ಒಟ್ಟು 82 ಕಡೆಗಳಲ್ಲಿ , 28 ದಾಸರು , 80 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರದೇಂದ್ರ ಯತಿ ಚಕ್ರವರ್ತಿ ನಿರಂತರ ವರಣಿಸುವೆ ನಿಮ್ಮ ಕೀರ್ತಿ ಪರಮ ಕರುಣಿ ನಿಮ್ಮ ಚರಣಕಮಲಯುಗ ಕ್ಕೆರಗಿ ಬೇಡುವೆ ವರವಾ ಎಮ್ಮನು ಪೊರೆವಾ ಪ ನತಜನಬಂಧು ನೀನೆಂದೂ | ತಿಳಿದು ನತಿಸಿದೆ ಗುಣಗಣಸಿಂಧು ಪ್ರತಿಗಾಣೆ ನಿಮಗೆ ಸುವ್ರತಿ ವರ ಪ್ರಣತ ಕಾ ಮಿತ ಕಲ್ಪತರುವೆ ನಿರ್ಜಿತಮಾರಮಾರ್ಗಣ ಕ್ಷಿತಿಪರಿಗೆ ಪ್ರತಿದಿನದಿ ಪರಮಾದ್ಭುತವೆನಿಸುವುದು ನಿಮ್ಮದಾನ ಪ್ರತತಿ ಸಾಂಪ್ರತ ಮಧುರವಚನಾ ಶಾಸ್ತ್ರ ಪ್ರವಚನಾ1 ಮರುತ ಮತಾಂಬುಧಿ ಚಂದ್ರಾ | ಚಾಮಿ ಕರವರ್ಣಸರಸ ರವೀಂದ್ರ ಪರವಾದಿತಿಮಿರ ಭಾಸ್ಕರ ವಸುಧೀಂದ್ರ ಸ ದ್ಗುರು ಕರಸಂಜಾತ ನಿರುಪಮ ನಿರ್ಭೀತಾ ಖರಮಥನ ಪದಕೋನದ ಮಧುಕರ ಕೃಪಾಕರ ಕರವ ಪಿಡಿದುದ್ಧರಿಸುವುದು ಭೂ ಸುರ ಕುಲೋತ್ತಂಸಾ ನಮೋ ಪರಮಹಂಸಾ 2 ಕಲಿತ ಸುಂದರ ಮಂದಹಾಸಾ ಹೇ ನಿ ಷ್ಕಲುಷ ಸುತತ್ವ ವಿಲಾಸಾ ಗಳಿತಾ ಘಸಂಘನಿಶ್ಚಲ ಜಗನ್ನಾಥ ವಿ ಠಲನೊಲಿಮೆಯ ಪಡೆದಿಳಿಯೊಳು ಚರಿಸುವ ಭಳಿರೆ ಪ್ರತಿಯೋಗಿಗಳೆನಿಪ ಕಂ ಕಲಭಕೇಸರಿ ನಿಮ್ಮ ದಾಸರೊಳೊಲಿದು ಪಾಲಿಪುದನವರತ ಎನ್ನ ನಂಬಿದೆನೋ ನಿನ್ನ 3
--------------
ಜಗನ್ನಾಥದಾಸರು
ವಾಸಿಷ್ಠ ಕೃಷ್ಣ ವಿಠಲ | ನೀ ಸಲಹೊ ಇವನಾ ಪ ಮೇಶ ಮಧ್ವೇಶ ನಿನ್ನಡಿಯ | ದಾಸ್ಯವನುಆಶಿಸುವ ಭಕ್ತಗೆ ಪ | ರಾಶರಾತ್ಮಜ ಒಲಿದೂ ಅ.ಪ. ವೇದವ್ಯಾಸನೆ ನಿನ್ನ ಆದರದಿ ಧಾನಿಸುತಮೋದದಲಿ ಶ್ರುತತತ್ವ | ಪಾದಾರ್ಪಣೆನ್ನೇ |ನೀದಯದಿ ಮರೆಯಾಗಿ | ತೋರ್ದೆ ಗುರು ಬಿಂಬವನುವೇದಾಂತ ವೇದ್ಯ ಹರಿ | ಹೃದಯ ಗಹ್ವರದೀ 1 ಕ್ಲೇಶಗಳ ದಹಿಸಿ ಸ | ರ್ವೇಶ ಸದ್ಭೋದಗಳಲೇಸಾಗಿ ಅರುಹುತಲಿ | ಶ್ರೀತ ಕೈ ಪಿಡಿಯೋ |ತೋಷ ಕ್ಲೇಶಂಗಳು ರ | ಮೇಶ ನಿನ್ನಿಂದೆಂಬಭಾಸುರದ ಜ್ಞಾನ ಪ್ರ | ಕಾಶ ಕೊಡು ಇವಗೆ 2 ಮೋದ ಅದ್ವೈತ ಪಾದ ನಂಬಿಹನೋ 3 ಪರಿ ಲೀಲೆಗಳ ತೋರಿ ಇವನಲ್ಲೀಪರಿಹರಿಸೊ ಭವಬಂಧ | ಮರುತಾಂತರಾತ್ಮಕನೆಎರಗಿ ತವ ಪದದಲ್ಲಿ | ಮೊರೆಯ ಬಿದ್ದವಗೇ 4 ಸಾವಧಾನದಿ ಧ್ಯಾನ | ಭಾವ ವೃದ್ಧಿಯಗೈಸಿದೇವ ತವ ರೂಪವನು | ಆವ ಹೃದ್ಗುಹಡೀಓವಿ ಕಾಂಬುವ ಹದನ | ನೀವೊಲಿದು ಪಾಲಿಪುದುಗೋವುಗಳ ಪಾಲ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವೃಂದಾವನ ಪ್ರವೇಶಿಸಿದಂದವ ಚಂದದಿ ಪೇಳುವೆ ಪಾಲಿಪುದು ಪ ಇಂದಿರೆಯರಸನ ಪ್ರೇರಣೆಯಿಂದ ಯತಿ ವೃಂದ ತಿಲಕ ರಾಘವೇಂದ್ರರಾನಂದದಿ ಅ.ಪ ಒಂದು ದಿನವು ಶ್ರೀ ರಾಯರು ಶಿಷ್ಯರ ವೃಂದಕೆ ಪಾಠವ ಹೇಳುತಿರೆ ಅಂದು ವಿಮಾನದಿ ಕೃಷ್ಣದ್ವೈಪಾಯನ ಪ ರಂಧಾಮಕೈದಲು ನೋಡಿ ಕೈ ಮುಗಿದು 1 ಎಷ್ಟು ದಿನವು ನಾವಿಲ್ಲಿರಬೇಕೆಂದು ಶಿಷ್ಟ ಗುರುವರರು ಕೇಳಿದೊಡೆ ಕೃಷ್ಣದ್ವೈಪಾಯನರೆರಡು ಬೆಳಗುಳ ಗಟ್ಟಿಯಾಗಿ ಬೀಸಿ ತೋರಿಸಿ ಪೊರಟರು 2 ನೆರೆದ ಶಿಷ್ಯರದರರ್ಥವೇನೆನುತ ಗುರುಗಳನ್ನು ತಾವ್ ಕೇಳಿದೊಡೆ ಎರೆಡು ವರ್ಷ ತಿಂಗಳು ದಿನವೆರಡೆರಡು ಇರುವುದು ಧರೆಯೊಳಗೆಂದರು ರಾಯರು 3 ಆದವಾನಿಗೆ ಗುರು ಸಂಚಾರ ಪೋಗಿರೆ ಆ ದಿವಾನ ವೆಂಕಣ್ಣ ಬಲು ಆದರಿಸಿದ ಬಳಿ ತಾ ನವಾಬನಿಂದ ಮೋದದಿ ಕೊಡಿಸಿದ ಮಂಚಾಲೆಯನು 4 ಹಿಂದೆ ಪ್ರಹ್ಲಾದರು ಯಾಗವ ರಚಿಸಿದ ಸುಂದರ ಕ್ಷೇತ್ರವಿದೆಂಬುದನು ತಂದು ಮನಕೆ ಗುರುರಾಯರೀ ಕ್ಷೇತ್ರವ ನಂದು ಪಡೆದು ತಾವಿಲ್ಲಿಯೇ ನಿಂತರು 5 ಉತ್ತಮ ನೀಲವರ್ಣದ ಶಿಲೆಯಪಳಿರಿಸಿ ಕೆತ್ತಿಸಿ ವೃಂದಾವನತರಿಸಿ ಕ್ಷೇತ್ರರಕ್ಷಣೆಯಗಷ್ಟ ದಿಕ್ಕುಗಳಲಿ ದೇವ ಮೂರ್ತಿಗಳನು ಸ್ಥಾಪಿಸಿ ನಿಲಿಸಿದರು 6 ವೃಂದಾವನದಲಿ ಸ್ಥಾಪಿಸಲೇಳ್ನೂರು ಚಂದದ ಸಾಲಿಗಾಮಗಳ ತಂದಿಟ್ಟರೆ ಸಿದ್ಧತೆಗಳು ಸಕಲವು ಕುಂದಿಲ್ಲದಂದೆ ನಡೆದಿರಲಾಗಲೆ 7 ಮುಂದಕೆ ತಮ್ಮ ಸಂಸ್ಥಾನವ ವಹಿಸಿ ಯೋ ಗೀಂದ್ರರೆಂಬ ಪ್ರಿಯ ಶಿಷ್ಯರಿಗೆ ಸಂದಿಪ ವಿರಹದಿ ನೊಂದಿದ ಶಿಷ್ಯರ ವೃಂದವ ಬಲು ಸಂತೈಸಿದರಾಗಲೇ8 ನಲವತ್ತೇಳು ಸಂವತ್ಸರ ನಾಲ್ಕು ತಿಂ ಗಳು ಇಪ್ಪತ್ತೊಂಭತ್ತು ದಿನಕಾಲ ನಲವಿನಿಂದ ವೇದಾಂತ ಸಾಮ್ರಾಜ್ಯವ ಸಲಹಿ ಸುಕೀರ್ತಿಯ ಗಳಿಸಿದ ಬಳಿಕ 9 ಸಾವಿರದೈನೂರು ತೊಂಭತ್ಮೂರನೆ ಕ್ರತು ಸಂವತ್ಸರದ ಶ್ರಾವಣ ಕೃಷ್ಣ ದ್ವಿತೀಯದ ಗುರುವಾರ ವಾಸರ ಮುಹೂರ್ತದಿ ಗುರುವರ 10 ಹಸ್ತದಿ ಜಪಮಾಲೆ ಪಿಡಿದು ಯೋಗೀಂದ್ರರ ಹಸ್ತಲಾಘವವ ಸ್ವೀಕರಿಸಿ ಸ್ವಸ್ತಿವಾಚನಗಳ್ ವಿಪ್ರರು ಪೇಳುತಿರೆ ಅರ್ಥಿಯಲಿ ವೃಂದಾವನವ ಪ್ರವೇಶಿಸಿ 11 ಪದ್ಮಾಸನದಲಿ ಮಂಡಿಸಿ ಎದುರಲಿ ಮುದ್ದುಪ್ರಾಣೇಶನ ನೋಡುತಲಿ ಪದ್ಮನಾಭನ ಧ್ಯಾನದೊಳಿರೆ ಜಪಸರ ಬಿದ್ದು ಬಿಡಲು ಮುಚ್ಚಳಿಕೆಯನಿಡಲು 12 ನೆರೆದಿಹ ವಿಪ್ರರು ಜಯ ಜಯವೆನ್ನುತ ಪರಿಪರಿ ರಾಯರ ಪೊಗಳಿದರು ಕರಿಗಿರೀಶನ ಕರುಣ ಪಡೆದ ನಮ್ಮ ಗುರುಸಾರ್ವಭೌಮನ ಸರಿಯಾರಿಹರು 13
--------------
ವರಾವಾಣಿರಾಮರಾಯದಾಸರು
ವೆಂಕಟರಮಣನೆ ಸಂಕಟಹರಣನೆ ಶಂಖ ಚಕ್ರ ಪೀತಾಂಬರನೆ ಪ ಪಂಕಜನಾಭನೆ ಪರಮಗೋವಿಂದನೆ ಲಂಕೆ ವಿಭೀಷಣ ನಿಗಿತ್ತವನೇ ಅ.ಪ ಹಿಂದನ ಕರ್ಮದಿನೊಂದೆನು ನಿನ್ನಯ ಕಂದನಮೊರೆಯನು ಲಾಲಿಪುದೂ ಬಂದಿಸಿ ಭವಗಳ ಹೊಂದಿಸೊ ನಿಜಪುರ ಚಂದದೆ ಕ್ಷಿತಿಯೊಳ್ ಪಾಲಿಪುದೂ 1 ಘಾಸಿ ಬಿಡಿಸಿ ನಿಜದಾಸನ ಮಾಡೆಲೊ ಈಶನೆ ಕೇಶವ ಮೂರಿತಯೇ ಆಸೆಯ ತೀರಿಸಬೇಕೈಯಾ ಭವ ನಾಶನೆ ಪಾರ್ಥವ ಸಾರಥಿಯೆ 2 ಪರಿಪರಿ ಭವಗಳ ಹರಿಯುವನೆನ್ನುತಾ ಕರದೊಳು ಕಂಕಣ ಕಟ್ಟಿರುವೇ ಮೊರೆ ಬಿದ್ದೆನು ಶ್ರೀ ತುಲಸೀರಾಮನ ಸ್ಮರಣೆಯ ಹೃದಯದೊಳಿಟ್ಟರುವೆ 3
--------------
ಚನ್ನಪಟ್ಟಣದ ಅಹೋಬಲದಾಸರು
