾಜಿಪುರಿವಾಸ ನಿನ್ನ ಸೇವಿಸುತಿರಲು ನಿರುತ ಸಂತುಷ್ಟ ನೀ ಚೆನ್ನಕೇಶವನೆ 6
--------------
ನಾರಾಯಣಶರ್ಮರು