ಒಟ್ಟು 1685 ಕಡೆಗಳಲ್ಲಿ , 106 ದಾಸರು , 1252 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕಟೀಲಿನ ದುರ್ಗೆಯನ್ನು ಕುರಿತು) ಕಟೀಲ್ ದೇವರ್ ಕಟೀಲ್ ದೇವರ್ ಕಟೀಲ್ ದೇವರ್ಯಾರು ಪ. ಸರ್ವಶಿಷ್ಟರಿಷ್ಟಕೊಟ್ಟು ಕಾವ ಬೆಟ್ಟದೊಡೆಯನ ಪಟ್ಟದರಸಿ ಅ.ಪ. ಸೃಷ್ಟಿಯೊಳುತ್ಕøಷ್ಟ ತೇಜಪಟು ಭಕ್ತಜನರ ಮನದ ಕಷ್ಟವ ಪರಿಹರಿಸಿ ಪೊರೆವ ಕೃಷ್ಣನ ಒಡಹುಟ್ಟಿದವಳು 1 ದುಷ್ಟ ಕಂಸನ ಶಿರವ ಮೆಟ್ಟಿ ಜಿಗಿದ ವಿವಿಧ ಲೋಕಾ- ರಿಷ್ಟ ಶಾಂತಿಪ್ರದಳು ಪರಮ ನಿಷ್ಠಳು ಬಲಿಷ್ಠಳಿವಳು 2 ಅಷ್ಟಸಿದ್ಧಿದೇ ಪ್ರಸಿದ್ಧೆ ಜಿಷ್ಣುವಿನುತೆ ಭೂತ ಹೃದಯಾ- ವಿಷ್ಟೆ ನವನಿಧಿಷ್ಟೆ ಪುಷ್ಟೆ ಶ್ರೇಷ್ಠೆ ಸುಗುಣವರಿಷ್ಠಳಿವಳು 3 ಮುಷ್ಟಿಕಾರಿಯ ಚರಣ ಬಿಟ್ಟವರ ಭವಪಾಶದಿಂ ವೃಷ್ಟಿ ಸುರಿವ 4 ದಿಟ್ಟ ಲಕ್ಷ್ಮೀನಾರಾಯಣನ ಮುಟ್ಟಿ ಭಜಿಸುವವರ ಕರುಣಾ- ದೃಷ್ಟಿಯಿಂದ ನೋಡಿ ಮನೋಭೀಷ್ಟವೀವ ಹೃಷ್ಟರೂಪೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಕಟೀಲಿನ ದುರ್ಗೆಯನ್ನು ಕುರಿತು) ಕಟೀಲ್ ದೇವರ್ ಕಟೀಲ್ ದೇವರ್ ಕಟೀಲ್ ದೇವರ್ಯಾರುಪ. ಸರ್ವಶಿಷ್ಟರಿಷ್ಟಕೊಟ್ಟು ಕಾವ ಬೆಟ್ಟದೊಡೆಯನ ಪಟ್ಟದರಸಿಅ.ಪ. ಸೃಷ್ಟಿಯೊಳುತ್ಕøಷ್ಟ ತೇಜಪಟು ಭಕ್ತಜನರ ಮನದ ಕಷ್ಟವ ಪರಿಹರಿಸಿ ಪೊರೆವ ಕೃಷ್ಣನ ಒಡಹುಟ್ಟಿದವಳು 1 ದುಷ್ಟ ಕಂಸನ ಶಿರವ ಮೆಟ್ಟಿ ಜಿಗಿದ ವಿವಿಧ ಲೋಕಾ- ರಿಷ್ಟ ಶಾಂತಿಪ್ರದಳು ಪರಮ ನಿಷ್ಠಳು ಬಲಿಷ್ಠಳಿವಳು2 ಅಷ್ಟಸಿದ್ಧಿದೇ ಪ್ರಸಿದ್ಧೆ ಜಿಷ್ಣುವಿನುತೆ ಭೂತ ಹೃದಯಾ- ವಿಷ್ಟೆ ನವನಿಧಿಷ್ಟೆ ಪುಷ್ಟೆ ಶ್ರೇಷ್ಠೆ ಸುಗುಣವರಿಷ್ಠಳಿವಳು3 ಮುಷ್ಟಿಕಾರಿಯ ಚರಣ ಬಿಟ್ಟವರ ಭವಪಾಶದಿಂ ವೃಷ್ಟಿ ಸುರಿವ4 ದಿಟ್ಟ ಲಕ್ಷ್ಮೀನಾರಾಯಣನ ಮುಟ್ಟಿ ಭಜಿಸುವವರ ಕರುಣಾ- ದೃಷ್ಟಿಯಿಂದ ನೋಡಿ ಮನೋಭೀಷ್ಟವೀವ ಹೃಷ್ಟರೂಪೆ5
--------------
ತುಪಾಕಿ ವೆಂಕಟರಮಣಾಚಾರ್ಯ
(ಕಾಲಜ್ಞಾನ) ಮೈಯ್ಯವ ಮರಿಯ ಬ್ಯಾಡಿರೋ | ಮತ್ರ್ಯದೊಳಗ ಕಲಿರಾಯ ನರಸುತನ | ಪ್ರಬಲ ವಾಯಿತು ಕೇಳಿರೋ ಪ ಬೀಳು ಬಿದ್ದಾವೋ ಧರ್ಮದಾ ಭೂಮಿಯು | ಅಧರ್ಮವೇ ಹೆಚ್ಚೀತು | ಹೇಳಲಿನ್ನೇನವಗುಣಿಗಳು ಪ್ರಕಟಿಸಿ | ಕೇಡು ತಂದಾರು ಜಗಕೆ | ಖೂಳರ ಹಿರಿತನವು ಒಳ್ಳೆವರಾ |ಮಾನ ಮನ್ನಣೆ ಹೋದಾವು | ಮನೆಯ ಕೊಂಡುಂಬುವರು 1 ಮರ್ಯಾದೆಗಳ ಬಿಟ್ಟಾರೋ | ಕುಲಕ ಮಾತವ ತಾಹರು | ಹಗೆ ಹಾರೋ | ಹುಸಿನುಡಿದು ಮನೆ ದೈವವನೇ ಮಾರಿ | ಹದಗೆಟ್ಟು ಹೋಗುವರೋ 2 ಒಡಲು ಕಾಮಾಟಿಕೆಯಾ ಎರಡರಿಂದ | ಕೋಣ-ನಂದದಿ ಬಗಿದು | ಪಡಿ ಕೊಟ್ಟು ಸಲಹುವ ಒಡಿಯ ನೆಚ್ಚರ ವಿಲ್ಲಾ | ಮರಹು ಕತ್ತಲೆ ಮುಸುಕಿ | ಪೊಡವಿಲಿ ಭಕುತಿ ಮಾರ್ಗ ಮುಗ್ಗಿತು | ಎಲ್ಯಾರಿದ್ದರ ಹೋಲಿಕೆಯು 3 ಕಡಲ ಶಯನನ ದಾಸನೆಂದರೆ ಬಾಗರು | ನೀಚರಿಗೆರಗುವರು ಕನ್ಯರೈದು ವರುಷಕ ಗಂಡನ | ಸಂಗವ ಬಯಸುವರು | ಇನ್ನೇನು ಏಳು ಬರುಷದ ಬಾಲೇರು | ಗರ್ಭವ ಧರಿಸುವರು | ಅಣ್ಣಾ ತಂಗಿಗೆ ಮದುವೆ ಮುಂದಕ | ಆದಾವೋ ಜಗದೊಳಗ | ಜಾತಿ ಸಂಕರ ವಾಹುದು 4 ಯಾತ್ರೆಯು ನಿಲ್ಲುವವು | ನೀರು ತೋರವೆಲ್ಲಿ 5 ಶಾಸ್ತ್ರಗಳು ಮರೆವುದು | ಸಾರಿದಾ ಬೋಧವಿದು6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಗ) ನದಿಸರೋವರಗಳು ನದನದಿಗಳನು ಸ್ಮರಿಸಿರೋ ನದನದಿಗಳನು ಸ್ಮರಿಸಿ ಹೃದಯ ನಿರ್ಮಳರಾಗಿ ಮುದದಿಂದ ನಿಮ್ಮ ಮನದಧಮತನ ಬಿಟ್ಟ ಸಂ ಪದವಿಗೆ ಸೋಪಾನದಂತಾಗುವದು ಶ್ರೀ ಪದುಮನಾಭನು ವೊಲಿವನು ಪ ಸಿಂಧು ಮರುಧೃತಿ ಹೇಮವತಿ ನೇಮಿ ನೇತ್ರವತಿ ತರಣಿಸುತೆ ನರ್ಮದಾ ಗಾಯತ್ರಿ ಗೋಮತಿ ಗರುಡ ಸಾಧರ್ಮಾ ಸರಸ್ವತಿ ಮಣಿಮುಕ್ತ ಮುಕ್ತನದಿಯು ಪ್ರಣತ ವರದಕಾಗಿಣಿ ಕೃಷ್ಣವೇಣಿ ವೇದವತಿ ಹರಿಧೃತಿ ಇಂದ್ರಾಣಿ ಪುನಃ ಪುನಃ ವಾಣಿವಂ ಜರಫಣಿ ಭೀಮರಥಿನೀ 1 ಧಾರಿ ತುಂಗಾ ಭದ್ರಿಗಣಪತಿ ಶತಭಾಗ ನಾರದಿ ಉಭಯಪಿನಾಕಿ ಚಿತ್ರವತೀ ಮೂರು ಲೋಕೋದ್ಭವ ಭವಾನೀ ಚಾರು ಗಂಡಿಕೆ ಸರಯು ಶ್ರೋಣಿ ಭದ್ರನೀಲ ಕ್ಷೀರನದಿ ಪಾಪಘ್ನ ಮಹಾನದಿ ಅಘನಾಶಿ ವಾರಿಜಾಪ್ತಾವತಿ ಸುರ್ವಣ ಮುಖರೀ ವಿಸ್ತಾರ ಹಾಟಕ ಅತ್ರಿಣೀ 2 ಸುಲಭ ಮಂದಾಕಿನಿ ಕೌಮೋದಕಿ ಶಾಂತಿ ಕಪಿಲ ಚಂದ್ರಭಾಗ ಅರುಣೀ ಪೊಳೆವ ಕಾಳಾವತಿ ತ್ರಿಪಥಿ ಗೌರಿ ಕುಂತಿ ಅಳಕನಂದನ ಅಮಲವತಿ ಭೀಮಸಂಭೆ ಸಿ ತಾಂಬ್ರ ಪರ್ಣಿಯು ಜಯ ಮಂ ಸತಿ ಸತ್ಯವತಿ ವೈಷ್ಣವೀ 3 ಕನಿಕ ಶುಕ್ಲಾವತೀ ಬಾಹುನದಿಗೋವಿಂದ ಮಿನಗುವ ಭೋಗವತಿ ಕಾಶ್ಯಪಿಂಕಾಳಿಂದಿ ಅನುಸಿಂಧು ಐರಾವತಿ ಋಣ ವಿಮೋಚನ ಮಯೂರ ಸಂಭವೆ ನಿತ್ಯ ಪುಷ್ಕರಣಿ ಪಯೋ ಶ್ವಿನಿ ಮಹಾಪಗ ಭದ್ರ ಭೈರವಿ ವಿಚಿತ್ರ ನದಿಗಳನು 4 ಅರುಣೋದಯಲೆದ್ದು ಧರೆಯೊಳುಗಳ್ಳ ಬಲು ಸರಿತಗಳ ನೆನೆದು ಪುಳಕೋತ್ಸವದಲಿ ಪರಮ ಧನ್ಯರಾಗಿ ಪಾಪಗಳ ಪೋಗಾಡಿ ನಿರುತ ಮಾರುತ ಮತದಲೀ ಚರಿಸಿ ನಿಜಭಕುತಿಯಲಿ ಹಗಲು ಇರಳು ಇನಿತು ಸಿರಿಯರಸ ವಿಜಯವಿಠ್ಠಲನ ಚರಣಾಂಬುಜವ ಸರಸದಿಂದಲಿ ಧ್ಯಾನಗೈದು ಈ ನದಿಗಳಲಿ ಕರಣದಲಿ ತಿಳಿದು ನಿತ್ಯಾ5
