ಒಟ್ಟು 181 ಕಡೆಗಳಲ್ಲಿ , 47 ದಾಸರು , 162 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಂದೆತಾಯಿ ನೀನೆ ಬಾ ಬೇಗನೆ ಪ ಮಂದರೋದ್ಧಾರ ಮನ್ಮಥ ಜನಕ ಆ- ಮಾಧವ ವಾಸುದೇವ ಗೋವಿಂದ ಮಧುಸೂಧನ ದಾಶರಥೇ ಸಂಕರ್ಷಣ ತ್ರಿವಿಕ್ರಮ ಹೃಷಿಕೇಶ ನಾರಸಿಂಹ ಪರಬ್ರಹ್ಮ 1 ಪದ್ಮನಾಭಾಚ್ಯುತ ದಾಮೋದರ ಜ- ಪ್ರದ್ಯುಮ್ನಧೋಕ್ಷಜ ನಾರಾಯಣ ಅನಿ- ರುದ್ಧ ವಿಷ್ಣು ಭೂಧರ ಉಪೇಂದ್ರ 2 ಅರಿತು ಚತುರ್ವಿಂಶತಿ ನಾಮವ ಶರಣರದುರಿತವ ಪರಿಹರಿಸುವನಮ್ಮ ಗುರುರಾಮವಿಠಲನೆ ನಿನ್ನನೆ ನಾಂ 3
--------------
ಗುರುರಾಮವಿಠಲ
ತಪ್ಪು ಕ್ಷಮೆ ಮಾಡೊ ಕೃಪೆಯಿಂದ ನೋಡೊ ಧ್ರುವ ನೀನೆ ದಯಾನಿಧಿ ನಾನೆ ಅಪರಾಧಿ ಖೂನ ದೋರು ಹಾದಿ ಸ್ಥಾನ ನಿಜಗಾದಿ 1 ಅನಾಥನೆಂದು ನೋಡಿ ಸುನಾಥ ಎನ್ನ ಮಾಡಿ ಸ್ವಾನಂದ ಸುಖ ನೀಡಿ ಮನ್ನಾಥ ನಿಜಗೂಡಿ 2 ಹೆಳಲಾರೆ ಬಹಳ ಕೇಳೋ ನೀ ದಯಾಳ ತಾಳಿ ಎನ್ನ ತೋಳ ಬಾಳ ವಿಶ್ವಪಾಲ 3 ಸೇವೆ ಇದೆ ನಮ್ಮ ಭಾವಿಸುದು ನಿಮ್ಮ ಪಾವನಗೈಸು ವರ್ಮ ಸುವಿದ್ಯ ಪರಬ್ರಹ್ಮ 4 ಬಂದ ಮ್ಯಾಲೆ ಶರಣಕುಂದಬ್ಯಾಕೊ ಪೂರ್ಣ ಕಂದ ಮಹಿಪತಿ ಗುಣ ಚಂದಮಾಡೊ ಕರುಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ಕ್ಷಮೆ ಮಾಡೋ ಕೃಪೆಯಿಂದ ನೋಡೋ ಪ ನೀನೆದಯಾನಿಧಿ ನಾನು ಅಪರಾದಿ ಖೂನದೋರೋ ಹಾದಿ ಸ್ಥಾನ ನಿಜಾನಾದಿ 1 ಅನಾಥನೆಂದು ನೋಡಿ ಸನಾಥನೆನ್ನಮಾಡಿ ಸ್ವಾನಂದ ಸುಖನೀಡಿ ಮನ್ನಾಥ ನಿಜಗೂಡಿ2 ಹೇಳಲಾರೆ ಬಹಳಾ ಕೇಳೋನೀದಯಾಳಾ ತಾಳಿಯನ್ನ ತೋಲಾಬಾಲವಿಶ್ವಷಾಲಾ 3 ಸೇವಿ ಇದೇನಮ್ಮ ಭಾವಿಸುದು ನಿಮ್ಮ ಪಾವನ್ನಗೈಸು ವರ್ಮಾ ಸುನಿತ್ಯ ಪರಬ್ರಹ್ಮಾ 4 ಬಂದ ಮ್ಯಾಲೆ ಶರಣಾ ಕುಂದವ್ಯಾಕೋ ಪೂರ್ಣ ಕಂದ ಮಹಿಪತಿಗುಣಾ ಛಂದ ಮಾಡೋಕರುಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತಾನೆ ತಾನಾದನಮ್ಮಾ ಎನ್ನೊಳು ಘನಬ್ರಹ್ಮ ಧ್ರುವ ಕಣ್ಣಿಲೆ ನೋಡಲಿಕ್ಕೆ ಕಣ್ಣಿನೊಳಾದನಮ್ಮ ಕಣ್ಣಿಗೆ ಕಣ್ಣಾಗಿ ಪೂರ್ಣ ಕಾಣಿಸಿದಾನಂದೋಬ್ರಹ್ಮ ಅಣುರೇಣುದೊಳು ವ್ಯಾಪಿಸಿ ಜನ ಮನ ದೊಳು ತುಂಬಿಹ ತನುಮನದೊಳು ತಾನೆತಾನಮ್ಮ 1 ಎತ್ತ ನೋಡಿದತ್ತ ಸುತ್ತ ಸೂಸುವನಮ್ಮ ನೆತ್ತಿ ಒಳಗೆ ಪೂರ್ಣ ಮೊತ್ತವಾದ ಪರಬ್ರಹ್ಮ ಅನುದಿನ ಸಂತತ ಸದ್ಗುರು ಪೂರ್ಣ ಅಂತರಾತ್ಮದೊಳಗಿಹನಮ್ಮ 2 ನಾನು ನಾನೆಂಬುದಿದು ಇಲ್ಲದಂತಾಯಿತು ನಮ್ಮ ತಾನೆ ತಾನಾದ ನಿಜ ಓಮಿತ್ಯೇಕಾಕ್ಷರ ಬ್ರಹ್ಮ ಚೆನ್ನಾಗಿ ಮಹಿಪತಿಗೆ ಸನ್ಮತಸುಖದೋರಿತುಉನ್ಮನವಾಗ್ಯೆನ್ನೊಳಗೆ ಘನಸುಖ ಹೊಳೆಯಿತು ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿ ನೀನೆ ಪರಬ್ರಹ್ಮ ರೂಪ ಏ ಜೀವಾ ತಿಳಿ ನೀನೆ ಪ ಪ್ರಾಣಕ್ಕೂ ಪ್ರಾಣ ಇದೆ ನೋಡು ಜಾಣ ಈ ವಿಶ್ವದಲ್ಲೇಕ ತಾಣಾ ಒಳ ಹೊರಗೂ ತುಂಬಿರ್ದ ಘನವೇ ನಿರಾಕಾರ ವಿಭುವೇ ಈ ಬ್ರಹ್ಮ ತಿಳಿ ನೀನೆ 1 ಕಲ್ಪನಾ ನೀಗಿ ತಾನೊಂದೆ ಆಗಿ ಅಲ್ಪತ್ವವೆಲ್ಲವು ಪೋಗಿ ಅದೇ ನೋಡು ಸುಖರೂಪಬ್ರಹ್ಮ ಅದೇ ಪೂರ್ಣಬ್ರಹ್ಮ ಆ ಬ್ರಹ್ಮ ತಿಳಿ ನೀನೆ ಪರಬ್ರಹ್ಮರೂಪಾ 2 ಸರ್ವಾಧಾರಾ ನಭದಂತೆ ಪೂರಾ ನಿರ್ವಿಕಲ್ಪ ಸುಖಸಾರಾ ಅದೇ ನೋಡು ಘನಾನಂದರೂಪ ಶಂಕರರೂಪಈ ರೂಪಾ ತಿಳಿ ನೀನೆ ಪರಬ್ರಹ್ಮರೂಪಾ3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿಯದೊ ನಿನ್ನಾಟ ತಿರುಪತಿಯ ವೆಂಕಟ ಪ. ನೀರೊಳು ಯಳವ ಮೋರೆಯ ನೆಳಲ ನೋಡುವಿ ಸುಳಿವರಂಬುಧಿ ಇಳೆಯನಾಳುವ ಭಳಿರೆ ಭಾರ್ಗವ ಖಳನ ಛೇದಿಸಿ ಕೊಳಲ ದನಿಯನು ನಳಿನಮುಖಿಯರಿಗೆ ನಾಚಿಸುವದಿದೊಳಿತೆಯೇಳು ಹವಣಗಾರನೆ 1 ಆರುಬಲ್ಲರು ನಿನ್ನ ಶ್ರೀ ಲಕ್ಷ್ಮಿಯ ಮನಸಿಗೆ ತೋರದಿಹ ಪರಬ್ರಹ್ಮ ಉಳಿದವರು ಬಲ್ಲರೆ ನೀರಜಾಸನ ಬೊಮ್ಮಾ ಇದು ನಿಮ್ಮ ವರ್ತಿ ಭಾರ ಬೆನ್ನಲಿ 2 ಭೂರಿ ಮಾರ ಜನಕನೆ ಮೆರಿವೆ ಕೋಮಲಾಂಗನೆ 3 ಸಕಲ ಮಾಯವಿದೇನೊ ತ್ರಿವಿಕ್ರಮನ ಪಾಲಿಸಿ ಸಕಲನುಳಿಹಿದೆ ನೀನು ಭಕುತಿಯಿಂದಲಿ ಸ್ತುತಿಪರಿಗೆ ಸುರಧೇನು ಸುಮನಸರ ಭಾನೂ ಅಖಿಳವೇದೋದ್ಧಾರ ಗಿರಿಧರ 4 ನಿಖಿಳ ಭೂಮಿಯ ತಂದ ನರಹರಿ ಯುಕುತಿಯಲಿ ಆಳಿದೆ ಭಕ್ತವೃಂದಕೆ ಸುಖವ ತೋರುವ ವೇಣು ಗೋಪಾಲನೆ ರುಕುಮನನುಜೆಯ ರಮಣ ಬೌದ್ಧನೆ ಲಕ್ಷುಮಿಯರಸನೆ ಕಲ್ಕಿ ರೂಪನೆ 5 ನಿನ್ನ ರೂಪವಿದೆಲ್ಲಾ ನೋಡುವರಿಗೆ ಕಣ್ಣು ಸಾಸಿರವಿಲ್ಲಾ ಪಾಡಿ ಪೊಗಳಲು ರಂನ್ನಘಾತಿದೆನಲ್ಲಾ ಕಂಣಮುಚ್ಚದೆ ಬೆಂನ್ನ ತೋರುವೆ ಮಂಣ ಕೆÉದಿರದಿ 6 ಚಿಂಣಗೊಲಿದನೆ ಸಂಣವಾಮನ ಪುಣ್ಯಪುತ್ರನೆ ಹಂಣುಸವಿದನೆ ಬೆಂಣೆಗಳ್ಳನೆ ಹೆಂಣುಗಳ ವ್ರತಗಳೆವ ಹೆಳವನಂದು ಗೆಲಿಸಿದ ರಂಗ ದೇವೋತ್ತುಂಗನೆ 7
--------------
ಹೆಳವನಕಟ್ಟೆ ಗಿರಿಯಮ್ಮ
