ಒಟ್ಟು 92 ಕಡೆಗಳಲ್ಲಿ , 47 ದಾಸರು , 86 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮ ಪಾಪಿಷ್ಠ ನಾನು ಪ ನರಹರಿಯೆ ನಿಮ್ಮ ನಾಮ ಸ್ಮರಣ ಮಾಡದಲೆ ನರಕಕ್ಕೆ ಗುರಿಯಾದೆನೋ ಹರಿಯೆ ಅ.ಪ. ಹೊಸಮನೆಯ ಕಂಡು ಬಲು ಹಸಿದು ಭೂಸುರರು ಬರೆ ಕೊಸರಿ ಹಾಕುತ ದಬ್ಬುತ ಶಶಿಮುಖಿಯೆ ಬಾರೆಂದು ಅಸಮಸದಿ ಬಣ್ಣಿಸಿ ವಶವಾಗಿ ಅವಳೊಲಿಸುತ ದಶಮಿ ಏಕಾದಶಿ ದ್ವಾದಶೀ ದಿನತ್ರಯದಿ ಅಶನವೆರಡ್ಹೊತ್ತುಣ್ಣುತ ಘಸಘಸನೆ ತಾಂಬೂಲ ಪಶುವಿನಂದದಿ ಮೆದ್ದು ಕುಸುಮ ಗಂಧಿಯ ರಮಿಸುತ ಸತತ 1 ಕೆರೆ ಭಾವಿ ದೇವಾಲಯವ ಕೆಡಿಸಿ ದಿವ್ಯ ಹಿರಿದಾಗಿ ಮನೆ ಕಟ್ಟದೆ ನೆರೆ ನಡೆವ ಮಾರ್ಗದೊಳು ಅರವಟ್ಟಗೆಗಳನ್ನು ಧರಧರದಿ ಬಿಚ್ಚಿ ತೆಗೆದೆ ಪರಮ ಸಂಭ್ರಮದಿಂದ ಅರಳಿಯಾ ಮರ ಕಡಿಸಿ ಕೊರೆಸಿ ಬಾಗಿಲು ಮಾಡಿದೆ ಏಕ ಮಂದಿರವ ಮುಗಿಸಿ ಹರುಷ ಚಿತ್ರವ ಬರೆಸಿ ಪರಿಪರಿಯ ಸುಖ ಸಾರಿದೇ ಮೆರೆದೆ 2 ಸಾಕಲ್ಯದಿಂದ ಸಾಲಿಗ್ರಾಮದ ಅಭಿಷೇಕ ಆಕಳ ಹಾಲಲಿ ಮಾಡದೆ ನಾಕೆಂಟು ನಾಯಿಗಳ ಸಾಕಿ ಮನೆಯೊಳು ಬದುಕ ಬೇಕೆಂದು ಹಾಲು ಹೊಯ್ದೆ ಕಾಕು ಬುದ್ಧಿಗಳಿಂದ ಗುಡಿ ಗುಡಿ ನಸಿ ಪುಡಿ ಹಾಕಿ ಭಂಗಿಯಾ ಸೇದಿದೆ ಲೋಕ ನಿಂದಕ ನಾಗಿ ಪಾಪಕ್ಕೆ ಕೈ ಹಚ್ಚಿ ಅ ನೇಕ ಜೂಜುಗಳಾಡಿದೇ ಬಿಡದೆ 3 ಸ್ನಾನ ಸಂಧ್ಯಾನ ಅತಿಮೌನ ಗಾಯಿತ್ರಿ ಜಪ ಭಾನುಗಘ್ರ್ಯವನು ಕೊಡದೆ ಹೀನತ್ವ ವಹಿಸಿ ದಾನ ಧರ್ಮವ ಮಾಡದೆ ಶ್ವಾನನಂದದಿ ಚರಿಸಿದೇ ಶ್ರೀನಿವಾಸನೆ ನಿನ್ನ ಅನುಪೂರ್ವಕ ಪೂಜೆ ನಾನೊಂದು ಕ್ಷಣಮಾಡದೇ ಬೇನೆ ಬಂದಂತಾಗೆ ಹೀನ ಸಕೇಶಿಯ ಕೈಲೆ ನಾನ ವಿಧಾನ್ನ ತಿಂದೇ ನೊಂದೇ 4 ಭಾಗವತ ಕೇಳಲಿಕೆ ಆದರವೆ ಪುಟ್ಟಲಿಲ್ಲಾ ವಾದಿಗಳ ಮತವಳಿದ ಮಧ್ವ ಸಿದ್ಧಾಂತದ ಹಾದಿಗೆ ಹೋಗಲಿಲ್ಲ ಶೋಧಿಸಿದ ಚಿನ್ನಕೆ ಸಮರಾದ ವೈಷ್ಣವರ ಪಾದಕ್ಕೆ ಬೀಳಲಿಲ್ಲ ವೇದ ಬಾಹಿರನಾಗಿ ಅಪಸವ್ಯ ಮನನಾಗಿ ಓದಿಕೊಂಡೆನೋ ಇದೆಲ್ಲ ಸುಳ್ಳ 5 ಉತ್ತಮ ಬ್ರಾಹ್ಮಣರ ವೃತ್ತಿಗಳನೆ ತೆಗಸಿ ಬ್ರ ಹ್ಮಹತ್ಯಗಾರನು ಎನಿಸಿದೆ ಮತ್ತೆ ಮದುವೆ ಮುಂಜಿ ಸಮಯಕ್ಕೆ ನಾ ಪೋಗಿ ಸತ್ತ ಸುದ್ದಿಯ ಪೇಳಿದೆ ವಿತ್ತವಿದ್ದವರ ಬೆನ್ಹತ್ತಿ ದೂತರ ಕಳುಹಿ ಕುತ್ತಿಗೆಯ ನಾ ಕೊಯ್ಸಿದೆ ನಿತ್ಯ ಕಲ್ಲೊಡೆಯುತಿರೆ ಮೃತ್ಯು ದೇವತೆಯೆನಿಸಿದೆ ಬಿಡದೇ 6 ಕ್ಷಿತಿಯೊಳಗೆ ಇನ್ನಾರು ಹಿತವ ಬಯಸುವವರೆನಗೆ ಗತಿಯೇನು ಪೇಳೊ ಕೊನೆಗೆ ಸತತ ತವ ಧ್ಯಾನದಲಿ ರತನಾಗಿ ಇರುವ ಸ ನ್ಮತಿಯ ಪಾಲಿಸಯ್ಯ ಎನಗೆ ಪತಿತಪಾವನನೆಂಬ ಬಿರಿದು ಅವನಿಯ ಮೇಲೆ ಶ್ರುತಿ ಸಾರುತಿದೆಯೋ ಹೀಗೆ ಶಿತಕಂಠನುತ ಜಗನ್ನಾಥವಿಠ್ಠಲ ನಿನಗೆ ನುತಿಸದೆ ಬೆಂಡಾದೆ ಕಾಯೋ ಹರಿಯೆ 7