--------------
ವಿಜಯದಾಸ
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
(ಮೂಲ್ಕಿಯ ನರಸಿಂಹದೇವರು) ನಂಬಿದೆ ನಿನ್ನ ಇಂಬಿದೆಯೆಂದು ಸನ್ನುತ ಪ. ಕಂಬದಿಂದ ಕಾಣಿಸಿದ ಗಂಭೀರಗುಣಾಂಭೋನಿಧಿ ಡಿಂಬೋದ್ಧರ ನರಮೃಗವರ ಅ.ಪ. ಭಾನುಕೋಟಿ ಭಾಸ್ಕರ ಪವ- ಮಾನನಯ್ಯ ಪ್ರಾಣದ ಸುತ್ರಾಣ ಸುಗುಣ ದೀನಜನಸಂತಾನ ಮಾನದ ಆನಂದ ಗುಣಾನಂತ ವಿತಾನಾಬ್ಧಿಶಯ ಹರಿ 1 ಎಷ್ಟೊ ಪಾಪಿ ಕನಿಷ್ಠನೆಂದು ಬಿಟ್ಟರೇನು ಬಿರುದು ಹಿರಿದು ಬರುವುದು ಸೃಷ್ಟಿಕರ್ತರಿಷ್ಟಹರ್ತ ಮುಷ್ಟಿಕಭಿದ ತುಷ್ಟಿಪ್ರದ ವಿಠಲ ಕೈಗೊಟ್ಟುಳುಹು 2 ಚಿತ್ತಸಾಕ್ಷಿ ಚಿನುಮಯಾತ್ಮ ಸತ್ಯರೂಪ ಸದಯೋದಯ ಸದುಪಾಶ್ರಯ ದೈತ್ಯಭಂಜನ ಸತ್ಯರಂಜನ ಕ್ಷೇತ್ರಜ್ಞ ಪವಿತ್ರಕಥಾಸ್ತೋತ್ರಾರ್ಹ ಶ್ರೀವತ್ಸಾಂಕಿತ 3 ಮೂಲಿಕಾಪುರ ಮೌಳಿರುತುನ ನೀಲೇಂದೀವರಶ್ಯಾಮಲ ಕಲಿಮಲಭೀಷಣ ಕಾಲಕಾಲ ವಿಶಾಲ ಭುಜಬಲ ಮೂಲೇಶಮುನೀಂದ್ರಾರ್ಚಿತ ಶ್ರೀಲಕ್ಷುಮಿನಾರಾಯಣ 4
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಷಶಾಯಿಯ ವರ್ಣನೆ) ಸ್ವರಮಣನೆನುತಲಿ ಮೊರೆಯಲು ಶ್ರುತಿಗಳು ಹೊರಳುವದೇನುಚಿತ ಅರೆ ನಿಮಿಷವು ನಿನ್ನುರವ ಬಿಟ್ಟಗಲದೆ ಇರುವಳು ರಮೆ ನಿರತ ಪ. ಕವಿಗಳು ಗುಣರಸ ಸವಿದು ಸುಖಭರದಿ ದಿವಿಜರ ಲೆಕ್ಕಿಸರೂ ಪವಿಧರ ಪಾಲಕ ರವಿ ಉದಿಸಿದ ಬಳಿ ಕವಿಕುಲ ಮಲಗುವರೆ 1 ಇಂದಿರೆ ನಿನ್ನನು ಹೊಂದುತ ಪರಮಾ- ನಂದದಿ ಮುಳುಗಿರಲು ಎಂದಿಗು ಮಲಗದ ಸುಂದರ ವಿಗ್ರಹ ಇಂದು ನೀ ಮಲಗುವರೆ 2 ದೋಷವಿದೂರ ಅಶೇಷ ಸುರಾರ್ಚಿತ ದಾಸ ಜನಾನಂದ ಶೇಷಗಿರಿ ವಿಶೇಷಾಸನ ಯಿ- ನ್ನೇಸು ಶಯನ ಚಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಷೋಡಶೋಪಚಾರ ಪೂಜಾ ಕೀರ್ತನೆಗಳು) ಧ್ಯಾನಿಸಲರಿಯೆ ನಿನ್ನ ಶ್ರೀನಿವಾಸ ಪ ಧ್ಯಾನಿಸಲರಿಯೆನು ದೀನಮಂದಾರ ನಿ- ತ್ಯಾನಂದ ಮೂರ್ತಿಯಂದರಿತು ಹೃದಯದೊಳು ಅ.ಪ ಕ್ರಮದಿ ಪ್ರತ್ಯಾಹಾರದಿ ಭ್ರಮಗೊಳಿಸುವ ಮನವ ನಿಲಿಸಿಧಾರಣೆಯನು- ಪಮ ಸಮಾಧಿಯಲಿ ಹಂಮಮಯಂಬುವದು ಬಿಟ್ಟು 1 ಪರಿಪರಿಶಾಸ್ತ್ರ ವೇದ ಪುರಾಣಗಳ ತರತಮ ಭೇದಾಭೇದದರುವಿಗೆ ಸಾಕ್ಷಿಯಾ- ಚರಣಕಮಲವರಿತು 2 ಮದಮತ್ಸರಾದಿಗಳು ಕೂಡಿಯನ್ನನು ಬಾಧಿಸುತಿಪ್ಪವು ಅನುದಿನವು ಸದಮಲಾತ್ಮಕ ಶ್ರವಣ ಮನನಗಳರಿಯೆ ಮೋ- ಹದ ಕೂಪದಲ್ಲಿ ಬಿದ್ದೆ ಗುರುರಾಮ ವಿಠಲನೆ 3
--------------
ಗುರುರಾಮವಿಠಲ
* ಹ್ಯಾಂಗಿರಲಿನ್ನು ರಂಗನ ಬಿಟ್ಟಿನ್ನಹ್ಯಾಗಿರಲಿಂನು ಮಂಗಳಾತ್ಮಜ ಹೆಳವನಕಟ್ಟೆರಂಗನ ಬಿಟ್ಟು ಹ್ಯಾಂಗಿರಲಿಂನು ಪ. ಸಿರಿಮನೋಹಾರಿ ಶರಣರಿಗಂತ:ಕರಣವ ತೋರಿ ತ್ವರಿತದಿದಿವ್ಯರಥಗಳನ್ನು ನೀಡಿ ಪರಮಾ ಸಂಭ್ರಮದಿಂದಾಯಿರುವೋನ ಮರದು ನಾ ಹ್ಯಾಂಗಿರಲಿನ್ನೂ 1 ಗಿರಿಮನಿ ಮಾಡಿ ಶರಣಗರಿತ:ಕರುಣವ ನೀಡಿ ಸರಸದಿ ಮನೋರಥಗಳ ತೋರಿ ಪರಮಾ ಸಂಭ್ರಮದಿಂದಾ ಇರುವನ ಮರದು ನಾ ಹ್ಯಾಂಗಿರಲಿನ್ನೂ 2 ಶರಣು ಪೊಕ್ಕಿರುವಾ ಗಿರಿಯಮ್ಮಗಾ ತುರದಿ ವಲಿದಿರುವ ಸರಕಿರಿಗೆಜ್ಜೆ ಧರಿಸಿ ಕುಣಿದಿರುವ ಸಿರಿನಾರಸಿಂಹನ ಚರಣವಾ ಮರೆದು ನಾ ಹ್ಯಾಂಗಿರಲಿನ್ನೂ 3
--------------
ಹೆಳವನಕಟ್ಟೆ ಗಿರಿಯಮ್ಮ
|| ಶ್ರೀ|| ಪದ್ಯ|| ಮುಂದೆ ತುಳುಜಾ ದೇವಿ ಬಂದು ನಿಂತಿರಲು ತ್ವರದಿಂದ ನೋಡ್ಯನುಭೂತಿ ಬಂದಂಥ ದೇವಿಯ ಚಂದದ ಬಹು ತೇಜವೆಂದು ತಿಳಿಯದೆ ಎನ್ನ ಮುಂದೆದುರಿಗೆ ಏನು ಬಂದಿರುವುದೆಂದು ತ್ವರದಿಂದ ನಡುಗಿದಳು|| ಮುಂದ ಆದೇವಿ ತಾ ಮುಂದಕ್ಕೆ ಕರೆಯುತಲೇ ಕುಂದರದನಿಯೇ ಕೇಳು ಕುಂದು ನಿನ್ನಲ್ಲಿ ಇಲ್ಲ ಎಂದು ನಿನ್ನ ಭಕ್ತಿಗೆ ಚಂದಾಗಿ ಅಭಯದ ಕೂಟ್ಟಂದಳೀಪರಿಯ||1 ಪದ ರಾಗ:ಕಾನಾಡ ಆದಿತಾಳ ಬೇಡು ಬೇಕಾದ್ದು ಬ್ಯಾಗನೇ|| ಅನುಭೂತಿ|| ಬೇ|| ನೀಡುವೆ ನಾನು|| ಪ ಮಾನಸ ದುಃಖವ್ಯಾಕಿದು || ನಿನ್ನ ಭಿಮಾನವೆಂಬುದು ನನ್ನದು|| ಮಾನಿತರೊಳ್ಹಗತಿ ಮಾನವಂತೆಯೇ ಮಾನುನಿ ಮಣಿ ಅನುಮಾನವ ಬಿಟ್ಟು|| 1 ಎಷ್ಟು ಸ್ನೇಹವ ತೋರಲಿ|| ಬಂದೆ ಸಂತುಷ್ಟಳಾಗುತ ನಿನ್ನಲಿ|| ಶಿಷ್ಟಳೆ ನೀ ಕೇಳಸ್ಪಷ್ಟದಿ ನಿನಗೆ ದೃಷ್ಟಿಗೆ ಬೀಳಲು ಕಷ್ಟಗಳುಂಟೆ|| 2 ಚಿಂತಿಸಿದಿ ಯಾಕೆನ್ನನು|| ಬಂದಂತಹ ಚಿಂತೆ ಎಲ್ಲಾನೂ ಕಳೆವೆನು|| ಸಂತೋಷದಲಿ ಅನಂತಾದ್ರೀಶನ ಚಿಂತನದಿಂದಿರು ಚಿಂತೆಯನು ಬಿಟ್ಟು|| 3 ಆರ್ಯಾ ಅತಿ ಹಿತ ವಚನವನು ಕೇಳಿ || ಅತಿ ಹರುಷಿತಳಾದಳಾಗ ಆ ಬಾಲೆ ಹಿತವಾಯಿತು ಎನಗೆಂದು || ನತಿಸುತ ಮಾತಾಡಿದಳು ಹೀಗೆಂದು|| 1 ಪದ ರಾಗ:ಮುಖಾರಿ ಆದಿತಾಳ ತುಳುಜಾದೇವಿಯೇ|| ಪ ನಮೋ ಎಂಬೆ ಮತ್ತು ಜಗದ್ಥಾತ್ತಿಯೆ || ಬಹುಪ್ರಮಿತಾ ಹಿಮಾಚಲನ ಪುತ್ರಿಯೇ || ಸುಮಹಿಮ ಸುಂದರಗಾತ್ರಿಯೇ|| ಮನದಾ ಅಮಿತಾರೋಗಕ್ಕೆ ಮಹಾಮಾತ್ತಿಯೇ|| 1 ತ್ವರಿತಾದಿಂದಲೇ ಬಂದಂಥಾಕಿಯೇ || ಎಂದು ತ್ವರಿತಾ ತ್ವರಿತಾದೇವಿಯು ಎನಿಸು ವಾಕೆಯೆ|| ಮರೆತಿರಲಾರೆ ನಾ ನಿನ್ನಕಿಯೇ || ಸ್ನೇಹಾಭರಿತಾಗಿ ಭಕ್ತರನ ಸಲಹವಾಕಿಯೇ|| 2 ಚಿಂತಿ ಮಾಡಲು ಬಂದು ನಿಂತಿಯೇ || ಎನಗೆ ಚಿಂತಿಯು