ಒಟ್ಟು 79 ಕಡೆಗಳಲ್ಲಿ , 35 ದಾಸರು , 78 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಂತ್ರೋದ್ಧಾರಕ ರಾಯರ ಸ್ಮರಣೆಯ ಮಾಡಿ ಅಂತರಾತ್ಮನ ದಾಸರ ಪ ಸಂತತ ಮನದಿ ನಿಶ್ಚಿಂತೆಯೊಳ್ ಸ್ಮರಿಸಲು ಸಂತಾಪಗಳ ಕಳೆದು ಚಿಂತಿತಾರ್ಥವನೀವ ಅ.ಪ ಶರಧಿಯ ನೆರೆದಾಟಿದ ಕಾಲುವೆಯಂತೆ ನಲಿದು ಲಂಕೆಯ ಸಾರಿದ ಬಲಶಾಲಿ ಲಂಕಿಣಿಯು ಪುರವ ಕಾಯುವ ಶ್ರಮ ಹರಿಸಿ ಸೂಕ್ಷ್ಮದ ರೂಪ ಧರಿಸಿ ಪುರವ ಪೊಕ್ಕು ಪರಿಪರಿ ಕೋಟೆಗಳಿರವನೆ ಕಾಣುತ ಕರಿ ಹಯ ರಥ ಶಾಲೆಗಳ ಪರಿಕಿಸುತ ಖಳನರಮನೆ ಪೊಕ್ಕರು ಫಲವಿಲ್ಲದೆ ಕಡೆಗೆ ಅಶೋಕ ವನದೊಳು ಚರಿಸಿದ1 ವನದ ಮಧ್ಯದೊಳಿರಲು ರಕ್ಕಸ ಬಹು ಘನತೆಯಿಂದಲಿ ಬರಲು ಬಣಗು ದೈತ್ಯನ ತೃಣಕೆಣೆಮಾಡಿ ನುಡಿಯಲು ಪವನ ತನಯ ನೋಡಿ ಮನದಿ ಸ್ತೋತ್ರವ ಮಾಡಿ ಮನದೊಳು ಶ್ರೀ ರಘುವರನನು ಧ್ಯಾನಿಸಿ ಘನ ಮುದ್ರಿಕೆ ಮುಂದಿಡಲಾ ಜಾನಕಿ ನಯನಂಗಳ ಕಂಬನಿಗರೆಯುತ ಮುಂದಿಹ ಹನುಮನೊಳಿಂತೆನೆ ಲಾಲಿಸಿದ 2 ಯಾವ ರಾಯರ ದೂತನೋ ಪೇಳಯ್ಯ ಬಲು ಸಾವಧಾನದಿ ಮಾತನು ಶ್ರೀರಾಮಚಂದ್ರ ನಿನ್ನ ಸೇರಿ ಮಿತ್ರತ್ವಮಾಡೆ ಕಾರಣವೇನುಂಟು ಸಾವಧಾನದಿ ಪೇಳು ಯಾರನುಮತಿಯಿಂದೀ ಪುರ ಪೊಕ್ಕೆಯೊ ಯಾರಿಗಾಗಿ ಈ ವಾನರ ರೂಪವು ಪೋರನಂತೆ ಕಾಣುವಿ ನಿನ್ನ ವಚನವು ಬಾರದು ಮನಕೆಂದೆನಲು ಮಾತಾಡಿದ 3 ಜನಕ ಜಾತೆಯೆ ಲಾಲಿಸು ದೈತ್ಯರ ಸದೆ ಬಡಿಯುವನೆಂದು ಭಾವಿಸು ಇನಕುಲ ತಿಲಕನ ಚರಣಸೇವೆಯು ಮಾಡೆ ಜಲಜಾಕ್ಷನಾಜ್ಞದಿಂದ ಭುವಿಯೊಳು ವಾನರ- ಕುಲದೊಳಗವತರಿಸುವ ಶತ ಸಂಖ್ಯೆಯೊಳಿರುತಿರೆ ಗಿರಿವನಚರಿಸುವ ಸಮಯದಿ ಜಲಜಾಕ್ಷಿಯನರಸುತ ರಾಘವಬರೆ ಚರಣಾಂಬುಜಗಳಿಗೆರಗಿದೆವೆಂದೆನಲು 4 ಜಲಜಾಕ್ಷಿ ನಿಮ್ಮ ಕಾಣದೆ ಮನದೊಳಗೊಂದು ಘನವಾದ ಚಿಂತೆ ತಾಳಿದೆ ಜನಕ ಜಾತೆಯ ಪಾದಾಂಬುಜವ ಕಾಣದೆ ಮರಳಿ ಪುರವ ಸಾರುವದೆಂತು ರವಿಸುತನಾಜ್ಞೆ ಮೀರ- ಲರಿಯದೆ ಈ ಉಪವನದೊಳಗರಸುವ ಸಮಯದಿ ಶ್ರೀವರನಿಯಮಿಸಿ ಪೇಳಿದ ಪರಿಯನು ತಿಳಿಯುತ ಪರಮಾನಂದದಿ ರಘುವರನ್ವಾರ್ತೆಯ ಲಗುಬಗೆ ಪೇಳಿದ 5 ಕುರುಹು ಕೊಡಮ್ಮ ಜಾನಕಿ ಮನಸಿನ ಚಿಂತೆ ಬಿಡುಬೇಗ ಭದ್ರದಾಯಕಿ ಕ್ಷಣದೊಳ್ ಶ್ರೀರಾಮನೊಳು ಇನಿತೆಲ್ಲವನು ಪೇಳಿ ಕ್ಷಣದಿ ರಕ್ಕಸರನೆಲ್ಲ ನೆಲಸಮ ಮಾಳ್ಪೆನೆಂಬೀ ಅಣುಗನಿಗಪ್ಪಣೆಯನು ಪಾಲಿಸೆನಲು ಅನುಮತಿನೀಡಿದ ಅವನಿಜೆಗೊಂದಿಸಿ ಕ್ಷಣದೊಳು ವನಭಂಗವ ಮಾಡಿದ ನುಡಿ ಕೇ- ಳಿದ ರಾವಣನ ಪುರವ ಅನಲನಿಗಾಹುತಿ ಇತ್ತ 6 ಜಯ ಜಯ ಜಯ ಹನುಮಂತ ಜಯ ಜಯ ಬಲವಂತ ಜಯ ಶ್ರೀರಾಮರ ಪ್ರಿಯದೂತ ಜಯ ಜಯ ಜಯವೆಂದು ಸನಕಾದಿಗಳು ಪೊಗಳೆ ಅನಲ ಸಖನ ಸೂನುವನು ಸ್ತೋತ್ರದಿಂದ ಪಾಡೆ ಕಮಲಜಾದಿ ಸುರಗಣ ತಲೆದೂಗೆ ಶ್ರೀ ಕಮಲನಾಭ ವಿಠ್ಠಲನನು ಪಾಡುತ ಅಮಿತ ಪರಾಕ್ರಮವಂತನ ಪೊಗಳುತ ನಮಿಸಿ ಶ್ರೀರಾಮರ ಗುಣಗಳ ಪೊಗಳುವ 7
--------------
ನಿಡಗುರುಕಿ ಜೀವೂಬಾಯಿ
ರಾಘವೇಂದ್ರ ತೀರ್ಥರು ಕರುಣಿಗಳೊಳಗೆಣೆಗಾಣಿ ನಾ ನಿನಗೆ ಸ ದ್ಗುರುವರ ರಾ‌ಘವೇಂದ್ರ ಚರಣ ಕಮಲಯುಗ ಮೊರೆಹೊಕ್ಕವರ ಮನದ ಹರಕೆಯ ನಿರುತ ಈವೆ ನೀ ಕಾವೆ ಪ ರಾಘವೇಂದ್ರ ಗುರುವೆ ನೀ ಗತಿ ಎಂದನು ರಾಗದಿಂದಲಿ ಭಜಿಪ ಭಾಗವತರ ದುರಿತೌಘಗಳಳಿದು ಚ ನ್ನಾಗಿ ಸಂತೈಸುವೆ ನೀ ಸನ್ಮೌನಿ 1 ಸುಧೀಂದ್ರ ಯತಿಕರ ಪದುಮ ಸಂಭವ ಮಧು ವದ ಪಾದಾಂಬುಜ ಮಧುಪಾ ತ್ರಿದಶ ಭೂರುಹದಂತೆ ಬುಧ ಜನರೀಪ್ಸಿತ ಒದಗಿ ಪಾಲಿಸಿ ಪೊರೆವೆ ಮದ್ಗುರುವೆ 2 ಕುಧರದೇವನ ದಿವ್ಯರದನದಿ ಜನಿಸಿದ ನದಿಯ ತೀರದಿ ಶೋಭಿಪ ಸದಮಲ ಘನಮಂತ್ರ ಸದನನಿಲಯ ಜಿತ ಮದನ ಶ್ರೀ ಜಗನ್ನಾಥ ವಿಠಲದೂತ 3
--------------
ಜಗನ್ನಾಥದಾಸರು
ರಾಘವೇಂದ್ರ ರಾಯರಡಿಗೆ ಬಾಗಿ ನಮಿಸಿರೊ ನೀಗಿ ಭವದ ಬಂಧದಿಂದ ಮುಕ್ತರಾಗಿರೊ ಪ ಶಂಕೆಯಿಲ್ಲದೆ ವರಗಳ ಕೊಟ್ಟು ಚಿಂತೆ ಹರಿಸುವರ ಕಂತುಪಿತನ ಭಕ್ತರಿಗೆ ನಿರಂತರ ಸಂತಸ ನೀಡುವರ ಪಂಕಜನಾಭನ ಕಿಂಕರರ ಭಯ ಚಿಂತೆಯ ನೀಗುವರ ಶಂಖು ಕರ್ನರಿವರೆನ್ನುತ ಅಭಯದ ಕಂಕಣ ಕಟ್ಟಿಹರ 1 