ಒಟ್ಟು 107 ಕಡೆಗಳಲ್ಲಿ , 47 ದಾಸರು , 87 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸು ಮರೆಯದೆನ್ನ ಪಾಲ ತ್ರಿಜಗಮೋಹ ಮಾಲಕೌಸ್ತುಭ ಸತ್ಯಭಾಮಾ ಲೋಲ ಭಕ್ತಜನರ ಪ್ರೇಮ ಕಾಲಕಾಲದಿ ನಿಮ್ಮ ಭಜನಲೋಲಜನರೊಳಿರಿಸಿ ಎನ್ನ ಬಾಲನೆಂದು ಕರುಣದಾಳು ಕಾಳರಕ್ಕಸಕುಲಸಂಹಾರ ಪ ವಾರಿಧಿಯೊಳು ಮುಳುಗಿದ ವೇದಗಳ ತಂದು ವಾರಿಜಾಸನಗೊಪ್ಪಿಸಿದಿ ಸಾಧುಗಳ ಬಂಧು ವಾರಿಧಿಯೊಳು ವಾರಿಧಿಯ ಕಡೆದಿ ವಾರಿಧಿಯೊಳು ವಾಸನಾದಿ ವಾರಿಧಿಸುತೆಪತಿ ನೀನಾದಿ ವಾರಿಧಿಯನು ಬಂಧಿಸಿ ಮತ್ತೆ ವಾರಿಧಿಯ ಮಧ್ಯದ ಪುರವ ಸೂರೆಗೈದಾಪಾರಮಹಿಮ ಘೋರತಾಪದಿ ಬಿಡದೆ ದೇವ1 ಮಾಯಾಜಗವ ತುಂಬಿದಿ ಮಹರಮಣ ಹರಿಯೆ ಮಾಯದ ಮರುಣುಣಿಸಿದಿ ವೈಕುಂಠಪತಿಯೆ ಮಾಯೆಗೆ ಮಾಯೆಯೆನಿಸಿದಿ ಮಾಯೆಹರನಾದಿ ಮಾಯದಿಂ ಬಲಿಯನ್ನು ತುಳಿದಿ ಕಶ್ಯಪನ ಅಳಿದಿ ಮಾಯದ್ಹಿರಣ್ಯಕನ ಸೀಳಿದಿ ಮಾಯದಿಂ ಮಾಯೆಮೂಗು ಕುಯ್ಸಿದಿ ಮಾಯಮೃಗವನು ಮಾಯದಿಂ ಕೊಂದಿ ಮಾಯದೆನ್ನ ನೂಕದೆ ದೇವ 2 ಕಪಟಕೋಟಿಗಳನ್ನಳಿದಿ ಚಪಲಸುರಪನ ಕಪಟಗರುವವ ಮುರಿದಿ ಲಕುಮಿರಮಣ ಕಪಟನಾಟಕ ನೆನಿಸಿದಿ ಕಪಟಹರನಾದಿ ಕಪಟ ಅಸುವ ಸೆಳೆದಿ ಕಪಟ ಕಂಸನ ಶಿರವಮೆಟ್ಟಿದಿ ಕಪಟಿಗಳ ಮಹ ಕಪಟದಿಂ ಕೊಂದಿ ಶ್ರೀರಾಮ3
--------------
ರಾಮದಾಸರು
ಪಾವನೀ ಆವಹಿ ಮಾಂ ಪ ಪಾವನಿ ಪಾತಕಾರಣ್ಯ ಮಹಾ ಪಾವಕÀ ನೀನಾದ್ಯೊ ಘನ್ನ ಆಹಾ ಆವಕಾಲದಲ್ಲಿ ಭಾವಜಜನಕನ ಸೇವೆಯೊಳಿರುವಂಥ ಭಾವ ಪಾಲಿಸೊ ದೇವ ಅ.ಪ ಪ್ರಾಣಾದಿ ಪಂಚರೂಪಕನೆ ಸುರ ಗಣ ಕರಾರ್ಚಿತ ಪಾದಯುಗನೆ ಗುಣ ಗಣನಿಧಿ ಬಾರತೀಧವನೇ ಜಗ ತ್ರಾಣ ಕಾರಣನೆ ಮಾರುತನೇ ಆಹಾ ಚಾರು ಚ ರಣ ವಂದಿಪೆ ಜಗತ್ಕಾರಣಕರ್ತನೇ 1 ಖದ್ಯೋತ ಶತ ನಿಭ ಚರಣಾ ಅನಾದ್ಯ ಹರಣ ಸದ್ಯ ವಿದ್ಯೋತ ವೇದಾಂತಾಭರಣಾ ಅನ ವಧ್ಯ ಸ್ವಭಕ್ತಾಂತಃ ಕರಣಾ ಆಹಾ ವಿದ್ಯಾರಮಣ ನೀನೆ ಸದ್ಯೋಜಾತಗೆ ಸು ವಿದ್ಯಾ ಪೇಳಿದ್ಯೋ ಪ್ರದ್ಯುಮ್ನನ ತೋರಿಸೋ 2 ಶ್ರೀನಾಥನಿಗೆ ಪ್ರತೀಕಾ ಬಾಲ ಭಾನುಕೋಟಿ ಪ್ರಕಾಶಾ ಏನು ಕರುಣಾಳೊ ಭಕ್ತಾಭಿsಲಾಷಾ ಅನು ಸಾರದಿ ಪೂರ್ತಿಪ ಈಶಾ ಆಹಾ ಹನುಮದಾದಿರೂಪ ಘನವಾಗಿ ಧರಿಸಿ ನೀ ವನಧಿ ಲಂಘಿಸಿ ಹರಿ ವನಿತೆಯ ತಂದಿತೆÀ್ತ 3 ಸೂತ್ರನಾಮಕ ಶುಭಗಾತ್ರಾ ಚಿತ್ರ ಚಂiÀರ್i ಪಿತಾಮಹಪುತ್ರಾ ಗೋತ್ರ ಧರಮುಖ ದ್ಯು ಸ್ವಕÀಲತ್ರಾ ಮಿತ್ರ ತಾಡನ ಹರ್ತ ಅರ್ಥಗಾತ್ರಾ ಆಹಾ ಸುತ್ರಾಮ ಮುಖ ತ್ರಿನೇತ್ರಾಂತ ಸುರಕೃತ ಸ್ತೋತ್ರ ಪದಾಂಬುಜ ಮದಂತ್ರದಿ ನಿಲಿಸಯ್ಯಾ 4 ಘೋಟ ಖೇಟ ಕಂಠೀರವ ವದನಾ ಭವ ಕಾಟ ತಪ್ಪಿಸಿ ಪೊರಿ ಎನ್ನಾ ಕಿಟ ಮ ರ್ಕಟ ರೂಪನೆ ನಿನ್ನಾ ಭಕ್ತ ಕೋಟಿಯೊಳಗೆ ಸೇರಿಸೆನ್ನಾ ಆಹಾ ದಿಟ್ಟ ಮಹಿಮ ಗುರು ಜಗನ್ನಾಥ ವಿಠಲನ್ನ ಮುಟ್ಟ ಭಜಿಪ ದಿವ್ಯ ದÀೃಷ್ಟಿಯ ಪಾಲಿಸೋ 5
--------------
ಗುರುಜಗನ್ನಾಥದಾಸರು
ಪುರಂದರ ದಾಸರಾಯ ಪ ದಾಸರಾಯ ಪ್ರತಿವಾಸರದಲಿ ಶ್ರೀನಿ ವಾಸನ್ನ ತೋರೋ ದಯಾಸಾಂದ್ರ ಅ.ಪ. ವರದನಾಮಕ ಭೂಸುರನ ಮಡದಿ ಬ ಸಿರಲಿ ಜನಿಸಿ ಬಂದು ಮೆರೆದೆ ಧರಣಿಯೊಳು 1 ಕುಲಿಶಧರಾಹ್ವಯ ಪೊಳಲೊಳು ಮಡದಿ ಮ ಕ್ಕಳ ಕೂಡಿ ಸುಖದಿ ಕೆಲ ಕಾಲದಲಿದ್ಯೊ 2 ವ್ಯಾಸರಾಯರಲಿ ಭಾಸುರ ಮಂತ್ರೋ ಪ ದೇಶವ ಕೊಂಡು ರಮೇಶನ ಒಲಿಸಿದ್ಯೊ 3 ವಾಹನ ವಸ್ತುಗಳನೆಲ್ಲ ತೃಣಕೆ ಬಗೆದು ಕೃಷ್ಣಾರ್ಪಣವೆಂದೆ ಬುಧರಿಗೆ 4 ಕೃತಿ ಪೇಳಿ ಆ ಪ್ರಾಕೃತ ಹರಿಯಿಂದ ಸ್ವೀಕೃತ ನೀನಾದ್ಯೊ 5 ಮೂರ್ತಿ ಮಹಿಮೆಗಳ ಕೀರ್ತಿಸಿ ಜಗದಿ ಕೃತಾರ್ಥನೆಂದೆನಿಸಿದೆ6 ವನಧಿ ಪೋತನೆನಿಪ ಜಗ ನ್ನಾಥ ವಿಠ್ಠಲನ ಸುಪ್ರೀತಿಯಿಂದೊಲಿಸಿದೆ 7
--------------
ಜಗನ್ನಾಥದಾಸರು
ಪ್ರಣವ ಪ್ರತಿಪಾದ್ಯ ಪ್ರಹ್ಲಾದವರದಾ ಪ ಪ್ರಣತಕಾಮದನೆ ಪ್ರಾರ್ಥಿಸುವೆ ಪ್ರಭುವೆಂದು ಅ.ಪ. ಸಕಲ ಜೀವ ಜಡಾತ್ಮಕ ಜಗತ್ತಿನೊಳಗಿದ್ದು ಅಕಳಂಕ ನಾಮರೂಪದಲಿ ಕರೆಸಿ ಪ್ರಕಟನಾಗದಲೆ ಮಾಡಿಸಿ ಸರ್ವ ವ್ಯಾಪಾರ ಸುಖ ದುಃಖಗಳಿಗೆ ಗುರಿಮಾಡಿ ಎಮ್ಮನು ನೋಳ್ಪೆ 1 ಏನೆಂಬೆ ನಿನ್ನ ಮಹಿಮೆಗೆ ರಮಾಪತಿ ನಿನ್ನ ಸುರರು ದೀನರುದ್ಧರಿಸುವುದು ದಯದಿಂದ ನಿರುತಾ 2 