ಒಟ್ಟು 93 ಕಡೆಗಳಲ್ಲಿ , 40 ದಾಸರು , 91 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೊಲಿದು ಲಕ್ಷ್ಮೀಲೋಲ ವೆಂಕಟಪತಿ ಪಾಲಾಬ್ಧಿಶಯನ ಕೃಪಾಳು ಪರೇಶ ಪ. ಆಲಸ್ಯವಜ್ಞಾನಜಾಲ ಪರಿಹರಿಸು ನೀಲನೀರದನಿಭ ಕಾಲನಿಯಾಮಕಅ.ಪ. ಪ್ರೇರಕ ಪ್ರೇರ್ಯನು ಮೂರು ವಿಧ ಜೀವರಾ- ಧಾರಾಧೇಯಾಪಾರ ಮಹಿಮನೆ ಸಾರಭೋಕ್ತ್ರವೆಯೆನ್ನ ಘೋರ ದುರಿತಭಯ ದೂರಮಾಡುತ ಭಕ್ತಿ ಸಾರವನೀಯುತ1 ಪಾಪಾತ್ಮಕರೊಳು ಭೂಪಾಲಕನು ನಾ ಕಾಪಾಡೆನ್ನನು ಗೋಪಾಲ ವಿಠಲ ಶ್ರೀಪದದಾಸ್ಯವ ನೀ ಪಾಲಿಸು ಭವ ತಾಪಪ್ರಭಂಜನ ಹೇ ಪರಮಾತ್ಮನೆ2 ಶ್ರೇಷ್ಠರ ಸಂಗವ ಕೊಟ್ಟೆನ್ನ ರಕ್ಷಿಸು ಕಷ್ಟಪಟ್ಟೆನು ಬಹಳ ಸೃಷ್ಟಿಗೊಡೆಯನೆ ಮುಷ್ಟಿಕಾರಿಯೆ ಎನ್ನಿಷ್ಟ ಬಾಂಧವ ನೀನೆ ಕೃಷ್ಣಗೋವಿಂದನೆ ಬೆಟ್ಟದೊಡೆಯ ಹರಿ3 ಆಶೆಗೆ ಸಿಕ್ಕಿ ಹರಿದಾಸನೆಂದೆನಿಸಿದೆ ದೋಷಸಮುದ್ರದೊಳೀಜಾಡುವೆನು ಕೇಶವ ತವಪದ ದಾಸಜನರ ಸಹ ವಾಸವ ಕೊಡು ಮಹಾಶೇಷಪರಿಯಂಕನೆ4 ಛತ್ರಪುರೈಕಛತ್ರಾಧಿಪ ನಿನ್ನ ಪ್ರಾರ್ಥಿಸುವೆನು ಪರಮಾರ್ಥಹೃದಯದಿ ಕರ್ತ ಲಕ್ಷ್ಮೀನಾರಾಯಣ ಗುಣನಿಧಿ ಶ್ರೀ ವತ್ಸವಕ್ಷಸ್ಥಲ ಕೌಸ್ತುಭಾಭರಣನೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಿಳ್ಳಂಕೇರಿಯ ವಾಸ ದಾಸ | ಕಾಯೊಮಲ್ಲಾರಿ ಮಹಿದಾಸ ದಾಸಾ ಪ ಎಲ್ಲ ಸಚರಾಚರದಿ ವ್ಯಾಪ್ತನು | ನಲ್ಲ ಕೃಷ್ಣನ ಸೇವೆ ಬಹಳದ ಸಲ್ಲಿಸಲು ಬಹುರೂಪ ತಾಳ್ದ ಪ್ರ | ಪುಲ್ಲ ವದನಾಂ ಭೋಜ ಹನುಮ ಅ.ಪ. ದಕ್ಷಿಣಾಕ್ಷಿಯ ವತ್ಸರೂಪಾ | ಸುರತ್ರ್ಯಕ್ಷಾದಿ ಸಂಸೇವ್ಯ ಭೂಪಾ |ಕ್ಷೋಭ್ಯತೀರ್ಥ ಶ್ರೀ ಯತಿಪಾ | ಗೊಲಿದುಅಕ್ಷಾರಿ ತೋರ್ದೆ ಈ ರೂಪಾ |ಕುಕ್ಷಿಯಲಿ ಪಾಪಾತ್ಮ ಪುರುಷನ | ಶಿಕ್ಷಿಸುತ ಶೋಭಿಸುತ ನಿತ್ಯಪಕ್ಷಿವಾಹನನಂಘ್ರಿ ಕಮಲವ | ಈಕ್ಷಿಸಲು ಸಹಕರಿಪ ಪ್ರಾಣಾ 1 ದುರುಳ ಅವನನ್ವಯದ | ಸಹಜಾತರನು ವಧಿಸಿ ಮೆರೆದ ಸ 2 ಸಾರ ಸಜ್ಜನರನ್ನು ಪೊರೆದ 3 ಹಂಸನಾಮಕ ಹರಿ ದ್ವಂದ್ವಾ | ಪಾದಪಾಂಸುವ ಧರಿಸಿ ಮೆರೆಯುವಾ |ಹಂಸಾಖ್ಯ ಜಪ ದಿನ ದಿನವಾ | ಪಟ್ಯತವಿಂಶತ್ಯೇಕ ಸಾಸಿರವಾ |ಹಂಸವಾಹನ ತಾತನೆನಿಸುವ | ಕಂಸಮರ್ದನ ಚರಣಕರ್ಪಿಸಿಸ್ವಾಂಶರೂಪವನಂತ ಧರಿಸುತ | ಶಂಸಿಸುವೆ ವೇದೋಕ್ತ ಅನುಕ್ತದಿ 4 ದೇವ ದೇವರ ದೇವ ದೇವಾ | ಗುರುಗೋವಿಂದ ವಿಠ್ಠಲ್ಲ ದೇವಾ |ಕಾವ ಕೊಲ್ಲುವ ಸ್ಥಿರ ಚರವಾ | ನಂಬುದಾವ ಬಲ್ಲನಿವನ ಮಹಿಮವಾ |ಭಾವಿ ಬೊಮ್ಮನೆ ರಮೆಯ ಮುಖದಿಂ | ಶ್ರೀವರನ ಮಹಿಮೆಗಳ ತಿಳಿದುಭಾವ ಶುದ್ಧಿಯ ಗೈದು ಸುಜನರ | ಸ್ವಾವಲಂಬಿಗಳೆನಿಸಿ ಪೊರೆವ 5
--------------
ಗುರುಗೋವಿಂದವಿಠಲರು
ಬರಿದೆ ಬಯಸಲು ಬರುವುದೇನೆಲೆ ಮರುಳು ಯೋಚನೆ ಬಿಡೆಲೆ ಮನಸೆ ಪ ಹರಿಯ ಬಳಿಯಲಿ ಪಡೆದಷ್ಟಲ್ಲದೆ ದೊರಕದೆಂದಿಗೆ ಬೇರೆ ತಾನು ಅ.ಪ ಶಾಂತಿತಾಳತಿಭ್ರಾಂತಿ ನೀಗಿ ಸಂತಜನ ಕೃಪಾಪಾತ್ರನಾಗಿ ಕರು ಣಾಂತರಂಗ ಸಿರಿಕಾಂತನಂಘ್ರಿಯ ಅಂತರಂಗದಿ ಭಜಿಸದೆ 1 ಶಮೆಯಗೂಡಿಹ್ಯ ಭ್ರಮೆಯನಳಿದು ಸುಮನದೋಳಿರ್ದು ಕ್ರಮದಿ ಅನುದಿನ ವಿಮಲ ಹರಿಕಥೆ ಶ್ರವಣದಿಂ ರಮಾರಮಣನಂಘ್ರಿಗೆ ನಮಿಸದೆ 2 ದಮೆಯ ಪಡೆದು ದಾಸನಾಗಿ ವಿಮಲನಾಮದ ಬಲವಗಳಿಸಿ ಅಮಿತಮಹಿಮ ಶ್ರೀರಾಮನಂಘ್ರಿ ಕಮಲವೊಲಿಸಿ ಭವತುಳಿಯದೆ 3
--------------
ರಾಮದಾಸರು
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರೋ ಭವದೂರಾ ರಂಗಾ ನಾರಾಯಣಪ ಆ ರಾವಣ ಭೀಕರ ಜಯ ಸರೋಜದಳಾಂಗ ಅ.ಪ ಚರಣಶ್ರಿತ ಪರಿಪಾಲಿತ ಮರಳೀಧರ ದೇವ ಪರಮಾತ್ಮನೆ ಪಾಂಡವಮಣಿ ತರವೇ ನಿರುತರಕೇಂದ್ರ 1 ಉಭಯ ವೇದಾಂತಾರ್ಯನೆ ಅಭಯಾಕರ ಶೌರೀ ಅಭಿಮಾನಯೇನದು ಕಾರಣ ಶುಭದಾಯಕನಾಗಿ ಬೇಗಾ 2 ಪರತಂತ್ರನೆ ಪಾಪಾಂತಕ ನರವೇಷ ಭಾಷೆ ಸುರನಾಯಕವಿನುತನಾಗುರು ಭರತಾಗ್ರಜ ತುಲಶೀರಾಮಾ3
--------------
ಚನ್ನಪಟ್ಟಣದ ಅಹೋಬಲದಾಸರು
ಭಕ್ತಿಪಥ ಸಲ್ಲಿಸೈ ಸತತ ಸುಖಿ ಮುರವೈರಿ | ಸಂಸಾರ ಘೋರ ಭಯದೂರೋಡಿಸಿ ಹರಿಯೆ | ತ್ವತ್ವಾದ ಸಂಸೇವಿಪ ಸೌಭಾಗ್ಯತ್ವರ ನೀಡೋ ಶ್ರೀಕಾಂತನ ಪ ಅಪರಾಧ ನೋಡದಲೆ ಕೃಪೆಯಿಂದ ಕರಪಿಡಿಯೊ | ಪಾಪಾಂಧ ಗೋಪಾಲಾ ನೀ ಪಾರುಗೈಯುವದು 1 ಕಡೆಹಾಯಿಸೋ ದೇವನೆ ತಡಮಾಡದೆ ಜಡಜಾಂಬಕ ಶ್ರೀಹರೇ 2 ಶ್ರೀಶಾಮಸುಂದರನೆ | ಶಿಶುನಿಂಗೆ ಪಡೆದವರು ಮೋಸದಿಂದ ಘಾತಿಸುವರೆ | ದಾಶರಥ ಭವಘುಸಣೆ ತ್ವರಿತದಿ ಪರಿಹರಿಸುತ ಗೋವಿಂದನೆ ನೀನೋಡೊ ಸುಜ್ಞಾನವಾ 3
--------------
ಶಾಮಸುಂದರ ವಿಠಲ
ಭಾವೀ ಸಮೀರ ಶ್ರೀವಾದಿರಾಜರು ಕಾಯ ಕಾಯ ಬೇಕಯ್ಯ ಪ ಕಾಯ ಬೇಕೈ | ವಿಪ ಅಹಿಪ ಸುರಪಾದಿ ವಂದ್ಯವೆ |ವಿಪುಲ ಪಾಪಾಳಿಗಳ ಹರಿಸೀ | ಸುಪಥ ಸದ್ಗತಿಗೆನ್ನ ಒಯ್ದು ಅ.ಪ. ಗೌರಿದೇವಿಯ ಉದರಸಂಭವನೆ | ಹಯಾಸ್ಯನಂಘ್ರಿಸರಸಿರುಹದಲಿ ಮಧುಪ ನೆನಿಸಿದನೆ ||ದ್ವಾರಕಾದಿ ಕ್ಷೇತ್ರ ಚರಿಸುತ | ಥೋರ ಹಿಮಗಿರಿ ಸೇತುಯಾತ್ರೆಯಸಾರಿ ಸತ್ತೀರ್ಥ ಪ್ರಬಂಧವ | ಧೀರ ನೀ ರಚಿಸುತ್ತ ಮೆರೆದೆಯೊ 1 ಲಕ್ಷಿಸುತ್ತಲಿ ಮಾತೆ ಬಿನ್ನಪವ | ಮಹ ಭಾರತಸ್ಥಲಕ್ಷಪದ ಬಹು ಕ್ಲಿಷ್ಟವೆನಿಸೂವ ||ಲಕ್ಷಣದಿ ಸದ್ಯುಕ್ತ ಪದಗಳ | ಈಕ್ಷಿಸುತ ಅವಕರ್ಥ ಪೇಳುತಲಕ್ಷಸದ್ದಾಭರಣ ಮಾಲಿಕೆ | ಲಕ್ಷ್ಮಿಪತಿ ಹಯಾಸ್ಯಗರ್ಪಿತ 2 ಸೇವಿಸುತ್ತಿಹ ವಿಪ್ರನಾದವನ | ಕೌಟಿಲ್ಯ ಕಂಡುತೀವ್ರದಿಂದಲಿ ಶಾಪವಿತ್ತವನ ||ಭಾವ ತಿಳಿದು ಬೊಮ್ಮರಾಕ್ಷಸ | ಭಾವತಾಳೆಂದೆನುತ ಪೇಳಲುತೀವ್ರ ಯಾಚಿಸೆ ಕ್ಷಮೆಯ ಮಂತ್ರವ | ಆವ ಆಕಾಮ್ಮೈವ ನೊರೆದೆ 3 ಮರಳಿ ಉತ್ತರ ಯಾತ್ರೆಯಲ್ಲಿರಲು | ಗುರು ವಾದಿರಾಜರಅರಿಯದಲೆ ತನ್ಮಂತ್ರ ಪೇಳಲು ||ಒರೆದರೂ ರಂಡೇಯ ಮಗ ನೀ | ನಿರುತಿರುವೆನ ಸ್ನಾತ ಕಾರ್ತಿಕಮರಳಿ ಮಾಘಾಷಾಢ ವಿಶಿಖದಿ | ಹರಿಯಿತೂ ನಿನ ಶಾಪವೆಂದರು 4 ಆತುಗುರುಪದ ಕ್ಷಮೆಯ ಪ್ರಾರ್ಥಿಸಲು | ಗುರುರಾಜರಾಗಭೂತ ರಾಜನು ನೀನೆ ಎನ್ನುತಲು ||ಖ್ಯಾತಿ ಪೊಂದುತ ಭಾವಿರುದ್ರನೆ | ಪೊತ್ತು ಎನ್ನಯ ಮೇನೆ ಮುಂಗಡೆಕೌತುಕವ ತೋರುತ್ತ ಮೆರೆವುದು | ಪೋತ ಭಾವದಿ ತಮಗೆ ಎಂದರು 5 ಕಾಕು ಶೈವನ ಖಂಡಿಸುತ್ತಲಿಆಕೆವಾಳರ ಪೊರೆದು ದಶಮತಿ | ತೋಕನೆಂದೆನಿಸುತ್ತ ಮೆರೆದೇ 6 ಭೂವಲಯದೊಳು ಕಾರ್ಯ ಪೂರೈಸಿ | ಬದರಿಯಿಂದಲಿಭಾವಿ ಶಿವನಿಂ ಪ್ರತಿಮೆ ರಥತರಿಸೀ ||ದೇವ ಗೃಹ ಸಹ ವಿರುವ ವಿಗ್ರಹ | ತ್ರೈವಿಕ್ರಮನ ಸಂಸ್ಥಾಪಿಸುತ್ತಭಾವ ಭಕ್ತಿಯಲಿಂದ ಉತ್ಸವ | ತೀವರದಿ ರಚಿಸುತ್ತ ಮೆರೆದೆ 7 ಹಂಚಿಕಿಂದಲಿ ಪೂರ್ವರಚಿತೆನ್ನ | ವೃಂದಾವನಂಗಳುಪಂಚ ಸಂಖ್ಯೆಯಲಿಂದ ಮೆರೆವನ್ನೆ ||ಮುಂಚೆಯೇ ಸ್ಥಾಪಿತವು ಎನ್ನುವ | ಪಂಚರೂಪೀ ವ್ಯಾಸ ಸಮ್ಮುಖಸಂಚುಗೊಳಿಸೀ ಸ್ಥಾಪಿಸುತ್ತ | ಕೊಂಚವಲ್ಲದ ಕಾರ್ಯ ರಚಿಸಿದೆ 8 ಯುಕ್ತಿಮಲ್ಲಿಕೆ ರುಕ್ಮೀಣೀಶ ಜಯ | ಗುರ್ವರ್ಥ ದೀಪಿಕೆಮತ್ತೆ ಪರಿಪರಿ ಶಾಸ್ತ್ರ ಗ್ರಂಥಗಳ ||ವಿಸ್ತರಿಸಿ ಭುವನದಲಿ ಮೆರೆದೆ | ಉತ್ತಮೋತ್ತಮ ದೇವ ದೇವನುಕರ್ತೃ ಶ್ರೀಹಯ ಮುಖನು ಎನ್ನುತ | ವತ್ತಿ ಪೇಳುತ ವ್ಯಾಪ್ತಿಸಾರಿದೆ 9 ಶಿಷ್ಟ ಜನ ಸಂಸೇವ್ಯ ಧೀವರನೆ | ಶಮದಮಾನ್ವಿತಕಷ್ಟಹರ ಕಾರುಣ್ಯ ಸಾಗರನೇ ||ಕುಷ್ಟ ಅಪಸ್ಮಾರ ರೋಗದ | ಅಟ್ಟುಳಿಯ ಕಳೆಯುತ್ತ ಮೃತ್ತಿಕೆಸುಷ್ಠುಸೇವನೆಯಿಂದ ಭಕ್ತರ | ಇಷ್ಟವನೆ ಸಲಿಸುತ್ತ ಮೆರೆವೆ 10 ಹಯಾಸ್ಯ ವಾಹನ | ಬಿಡದೆ ಏರುತ ಸಾರ್ದೆ ಹರಿಯನು 11
--------------
ಗುರುಗೋವಿಂದವಿಠಲರು
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ಮಾರುತೀ ಕೊಡು ಭಕುತಿ ನುಡಿಸು ಕೀರ್ತಿ ಪ ತೋರೊ ನಿನ್ನೊಳು ಇಹ ನಿರ್ಮಲ ಮೂರುತಿಯಅ.ಪ ಶ್ರವಣಮಾಡಲು ಭಕುತಿ ಆವಕಾಲಕು ಇತ್ತು ತವಪದದಾಸರ ದಾಸ್ಯ ಕೊಡಿಸೋ ದೇವ 1 ಕೀರ್ತನದೊಳು ಹರಿಕೀರ್ತಿ ಕೊಂಡಾಡೆ ಸಂ ಕೀರ್ತನ ಭಕುತಿಗೆ ಕರ್ತದಾತ ನೀನೆ2 ಸ್ಮರಣೆಯು ಹರಿಯಲ್ಲಿ ನಿರುತವು ನಿನ್ನಲ್ಲಿ ಕರುಣಿಸಿ ಪೊರೆಯೊ ಗುರುವರ ಸುಂದರ 3 ಪಾದ ಸೇವೆಯ ಕೊಡು ಸಾದರದಿಂದಲಿ ಶ್ರೀಧರನಾ ಕೃಪಾಪಾತ್ರನೆಂದೆನಿಸಯ್ಯ 4 ಅಚ್ಯುತನಿಗೆ ನೀನಚ್ಚುಮೆಚ್ಚಾಗಿಹೆ ನಿಚ್ಚದಿ ಹರಿಪಾದರ್ಚನೆ ಮಾಡಿಸಯ್ಯ 5 ವಂದನಾಭಕುತಿ ಎನ್ನಿಂದ ನೀ ಮಾಡಿಸಿ ನಂದನಂದನಗಾನಂದಪಡಿಸೊ ದೇವ 6 ದಾಸಭಕುತಿ ಭಾಗ್ಯ ಆಶಿಸುವೆನು ನಿನ್ನ ವಾಸುದೇವನ ನಿಜದಾಸನೆ ಸರ್ವದಾ 7 ಸಖ್ಯಭಕುತಿ ಕೊಡೋ ಮುಖ್ಯಪ್ರಾಣೇಶನೆ ಮುಖ್ಯಕಾರಣ ಹರಿಯ ಮುಖ್ಯ ಪ್ರೇಮಪಾತ್ರ 8 ಆತ್ಮನಿವೇದನ ಭಕುತಿಯನ್ನು ಪರ ಮಾತ್ಮನಲ್ಲಿತ್ತು ನಿರ್ಮಲಾತ್ಮನೆಂದೆನಿಸೊ 9 ನವವಿಧ ಭಕುತಿಯ ಕೊಟ್ಟು ಸಲಹೋ ದೇವ ಅವಕಾಲಕು ಪವಮಾನ ನೀನೆ ಗತಿ 10 ಸಂಕಟ ಹರಿಪ ಶ್ರೀ ವೇಂಕಟೇಶನ ದೂತ ಭಂಟನೆಂದೆನಿಸೆನ್ನ ಸಂಕಟ ಹರಿಸಯ್ಯ11
--------------
ಉರಗಾದ್ರಿವಾಸವಿಠಲದಾಸರು