ಮಾಡಬ್ಯಾಡಂತಿಯೇ|| ಎಂಥಾಕಿ ನೀನು ದಯಾವಂತಿಯೇ || ವರದಾ ನಂತಾದ್ರೀಶನ ಸಖನ ಕಾಂತಿಯೇ|| 3 ಆರ್ಯಾ ಕರ ಮುಗಿದು|| 1 ಪದ ರಾಗ :ಆನಂದ ಭೈರವಿ ವರಕೊಡು ಎನಗಿದು ತ್ವರಿತದಿ ತಾಯಿ|| ಮರೆಯ ದೆಂದೆಂದೂ ಹಗಲಿರುಳು ನೀ ಕಾಯಿ|| ಪ ಮಂದ ಮತಿಯು ದೈತ್ಯ ಬಂದಿಹನೋಡು|| ಕೊಂದವನ ಎನಗಾನಂದವ ನೀಡು 1 ಮಾಡುವ ತಪಸ್ಸಿಗೆ ಕೇಡು ತಂದಿಹನು|| ಮಾಡಲಿನ್ನೇನು ನಿನಗೆ ಬೇಡಕೊಂಬುವೆನು|| 2 ಪತಿಯ ಸೇವಿಸುವಂಥ ಸತಿಯು ಬೇಡುವೆನೂ|| ಸತತಾನಂತಾದ್ರೀಶನಾ ಸ್ವøತಿಯು ಮಾಡುವೆನು|| 3 ಅನುಭೂತಿಯ ವಚನವನು || ಅನುಸರಿಸುತ ಬ್ಯಾಗಕೊಟ್ಟು ಎನಗಿಲ್ಲೆಂತ್ಯಂದಳಾಗ ಜಗದಂಬಾ|| 1 ಮಾಡಿದಳು|| ಹುಂಕಾರ|| 2 ಒಗೆದಾನು ಯುದ್ಧದಲ್ಲಿ ಜಾಣಾ|| 3 ಸಾರಶಕ್ತಿಯನು ತೆಗೆದಾ ಶೌರ್ಯದಿ ಮತ್ತಾಕೆಯಲ್ಲೇ ಒಗೆದಾ|| 4 ಎದೆಗ್ಹೊಡೆದಳು ಶೂಲದಲೆ||ಅದುರೂಪವು ಬಿಟ್ಟು|| ತನ್ನಕ ಪಟದಲೆ ಕುದುರೆಯ ರೂಪವ ಧರಿಸಿ|| ಒದರುತ ನಿಂತಾಗ ಮುಂದ ಖ್ಯಾಕರಿಸಿ|| 5 ಗಾಢನೆ ಮಹಿಷಾಗಿ ಬಂದ ಬದಿಯ್ಮಲೇ 6 ತೋರುವ ಬಹುಬೆಟ್ಟಗಳ|| ಕೊಡಗಳಿಂದಲೇ ಕೊಡಗಳ್ಹಗಳು| ಮಾಡುವ ವೃಷ್ಟಿಯದೆಷ್ಟು|| ಕಾಡುವ ಕಪಟದಿಂದ ಮತ್ತಿಷ್ಟು 7 ಶೃಂಗಗಳಿಂದ ಹಿಡಿದಳು ದÉೈತ್ಯಬಾಯಿಬಿಡುವಾ|| 8 ಅವನ ಮುರದೊತ್ತಿ 9 ಕಡೆದಳು ಆಗವನ ಬಿಲ್ಲುಬಾಣದಲೆ|| 10 ದಾನವನು|| ಹುಟ್ಟಿದ ಸೈನ್ಯವು ಎಲ್ಲಾ|| ಪೆಟ್ಟು ಹಾಕುತ ಬಂತು ಭೂತಗಳಿಗೆಲಾ||್ಲ 11 ತಡಿಯದೇ ಅವನ ಹುಡುಕುತಲಿ || ಕಡಿದಳು ಶಿರ ಕಡೆದಳು ಮತ್ತವನ ಶಿರವು ಖಡ್ಗದಲೇ|| 12 ಸುರರು ಥಟ್ಟನೆ ಕರೆದರು ಪುಷ್ಪ ದೃಷ್ಟಿಯನು|| 13 ಪದ್ಯ ರಾಗ:ದೇಶಿ ಅಟತಾಳ, ಸ್ವರ ಷಡ್ಜ ಓಡಿ xಟ್ಟನೆ ಹಿಡಿದರಾಗ|| 1 ಕುಕ್ಷಿಗಿಲ್ಲದಲೆ ಬುಭೂಕ್ಷಿತರದು ಎಲ್ಲಾ ಭಕ್ಷಣ ಮಾಡುವರು|| ಅಕ್ಷಯ ಬಲದಿಂದ ದಕ್ಷರು ಎಲ್ಲಾರು ರಾಕ್ಷಸರಾದರು|| 2 ಭೈರವಾದಿಗಳು ಎಲ್ಲಾರು ದೇವಿಯ ಪರಿಚಾರಕರಾದವರು ಸೇರಿ ಸೈನ್ಯದಲ್ಲಿ ಅಪಾರ ಸಂಭ್ರಮದಲ್ಲಿ ಹಾರ್ಯಾಡುತಿರುವರು3 ಆ ತಾಳಮೊರದಂಥ ಬೇತಾಳ ಗಣಗಳು ಪ್ರೇತ ಪಿಶಾಚಿಗಳು|| ಯಮದೂತರಸಮರವರು|| 4 ರಕ್ತ ಪಾನವ ಮಾಡಿದರು|| 5 ದುರುಳರನೆಲ್ಲನು ಹೊರಳಿಸಿ ಹೊಟ್ಟೆಯ ಕರಳವ ಬಗಟಿದರು| ಸರಳವಾದ ಆ ಕರಳ ಮಾಲೆಯ ಮಾಡಿ ಕೊರಳೊಗ್ಹಾಕಿದರು||6 ಹಾಕಿಕೊಂಡು ಕುಣಿದಾಡಿದರು||7 ಕಂಕಲಾದಿಗಳು ಭಯಂಕರರವರು ಅಸಂಖ್ಯಾಕರಾಸವರು|| ಶಾಂಕರೀ ದೇವಿಯ ಕಿಂಕರರಿಂಥ ಅಲಂಕಾರಗಳನಿಟ್ಟರು || 8 ಅವನಂತವ ಅರಿಯೇ ನಾನು|| 9 ಆರ್ಯಾ ಬಲ್ಲಿದ ದೈತ್ಯದ ಕೊಂದು || ನಿಲ್ಲದೆ ಅನುಭೂತಿ ಬದಿಯಲೇ ಬಂದು || ಅಲ್ಲಿಹಳು ಮಹಾಮಾಯಾ|| ಇಲ್ಲಿ ಗೆ ಪೂರ್ಣಾಯಿತು ಎರಡು ಅಧ್ಯಾಯಾ || ಶ್ರೀ ಹರೇಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