ತ್ರಾಹಿ ತ್ರಾಹಿ ಶ್ರೀಗುರು ಅವಧೂತ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಸದ್ಗುರು ದೀನನಾಥ ಧ್ರುವ ತಪ್ಪು ಕ್ಷಮೆಯ ಮಾಡೊನೀ ಸ್ವಾಮಿ ನಮ್ಮ ಕೃಪಾಸಿಂಧು ಸದ್ಗುರು ಪರಬ್ರಹ್ಮ ಪಾಪಿ ದುರಾಚಾರಿಯು ನಾಪರಮ ಕೃಪೆಯಿಂದ ಕಾವದು ದಯನಿಮ್ಮ 1 ಗುಣದೋಷ ನೋಡದಿರೊ ಶ್ರೀಹರಿ ದುರಿತ ಕೋಟಿಗಳ ಸಂಹಾರಿ ನೀನಹುದೊ ಬಡವನಾಧಾರಿ ಅನುದಿನ ಕಾಯೊ ನೀ ಪರೋಪರಿ 2 ಒಮ್ಮೆ ಬಂಧನವ ಬಿಡಿಸೊ ಸಮ್ಯಕ ಙÁ್ಞನ ಸಾರದೊಳು ಕೂಡಿಸೊ ನಿಮ್ಮದಾಸ ಮಹಿಪತಿಯೆಂದೆನಿಸೊಬ್ರಹ್ಮಾನಂದದೊಳು ನಲಿದಾಡಿಸೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದಾತ ಕರುಣೆಯಿಂದಲಿ ಪೊರೆಯೊ ಸುಪ್ರೀತ ಪ ತರಳನನು ಸ್ಥಿರಸುಖದಿ ಪಾಲಿಸು ಅ.ಪ ಬ್ರಹ್ಮ ಗುರು ಪರಬ್ರಹ್ಮಣೇ ನಮಃ1 ನಿರಂಜನ ಕರ್ತಿಸುವೆನೀ ತನುಮನಂಗಳ 2 ನೀನೆ ಎನ್ನಯ ಪ್ರಾಣನಾಥನು 3 ಭವ ಗಾದರದಿ ನೀ ಬೋಧಿಸೈ ನಿಜ 4 ಸರ್ವದಾ ಸದಾನಂದ ಜಯ ಜಯ 5
--------------
ಸದಾನಂದರು
ದಾಸನಾಗೋ ಪ್ರಾಣಿ ಬರಿದೆ ಕಾಣಿ ಪ ದಾಸನಾಗು ರಮೇಶನ ಪಾದ ಹೇಸಿಮನಸಿನ ಕ್ಲೇಶವ ನೀಗಿ ಅ.ಪ ಹಮ್ಮು ಬಿಟ್ಟುಬಿಡೋ ಈಶತ್ವ ಸುಮ್ಮನಲ್ಲ ನೋಡೋ ಸಮ್ಮತ್ಹೇಳಬೇಡೋ ಮಹವಾಕ್ಯ ಮರ್ಮಶೋಧ ಮಾಡೋ ಹಮ್ಮು ಅಹಂಕಾರ ದೂಡಿ ನಿರ್ಮಲಮತಿಗೂಡಿ ಒಮ್ಮನದಿಂ ಪರಬ್ರಹ್ಮನ ಪಾಡಿ 1 ಶಂಕೆಯನೀಡ್ಯಾಡೋ ಚಿತ್ತದ ಕ ಲಂಕ ದೂರ ಮಾಡೋ ಓಂಕಾರರ್ಥ ಮಾಡೋ ಬ್ರಹ್ಮದ ಅಂಕಿತಿಟ್ಟು ಪಾಡೋ ಕಿಂಕರನಾಗದೆ ಶಂಕರ ನಿನಗೆಲ್ಲಿ ಮಂಕುತವನವ ಬಿಟ್ಟು ಸಂಕರುಷಣನ 2 ಹಾಳು ವಾಸನೆ ತೂರಿ ನಿಜವಾದ ಶೀಲಜನರ ಸೇರಿ ಮೂಲತತ್ತ್ವದಾರಿ ಅನುಭವ ಕೀಲಿ ತಿಳಿದು ಭೇರಿ ತಾಳನಿಕ್ಕುತ ಮಮಶೀಲ ಶ್ರೀರಾಮನ ಮೇಲೆಂದು ನಂಬಿ ಭವಮಾಲೆ ಗೆಲಿದು ನಿಜ 3
