ಒಟ್ಟು 342 ಕಡೆಗಳಲ್ಲಿ , 64 ದಾಸರು , 305 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೋ ಕರುಣಿಸಿ ಎನ್ನ ರಂಗಾ | ಬೇಗನೇ ಪಾದವದೋರಿಸಿ | ನಮನಕ ಭವಬಲಿಯನು ಬಿಡಸಿ ರಂಗಾ ಪ ಶರಣೆಂದು ಸಕಲರು ಬಂದು ಪೋಗುವಾ | ನಿನ್ನ ಮಹಾದ್ವಾರದಲಿ | ಇರುತಿಹ ನಿನ್ನಯ ಭಕುತ ಬಲೆಯಲಿ | ಇರಿಸಿ ನೀ ಇಟ್ಟು ಅಚಲದಲಿ ರಂಗಾ | ಸಂಬಳನಿತ್ತಿಹ ಧನವ ನಾನೊಲ್ಲೆ | ಬೇಡುವೆ ಒಂದÀನೋ ರಂಗಾ | ಹಂಬಲ ದಣಿವಂತೆ ನಾಮ ಭಾಂಡಾರವ | ಮಾಡೆನ್ನ ಆಧೀನವ ರಂಗಾ 1 ಕರಿದಲಿಧೃತಿ ಚಿತ್ತವನಿತ್ತು ಅನುದಿನಾ | ಹರಿಪಾದ ಸದ್ಬಕ್ತಿಯಾ ರಂಗಾ | ಮೆರೆವ ಮಂಟಪದೊಳು ನಿಲಿಸೆನ್ನ | ದುರಿತವ ತಟ್ಟದಂದದಿ ಪೊರೆಯೋ ರಂಗಾ2 ಇಹಪರದಲ್ಲಿ ಏಕೋದೇವನೆಂಬ ಮುದ್ರೆಯಾ ಭಾವದ ಬಲದಿಂದಲಿ | ಮಹಿಪತಿ ಸುತ ಪ್ರಭು ಕೊರಳಿಗೆ ಹಾಕಿನ್ನು | ಸಲಹು ನೀ ಕೃಪೆಯಿಂದಾ ರಂಗಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕೆಡಬ್ಯಾಡೆಲೊ ಪ್ರಾಣಿ ಕೆಡಬ್ಯಾಡಾ ನಮ್ಮ ಕಡಲಶಯನನ ಭಜನೆ ಬಿಡಬ್ಯಾಡಾ ಪ ಪರನಿಂದೆ ಮಾಡಿ ಕೆಡಬ್ಯಾಡಾ ನನ್ನ ಸರಿಯಾರಿಲ್ಲೆಂದು ಮೆರೆಯ ಬ್ಯಾಡಾ ಪರಹೀನತಾ ಮಾಡಿ ನೀ ಕೆಡಬ್ಯಾಡಾ ಶ್ರೀ ಹರಿ ಸರ್ವೋತ್ತಮನೆನದೆ ಕೆಡಬ್ಯಾಡಾ 1 ಪರದ್ರವ್ಯವನಪಹರಿಸಲಿ ಬ್ಯಾಡಾ ದಿವ್ಯ ಪರಸತಿಯರ ಮೋಹಕ್ಕೊಳಗಾಗ ಬ್ಯಾಡಾ ದುರಿತ ಕಾರ್ಯಕೆ ಮನಕೊಡಬ್ಯಾಡಾ ಒಳ್ಳೆ ಪರ ಉಪಕಾರ ಮಾಡದೇ ಕೆಡಬ್ಯಾಡಾ 2 ಮಾತಾಪಿತರ ಸೇವೆ ಬಿಡಬ್ಯಾಡಾ ಯಮ ದೂತರಂದದಿ ಅವರನು ಕಾಡಬ್ಯಾಡಾ ಕೆಟ್ಟ ಮಾರ್ಗವ ಹಿಡಿದು ಹೋಗಬ್ಯಾಡಾ ನಿನ್ನ ಸತಿಸಂತರಾಮೋಹಕ್ಕೊಳಗಾಗಬ್ಯಾಡಾ 3 ದುಷ್ಟ ಮಾತುಗಳಾಡಬ್ಯಾಡಾ ನೀನು ಕಳ್ಳರ ಸಹವಾಸ ಮಾಡಲಿ ಬ್ಯಾಡಾ ಒಳ್ಳೆತನವ ಬಿಡಬ್ಯಾಡಾ ನಮ್ಮ ಫುಲ್ಲನಾಭನ ದಾಸನಾಗದಿರಬ್ಯಾಡಾ 4 ಸತ್ಯ ಮಾತಾಡದೇ ಕೆಡಬ್ಯಾಡಾ ಸರ್ವೋತ್ತಮ ಹನುಮೇಶ ವಿಠಲನ ನಾಮಾ ಪಾದ ಬಿಡಬ್ಯಾಡಾ ಒಳ್ಳೆ ಉತ್ತಮ ಪದಕೆ ವೈದಿಡುವನೋ ಮೂಢಾ 5
