ಒಟ್ಟು 798 ಕಡೆಗಳಲ್ಲಿ , 92 ದಾಸರು , 668 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಪರಾಧ ಎನ್ನದಯ್ಯ ಹೇ ಗುರುವರ್ಯ ಪ ಅಪರಾಧ ಎನ್ನದಯ್ಯ ಅಪರಿಮಿತವು ಸರಿ ಕೃಪೆಯು ಮಾಡಲಿ ಬೇಕು ಕೃಪಣವತ್ಸಲ ಗುರುವೆ ಅ.ಪ. ಹಡೆದ ತಾಯಿ ಶಿಶುವ ಬಡಿದು ಕೊಂದರೆ ತೃಣವು ಬಿಡಿಸಿಕೊಳ್ಳಲು ಬಲ್ಲುದೆ ಜಡಕೆ ಸಮವಾದದ್ದು ಒಡೆಯ ನೀ ಎನ್ನಯ ಅಸ್ವಾತಂತ್ರ ಎಣಿಸದೆ ಬಿಡುವೆನೆಂದರೆ ನಿನಗೆ ತಡೆಯ ಬರುವರು ಯಾರೈ 1 ದೀನವತ್ಸಲ ಕೇಳು ಅನೇಕ ಜನ್ಮದೊಳು ನಾನಾ ಪರಿಯೊಳು ನೊಂದು ಸೇರಿದೆ ನಿನಗೆ ಬಂಧು ಏನು ಪೇಳದೆ ಎನ್ನ ಕಾನನದಲಿ ಬಿಟ್ಟು ಶ್ರೀನಾಥನ ಸೇರಿದಿ ಅನಾಥನ ಮಾಡಿದಿ ಎನ್ನ 2 ಬ್ಯಾರೆ ಉಪಾಯವಿಲ್ಲ ಸಾರಿದೆ ನಿನಗಯ್ಯ ಕಾರುಣ್ಯ ನಿಧಿಯೆ ಅಪಾರ ಕರುಣಮಾಡಿ ಮಾರಪಿತನಾದ ಜಯೇಶವಿಠಲನ್ನ ಆರಾಧನೆಯಲಿ ಸತತ ಧಾರಾಳ ಮತಿನೀಡೋ 3
--------------
ಜಯೇಶವಿಠಲ
ಅಪ್ಪ ಕೇಳೋ ಬೇಡಿಕೊಂಬೆ ನಿನ್ನ ತಿಳಿಯಪ್ಪಒಪ್ಪಿ ಮಾತನ್ನಾಡಿಸಿದರೆ ನೀನೆ ಜಗದಪ್ಪ ಪ ನಾನದಾರು ಬಂದೆನೆಲ್ಲಿಗೆ ಎನ್ನುತ ನೀನಪ್ಪನಾನು ಹೋಗುವೆ ಎಲ್ಲಿಗೆ ಎಂದು ಚಿಂತಿಸು ನೀನಪ್ಪನೀನು ಸುಳಿಗಾಳಿಯ ಶಾವದ ತೆರದಂದದಿ ಇಹೆಯಪ್ಪನಾನಾ ಭವವಾಚರಿಸುತಿಹೆ ಆದಿ ಅಂತ್ಯವಿಲ್ಲಪ್ಪತನುವ ನೆಚ್ಚಬೇಡ ಮೊದಲಿನ ತನುವದೇನಾಯಿತಪ್ಪತನಯ ಸತಿಯರನೆಲ್ಲ ಬಿಟ್ಟುಬಂದೆ ನೀನುಮನೆ ಕಟ್ಟುವೆ ನೀನು ಮೊದಲಿನ ಮನೆ ಏನಾಯಿತಪ್ಪಾನಿನಗೆ ಕುಲವು ಎಷ್ಟಾದವು ಎಣಿಸಿಕೊಳ್ಳಪ್ಪ2 ಹಿಂದೆ ಮುಂದೆ ಕಾಣದಂತೆ ತಿರುಗಿ ತಿರುಗಿ ಅಪ್ಪಬೆಂದು ಬೆಂದು ಓಡಾಡುತಿಹೆ ಸ್ವರ್ಗ ನರಕಕಪ್ಪಎಂದೆಂದಿಗೂ ಅರಿವಾಗದ ಮರೆವು