2. ಆತ್ಮ ನಿವೇದನೆ ಅಪರಾಧವೆನ್ನದೈಯ ಹೇ ಜೀಯಅಪರಾಧವೆನ್ನದೈಯ ಅಪರಿಮಿತವೆ ಸರಿ ಪ ಕೃಪೆ ಮಾಡೊದಿಲ್ಲವೆ ಕೃಪಣವತ್ಸಲ ಕೃಷ್ಣ ಅ.ಪ ಹುಡುಗರು ಮಾಡುವ ತಪ್ಪಿಗೆ ಜನನಿ ತಾಬಿಡುವಳೆ ಅದರಿಂದ ಕೃಪೆಯ ಮಾಡದಲೆನಡೆವ ಕುದುರೆ ತಾನು ಎಡಹಿದರೆ ಸ್ವಾಮಿಕಡೆಗೆ ಕಟ್ಟುವನೇನೊ ತಿರುಗಿ ನೋಡದಲೆ 1 ಮಾಡು ಎಂದದ್ದನು ಬಿಟ್ಟರೆ ಅಪರಾಧಬೇಡವೆಂದನು ಮಾಡುವುದಪರಾಧಈಡಿಲ್ಲ ನಿನ್ನ ದಯ ಬೇಡುವೆನೋ ನಿನಗೆಮಾಡುವೆ ಬಿನ್ನಹ ನಾಚಿಕೆಯಿಲ್ಲದಲೆ2 ವಾಸುದೇವ ಶ್ರೀಹರಿಯೆನೋಡದಿದ್ದರೆ ಭಕುತ ಜನರು ತಮ್ಮಬೀಡ ಸೇರಿಸರೆನ್ನ ಕೇಡೇನೊ ಇದಕಿಂತನೋಡೊ ನೀ ದಯದಿಂದ ಭಕುತವತ್ಸಲ ಕೃಷ್ಣ 3
--------------
ವ್ಯಾಸರಾಯರು
2. ಶನೀಶ್ವರ ದಂಡಕ ಮಾಸ ಮಾನಿನಿ ಒಡಲು ಹಿಂಡು ನೆಟ್ಟನೆ ಹಗೇವದಲ್ಲಿದ್ದ ನಿಜಧಾನ್ಯ ಪಟ್ಟೆಂದು ಚಲಿಪುದು ಪರಿಪರಿಯ ವಸನಗಳು ಇಟ್ಟಲ್ಲಿ ನೆಲೆಸಿಹವಾಗಿಕಾಣಿಸದು ಅಟ್ಟೀವಹುಲಿಕರಡಿಉರಿಬಿಸಿಲು ಘನವಾಗಿ ಮಟ್ಟ ಮಧ್ಯಾಹ್ನದಲಿ ನೀರಡಿಸಿ ಕುಳಿತಿರಲು ಆರಿ[ಹ] ರೈ[ಕಾ]ವರಿಲ್ಲೆಂದು ಸಾರಸಂ [ಬಡುತ] ಕಾಡಿ [ಮೊರೆ]ಯಿಡೆ ನಿನ್ನ ಮೋಡಿ [ಮೆರೆವುದು] ಜರ್ಝರಿ ಭೂತ[ಂಗಳೆಲ್ಲಂ] ಬಿಟ್ಟು ಈ ದಂಡಕಂ ಹನ್ನೊಂದು ಬಾರಿ ಶನಿವಾರವೈದರಲಿ ಪಠಿಪರ್ಗೆ ಹನ್ನೊಂದನೆ ರಾಶಿಯೊಳಿರ್ದ ಫಲವನಿತ್ತು ಚೆಲುವ ವೇಲಾಪುರದ ವೈಕುಂಠ ವಿಠಲನ ಭಕ್ತನೆಂದೆನಿಸಿ ನಿನ್ನ ಪೆತ್ತ ಮಾತೆಯ ಪೆಸರನೆನಿತ ಧನ್ಯರಂ ಮಾಡಿಸದೆ ಅನ್ಯಾಯ[ಹಂ] ಕಾರಗಳಿಗಂಜಿ ನೀ ಬಿಡದೆ ನಿನ್ನ ಮನಬಂದ ರೀತಿಯಲಿ ಬಾಧಿಸದೈಯಾ ಸನ್ಮುನಿವಂದ್ಯ ಸರ್ವೇಶ್ವರಾನಂದ ಸಂಚಾರಿರವಿಸೂನು ಯಮ ಸಹೋದರ ವೀರಧರ್ಮ ಪರಿಪಾಲನೆ ಶನೈಶ್ವರ ಮಹಾರಾಯನೆ ತ್ರಾಹಿ ತ್ರಾಹಿ ನಮಸ್ತೆ ನಮಸ್ತೆ ನಮಃ ಶ್ರೀ ಕೃಷ್ಣಾರ್ಪಣಮಸ್ತುಃ
--------------
ಬೇಲೂರು ವೈಕುಂಠದಾಸರು
