ಒಟ್ಟು 76 ಕಡೆಗಳಲ್ಲಿ , 29 ದಾಸರು , 59 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಶ ಕೊಳಲನೂದಿದನಂದು ಶ್ರೀಧರನಿಂದು ವಾಸವ ವಂದಿತ ವಾತಜ ಸೇವಿತ ವಾಸುಕಿಶಯನನು ವಾರೆ ಸುನೋಟದಿ ಪ ಬೆರಳ ಸಂದಿಲಿ ಮುರಳಿ ಪಿಡಿದು, ಮುರಾರಿ ತಾನು ಹರುಷದಿಂದಲಿ ಸ್ವರವ ನುಡಿದು, ವಾರಿಜನೇತ್ರ ಅರಳು ಮಲ್ಲಿಗೆ ಸರಗಳ ಮುಡಿದು ಕೌಸ್ತುಭ ಮರುಳು ಮಾಡುತ ಮಡದಿಯೆಲ್ಲರ 1 ಗೌರಿ ಗಾಂಧಾರಿ ಗೌಳಪಂತು ಗೌರೀಶ ಭೂಷಣ ಶೌರೀ ಸಾರಂಗ ಮೋಹನವಿಂತು ಸಾವೇರಿ ಸುರುಟಿ ಭೈರವಿ ಬ್ಯಾಗಡೆ ಊದುತ ನಿಂತು ಮಾರಜನಕ ತಾನಾನಂದದಿಂದಲಿ ವೀರ ಶ್ರೀ ಕೃಷ್ಣನು ವಿಧವಿಧ ರಾಗದಿ2 ನಾರದ ತುಂಬುರ ನಾಟ್ಯವನಾಡೆ, ನಳಿನನಾಭನ ಭಾರತಿಪತಿ ತಾ ಕೊಂಡಾಡೆ ವರಗುರು ವಂದಿತ ವಿಜಯವಿಠ್ಠಲರೇಯಹರುಷವ ಪಡಿಸುತ ವನಿತೆಯರೆಲ್ಲರ 3
--------------
ವಿಜಯದಾಸ
ಸರಸಿಜನಾಭ ಶ್ರೀಹರಿಪಾದಕಾರತಿಯ ಬೆಳಗಿರೆ ಪ ವಸುದೇವ ಸುತನೆಂದೆನಿಸಿ ಅಸುರೆ ಪೂತನಿಯ ಸಂಹರಿಸಿ ಆನಂದ ಸುರಿಸಿ ಕಾಳಿಮಡುವ ಧುಮುಕಿ ಫಣಿಯ ಮೇಲೆ ನಾಟ್ಯವನಾಡಿದವಗೆ ಸನಕಾದಿ ನಾರದ ಮುನಿವಂದ್ಯಗೆ ಸುರ ರಮಣಿಯರು ಹರುಷದಿ 1 ಮಧುರೇಲಿ ಜನಿಸಿದವಗೆ ಮಾವಕಂಸನ ತರಿದವಗೆ ಮಧುವೈರಿಹರಿಗೆ ಮುರಳಿನಾದಗೈದು ಸ್ತ್ರೀಯರ ಮರುಳುಗೊಳಿಸಿ ಆಡಿದವಗೆ ಮುರವೈರಿ ಹರಿ ಮುಚುಕುಂದ ವರದನ ಪಾಡುತಲಿ ಮುದದಲಿ2 ಗೋಪಾಲರೊಡಗೂಡುತಲಿ ಗೋವರ್ಧನವೆತ್ತಿದವಗೆ ಗೋವಿಂದ ಹರಿಗೆ ಗೋಪಿಯರ ಮನೆಯ ಪೊಕ್ಕು ಬೇಕೆನ್ನುತ ಪಾಲ್ಬೆಣ್ಣೆ ಸವಿದ ಶ್ರೀಕಾಂತ ಕಮಲನಾಭ ವಿಠ್ಠಲನಿಗೆಸುದತಿಯರು ತ್ವರಿತದಿ 3
--------------
ನಿಡಗುರುಕಿ ಜೀವೂಬಾಯಿ
ಹರಿದಾಡುವಂಥ ಮನವ ನಿಲಿಸುವುದು ಬಲುಕಷ್ಟ ಪ ಉರಿಯನಪ್ಪಲು ಬಹುದು ಗರಳವನು ಕುಡಿ ಬಹುದು ಕರಿಯ ದಾಡೆಗೆ ಸಿಕ್ಕು ಮರಳಿ ಜೀವಿಸ ಬಹುದು 1 ಗಗನ ಕೇಣಿಯ ಸಾರ್ಚಿ ಮುಗಿಲ ಮುಟ್ಟಲು ಬಹುದು ಅಗಜೆಯರಸನ ಉರಿಯ ನಯನ ಕಾನಲು ಬಹುದು ಹೊಗರು ಧೂಮವ ಹಿಡಿದು ಹಸುಬೆ ತುಂಬಲು ಬಹುದು 2 ಮಳಲ ಗಾಣಕೆಯಿಕ್ಕಿ ತೈಲಗಾಣಲು ಬಹುದು ಹುಲಿಯ ಹಿಡಿದು ಕಟ್ಟಿ ಹಾಲ ಕರೆಯಲು ಬಹುದು ಬಿಳಿಗಲ್ಲ ಬೆಣ್ಣೆವೋಲ್ ಜಗಿದು ನುಂಗಲು ಬಹುದು 3 ಅಸಿಯ ಧಾರೆಯ ಮೇಲೆ ನಾಟ್ಯ ವಾಡಲು ಬಹುದು ವಿಷದ ಉರುಗನ ಕೂಡೆ ಸರಸವಾಡಲು ಬಹುದು 4 ಮರುತ ಸುತನ ಕೋಣೆ ವಾಸ ಲಕ್ಷ್ಮೀಶನ ದುರಿತ ನಾಶನವಹುದು ಮರಳಿ ಜನ್ಮಕೆ ಬಾರದಂಥ ಪದವಿಯಹುದು5
--------------
ಕವಿ ಪರಮದೇವದಾಸರು
ಹರೇ ಹರೇ ಕೃಷ್ಣ ಹರೇ ಕೃಷ ಹರೇ ಹರೇ ಹರೇ ಪ ಕೌಸಲ್ಯ ವರವಂಶೋದ್ಭವ ಸುರ ಸಂಸೇವಿತ ಪದರಾಮ ಹರೇ ವಂಶೋದ್ಭವ ಶ್ರೀ ಕೃಷ್ಣಹರೇ 1 ಮುನಿಮಖರಕ್ಷಕ ದನುಜರಶಿಕ್ಷಕÀ ಘಣಿಧರ ಸನ್ನುತರಾಮಹರೇ ಘನವರ್ಣಾಂಗ ಸುಮನಸರೊಡೆಯ ಶ್ರೀ - ವನಜಾಸನ ಪಿತ ಕೃಷ್ಣ ಹರೇ 2 ಶಿಲೆಯ ಪಾದರಜದಲಿ ಸ್ತ್ರೀ ಮಾಡಿದ ಸುಲಲಿತ ಗುಣನಿಧಿ ರಾಮ ಹರೇ ಬಲುವಕ್ರಾಗಿದ್ದ ಬಲೆಯ ಕ್ಷಣದಲಿ ಚಲುವೆಯ ಮಾಡಿದ ಕೃಷ್ಣ ಹರೇ 3 ಹರಧನುಭಂಗಿಸಿ ಹರುಷದಿಜಾನಕಿ ಕರವಪಿಡಿದ ಶ್ರೀರಾಮ ಹರೇ ಸಿರಿ ರುಕ್ಮಿಣಿಯನು ತ್ವರದಲಿ ವರಿಸಿದ ಶರಣರ ಪಾಲಕ ಕೃಷ್ಣ ಹರೇ 4 ಜನಕ ಪೇಳೆ ಲಕ್ಷ್ಮಣ ಸೀತಾ ಸಹ ವನಕೆ ತೆರಳಿದ ರಾಮ ಹರೇ ವನಕೆ ಪೋಗಿ ತನ್ನಣುಗರೊಡನೆ ಗೋ - ವನು ಪಾಲಿಪ ಶ್ರೀ ಕೃಷ್ಣ ಹರೇ5 ತಾಟಕೆ ಖರಮಧು ಕೈಟಭಾರಿಪಾ ಪಾಟವಿ ಸುರಮಖ ರಾಮಹರೇ ಆಟದಿ ಫಣಿಮೇಲ್ ನಾಟ್ಯವನಾಡಿದ ಖೇಟವಾಹ ಶ್ರೀ ಕೃಷ್ಣ ಹರೇ 6 ಚದುರೆ ಶಬರಿಯಿತ್ತ ಬದರಿಯ ಫಲವನು ಮುದದಿ ಸೇವಿಸಿದ ರಾಮ ಹರೇ ವಿದುರನ ಕ್ಷೀರಕೆ ವದಗಿ ಪೋದ ಶ್ರೀ ಪದುಮನಾಭ ಜಯ ಕೃಷ್ಣ ಹರೇ 7 ಸೇವಿತ ಹನುಮ ಸುಗ್ರೀವನ ಸಖಜಗ - ತ್ಪಾವನ ಪರತರ ರಾಮಹರೇ ದೇವ ದೇವ ಶ್ರೀ ಕೃಷ್ಣ ಹರೇ 8 ಗಿರಿಗಳಿಂದ ವರಶರಧಿ ಬಂಧಿಸಿದ ಪರಮ ಸಮರ್ಥ ಶ್ರೀರಾಮ ಹರೇ ಗಿರಿಯ ತನ್ನ ಕಿರಿ ಬೆರಳಿಲೆತ್ತಿ ಗೋ - ಪರನ ಕಾಯ್ದ ಶ್ರೀ ಕೃಷ್ಣ ಹರೇ 9 ಖಂಡಿಸಿದಶಶಿರ ಚಂಡಾಡಿದ ಕೋ - ದಂಡಪಾಣಿ ಶ್ರೀ ರಾಮ ಹರೇ ಪಾಂಡುತನಯರಿಂ ಚಂಡಕೌರವರ ದಿಂಡುಗೆಡಹಿಸಿದ ಕೃಷ್ಣ ಹರೇ 10 ತವಕದಯೋಧ್ಯಾ ಪುರಕೈದಿದ ತ - ನ್ಯುವತಿಯೊಡನೆ ಶ್ರೀ ರಾಮ ಹರೇ ರವಿಸುತ ತನಯಗೆ ಪಟ್ಟವಗಟ್ಟಿದ ಭವತಾರಕ ಶ್ರೀ ಕೃಷ್ಣ ಹರೇ 11 ಭರತನು ಪ್ರಾರ್ಥಿಸಲರಸತ್ವವ ಸ್ವೀ - ಕರಿಸಿದತ್ವರದಲಿ ರಾಮ ಹರೇ ವರಧರ್ಮಾದ್ಯರ ಧರಿಯೊಳು ಮೆರೆಸಿದ ಪರಮಕೃಪಾಕರ ಕೃಷ್ಣ ಹರೇ 12 ಧರೆಯೊಳಜ್ಞಜನರನು ಮೋಹಿಪುದಕೆ ಹರನ ಪೂಜಿಸಿದರಾಮ ಹರೇ ಹರನ ಪ್ರಾರ್ಥಿಸಿವರವನು ಪಡೆದಾ ಚರಿತೆಯಗಾಧವು ಕೃಷ್ಣ ಹರೇ 13 ಅತುಳಮಹಿಮ ಸದ್ಯತಿಗಳ ಹೃದಯದಿ ಸತತ ವಿರಾಜಿಪÀರಾಮಹರೇ ಸಿತವಾಹನ ಸಾರಥಿಯೆನಿಸಿದ ಸುರತತಿ ಪೂಜಿತ ಪದ ಕೃಷ್ಣ ಹರೇ 14 ರಾಮ ರಾಮ ಯಂದ್ನೇಮದಿ ಭಜಿಪರ ಕಾಮಿತ ಫಲದ ಶ್ರೀ ರಾಮಹರೇ ಪ್ರೇಮದಿ ಭಕ್ತರ ಪಾಲಿಪ ಶ್ರೀ ವರ - ದೇಶವಿಠಲ ಶ್ರೀ ಕೃಷ್ಣ ಹರೇ 15
--------------
ವರದೇಶವಿಠಲ
ಆರೋಗಣೆಯ ಮಾಡೋ ಎನ್ನಯ್ಯಆರೋಗಣೆಯ ಮಾಡೋ ಪ.ನಾರದಾರ್ಚಿತಪಾದ ನಾರಾಯಣ ಸ್ವಾಮೀ ಅ.ಪಸರಸಿಜಾಲಯೆ ಲಕ್ಷ್ಮಿ ಸರಸ್ವತಿಭಾರತಿಪರಿಪರಿ ಅಡಿಗೆಯ ಸಿದ್ದ ಮಾಡಿಹರೊ ||ಪರಿಮಿತಿಯಿಲ್ಲದ ರುಚಿಯ ಪದಾರ್ಥವಪರಮಪುರುಷ ಉಂಡು ದಯ ಮಾಡೋ ಸ್ವಾಮಿ1ಅಂಬುಜಮುಖಿ ಲಕ್ಷ್ಮಿ ತಾಂಬೂಲ ಕೊಡುವಳುಕಂಬುಕಂಧರನೇ ನೀ ಕೈಕೊಳು ಬೇಗ ||ರಂಭೆ ಊರ್ವಸಿ ಮೇನಕೆ ಮೊದಲಾದವರುಸಂಭ್ರಮದಿ ಬಂದು ನಾಟ್ಯಕೆ ಕಾದಿಹರೊ ಸ್ವಾಮಿ 2ಸರಸಿಜಭವನಯ್ಯ ಪುರಂದರವಿಠಲಸರುವಭೋಗಭುಂಜಿಪ ನರರ ಪಾಲಿಸೊ ದೇವಾ3
--------------
ಪುರಂದರದಾಸರು
ಏನೆಂತೊಲಿದೆ ಇಂತವರಂತೆ ಕೆಡುಬುದ್ಧಿ - ಎನ್ನೊಳಿಲ್ಲಗುಣ |ಹೀನರಲ್ಲದ ದೀನ ಜನರ ಪಾಲಿಪ ಬುದ್ಧಿ ನಿನ್ನೊಳಿಲ್ಲ ಪತರಳ ಪ್ರಹ್ಲಾದನಂದದಿ ನಿನ್ನಯರೂಪ ಕೆಡಿಸಲಿಲ್ಲನರನಂತೆ ತನ್ನ ಬಂಡಿಯ ಬೋವನ ಮಾಡಿ ಹೊಡಿಸಲಿಲ್ಲ ||ಸುರನದೀಸುತನಂತೆ ಪಣೆಯೊಳು ಬಾಣವ ಸಿಡಿಸಲಿಲ್ಲದೊರೆ ಅಂಬರೀಷನಂದದಿ ಈರೈದು ಜನ್ಮವ ಪಡಿಸಲಿಲ್ಲ 1ನಾರದನಂತೆ ಕಂಡವರ ಕೊಂಡೆಯವ ನಾ ಪೇಳಲಿಲ್ಲ |ಪರಾಶರನಂತೆ ನದಿಯೊಳಂಬಿಗ ಹೆಣ್ಣ ಕೊಡಲಿಲ್ಲ ||ಆ ರುಕುಮಾಂಗದನಂತೆ ಸುತನ ಕೊಲ್ಲಲು ಧೃಢಮಾಡಲಿಲ್ಲಮಾರುತನಂತೆ ನೀನುಣುತಿದ್ದ ಎಡೆಯ ಕೊಂಡೋಡಲಿಲ್ಲ 2ವಿದುರನಂತೆ ನನ್ನ ಸದನವ ಮುರಿದು ನಾ ಕುಣಿಯಲಿಲ್ಲಮದಕರಿಯಂತೆ ಮಕರಿಯ ಬಾಯೊಳು ಸಿಕ್ಕಿ ಒದರಲಿಲ್ಲ ||ಹೆದರದೆ ಬಲಿಯಂತೆ ಭೂಮಿಯ ಧಾರೆಯನೆರೆಯಲಿಲ್ಲಸದರ ಮಾತುಗಳಾಡಿ ಶಿಶುಪಾಲನಂತೆ ನಾ ಜರೆಯಲಿಲ್ಲ3ಸನಕಾದಿ ಮುನಿಯಂತೆಅನುದಿನ ಮನದೊಳು ಸ್ಮರಿಸಲಿಲ್ಲಇನಸುತ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ ||ಬಿನುಗು ಬೇಡತಿಯಂತೆ ಸವಿದುಂಡ ಹಣ್ಣ ನಾ ತಿನಿಸಲಿಲ್ಲಘನ ಅಜಾಮಿಳನಂತೆ ಸುತನ ನಾರಗನೆಂದು ಕರೆಯಲಿಲ್ಲ4ವರ ಶೌನಕನಂತೆನಿತ್ಯ ಸೂತನ ಕಥೆ ಕೇಳಲಿಲ್ಲಪಿರಿದು ತುಂಬುರುನಂತೆ ನಾಟ್ಯ - ಸಂಗೀತವ ಪೇಳಲಿಲ್ಲ ||ಉರಗಾಧಿಪತಿಯಂತೆ ಉದರದೊಳಿಟ್ಟು ನಾ ತೂಗಲಿಲ್ಲಪಿರಿದು ಕುಚೇಲನ ತೆರನಂತೆ ಅವಲಕ್ಕಿ ಈಯಲಿಲ್ಲ 5ಭೃಗುಮುನಿಯಂತೆ ಗರ್ವದಿ ನಿನ್ನ ಎದೆಯನು ಒದೆಯಲಿಲ್ಲಅಗಣಿತ ಮಹಿಮ ನೀನಹುದೆಂದು ಧ್ರುವನಂತೆ ಪೊಗಳಲಿಲ್ಲ ||ಖಗರಾಜನಂತೆ ನಿನ್ನನು ಪೊತ್ತು ಗಗನದಿ ತಿರುಗಲಿಲ್ಲಅಗಜೆಯರಸನಂತೆ ಮಸಣದಿ ರಾಮನ ಸ್ಮರಿಸಲಿಲ್ಲ 6ಅವಹಿತದಲಿ ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲಯುವತಿ ದ್ರೌಪದಿಯಂತೆ ಪತ್ರಶಾಕವನುಣಬಡಿಸಲಿಲ್ಲ ||ತವೆ ಪುಂಡಲೀಕನಂದದಿ ಇಟ್ಟಿಗೆಯ ಮೇಲೆ ನಿಲಿಸಲಿಲ್ಲ ದೇವಇವರಂತೆಪುರಂದರ ವಿಠಲ ನಿನ್ನಯ ಕೃಪೆಯೆನ್ನೊಳಿಲ್ಲ7ಅಂಕಿತದಲ್ಲೂ ಇವೆ.)
--------------
ಪುರಂದರದಾಸರು
ಏಳಯ್ಯ ಶ್ರೀಹರಿ ಬೆಳಗಾಯಿತು ಪ.ಏಳು ದೇವಕಿತನಯ ನಂದನಕಂದಏಳು ಗೋವರ್ಧನ ಗೋವಳರಾಯ ||ಏಳುಮಂದರಧರ ಗೋವಿಂದ ಫಣಿಶಾಯಿಏಳಯ್ಯ ನಲಿದು ಉಪ್ಪವಡಿಸಯ್ಯ 1ಕ್ಷಿರಸಾಗರವಾಸ ಬೆಳಗಾಯಿತು ಏಳುಮೂರುಲೋಕದರಸು ಒಡೆಯ ಲಕ್ಷ್ಮೀಪತಿ ||ವಾರಿಜನಾಭನೆ ದೇವ ದೇವೇಶನೆಈರೇಳು ಲೋಕಕಾಧಾರ ಶ್ರೀ ಹರಿಯೇ 2ಸುರರುದೇವತೆಗಳು ಅವಧಾನ ಎನುತಿರೆಸುರವನಿತೆಯರೆಲ್ಲ ಆರತಿ ಪಿಡಿದರೆ ||ನೆರೆದು ಊರ್ವಶಿ ಭರದಿ ನಾಟ್ಯವಾಡಲುಕರುಣಿಸೊ ಪುರಂದರವಿಠಲ ನೀನೇಳೋ 3
--------------
ಪುರಂದರದಾಸರು
ಗುಮ್ಮನೆಲ್ಲಿಹ ತೋರಮ್ಮ-ನಮ್ಮಮ್ಮ-|ಸುಮ್ಮನಂಜಿಸಬೇಡಮ್ಮ ಪಪಂಚಾಶತ್ಕೋಟಿ ವಿಸ್ತೀರ್ಣದ ಭೂಮಿಯ |ವಂಚನೆಯಿಲ್ಲದೆ ತಿರುಗಿ ಬಂದೆನೆ ನಾನು ||ಹಂಚಿಸಿಕೊಟ್ಟೆನೆ ಅವರವರಿಗೆ ನಾ |ಅಂತು ನೋಡಿದರೂ ಕಾಣೆನೆ ಗುಮ್ಮನ 1ಈರೇಳು ಲೋಕವನುದರದೊಳಗೆ ಇಟ್ಟು |ತೋರಿದೆ ಬ್ರಹ್ಮಾಂಡ ಬಾಯೊಳಗೆ ||ಘೋರರೂಪದಿ ಬಂದ ಗಾಳಿಯ ಸುರನ ಕೊಂದೆ |ಅಲ್ಲಿ ನೋಡಿದರೂ ಕಾಣೆನೆ ಗುಮ್ಮನ 2ಕಾಳಿಯ ಮಡು ಧುಮುಕಿ ಕಾಳಿಂಗನ ಹೆಡೆ ತುಳಿದು |ಮೇಲೆ ನಾಟ್ಯಂಗಳ ನಾನಾಡುತಲಿದ್ದೆ ||ಓಲೆಯ ಭಾಗ್ಯವನಿತ್ತೆ ನಾಗಪತ್ನಿಯರಿಗೆ |ಅಲ್ಲಿ ನೋಡಿದರೂ ಕಾಣೆನೆ ಗುಮ್ಮನ 3ಅಕ್ರೂರನಿಗೆ ವಿಶ್ವರೂಪವ ತೋರಿದೆ |ಘಕ್ಕನೆ ರಥವೇರಿ ಮಥುರೆಗೆ ಪೋದೆ ||ಸೊಕ್ಕಿದ ರಜಕನ ಕೊಂದು ಮಡಿಯನುಟ್ಟೆ |ಹೊಕ್ಕು ನೋಡಿದರೂ ಕಾಣೆನೆ ಗುಮ್ಮನ 4ಬಿಲ್ಲು ಹಬ್ಬಕೆ ಹೋಗಿ ಮಲ್ಲರ ಮಡುಹಿದೆ |ಅಲ್ಲಿ ಮಾವನ ಕೊಂದು ಮುತ್ತಯ್ಯಗೊಲಿದೆ ||ಚೆಲ್ವಗೋಪಾಲ ಶ್ರೀ ಪುರಂದರವಿಠಲನ |ಸೊಲ್ಲು-ಸೊಲ್ಲಿಗೆ ನೀ ಬೆದರಿಸಬೇಡಮ್ಮ 5
--------------
ಪುರಂದರದಾಸರು
ಬಗಳಾಂಬ ನಿನ್ನ ಲೀಲೆ ಮಂಗಳಾ ಮಂಗಳಬಗಳಾಂಬ ನಿನ್ನ ಲೀಲೆ ಮಂಗಳಾ ಮಂಗಳಪಭಸ್ಮಾಸುರನಾಗ ಜಗವರಿಯೆ ಬೇಕೆಂದುಗೌರಿಯನು ಮೋಹಿಸಿಯೆವಿಸ್ಮಯದಲಿ ವಿರೂಪಾಕ್ಷ ಭಜಿಸಿವಿಷ ಹೃದಯದಿ ಘಾತಕವನೆ ಚಿಂತಿಸೆ1ಉರಿವ ಹಸ್ತವ ಪಡೆದು ಹರುಷದಲಿ ಬರಲುಪಶು ಪತಿಯು ಭಯದಿಂದ ಓಡುತಿರಲುದೇವತೆಗಳೆಲ್ಲರೂ ಸ್ತೋತ್ರ ಗೈಯೆಶಿವನನು ಕಾಯಲವತರಿಸಿದೆ ದೇವಿ2ಥಳ ಥಳಿಸುತ ಮೋಹದಿಂದಿರಲುತವಕಿಯು ಹರುಷದಿ ಕೈ ಹಿಡಿದು ಬರಲುಕಳರಿದ ಶಿವ ಪ್ರಾಣ ಉಳಿಯಲೆಂದುತಾಮಸನ ನಾಟ್ಯದಲಿ ಗೆಲಲು ಎಂದೆ3ಧಿಮ್ಮಿ ತತ್ತಧಿಕಿತಕ ಎಂದುದಿಟ್ಟವಾಗಿ ಕುಣಿಯುತಲಂದುಸುಮ್ಮನೆ ಕೈಯಲಿಡಿಸಿದೆ ಕೈಯಸುಟ್ಟೆಯಸುರನ ಸುರರುಘೆ ಎನೆ4ಸುರರುಹೂವಿನ ಮಳೆಯ ಸುರಿಯಲುಸುರಗಣಿಕೆಯರು ನಾಟ್ಯವಾಡಲುಪರಮಚಿದಾನಂದ ಬಗಳೆಯು ಸಾರ್ತರೆಪಾರ್ವತಿಪತಿನೋಡಿ ನಗುನಗುತಿರೆ5
--------------
ಚಿದಾನಂದ ಅವಧೂತರು
