ಒಟ್ಟು 303 ಕಡೆಗಳಲ್ಲಿ , 58 ದಾಸರು , 263 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಾಕರಾ ಕಮಲಾರಮಣ ಕರಿರಾಜ ಬಂಧನ ಹರಣಾ ಸುರ ಬ್ರಹ್ಮ ಮುಖಾರ್ಚಿತ ಚರಣಾ ಶರಣಾಗೆಲೋ ದೀನೋದ್ಧರಣಾ ಪ ಅತಿಸುಂದರ ನಂದ ಕುಮಾರಾ ಸುತ ನಾಗೈ ತಂದನು ಮಾರಾ ಅತನೇ ಕುಸುಮದ ಶರೀರಾ ಸುತ ಸದ್ಗುಣ ಗಣ ಮಂದಾರಾ ಪ್ರತಿಯುಗದಲಿ ಧರಿಸೈವತಾರಾ ಕ್ಷಿತಿಯೊಳು ಪಾಲಿಪ ಸುರನಿಕರಾ 1 ಜಲಧಿ ಯೊಳಗೆರಡು ರೂಪಾದೆ ಸಲೆ ವೇದಾಮೃತವನು ತಂದೆ ಬಲಿದೀ ಕ್ರೂರಾಂಗವ ವಿಡಿದೆ ಇಳೆಸಲೆ ಪ್ರಲ್ಹಾದರ ಹೊರೆದೆ ನೆಲೆ ಪ್ರಥಮಾಶ್ರಮದಲಿ ನಿಂದೇ ಬಲಿ ಜಮದಗ್ನ್ಯರ ತೋಷಿಸಿದೆ 2 ಎರಡನೆ ವರ್ಣದೊಳಗೆ ಜನಿಸಿ ಸುರ ಪಾಂಡವರೇಳಿಗೆ ಬಲಿಸಿ ನೆರೆ ಅಂತ್ಯಯುಗದಿ ಅವತರಿಸಿ ಪುರಹರ ದ್ವಿಜರಭಿಮತ ಸಲಿಸಿ ಗುರು ಮಹಿಪತಿ ಪ್ರಭು ಕರುಣಿಸಿ ಹೊರಿಯೋ ನಿನ್ನೆಚ್ಚರ ನಿಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕರುಣಿಸುವುದೆನಗಿತು | ಕರಿವರದ ಕೃಷ್ಣಾ |ನಿರುತ ನಿನ್ನಯ ಸ್ಮರಣೆ | ವೆರಕವಾಗಲಿ ಮನಕೆ ಪ ಪರಸತಿಯರೊಲಿಮೆಗೇ |ಎರಗುವೀ ಮನವನ್ನು ಬರ ಸೆಳೆದು ನಿನ್ನಂಘ್ರಿ | ಸರಸಿಜದೊಳಿರಿಸೋ |ಶರಣ ವತ್ಸಲನೆಂಬೊ | ಬಿರಿದು ನಿನ್ನದು ಇರಲುಬರಿದೇಕೆ ತಡಗೈವೆ | ಮರುತಾಂತರಾತ್ಮಾ 1 ಮುದಿತನದ ತನುವಿನಲಿ | ಮದಡಾಗಿ ಮೈಮರೆವೆಹೃದಯ ಸದನದಿ ನಿನ್ನ | ಪದವ ನೋಡದಲೇಎದುರಾಳಿ ತತ್ವೇಶ | ರಧಿಕಾರ ತಪ್ಪಿಸುತಪದುಮನಾಭನೆ ನಿನ್ನ | ಪದ ತೋರೊ ಘನ್ನಾ 2 ಪುಂಡಲೀಕನಿಗೊಲಿದೆ | ಪಾಂಡವರ ಪಾಲಿಸಿದೆಪುಂಡರೀಕಾಕ್ಷ ದೃಹಿ | ಣಾಂಡಗಳ ವಡೆಯಾ |ಅಂಡಜಾಧಿಪ ತುರಗ | ಕುಂಡಲಿಯ ಶಯನ ಹೃತ್‍ಪುಂಡರೀಕದಿ ತೋರೊ | ಗುರು ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಕರ್ಪೂರದಾರತಿಯ ತಂದೆತ್ತಿರೆ ಚೆಲ್ವಸುಪ್ರಕಾಶಗೆ ಸುಜನರ ಕಾಯ್ವಗೆಪಾಂಡವಭಾವಗೆ ದೇವರ ದೇವಗೆನಿರ್ಜರೇಂದ್ರನ ಬಲಿ ಗರ್ಜಿಸುತಿರೆ ಕಂಡುಅರ್ಜುನಪ್ರಿಯ ತಾನು ಕುಬ್ಜನಾಗಿಹೆÉಜ್ಜೆ ಭೂಮಿಯ ಬೇಡಿ ಬಲಿಯ ಗರ್ವವನುನಿರ್ಜಿಸಲು ಬಂದ ವಾಮನಗೆ ನಿಸ್ಸೀಮನಿಗೆ ಪೂರ್ಣ ಕಾಮನಿಗೆ 1 ನಳಿನನಾಭನೆಂದು ತಿಳಿದು ಬೇಗನೆ ಬಲಿಕೆಳದಿಯ ಕರೆದುದಕವತರಿಸಿಚಲುವ ಪಾದವ ತೊಳೆದಿಳೆಯ ದಾನವ ಮಾಡೆನಳಿನಜಾಂಡಕ್ಕಾಗಿ ಬೆಳೆದವಗೆ ಬಹು ತಳೆದವಗೆ-ಭೂಮಿಯಳೆದವಗೆ 2 ಬಲಿಯ ಭಕ್ತಿಗೆ ಮೆಚ್ಚಿ ಚೆಲುವ ಉಡುಪಿನ ಕೃಷ್ಣಉಳಿದ ಭೂಮಿಯ ತೋರೆನ್ನುತ ನುಡಿಯೆಸತಿ ನಾಚಿಕೆಯಿಂದ ತನ್ನಳೆದುಕೋ ಎನ್ನತಲೆಯ ಮೆಟ್ಟಿದ ಬಹು ವಿಕ್ರಮಗೆ ಪರಾಕ್ರಮಗೆ ತ್ರಿವಿಕ್ರಮಗೆ3
--------------
ವ್ಯಾಸರಾಯರು
ಕಾಯಬೇಕೆನ್ನ ನೀನು ಶ್ರೀ ಗುರು ಎನ್ನ ಧ್ರುವ ಪಕ್ಷ ಪಾಂಡವ ಪ್ರಿಯ ಅಕ್ಷಯಾಪದನಿಶ್ಚಯ ಲಕ್ಷುಮಿ ಸುಹೃದಯ ರಕ್ಷಿಸೊ ನೀ ಎನ್ನಯ್ಯ 1 ಪವಿತ್ರ ಪ್ರಣವರಿಸಿ ಸುವಿದ್ಯದೊಳು ಬೆರಸಿ ಭವ ಭಯವು ಹಿಂಗಿಸಿ 2 ಸೋಹ್ಯ ಸೊನ್ನೆಯದೋರಿ ದಯಮಾಡೊ ಮುರಾರಿ ಸಾಹ್ಯ ಮಾಡೊ ಸಹಕಾರಿ ಮಹಿಪತಿ ಸ್ವಾಮಿ ಶ್ರೀಹರಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯಯ್ಯ ಕಂಜಲೋಚನ ದಯಲೆನ್ನ ಕರುಣಾ ದಯಲೆನ್ನ ಧ್ರುವ ಅಕ್ಷಯಾನಂದ ನೀ ಪೂರ್ಣ ಲಕ್ಷುಮೀ ರಮಣ ಸಗುಣಾ ಲಕ್ಷ್ಮೀರಮಣ ಪಕ್ಷಪಾಂಡವರ ಪ್ರಾಣ ರಕ್ಷಿಸೊ ನಾರಾಯಣ 1 ಅಣುರೇಣು ವೊಳನುಕೂಲ ಮುನಿಜನಪಾಲ ಲೋಲಾ ಘನಸುಖದ ಕಲ್ಲೋಳ ನೀನೆ ದೀನದಯಾಳಾ 2 ಕರುಣಾಸಾಗರ ಪೂರ್ಣ ಹೊರಿಯೊ ಮಹಿಪತಿಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾರಣವು ತಿಳಿಯದೊ ಕರುಣ ನಿಧಿಯೇ ಪ ಪರಿ ಮೌನವಾಗಿಪ್ಪ ಅ.ಪ. ಅನ್ಯರಿಗೆ ತಲೆವಾಗಿ ಬಾಯ್ತೆರೆದು ಬೇಡುವಂಥಾ ಸಮಯ ಬಂದೊದಗಿರಲಾಗಿ ನೋಡುವುದುಚಿತವೇ ಅನಿಮಿತ್ತ ಬಂಧೊಈ ವಿಧದ ದುಷ್ಕರ್ಮ ತಂದೊದಗಿಸುವುದಕೆ ಅನ್ಯ ಜೀವರೇ ಕಾಯಾ ಹೇ ಜೀಯಾ 1 ತಾಪ ಸಾರ ಉದ್ದಂಡ ಪಾಂಡವ ಪ್ರೀಯಾ ಹೇ ಜೀಯಾ 2 ಭಂಗ ಪಾದ ಅದುಮದ ಭೃಂಗನೆನಿಸುವೊ ಧವಳ ಗಂಗೆಯ ದಾಸಾ ತಂದೆವರದಗೋಪಾಲವಿಠಲನ ದಾಸಾ3
--------------
ತಂದೆವರದಗೋಪಾಲವಿಠಲರು
ಕುದುರೆ ಕಂಡೀರ್ಯಾ ಬಿಳಿ ಕುದುರೆ ಕಂಡೀರ್ಯಾ ಚೆಲುವ ಕುದುರೆ ಕಂಡೀರ್ಯಾ ಮಧ್ವರಾಯರಿಗೊಲಿದ ಕುದುರೆ ವಾದಿರಾಜರ ಪೊರೆದ ಕುದುರೆ ಇಂದಿರಾ ದೇವಿಯನಪ್ಪಿದ ಕುದುರೆ ಬಂದರೆ ನರರು ಬೆದರದಂಥ ಕುದುರೆ 1 ಮಂದರಗಿರಿಯನ್ನೆತ್ತಿದ ಕುದುರೆ ಚಂದಿರನಂತೆ ಪೊಳೆಯುವ ಕುದುರೆ ಸೋದೆಯ ಪುರದೊಳಿರುವ ಕುದುರೆ ಮೋದದಿಂದ ಮೆರೆಯುವ ಕುದುರೆ 2 ನರನ ರಥವನು ಏರಿದ ಕುದುರೆ ಸ್ಮರನ ತಾತನೆನಿಪ ಕುದುರೆ ಸುರತರುವನೆ ಭೂಮಿಗೆ ತಂದ ಕುದುರೆ 3 ಕಡಲೆ ಹೂರಣ ಮೆಲುವ ಕುದುರೆ ಪಂಡರಪುರದಿ ಮೇದ ಕುದುರೆ ಪುಂಡರೀಕನಿಗೆ ಒಲಿದಿಹ ಕುದುರೆ ಪಾಂಡವರನೆ ಪೊರೆದ ಕುದುರೆ 4 ರಾಜನಾಥನೆನಿಪ ಕುದುರೆ ವಾಜಿವದನ ತಾನೆನಿಪ ಕುದುರೆ ಕಂಜಸುತಗೆ ಶ್ರುತಿಯನ್ನಿತ್ತ ಕುದುರೆ ಕಂಜನಾಭನೆನಿಪ ಕುದುರೆ 5
--------------
ವಿಶ್ವೇಂದ್ರತೀರ್ಥ