373ಶಿವನು ನೀನಾದರೆ ಶಿವನ ರಾಣಿ ನಿನಗೇನೊ ಅವಿವೇಕ ಮನುಜ ಈ ಮಾತು | ಈ ಮಾತು ಕೇಳಿದರೆ ಕವಿಜನರು ನಗರೆ ಕೈ ಹೊಡೆದು 1 374ಎಲ್ಲ ಬಂದೇ ಎಂಬ ಖುಲ್ಲ ಮಾನವ ನಿನ್ನ ವಲ್ಲಭೆಯ ಬೆರೆದು ಸಂತಾನ | ಸಂತಾನ ಪಡೆವೇಕೆ ಇಲ್ಲವೇ ಜನನಿ ಭಗಿನೇರು 2 375ಬಿಂಬವೊಂದೆ ಪ್ರತಿಬಿಂಬ ವೊಂದೆಂಬಿ ಈಶು ದ್ಧಾಂಬರದ ನೆರಳು ಕಪ್ಪಾಗೆ | ಕಪ್ಪಾದ ಬಳಿಕ ನೀ ನೆಂಬೊ ಈ ಮಾತು ಪುಸಿಯಲ್ಲಿ 3 376 ಎಲ್ಲ ಒಂದೆ ಎಂಬ ಸೊಲ್ಲು ಖರೆಯೆಂತೆನಲು ಖರೆಯೆಂಬ ಮಾತುಗಳು ಸುಳ್ಳೆನ್ನರೇನೊ ಸುಜನಾರು 4 377 ನಿಮ್ಮ ನಾ ಬೈದರೆ ನಮ್ಮ ನೀವ್ ಬೈದರೆ ಅದ್ವೈತ ಸುಮ್ಮನಿರಬೇಕು ಎಲೊ ಭ್ರಾಂತ 5 378 ಶುದ್ಧ ಬ್ರಹ್ಮನ ಸುಂಗುಣವ ಕದ್ದ ಪ್ರಯುಕ್ತ ಪ್ರ ಸಿದ್ಧ ಚೋರತ್ವ ನಿನ್ನಲ್ಲಿ | ನಿನ್ನಲ್ಲಿ ಪೊದ್ದಿತೊ ಉದ್ಧಾರವೆಲ್ಲೊ ಭವದಿಂದ 6 379 ಮಾಯವಾದಿಯ ಮತವು ಹೇಯವೆಂಬುದು ಸಿದ್ದ ತಾಯಿತಂದೆಗಳು ಸತಿಪುತ್ರ | ಸತಿಪುತ್ರರಗಲಿದರೆ ಬಾಯಿ ಬಿಟ್ಯಾಕೊ ಆಳುತಿದ್ದಿ 7 380 ಸುಳ್ಳಿಗಿಂತಧಿಕ ಮತ್ತಿಲ್ಲವೋ ಮಹಪಾಪ ಸುಳ್ಳು ಕಳ್ಳತನವು ನಿನ್ನಲ್ಲಿ | ನಿನ್ನಲ್ಲಿ ಉಂಟಾಯಿ ತಲ್ಲೊ ಜಾರತ್ವ ಇದರಂತೆ 8 381ಮೇ ಮಾತೆ ವಂಧ್ಯೆಯೆಂಬ ಈ ಮಾತಿನಂತೆ ಮು ಅಪುಸಿಯಿಂಬೀ ಮಾತುಗಳು ಭ್ರಾಮಕವೆ ಖರೆಯೊ ನಿಜವಲ್ಲ 9 382 ಶಶವಿಷಾಣಗಳೆಂದು ಒಪ್ಪುವರೆ ಬಲ್ಲವರು ಮೊಲೆಹಾಲು ಉಂಡಿತೋ ರಿಸೊ ಮಿಥ್ಯೆ ಸತ್ಯವಹುದೇನೊ 10 383ಸತ್ಯವೆಂದರೆ ಖರೆಯು ಮಿಥ್ಯೆಯೆಂದರೆ ಸುಳ್ಳು ನ್ಮತ್ತ ಈ ಮಾತು ನಿಜವೆಲ್ಲಿ 11 384ಭೀತಿ ನಿರ್ಭೀತಿ ಶೀತತಾಪಗಳೊತ್ತಟ್ಟು ನೀತವಾಗಿಹವೆ ಜಗದೊಳು |ಜಗದೊಳಿದ್ದರೆ ತೋರು ಜಾತಿ ಭೇದಗಳು ಇರಲಾಗಿ 12 385 ಜೀವೇಶರೊಂದೆಂಬ ಈ ಮಾತು ಕೇಳ್ವರಿಗೆ ಕೇವಲ ಶ್ರಾವ್ಯವೆಂದೆಂದು | ಎಂದೆಂದು ಬುಧರು ಪಶು ಗಾವಿ ನೀನೆಂದು ಕರೆಯಾರೆ 13 386 ಗುಣವಂತನೆಂಬ ಈ ಮಾತನು ಕೇಳಿ ಸುಖಿಸದವ ಮನುಜ ಪಶುಸಿದ್ಧ ಪುಸಿಯಲ್ಲ | ಪುಸಿಯಲ್ಲ ನಿನ್ನ ಮತ ಗಣನೆ ಮಾಡದಲೆ ಬಯ್ವೋರ 14 387ಮಲದ ಗರ್ತಕೆ ಶುದ್ಧ ಜಲಧಿ ಸಮಯವೆಂತೆಂಬಿ ಕಲುಷವರ್ಜಿತಕೆ ತೃಣಜೀವ | ತೃಣಜೀವ ಸರಿಯೆ ಸಿಂ ಬಳಕ ಗೋಘೃತವು ಸಮವಹುದೆ 15 388 ಐರಾವತಕೆ ಸರಿಯೆ ಕೂರಿಹೇನಿನ ಮರಿಯು ತೋರಿತೊ ನಿನ್ನ ಅಜ್ಞಾನ 16 389 ದ್ವಾಸುಪರ್ಣಾ ಎಂಬ ಈ ಶ್ರುತಿಗಳಲ್ಲಿ ವಿ ಶ್ವಾಸ ಮಾಡದಲೆ ಜೀವೇಶ | ಜೀವೇಶಕೈಕ್ಯೋಪ ದೇಶ ಮಾಡಿದವ ಚಂಡಾಲ 17 390ಅಜರಾಮರಣ ಬ್ರಹ್ಮ ಭುಜಗಭೂಷಣ ಪೂಜ್ಯ ತ್ರಿಜಗ ದೇವೇಶ ಹರಿಯೆತ್ತ | ಹರಿಯೆತ್ತ ನೀನೆತ್ತ ಅಜಗಜನ್ಯಾಯ ಪುಸಿಯಲ್ಲ 18 391 ಪಾಲುಗಡಲೊಳಗಿಪ್ಪ ಶ್ರೀ ಲೋಲ ಹರಿಯೆಲ್ಲಿ ಹೇಲುಚ್ಚೆವೊಳಗೆ ಹೊರಳುವ | ಹೊರಳಾಡಿ ಬಳಲುವ ಖೂಳ ಮಾನವನೆ ನೀನೆಲ್ಲಿ 19 392 