ಹಾಟಕಶ್ಯಪುತ್ರನು ವಿನಯದಿ ಪ್ರಾರ್ಥಿಸಿ ಪೂಜಿಸಿದ ಮಾಟಮುಖದ ದೇವನ ಪಾದಾಂಬುಜ ಧ್ಯಾನಿಸಿ ಸೇವಿಸಿದ ಕೋಟಲೆ ಭವದೊಳು ತಾಪವ ಪಡುವರ ಆಪದ ಪರಿಹರಿಸಿ ಭ- ವಾಟವಿದಾಟಿಸಿ ಪೊರೆದ ಪ್ರಹ್ಲಾದರ ಉಲ್ಲಾಸದಿ ಭಜಿಸಿರಿ2 ವ್ಯಾಸರಾಯರೆಂದು ಜಗದಿ ಪ್ರಖ್ಯಾತಿ ಪಡೆದವರ ದೇಶ ದೇಶದ ಭಕುತರ ಉಲ್ಲಾಸ ಕೊಡುವರ ಶ್ರೀ ಸುಧೀಂದ್ರಾರ್ಯರ ಪುತ್ರರೆನಿಸಿಕೊಂಬರ ಕ್ಲೇಶಗಳನೆ ಕಳೆವರೆಂಬ ಕೀರ್ತಿಪಡೆದರ3 ಕಂಗೊಳಿಪ ಕೋರೆಯಿಂದ ಬಂದ ಭದ್ರೆಯ ತೀರದಿ ಚಂದದಿಂದ ಮೆರೆವ ರಾಘ- ವೇಂದ್ರ ರಾಯರ ಕೊಂಡಾಡಿ ಪಾಡಿರೊ ಮನಕೆ ಸಂಭ್ರಮ ನೀಡುವರು ಪೊಂದಿದ ಪಾಪಗಳೆಲ್ಲವ ನೀಗಿಸಿ ಚಂದದಿ ಸಲಹುವರು 4 ಕರುಣದಿಂದ ಭಕ್ತರನೆಲ್ಲ ಸಲಹುತಿರ್ಪರ ಕಮಲನಾಭ ವಿಠ್ಠಲನಂಘ್ರಿ ಭಜನೆ ಮಾಳ್ಪರ ಕನಕಮಯದ ಮಂಟಪದಲಿ ಮರೆಯುತಿರ್ಪರ ಕರೆದು ಪ್ರಾರ್ಥಿಸುವವರ ಮನಕೆಹರುಷ ತೋರ್ಪರ 5
--------------
ನಿಡಗುರುಕಿ ಜೀವೂಬಾಯಿ
ರಾಮಾನುಜರೇ ನಮೋ ನಮೋಸ್ವಾಮಿ ಲಕ್ಷ್ಮಣ ರೂಪ ನಮೋ ನಮೋ ಪ ಪಿಡಿದಿರೆ ದಂಡಿಕಾ ವೇಷ್ಟಿ ಮೃದಿಕಾನಿಡುಶಿಖಿ ಯಜ್ಞೋಪವೀತದಿಂದತೊಡೆದ ದ್ವಾದಶನಾಮ ಶ್ರೀ ಚೂರ್ಣದಿ ಒಪ್ಪುವಒಡೆಯ ರಾಮಾನುಜರೆ ನಮೋ ನಮೋ 1 ಪಂಕಜನಾಭನ ಪಾವನ ಮೂರುತಿಶಂಕೆಯಿಲ್ಲದೆ ನೆನೆವರ ಪಾಲಿಪನೆಮುಂಕೊಂಡು ಶ್ರುತಿಮತ ಚಾರ್ವಾಕರ ಗೆದ್ದಓಂಕಾರ ಮೂರುತಿ ನಮೋ ನಮೋ 2 ಕೇಶವ ಪಾದಾಂಬುಜ ಮಧುಕರಾಪಾಷಂಡ ಗರ್ವಹರ ಗುರುತಿಲಕಶೇಷಾವತಾರಿ ಮುನೀಶವಂದಿತ ಆದಿಕೇಶವ ಮೂರುತಿ ನಮೋ ನಮೋ 3
--------------
ಕನಕದಾಸ
ರಾಯ ಬಾರೋ ತಂದೆ ತಾಯಿ ಬಾರೋ ನಮ್ಮ ಕಾಯೊ ಬಾರೋ ಮಾಯಿಗಳ ಮರ್ದಿಸಿದ ರಾಘವೇಂದ್ರ ರಾಯ ಬಾರೋ ಪ ಭಾಸುರ ಚರಿತನೆ ಭೂಸುರ ವಂದ್ಯನೆ ಶ್ರೀ ಸುಧೀಂದ್ರಾರ್ಯರ ವರಪುತ್ರ ರಾಯ ಬಾರೋ ಶ್ರೀ ಸುಧೀಂದ್ರಾರ್ಯರ ವರಪುತ್ರರೆನಿಸಿದ ದೇಸಿಕರೊಡೆಯ ರಾಘವೇಂದ್ರರಾಯ ಬಾರೋ 1 ವಂದಿಪ ಜನರಿಗೆ ಮಂದಾರ ತರುವಂತೆ ಕುಂದಾದಭೀಷ್ಟೆಯ ಸಲಿಸುತಿಪ್ಪ ರಾಯ ಕುಂದದಾಭೀಷ್ಟ ಸಲಿಸುತಿಪ್ಪ ಸರ್ವಜ್ಞ ಮಂದನಮತಿಗೆ ರಾಘವೇಂದ್ರ ರಾಯ ಬಾರೋ 2 ಆರು ಮೂರೇಳು ನಾಲ್ಕೆಂಟು ಗ್ರಂಥ ಸಾರಾರ್ಥ ತೋರಿಸಿದೆ ನ್ಯಾಯದಿಂದ ಸರ್ವರಿಗೆ ರಾಯ ಬಾರೋ ಸೂರಿಗಳರಸನೆ ರಾಘವೇಂದ್ರಾ ರಾಯ ಬಾರೋ 3 ರಾಮ ಪಾದಾಂಬುಜ ಸರಸಭೃಂಗ ಕೃಪಾಪಾಂಗ ಭ್ರಾಮಕ ಜನರ ಮಾನಭಂಗ ರಾಯ ಬಾರೋ ಭ್ರಾಮಕಜನ ಸನ್ಮಾನಭಂಗ ಮಾಡೀದಾ ಧೀಮಂತರೊಡೆಯನೆ ರಾಘವೇಂದ್ರಾ ರಾಯ ಬಾರೋ4 ಭೂತಳಾಧಿಪನಾ ಭೀತಿಯ ಬಿಡಿಸಿದೆ ಪ್ರೇತತ್ವ ಕಳೆದ ಮಹಿಷಿಯಾ ರಾಯ ಬಾರೋ ಪ್ರೇತತ್ವ ಕಳೆವ ಮಹಿಷಿಯಾ ಶ್ರೀಜಗ ನ್ನಾಥ ವಿಠ್ಠಲನಾ ಪ್ರೀತಿಪಾತ್ರಾ ರಾಯ ಬಾರೋ 5
--------------
ಜಗನ್ನಾಥದಾಸರು
ಲಕ್ಷ್ಮೀದೇವಿ ನಂಬಿದೆ ನಿನ್ನ ಪಾದಾಂಬುಜಯುಗಳವ- ಶಂಬರಾರಿ ಜನನಿಪ ಬೆಂಬಿಡದೆನ್ನಹೃದಂಬುಜದೊಳಗವಲಂಬಿಸಿ- ಸಲಹುಮದಂಬೆ ಸನಾತನಿ ಅ.ಪ ಅಂಬುಜಮುಖಿ....ಚಿಕುರೆ ಶರ ದಂಬುಜದಳನಯನೆ ಬಿಂಬಫಲಾಧರೆ 1 ಕರ್ಣದೊಳೆಸೆವಸು ವರ್ಣವಿಡಿದ ಪೊಸರನ್ನದೊಡವೆಗಳ ರನ್ನೆ ಗುಣಾರ್ಣವೆ 2 ಮಾಲತಿಮಲ್ಲಿಗೆ ಮಾಲೆಯಿಂದೊಪ್ಪುವ ನೀಲಭುಜಗವೇಣಿ ಗೈದಲಮೇಲಮಂಗಾಮಣಿ 3
--------------
ಸರಗೂರು ವೆಂಕಟವರದಾರ್ಯರು
ವಂದಿಸುವೆನನವರತ ಇಂದಿರೇಶಾ ಪ ನೊಂದು ಬಳಲಿದೆನಯ್ಯ ಸಲಹೋ ಶ್ರೀಶಾ ಅ.ಪ ಇಂದು ನರಜನುಮದೊಳು ನೊಂದೆನಯ್ಯ ಮುಂದಿನಾ ಜನುಮಗಳ ಸಂದಣಿಗಳೊಳು ನಿನ್ನ ಸುಂದರ ಪಾದಾಂಬುಜವನೆಂದೆಂದು ತೋರೆಂದು1 ನರಜನ್ಮ ಹಿರಿದೆಂದು ಅರಿತವರು ಪೇಳುವರು ನರನಾಗಿ ನಾ ಜನಿಸಿ ಗರುವದಿಂದಾ ಸಿರಿಯಾಸೆಯಿಂದ ಮದ ಪರವೈರ ಲೋಭಗಳ ದುರಿತಗಳನಾರ್ಜಿಸಿದೆ ಪೊರೆಯೊ ದೇವ 2 ಕಡುಪಾಪ ಕೂಪದೊಳಗಡಗಿರ್ಪೆನೈ ಹರಿಯೆ ಅಡಿಗಳಿಗೆ ಎಡೆಯಿಲ್ಲ ನುಡಿವರಿಲ್ಲಾ ಪಿಡಿವುದಕೆ ತೃಣವಿಲ್ಲ ದಡಕೆ ದಾರಿಯು ಇಲ್ಲ ತಡವೇಕೆ ಎನ್ನ ಕೈಪಿಡಿಯೊ ಗೋಪಾಲ 3 ಖಗರಾಜ ಪೊತ್ತಿಹನು ಸುಗತಿದಾಯಕನೆಂದು ಹೊಗುಳುವವು ಶೃತಿ ಶಾಸ್ತ್ರ ನಗಧರನೆ ನಿನ್ನತಾ ನಗಪುತ್ರಿ ನುತಿಸಿಹಳು ನಗಬೇಡವೈ ಪಾದಯುಗಗಳನು ತೋರೆಂದು4 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲಿ ಮುನ್ನಿಗಿಂತೆಂಟುಮಡಿ ಜನುಮ ಬರಲಿ ಮುನ್ನ ನಾವಾರ್ಜಿಸಿದ ಘನಪಾಪನಶಿಸಲಿ ಚೆನ್ನ ಮಾಂಗಿರಿವಾಸ ನನ್ನ ಹೃದಯದೊಳಿರಲಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಸುವೆನು ನಿನ್ನ ಅರವಿಂದಲೋಚನ- ದಿಂದ ನೋಡೊ ನೀ ಎನ್ನ ವಂದಿಸುವೆ ಅರವಿಂದಲೋಚನ- ದಿಂದ ನೋಡೊ ದಯಾಸಿಂಧು ಎನಿಸುವೆ ನಂದನಂದನನಾದ ಶ್ರೀ ಮುಕುಂದ ನೀ ಮುಚು- ಕುಂದ ವರದ ವಂದಿಸುವೆನು ನಿನ್ನ ಪ ಅಂಬರೀಷನು ಏನೋ ಮುಚುಕುಂದ ಮುನಿವರ- ನೆಂದು ರಕ್ಷಿಸುವೇನೊ ದ್ವಿಜ ತಂದವಲಕ್ಕಿ ತಿಂದ ಭಿಡೆಯಗಳೇನೊ ನೀನೆ ಸುರಧೇನು ಕಂದ ಧ್ರುವಪ್ರಹ್ಲಾದ ಕರೆಯಲು ಬಂದು ಭರದಿಂದವರ ಸಲಹಿದೆ ಮಂದಮತಿ ನಾ ಮ- ತ್ತೊಂದನರಿಯದೆ ವಂದಿಸುವೆ ನಿನ್ನ 1 ಗಜನು ಅಜಮಿಳನೇನೊ ಪಾದಾಂಬುಜ ಸ್ತುತಿಸ- ಲಜಸುತನು ನಾರದನೇನೊ ನಿಜ ಭಕುತಿಯಿಂದಿರಲ್ವಿದುರ ಉದ್ಧವನೇನೊ ನದಿಯಲ್ಲಿ ನಿನ್ನ ನಿಜಸ್ವರೂಪವ ತೋರಲಿಕ್ಕೆ ನಿನ್ನ ಬಾಂಧವಕ್ರೂರನೇ ನಾ ಕೇಳು ಘನ್ನ ಮಹಿಮ ಪ್ರಸನ್ನನಾಗಲಿಕ್ವಂದಿಸುವೆನು ನಿನ್ನ 2 ಸತ್ವರೊಳು ನಾನಲ್ಲ ಅಹಲ್ಯೆ ದ್ರೌಪದಿ ಭಕ್ತಿ ಮೊದಲೆನಗಿಲ್ಲ ಪಾಂಡವರ ದುರಿತಾಪತ್ತು ಕಳೆದ್ಯೊ ನೀಯೆಲ್ಲ ಕೇಳೆನ್ನ ಸೊಲ್ಲ ಭಕ್ತಾಧೀನನೆ ಭಯನಿವಾರಣ ಇಷ್ಟು ಭವಭಯ ಬಿಡಿಸಿ ಭೀಮೇಶಕೃಷ್ಣ ನಿನ್ನದಯ- ವಿಟ್ಟುಕರುಣಿಸೊ ವಂದಿಸುವೆನು ನಿನ್ನ 3
--------------
ಹರಪನಹಳ್ಳಿಭೀಮವ್ವ
ವರದವಿಠಲ ದೇವನ ಪೊರೆಯವುದಾನರನ ಪ ಬಂದ ವಿಭೀಷಣನ ಚಂದದಿ ಸಲಹಿದನು 1 ಅಜಮಿಳಗೊಲಿದನ ಕುಜನರ ತರಿದನ ಸುಜನರನಾಳಿದನ ವಿಜಯನ ರಥಸೂತನ 2 ಗಂಗೆಯ ಪಡೆದವನ ರಥಾಂಗವ ಪಿಡಿದವನ 3 ಖ್ಯಾತ ಪಾದಾಂಬುಜನ ಸೇತುವಿಧಾತನ 4 ರಾಮನ ಜಗದಭಿರಾಮನ ದೈತ್ಯ ವಿ ರಾಮನ ಭಜಕನಾ ರಾಮನ ದಶರಥ ರಾಮನ ಸೀತಾ ರಾಮನ ಗುಣಧಾಮನ 5 ಪಂಕಜನೇತ್ರನ ಪರಮ ಪವಿತ್ರನ ಶಂಕರ ನುತಿ ಪಾತ್ರನ ವೆಂಕಟರಮಣನ ಕಿಂಕರ ಶರಣನ ಸಂಕಟಹರ ನಾಮನ6
--------------
ವೆಂಕಟವರದಾರ್ಯರು
ವಾಣೀ ನೀ ತೋರೆ ವಾರಿಜನಾಭನ, ಮಹಾಲಾಭನ್ನ ನಿತ್ಯ ಸುಲಭನ ಭಾನು ಸನ್ನಿಭನ ಪ ಕ್ಷೋಣೀಯೊಳಗಣ ಪ್ರಾಣಶ್ರೇಷ್ಠ - ಜಗ ತ್ರಾಣನ ತೋರಿಸೆ ಭಾನು ಸನ್ನಿಭಳೆ ಅ. ಪ. ಚೈತನ್ಯರಾಣಿ ಪುಸ್ತಕಪಾಣಿ-ಸುನೀಲವೇಣಿ ಅತ್ಯಂತ ಮಹಿಮೆ ಗುಣಗುಣಶ್ರೇಣಿ ತ್ರಿಲೋಕ ಜನನಿ ಸತ್ಯವ ತೋರುತ ನಿತ್ಯೋಪಾದಿಲಿ ಸತ್ಯ ಸಂಕಲ್ಪಳೆ ನಿತ್ಯದಿ ಪೂಜಿಪೆ ತ್ವತ್ಪಾದಾಂಬುಜವಿತ್ತು ನೀ ಸಲಹೆ1 ನಾಲಿಗೆಯಲ್ಲಿ ಬಂದು ನಿಂದು ದಯದಿಂದ ಇಂದು ಶ್ರೀಲೋಲ ಹರಿಯೆ ದೈವವೆಂದು ಕೊಂಡಾಡೆ ಮುಂದು ಕಾಲ ಹಿಂಗಿಸಿ ವಿ- ಶಾಲ ಮತಿಯ ಕೊಟ್ಟು ಆಳುಗಳೊಡನೆ ಸು- ಶೀಲ ಜ್ಞಾನವಿತ್ತು ಆಲಸ್ಯಮಾಡದೆ ಶೀಲ ಮುಕ್ತಿಗನುಕೂಲವಾಗುವುದಕ್ಕೆ2 ಜನ್ಮ ಬಂದಿದೆ ಕಡೆಗೆ ಮಾಡು ದಯದಿಂದ ನೋಡು ಘನ ಕೀರ್ತಿವಂತೆ ಅಭಯವ ನೀಡು, ನಿನಗಲ್ಲ ಈಡು ಕನಸಿಲಿ ಮನಸಿಲಿ ಮನಸಿಜನೈಯನ ನೆನೆಸುವ ಸೌಭಾಗ್ಯವನುದಿನ ಕೊಟ್ಟು ಘನಪ್ರೇರಣೆಯಿಂದ ವಿಜಯವಿಠ್ಠಲನಂಘ್ರಿ ವನಜವ ತೋರಿ ಸನ್ಮೋದವನೀಯೆ3
--------------
ವಿಜಯದಾಸ
ವಿಜಯದಾಸರ ಭಜನೆ ಮಾಡಿರೊ |ವಿಜಯದಾಸರ ಭಜನೆ ಮಾಡಲುಅಜನ ಜನಕ ನಿಜನಿಗೊಲಿದುಕುಜನ ಸಂಗತಿ ತ್ಯಜನ ಮಾಡಿಸಿಸುಜನರ ಪಾದಾಂಬುಜದಲ್ಲಿಡುವ ಪ ಶುದ್ಧ ಮಂದರನ್ನ ಉದ್ಧಾರಾರ್ಥವಾಗಿಮಧ್ವರಾಯರ ಮತಾಬ್ಧಿಯೊಳು ಪುಟ್ಟಿಸಿದ್ಧಾಂತ ಸ್ಥಾಪಿಸಿ ಗೆದ್ದು ವಾದಿಗಳಹೆದ್ದೈವವೇ ಅನಿರುದ್ಧನು ಯೆಂದು ||ಪದ್ಧತಿಂದ ಪೇಳಿಸಿದಿ ವೈಷ್ಣವರನ್ನಶುದ್ಧಾತ್ಮರ ಮಾಳ್ಪ ಉದ್ಯೋಗದಿಂದಲಿಹದ್ದನ್ನೇರಿ ಬಪ್ಪ ಪದ್ದುಮನಾಭನ್ನಹೃದ್ದಯದೊಳಗಿಟ್ಟ ಸದ್ಗುರುರಾಯ 1 ಭೂಸುರಾಬ್ಧಿಗೆ ತಾರೇಶನಂತೊಪ್ಪುವಸಾಸಿರ ನಾಮದ ಶೇಷಗಿರಿ ಶ್ರೀ ನಿ-ವಾಸನ ಯಾತ್ರೆಯ ಲೇಸಾಗಿ ಮಾಡ್ಯೆತಿ ಸ- |ಹಾಸ ಸಂತೋಷದಿಂದಲೆ ||ವಾಸುದೇವನ ಮಾನಸದೊಳಿಟ್ಟು ದು-ರಾಶೆಯ ತೊರೆದು ಕ್ಲೇಶವ ಪಡದಲೆಮೀಸಲ ಪುಣ್ಯದ ರಾಶಿ ಘಳಿಸಿಕೇಶವನ ನಿಜ ದಾಸನೆಂದೆನಿಪ2 ಪಾದ ನಿತ್ಯ ಸಿರಿ ಮೋಹನ್ನ ವಿಠಲನೆಪರನೆಂದರುಹು ಮಾಡಿದ ಸುರ ತರುವಾದ 3
--------------
ಮೋಹನದಾಸರು
ವಿಷ್ಣುಚಿತ್ತ ಸುಕುಮಾರಿ ಕೃಷ್ಣ ಕಥಾಂಬರ ಧಾರಿ ಪ ಕೃಷ್ಣ ಸುಖಂಕರಿ ಕರುಣಾಲಹರಿ ಪಾತಕ ಪರಿಹಾರಿ ಅ.ಪ [ಸೇವೆಗೆ ಕಟ್ಟಿದ ದೇವರ ಮಾಲೆಯಾ ಕಾವೊಳೋ]ಪಾದಿ ಮುಡಿ[ದಿ]ತ್ತವಳೇ ಮಣಿ ಪಾ ದಾವನು ಚೆಂಗಳೆ ಸೇರಿದಳೇ 1 ತವ ಪಾದಾಂಬುಜವೇ ಗತಿಯು ತವ ವಚನಾಮೃತವೇ ಮತಿಯು ತವ ಸಂಸ್ಮರಣವೆ ಪರಮಸುಖ [ತವ] ಮಾಂಗಿರಿರಂಗೇಶ ಸನ್ನಿಧಿಯೂ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವೆಂಕಟೇಶ ನೀ ಕರುಣಿಸಿ ಮಾನಸ ಶಂಕೆಯೆಲ್ಲವ ಓಡಿಸು ವಂಕುಬೂದಿಯ ಬಿಡಿಸುತ ನಿನ್ನಯ ಕಿಂಕರಾಶ್ರಯ ಕೊಡಿಸು ಪ. ಎಷ್ಟು ಬಂದರೂ ತೃಪ್ತಿಯ ಪಡದ ಕ- ನಿಷ್ಟ ಭಾವನೆಯಿಂದಲೀ ಭ್ರಷ್ಟನಾದೆನು ಬಹು ವಿಧವಾಕೃತ ನಿಷ್ಠುರಾಗ್ನಿಯ ಹೊಂದಲಿ ಕೃಷ್ಣ ನೀ ಕರಪಿಡಿವುತ ಕರುಣಾ ದೃಷ್ಟಿಸಂಗತ ಧೀರತೆಯಿಂದಲಿ 1 ಗಾರುಗೊಂಡೆನು ಶ್ರೀಶನೆ ಸೇರಿದುದಂಗದಿ ದಿನ ದಿನ ಮೀರಿತೊ ಗ್ರಹವಾಸನೆ ಮಾರನಂದನ ಎನ್ನ. . . . . .ತಿ ಭಾರವೆ ಭವವಾರುದಿ ಶೋಷನೆ 2 ಸರ್ವದಾ ನಿನ್ನ ಪಾದಾಂಬುಜರತಿ ಇರ್ವರೊಂದನೆ ಪಾಲಿಸು ಮರ್ಮವೆಂದಿಗು ಮನಸಿಗೆ ಘಟಿಸದೆ ನಿವ್ರ್ಯಳೀಕದಿ ಲಾಲಿಸು ಸರ್ವಲೋಕ ಸುಖಾಕರ ಫಣಿಪತಿ ಪರ್ವತಾಲಯ ಪರಮ ಕೃಪಾಕರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶಂಭೋಶಿವಹರ ತ್ರಿಯಂಬಕ ಶ್ರೀಜಗ - ದಂಬಾರಮಣ ಪರಿಪಾಲಯಾ ಪ ಅಜಿನಾಂಬರಧರ ಭಜಿಪರಾರ್ತಿಹರ ತ್ರಿಜಗಪಾವನ ಗಂಗಾಧರ1 ನಂದಿವಾಹನ ಸುರವೃಂದ ಸುಪೂಜಿತ ಇಂದ್ರ ವಂದಿತ ಗರಕಂಧರ 2 ರುಂಡಮಾಲಧರ ಶÀುಂಡಾಲಮದಹರ ಚಂಡವಿಕ್ರಮ ಉಗ್ರೇಶ್ವರ 3 ದಕ್ಷಾಧ್ವರ ಹರದುಷ್ಟಶಿಕ್ಷಕ ವಿರೂ - ಪಾಕ್ಷನೆ ವೈರಾಗ್ಯನಿಧೆ 4 ವಾಮದೇವನೆ ಭಕ್ತಾಕಾಮಿತ ಫಲದನೆ ಕಾಮಸಂಹರ ಕರುಣಾಕರ 5 ಮೃತ್ಯುಂಜಯನೆ ಯನ್ನಪಮೃಹಾರಕಹರಿ ಭಕ್ತಾಗ್ರೇಸರ ಶಿವಶಂಕರ 6 ರಾಮನಾಮಲೋಲ ತಾಮಸಖಳಕಾಲ ಧಿಮಂತಜನ ಪರಿಪಾಲಕ 7 ಗಿರಿಜಾರಮಣ ನಿನ್ನ ಗುರುವೆಂದು ಮೊರೆಹೊಕ್ಕೆ ಹರಿಭಕ್ತಿಯಲ್ಲಿ ಮನನಿಲ್ಲಿಸೋ 8 ನಂಬಿದೆ ನಿನ್ನ ಪಾದಾಂಬುಜ ಯುಗಳ ಹೇ ರಂಭಜನಕ ಪೊರಿಯನ್ನನು9 ರಜತಾಚಲನಿವಾಸ ರಜನಿಚರ ವಿನಾಶ ಅಜನಸುತನೆ ದಿಗಂಬರ 10 ಸರ್ವಶ್ರೀ ವರದೇಶವಿಠಲನ ಸಖ ಮು - ಪ್ಪುರಹರ ಶ್ರೀ ಮಹಾದೇವ 11
--------------
ವರದೇಶವಿಠಲ
ಶರಣಜನರ ಪಾಲ ಹರಿ ದಯಾಸಿಂಧುವೆ ವೆಂಕಟೇಶ ಮರೆಯದೆ ಸಲಹೆನ್ನ ದೀನಜನಾಪ್ತನ ವೆಂಕಟೇಶ ಪ ಕರಿ ಧ್ರುವ ಪ್ರಹ್ಲಾದ ಪಾಂಚಾಲಿ ಪಾಲನೆ ವೆಂಕಟೇಶ ದುರುಳರಕ್ಕಸಹರ ಹರಸುರನಮಿತನೆ ವೆಂಕಟೇಶ ಪರಮಪಾವನ ಸಿರಿಯರ ಸಖಜೀವನೆ ವೆಂಕಟೇಶ ದುರುಳಮಾತ ನೀನಳಿದು ಗೋವಳರ್ಪೊರೆದನೆ ವೆಂಕಟೇಶ 1 ವಸುದೇವ ದೇವಕಿ ಬಸಿರೊಳು ಬಂದನೆ ವೆಂಕಟೇಶ ಕುಶಲದಿ ವಸುಧೆಲಮಮಹಿಮೆ ತೋರ್ದನೆ ವೆಂಕಟೇಶ ಅಸುರ ಕಂಸನ ಕುಟ್ಟಿ ಗೋಕುಲರಿದನೆ ವೆಂಕಟೇಶ ಶಶಿಮುಖಿ ಗೋಪಿಯರಾನಂದಲೀಲನೆ ವೆಂಕಟೇಶ 2 ಮಂದರಧರ ಗೋವಿಂದ ಮುಕುಂದನೆ ವೆಂಕಟೇಶ ಸಿಂಧುಶಯನ ಆನಂದನ ಕಂದನೆ ವೆಂಕಟೇಶ ಇಂದಿರೆಯರ ಬಿಟ್ಟು ಭೂಲೋಕಕ್ಕಿಳಿದನೆ ವೆಂಕಟೇಶ ಸುಂದರಗಿರಿಯ ಭೂವೈಕುಂಠವೆನಿಸಿದನೆ ವೆಂಕಟೇಶ 3 ಬಣಗರಸೊಕ್ಕನು ಕ್ಷಣಕ್ಷಣಕೆ ಮುರಿದನೆ ವೆಂಕಟೇಶ ಮನಮುಟ್ಟಿ ಬೇಡ್ವರ ಮನದಿಷ್ಟವಿತ್ತನೆ ವೆಂಕಟೇಶ ಎಣಿಕೆಗೆ ಮೀರಿದ ದ್ರವ್ಯ ಕೂಡಿಟ್ಟನೆ ವೆಂಕಟೇಶ ಘನಘನಮಹಿಮೆಯ ಭುವನದಿ ತೋರ್ದನೆ ವೆಂಕಟೇಶ 4 ನಂಬಿದೆ ನಿನ್ನ ಪಾದಾಂಬುಜಗಳನ್ನು ವೆಂಕಟೇಶ ಬೆಂಬಲವಿರ್ದು ನೀ ಸಂಭ್ರಮದಿ ಸಲಹೆನ್ನ ವೆಂಕಟೇಶ ನಂಬಿದ ದಾಸರ ಭವಾಂಬುಧಿ ಗೆಲಿಪನೆ ವೆಂಕಟೇಶ ಅಂಬುಜಮುಖಿ ಸೀತಾಪತಿ ಶ್ರೀರಾಮನೆ ವೆಂಕಟೇಶ 5
--------------
ರಾಮದಾಸರು