ಒಟ್ಟು 444 ಕಡೆಗಳಲ್ಲಿ , 69 ದಾಸರು , 409 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ
ಏಕನಾದ ಹರಿಗುರುಗಳ ಬಿಟ್ಟು ನರಸ್ತುತಿಗಳನು ಮಾಡಬಾರ್ದು ಪ ಸಿರಿವುರಿಯಲಿ ಸಿಕ್ಕಿ ನರಹರಿ ಚರಣವ ಬಿಡಬಾರ್ದು ಅ.ಪ. ಒಂಟಿಲಿ ಸತಿಯನು ಪತಿವ್ರತೆ ಎನ್ನುತ ಬಿಡಬಾರ್ದು ನೆಂಟೆಗೆ ಮಿತ್ರಗೆ ಸೂಳೆಗೆ ಸಾಲವ ಕೊಡಬಾರ್ದು ತುಂಟರ ಕುಡುಕರ ಜಾರರ ನೆರೆಹೊರೆ ಇರಬಾರ್ದು ಒಂಟಿಯ ಊಟವ ಪಯಣವ ಕಲಹವ ಬೆಳೆಸಬಾರ್ದು 1 ಮಾವನ ಮನೆಯಲಿ ದುಡಿಯದ ಅಳಿಯನು ನಿಲ್ಲಬಾರ್ದು ಕೋವಿದರಡಿಗಳ ಸುಜನರ ಸಂಗವ ಬಿಡಬಾರ್ದು ಜೀವರು ಹರಿ ಸಮ ಮಾಯವೆ ಜಗಸರಿ ಎನಬಾರ್ದು ದೇವನ ದೂಡುತ ವಿಷಯವ ಹರಿಸುತ ಕೆಡಬಾರ್ದು 2 ಮನೆಕದ ಮುಂದಿಲಿ ಪತಿವ್ರತೆ ತಾನು ನಿಲಬಾರ್ದು ತನುವನು ತೋರುತ ಸೆರೆಗನು ಬೀರುತ ನಡಿ ಬಾರ್ದು ವನಿತೆಯ ಸಂಗಡ ಗುಟ್ಟಿನ ವಿಷಯವ ನುಡಿಬಾರ್ದು ಮಣಿಯದೆಲೆಂದಿಗು ಹಿರಿಯರ ಚರಣಕೆ ನಡಿಬಾರ್ದು3 ನುಡಿಯುವ ತೆರೆದಲಿ ನಡೆಯದ ಮನುಜನ ನಂಬಬಾರ್ದು ತಡೆಯದೆ ಕೋಪವ ದುಡುಕುವ ನೆಡೆಯಲಿ ನಿಲ್ಲಬಾರ್ದು ಬೆಡಗನು ತೋರುವ ನಾರಿಯ ಕಡೆಯಲಿ ನೋಡಬಾರ್ದು ದುಡುಕುತ ಲೊಡನೆಯೆ ಯಾವುದು ನಿಶ್ಚಯ ಮಾಡಬಾರ್ದು 4 ಕೆಟ್ಟರೆ ನೆಂಟರನೆಂದಿಗು ಮಾನಿಯು ಸೇರಬಾರ್ದು ಕಷ್ಟವು ಬಂದೆಡೆ ಧೈರ್ಯವನೆಂದಿಗು ಬಿಡಬಾರ್ದು ಗುಟ್ಟಿನ ಮಂತ್ರವು ಘಟ್ಟಿಲಿ ಜಪಿಸುತ ಕೂಗಬಾರ್ದು ಶಿಷ್ಯರಿಗಲ್ಲದೆ ದುಷ್ಟಗೆ ಶಾಸ್ತ್ರವ ನುಡಿಬಾರ್ದು 5 ತಿಂಡಿಯ ಚಪಲವ ನರಹರಿ ತೊಂಡನು ಮಾಡಬಾರ್ದು ಹೆಂಡರ ಭಜಕನ ಜಾರನ ನುಡಿಗಳ ನಂಬಬಾರ್ದು ಸತಿ ಸಹ ಸರಸವ ಮಾಡಬಾರ್ದು ಮಂಡೆಲಿ ಚರಣದಿ ಬರಿತೆರ ವೆಂದಿಗು ಹೋಗಬಾರ್ದು 6 ಹುಡುಗರ ಶಾಲೆಗೆ ಕಲಿಯಲು ಹುಡುಗಿಯ ಕಳಿಸಬಾರ್ದು ಮಡದಿಗೆ ಭಂಟಗೆ ಒಡನೆಯೆ ಸದರವ ನೀಡಬಾರ್ದು ಹುಡುಗಿಯ ಕಾಣದ ಜನರಿಗೆ ದೇಶಕೆ ಕೊಡಬಾರ್ದು ನಡೆನುಡಿ ನೋಟ ವಿಶೇಷದಿ ನೇಮವನಿಡದಲೆ ಇರಬಾರ್ದು 7 ಯಾಚಕ ಸವಿನುಡಿ ವಿನಯ ವಿವೇಕವ ಮರಿಬಾರ್ದು ಯೋಚನೆ ಗೈಯದೆ ನೆರೆಹೊರೆ ಹಗೆತನ ಗಳಿಸಬಾರ್ದು ಒಗೆತನ ಹುಳುಕನು ಹಾಕಬಾರ್ದು ಮೋಚಕ ನಿಜ ಸಖ ಹರಿತಾನೆಂಬುದ ಮರಿಬಾರ್ದು 8 ದೊಡ್ಡವರೆಡೆಯಲಿ ಹುಡುಗರು ಸರಸವ ಮಾಡಬಾರ್ದು ದುಡ್ಡಿನ ಜನಗಳನೆದುರಿಸಿ ಬಡವನು ನಿಲ್ಲಬಾರ್ದು ಸಡ್ಡೆಯ ಮಾಡದೆ ಅಡ್ಡಿಗಳೆಲ್ಲವ ಸರ್ವರಿಂ ದೊಡ್ಡವ ಶ್ರೀ ಕೃಷ್ಣವಿಠಲನ ಭಜನೆಯ ಬಿಡಬಾರ್ದು 9
--------------
ಕೃಷ್ಣವಿಠಲದಾಸರು
ಏಕೆ ದಯ ಬಾರದೋ ಶ್ರೀಕಾಂತ ನಿನಗೆ ಲೋಕನಾಯಕ ಎಷ್ಟು ಬೇಡಲೋ ಪ ಜೋಕೆಯಿಂ ಸಾಕುವರದಾರೋ ಅ.ಪ ನಿನ್ನ ಮನವಿನ್ನೆಷ್ಟು ಕಠಿಣವೋ ಮುನ್ನ ಮಾರುತಿಯೊಡನೆ ಮಸಗಿದೆ ಎನ್ನೊಳಗೆ ನಿರ್ದಯೆಯೊಳಿರುವುದು ಚೆನ್ನವಲ್ಲವೊ ಇನ್ನು ಚೆನ್ನಿಗ 1 ಕಾಣೆನೇ ಸುಧನ್ವನಂ ಕೊಲೆ ಜಾಣ ತನವನು ತೋರ್ದನಿನ್ನನು ಬಾಣ ತ್ರಾಣವನಣುಗನೆನ್ನೊಳು ಮಾಣು ಶಿವಧನುಭಂಗನಿಪುಣ2 ಮಕ್ಕಳನು ಹಡೆದವರು ಒಮ್ಮನ ದಕ್ಕರೆಯ ಬೀರುತ್ತ ಸಲಹರೆ ಮಕ್ಕಳಾಟಿಕೆ ಮಾಡುವೊಡೆ ನೀ ದಕ್ಕುವರೆ ನಿನ್ನಡಿಯ ದಾಸರು 3 ಸರ್ವಶಕ್ತನು ಆದರೇಂ ಫಲ ಸರ್ವದಾ ಭಕ್ತರಿಗೆ ಕಷ್ಟವೆ ನಿರ್ವಿಕಲ್ಪನೆ ಮರ್ಮವೇತಕೆ ಧರ್ಮವ್ರತ ಪೊರೆ ಜಾಜಿಕೇಶವ 4
--------------
ಶಾಮಶರ್ಮರು
