ಒಟ್ಟು 90 ಕಡೆಗಳಲ್ಲಿ , 34 ದಾಸರು , 82 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬರತಾರಂತ್ಹೇಳೆ ಬಾಲೆಕರೆಯಲು ಬಾಯಿಮಾತಿನಲೆಬರತಾರಂತ್ಹೇಳೆ ಪ. ರಂಗನ ಪಾದಕಮಲ ಭೃಂಗಳೆ ದ್ರೌಪದಿಮಂಗಳಾದೇವಿ ರುಕ್ಮಿಣಿ ಸಖಿಯೆಮಂಗಳಾದೇವಿ ರುಕ್ಮಿಣಿ ಕರೆಯಲು ಅಂಗಳದೊಳಗೆ ಬರುತಾಳೆ ಸಖಿಯೆ 1 ಇಂದಿರೇಶನೆಂಬೊ ಚಂದ್ರಗೆಚಕೋರ ಕುಂದದಂಥವಳ ಸುಭದ್ರಾ ಸಖಿಯೆಕುಂದದಂಥವಳೆ ಸುಭದ್ರೆ ಕರೆಯಲೆ ಬಂದಳು ಭಾಮೆ ಎದುರಲಿ ಸಖಿಯೆ 2 ನಗ ಧರನ ಮುಖವೆಂಬೊ ಮುಗಿಲಿಗೆನವಿಲಸುಗಣಿರೈವರ ಮಡದಿಯರುಸುಗುಣರೈವರ ಮಡದಿಯರು ಕರೆಯಲುಮೂರ್ಜಗದ ಮೋಹನೆಯರು ಬರ್ತಾರೆ ಸಖಿಯೆ3 ಹರಿಯಾಗ್ರಜ ತನ್ನ ಹಿರಿಯರ ಕೂಡಿಕೊಂಡುಬರುವನು ಪರಮ ಹರುಷದಿ ಸಖಿಯೆಬರುವನು ಪರಮ ಹರುಷದಿ ಈ ಮಾತುದೊರೆಗಳಿಗೆ ಹೇಳೆ ವಿನಯದಿ ಸಖಿಯೆ4 ಎಲ್ಲರೂ ಮುತ್ತುರತ್ನ ಝಲ್ಲಿ ವಸ್ತ್ರಗಳಿಟ್ಟುಚಲುವ ಪ್ರದ್ಯುಮ್ನನ ಒಡಗೂಡಿ ಸಖಿಯೆಚಲುವ ಪ್ರದ್ಯುಮ್ನನ ಒಡಗೂಡಿ ಐವರಿಗೆ ಮಲ್ಲಿಗೆ ತೂರಾಡಿ ಕರೆಯಲಿ ಸಖಿಯೆ5 ಅಷ್ಟೂರು ಬಗೆಬಗೆ ಪಟ್ಟಾವಳಿಯನುಟ್ಟುಧಿಟ್ಟ ಸಾಂಬನ ಒಡಗೂಡಿಧಿಟ್ಟ ಸಾಂಬನ ಒಡಗೂಡಿ ಐವರಿಗೆ ಬುಕ್ಕಿಟ್ಟು ತೊರ್ಯಾಡಿ ಕರೆಯಲಿ ಸಖಿಯೆ6 ಮಾನಿನಿ ಮಾನಿನಿ ಸಹಿತಾಗಿ ರಮಿಅರಸುಮಾನದಲಿ ಐವರನ ಕರೆಸುವ ಸಖಿಯೆ7
--------------
ಗಲಗಲಿಅವ್ವನವರು
ಬಾಗಿಲಲಿ ಬಿದ್ದಿಹÀ ಭಜಕನು ನಾನುಶ್ರೀ ಗೋಪಾಲ ಭೂಪಾಲ ಕಾಯಯ್ಯ ನೀನು ಪ . ಯೋಗದ ಪಥಗಳನ್ನು ಏನೊಂದು ಅರಿಯೆನುನೀ ಗತಿಯೆಂದು ಬಂದು ಕೂಗುವೆನು ಹರಿಯೆ 1 ಭೋಗವ ಬಯಸುವೆ ಬಗೆಬಗೆಯಲಿ ರತಿಯರೋಗ ಬಲವಾಯಿತು ತಿದ್ದೆನ್ನ ಮತಿಯ 2 ಆಗÀಮಸಿದ್ಧ ಸುಗುಣಪೂರ್ಣ ಶ್ರೀಲೋಲಬೇಗ ಸಲಹೋ ಮಮಸ್ವಾಮಿ ಹಯವದನ3
--------------
ವಾದಿರಾಜ
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬೊಮ್ಮ ಕೃಷ್ಣನ ಹಾಡುತ ಪಾಡುತಜನರೆಲ್ಲ ಉತ್ಕøಷ್ಟರಾಗಿಹರಮ್ಮ ಪ. ಪ್ಯಾಟಿಯ ಎದುರಾಗಿ ಕೋಟೆಬಾಗಿಲ ಕೋಟ ಸೂರ್ಯರ ಬೆಳಕಿಲೆ ಕೋಟ ಸೂರ್ಯನ ಬೆಳಕಿಲೆ ಹೊಳೆವಂಥಹಾಟಕಾಂಬರÀನ ಅರಮನೆ 1 ಪನ್ನಗ ಶಯನನ ಅರಮನೆ2 ಭಾಗವತ ಪ್ರಿಯಸಾಗರ ಶಯನನ ಅರಮನೆ ಸಾಗರ ಶಯನನ ಅರಮನೆಯ ಬಾಗಿಲೊಳು ಹೋಗಿ ಬರುವವರು ಕಡೆಯಿಲ್ಲ3 ನಾಗಶಯನನ ಮನೆ ಬಾಗಿಲು ಮುಂದೆಸೋಂಗ್ಹಾಕಿ ನಿಂತ ಕೆಲವರುಸೋಂಗ್ಹಾಕಿ ನಿಂತ ಕೆಲವರು ಸಭೆಯೊಳು ಹೋಗಬೇಕೆಂಬೊ ಭರದಿಂದ 4 ದಾಸರು ಬಗೆಬಗೆ ಸೋಸಿಲೆ ತಳವೂರಿಶ್ರೀಶ ರಾಮೇಶನ ಅರಮನೆ ಮುಂದೆಶ್ರೀಶ ರಾಮೇಶನ ಅರಮನೆ ಮುಂದಿನ್ನು ಕೂಸೆತ್ತಿಕೊಂಡು ನಿಂತ ಕೆಲವರು5
--------------
ಗಲಗಲಿಅವ್ವನವರು
ಭೀಮಾ ಹೋ ಭಲಾರೆ ನಿಸ್ಸೀಮ ಹೋ ಭಾಪುರೆ ಹನುಮ ಹೋ ಪ. ನಿಜಜಿತಕಾಮ ಹೋ ಕಾರುಣ್ಯಧಾಮ ಹೋ ರಾಮಚಂದ್ರನ ಚರಣಕಮಲಸರಾಮ ಕಾರ್ಯಧುರಂಧರನೆ ಅ.ಪ. ಆಂಜನೇಯ ಸುಕುಮಾರ ಅದ್ಭುತಮಹಿಮ ರಾಮ[ನ] ದೂತನೆ ಅಂಜದುದಧಿಯ ದಾಟಿ ಅಸುರನ[ವ] ನವ ಕಿತ್ತನೆ ಕಂಜಮುಖಿ ಜಾನಕಿಗೆ ಮುದ್ರೆಯನಿತ್ತ ಬಲುಪ್ರಖ್ಯಾತನೆ ಮಾಡಿಸಿದೆ ಕಲಿ 1 ಅವನಿತನುಜೆಯ ಚೂಡಾರತ್ನವ ಅಂಬುಜಾಕ್ಷನಿಗಿತ್ತನೆ ಸಮರಕನುಕೂಲವೆಂದು ರಾಮಗೆ ಸುಗ್ರೀವನ ಕಾಣಿಸಿದನೆ ಕಮಲನಾಭನ ಆಜ್ಞೆಯಿಂದಲಿ ಕಪಿಬಲವ ಕೂಡಿಸಿದನೆ ಬಹುಪರಾಕ್ರಮಿಯಹುದಹುದೊ ಕಲಿ 2 ಅಗಳುಸಾಗರ ಮಧ್ಯದಲ್ಲಿಹ ನಗರವನು ಬಂದು ಮುತ್ತಿದೆ ಬಗೆದು ಕಲ್ಮರಗುಂಡಿನಿಂದಲಿ ವಿಗಡದೈತ್ಯರ ಮಡುಹಿದೆ ಬಗೆಬಗೆ ಮಯಾಜಾಲವನು ಗೆದ್ದು ಭರದೊಳದ್ರಿಯ ತುಡುಕಿದೆ ಜಗತ್ಪತಿಯ ಮೂರ್ಬಲವನೆಲ್ಲವ ಸಂಜೀವನವ ತಂದುಳುಹಿದೆ 3 ಪೃಥ್ವಿಯೊಳಗುದ್ದಂಡ ದೈತ್ಯರ ಸುತ ಸಹೋದರರ ಮಡುಹಿದೆ ಹತವ ಮಾಡಿ ಶ್ರೀರಾಮ ಬಾಣದಿ ಹತ್ತು ತಲೆಗಳ ಕೆಡಹಿದೆ ಪ್ರತಿಶತೇಶ್ವರ ಶ್ರೀರಮಣಿಯನ್ನು ತಂದು ರಾಘವಗೆ ಒಡಗೂಡಿಸಿದೆ ಮಾಡಿಸಿದೆ ಕಲಿ 4 ಕುಂಡಲ ಚಾರು ಯಜÉ್ಞೂೀಪವೀತನೆ ಸೂರ್ಯಚಂದ್ರಮರುಳ್ಳನಖ ವಜ್ರಕಾಯದಲಿ ನಿರ್ಭೀತನೆ ವೀರಕದನಕಠೋರ ರಾಣಿಬೆನ್ನೂರ ಬಯಲಾಂಜನೇಯನೆನೀರಜಾಕ್ಷನ ಹೆಳವನಕಟ್ಟೆರಂಗನ ಪ್ರಿಯದಾಸನೆ ಕಲಿ 5