ಮೃಡ ಶಂಭೋ | ಪ ಅದ್ರಿಧರ ಪ್ರಿಯ ಅದ್ರಿ ಕೃತಾಲಯ | ಅದ್ರಿಜಾಮಾತಾದ್ರಿ ರಿಪುನುತ | ಪತಿ ಪಾಪಾದ್ರಿ ಕುಲಿಶಕನ | ಕಾದ್ರಿಶರಾಸನ ಮುದ್ರಿತ ಪಾಣೇ1 ಉನ್ನತದಿಂದಲಿ ಮನ್ಮಥ ಬರಲುದ | ಹನ್ಮಾಡಿದ ಷಣ್ಮುಖ ಜನಕನೆ | ಸನ್ನುತ ಲೀಲಾ | ಜನ್ಮರಹಿತ ಘನ ಚಿನ್ಮಯ ರೂಪಾ || 2 ಬರಿಸಿದೆ ಗಂಗೆಯ ನಿರಿಸಿದೆ ಜಡೆಯೊಳು | ಧರಿಸಿದೆ ಚಂದ್ರನ ಮೆರೆಸಿದೆ ಭಕ್ತರ | ಗುರುಮಹೀಪತಿ ಯಂಕುರಿಸಿದ ಬಾಲನ | ಸಿರಸದಲಿಡು ನಿಜ ಪರಸದ ಕೈಯಾ | 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆ ಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರ ಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ 2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ 3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ 4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ 5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ 6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯತಿ ವರ್ಣನೆ ಕಾಶೀಮಠದ ಶ್ರೀ ಭುವನೇಂದ್ರರ ಸ್ತುತಿ ಕಂಡು ಕೃತಾರ್ಥನಾದೆ ಭುವನೇಂದ್ರರಂಘ್ರಿಯ ಕಂಡು ಕೃತಾರ್ಥನಾದೆಪ. ಕಂಡು ಕೃತಾರ್ಥನಾದೆ ಭೂ- ಮಂಡಲದಿ ಪೆಸರ್ಗೊಂಡು ಮೆರೆದಿಹ ಪುಂಡರೀಕದಳಾಕ್ಷ ಸತತಾ- ಖಂಡಸುಖ ಮಾರ್ತಾಂಡತೇಜರಅ.