ಕೃಷ್ಣ ಎಂಥಾದೊ ನಿನ್ನ ಕರುಣ ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ ದುಷ್ಟಜನರ ಮಾಡಿದ್ಯೊ ನೀ ಮರ್ದನಿ ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣೆ 1 ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ 2 ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ ಕಾಲಿಲೊದ್ದು ಕೊಂದ್ಯೋ ಶಕಟಾಸುರನ ಬಾಲತನದಲಿ ಕೆಡಹಿದ್ಯೊ ಮಾವನ ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ 3 ತುರುಗಳ ಕಾಯ್ದ್ಯೊ ನೀ ಗೋವಿಂದ ಬೆರಳೆಲೆತ್ತಿದ್ಯೊ ಹಿರಿಯ ಮುಕುಂದ ಮರುಳು ಮಾಡಿದ್ಯೊ ಗೋಪಿಕೇರ ವೃಂದ ಹರುಷಗೈಸಿದೆ ಅನೇಕ ಪರಿಯಿಂದ 4 ಹಾಲು ಬೆಣ್ಣೆ ಕದ್ದು ತಿಂಬು ನಿನ್ನಾಟ ಬಾಲಗೋಪಾಲರ ಕೂಡಿ ನಿನ್ನೂಟ ಚಲುವ ನಾರೇರ ನೋಡುವ ನಿನ್ನೋಟ ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ 5 ಗುರುಮಗನ ತಂದುಕೊಟ್ಯೋ ನೀ ಪ್ರಾಣ ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ ಶರಣಾಗತರ ವಜ್ರಪಂಜರು ಪೂರ್ಣ ವರಮುನಿಗಳಿಗಾಗಿಹೆ ನೀ ನಿಧಾನ 6 ಒಲಿದು ಪಾಂಡವರಿ ಗಾದಿ ಸಹಕಾರಿ ಬಲವ ಮುರಿದ್ಯೊ ನೀ ಕೌರವರ ಸಂಹಾರಿ ಪರಿ ಅಟ ನಿನ್ನದೊ ಶ್ರೀ ಹರಿ ಪರಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣಾರ್ಪಿತವೆಂದು ಕೊಡುಲು ಎ-| ಳ್ಳಷ್ಟಾದರೂ ಮೇರು ಪರ್ವತ ಮೀರುವದು ಪ ಗಣ್ಯವಿಲ್ಲದೆ ಶಿಷ್ಯ ಸಹಿತ ಹರರೂಪ ಮುನಿ ಅ- ರಣ್ಯದಲಿ ಪಾಂಡವರು ಇರಲು ಬಂದು || ಪುಣ್ಯಬೇಕೆಂದೆನಲು ಬಂದು ದಳ ಶಾಖಾ ಕಾ- | ರುಣ್ಯದಲಿ ಹರಿ ಎನಲು ಅಪರಿಮಿತವಾದುದು 