ಸರ್ವ ಸ್ವತಂತ್ರ ನೀನಾದ ಕಾರಣ ಬ್ರಹ್ಮ ಶರ್ವಾದಿಸುರರು ಪ್ರಾರ್ಥಿಸುತಿಪ್ಪರು ದುರ್ವಿಭಾವ್ಯನೆ ಸುರಗಮೃತ ಪಾನವ ಗೈಸಿ ಗರ್ವಿಸಿದ ದಾನವರ ಗಣವ ಸಂಹರಿಪೆ 3 ಬುಧ್ಯಾದಿ ಇಂದ್ರಿಯಗಳೊಳಗೆ ತತ್ಪತಿಗಳೊಳ ಗಿದ್ದು ಬಹುವಿಧ ಚೇಷ್ಟೆಗಳನೆ ಮಾಡಿ ಬದ್ಧರನ ಮಾಳ್ಪೆ ಭವದೊಳಗೆ ಜೀವರನ ಅನಿ ರುದ್ಧರೆಂದೆನಿಪೆ ಎಲ್ಲರೊಳು ವ್ಯಾಪಕನಾಗಿ 4 ದಾಶರಥಿ ನೀನೆ ಗತಿಯೆಂದು ಮೊರೆಹೊಕ್ಕೆ ವಿ ಭೀಷಣಗೆ ಲಂಕಾಧಿಪತ್ಯವಿತ್ತೇ ವಾಸವಾನುಜ ಜಗನ್ನಾಥ ವಿಠ್ಠಲ ಭಕ್ತ ಪೋಷಕನು ನೀನಹುದು ಕಲ್ಪ ಕಲ್ಪಗಳಲ್ಲಿ 5
--------------
ಜಗನ್ನಾಥದಾಸರು
ಪ್ರಾಣದೇವಾ ಕಾವುದೆಮ್ಮ ಜೀವೋತ್ತಮಾಪ ಜಾಣರೊಳು ನೀನು ಜಾಣತ್ರಾಣಿಕರೊಳು ನೀನು ತ್ರಾಣಕಾಣೆ ನಿನಗೆ ಸರಿಸಮಾನಕ್ಷೋಣಿಯಲ್ಲಿ ಹನುಮಾನ 1 ಎಲ್ಲ ಗುರುಗಳಿಂಗೆ ಜಗದಿಬಲ್ಲಿದ ಗುರುವು ನೀನಾದಿಎಲ್ಲರನುದ್ಧರಿಪ ಮನದಿಯಲ್ಲಗುರೇಶನಾಗಿ ಬಂದಿ 2 ಸ್ಮರಿಪೆನೇಳುಪುರಗಳೊಡೆಯಕರುಣಿಸಯ್ಯ ಮುಗಿವೆ ಕೈಯ್ಯಸಿರಿಗದುಗಿನ ವೀರ ನಾರಾಯಣನದೂತರೊಳಗೆ ಪ್ರಿಯಾ 3
--------------
ವೀರನಾರಾಯಣ
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬಾಗಿಲು ತೆಗೆಯಲೆ ಭಾಮತಿ ರನ್ನಳೆ ಈಗ ನಾ ಬಂದೆನು ಇಂದುಮುಖಿ ಪ ನಾಗವೇಣಿಯೆ ನಿನ್ನೀಗಲೆ ನೋಡಲು ಬೇಗನೆ ಬಂದೆನು ತೆಗಿ ಕದವಾ ಅ.ಪ ಯಾರದು ಈ ಸಮರಾತ್ರಿಯ ವೇಳದಿ ಬಾಗಿಲು ತೆಗೆ ಎಂದೆನುತಿಹರು ತೋರದು ಎನಗೊಂದಾಲೋಚನೆ ನಿಮ್ಮ ನಾಮವು ಪೇಳಲು ತೆಗೆಯುವೆನು 1 ನೀಲವೇಣಿಯೆ ಕೇಳೆನ್ನ ಮಾತನು ಬಹಳ ಚಿಂತೆಯಾತಕೆ ಮನದಿ ನೀಲಕಂಠನೆಂದೆನ್ನನು ಕರೆವರು ಕೇಳು ಮನಸು ಚಂಚಲ ಬಿಟ್ಟು 2 ನೀಲಕಂಠನೆಂದರೆ ನೆನಪಾಯಿತು ನವಿಲಿನ ಮರಿ ಬಂದಿಹುದೆಂದು ನಾರಿಯರೆಲ್ಲರು ಹಾಸ್ಯವ ಮಾಳ್ಪರು ಸಾರುತ ವನಗಳ ಚರಿಸೆಂದು 3 ಬೆದರದೆ ತೆರೆ ಕದ ಸುದತಿಮಣಿಯೆ ನಾ ಬದಲೊಂದು ನಾಮವ ಪೇಳುವೆನು ಬುಧ ಜನರೆಲ್ಲರು ಭಕುತಿಲಿ ಸ್ಥಾಣು- ವೆನ್ನುತ ನಾಮವ ಕೊಂಡಾಡುವರು4 