--------------
ಹನುಮೇಶವಿಠಲ
ಕೇಳಮ್ಮ ತಂಗಿ ಕೇಳಮ್ಮ ಪ ಕೇಳಿ ಪುರಾಣದಿ ಪೇಳಿದ ಕೃಷ್ಣನ ಲೀಲೆಯ ಪಾಡುತ ``ಬಾಳಮ್ಮ'' ಅ.ಪ ನಿಷ್ಟೆಯಿಂದಲಿ ಬಲು ಶಿಷ್ಟಳಾಗುತ ದುಷ್ಟರಿಂದ ದೂ``ರಾಗಮ್ಮ'' 1 ಹರಿದಾಸರಪದ ಹರುಷದಿ ಹಾಡುತ ಗುರು ಹಿರಿಯರ ಮನ ``ಕೊಪ್ಪಮ್ಮ'' 2 ಕಾಲ ಕಳೆಯದೆ ಶೀಲಮತಿ ನೀ “ನಾಗಮ್ಮ'' 3 ವಿದ್ಯೆಯ ಕಲಿತು ಬದ್ಧಿವಂತ | ಳಾ | ಗಿದ್ದರೆ ಸುಖ ಶತ “ಸಿದ್ಧಮ್ಮ'' 4 ವಂದಿಸಿ ತುಲಸಿ ವೃಂದಾವನ ಪೂಜಿಸು ಮುಂದೆ ನಿನಗೆ ``ಆನಂದಮ್ಮ'' 5 ಹೀನರ ಬೆರೆಯದೆ ಮೌನವ್ರತದಲಿ | ಜ್ಞಾನಿ ಜನರ ನೀ ``ನರಸಮ್ಮ'' 6 ಮೂಢ ಜನರ ಒಡನಾಡದೆ ಭಕ್ತಿಲಿ ಮಾಡುವ ಸಜ್ಜನರ ``ಸಂಗಮ್ಮ'' 7 ಧರ್ಮದಿಂದ ಸತ್ಕರ್ಮ ಮಾಡುತ ನಿರ್ಮಲಗೊಳಿಸಿ ಸಂತ ``ರಂಗಮ್ಮ'' 8 ಪವನ ಪಿತನ ಕಥಾಶ್ರವಣವೆ ಪುಣ್ಯವು ಭವ ವಿದು ಕತ್ತಲು ``ಕಾಳಮ್ಮಾ'' 9 ಸದನಕೆ ಬಂದಿಹ ಬುಧರಾವರಿಸಲು ಮಂದಬಲು ನಿನಗದ ``ರಿಂದಮ್ಮ'' 10 ಎಂದೆಂದಿಗು ಪರನಿಂದೆಯ ಮಾಡದೆ ಮಂದಿರದಿರುವದೆ ``ಚಂದಮ್ಮ'' 11 ಸಾರಿದ ಜನರಘದೂರಗೈದು ಹರಿ ತೋರುವ ನುಜಗುರು ``ಈರಮ್ಮ'' 12 ಅತ್ತಿಯ ಮನಿಗೆ ಹೆತ್ತವರಿಗೆ ಉತ್ತಮ ಕೀರ್ತಿ ``ತಾರಮ್ಮ'' 13 ಗೋವಿಪ್ರಾಳಿ ಸೇವಿಸುತಿರುವದೆ ಕೋವಿದರಿಗೆ ಬಲು ``ಜೀವಮ್ಮ'' 14 ಭಾವದೊಳಗೆ ಪರದೇವನೆ ಪತಿಯೆಂದು ಪಡಿ ``ಭೋಗಮ್ಮ'' 15 ಭೇದಜ್ಞಾನ ಸಂಪಾದಿಸು ಕ್ಷಮಿಸುವ ಶ್ರೀಧರ ನಿನ್ನಾಪ ``ರಾಧಮ್ಮ'' 16 ಕೋಪದಿ ಪರರಿಗೆ ತಾಪವ ಬಡಿಸಲು ಲೇಪವಾಗುವದು ``ಪಾಪಮ್ಮ'' 17 ಇಂಗಡಲಾತ್ಮಜನಂಘ್ರಿ ಸರೋಜಕೆ ಸತಿ ``ತುಂಗಮ್ಮ'' 18 ದಾಸಜನರ ಸಹವಾಸದೊಳಿರುವದೆ ಕಾಶಿಗಿಂತ ವಿ``ಶೇಷಮ್ಮ'' 19 ಕಲಿಯುಗದಲಿ ಸಿರಿನಿಲಯನ ನೆನೆದರೆ ಸುಲಭ ಮುಕ್ತಿ ತಿಳಿ ``ಕಂದಮ್ಮ'' 20 ಪತಿಯು ಸದ್ಗತಿಗೆ ಗತಿ ಎಂದರಿತಹ ಮತಿಯುತ ಸತಿಯೆ ``ಯವನಮ್ಮ'' 21 ಮಧ್ವಸಿದ್ಧಾಂತದ ಪದ್ಧತಿ ತಪ್ಪದೆ ಇದ್ದರೆ ಹರಿಗತಿ ``ಮುದ್ದಮ್ಮ'' 22 ಸೋಗಿಗೆ ನೀ ಮರುಳಾಗಿ ನಡೆದರೆ ಯೋಗಿ ಜನರ ಮನ ``ಕಲ್ಲಮ್ಮ'' 23 ಶೀಲೆ ಗುಣದಿ ಪಾಂಚಾಲೆಯು ಎಲ್ಲ ಬಾಲೆಯರೊಳು ``ಮೇಲಮ್ಮ'' 24 ನೇಮದಿ ನಡೆದರೆ ಪ್ರೇಮದಿ ಸಲಹುವ ಶಾಮಸುಂದರನು ``ಸತ್ಯಮ್ಮ'' 25
--------------
ಶಾಮಸುಂದರ ವಿಠಲ
ಕೋಲನಾಡುತ ಬಂದ ಬಾಲೆಯರು ಕೈಮುಗಿದುನಿಂದು ಮೇಲುಗಿರಿ ವಾಸ ಗೆಲಿಸೆಂದು ಕೋಲ ಪ. ದರ ಕೋಲ1 ಹರಿಯೆ ಸರ್ವೋತ್ತಮ ಹರಿಯೆ ಪರದೈವಹರಿದಾಸರೆಂಬೊ ಬಿರುದಿನ ಕೋಲಹರಿದಾಸರೆಂಬೊ ಬಿರುದಿ£ ಹೆಗ್ಗಾಳೆ ಹೆಬ್ಬಾಗಿಲಲ್ಲೆ ಹೊಯಿಸುತ ಕೋಲ 2 ವಿಷ್ಣು ಸರ್ವೋತ್ತಮ ವಿಷ್ಣುಪರದೈವ ವಿಷ್ಣು ದಾಸರೆಂಬೊ ಬಿರುದಿನ ಕೋಲವಿಷ್ಣು ದಾಸರೆಂಬೊ ಬಿರುದಿನ ಢಕ್ಕಿಯಘಟ್ಯಾಗಿ ತಾವು ಹೊಯಿಸುತ ಕೋಲ 3 ಒಬ್ಬನೆ ವಿಷ್ಣು ಇನ್ನೊಬ್ಬನಿಲ್ಲವೆಂದು ಅಬ್ಬರದಿಂದನಾಗಸ್ವರ ಹೆಗ್ಗಾಳೆ ಕೋಲಅಬ್ಬರದಿಂದ ನಾಗಸ್ವರ ಹೆಗ್ಗಾಳೆಹೆಬ್ಬಾಗಿಲಲ್ಲೆ ಹೊಯಿಸುತ ಕೋಲ4 ಭಾಗವತ ಭಾಗವತ ವೆನ್ನಿ ರಾಮೇಶನಅತಿಭಕ್ತರ ನಡುವೆ ಪಥವೆನ್ನಿ ಕೋಲ 5
--------------
ಗಲಗಲಿಅವ್ವನವರು
ಖೇಟ ಕುಕ್ಕುಟ - ಜಲಟಾ | ತ್ರೈರೂಪಿನಿಶಾಟ ಸಂಕುಲ ರೋಟಾ ಪ ಕೈಟಭಾರಿ ಪದ ಓಲೈಸುವಗೆ ಅ.ಪ. ಕರ್ಮ ಭಂಜನ ಭವ ಅಘ ಶೋಧಕ | ಶುಚಿ ಶರಣೂ 1 ಸಿರಿ ಹರಿತ್ರೈವಿಕ್ರಮ ಪದ ಪೂಜಕ | ನಿಷ್ಕಾಮಕ | ಸೇವಕ ಶರಣೂ | 2 ಹರಿ ಪಾದಾಂಗುಷ್ಠದುಗುರೂ | ಖರ್ಪರದೊಳೂ | ಮಾಡೆ ಡೊಗರೊ ಹರಿಯಿತು ಹೊರ ಜಲಜಾಂಡದೊಳೊ ||ಕರುಣಾರ್ಣವ ಗುರು | ಗೋವಿಂದನ | ಪದ ತೊಳೆದನವರ ಪದವನ | ಸಾರುವನ | ಚರಣವನ | ಶರಣೂ 3
--------------
ಗುರುಗೋವಿಂದವಿಠಲರು
ಗಟ್ಟಿ ಮನವ ಕೊಡೊ ಹರಿ ಹರಿ ಗಟ್ಟಿ ಮನವ ಕೊಡೊ ಪ ಸೃಷ್ಟಿಕರ್ತನೆ ನಿನ್ನ ಶಿಷ್ಟ ಪಾದದೆನಗೆ ನಿಷ್ಠೆ ಭಕ್ತಿಯ ನೀಡು ಬಿಟ್ಟು ಅಗಲದಂತೆ ಅ.ಪ ದುರಿತದೋಷಗಳು ಕಡಿದು ಬರುವ ಕಂಟಕವನ್ನು ಪರಹರಿಸೆನಗೆ ಅರಿವು ನಿಲಿಸಾತ್ಮನ ಕುರಹು ತಿಳಿಸುಸಿರಿವರನೆ ಕರುಣದಿ 1 ಚಲನವಲನಗಳನು ಕಳೆದು ನಿಲಿಸು ಜ್ಞಾನವನ್ನು ಹೊಲೆಯ ದೇಹದ ನೆಲೆಯ ತಿಳಿಸಿ ಎನ ಗಳುಕಿಸು ಭವದಾಸೆ ಘಳಿಲನೆ ಒಲಿದು 2 ತಾಪತ್ರಯಗಳನು ಛೇದಿಸಿ ಪಾಪಶೇಷಗಳನ್ನು ಲೋಪಮಾಡಿ ಇಹದ್ವ್ಯಾಪರದೊಳಗಿಂದ ನೀ ಪೊರೆ ಭವನಿರ್ಲೇಪನೆ ದಯದಿ 3 ಕಟ್ಟಿ ಕಾದುತ್ತಿರುವಸಂಸಾರ ಕೆಟ್ಟಬವಣೆಜನ ಬಟ್ಟ ಬಯಲು ಮಾಡಿಕೊಟ್ಟು ನಿಜಾನಂದ ಶಿಷ್ಟರೊಳಾಡಿಸೆನ್ನ ಸೃಷ್ಟೀಶ ದಯದಿಂ 4 ನೀನೆ ಕರುಣದಿಂದ ಬಿಡಿಸಯ್ಯ ಯೋನಿಮಾರ್ಗ ತಂದೆ ಧ್ಯಾನದಿರಿಸಿ ನಿನ್ನ ಮಾಣದ ಪದ ನೀಡು ದೀನದಯಾಳು ಶ್ರೀ ಜಾನಕಿರಾಮ 5
--------------
ರಾಮದಾಸರು
ಗಣಪತಿ ಪ್ರಾರ್ಥನೆ ಅಜ್ಞಾನ ಪರಿಹರಿಸು ಅಂಬರಾಧೀಶಸುಜ್ಞಾನ ಭಕ್ತಿ ಶ್ರೀ ಹರಿಯಲ್ಲಿ ನೀಡೋ ಪ ವಿಘ್ನರಾಜನೆ ನಿನ್ನ ನುತಿಸಿ ಬೇಡುವೆನಯ್ಯಭಗ್ನಗೈಸೆನ್ನ ಮನ ಸಂದೇಹವನ್ನೂ |ತಜ್ಞರೊಡನಾಡಲು ನಿರ್ವಿಘ್ನ ನೀಡಯ್ಯಾಲಗ್ನಗೈಸೆನ್ನ ಮನ ದೋಷಘ್ನನಲ್ಲೀ 1 ಜಲಧಿ ಮೀನನೆನಿಸಯ್ಯಾ 2 ಚಾರುದೇಷ್ಣನು ಎನಿಸಿ ದ್ವಾಪರದಲವತರಿಸಿಶೌರಿಯಾಜ್ಞದಿ ತರಿದೆ ಬಹು ರಕ್ಕಸರನೂ |ಸರ್ವೇಶ ಶ್ರೀ ಗುರು ಗೋವಿಂದ ವಿಠ್ಠಲನಚರಣ ಸರಸಿಜಕಾಂಬ ಮಾರ್ಗವನೆ ತೋರೋ 3
--------------
ಗುರುಗೋವಿಂದವಿಠಲರು
ಗತಿಯಾರೋ ಈ ಜಗದಿ ಮತಿಗೆಟ್ಟ ಮನುಜ ಕ್ಷಿತಿನಾಥ ಹೆಜ್ಜಾಜಿ ಕೇಶವನ ಹೊರತು ಪ ಸತಿಯ ಪರದೊಳು ನೋಡೆ ಪುಣ್ಯವರ್ಥಕೆ ಕತೆಗೆ ಸುತರಿರುವರೆಂದೆನಲು ಋಣಮುಗಿವೊವರೆಗೇ ಅತಿಶಯದ ಬಾಂಧವರು ಮಿತ್ರಮಂಡಲಿಯೆಲ್ಲ ಸ್ತುತಿಯುಕ್ತ ಮರ್ಯಾದೆ ಪಡೆಕೊಳ್ಳುವನಕ 1 ತಂದೆ ತಾಯಿಗಳೆಲ್ಲ ಮುಂದಳಿದು ಹೋಗುವರು ಬಂದ ತನ್ನಧಿಕಾರ ಬಲುಮೆಯಿರುವಾಗ ಬಂದಿದ್ದ ಧನಧಾನ್ಯಗಳು ನಿಲ್ಲದೋಡುವುವು ಬಂಧನದ ಕಾಲದೊಳಗೊಬ್ಬರೂ ಬರರೂ 2 ಕರಿ ಧ್ರುವನು ಪಾಂಚಾಲಿ ಪ್ರಹ್ಲಾದ ಪ್ರಭೃತಿಗಳ ಪರಮಪಾವನರೆನಿಸಿ ಪೊರೆದಂಥ ಹರಿಯ ಉರುತರದ ನೋಟದೊಳು ನಿರುತ ನೆನೆಯಲು ನಿನ್ನ ಕರಪಿಡಿದು ಕಾಯುವನು ಸುಂದರಶ್ಯಾಮ 3
--------------
ಶಾಮಶರ್ಮರು
ಗಳಿಸಿದೆನು ಗಳಿಸಿದೆನು ಘಳಿಗಿಯೊಳಗೆ ಗಳಿಸಿದಾಗಳಿಗೆ ಅಂತಃಕರಣದೊಳಗೆ ಧ್ರುವ ಗಳಿಸಿದೆನು ಗುರುಕರುಣ ಗಳಿಸಿದೆನು ಗುರುಚರಣ ಗಳಿಸಿದೆನು ಗುರುಸ್ಮರಣ ಚಿಂತನಿಯನು 1 ಗಳಿಸಿದೆನು ಗುರುಙÁ್ಞನ ಗಳಿಸಿದೆನು ಗುರುಮೋನ ಗಳಿಸಿದೆನು ಗುರುಙÁ್ಞನ ಧಾರಣವನು 2 ಗಳಿಸಿದೆನು ಇಳಯೊಳು ಮಹಿಪತಿ ಇಹ್ಯ ಪರದೊಳು ಸಾಯುಜ್ಯ ಸದ್ಗತಿಯ ಮುಕ್ತಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ರಾಜ ಹರಿ ವಿಠಲ | ಪೊರೆಯ ಬೇಕಿವಳಾ ಪ ಗರುಡ ಗಮನನೆ ದೇವ | ಸರ್ವಾಂತರಾತ್ಮ ಅ.ಪ. ಪತಿಯೆ ಪರದೈವ ವೆಂ | ಬತಿಶಯದ ಮತಿಯಿತ್ತುರತಳೆನಿಸು ಗುರು ಹಿರಿಯ | ಹಿತಸೇವೆಯಲ್ಲೀಕೃತ ಕೃತ್ಯಳೆಂದೆನಿಸೊ | ಗೃಹ ಮೇಧಿ ಎಂಬಲ್ಲಿಕೃತಿ ರಮಣ ಪ್ರದ್ಯುಮ್ನ | ವಿತತ ಮಂಗಳನೇ 1 ಮಧ್ವಮತದನುಯಾಯಿ | ಶುದ್ಧ ಭಕುತಿ ಜ್ಞಾನ ಉದ್ಧರಿಸಿ ಇವಳಲ್ಲಿ | ಸಾಧನವ ಗೈಸೋಅಢ್ಯರೇಡ್ಯನೆ ಹರಿಯೆ | ಶ್ರದ್ಧಾಳು ತನದಲ್ಲಿಬುದ್ಧಿ ಓಡಲಿ ದೇವ | ಮಧ್ವಾಂತರಾತ್ಮಾ 2 ಸಾರ | ತರಳೆ ಬುದ್ಧಿಗೆ ನಿಲುಕಿಪರಮ ಸತ್ಸಾಧನವ | ಚರಿಸುವಂತೆಸಗೋಮೊರೆಯಿಡುವೆ ನಿನ್ನಲ್ಲಿ | ಕರುಣಿಸೀ ಬಿನ್ನಪವಗುರುವಂತರಾತ್ಮ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಗುರುರಾಯನಂಥ ಕರುಣಾಳು ಕಾಣೆನು ಜಗದೊಳಗೆ ಪ ಏನೆಂದರಿಯದ ಪಾಮರ ನಾನು | ತಾನೊಲಿದೀಗೆನ್ನ ನುದ್ಧರಿಸಿದನು1 ತನ್ನನುಭವ ನಿಜ ಮಾತಿನ ಗುಟ್ಟು | ಎನ್ನೊಳುಸುರಿ ಘನ ತೋರಿಸಿ ಕೊಟ್ಟು | ಧನ್ಯನ ಮಾಡಿದಸೇವೆಯಲಿಟ್ಟು 2 ಮಾಡುವ ಘನ ತುಸು ತಪ್ಪನೆ ಹಿಡಿಯಾ | ಬೇಡಿಸಿಕೊಳ್ಳದೆ ನೀಡುತ ಪಡಿಯಾ | ರೂಢಿಗಾದನು ಇಹಪರದೊಡೆಯಾ3 ತನ್ನವನೆನಿಸಿದ ಮಾತಿಗೆ ಕೂಡಿ | ಮನ್ನಣೆಯಿತ್ತನು ಅಭಯವ ನೀಡಿ | ಇನ್ನೇನ ಹೇಳಲಿ ಸುಖ ನೋಡಿ4 ತಂದೆ ತಾಯಿ ಬಂಧು ಬಳಗೆನಗಾಗಿ | ನಿಂದೆ ಸದ್ಗುರು ಮಹೀಪತಿ ಮಹಾಯೋಗಿ | ಕಂದನ ಸಲಹುವ ಲೇಸಾಗಿ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವಿನ ಚರಣವ ನೆನೆವುತಲನುದಿನ ಪರದೊಳು ದೈವದ ನೆಲೆ ನೋಡು ಪ ಗುರುವಿನ ಕರುಣಕಟಾಕ್ಷವದಲ್ಲದೆ ನರರಿಗೆ ದೊರಕದು ಪರಸುಖವು ಹಿರಿಯರ ಅಭಿಮತವಿಲ್ಲದ ಗೃಹದೊಳು ಕರೆಕರೆಯಾಗಿದೆ ಕೌತುಕವು 1 ಸ್ಥಿರವಾಗಿ ನಿಲ್ಲದ ಮನವು ಭ್ರಮೆಯೊಳು ನೆರೆವುದು ತನ್ನೊಳು ಘಾತಕವು ಸೆರೆವಿಡಿಯಲು ಹರಿವಿಡಿದಿಹನಾತನ ತೊರೆವುದು ಭವಭಯ ಸೂತಕವು 2 ಯೋಗಿಯ ಹೃದಯದಿ ಸಕಲಾಗಮ ಸಮ ನಾಗಿಯೆ ತೋರ್ಪುದು ಧೃಢವಾಗಿ ಸಾಗರ ಸುತ್ತಿದ ಭೂಭಾಗದ ಸರಿ ಯೋಗಿಯ ದೃಷ್ಟಿಯೆ ಘನವಾಗಿ 3 ಬಾಗಿದ ಕಬ್ಬಿನ ಕೋಲೊಳು