ಒಟ್ಟು 115 ಕಡೆಗಳಲ್ಲಿ , 46 ದಾಸರು , 103 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಮಂಗಳಂ ಶ್ರೀ ಪಾರ್ಥಸಾರಥಿಗೆ ಮಂಗಳಂ ಸಂಕರ್ಷಣನಿಗೆ ಅನಿರುದ್ಧ ಸಾತ್ಯಕೀಸಹ ಬಂದು ನಿಂದವಗೆ ಪ ವಸುಧೆ ಭಾರವನಿಳುಹಲೆಂದು ದೇವಕೀ ವಸುದೇವರುದರದಿ ಶಿಶುವಾಗಿ ಅಸುರ ಪೂತನಿಯಸುವ ನೀಗಿದ ಕುಸುಮನಾಭಗೆ 1 ವಾತಾಸುರನಕೊಂದು ಬಾಯೊಳುಮಾತೆಗೆ ಬ್ರಹ್ಮಾಂಡತೋರ್ದಗೆ 2 ಒತ್ತಿ ಕಾಳಿಯ ಶಿರವನಾಗ ಸುತ್ತಿದಾ ಕಿಚ್ಚನ್ನು ನುಂಗಿ ಎತ್ತಿ ಗೋವರ್ಧನಗಿರಿಯ ಹತ್ತಿ ಗೋಮಂತವನು ಹಾರ್ದಗೆ 3 ಕೇಶಿಯನು ಸಂಹರಿಸಿ ದುಷ್ಟದ್ವೇಷಿಯಾದ ವೃಷಭನನು ಕೊಂದು ದಾಸಿ ತಂದ ಗಂಧವನು ಪೂಸಿ ಮೆರೆದ ಕ್ಲೇಶನಾಶಗೆ 4 ಬಿಲ್ಲು ಮುರಿದು ಬೀದಯಲ್ಲಿ ಎಲ್ಲರಿಗೆ ತಕ್ಕ ರೂಪ ತೋರಿ ಮಲ್ಲರನು ಮರ್ಧಿಸುತ ಮಾವನ ಸೊಲ್ಲನಡಗಿಸಿದ ಪುಲ್ಲನಾಭಗೆ 5 ರುಕ್ಮಿಣೀ ಸತ್ಯಭಾಮೆ ಕಾಳಂದಿ ಜಾಂಬವತಿಯು ಮೊದಲಾದ ಲಕ್ಷ್ಮಣೆ ಸತ್ಯಭದ್ರೆ ಮಿತ್ರವಿಂದೆಯು ತಂದ ಲಕ್ಷ್ಮೀರಮಣಗೆ 6 ಕೊಂದು ನರಕನ ಹದಿನಾರುಸಾವಿರ ಸ್ತ್ರೀಯರನು ಬೇಗ ತಂದು ದ್ವಾರಕಿಯಲ್ಲಿ ಸತಿಸಹ ಆನಂದದಿಂದಲಿ ನಿಂದಕೃಷ್ಣಗೆ 7 ಹೇಮದಾಭರಣವಿಟ್ಟು ರುಕ್ಮಿಣಿ ನೇಮದಿಂದಲೆ ಬೀಸುತಿರಲು ಪ್ರೇಮಕಲಹದಿ ಬೀಳಲಾಕ್ಷಣ ವಿರಾಮವಿಲ್ಲದೆ ಎತ್ತಿದವಗೆ8 ಎತ್ತಿ ಅಂಕದೊಳಿಟ್ಟು ಪ್ರೇಮದಿ ಅರ್ಥಿಯಿಂದಲೆ ಕುರುಳನೇವರಿಸಿ ತತ್ವವಾಕ್ಯವನ್ನು ಹೇಳಿದ ಮುಕ್ತಿದಾಯಕ ಮುದ್ದು ಕೃಷ್ಣಗೆ 9 ಜಾಣತನದಲಿ ಕಾಶಿಯನುಸುಟ್ಟು ಪೌಂಡ್ರಕನಪ್ರಣಾಪಹರಿಸಿದವಗೆ 10 ಮಿಥುಳವಾಸಿಗೆ ಮುಕ್ತಿಯನಿತ್ತು ಸುತನ ತಂದು ವಿಪ್ರನಿಗಿತ್ತು ಹತವಮಾಡಿ ವೃಕಾಸುರನ ಶ್ರುತಿಗಗೋಚರನಾದ ಸ್ವಾಮಿಗೆ 11 ಅರಗಿನಮನೆಯಿಂದ ರಕ್ಷಿಸಿ ದ್ರೌಪದಿ ಸುಭದ್ರೆಯ ಸಾಧಿಸಿತ್ತಗೆ 12 ನೆತ್ತವಾಡಿ ಕೌರವರೊಡನೆ ಅರ್ಥವನು ಸೋಲಲು ಪಾಂಡವರು ಭಕ್ತವತ್ಸಲನೆನ್ನೆ ದ್ರೌಪದಿಗೆ ವಸ್ತ್ರವಿತ್ತು ಕಾಯ್ದ ಕೃಷ್ಣಗೆ 13 ವನವಾಸದಲ್ಲಿ ಪಾಂಡವರು ಉಲ್ಲಾಸದಿಂದಲೆ ಇರುತಿರಲು ಪಾಶುಪತ ವನು ಪಾರ್ಥನಿಗೆ ಈಶನಲಿ ಕೊಡಿಸಿದ ಸರ್ವೇಶಗೆ 14 ವೇಷವನ್ನು ಮರೆಸಿಕೊಂಡು