ರಂಭೆ-ಊರ್ವಸಿ ರಮಣಿಯರೆಲ್ಲರು ||ಚೆಂದದಿಂ ಭರತನಾಟ್ಯವ ನಟಿಸೆ |ಝಂತಕ ತಕಧಿಮಿ ತದಿಗಣತೋಂ ಎಂದು |ಝಂಪೆತಾಳದಿ ತುಂಬುರನೊಪ್ಪಿಸೆ ||ಧಾಪಮಪಧಸರಿ ಎಂದು ಧ್ವನಿಯಿಂದ |ನಾರದ ತುಂಬುರು ಗಾನವ ಮಾಡಲು |ನಂದಿಯು ಚೆಂದದಿ ಮದ್ದಲೆ ಹಾಕಲು 1ಫಣಿಯ ಮೆಟ್ಟಿ ಬಾಲವ ಕೈಯಲಿ ಪಿಡಿದು |ಫಣಘಣಿಸುತ ನಾಟ್ಯವನಾಡೆ |ದಿನಪಮಂಡಲದಂತೆ ಪೊಳೆಯುವ ಮುಖದೊಳು ||ಚಲಿಸುತ ನೀಲಕೇಶಗಳಾಡೆ |ಕಾಲಲಂದಿಗೆ ಗೆಜ್ಜೆ ಘುಲುಘುಲು ಘುಲುಘುಲು |ಘುಲುರೆಂದು ಉಡಿಗೆಜ್ಜೆ ಗಂಟೆಗಳಾಡೆ ||ದುಷ್ಟ ಕಾಳಿಂಗನ ಮೆಟ್ಟಿ ಭರದಿಂದ |ಪುಟ್ಟಿ ಪಾದವನು ಇಟ್ಟ ಶ್ರೀಕೃಷ್ಣನು |ಮೆಟ್ಟಿದ ತದ್ಧಿಮಿ ತಧಿಗಣತೋಂ ಎಂದು 2ಸುರರುಪುಷ್ಪದ ವೃಷ್ಟಿಯ ಕರೆಯಲು |ಸುದತಿಯರೆಲ್ಲರು ಪಾಡಲು |ನಾಗಕನ್ನೆಯರು ನಾಥನ ಬೇಡಲು |ನಾನಾವಿಧ ಸ್ತುತಿ ಮಾಡಲು ||ರಕ್ಕಸರೆಲ್ಲರು ಕಕ್ಕಸವನೆ ಕಂಡು |ದಿಕ್ಕಿದಿಕ್ಕುಗಳಿಗೋಡಲು ||ಚಿಕ್ಕವನಿವನಲ್ಲ ಪುರಂದರವಿಠಲ |ವೆಂಕಟರಮಣನ ಬೇಗ ಯಶೋದೆ |ಬಿಂಕದೊಳೆತ್ತಿ ಮುದ್ದಾಡೆ ಶ್ರೀಕೃಷ್ಣನ 3
--------------
ಪುರಂದರದಾಸರು
ವೀರ ಬಂದ ವೀರ ಬಂದಘೋರಹಮ್ಮುಎಂಬ ದಕ್ಷನತೋರ ಶಿರವರಿಯಲೋಸುಗಪಭಯನಿವಾರಣವೆಂಬ ಕಾಸೆಯನೆ ಹೊಯ್ದಜಯಶೇಖರನೆಂಬ ವೀರ ಕಂಕಣಕಟ್ಟಿನಿಯತ ಸಾಹಸವೆಂಬ ರತ್ನ ಮುಕುಟವಿಟ್ಟುಸ್ವಯಂ ಸೋಹಂ ಎಂಬ ಕುಂಡಲವ ತೂಗುತ1ಆಡಲೇನದ ಶುದ್ಧವೆಂಬ ಭಸಿತವಿಟ್ಟುರೂಢಿಯ ಸತ್ಪವೆಂದೆಂಬ ಹಲಗೆಯಾಂತುಇಡಾಪಿಂಗಳವೆಂಬ ಪಾವುಗೆಗಳ ಮೆಟ್ಟಿಗಾಢ ಧೈರ್ಯವೆಂಬ ಖಡುಗ ಝಳಪಿಸುತ2ಒಂದೊಂದೆ ಹೆಜ್ಜೆಯನಂದು ಪಾಲಿಸುತಾಗಹಿಂದೆಡಬಲ ನೋಡದೆ ಮುಂದು ನಿಟ್ಟಿಸಿಛಂದಛಂದದಲಾಗುವಣಿ ಲಗುವಿನಿಂದಬಂದನು ಬಹು ಶೂರಧೀರ ಮಹಾವೀರ3ದಾರಿ ಊರುಗಳನೆ ಧೂಳಿಗೋಂಟೆಯ ಮಾಡಿಆರಾಧರೇನು ಶಿಕ್ಷಿಸುವೆನೆಂದೆನುತಭೇರಿಕರಡಿ ಸಮ್ಮೇಳಗಳೊಡಗೂಡಿಕಾರಣವಹ ಯಜÕಮಂಟಪದೆಡೆಗಾಗಿ4ಸುಷುಮ್ನವೆಂದೆಂಬ ಬಾಗಿಲ ಮುರಿಯುತ ಆಸಮಯದಿ ಬಂದ ಅಸುರರ ಕೊಲ್ಲುತಭೇಸರಿಸುವ ದೊರೆ ದೊರೆಗಳನಿರಿಯುತದ್ವೇಷರೆನಿಪ ಷಡುರಥಿಕರ ಕಟ್ಟುತ5ಅಷ್ಟಸಿದ್ಧಿಗಳೆಂಬ ದಿಕ್ಪಾಲಕರ ನಟ್ಟಿಭ್ರಷ್ಟ ಮೋಹವದೆಂಬ ಯಮನ ಹಲ್ಮುರಿದೆತ್ತಿನಷ್ಟಮನವೆಂಬ ಬೃಗುವಿನ ಮೀಸೆಯ ಕಿತ್ತುಶಿಷ್ಟಶಿಷ್ಟರನು ಎಲ್ಲರ ಕೆಡೆಮೆಟ್ಟಿ6ಹಮ್ಮುತಾನಾಗಿರುತಹಉನ್ಮತ್ತದಕ್ಷನ ಶಿರವನು ತರಿಯುತಲಾಗಗಮ್ಮನೆ ತ್ರಿಕೂಟ ಯಜÕಕುಂಡದೊಳುಸುಮ್ಮನಾಹುತಿಯಿಟ್ಟು ಸುಲಭದಲಿ ನಲಿಯುತ7ಪಾಪರೂಪನಾದ ಜೀವದಕ್ಷನನುಈ ಪರಿಯಲಿ ಕೊಂದು ನಾಟ್ಯವಾಡಲುಭಾಪುರೇ ಎಂದು ಸಾಧು ಪ್ರಮಥರು ಹೊಗಳಲುತಾಪಹರನಾಗಿ ಶಾಂತಿಯ ಹೊಂದುತ8ನಿರುಪಮನಿತ್ಯನಿರಾಳನೆ ತಾನಾಗಿಪರಮೇಶಪರವಸ್ತುಪರತರವೆಯಾಗಿಭರಿತ ಚೇತನ ಪ್ರತ್ಯಗಾತ್ಮನೆ ತಾನಾಗಿನಿರುತ ನಿತ್ಯಾನಂದ ಚಿದಾನಂದಯೋಗಿ9
--------------
ಚಿದಾನಂದ ಅವಧೂತರು
ಸತ್ಯಭಾಮಾವಿಲಾಸಶ್ಲೋಕಶ್ರೀ ಬ್ರಹ್ಮೇಶ ಸುರೇಂದ್ರ ಪೋಷಕಹರಿದ್ವಾರಾವತೀಲ್ಬಾಳ್ದನುಶ್ರೀ ಭೈಷ್ಮೀವರ ಸತ್ಯಭಾಮೆಯ ಬಹು ಸಾಸ್ರಾಂಗನೇರಾಳ್ದನುಈ ಭೂಭಾರಹರಾವತಾರ ಯದುಪಂ ನರ್ಲೀಲೆಯಂ ತಾಳ್ದನುಸೌಭಾಗ್ಯಾಂಬುಧಿ ಕೃಷ್ಣನಯ್ಯ ಜನಕಾನಂದಾಬ್ಧಿಲಿಟ್ಟಾಳ್ದನು 1ಸೌಪರ್ಣಾಂಸದಲಿಟ್ಟು ದೇವ ತರುವ ಸತ್ಯ ಸಹಾ ಒಪ್ಪುವಆಪನ್ನಾನ್ವಯ ಕಾಮಧೇನೆನಿಸುವ ಅಧ್ಯಾತ್ಮ ಶ್ರೀಮಾಧವಈ ಪದ್ಯಂಗಳ ಪೇಳಿಸಿದನು