ರುಚಿಕರ ವಾಗಿಯೆ ತೋರುವ ಪರಿಯಾಗಿ ರಾಗಿಯ ಶಿಲೆ ತಾ ಬಳಲಿದೆನೆನುತಲೆ ಭಾಗೆಯ ಕೊಂಬುದೆ ಸಮವಾಗಿ 4 ನಂಬದಿರಂಬರ ವಾದಿಯ ಅಂಶಕ ತುಂಬಿದ ಕುಂಭ ದೃಢದಿಂದ ಅಂಬರದೊಳಗಣ ಮೇಘಕೆ ವಾಯುವು ಬೆಂಬಲವಾಗಿಹ ದಯದಿಂದ 5 ಸಂಭ್ರಮದಿಂದಲಿ ಗರ್ಜಿಸಿ ನಾಲ್ದೆಸೆ ಅಂಬಿಸಿ ಪೋಗುವ ಪರಿಯಿಂದ ಅಂಬುಜಭವ ಬರೆದಕ್ಷರ ಮಾಸಲು ಅಂಬರ ಬಯಲಹ ತೆರದಿಂದ 6 ಶುದ್ಧವಶುದ್ಧವು ಆಗಿಹ ಪೃಥಿವಿಯ ಬದ್ಧವಾಗಿಯೆ ತೊಳೆದವರಾರು ಅಬ್ಧಿಯ ಮಧ್ಯದಿ ಎದ್ದ ವಾರಿಗಳನು ತಿದ್ದಿಯೆ ಪಸರಿಸುವವರಾರು 7 ಇದ್ದರೆ ಸರ್ವರ ಭವನದೊಳಗ್ನಿಯ ಮೆದ್ದವ ಶುದ್ದವೆಂಬವರಾರು ಹೊದ್ದಿದ ಮೂರುತಿ ನಾಲ್ದೆಸೆಯೊಳಗಿರೆ ಬದ್ಧವಾಗಿಯೆ ಕಟ್ಟಿಕೊಳಲ್ಯಾರು 8 ಬಯಲೊಳಗಿರುತಿಹ ಬಹು ಝೇಂಕಾರವ ನಯದೊಳು ನೋಡಿದರೇನುಂಟು ಬಯಲೊಳು ಮೂರಕ್ಷರವನೆ ಬಿತ್ತಲು ಮೈಲಿಗೆ ತಳಿಸುವ ಬೆಳೆಯುಂಟು 9 ಸಿರಿ ಸೊಬಗನು ಜಯಿಸುವ ಹಯವನು ಏರುವ ಬಗೆಯುಂಟು ದಯದೊಳು ಶ್ರೀ ಗುರು ವಿರಚಿಸಿಯಿತ್ತರೆ ಕ್ರಮವಿಕ್ರಯದೊಳು ಫಲವುಂಟು 10 ಬೇಡನು ಸಲಹಿದ ಆಡು ತಾ ಯಾಗಕೆ ಬೇಡವೆಂಬವರಾರು ಶಾಸ್ತ್ರದಲಿ ಕಾಡಿನೊಳಿರುತಿಹ ಮೃಗವಾಲದ ಸಿರಿ ನೋಡು ನೀ ನಿತ್ಯದಿರಾಸ್ತ್ರದಲಿ 11 ಕೋಡಗನಾದರು ನೋಡಿಯೆ ಭಜಿಸಲು ಕೂಡುಗು ಹರಿಯ ಪರತ್ರದಲಿ ಕೂಡಿಕೊಂಡರೆ ಪರಬೊಮ್ಮನ ಮನದಲಿ ಆಡದು ಮಾಯದ ಸೂತ್ರದಲಿ 12 ಮೃಗ ಗೋರೋಚನ ಸಹ ಉತ್ತಮವಾಗಿಹ ಮುತ್ತುಗಳು ನಿತ್ಯದಿ ಕ್ರಯಗಟ್ಟಿ ಉಣ್ಣದೆ ಹುಲ್ಲನು ಕಿತ್ತು ಮೆದ್ದಾಡುವ ಅವಸ್ಥೆಗಳು13 ಮೃತ್ಯುವ ಕಾಣದೆ ಬೊಮ್ಮವನಡಗಿಸಿ ಎತ್ತಲಾದರು ಪೋದ ವಸ್ತುಗಳು ಭಕ್ತರಿಗಲ್ಲದೆ ಮನವಪರೋಕ್ಷದ ವಸ್ತುವ ಕಾಣದು ನಿತ್ಯದೊಳು 14 ಜ್ಯೋತಿರ್ಮಯವಾಗಿಹ ವಸ್ತುವಿನೊಳು ಸೂತಕ ಹೊದ್ದುವುದೇನುಂಟು