ವಿರಾಟನಗರದಿ ವಾಸ ಮಾಡಲು ಮೋಸದಿಂದಲೇ ಕೀಚಕಾದಿಗಳ ನಾಶಮಾಡಿಸಿದ ವಾಸುದೇವಗೆ 15 ಆನಂದರೂಪವ ತೋರಿದವಗೆ 16 ತೋರಿದವಗೆ 17 ಜಾಹ್ನವೀಸುತನ ಯುದ್ಧವನ್ನು ತಾಳಲಾರದೆ ಜನರ್ಧನಗೆ ಪೇಳೆ ಜಾಣತನದಲಿ ಶಿಖಂಡಿಯನುತೋರಿ ಬಾಣಮಂಚದಿ ಮಲಗಿಸಿದವಗೆ 18 ಸುಭದ್ರೆ ಪುತ್ರನ ಯುದ್ಧದಲ್ಲಿ ಪದ್ಮವ್ಯೂಹವ ಪೋಗಿಸಲಾಗ ಮುದ್ದುಬಾಲಕನ ಕೊಲಿಸಿದವಗೆ 19 ಸಿಂಧುರಾಜನ ಕೊಲ್ಲುವೆನೆಂದು ನರನು ಪ್ರತಿಜ್ಞೆಮಾಡಲು ತಂದಚಕ್ರವ ರವಿಗೆತೋರಿಸಿ ಸೈಂಧವನ ಕೊಲ್ಲಿಸಿದಸ್ವಾಮಿಗೆ 20 ದೃಪತಿಯತೋರಿದವಗೆ 21 ಕರ್ಣನು ಘಟ್ಟಿಯಾಗಿ ರಥವನೊತ್ತಿ ದಿಟ್ಟತನದಲಿ ಶಿರವ ಕಾಯ್ದಗೆ 22 ಮದ್ರರಾಜನ ಕೊಲ್ಲುವೆನೆಂದು ಸಮುದ್ರಶಯನನ ಸಹಾಯದಿಂದ ಭದ್ರಗಜವನು ಏರೆ ಧರ್ಮಜ ಕಾಲರುದ್ರನಂದದಿ ಕೊಲಿಸಿದವಗೆ 23 ಭೀಮ ದುರ್ಯೋಧನರು ಯುದ್ಧದಿ ಹೇಮದ ಗದೆಯನ್ನು ಪಿಡಿದು ಪ್ರೇಮದಿಂದಲೆ ಕಾದುತಿರಲು ನಿರ್ನಾಮವನು ಮಾಡಿಸಿದ ಸ್ವಾಮಿಗೆ 24 ಗೃಧ್ರ ಉಲೂಕದ ವೃತ್ತಿಯ ನೋಡಿ ಭದ್ರೆದ್ರೌಪದಿ ಪುತ್ರನನ್ನು ನಿದ್ರೆಕಾಲದಿ ಕೊರಳಕೊಯ್ಯಲು ಶಿರದಲಿದ್ದ ಮಣಿಯ ತೆಗೆಸಿದವಗೆ 25 ದ್ರೋಣಪುತ್ರನ ಬಾಣದಿಂದಲೆ ತ್ರಾಣಗೆಟ್ಟ ಶಿಶುವ ನೋಡಿ ಜಾಣತನದಲಿ ಚಕ್ರವಪಿಡಿದು ಪ್ರಾಣವನು ರಕ್ಷಿಸಿದ ಸ್ವಾಮಿಗೆ 26 ಏಳುಹನ್ನೊಂದು ಸೇನೆಗಳನೆಲ್ಲ ಹಾಳುಮಾಡಿ ಹದಿನೆಂಟುದಿವಸದಿ ಖೂಳಕೌರವರನೆಲ್ಲ ಕೊಂದು ಧರ್ಮನಲಿ ರಾಜ್ಯವಾಳಿಸಿದಗೆ 27 ಸೌಪ್ತಿಕದಲಿ ಪುತ್ರನ ಕೊಲ್ಲಿಸಿ ಸ್ತ್ರೀಪರ್ವದಿ ಭೂಮಿ ಭಾರವಡಗಿಸಿ ಶಾಂತಿಪರ್ವದಿ ಧರ್ಮರಾಯಗೆ ಪಟ್ಟಾಭಿಷೇಕವ ಮಾಡಿಸಿದಗೆ 28 ಮುಸಲದಲಿ ಯಾದವರನಡುಗಿಸಿ ಅನುಶಾಸನದಿ ಧರ್ಮಪೇಳಿಸಿ ಅಶ್ವಮೇಧ ಮಹಾಪ್ರಸ್ಥ ಸ್ವರ್ಗಾರೋಹಣವ ಮಾಡಿಸಿದಗೆ 29 ಅಂದುಪಾರ್ಥಗೆ ಸಾರಥ್ಯವಮಾಡಿ ಬಂಧುಗಳ ಸ್ವರ್ಗವಾಸಮಾಡಿಸಿ ಬಂದು ಬೃಂದಾರಣ್ಯದಲ್ಲಿ ಇಂದಿರೇ ಸಹನಿಂದ ಸ್ವಾಮಿಗೆ 30 ಅನಿರುದ್ಧ ಸಾತ್ಯಕಿ ರುಕ್ಮಿಣಿ ಸಹಿತಲೆ ಬಂದು ನಿಂದವಗೆ 31 [ವರ] ಕಲಿಯುಗದೊಳಗುಳ್ಳ ದುಷ್ಟಕರ್ಮಿಗಳನೆಲ್ಲ ಸಲಹುವೆನೆಂದು ಕೈರವಿಣಿತೀರದಲಿನಿಂದ ಕರುಣಿ ವೆಂಕಟಕೃಷ್ಣನಂಘ್ರಿಗೆ ಮಂಗಳಂ 32
