ಒಟ್ಟು 1406 ಕಡೆಗಳಲ್ಲಿ , 77 ದಾಸರು , 499 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಕ್ಕೊ ನಮ್ಮಸ್ವಾಮಿ ಸಕಲಾಂತರ್ಯಾಮಿ ಪ್ರಕಟ ಸಹಸ್ರನಾಮಿ ಭಕ್ತಜನ ಪ್ರೇಮಿ ಧ್ರುವ ಒಳಗೆ ನೋಡಿ ನಿಮ್ಮ ಹೊಳೆವ ಪರಬ್ರಹ್ಮ ತಿಳಿಯಲಿಕ್ಕೆ ನೋಡಿವರ್ಮ ಅಳಿಯಬೇಕು ಹಮ್ಮ 1 ಸ್ವಸ್ತ ಮನಮಾಡಿ ವಸ್ತು ಇದೇ ನೋಡಿ ಅಸ್ತವ್ಯಸ್ತ ಬ್ಯಾಡಿ ಸಾಭ್ಯಸ್ತ ನಿಜಗೂಡಿ 2 ಬಿಟ್ಟು ನಿಜಖೂನ ಕೆಟ್ಟು ಹೋಗುದೇನ ಗುಟ್ಟು ಮಹಿಪತಿಗಿದೆ ಮುಟ್ಟಿ ಗುರುಙÁ್ಞನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಟ್ಹಾಂಗಿರಬೇಕು ಮಾಂ ಇಟ್ಹಾಂಗಿರಬೇಕು ಸೃಷ್ಟೀಶ ನಮ್ಮ ಧ್ರುವ ಸಕಳವೆಲ್ಲ ಹರಿ ಸೂತ್ರವು ಇರಲಿಕ್ಕೆ | ವಿಕಳಿತಗೊಂಬುವದ್ಯಾಕೆ ಮಾಂ | ಅಖಿಳ ಭುವನಕೆಲ್ಲ ಸಾಕಿ ಸ - | ಹಕಾರ ನೊಬ್ಬ ಶ್ರೀಪತಿಯ ಮಾಂ | 1 ಯಂತ್ರಜೀವ ತಂತ್ರ ಶಿವ ಇರಲಿಕ್ಕೆ ಸ್ವ | ತಂತ್ರವೆ ನಾನೆಂಬುದ್ಯಾತಕೆ ಮಾಂ | ಚಿತ್ರ ವಿಚಿತ್ರವು ದೋರುವ ಸೂತ್ರವು | ಕರ್ತು ಸದ್ಗುರು ಸುತಂತ್ರವು ಮಾಂ 2 ಅಂತ್ರ ಬಾಹ್ಯ ವ್ಯಾಪಕನಾಗಿರಲಿಕ್ಕೆ | ತಂತ್ರ ಮಂತ್ರಗಳ್ಯಾತಕೆ ಮಾಂ | ಜಂತ್ರ ಮಾಡಿ ಜನ್ಮ ಮರಣದ ತಿರಿಹುವಾ | ಗಂತ್ರವು ಎಂದಿಗೆ ತಿಳಿಯದು ಮಾಂ 3 ಇಟ್ಹಾಂಗ ಇರಬೇಕು ಕೊಟ್ಹಾಂಗ ಕೊಂಡಿನ್ನು | ತುಟ್ಟಿಲೆ ಮಿಸುಕದೆ ಗುಟ್ಟಿಲೆ ಮಾಂ | ಹೊಟ್ಟಿಗಾಗಿ ಅಷ್ಟು ಸಾಯಾಸ | ಬಟ್ಟರೆ ಸಾರುಸದೇ ಅಟ್ಟಿಸುವದು ಮಾಂ 4 ಇಟ್ಹಾಂಗ ಇರೋ ಮಹಿಪತಿ ಸೃಷ್ಟಿಯೊಳಿನ್ನು | ಘಟ್ಟಿಗೊಂಡ ಗುರುಪಾದವು ಮಾಂ | ಮುಟ್ಟಿ ಮುದ್ರಿಸಿ ಕೃಪಾದೃಷ್ಟಿಲೆ ಹೊರೆವನು | ಕೊಟ್ಟು ನಿನಗೆ ಸ್ವಾನುಭವವು ಮಾಂ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇತರ ಗುರುಗಳ ಸ್ತುತಿ ಶ್ರೀ ನಾರದರ ಸ್ತುತಿ 7 ಇದೇ ಪೇಳಿ ಪೋದರು ವಿಧುವದನೆ ನಮ್ಮ ಬುಧನುತ ಪದದ ನಾರದರು ಈ ಜಗದಿ ಬಂದು ಪ ಸಿರಿ ಅರಸನೆ ಈ ಧರೆಯೊಳಗುತ್ತಮ ಮರುತ ದೇವರೆ ಜಗದ್ಗುರುಗಳೆಂದು ಪಂಚಭೇದ ಜ್ಞಾನಶೀಲನೆ ಸುರಲೋಕವಾಸಿ ಶ್ರೀ ಹರಿ ಪ್ರೇಮ ಪಾತ್ರನೆಂಬೊದೆ ಪೇಳಿ 1 ಜರದೂರ ನರಹರಿ ಧರೆಯೊಳು ವ್ಯಾಪಿಸಿ ಇರಲು ತ್ರಿಗುಣ ಕಾರ್ಯವಾಹವೆನ್ನುತಾ ಪರತಂತ್ರ ಜೀವವೆಂದರಿದು ಪಾಪ ಪುಣ್ಯ ಸರಸಿಜನಾಭನಿಗರ್ಪಿಸಿ ಒಟ್ಟಿಗೆ ಬರಬೇಕು ಯೆಂದು 2 ಸಿರಿಗೋವಿಂದ ವಿಠಲ ವಿಶ್ವವ್ಯಾಪಕ ಗಿರುವವು ಎರಡು ಪ್ರತಿಮೆ ಜಗದಿ ಚರ ಅಚರಗಳನ್ನು ಅರಿತು ಮಾನಸದಲ್ಲಿ ಹರಿ ಪೂಜೆ ಮಾಡಿ ಸೇರಿರಿ ವೈಕುಂಠವೆಂಬೊದೆ ಪೇಳಿ ಪೋದರು 3
--------------
ಅಸ್ಕಿಹಾಳ ಗೋವಿಂದ
ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ ಪ ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನಬೇಸರಿಸಿ ಬೇಡ ಬಂದುದಿಲ್ಲವಾಸುದೇವನೆ ನಿನ್ನ ದಾಸರ ದಾಸರದಾಸರ ದಾಸ್ಯವ ಕೊಡು ಸಾಕೆಂದರೆ 1 ಸತಿಸುತರುಗಳ ಸಹಿತನಾಗಿ ನಾಹಿತದಿಂದ ಇರಬೇಕೆಂಬೊದಿಲ್ಲಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನಕಥಾಮೃತವನೆ ಕೊಡು ಸಾಕೆಂದರೆ 2 ಸಾಲವಾಯಿತೆಂದು ಸಂಬಳ ಎನಗೆಸಾಲದೆಂದು ಬೇಡ ಬಂದುದಿಲ್ಲನಾಲಗೆಯಲಿ ನಿನ್ನ ನಾಮದುಚ್ಚರಣೆಯಪಾಲಿಸಬೇಕೆಂದು ಬೇಡಿದೆನಲ್ಲದೆ3 ಒಡವೆಗಳಿಲ್ಲ ಒಡ್ಯಾಣಗಳಿಲ್ಲೆಂದುಬಡವನೆಂದು ಬೇಡ ಬಂದುದಿಲ್ಲಒಡೆಯ ನಿನ್ನಡಿಗಳಿಗೆರಗುವುದಕೆ ಮನಬಿಡದಿಹದೊಂದನು ಕೊಡು ಸಾಕೆಂದರೆ4 ಆಗಬೇಕು ರಾಜ್ಯಭೋಗಗಳೆನಗೆಂದುಈಗ ನಾನು ಬೇಡ ಬಂದುದಿಲ್ಲನಾಗಶಯನ ರಂಗವಿಠಲ ನಾ ನಿನ್ನ ಬಾಗಿಲ ಕಾಯುವ ಭಾಗ್ಯ ಸಾಕೆಂದರೆ5
--------------
ಶ್ರೀಪಾದರಾಜರು
ಇಂದರೆ ರಮಣಾ ಇಟ್ಟಾಂಗಿರಬೇಕು ಪ ಒಮ್ಮಿಗೆ ಕದಶನ ಶಾಖಾ ಆಹಾರವ ನೀಡುವನು ಒಮ್ಮಿಗೆ ಷೆಡ್ರಸದ್ದನ್ನವ ಸಾರುಣಿಸುವನು 1 ಒಮ್ಮಿಗೆ ಜೀರ್ಣ ಕಂಥಾಧಾರಿಯೆನಿಸುವನು| ಒಮ್ಮಿಗೆ ದಿವ್ಯಾಂಬರಗಳ ನುಡಿಸಿ ನೋಡುವನು 2 ಒಮ್ಮಿಗೆ ಧರಿಯಲಿ ತೋಳತಲೆದಿಂಬದಲಿಡುವಾ| ಒಮ್ಮಿಗೆ ಪರ್ಯಾಂಕಾಸನ ಸಂಪದ ಕೊಡುವಾ 3 ಒಮ್ಮಿಗೆ ಕವಡಿ ಲಾಭಕ ಕೃತ-ಕೃತ್ಯೆಯೆನಿಸುವನು ತಂದೆ ಮಹಿಪತಿ-ಕಂದಗ ಸಾರಿದ ನಿಜ ಖೂನಾ 4 ತಂದೆ ಮಹೀಪತಿ-ಕಂದಗ ಸಾರಿದ ನಿಜ ಖೂನಾ| ದ್ವಂದ್ವ ಗೆಲಿದು ಸ್ವಾನಂದದಲಿರುವವನೇ ಜಾಣಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದಿರಾ ಪಾಲಿಸು ಎನ್ನ ಇಂದಿರಾ ಪ ಇಂದಿರಾ ದೇವಿಯೆ ನಿನ್ನ | ಪಾದಪೊಂದಿದೆ ಸಲಹಬೇಕೆನ್ನಾ | ಆಹಕಂದರ್ಪ ಇಂದ್ರ ಫಣೀಂದ್ರ ಗರುಡ ಕಂದುಕಂಧರ ಬ್ರಹ್ಮಾದಿ ವಂದ್ಯಳೆ ಪಾಲಿಸು ಅ.ಪ. ಕೃತಿ ಶಾಂತಿ | ದುರ್ಗೆಭೂಮಿ ಶ್ರೀದೇವಿ ಜಯಂತಿ | ಲಕ್ಷ್ಮೀರಮೆ ದಕ್ಷಿಣೆ ಗುಣವಂತಿ | ಸತ್ಯಭಾಮೆ ರುಕ್ಮಿಣಿ ಮಹಾಕಾಂತಿ | ಆಹಈ ಮಹಾನಂತ ರೂಪ ನಾಮಗಳುಳ್ಳಕೋಮಲ ಗಾತ್ರಿಯೆ ಕಾಮಜನನಿ ಕಾಯೆ 1 ಶ್ರೀಭಾಗ ಮಹಾ ಪ್ರಳಯದಲ್ಲಿ | ಪದ್ಮನಾಭಾಗೆ ಬಹು ಭಕ್ತಿಯಲ್ಲಿ | ದಿವ್ಯಆಭರಣಗಳಾಕಾರದಲ್ಲಿ | ಮಿಕ್ಕವೈಭವನೇಕ ರೂಪಾದಲ್ಲಿ | ಆಹಸ್ವಾಭಿಮಾನದಿ ಬಹು ಶೋಭನ ಪೂಜೆಯಲಾಭಗಳೈದಿದ ಶೋಭನವಂತಳೆ 2 ದೇಶಕಾಲಾದಿಗಳಲ್ಲಿ | ಜೀವರಾಶಿ ವೇದಾಕ್ಷರದಲ್ಲಿ | ಇದ್ದುವಾಸುದೇವನ ಬಳಿಯಲ್ಲಿ | ಸರಿಸೂಸಿ ವ್ಯಾಪ್ತಿ ಸಮದಲ್ಲಿ | ಆಹಲೇಸಾಗಿ ಒಪ್ಪುತ್ತ ಈಶ ಕೋಟಿಯೊಳುವಾಸಾಳೆ ಎನ್ನಭಿಲಾಷೆ ಸಲ್ಲಿಸಬೇಕು3 ಭವ ಬಂಧಾ | ಆಹನೀನೆ ಕಳೆದು ದಿವ್ಯ ಜ್ಞಾನ ಭಕುತಿಯಿತ್ತುಪ್ರಾಣಪತಿಯ ಪಾದವನ್ನು ತೋರಿಸಬೇಕು 4 ನಿತ್ಯ ಭಾಗ್ಯವು ನಿನಗೊಂದೆ | ಅಲ್ಲರತ್ನಾಕರನು ನಿನ ತಂದೆ | ತಾಯಿರತ್ನಗರ್ಭಳು ಕೇಳು ಮುಂದೆ | ಪತಿಗತ್ಯಂತ ಪ್ರಿಯಳಾದೆ ಅಂದೆ | ಆಹಸತ್ಯಬೋಧರು ಮಾಳ್ಪ ಅತ್ಯಂತ ಪೂಜೆಯಿಂಯುಕ್ತೆ ಶಿರಿಯೆ ನಿನಗೆತ್ತ ಕತ್ತಲು ಕಾಣೆ 5 ಲೋಕ ಜನನಿಯು ಎಂದು ನಿನ್ನಾ | ಕೀರ್ತಿಸಾಕಲ್ಯವಾಗಿದೆ ಘನ್ನಾ | ಎನ್ನಸಾಕಲಾರದೆ ಬಿಡಲಿನ್ನಾ | ಮುಂದೆಯಾಕೆ ಭಜಿಸುವುದು ನಿನ್ನಾ | ಆಹಸಾಕಾರವಾಗಿನ್ನು ಬೇಕಾದ ವರಗಳನೀ ಕರುಣಿಸಿ ಎನ್ನ ಜೋಕೆ ಮಾಡಲಿ ಬೇಕು 6 ಆವ ಜನ್ಮದ ಪುಣ್ಯಫಲದಿ | ನಿನ್ನಸೇವೆ ದೊರಕಿತೊ ಈ ಕ್ಷಣದಿ | ಎನಗೀವ ಭವ್ಯ ಕೇಳು ಮನದಿ | ಆಹಶ್ರೀ ವ್ಯಾಸ ವಿಠಲನ್ನ ಸೇವಿಪ ಯತಿಗಳ ಸಹವಾಸವನೆ ಇತ್ತು ಭಾವ ಶುದ್ಧನ ಮಾಡು 7
--------------
ವ್ಯಾಸವಿಠ್ಠಲರು
ಇಂದಿರೆ ಅರಸ ಚಂದ್ರಮಂಡಲಮಂದಿರಾಖಿಳವಂದ್ಯ ಹಯಮುಖಎಂದೆಂದೆನ್ನ ಮನದಿಂದಗಲದಿರುಮಂದರಾದ್ರಿಧರ ಪ. ತುಂಗಮಹಿಮ ತುರಂಗವದನ ಶು-ಭಾಂಗ ರಿಪುಕುಲಭಂಗ ಸುಜನರಸಂಗ ಎನ್ನಂತರಂಗ ಮಲಿನವಹಿಂಗಿಸುವುದೆಂತೊಮಂಗಳಾಬ್ಧಿತರಂಗದುಬ್ಬಿಗೆತಿಂಗಳೆನಿಸುವ ಅಂಗಜನ ತಂದೆರಂಗ ನಿನ್ನ ಪಾದಕೆಂಗಮಲದಲ್ಲಿಭೃಂಗನಪ್ಪುದೆಂತೊ 1 ವಾರಿಜಾಕ್ಷ ಮುರಾರಿ ಮದವೆಂಬೋಮಾರಿ ಮುಸುಕಿತು ಸಾರಿ ಮತ್ಸರಮಾರನೊಡಗೂಡಿ ದಾರಿ ತಪ್ಪಿಸಿಗಾರುಮಾಡಿತೆನ್ನ ನಾ-ನಾರೆ ಕ್ರೋಧಮಹೋರಗನ ವಿಷ-ಧಾರೆಗೆ ಭಯಕಾರಿ ಹರಿ ನಿನ್ನಚಾರುಚರಣವ ಸಾರಿದೆನಿಂದುತೋರಿ ಸಲಹಬೇಕು 2 ಧsÀನ್ಯ ಸುರರಜೀವನ್ನ ಕರುಣಸಂ-ಪನ್ನ ನಿತ್ಯಪ್ರಸನ್ನ ಚಿನುಮಯಪನ್ನಗಾರಿವಾಹನ್ನ ಶಶಿಸಮ-ವರ್ನ ಹಯವದನನಿನ್ನ ಪಾದಪಾವನ್ನಸುರತರು-ವಿನ್ನ ನೆಳಲೊಳಿಟ್ಟೆನ್ನ ಸಲಹಬೇ-ಕನ್ಯಥಾ ಗತಿಶೂನ್ಯ ನಾನೆಲೊಪೂರ್ಣಪುರುಷರನ್ನ 3