ಬೂಟಾಟಿಕೆ ಮಾತುಗಳನ್ನ ಏತಕೆ ಸಾಟಿಯಾರು ಜಗದೊಳಗಿನ್ನು ಮೋಟುಮರಕೆ ಸ್ಥಾಣುವೆನ್ನುತ ಕರೆವರು ಈ ಪೃಥ್ವಿಯ ಮೇಲಿನ ಜನರು 5 ಬಿಸುಜಮುಖಿಯೆ ಇನ್ನೊಂದು ಪೆಸರು ಕೇಳೆ ಪಶುಪತಿಯೆಂದು ಕರೆವರೆನ್ನ ವಸುಧೆಯ ಮೇಲಿನ ಪೆಸರುಗಳಿಗೆ ನೀ ಪ್ರತಿಯಾಗರ್ಥವ ಕಲ್ಪಿಸುವಿ 6 ವೃಷಭರಾಜ ನೀನಾದರೆ ಮುಂದಕೆ ಪಶುಗಳ ಮಂದೆಗೆ ತೆರಳುವದು ಕುಸುಮಗಂಧಿಯರ ಸದನದಿ ಕಾರ್ಯವು ವೃಷಭರಾಜಗಿಲ್ಲವು ಕೇಳೌ 7 ಶೀಲವಾಣಿಯೆ ಸುಶೀಲೆಯೆ ಎನ್ನಯ ವಾಣಿ ಕೇಳಿ ಕದವನು ತೆಗಿಯೆ ಪೇಳುವೆ ಮತ್ತೊಂದು ನಾಮವ ಎನ್ನನು ಶೂಲಿ ಎಂದು ಕರೆವರು ಜನರು 8 ಶೂಲಿಯಾದರೆ ನಿನ್ನ ಬಾಧೆಯ ಕಳೆಯಲು ಯಾರಿಗೆ ಸಾಧ್ಯವು ಜಗದೊಳಗೆ ನಾರಿಯರಿಗೆ ಹೇಳದೆ ಮುಂದಕೆ ನಡೆ ಶೂರರಾದ ವೈದ್ಯರ ಬಳಿಗೆ 9 ಕರಿಯ ಮುಖನ ಮಾತೆಯೆ ತಡಮಾಡದೆ ಕನಕಮಯದ ಕದ ತೆರೆ ಬೇಗ ಕಮಲನಾಭ ವಿಠ್ಠಲನನು ಪಾಡುತ ಶಿವನ ನಮಿಸಿ ತೆಗೆದಳು ಕದವ 10
--------------
ನಿಡಗುರುಕಿ ಜೀವೂಬಾಯಿ
ಬಾಗಿಲು ತೆರೆಯುವ ಹಾಡು ನಾರಿ ಶಿರೋಮಣಿ ವಾರಿಜ ಮುಖಿಯೆ ಗಂಭೀರಳೆ ಬಾಗಿಲು ತೆರೆಯೇ |ಗಂಭೀರಳೆ ಬಾಗಿಲ ತೆರೆಯೇ ಪ ಆರು ನಿನ್ನಯ ಪೆಸರೆನಗೆ ಪೇಳದಲೆ ದ್ವಾರವ ತೆಗೆಯೆನು ನಾನು |ನಾ ದ್ವಾರವ ತೆಗೆಯೆನು ನಾನು ಅ.ಪ. ನೀರೊಳು ಸಂಚರಿಸಿ ಕ್ರೂರ ತಮನ ಕೊಂದಧೀರ ಮತ್ಸ್ಯನು ಕಾಣೆ ನಾರೀ | ನಾಧೀರ ಮತ್ಸ್ಯನು ಕಾಣೆ ನಾರೀ ||ಧೀರ ಮತ್ಸ್ಯನು ನೀನಾದರೊಳಿತು ದೊಡ್ಡವಾರಿಧಿಯೊಳಗಿರು ಹೋಗಯ್ಯ | ದೊಡ್ಡವಾರಿಧಿಯೊಳಗಿರು ಹೋಗಯ್ಯ 1 ಶರಧಿ ಕೂರ್ಮ ಕೂರ್ಮ ಕಾಣೆ ||ಗಿರಿಯ ತಾಳಿದ ಕೂರ್ಮನಾದರೊಳಿತು | ದೊಡ್ಡಮಡುವಿನೊಳಗೆ ಇರು ಹೋಗಯ್ಯ | ದೊಡ್ಡಮಡುವಿನೊಳಗೆ ಇರು ಹೋಗಯ್ಯ2 ಧರೆಯ ಕದ್ದಸುರನ ದಾಡಿಯಿಂದಲಿ ಸೀಳ್ದವರಹ ಕಾಣೆಲೆ ವಾರಿಜಾಕ್ಷಿ | ನಾವರಹ ಕಾಣೆಲೆ ವಾರಿಜಾಕ್ಷೀ ||ವರಹ ನೀನಾದರೊಳಿತು ನಡೆ ನಡೆ | ದೊಡ್ಡವನಾಂತ್ರದೊಳಗಿರು ಹೋಗಯ್ಯ || ದೊಡ್ಡವನಾಂತರದೊಳಗಿರು ಹೋಗಯ್ಯ 3 ಮೃಗ ಮೃಗ ಮೃಗ ನೀನಾದರೊಳಿತು ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ | ದೊಡ್ಡಗಿರಿ ಶಿಖರದೊಳಗಿರು ಹೋಗಯ್ಯ 4 ಭೂಮಿ ಈರಡಿ ಮಾಡಿ ಬಲಿಯ ಪಾತಾಳಕಿಟ್ಟವಾಮನ ಕಾಣೇ ವಾರಿಜಾಕ್ಷೀ | ನಾವಾಮನ ಕಾಣೇ ವಾರಿಜಾಕ್ಷೀ ||ವಾಮನ ನೀನಾದರೊಳಿತು ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ | ನಿನ್ನಪ್ರೇಮ ಬಂದಲ್ಲಿರು ಹೋಗಯ್ಯ 5 ತಂದೆ ಆಜ್ಞೆಯ ಪೊತ್ತು ತಾಯಿ ಸೋದರನ್ನಕೊಂದವ ನಾನೇ ಕೋಮಲಾಂಗೀ | ನಾಕೊಂದವ ನಾನೇ ಕೋಮಲಾಂಗೀ ||ಕೊಂದವ ನೀನಾದರೊಳಿತು ಮುನಿವೃಂದದಲ್ಲಿ ಇರು ಹೋಗಯ್ಯಾ | ಮುನಿವೃಂದಾದಲ್ಲಿ ಇರು ಹೋಗಯ್ಯ 6 ಲಂಡ ರಾವಣನ ಶಿರವ ಚಂಡಾಡಿ ಸೀತೆ ತಂದ | ಪ್ರ-ಚಂಡ ವಿಕ್ರಮ ರಾಮ ಕಾಣೇ | ನಾ ಪ್ರ-ಚಂಡ ವಿಕ್ರಮ ರಾಮ ಕಾಣೇ ||ಪ್ರಚಂಡ ವಿಕ್ರಮನಾದರೊಳಿತು ಕೋತಿಹಿಂಡುಗಳೊಳಗಿರು ಹೋಗಯ್ಯ | ಕೋತಿಹಿಂಡುಗಳೊಳಗಿರು ಹೋಗಯ್ಯ 7 ಮಧುರಾಪುರದಿ ಪುಟ್ಟಿ ಮಾವ ಕಂಸನ ಕೊಂದಚದುರ ಕಾಣೆಲೆ ಶಾಮಲಾಂಗೀ | ನಾಚದುರ ಕಾಣಲೆ ಶಾಮಲಾಂಗೀ ||ಚದುರ ನೀನಾದರೊಳಿತು ನಡೆ ನಡೆ ಗೋಪೇ-ರಧರ ಚುಂಬಿಸುತಿರು ಹೋಗಯ್ಯ | ಗೋಪೇ-ರಧರ ಚುಂಬಿಸುತಿರು ಹೋಗಯ್ಯ 8 ಶುದ್ಧ ಖಳನು ಆಗಿ ವ್ರತವನಳಿದು ಬಂದಬೌದ್ಧ ಕಾಣಲೇ ಮಂದಗಮನೇ | ನಾಬೌದ್ಧ ಕಾಣಲೇ ಮಂದಗಮನೇ ||ಬೌದ್ಧನು ನೀನಾದರೊಳಿತು ನಡೆ ನಡೆ ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ | ನಿನ್ನಬುದ್ಧಿ ಬಂದಲ್ಲಿರು ಹೋಗಯ್ಯ 9 ತುರಗವನೇರಿ ಕಲಿಯ ಕಡಿದು ಶಾಂತನ ಸಹೋ-ದರಗೆ ರಾಜ್ಯವನಿತ್ತೆ ಕಾಣೇ | ಸಹೋ-ದರಗೆ ರಾಜ್ಯವನಿತ್ತೆ ಕಾಣೇ ||ಪರಮ ಪುರುಷನಹುದೋ ರಾಹುತರಿರುವಸ್ಥಳದಲ್ಲಿರು ಹೋಗಯ್ಯ | ನೀರಾಹುತರಿರುವ ಸ್ಥಳದಲ್ಲಿರು ಹೋಗಯ್ಯ 10 ಕನ್ಯಾಮಣಿಯೆ ಕೋಮಲೆಯೇ ಗುಣಪೂರ್ಣ ಮೋ-ಹನ್ನ ವಿಠಲ ರಾಯ ಕಾಣೆ | ನಾ ಮೋ-ಹನ್ನ ವಿಠಲ ರಾಯ ಕಾಣೆ ||ಎನ್ನ ಅಪರಾಧ ಕ್ಷಮಿಸಬೇಕು ಎನುತಲಿಚೆನ್ನಾಗಿ ಪಾದಕ್ಕೆರಗಿದಳು ದೇವಿ 11