ಕ್ಷೀರಾಂಬುಧಿಗೆ ಸರಿಯೆ ಕಾರಿಕೆಯ ಶ್ಲೇಷ್ಮ ಭಾ ಗೀರಥಿಗೆ ಸಮವೆ ಖರಮೂತ್ರ | ಖರಮೂತ್ರ ಜೀವ ಲ ಕ್ಷ್ಮೀರಮಣಗೆಣೆಯೆ ಜಗದೊಳು 20 393ಗುಣಪೂರ್ಣ ಸರ್ವಜ್ಞ ಅಣುಮಹದ್ಗತನ ನಿ ರ್ಗುಣ ಅಲ್ಪನೆನುತಿದ್ದಿ | ಎನುತಿದ್ದಿ ಹರಿಗೆ ದೂ ಷಣೆಯು ಬೇರುಂಟೆ ಇದಕಿಂತ 21 394 ಈಶ ನಾನೆನಲು ಕೀನಾಶನಿಂದಲಿ ದಣಿಪ ದಾಸನೆಂಬುವಗೆ ದಯದಿಂದ | ದಯದಿಂದ ತನ್ನಯಾ ವಾಸದೊಳಿಟ್ಟು ಸಲಹೂವ 22 395ಈಶತ್ವ ವೆಂಬುದು ಲಕುಮೀಶಗಲ್ಲದೆ ಜೀವ ರಾಶಿಗಳಿಗುಂಟೆ ಈ ಶಕ್ತಿ | ಈ ಶಕ್ತಿ ಸತ್ವಗುಣ ಈಶ ಬಿಟ್ಟಿಹನೆ ಜಗದೊಳು 23 396 ಉದ್ಗೀಥಶ್ರೀ ಪ್ರಾಣ ಹೃದ್ಗತನು ಜಗದೇಕ ಸದ್ಗುರುವರೇಣ್ಯನೆನುತಿಪ್ಪ | ಎನುತಿಪ್ಪರಿಗೆ ಯಮ ಗದ್ಗದನೆ ನಡುಗಿ ನಮಿಸುವ 24 397 ಸ್ವಾಮಿ ಭೃತ್ಯನ್ಯಾಯ ಈ ಮಾತಿನೊಳಗುಂಟು ಗ್ರಾಮಧಾಮಗಳು ಇದರಂತೆ | ಇದರಂತೆ ನೋಡಿಕೊ ನೀ ಮಾತ್ರ ನುಡಿಯೆ ಸಾಕೆಂಬೆ 25 398ಈಶ ನಾನೆಂದವನ ಶ್ವಾಸ ಬಿಡಗೊಡದೆ ಯಮ ಸೆಳೆದೊಯಿದು ನರಕದೊಳು ಘಾಸಿಗೊಳಿಸುವನೊ ಬಹುಕಾಲ 26 399 ಮಾತಾ ಪಿತರ ದ್ರೋಹಿ ಬಂಧು ಘಾತಕ ಬ್ರಹ್ಮ ಘಾತಕನು ನೀನು ಪುಸಿಯಲ್ಲ | ಪುಸಿಯಲ್ಲ ಶ್ರೀ ಜಗ ನ್ನಾಥ ವಿಠಲನೆ ನಾನೆಂಬಿ 27
--------------
ಜಗನ್ನಾಥದಾಸರು
ಅ. ಶ್ರೀಹರಿ ಲಕ್ಷ್ಮಿಯರು 46 ಪ್ರಣವರೂಪನ ಹೋಗಿ ನೋಡಿ ಬರುವುದಕೆ ಪ ಹೋಗುವಯೆಂದೆಂಬ ಮಾತು ನಿಶ್ಚಯವಾಗಿ ನಾಗಗಿರೀಶನ ಕಂಡು ಕಾಣಿಕೆಯಿತ್ತು ಸಾಗಿ ಬರುವ ಊರಿಗೆ ಇವರಿಗೆ 1 ಕೋನೇರಿನಾಸನ ನಾ ಹೋಗಿ ನೋಡಲು ಮಾನವ ಜನುಮದಲಿ ಹೀನ ವೃತ್ತಿಯ ಬಿಟ್ಟು ಜ್ಞಾನ ಬುತ್ತಿಯ ಕಟ್ಟಿ ಕಾಣಲು ಇಹಪರವಾತ ತಾನೆರೆವ 2 ರಾಮನ ಶಿಕ್ಷೆಯು ರಾಮನ ರಕ್ಷೆಯು ರಾಮ ಆಂಜನೆಯನ ಗಿರಿಯೊಳು ನಿಂತಿಪ್ಪ ವರಾಹ ತಿಮ್ಮಪ್ಪ 3
--------------
ವರಹತಿಮ್ಮಪ್ಪ
ಅಕ್ಕ ಕೊಳಲನೂದುವ ಸುಂದರನ್ಯಾರೇ ಅಕ್ಕ ಪ ಸುಂದರನ್ಯಾರೇ ನೋಡೋಣ ಬಾರೆ ಅ.ಪ. ಅಮ್ಮಮ್ಮಾ ಮಾರನಸ್ತ್ರವ ತಾಳಲಾರೆವೆ ಅಕ್ಕಬೊಮ್ಮನ ಪಿತನಂತಃಕರಣಿರಲೇ ಅಕ್ಕ 1 ಪತಿಯು ನಮ್ಮನು ಬಿಟ್ಟರೆ ಬಿಡಲೇ ಅಕ್ಕರತಿಪತಿ ಪಿತನ ದಯವು ಇರಲೇ ಅಕ್ಕ 2 ಮನೆ ಧನವೆತ್ತ ಪೋದರೆ ಪೋಗಲೇ ಅಕ್ಕಮನಸಿಜ ಪಿತನ ದಯವು ಇರಲೇ ಅಕ್ಕ 3 ಕಂದರ ಎತ್ತಲಾರೆವು ನಾವು ಕೇಳೇ ಅಕ್ಕಕಂದರ್ಪ ಸುತನ ಕರೆದು ತಾರೇ ಅಕ್ಕ 4 ನೀರೆ ಪೋಗೋಣು ನಡಿ ಆ ವನಕೆ ಅಕ್ಕಮಾರಸುಂದರನ ನೋಡುವುದಕ್ಕೆಇಂದಿರೇಶನ್ನ ಕರೆತರುವುದಕ್ಕೆ 5
--------------
ಇಂದಿರೇಶರು