ವೇಂಕಟೇಶನೆ ಎನ್ನಾ ಪಾಲಿಪುದೊ ಹರಣ ಪ ಪಂಕಜೋದ್ಭವ ಹರ ವಂದ್ಯ ಪರಾತ್ಪರ ನಿಖಿಲಾಗಮೈಕವಿಜ್ಞೇಯ ಲೋಕೋದ್ಧಾರ ಅ.ಪ ವತ್ಸರ ಬ- ಹುಧಾನ್ಯ ಸಂದ ಶುಕ್ಲ ದ್ವಿತೀಯ ಸಂಧ್ಯಾಸವನ ಬಂದು ಕೀರ್ತನ ಸೇವಾ- ನಂತರದಿ ಎನ್ನಾ ಮಂದಿರದೊಳು ಸುಪ್ತಾವಸ್ಥೆ ಯಿಂದಿರಲಾಗ ಅಂದು ಕಡೆಯ ಯಾ- ಮದಿ ತೈಜಸನೆ ನೀ ಹಂಸರಿಂದೆನ್ನ ಮನಸಂಶಯ ಹರಿಸಿದೆ1 ಅರುಣೋದಯಲೆದ್ದು ಮುದದಿ ಕರಣಶುಧ್ದನಾಗಿ ತ್ವರಿತದಿ ಸ್ವಪನದ ವಿ- ವರಕಾಗಿ ಹರುಷದಿ ಹರಿಪೂಜಾಕಾಲದಿ ಅರುಹಿದ ಮರುತ ಮೂರುತಿಯಾ ಉರುತರ ಚರಿತೆಯ ನಿರುತಪೊಗಳಲಾಯತವಿತ್ತ ತಿರುಪತಿಶೈಲಾಧಿಪ ಮಮಕುಲಸ್ವಾಮಿ2 ಹರಿಗುರುಸೇವೆಯನು ಸರ್ವಸದ್ಯೋಗ್ಯಸಾಧನವನ್ನು ಪರಮಹಂಸರು ಇತ್ತವೇಂಕಟೇಶಾಂಕಿತ ಮೂರುತಿಯ ನುತಿಪಾ ನಿಜ ಹರಿಭಕುತರ ಚರಣಕಮಲಬಂಡುಣಿಯೆನಿಸಿ ಇವನನಿರುತ ರಕ್ಷಿಸೋ ಉರಗಾದ್ರಿವಾಸವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ಶರಣು ವಾಯು ತನುಜ ಶರಣು ಭಾಸ್ಕರÀ ತೇಜ | ಶರಣು ರಾಜಾಧಿರಾಜ | ಶರಣು ಗೋಸಹಜ | ಶರಣಾರ ಸುರಭೋಜ ಪ ಸೂತ್ರನಾಮಕ ದೇವ | ಸ್ತೋತ್ರ ಮಾಳ್ಪರ ಕಾವ | ಚಿತ್ರ ಮಹಿಮರ ಕಾವ ವಿ | ಚಿತ್ರ ಶರೀರ ಸ | ಹೇಮ | ಪಾತ್ರಿಯೊಳಗೆ ಸವಿದು ಶ್ರೀಪತಿಯ ಶತ | ಪತ್ರ ಪಾದವ ಕಾ | ಲತ್ರಯ ನೆನೆಸುವನೆ 1 ಇದೆ ಭಾಗ್ಯ ನಾನಾವದೂ ಒಲ್ಲೆ | ಆ ನಾಮದ ಸೊಲ್ಲೆ ಮೇಣು ಪಾಲಿಪುದು ಮುಖ್ಯ | ಪ್ರಾಣಪಾವನ ಲೀಲ | ದಾನವರ ಕುಲಕಾಲ | ಏನೇನು ಮಾಳ್ಪಾಧಿಷ್ಠಾನದಲಿ | ನೀನೇ ನಾನೆಲ್ಲಿ ಎಣೆಗಾಣೆ2 ವಂದಿಸುವೆ ಜಗದ್ಗುರುವೆ | ಎಂದು ನಿನ್ನನು ಕರೆವೆ | ಮುಂದೆ ಈ ಜನ್ಮವು | ಹಿಂದೆ ಮಾಡಿ ನೇಮವು | ಪೊಂದಿಸು ಮೇಲುಗತಿ | ತಂದೆ ತಾಯಿ ಮಿಕ್ಕ | ನಿತ್ಯ | ವೆಂದೆ ಬಂದೆ ಸತ್ಯ ಕುಂದದೆ ಉದ್ಧರಿಸು 3 ದಾತ | ರೋಮ ರೋಮ ಕೋಟಿ ಕಾಮ ಸಂಹಾರನೇ | ಭೂಮಂಡಲಧರನೆ ಭೀಮಶೈನ | ಭೀಮ ರಿಪು ಗಂಟಲಗಾಣ | ತಾಮಸ ಜ್ಞಾನವಳಿ | ಸುಳಿ | ಶ್ರೀ ಮದಾನಂದತೀರ್ಥ4 ಶ್ರೀ ಸಪುತ ಕುಜನರ | ಭಾಷ್ಯ ಮುರಿದ ಧೀರ | ಭಾಸುರ ಕೀರ್ತಿ ಹಾರಾ | ದೋಷರಾಶಿ ದೂರ | ಹ್ರಾಸವಿಲ್ಲದ ಮಹಿಮ | ಶ್ರೀಶ ವಿಜಯವಿಠ್ಠಲನ್ನ | ದಾಸರೊಳಧಿಕ ನಿನ್ನ ಲೇಶವಾದರು ಬಿಡೆ | ನಾ ಸರ್ವಥಾ ಕರೆ | ತೋಷದಲಿಡುವುದೆನ್ನ 5