--------------
ಮೋಹನದಾಸರು
ಬಿಸಜ ಕಾನಮಿಪೇ ಪ ವಾತಸುತನೆನ್ನಿಸುತ | ಸೀತೆ ರಮಣನ ಕಂಡುಸೀತೆ ವಾರ್ತೆಯ ನರುಹಿ | ಖ್ಯಾತ ನೀನಾದೇ |ಮಾತರಿಶ್ವನೆ ಹರಿಯ | ಪ್ರೀತಿ ನಿನ್ನೊಳಗೆಂತೋಪೋತ ಭಾವ ದೊಳಾಂತೆ | ಪ್ರೀತಿ ಅಪ್ಪಿಗೆಯಾ 1 ಉರ ರಕ್ತವನು | ಕುಡಿದಂತೆ ತೋರಿ ಜಗನಡುಗುವಂತೆಸಗಿವೆಯೊ | ಕಡುಗಲಿಯ ಭೀಮಾ 2 ಸನ್ಯಾಸದಾಶ್ರಮವ ಅ | ನ್ಯಾಯದಲಿ ಗೊಂಡುಶೂನ್ಯ ಮತ ತತ್ವ ಪ್ರ | ಚ್ಛನ್ನದಲಿ ಪೇಳ್ದಾಅನ್ಯಾಯ ಕಳೆವುದಕೆ | ಜನ್ಯನಾಗುತ ಮಧ್ವಚೆನ್ನ ಪೆಸರಲಿ ಪೇಳ್ದ | ಘನ್ನ ತತ್ವಗಳಾ 3 ಆರು ಕೋಣ್ಯು ಪರಿಯಾ | ಕಾರದಲಿ ವಲಯಾಮೂರು ಕೋಟಿಯ ಸಂಖ್ಯೆ | ವಾನರಾಕೃತಿ ಬದ್ಧವೂ |ಚಾರು ಯಂತ್ರದಿ ಸೌಮ್ಯ | ದಾಕಾರದಲಿ ಜಪದಹಾರ ಪಿಡಿಯುತ ವ್ಯಾಸ | ತೀರಥಿರಿಗ್ವೊಲವೇ 4 ವಕ್ರ ಮನವನು ತ್ಯಜಿಸಿ | ಚಕ್ರತೀರ್ಥದಿ ಮಿಂದುವಕ್ರ ಬಕರಿಪು ನಿನ್ನ | ಚೊಕ್ಕ ರೂಪವ ಸೇವಿಸೀಅಕ್ರೂರ ವರದ ಗುರು | ಗೋವಿಂದ ವಿಠ್ಠಲನಅಕ್ಕರದಿ ಭಜಿಸುವಗೆ | ಚಕ್ರಿಪುರ ವೀವೇ5
--------------
ಗುರುಗೋವಿಂದವಿಠಲರು
ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಮರೆಯಲಾರೆ ನಿನ್ನ ತೊರೆಯಲಾರೆ ಮರೆತು ತೊರೆದು ಜೀವಿಸಲಾರೆ ಕೃಷ್ಣಮುರಾರೆ ಪ ಹರಿಚರಣಂಗಳೆ ಶರಣೆನದಿದ್ದರೆ ನಾನಪರಾಧಿ ರಂಗ ಕರುಣವ ಬೀರದೆ ಮರೆ ನೀನಾದರೆ ನೀನಪರಾಧಿ 1 ಭಕ್ತಿ ವಿರಕ್ತಿಯ ಮಾರ್ಗವ ಬಿಟ್ಟರೆ ನಾನಪರಾಧಿ ರಂಗ ಯುಕ್ತಿಯೊಳೆನ್ನನು ಕತ್ತಲೆಯೊಳಗಿಡೆ ನೀನಪರಾಧಿ 2 ನೀನೇ ಗತಿಮತಿಯೆನಗೆನದಿದ್ದರೆ ನಾನಪರಾಧಿ ಎನ್ನಪರಾಧವ ಮನ್ನಿಸದಿದ್ದರೆ ನೀನಪರಾಧಿ 3 ಅಪರಾಧಗಳಿನ್ನಿಬ್ಬರಿಗೇತಕೋ ಕಮಲಾಂಗ ಸುಪಥವ ತೋರುವ ಜಾಣ್ಮೆಯು ನಿನ್ನದು ಮಾಂಗಿರಿರಂಗ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಲಗು ಮಲಗಮ್ಮ ತಾಯೆ ಶ್ರೀಹರಿಯ ಜಾಯೆ ಮಲಗು ದುಗ್ಧಾಬ್ಧಿನಿಲಯೆ ಸಾಗರನ ತನಯೆ ಜೋ ಜೋ ಪ ಇಂದಿರೆಯೆ ಹರಿ ನಿನ್ನ ಅಂದವನು ನೋಡಿ ಮಂದರಧರ ತನ ವಕ್ಷದಿ ಮಂದಿರವ ಮಾಡಿ ಚಂದದಿ ಮುದ್ದಿಪನು ಗೋವಿಂದ ನಲಿದಾಡಿ ಮಂದಸ್ಮಿತನಾಗಿ ತಾ ನಿಂದಿರುವ ನಿನ ಕೂಡಿ 1 ಮೂರುಕಣ್ಣ ಮೋಹಿಸಿದನೇನೆಂಬೆನಾಗ ಮಾರಮಣನು ಸ್ತ್ರೀ ವೇಷಧರಿಸಿದಾಗ ಆ ರಮೇಶ ಮರುಳಾದನಮ್ಮ ನಿನಗೀಗ ನೀರೆ ನೀ ಮಲಗು ನಿಶ್ಚಿಂತಳಾಗಿ ಬೇಗ 2 ಪನ್ನಗಾರಿಧ್ವಜಗೆ ಛತ್ರ ಚಾಮರವಾದಿ ಉನ್ನಂಥ ವಸ್ತ್ರ ಆಭರಣಗಳು ನೀನಾದಿ ಅನ್ನಪಾನಾದಿಗಳಿತ್ತು ತೃಪ್ತಿಪಡಿಪಳಾದಿ ನಿನ್ನಂತೆ ಸೇವಿಪರ್ಯಾರು ಮೂರು ಭುವನದಿ 3 ಏನು ಸುಕೃತಗೈದಿದ್ದೆ ನಾ ಕಾಣೆನಮ್ಮಾ ಜಾಣೆ ನಿನಗೆಣೆಯ ಕಾಣೆ ಜನನಿ ಕೇಳಮ್ಮಾ ತಾನೆ ತನ್ನಲ್ಲಿ ರಮಿಪನಲ್ಲವೇನಮ್ಮಾ ದಾನವಾಂತಕನು ನಿನ್ನ ಕೈಪಿಡಿದನಮ್ಮಾ 4 ಮಂಗಳಾಂಗಿಯೆ ನಿನಗೆ ಸರಿಸಮರ್ಯಾರಿಲ್ಲ ಭೃಂಗಕುಂತಳೆ ಕೈ ಜೋಡಿಪರು ಸುರರೆಲ್ಲ ಬಂಗಾರದ ಮಂಚವಣಿಯಾಗಿಹುದಲ್ಲ ರಂಗೇಶವಿಠಲ ತಾ ಪವಡಿಸಿರ್ಪನಲ್ಲ 5
--------------
ರಂಗೇಶವಿಠಲದಾಸರು
ಮುನಿಯು ನೀನಾದದ್ದು ಮನದೊಳು ನಾಬಲ್ಲೆಮುನಿ ಜನ ಮನ ಮಂದಿರಾ - ಸುರೇಂದ್ರಾ ಪ ಅನುಮಾನ ತೀರ್ಥರ ಮಾನ ಮೇಯದ ಸಾರಘನವಾಗಿ ತಿಳಿಸಿದುದಾರಾ - ಸುರೇಂದ್ರಾ ಅ.ಪ. ಗಜ ವೈರಿ ಮಧ್ಯದಭುಜಗ ವೇಣಿಯರ ಕೂಡೀ - ಸುರೇಂದ್ರಾ ||ಅಜನೀನೇ ಎನ್ನುತ | ಭುಜಿಸೆ ಅನ್ನವ ನೀಡಿಯಜನಾದಿಗಳ ಮಾಡಲೂ - ಸುರೇಂದ್ರಾ ||ಗಜ ವರದನು ಬಂದು | ಭುಜಿಸಲು ಅನ್ನವತ್ಯಜಿಸಿ ಬಂದೆಯೊ ಸುರಪುರವಾ - ಸುರೇಂದ್ರಾ 1 ವ್ರಜ || ಸುರರನೆಲ್ಲರ ಕಾಯ್ದಹರಿಯ ಮೊಗವ ನೋಡೆ ನಾಚುತಲೀ - ಸುರೇಂದ್ರಾ 2 ವಾಸುಕಿ | ಅಂದ ನೇಣನ ಮಾಡಿಮಂಥಿಸಿ ಶರಧಿಯನ್ನಾ - ಸುರೇಂದ್ರಾ ||ಅಂದು ನೀನಮೃತವ ನುಂಡ ಕಾರಣದಿಂದಇಂದಿಲ್ಲಿ ಸುರರಿಗುಣಿಸೆ ಬಂದ್ಯೋ - ಸುರೇಂದ್ರಾ 3 ಮಧ್ವ ಶಾಸ್ತ್ರವೆಂಬ | ದುಗ್ದಾಬ್ದಿಯನೆ ನೀನುಶ್ರದ್ಧೆಯಿಂದಲಿ ಮಥಿಸೇ - ಸುರೇಂದ್ರಾ ||ಉದುಭವಿಸಿದ ನ್ಯಾಯ | ಸುಧೆ ಎಂಬ ಅಮೃತವವಿದ್ವಜ್ಜನಕೆ ಉಣಿಸೇ - ಸುರೇಂದ್ರಾ ||ತ್ರಿದಶ ಲೋಕವ ತ್ಯಜಿಸಿ | ಉದಿಸಿದೆ ಧರೆಯೊಳುಸಾಧು ವೇಷವನ್ನೆ ಧರಿಸೀ - ಸುರೇಂದ್ರಾ 4 ನಾಕಪತಿಯೆ ನಿನ್ನಾ | ನೇಕ ಚರಿತೆಯಲ್ಲಿನಾಕೇಳಿ ಪೊಗಳಲಳವೇ - ಸುರೇಂದ್ರಾ ||ಲೋಕಾ ಲೋಕದೊಳು | ಟೀಕಾರ್ಯರೆಂಬವಾಕು ಕೇಳೀ ಬಲ್ಲೆನೋ - ಸುರೇಂದ್ರಾ ||ನಾಕಜ ಪಿತ ಗುರು ಗೋವಿಂದ ವಿಠಲನನೇಕ ಬಗೆಯಿಂದ ಸ್ತುತಿಸಿದೆಯೋ - ಸುರೇಂದ್ರಾ 5
--------------
ಗುರುಗೋವಿಂದವಿಠಲರು
ಮುರಹರ ಬಾರೋ ವನಮಾಲಾ ಚರಣವ ತೋರೋ ಗೋಪಾಲಾ ಪ ಮೊರೆಯ ಕೇಳಿದರೂ ಕರುಣೆಯು ಬರಲಿಲ್ಲ ಶರಣನ ಮರೆವುದು ತರವಲ್ಲಾ ಅ.ಪ ಶರನಿಧಿಗಳಿವೆ ಗಿರಿಯ ಧರಿಸಿದೆ ಧರಣಿಯನೆತ್ತಿದೆ ತರಳನ ಪೊರೆದೆ ವರವಟುವಾದೆ ಬುದ್ಧ ಕಲ್ಕಿ ನೀನಾದೆ 1 ನಿಗಮೋದ್ಧಾರಾ ನಗಧರ ಭೂವರಾ ಮೃಗಮುಖ ವಾಮನ ಪರಶುಧವಾ ಜಗಪತಿ ಮುರಳೀಲೋಲಾ ಪುರಹರಾ ಖಗವಾಹನ ಕಲ್ಕಿ ವಿವಿಧಾವತಾರಾ2 ಗಂಗೆಯ ಜನಕಾ ಶರಣರ ಕನಕಾ ಮಂಗಳದಾಯಕಾ ಅಸುರಾಂತಕಾ ತುಂಗವಿಕ್ರಮ ಶ್ರೀಮಾಂಗಿರಿನಾಯಕಾ ಅಂಗಜಜನಕಾ ಲೋಕಮೋಹಕಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೃಡ ನೀನಾದೆನಡುವೆ ಜಡನಾದೆನ್ನ ಮೃಡನ ಮಾಡಯ್ಯ 1ತನುವೆರಡರೊಳಗಿರುವ ತತ್ವ ಗಣವೆನಿಸುವದುತನುಗಣಕೆ ನೀ ಸ್ವಾ'ುಯಾಗಿರಲು ಬಳಿಕಜನರೆಲ್ಲ ನಿನ್ನಡಿಯ ತನು'ನಲಿ 'ಘ್ನಗಳಕೊನೆಗಂಡು ಮನದಭೀಷ್ಟವ ಪಡೆಯುತಿಹರು 2'ಘ್ನೇಶನೆಂಬೊಂದು ಪದಕೆ ವರ್ಣತ್ರಯವು'ಘ್ನವೆಂಬೆರಡು ವರ್ಣದಿ ಜ್ಞಾನವೊಂದು'ಘ್ನಹತಿಯದಕೀಶ 'ಘ್ನೇಶ ನೀನೆ ನಿರ್'ಘ್ನದಿಂ ಜ್ಞಾನವನು ಕೊನೆಗಾಣಿಸಯ್ಯ 3ಮೊದಲ ವರ್ಣವೆ ಸಾಕ್ಷಿಯದರ ಕಡೆಯದು ಮಾಯೆುದಕೊಡೆಯನೆನುತಿಹುದು ಮೂರನೆಯ ವರ್ಣಅದರಿಂದ ಕರಣಪ್ರೇರಕನೆಂಬ ಹದನಾಗಿವೊದಗಿದುದು 'ಘ್ನೇಶನೆಂಬ ನಿನ್ನ ನಾಮ 4ಪರಮಾತ್ಮ ನೀನೆಂದು ನೆರೆ ತಿಳಿದು ನಿನ್ನಡಿಗೆಎರಗಿದೆನು ವ್ಯವಹಾರ ದೆಸೆುಂದಲೀಗತಿರುಪತಿಯ ವೆಂಕಟನೆ ವರದ ಗಣಪತಿಯೆಂದುಮೆರೆಯುತಿಹೆ ರಾಮೇಶನಾಲಯಾವಾಸ 5
--------------
ತಿಮ್ಮಪ್ಪದಾಸರು