--------------
ವಾದಿರಾಜ
ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ ಧ್ರುವ ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸಾಧಿಸಿನೋಡಿ ಮನ ಉನ್ಮನÀಮಾಡಿ ಘನಸುಖ ಭೇಧಿಸಿದರ ಭಾಸುತದೆ ತನ್ನೊಳು ತಾನೆ ಕೌತುಕಧ್ರುವ ನೋಡಿ ನೋಡಿ ಖೂನ ಅರುಹು ಇಲ್ಲದೆ ಜನದೊಳು ಬರುದೆ ಹೇಳ್ಯಾಡುದೇನ ನಿರ್ವಿಕಲ್ಪನ ನಿಜನೆಲೆನಿಭವರಿತು ನೋಡಿ ಸ್ಥಾನ ಸರ್ವಸಾಕ್ಷಿ ಸರ್ವಾತೀತವೆಂಬ ವಸ್ತು ನೋಡಿ ಪೂರ್ಣ 1 ಕಣ್ಣಿನ ಕೊನೆ ಮುಟ್ಟಿ ಕರಗಿ ಮನವು ನೋಡಿ ಪೂರ್ಣ ಬೊಧ ಸಣ್ಣ ದೊಡ್ಡವರೊಳಗಿದೆ ಒಂದು ಸಾರುತಿದೆ ವೇದ ಧನ್ಯ ಧನ್ಯಗೈಸುವ ನಿಜ ಪುಣ್ಯ ಗುರುಪಾದ ಚನ್ನಾಗ್ಯನುಭವದಿಂದ ನೋಡಲಿಕ್ಯಾಗದು ಸ್ವಾದ 2 ಸುರಿಮಳಿಗರೆವುತಲ್ಯದೆ ಸ್ವಸುಖದಾನಂದೊ ಬ್ರಹ್ಮ ತೆರೆತಿಳಿಯಲಿಕ್ಕೆ ಗುರು ಶರಣ ಹೋಗಬೇಕು ಇದೇ ವರ್ಮ ಹರುಷಗೈಸಿದ ನೋಡಿ ಪತಿತಪಾವನ ಸದ್ಗುರು ನಮ್ಮ ತರಳ ಮಹಿಪತಿಗಿದೆ ನಿತ್ಯಭಿನವದ ನೋಡಿ ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದ್ದರಿರಬೇಕು ಅನುದಿನಾ | ಒಳ್ಳೆವರ ಸಹವಾಸಾ ಪ ಅಂಗಸಂಗಗಳಿಂದ | ಮಂಗಳೋತ್ಸಾಹವಾಗಿ | ಕಂಗಳಿಗಿದಿರಿಡುವದು ಉಲ್ಹಾಸಾ1 ಸಾರಿ ಬೀರಿ ಬೋಧವಾ | ದಾರಿದೋರಿ ಭಕ್ತಿಯಾ | ದೂರ ಮಾಡುವರು | ಭವಭಯ ಕ್ಲೇಶಾ 2 ಗುರುವರ ಮಹಿಪತಿಸುತಪ್ರಭು ಸ್ಮರಣೆಯಾ | ಮರಹು