--------------
ಜಗನ್ನಾಥದಾಸರು
ಪಾರ್ವತಿ ಕರೆದರೆ ಬರಬಾರದೆ ಹರಿದಾಸರು ಪ ಕರವೀರ ನಿವಾಶಿಯಾ ಸುತನ ಕಿರಿಯ ಸ್ವಸಿ ಬಾಯ್ತೆರೆದುಅ.ಪ. ಸತಿ ಬರೋತನಕ ಪತಿಯ ಸೇವಿಸಿದ ಕಾಲಕುಬರೋ ಯೋಚನೆ ಕಾಣೆ ಸರಸಾದಿ ಬರುವಂತಾದರು ಕರಮುಗಿದು 1 ಏಸೇಸು ಕಲ್ಪಕ್ಕು ದಾಸ ನಾನಲ್ಲವೇಪರಿಹಾಸ ಮಾಡಿ ಎನ್ನಾ ನಗುವರೇ ಕಾಸುಕಾಸಿಗೆ ಮೋಸಗೊಳಿಪದೇನೇಆಶಾ ತೋರಿಸಿ ಪರಮೀಸಲು ಮಾಡೋದು 2 ಪರ ಸತಿ ನೀನು ವರ ಪಕ್ಷಿವಾಹನ ತಂದೆ-ವರದಗೋಪಾಲವಿಠ್ಠಲನ ಪ್ರೀಯೇ 3
--------------
ತಂದೆವರದಗೋಪಾಲವಿಠಲರು
ಪಿಂಗಟ ಬೇಡವ್ವಾ ಪಿಂಗಟ ಸಂಗಟ ಬರುತಾದೆ ತಡಕೊಳ್ಳೆ ಪ ಕಂಗೆಡಿಸಿ ಬಲುಜವನ ದೂತರು ಭಂಗಬಡಿಪುದನು ನೀ ತಾಳೆ ಅ.ಪ ಸುಜನರ ಕಾಲ್ಕಸ ಮಾಡಿದಿ ಕುಜನರ ಮಾತಿಗೆ ಮರುಳಾದಿ ನಿಜವರಿದ್ಹೇಳಲು ಮೋರೆ ಮುರುಕಿಸಿದಿ ಅಜಾಂತಪರಿ ನೀ ಬಳಲುವಿ ನರಕದಿ 1 ನಾಶನ ಕಾಯಕ್ಕೆ ಮೋಹಿಸಿದಿ ಹೇಸದೆ ಪಾಪಕ್ಕೆ ಗುರಿಯಾದಿ ಈಶನ ದಾಸರನು ದೂಷಣ ಗೈದಿ ಸೀಸ ಕಾಸುವ ಯಮ ಯೋನಿದ್ವಾರದಿ 2 ಉನ್ನತಧಮ ತಿಳೀಲಿಲ್ಲ ಗನ್ನಗತಕವಯ ಕಳಕೊಂಡಿ ಇನ್ನೆಲ್ಲಿ ಕ್ಷೇಮ ನಿನಗ್ಹುಚ್ಚು ಇನ್ನರ ಶ್ರೀರಾಮ ಎನ್ನೂ 3
--------------
ರಾಮದಾಸರು
ಪುಷ್ಪಸೇವೆಯ ಗೀತೆ ಪುಷ್ಪಸೇವೆಯ ನೋಡುವಾ ಬನ್ನಿರೆ ನ ಮ್ಮಪ್ರಮೇಯ ರಂಗನಾ ಪ. ಕ್ಷಿಪ್ರದಿಂದಲೆ ಬಂದು ಚಪ್ಪರದಲಿ ನಿಂದು ವಿಪ್ರರೆಲ್ಲರು ತಂದು ಪುಷ್ಪ ಸಮರ್ಪಿಸುವ ಅ.ಪ. ಮೇಷರಾಶಿಗೆ ರವಿಯು ಬರಲು ವಾಸುದೇವ ಹರಿಯು ಆಗ ಬೇಸಿಗೆ ತಾಪವ ಪರಿಹರಿಸುವೆನೆಂದು ವಾಸನೆಗಂಧವ ಮೈಯೊಳು ಪೂಸಿದ 1 ಕರ್ಪೂರದ ಕಸ್ತೂರಿ ಗಂಧವ ತಂದು [ಒಪ್ಪದಿಂ] ವಕ್ಷಸ್ಥಳದಿ ಧರಿಸಿ ವಕುಳ ಪುಷ್ಪಗಳಿಂದ ಮೌಳಿಯ [ಲಂಕ]ರಿಸಿದ ರು ಪನ್ನೀರವಲ್ಲಿಯ ಚೆನ್ನಾಗಿ ಪ್ರೋಕ್ಷಿಸಿದರು2 ಮರುಗ ಮಲ್ಲಿಗೆ ಜಾಜಿ ಮುಡಿವಾಳ ಇರವಂತಿಗೆ ಪಚ್ಚೆ ದವನ ಕೇದಿಗೆ ಪಾ ಕಮಲ ಸಂಪಿಗೆ ಪುಷ್ಪಮಾಲೆಯ ಧರಿಸಿ ಪನ್ನೀರ ತಳಿದರಾಗ 3 ಪುಷ್ಪದ ದುಬಟಿಯನು