ಜಾತಿವಿಜಾತಿಯೊಳೊಲಿದಿಹ ಶಿವನವ ದೂತರ ನಂ[ಬ]1ದರಾರುಂಟು 15 ಓತು ಆಶುದ್ದವನುಂಡರು ಕವಿಲೆಯೊ ಳ್ಮಾತಿನ ವಾಸಿಯದೇನುಂಟು ನೀತಿ ವಿಹೀನರೊಳುದಿಸಿದ ಲವಣದ ಧಾತು ಕೂಡದೆ ಸವಿಯೇನುಂಟು 16 ಧಾರುಣಿ ಭಾರವ ಮಿತಿಗಟ್ಟಿ ತಕ್ಕಡಿ ಗೇರಿಸಿ ತೂಗಲು ಬಹುದೀಗ ವಾರಿಧಿಯನು ಮುಕ್ಕುಳಿಸಿಯೆ ಬತ್ತಿಸಿ ತೋರಿಸಲಪ್ಪುದು ಬಹು ಬೇಗ 17 ಧಾರುಣಿಯೊಳು ಗುರುಕರುಣದ ಅಳತೆ ಮು ರಾರಿಗು ಸಿಲುಕದು ಅದು ಈಗ ತೋರಿತು ಅಲ್ಲಿ ವರಾಹತಿಮ್ಮಪ್ಪ ಕು ಮಾರರು ವಾಜಿಯ ತಡೆದಾಗ 18
--------------
ವರಹತಿಮ್ಮಪ್ಪ
ಚರಣವದೋರಿ ಸಲಹೋ ಮುರಾರಿ | ಧರಿಯೊಳು ಸಾರಿದವರ ಸಹಕಾರಿ ಪ ಸುರಧೇನು ನೀನು | ಕರೆದುಂಬೆ ನಾನು | ಸುರತರು ನೀನು | ಆಶ್ರಯಿಸುವೆ ನಾನು 1 ಸುರಮಣಿ ನೀನು | ಅರ್ಥಾರ್ಥಿ ನಾನು | ದೊರೆಯನ್ನ ನೀನು | ಸುಖಿಸುವೆ ನಾನು 2 ಗುರುಮಹಿಪತಿ ಪ್ರಭು | ಪರದೈವ ನೀನು |
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಿಂತಾಮಣಿಗಮಿತ ಚಿಂತಾಮಣಿ ಚಿಂತಲವಾಡಿ ಶ್ರೀ ನೃಸಿಂಹಸ್ವಾಮಿ ಪ ಕಂತುಪಿತ ಕೊಟ್ಟರುವ ಸಾಮಥ್ರ್ಯದಿಂದಲೇ ಐಹಿಕ ವಸ್ತುವೀವುದು ಅನಂತ ಶ್ರೀಪತಿ ಚಿಂತಲವಾಡಿ ಕರುಣಿ ಸ್ವ - ತಂತ್ರನು ಇಹಪರದಿ ಐಶ್ವರ್ಯವ 1 ಕಾಕುಮನ ವಾಕ್ಕಾಯ ಶುದ್ಧ ಮಾಡುವ ದೇವಿ ಶ್ರೀ ಕಾವೇರಿ ತೀರದಲಿ ಕುಳಿತು ಸರ್ವ ಭಕುತರಿಗೆ ವರವೀವ ಶ್ರೀಕಾಂತ ನರಸಿಂಹ ಸುಖಜ್ಞಾನಮಯ ದೋಷದೂರ ಗುಣನಿಧಿಯು 2 ಮಮಕಾರ ಅಹಂಕಾರ ಡಂಭತನವನು ಬಿಟ್ಟು ಮಮಸ್ವಾಮಿ ಸರ್ವರಿಗೂ ಪರಮೈಕಸ್ವಾಮಿಯು ಸುಮನಸಾರ್ಚಿತ ಕುಸುಮಸಂಭವನ ತಾತನು ರಮಾಪತಿ ಪ್ರಸನ್ನ ಶ್ರೀನಿವಾಸ ನಮೋ ಎನ್ನಿ 3
--------------
ಪ್ರಸನ್ನ ಶ್ರೀನಿವಾಸದಾಸರು