1 ಹಸ್ತಿನಾಪುರದಲ್ಲಿ ಸಕಲ ದೇವಾದಿಗಳ | ಮಣಿ ವಿದುರನ ಮನೆಯಲ್ಲಿ || ಹಸ್ತು ಬಂದುದಕೆ ಉಪಾಯವೇನೆಂದೆನಲು | ಹಸ್ತದೊಳು ಪಾಲ್ಗುಡತಿಯೆರಿಯೆ ಮಿಗಿಲಾದುದೊ2 ಅಣು ಮಹತ್ತಾಗಲಿ ಆವಾವ ಕರ್ಮಗಳು | ತೃಣನಾದರರಿತು ಅರಿಯದೆ ಮಾಡಲು || ಕ್ಷಣ ತನ್ನದೆನ್ನದೆ ಅರ್ಪಿತನೆ ನಿಕ್ಷೇಪ | ಗುಣನಿಧಿ ವಿಜಯವಿಠ್ಠಲನ ಪುರದಲ್ಲಿ 3
--------------
ವಿಜಯದಾಸ
ಕೇಳಿ ಬಂದೆ ಪ ಕೇಳಿ ಬಂದೆ ನಿನ್ನ ಮೊರೆಹೊಕ್ಕವರ ಕೈಯ್ಯಾ | ಇಳೆಯೊಳಗ ಬಿಡನೆಂಬ ಬಿರುದವ ನಾ1 ಸುಗ್ರೀವ ತಾ ಪುಗೆ ಒಡಲವನು ವಾಲಿಯನು | ನಿಗ್ರಹಿಸಿರಾಜ್ಯ ಪದವಿತ್ತನೆಂದು 2 ಶರಧಿ ಧಡಿಯಲಿ ವಿಭೀಷಣನು ಶರಣವನು | ಬರಲು ಧೃಡ ಸಂಪತ್ತು ನಿತ್ತನೆಂದು 3 ಖಂಡಿಸಿ ಕೌರವರ ಬಳಗವನು ಸೈನ್ಯವನು | ಪಾಂಡವರನು ಸ್ಥಾಪನೆ ಗೈದಾನೆಂದು 4 ಏನ್ನನು ಪೇಕ್ಷಿಸದಿರು ನೀನು ಕಾರಣನು | ಸನ್ನುತ ಮಹಿಪತಿ ಸುತ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೊಂಡಜ್ಜಿ ಶ್ರೀ ಜನಾರ್ದನ ಸ್ವಾಮಿ ಸ್ತೋತ್ರ ಎಂಥಾ ಸುಂದರನೊ ಶ್ರೀಕಾಂತನೂ ||ಅ|| ಸಂತರ ಮನೋರಥ ಸಂತತ ಪಾಲಿಸಿಪಂಥಾವ ಗೆಲಿಪ ಮಹಾಂತನೋ - ಶ್ರೀಕಾಂತನೂ ಅ.ಪ. ಮಾನಿನೀಯಳ ಬಿಟ್ಟು | ಮೌನಿಯಂದದಿ ನೀನುಕಾನನವನೆ ಸೇರಿ ನೆಲೆಸೀರ್ಪುದೂ | ಮುನಿಜನ ವಂದ್ಯಾ 1 ತೊಂಡ ಜನರು ನಿನ್ನ | ಬಂಡುಣಿಯಂದದಿಪುಂಡು ಮಾಡುವರೆಂದು ಬಂದೆಯಾ | ಪುಂಡರಿಕಾಕ್ಷಾ 2 ಹಿಂಡು ಭಕ್ತರು ತಮ್ಮ | ದಿಂಡು ಮಂಡಿಪರೆಂದು ಕೊಂಡಜ್ಜಿಯಲಿ ನೆಲಿಸೀದ್ಯಾ | ಪಾಂಡವ ಪ್ರೀಯಾ 3 ವೇಲಾಪುರಿಗೆ ಪೋಗ | ಲೊಲ್ಲೆನೆಂದೆನುತಲಿಇಲ್ಲೇ ನೆಲಸಿ ಪೂಜೆಗೊಂಬುದು