--------------
ರಾಮದಾಸರು
ದುಃಖವಿಲ್ಲವೋ ಪರಮಾತ್ಮನಿಗೆ ಲಿಂಗದ ದೇಹದದುಃಖವಿಲ್ಲವೋ ಪರಮಾತ್ಮನಿಗೆ ಪ್ರತ್ಯಗಾತ್ಮನಿಗೆದುಃಖವುಂಟೆ ನಿಜ ನಿರ್ಲಿಪ್ತಗೆಮಿಕ್ಕ ಥಳಥಳ ಸಾಕ್ಷಿಬ್ರಹ್ಮಂಗೆಪ ಜಲದೊಳು ಹೊಳೆವ ಇಂದುವಿಂಗೆಜಲದ ಕಂಪವು ಹೊಳೆವುದೇ ಪೂರ್ಣಚಂದ್ರಗೆಆ ಪರಬ್ರಹ್ಮಂಗೆ ಹೊಳೆಯಲು ಲಿಂಗದಿಲಿಂಗದ ಗುಣಗಳು ಕೆಲವನು ತಿಳಿಯಲು ಪುಣ್ಯಾತ್ಮನಹೆ 1 ಪರಿ ಆತ್ಮಂಗೆ ಲಿಂ-ಗಾದಿ ಜನ್ಮವೊಂದುಗುಡೆ ಕಷ್ಟಪಡುವಿಕೆಲಿಂಗವೆ ಅಳಿಯಲು ನಿತ್ಯಾತ್ಮನುತಭಂಗವ ಕಳದೇ ಚಿದಾನಂದ ಬ್ರಹ್ಮನಹನು 2
--------------
ಚಿದಾನಂದ ಅವಧೂತರು
ದೇವನಲ್ಲವೇನೋ ಸದ್ಗುರು ಮಹಾದೇವನಲ್ಲವೇನೋ | ಆದಿಯೋಳ್ ಸಿದ್ಧರು ಹೋದ ದಾರಿಯ | ತೋರಿ ಭೇದವ ಬಿಡಿಸಿದ ಮೂರುತಿ ಪ ನರಜನ್ಮದೊಳಗೆ ಬಂದು ನೀನು | ಪ್ರಪಂಚದ ಕಡಲು ಮಧ್ಯದಿ ನಿಂದು | ಅರಿತು ಮರೆತು ಒಮ್ಮೆ ಗುರುವೆಂದು ನೆನೆದರೆ | ಗುರುತಿಟ್ಟು ಅವರಿಗೆ ಪರತರ ತೋರುವ 1 ಆಶಾಪಾಶವ ಬಿಡಿಸಿ ಮಾಡಿದ | ದೋಷ ಭವಂಗಳ ಕರ್ಮವ ಕೆಡಿಸಿ | ನ್ಯಾಸ ಧ್ಯಾಸದಿ ಜಪ ಮಾಡೆ ಗುರು |ಬೋಧ ಪ್ರಕಾಶವ ತೋರಿದ ಈಶನು 2 ಭಕ್ತಿ ಜ್ಞಾನವ ಹಿಡಿದು ನಂಬಿದಗೆ | ಮುಕ್ತಿಯ ನಿಶ್ಚಯದಿ ಪಾಲಿಸುವ | ಕರ್ತೃ ಸದ್ಗುರು ಭವತಾರಕ ಧರೆಯಲಿ | ಪ್ರತ್ಯಕ್ಷವಾದಂಥ ಪರಬ್ರಹ್ಮರೂಪನು 3
--------------
ಭಾವತರಕರು
