ಒಟ್ಟು 137 ಕಡೆಗಳಲ್ಲಿ , 39 ದಾಸರು , 119 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜ್ಞಾನಕಿದೇ ನಡಿ ಕುರುಹು | ಶ್ರೀ ರಮಾನಾಥಾಂಘ್ರಿಯ ಕಾಣುವದರಿತು ಪ ಕೋಪ ತಾಪವ ಬಿಡಬೇಕು ಪಶ್ಚಾ | ತ್ತಾಪದಿ ವೈರಾಗ್ಯ ಘನ ಬಲಿಬೇಕು | ಪಾಪವಿರಹಿತಾಗಬೇಕು | ಗತಿ | ಸೋಪಾನವಾದಾ ಶಾಂತಿಯ ಜಡಿಬೇಕು 1 ಕರುಣ ಮೂರುತಿ ಆಗಬೇಕು ಸರ್ವ | ಧರೆಯು ಜನಕ ಪ್ರಿಯವಾಗಿರಬೇಕು | ನೆರೆ ಲೋಭವನು ಜರಿಬೇಕು ತನ್ನ | ತೆರನರಿ ತನ್ನವ ನೀಡಲಿಬೇಕು 2 ದುರಿತ ಭಯವ ಬಿಡಬೇಕು | ದುಃಖ | ದುರ್ವಾಣಿಯಲಿ ತಾ ಬಳಲದಿರಬೇಕು | ಹರಿಭಕ್ತಿ ದೃಢಗೊಳ್ಳಬೇಕು ಗುರು | ಬೋಧ ನಿಜವೆನಬೇಕು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತೋರೆನಗೆ ಶ್ರೀ ಕೃಷ್ಣ ತೋಯಜಾಂಬಕ ನಿನ್ನ ಶ್ರೀ ರಮೇಶನೆ ನಾನಾ ಗುಣನಾಮ ಮಾಲೆ ಪ. ವಾರಿಜಾಂಬಕನೆ ಶ್ರೀ ಗುರುಗಳ ರಚಿಸುತಲಿ ಹಾರಹಾಕಿಹರೊ ನಿನಗೆ ಹರಿಯೆ ಅ.ಪ. ಮೋಹನವಿಠ್ಠಲನೆಂಬಾ ಒದ್ದು ತಾಪತ್ರಯವನು ತಿದ್ದಿ ತಿಳಿಸುತಲಿ ಜ್ಞಾನ ಕರ್ಮ ತಿದ್ದಿ ತಿಳಿಸಿದ ಗುರುಗಳು ಇವರು 1 ಇಂದಿರಾಪತಿ ರಂಗನಾಥ ರಘುರಾಮ ಇಂದಿರೇಶ ದಯಾಪೂರ್ಣ ಸೀತಾಪತೇ ವೇದೇಶ ಯಾದವೇಂದ್ರ ಸ್ವಾಮಿ 2 ಇಂದಿರಾರಮಣ ಜಯ ಗೋಪಾಲನೆ ವರದೇಶ ಪ್ರಾಣನಾಥಾ ಪದ್ಮನಾಭ ಶ್ರೀನಾಥ ಜಗದೀಶನೆ ವರದ ಮೋಹನದೇವಾ 3 ಶ್ರೀಕಾಂತ ಪುರುಷೋತ್ತಮ ಪರಮಾನಂದ ಶ್ರೀ ಸುರೇಂದ್ರ ಕರುಣಾಕರ ವೆಂಕಟ ದಯಾಮಯನೆ ಭವತಾರಕ ಹರಿಯೆ 4 ವಸುದೇವ ಪಾರ್ಥಸಾರಥಿಯೆ ಪ್ರಾಣಪ್ರಿಯ ಪರಿಪೂರ್ಣ ಮಧ್ವವಲ್ಲಭಮುಕ್ತಿ ದಾಯಕ ಸತ್ಯೇಶನೆ ಪರಮಪಾವನ ರಮೇಶ ಕರುಣಾನಿಧೆ ಪುಂಡರೀಕಾಕ್ಷ ಸ್ವಾಮಿ 5 ಕಲ್ಯಾಣಗುಣಪೂರ್ಣ ಚಂದ್ರಹಾಸವರದ ಮಾಯಾಪತಿ ಉಪೇಂದ್ರ ಚಕ್ರಪಾಣಿ ಮುಕ್ತೇಶ ಬದರಿನಾಥಾ ಜಯಪ್ರದ ನಿರ್ಜರೇಶ ಜಾನಕೀಪತಿ ವಿಶ್ವನಾಥಾ ಸ್ವಾಮಿ 6 ಭುವನೇಶ ಗಜರಾಜವರದ ಜನಾರ್ಧನ ಮಧ್ವನಾಥ ಆನಂದ ಅರವಿಂದಾಕ್ಷ ಪುಂಡರೀಕವರದ ಶ್ರೀ ಕೃಷ್ಣಸ್ವಾಮಿ 7 ಮಾಧವ ಕಮಲಾನಾಥ ಕಮಲನಾಭ ಸದಮಲಾನಂದ ವೈಕುಂಠವಾಸ ಪದ್ಮೇಶ ಗುರು ಮಧ್ವೇಶ ಇಂದಿರಾಪತಿ ರಮೇಶ ಶ್ರೀಶÀ 8 ನಿಗಮ ಸಿರಿರಮಣ ಕಮಲಾಕಾಂತನೆ ಸರವ ಪೋಣಿಸಿ ಹಾಕುತ ಪರಮ ಪ್ರಿಯ ಶ್ರೀ ಗುರುಗಳು ಉಳಿದ ನಾಮಾ ಪೊರೆಯೋ 9
--------------
ಅಂಬಾಬಾಯಿ
ದತ್ತ ದಿಗಂಬರನೇ ವಂದಿಪೆ ನಾ ಕಾಯೈ ನೀ ಕರುಣಾ ಸಾಗರ ವಲ್ಲಭರಾಮಾ ಪಾಡುವೆನಾ ಹೇ ಜಗದೀಶಾ ನೀಗುಸು ಆಶಾ ಬೇಡುವೆ ಶ್ರೀಶಾ ವಿಷಯದೊಳಿರುವಾ ಈ ಘನಪ್ರೇಮಾ ನಿನ್ನೊಳಗಿರಲೈ ನಿರ್ಗುಣಧಾಮಾ ಸದ್ಗುರುನಾಥಾ ಹೇ ಅವದೂತಾ ಸತ್ಯ ಸ್ವರೂಪಾ ನಿತ್ಯಾನಂದಾ
--------------
ಶಂಕರಭಟ್ಟ ಅಗ್ನಿಹೋತ್ರಿ
ದತ್ತಾತ್ರೇಯ ಸ್ವಾಮೀ ಕೃಪೆ ಮಾಡೈ ನೀಯನ್ನ ಮ್ಯಾಲ ಪ ಅನಿಮಿಷಮಾನಸ ಸಂಚಾರಾ ಅನಾಥ ಜನ ಸಂಕಟ ಪರಿಹಾರಾ ದೀನ ದಯಾಲ ರಮಾವರಾ ನೆನೆವರ ಸಹಕಾರಾ 1 ಅನಸೂಯಾಕರ ಸಂಪುಟರನ್ನಾ ಘನತರ ಚರಿತ ಪರಮ ಪಾವನ್ನಾ ಅನುಪಮ ತ್ರೈಜಗ ಜೀವನ್ನಾ ವನರುಹವದನಾ2 ಸರಸಿಜೋದ್ಭವ ನುತ ಮನ್ನಾಥಾ ವರ ನಿಗಮಾ ಗೋಚರ ಅನಂತಾ ಕರುಣಾಂಬುಧಿಯೇ ಸರ್ವಾತೀತಾ ಗುರು ಮಹಿಪತಿ ದಾತಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಯಾನಿಧೇ ಶ್ರೀ ರಾಘವೇಂದ್ರ ಗುರುವೇ ಕಾಮಿತ ಸುರತರುವೇ ಪ ಭವ - ಭಯಾ ಹರಿಸಿ ತವ ಪಾದ - ಪಯೋಜ ಯುಗ ತೋರೋ ಅ.ಪ ಧರಾತಳದಿ ಸುರ - ತರೂ ಸುರಭಿವರ ತೆರಾದಿ ಕಾಮಿತ - ಕರಾದು ಮೆರೆಯೋ 1 ಗಡಾನೆ ತವ ಪದ - ಜಡಾಜ ಭಜಿಸುವ ಧೃಡಾವೆ ಕೊಡೊ ಎ - ನ್ನೊಡೇಯ ನೀನೇ 2 ಎಷ್ಟೂ ಪೇಳಲಿ ಎನ್ನ - ಕಷ್ಟರಾಶಿಗಳ್ಯತಿ - ಶ್ರೇಷ್ಠಾನೆ ಕಳಿಯೊ ಉ - ತ್ಕ್ರಷ್ಠಾ ಮಹಿಮ ಗುರೋ 3 ಮೋಕ್ಷಾದ ಎನ್ನನು - ವೀಕ್ಷಿಸಿ ಈಗಲೆ ಸುಕ್ಷೇಮ ನೀಡುತ್ತಾ - ಪೇಕ್ಷಾಪೂರ್ತಿಸೊ ಗುರೋ 4 ದಾತಾನೆ ಎನ್ನಯ - ಮಾತಾನು ಲಾಲಿಸೊ ನೀತಾ ಗುರು ಜಗ -ನ್ನಾಥಾ ವಿಠಲ ಪ್ರಿಯ 5
--------------
ಗುರುಜಗನ್ನಾಥದಾಸರು
ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಾತ ತ್ರೈಲೋಕ್ಯಕೀತ ಧ್ರುವ ದೂರ ಸಗುಣ ಸಹಕಾರ ಧೀರ ಪರಮಉದಾರ ದುರಿತ ಸಂಹಾರ ಪರಾತ್ಪರ ಪರಾಕಾರ 1 ಈಶ ಭವಭಯನಾಶ ಶೇಷಶಯನ ಸರ್ವೇಶ ದೋಷಹರ ಕರುಣೀಶ ಕ್ಲೇಶನಾಶ ದೇವೇಶ 2 ಮಾತಾ ವಿಶ್ವನಿರ್ಮಿತ ಪಿತಾಮಹನ ಪಿತ ಈತ ಮಹಿಪತಿ ಹಿತ ನಾಥಾ ಭಕ್ತಪುನೀತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೀನ ದಯಾಳು ನೀನೆವೆ ನಮ್ಮ ಅನಾಥನಾಥಾ ನಂದೊ ಬ್ರಹ್ಮನಂತುಗಾಣನುಪಮ ಧ್ರುವ ಪರಮಾನಂದ ಪರಮ ಪಾವನ ಶರಣ ಜನರಾಭರಣಾಗಿ ಹ್ಯ ಕರುಣ ಸಾಗರ ಪೂರ್ಣನೆ 1 ಅವ್ಯಕ್ತನಹುದೊ ವಿರಕ್ತ ಶಕ್ತನಹುದೊ ಭಕ್ತವತ್ಸಲ ಭೋಕ್ತರ ಮುಕ್ತಿದಾಯಕ 2 ಭೇದಾತೀತ ಸದೋದಿತ ಪೂರ್ಣ ಸಾಧುಹೃದಯನಿವೇದ ಪೂಜಿತ ಅದಿದೇವ ಸದಾತ್ಮನೆ 3 ವರ ಮುನಿಗಳ ಹರುಷವುದಯ ತರಳ ಮಹಿಪತಿಯ ಹೊರೆವ ಅನುದಿನ ಹರಿಯು ಪರಮ ದಯಾನಿಧೆ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮಿಸುವೆ ಪಾಲಿಸೊ ಪ್ರಾಣಪತೆ ಪ್ರೇಮವಾರುಧಿ | ವಾನರನಾಥಾ ಪೊಂದಿದೆ ಚರಣಾ ಪ ತಂದೆಯೆ ಪಿಡಿನೀ ಬಂದು ಕರವ ಕುಂದಗಳೆಣಿಸದೆ ನೀ ಬೇಗನೆ 1 ಕರಿವರ ಭೀಮಾ ಗುರು ಸುಖತೀರ್ಥಮರಿಯದೆ ಗರಿಯೊ ನರಹರಿ ಧ್ಯಾನಾ | ಕೊರವಿ ನಿಲಯನೆ ಪ್ರಾರ್ಥಿಪೆ 2 ಶ್ರೀವರ ಶಾಮಸುಂದರ ವಿಠಲನ ಸೇವಕನಾದ ಭಾವಿ ಧಾತ ಪಾವನನೇ ಪವಿಗಾತ್ರ ಸದಾ 3
--------------
ಶಾಮಸುಂದರ ವಿಠಲ
ನಮೋ ನಮೋ ಮಾತೇ ಎನ್ನಯ ಶ್ರಮಾವ ಕÀಳಿ ದ್ಯೋತೆ ಪ ಕ್ಷಮಾತಳದಿ ನಿ ಸುಮಾಹಕಲ್ಪ ದೃಮೋಪಮಾಗಿಹೆ ಸಮಾನ ಸೋತ್ತಮೆ ಅ.ಪ ರಮಾಧವನರಾಣೀ ನೀ ತಮೋರೂಪ ಕಲ್ಯಾಣೀ ನಮಿಪೆ ನಿನ್ನನು ಕ್ಷಮಾದಿಪತ್ಯವ ಮಮೈವ ಪಾಲಿಸು ವಿಮಾನ ನಿಲಯಳೆ 1 ಧರಾತಳದಿ ಬಂದೂ ನೀ ದುರಾಳ ತತಿ ಕೊಂದೂ ಭರಾದಿ ಲೋಕದಿ ಮೆರಾದ ನಿನ್ನನು ಶಿರಾದಿ ನಮಿಸಿದೆ ವರಾವ ಪಾಲಿಸು 2 ಪಿತಾಮಹನ ಮಾತೇ ನೀ ವಿತಾತ ಗುಣ ಖ್ಯಾತೇ ದಾತಾ ಗುರುಜಗ - ನ್ನಾಥಾ ವಿಠಲನ್ನ ಪ್ರೀತಿಯ ಮಾನಿನಿ ದೂತಾನ ಪೊರೆವೋದು 3
--------------
ಗುರುಜಗನ್ನಾಥದಾಸರು
