ಒಟ್ಟು 261 ಕಡೆಗಳಲ್ಲಿ , 61 ದಾಸರು , 226 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೈಹಿಡಿದೆನ್ನನು ನಡೆಸೋ ರಂಗ ಚೋಹವ ಬಿಡಿಸಿ ನಿನ್ನಡಿಗಳ ಹಿಡಿಸೊ ಪ ಮೋಹ ಮಾತ್ಸರ್ಯದ ದಾಹವ ಬಿಡಿಸೋ ಶ್ರೀಹರಿ ನಿನ್ನ ನಾಮಂಗಳ ನುಡಿಸೋ ಅ.ಪ ಇಂದಿರೆಯರಸ ಮುಕುಂದ ನಿನ್ನ | ಕಂದನ ಮರೆವರೆ ತಂದೆ ಗೋವಿಂದಾ | ಮಂದಮತಿಯು ನಾನೆ ಗೋಪೀ ಕಂದ | ಮಂದರಧರ ಕಾಯೋ ನಿತ್ಯಾನಂದ1 ಮಂಗಳಕರ ಶುಭನಾಮ | ಹಿಂಗದೆ ಭಜಿಪೆನು ಅರಿಕುಲಭೀಮ ಭಂಗಿಸು ದುರಿತವ ಮಾಂಗಿರಿಧಾಮ 2 ದಾಸರದಾಸ ನಾನೆಂಬುದನುಳಿಸೋ ವಾಸುದೇವ ನಿನ್ನ ಬೇಡುವುದೆನಿಸೊ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗಜಚರ್ಮಾಂಬರ ಗಂಗಾಧರನೇಗಜಮುಖಜನಕ ಗೌರಿಯ ರಮಣ ಓ ತ್ರಿಜಗದೊಂದಿತನೆ ಸಾಂಬಶಿವ ಮಹಾದೇವ ಪಫಾಲನೇತ್ರನೆ ರುಂಡಮಾಲಾಧರನೆನೀಲಕಂಠನೇ ನಿತ್ಯಾನಂದ ಓಕಾಲಾಂತಕನೆ ಸಾಂಬಶಿವ ಮಹಾದೇವ 1ಮದನ ಹರನೆ ಶಿವ ಕಂಬುಕಂಧರನೆಪದ್ಮಾಕ್ಷನಯನ ಪಾರ್ವತಿ ರಮಣ ಓಬುಧಜನಪ್ರಿಯನೆ ಸಾಂಬಶಿವ ಮಹಾದೇವ 2ಭೂತಿಭೂಷಣನೆ ಸರ್ವ ಭೂತಾತ್ಮಕಪಾತಕಹರ ಪಾರ್ವತಿ ರಮಣ ಓಅನಾಥ ರಕ್ಷನೆ ಸಾಂಬಶಿವ ಮಹಾದೇವ 3ಇಂದ್ರವಂದಿತ ಭುಜಗೇಂದ್ರ ಭೂಷಣನೆತಂದೆ ಏಳುಗಿರಿ ವೆಂಕಟಸಖನೇ ಓಚಂದ್ರಶೇಖರ ಸಾಂಬಶಿವ ಮಹಾದೇವ 4
--------------
ತಿಮ್ಮಪ್ಪದಾಸರು