ಪ. ವಾರಿರುಹಭವಾಂಡದ ಭೂಮಧ್ಯ ವಿ- ಸ್ತಾರಜಂಬೂದ್ವೀಪದ ನವಖಂಡದೊಳ್ ಸಾರಭರತಖಂಡದÀ ಹಿಮಗಿರಿಯ ಪಾಶ್ರ್ವದ ತೋರ್ಪ ವಿಂಧ್ಯಾಚಲದ ಮಧ್ಯ ಭಾ- ಗೀರಥಿಯ ಪಶ್ಚಿಮ ಭೂಭಾಗದ ತೀರ ಕಾಶೀಮಠಸಂಸ್ಥಾನ ವಿ- ಚಾರಶಾಸ್ತ್ರವಿಶಾರದರ ಪದ 1 ವರ ರಾಜೇಂದ್ರ ಯತೀಂದ್ರರ ಕರಸಂಜಾ- ತರ ಗುರುಸುರೇಂದ್ರರ ಕರಕಮಲಮಧ್ಯದಿ ಧರಿಸಿರ್ದ ವಿಭುದೇಂದ್ರರ ಸರೋರುಹ ಕರಸಂಜಾತ ಮಹಾನುಭಾವರ ಕರುಣನಿಧಿ ಕಮನೀಯ ಸದ್ಗುಣ ಭರಿತ ಶ್ರೀಭುವನೇಂದ್ರರಂಘ್ರಿಯ2 ಸುಂದರಮುಖಶೋಭೆಯ ಪೂರ್ಣಮಿ ಶುಭ ಚಂದ್ರಸನ್ನಿಭಕಾಂತಿಯ ಶೋಭಿಪ ನವ ಕುಂದರದನ್ತಪಂಕ್ತಿಯ ತಿಲಕದ ಛಾಯ ಮಂದಹಾಸಾನಂದ ಪುರಜನ ವೃಂದಪೂಜಿತಪಾದಪದ್ಮ ದ್ವಂದ್ವ ಸತತಾನಂದ ಸದ್ಗುಣ ಇಂದ್ರ ಶ್ರೀಭುವನೇಂದ್ರರಂಘ್ರಿಯ3 ಶೃಂಗಾರರಸತೇಜರ ಯಮನಿಯಮಾದ್ಯ ಷ್ಟಾಂಗಯೋಗಸರ್ವಜ್ಞರ ಪಾಪಾತ್ಮರ ಕಂಗಳಿಗಗೋಚರ ಸತ್ಯಾವತಾರ ಮಂಗಳಾತ್ಮಕಸಂಗ ಸುಮಮನಸ ರಂಗ ಸಾಧ್ಯವೇದಾಂಕ ಕರುಣಾ ಪಾಂಗ ವಿಬುಧೋತ್ತುಂಗ ಅಂಗಜ ಭಂಗ ಶ್ರೀಯತಿಪುಂಗವರ ಪದ4 ಎಷ್ಟೆಂದು ನಾ ಪೇಳಲಿ ಸದ್ಗುರುವರ- ರಿಷ್ಟಕೆ ತೋಷ ತಾಳಲಿ ದಾರಿದ್ರ್ಯದ ಕಷ್ಟವೆಲ್ಲ ಪರಿಹರಿಸಲಿ ದಯವಿರಲಿ ಎನ್ನಲಿ ಶ್ರೇಷ್ಠ ಗೌಡಸಾರಸ್ವತ ಸ- ಮಷ್ಟಿ ಕೊಂಕಣದೇಶವಿಪ್ರ ವಿ- ಶಿಷ್ಟ ಒಡೆತನ ಪಟ್ಟವಾಳುವ ಶ್ರೇಷ್ಠಯತಿವರರಂಘ್ರಿಕಮಲವ5 ಆಶೆಯೊಂದುಂಟೆನಗೆ ಕಾವ್ಯವ ಓದ್ಯ- ಭ್ಯಾಸಗೈಯುವದು ಮಿಗೆ ಸನ್ನಿಧಾನದಿ ಪೋಷಿಸಿ ಎನ್ನ ಹೀಗೆ ರಕ್ಷಿಸಲು ಕಡೆಗೆ ಏಸು ಧನ್ಯನು ನಾನು ಕರುಣಾ ನಿಗಮ ವಿ- ಲಾಸರಂಘ್ರಿಗೆ ದಾಸದಾಸರ ದಾಸ ನಾನು ದಯಾಶರಧಿಯರ6 ಸತತ ಸದ್ಯತಿಧರ್ಮದ ಪರಿಪಾಲಿಸಿ ಕ್ಷಿತಿಗತಿ ಪ್ರತಿವಾಸವನಂತೆಸೆವುತಾ ಮಿತ ಭಾಗ್ಯಸಂಪದವ ವಿಖ್ಯಾತವ ರತಿಪತಿಯ ಪಿತ ಕ್ರುತುಪಾಲಿತ ಸೂ- ನೃತಭಾಷಿತ ಲಕ್ಷ್ಮೀನಾರಾಯಣ ಸತತ ವೇದವ್ಯಾಸ ಶ್ರೀರಘು ಪತೀಚರಣಪೂಜಿತರ ಪದವನು7
--------------
ತುಪಾಕಿ ವೆಂಕಟರಮಣಾಚಾರ್ಯ
ಯೋಗಿ ನಿತ್ಯಾನಂದ ಭೋಗಿನಾದದಿ ಮಲಗ್ಯಾನೆ ಯೋಗಿನಾದಂ ಝಣಂ ಝಣನಾದಂ ಭಿಣಿಂಭಿಣಿನಾದಸಲೆಯ ವೀಣಾನಾದವ ಕೇಳುತ ಪ ಈಷಣತ್ರಯ ಪಾಪಾತ್ಮರಿರಾ ಎಬ್ಬಿಸಲು ಬ್ಯಾಡಿವಾಸನವೆಂಬ ಆಷ್ಟಕರ್ಮಿಗಳೇ ಒದರ ಬ್ಯಾಡಿಪಾಶವ ಹರಿವುತ ಪಂಚಕ್ಲೇಶದಈಸು ಉಳಿಯದಂತೆ ತರಿದಾಯಾಸದಿ 1 ಅಂತರ ಎಂಬ ಘಾತಕರಿರಾ ಅತ್ತ ಹೋಗಲು ಬ್ಯಾಡಿಭ್ರಾಂತುಯಂದೆಂಬ ಬ್ರಷ್ಟರಿರ ಜಗಳಾಡಲಿ ಬ್ಯಾಡಿಅಂತರಿಸದೆ ಆರು ಶತ್ರುವ ಛೇದಿಸಿಅಂತಿಂತೆನ್ನದೆ ಆಯಾಸದಿಂದಲಿ 2 ಸಂಕಲ್ಪವೆಂಬೋ ಖೋಡಿಗಳಿರಾ ಸದ್ದು ಮಾಡಲಿ ಬ್ಯಾಡಿಮಂಕು ಎಂದೆಂಬ ಮಾಂದ್ಯಗಳಿರ ಮುಂದಕ್ಕಡ್ಡಾಡಬೇಡಿಬಿಂಕದಹಂಕಾರ ಬೇರ ಕಿತ್ತುಓಂಕಾರ ಚಿದಾನಂದ ವಸ್ತು ಆಯಾಸದಿ 3
--------------
ಚಿದಾನಂದ ಅವಧೂತರು
ಯೋಗಿ ವೇಷ ನೀಚನಾಯಿ ನಿನಗ್ಯಾತಕೆ ತತ್ವ ಭಾಷಾ ಹುಚ್ಚನಾಯಿ ನಿನಗೇತಕೆ ವಸ್ತ್ರ ಕಾಷಾ ಮುರುಕುನಾಯಿ ನಿನಗೇತಕೆ ಗುರುಪಾದವಾಸ ಹೊಲಸ ಪ ಕೊರಳಿಗೆ ಕಪನಿ ತೊಟ್ಟು ಜಪಸರವನೆ ಮುಂಗೈಯಲಿಟ್ಟು ತತ್ವಬರಿನುಡಿ ಸಾಲು ಸಾಲಿಟ್ಟು ಕಾಲಕೆರವನೆ ಇವನ ಬಾಯೊಳಗೆ ವಷಟ್ಟು ಭ್ರಷ್ಟಾ1 ನೀರೊಳಗೆ ನೆರಳನೆ ನೋಡಿ ಹಣೆಗೆಗೀರುವೆ ಗಂಧವ ತೀಡಿ ಪೋರಪೋರರ ಜೋಡನೆ ಕೂಡಿ ನಿನ್ನಮೋರೆಯ ಮೇಲೆ ಹುಯ್ಯಬೇಕು ಕಸ ಪುಡಿಕೆ ಕಡುಗ 2 ಅತ್ತ ಸಂಸಾರ ಕೆಟ್ಟುಮತ್ತಿತ್ತ ಗುರುಪಾದವ ಬಿಟ್ಟು ನೀನತ್ತತ್ತ ಉಭಯ ಭ್ರಷ್ಟಾ ನಿನಗೆಸತ್ತಿಹರು ಅರಮನೆಯ ಗೌಡೆಯರೆಷ್ಟು ಜಾಣ3 ಕಂಡ ಕಂಡಲ್ಲಿಯೇ ಉಂಡುದೊಡ್ಡ ಹೊಟ್ಟೆಯ ಬೆಳೆಸಿಕೊಂಡುಬಾಡದಂಡೆಯ ಮನೆಗಂಟಿಕೊಂಡು ನಿನ್ನಮಂಡೆಯ ಹೊಡಿಬೇಕು ಪಾಪಾರಿಕೊಂಡು ಹೊಲೆಯ 4 ಇಂದು ಕೆಟ್ಟಾ5
--------------
ಚಿದಾನಂದ ಅವಧೂತರು