ಮುಚ್ಚಿ ಅಪ್ಪಅಂಧಕಾರ ಸಂಸಾರದಿ ಕಳವಳಿಸುತ ಅಪ್ಪ3 ಕಣ್ಣುಯಿದ್ದು ಕಣ್ಣಿಗೀಗ ಬೀಳಬೇಡವಪ್ಪನಿನ್ನ ನರಿವುದಕ್ಕೆ ಮನುಜ ಜನ್ಮ ಸಾಧನವಪ್ಪಹೊನ್ನು ಹೆಣ್ಣು ಮಣ್ಣು ಎನಗೆ ಬೇಡ ಬೇಡಪ್ಪಎನ್ನ ಬೋಧೆ ಕೇಳದಿರಲು ಕೆಟ್ಟುಹೋದೆಯಪ್ಪ 4 ವಾಸನದಿಂದ ತಿರುಗುವೆ ರಾಟಾಳರಂತಪ್ಪದೇಶಿಕ ಸದ್ಗುರು ಹೊಂದು ದೇವನಹೆಯಪ್ಪನಾಶವಹವು ನಾನಾ ಗುಣಗಳು ಜೀವನ ತನುವು ಅಪ್ಪಈಶ ಚಿದಾನಂದನಹೆ ಜನ್ಮವಳಿದು ಅಪ್ಪ 5
--------------
ಚಿದಾನಂದ ಅವಧೂತರು
ಅರಿವಿನ ಅರಿವಾ ತಿಳಿ ಜೀವಾ ಆನಂದರೂಪದ ಸಿರಿಯಾ ಅದೇ ನೀನು ಜೀವಾ ಜೀವಾ ಅದೇ ನೀನು ಜೀವಾ ಪ ಅನಿಸಿಕೆಯಡಗಲು ಉಳಿಯುವ ಸತ್ಯವೆ ನೀನಿಹೆ ನೀನಿಹೆ ಮನಸಿನ ತೋರಿಕೆಅಡಗುವಿಕೆಗಳಿಂ ಬೇರಿಹೆ ಬೇರಿಹೆ ಈ ನಾನೆಂಬುದು ಮನಸಿನದು ಆನಾನೆ ನೀನಾಗಿರುವಿ ಅದೇ ನಿಜವು ಜೀವಾ 1 ಪರಿ ನೋಡು ನೀ ನೋಡು ನೀ ನಾನಾವಿಧಗಳು ಪುಸಿಯಾಗಿಹವೈ ದೂಡು ನೀ ದೂಡು ನೀ ಆನಂದಾತ್ಮನೆ ನೀನಿರುವೀ ಆನಂದದಿಂದಲಿ ತಿಳಿಯೈಶಂಕರಾನಂದಬೋಧಾ ತಿಳೀನೀನೆ ನಿನ್ನೋಳ್ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಆಡುವನೀಶ್ವರ ಜೀವಪಗಡೆಯ ಕಾಯಆಡುವನವರವರ ಕರ್ಮಾನುಸಾರಆಡಿಯೆ ತನಗೆ ಬೇಸರವಾಗೆ ಕಟ್ಟುವಆಡುವ ವಿವರವ ಹೇಳುವೆ ಕೇಳಿ ಪ ಪ್ರಪಂಚ ಹಾಸಂಗಿ ಪ್ರಾರಬ್ಧ ಲತ್ತವುಪಾಪ ಅಜ್ಞಾನ ಲಿಂಗತನುವೆಂಬ ಚಿಟ್ಟೆಯುರೂಪು ನಾನಾ ಬಗೆಯ ಜೀವಕಾಯನೆ ಮಾಡಿಭಾಪು ಭಳಿರೇ ಎಂದು ಕೊಂದು ಹೂಡಾಡುತ 1 ಒಂದಕೊಂದರಬಲ ಒಂದಕೆ ಜೋಡು ಬಲಒಂದು ಜೋಡಿಗೆ ಒಂದು ಜೋಡು ಬಲ ಮಾಡಿಒಂದರಿಂದೊಂದು ಕೊಂದು ಜೋಡಿಂದ ಜೋಡು ಕೊಂದುಅಂದು ಹುಟ್ಟಿ ಸಾಯುವುದಕ್ಕೆ ಕಡೆಯಿಲ್ಲದೇ 2 ಈ ಪರಿಯಲಾಡುತ್ತ ತನಗೆ ಬೇಸರ ಹುಟ್ಟೆಪಾಪಿಗಳನೆಲ್ಲ ಪಾಪ ಚೀಲದಿ ಕಟ್ಟಿಭೂಪ ಚಿದಾನಂದನು ಆದ ಈಶ್ವರ ತಾನುರೂಪು ವಿರೂಪಾದ ನಿದ್ದೆಯಲಿ ಮಲಗುವ 3