ದಯಾಬ್ಧಿ ಪಾರಿಜಾತಾಖ್ಯವಗೋಪಾಲೇಶನ ಪಾದಪದ್ಮ ನೆನೆವೆ ಆನಂದವಂ ಬೇಡುವೆ 2ಪದಶ್ರೀಕೃಷ್ಣ ದ್ವಾರಕಾನಗರದಿ ಪ್ರೇಮದಾನೀಕದಿ ರಾಜಿಸಲಾಗನಾಕದಲರು ಒಂದು ನಾರದ ತಂದಿರೆಶ್ರೀಕಾಂತನಿತ್ತ ರುಕ್ಮಿಣಿಗೆ 3ಒಂದು ಹೂವಿನ ಪರಿಮಳವುನಗರತುಂಬಿಇಂದುವದನೆಸತ್ಯಭಾಮೆಇಂದುಗೋವಿಂದ ರುಕ್ಮಿಣಿಗೆ ಕುಸುಮವಿತ್ತನೆಂದು ಕೇಳ್ದಳು ಸುಸ್ವಭಾವೆ 4ಶ್ಲೋಕಅರ್ಧಾಂಗಿಯಲಿ ಸ್ನೇಹವೆಗ್ಗಳಕಣಾ ಮುದ್ದಿಸಿ ಹೂವಿತ್ತನುಇದ್ದೇನಿನ್ನು ವೃಥಾ ಭುವಿಯಲಿ ಸಖಿ ನಿರ್ದೇಹವಂ ಸಾರ್ವೆನುಕದ್ದು ಬೆಣ್ಣೆಯ ಮೆದ್ದು ಪುಂಶ್ಚಲಿಯರೊಳಿದ್ದಾತನ ಬುದ್ಧಿಯತಿದ್ದಿ ನೋಡಿದೆ ಸೋತೆ ಎನ್ನ ನಳಿತೋಳ್ಹೊದಿಸಿ ನಾ ಶೌರಿಯ 5ಸಾಕಿನ್ನಾತನ ಚಿತ್ತಪಲ್ಲಟಸಟೆಆ ಕಾಮಿನಿಪ್ರಿಯನನೂಕದಿನ್ನಿರೆ ಎನ್ನ ಮಂಚಕೆ ಬರಲ್ಪೋಕ ಸ್ಮರನಯ್ಯನಯಾಕಿನ್ನಾಭರಣಾಂಬರೋತ್ತರಿ ಸಖೀ ಏಕಾಗ್ರನೇಕಾಂಗನನೀಕಂಡ್ಹೇಳವಮಾನ ತಾಳಳು ಸಖಿ ಜೋಕಿನ್ನು ನಿನ್ಬಹುಮಾನ6ಪದಕ್ರೋಧ ಕಳವಳಿಕೆ ಮುನಿಸಿನಿಂದಲಿ ಸತ್ಯವಾದಿ ಸತ್ರಾಜಿತ ಕನ್ಯೆಮೇದಿನಿಮೇಲೆ ಮಲಗಿದಳು ಧೊಪ್ಪನೆ ಮಂಚಕೈದದೆ ನಿತ್ಯಸುಖಿ ಧನ್ಯೆ 7ಬಿಸಿ ಬಿಸಿ ನಿಟ್ಟುಸಿರ್ಗರೆದು ಕೋಮಲ ಮುಖಶಶಿಯ ಕಸ್ತೂರಿ ಅಂಗಯ್ಯಲೊರೆಸಿಬಿಸಜಾಕ್ಷಿ ಕಂಬನಿದುಂಬೆ ಒರತೆಯಿಟ್ಟುಎಸೆವಕಜ್ಜಲಜಲ ಸೂಸಿ 8ಶ್ಲೋಕವಕ್ಷೋಜಾತದ ಹೊನ್ನ ಕುಪ್ಪಸವನು ಅಕ್ಷೋದದಿಂ ತೋಯಿಸಲ್ಸಾಕ್ಷಾನ್ಮಂಗಳ ಮುತ್ತಿನ್ಹಾರ ಕಡಿದಳ್ ಲಕ್ಷಾಭರಣ್ಬಿಟ್ಟಳುತಾ ಕ್ಷೋಣಿಯನು ಹೊಂದಿ ಬಿದ್ದು ಬೆಮರ್ದಳ್ಅಕ್ಷಯಸೌಗಂಧಿಯಳ್ಪಕ್ಷಿವಾಹನ ಮಾಡಿದ ಉಪಕಾರ ಲಕ್ಷಿಸಿ ಹಾಯೆಂದಳು 9ಹಾ ಹಾ ಕೈತವ ಮೀನ ಜೃಂಭಕಮಠಹಾ ಹೈಮದೃಘ್ಘಾತಕಹಾ ಹಾ ನಿಷ್ಕರುಣಾಂಗ ಶಿಕ್ಷಕ ಹರೆ ಹಾ ಹಾ ಬಲಿರ್ವಂಚಕಹಾ ಮಾತೃ ಮೃಗಾರ್ದ ಜಾರವ್ರತ ಹಾ ಹಾ ಹಾ ಕಲಿರ್ಮಾರಕಹಾ ಹಾ ಮದ್ಗøಹ ದೂರಕ ಪರಸಖ ಆಶಾಬ್ಧಿ ಸಂಶೋಷಕ10ಪದತಾಳಿನ್ನು ತಾಳೆಂದು ತವಕದಿ ಸವತಿಯಮೇಲೆ ಕೋಪಿಸಿ ಸತ್ಯಭಾಮೆಜಾಲಕ ಮಾಲೆಯ ಹರಿದು ಚಿಮ್ಮಿದಳತ್ತಮೇಲೆಣ್ಣೆಗಂಟ ಹರಹಿದಳು 11ಮೂರ್ಛೆಯೊಳ್ಮೈಮರೆದಂತೆ ತೇಲ್ಗಣ್ಣ ಹಾಕಿದುಶ್ಚಿಹ್ನ ಲೀಲೆಯ ತೋರೆನಿಶ್ಚಲ ಭಾವೆಯನರಿತೆತ್ತಿ ಒಯ್ದರುಒಚ್ಚೇರೆಗಂಗಳೆಯರು ಬೆದರಿ12ಶ್ಲೋಕಧೈರ್ಯಂಗೆಟ್ಟ ಮೃಗೇಂದ್ರ ನಾರಿಯಿವಳೊ ನ್ಯೆರಾಶ್ಯ ಬಳ್ಳ್ಯಿಹಳೊವೈಮಾನಿಕರ ದೇವತ್ಯಾಕೆ ಮುನಿದಳಯ್ಯಯ್ಯೊ ಸೌಜನ್ಯಳೊಮಯೂರಭ್ರಮುಡೇಳ್ ಮಹಾಪತಿವ್ರತೇಳ್ಮತ್ತೇಭ ಗಾಮಿನಿಯಳ್ಕೈವಲ್ಯಜÕರು ಬಲ್ಲರೀಕೆಯ ಬಗೆ ಕಾಯಯ್ಯ ಕೃಷ್ಣಯ್ಯನೆ 13ಎತ್ತೊಯ್ದು ಮೃದುತಲ್ಪಮಂಚಕವಳ ಮತ್ತಾಲವಟ್ಬೀಸಲುಫೂತ್ಕಾರಂ ಕಿವಿಯೊಳ್ಪೂರೈಸಿ ನುಡಿಸಲ್ಸತ್ಯಂಗನೆ ಸುಮ್ಮನೆಪ್ರತ್ಯುತ್ತರಗೊಡದಿರಲು ಬೆದರಿವರ್ಚಿತ್ತಜನೈಗ್ಹೇಳಿದರುಮುಕ್ತಕೇಶಿಯ ವಾರ್ತೆ ಕೇಳಿದು ಬಹು ಚಿತ್ರವಿಚಿತ್ರೆಂದನು 14ಪದದೂತೇರ ನುಡಿಗ್ಯದುನಾಥನು ಮನ್ನಿಸಿಆತುರದಲಿ ನಡೆತಂದುಪ್ರೀತಿಗಗ್ಗಳೆ ಸತ್ರಾಜಿತ ಸಂಜಾತಳೆನೀತವೆ ನೀ ಮುನಿದಿಹುದು 15ಎಂದು ಮಂಚದಲಿ ಕುಳಿತು ಪ್ರಾಣನಾಥೆ ಬಾಇಂದುವದನೆಮಾತನಾಡೆಕಂದ ಕಂದರ್ಪನಾಣೆ ಕಪಟವಿಲ್ಲೆನ್ನಲ್ಲಿಕಣ್ಣೆರೆದಿತ್ತಲೊಮ್ಮೆ ನೋಡೆ 16ಶ್ಲೋಕಕಸ್ತೂರಿ ತಿಲಕಿಲ್ಲ ನಿನ್ನ ಪಣೆಯೊಳ್ಮುತ್ತಿನ ಬೊಟ್ಟಿಲ್ಲವೆಮತ್ತೇನ್ಭೂಷಣವೇಣಿ ನಿನ್ನ ನೊಸಲೊಳ್ಮುತ್ತಿನಮಣಿಇಲ್ಲವೆರತ್ನಾಂಕಾಭರಣಿಲ್ಲ ನಿನ್ನ ಶ್ರುತಿಯೊಳ್ಮತ್ವಜ್ರದೋಲಿಲ್ಲವೆಹತ್ತೆಗಟ್ಟಿದ ನಿಷ್ಕಕಂಠ ಪದಕಿಲ್ಲ ಒತ್ತಾದ ಹಾರಿಲ್ಲವೆ 17ವ್ಯತ್ಯಸ್ತ ಸ್ತನಪಟ್ಟಿಕೆ ರುಚಿರ ಶ್ರೀ ಗಂಧಾನುಲೇಪಿಲ್ಲವೆಸ್ವಸ್ತಂಬ್ರ ಸ್ಮರಣಿಲ್ಲವೆ ಮಮಸಖಿ ಸ್ವಸ್ಥಾಗುಸುರ್ಭಾವೆ ನಂಬು ಸ್ತ್ರೈಣರ್ಬಗೆ ತೋರಿದೆ ಸ್ವಸುಖದಿ ತಾ ಸ್ತ್ರೈಣನಲ್ನಿಶ್ಚಯಹೇ ಸ್ತ್ರೀರತ್ನಶಿಖಾಮಣಿರಮಣಿ ಕೇಳ್ದುಶ್ಚಿತ್ತ ಮಾಣೆಂದನು 18ಪದಈಪರಿಭಾವೆಯ ಚರಣದೆಡೆ ಕುಳಿತುಶ್ರೀಪತಿ ಪ್ರಾರ್ಥನೆ ಮಾಡೆತಾ ಪತಿಯೊಡನೊಂದು ಮಾತನಾಡಳುಸತಿತಾಪದ್ವಿಗುಣಿಸಿತು ಕೇಳಿ 19ಮಾನಭಂಗವ ಮಾಡಿದ ಮೇಲೆಂತು ಬಹುಮಾನವನೊಲ್ಲದಿಹ ಸತಿಯತಾನೆತ್ತಿ ತೊಡೆ ಮೇಲೆ ಮಲಗಿಸಿಕೊಂಡು ದುಮ್ಮಾನವ ಬಿಡಿಸುವ ಹರಿಯು 20ಶ್ಲೋಕಮಾನವಮನ್ನಿಸಿದಾಕೆಯ ಸ್ಥಿತಿಯನು ಶ್ರೀನಾಥ ಕಂಡೆಂದನುಏನೆಮಾನಿನಿನಿನ್ನ ಕೋಪ ಬಿಡದೆ ನಾ ನೋಡಿದೆ ಕಲ್ಲೆದೆಮನುಷ್ಯರೊಳುದಾವಸ್ತ್ರೀಗೆ ಸಲಿಗೆ ತಾನಿತ್ತವಂಗೀ ಬಗೆತಾನೆ ತೋರಿದೆವಿಶ್ವಶಿಕ್ಷಿಕ ಗಡಾ ಏನಾಶ್ಚರ್ಯ ಗಡಾ 21ಎಚ್ಚೆತ್ತೆನ್ನೊಳು ಮಾತನಾಡೆ ಪ್ರವುಢೆ ಹುಚ್ಚಾಗದಿರೆಂದನುಸಚ್ಚಿನ್ಮೂರ್ತಿಯ ಮಾತಕೇಳಿ ಕುಳಿತಳ್ವಚ್ಚೆರೆಗಣ್ಮುರಿಯಲುಉಚ್ಚಾರಂ ಗದಗದ್ಗಿಸಿ ಸ್ಛುರಿತಾಧರೆಗಚ್ಚಗ ತಾನೆಂದನುಉಚ್ಚಾರದೊಳಗೊಂದು ನಿನ್ನ ಮನದ ಮಚ್ಚಾಟ ಬೇರೆಂದಳು 22ಪದನಾರಿ ಪತಿಯ ಬಿಟ್ಟು ದೂರದಿ ಕುಳಿತಳುವಾರೆ ನೋಟದ ಬೆಡಗಿನಲಿಜಾರಿದ ಸೆರಗೆದೆಗೇರಿಸಿ ಹೊದ್ದು ಮುರಾರಿಗೆ ವಾರೆ ಮುಖದಿರುಹಿ 23ಕಪಟನಾಟಕ ನಿನ್ನ ಮಾಯವಗಾಧವುಕಪಟಗಿತ್ತಿಗೆದಿವ್ಯಕುಸುಮಅಪಮಾನ ಸತ್ಯಳಿಗೆಮಾನಬಂಗಾರಿಗೆಚಪಲತೆ ತಿಳಿಯದು ನಿನ್ನ 24ಶ್ಲೋಕಕೇಳ್ನಾರೀಮಣಿ ನಾರದ ಕುಸುಮದ ಅರಳೊಂದು ಪಾದಾಬ್ಜಕೆನಲ್ವಿಂದರ್ಪಿಸಲಾಗ ಯೋಚಿಸಿದೆ ನಾ ಚೆಲ್ವ ಅಮರ್ಭೂರುಹಬಲ್ವಿಂದೀ ನಗರಕ್ಕೆ ನಿನ್ನ ಮನೆಯಂಗಳದೊಳು ಸ್ಥಾಪಿಸುವಉಲ್ಲಾಸಂ ಪಿಡಿದಿರ್ದೆ ನಾಕುಸುಮಜೇಷ್ಠಳ್ಗೀಯೆ ನೀ ಮುನಿವರೆ25ಹೂವೊಂದಾಕೆಗೆ ಕೊಟ್ಟೆ ಸಾಕು ತರುವ ನಿವಾರಿಸಿ ವಜ್ರಿಯಗರ್ವಿಂ ನಿನ್ನಿದಿರಲ್ಲಿ ಕೊಂಡು ಬಹೆ ನಾ ಭವ್ಯಾಂಗಿ ಕೇಳ್ಭಾಮಿನಿದಿವ್ಯಾಮೋದಮಯ ದ್ರುವiಂ ಸುರರಿಗಂ ಸೇವ್ಯಾದುದ ನಿನ್ನಯಭವ್ಯಂಗಳದೊಳಗಿಟ್ಟು ಮೆಚ್ಚಿಸುವೆ ನಾ ನವ್ಯಾದ್ಭುತಂನೋಡುನೀ26ಬಿನ್ನಣೆ ಮಾತಲ್ಲ ನಿನ್ನಾಣೆಭಾವಕಿಇನ್ನು ದುಮ್ಮಾನವೇಕೆನ್ನುತಾಚೆನ್ನಿಗರರಸನು ರಮಣಿಯ ನಳಿತೋಳಚೆನ್ನಾಗಿ ಸೆಳೆದಪ್ಪಿಕೊಳುತ 27ಎನ್ನ ಶಪಥÀವಿದು ನಿನ್ನೆತ್ತಿ ಖಗವೇರಿಕನ್ನೆ ಶಚಿಯ ಮನೋಹರನಮನೆಗೆ ಹೋಗಿ ವಿಜಯರವದಿ ತಂದುರನ್ನದತರುನಿನಗೀವೆ ನಾ 28ಶ್ಲೋಕಹೀಗೆಂದಾಕೆಯಮೆಚ್ಚಿಸಿದನುಆ ವಿಯೋಗಿಯಸಂಯೋಗಿಯಭೋಗಭಾಗಾಶೆಯ ನಿಯತಿ ಸುಖಿಯಾ ತ್ರೈಗೇಹ ಸಂಸ್ಥಾನಿಯಾಯೋಗೇಶೇಶ್ವರ ತನ್ನ ಪಾಶ್ರ್ವದಿ ದಿವಿಪ ನಾಗೇಶೈರ್ವಂದಿಯಾಶ್ರೀಗೋವಿಂದ ಮನುಷ್ಯರ ತೆರದಲಿ ಹೀಂಗಾಡಿದ ಲೀಲೆಯ 29ಬಾ ಸತ್ರಾಜಿತ ಗರ್ಭಸಿಂಧು ಸುಮಣಿ ಬಾ ಸೋಮಬಿಂಬಾನನೆಬಾ ಸೌಂದರ್ಯದವಾರಿಧಿಪರಮೆ ಬಾ ಬಾ ಸತ್ಯಭಾಮೆ ರಮೆಬಾ ಸಂಧ್ಯಾರುಣದಂಬಕಿ ಸುಕಬರೆ ಬಾ ಸ್ವಚ್ಛ ಬಿಂಬಾಧರೆಬಾ ಸದ್ರತ್ನದ ಭೂಷಣೆ ಪ್ರಸನ್ನವಾಗೆ ಸರ್ವತೋಷಾಂಗನೆ 30ಪದನಿನಗಾಗಿ ವೇದ ಕದ್ದವನ ಕೊಂದೆನಿನಗಾಗಿ ನನ್ನುದಧಿಯಲ್ಲಿ ನಿನ್ನ ತಂದೆನಿನ್ನ ಕದ್ದವನ ಕೊಂದೆ ನೀ ಬರಲೆತ್ತಿದೆನಿನ್ನ ಭಾಗ್ಯದ ಸಖಿ ಹಿಡಿದೆ 31ನಿನ್ನ ಭಾರವ ತೆಗೆದೆ ನಿನಗಾಗ್ಯಟವಿಯಲ್ಲಿದ್ದೆನಿನ್ನಮುನಿಸುತಿಳಿಯ ಬಂದೆನಿನ್ನನೆ ಮೆಚ್ಚಿ ಅನ್ಯ ಕನ್ಯೇರ ವ್ರತವನಳಿದೆನಿನ್ನ ಪುಣ್ಯದ ಬೆಳಸ ಬೆಳೆದೆ 32ಶ್ಲೋಕಶ್ರೀಶೌರಿಸರಸೋಕ್ತಿಯಿಂದ ಸತಿಯ ಲೇಸಾಗಿ ಸಂತೈಸುತಆಸ್ಯಾಬ್ಜಾಂಕಿತ ಸ್ವೇದವನ್ನು ಸುಮುಖವನೊತ್ತಿ ಆರೈದನುಕೇಶ ನೇವರಿಸುತ್ತ ತಾ ಚತುಷ್ಕಪರ್ದಾ ಸತ್ಯಭಾಮಿನಿಗೆಶ್ರೀಶ ಮಂಡಿಸಿ ವೇಣಿಯಲ್ಲಿ ಇಡುವ ಭೂಷಣಗಳನಿಟ್ಟನು 33ಕಸ್ತೂರಿ ತಿಲಕಿಟ್ಟ ನೇತ್ರಯುಗಕೆ ಮತ್ತಂಜನವಿಟ್ಟನುವೃತ್ತಾದ ಸುಕಪೋಲದೊಳ್ಮಕರಿಕಾ ಪತ್ರಂಗಳನಿಟ್ಟನುಮುಕ್ತಾಹಾರಪ್ರವಾಳನೀಲಮಣಿಗಳ್ವತ್ತಾದ ಸ್ವರ್ಣಮಾಲಿಕಾರತ್ನಾಂಕಾಭರಣಿಟ್ಟನು ಯದುಪತಿ ಸತ್ಯಂಗನಾಪ್ರಿಯನು 34ಪದಮುಡಿಗೆ ಮಲ್ಲಿಗೆಯ ಮುಡಿಸಿದ ಮದನನಯ್ಯಮಡದಿಯೆದೆಗೆ ಮಲಯಜವಕಡು ನರ್ಮೋಕ್ತಿಗಳಲ್ಲಿ ಪೂಸಿದ ಘನಶ್ಯಾಮಬಿಡು ನಿನ್ನ ಖತಿಯೆಂದ ದೇವ 35ಕೋಟಿ ಚಂದ್ರಾರ್ಕ ಲಾವಣ್ಯನರ್ಧಾಂಗಿಗೆಕೋಟಿ ಕೋಟ್ಯಾಭರಣಿತ್ತನೋಟ ಬೇಟದಿ ಮನೋರಥವ ಪೂರೈಸಿದನಾಟಕಸೂತ್ರನಿರ್ಲಿಪ್ತ 36ಶ್ಲೋಕಇತ್ಯಾದಿ ಬಹುಮನ್ನಿಸಿ ಗರುಡನ ಹತ್ತಿದ ಸ್ವಸ್ತ್ರೀ ಸಹನಿತ್ಯಾನಂದಮಯ ಸ್ವರೂಪ ಅಮರಾವತಿಗೆ ಪೋಪನ್ನಕಪೃಥ್ವೀಜಾತನು ಮತ್ತನಾಗಿ ಅಮರರ್ಮೊತ್ತವ ಬಾಧಿಸಲುಇತ್ತೀ ಕಾರ್ಯವ ಬಿಟ್ಟು ಮುಂಚೆ ನಡೆದ ಜೆÉೂೀತಿಷ್ಮತಿಸ್ಥಾನಕೆ 37ಹೋಗಿ ಆ ನರಕನ್ನ ಸೀಳಿ ಭೌಮಿಜಗಿತ್ತನು ಭಾಗ್ಯವಸೌಗಂಧಿಯರ ಷೋಡಶ ಸಹಸ್ರರ ಯೋಗಾರ್ಹರಂ ತಂದನುಶ್ರೀ ಗೋಪೀಜನ ಮೋಹನಾಘಹರಣ ಹೋಗ್ವಾಗ ಸ್ವರ್ಧಾಮಕೆಆಗಿತ್ತಾಕುಂಡಲಅದಿತಿಗೆ ಮ್ಯಾಗಿಂದ್ರನಿಂ ಸಂಪೂಜ್ಯನು 38ಪದಶಚಿಯರಸನು ಪೂಜಿಸಿದ ಮೇಲೆ ರಾಣಿಯಉಚಿತಕೆಮಂದರತರುವಮುಚುಕುಂದವರದನು ತರುತಿರೆ ಅಮರರನಿಚಯಸಹಿತ ಕಾದಿದಿಂದ್ರ 39ಗರುಡನ ಗರಿಯ ಗಾಳಿಯಲೆಲ್ಲರೋಡಿಸಿಧÀರೆಗೆ ತಂದನು ದ್ವಾರಾವತಿಗೆಅರಸಿಯಂಗಳದೊಳು ನಿಲಿಸಿದ ತರುಮೂಲಸರಿ ಲೆತ್ತವಾಡುವ ಎಂದಳಾಗೆ 40ಶ್ಲೋಕಪಾರಿಜಾತದ ಮೂಲ ಚೈತ್ಯದಲ್ಲಿನ ಶ್ರೀರಂಗ ರತ್ನಾಸನಸಾರಿ ಇಬ್ಬರು ಲೆತ್ತವಾಡುವಹರಿನಾರೇರ ಮುಂದೆನ್ನನುಭೂರಿಮಾನಿಯಮಾಡುಸ್ವಾಮಿ ಎನಲು ಕಾರುಣ್ಯ ವಾರಿನಿಧಿಧಾರಿಣಿಯಲ್ಲಿ ಸ್ತ್ರೈಣನೆಂಬರು ಸಖಿ ಈ ರೀತಿ ಮಾಣೆಂದನು 41ನೀ ಲೆತ್ತವನು ವೃಕ್ಷ ಮೂಲದಲಿ ಎನ್ನೊಳಾಡ ಒಲ್ಲೆಂದರೆಮೇಲೀಅಂಬರಭೂಷಣೇಕೆ ವಿಭುವೆ ಮೇಲೀ ಶರೀರೇತಕೆಶ್ರೀಲೋಲ ಶರಣೇಚ್ಛದ ಎನಿಸುವ ನಿನ್ನ ಬಿರುದೇತಕೆಬಾಲೇರ್ಮುಂದಪಹಾಸ್ಯವಾಯಿತೆನುತ ಲೋಲಾಕ್ಷಿ ತಾ ಮುನಿದಳು42ಪದಹಂಸದುಪ್ಪಳದ ಸುಪ್ಪತ್ತಿಗೆ ಮಂಚದಿ ರಾಜಹಂಸಗಮನೆ ಮುನಿದು ಮಲಗೆಮಾಂಶಳು ಕದವನಿಕ್ಕಿದಳು 43ನೀನೆಂದ ಮಾತ ನಡೆಸುವೆ ಮುನಿಯದಿರುಮಾನಿನಿರನ್ನೆ ಕದತೆರೆಯೆಶ್ರೀನಾಥ ಹೀಗೆ ಮನ್ನಿಸಿ ಕದತೆರೆಸಿದ ದಯಾನಿಧಿ ಪ್ರಸನ್ವೆಂಕಟೇಶ 44ಶ್ಲೋಕಲಕ್ಷ್ಮೀ ಭೂರಮಣ ಭವಾಬ್ದಿಮಥನಪಕ್ಷೀಂದ್ರಸದ್ವಾಹನಮೋಕ್ಷಾಧೀಶವಿರಿಂಚಿವಾಯುಫಣಿಭೂ ತ್ರ್ಯಕ್ಷೇಂದ್ರ ದೇವಾಯನವಕ್ಷೋಜಾವರ ಸುಂದರಾಗ್ರಣಿ ವರಲಕ್ಷ್ಮೀ ಮನೋನಾಯಕರಕ್ಷಿಸಿದನು ಸ್ವಸ್ತ್ರೀಯ ನೆರೆದನು ಸಾಕ್ಷಾತ್ ಪ್ರಸನ್ವೆಂಕಟ45ಅನಂತಾಬ್ಬ ಭವಾಂಡ ಹುಟ್ಟಿ [ಸಿ] ಸ[ಲಹು] ವತಾನೇ ಬಯಲ್ಮಾಡುವತಾ ನಿರ್ಲಿಪ್ತ ಸದಾಗಮೈಕ ಸುವಿಜಯಾನಂದ ಪೂರ್ಣಾತ್ಮನುಈ ನಾಟ್ಯವನು ತೋರಿದ ಸುಜನರಿಗಾನಂದ ವೃದ್ಧಿಕರತಾನಾಡಿದನು ಲೆತ್ತವ ಸತಿಗೂಡಜ್ಞಾನಿಪ್ರಸನ್ವೆಂಕಟ 46ಪದಮಂಗಳಾತ್ಮಕ ವಿಶ್ವನಾಟಕವಾಡಿದ ಸತ್ಯಂಗನೆಯೊಳು ಲೆತ್ತದಾಟಅಂಗನೆಷೋಡಶ ಸಹಸ್ರರ ಸೋಲಿಸುವರಂಗ ಪ್ರಸನ್ನವೆಂಕಟೇಶ 47ಶ್ರೀ ಸುರವೃಕ್ಷತಳದಿ ರತ್ನಾಭರಣಮಯನೀ ಸೋತೆ ಸತ್ಯಭಾಮಿನಿಯೆಂದರೆಹರಿನೀ ಸೋತ್ಯೊ ಪ್ರಸನ್ನವೆಂಕಟೇಶ 48ಲೇಶ ಹಾಸದಿ ಜಗತ್ಪ್ಪ್ರಪಂಚವ ತೋರುತ್ತವಾಸುದೇವಪ್ರಕೃತಿ ಗೂಡಿಈ ಶೋಭಿಸುವ ದ್ವಾರಕಾ ನಗರದಲಿದ್ದಪ್ರಸನ್ವೆಂಕಟೇಶನ ನೋಡಿ 49ಅನಂತದೇಶದಿ ಅನಂತ ಕಾಲದಿಅನಂತ ಸದ್ಗುಣಸಾಂದ್ರದೀನ ದಯಾನಿಧಿ ಪ್ರಸನ್ನÉಂಕಟ ಕೃಷ್ಣಮನುಷ್ಯಲೀಲೆಯ ತೋರಿದ 50ಈ ಸತ್ಯಭಾಮಾವಿಲಾಸದ ಪದ್ಯಪದಲೇಸಾಗಿ ನರನಾರಿಯರುತೋಷಭರಿತರಾಗಿ ಪಾಡಲು ಸುಖವೀವಶ್ರೀಶ ಪ್ರಸನ್ನವೆಂಕಟೇಶ 51
--------------
ಪ್ರಸನ್ನವೆಂಕಟದಾಸರು
ಹರಿಯೆಂಬ ನಾಮಮೃತ ರುಚಿಕರವೆಲ್ಲಪರಮಭಕ್ತರಿಗಲ್ಲದೆ - ಮಿಕ್ಕ -|ಅರಿಯದ ಕಡುಮೂರ್ಖ ಮನುಜರಿಗೆಲ್ಲತಾಹರುಷವಾಗಬಲ್ಲದೆ? ಪಅಂದುಗೆಅರಳೆಲೆಯಿಟ್ಟರೆಕೋಡಗಕಂದನಾಗಬಲ್ಲದೆ? |ಹಂದಿಗೆ ತುಪ್ಪ-ಸಕ್ಕರೆ ತಿನ್ನಿಸಲು ಗ-ಜೇಂದ್ರನಾಗಬಲ್ಲದೆ? ||ಇಂದುಪೂರ್ಣಕಳೆಯೊಳು ತಾನು ತೋರಲುಪರಿಪರಿ ಬಂಗಾರವಿಟ್ಟರೆ ದಾಸಿ ತಾಅರಸಿಯಾಗಬಲ್ಲಳೆ? |ಭರದಿಂದ ಶ್ವಾನನ ಬಾಲವ ತಿದ್ದಲುಸರಳವಾಗಬಲ್ಲದೆ? ||ಉರಗಗೆ ಕ್ಷೀರವನೆರೆಯಲು ಅದು ತನ್ನಗರಳವ ಬಿಡಬಲ್ಲದೆ? ||ಭರದಿಂದ ನೀಲಿಯ ಕರದಿಂದ ತೊಳೆಯಲುಕರಿದು ಹೋಗಬಲ್ಲದೆ? | 2ಮೋಡಕೆ ಮಯೂರ ಕುಣಿವಂತೆ ಕುಕ್ಕುಟನೋಡಿ ಕುಣಿಯಬಲ್ಲದೆ? |ಗೋಡೆಗೆ ಎದುರಾಗಿ ನಾಟ್ಯವಾಡಲುನೋಡಿ ಸುಖಿಸಬಲ್ಲದೆ? ||ಹಾಡಿನ ಕುಶಲತೆ ಬಧಿರನು ತಾ ಸವಿ-ಮಾಡಿ ಕೇಳಬಲ್ಲನೆ? |ರೂಢಿಗೊಡೆಯ ನಮ್ಮಪುರಂದರವಿಠಲಮೂಢಜಾÕನಿ ಬಲ್ಲನೆ3
--------------
ಪುರಂದರದಾಸರು
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ ಪಹೆಜ್ಜೆಗಳಿವೆ ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
--------------
ನಿಡಗುರುಕಿ ಜೀವೂಬಾಯಿ