ಧೀರ ಭವದೂರಾ ಸುಕುಮಾರಾ ಮುಖತೋರೋ ಜೀಯಾ ಪ ನಾರಾಯಣ ಕೇಶವ ಹರೀ ರಂಗ ನರರೂಪನೆ ಕರುಣಾಕರ ಅ.ಪ ಶರಣಾಗತ ಪರಿಪಾಲಿತ ಶರಣೆಂದೆನೊ ಸುರಮುನಿಹಿತ ಉರಗಾಸನ ಓಂಕಾರನೆ ನರಸಿಂಹನೆ ಪರಬ್ರಹ್ಮನೆ 1 ಕಾಮಾದಿಗಳ ಸಮರ ಸಹಿ ಪ್ರೇಮಾತಿಶಯ ಕೃಪಾಳೊ ನಾಮಾಮೃತ ಮಾಲಪಾಲನೆ ಮಹರಾಯನೆ ಮದವಾರಣ2 ಅಂಗಜಹತನಾಶಿವನುತ ಮಂಗಳ ಜಯ ತುಲಶೀರಾಮಾ ತಿಂಗಳಥರ ವಿನತಾಗುರಿ ಮಂಗಳಪುರಿ ಜಂಗಮವರ 3
--------------
ಚನ್ನಪಟ್ಟಣದ ಅಹೋಬಲದಾಸರು
ಧುಮ್ಮಸಾಲೆನ್ನಿರ್ಯೋ ಶ್ರೀ ಗುರುವಿನ ಬಳಗವೆ ಧುಮ್ಮಸಾಲೆನ್ನಿ ಸದ್ಗುರುವಿನ ಬಳಗವೆ ಧ್ರುವ ಗುರುವಿನ ಬಳಗವೆಂದು ಗುರುತುವಿಟ್ಟು ನೋಡಿರ್ಯೋ ಅರುಹಿನೊಳು ಮುಣಗಿ ಪರಮಸುಖ ಸೂರ್ಯಾಡಿರ್ಯೋ ಗರ್ವಿನಾಹರಿಗೆ ಬಿಟ್ಟು ಹರಿದುಹೋಗ ಬ್ಯಾಡಿರ್ಯೋ ಪರ್ವಣಿದೆ ಗುರುಕರುಣ ಪಡೆದು ಪೂರ್ಣಕೂಡಿರ್ಯೋ 1 ಧುಮ್ಮಸಾಲೆನ್ನಿರ್ಯೋ ಬೆರದು ಬ್ರಹ್ಮ ಸುಖವ ಸಮ್ಯಙÁ್ಞನದಿಂದ ದೂರಮಾಡಿ ಭವದು:ಖವ ನಿಮ್ಮ ನಿಮ್ಮೊಳು ನೋಡಿ ಘನ ಕೌತುಕವ ಹ್ಯಮ್ಮಿಯೊಳಗಾಗಿ ನೀವು ಹೋಗಬ್ಯಾಡಿ ಹೋಕುವ 2 ಕಣ್ಣದ್ಯರದು ನೋಡಿರ್ಯೊ ಚಿನ್ನುಮಯ ರೂಪವ ಭಿನ್ನವೆಲ್ಲದ್ಯದೆ ತನ್ನೊಳು ಸಮೀಪವ ಪುಣ್ಯ ಹಾನಿ ಮಾಡಿಕೊಂಡು ಹಿಡಯಬ್ಯಾಡಿ ಕೋಪವ ಕಣ್ಣ ದ್ಯರಸಿಕುಡುವ ಹಚ್ಚಿ ಗುರು ತಾನ ದೀಪವ 3 ನಮ್ಮ ನಿಮ್ಮ ದ್ಯಾವರೆಂದು ಹೊಯಿದಾಡಬ್ಯಾಡಿರ್ಯೋ ಬೊಮ್ಮನ ಪಡದ ಪರಬ್ರಹ್ಮನೊಬ್ಬ ನೋಡಿರ್ಯೋ ಇಮ್ಮನಕ ಹೋಗದೆ ಒಮ್ಮನವ ಮಾಡಿರ್ಯೋ ಸುಮ್ಮನೆ ಸುವಿದ್ಯದೊಳು ಬೆರದು ನಿಜಗೂಡಿರ್ಯೋ 4 ಸುಗ್ಗಿಯೋ ಸುಗ್ಗಿಯೋ ಸುಙÁ್ಞನದ ಲಗ್ಗಿಯೋ ಭಾಗ್ಯವಿದೆ ನೋಡಿ ಭಕ್ತಿ ಙÁ್ಞನ ವೈರಾಗ್ಯಯೋ ಬಗ್ಗಿ ನಡವ ಸಾಧುಸಂತ ಜನರಿಗಿದು ಯೋಗ್ಯಯೋ ಹಿಗ್ಗಿ ಹರುಷಪಡುವ ಮಹಿಪತಿಯ ನಿಜ ಸ್ರಾಘ್ಯಯೋ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧೂಪಾರತಿಯ ನೋಡುವ ಬನ್ನಿರಯ್ಯಾ| ಶ್ರೀ ಪರಬ್ರಹ್ಮ ಮೂರುತಿಯಾದ ಹರಿಯಾ ಪ ವಿವೇಕದಾರತಿ ಜ್ಞಾನನಾಳದಲಿ| ತೀವಿದಶಾಂಗದಿ ಪುಷ್ಟಗುಧಿಡುವಾ 1 ತಾಳಕಂಸಾಳ ಝೇಂಗಟೆ ಶಂಖರವಗಳು| ಮೇಲಾದ ಅನುಹಾತ ವಾದ್ಯ ಮಂಜುಳವಾ 2 ಕರುಣತ್ರಿವಾರ್ತಿಯು ವಿಶ್ವಸದಾಜ್ಯದಿ| ಮೆರೆವ ಚಿಜ್ಷ್ಯೋತಿ ಏಕಾರತಿ ಹೊಳೆವಾ 3 ಗುರು ಮಹಿಪತೀಸ್ವಾಮಿ ಚರಣಕಿರಣ ನೋಡಿ| ಹರುಷದಿ ಪಾಡುತ ಸುಖವ ಸೂರ್ಯಾಡಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಗುವು ಬರುತಿದೆ ಎನಗೆ ನಗುವು ಬರುತಿದೆಬಿಗಿದು ಶ್ವಾಸ ಮೂಗ ಹಿಡಿದು ನಿಟಿಲ ನೋಡುವವರ ಕಂಡು ಪ ಹಡೆದ ದೈವ ಹತ್ತಿರಿರಲು ನೋಡಿದರು ನೋಡದಂತೆಮೃಡನು ತಾನೆ ಇರಲು ಮೂಗ ಕೊನೆಯ ನೋಡುವವರ ಕಂಡು 1 ಹೊಳೆಯುತಿಹುದು ಪರಬ್ರಹ್ಮ ನಾನಾ ರೂಪಗಳನು ತಾಳಿತಿಳಿಯದಲೆ ತನ್ನನೀಗ ಕಣ್ಣು ಮುಚ್ಚುವವರ ಕಂಡು2 ಮನಕೆ ನಿಲುಕದವನು ತಾನೆ ಮಂಗಳವಾಗಿ ಬೆಳಗುತಿರಲುಮನದಿ ಪೂಜೆಯನ್ನು ಮಾಡ್ವ ಮಂದಮತಿಗಳನ್ನು ಕಂಡು3 ತಾನು ದೇವ ನಿಜವಿದಿರಲು ತಂದು ಪ್ರತಿಮೆ ಇಟ್ಟುಕೊಂಡುಏನೋ ಮಂತ್ರ ಒದರುತಿರುವ ಮನುಜರನ್ನು ಕಂಡು ನನಗೆ4 ಯೋಗ ಮಾಡಿಕೊಂಬುದೇನು ಯೋಗಮಾಡುವವನೆ ಇರಲುಯೋಗಿಯಾದ ಚಿದಾನಂದ ತಾನೆ ಸಾಕ್ಷಿಯಾಗಿ ಇರಲು5
--------------
ಚಿದಾನಂದ ಅವಧೂತರು