--------------
ಚಿದಾನಂದ ಅವಧೂತರು
ಆದಿಕೇಶವಗರ್ಥಿಯಲಿ ನಾನಾರ್ತಿ ಮಾಡುವೆನು ಆರ್ತಿ ಮಾಡುವೆ ನಾ ಮಂಗಲಾರ್ತಿ ಮಾಡುವೆನು ಪ ಶೀಳಿ ದೈತ್ಯನ ಲೀಲೆಯಲಿ ಮಂಗಳೋಲೆ ತಂದವಗೆ ವ್ಯಾಲತಪ್ಪಿದ ಶೈಲವನು ಬೆನಮ್ಯಾಲೆ ಪಿಡಿದವಗೆ ಖೂಳಗೆ ತೋರಿದ ... ಪದಗೋಲ ತಂದವಗೆ ಬಾಲಗೆ ಪಿತ ಗೋಳು ಮಾಡಿದ ಕೇಳಿ ಆ ದೈತ್ಯನ ಶೀಳ್ದವಗೆ 1 ಭೂಮಿಯ ಬೇಡಿ ನಿಸ್ಸೀಮ ಬಲಿನೃಪನಾ ಹಮ್ಮು ಕರಗಿಸಿ ಪಾತಾಳಕಟ್ಟಿದವಗೆ ನೇಮದಲಿ ಕ್ಷಾತ್ರಸ್ತೋಮವ ನಿರ್‍ನಾಮ ಮಾಡ್ದವಗೆ ದಶಶಿರ ನಾಮವಳಿದ ಶ್ರೀರಾಮ ಚಂದಿರಗೆ ಸೋಮಕುಲದ ಸುನಾಮಿ ವರ್ಗಕೆ ಪ್ರೇಮರಸ ಸತ್ಯಭಾಮಾವರಗೆ 2 ಹರನ ಬಲಪಿಡಿದರೀ ತ್ರಿಪುರಸಂಹರೀಸಿದ ಶಿರಿವರಗೆ ಹರಿಯನೇರಿ ದನುಜಾರನ್ನೆಲ್ಲ ಸವರೀದ ಭೂವರಗೆ ಶರಣಜನರೊಳು ಕರುಣವಿರಿಸಿ ನಿರುತ ಪೊರೆದವಗೆ ಶ್ರೀ ನರಸಿಂಹವಿಠಲನಿಗೆ 3
--------------
ನರಸಿಂಹವಿಠಲರು
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಆರು ನಿನ್ನಂಘ್ರಿ ಭಜಿಸುವರೈಯ್ಯಾ ಸಾರಹೃದಯರ ಪ್ರೀಯ ಸುರಮುನಿಜನ ಧ್ಯೇಯಾ ಪ ಕಮಲಭವಶಿವ ಇಂದ್ರ ನೀನಾಗೇನು ರಮೆ ಧರಾದೇವಿ ರಮಣಾದರೇನು ಯಮದೂತರೊಳಗಾದ ಆಜಮಿಳ ಪೆಸೆ ರ್ಗೊಳೆ ಸುಮನಿಸುರ ನಯ್ಯವನ ಕಾಯದಿದ್ದೊಡೆ 1 ಜಗದುತ್ಪತ್ತಿ ಸ್ಥಿತಿಲಯ ಕರ್ತನಾಗೇನು ಮಗುಳಿ ಸೂತ್ರಧಾರಿಯಾದರೇನು ಸುಗುಣ ಪ್ರಲ್ಹಾದಂಬರೀಷ ಕರಿವರ ಧ್ರುವಾದಿಗಳನುದ್ದರಿಸಿ ತಾರಿಸದಿದ್ದಡೆ 2 ಎಂದೆಂದು ಅರ್ತಜನ ಬಂದು ದೀನಾನಾಥ ತಂದೆ ಮಹಿಪತಿ ಸ್ವಾಮಿಯಂದಡೇನು ಮಂದಮತಿ ಕುಂದಘನವಂದು ನೋಡದ್ದೆ ಇಂದು ನಂದನಗೆ ಸೇವೆ ಪದಲಿಡದಿದ್ದರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆಲಿಸು ಮನುಜಾ ಮಾಯಾಕಾರ್ಯಕೆ ಮೋಸಹೋಗಲು ಬೇಡಾ ವಿಚಾರಿಸು ತೋರಿಕೆಯು ಪುಸಿಯಹುದು ಈ ಪ ಜಗದೊಳು ತೋರುವ ಅಘಟಿತಘಟನೆ ಮಿಗಿಲೆನಿಸುತಲಿಹುದೋ ಗಡಾ ಅಘಟಿತಘಟನೆಯೆ ಜ್ಞಾನವದೆಂದು ಬಗೆಯುತ ನೀ ಕೆಡಬೇಡ 1 ಸಿದ್ಧಿಯ ಫಲವದು ಅಘಟಿತಘಟನೆ ಬುದ್ಧಿವಂತನೆ ತಿಳಿ ನೀ ಶುದ್ಧ ಚೈತನ್ಯದಿ ಮಾಯೆಯದಿಲ್ಲೈ ಸಿಧ್ದಿ ಮಾಯೆಯ ಮಗಳು 2 ಜ್ಞಾನಸಿದ್ಧಿಗಳ ಭೇದವನರಿಯುತ ಜ್ಞಾನಿಯಾಗೆಲೊ ಮನುಜಾ ನಾನಾಪರಿಯಿಂ ಪೇಳಿದನಿದನಾ ಜ್ಞಾನಿ ಶಂಕರಗುರುರಾಯಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಆವಾವ ಬಗೆಯಿಂದ ಹರಿಗರ್ಪಿಸೊ ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ಪ ನೋಡುವ ನೋಟಗಳು ಹರಿಯೆ ನೋಡಿದನೆನ್ನಿ ಆಡುವ ಮಾತುಗಳು ಹರಿಯೆ ಆಡಿದನೆನ್ನಿ 1 ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ 2 ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ ಹೇಳುವ ವಿಧವನಿತು ಹರಿಯೆ ಎನ್ನಿ ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ ಮೇಲು ಸುಖ ಬಡುವುದು ಹರಿಯೆ ಎನ್ನಿ3 ಕೊಂಡ ಎನ್ನಿ ಭೂಷಣವಿಡುವುದು ಹರಿಯೆ ಎನ್ನಿ ಲೇಸು ಬಯಸುವುದು ಹರಿಯೆ ಬಯಿಪನೆನ್ನಿ ಗ್ರಾಸ ಮೆಲುವದೆಲ್ಲ ಹರಿಯೆ ಎನ್ನಿ 4 ಸತಿಯ ಕೂಡುವದೆಲ್ಲ ಹರಿಯೆ ಕೂಡಿದನೆನ್ನಿ ಹಿತವಾಗಿಪ್ಪದು