ಗಿರಿಯ ತಿಮ್ಮಪ್ಪ ವಾಹನಗಳೇರಿ ನಿತ್ಯಾ ಮೆರೆದು ಚತುರ ಬೀದಿ ತಿರುಗಿ ಬಪ್ಪುದು ನೋಡೆ ಪ ಸರಸಿಜಭವಾಗ್ರಜರುಳಿದವಾರು ವರ ಸಕಲ ಮನೋಭೀಷ್ಟ ಕೈಕೊಳುತಾ ನೆರೆದು ಸುತ್ತಲು ತಮ್ಮ ಭಕುತಿಯಲಿ ಸೂಸುತ್ತ ಹರುಷ ವಾರಿಧಿಯಾಳು ಮುಳಗಿದಟ್ಟಿಡಿಯಿಂದಾ 1 ಸುತ್ತಲುದರೆ ಬಿಂದುಗಳೊಂದು ಮುತ್ತಿನ ಸೂರ್ಯಪಾನಾ ಪತಾಕೆಗಳು ಬೀ ಸುತ್ತಲಿಪ್ಪದು ಚಾಮರ ಪಂಜುಗಳೆಸೆಯೆ 2 ದಂಡಿಗೆ ತಾಳ ಬೆತ್ತವ ಪಿಡಿದು ನಿಂದು ತಂಡ ತಂಡದಲಿಂದ ಮಹಿಮೆಯನ್ನು ಕೊಂಡಾಡುತ ಮನ ಉಬ್ಬಿ ಮಹೋತ್ಸವದಲ್ಲಿ ತೊಂಡರು ಹರಿದಾಡಿ ಹಾಡಿ ಪಾಡುತಲಿರೆ3 ಪವನ ಗರುಡ ಶೇಷ ಸಿಂಹ ಮಂಟಪ ಮತ್ತೆ ರವಿ ಶಶಿ ತುರಗ ಅಂದಣ ಮಿಕ್ಕಾದ ನವರಾತ್ರಿಯೊಳಗೆಲ್ಲ ವಾಹನನಾದ ಅಂ ದವನಾರು ಬಣ್ಣಿಪರು ಸಕಲ ಭೂಷಿತವಾಗೆ 4 ಚಿನುಮಯ ರೂಪ ವಿಚಿತ್ರ ಮಹಿಮ ದೇವ ನೆನೆದವರ ಹಂಗಿಗೆ ಸಿಲುಕುವಾ ಘನಗಿರಿ ತಿರ್ಮಲ ವಿಜಯವಿಠ್ಠಲರೇಯಾ ದನುಜದಲ್ಲಣನೆಂಬೊ ಬಿರಿದು ಪೊಗಳಿಸುತ್ತ 5
--------------
ವಿಜಯದಾಸ
ಗುಮ್ಮ ಬಂದನೆಲೊ ದುರ್ಜನ ಬೇಡಸುಮ್ಮನಿರೆಲೊ ರಂಗಯ್ಯ ಪ ನಿತ್ಯ 1 ಕಡಗ ಕಂಕಣ ಬಾಹುಪುರಿ ಭುಜಕೀರ್ತಿಯುಉರದಲ್ಲಿ ಧರಿಸಿದ ರುಂಡಮಾಲೆಯು ತನ್ನಸಿರದ ಜಟಾಜೂಟೆಯು ತಾಂ ಧರಿಸಿದ ಉರಗನಾ-ಭರಣಗಳು ಪರಮ ಮೂರುತಿ ನಿಮ್ಮ ಚರಣಸೇವೆಗೆ ನಿತ್ಯ2 ಕಾಮನ ರೂಪಕ್ಕೆ ಜರಿವಾ ಚೆನ್ನಿಗನಾಗಿಕೋಮಲಾಂಗೇರು ಭಿಕ್ಷವ ನೀಡಲು ಪ್ರೇಮದಿಂದವರಿಗೆಲ್ಲಮುಕ್ತಿಯನೀವ ಸೋಮಶೇಖರನ ಚೆಲ್ವರಾಮನಾ ಭಾವ ಮೃದುವಾಕ್ಯವಿದು ಮುದ್ದು 3 ಕೋಟಿ ಸೂರ್ಯರ ಕಾಂತಿ ನೇಟಾದ ತನುವಿನಪೂಸಿದ ಭಸ್ಮವು ನೊಸಲ ಮುಕ್ಕಣ್ಣಿನ ನೋಟದಕಿಡಿಯುದುರೆ ಭೂತಗಣಂಗಳು ಕುಟಕಿಚ್ಛಕ ಬೆದರೆನಾಟ್ಯವನಾಡುತ ನಗುತ ಮೋಹನ ಮುದ್ದು 4 ನಿಮ್ಮ ಚರಣ ಸೇವೆಗೆ ನಿತ್ಯಾ5