ತಂದು ನಮ್ಮ ಸರ್ಪಶಯನನಿಗ್ಹೊದ್ದಿಸೆ ಕ್ಷಿಪ್ರದಿಂದಲೇ ತೀರ್ಥಪ್ರಸಾದವನಿತ್ತು ಎ ನ್ನಪ್ಪ ರಂಗನು ಬಂದ ಒಯ್ಯಾರ ನಡೆಯಿಂದ 4 ಪರಿಪರಿ, ವಾದ್ಯಂಗಳು ಭೋರಿಡುತಿರೆ ವರಾಂಗನೆಯರು ಪಾಡೆ ಸುರರು ಭೂಸುರ ನರರೆಲ್ಲರ ಕೂಡಿ ದೊರೆಯುಮಂಟಪಕ್ಕಾಗ ಪರಮಪುರಷ ಬಂದ 5 ಅಲ್ಲಿ ಪೂಜೆಯ ಗ್ರಹಿಸಿ ರಂಗಯ್ಯ ತಾ ಎಲ್ಲರೊಡನೆ ಪೊರಟಿರೆ ವಲ್ಲಭನನು ವೀಣೆಸೊಲ್ಲಿನಿಂ ಪಾಡುತಿರೆ ಲಕ್ಷ್ಮೀ ಮೆಲ್ಲಮೆಲ್ಲನೆ ಬಂದ ಏಕಾಂತದಿ ರಂಗ 6 ಚಿತ್ರಪೌರ್ಣಮಿಯಲ್ಲಿ ಶ್ರೀರಂಗ ವಿ ಚಿತ್ರದಿಂದಲೆ ಪೊರಟು ಉತ್ತರಕಾವೇರಿ ತೀರದ ಮಂಟಪದಲಿ ನಿಂದು ಭಕ್ತವತ್ಸಲನು ಮಜ್ಜನವ ಮಾಡಿದನಾಗ 7 ಮಕರಿ ಕಾಲ್ಪಿಡಿಯಲಾಗ ಮತಂಗ ವು ಕರೆಯೆ ನಿಮ್ಮನು ಅತಿ ವೇಗದಿಂದ ಚಕ್ರದಿ ನಕ್ರನ ಕೊಂದು ಕರಿಯ ರಕ್ಷಿಸಿ ಬಂದ ಕರುಣದಿಂದಲೇ ರಂಗ 8 ಕಲಿಯುಗದೊಳಗಿರುವ ಕರ್ಮಿಗಳನ್ನು ಸಲಹುವೆನೆಂದೆನುತಾ ಕರುಣದಿಂ ದಲೆ ಅರ್ಚಾವತಾರವ ಮಾಡಿ [ಸಲೆ] ಬಿರುದು ಧರಿಸಿ ಬಂದ ವರದವೆಂಕಟರಂಗ 9
--------------
ಯದುಗಿರಿಯಮ್ಮ
ಪೂಜೆಯ ಮಾಡಿದೆನೆ ದೇವರ ಪೂಜೆಯ ಮಾಡಿದೆನೆಈ ಜಗದರಸ ಚಿದಾನಂದ ತಾನೆಂದು ಪ ಶುದ್ಧ ಸ್ನಾನವನೆ ಮಾಡುತ ನಿರ್ಮಲ ವಸನವನುಬಂಧಿಸಿ ಬಿಗಿದು ಸ್ವಸ್ಥಾನಾಸ ಮಧ್ಯದಲ್ಲಿ ಕುಳಿತು 1 ನಿಸ್ಪøಹ ಭಸಿತವನೇ ಧರಿಸುತ ನಿಷ್ಕಲಂಕನಾಗಿವಿಶ್ವೇಶ್ವರ ವಿರೂಪಾಕ್ಷನೇ ತಾನೆಂದು 2 ಸರ್ವ ಪೂಜಿತನು ತಾನೀಗ ಸರ್ವನಿವಾರಿತನುಸರ್ವರೂಪಕ ತಾನೀಗೆಂದು ಧ್ಯಾನವರ್ಪಿಸಿದೆನೆ3 ಆನಂದ ವ್ಯಾಪಕನೆ ತಾನೀಗ ಆನಂದ ರೂಪಕನೇಆನಂದಾತ್ಮಕ ತಾ ನೀಗೆಂದಾಹ್ವಾನ ವರ್ಪಿಸಿದನೆ 4 ಇಂದ್ರಿಯ ರೂಪಕ ತಾನೀಗ ಇಂದ್ರಿಯ ವ್ಯಾಪಕನೇಇಂದ್ರಿಯ ಸಾಕ್ಷಿಕ ತಾನೀಗೆಂದು ಸಿಂಹಾಸನವರ್ಪಿಸಿದೆನೆ 5 ನಿಶ್ಚಲಾತ್ಮಕನವ ತಾನೀಗ ನಿಶ್ಚಲೈಕ್ಯನಾದನಿಶ್ಚಲವಸ್ತು ನಿಜತಾನೇ ಎಂದಘ್ರ್ಯವರ್ಪಿಸಿದೆನೆ 6 ವಿಶ್ವ ವಿಶ್ವಭೋಕ್ತøವಿಶ್ವಲೀಲಾತ್ಮಕ ತಾನೀಗೆಂದು ಪಾದ್ಯವರ್ಪಿಸಿದೆನೆ 7 ನಿಗಮ ಗೋಚರ ತಾನೆಂದು ಸ್ನಾನವರ್ಪಿಸಿದೆನೆ 8 ಅಂಬರ ವ್ಯಾಪಕನೇಅಂಬರದೊಳು ಚಿದಂಬರ ತಾನೆಂದು ವಸ್ತ್ರವರ್ಪಿಸಿದೆನೆ9 ಚೈತನ್ಯಾಧಾರ ತಾನೀಗ ಚೈತನ್ಯಾದೂರ ಚೈತನ್ಯಾಧಿಪತಾನೆಂದು ಯಜ್ಞೋಪವೀತ ವರ್ಪಿಸಿದನೆ10 ಕಲುಷ ನಿರ್ಜಿತನೇಕಲುಷ ಹರತಾ ನಿಜವೆಂದಾಭರಣವರ್ಪಿಸಿದೆನೆ11 