ಒಟ್ಟು 268 ಕಡೆಗಳಲ್ಲಿ , 58 ದಾಸರು , 238 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಲ - ನಾಮಕಾ | ತ್ರಿಸಂಧ್ಯಾಕಾಲ - ಚಾಲಕಾ ಪ ಕಾಲ ಕರ್ಮಗಳಿ | ಗಾಲಯ ರೂಪನೆಬಾಲನ ಬಿನ್ನಪ | ಪಾಲಿಸಬೇಕೈ ಅ.ಪ. ಭವ | ಭಂಗದೊಳಗೆ ಮಹಮಂಗನ ತೆರನಹೆ | ಶೃಂಗಾರ ಮೂರ್ತೇ 1 ಕಾಯಾ - ನಿ ಹಿತಾ | ನಾಡಿಗಳಲಿಧೇಯಾ - ವಿಹಿತಾ ||ಆಯಾ ನಾಡಿಗತ | ಧೇಯ ತೀರ್ಥ ಧ್ಯಾನೊಪಾಯ ತಿಳಿಸಿ ಕಾಯೊ | ವಾಯು ಬೃಹತಿ ಪ್ರಿಯ 2 ಸ್ನಾನಾ ಪಾವನಾ | ತವ ಮಹಿಮಾಧ್ಯಾನೋಪಾಸನಾ ||ತ್ರಾಣವೀಯೊ ನಿತ್ರಾಣನೆನಗೆ ಜಗತ್ರಾಣ ಪ್ರಾಣ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯ ಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು-ಣೇಕ್ಷಣದಲಿ ನಿರೀಕ್ಷಿಸೆಮ್ಮನು3
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲಭೈರವ ಸ್ವಾಮಿಯೆ ಭಕ್ತಜನ- ರಾಳಿಗೆ ಸುಪ್ರೇಮಿಯೆ ಪ. ಮೂರ್ಲೋಕದೊಳು ಹರಿಲೀಲೆ ಕೊಂಡಾಡುವ ಶೀಲರ ಕಾವ ಕೃಪಾಳುವೆ ಜಯ ಜಯಅ.ಪ. ರುದ್ರನಾಮಕ ಹರಿಯ ಪಾದಭಕ್ತಿ- ಮುದ್ರಾಂಕಿತ ನೀನಯ್ಯ ಬುದ್ಧಿಜ್ಞಾನ ಸಂಸಿದ್ಧಿಸುತೆಮ್ಮನು ಉದ್ಧರಿಸುವ ಸುಪ್ರಸಿದ್ಧ ಮಹಿಮ ನಿನ್ನ ಹೊಂದಿದೆನು ಶಾಂತೀರಮಣನನಿ- ರುದ್ಧನಂಘ್ರಿಸರೋಜ ಸ್ಮರಣೆ ಸ- ಮೃದ್ಧಿಯನು ನೀನಿತ್ತು ಒಳಹೊರ- ಗಿದ್ದು ಕಾಯೊ ಸುಭದ್ರದಾಯಕ 1 ಕಾಮಕ್ರೋಧ ಮುಂತಾದ ವೈರಿಜನ- ಸ್ತೋಮದಿಂದ ಬಹಳ ಬಾಧಾ ಶ್ರೀಮನೋರಮನ ಸುನಾಮಸ್ಮರಣೆಯನ್ನು ಪ್ರೇಮದಿಂದಿತ್ತು ಸುಕ್ಷೇಮದಿಂ ಪೊರೆಯೆಂದು ವ್ಯೋಮಕೇಶನೆ ಧೀಮತಾಂವರ ಸೋಮಧರ ಸುತ್ರಾಮವಂದಿತ ತಾಮರಸಸಖ ತೇಜ ಸುಜನರ ಕಾಮಧೇನು ಮನೋಮಯನೆ ಜಯ 2 ಲಕ್ಷ್ಮೀನಾರಾಯಣನ ದಾಸಾರ್ಯ ಫಾ- ಲಾಕ್ಷ ಮಹೇಶಾನ ಸೂಕ್ಷ್ಮಸ್ಥೂಲದೊಳ್ಪರೀಕ್ಷಕನಾಗಿ ವಿ- ಪಕ್ಷದವರನು ಶಿಕ್ಷಿಸಿ ಶಿಷ್ಟರ ರಕ್ಷಿಸುವ ಸದಯಾದ್ರ್ರಹೃದಯ ಮು- ಮುಕ್ಷುಪ್ರಿಯ ಗುರುವರ್ಯ ಲೋಕಾ- ಧ್ಯಕ್ಷ ದಕ್ಷಮುಖಾಂತರ ಕರು- ಣೇಕ್ಷಣದಲಿ ನಿರೀಕ್ಷಿಸೆಮ್ಮನು 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೃಷ್ಣ ಕೃಷ್ಣ ಕೃಷ್ಣಯೆಂದು ಮೂರುಬಾರಿ ನೆನೆಯಿರೊ ಪ ಭಾರ ಹೊರುವನೋಅ.ಪ ಸಕಲ ವೇದ ಶಾಸ್ತ್ರ ಪಠಿಸಿ ಸಾರವನ್ನು ತಿಳಿದರೇನುಮಕರ ಕುಂಡಲಧರನ ನಾಮಕೆ ಸರಿಯಿಲ್ಲವೊ 1 ಕಮಲನಾಭನ ಚಿನ್ಹೆಯನ್ನು ಧರಿಸಿಕೊಂಡು ಮೆರೆಯಿರೊಯಮನ ಭಟರು ನೋಡಿ ಅಂಜಿ ಅಡವಿ ಹೊಗುವರೋ2 ಜನ್ಮವೆತ್ತಿ ಮಧ್ವಮತವ ಅನುಸರಿಸಿ ನಡೆಯಿರೊಸುಮ್ಮಾನದಿ ಸಿರಿಕೃಷ್ಣ ತನ್ನ ಲೋಕ ಕೊಡುವನೋ3
--------------
ವ್ಯಾಸರಾಯರು
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1 ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2 ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3 ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4 ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5
--------------
ಕನಕದಾಸ
ಕ್ಷೇತ್ರ ದರ್ಶನ ಉಡುಪಿಯ ಯಾತ್ರೆಯ ಮಾಡಿ - ಉಡುಪಿಯಾ ಪ ಉಡುಪಿಯ ಯಾತ್ರೆಯನ್ನೆ ಮಾಡಿ | ಭಕ್ತಿಮುಡುಪಿತ್ತು ಪ್ರಮೋದ ಬೇಡಿ | ಆಹನಡುದೇಹ ದೋಳೀಹ | ನಡುನಾಡಿ ಕಮಲದಿಒಡೆಯ ಶ್ರೀ ಕೃಷ್ಣನ್ನ | ಧೃಡ ಭಕ್ತಿಯಿಂ ಭಜಿಸಿ ಅ.ಪ. ಆನಂದ ತೀರಥ ಸರಸಿ | ಯೊಳುಮೀನನಾಗಿ ಬಹು ಈಸಿ | ಹರಿಧ್ಯಾನದಿ ಸ್ನಾನ ಪೊರೈಸಿ | ಮತ್ತೆಮೌನವೆಂಬಾಸನ ಹಾಸಿ | ಆಹಮೂಧ್ರ್ನಿ ಲಲಾಟದೋಳ್ | ಗೋಣು ಮಧ್ಯೋದರಸ್ಥಾನಾದಿಯಲಿ ಹರಿ | ಧ್ಯಾನ ನಾಮವ ಹಚ್ಚಿ 1 ಮಧ್ವ ಕಿಂಕರನೆಂಬೊ ದೊಂದು | ಹರಿವಿದ್ವೇಷಿಗಳ ಬಡಿವೊದೆಂದು | ಮತ್ತೆಸದ್ವೈಷ್ಣವರ ಸೇರ್ವೋದೊಂದು | ಇನ್ನುಬುದ್ಧಿಪೂರ್ವಕ ಹರಿ ಪರನೆಂದು | ಆಹಶ್ರದ್ಧಾಳು ವೆಂದೆನಿಪ | ಮುದ್ದು ಮುದ್ರೆಗಳೈದುತಿದ್ದಿ ವಿಸ್ತರಿಸೂತ | ಕೃದ್ದೋಲ್ಕಾದಿಯನೆನೆ 2 ಸಂಧ್ಯಾ ಮೂಡಿಹುದು ನೀ ನೋಡು | ಕಾಲಮುದ್ಹಿಂದಾಗದಲೆ ನೀ ಮಾಡು | ಯಾವದೊಂದು ಮಂತ್ರಾರ್ಥವ ನೋಡು | ಇನ್ನುಸಂಧ್ಯಾ ನಾಮಕನ ಕೊಂಡಾಡು | ಆಹಛಂದದಿ ನಿನ ಜ್ಞಾನ | ಮುಂದು ಮುಕ್ಕಿಲು ಒಪ್ಪಮಂದೇಹ ದೈತ್ಯರ | ಮಂದಿಯ ಕೊಲ್ಲುತ 3 ಕಂಟಕ ಕಳೆದು ಶರೀರ | ಮಧ್ಯಮಂಟಪ ಚಿಂತಿಸೊ ಧೀರ | ಅದಕೆಎಂಟರ್ಧ ಮತ್ತೊಂದು ದ್ವಾರ | ಕಾಯ್ವಭಂಟ ಮಾರುತನ ವ್ಯಾಪಾರ | ಆಹಎಂಟ್‍ಟಾರು ನಾಲ್ಕು ಸ್ತಂಭ ಮಧ್ಯದಿ ಲಕ್ಷ್ಮಿಮಂಟಪ ಚಿಂತಿಸಿ ಒಂಟಿಯಾಗೊ ಮನದಿ 4 ಕೆಳ ಮುಖಾಬ್ಜವನೇ ನೀ ನೋಡೀ | ಮಂತ್ರಮೂಲದಿಂದ ಮೇಲು ಮಾಡಿ | ಅಲ್ಲಿಇಳೆಯಾಣ್ಮನನ ಚಿಂತೆ ಮಾಡಿ | ಸರ್ವಅಲಂಕಾರ ದಿಂದೊಡಗೂಡೀ | ಆಹನೆಲೆಸೀಹ ಕೃಷ್ಣನ್ನ | ಒಲಿಸೆ ಭಕ್ತಿಯಿಂದಸ್ಥಳ ತನ್ನ ಅರಮನೆ | ಯೊಳು ಕೊಟ್ಟು ಸಲಹುವ 5 ನಿತ್ಯ ಸ್ತವನ | ಆಹಇಂಬಿಟ್ಟು ಸ್ತೋತ್ರದಿ | ಉಂಬುಡುವೋ ಸರ್ವಬಿಂಬನೋಳರ್ಪಿಸಿ | ಸಂಭ್ರಮದಲ್ಲಿರು 6 ಮಧ್ವ ಸರೋವರ ಸ್ನಾನ | ಭಕ್ತಿಶುದ್ಧದಿ ಶ್ರೀಕೃಷ್ಣಧ್ಯಾನ | ಮಾಡೆಹೃದ್ಯನು ಹೃದ್ಯದಿಷ್ಠಾನ | ದಲ್ಲಿಸಿದ್ಧಿಸೂವನು ಗುಣ ಪೂರ್ಣ | ಆಹಮುದ್ದು ಕೃಷ್ಣನು ಗುರು | ಗೋವಿಂದ ವಿಠಲನುಶ್ರದ್ಧೆ ಸತ್ವಕ್ಕೊಲಿವ | ಸಿದ್ಧ ಕನಕನ ನೋಡಿ 7 ತೀರ್ಥ ಕ್ಷೇತ್ರ ಮಾಲಾ 1952 ರಲ್ಲಿ ಇಡೀ ಭರತ ವರ್ಷದಲ್ಲಿ ಪ್ರದಕ್ಷಿಣಾಕಾರವಾಗಿ ಹೊರಟು ಆಸೇತು ಹಿಮಾಚಲ ಪರ್ಯಂತವಿರುವ ಅನಂತ ತೀರ್ಥ ಕ್ಷೇತ್ರಗಳಲ್ಲಿ ಈ ಅಲ್ಪಾಧಿಷ್ಠಾನದ ಯೋಗ್ಯತಾಪ್ರಕಾರ ಬಿಂಬನು ಮಾಡಿ ಮಾಡಿಸಿದ ಯಾತ್ರಾ ಪ್ರಕರಣವೂ, ಮತ್ತೆ, 1954 ರಲ್ಲಿ ಉಡುಪಿ ಇತ್ಯಾದಿ ಪಶ್ಚಿಮ ಕ್ಷೇತಗಳ ಮತ್ತು 1957 ರಲ್ಲಿ ಮಲಖೇಡದಲ್ಲಿ ಬೃಹತೀ ಸಹಸ್ರವಾದಾಗ ಆಕಡೆ ಹೋದಾಗ ನೋಡಿದ ಅನೇಕ ಕ್ಷೇತ್ರಗಳ ಮತ್ತು 1961 ರಲ್ಲಿ ಸ್ವಾದಿ, ದ್ವಾರಕ, ಪುಷ್ಕರ, ಬದರಿ (ದ್ವಿತೀಯಾವರ್ತಿ) ಹೋಗಿ ಬಂದಾಗ ನೋಡಿದ ಯಾತ್ರಾ ಪ್ರಕರಣಗಳ ಜ್ಞಾಪಕಾರ್ಥವಾಗಿ ಈ ತೀರ್ಥಕ್ಷೇತ್ರಮಾಲಾ ಅಸ್ಮದ್ಗುರ್ವಂತರ್ಗತ ಬಿಂಬ ಮೂರುತಿ ಪ್ರೇರಿಸಿದಂತೆ ಬರೆಯಲ್ಪಡುತ್ತೆ :-
--------------
ಗುರುಗೋವಿಂದವಿಠಲರು
ಗಜೇಂದ್ರ ಮೋಕ್ಷ ವರಶಂಖಗದೆ ಪದ್ಮಕರದಿ ಚಕ್ರವ ಪಿಡಿದ ಗರುಡಗಮನ ನಮ್ಮ ಕರಿವರದಹರಿಯನ್ನ ನಿರುತ ನೆನೆನೆನೆದು ಬದಿಕಿರಯ್ಯಾ ಪ ಹರಿಧ್ಯಾನ ಹರಿಸೇವೆ ಹರಿಭಕ್ತಿ ಹರಿಚರಿತೆ ದುರಿತದುರ್ಗಕೆಕುಲಿಶ ವರಮುಕ್ತಿಸೋಪಾನ ಕಾಣಿರಯ್ಯಾ ಅ.ಪ. ಕ್ಷೀರಸಾಗರ ಮಧ್ಯೆ ಗಿರಿತ್ರಿಕೂಟ ದೊಳಗೆ ಇರುವುದೂ ಋತುಮಂತ ವರುಣನ ವರವನವು ಅಲ್ಲಿ ಪರಿಪರಿಯ ಲತೆಬಳ್ಳಿ ಸರಸಸ್ಥಾನಗಳಲ್ಲಿ ಮೆರೆವೋರು ಸುರಸಂಘ ನಾರಿಯರ ಸಹಿತಾ 1 ಪದ್ಮಗಾಶ್ರಯವಾದ ಪದ್ಮಕೊಳಾದೊಳಗೆ ಮದಿಸಿದಾ ಗಜವೊಂದು ಐದಿತು ಪರಿವಾರ ಸಹಿತ ವಿಧಿಯ ಬಲ್ಲವರಾರು ಮುದದಿರ್ದ ಆ ಗಜಕೆ ವಿಧಿ ವಕ್ರಗತಿಯಿಂದ ಪಾದವನೆ ಪಿಡಿಯಿತು ನಕ್ರವೊಂದು 2 ಒಂದು ಸಾವಿರ ವರುಷ ಕುಂದದೆಲೆ ಕರಿಮಕರಿ ನಿಂದು ಹೊರಾಡೆ ಸುರವೃಂದ ಬೆರಗಾಯಿತು ಬಂಧು ಬಳಗವು ಮತ್ತೆ ಅಂದ ಹೆಂಡಿರು ಎಲ್ಲ ಕುಂದು ಅಳಿಸದೆ ಇರಲು ಛಂದದಲಿ ಯೋಚಿಸಿತು ಗಜವೂ 3 ಏನಿದ್ದರೇನಯ್ಯ ಶ್ರೀನಿವಾಸನಕೃಪೆಯು ಇನ್ನಿಲದಾಮೇಲೆ ಕುನ್ನಿಗೆ ಸರಿಎಂದು ಹೀನ ಎನ್ನಯ ಜನ್ಮ ದೀನ ಭಾವದಿ ಹರಿಯ ಮಾನವನು ಬದಿಗಿಟ್ಟು ಧ್ಯಾನಿಸಿ ಸ್ತುತಿಸಿದಾ 4 ಸತ್ಯಶಾಶ್ವತಭೋಕ್ತ ಸೃಷ್ಟ್ಯಾದಿಕರ್ಮವಿಗೆ ನಿತ್ಯ ತೃಪ್ತನು ಆದ ಶಾಡ್ಗುಣ್ಯಪರಿಪೂರ್ಣನೆ ವಂದಿಸುವೆನೋ ಓತಪ್ರೋತದಿ ಜಗದಿ ವ್ಯಾಪ್ತ ಆಪ್ತನು ಆದ ಆರ್ತದಲಿ ಕರೆವೆನೋ 5 ಎಲ್ಲಕಡೆಯಲಿ ಇರ್ಪ ಎಲ್ಲರೂಪವ ತಾಳ್ವ ಎಲ್ಲ ಪ್ರೇರಣೆಮಾಳ್ವ ಎಲ್ಲರಿಂ ಭಿನ್ನನಿಗೆ ವಂದಿಸುವೆನೋ ಎಲ್ಲರಿಂ ಉತ್ತಮಗೆ ಎಲ್ಲರಾ ಬಿಂಬನಿಗೆ ಎಲ್ಲರ ವಾಚ್ಯನಿಗೆ ನಲ್ಲನೆಂತೆಂದು ನಾಕರೆವೆನೋ 6 ಎಲ್ಲರನು ಗೆದ್ದವಗೆ ಎಲ್ಲರಾನಲ್ಲನಿಗೆ ಎಲ್ಲ ದೋಷವಿಹೀನ ಒಳ್ಳೆ ಗುಣ ಪೂರ್ಣನ ಕರೆವೆನೋ 7 ನಿನ್ನ ತಿಳಿದವರಿಲ್ಲ ನಿನ್ನ ಮೀರಿದುದಿಲ್ಲ ಜನನ ಮರಣಗಳಿಲ್ಲ ನಿನಗಿಲ್ಲ ಸಮ ಅಧಿಕ ವಂದಿಸುವೆನೋ ನಿನ್ನನಾಮಕೆ ಗುಣಕೆ ನಿನ್ನ ಅವಯವಕೆ ನಿನ್ನ ಕ್ರಿಯ ರೂಪಗಳಿಗೆ ಇನ್ನಿಲ್ಲವೊ ಭೇದಸಾರಿ ನಾಕರೆವೆನೋ 8 ವೇದಗಮ್ಯನುನೀನೆ ವೇದದಾಯಕ ನೀನೆ ವೇದಾತೀತನು ನೀನೆ ಸಾಧು ಪ್ರಾಪ್ಯನುನೀನೆ ವಂದಿಸುವೆನೋ ಖೇದವರ್ಜಿತನೀನೆ ಅಂದ ಸಾರವು ನೀನೆ ಬಂಧನೀಡುವ ನೀನೆ ಅದ್ಭುತ ಅಚಿಂತ್ಯಶಕ್ತಿವಂತನ ಕರೆವೆನೋ 9 ಜ್ಞಾನಿಗೋಚರನೀನೆ ಗುಣಾತೀತನು ನೀನೆ ಗುಣಪ್ರವರ್ತಕನೀನೆ ಅನಾಥ ಸರ್ವಸಮ ವಂದಿಸುವೆನೋ ಜ್ಞಾನದಾಯಕನೀನೆ ಆನಂದಮಯನೀನೆ ನೀನೇ ಸರ್ವಾಧಾರ ನೀನೆ ಏಕನು ಎಂದು ಕೂಗಿ ನಾಕರೆವೆನೋ 10 ಸಾಕಾರ ನಿರಾಕಾರ ಆಕಾರ ಅಹೇಯ ಓಂಕಾರ ವಾಚ್ಯನೆ ಸಾಕಲ್ಯಸಿಗದವನೆ ಸ್ವೀಕಾರ ಮಾಡೋ ವಿಕಾರ ವರ್ಜಿತನೆ ಲೋಕೈಕವೀರಾನೆ ನೀ ಕೆವಲನು ಮುಕ್ತೇಶ ಸಲಹೋ 11 ಏನು ಕೊಡಲೊ ದೇವ ದೀನನು ನಾನಯ್ಯ ನಿನ್ನದೇ ಈ ಭಾಗ್ಯ ಮನ್ನಿಸುತ ದಯಮಾಡಿ ಸಲಹೋ ಘನ್ನಕರುಣಾಳುವೆ ಅನ್ಯರನು ನಾ ನೊಲ್ಲೆ ನಿನ್ನವನು ನಿನ್ನವನೋ ನಿನ್ನ ಚರಣಕೆ ಶರಣು ಶರಣೂ 12 ಕರಿ ತಾನು ಮೊರೆಯಿಡುತ ಕೂಗಲು ಸುರವೃಂದ ಯೋಚಿಸುತ ಹರಿಯಲ್ಲದನ್ಯತ್ರ ಅರಿಯೆವೀಗುಣವೆಂದು ಅರಿತು ಸುಮ್ಮನಿರಲೂ ಹರುಷದಿಂದಲಿ ಹರಿಯು ಗುರುಡನೇರುತ ಬರಲು ತರಿದು ನಕ್ರನ ಭರದಿ ಕರಿಯಪೊರೆಯೆ ಆದ 13 ಏನೆಂದು ವರ್ಣಿಸಲಿ ಶ್ರೀನಿವಾಸನ ಕರುಣ ದೀನ ಭಕ್ತರ ಮೇಲೆ ಸಾನುರಾಗದಿ ಕರಿಯ ಹಿಡಿದೆತ್ತಿದಾ ಇನ್ಯಾಕೆ ಭಯವಯ್ಯ ಘನ್ನ ಇಂದ್ರದ್ಯುಮ್ನನೆ ಏಳು ಮುನ್ನಿನಾ ದೋಷವಿದು ಇನ್ನು ನೀ ಧನ್ಯನಹುದೋ 14 ದೇವಲನ ಶಾಪದಲಿ ಆ ವರ ನಕ್ರನಾಗಿದ್ದ ಶ್ರೀವರನ ಭಕ್ತ ಹೂಹೂ ಗಂಧರ್ವನೆರಗಿ ಬಿದ್ದನು ಹರಿಗೇ ದೇವೇಶ ಹುಸಿನಗುತ ಈವೆ ವರವನು ಕೇಳಿ ಯಾವಾತ ಈ ಕಥೆಯ ಭಾವಶುದ್ಧದಿ ಭಜಿಸೆ ಉದಯದಲಿ ನಾ ಒಲಿವೆ ತವಕದಲಿ ಎಂದನೂ 15 ಹರಿಗೆ ಸಮರಾರಿಲ್ಲ ಹರಿಭಕ್ತ ಗೆಣೆಯಿಲ್ಲ ಸುರರು ಮೊರೆಯಿಟ್ಟರಾಗ ಹರಿವಾಯುಗುರುಗಳು ಕರುಣದಿಂದಲಿ ಇದನು ಮನ್ನಿಪುದು ಬುಧರೂ 16 ಮುದ್ದುಜಯತೀರ್ಥರ ಹೃದಯದಲಿನಲಿಯುವ ಮಧ್ವಾಂತಃಕರಣದಿ ಮುದ್ದಾಗಿ ಕುಣಿಯುವಂಥ ಮಾಧವ ಶ್ರೀಕೃಷ್ಣವಿಠಲರಾಯನು ಬೇಗ ಮೋದ ಸುರಿಸುವ ಈ ಪದವ ಪಠಿಸಲೂ 17
--------------
ಕೃಷ್ಣವಿಠಲದಾಸರು
ಗಣಪತಿ ಶಾರದೆಗೆರಗಿದೆ ಇಂದೇ | ಇಬ್ಬರ ಹೃದಯದಿ ಕರುಣದಿ ಬಂದೆ | ನುಡಿಸಿದರ್ವಚನವ ಒಂದೊಂದು ತಂದೆ | ಕೇಳಿರಿ ಜನರೆಲ್ಲಾ ಕಿವಿಗೊಟ್ಟು ಬಂದೆ 1 ನರನಾಗಿ ಬಂದು ನೀ ಮಾಡಿದಿ ಏನಾ | ತಿಳಿಯದೆ ಬೊಗಳುವಿಯಾತಕೆ ಶ್ವಾನಾ | ಎಳ್ಳಷ್ಟು ಇಲ್ಲದೆ ಹೋಯಿತು ಜ್ಞಾನಾ | ಇನ್ನಾದರೂ ಮಾಡೊ ಸದ್ಗುರುವಿನ ಧ್ಯಾನಾ2 ಮಾಡಲಿಲ್ಲಾ ಪುಟ್ಟಿ ನೀ ದಾನ ಧರ್ಮಾ | ಮಾಡಿದಿ ತಿಳಿಯದೆ ನೀ ಕೆಟ್ಟ ಕರ್ಮಾ | ಆಡಿದಿ ನೀ ಸಾಧುಸಂತರಿಗೊರ್ಮಾ | ನೋಡಿಕೊ ನಿನಗಿಲ್ಲದಾಯ್ತು ಶರ್ಮಾ 3 ಮಾಡಿದ ಬದುಕನು ಸುಮ್ಮನೆ ಕಳೆದೆ | ಮಾಡುವಾಗ ಬಹು ನಿಜವೆಂದು ತಿಳಿದೆ | ನೋಡದೆ ಪೂರ್ವದ ಸುಕೃತವನಳಿದೆ | ರೂಢಿಯೊಳಗೆ ಪಾಮರನಾಗಿ ಬೆಳೆದೆ 4 ಮಾಡುವ ಕರ್ಮಕೆ ಮನವೇ ಸಾಕ್ಷೀ | ಮಾಡುವಿ ಜಪ ನಿನಗ್ಯಾಕೀ ರುದ್ರಾಕ್ಷೀ | ಮಾಡಿದನೇ ಗುರು ಹೀಗೆಂದು ದೀಕ್ಷಾ | ಆಡಲ್ಯಾತಕೊ ನಾಳೆ ಆದೀತೋ ಶಿಕ್ಷಾ 5 ಹುಣಶಿ ಹಣ್ಣ ಹಚ್ಚಿ ಬೆಳಗಿದಿ ಗಿಂಡೀ | ಎಣಕೀ ಶರಣ ಮಾಡಿ ಅಲ್ಲೇನು ಕಂಡೀ | ಸಂತರ ನಿಂದಾ ಬಲು ಮಾಡಿ ಉಂಡೀ | ಅಂತರಂಗದಿ ಇರು ಛೇ ಹುಚ್ಚ ಮುಂಡೀ 6 ಹಗಲೂ ಇರುಳೂ ಎದ್ದುಂಬುವಿ ಕೂಳೂ | ಕೂಳಿಗೆ ಆದಿ ನೀ ಒಬ್ಬರ ಆಳೂ | ಬಲು ಮಂದಿ ಮನೆಯನು ಮಾಡಿದಿ ಹಾಳೂ |ಏನು ಪುಣ್ಯ ಬಂದದ ಅದನಾರ ಹೇಳು 7 ಹಗಲೂ ಇರುಳೂ ಎದ್ದು ಮಾಡಿದಿ ಬದಕಾ | ಮಾಡುತ ಮಾಡುತ ಆದೆಲ್ಲೊ ಮುದುಕಾ | ಸಾಯುವ ತನಕಾ ಬಿಡಲಿಲ್ಲೊ ಚುದಕಾ | ಸತ್ತಮೇಲೆ ನೀ ಆಗುವಿ ಶುನಕಾ 8 ಏನೇನಿಲ್ಲದೆ ಹೋಯಿತು ಬುದ್ಧೀ | ಶಾಸ್ತ್ರ ಪುರಾಣದಿ ಕೇಳಿಲ್ಲ ಸುದ್ದೀ | ಇರುಳ ಕಂಡ ಕುಣಿ ಹಗಲ್ಯಾಕೆ ಬಿದ್ದೀ | ಮರುಳಾದ್ಯಾ ಯಮ ನಾಳೆ ಕೊಂದಾನೊ ಗುದ್ದೀ 9 ಸಂಸಾರ ನಂಬಿದಿ ನಿಜದಲಿ ಹ್ಯಾಂಗ | ಸದ್ಗುರು ಪಾದವ ನಂಬೋ ನೀ ಹಾಂಗ || ಸಂಶಯಾ ಅದಕಂಜಿ ಬಿಟ್ಟರೆ ಈಗ |ಕಾಂಶಿಲಿ ಬಡಿದಾರು ತಿಳಿದೀತು ಆಗ 10 ಬೆಳಕಿನೊಳಗ ಒಂದು ನೋಡುವ ಕಣ್ಣು | ಕತ್ತಲಿಯೊಳ ಗೊಂದು ಕಾಂಬುವ ಕಣ್ಣು | ಕತ್ತಲಿ ಬೆಳಕನ್ನು ನೋಡುವ ಕಣ್ಣು | ಅದ ಬಿಟ್ಟು ಏನ ನೋಡುತಿ ಮಣ್ಣು 11 ಅನುದಿನ ಶಾಸ್ತ್ರ ಪುರಾಣಾ | ಅದರೊಳಗಿನ ಮಾತ ತಿಳಿಯದೆ ಕೋಣಾ || ಅರ್ಥವ ಹೇಳುವಿ ಮಂದಿಗೆ ಜಾಣಾ | ರುವ್ವಿಯ ಬೇಡಲು ಹೋಯಿತು ಪ್ರಾಣಾ12 ಕಂಡರೆ ನೋಡುವಿ ಹೆರವರ ಹೆಣ್ಣು | ಚೆಲುವೆಂದೂ ಇಟ್ಟೆಲ್ಲೊ ಆಕೆಗೆ ಕಣ್ಣೂ | ಆದರೆ ಹತ್ತ್ಯಾವೊ ಆಕೆಯ ಹುಣ್ಣು | ಕಡೆಯಲಿ ಬಿದ್ದಿತು ಬಾಯಲಿ ಮಣ್ಣು 13 ನಿತ್ಯ ತೆಗೆದುಕೊಳ್ಳುವಿ ದೇವರ ತೀರ್ಥಾ | ಮತ್ತಿನ್ನು ಬಿಡಲಿಲ್ಲ ಮನದ ಸ್ವಾರ್ಥಾ || ಕತ್ತೆಯ ಹಾಂಗ ನೀನೊದರುವಿ ವ್ಯರ್ಥಾ | ಎಂದೆಂದಿಗೂ ದೊರೆಯದು ಆ ಪರಮಾರ್ಥಾ 14 ತನುವು ನಾನೆಂಬುವಿ ತನುವಿದು ತೊಗಲು | ತನುವಿಗೆ ಅವ ನೋಡು ಒಂಬತ್ತು ಹುಗಲು | ಚಿಂತಿ ಮಾಡುವದ್ಯಾಕೊ ಹಗಲೂ ಇರುಳೂ | ನಿನ್ನಾಧೀನವು ಹೀಗೆಂದು ಇರಲು 15 ದೂರ ಹೋಗದಿನ್ನು ಆಗದು ಕಾಶೀ | ದೂರ ಮಾಡಿ ಕಳಿ ನೀನು ಮೂರಾಶಿ | ತೀರದು ಶಿವಯೋಗ ಪುಣ್ಯ ರಾಶಿ | ಸೇರುವಿ ಸಾಯುಜ್ಯದಲಿ ಮಿರಾಶಿ 16 ಮಾಯಾ ಮಾಯಾ ಮಾಯಾ | ದುಡ್ಡಿನಂತೆ ಮಾಡೊ ಮನಕೆ ನಿರ್ಮಾಯಾ 17 ಮೀಶಿಯ ಹುರಿ ಮಾಡಿ ಮೇಲಕೆ ನೋಡಿ | ಕಾಲಾಗ ಸಿಕ್ಕವು ಮೋಹದ ಬೇಡಿ || ಮಾಡಬಾರದಂಥ ಕೆಲ್ಸವ ಮಾಡಿ | ಸಿಕ್ಕಿದೆಲ್ಲೊ ಗಾಂಡೂ ಇನ್ನೆತ್ತ ಓಡೀ 18 ಪಾದ ದೊರೆವುದಿನ್ನೆಲ್ಲಿ 19 ಕಾಮನ ಸುಡುವುದು ನೋಡು ಹೀಂಗಲ್ಲಾ | ಕಾಮನ ಶಿವ ಸುಟ್ಟರವ ಸಾಯಲಿಲ್ಲ || ಕಾಮನು ಸುಡುವ ಮೂರು ಲೋಕವನೆಲ್ಲ | ಕಾಮರಹಿತ ಭವತಾರಕ ಬಲ್ಲ 20 ಕಟ್ಟಿದಿ ಮನೆಯನು ನೀ ಬಲು ಛಂದಾ | ಬಿಟ್ಟು ಹೋಗುತಿ ಇದದಾವಂದಾ || ತೊಟ್ಟಿಲೊಳಗೆ ಇದ್ದ ಹೇಳಿದ ಕಂದಾ | ಎಷ್ಟಂತ ಹೇಳಲಿ ನೀ ಮತಿಮಂದಾ 21 ಪಾತಕ ಬರುವದು ಬಿಡಬ್ಯಾಡ ವಾಜಿ | ನೀತಿಯಿಂದಲಿ ಮಾಡು ನೀ ಗುರು ಪೂಜಿ | ಯಾತನ ಬಡಿಸುವ ನಾಳಿನ ಪಾಜಿ 22 ಒದರುವಿ ಯಾತಕೆ ಬಾಯನು ಕಿಸ್ತು | ಬೆದರ ಬೇಡಾದುದಕೆನ್ನು ಅಸ್ತು || ಚತುರ ತನದಲಿ ಸಾಧಿಸು ನೀ ವಸ್ತು |ಆದರಿಂದಲಾಗುವದು ಆ ಮನ ಸ್ವಸ್ತು 23 ಪಾತಕ ಬರುವದು ತಿಳಿಯದೆ ಕೋಳಿ || ನೀತಿಯಿಂದಲಿ ತತ್ತ್ವ್ವ ಮಾತನು ಕೇಳಿ | ಘಾತಕ ಯಮ ನಾಳೆ ಬರುವನು ದಾಳಿ 24 ಭವ ಬಿಟ್ಟಿ | ಮಾಡದೆ ದಾನ ಧರ್ಮವ ಕೆಟ್ಟೀ || ಮಾಡಿದುದೆಲ್ಲಾ ನೀ ಜೋಕಿಲಿ ಇಟ್ಟಿ | ಮಾಡಲು ಬಾಧೆಯ ನೀ ಬಾಯ ಬಿಟ್ಟಿ 25 ನೆನೆದರೆ ದೃಢದಲಿ ರಾಮ ನಾಮ | ತನುವಿದು ಮುಂದೆ ಬಾರದು ನೇಮ || ಮನದೊಳು ಪುಟ್ಟಿತು ತಾನೆ ನಿಷ್ಕಾಮ | ಘನಸುಖ ತೋರಿತು ಅದು ಸಾರ್ವಭೌಮ 26 ಹುಟ್ಟಿ ಹುಟ್ಟಿ ನೀ ಯಾತಕೆ ಸತ್ತೀ | ಹುಟ್ಟುತ ಸಾವುತ ನಿತ್ಯದಿ ಅತ್ತೀ || ಹುಟ್ಟು ಸಾವನ್ನು ಕಳೆಯಲೊ ಕತ್ತೀ | ಕೆಟ್ಟಿಯೊ ಇನ್ನಾರ ಬೆಳಿ ಧರ್ಮಾ ಬಿತ್ತೀ 27 ಶಾಸ್ತ್ರ ಪುರಾಣವ ಓದುವಿ ಬರಿದೇ | ಉತ್ತಮ ಸ್ತ್ರೀಯರ ಕಂಡು ನೀ ಕರೆದೆ || ನಿನ್ನೊಳು ತಿಳಿದು ನೀ ನೋಡುದು ಮರೆದೇ | ಸಾಧು ಸಂತರುಗಳ ಸೇವೆಗೆ ಮರೆದೆ 28 ಪಡಿ ಜೋಳಕೊಬ್ಬರ ಅಡಿಗಳ ಹಿಡಿವೆ | ಕೊಡುವದಿಲ್ಲೆಂದರೆ ದವಡಿಯ ಕಡಿವೆ || ಕೊಟ್ಟರೆ ಮನದೊಳು ಸಂತೋಷ ಪಡುವೆ | ಕೆಟ್ಟ ಮಾರ್ಗದಿಂದ ಕಡೆ ತನಕಾ ನಡಿವೆ 29 ಭವ ಪರಿಹರಿಸುವದಿದು ಏನು ಅರಿದು || ಭವದೊಳು ಬಿಟ್ಟರು ನಾಮವ ಮರೆದು | ಭವಕಿನ್ನು ಕರಸ್ಯಾರೊ ಆತನ ಬರದು 30 ಮಾಡಿದೆ ಏನು ಬದುಕನು ಹೇಳು | ಮಾಡಿದುದೆಲ್ಲಾ ತಿಂದೆಲ್ಲಾ ಕೂಳು || ಕೂಳಿಗಾಗಿ ಆದಿ ಒಬ್ಬರ ಆಳು | ನೋಡಿ ಏನು ಸದ್ಗತಿಯ ಹೇಳು 31 ಮನದೊಳು ಗಳಿಸಿದಿ ಕೆಂಚೀ ಹೊನ್ನು | ಗಳಿಸಿದವರು ಏನು ಒಯ್ದಾರು ಇನ್ನು || ಬಿಟ್ಟು ಹೋದರು ಹ್ಯಾಂಗ ಬಲ್ಲೆಲ್ಲಾ ನೀನು | ನಿಷ್ಠೆಯಿಂದಲಿ ಒಮ್ಮೆ ಹರಗುರು ಎನ್ನು 32 ಮಾಡಲಿಲ್ಲ ಒಂದು ನರನಾಗಿ ಯೋಗಾ | ಮಾಡುವಿ ಸುಖವೆಂದು ಸ್ತ್ರೀಯರ ಭೋೀಗಾ | ಆಡಲ್ಯಾಕೆ ಆಯುಷ್ಯ ಹಾರಿತು ಬೇಗಾ | ನೋಡಿಕೊಳ್ಳೊ ಇನ್ನು ತಿಳಿದೀತು ಈಗಾ 33 ಪರಿ ಸಂಸಾರ ಯುಕ್ತಿ | ಮಾಡಲು ಒಲ್ಲ್ಯೋ ಶ್ರೀ ಗುರು ಭಕ್ತಿ || ಹೋಯಿತೊ ದೇಹದೋಳ್ ನಿನ್ನ ಶಕ್ತಿ | ಸಾಧಿಸಲರಿಯೊ ನೀ ಜೀವನ್ಮುಕ್ತಿ 34 ಅನುದಿನ ವೇದಾ | ಸಾಧಿಸಿ ತಿಳಿಯದೆ ಜೀವಶಿವ ಭೇದಾ || ಕಾದಾಡಿ ಕೊಂಬುವದು ಸುಮ್ಮನೆ ವಾದಾ |ಬ್ಯಾಡಿನ್ನು ಶೋಧಿಸು ನಿನ್ನೊಳು ಬೋಧಾ 35 ಭವ ಬೀಜವ ಕೊಂಬೆ 36 ಮಾಯಾ ಮರವನು ತ್ಯಜಿಸು || ಧ್ಯಾನ ಮುದ್ರೆಯೋಳ್ ಮನವನು ನಿಲಿಸು | ಜಗವಿದು ನಿಜವೇ ನೋಡೆಲು ಕನಸು 37 ರೂಪದೊಳಗಿಲ್ಲಾ ಗುಣವೊಂದು ತೃಣವು | ಗುಣದೊಳಗಿಲ್ಲವು ರೂಪದ ಅಣುವು || ರೂಪ ನಾಮಕ್ರಿಯಾ ಆದೀತು ಹೆಣವು | ಆ ಪರಬ್ರಹ್ಮನೆ ತಿಳಿಯಿನ್ನು ಪ್ರಣವು 38 ಪಾದ | ಅರಿತು ಪೂಜಿಸಿದವ ಪರಶಿವನಾದ || ಅನುಭವಿ ಬಲ್ಲನು ಆ ಸುಖ ಸ್ವಾದ | ತನ್ನೊಳು ಆಲಿಸುತಲಿ ನಿಂತ ನಾದ 39
--------------
ಭಾವತರಕರು
ಗಾಯಿತ್ರಿ ಹಿರಿಮೆ ಹತ್ತು ರೂಪದ ಗಾಯಿತ್ರಿ ನಿನಗೆ ರಂಗದ ತಾನ ಹತ್ತು ರೂಪಗಳಲ್ಲಿ ಕುಣಿಯುತಿಹೆ ನೀನು ಹತ್ತು ಸಲವಾದರೂ ಗಾಯಿತ್ರಿ ಜಪಿಸದಿರೆ ನಿನ್ನಲ್ಲಿ ಭೂಸುರತೆ ಉಳಿಯುವದೆಂತು? 89 ತನ್ನಾಮದರ್ಥವೇ ವ್ಯಾಪ್ತಿರೂಪದ ಮೀನು ಅಮೃತಸವನದಕತದಿ ಕೂರ್ಮನಿಹೆ ನೀನು ಭೂವರಾಹನು ನೀನು ವರೇಣ್ಯನಾಮಕನು ಶತ್ರುಭರ್ಜನದಿಂದ ಭರ್ಗನಾಗಿರುವೆ 90 ಪ್ರಾಣವನು ಮೇಲೆತ್ತಿ ಅಪಾನವನು ಕೆಳಗಿರಿಸಿ ಮಧ್ಯದಲಿ ವಾಮನನು ದೇವ ನೀನಿರುವೆ&ಚಿmಠಿ;ಟಿ, bsಠಿ;91 ಮಹಿಯ ಭಾರವ ತೆಗೆದ ಪರಶುರಾಮನು ನೀನು ಪ್ರಾಣನ ಪ್ರೀತಿಕರ ರಾಮ ನೀನಿರುವೆ 92 ಕಲಿಯುಗದ ದೇವನೇ ಜ್ಞಾನರೂಪದ ಕೃಷ್ಣ ಬುದ್ಧ ನೀನಿರುವೆ ಧರ್ಮ ಪ್ರಸಾರಣಕೆ ಹಯವನ್ನು ಚೋದಿಸುವ ಕಲ್ಕಿನಾಮಕ ನೀನು ತಿಳಿದು ಜಪ ಮಾಡು 93 ಗಾಯನದಿ ರಕ್ಷಿಸುವೆ ಗಾಯಿತ್ರಿಯೇ ನಮಗೆ ಬ್ರಾಹ್ಮತೇಜವನುಳಿಸಿ ರಕ್ಷಿಪುದು ನಮ್ಮ ಗಾಧಿಪುತ್ರನು ತಾನು ಕ್ಷತ್ರಿಯನದಾದರೂ ಬ್ರಹ್ಮರ್ಷಿಯಾಗಿ ಬಾಳಿದನು ನಿಜವೈ 94 ಸಿರಿವರನೆ ನೀನು ಭಾಸ್ಕರನ ಮಂಡಲದಲ್ಲಿ ಕಮಲದಾಸನದಲ್ಲಿ ಶೋಭಿಸುತಲಿರುವೆ ಚಕ್ರ ಶಂಖ ಮಕರಕುಂಡಲಾದಿಗಳಿಂದ ಲೆನ್ನ ಹೃದಯಕೈತಂದು ನೆಲೆನಿಲ್ಲು 95 ನಿನ್ನ ಸೌವರ್ಣ ತೇಜದ ಬೆಳಕಿನಿಂದೆನ್ನ ಆತ್ಮದ ಜ್ಯೋತಿಯನು ಬೆಳಗಿಸುತ ನೀನು ನಿನ್ನನ್ನೆ ಹಂಬಲಿಪ ಭವಬಂಧ ತಪ್ಪಿಸುವ ನಿನ್ನ ಬಳಿಬರುವ ದಾರಿಯನು ತೋರಿಸೆಲಾ 96 ಗಾಯಿತ್ರಿಯ ಜ್ಯೋತಿ ನಂದದಂತಿರಲು ನಾನಷ್ಟಾಕ್ಷರಿಯ ಮಂತ್ರ ಜಪಿಸುವೆನು ನಾನು ವಿದ್ಯುತ್ತಿನದು ರಕ್ಷೆ ನಾರಾಯಣನ ಮಂತ್ರ ಅದರಿಂದ ರಕ್ಷಣೆಯ ಮಾಡುವೆನು ನಾನು 97 ಆತ್ಮರಕ್ಷಕನು ಹರಿ ದೇಹರಕ್ಷಕನು ಹರ ಹರನ ದೇಹವು ಪ್ರಕೃತಿಪಂಚಕದಿ ರಚಿತ ಆತ್ಮದಲ್ಲಿರುವಹಂಕೃತಿಗೊಡೆಯ ಹರ ಹರಿಹರರೇ ದೇಹಾತ್ಮ ರಕ್ಷಣೆಯ ಮಾಡಿ98 ವಿದ್ಯುತ್ತು ಬಿಳಿ ಕಪ್ಪು ಕೆಂಪು ನೀಲಿಗಳೆಂಬ ಐದು ಮುಖ ಹರನಿಗಿಹುದದರಿಂದ ನಾನು ಪಂಚಾಕ್ಷರಿಯ ಮಾಡಿ ಹರನನ್ನು ಧ್ಯಾನಿಸುವೆ ಧರ್ಮಾಯತನದ ದೇಹ ರಕ್ಷಣೆಯ ಮಾಳ್ಪೆ 99 ವೈರಿ ಮನದಲ್ಲೆ ಹುಟ್ಟಿದವ ಮನದೊಡೆಯ ರುದ್ರನನ್ನೇ ಹೊಡೆಯಲೆಂದು ಐದು ಬಯಕೆಗಳೆಂಬ ಬಾಣದಿಂ ಹೊಡೆಯುತಿರೆ ಕಾಮದಹನವ ಹೊಂದಿ ಬೂದಿಯಾದನವ 100 ಆ ಕಾಮನೇ ಮತ್ತೆ ಅಂಗಹೀನನದಾಗಿ ರುದ್ರನನ್ನರ್ಧನಾರೀಶ್ವರನ ಮಾಡಿ ಮನವನ್ನು ಕೆಡಿಸುತಲಿ ಮಾನವರೆಲ್ಲರನು ದುಃಖದಾ ಮಡುವಿನಲಿ ಕೆಡಹುವನು ನಿಜದಿ 101 ದೇಹಸೃಷ್ಟಿಗೆ ಮೂಲ ಮಣ್ಣು ತೇಜವು ನೀರು ಈ ಮೂರು ಮೂರುವಿಧವಾಗಿ ಪರಿಣಮಿಸಿ ಪಾಲನೆಯು ನಡೆಯುವದು ದೇವರಿಂದಲೇ ಇದನು ಉಪನಿಷತಿನಾಧಾರದಿಂದ ಪೇಳುವೆನು 102 ಭಕ್ಷ್ಯಭೋಜ್ಯವು ಲೇಹ್ಯ ಪೇಯವೆಂಬೀ ನಾಲ್ಕು ಪ್ರಾಣದಾಹುತಿಯನ್ನು ನಾವು ಕೊಡುತಿಹೆವು ಅದರಿಂದ ಪಾಕವನು ಮಾಡುತ್ತ ದೇವನವ ಸಪ್ತಧಾತುಗಳನ್ನು ಮಾಡಿ ರಕ್ಷಿಸುವ 103 ತೇಜವದು ವಾಗ್ರೂಪ ತಾಳುವದು ಮತ್ತದುವೆ ಅಸ್ಥಿಮಜ್ಜಗಳಾಗುವವು ನಿಜವ ಪೇಳ್ವೆ ವೈದ್ಯಕೀಯಪರೀಕ್ಷೆಗೊಳಗಾಗಿ ತಿಳಿವೆ ನೀನ್ ಶ್ರುತಿತತ್ವವೆಂದೆಂದು ಸಾರುತಿಹುದಿದನೆ 104 ಮಣ್ಣಿನನ್ನವೆ ಮೊದಲು ಮನವಾಗಿ ಮತ್ತದುವೆ ಮಾಂಸ ರೂಪವ ತಾಳಿ ಮಲವದಾಗುವುದು ನೀರೆ ಮುಖ್ಯ ಪ್ರಾಣ ಮತ್ತೆ ಶೋಣಿತವಾಗಿ ಮೂತ್ರರೂಪವ ತಾಳಿ ಹೊರಗೆ ಹೋಗುವುದು 105 ಸ್ವೇದಜೋದ್ಭಿಜ್ಜ ಮತ್ತಂಡಜ ಜರಾಯುಜಂಗಳು ಎಂಬ ನಾಲ್ಕು ವಿಧ ಜೀವಜಂತುಗಳು ನಾರಾಯಣನು ತಾನು ಜಲವಾಸಿಯಾಗುತಲಿ ಜೀವಜಂತುಗಳನ್ನು ಸೃಷ್ಟಿ ಮಾಡುವನು 106 ನಿನ್ನ ಗುಣದೋಷಗಳ ಪರರೆಂಬ ದರ್ಪಣದಿ ನೋಡಿದರೆ ತೋರುವವು ನಿನ್ನವೇ ತಿಳಿಯೈ ಪರರಲ್ಲಿ ಕಾಣುತಿಹ ದೋಷಗಳನು ತೊರೆಯುತ್ತ ಗುಣಗಳನು ಎಣಿಸುವವ ಲೋಕಮಾನ್ಯ 107 ಊಧ್ರ್ವಮೂಲದ ದೇವನೂಧ್ರ್ವದ ಹಿಮಾಲಯದೊ ಳುತ್ತುಂಗ ನಾರಾಯಣಪರ್ವತದಲಿ ತಾರಕನು ರಾಮನಂತೆಲ್ಲ ನರರನು ತನ್ನ ಬಳಿಗೆ ಕರೆದೊಯ್ಯಲ್ಕೆ ಮೇಲೆ ನಿಂತಿರುವ 108 ಮಧ್ವಗುರುಹೃದಯಭಾಸ್ಕರನು ನಾರಾಯಣನು ಬದರಿಯೊಳಿಹ ನೆಲೆಗೆ ಕರೆಯಿಸುತಲೆಮ್ಮನ್ನು ಸೇವೆಯನು ಕೈಕೊಂಡು ಭಾವಗತನಾಗಿದ್ದು ಪ್ರೇರಿಸಿದನೀಕೃತಿಗೆ ಪ್ರಕೃತಿ ಪರಮಾತ್ಮ&ಚಿmಠಿ;ಟಿbs, ಠಿ; 109 ಆತ್ಮದಲಿ ಒಳಗಿದ್ದು ಅಂತರಾತ್ಮನು ನೀನು ಆತ್ಮದ ಬಹಿರ್ಗತನು ಪರಮಾತ್ಮ ನೀನು ದೇಹದಿಂ ಹೊರಗಿದ್ದು ಕಾಲಾತ್ಮಕನು ನೀನು ನೀನಿಲ್ಲದಿಹ ದೇಶಕಾಲವೆಲ್ಲಿಹುದು? 