--------------
ವಿಜಯದಾಸ
ಶಿವ ದರುಶನ ವೆನಗಾಯಿತೂ | ನಮ್ಮಭವ ಭಯ ಪರಿಹರ ವಾಯಿತು ಪ ಹತ್ತು ಮತ್ತೊಂದೆಂಬ | ಇಂದ್ರಿಯದಭಿಮಾನಿಭಕ್ತರಿಗ್ಹರಿಯಲಿ | ಸಕ್ತಿಯ ಕೊಡುವಾ |ಉತ್ತಮ ತ್ರಯ ವೇದ | ಗ್ರಂಥವ ಪಠಿಸುತ್ತಹಸ್ತಗಳಭಿನಯ | ವಿಸ್ತರಿಸಿರುವಂಥ 1 ಮೂರ್ತಿ ಕರ್ತು ಶ್ರೀ ಹರಿ ಎಂಬಉತ್ತಮೋತ್ತಮ ಮತಿ | ಇತ್ತು ಪಾಲಿಪುದಯ್ಯ 2 ದುರಿತ ನಿಚಯವಪರಿಹರವರಿದಲ್ಲ | ಕರುಣಿ ಮೃತ್ಯುಂಜಯಕರುಣದಿ ತೋರೊ ಗುರು | ಗೋವಿಂದ ವಿಠಲನ 3
--------------
ಗುರುಗೋವಿಂದವಿಠಲರು
ಶ್ರೀ ಇಭರಾಮಪುರ ಕೃಷ್ಣಾಚಾರ್ಯರ ಸ್ತೋತ್ರ (ಅಪ್ಪಾವರು) 140 ಇಭರಾಮಪುರ ಅಪ್ಪ ಸೌಭಾಗ್ಯದಾಯಕರೇ | ಶುಭನಾಮ ಶ್ರೀ ಕೃಷ್ಣಾಚಾರ್ಯರೇ ನಮಸ್ತೇ || ಇಭರಾಜ ವರದನಿಗು ದ್ರುಪದಾತ್ಮಜಾಪತಿಗು | ಶುಭಚರಿತ ರಾಘವೇಂದ್ರಾರ್ಯರಿಗು ಪ್ರಿಯ ಪ ಶ್ರೀರಾಮನರಹರಿ ಶ್ರೀಕರನಾರಾಯಣ | ವರಾಹ ಹಯಶೀರ್ಷ ಶ್ರೀಕೃಷ್ಣನ ಪೂರ್ಣಾ || ನುಗ್ರಹಕೆ ಪೂರ್ಣಪಾತ್ರರೇ ನಿಮ್ಮ ಚರಣ | ಅರವಿಂದದಲಿ ನಾನು ಶರಣು ಶರಣಾದೆ 1 ಪಂಚಮುಖ ಹನುಮಂತ ನರಸಿಂಹ ಗರುಡ ವರಾಹ ಹಯವದನ || ಈ ಅಂಜನಾಸುತನನ್ನು ತತ್ ಅಂತಸ್ಥ | ಪಂಚರೂಪ ಶ್ರೀಶನ್ನ ಪೂಜಿಪಮಹಂತ 2 ಅಪ್ಪಾವರೆಂದು ಪ್ರೇಮದಿ ಕರೆಸಿಕೊಂಡು ಅಪ್ಪಮಕ್ಕಳಂತೆ ಕಾಯ್ದಿರಿ ಜನರ || ಅಪ್ಪಾ ಎಂದೀಗಲೂ ಸ್ಮರಿಸಿದರೂ ನಿಮ್ಮ ಸಹ ಶ್ರೀಪ ತಿಮ್ಮಪ್ಪ ಬಂದೆಮ್ಮನು ಕಾಯ್ವ 3 ಮೇಲಿಂದ ಬಿದ್ದವನ್ನ ದೂರ ಇದ್ದರೂ ಕಾಯ್ದು ತಾಳಿಗೋರೂಪ ಪಾದಜ ಧಾನ್ಯ ಉಂಡು || ಜಲದಿಂದ ವಿಪ್ರತಮ ಭಕ್ತವರನನ್ನ ಕಾಯ್ದು | ಜಲಜನಾಭನ ಗಾಯಕನೆಂದು ಆಶಿಸಿದಿರಿ 4 ಬೊಮ್ಮನ ಪಿತ `ಶ್ರೀ ಪ್ರಸನ್ನ ಶ್ರೀನಿವಾಸನಲಿ' ಪ್ರೇಮ ಅಚ್ಛಿನ್ನ ಭಕ್ತಿ ನಿಮಗೆ ದ್ವಿಜವರರೆ || ನಿಮ್ಮವನು ಭುವಿಯಲ್ಲಿ ತೋರಿಹ ಎನ್ನನ್ನು ಪ್ರೇಮಾನುಗ್ರಹದಯದಿ ಪಾಲಿಪುದು ಶರಣು 5 ಪ || ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗೋಪೀವಲ್ಲಭ ಗೋಪಾಲವಿಠಲ 144-1 ಗೋಪೀವಲ್ಲಭ ಗೋಪಾಲ ವಿಠಲದೇವ ಕಾಪಾಡೊ ಇವಳ ಭಕ್ತ್ಯಾದಿಗಳನಿತ್ತು ಪ ಶ್ರೀಪ ಕೃಷ್ಣ ನಿನ್ನ ಭಕ್ತಸುಜ್ಞಾನಿಗಳ ಸತ್ಪಂಥದಲಿ ಇಟ್ಟು ದಯದಿ ಪಾಲಿಪುದು ಅಪ ಭೀಷ್ಮಕನ ಸುತೆ ಸತ್ಯಭಾಮಾಸಮೇತ ನೀ ವಾಮಚಿನ್ಮಯ ಹರಿಣ್ಮಣಿನಿಭ ಸುಕಾಯ ಅಮಲ ಸುಸ್ವರ ವೇಣು ಅಭಯ ವರಹಸ್ತದಲಿ ವಾಮದಷ್ಟದಿ ಶಂಖ ತಮ ತರಿವ ಚಕ್ರ 1 ಇಂದಿರಾಪತಿ ಕಂಬುಗ್ರೀವದಲಿ ಕೌಸ್ತುಭವು ಇಂದುಧರೆ ಆಶ್ರಿತನಾಗಿರುವ ವೈಜಯಂತಿ ಸುಂದರ ಸು¥ಟ್ಟೆ ಪೀತಾಂಬರವನುಟ್ಟಿಹ ಸೌಂದರ್ಯಸಾರನೆ ಜಗದೇಕವಂದ್ಯ 2 ವನಜನಾಭನೆ ಅಜನೆ ವನಜಾಪತಿಯೆ ನಮೋ ವನಜಸಂಭವಪಿತ ಪ್ರಸನ್ನ ಶ್ರೀನಿವಾಸ ವನಜಲೋಚನ ಮಧ್ವ ಸಾಧು ಸುಜನರ ಹೃದಯ ವನಜಕೆ ದಿನಪ ನಮ್ಮೆಲ್ಲರನು ಪೊರೆಯೊ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಘೂತ್ತಮ ಗುರು ಸ್ತೋತ್ರ ಗುರುರಾಜ ರಘೂತ್ತಮ ಗುರುರಾಜ ಗುರುರಾಜ ನಮೋ ನಮೋ ನಿನ್ನ ಪಾದ ಸರಸಿಜಯುಗಳದಿ ನಾ ಶರಣು ಅಹ ಧರಣಿಜಾಪತಿ ರಾಮ ಭದ್ರಗೆ ಪ್ರಿಯ ನೀನು ಕರುಣದಿ ಸಲಹೆನ್ನ ದುರಿತಗಳಳಿದು ಪ ನಿವ್ರ್ಯಾಜ ಕರುಣಿ ರಘುವರ್ಯ ಗುರು ವರ್ಯ ಸುಮೇಧರ ದಿವ್ಯ ಚಾರು ತೋಯಜ ಕರದಿಂದ ಉದಯನಾಗಿ ನಿಗಮ ಸಾಮ್ರಾಜ್ಯ ಅಹ ಮಾಯೇಶ ಕಾಳೀಶ ಗುರುಗಳ ಪ್ರಿಯ ಬಾಲ ವಯಸ್ಸಲ್ಲೇ ಉದ್ದಾಮ ಪಂಡಿತನಾದಿಯೋ 1 ಬದರೀಶ ನಿರ್ಣೀತತತ್ವ ಅರ್ಥ ವಿಸ್ತಾರ ಮಾಡಿದ ಮಧ್ವ ಟೀಕೆ ಜಯತೀರ್ಥ ಬರೆದ ತದ್ಭಾವ ಪೇಳಿ ಒದಗಿಸಿದೆಯೊ ಜ್ಞಾನ ಸುಖವ ಅಹ ಮುದ ಜ್ಞಾನ ಸೌಭಾಗ್ಯ ಸಾಧು ವೈಷ್ಣವತನ ಇತ್ತು ಪಾಲಿಪುದೆನ್ನ ಕುಂದುಗಳೆಣಿಸದೆ 2 ಧರೆಯಲ್ಲಿ ದಕ್ಷಿಣಕಾಶಿ ಸ್ವರ್ಗ ಧರೆಯಳದವನ ಸೇವಿಸಿ ಗಂಗಾ ಧರಷಡಾನನ ಇಲ್ಲಿ ವಾಸಿಸುವ ಈ ಕ್ಷೇತ್ರ ವೃಂದಾವನ ವಾಸಿ ಅಹ ಪರಮೇಶ ಕೇಶವ ಪ್ರಿಯಾ ಪಿನಾಕಿನಿಯಿಂದ್ರಾ ತೀರ ಮಧ್ಯದಿ ತಪಗೈದು ಭಕ್ತರ ಕಾಯ್ವಿ 3 ಸುರವೃಂದ ಶ್ರೇಷ್ಠ ನೀನಹುದು ಎನ್ನ ಪರಿ ಬಾಧೆಯ ತರಿದು ಸರ್ವ ಸಿರಿ ಇತ್ತು ಹರಿ ಗುರು ಭಕ್ತಿ ಬೆಳೆಸಿ ಪಾಲಿಪುದು ಅಹ ಹರ ಸಮೀಪಕೆ ಒಳ್ಳೆ ಸಾಧನ ಸರ್ವದಾ ಕಾರುಣ್ಯದಲಿ ಎನ್ನೊಳ್ ನಿಂತು ಮಾಡಿಸೋ ಗುರೋ 4 ರಾಮನೃಕೇಸರಿ ವ್ಯಾಸ ಸತ್ಯ ಭಾಮ ರುಕ್ಮೀಣಿ ದೇವಿ ಅರಸ ಭೂಮ ಶ್ರೀಮಂತ ಕ್ಷೀರಾಬ್ಧಿವಾಸ ಮಧ್ವ ಭೀಮಹನುಮ ವಂದ್ಯ ಶ್ರೀಶ ಅಹ ಹೇಮಗರ್ಭನ ತಾತ `ಪ್ರಸನ್ನ ಶ್ರೀನಿವಾಸ' ರಮೆಯರಸನ ಪ್ರಿಯತಮ ಜೀಯ 5 || ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಹರಿ ಪಾಲಿಪುದೈ ದಾಸನಾಗಿ ಸೇವೆಗೈವುದ ಪ ನೀನು ಕೂಡುವ ಪೀಠವಾಗಿ ಮಲಗಲು ಹಾಸಿಗೆಯಾಗಿ ನಾನು ಎದುರ ಕನ್ನಡಿಯಾಗುತ ಮಂಗಳದೀಪ ಪಿಡಿವೆನೈ 1 ನಿನ್ನ ಮೇಲಿನ ಛತ್ರಿಯಾಗಿ ಚಾಮರಹಿಡಿದು ಬೀಸುವೆನೈ ಚನ್ನವೈಜಯಂತಿಮಾಲೆ ಧನ್ಯ ಮುದ್ರಿಕೆಯನ್ನು ಮಾಡಿಕೊ 2 ಭೋಜನಪಾತ್ರ ತಾಂಬೂಲಭರಣಿ ರಾಜಿಪ ಫಲತಟ್ಟೆಯು ಆಗಿ ವಿಜಯಧ್ವಜವನಾಗಿಸೈ 3 ಬರೆದು ಓದುವ ಪತ್ರವಾಗಿ ಕೈಯ ಲೀಲಾಶುಕವಾಗೀ ಕೊರಳ ಕೌಸ್ತುಭಮಣಿಯಮಾಡಿ ಶಂಖಚಕ್ರಗಳನು ಹೊರಿಸು 4 ಜಾಜಿಕೇಶವ ದಿವ್ಯಸನ್ನಿಧಿ ಸಾಹ್ಯವಸ್ತುಗಳಾಗಿಸೈ ರಾಜಾಧಿರಾಜಪೂಜ್ಯ ಮಾಜದೆ ನಾಂ ಮಣಿವೆ ಬೇಡಿ5
--------------
ಶಾಮಶರ್ಮರು
ಶ್ರೀಗುರುಜಗನ್ನಾಥದಾಸರಾಯರ ಸ್ತೋತ್ರ ಹರುಷದಿ ಕರಪಿಡಿದು ಪರಮ ಕರುಣದಿಂದ ಹರಿದಾಸ್ಯವಿತ್ತು ಉ - ದ್ಧರಿಸಿದ ಉಪಕಾರ ಮರೆಯಲಾರೆನು ಎಂದೂ ಪ ವರದೇಂದ್ರಾರ್ಯರÀು ನಮ್ಮ ಶರಣನು ಇವನಿಗೆ ಕರುಣಿಸೆಂದಾಜ್ಞಾಪಿಸೆ ತರುಳನ ಶಿರದಲಿ ಕÀರವಿಟ್ಟು