ಲೇಪಕ್ಕಾಧಾರ ತಾನೀಗ ಲೇಪ ನಿರಾಧಾರಲೇಪಹರ ತಾ ನಿಜವೆಂದು ಅನುಲೇಪವರ್ಪಿಸಿದೆನೆ12 ಪುರತನು ವಿಸ್ತರಿಸಿ ತಾನೀಗ ಪುರಾಧಿಪತಾನೆನಿಸಿಪುರುಷೋತ್ತಮ ತಾನೆಂದು ಸುಪುಷ್ಪವರ್ಪಿಸಿದೆನೆ13 ಪರ ಇಹವು ತಾನೇ ತಾನೀಗ ಪರಾತ್ಪರನು ತಾನೆಪರವಸ್ತು ತಾ ನಿಜವೆಂದು ಧೂಪವರ್ಪಿಸಿದೆನೆ 14 ಜ್ಯೋತಿಯ ರೂಪ ತಾನೀಗ ಜ್ಯೋತಿ ನಿರ್ಮಯನುಜ್ಯೋತಿಯಹ ಚಿಜ್ಯೋತಿಯು ತಾನೆಂದು ಜ್ಯೋತಿಯರ್ಪಿಸಿದೆನೆ 15 ನಿತ್ಯ ತೃಪ್ತನುನಿತ್ಯತೃಪ್ತ ತಾನೆಂದು ನೈವೇದ್ಯವರ್ಪಿಸಿದೆನೆ 16 ಮಂಗಳವೆ ಆದ ತಾನೀಗ ಮಂಗಳಾಂಗನಾದಮಂಗಳ ಮೂರುತಿ ತಾನೆಂದು ತಾಂಬೂಲವರ್ಪಿಸಿದೆನೆ 17 ನಿರ್ವಿಕಾರ ನಿಜ ತಾನೀಗ ನಿರಾವಲಂಬ ನಿಜ ನಿ-ರಾವರಣ ತಾನೆಂದು ಪ್ರದಕ್ಷಿಣವರ್ಪಿಸಿದೆನೆ 18 ಜಯ ಜಯಾತ್ಮಕನೆ ತಾನೀಗ ಜಯ ಸದಾತ್ಮಕನೆಜಯನಿತ್ಯಾತ್ಮಕ ತಾನೆಂದು ನಮಸ್ಕಾರವರ್ಪಿಸಿದೆನೆ19 ಲೋಕೈಕನಾಥ ತಾನೀಗ ಏಕೈಕ ನಾಥನುಏಕ ನಾಥನು ತಾನೆಂದು ವಿಸರ್ಜನವರ್ಪಿಸಿದೆನೆ 20 ಪರಿ ಪರಿ ಮಾಡಿದೆನೆ 21
--------------
ಚಿದಾನಂದ ಅವಧೂತರು
ಪೂರ್ಣಿಮೆಯ ದಿನ (ಗರುಡ ದೇವರನ್ನು ಕುರಿತು) ರಂಭೆ :ಮಂದಗಮನೆ ಪೇಳಿದಂದವನೆಲ್ಲ ಸಾ- ನಂದದಿ ತಿಳಿದೆನೆ ಬಾಲೆ ವಾಹನ ವೇರಿ ಮಂದರಧರ ಬಹನ್ಯಾರೆ1 ಅಕ್ಕ ನೀ ಕೇಳಲೆ ರಕ್ಕಸವೈರಿಯ ಪಕ್ಕದ ಮೇಲೇರಿಸುತ ಅಕ್ಕರದಿಂದ ಕಾಲಿಕ್ಕಿ ಬರುವನೀತ ಹಕ್ಕಿಯಂತಿಹನೆಲೆ ಜಾಣೆ2 ಘೋರನಾಸಿಕದ ಮಹೋರಗ ಭೂಷಣ ಧಾರಿವನ್ಯಾರೆಂದು ಪೇಳೆ ಮಾರಜನಕಗೆ ವಾಹನನಾಗುವನೀತ ಕಾರಣವೇನೆಂದು ಪೇಳೆ3 ಊರ್ವಶಿ : ಈತನೆ ಮಹಾತಿಬಲ ಕಾಣೆ ಶ್ರೀವಿಷ್ಣುವಿಂಗೆ ಕೇತನನಾದ ಪುನೀತನೆಲೆ ಜಾಣೆ ಭೀತಿರಹಿತವಿಖ್ಯಾತಿ ಸರ್ಪಾ- ರಾತಿ ಸೂರ್ಯಾನ್ವಯನ ಬಲಗಳ ಚೇರಿಸಿದ ನಿಷ್ಕಾತುರನ ಹರಿ ಪ್ರೀತ ವಿನತಾ ಜಾತ ಕಾಣಲೆ4 ಗಂಡುಗಲಿ ಮಾರ್ತಾಂಡತೇಜಮಖಂಡ ಬಲನಿವನು ಮಾತೆಯ ಚಂಡವಿಕ್ರಮನು ನೇಮವ ತಂಡವೆಲ್ಲವನು ಕೋಪದಿ ನಂಡಲೆದು ಕರದಂಡನಾಭನ ಕೊಂಡುಬಂದವನಂಡಜಾಧಿಪ5 ಭೂರಿವೈಭವದಿ ಗರುಡನ ದಯದಿ ತೋರುತ ರವದಿ ಸನಕ ಸ- ಚಾರುಚರಣವ ತೋರಿ ಭಕ್ತರ ಶ್ರೀರಮಾಧವ ಮಾರಜನಕನು6
--------------
ತುಪಾಕಿ ವೆಂಕಟರಮಣಾಚಾರ್ಯ
ಬಾಯಿ ತೆರೆದ ಬಗಿಯೇನೊ ದೇವದೇವ ತೋಯಜದಳ ನೇತ್ರನೆ ನೀಯೆನಗಿದು ಪೇಳೈ ನಿಜವಾಗಿ ಲಕ್ಷ್ಮೀನಾ ರಾಯಣ ನರಸಿಂಹನೆ ಪ ಅಸುರನ ಉದರವ ಹಸನಾಗಿ ಬಗೆವಾಗ ಬಾಯ ತೆರೆದಿಯಾ ಬಿಸಜ ಭವಾಂಡವು ಬಸುರೊಳಗಿದ್ದ ಉ- ಬ್ಬಸಿಗೆ ಬಾಯ ತೆರೆದಿಯೊ 1 ಮಡದೀಯ ರೂಪಕ್ಕೆ ಮರುಳಾಗಿ ಅದರಿಂದ ಬಿಡದೆ ಬಾಯ ತೆರೆದಿಯಾ ದೃಢದಿ ಪ್ರಹ್ಲಾದನ ಒಡೆಯ ರಕ್ಷಿಸೊ ನುಡಿಗೆ ಬಾಯ ತೆರೆದಿಯೊ 2 ಗುರು ಸತ್ಯಬೋಧರಾಯರ ನಿತ್ಯಭಜನೆಗೆ ಬರಿದೆ ಬಾಯ ತೆರೆದಿಯೊ ವರ ಕದರುಂಡಲಗಿ ಹನುಮಯ್ಯನೊಡೆಯನೆ ಕರವ ಮುಗಿವೆ ಕರುಣಿಸೊ 3
--------------
ಕದರುಂಡಲಗಿ ಹನುಮಯ್ಯ
ಬಿನ್ನಪವ ಕೇಳು ಜೀಯಾ ಬನ್ನಬಡಿಸುವ ಮಾಯಾ ಬೆನ್ನು ಬೀಳದಂತೆ ಮಾಡು ಎನ್ನ ಕೂಡಾಡು ಪ ಹತ್ತದ ಜನಕೆ ನೀನು ಹತ್ತಿಲಿ ಇದ್ದರೆ ಏನು ಉತ್ತರ ಲಾಲಿಸದಿಪ್ಪ ಉತ್ತಮ ಶ್ಲೋಕಾ ತತ್ವ ಬಲ್ಲವಂಗೆ ದೂರತ್ತಲಿದ್ದರೇನು ಅವನ ಪತ್ತಿಗೆ ಬಂದೊದಗುವ ಚಿತ್ತಜನಯ್ಯಾ 1 ಇಂದೆ ಕೈವಲ್ಯವ ಕೊಡುವೆ ಒಂದು ಕ್ಷಣ ಮಾಯಿಗಳ ಮಂದಿರದಲ್ಲಿ ಜನಿಸಿ ಎಂದು ನುಡಿದಡೆ ಮಂದರಧರನೆ ಕೇಳು ಎಂದೆಂದಿಗೆ ಎನ್ನ ನರಕ ಬಂಧನದಲ್ಲಿಡು ಅಲ್ಲಿ ಪೊಂದುವರಾರೊ 2 ಸೂಕರ ಗಾರ್ಧಭ ನಾನಾ ಕೆಟ್ಟ ಜಾತಿಯವರ ಯೋನಿಯೊಳು ಕಟ್ಟಿಹಾಕಿ ಹೀನಾಯ ಉಣಸೀ ಅನಂತ ಕಲ್ಪಕ್ಕೆ ಪವಮಾನ ಮತ ಪೊಂದಿಸಿ ನಿರ್ವಾಣವೀವೆನೆಂದರಾಗೆ ನಾನಾದಿ ಬಯಿಪೆ 3 ಗುರುಪ್ರಸಾದದಿಂದಲಿ ಪರಮ ಸದ್ಗತಿ ಎನ ಗರಿದಲ್ಲ್ಯಾವಾಗಾದರು ಸ್ಥಿರವೆ ಸಿದ್ಧ ನಿರಯ ದುರಾತ್ಮಗಿಲ್ಲ ಕರವ ಮುಗಿದು ಒಂದು ವರ ಬೇಡುವೆ 4 ಭಾಗವತರ ಸಹವಾಸ ಭಾಗವತರ ಕಥಾಗುಣ ಭಾಗ ಗುಣಿಸುವ ಮತಿ ಭಾಗೀರಥಿ ಯಾತ್ರೆ ಭಾಗ್ಯವೆ ಪಾಲಿಸು ದುಷ್ಟ ಭಾಗಾದಿಯರೋಡಿಸಿ ಕಡೆ ಭಾಗಕ್ಕೆ ಎನ್ನೆಡಬಲ ಭಾಗದಲಿ ಸುಳಿಯೊ 5 ಕಾಣಿಕಾಣೆ ಙÁ್ಞನವಿಲ್ಲ ತುತಿಪುದಕ್ಕೆ ಧ್ಯಾನವÀರಿಯೆ ನಿನ್ನನೆ ನಿದಾನಿಸಲಿಕ್ಕೆ ನಾನಾಪರಾಧವ ಮಾಡಿದ ಮಾನವನೋ ದೀನಬಂಧೊ ನೀನೊಲಿದು ಎನ್ನ ಮನಕೆ ಆನಂದ ತೋರೋ 6 ರಜತಪೀಠ ಪುರನಿವಾಸಾ ರಜನಿಪತಿ ಸಂಕಾಶಾ ರಜನಿಚರ ವಿನಾಶಾ ಸುಜನಮಾನಸಹಂಸ ರಜದೂರ ಮಂದಹಾಸಾ ವಿಜಯವಿಠ್ಠಲ ಶ್ರೀಶಾ ಭಜಿಪೆ ಲೇಶಾ 7
--------------
ವಿಜಯದಾಸ
ಬ್ಯಾಡೋ ಒಬ್ಬರ ಮನೆಗೆ ನೀ ಪೋಗ ಬ್ಯಾಡೋ ಒಬ್ಬರ ಮನೆಗೆ ಪ ಗಾಡಿಕಾರನೆ ಕೃಷ್ಣ ಚಾಡಿ ಮಾತನು ಕೇಳಿ ಗಾಡನೆ ಕಿವಿಮುಚ್ಚಿ ಓಡಿಸಿದೆ ಗೋಪಿಯರ ಅ.ಪ ಕಟ್ಟಿದ್ದ ತುರುಕರುಗಳ ಬಿಚ್ಚಿ ಪೋಗುವದಿದು ನಿಶ್ಚಯವೆಂದು ಪೇಳ್ವರೊ ಸ್ವಚ್ಛ ಕರುಗಳ ಕಣ್ಣುಮುಚ್ಚಿ ಪಾಲೆಲ್ಲ ಕುಡಿದ ಅಚ್ಯುತನಿಗೆ ಬುದ್ಧಿ ಮತ್ತೆ ನೀ ಪೇಳೆಂಬರು 1 ಮಕ್ಕಳೆಲ್ಲರು ಕಯ್ಯೊಳು ಬಟ್ಲಲಿ ಅವ- ಲಕ್ಕಿಯ ತಿನ್ನುತಿರಲು ಘಕ್ಕನೆ ಬಡಿಯೆ ದಿಕ್ಕು ದಿಕ್ಕಿಗೆ ಚಲ್ಲೆ ಬಿಕ್ಕಿ ಬಿಕ್ಕಿ ಅಳುತಾರೆ ಗೋಪಕ್ಕ ನೀನೋಡೆಂಬರು 2 ವಾಸುದೇವಗೆ ಹರಕೆಯ ಮಾಡಿ ನವ- ನೀತ ಮೀಸಲು ಮಾಡಿರೆ ಮೀಸಲಳಿದು ಕೋತಿ ಮಾರ್ಜಾಲಗಳಿಗುಣಿಸಿ ನೀತಿ ಪೇಳುವ ಶ್ರೀನಾಥ ನೋಡೆಂಬರು 3 ಗೊಲ್ಲ ಬಾಲಕಿಯರೆಲ್ಲ ಪಾಲ್ಮೊಸರು ಮಾರೆ ಮೆಲ್ಲನೆ ಪೋಗುತಿರಲು ಗುಲ್ಲು ಮಾಡದೆ ಕವಣೆ ಕಲ್ಲಿಂದ ಕುಂಭ ಒಡೆಯೆ ಚಲ್ಲಿ ಪಾಲ್ಮೊಸರು ಸೂರೆ ನಲ್ಲೆ ನೀ ನೋಡೆಂಬರು4 ಮತ್ತೆ ಕೇಳಮ್ಮ ಯಶೋದೆ ನಾವೆಲ್ಲ ಆಣಿ ಮುತ್ತು ಪೋಣಿಸುತಿರಲು ಸುತ್ತ ಮುತ್ತಲು ನೋಡಿ ಮುತ್ತು ಸೂರೆ ಮಾಡಿದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ನೋಡೆಂಬರು5
--------------
ನಿಡಗುರುಕಿ ಜೀವೂಬಾಯಿ
ಭಕುತೋದ್ಧಾರ ಪರಿಭವದ್ವೈದ್ಯ ನಿಖಿಲಬ್ರಹ್ಮಾಂಡ ಸುಸೂತ್ರ ಸಿರಿಬಾಧ್ಯ ನಿಖಿಲವ್ಯಾಪಕ ನಿಖಿಲರಕ್ಷ ಭಕುತರಾತ್ಮಕ ಭಕುತಪಕ್ಷ ಪ್ರಕಟರಕ್ಕಸಕುಲ ನಿರ್ಮೂಲನೆ ಮುಕುಟಮಾನಸ ಮನದಿ ಭಜಿಪರ ಮುಕುತಿದಾಯಕ ಮಣಿವೆನೈ ಮಹ ಮುಕುತಿಸಂಪದ ಕರುಣಿಸಭವ ಪ ಕಲ್ಪನೆಯಿಂದೊಂದೆತ್ರಯವೆನಿಸಿ ಕಲ್ಪ ಕಲಿಸಿ ಕಲ್ಪನೆಯಿಂದ ನಾಲ್ಕುಘೋಷ ರಚಿಸಿ ಕಲ್ಪನಿಲ್ಲದೆ ಕಲ್ಪಕಲ್ಪದರರ್ಹೊಗಳಿಸಿ ಕಲ್ಪಿತದಿ ನೆಲಸಿ ಕಲ್ಪಿತದಿ ಸಂಕಲ್ಪ ತೋರಿಸಿ ಕಲ್ಪಿತದಿಂ ಸಂಕಲ್ಪ ಮುಳುಗಿಸಿ ಕಲ್ಪ ಕಲ್ಪಾಂತರದಿ ಉದಿಸಿ ಕಲ್ಪತಕೆ ನೀ ಬೇರೆಯೆನಿಸಿ ಕಲ್ಪನದೊಳು ಕಲ್ಪ ಕೂಡಿಸಿ ಕಲ್ಪನಕೆ ಮಹಪ್ರಳಯವೆನಿಸಿ ಕಲ್ಪನೆಯನು ಮತ್ತು ತಿರುಗಿಸಿ ಕಲ್ಪಿಸಿದಿ ಪುನ:ಸಫಲವೆನಿಸಿ ಕಲ್ಪನೆಯನು ಪೊಗಳಲಿನ್ನಾವ ಕಲ್ಪನಕೆ ತುಸು ಶಕ್ಯವಲ್ಲವು ಕಲ್ಪ ಕಲ್ಪಾಂತರದಿ ಎನ್ನನು ಕಲ್ಪಿಸದಿರು ಕಲ್ಪತರುವೆ 1 ಕಲ್ಪಿಸಿದೆ ಕೋಟಿ ತ್ರಿದಶತ್ರಯೆನಿಸಿ ಕಲ್ಪ ಕಲ್ಪಕೆ ಕಲ್ಪಿತೀಯುವ ಮಂತ್ರ ಕಲ್ಪಿಸಿ ಕಲ್ಪಿಸಿದಿಯೊ ಕಲ್ಪ ಕಲ್ಪದಿ ಐದು ಮೇಲೆನಿಸಿ ಕಲ್ಪಸಾರೆನಿಸಿ ಕಲ್ಪನೆ ಮಹತಾರಕೆನಿಸಿ ಕಲ್ಪನೆ ಘನಗಾಯತ್ರೆನಿಸಿ ಕಲ್ಪನೆಯಲಿ ಸ್ಥೂಲವೆನಿಸಿ ಕಲ್ಪನೆ ಬಹುಸೂಕ್ಷ್ಮವೆನಿಸಿ ಕಲ್ಪನೆಯ ಮಹಕಾರಣೆನಿಸಿ ಕಲ್ಪನದಿ ಈ ಕಲ್ಪವಿರಿಸಿ ಕಲ್ಪನಕೆ ನೀನೆ ಸೂತ್ರನೆನಿಸಿ ಕಲ್ಪನಕೆ ನೀನೆ ಚೈತನ್ಯನೆನಿಸಿ ಕಲ್ಪ ಕುಣಿಸುವಿ ಕಲ್ಪನಿಲ್ಲದ ಕಲ್ಪದ ನೆಲೆಬುಡ ನೀನೆನ್ನಯ ಕಲ್ಪನೆಯೊಳುದಯನಾಗಿ ಕಲ್ಪನೆಯ ಕಡೆಗಾಣಿಸಭವ 2 ಕಲ್ಪ ಕಲ್ಪಕೆ ಆಚೆ ನೀನೆನಿಸಿ ಕಲ್ಪ ನಿರ್ಮಿಸಿ ಕಲ್ಪ ಕಲ್ಪದಿ ನೀನೆ ಆವರಿಸಿ ಕಲ್ಪ ನಡೆಸಿ ಕಲ್ಪ ಕಲ್ಪದಮೂಲ ನೀನೆನಿಸಿ ಕಲ್ಪದಿಂ ನುಡಿಸಿ ಕಲ್ಪದಲಿ ಮಿಥ್ಯಕಲ್ಪ ಪುಟ್ಟಿಸಿ ಕಲ್ಪದಲಿ ನಿಜಕಲ್ಪ ಸೃಷ್ಟಿಸಿ ಕಲ್ಪದಿಂ ತ್ರಿಕಲ್ಪ ರಕ್ಷಿಸಿ ಕಲ್ಪದಿಂ ಕಲ್ಪಕ್ಕೆ ಶಿಕ್ಷಿಸಿ ಕಲ್ಪವೇ ಮಹ ಮಾಯವೆನಿಸಿ ಕಲ್ಪದಿಂದಲೇ ಅದನು ಗೆಲಿಸಿ ಕಲ್ಪದಿಂ ಕಲ್ಪವನು ಬೆಳಗಿಸಿ ಕಲ್ಪದಿಂ ಕಲ್ಪವನು ತೊಲಗಿಸಿ ಕಲ್ಪನರಿಯುವ ಕಲ್ಪಕೆ ಮಹ ಕಲ್ಪನಿದು ಬಹು ಸುಲಭವೆನಿಸಿ ಕಲ್ಪಿತದಿಂ ರಕ್ಷಿಸುವ ಮಮ ಕಲ್ಪನಿಲ್ಲದವರ ಶ್ರೀರಾಮ 3
--------------
ರಾಮದಾಸರು
ಭಾಗವತರ ನೋಡುವಾ ಭಾಗ್ಯಸ್ವರೂಪಾ ಪ ಯೋಗಜನಗಳನು ರಾಗದಿ ಧ್ಯಾನಿಪ ಭೋಗಿಶಯನ ಸಂಪನ್ನ ಸದ್ಗುಣಪೂರ್ಣ ಭಾರ್ಗವೀಸತಿ ಬಿಡದೆ ವರಿಸಿರುವಾ ತಾಂಝಂ ತಂಝಂತ ತಂತಕನಾ ತಧಿಂಗಿಣತೋಂ ತಧಿಂಗೀಣತೋಂ ತಧಿಂಗಿಣತೋಂ 1 ನಿನ್ನಮುಖಕೇ ಸರಿಬಾರದೆ ಚಂದ್ರಮನು ಉನ್ನತ ಕಳಂಕಿಯಾಗಿರುತಿಹನೋ ಕಣ್ಣು ಸಾಹಸ್ರಕ್ಕೂ ಸರಿಬರದೆ ತಾಂಝಂ ತಂಝಂತ 2,ತಂಝಂ...ತಂತ 2 ಹೊಳೆವ ನಿನ್ನಯ ಕೊರಳಿಗೆ ಪಡಿಯಾಗದೆ ನಲಿದು ನಾರಾಯಣ ಎನ್ನುತ್ತಿದೆ ಶಂಖವು ನಳಿನಶರ ರೂಪಕ್ಕೆ ಸರಿಬರವೆ ತಾಝಂ ತಝಂತ 2,ತಝಂ...(ತ್ವಂತ) 3 ಭಕ್ತರು ಪಡೆವತಿ ಸೌಖ್ಯಕ್ಕೆ ಹೋಲದ ನಿತ್ಯವಾದ ಲೌಕಿದದಾಶೆ ಬಿಡಿಸಯ್ಯ ಮುಕ್ತಿಕೊಡುತೆನ್ನನ್ನು ನಿನ್ನಡಿಯ ತಾಝಂ ತಂಝಂತ ತಂತಕನಾ ತಧಿಗಿಣತೋಂ ತಧಿಗಿಣತೋಂ ತಧಿಗಿಣತೋಂ 4
--------------
ಶಾಮಶರ್ಮರು
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭುವನದೊಳಿವನೆ ಶೂರ ಪ ಭವಬಂಧಗಳ ನಿನ್ನ | ಕುವರನೆ ಬಿಡಿಸುವ ಅ.