ಏನು ಗಳಿಸಿದ್ಯೊ ಪ್ರಾಣಿ ಜ್ಞಾನಕ ಮಾಡಿ ನೀ ಹಾನಿ ಧ್ರುವ ಶಬ್ಧಜ್ಞಾನದ ಅಂಗಡಿನೀ ಹಾಕಿ ಲುಬ್ದಿಸಿದೊ ಬಲು ಪಾಕಿ ಲಬ್ದಾಲಬ್ಧಿಯು ತಿಳಿಯದೆ ಡೊಂಕಿ ಸ್ತಬ್ಧನಾದ್ಯೊ ವಿಶ ಸೋಂಕಿ 1 ವಿದ್ಯಾ ವ್ಯುತ್ಪತ್ತಿ ತೋರಿ ನೀ ಬಹಳ ಸದ್ಯಮಾಡಿದ್ಯೊ ತಾಳ ಮೇಳ ಸಿದ್ಧಾಂತನುಭವ ನೀ ಮಾಡಿ ಹಾಳ ಕೋಳ 2 ಗಳಿಸುವದೇನೆಂದರಿಯದೇ ಖೂನ ಬಾಳಿ ಬದುಕಿ ಪಡದೇನ ಬೆಳಗು ಬೀರುತಿರೆ ಮಹಿಪತಿ ಗುರುಜ್ಞಾನ ತಿಳಕೊಬಾರದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದು ಬಣ್ಣಿಸುವೆನು ಗುರುವಿನ ನಾನು | ತಾನಂದವರಿಗಿನ್ನು ಸ್ವಾನಂದ ಸುಖವ ನೀಡುವಾ ಪ ತಾಯಿಯಂಬೆನೆ ಮೋಹದೀ | ಬಾಲಕ ಧೃವನಾ | ತಾಯಿಗಾಯ್ದಳೆ, ಸ್ನೇಹದಿ ಜನಕನೆಂಬೆÉನೆ | ನ್ಯಾಯದಿ ಪ್ರಲ್ಹಾದನ ಜನಕ ಕಾಯ್ದನೆ ನೋಡಮ್ಮಾ 1 ಬಂಧುಯಂಬೆನೆ ಜಗದೊಳು ವಿಭೀಷಣನ್ನಾ | ಬಂದು ಕಾಯ್ದನೆ, ಇಳೆಯೊಳು ಆಪ್ತನೆಂಬೆÉನೆ | ಸದು ವಿಗ್ರಹದಿ ಗಜೇಂದ್ರರ ನಾಪ್ತರು ಕಾಯ್ದರೇ 2 ಇಂತು ಸಂಬಂಧ ಸ್ನೇಹದಾ | ಸಾಸಿರ ಮಡಿಯಾ | ಸಂತತ ಕೃಪೆಯಾ ಬೀರಿದಾ | ಮಹಿಪತಿ ಕಾಯಾ | ಪಂಥವರಿಯದಾ ಪರಮ ಭ್ರಾಂತನಾನು | ದ್ಧರಿಸಿದ ನೆನ್ನಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏಸು ಜನ್ಮದ ಸುಕೃತವದು ಬಂದು ಒದಗಿತೋದೇಶಿಕೋತ್ತಮನ ದಯದಿಆಸೆಗಳು ಮರೆಯಾಗಿ ಆಷ್ಟ ಪಾಶಗಳಳಿದುಈಶ ಸರ್ವೇಶನಾಗಿ ಹೋದೆ ಪ ಕಂಗಳ ಮುಚ್ಚಿ ದೇಹದೊಳು ದಿಟ್ಟಿಸಿ ನೋಡೆಮಂಗಳವೆ ತೋರುತಿಹುದು ಅಹುದುತಿಂಗಳಿನ ಕಳೆಯಂತೆ ಬೆಳಕಬೀರುತ ಬೆಳು-ದಿಂಗಳನೆ ಹರಡಿದಂತೆ ಅಂತುಕಂಗೊಳಿಸುತಿಹುದು ಬಗೆಬಗೆಯ ವರ್ಣಛಾಯೆಅಂಗ ವರ್ಣಿಸುವರಾರೋ ಆರೋಬಂಗಾರ ಪುಟದಂತೆ ನಡುಮಧ್ಯೆ ಹೊಳೆಹೊಳೆದುಹಿಂಗದನುದಿನ ತೋರುವ ಗುರುವಾ 1 ಅಮೃತ ಕಳದಿ ಝಳದಿ 2 ನಿತ್ಯವಹ ಪರಮಾತ್ಮ ನಿಶ್ಚಲದಿ ತೋರುತಿದೆಚಿತ್ತವೆಂಬುದು ಸಾಯೇ ಬೇಯೆಮತ್ತೆ ಮನ ದೃಗ್ ದೃಶ್ಯ ಧಾರಣರವರುಎತ್ತ ಹೋದರೋ ಎಲ್ಲರೂಸತ್ಯವಾಗಿಹ ಪರಮ ಬಾಹ್ಯಾಂತರೀಯ ಹೆಸರುಎತ್ತುವರು ಇಲ್ಲದಾಯ್ತು ಹೋಯ್ತುಪ್ರತ್ಯಗಾತ್ಮನು ಚಿದಾನಂದ ಗುರು ತಾನಾದಅತ್ಯುಕ್ತಿ ಹೇಳ್ವುದೇನು ಏನು 3
--------------
ಚಿದಾನಂದ ಅವಧೂತರು
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಓ ದೇವ ನೀನೆಂಥ ಕರುಣಾಳೊ ಮಾದೇವ ನೀನೆಂಥ ಕರುಣಾಳೊ ಪ ಕಾಲನ ಕಾಲಲೊದ್ದು ಬಾಲನಿಗಾಯುಷ್ಯ ಪಾಲಿಸಿದೆ ನೀನೆಂಥ ಕರುಣಾಳೊ 1 ಸುರೇಂದ್ರ ಪ್ರಮುಖರ ಪೊರೆಯಲು ಗರಳವ ಕೊರಳೊಳು ಧರಿಸಿದೆ ಕರುಣಾಳು 2 ಘೋರ ಭವಾಂಬುಧಿ ತಾರಣೋಪಾಯವ ಬೀರಿದೆ ಜಗಕೆಲ್ಲ ಕರುಣಾಳು 3 ಕ್ಷೀರವ ಬೇಡಲು ಕ್ಷೀರೋದಧಿಯನಿತ್ತೆ ಪೋರನಿಗೆ ಇನ್ನೆಂಥ ಕರುಣಾಳು 4 ಶ್ರೀಕಾಂತ ಹಿತ ಸಖ ಶ್ರೀಕಂಠ ನಿನ್ನಂಥ ನಾ ಕಾಣೆ ಧರೆಯೊಳು ಕರುಣಿಗಳ 5
--------------
ಲಕ್ಷ್ಮೀನಾರಯಣರಾಯರು
ಓಂ ನಮೋ ಮಹೀಪತಿ ಸದಾನಂದ ಗುರುಮೂರ್ತಿ | ಸನ್ನುತ ನಿಮ್ಮ ಖ್ಯಾತಿ ಪೊಗಳಲಾಪೆನೆ ಕೀರ್ತಿ ಪ ತನ್ನ ತಾ ಮರೆದವರಾ | ನೀನು ಕೊಟ್ಟು ಎಚ್ಚರಾ | ಮುನ್ನಿ ನಂದದಿ ಮಾಡಿ | ಓಡಿಸಿದೇ ಭವದೂರಾ 1 ಸಹಜ ಬೀರುವ ವಚನಾ | ಅದೇ ಉಪದೇಶ ಜ್ಞಾನಾ| ಇಹ ಪರಕ ನಿಧಾನಾ | ಮಾಡುವದು ಸಾವಧಾನಾ2 ವೇದ ಸಿದ್ಧಾಂತದಲ್ಲಿ | ರಾಜಯೋಗ ಮನೆಯಲ್ಲಿ | ಬೋಧಿಸುವ ವಸ್ತು ನೀನೇ | ಸರಿಗಾಣೆ ನಾನೆಲ್ಲಿ3 ಏನು ಪುಣ್ಯವೋ ಎನ್ನಾ | ಅದೇ ಬಾಲಕ ನಿನ್ನಾ | ತಾನೇನ ಸಾಧುವೆನಗ | ಇರಲು ನಿಮ್ಮ ದಯಾಘನಾ 4 ದಾಸರಾ ದಾಸನೆಂದು | ಇನ್ನು ನೋಡದೆವೆ ಕುಂದು | ಭಾಸಿ ಪಾಲಿಸು ಕೃಷ್ಣಗ ಎಂದೂ | ಕೈಯ್ಯಾ ಬಿಡೆನೆಂದು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡು ಕೌತುಕ ಕಾಯದೊಳಗಿನಾಶ್ರಯ ಸಾಧನ ಕೊಂಡಾಡಲೆಷ್ಟೆಂದು ನಾ ಧ್ರುವ ಏಳು ಮೂರೆರಡು ನಾದಗಳು ಪರಿಪರಿಗಳುಕೇಳಬರುತಲ್ಯದ ತಾಳಮೃದಂಗ ಭೇರಿಗಳು ಸುಫೋಷಗಳು ಕೇಳಗುಡುತಲ್ಯದ 1 ಒಳಗೆ ಕಂಡೆ ನಾ ರಾಶಿ ಬೆಳಗಿನ ಮಳೆ ಮಿಂಚಿನ ತಳದ್ಹಿಡಿದು ತುಂಬೇದ ಕಳೆಕಾಂತಿ ರವಿಕೋಟಿ ಕಿರಣ ತೇಜ:ಸ್ಪುರಣ ಥಳಥಳಗುಡುತ್ಯದ 2 ಮಂಗಳಕರದಾನಂದೋದಯ ಮಹದಾಶ್ರಯ ರಂಗಮಯದೋರುತ್ಯದ ಸಂಗಸುಖ ಬೀರುತ್ಯದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡುಕೊಳ್ಳಿರೋ ಸುಖ ಸ್ವಾತ್ಮವ ಕಂಡುಕೊಳ್ಳಿರೋ ಧ್ರುವ ಕಣ್ಣಿಟ್ಟರ ತಾಂ ಕಾಣಿಸುತದೆ ಚೆನ್ನಾಗನುಭವಕಿದಿರಿಡುತದೆ 1 ಮನವಿಟ್ಟರಲನುಗೂಡುತಲ್ಯದೆ ನೆನೆದರೆ ನಿಜಘನ ನೀಡುತಲ್ಯದೆ 2 ಲಯವಿಟ್ಟರ ದಯಬೀರುತಲ್ಯದೆ ಶ್ರಯ ಸುಖ ಸುರಮಳೆಗರೆಯತಲ್ಯದೆ 3 ಭಾವಕ ಅತಿಸುಲಭವಾಗ್ಯದೆ ಆವಾಗ ತಾನೆಲೆ ನಿಭವಾಗ್ಯದೆ 4 ಮಹಿಪತಿ ಮನೋಹರ ಮಾಡುತಲ್ಯದೆ ಬಾಹ್ಯಾಂತ್ರವು ತಾನೆವೆ ಆಗ್ಯದೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ನನ್ನನು ಕಾಯ್ವನೆಂಬುದ ಕಂಡೆ ಪಾವನನಾದುದಪುಂಡರೀಕದಳಾಯತಾಕ್ಷನೆ ಗಂಡುಮಾಡುವ ಗೂಢವ ಕಂಡೆಕಂಡೆ ಪ.ಮಲಿನವೆಂಬುದು ಮನಕೆ ತೋರಲು ಮಲಿನ ಹೇತುವು ಮೂಡಲುಮಲಿನಕಳುಕುತಲಿದ್ದ ಸಮಯಕೆ ಬಲುಹಿನರಿಕೆಯ ಬೀರಲುಮಲಿನವೇ ಹುಸಿಯೆಂಬ ನಿಶ್ಚಯ ಬಲಿದು ಬಲು ಹುರಿಯಾಗಲುಕಲಕಿ ಸಂಶಯ ಕಡೆಗೆ ಜಾರಲು ನಿಲುಕಿ ನೀನಿದಿರಾಗಲು 1ಶುದ್ಧವೆಂಬುದಶುದ್ಧವೆಂಬುದು ಬುದ್ಧಿಕಲ್ಪಿತಮಾತ್ರವುಇದ್ದು ಸುತ್ತಲು ಈಶನಂತಿರೆ ಹೊದ್ದುವನ್ಯವದಾವದುಶುದ್ಧ ಶ್ರೀಹರಿ ಪೂರ್ಣ ಮಿಕ್ಕಿನ ಬದ್ಧನೆಂಬುದೆ ಭ್ರಾಂತಿಯುಅದ್ವಯಾನಂದಾಬ್ಧಿ ಯೆಂಬೀ ನಿರ್ಧರವ ನೆರೆ ತೋರಲು 2ಅಳುಕದಿರು ನಾ ವಿಶ್ವವಾಗಿಯೆ ಹೊಳೆದು ತೋರಿದೆನೊಬ್ಬನೇಬಳಸಬೇಡತಿಭೀತಿಯೆಂಬುದ ತಿಳಿದು ನೋಡೆಂದರುಹಿದೆಹುಳುಕು ತಾನದು ಹೊಂದದೆಂದಿಗು ಸುಳಿದು ಶುದ್ಧನ ಮಾಡಿದೆಒಳಗೆ ನೀನಿಹೆ ನಲಿದು ತಿರುಪತಿ ನಿಳಯ ವೆಂಕಟನಾಥನೆ 3ಕಂ||ಇಂತೀ ಭಾವನೆಗೈಯುವುದೆಂತೊದಗಿದುದೆನಲು ಸದ್ಗುರುವ ಕರುಣವು ತಾಬಂತೆನಗೆ ತಿರುಪತೀಶನೆಸಂತೋಷದಿ ವಾಸುದೇವ ಯತಿಯಾರ್ಗೀಯಲ್‍ಓಂ ದಯಾನಿಧಯೇ ನಮಃ
--------------
ತಿಮ್ಮಪ್ಪದಾಸರು
ಕಂಡೆಯಾ - ಮನವೇ - ನೀನಿಂದು - ಕಂಡೆಯಾ ಪ ಕಂಡೆಯ ಮನವೆ ನೀನಿಂದು - ತನ್ನತೊಂಡರ ಸಲಹುವ ಬಂಧು - ಆಹಮಂಡೆಯ ಬೋಳಿಸಿ | ಪುಂಡರೀಕಾಕ್ಷನೆಹಿಂಡು ದೈವಂಗಳ | ಗಂಡನೆಂದೇಳ್ವರ ಅ.ಪ. ಪಾದ ಸೊಬಗು - ವೇಗತೆರಳುತ್ತಿದ್ದರದು ಮೆಲ್ಲಗು - ನಖವರರತ್ನ ಕೆಂಪಿನ ಬೆಡಗು - ಊರುಕರಿಯ ಸೊಂಡಿಲಿನಂತೆ ಬೆಳಗು _ ಆಹ ಪರಿಶುದ್ದ ಕಟಿಯಲ್ಲಿ | ಸುರಚಿರಾಂಬರನುಟ್ಟುವರಕಂಠ ಫಣೆಯುದರ | ತ್ರಿವಳಿಯಂ ಮೆರೆವರ 1 ಮೃದುರೋಮ ಶಾಲು ಪ್ರಾವರಣ - ನೋಡಲದು ಭಾಸ ಉದಯಾರ್ಕ ವರಣ - ಪೋಲ್ವದದು ಮೇರು ಗಿರಿಯಂತೆ - ವರ್ಣ ನೋಡುಎದೆಯ ವಿಸ್ತರಾ ಭರಣ - ಆಹಸದಮಲುನ್ನತಾಂಸ | ಉರುಟು ನೀಳದ ತೋಳುಪದುಮ ರಾಗದ ಭಾಸ | ಧ್ವಜರೇಖೆ ಹಸ್ತವ 2 ಮೋದ ಪೋಲ್ವ - ಮತ್ತೆಮಂದ ದೂರನು ಅತಿ ಚೆಲ್ವಾ - ಆಹಕುಂದಾಭ ರದನವು | ಸುಂದರಾರುಣ ಓಷ್ಠಮಂದಜೇಕ್ಷಣ ನೋಟ | ದಿಂದ ಬೀರುವ ಮುದ 3 ಕಿವಿಗಳಲೊಪ್ಪುವ ತುಳಸೀ - ಮೂರುಭುವನ ಭೂತಿ ಭ್ರೂವಿಲಾಸಿ - ಮತ್ತೆಅವನೆ ಅಭೂತಿದನೆನಿಸೀ - ಚೆಲ್ವದವಡೆಯಿಂದೊಪ್ಪುವ ಶಿರಸಿ - ಆಹಅವಯವ ಲಕ್ಷಣ | ಪ್ರತಿ ಪ್ರತಿ ಜನ್ಮದಿವಿವರವೀತೆರವೆಂದು | ವಿಭುದರು ತಿಳಿದರು 4 ಈ ವಿಶ್ವವೆಲ್ಲವೂ ಸತ್ಯ - ಮತ್ತೆಸಾರ್ವ ಭೇದವು ತಾರತಮ್ಯ - ವಿಧಿಪೂರ್ವಕಲ್ವೊರೆಯುತ್ತ ದಿವ್ಯ - ತತ್ವಸಾರ್ವವ ಪೇಳುತ್ತ ಭವ್ಯ - ಆಹಕಾವ ಕೊಲ್ಲುವ ಗುರು ಗೋವಿಂದ ವಿಠಲನೆಸರ್ವೋತ್ತುಮಾನೆಂದು | ಈ ವಿಧ ಮೆರೆವರ 5
--------------
ಗುರುಗೋವಿಂದವಿಠಲರು
ಕಮಲಕಮಲಾಧರನೆ ಕಮಲಭವ ವಂದಿತನೆ ಕಮಲ (?) ನುತನೇ ಕಮಲಶತ ಹಿತಕರನೆ ಪ ಕಮಲಬಾಣನ ಪಿತನೇ ಕಮಲದಳ ಲೋಚನನೇ ಕಮನೀಯನುಪ್ಪವಡಿಸಾ ಹರಿಯೇ ಅ.ಪ ಸಲಹಲೀ ಲೋಕಗಳ ಬಹುವೆನಿಪ ದಾನವರ ಗೆಲಿದು ಪಾಲ್ಗಡಲ ನಡುವಲದ ನೆಲೆವನೆಯ ತಲೆವಣಿಯ ಕಾಂತಿಗಳ ಮಿಗೆ ಜ್ವಲಿಪ ಬೆಳಗುಗಳಿಂದ ಫಲಿತ ಪುಳಕಗಳು ಮಿಗೆ ಬಲಿದ ನಿದ್ರೆಗಳ ಶ್ರೀಲಲನೇಶನುಪ್ಪವಡಿಸ1 ಸಿರಿ ಮುರಿಯುತಿದೆ ಶರಧಿಯೇಳ್ಗೇ ಉದಯಕೆ ಕರೆಯುತಿದೆ ಗಿಳಿವಿಂಡು ಕೊರುಗುತಿವೆ ಕೋಕಗ ಗರೆಯುತಿದೆ ಕೋರಕಂ ವೋಲಗಕೆ ಕರುಣಾಳು ಉಪ್ಪವಡಿಸಾ 2 ತೋರುತಿದೆ ಇನಬಿಂಬ ದೂರುತಿದೆ ಕುಮುದ ಸೊಂ ಪೇರುತಿದೆ ವನರುಹಂ ಬೀರುತಿದೆ ಕಡು ಚೆಲ್ವ ಸೋರುತಿದೆ ಮಕರಂದ ತೋರುತಿದೆ ತನಿಗಂಪ ಪಾರುತಿವೆÉ ಭ್ರಮರಂಗಳೂ ಚೀರುತಿವೆ ಪಕ್ಷಿಗಳು ಮೀರುತಿವೆ ಜನರವಂ ಪೂರ್ಣಧನು ಉಪ್ಪವಡಿಸಾ3 ಆಡುವರೆ ನರ್ತನವ ಪಾಡುವರೆ ಗಾನಗಳ ನೀಡುವರೆ ಪನ್ನೀರ ತೀಡುವರೆ ಸುರಭಿಗಳ ಮಾಡುವರೆ ಸಿಂಗರವ ಪೂಡುವರೆ ಹಾರಗಳನೂ ಕೋಡುವರೆ ಕಾಣಿಕೆಯ ಬೇಡುವರೆ ಸಂಪದವ ಸೂಡುವರೆ ಕುಸುಮಗಳ ನೋಡುವರೆ ಸಮಯಗಳ ಗಾಡಿಮಿಗಲುಪ್ಪವಡಿಸಾ 4 ದೇವ ಸಂಸ್ತುತಲೀಲ ದೇವ ಮುನಿನುತ ಶೀಲ ದೇವತತಿಗನುಕೂಲ ದೇವರಿಪುವನಜಾಲ ಚೇಲ ದೇವ ಗುಣಗಣಜಾಲ ದೇವಪುರಿ ಶ್ರೀಲೋಲ ದೇವ ನಲಿದುಪ್ಪವಡಿಸಾ 5
--------------
ಕವಿ ಲಕ್ಷ್ಮೀಶ