ಹರಿಯೆ ಎನ್ನಿ ಸುತರ ಪಡೆದಾದಲ್ಲಿ ಹರಿಯೆ ಪಡೆದನೆನ್ನಿ ಪ್ರತಿಕೂಲವಾಗುವುದೆ ಹರಿಯೆ ಎನ್ನಿ 5 ಬಳಗ ಸಾಕುವುದೆಲ್ಲ ಹರಿಯೆ ಸಾಕಿದನೆನ್ನಿ ಸುಲಭನಾದರೆ ಹರಿಯಾದನೆನ್ನಿ ಗಲಭೆ ಮಾಡುವುದೆಲ್ಲ ಹರಿಯೆ ಮಾಡಿದನೆನ್ನಿ ಸುಳಿದಾಡುವುದೆಲ್ಲ ಹರಿಯೆ ಎನ್ನಿ 6 ಏನೆಂಬೆ ಹರಿ ಲೀಲೆ ನಿರ್ದೋಷ ನಿಸ್ಸಂಗ ಅನಂತಕಾಲಕ್ಕೂ ಎಲ್ಲಿದ್ದರು ಕಾಯ ವಿಜಯವಿಠ್ಠಲರೇಯ ನಾನಾ ವ್ಯಾಪಾರಗಳ ಮಾಳ್ಪನೆನ್ನಿ 7
--------------
ವಿಜಯದಾಸ
ಆಶ್ರಮ ಧರ್ಮ ನಾಲ್ಕು ಉಪದ್ರಆಶ್ರಮ ಧರ್ಮ ಬಿಡೆ ಅವ ಪಟ್ಟ ಬದ್ಧ ಪ ಬ್ರಹ್ಮಚಾರಿಯು ಆಗೆ ಕರ್ಮದ ಉಪದ್ರಬ್ರಹ್ಮಚರ್ಯವು ಹೋಗೆ ಸ್ತ್ರೀಯ ಉಪದ್ರಸುಮ್ಮಗೆ ವಾನಪ್ರಸ್ಥನಾಗೆ ಬೆಂಕಿ ಉಪದ್ರಹಮ್ಮಳಿದು ಸಂನ್ಯಾಸಿಯಾಗೆ ಸ್ನಾನದುಪದ್ರ 1 ಗೃಹಸ್ಥನಾಗೆ ವ್ರತಗಳ ಉಪದ್ರಸತತ ಸಂಧ್ಯಾ ಜಪತಪದ ಉಪದ್ರಮಿತಿ ಇಲ್ಲದ ನಾನಾ ಕರ್ಮಗಳ ಉಪದ್ರಸತತ ಶುಚಿ ಅಶುಚಿ ಎಂಬುದರ ಉಪದ್ರ 2 ಆವ ಆಶ್ರಮದಲಿರೆ ಆವುದೊಂದು ಉಪದ್ರಆವ ಆಶ್ರಮದಿ ಉಪದ್ರವೇ ಅದು ಹೋಗದುಆವಾಶ್ರಮಗಳಿಗೆ ಬೇರೆ ಇರೆ ಸುಖಿಯಿಹದೇವ ಚಿದಾನಂದ ಮಹ ಸರ್ವಮಹೋಪದ್ರವ ಪರಿಹಾರವಯ್ಯ 3
--------------
ಚಿದಾನಂದ ಅವಧೂತರು
ಇಂದಿನ ದಿನ ಸುದಿನ ನಾಳೆಗೆಂದರೆಂದು ಕಠಿಣ ಮಂದಮತಿಯು ನೀನಾಗದೆ ಈಗ ಮುಕುಂದನ ನಾಮ ಕೀರ್ತನೆಯ ಮಾಡುವುದಕೆ ಪ ಯೋಗಿಗಳೊಡನಾಡು ವಿಷಯದ ಭೋಗವ ನೀಡಾಡು ನಿನ್ನ ನೀ ತಿಳಿವುದಕೆ 1 ಅಸ್ಥಿರ ದೇಹವಿದುನಾನಾವಸ್ಥೆ ಬಾಧಿಸುತಿಹುದು ಬಿಡನೊಡನಾಡುವುದಕೆ 2 ಸಾಧು ಸಂಗತಿಯಿಂದ ಪಾಪವಿಚ್ಛೆದನವದರಿಂದ ಲಕ್ಷ್ಮೀರಮಣನ ಪೂಜಿಸಲಿಕೆ 3
--------------
ಕವಿ ಪರಮದೇವದಾಸರು
ಇದಿರುದೋರಿ ಮರೆಯಾದ ಬಗೆುದೇನಯ್ಯಾಸದಯ ವೆಂಕಟದಾಸಾರ್ಯ ವೇಷದಾಳಿ ಗುರುವರ್ಯ ಪತೊಳಲುತಿರೆ ಭವಕೂಪದೊಳು ಮುಳುಗಿ ಮೂಢ ಜನರುಕಳಿವರೆಂತೀಯಾತನೆಯನಳಲುವರೆಂದುತಳೆದು ಕೃಪಾರಸವನ್ನು ತಿಳು' ಭಕುತಿ ವೈರಾಗ್ಯವನುಸುಲಭದಿಂ ಜ್ಞಾನವನರುಪಲೊಲಿದು ಧರೆಯೊಳವತರಿಸಿ 1 ಆ'ರ್ಭಾವಾತಿರೋಭಾವವಾವಗವೂ ಭಕ್ತರ್ಗಾಗಿ ಸ್ವಾಭಾ'ಕವೆಂದು ಪಾರಾಣ ಭಾವವನರಿತೂಸಾವಧಾನಗೈದರೂ ಮನೋ'ಕಾರ ತೊಲಗದೂಕೇವಲಾನಂದ ನಿತ್ಯನಿರಾವಲಂಬ ಸತ್ಯಾತ್ಮಕನೆ 2ಪಲವುಭವದಿಮಾಡ್ದ ಸುಕೃತ ಫಲಿಸಿತೆಂದಿದ್ದೆನೀವರೆಗುತೊಲಗಿ ತಾಪುಣ್ಯವೆಂಬಂತೆ ಚಲಿಸಿ ಚಿತ್ತವೂ ತೊಳಲುತಿದೆ ನಿನ್ನ ಸುಖಮಂಗಳರೂಪು ವಚನಗಳ ನೆನೆದುನೆಲೆಗೊಳಿಪಂದದಿ ಮತಿಯ ತಿಳುಹುವವರಾರೆಮಗಕಟ 3ಹಾನಿ ಧರ್ಮಕ್ಕೊದಗಲು ನಾನುದಿಪೆನೆಂದಭಯವನೀನೊಲಿದಿತ್ತುದಕಾಗಿ ನಾನಾ ರೂಪದೀಜ್ಞಾನ ಮಾರ್ಗವನರು' ಮಾನವರನುದ್ಧರಿಸಿದೆದೀನ ವತ್ಸಲನೆ ುೀಗಲೇನುಕಾರಣ 'ೀ ಸಮಯದಿ 4ಕರದು ಮೂಢರಜ್ಞತೆಯನು ಪರಿದು ಜ್ಞಾನಾನಂದ ಸುಧೆಯಎರದು ಹೊರದೆಯಲೈ ಚಿಕ್ಕನಾಗಪುರದಿವರದ ವಾಸುದೇವಾರ್ಯ ಸದ್ಗುರುವೆ ವೆಂಕಟದಾಸತನುವಧರಿಸಿರೆ ನಂಬಿದ್ದರೆಮ್ಮನತಿ ಪುಣ್ಯವಂತರೆಂಬಂತೆ 5
--------------
ತಿಮ್ಮಪ್ಪದಾಸರು
ಇಂದಿರೆಯರಸನಾಡಿದ ಆಟನೋಡಿ|ನಲಿದಾಡಿ| ಬಂದರಜಮುಖ್ಯರೋಡಿ|ಬಹುಜನ ಕೂಡಿ ಪ ಅರುಣ ತಳದಿರಂಜಿಪ ದ್ವಯ|ಚರಣದಿಂದ ಕಾಳಿ ಅಹಿ| ವರನಸಿರವ ಮೆಟ್ಟಿಸೂರ್ಯ|ಕಿರಣದಂತೆ ಪೊಳೆವಾ| ಸ್ಪುರಣಗೆಜ್ಜಯ ಝಣ ಝಣ|ಝಣಕು ಝಣಕೆಂಬ ತೆರದಿಂದ| ಕರುಣ ಧಿಗಿ ಧಿಗಿಯೆಂದು|ವಾರುಣದಲಿ ಕುಣಿಯೇ 1 ವೀಣೆಯಲಿತಾಸರಿಗ ಮಪಧನಿ|ಸೆಂಬಮೆಟ್ಟಿಕೆಯೊಳ| ತ್ರಾಣದಿಂದ ಝಿಂ ಝಿಂ ಝಿಂ ಝಿಂ ಕೆನಿಪ ದ್ವನಿಯಗಳನು| ಮಾಣುತಲಿ ಸಿರಿರಾಗ ಘನಮಲಾಹರ ಮೊದಲು| ವಾಣಿಪತಿಸುತ ಪಾಡಿದ ನಾನಾ ರಾಗದಲಿ 2 ಅಂಬುಜಾಕ್ಷಪ್ರಿಯನಾದ|ಅಂಬುಜಭವ ಪದ ಕರ್ತ| ಕುಂಭಿಯೊಳಹಸ್ತಿನಿಕು|ರಂಬಾರಿ ಕೋಟಿ ದ್ವನಿ| ವೆಂಬಂತೆ ಕಹಳೆಗಳು|ತುಂಬಿ ಪೂರೈಸಿದನು| ಭುಂ ಭುಂ ಭುಂ ಭುಂ|ಭುಂ ಮೆಂದು ಗಂಭೀರ ಸಪರದಿ 3 ತತ್ತಥೈಯ್ಯಾ ಥೈಯ್ಯಾ ಥರಿಕೆಂದು|ಧತ್ತೆರಿಕುಥಲಿ| ಒತ್ತಿ ಖಿಣಿ ಖಿಣಿ ಖಿಣಿಲೆಂಬ|ಮೊತ್ತತಾಳು ವಿಡಿದು| ಮತ್ತ ಏಕತಾಳ ಝಂಪೆ|ತಾಳ ಅಟ್ಟತಾಳಗಳು| ಉತ್ತುಮದಾ ಕರದಿ ಹರ ಅರ್ಥಿಯಲಿ ನಿಂದಾ 4 ಇಂದೀವರಜ ಮದ್ಯಸ್ಥಲ ಒಂದು ನೆಗೆದು ಜವದಿಂದಾ| ದಂ ದಂ ದಂ ದಂ ದಮುಕೆಂದು|ಛಂದದಿ ಮುಟ್ಟಿದನು| ಧಿಂಧಿಂಧಿಂಧಿಂಧಿಮಿಕೆಂದು|ದುಂಧುಂಪೊಡದರು ಸುರರು| ತಂದೆ ಮಹಿಪತಿ ನಂದನ ವಂದ್ಯನೊಲುವಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಿನ್ನ ಪಾದಕಮಲವಾ | ಪೊಂದಿದೆ ದೇವಾ ಪ ಪುರಂದರಾನುಜ | ಸಿಂಧೂರ ವರಪೋಷಕ ಸುರ ವಿನುತ ಇಂದಿರೇಶಾ ಅ.ಪ ಪಿತನೆ ನಿನ್ನ ಒಮ್ಮೆ ನೆನೆಯದೆ | ಮತಿಹೀನನಾಗಿ ಸ್ಮøತಿ ಪುರಾಣ ಕಥೆಯ ಕೇಳದೆ | ವಿತತ ಮಹಿಮ ಪತಿತ ನಾನಾದೆ ಅತಿವೇಗದಿ ಎನ್ನನು ನೀ ಹಿತದಿ ಪಾಲಿಸು ಕ್ಷಿತಿಜೇಶನೆ 1 ವಿಧಿಸುರೇಂದ್ರವಂದ್ಯ ನಗಧರ ಬಿಡದೆ ಸಲಹೊ ಮದನವಿತ ನೀನಧಮ ದೈತ್ಯರ ಮದವಳಿದು ಮುದದಿ ಒದಗಿದ ಸುಧೆಯನು ಸುರರಿಗೆ ನೀ ದಯದಿಕ್ಕಿದ ಪದುಮನಯನಾ 2 ಸಿಂಧುಶಯನ ಶಾಮಸುಂದರ ವಂದಿಸುವೆ ಕಂದುಗೊರಳ ಸಖ ಶ್ರೀಮನೋಹರ ಕಂದನೆಂದೀಮಂದಭಾಗ್ಯನ ತಂದೆಯ ಮರೆಯದೆ ನೀ ಚಂದದೀ ಪೊರೆ ದಶಕಂಧರಾರಿ 3
--------------
ಶಾಮಸುಂದರ ವಿಠಲ