ಪ ಮಕ್ಕಳ ಕೂಡಿಕೊಂಡು | ನಮ್ಮನೆಗಿವ-| ನೊಕ್ಕಲಿಕ್ಕುವನು ಬಂದು || ಪಕ್ಕನೆ ಓಡುವ | ಸಿಕ್ಕನು ಯೆಮಗಿವ 1 ಒರಗಿದ ಮಕ್ಕಳ | ಕರೆದು ಡಬ್ಬಿಸುವನು 2 ಹಿಂಡಿದ ಪಾಲ್ಮೊಸರು || ಚೆಂಡಾಟದೊಳು ನೆಲ-| ನುಂಡುಂಡು ಕೆಸರಾಯ್ತು 3 ನಿಲುತ ಪಾತ್ರವ ಕೊಂಡು | ಮೆಲುವ ನಾಟಕಧಾರಿ 4 ಬೆಳಗನ್ನು ಮೇಳವಿಸೆ || ಕಳೆದು ತರಿಸುವ ನಾವಿ | ನ್ನುಳಿ (ವು)ಪಾಯವ ಕಾಣೆ 5 ದೊರೆಯದಿದ್ದರೆ ಬೈವನು | ಮನೆಗೆ ಕಿಚ್ಚ-| ನ್ನಿರಿಸುವೆನೆನ್ನುವನು || ವೊರಳೊಳು ವಿಷ್ಠಿಸಿ | ಮರೆಯೊಳಡಗುವ6 ನಿಲದೀಗ ತರಿಸಲ್ಲ(ದೆ) || ಸುಲಿಗೆÉಗಾರಗೆ ತಕ್ಕ | ಬಲುಮೆಯೊಳ್ ಬುದ್ಧ್ದಿಯ-| ನೊಲಿದು ಪೇಳುತಲೆಮ್ಮ | ಕುಲವನುದ್ಧರಿಸವ್ವ 7 ಎಂದು ನಾನಾ ತೆರದಿ | ನಾರಿಯರು ಗೋ-| ವಿಂದನನತಿ ಮುದದಿ || ಗೋಪಿ ಪರಿ ಚಾಡಿ8 ತಕ್ಕ ಪದ್ಧತಿ ಧಾತ್ರಿಗೆ || ಬೆಕ್ಕಸಗೊಳದಿರಿ ಅಕ್ಕು ಸದಾನಂದ 9
--------------
ಸದಾನಂದರು
ಭೂತರಾಜರ ಸ್ತೋತ್ರ ಭೂತರಾಜರ ಸ್ತುತಿಸಿ ಖ್ಯಾತಿಗೊಳ್ಳೊ ಪ ಪ್ರೀತಿ ಇವರಲಿ ಅಧಿಕ ವಾದಿರಾಜರಿಗೆ ಅ.ಪ. ಆತನಾಜ್ಞೆಯಿಂದ ಧರಿಸಲುಕೋತಿಯಂತೆ ಹುಬ್ಬು ಏಕೆ ಹಾರಿಸುವೆಜ್ಯೋತಿ ಸ್ವರೂಪಕ್ಕೆ ಬೂದಿಯು ಮುಸುಕಲುಪಾತಕಿಯು ತಾ ಮುಟ್ಟಿ ಬೊಚ್ಬಿ ಬಾರಿಸನೆ 1 ಗುರುಸೇವೆ ಇವರಂತೆ ಮಾಡ್ದವರು ಯಾರುಂಟುಗುರುಕೃಪಾ ಇವರಂತೆ ಪಡೆದವರು ಯಾರೊಅರಿತು ನೋಡಲು ನಿರುತ ರತಿಗೆ ಕಾರಣವುಂಟುನರಕುರಿ ಇದರ ಮರ್ಮವ ತಿಳಿವದುಂಟೆ 2 ಇಂದಿಗೂ ಸೋದೇಲಿ ಇವರದೇ ಗುರುಪೂಜೆಸುದ್ದಿ ಸುಳ್ಳೆಂದವಗೆ ದೆಬ್ಬೆ ಪೂಜಾಸದ್ದಿಲ್ಲದಿವರಡಿ ಸ್ಮರಿಸುವುದೇ ಗುರುಪೂಜಾತಂದೆ ಶ್ರೀ ನರಹರಿ ಒಪ್ಪುವಾ ಪೂಜಾ 3
--------------
ತಂದೆ ಶ್ರೀನರಹರಿ
ಮಧ್ವಾಂತರ್ಗತ ವೇದವ್ಯಾಸ ಕಾಯೊ ಶುದ್ಧ ಮೂರುತಿಯೆ ಸರ್ವೇಶ ಪ. ಶ್ರದ್ಧೆಯಿಂದಲಿ ನಿನ್ನ ಭಜಿಸುವ ಭಕ್ತರಿಗೆಬುದ್ಧ್ಯಾದಿಗಳ ಕೊಟ್ಟುದ್ಧರಿಸೊ ದೇವರದೇವಅ.ಪ. ದ್ವಾಪರದಲಿ ಒಬ್ಬ ಮುನಿಪ ತನ್ನಕೋಪದಿಂದಲಿ ಕೊಡಲು ಶಾಪಸ್ಥಾಪಿಸಲು ಜ್ಞಾನ ಲೋಪಅಪಾರ ತತ್ವಸ್ವರೂಪಶ್ರೀಪತಿಯೆ ಕಾಯೆಂದು ಮೊರೆಯಿಡೆಪಾಪ ವಿರಹಿತÀಳಾದ ಯಮುನೆಯದ್ವೀಪದಲಿ ಅಂಬಿಗರ ಹೆಣ್ಣಿನರೂಪಕ್ಕೊಲಿದವಳಲ್ಲಿ ಜನಿಸಿದೆ 1 ಸೂತ್ರ ಪುರಾಣ ರಚಿಸಿವಾದಗಳ ನಿರ್ವಾದ ಮಾಡಿಸಾಧುವಂದಿತ ಬಾದರಾಯಣ 2 ಸುಮತಿಗಳಿಗೆ ನೀ ಬೋಧಿಸಿದೆ ಮಿಕ್ಕಕುಮತಗಳನ್ನು ಛೇದಿಸಿದೆ ಕ್ರಿಮಿಯಿಂದ ರಾಜ್ಯವಾಳಿಸಿದೆ ಜಗತ್‍ಸ್ವಾಮಿ ನೀನೆಂದು ತೋರಿಸಿದೆವಿಮಲರೂಪನೆ ಕಮಲನಾಭನೆರಮೆಯ ಅರಸನೆ ರಮ್ಯ ಚರಿತನೆಮಮತೆಯಲಿ ಕೊಡು ಕಾಮಿತಾರ್ಥವನಮಿಸುವೆನು ಹಯವದನಮೂರುತಿ3
--------------
ವಾದಿರಾಜ