--------------
ಯದುಗಿರಿಯಮ್ಮ
ಮಗುವು ಕಾಣಯ್ಯ ಮಾಯದ ಮಗುವು ಕಾಣಯ್ಯ ಸುಗುಣಾ ವಾದಿರಾಜರೆ ಮೂಜಗವಾನುದರದೊಳಿಟ್ಟ ಪ ಏಕಾರ್ಣವಾಗಿ ಸಕಲ ಲೋಕವಾಕಾರವಳಿಯಲೂ ಏಕಮೇವಾದ್ವಿತೀಯವೆಂಬಾಗಮಕೆ ಸಮವಾಗೀ ಶ್ರೀಕರಾಂಬುಜದಿಂ ಪಾದಾಂಗುಲಿಯ ಪಿಡಿದು ಬಾಯೊಳಿಟ್ಟು ಶ್ರೀಕಾಂತ ವಟದೆಲೆಯ ಮೇಲ್ಮಲಗಿ ಬ್ರಹ್ಮನ ಪಡೆದಾ 1 ಮಾಯಾಪೂತನೀಯ ಕೊಂದು ಕಾಯವ ಕೆಡಹಿ ಶಕಟನನು ಸಾಯಬಡಿದು ವತ್ಸನ ಧೇನುಕನ ವೃಷಭನ ನೊಯ್ಯನೊದ್ದು ಯಮಳಾರ್ಜುನರಿಗೆ ಸಾಯುಜ್ಯವನಿತ್ತು ತನ್ನ ತಾಯಿಗೆ ತಾ ಮಣ್ಣುಮೆದ್ದು ಬಾಯಿ ಬಿಚ್ಚಿ ತೋರಿಸಿದಾ 2 ಕಡಹದಾ ಮರವನೇರಿ ಸಂಗಡಿಗರೊಂದಿಗೆ ಕಾಳಂದಿಯ ಮಡುವಲಿ ಧುಮುಕಿ ಕಲಕಿ ಜಲವಾ ಆ ಕಾಳಿಂಗನಾ ಪೆಡೆಯ ತುಳಿದು ಜಡಿಯಲವನಾ ಮಡದಿಯರು ಬೇಡಿಕೊಳ್ಳೆ ಕಡಲಿಗಟ್ಟಿ ಬಂದು ಎನ್ನ ತೊಡೆಯ ಮೇಲೆ ಮಂಡಿಸಿದ 3 ಬಳ್ಳಿಗಟ್ಟದುಡಿಯಲ್ಲಿ ಗುಲ್ಲಿಯ ಚೀಲಾವ ಸಿಕ್ಕಿಸಿ ಕಲ್ಲಿಗಟ್ಟ್ಯೊಗರ ಕಂಬಳಿಯ ಕೋಲು ತುದಿಯೊಳು ನಿಲ್ಲಿಸಿ ಹೆಗಲೊಳು ಕೊಂಬು ಕೊಳಲನು ಪಿಡಿದೂದುತ್ತ ಗೊಲ್ಲರೊಡಗೂಡಿ ಆಡುತೆಲ್ಲ ಗೋವುಗಳ ಕಾಯ್ದಾ 4 ಶ್ರುತಿತತಿಗಗೋಚರನು ಚುತಿದೂರನಾದಿಮೂರ್ತಿ ಚತುರ್ಮುಖಾದಿಶೇಷ ದೇವಾರಾಧ್ಯ ದೇವನು ಪತಿ ವೈಕುಂಠಕೇಶವನು ಯತಿಯೆ ನೀ ನೋಡಲು ಶರಣಾಗತನ ತೊಡೆಯೊಳು 5
--------------
ಬೇಲೂರು ವೈಕುಂಠದಾಸರು
ಮಗುವು ಕಾಣಿರಯ್ಯ | ಮಾಯದ | ಮಗುವು ಕಾಣಿರಯ್ಯ ಪ ಸುಗುಣ ವಾದಿರಾಜರೆ ಮೂಜಗವನು ತನ್ನುದರದೊಳಿಟ್ಟಅ ಮಾಯಾ ಪೂತನಿಯ ಕೊಂದು ಕಾಯವ ಕೆಡಹಿ ಶಕಟನ್ನಸಾಯಬಡಿದು ಧೇನುಕನ ವೃಷಭಾಸುರನನೋಯ ನೋಡದ್ಯಮಳಾರ್ಜುನಂಗೆ ಸಾಯುಜ್ಯವನೆ ಇತ್ತು ತನ್ನತಾಯಿಗೆ ತಾ ಮಣ್ಣ ಮೆದ್ದು ಬಾಯ ಬಿಟ್ಟು ತೋರಿಸಿದ1 ಏಕವರ್ಣವಾಗಿಯೆ ಸಕಲಲೋಕವು ಆಕಾರವಳಿಯೆಏಕಮೇವಾದ್ವಿತೀಯನೆಂಬಾಗಮಕೆ ಸರಿಯಾಗಿಶ್ರೀಕರಾಂಬುಜದಿಂ ಪಾದಾಂಗುಲಿಯಂ ಪಿಡಿದು ಬಾಯೊಳಿಟ್ಟುಶ್ರೀಕಾಂತ ವಟಪತ್ರದ ಮೇಲೊರಗಿ ಬ್ರಹ್ಮನ ಪಡೆದ2 ಕಡಹದ ಮರನೇರಿ ಸಂಗಡಿಗರೊಡನೆ ಕಾಳಿಂದಿಯಮಡುವ ಧುಮುಕಿ ಧುಮುಕಿ ಕಲಕಿ ಆ ಕಾಳಿಂಗನಪೆಡೆಯ ತುಳಿದು ಜಡಿಯಲವನ ಮಡದಿಯರು ಬೇಡಿಕೊಳ್ಳೆಕಡಲಿಗಟ್ಟಿ ಬಂದು ತಾಯ ತೊಡೆಯ ಮೇಲೆ ಮಲಗಿದಂಥ 3 ಕಲ್ಲಿಗಟ್ಟಿ ಗೂಡೆಯಲಿ ಗೋಲಿಯ ಚೀಲವನಿಕ್ಕಿಹಿಲ್ಲಿ ಕಟ್ಟೋಗರ ಕಡಕಲಕ್ಕಳೆಯಾ ತುದಿಯಲಿನಿಲ್ಲಿಸಿ ಪೆಗಲೊಳು ಕೊಂಬು ಕೋಲನೆ ಪಿಡಿದುಗೊಲ್ಲರೊಡಗೂಡಿ ನಮ್ಮೆಲ್ಲರ ಗೋವುಗಳ ಕಾಯ್ದ 4 ಪತಿ ವೈಕುಂಠ ಕೇಶವನುಯತಿಯೆ ನೀ ನೋಡಯ್ಯ ಶರಣಾಗತನ ತೊಡೆಯಿಂ ಮಾಯವಾದ 5
--------------
ಕನಕದಾಸ
ಮಲಗೆಲೊ ಗೋಪಾಲ ಎನ್ನಯ ಕರವು ನೋಯುತಿಹುದೊ ಶ್ರೀ ಕೃಷ್ಣ ಪ ತಿರುಗಿ ತಿರುಗಿ ವನದಿ ನಿನ್ನಯ ಪದವು ನೋಯುತಿಹುದೇ ಶ್ರೀ ಕೃಷ್ಣ ಅ.ಪ ದುಷ್ಟ ಪೂತನಿ ವಿಷದಿ ನಿನ್ನಯ ಹೊಟ್ಟೆ ನೋಯುತಿಹುದೇ ಶ್ರೀ ಕೃಷ್ಣ ದಿಟ್ಟ ಆ ನಾರಿಯರ ಕ್ರೂರದ ದೃಷ್ಟಿ ತಾಕಿತೇನೋ ಶ್ರೀ ಕೃಷ್ಣ 1 ಮುರಳಿಯ ಬಾರಿಸಿದ ನಿನ್ನಯ ಬೆರಳು ನೋಯುತಿಹುದೇ ಶ್ರೀ ಕೃಷ್ಣ ಒರಳು ಬಲದಿ ಎಳೆದ ನಿನ್ನಯ ಕರಳು ಹಿಡಿಯತೇನೋ ಶ್ರೀ ಕೃಷ್ಣ 2 ನಿನ್ನ ಕೊರತೆಗಳನು ಬೇಗನೆ ಎನ್ನ ಮನಕೆ ತಿಳಿಸೋ ಶ್ರೀ ಕೃಷ್ಣ ಚಿನ್ನ ನಿದ್ರೆ ಬರಲು ಮನದಿ ಪ್ರ ಸನ್ನ ಹರಿಯ ನೆನೆಯೋ ಶ್ರೀ ಕೃಷ್ಣ 3
--------------
ವಿದ್ಯಾಪ್ರಸನ್ನತೀರ್ಥರು
ಮಾಧವ ಗೋವಿಂದ ಜಯಜಯ ವಿಷ್ಣುವೆ ಮಧುಸೂದನ ತ್ರಿವಿಕ್ರಮಜಯ ವಾಮನ ಜಯ ಶ್ರೀಧರ ಜಯ 1ಜಯ ಜಯ ಹೃೀಕೇಶ ಪದ್ಮನಾಭ ಜಯದಾಮೋದರ ಸಂಕರ್ಷಣ ಜಯಜಯ ವಾಸುದೇವನೆ ಜಯ ಪ್ರದ್ಯುಮ್ನನೆಜಯಾನಿರುದ್ಧ ಪುರುಷೋತ್ತಮ ಜಯ 2ಜಯ ಜಯಾಧೋಕ್ಷಜ ನಾರಸಿಂಹ ಜಯಜಯ ಜಯಾಚ್ಯುತ ಜಯ ಜನಾರ್ದನಜಯ ಜಯೋಪೇಂದ್ರನೆ ಜಯ ಹರೆ ಶ್ರೀ ಕೃಷ್ಣಜಯ ತಿರುಪತಿ ವೆಂಕಟರಮಣ 3ಓಂ ಪೂತನಾಜೀವಿತಹರಾಯ ನಮಃ
--------------
ತಿಮ್ಮಪ್ಪದಾಸರು
ಮುಕ್ತನಾವನೋ ಜೀವನ್ಮುಕ್ತನಾವನೋ ಪ ಮುಕ್ತನಾವನಿವರ ಪಾದಾಸಕ್ತನಾಗಿ ಸರ್ವಕರ್ಮ ಭಕ್ತಿಯಿಂದ ನೀಡಿ ವಿಷಯಾಸಕ್ತನಾಗದವನಿಗಿನ್ನ ಅ.ಪ ಉದಯಕಾಲದಲ್ಲಿ ಎದ್ದು ನದಿಯಸ್ನಾನಮಾಡಿ ಇವರ ಪದುಮಸಮಪಾದಯುಗಳ ಹೃದಯದಲ್ಲಿ ಭಜಿಪಗಿನ್ನ 1 ವನಿತೆ ಧಾನ್ಯ ಧನುವು ತನಯ ಪ್ರಾಣ ಇವರ ಪಾದವನಜಕರ್ಪಿಸಿರುವಗಿನ್ನ 2 ಊಟ ಕೂಟ ನೋಟಮಾಟ ಪಾಠ ಆಟ ಕಾಟ ಇವರ ಉದಧಿ ದಾಟುವಾವಗಿನ್ನಮತ್ತೆ 3 ಉಕ್ತ ಕರ್ಮದಲ್ಲಿ ಮನ ಸಕ್ತನಾಗಿ ಹರಿಯ ಪಾದ ಭಕ್ತಿಯಿಂದ ಭಜಿಸಿ ಪಾಪಮುಕ್ತನಾಗುವವಗಿನ್ನ 4 ಶಕ್ತಿ ಇದ್ದರೊಳಗೆ ಹರಿಯ ಭಕ್ತಜನರ ಭಜಿಸಿ ಸರ್ವೋ ವಿಭೂತಿ ಮನದಿ ವ್ಯಕ್ತಮಾಡಿದವಗಿನ್ನ 5 ಮೋದತೀರ್ಥ ಶಾಸ್ತ್ರಸಾರ ಸ್ವಾದ ಮನದಿ ತಿಳಿದು ಅವರ ಹಾದಿಹಿಡಿದು ಬುಧರ ದಿವ್ಯ ಪಾದಯುಗಳ ಭಜಿಪಗಿನ್ನ 6 ಶಿರದಿ ಇದ್ದ ಹರಿಯ ರೂಪ ಅರಿದು ಮನಸಿನಿಂದ ನಿತ್ಯ ಶಿರದಿ ಕಾರ್ಯಮಾಡಿ ತಾನು ಹಿರಿದು ಹಿಗ್ಗುವಗಿನ್ನ 7 ನೇತ್ರಮೊದಲಾದ ಸರ್ವಗಾತ್ರದಲ್ಲಿ ಇರುವ ತೀರ್ಥ ಕ್ಷೇತ್ರಮೂರ್ತಿ ತಿಳಿದು ತನ್ನ ಗಾತ್ರನಿರ್ಮಲ ಮಾಳ್ಪಗಿನ್ನ 8 ಈಶ ಹರಿಯು ಸರ್ವ ಜೀವ ದಾಸರೆಂದು ತನ್ನ ಹೃದಯೋ ಪಾಸನಾವ ಮಾಡಿ ವಿಷಯ ಆಶೆಬಿಟ್ಟು ಇರುವಗಿನ್ನ 9 ಎನು ಮಾಳ್ಪ ಕರ್ಮವೆಲ್ಲ ಶ್ರೀನಿವಾಸ ಮಾಳ್ಪನೆಂದು ಜ್ಞಾನದಿಂದ ಸರ್ವರಲ್ಲಿ ಧ್ಯಾನಮಾಳ್ಪ ಮನುಜಗಿನ್ನ 10 ಶ್ವಾನ ಗೋವು ದ್ವಿಜ ಮತ್ತೆ ಅನಿ ಮೊದಲು ಸರ್ವರಲ್ಲಿ ಜ್ಞಾನಗಮ್ಯ ತಾನು (ತಾನೆ) ಸಮಾನನೆಂದವಗಿನ್ನ 11 ಅಮೃತ ವಿಷವು ಎಲ್ಲ ಸ್ವಾದು ಸಮವೆಂದು ಅಲ್ಲಿ ಇಚ್ಚೇ ಮಾಡದವಗಿನ್ನ 12 ವೃತ್ರಸೂದನನುಜ ಸರ್ವಕರ್ತೃ ಎಂಬವಗಿನ್ನ 13 ಪಾದ ದೂತ ನಾನು ಎಂದು ನಿತ್ಯ ಪಾತಕಾರ್ಯ ಮಾಡಿದಾಗ್ಯು ಪೂತನೆನಿಪನವನಗಿನ್ನ 14 ಸಿಟ್ಟು ಶೋಕ ಹರ್ಷ ಮೋಹ ಸುಟ್ಟು ಗುರುಜಗನ್ನಾಥ ವಿಠಲನ್ನ ಭಜಿಸಿ ಜಗದಿ ಶಿಷ್ಟ ನಾಗಿರುವಗಿನ್ನ 15
--------------
ಗುರುಜಗನ್ನಾಥದಾಸರು
ಯಾಕೆ ಇಂಥ ದುಡುಕು ಕೃಷ್ಣಯ್ಯ ನಿನಗೇಕೆ ಇಂಥ ದುಡುಕು ಪಾಕಶಾಸನಮಧ್ಯ ಪೋಕತನಗಳನ್ನುಸಾಕುಸಾಕಯ್ಯ ಕೃಷ್ಣ ಪ ಗೊಲ್ಲ ಬಾಲಕರು ನೀವೆಲ್ಲರು ಕೂಡಿಕೊಂಡುಗುಲ್ಲ ಮಾಡದೆ ಮೊಸರೆಲ್ಲ ಸವಿದೆಯಂತೆ ಕೃಷ್ಣ 1 ಪೂತನಿ ಮೊಲೆಯನ್ನು ಭೀತಿಯಿಲ್ಲದೆ ಉಂಡುಘಾತವ ಮಾಡಿದೆ ಮಾತನಾಡಯ್ಯ ಕೃಷ್ಣ2 ದುಷ್ಟ ಕಂಸನ ನೀನು ಕಷ್ಟವಿಲ್ಲದೆ ಮಡುಹಿಮುಷ್ಟಿಕನ ಕೊಂದೆ ದೃಷ್ಟಿ ತಾಕೀತಂದು 3 ಸಾರಥಿ 4 ಅಂಗಿಟೊಪ್ಪಿಗೆ ಉಂಗುರ ಉಡಿದಾರಶೃಂಗರಿಸಿಕೊಂಡು ರಂಗವಿಠಲ ಬಾರೋ 5
--------------
ಶ್ರೀಪಾದರಾಜರು
ರಕ್ಷಿಸೆನ್ನನು ಲಕ್ಷ್ಮೀರಮಣ ಸುರಪಕ್ಷಪಾವನ ಪದ್ಮಚರಣ ಮೋಕ್ಷದಾಯಕ ಹಿರಣ್ಯಾಕ್ಷ ಸಂಹರಣ ಪ ಅಸುರರ ಸಂಹರಣ ಶ್ರೀ ರಂಗ ನಾಮವೆ ಪಾಪಭಂಗ ಸಂಹರಣ 1 ದುರಿತನಾಶನ ನಾಮಸ್ಮರಣ ಭೂರಮಣ ತುಳಸಿ ಮಾಲಾಭರಣ 2 ಕಮಲಭವಾರ್ಜಿತ ಚರಣ ಚಾರುವಿಮಲ ಭಾಸ್ಕರ ಶಶಿಕಿರಣ ವಿಮಲಾತ್ಮಕ ಕಾಮಪಿತ ಹೇಮಾಭರಣ 3 ವಾಣಿ ಪತಿಯ ಪೆತ್ತ ಸುಗುಣ ಮಾಯಾಶ್ರೇಣಿ ಪೂತನಿಯ ಸಂಹರಣ ಹರಣ 4 ಮೇಲೆ ಬಾಣ ಭೀಮನಕೋಣೆವಾಸಿ ನಾರಾಯಣ 5
--------------
ಕವಿ ಪರಮದೇವದಾಸರು
ರಂಗಯ್ಯ ನಿನಗ್ಯಾತಕೋ | ಹೇಳುವದು ಥರವೆ ಅಲ್ಲಾ ಪೂತನಿ ಮೊಲೆ ಉಂಡ ಪುಂಡಗೋವಿಂದ ಪ ನೆರೆಹೊರೆ ಮನಿಗಳಿಗ್ಹೋಗಿ | ಅವರ ನೆಲವಿಗಳಿಗೆ ನೀನು ಹುದಗಿ | ಮೇಲಿರುವಂಥ ಪಾಲು ಬೆಣ್ಣೆಗಾಗಿ | ಎರಡು ಕರದಿತ್ವರದಿ ನೀನು ಬಾಗಿ | ಇಂಥ ಪರಿಚೇಷ್ಟಿಗಳಲ್ಲಿ ಬಡವರಾಲಯ ಪೊಕ್ಕು | ದುರುಳತನವ ಮಾಡಿ ದೂರುತರುವರೇನೊ 1 ಮಂದಗಮನಿಯಳ ಕರವನ್ನು | ಹಿಡಿದು ಮಾನಭಂಗವ ಮಾಡುವದೇನು | ಇದು ಚಂದವೆ ಬುದ್ಧಿ ನಿಮಗಿನ್ನು | ಇಂಥಾ ಚಾಳಕತನ ಬಿಡಿಸುವೆನು | ಶ್ರೀ ಮಂದರೋದ್ಹರ ಮಹಾಮಹಿಮ ಪ್ರಕಾಶನೆ ನಂದದಿ----------------- 2 ಧರೆಯೊಳ್ಹೆನ್ನೆಯ ಪುರವಾಸ | ಧೊರಿ ಹೆನ್ನೆ ವಿಠಲನ ಈಶ | ಭಕ್ತರನ್ನ ಪೊರೆವ ಜಗದೀಶ | ತಾರಕನಾದ ಸರ್ವೇಶ | ಇನ್ನು ಪರಿಯಾದದಲ್ಲಿ ಮೊರೆಯದ ಕಾರಣ ನೀನಗೀಗ ಚನ್ನಾಗಿ ಬುದ್ಧಿಯಪೇಳ್ವೆನು3
--------------
ಹೆನ್ನೆರಂಗದಾಸರು
ರಾಮಚಂದ್ರನೇ ಪರದೈವನೋ ನಮ್ಮ | ಶಾಮ ಸುಂದರ ಕೃಷ್ಣ ಪರದೈವನಯ್ಯ ಪ ರಾಮಭಕ್ತ ನಿದ್ದೆಡೆಗಾಗಿ ಯದುಕುಲ | ಸ್ವಾಮಿಯ ಶರಣನು ಬಂದ ಕೀರ್ತಿಸುತ | ಪ್ರೇಮದಲೀರ್ವರ ಭಕ್ತಿಯವಾದವು | ನೇಮದಿ ಬೆಳೆಯಿತು ಕೇಳಿ ಸಜ್ಜನರು1 ಚಿಕ್ಕ ತನದಿ ತಾಟಿಕೆಯನು ಕೊಂದು ಮುನಿಮುಖ | ಅಖರದಲಿ ಕಾಯದನಾರು ಹೇಳಯ್ಯ | ಠಕ್ಕಿಸಿ ಬಂದ ಪೂತನಿಅಸುಹೀರಿಜ | ನಕ್ಕಭಯ ನಿತ್ತ ಕೃಷ್ಣ ನೋಡಯ್ಯ2 ಚರಣ ಸೋಕಿಸಿ ಶಿಲೆ ಹೆಣ್ಣವ ಮಾಡುತ | ಹರಧನು ಮುರಿದವ ನಾರು ಹೇಳಯ್ಯಾ | ಮರಗಳಾದವರ ನುದ್ಧರಿಸುತ ಕಂಸಾ | ಸುರಧನು ಹಬ್ಬವ ಗೆದ್ದ ರಂಗೈಯ್ಯಾ3 ನೆರದಿಹ ದೇವ ದಾನವರೋಳುದ್ದಂಡದಿ | ಧರಣಿ ಜೆಯ ತಂದನಾರು ಹೇಳೈಯ್ಯಾ | ವರಚೈದೈ ಘೋಷರ ಭಂಗಿಸಿ ರುಕ್ಮಿಣಿ | ಕರವಿಡಿದೊಯ್ದಿದ ಕೃಷ್ಣ ನೋಡಯ್ಯಾ 4 ವನದೊಳು ಹಣ್ಣವ ನಿತ್ತಂ ಶಬರಿಗೆ | ಚಿನುಮಯ ಪದವಿತ್ತ ನಾರು ಹೇಳಯ್ಯಾ | ಅನುವರದಲಿ ದ್ರೌಪದಿಯ ಶಾಕದಳ | ವನೆ ಕೊಂಡು ಸುಖವಿತ್ತ ಕೃಷ್ಣ ನೋಡಯ್ಯಾ5 ಜಲ ನಿಧಿಯೊಳಗ ಸೇತುಗಟ್ಟಿಸಿ ವಾನರ | ದಳನಡಿಸಿದ ವೀರನಾರು ಹೇಳಯ್ಯಾ | ಗಳಿಗಿಯೊಳರಿಯದಂದದಿ ಮಧುರ ಜನ | ನೆಲೆಮಾಡಿ ನೀರೋಳಗಿಟ್ಟ ರಂಗೈಯ್ಯಾ6 - ಅಪೂರ್ಣ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರುದ್ರದೇವರು ದೇವತೆಗಳ ದೇವ ಮಹದೇವ ದೇವ ಆವ ನಿಮಗೆ ಸರಿಯು ಕಾವುದೆಮ್ಮನು ಸರ್ವ ಪ ಮೂರನೆ ತತ್ವದ ಒಡೆಯನು ನೀನಯ್ಯ ಕಾರುಣಿಕ ಜನರಿಗಾರ್ಹ ಭಾವಕೆ ಮಾರಮಣನಾ ನೆನೆದು ಮೈಮರೆದು ನೀ ತಾರಕಾ ಉಪದೇಶಿ ಕಾಸಿ ವಾಸಿ 1 ಗಂಗೆಯ ಧರಿಸಿ ನೀ ಭಂಗಬಡುವ ಜನರ ಪೂತನ ಮಾಡಿದ್ಯೊ ಅಂಗಜನಯ್ಯನ ಭಕುತ ಶಿಖಾಮಣಿಯೆ ನಿ ಸ್ಸಂಗ ಜನರ ಪ್ರಿಯ ಸನಕಾÀದಿ ವಂದ್ಯ 2 ಮೋಸಗೊಳಿಸುವಿಯೊ ದುರ್ಜನರ ನಾನೀಶನೆಂದು ವಾಸುದೇವವಿಠಲಗಲ್ಲದವರ ಲೇಸು ಬೋಧಿಸುವಿಯೊ ಯೋಗ್ಯರನು ನೋಡಿ ಎನ್ನಲಿ ವಾಸ ಮಾಡೊ ಎನ್ನ ಮನದೊಡೆಯ 3
--------------
ವ್ಯಾಸತತ್ವಜ್ಞದಾಸರು
ವಾರಿಧಿನಿಲಯನೆಂಥಾತ ತೀರದ ಮಹಿಮಗಾರನೀತ ಪ ಸಾರಿ ನಂಬಿ ಭಜಿಸಿ ಸತತ ಘೋರ ದುರ್ಭವಳಿರೋ ನಿರುತಅ.ಪ ದೇವದೇವ ದಿವ್ಯಚರಿತ ದೇವಿದೇವಕಿ ಗರ್ಭಸಂಜಾತ ಗೋವುಗಳನು ಕಾಯಿದಾತ ಗೋವಳರೊಡನೆ ಆಡಿದಾತ ಮಾವನಮರ್ದಿಸಿ ಭುವಿಗೀತ ಕೇವಲಸೌಖ್ಯ ನೀಡಿದಾತ 1 ಗೋವರ್ಧನಗಿರಿ ಎತ್ತಿದಾತ ಗೋವಳರನ್ನು ಸಲಹಿದಾತ ಮಾಯಾಪೂತನಿಯಸುವನೀತ ಮಾಯದಿಂದ ಹೀರಿದಾತ ತಾಯಿ ಯಶೋದಾದೇವಿಗೀತ ವಿಶ್ವ ತೋರಿದಾತ 2 ಅಸಮಾಯದಾಟವಾಡುತ ಶಿಶುವಾಗಿ ತೋರಿದಾತ ಕುಶಲಗೋಪಿಕಾಸ್ತ್ರೀಯರನೀತ ವಸನ ಕಳೆದು ನಿಲಿಸಿದಾತ ವಸುಧೆ ಭಾರವನಿಳುಹಿದಾತ ನೊಸಲಗಣ್ಣನ ಸಲಹಿದಾತ 3 ಬಾಲೆಗೋಪಿಯರಿಗೊಲಿದಾತ ಪಾಲಮೊಸರು ಬೆಣ್ಣೆ ಮೆಲಿದಾತ ಕೊಳಲನೂದುತ ನಲಿದಾಡಿದಾತ ಬಾಲನಾಗಿ ಲೀಲೆ ತೋರಿದಾತ ಕಾಳರಕ್ಕಸರ ಕುಲಭೀತ ಕಾಳಿಯನ್ನು ಮೆಟ್ಟಿ ಸೀಳಿದಾತ 4 ಹಿಡಿ ಅವಲಕ್ಕಿಗೆ ಒಲಿದಾತ ಮಾನವ ಕಾಯ್ದಾತ ದೃಢ ಭಕ್ತರೋಳ್ವಾಸವಾದಾತ ಇಡೀ ಭುವನಗಳ್ಹೊತ್ತಾಳುವಾತ ಅಜ ಸುರಾದಿವಂದಿತ ಒಡೆಯ ಶ್ರೀ ರಾಮಯ್ಯ ಮಮದಾತ 5