--------------
ಶ್ರೀಪಾದರಾಜರು
ಗುಹ ಕಂದರ್ಪಾನ್ವಿತ ಮುನಿವಂದ್ಯ ಪ ಸದಾನತ ಬಂಧು ಶರಜ ನಿತ್ಯಾನಂದ ಅ ಮುಕ್ಕಿ ತಾರಕನನು ಕೊಂದ 1 ಸತಿ ದುರುಳ ಪದ್ಮನು ಪಡೆವೆರಸಿ ಯುದ್ಧಕೆ ಬರೆ | ಶಿರವ ಕತ್ತರಿಸಿದ ಸ್ಕಂದ 2 ನಾಸ ಪಾವಂಜೆಯೊಳ್ನಿಂದ 3
--------------
ಬೆಳ್ಳೆ ದಾಸಪ್ಪಯ್ಯ
ಗೋಪೀಮಾನ ರಂಜನ ಶ್ರೀಪತಿ ಕರುಣಾಳು ವ್ಯಾಪಿಸಿಕೊಂಡಿಹ ಮಾಮಕ ತಾಪವ ವೋಡಿಸು ಸುಲಭದಿ ಪ. ಸೌಂದರ್ಯಾಮೃತ ಸಾರಾನಂದಾತ್ಮಕ ದೇಹ ವೃಂದಾರಕ ಗಣ ನಯನಾ ನಂದನ ನಿಖಿಳಾತ್ಮಾತ್ರಯ ನಿತ್ಯಾವ್ಯಯ ಸತ್ಯಾವರ ಭಕ್ತಾಸ್ಪದ ಸುಮುಖ 1 ಸುಭಗಾಂಬುದನಿಭ ಗೋವರ ಋಭುಗಣನುತ ಚರಣಾ ಇಭರಾಟ್ಕøತ ಕರುಣಾಖಿಳ ವಿಭವಾಶ್ರಯ ತರುಣಿಗಣ ಶುಭ ಸಂಚಯ ಕರುಣಾ ನಿಜಭರಣಾದೃತ ಕರಣಾ 2 ಶೃಂಗಾರ ವಿಲಾಸಿನಿಜಾಪಾಂಗಾಹೃತ ಗೋಪಕತ ಸ್ವಂಗೀಕೃತ ಪ್ರೇಮಭವಾಲಿಂಗಿತ ಶುಭಮೂರ್ತಿ ಅಂಗಜಜನಕಾದ್ಭುತ ಸಾರಂಗ ಮಮತ ಶೇಷಗಿರಿ ಶೃಂಗಾಧಿಷ್ಟಿತ ಕರುಣಾಪಾಂಗವ ದಯಮಾಡೆನುತಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಗೋವಿಂದ ಗೋವಿಂದ ಕೃಷ್ಣ ಹರಿ ಪ ಗೋವಿಂದ ಮುಕುಂದ ಗೋಪಾಲಕೃಷ್ಣ ಅ.