--------------
ಹೆಳವನಕಟ್ಟೆ ಗಿರಿಯಮ್ಮ
ಮರೆತಿರಲಾರೆ ಮನಸಾರೇ ಹರೇ ಪ ಮರೆತಿರಲಾರೆ ನಾ ಮಹಿತಚಾರಿತ್ರನ ಸರಸಿಜಪತ್ರ ನೇತ್ರನ ಅ.ಪ ಬಗೆಬಗೆ ರತಿಯಲಿ ಜಗವನು ಮೋಹಿಪ ಸುಗುಣನ ಜಗತ್ಪ್ರಾಣನ 1 ಚೇತನರಿಗೆ ಸುಖದಾತನ ದುಃಖ ವಿ ಘಾತನ ಲಕ್ಷ್ಮೀನಾರಾಯಣನ 2 ದಾಸರ ಹೃದಯನಿವಾಸನ ದೋಷನಿರಾಸನ ಶ್ರೀನಿವಾಸನ 3 ವೆಂಕಟರಮಣನ ಕಿಂಕರಶರಣನ ಸಂಕಟಹರ ನಿಷ್ಕಳಂಕನ 4 ಮಾನಿನಿಯ ಅಭಿಮಾನವ ಕಾಯ್ದನ ದೀನರ ಹರ್ಷನಿಧಾನನ 5 ರಾಮನ ದೈತ್ಯವಿರಾಮನ ಪಾವನ ನಾಮನ ಹೃದಯಾರಾಮನ 6 ಧರೆಯೊಳುತ್ತಮಪುಲಿಗಿರಿಯೊಳು ನೆಲಸಿಹ ವರದ ವಿಠಲವರದನ ದೇವನ 7
--------------
ವೆಂಕಟವರದಾರ್ಯರು
ರಾಮನಾಮವ ನೆನೆ ಮನವೆಪ ರಾಮ ಎಂದವನೆ ಧನ್ಯನೆಂದು ಶ್ರುತಿತತಿಗಳು ಪೊಗಳುತಿರೆ ಅ ತರುಣತನದಿ ದಿನ ದಾಟಿತು ಸುಮ್ಮನೆಶರೀರದೊಳು ಸ್ವರವಾಡುತಲೆತರುಣಿ ಸುತರು ಸಂಸಾರವೆಂಬಶರಧಿಯೊಳಗೆ ಮುಳುಗಿರದೆ ಮನವೆ 1 ಬಗೆಬಗೆ ಜನ್ಮದಿ ಜನಿಸಿದೆ ನಾಳೆಗೆಸಿಗುವುದೆ ನಿಜದಿಂ ಈ ಸಮಯಮುಗುಧನಾಗಿ ಮತ್ತೆ ಜನಿಸಿ ಬರುವುದುಸೊಗಸು ಕಾಣುವುದೆ ಛಿ ಮನವೆ 2 ಚಿಂತೆಯನೆಲ್ಲ ಒತ್ತಟ್ಟಿಗಿಟ್ಟುಅಂತರಂಗದಲಿ ಧ್ಯಾನಿಸುತಕಂತುಪಿತ ಕನಕಾದಿಕೇಶವನಎಂತಾದರೂ ನೀ ಬಿಡಬೇಡ ಮನವೆ3
--------------
ಕನಕದಾಸ
ಲೋಕನೀತಿ 1 ಕಾಮಧೇನು ಕಲ್ಪತರು ಕಾಮಿತಾರ್ಥವನೀವ ಹರಿಯೇ ಎನಗಿರೆ ಎನಗ್ಯಾತಕೆ ಚಿಂತೆ ಕಾಮಿತಾರ್ಥವನೀವ ದೊರೆಯಿರಲು ಯನಗ್ಯಾತರ ಕೊರೆತೆ ಹರಿಕಾವದೇವ ನೀನಿರಲು ಕೋಳಿ ತನ್ನ ಮರಿಗೆ ಹಾಲುಕೊಟ್ಟು ಸಾಕುವದೆ ಕಾಳ ರಾತ್ರಿಯು ಕಳೆದು ಹರಿ ಉದಿಸುವನೆಂದು ಕೋಳಿಕೂಗಿದರೂ ಏಳದೆ ಮಲಗಿ ಕಾಲಕಳೆವರು ಮನುಜರುಹರಿಯೆ ಕಾಲಕೂಟ ಸಮ ಕಾಮಿತಾರ್ಥವ ಬೇಡುವರು ಕಾಲದೂತರು ಬರುವ ವ್ಯಾಳೆತನಕ ನಿನಧ್ಯಾನಿಸದೆ ಕಾಲಕಳೆವರು ಮನುಜರು ಕಾಲಮೂರುತಿ ನೀನೆ ಎಂದರಿಯರು ಹರಿ ಕಾಲ ಅಕಾಲ ನಿನಗುಂಟೆ ಎನಗುಂಟೆ ದೇವ ನೀ ಎನಗೆ ಇಂಥಾ ಕೀಳು ಬುದ್ಧಿಯ ಕೊಡದಿರೊ, ಏಳು ಬೆಟ್ಟದ ಒಡೆಯ ಶ್ರೀ ಶ್ರೀನಿವಾಸ 2 ಬೆಳಗೆದ್ದು ಹರಿ ನಿನ್ನ ಧ್ಯಾನಿಸದೆ ಪರಧ್ಯಾನ ಪರನಿಂದೆಯಲ್ಲಿಹರು ನಿತ್ಯ ನಿನ್ನ ಧ್ಯಾನ ಬಿಟ್ಟು ಬೆಳಗಾಗೆ ನಿನ್ನ ಸೂರ್ಯರಶ್ಮಿ ಬಿದ್ದರೂ ಏಳರು ಶಯನ ಬಿಟ್ಟು ಈ ಜಗದಿ ದೇವ ಈ ಕಲಿ ಜನರು ಇಂಥಾ ಬೆಳಗ ಎನಗೀಯದೆ ನೀ ಎನ್ನೊಳಗಿದ್ದು ಬೆಳಗಿನ ಜಾವದಿ ನಿನ್ನ ಕಳೆಕಳೆರೂಪ ಎನಗೆ ತೋರೋ ಘಳಿರನೆ ಶ್ರೀ ಶ್ರೀನಿವಾಸ 3 ಎರಡನೆ ಜಾವದಲಿ ಹುಂಜ ಹರಿಪೂರ್ವದಲಿ ಬರುವ ಏಳಿರೆಂದು ಕೂಗಲು ಸತಿ ಸಹಿತ ಕಾಮಕೇಳಿಯಲಿಹರು ಮೂರನೆ ಝಾವದಲಿ ಹರಿ ಉದಿಸಿ ಬ್ರಾಹ್ಮೀಮುಹೂರ್ತದೊಳು ಹರಿ ಬೆಳಕೀವ ಲೋಕಕೆ ಎಂದು ಕೂಗುವುದು ಕೋಳಿ ಕೇಳಿ ಕರ್ಣದಲಿ ಶಯನ ಬಿಟ್ಟೇಳರೊ ಈ ಜಗದಿ ಮೂರೆರಡು ಶತಶ್ವಾಸ ಜಪ ಮಾಡಿಸುವ ಹರಿಭಕ್ತ ಹನುಮನೆಂದರಿಯದೆ ಮಲಗಿ ಕಾಲ ಎರಗಿ ಬರುವುದು ಆಯುಷ್ಯವೆಂದರಿಯದೆ ಭಾರತೀಪತಿ ಅಂತರ್ಯಾಮಿ ನಿನ್ನಧ್ಯಾನಿಸದೆ ಇಹರಲ್ಲೋ ಈ ಜಗದಿ ಶ್ರೀ ಶ್ರೀನಿವಾಸ ಎನ್ನ ನೀನವರ ಸಂಗ ಸೇರಿಸದೆ ಕಾಯೊ ಹರಿಯೆ ಎನ್ನ ದೊರೆಯೆ 4 ಸೂರ್ಯನಂತರ್ಯಾಮಿ ನೀನಲದೆ ಮತ್ಯಾರಿಹರು ಹರಿ ಸೂರ್ಯಾಂತರ್ಗತ ಸೂರ್ಯನಾರಾಯಣ ಸೂರ್ಯಕೋಟಿ ತೇಜದಿ ಮೆರೆವೆ ಸೂರ್ಯ ಸಹಸ್ರ ಉದಿಸಿದಂತೆ ಬರುವೆ ಕರ್ಮ ನೀ ಮಾಡಿಸಿ ಪೆರ್ಮೆಯಿಂದವರ ಕಾಯ್ವ ಶರ್ವಾದಿವಂದಿತ ಗರ್ವರಹಿತ ವೈಕುಂಠಪತಿ ನೀ ನಿನ್ನವರ ಕಾಯಲು ಸರ್ವದಾ ಅವರಿಗೆ ವಲಿದು ಕಾವೆ ಆದಿನಾರಾಯಣ ಶ್ರೀ ಶ್ರೀನಿವಾಸ ಕಾಯೆನ್ನ ಸೂರ್ಯಾಂತರ್ಗತ ವೆಂಕಟೇಶಾ 5 ಹಗಲಿರುಳು ಎನ್ನದೆ ನಿನ್ನ ಸ್ತುತಿಪರು ಭಕ್ತರು ಅಘಹರನೆ ನಿನ್ನ ಪ್ರೇರಣೆಯಿಂದಲವರಿರಲು ಬಗೆಬಗೆಯ ರೂಪದಿ ಬಂದವರ ಸಲಹುವೆ ನಗೆ ಮೊಗದ ಶ್ರೀ ರಮೆಯರಸ ಲಕ್ಷ್ಮೀಶ ನಿನ್ನ ಬಗೆ ಅರಿತಿಹರಾರಿರೀಜಗದಿ ಪಗಲಿರುಳೆನ್ನದೆ ನೀನವರಲ್ಲಿದ್ದು ಸಲಹಲು ಬಗೆವರೆ ಅನ್ಯರಿಗೆ ಅಲ್ಪರಿವರೆ ನಿನ್ನವರು ಜಗದಾಖ್ಯ ವೃಕ್ಷನೀನಿರಲು ನಿನ್ನ ಭಕ್ತರು ನಿನಗಲ್ಲದೆ ಜಗದೊಡೆಯ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ವಸುಮತೀಶ ವಿಠ್ಠಲನೇ ನೀನಿವಗೆ | ಎಸೆವ ಜ್ಞಾನವನಿತ್ತುಹಸನಾಗಿ ಕಾಪಾಡಬೇಕೊ ಹರಿಯೆ ಪ ಕುಸುಮ ಸಂಭವ ಪಿತನೆ | ವಾಸುದೇವನೆ ಕೃಷ್ಣನಸು ನಗೆಯಲೀ ನಿನ್ನ ಉಪಾಸನವ ಕೊಡೊ ಹರಿಯೆ ಅ.ಪ. ತರತಮವು ಪಂಚಭೇದದ ಜ್ಞಾನ | ನಿರತಿಶಯ ಹರಿಭಕ್ತಿಗುರುಭಕ್ತಿಗಳ ಕರುಣಿಸೀ ಕಾಪಾಡಬೇಕೊ ಹರಿಯೇ |ವರ ಪ್ರದಾಯಕ ಸ್ವಾಮಿ ವೈರಾಗ್ಯ ಭಾಗ್ಯಗಳ ನೀನಿವರಿಗಿತ್ತುಕರುಣದಿಂ ಕಾಪಾಡಬೇಕೊ ಹರಿಯೇ 1 ನಿನ್ನ ಮೊರೆ ಹೊಕ್ಕವನ | ಇನ್ನು ಕೈ ಪಿಡಿಯುವುದುನಿನ್ನ ಧರ್ಮವಲ್ಲವೆ ಸ್ವಾಮಿ ರಾಮಚಂದ್ರ |ನನ್ನೆಯಿಂದಲಿ ಇವನ ಪಾಪಗಳ ಪರಿಹರಿಸಿನಿನ್ನ ಪದ ಸೇವಕನ ಮಾಡೊ ವೈಕುಂಠ ಪತಿಯೇ 2 ಖಗವರಧ್ವಜ ದೇವ ಜಗಜ್ಜನ್ಮಾದಿ ಕಾರಣನೆಬಗೆಬಗೆಯ ಮಹಿಮೆಗಳ ತೋರಿ ಕಾಪಾಡೊ ಹರಿಯೇ |ಸುಗುಣ ಮೂರುತಿ ದೇವ ತ್ರಿಗುಣ ವರ್ಜಿತ ಸ್ವಾಮಿಹಗರಣಗಳೀಯದಲೆ ಕಾಪಾಡೊ ಹರಿಯೇ 3 ಇಷ್ಟಮೂರುತಿ ದೇವ ಸೃಷ್ಟ್ಯಾದಿ ಕಾರ್ಯಗಳದೃಷ್ಟಿಯಿಂದಲಿ ಮಾಳ್ಪ ಮಹಮಹಿಮ ಹರಿಯೇ |ಕೃಷ್ಣಮೂರುತಿ ಹೃದಯ ಅಷ್ಟದಳ ಮಧ್ಯದಲಿದೃಷ್ಟಿಗೋಚರನಾಗಿ ಕಾಪಾಡೊ ಹರಿಯೇ 4 ಮೂರ್ತಿ ಹಯ ಮೊಗಾತ್ಮಕನೇ |ವೇದಾಣಿ ವಂದ್ಯ ಗುರುಗೋವಿಂದ ವಿಠ್ಠಲನೇನೀ ದಯದಿ ಕೈ ಪಿಡಿದು ಕಾಪಾಡೊ ಹರಿಯೇ 5
--------------
ಗುರುಗೋವಿಂದವಿಠಲರು
ವಾಸುಕೀಶಯನ ವಿಠಲ ನೀನಿವಳ ಕಾಪಾಡಬೇಕೋ ಹರಿಯೇ ಪ ಭಾಸುರಾಂಗನೆ ದೇವ ಸರ್ವೇಶ ಸರ್ವವಿಧದಲಿ ಕಾಯೊ ಹರಿಯೇ ಅ.ಪ. ಜಗದೀಶ ಜಗಜನ್ಮಾದಿಕಾರಣನೆ ಶ್ರೀಹರಿಯೆಹಗರಣಗಳಾ ಕಳೆದು ಮಿಗೆ ಭಕುತಿ ಸುಜ್ಞಾನವಿತ್ತು |ಬಗೆಬಗೆಯ ಮಹಿಮೆಗಳ ನೀತೋರಿ ನಿನವ್ಯಾಪ್ತಿಮಿಗಿಲಾಗಿ ತಿಳಿಸುತ್ತ ಸಲಹ ಬೇಕಿವಳಾ 1 ಮಧ್ವಮತ ದೀಕ್ಷೆಯನು ಉದ್ಧರಿಸಿ ಇವಳಲ್ಲಿಸದ್ಧರ್ಮ ಪದ್ಧತಿಯ ಶ್ರದ್ಧೆಗಳ ನಿತ್ತೂ |ಮಧ್ವೇಶ ಶ್ರೀಹರಿಯೆ | ಸರ್ವೋತ್ತುಮನೆಂಬಶುದ್ದ ಬುದ್ಧಿಯನಿತ್ತು ಸಲಹ ಬೇಕಿವಳಾ 2 ಚಾರು ಮೂರುತಿಯ |ಬಾರಿಬಾರಿಗೆ ಹೃದಯ ವಾರಿಜದಿ ಕಾಂಬಂಥಚಾರು ಮಾರ್ಗವ ತೋರಿ ಕಾಪಾಡೊ ಹರಿಯೇ 3 ಲೌಕೀಕ ಮಾರ್ಗಗಳು ವೈದೀಕ ವಾಗ್ವಪರಿನೀ ಕರುಣಿಸಿ ಕಾಯೊ ಕಮಲಾಯ ತಾಕ್ಷ |ನೀ ಕಾಯದಿರಲಿನ್ನು ಕಾಯ್ವರ್ಯಾರಿಹರಯ್ಯಮಾಕಾಂತ ಸಲಹಯ್ಯ ಗೋಕುಲಾನಂದ 4 ಕಂದರ್ಪ ಜನಕ ಮನ ಮಂದಿರದಿ ನೀತೋರಿನಂದವನೇ ನೀನಿತ್ತು ಇಂದಿರೇಶನೆ ಕಾಯೊತಂದೆ ಎನ ಬಿನ್ನಪವ ಛಂದದಲಿ ಮನ್ನೀಪುದುನಂದ ನಂದನ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷಾದ್ರಿಯನು ನೋಡಿರೊ-ಸೇವಕ ಪರಿ- ತೋಷಾದ್ರಿಯಿದು ಕಾಣಿರೋ ಪ ಶೇಷಾದ್ರೀಶನ ಪರಿತೋಷದಿಂ ಪಾಡಿ ಅ.ಪ. ಸಣ್ಣದಾದರು ಗಿರಿ ರನ್ನವ ಪೊಲುವ- ದರ್ಣವಶಯನನ ಕಣ್ಣಿಲಿ ಕಾಣಿಪ 1 ಬಗೆಬಗೆ ವೃಕ್ಷಗಳು-ಬನಂಗಳು-ಬಗೆಬಗೆ ¥ಕ್ಷಿಗಳು ಬಗೆಬಗೆಮೃಗಗಳು ಸೊಗಸಿನೊಳಿರೆಬಹು ಬಗೆಬಗೆ ಧಾತುಗಳಿಗೆ ನೆಲೆಯಾಗಿಹ 2 ಯುಗಗಳ ಸಂಖ್ಯೆಯೊಳು-ನಾಮಂಗಳು- ಯುಗಮೊದಲೊಳಗೆ ಪನ್ನಗಗಿರಿಯೆನೆ ತ್ರೇತಾ ಯುಗದಲ್ಲಿ ಹೇಮದ ನಗವೆಂಬ ಪೆಸರಿನ 3 ದ್ವಾಪರಯುಗದೊಳಗೆ-ವೆಂಕಟನಾಮ- ವೀಪರ್ವತಕ್ಕೊದಗೆ ಶ್ರೀ ಪುಲಿಗಿರಿಯೆಂಬ ರೂಪವೀಯುಗದೊಳು ಶ್ರೀಪತಿಯಿತ್ತನಿರೂಪದೊಳೊಪ್ಪುವ 4 ದೂರದಿ ಶೋಭಿಸುವ ದುರ್ಜನರಿಗೆ-ದೂರನಮಂದಿರವ ವರದ ವಿಠಲ ನಿಹ 5
--------------
ಸರಗೂರು ವೆಂಕಟವರದಾರ್ಯರು
ಶೌರಿ ನಂದನ ಪರಿವಾರಟಂದನ-ಸರಿಯಾರೋ ಹರಿನಿನಗೆ ಪ ನಿನಗೆ ಸರಿಯಾರೋ ಶ್ರೀಧರನೆ ಅ.ಪ. ನೋಟ ಮಾತ್ರದಿ ಜಗತ್ ಕೋಟಿ ನಿರ್ಮಿಸಿ ಪರಿ ಸೂತ್ರ ನಾಟಕಧಾರಿ ||ಸರಿ|| 1 ಬಗೆಬಗೆ ರತಿಯಲಿ ಜವನು ಮೋಹಿಪ ನಿಗಮಾಂತ ಗೋಚರ ನಗಧರ ಹರಿ-ಸರಿ ಯಾರೋ 2 ಸುರವರ ಪೂಜೆಯ-ನರಕೆ ಮಾಡದೆ ಬಂದ ಶಿರಿಯ ಮೋಹಿಸುತಿರ್ಪ ವರದ ವಿಠಲ ||ಸರಿ|| 3