ಕೃಪೆಯಿಂದ ಗುರುತು ತೋರಿದಕೆ ನಾ ಪರಮಧನ್ಯನೆಂಬೆ 1 ಮರುತಮತದತತ್ವ ಹರಿಕಥಾಮೃತಸಾರ ವರರಹಸ್ಯಗಳೆಲ್ಲವ ಸರಸವಾಗುತೆಂ ಅರಹುವೆವೆಂತೆಂಬ ವರವಾಕ್ಯದಂತೆನ್ನ ಪರಿಪಾಲಿಪುದಯ್ಯ 2 ಹರಿಮುನಿದರು ಗುರುಕರುಣಿಪನೊಮ್ಮಿಗೆ ಗುರು ಮುನಿಯೆ ಹರಿ ಪೊರೆಯ ಹರಿಯ ಕೃಪೆಗೆ ಮುಖ್ಯ ಗುರುವೆ ಕಾರಣನೆಂದು ನೆರೆನಂಬಿರಲು ನೀನರಿಯದಂತಿಪ್ಪುದೆ 3 ಮರುತ ಮತಾಬ್ಧಿಚಂದಿರ ಗುರುರಾಜರ ವರಬಲದಿ ಮೆರೆವ ಹರಿಭಕ್ತಾಗ್ರಣಿ ನಿಮ್ಮ ಚರಿತೆ ಬಣ್ಣಿಸುವೆನಾ ಹರಿವಲಿಯುವÀ ತೆರ ಕರುಣಿಸೆನ್ನಯನಿಜ4 ಬರಿದೆ ಬಾಹ್ಯಾಚಾರ ವಿರಚಿಸದಲೆ ಮನದಿ ಹರಿರೂಪ ಕಾಂಬತೆರದಿ ವರದೇಶ ವಿಠಲನ ಸಿರದಾಸ್ಯತನವೆಂಬ ಗುರುತುತೋರುವುದಯ್ಯ ಗುರುಜಗನ್ನಾಥಾರ್ಯ 5
--------------
ವರದೇಶವಿಠಲ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು
ಶ್ರೀಮೋದವಿಠಲದಾಸರ ಸ್ತೋತ್ರ ಮೋದವಿಠಲದಾಸರಾಯ ನಿನ್ನ ಪಾದವನಂಬಿದೆ ಪಾಲಿಪುದಯ್ಯ ಪ ಭೇದಮತಾಬ್ಧಿ ಪಾಠಿನ ಆದು - ರ್ವಾದಿಮಾಯಿಗಳಿಗೆ ಗಂಟಲಗಾಣ ಸಾಧುಜನರ ಪಂಚಪ್ರಾಣನೆನಿಪ ಮೇದಿನಿಯೊಳು ಹರಿಭಕ್ತ ಪ್ರವೀಣ 1 ಗುರುಪ್ರಾಣೇಶದಾಸರಲಿ ಜ್ಞಾನ ವರ ಉಪದೇಶವ ಕೊಂಡು ಭಕ್ತಿಯಲಿ ವರದೇಂದ್ರಾರ್ಯರ ಸನ್ನಿಧಿಯಲಿ ಸತತ ಹರಿಭಜನೆಯ ಮಾಳ್ಪ ನಲಿನಲಿಯುತಲಿ 2 ಸ್ನಾನಸಂಧ್ಯಾದ್ಯನುಷ್ಠಾನವನು ಙÁ್ಞನಪೂರ್ವಕದಿ ಚರಿಸುವ ನಿಧಾನ ಹೀನಜನಗಳಲ್ಲಿ ಮೌನ ನಿರುತ ಶ್ರೀನಿವಾಸನ ಮನದಲಿ ಮಾಳ್ಪ ಧ್ಯಾನ 3 ಬಾಲ್ಯತನದಿ ನಿಮ್ಮಾಜ್ಞ್ಞವನು ಮೀರಿ ಕಾಲಕಳೆದೆ ದುರ್ವಿಷಯದಿ ನಾನು ಶ್ರೀಲೋಲನಂಘ್ರಿ ಮರೆದೆನು ಮುಂದೆ ಪಾಲಿಸೆನ್ನಯ ಮೊರೆ ಶರಣು ಬಂದಿಹೆನು 4 ಶ್ರೀ ಮರುನ್ಮತಙÁ್ಞನವನು ನಮ್ಮ ಸ್ವಾಮಿ ವರದÉೀಶವಿಠಲನ ದಾಸ್ಯವನು ಆ ಮುನಿವರನ ಸೇವೆಯನು ಕೊಟ್ಟು ನೀ ಮುದದಲಿ ಕರುಣಿಸು ಸುರಧೇನು5
--------------
ವರದೇಶವಿಠಲ