ನಾಥಾ ನಮಿಪೆ ನಿನಗೇ | ಶ್ರೀ ಬದರೀನಾಥಾ ನಮಿಪೆ ನಮಿಪೆ ನಿನಗೆ ಪ ನಾಥಾ ಜಗಕೆ ಸರ್ವಾ | ನಾಥ ಜನರ ಪಾಲಭೀತಿ ರಹಿತ ಬದರಿ | ನಾಥ ವಿಚಿತ್ರ ಶಕ್ತಾ ಅ.ಪ. ಸರ್ವ ಪ್ರಾಭವ ಶಕುತೀ | ರಕ್ಷಣ ಲಯಸರ್ವ ವಿಚಿತ್ರ ಶಕುತೀ ||ಪರ್ವ ಪರ್ವಗಳಲ್ಲಿ | ಸರ್ವಾಸ್ಥಿ ಮಜ್ಜದಲಿಸರ್ವ ದೇಹದಿ ನಿಂತು | ಸರ್ವ ಕಾರ್ಯವ ಮಾಳ್ಪೇ ||ದ್ರುತ :- ಪರ್ವತ ಸುತೆ ಪ್ರಿಯ | ಶರ್ವನೊಡೆಯಪವಮಾನನಾದಿ ಸುರ | ಸರ್ವವಂದ್ಯ ಹರಿಉರ್ವಿಲಧಿಕ ಮ | ತ್ತೋರ್ವರ ಕಾಣೆನೊದುರ್ವಿಭಾವ್ಯ ಸಮ | ಸರ್ವೋತ್ತಮನೆ 1 ಏಕಮೇವನೆ ತಪವ | ಆಚರಿಸುತ್ತಲೋಕರಕ್ಷಕ ಕಾರ್ಯಮ ||ಅನೇಕಾ | ವಿಚಿತ್ರರೂಪ | ಸಾಕಾರಿ ಪ್ರಭು ನಿ-ರ್ವಿಕಾರಿಯಾಗಿ ಆ | ನೇಕಾ ಬಗೇಲಿ ಮಾಳ್ಪೆದ್ರುತ :ನಾಕ ಜಪಿತಭುವ | ನೈಕಾರಾಧ್ಯನೆಏಕ ಗುಣದಲಿ | ಏಕದೇಶ ರಮೆಲೋಕೇಶಾದಿ ಪಿ | ನಾಕಿಗಳ್ಬಲ್ಲರೆಪ್ರಾಗ್ದೇವತೆ ಹರ | ಸಾಕುವುದೆಮ್ಮ 2 ಚಿತ್ಸುಖಮಯ ವಪುಷ | ಧೇನುಕ ಮತ್ತೆವತ್ಸಾರಿ ಗೋಪ ಹರುಷ ||ವತ್ಸರದವಗುಣ | ಕುತ್ಸಿತ ಜನ ಹರಮತ್ಸ್ಯಾದಿರೂಪ ಶಿರಿ | ವತ್ಸ ಲಾಂಛನನೇ ||ದ್ರುತ :ಮತ್ಸ್ಯ ಧ್ವಜಪ ಪುರು | ಕುತ್ಸ ಭೋಜಪ ಗೋವತ್ಸ ಧ್ವನಿಗೆ ಬಹ | ಉತ್ಸಹ ಉಳ್ಳನೆಚಿತ್ಸುಖ ಪ್ರದ ಶರ | ಣ್ವೋತ್ಸಲ ಗುರು ಗೋ-ವಿಂದ ವಿಠಲ | ಮಾಂ ಪಾಹಿ ಪಾಹೀ 3
--------------
ಗುರುಗೋವಿಂದವಿಠಲರು
ನಿನಗೆ ಅಚ್ಚರವಲ್ಲ ಅನುಮಾನಸಲ್ಲಾ ಇನಿತು ಶ್ರಮ ಕಳೆಯದಿರೆ ಘನತಿಲ್ಲ ನಿಮದಲ್ಲ ಪ ಹಿಂದೆ ನಿನ್ನ ಅಜ್ಞಾ ನಾ ಒಂದು ಮೀರಿದಕೆ ನೀ ಇಂದು ಭವಭವಣೆ ಬಹುಪರಿಯಿಂದಲೀ ತಂದು ನೋಯಿಸಿ ಮನಸುನಿಂದದಲೆ ಪರರಿಗೆ ಇಂದು ಮೊರೆಯನು ಹೋಗಿಸುವುದು ಥರವೇ ಹರಿಯೇ 1 ಒಂದು ತಿಳಿಯದಲೆ ನಾನು ಅಂದ ಮಾತಿಗೆ ಮನಸು ನೊಂದು ಈ ತೆರದಿ ಮಾಡುವುದು ರೀತೇ ಕಂದನಪರಾಧಗಳ ಒಂದು ನೋಡದ ಜನನಿ ಯಂದದಲಿ ನೀ ಪಾಲಿಸುವುದು ಸ್ವಾಮೀ ಪ್ರೇಮೀ 2 ಜಾತಮಗನನು ನಿಜತಾತ ಪರರಿಗೆ ತಾನು ಆತುರಾದಿಂದಲಿ ಮಾರಿದಂತೆ ದೂತರನು ಜಗದೇಕÀನಾಥ ನೀ ಪರಿಪರಿ ಫಾತಿಸಲು ಇನ್ನಾರು ಪೊರೆªರೈಯ್ಯಾ ಜೀಯಾ 3 ನಂಬಿದವರನ್ನು ನೀ ಅಂಬಿನಲಿ ಹೊಡೆವರೆ ಅರಿ ಪದುಮ ಗದಧರಪಾಣಿಯೆ ತುಂಬಿದ್ಹರಿಗೋಲಲ್ಲಿ ಇಂಬುಗೊಂಡಿರುವಾಗ ಅಂಬುಧಿಮುಣುಗಿಸುವದು ಥರವೇನೋ 4 ಯಾತಕೀಸೊ ಮಾತು ಸೋತೆ ನಾ ನಿನಗೀಗ ವಾತದೇವನ ತಾತ ಸೀತಾನಾಥಾ ನೀತ ಶ್ರೀಗುರುಜಗನ್ನಾಥ ವಿಠ್ಠಲರೇಯ ಮಾತು ಲಾಲಿಸಿ ಪಾಲಿಸುವದು ಇನ್ನಾ ಚೆನ್ನಾ 5
--------------
ಗುರುಜಗನ್ನಾಥದಾಸರು
ನಿನ್ನ ಮನಸಿಗೆ ಬಂತೆ ಪ್ರಾಣನಾಥಾ ಚಿಣ್ಣನೆಂದು ನೋಡದಲೆ ಕರಿಯಲಟ್ಟಿದೆ ವೇಗ ಪ ಸಾಕಿದೆನು ನಿನ್ನ ದಾಸನೆಂದು ತಿಳಿದು ವಿ- | ವೇಕದಿಂದಲಿ ಉಪನಯನ ಮಾಡೀ | ಲೋಕದೊಳಗೆ ಬೆಳಸಿ ಮುದುವೆಯ ಮಾಡಿ ಅ- ನೇಕ ತೀರ್ಥಯಾತ್ರೆ ತಿರುಗಿದವನಾ ಇಂದೆ 1 ಉದ್ಧಾರವಾಗುವೆನು ಕುಲಕೋಟಿ ಸಹಿತೆಂದು ಪದ್ದಿಟ್ಟುಕೊಂಡಿವೈ ಈ ತರಳನ ಸುದ್ದಿ ತಿಳಿಯಗೊಡದೆ ವಿಯೋಗ ಮಾಡಿಸಿದೆ ಇಂದು 2 ಪಾದ ಭಜಿಸುವರಿಗೆ ಭಾಗ್ಯ ಹೆಚ್ಚುಗೊಡದಿಪ್ಪನೆಂದು ಬಿರುದು ಧರಿಸಿ ನಿಚ್ಚ ಮೆರೆವಾ ಮಹಿಮ ವಿಜಯವಿಠ್ಠಲರೇಯ ಅಚ್ಚ ಭಕುತರ ಪ್ರಿಯ ವೈಕುಂಠಕೆ ಇಂದೆ 3
--------------
ವಿಜಯದಾಸ
ನಿನ್ನ ವಲಿಸುವ ಭಾಗ್ಯ ನಿನ್ನ ಭಕ್ತರಿಗೆ ನೀ ಕೊಟ್ಟು ಸನ್ನುತ ಚರಿತರಿಗೀವೆಯಲ್ಲದೆ ನಿನ್ನ ಮಹಿಮೆಯ ತೋರುವ ಅನ್ಯರಿಗೆ ಈ ಭಾಗ್ಯವುಂಟೆ ನಿನ್ನ ವಲಿಸಲು ಸಂಪನ್ನ ಶ್ರೀ ಶ್ರೀನಿವಾಸ 1 ಸೂರ್ಯ ತೇಜಕೆ ಪ್ರತಿ ಕೋಟಿಸೂರ್ಯ ತೇಜ ಧರಿಸಿ ಆರ್ಯ ರಾಮರಾಯರಾ ಕರಗತದಿ ಮೆರೆದೊ ಜಗತ್ಸಿರಿಯೆ ಆ ಆರ್ಯರಾ ಮಡದಿ ಸೀತಾಬಾಯಿ ಎಂಬುವರಾ ಆ ಈರ್ವರಾ ಸೇವೆಯಲಿ ಮೆರೆದ ಸುರತರುವೆ ಶ್ರೀ ಶ್ರೀನಿವಾಸ 2 ನಿನ್ನ ಸೇವಾಕಾರ್ಯ ಆವಾವುದೆಂದ್ಯೋಚಿಸದೆ ನಿನ್ನ ಸೇವಾಕಾರ್ಯದಲಿ ನಿರುತ ತಪವನೆಗೈಯೆ ಮಾನವ ವೇಷಧಾರಿಣಿಯರಾಗಿ ಪುಟ್ಟಿಹರೂ ಜಗದಿ ಬಕುಳಾವತಿಯ ತೆರದಿ ನಿನ ಸೇವ ನಿರತದಿ ಶ್ರೀ ಶ್ರೀನಿವಾಸ 3 ಸಾರ ಗುರುಮುಖದಿಂದ ತಿಳಿದು ನಿ ಲಕುಮಿ ಆವಾಹಿಸಿದ ಬಿಲ್ವರÀಸವ ನಿನಗರ್ಪಿಸಿ ಅಕಳಂಕ ಮಹಿಮರು ಸೇವಿಸಿ ಸೌಳ ವರುಷ ತಪವಗೈದಿಹರೊ ಗುರುವಾಜ್ಞೆಯಲಿ ನಿನ್ನ ಸೇವಿಸೆ ಶ್ರೀ ಶ್ರೀನಿವಾಸ 4 ನಿನ್ನ ಸೇವಕರಾದ ಆ ಮಾನುನಿಯರನುದ್ಧರಿಶೆ ನಿನ್ನ ಇಂಥ ಆಟಗಳ ಗೋಪಿಗೆ ಕೃಷ್ಣ ತೋರಿದಂದದಲಿ ಸನ್ನುತಾಂಗನೆ ತೋರಿ ಭಕ್ತರಭೀಷ್ಟವನು ಉನ್ನತದಿ ಸಲಿಸೆ ಜಗದಿ ಘನ್ನ ಸಂಪನ್ನ ಲೀಲೆನೋಡಲು ಶ್ರೀ ಶ್ರೀನಿವಾಸ 5 ಗಂಗಾಜನಕನೆ ನಿನ್ನುಂಗುಟದಿಂ ಬಂದ ಗಂಗೆಯ ಕೇಸರಿತೀರ್ಥದಾ ಸೊಬಗೇನೆಂದು ಬಣ್ಣಿಪೆನೊ ಶ್ರೀ ರಂಗನಾಥಾ ಸರ್ವರಿಗೆ ದಾತಾ ರಂಗನಾಥನೇ ನಿನ್ನ ಪಂಚಾಮೃತದ ಅಭಿಷೇಕ ಕಂಗಳಿಗ್ಹಬ್ಬವೊ ಜಗದ ಜಂಗುಳಿ ಭಕ್ತರಿಗೆನುತೆ ಶ್ರೀ ಶ್ರೀನಿವಾಸಾ 6 ತನ್ನ ತೊಡೆಯೊಳಗಿಟ್ಟು ಉನ್ನತದ ಆಭರಣ ಗೋಪಿ ಇಡುವ ತೆರದಿ ಇನ್ನು ನಿನಗಲಂಕಾರ ಮಾಡುವದೇನ ಬಣ್ಣಿಪೆನೋ ಸನ್ನುತ ಚರಿತರವರೈಸೇ ನಿನ್ನ ನೇವೇದ್ಯ ಘನ್ನ ಮಂಗಳಾರುತಿ ಬೆಳಗಿ ನಿನ್ನ ಸ್ತುತಿ ಮಾಡುತ್ತ ನಿನ್ನ ತೀರ್ಥವನ್ಹಂಚುವರೊ ಭಕ್ತರಿಗೆಲ್ಲ ಶ್ರೀ ಶ್ರೀನಿವಾಸ 7 ಏನು ಸುಕೃತವ ಮಾಡಿ ಈ ಮಾನುನೀಯರು ಪುಟ್ಟಿಹರೊ ಗಾನಲೋಲನೆ ನಿನ್ನ ಲೀಲೆ ಜಗಕೆ ಬೇರೆ ತೋರೆ ಮನಸಾರೆ ಸಾನುರಾಗದಿ ಬಂದು ನಿನ್ನ ಭಕ್ತರಾ ಮಂದಿರಕೆ ದೀನನಾಥನೆ ನಿನ್ನ ಸಹಿತದಲಿ ಮಾನುನಿಯು ದಾನವಾಂತಕ ನಿನ್ನ ಮಹಿಮೆ ತೋರುವರೊ ಏನೆಂದು ಬಣ್ಣಿಸಲಿ ಎನ್ನಳವೇ ಶ್ರೀ ಶ್ರೀನಿವಾಸ 8 ಒಬ್ಬೊಬ್ಬ ಭಕ್ತರಲಿ ಒಂದೊಂದು ಮಹಿಮೆಯನು ಅಬ್ಬರದಿ ತೋರುವರೊ ನಿನ್ನ ಮಹಿಮೆಯ ದೇವ ಮತ್ತೊಬ್ಬರಾ ಮನೆಯಲ್ಲಿ ಪ್ರಸಾದದಾ ಮಹಿಮೆಯನು ಮತ್ತೊಬ್ಬರಾ ಮನೆಯಲಿ ತೀರ್ಥದಾ ಮಹಿಮೆ ತೋರಿ ಅಬ್ಬರದಿ ಮೆರೆಸುವರೋ ಶ್ರೀ ಶ್ರೀನಿವಾಸ 9 ಗಾನ ಪ್ರಿಯನೆ ನಿನ್ನ ಕಲ್ಯಾಣದುತ್ಸವವು ಏನೇನು ಮಾಡುವ ಕಾರ್ಯ ನಿನ್ನದೇ ಎಂದು ಆನಂದದಿಂದ ಮಾಡುವರೊ ಹರಿಯೆ ದೋರೆಯೆ ದೀನನಾಥ ಎನ್ನ ಹೃದಯದಲಿ ನೀನಿಂತು ನುಡಿದಂತೆ ನುಡಿದಿರುವೆ ಅನಾಥ ಬಂಧು ಶ್ರೀ ಶ್ರೀನಿವಾಸಾ ಶ್ರೀಶಾ 10
--------------
ಸರಸ್ವತಿ ಬಾಯಿ
ನಿರುಪಮ ಚರಿತಾ ಮಾಂಗಿರಿನಾಥಾ ಈಪ್ಸಿತ ವರದಾತಾ ಪ ಸರಸಿಜ ಸಂಭವ ನುತ ಗಂಗಾಪಿತ ಪಂಕಜಾಕ್ಷ ಮೋಕ್ಷದಾತ ನಾರದ ಮುನಿ ವಿನುತಾ ಅ.ಪ ಭೀಕರ ರಾಕ್ಷಸ ವಂಶ ಭಯಂಕರ ಕಿಂಕರ ಶಂಕರಗಾನಸು ಧಾಕರ ಲೋಕಪಾಲ ಪರಮ ಚತುರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್