--------------
ರಾಮದಾಸರು
ಶರಣು ದೇವರ ದೇವ ಶರಣು ಸುರವರ ಮಾನ್ಯ ಶರಣು ಶತಕೋಟಿ ಲಾವಣ್ಯ | ಲಾವಣ್ಯ ಮೂರುತಿಯೆ ಶರಣೆಂಬೆ ಸ್ವಾಮಿ ಕರುಣೀಸೊ 1 ಆದಿನಾರಾಯಣನು ಭೂದೇವಿ ಮೊರೆ ಕೇಳಿ ಯಾದವರ ಕುಲದಲ್ಲಿ ಜನಿಸೀದ | ಜನಿಸೀದ ಕೃಷ್ಣ ಪಾದಕ್ಕೆ ಶರಣೆಂಬೆ ದಯವಾಗೊ 2 ನಿನ್ನ ವಿಸ್ಮøತಿ ದೋಷ ಜನ್ಮ ಜನ್ಮಕ್ಕೆ ಕೊಡದಿರು ಎನ್ನ ಕುಲ ಬಂಧು ಎಂದೆಂದು |ಎಂದೆಂದು ನಿನಗಾನು ಬಿನ್ನೈಪೆ ಬಿಡದೆ ಸಲಹಯ್ಯ 3 ವಸುದೇವನಂದನನ ಹಸುಗೂಸು ಎನಬೇಡಿ ಶಿಶುವಾಗಿ ಕೊಂದ ಶಕಟನ್ನ | ಶಕಟನ್ನ ವತ್ಸಾಸುರನ ಅಸುವಳಿದು ಪೊರೆದ ಜಗವನ್ನ 4 ವಾತರೂಪಿಲಿ ಬಂದ ಆ ತೃಣಾವರ್ತನ್ನ ಮಡುಹಿ ಮೊಲೆಯುಣಿಸಿದಾ ಪೂತನಿಯ ಕೊಂದ ಪುರುಷೇಶ 5 ನಿನ್ನ ಸ್ಮøತಿಗಿಂತಧಿಕ ಪುಣ್ಯ ಕರ್ಮಗಳಿಲ್ಲ ನಿನ್ನ ವಿಸ್ಮøತಿಗಿಂತ | ಅಧಿಕವಾದ ಮಹಪಾಪಗಳು ಇನ್ನಿಲ್ಲ ಲೋಕತ್ರಯದೊಳು 6 ಅಂಬುಜಾಂಬಕಿಗೊಲಿದ ಜಂಭಾರಿಪುರದಿಂದ ಕೆಂಬಣ್ಣದ ಮರ ತೆಗೆದಂಥ | ತೆಗೆದಂಥ ಕೃಷ್ಣನ ಕ ರಾಂಬುಜವೆ ನಮ್ಮ ಸಲಹಲಿ 7 ದೇವಕೀಸುತನಾಗಿ ಗೋವುಗಳ ಕಾದದೆ ನಲಿವೋನೆ ಮೂರ್ಲೋಕ ಓವ ದೇವೇಂದ್ರ ತುತಿಪೋನೆ 8 ಜಗದುದರ ನೀನಾಗಿ ಜಗದೊಳಗೆ ನೀನಿಪ್ಪೆ ಜಗದಿ ಜೀವರನ ಸೃಜಿಸುವಿ | ಸೃಜಿಸಿ ಜೀವರೊಳಿದ್ದು ಜಗದನ್ಯನೆಂದು ಕರೆಸುವಿ 9 ಕರಣನೀಯಾಮಕನೆ ಕರುಣಾಳು ನೀನೆಂದು ಮೊರೆಹೊಕ್ಕೆ ನಾನಾ ಪರಿಯಲ್ಲಿ | ಪರಿಯಲ್ಲಿ ಮಧ್ವೇಶ ಮರುಳು ಮಾಡುವರೆ ನೀಯೆನ್ನ 10 ಕುವಲಯಾಪೀಡನನು ಲವಮಾತ್ರದಿ ಕೊಂದು ಶಿವನ ಚಾಪವನು ಮುರಿದಿಟ್ಟಿ | ಮುರಿದಿಟ್ಟಿ ಮುಷ್ಟಿಕನ ಬವರದಲಿ ಕೆಡಹಿ ಬಲಿಗೈದೆ 11 ಗಂಧವಿತ್ತಬಲೆಯೊಳ ಕುಂದನೆಣಿಸದೆ ಪರಮ ಸುಂದರಿಯ ಮಾಡಿ ವಶವಾದಿ | ವಶವಾದಿ ನಮ್ಮ ಗೋ ವಿಂದ ನೀನೆಂಥ ಕರುಣಾಳು 12 ವಂಚಿಸಿದ ಹರಿಯೆಂದು ಪರಚಿಂತೆಯಲಿ ಕಂಸ ಮಂಚದ ಮ್ಯಾಲೆ ಕುಳಿತಿದ್ದ | ಕುಳಿತಿದ್ದ ಮದಕರಿಗೆ ಪಂಚಾಸ್ಯನಂತೆ ಎರಗೀದೆ 13 ದುರ್ಧರ್ಷ ಕಂಸನ್ನ ಮಧ್ಯರಂಗದಿ ಕೆಡಹಿ ಜನನೋಡೆ ದುರ್ಮತಿಯ ಮರ್ದಿಸಿದ ಕೃಷ್ಣ ಸಲಹೆಮ್ಮ 14
--------------
ಜಗನ್ನಾಥದಾಸರು