ಪ ಕಡೆಗಣ್ಣಿಲಿಂದೊಮ್ಮೆ ನೋಡೋ ನಿ-ನ್ನಡಿಗೆರಗುವೆನೋ ನೀ ದಯಮಾಡೋಬಿಡದೆನ್ನ ನಿನ್ನವರೊಳು ಕೂಡೋ ಎ-ನ್ನೊಡೆಯ ನಿತ್ಯಾನಂದ ನೀ ನಲಿದಾಡೋ 1 ಮಕ್ಕಳಿಗೊಡೆಯ ನೀನಾಗಿ ಹಸುಮಕ್ಕಳ ಕೂಡೆ ನೀನಾಡ ಹೋಗಿಸಿಕ್ಕದೆ ಬಹು ದಿನಕಾಗಿ ದಿಂಧಿ-ಮಿಕ್ಕೆಂದು ಕುಣಿಸುವೆ ಬಾ ಚೆನ್ನಾಗಿ2 ಹೃದಯ ಕಮಲದೊಳಗೆನ್ನ ನಿನ್ನಪದಕಮಲವನೀ ದಯೆಗೈಯೊ ಮುನ್ನಚದುರಕುಣಿಯೊ ಚೆಲ್ವರನ್ನ ವಿ-ಬುಧರೊಡೆಯನೆ ನಿತ್ಯಾನಂದ ಕೃಷ್ಣ 3
--------------
ವ್ಯಾಸರಾಯರು
ಗೋವಿಂದೋ ನಾರಾಯಣ ಗೋವಿಂದೋ ನಾರಾಯಣ ಪ ವೇದಗಳು ಕದ್ದೊಯ್ದು ದೈತ್ಯ ಪಯೋಧಿಯೊಳಗಿಡಲು ಮತ್ಸ್ಯ ರೂಪದೊಳಂದು ವೇದಗಳ ತಂದನಮ್ಮ 1 ಬೆಟ್ಟವು ಮುಳುಗು ಸಮಯದಿ ನಮ್ಮರಂಗ ಹುಡಿಗಟ್ಟಿ ಸುರರರಕ್ಷಿಸಿದನಮ್ಮ 2 ಮಡಿದೊಯ್ಯಲು ಕ್ರೋಡತನ ತಾಳ್ದವನ ಛೇದಿಸಿ ದವಡೆಯೊಳ- ವನಿಯನೆತ್ತಿದನಮ್ಮ 3 ಕಶ್ಯಪನ ಸಿಗಿದನಮ್ಮ ಕೀರ್ತಿಯ ಪಡೆದನಮ್ಮ 4 ದಾನವ ಬೇಡಿದನು ಬಲಿಯಕೊಂದ ನಮ್ಮ 5 ನಿತ್ಯಾತ್ಮಕನಾಗಿ ಮೆರೆದ ನಮ್ಮ 6 ವಾರಿಧಿಯನು ಬಂಧಿಸಿದನಮ್ಮ ಮೀರಿದ ರಕ್ಕಸನಗಳ ನಿಳುಹಿ ನಾರಿ ಸೀತೆಯ ತಂದನಮ್ಮ 7 ಕಂಸನನು ಕೊಂದನಮ್ಮ ಗೋವುಗಳನು ಕಾಯ್ದನಮ್ಮ 8 ಬೌದ್ಧರೂಸವತಾಳ್ದನಮ್ಮ ಕೀರ್ತಿಯ ಪಡೆದ ನಮ್ಮ 9 ತುರುಗವ ನೇರುತ ಬಂದನಮ್ಮ ಕರುಣದಿಂದಲಿ ಕಾಯ್ದನಮ್ಮ 10 ಶ್ರೀ ಕೃಷ್ಣ ಮುಕುಂದನಮ್ಮ 11
--------------
ಕವಿ ಪರಮದೇವದಾಸರು
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚಾರು ಹಸ್ತಾಯ 1ಹೃದಯಶೋಭಿತ ಮಹಾ ಕೌಸ್ತುಭಾಭರಣಾಯವಿಧಿಜನಕ ನಾಭಿಪಂಕಜ ಭಾಸುರಾಯಸದಮಲಾಯತ ಕಾಂಚಿದಾಮಯುತ ವಸನಾಯಬುಧಜನಮನೋವೇದ್ಯ ಪಾದಪದ್ಮಾಯ 2ಲಕ್ಷ್ಮೀಕಳತ್ರಾಯ ಸೂಕ್ಷ್ಮಸ್ವರೂಪಾಯಕುಕ್ಷಿಗತಭುವನ ಪರಿಪಾಲಕಾಯಪಕ್ಷೀಂದ್ರಕಂಧರಾರೂಢಾಯ ದುಷ್ಟಜನಶಿಕ್ಷಾಸಮರ್ಥಾಯ ಸಾಕ್ಷಿ ಚೈತನ್ಯಾಯ 3ವಿಶ್ವಸ್ವರೂಪಾಯ ವಿಶ್ವತರು ಮೂಲಾಯವಿಶ್ವಗುಣ ಸಂಹಾರಕಾರಣಾಯವಿಶ್ವನಾಟಕಸೂತ್ರಧಾರಾಯ ನಿತ್ಯಾಯವಿಶ್ವಕೃತ ಸುಕೃತದುಷ್ಕøತ ಲೇಪರಹಿತಾಯ 4ಧರಣಿಕಮಲಾಲಯಾಶ್ರಿತ ದಿವ್ಯ ಪಾಶ್ರ್ವಾಯಸುರಮುನಿ ಸ್ತುತಿ ಘೋಷಪೂರಿತಾಯಪರಮಪಾವನಪುಣ್ಯ ಶೇಷಾದ್ರಿನಿಲಯಾಯಸ್ಮರಜನಕ ಸುರಶಿಖಾಮಣಿ ವೆಂಕಟೇಶಾಯ 5ಓಂ ಅನಘಾಯ ನಮಃಕಂ||ಗಣಪತಿ ನಿನ್ನಾಗ್ನೇಯದಲಿನ ತಾ ನೈರುತ್ಯದೆಶೆಯೊಳಂಬಿಕೆಮರುತನೊಳನುಪಮ ಶಂಕರನೀಶಾನ್ಯನೋಳರ್ಚಿತರಾರೈಯ್ಯ ತಿರುಪತಿಯೊಡೆಯಾನೀನೇ ಗಣಪತಿ ಸೂರ್ಯನುನೀನೇ ಶಿವ ನಿನ್ನ ಶಕ್ತಿ ದೇವಿಯು ನಾನೂನೀನಾಗಿ ನಿನ್ನ ಭಜಿಸಿದೆನೀ ನಿರ್ಣಯ ನಿನ್ನ ವಚನ ವೆಂಕಟರಮಣಾ
--------------
ತಿಮ್ಮಪ್ಪದಾಸರು
ಜಗತ್ಪಾಲಾ ಸದ್ಗುಣಶೀಲಾ ರಮಾಲೋಲಾ ಪ ನಿತ್ಯ ವಿಮಲಾ ಬಹುಗುಣ ಶೀಲಾ ಪಾಹಿ ಕೃಪಾಲಾ1 ನಿತ್ಯಾನಂದಾ ದೇವಕಿಕಂದಾ ಕಂಸನ ಕೊಂದಾ ಬಾಲ ಗೋವಿಂದ ನೀ ದಯದಿಂದಾ ಪಾಹಿ ಮುಕುಂದಾ 2 ಅಮರಾಧೀಶಾ ಅಸುರನಾಶಾ ಪರಮ ಪ್ರಕಾಶಾ ಗೋಕುಲವಾಸಾ ಭಕ್ತಪೋಷಾ ಶ್ರೀಹನುಮೇಶವಿಠಲ 3
--------------
ಹನುಮೇಶವಿಠಲ
ಜಯ ಜಯ ಮಂಗಳಜಯ ಮಂಗಳ ಶುದ್ಧಾದೈತನಿಗೆ ಪ ಅಗಣಿತ ಮಹಿಮಗೆ ಅಕ್ಷಯರೂಪಗೆಅಖಂಡ ಸಹಜಾನಂದನಿಗೆಝಗಿ ಝಗಿತಾತ್ಮಗೆ ಝಳುಕಿಸಿ ಕರ್ಣದಿಝಣನಾದವ ಕೇಳ್ವನಿಗೆಸೊಗಯಿಸಿ ಚಂದ್ರನ ಶತಕೋಟಿಯಪ್ರಭೆ ಸಾರವ ಸವಿಸವಿದುಣ್ಣುವಗೆಬಗೆ ಆನಂದದಿ ಸುಖಿಸುವ ದೇವಗೆಭಾಸ್ಕರ ತೇಜಃಪುಂಜನಿಗೆ1 ನಿತ್ಯಾನಂದಗೆ ನಿರ್ಮಲರೂಪಗೆನಿಶ್ಚಲ ಪರಬ್ರಹ್ಮಾತ್ಮನಿಗೆನಿತ್ಯಶುದ್ಧಗೆ ನಿಜನಿರ್ಮಾಯಗೆನಿಜಬೋಧ ಜ್ಞಾನೈಕ್ಯನಿಗೆಪ್ರತ್ಯಗಾತ್ಮಗೆ ಪೂರ್ಣಬ್ರಹ್ಮನಿಗೆಪರಮ ಪರತರ ಪಂಡಿತಗೆನಿತ್ಯತೃಪ್ತಗೆ ನಿಗಮಾಗಮನಿಗೆನಿಶ್ಚಿಂತಾತ್ಮ ನಿಸ್ಪøಹಗೆ 2 ಕೈಯಲಿ ಪಿಡಿದಿಹ ಜಪಮಾಲೆಯಸರ ಕರ್ಣಕುಂಡಲವಿಟ್ಟಿಹಗೆಮೈಯೊಳು ಪೊದ್ಹಿಹ ಕಾಷಾಯಂಬರಮಿರುಪಿನ ಕೌಪೀನವುಟ್ಟಿಹಗೆಮೈಯೊಲೆದಾಡುವ ಸ್ವಾತ್ಮಾನಂದದಿನಲಿವ ಸದ್ಗುಣ ಶಾಂತನಿಗೆಮೈಯನೆ ಸದ್ಗತಿ ಭಕ್ತರಿಗೀಯುವವ್ಯಾಪಿತ ಜೀವನ್ಮುಕ್ತನಿಗೆ3 ಆರವಸ್ಥೆಯ ಧರಿಸಿಯೆ ಜಗದಲಿಅನಂತರೂಪ ತಾನಾಗಿಹಗೆಮೀರಿಯೆ ಸದ್ಗುಣ ನಿರ್ಗುಣ ರೂಪವಮೆರೆದಿಹ ಮುಮುಕ್ಷಾಂಗನಿಗೆತೋರುವ ತ್ವಂಪದ ತತ್ತ್ವಮಸಿಪದತೋರಿ ವಿರಾಜಿಪ ತುಷ್ಟನಿಗೆಧೀರೋದ್ಧಾರಗೆ ದೀನರನಾಥಗೆದೃಶ್ಯಾದೃಶ್ಯ ವಿದೂರನಿಗೆ 4 ನಿರುಪಮ ನಿರಮಯ ನಿಜ ನಿರ್ಲಿಪ್ತಗೆನಿರ್ಭಯ ನಿರ್ವಿಕಲ್ಪನಿಗೆಪರಮಪುರುಷಗೆ ನಿಗಮೋದರನಿಗೆಪರಮಾರೂಢಾ ಮಾರ್ಗನಿಗೆಗುರುಚಿದಾನಂದ ಅವಧೂತಾತ್ಮಗೆಗುಣನಿಧಿ ತುರಿಯಾತೀತನಿಗೆಸ್ಥಿರಸಿದ್ಧ ಪರ್ವತದಾಸ ಶ್ರೀಪುರುಷಗೆಬಗಳಾ ಶ್ರೀಗುರು ರೂಪನಿಗೆ 5
--------------
ಚಿದಾನಂದ ಅವಧೂತರು
ಜಯ ಜಯ ಶ್ರೀಹರಿಪ್ರಿಯೆ ಮಹಾ- ಭಯಹರೆ ಜಗದಾಶ್ರಯೆ ಲಯವರ್ಜಿತ ನಿತ್ಯಾತ್ಮೆ ಚಿನ್ಮಯೆ ಜಯಶೀಲೆ ನಿರಾಮಯೆ 1 ನಿತ್ಯಮುಕ್ತಿ ನಿರ್ವಿಕಾರೆ ನಿಜ- ಭೃತ್ಯನಿಚಯ ಮಂದಾರೆ ಪ್ರತ್ಯಗಾತ್ಮ ಹರಿಭಕ್ತಿರಸಪೂರೆ ಸತ್ವಾದಿಗುಣವಿದೂರೆ 2 ಲಕ್ಷ್ಮೀನಾರಾಯಣಿ ಹರಿ- ವಕ್ಷಸ್ಥಲವಾಸಿನಿ ಅಕ್ಷರರೂಪಿಣಿ ಬ್ರಹ್ಮಾಂಡಜನನಿ ಸುಕ್ಷೇಮಪ್ರದಾಯಿನಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯದೇವ ಜಯದೇವ ಜಯ ಚಿದಾನಂದಜಯ ಜಯತು ಜಯ ಜಯತು ಜಯ ನಿತ್ಯಾನಂದ ಪ ದೃಶ್ಯಾ ದೃಶ್ಯವಿದೂರ ದೂರ ಪರತತ್ವಾಮಿಕ್ಕು ಮೀರಿಹ ತೇಜ ತೇಜ ಮಹತ್ವಾಪೊಕ್ಕು ನೋಡಿಯೆ ಕಂಡು ನಿನ್ನ ನಿಜತ್ವನಕ್ಕು ನಿಜದಲಿ ಮಾಳ್ವೆ ಪಂಚೋಪಚಾರತ್ವ 1 ತಾನೆ ತಾನಾದ ಸುವಸ್ತು ನಿರ್ಲೇಪಧ್ಯಾನ ಮೌನ ಸಮಾಧಿಗೆ ತೋರ್ವರೂಪಏನ ಬಣ್ಣಿಸುವೆನು ಈ ಜಗವ್ಯಾಪಾನಾನರ್ಪಿಸುವೆ ನಿನಗೆ ಗಂಧಾನುಲೇಪ 2 ದುರಿತ ಕುಠಾರ ನೀನೆನಿಪೆಭರ್ಗಾ ಶ್ರೀವತ್ಸ ವೀಥಿಗಳ ರಕ್ಷಿಸುವೆಸರ್ಗಾದಿ ಮಹಾಪುಷ್ಪ ನಿನಗೆ ನಾನರ್ಪಿಸುವೆ3 ವಾಸನಕ್ಷಯದ ನಿರ್ವಾಸನ ಸ್ಪೂರ್ತಿಭಾಸಮಾನದಿ ತೋರುತಿದೆ ನಿನ್ನ ವಾರ್ತೆಈಶ ತಾಪಸರುಗಳು ನಿನ್ನ ಮೂರ್ತಿದೇಶಿ ಕೋತ್ತಮ ನಿನಗರ್ಪಿಸುವೆ ಧೂಪಾರತಿ4 ವಿಶ್ವ ವಿಶ್ವ ಸೂತ್ರ ವಿಖ್ಯಾತವಿಶ್ವ ಪೂರಿತ ತಂತ್ರ ವಿಶ್ವಾತೀತವಿಶ್ವ ಜ್ಯೋತಿಯನರ್ಪಿಸುವೆ ಗುರುನಾಥ 5 ನಿತ್ಯ ಸಂತುಷ್ಟ ಶಿರೋಭಾಗಅತ್ಯಂತ ಆನಂದವಹ ಸದಾಭೋಗಪ್ರತ್ಯಗಾತುಮತರ ಪುಷ್ಪಪರಾಗಅರ್ಥಿಯಲಿ ಅರ್ಪಿಸುವೆ ನೈವೇದ್ಯ ನಾನೀಗ6 ಇಂತುಪಚಾರಪಂಚದ ಪೂಜೆಯನೀಗಅಂತರಂಗದಿ ಚಿದಾನಂದನಿಗೆ ಈಗ ಸಂತಸದಿಂದ ನಾ ಮಾಡುತಲಾಗಎಂತು ಎನಲಿ ತಾನೇ ತಾನಾದ ಬೇಗ7
--------------
ಚಿದಾನಂದ ಅವಧೂತರು