ಫಾಲಾಕ್ಷ ಪ್ರಿಯನೇ 4 ಎಲ್ಲಿಪೋದರೂ ಬಿಡ | ಲೊಲ್ಲರೂ ನಿನ್ನ ಜನಸಲ್ಲಿಸೆನ್ನಯ ಮನೋಭೀಷ್ಟವ | ಹೇ ಜನಾರ್ಧನಾ 5 ಆರು ಕಾಯುವರಿಲ್ಲ | ಸಾರಿದೆ ತವ ಚರಣಪೋರನಾಮಯ ಹರಿಸಯ್ಯಾ | ನಾರದ ವಂದ್ಯಾ 6 ಗುರುಗಳಂತರ ಗುರು | ಗೋವಿಂದ ವಿಠಲನೆಪರಿಪರಿ ನಿನ ಕೀರ್ತಿ ನುಡಿಸಯ್ಯಾ | ಸುರವರ ವಂದ್ಯಾ7
--------------
ಗುರುಗೋವಿಂದವಿಠಲರು
ಕೊಂಡಾಡಬಹುದೆ ಯತೀಂದ್ರ ಎನ್ನಾ ಪಾಂಡವಪ್ರಿಯನಾಭಜಕ ವಾದಿರಾಜಯತಿ ಪ ನಾನಾ ಜನುಮದಾ ಯೋನಿಮುಖದಲಿ ಬಂದು ಮಾನವಳಿದು ಜ್ಞಾನಶೂನ್ಯನಾಗಿಹ ಶ್ವಾನಮನದ ಮೂಢಮನುಷ್ಯನಾಗಿ ಹೀನ ಅಹಂಕಾರಪೂರಿತ ದೋಷಿಂiÀi1 ಅರಿಷಡ್ವರ್ಗದೊಳು ಸಿಲುಕಿ ನರಗುರಿಯಾಗಿ ಪರರವಾರ್ತೆಯ ಸವಿವ ಹಗಲು ಇರಳೂ ದುರುಳ ದುಶ್ಚೇಷ್ಟಿಕನು ಬಹುದುರಾತ್ಮನು ನಾನು ಗುರುಹಿರಿಯರಿಗೆ ಎರಗದ ಗೂಢಪಾಪಿಯನು 2 ಒಡೆಯ ವೈಕುಂಠ ವಿಠಲನ ಭಜಿಸದೆ ಪೊಡವಿಯೊಳು ಕ್ಷುದ್ರ ದೈವಗಳಿಗೆಲ್ಲ ಪೊಡಮಡುತಿಹೆ ಸ್ವಾಮಿದ್ರೋಹಿ ಗರುವಿಯಾ ಕಡುಪಾತಕನ್ನ ನಡತೆಯನು ನೀನರಿಯದಲೇ 3
--------------
ಬೇಲೂರು ವೈಕುಂಠದಾಸರು
ಕೋಲೆಂದು ಪಾಡಿರೆ ಕೋಮಲೆಯರೆಲ್ಲಾ ಅಮ್ಮಯ್ಯ ಗೋಪಾಲ ಕೃಷ್ಣಯ್ಯಗ ಶರಣಿಂದು ಕೋಲ ಪ. ಮುದ್ದು ಸುಭದ್ರ ನೀನು ಗೆದ್ದುಬರುತಿಯೆಂದುಎದ್ದ ಬೃಹಸ್ಪತಿಯು ತವಕದಿ ಕೋಲಎದ್ದ ಬೃಹಸ್ಪತಿಯು ತವಕದಿ ಅರ್ಜುನ ಸಿದ್ಧ ಮಾಡೆಂದ ರಥಗಳ ಕೋಲ 1 ಕೇಳಿರಿ ನಿಮಗೆಲ್ಲ ಭಾಳ ಬಲವದೆಕಾಳಿ ಮೊದಲಾದ ಕೆಲದೆಯರುಕಾಳಿ ಮೊದಲಾದ ಕೆಲದೆಯರು ಹರುಷದಿ ಹೇಳಿ ಬೃಹಸ್ಪತಿಯು ನುಡಿದಾನು ಕೋಲ2 ಪಾಂಡವರೆಲ್ಲರು ಉಂಡು ವೀಳ್ಯವನ್ಹಾಕಿಪುಂಡರಿಕಾಕ್ಷನ ಅರಮನೆಗೆ ಕೋಲಪುಂಡರಿಕಾಕ್ಷನ ಅರಮನೆಗೆ ಐವರುತಂಡ ತಂಡದಲೆ ನಡೆದಾರು ಕೋಲ3 ದ್ರೌಪದಿ ಸುಭದ್ರಾ ಇಬ್ಬರು ಒಂದಾಗಿಅಗಣಿತ ಒನಿತೆಯರು ಕೋಲಅಗಣಿತ ಒನಿತೆಯರು ಕೂಡಿಕೊಂಡು ತಾವುಪ್ರೇಮದಿಂದಲಿ ಬರುತಾರೆ ಕೋಲ 4 ಅರಿಷಿಣ ಕುಂಕುಮ ಗಂಧಬೆರೆಸಿ ಪರಿಮಳದಿಂದಸರಸಾದ ಸುರಭಿ ಕುಸುಮವ ಕೋಲಸರಸಾದ ಸುರಭಿ ಕುಸುಮರಾಮೇಶನ ಅರಸಿಯರಿಗೆ ಒಯ್ವೋ ಉಪಚಾರ ಕೋಲ 5
--------------
ಗಲಗಲಿಅವ್ವನವರು
ಕ್ಷೇತ್ರದರ್ಶನ ಅ. ಕಂಚಿ ಕರಿಗಿರಿವಾಸ ವರದರಾಜ ಕರಿಗಿರಿವಾಸ ಪ ದುರಿತ ವಿನಾಶನೆ ಸುರಮುನಿ ಪೋಷನೆ ಭವರೋಗ ನಾಶನೆ ಅ.ಪ ರಾಜನೆಂಬೊ ಬಿರುದು ಪೊತ್ತಿಹ ದೇವ 1 ಮಾಯೆಯ ಬಿಡಿಸೊ ನಿನ್ನಲಿ ಎನಗೆ ಮೋಹವ ನಿಲಿಸೊ ಪಾದಧ್ಯಾನವನಿತ್ತು ಕಾಯೊ ವರದರಾಜ 2 ಚತುರಹಸ್ತದಲೀ ಕೈಪಿಡಿದು ದಿವ್ಯವಾದ ಶಂಖಚಕ್ರಗದೆಯಲಿ ನಿಮ್ಮ ಪಾದವ ಸೇರಿಸು ಎನ್ನ ಚಿತ್ತಜಜನಕ 3 ಹಾ ಕೃಷ್ಣ ಎಂದು ದ್ರೌಪದಿ ಕರೆಯೆ ಮನಕೆ ನೀತಂದು ಅಕ್ಷಯ ಮಾಡಿದೆ ಪಕ್ಷಿವಾಹನ ಪಾಂಡವಪಕ್ಷ ಶ್ರೀಕೃಷ್ಣ 4 ಇನ್ನು ನಾ ಜನಿಸಲಾರೆನೊ ಹೀನಜನ್ಮದಿ ಮನ್ನಿಸಿ ರಕ್ಷಿಸೊ ಎನ್ನ ವರದರಾಜ5 ಭವಬಿಸಲಿನಲಿ ಬಳಲಿ ಬಂದೆ ತಾಪತ್ರಯದಲ್ಲಿ ನಿಮ್ಮ ಚರಣ ಪಂಕಜವೆಂಬೊ ಆತಪತ್ರದ ನೆರಳ ತಾಪ ದೂರ ಮಾಡಿಸೊ ದೇವ 6 ನಾಮಾಡಿದಂಥ ಪಾಪಗಳೆಲ್ಲ ಸಾವಿರ [ಅ]ನಂತ ಎಣಿಸಿ ನೋಡಲು ಏನೂ ದಾರಿಯ ಕಾಣೆನು [ಎನ್ನ] ಸರ್ವಾಪರಾಧವ ಕ್ಷಮಿಸಿ ರಕ್ಷಿಸೊ ದೇವ 7 ವಿಂದ್ಯಾರಣ್ಯದಲಿ ಭಕ್ತರು ಕರೆಯೆ ಬಂದೆ ಬೇಗದಲಿ ಇಂದಿರೆ ಸಹಿತಾಲೆ ತೀರ್ಥವ ಗ್ರಹಿಸಿ ಭಕ್ತರ ಕರೆ ತಂದು ಕರಿಗಿರಿಯಲಿನಿಂದ ವರದರಾಜ ಕರಿಗಿರಿವಾಸ 8
--------------
ಯದುಗಿರಿಯಮ್ಮ