110 ಮೂರು ನಾಮಗಳಿಹವು ಶ್ರೀನಿವಾಸನೆ ನಿನಗೆ ಅವುಗಳನು ನೆನೆದರೇ ಪಾಪ ಪರಿಹಾರ ಅಚ್ಯುತಾನಂತಗೋವಿಂದನೆನ್ನುವ ನಾಮ ಕೃತದೋಷ ಪರಿಹಾರಕಾಗಿ ಜಪಮಾಳ್ಪೆ 111 ಮಧುರಾಖ್ಯನಾಮವನು ಹಿಂದು ಮುಂದಾಗಿಸುತ ಮಧ್ಯದಕ್ಷರವನ್ನು ಕೈಯಲ್ಲಿಯಿರಿಸು ನಾಮಜಪ ಮಾಡದಿರೆ ಅವನ ಮುಖಕೆಸೆದು ನೀ ನನವರತ ಜಪಮಾಡಿ ಸಿದ್ಧಿಪಡೆ ಮನುಜಾ 112 ಅಣುವಿಂದ ಅಣುವಾಗಿ ಮಹದಿಂದ ಮಹತ್ತಾಗಿ ನಿನ್ನ ದರುಶನವು ಜನರಾರಿಗೂ ಇಲ್ಲ ಮಧ್ಯಕಾಲದಿ ಮಾತ್ರ ದರುಶನವು ವಸ್ತುವಿಗೆ ಅವತಾರ ರೂಪಗಳೆ ಪೂಜಾರ್ಹವಿಹವು 113 ಎಲ್ಲರೂ ಶ್ರೀಹರಿಯ ನೆಲೆಯೆಂದು ನೀನರಿತು ಮಮತೆಯಿಂ ನೋಡುತಲಿ ಸುಖವನನುಭವಿಸು ಹೊಲೆಯನಾದರು ನಿನ್ನ ನಂಬಿ ಮರೆಹೊಕ್ಕಿದರೆ ಕೈಬಿಡದೆ ನೀನವನ ರಕ್ಷಿಸಲೆ ಮನುಜಾ 114 ಹಲವಾರು ಜಾತಿಗಳು ಹಲವಾರು ಮತಗಳಿಹ ವವುಗಳಿಗೆ ಮೂಲಮತ ವೇದಮತವೊಂದೆ ಬೈಬಲ್ ಖುರಾನ್ ಮೊದಲಾದ ಪೆಸರಿಂದದುವೆ ಲೋಕದಲ್ಲೆಲ್ಲು ಪಸರಿಸುತಲಿಹವು 115 ಭವಬಂಧನವ ಕಳೆದು ತನ್ನ ಬಳಿಗೊಯ್ಯುವವ ನೀನಲ್ಲದಿನ್ನಾರು ಹರಿಯೆ ಶ್ರೀರಾಮ ಸಾಂತಾನಿಕದ ಲೋಕಕೊಟ್ಟು ರಕ್ಷಿಸಿದ ಹರಿ ತಾರಕನು ನೀನಿರುವೆ ನೀನೆ ಗತಿ ದೊರೆಯೆನಗೆ 116 ಪರಶುರಾಮನ ರೂಪದಿಂದ ನೀಂ ತಪಗೈದ ಪಾಜಕ ಕ್ಷೇತ್ರದಲಿ ಭಕುತನವತರಿಸೆ ಜ್ಞಾನರೂಪದಿ ನೀನು ಅವನ ಹೃದಯವ ಹೊಕ್ಕು ಮಧ್ವಮತವನು ಜಗದಿ ದೇವ ಪಸರಿಸಿದೆ 117 ಮಿನುಗು ಹುಳಗಳ ಸೃಜಿಸಿ ಬೆಳಕನದರಲ್ಲಿರಿಸಿ ಕಗ್ಗತ್ತಲೆಯ ಕಾಡುಗಳಲಿ ರಕ್ಷಿಸುವೆಯೊ ಅಂತೆಯೇ ನಮ್ಮ ದೇಹದೊಳಗಿದ್ದು ನೀನ್ ಪ್ರತಿಬಿಂಬ ಜೀವವನು ರಕ್ಷಿಸುವೆ ದೇವಾ 118 ಪರಶುರಾಮನು ರಾಮ ಪರಶುರಾಮನು ಕೃಷ್ಣ ನರನು ನಾರಾಯಣನು ವ್ಯಾಸ ಮೊದಲಾಗಿ ಒಂದಾಗಿ ಬೇರೆಯಾಗಿಯೆ ರೂಪ ತಾಳುತ್ತ ಭಕ್ತರಕ್ಷಕನಾಗಿ ದುಷ್ಟವಂಚಕನು 119 ಇಂದ್ರಿಯಂಗಳ ಹೊರಮುಖವಾಗಿ ಸೃಷ್ಟಿಸಿದೆ ಹೃದಯಗುಹೆಯಲ್ಲಿರುವೆ ಕಾಣುವುದದೆಂತು? ಮನದಬಾಗಿಲ ತೆರೆದು ಅಂತರ್ಮುಖದಿ ನೋಡೆ ಪ್ರತ್ಯಗಾತ್ಮನು ನೀನು ಕಾಣುವದು ನಿಜವು 120 ಕುರುಡನಾಗಿಹೆ ನಾನು ಕುರುಡು ಇಂದ್ರಿಯಂಗಳಿಂ ತೋರುಬೆರಳಿಂದ ತೋರಿಸಲು ಬಯಸಿದೆನು ನನಗೆ ಅಂಜನಹಾಕಿ ತೋರು ನಿನ್ನ ಜ್ಯೋತಿ ವಿಶ್ವತಶ್ಚಕ್ಷು ಪರಮಾತ್ಮ ಶರಣೆಂಬೆ 121 ಕೋಟಿ ಗೋದಾನಕ್ಕೂ ಮಿಗಿಲಾಗಿ ಪುಣ್ಯಕರ ನಿನ್ನ ನಾಮದ ಜಪವು ತಾರಕನು ನೀನು ತಿಳಿದ ಗುಣಸಾಗರದ ಹನಿಗಳನು ಹೆಕ್ಕಿ ನಾನ್ ನುತಿಸಿದೆನು ನಿನ್ನನ್ನು ಮುಕ್ತಿದಾಯಕನೆ 122 ಸುಗುಣೇಂದ್ರ ಮೊದಲಾದ ಯತಿವರರ ಪೂಜೆಯಿಂ ಜ್ಞಾನರೂಪದ ನೀನು ಸಂತಸವ ತಾಳಿ ಜ್ಞಾನಭಂಡಾರಿ ಯತಿವರರಿಗೆಲ್ಲರ್ಗೆ ಜ್ಞಾನಾಮೃತವ ಕೊಟ್ಟು ರಕ್ಷಿಸುವೆ ಹರಿಯೇ 123 ಭವದಿ ಬಂಧಿಸಿಯೆನ್ನ ಭಾವಗತನಾಗಿದ್ದು ದುಷ್ಕರ್ಮ ಮಾಡಿಸುತ ಫಲ ಕೊಡುವದೇಕೆ? ಎನ್ನ ಕೈಯಿಂದೆತ್ತಿ ಬಳಿಗೆ ಕರೆದೊಯ್ಯು 124 ಉಚ್ಛ್ವಾಸ ನಿಶ್ವಾಸ ರೂಪದಿಂದೊಳಹೊಕ್ಕು ಆತ್ಮ ಸಂದರ್ಶನವ ಮಾಡುತ್ತ ವಾಯು ಇಪ್ಪತ್ತಒಂದುಸಾಸಿರ ಮತ್ತೆ ಆರ್ನೂರು ಹಂಸಮಂತ್ರದ ಜಪವ ಮಾಡುವನು ದಿನಕೆ 125 ಪರಶುರಾಮನು ರಾಜರೆಲ್ಲರನು ಸಂಹರಿಸಿ ಭೂಮಿಯನು ನಕ್ಷತ್ರಮಂಡಲವ ಮಾಡಿ ವಿಶ್ವಜಿತ್‍ಯಾಗದಲಿ ಕಶ್ಯಪರಿಗೀಯಲದ ಕಾಶ್ಯಪಿಯ ನಾಮವನು ಭೂಮಿ ಪಡೆಯಿತಲಾ 126 ಕಶ್ಯಪರ ತಪದಿಂದ ರಾಜರಿಲ್ಲದ ಭೂಮಿ ಭಾರದಿಂ ಕೆಳಗಿಳಿಯೆ ಊರುವಿಂದೆತ್ತಿ ಅವಳ ಮೊರೆ ಕೇಳಿ ರಾಜವಂಶವನ್ನುದ್ಧರಿಸೆ ಉರ್ವಿನಾಮವ ಪಡೆಯಿತು ಭೂಮಿ ನಿಜವು 127 ವ್ಯಾಸಪುತ್ರನದಾಗಿ ವ್ಯಾಸಪಿತ ನಾನಾಗಿ ವ್ಯಾಸಭವನದ ಒಳಗೆ ಭದ್ರನಾಗಿದ್ದೆ ಈ ಭವನದಿಂದೆನ್ನ ನಿನ್ನ ಭವನಕೆ ಒಯ್ಯು ಅಮೃತಲೋಕದಿ ನಿನ್ನ ಸೇ, ವೆ ಗೈಯ್ಯುವೆನು 128 ರಾಧಿಕಾರಮಣನೆ ಮಧುರಾಪುರಾಧಿಪತಿ ದಾನವಾಂತಕ ಕೃಷ್ಣ ಸತ್ಯಸ್ವರೂಪ ವಿಶ್ವಜ್ಞ ಪೂಜಿತನೆ ರಕ್ಷಿಸೆನ್ನನು ಹರಿಯೇ ಚಿತ್ತದಲಿ ನೆಲೆನಿಲ್ಲು ತಂದೆ ಕಾಪಾಡು 129 ಇಂದ್ರಾಣಿ ತಪಗೈದ ತಾನದಲಿ ಚ್ಯವನಮುನಿ ವೇದಾದ್ರಿ ಎಂಬಲ್ಲಿ ತಪಗೈಯುತ್ತಿದ್ದ ಸ್ವರ್ಣವರ್ಣವನ್ನಿತ್ತು ಕಣ್ಣಿತ್ತ ಸ್ವರ್ಣನದಿ ಹರಿಯುತಿಹುದಿಲ್ಲಿಯೇ ಈಗಲೂ ನಿಜವು 130 ಪ್ರಕೃತಿ ಪ್ರಕೃತಿಯ ಭೇದ ಪ್ರಕೃತಿ ಜೀವದ ಭೇದ ಜೀವ ಜೀವಗಳ ಭೇದ ಮೂರನೇಯದು ಜೀವೇಶ ಭೇದವದು ಪ್ರಕೃತೀಶ ಭೇದವೆಂ ದಿಹವು ಪ್ರಪಂಚದಲಿ ಪಂಚಭೇದಗಳು 131
--------------
ನಿಡಂಬೂರು ರಾಮದಾಸ
ಗೋಪಗೋವಿಂದ ವಿಠಲ | ನೀ ಪಾಲಿಸಿವಳಾ |ಸ್ವಾಪಜಾಗ್ರತ್ಸುಪ್ತಿ ಸರ್ವ ಕಾಲದಲೀ ಪ ಪತಿಸುತರು ಭಾಂದವರು | ಹಿತದಿಂದ ಸೇವಿಸುತಕೃತಿಸರ್ವ ನಿನಸೇವೆ | ಮತಿ ನೀಡೊ ಹರಿಯೇ |ಅತುಳ ವೈಭವ ತೋರಿ | ಕೃತಕಾರ್ಯಳೆಂದೆನಿಸುಕ್ಷಿತಿರಮಣ ನಿನಗಿದುವೆ ಪ್ರಾರ್ಥಿಸುವೆ ದೊರೆಯೇ 1 ಮೋದಮುನಿ ಮತ ದೀಕ್ಷೆ | ಸಾದರದಿ ಕೊಟ್ಟೈದುಭೇದಗಳ ತಿಳಿಸುತ್ತ | ಕಾದುಕೊ ಇವಳಾನೀದಯದಲಂಕಿತವ | ಓದಿಸಿಹೆ ತೈಜಸನೆಸಾದಿಸುವೆ ಅದನೀಗ | ಹೇ ದಯಾವರನೇ 2 ಸಂಚಿತ ಕಳೆವ | ಧರ್ಮ ನಿನ್ನದೊ ಸ್ವಾಮಿಭರ್ಮ ಗರ್ಭನ ಪಿತನೆ | ಕರ್ಮನಾಮಕನೇ ನಿರ್ಮಮತೆ ಮನದಿ ನಿ | ಷ್ಕಾಮ ಕರ್ಮದಲಿವಳಪೇರ್ಮೆಯಲ್ಲಿರಿಸೆಂದು | ಸ್ವಾಮಿ ಪ್ರಾರ್ಥಿಸುವೇ 3 ಸರ್ವಜ್ಞ ಸರ್ವೇಶ | ಸರ್ವದಾ ತವನಾಮಸರ್ವತ್ರ ಸ್ಮøತಿಯಿತ್ತು | ಸರ್ವಾಂತರಾತ್ಮದುರ್ವಿಭಾವ್ಯನೆ ದೇವ | ದರ್ವಿ ಜೀವಿಯ ಕಾವಸರ್ವ ಕರ್ತೃವು ನೀನೆ | ಶರ್ವ ಸನ್ನುತನೇ 4 ಸೃಷ್ಟಿಕರ್ತನೆ ದೇವ | ಕಷ್ಟಗಳ ಪರಿಹರಿಸಿಶಿಷ್ಟಳ್ಹøತ್ಕಂಜದಲಿ | ಇಷ್ಟ ಪ್ರದನಾಗೀಇಷ್ಟ ಮೂರ್ತಿಯ ಕೋರಿ | ಹೃಷ್ಟಳನ ಮಾಡೆಂದುಕೃಷ್ಣ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು
ಗೋವಿಂದಾಷ್ಟೋತ್ತರ ನಾಮಾವಳಿ ಹೃದ್ಗತ ತಮನಾಶ ಗೋವಿಂದ | ಎನ್ನಹೃದ್ಗುಹದೊಳು ತೋರೋ ಗೋವಿಂದ ಪ ಅಲವ ಮಹಿಮ ಹರಿ ಗೋವಿಂದ | ನಮ್ಮಅಲವ ಭೋದರ ಪ್ರೀಯ ಗೋವಿಂದ ||ಆಲಯದೊಳು ನಿಲ್ಲೊ ಗೋವಿಂದ | ಹೃ-ದಾಲಯದಲಿ ತೋರೊ ಗೋವಿಂದ 1 ಇಕ್ಷುಚಾಪನ ಪಿತನೆ ಗೋವಿಂದ | ನೀನಿಕ್ಷುಧನ್ವಾರಿ ನುತ ಗೋವಿಂದ ||ಈಕ್ಷಿಸೋ ಕರುಣದಿ ಗೋವಿಂದ | ನಿ-ನ್ನೀಕ್ಷಿಸ ಲೋಶವೇನೊ ಗೋವಿಂದ 2 ಉರಗ ಶಯನನೆ ಗೋವಿಂದ | ನಮ್ಮಉರಗಾಯಿ ವೈಕುಂಠ ಗೋವಿಂದ ||ಊರೂರು ಚರಿಸಿದೆ ಗೋವಿಂದ | ನಿ-ಮ್ಮೂರಿಗೆ ಕರೆದೊಯ್ಯೊ ಗೋವಿಂದ 3 ಋಗಾದಿ ತ್ರಯಿಮಯಿ ಗೋವಿಂದ | ಹರಿಋಗ್ವಿನುತನೆ ಗುರು ಗೋವಿಂದ ||Iೂಕ್ಷ ಸದ್ವಿನುತನೆ ಗೋವಿಂದ | ಹರಿIೂಕಾರ ಪ್ರತಿಪಾದ್ಯ ಗೋವಿಂದ 4 ಏತತ್ತೆನಿಸಿಯು ಹೃದ್ಗ ಗೋವಿಂದ | ನೀ ನೇತಕೆ ಕಾಣಿಯಾಗಿಹೆ ಗೋವಿಂದ ||ಐತದಾತ್ಮ್ಯಕ ಸರ್ವ ಗೋವಿಂದ | ನೀನೈತರುವುದು ಮನಕೆ ಗೋವಿಂದ 5 ಸತಿ ಗೋವಿಂದ | ನೀನೌತು ಕೊಂಡಿಹದೇಕೊ ಗೋವಿಂದ 6 ಅಂಗಾಂಗಿ ಭಾವದಿ ಗೋವಿಂದ | ನೀನಂಗಾಂಗದಿ ಕ್ರೀಡಿಪೆ ಗೋವಿಂದ ||ಅಹರರ್ಹಮನದಲಿ ಗೋವಿಂದ | ನೀಅಹರಹರ್ವಿಹರಿಸೋ ಗೋವಿಂದ 7 ಕಪಿಲಾತ್ಮ ಶ್ರೀ ಹರಿ ಗೋವಿಂದ | ನಮ್ಮಕಪಿವರ ಪೂಜ್ಯನೆ ಗೋವಿಂದ ||ಖಪತಿಗಮನ ಗುರು ಗೋವಿಂದ | ಜಗಖರ್ಪರ ಸೀಳಿದ ಗೋವಿಂದ 8 ಗರುಡಧ್ವಜನೆ ಬಾರೋ ಗೋವಿಂದ | ಜಗಂಗರುವವ ಕಳೆಯೊ ಗೋವಿಂದ ||ಘರ್ಮಾಸ ಸಮಂತಾತು ಗೋವಿಂದ | ಸೂಕ್ತಘರ್ಮಕ್ಕೆ ವಿಷಯನೆ ಗೋವಿಂದ 9 ಓಂಕಾರ ಪ್ರತಿಪಾದ್ಯ ಗೋವಿಂದ | ಪಾ-ಙ್ತವು ಜಗವೆಲ್ಲ ಗೋವಿಂದ ||ಚರ್ಮದೊಳುದ್ಗೀಥ ಗೋವಿಂದ | ಇದ್ದುಚರ್ಮ ಲಾವಣ್ಯದ ಗೋವಿಂದ 10 ಛಂದಸ್ಸಿನಿಂಛನ್ನ ಗೋವಿಂದ | ನಾಗಿಛಂದೋಭಿಧನೆನಿಪೆ ಗೋವಿಂದ ||ಜಂಗಮ ಚರವ್ಯಾಪ್ತ ಗೋವಿಂದ | ಎಮ್ಮಜಂಗುಳಿಗಳ ಕಳೆಯೊ ಗೋವಿಂದ 11 ಝಷ ರೂಪಿ ಕಮಠನೆ ಗೋವಿಂದ | ನಮ್ಮಝಷ ಕೇತುಪಿತ ಕಾಯೊ ಗೋವಿಂದ ||ಜ್ಞಾನ ಜ್ಞೇಯ ಜ್ಞಾತೃ ಗೋವಿಂದ | ಪ್ರ-ಜ್ಞಾನ ಘನನೆನಿಪೆ ಗೋವಿಂದ 12 ಟಂಕಿ ಎಂಬುವನೆ ಗೋವಿಂದ | ನಮ್ಮಾಟಂಕವ ಕಳೆಯೋ ಗೋವಿಂದ ||ಠಕ್ಕು ಠವಳಿಗಾರ ಗೋವಿಂದ | ನಮ್ಮಠಕ್ಕಸಿ ಹಾಕದಿರು ಗೋವಿಂದ 13 ಡರಕೊ ಡರ್ಯಾಭಿಧ ಗೋವಿಂದ | ನಮ್ಮೆಡರನು ಪರಿಹರಿಸೊ ಗೋವಿಂದ ||ಢಣ ಢಣ ನಾದದಿ ಗೋವಿಂದ | ಬಲುಢಣಿರೆಂಬೊ ವಾದ್ಯದಿ ಗೋವಿಂದ 14 ಣನಾಮ ವಾಚ್ಯನೆ ಗೋವಿಂದ | ಪ್ರ-ಣಮನ ಮಾಡುವೆನೋ ಗೋವಿಂದ ||ತರುಣಾರ್ಕ ಪ್ರಭೆಯ ಗೋವಿಂದ | ನಮ್ಮತರುಣಿ ದ್ರೌಪದಿ ವರದ ಗೋವಿಂದ 15 ಥರಥರವರ್ಣನೆ ಗೋವಿಂದ | ಬಲ್ಪ್ರಮಥನ ಶೀಲನೆ ಗುರು ಗೋವಿಂದ ||ದರ ಕಂಬುಧರನೆ ಗೋವಿಂದ | ತ್ರಿ-ದಶರ ಪರಿಪಾಲ ಗೋವಿಂದ 16 ಧರ್ಮಸು ಗೋಪ್ತನೆ ಗೋವಿಂದ | ಸ-ಧ್ದರ್ಮ ನಾಮಕ ಗುರು ಗೋವಿಂದ ||ನರೆಯಣಾಭಿಧ ಗುರು ಗೋವಿಂದ | ನಮ್ಮನರಸಖನೆನಿಸಿಹೆ ಗೋವಿಂದ 17 ಪರಮ ಪುರುಷ ಗುರು ಗೋವಿಂದ | ಕಾಯೊಪರಮಾನಂದ ಪ್ರದನೆ ಗೋವಿಂದ ||ಫಲರೂಪನು ನೀನೆ ಗೋವಿಂದ | ಇದೆಫಲಿತಾರ್ಥವೊ ಗುರು ಗೋವಿಂದ 18 ಬಗೆ ಬಗೆ ಕರ್ಮಗಳ್ ಗೋವಿಂದ | ಮಾಡಿಬಗೆ ಬಗೆ ಲೀಲನೆ ಗೋವಿಂದ ||ಭರ್ಗ ರೂಪಿಯೆ ಗುರು ಗೋವಿಂದ | ನಮ್ಮಭರ್ಮ ಗರ್ಭನ ಪಿತ ಗೋವಿಂದ 19 ಮದಜನಕಮಜ್ಜದಿ ಗೋವಿಂದ | ನಮ್ಮಮದನ ಗೋಪಾಲನೆ ಗೋವಿಂದ ||ಯಜ್ಞ ಭುಗ್ಯಜ್ಞನೆ ಗೋವಿಂದ | ಮತ್ತೆಯಜ್ಞ ಸಾಧನ ನೀನೇ ಗೋವಿಂದ 20 ರಣದೊಳರ್ಜುನ ಪಾಲ ಗೋವಿಂದ | ಹಗರಣವನೆ ಕಳೆಯೊ ಗೋವಿಂದ ||ಲವಕುಶ ಪಿತನೆನಿಪೆ ಗೋವಿಂದ | ನೀನಲವಪೂರ್ಣ ಮಹಿಮ ಗೋವಿಂದ 21 ವರ್ಣಗಳ್ಧ್ವನಿಗಳು ಗೋವಿಂದ | ಸರ್ವವರ್ಣಿಪುದು ನಿನ್ನ ಗೋವಿಂದ ||ಶರೊ ಆಭಿಧ ಜೀವನ್ನ ಗೋವಿಂದ | ಮೀಟಿಶರೀರಾಖ್ಯನೆನಿಸುವೆ ಗೋವಿಂದ 22 ಷಡ್ಗುಣ ಪರಿಪೂರ್ಣ ಗೋವಿಂದ | ನೀನೆಷಡ್ವಾದಿ ಸ್ವರ ವ್ಯಾಪಿ ಗೋವಿಂದ ||ಸತ್ತಾದಿ ಪ್ರದ ರೂಪಿ ಗೋವಿಂದ | ನೀನೆಸತ್ತತ್ವ ಪ್ರತಿಪಾದ್ಯ ಗೋವಿಂದ 23 ಹರಿ ಹರಿ ಎಂದರೆ ಗೋವಿಂದ | ಪಾಪಹರಿ ಸೂವಿ ನೀನೇ ಗೋವಿಂದ ||ಳಾಳೂಕ ಆಭಿಧ ಗೋವಿಂದ | ಕಾಯೊಳಕಾರ ಪ್ರತಿಪಾದ್ಯ ಗೋವಿಂದ 24 ಕ್ಷಮಿಸೆನ್ನ ಅಪರಾಧ ಗೋವಿಂದ | ಬಲಿಕ್ಷಮೆಯನಳೆದ ಗುರು ಗೋವಿಂದ ||ಕ್ಷಮಕ್ಷಾಮಾಭಿಧ ಗುರು ಗೋವಿಂದ | ನೀಲಕ್ಷುಮಿ ಸಹ ನೆಲಸೊ ಗೋವಿಂದ 25 ಜ್ಞಾನಗಮ್ಯನೆ ಗುರು ಗೋವಿಂದ | ತತ್ವಜ್ಞಾನವ ಪಾಲಿಸೋ ಗೋವಿಂದ ||ಜ್ಞಾನಿಗೆ ಪ್ರಿಯತಮ ಗೋವಿಂದ | ನಿನಗೆಜ್ಞಾನಿ ಜನರು ಪ್ರಿಯರು ಗೋವಿಂದ 26 ಏಕ ಪಂಚಾಶತು ಗೋವಿಂದ | ವರ್ಣಏಕಾತ್ಮ ಮಾಲೇಯ ಗೋವಿಂದ ||ಲೋಕೈಕನಾಥ ಗುರು ಗೋವಿಂದ | ವಿಠಲಸ್ವೀಕರಿಸೆನ್ನ ಕಾಯೋ ಗೋವಿಂದ 27
--------------
ಗುರುಗೋವಿಂದವಿಠಲರು
ಛಲಾವ್ಯಾಕೊ ನಿನಗೆ ಎನ್ನಲಿ ಪ ಛಲಾವ್ಯಾಕೊ ಕೋಲಾಚಲವೇಂಕಟ ಫಲಾ ನೀಡಿ ನೀ ಭಲಾನೆನಿಸೊ ದೇವಾ ಅ.ಪ ಧರಾತಳದಿ ಭೂಧರಾಗ್ರಮಂದಿರ ಪರಾವರೇಶನೆ ದರಾರಿಕರಶೂರ 1 ರಮಾವರನೆ ತವ ಸಮಾನರಾಗಿಹ ಸುಮಾನಸಾರ್ಕರ ಕ್ಷಮಾತಳದಿ ಕಾಣೆ 2 ಕುಲಾಲಕೃತ ಮೃತ್ ಕಲಾಪಧರಮಹಾ ಉಲಾಯುಗಾತ್ಮಜ ಬಲಾರಿಸುತಸುಖ 3 ಶತ್ರುಬವರದೊಳು ವೃತ್ರಾರಿತನಯನ ಮಿತ್ರಾನ ತೋರಿ ಪೊರೆದ್ಯೊ ಶತ್ರುಹನನದೇವ 4 ತಕ್ಷಣದಲಿ ಸಾಸಿರಾಕ್ಷ ತನಯನ ಪೊರೆದಿ 5 ಭರ್ಮಾನಸ್ತ್ರದ ನಿಜ ಮರ್ಮವರಿತು ನೀ ಧರ್ಮಾಪೌತ್ರನ ಕಾಯ್ದಿ ಸುಧರ್ಮನಾಮಕ ನಿನಗೆ 6 ದಶಾಸ್ಯ ಮುಖಮಹನಿಶಾಚರೇಶರ ದಶಾಕಳದ ಮಹಾ ದಶಾವತಾರನೆ 7 ವಟಾದ ಎಲೆಸಂಪುಟಾದಲೊರಗುಂ - ಗುಟಾವ ನುಂಬುವ ದಿಟಾ ವಿಶ್ವೋದರ 8 ದಾತಾ ಗುರುಜಗನ್ನಾಥ ವಿಠಲ ನಿಜ ದೂತಾಪಾಲಕನೆಂದು ಖ್ಯಾತಾನಾಗಿಹ ನಿನಗೆ 9
--------------
ಗುರುಜಗನ್ನಾಥದಾಸರು
ಜಯ ಪಾಂಡುರಂಗ ವಿಠಲ | ದಯದಿ ಪೊರೆ ಇವನಾ ಪ ಭಯ ಕೃತೂ ಭಯನಾಶ | ಹಯಮೊಗನೆ ಹರಿಯೇ ಅ.ಪ. ಹಿಂದಿನ ಸುಸಂಸ್ಕಾರ | ಛಂದದಲಿ ಅನುಭವಿಸಿಇಂದು ತವದಾಸ್ಯವನು | ಕಾಂಕ್ಷಿಸುವ ಹರಿಯೇಅಂದ ಪುಣ್ಯದರಾಶಿ | ಬಂದೊದಗಿತೋ ಎನೋಇಂದಿರಾ ನಂದದಾ | ನಂದವನೆ ಈಯೋ 1 ಕರ್ಮಾಕರ್ಮಗಳ | ಮರ್ಮವನೆ ತಿಳಿಸುತ್ತಧರ್ಮನಾಮಕ ನಿನ್ನ | ಪೇರ್ಮೆ ಸನ್ನಾಮಾಒಮ್ಮನದಿ ಸರ್ವದಾ | ಸುಸ್ಮರಣೆ ಈಯುವುದುದುಮ್ಮಾನಗಳ ಕಳೆದು | ಸಲಹಬೇಕಿವನಾ 2 ಪಂಚ ಭೇದ ಜ್ಞಾನ | ಸಂ ಚಿಂತನೆಯ ಕೊಟ್ಟುವಾಂಛಿತಾರ್ಥವನೀಡೋ | ಪಂಚ ಪಂಚಾತ್ಮಾಹೆಂಚು ಹಾಟಕದಿ ಸಮ | ಚಿಂತನೆಯು ಬರುತಿರಲಿಅಂಚೆವಾಹನ ಪಿತನೆ | ಸಂಚಿತಾಗಮ ಕಳೆಯೋ3 ಭೂರಿ ಭಕ್ತಿಗಳಾ 4 ಧೀವರರ ಆಶಿಷವು | ತೀವರಾಗಲಿ ಇವಗೆಮಾವಾರಿ ಪದಚಿಂತೆ | ಯಾವಾಗ್ಯೂ ಇರಲೀಕೇವಲಾನಂದಗಳು | ಭಾವದಲಿ ಮೈದೋರೆದೇವಗುರು ಗೋವಿಂದ | ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಜ್ಞಾನಪ್ರದ ನರಸಿಂಹ ವಿಠಲ ನೀ ಸಲಹೊ ಪ ಧೇನು ವತ್ಸದ ಧ್ವನಿಗೆ ತಾನೇವೆ ಬರುವಂತೆ ಅ.ಪ. ಕರ್ಮ ಪೂರ್ವಾರ್ಜಿತವ ನಿರ್ಮಲವ ಗೊಳಿಸುತ್ತಭರ್ಮ ಗರ್ಭನ ಜನಕ ಪೇರ್ಮೆಯಲಿ ಇವನಧರ್ಮ ಮಾರ್ಗದಿ ನಡೆಸು ಸುಜ್ಞಾನ ಮತಿಯಿತ್ತುಕರ್ಮನಾಮಕ ಹರಿಯೆ ಶರಣಜನ ಧೊರೆಯೆ 1 ಹರಿಯು ಸರ್ವೋತ್ತಮನು ಶಿರಿಯು ಆತನರಾಣಿಗುರು ವಾಯು ಸುರರೆಲ್ಲ ಹರಿಭೃತ್ಯರೆಂಬವರಮತಿಯನಿತ್ತವಗೆ ಸಂಸ್ಕøತಿಯ ಕ್ಲೇಶಗಳಪರಿಹರಿಸಿ ಪಾಲಿಪುದು ಪರಮ ಕರುಣಿಕಾ 2 ಪತಿ ಇರುವೆ ಮೂಕ ಪುರುಷರ ನೀನು ವಾಕ್ಪತಿಯ ಮಾಳ್ಪೆನಾಕೇಳ್ಪುದರಿದೇನೊ ಪಂಚ ಮುಖ ಭವವಂದ್ಯತೋಕನಿವ ಶರಣಗಿಹ ವ್ಯಾಕುಲವ ಕಳೆಯೋ 3 ಮಗುವಿನೊಚನವ ಕೇಳಿ ಜಿಗಿವೆ ಕಂಬದಲಿಂದನಗೆ ಮೊಗನೆ ತರಳೆಯಾ ಹಗರಣವ ಕಳೆದೇಖಗವರಧ್ವಜ ನಿನ್ನ ಬಗೆಬಗೆಯ ಲೀಲೆಗಳಮಿಗಿಲಾಗಿ ತೋರಿವಗೆ ನಗಧರನೆ ಹರಿಯೇ 4 ನಿತ್ಯತವ ಸ್ಮøತಿಯಿತ್ತು ಭೃತ್ಯನತಿ ಕಷ್ಟಗಳಕಿತ್ತೊಗೆದು ಮಧ್ವಮತ ತತ್ವ ತಿಳಿಸುತ್ತಾಗುಪ್ತ ಮಹಿಮನೆ ಗುರುಗೋವಿಂದ ವಿಠ್ಠಲನೆಭಕ್ತನುದ್ಧರಿಸೆಂದು ಪ್ರಾರ್ಥಿಸುವೆ ನಿನ್ನಾ 5
--------------
ಗುರುಗೋವಿಂದವಿಠಲರು