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸ-ಶ್ರೀನಿವಾಸ-ದೀನರಕ್ಷಕ ದಾನಿ ನೀನೆಂದು ನಂಬಿದೆ ಪ ಜ್ಞಾನಗಮ್ಯನೆ ವಾಙ್ಮನೋಮಯ ಮಾನಿ ಮಾನಸರಾಜಹಂಸ ಅ.ಪ ಲೋಕಭರಿತ ಶ್ರೀಕಳತ್ರ-ತ್ರಿಕಕುದ್ಧಾಮದಧಿನಾಥ ಶ್ರೀಕಮಲಭವಾದಿವಂದಿತ ಮುಕುತಾಮುಕುತಜನ ಸಂಸೇವಿತ ಅಖಿಳಾಗಮಕೆ ಅತೀತ-ಶ್ರೀಕರಪಲ್ಲವಪೂಜಿತ ಅಖಿಳಾಜಾಂಡದಿ ವ್ಯಾಪ್ತ-ಭಕುತರಗತಿಯಪ್ರದಾತ1 ನಿಗಮವಿತ್ತೆ ನಗವಪೊತ್ತೆ ಬಗೆದು ಬೇರ ನರ- ಮೃಗಾಂಗನೇ ತ್ಯಾಗಿಯೊಳು ಪೋಗಿ ನೃಪರ ನೀಗಿಸಿ ವನವನವಾ ಚರಿಸಿದೆ ಬಗೆಬಗೆ ಆಟದಿ ಬಾಲ್ಯದಿ ಹಗೆಗಳ ಮಡುಹಿದೆ ಕಾರ್ಯದಿ ಆಗಮಕರ್ಥಮೋಹಿಸಿ-ಜಗದೊಳುತುರಗವನೇರ್ದೆ 2 ಅಂತರಾತ್ಮಪರಮಾತ್ಮ ಅನಂತಾನಂತರೂಪಾತ್ಮ ಪ್ರಾಂತಕಾಣದೇ ನಿರಂತರದಿ ನಿಂತು ಸಿರಿ ನಿತ್ಯಮುಕ್ತಳಾದಳೋ ಕಂತುಪಿತ ಎನ್ನಂತರದಿ ನಿಂತಿಹೆ ನಿರಂತರದಿ ಕಾಂತ ಶ್ರೀ ವೆಂಕಟೇಶನೆ-ಅಂತರ್ಬಹಿರದಿ ನಿಂತಿಹ ಪ್ರಭೊ 3 ಅಪ್ರಮೇಯ ಸ್ವಪ್ರಕಾಶ ಅಪ್ರಾಕೃತಗುಣಗಣಾರ್ಣವ ಸ್ವಪ್ರಯೋಜನರಹಿತ ಸತತ ತ್ವತ್ಪ್ರಸಾದದಿಂದ ಜಗವು ಕ್ಷಿಪ್ರದಿ ನೃಪಸಂಸ್ತುತಿಸೆ ವಿಪ್ರನಮನ ಸಂತೈಸಿದೆ ಅಪ್ರತಿಹತಮಹಿಮನು ಸುಪ್ರೀತನು ಜನರ್ಗೆ 4 ಪರಮ ಪುರುಷ ಪೂರ್ಣಾನಂದ ಪರಮಕರುಣಶರಧಿಯೆ ಉರಗಾದ್ರಿವಾಸ ವಿಠ್ಠಲ ಕರಾವಲಂಬನವಿತ್ತು ಸಲಹೆಲೋ ಪರಿಪರಿ ಎನ್ನಪರಾಧ ನೋಳ್ಪರೆ ಭೋ ಜಗದೊಡೆಯ ಕರುಣವು ತೋರದೆ ನೀನಿರೆ ನರಪಶು ನಾನೆಂತು ಬಾಳ್ವೆನೋ5
--------------
ಉರಗಾದ್ರಿವಾಸವಿಠಲದಾಸರು
ಶ್ರೀನಿವಾಸದೇವರು ಬಾರಯ್ಯ ವೇಂಕಟ ಮನ್ಮನಕೆ ತ್ವರಿತದಿ ನಿಜನಾರೀಸಹಿತದಿ ಈ ಸಮಯಕೆ ಶರಣೆಂಬೆನು ಪದಯುಗಕೆ ಪ ಸಾರಿದ ನಿಜಶÀರಣನ ಈ ಭವಭÀವ ಘೋರಭಯವ ಪರಿಹÀರಿಸುವುದಕ್ಕೆಅ.ಪ ವ್ಯಕ್ತಾವ್ಯಕ್ತ ತ್ರಿಜಗದ್ವ್ಯಾಪ್ತಾ ದೋಷ ನಿರ್ಲಿಪ್ತಾ ಮುಕ್ತಾ ಮುಕ್ತ ಜೀವರ ಗಣದಾಪ್ತಾ ನೀ ಸರ್ವತ್ರದಿ ವ್ಯಾಪ್ತ ಭಕ್ತನ ಹೃದಯದಿ ವ್ಯಕ್ತನಾಗಿ ನಿಜ ಮುಕ್ತಿಪಥವ ತೋರೊ ಭಕ್ತಿಯನಿತ್ತು 1 ಕವಿಜನಗೇಯಾ ಆನಂದದಾಯಕ ನಿರ್ಜಿತಮಾಯಾ ಕಾಯಯ್ಯಾ ಜೀಯಾ ಆನತಜನಸನ್ಮಾನದ ಮನ್ಮನ ವನಜದಿ ನೀ ಸನ್ನಿಹಿತಾಗುವುದಕೆ 2 ಸೋಮಾಸುರನಾಮಕ ದೈತ್ಯನ ಕೊಂದೂ ವೇದವ ತಂದೂ ಕೂರ್ಮ ಕಿಟ ನರಹರಿ ರೂಪದಿ ನಿಂದೂ ವಾಮನನೆಂದೂ ರಾಮ ಭಾರ್ಗವ ಯದುಕುಲಸಾಗರ - ಸೋಮ ಬೌದ್ಧ ಕಲ್ಕಿ ಪ್ರೇಮದಿ ಮನಕೆ 3 ನಿಗಮಗೋಚರ ನಿತ್ಯಾನಂದಾ ಬಗೆಬಗೆ ಜನ್ಮವನೈದಿದೆ ಮುಕುಂದಾ ಮುಗಿವೆನೊ ಕರದಿಂದಾ ಅಗಣಿತ ಗುಣನಿಧಿ ಸುಗಮದಿ ಭವದ ಬಗೆಯನು ತಿಳಿಸೊ ನಗೆ ಮೊಗದಿ ಬಾ 4 ವಿಧಿಶಂಭುವಂದಿತ ಪದಯುಗಕಮಲಾ ನಿತ್ಯ ನಿರ್ಮಲಾ ಆಧಿಭೂತಾಧ್ಯಾತ್ಮಿಕತಾಪದ ಶಮಲಾ ನೀ ಮಾಡೆನ್ನನು ವಿಮಲಾ ಸದಯ ಸುಧಾಕರ ಹೃದಯದಿ ತವಪದ ಪದುಮ ಭಜಿಪೆ ನೀ ಮುದದಲಿ ಮನಕೆ5 ಸಾಸಿರನಾಮ ನತಜನಪ್ರೇಮಾ ಪೊರೆಯೋ ಶ್ರೀ ರಾಮಾ ಆಶೀ ಪೂರ್ತಿಸಿ ಮಾಡೆನ್ನಲಿ ಪ್ರೇಮಾ ಸುರಸಾರ್ವಭೌಮಾ ವಾಸಮಾಡಿ ಅಭಿಲಾಷೆಯ ಪೂರ್ತಿಸೊ ವಾಸುದೇವ ವಾರಾಸಿಜರಮಣಾ 6 ಶರಣಾಗತಜನಪರಿಪಾಲಾ ಕರುಣಾಲವಾಲಾ ಕರುಣಿಸೆನ್ನನು ಹೇ ಶಿರಿಲೋಲಾ ನಮಿತಜನಸುgಸಾಲ ಅಜ ಭವ ಸುರ ನಿಕರಾರ್ಚಿತಪದ ಸರಸಿಜಯುತ ನೀ ಸುರವರದೇವಾ 7 ಪನ್ನಗಗಿರಿ ನಿಜಕೃತವಾಸಾ ಪೊರೆ ಎನ್ನನು ಶ್ರೀಶಾ ಬಿನ್ನಪ ಮಾಳ್ಪೆನು ಹೇ ಶ್ರೀನಿವಾಸಾ ಕೊಡು ಎನಗೆ ಲೇಸಾ ಎನ್ನ ಸಲಹೋದಕೆ ಅನ್ಯರ ಕಾಣೆನೊ ಮನ್ನಿಸು ನೀನಾಪನ್ನಜನಸುಖದಾ 8 ಲಕ್ಷ್ಮೀನಾಯಕ ವರಪಕ್ಷಿಗಮನಾ ಅಕ್ಷಯ ಫಲವನ್ನ ರಕ್ಷಿಸಿ ಕಾಯ್ವದೋ ನೀ ಎನ್ನಾ ಲಕ್ಷ್ಮಣನಣ್ಣಾ ಕ - ಟಾಕ್ಷದಿ ಎನ್ನ ವೀಕ್ಷಿಸು ಕ್ಷಣ ಕ್ಷಣ..... 9 ಧರ್ಮಾರ್ಥಕಾಮಮೋಕ್ಷವ ನಾನೊಲ್ಲೇ ಕರ್ಮದ ಸುಳಿಯಲ್ಲೇ ಮರ್ಮವ ತಿಳಿಯದೆ ಬೀಳುವೆ ನಾನಲ್ಲೇ ನಿರ್ಮಿಸದಿರು ಎನ್ನಲ್ಲೇ ಕರ್ಮಭವದ ಮಹÀ ಮರ್ಮವ ತಿಳಿಸೀ ದುರ್ಮನ ಬಿಡಿಸೆಲೊ ಬೊಮ್ಮನ ತಾತಾ 10 ದಿಟ್ಟ ಗುರು ಜಗನ್ನಾಥವಿಠಲ ನಾನನಾಥಾ ಥಟ್ಟಾನೆ ನೀ ಎನ್ನನು ಕಾಯೋ ಶ್ರೀನಾಥಾ ಇಷ್ಟೇ ಎನಮನದರ್ಥ ಸೃಷ್ಟಿಯೊಳಗೆ ಬಹು ಭ್ರಷ್ಟರಸ್ತುತಿಸಿ ನಿ - ಕೃಷ್ಟನಾದೇನೋ ಶ್ರೇಷ್ಠ ಮೂರುತೀ 11
--------------
ಗುರುಜಗನ್ನಾಥದಾಸರು