ಮರೆಸುವರದರುದ್ದೇಶಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು ಜಲದೊಳಗಿದ್ಹಾಂಗೆ ಧ್ರುವ ನಡಿನಡಿಯಬೇಕ್ಹೀಂಗೆ ತಡಿಯೊಳರಿಬಿಡದ್ಹಾಂಗೆ ನುಡಿನುಡಿಯಬೇಕು ಹರಿನುಡಿಸಿದ್ಹಾಂಗೆ ಪಡೆದರಿದೇ ಪಡಿಯಬೇಕು ಹರಿ ಒಡಲ ಹುಗುವ್ಹಾಂಗೆ ಅಡಿಗಡಿಗೆ ಹರಿಕೂಡಿ ಬಿಡದಗ್ಹಲದ್ಹಾಂಗೆ 1 ಇಡಗಿ ಇಡಬೇಕ್ಹಿಂಗೆ ಇಡಗರಿಗುಡಿಸಿದ್ಹಾಂಗೆ ತುಡಗಿ ತುಡಬೇಕ್ಹೀಂಗೆ ತುಡಮಾಡಿಸದ್ಹಾಂಗೆ ಉಡಗಿ ಉಡಬೇಕ್ಹೀಂಗೆ ಉಡಿಗರಿಗುಡಿಸಿದ್ಹಾಂಗೆ ಮುಡಗಿ ಮುಡಿಬೇಕ್ಹಾಂಗ್ಹರಿಗೆ ಮುಡಿಸಿದ್ಹಾಂಗೆ 2 ಉಂಡರುಣಬೇಕ್ಹೀಂಗೆ ಉಂಡದರಿಗುಣಸಿದ್ಹಾಂಗೆ ಕೊಂಡುದಕೋ ಹರಿಗೆ ಕೊಡಿಸಿದ್ಹಾಂಗೆ ಮಂಡಣಿಯ ಮಾಡ್ಹೀಂಗೆ ಹರಿಗೆ ಮಂಡಿಸಿದ್ಹಾಂಗೆ ಕೊಂಡು ಕೊಂಬುದು ಹರಿಕಂಡು ಒಲುವ್ಹಾಂಗೆ 3 ಮಲಗಿ ಏಳುವದ್ಹೀಂಗೆ ಮಲಗರಿಗೇಳಿಸಿದ್ಹಾಂಗೆ ತಿಳವು ತಿಳವದು ಹರಿ ತಿಳಿಸಿದ್ಹಾಂಗೆ ಸುಳವು ಸುಳವರು ಹರಿಸುಳಸ್ಯಾಡಿದ್ಹಾಂಗೆ ಒಲವು ಮಾಡುವದ್ಹೀಂಗೆ ಹರಿಯ ಒಲಿವಾದ್ಹಾಂಗೆ 4 ರತಿಪಿಡಿದು ಹೀಂಗೆ ಹರಿಗತಿಯಾಗುವ್ಹಾಂಗೆ ಅತಿಹರುಷ ಬಡು ಹರಿನೋಡುವ್ಹಾಂಗೆ ಸಥಿಯ ಪಡೆದವುದು ಹೀಂಗರಿಯು ಸಥಿನಡಿಸಿದ್ಹಾಂಗೆಸ್ತುತಿಮಾಡುವ ಮಹಿಪತಿ ಪ್ರತಿಗಾಣದ್ಹಾಂಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದ್ದರೆ ಹೀಗೆ ಇರಬೇಕು ಇಲ್ಲದಿದ್ದರೆ ಕಾಯವ ಬಿಡಬೇಕು ಶುದ್ಧ ಚಿತ್ತವಾಗಿ ಹೃದಯದೊಳಿದ್ದ ವಸ್ತುವನ್ನು ನಿನ್ನ ಬುದ್ಧಿಯಿಂದ ನೀನೆ ತಿಳಿಯುತ್ತಿದ್ದು ಜೀವನ್ಮುಕ್ತನಾಗಿ ಪ ಕಲ್ಲು ಮರಳು ಕಾಷ್ಠತರುಗಳಲ್ಲಿ ಗಿರಿಗಳಲ್ಲಿ ಚರಿಸುವ ಹುಲ್ಲೆ ಕರಡಿ ವ್ಯಾಘ್ರ ಸಿಂಹದಲ್ಲಿ ಪಕ್ಷಿ ನಾನಾಮೃಗ ಗಳಲ್ಲಿ ವಸ್ತುವೊಬ್ಬನಲ್ಲದಿಲ್ಲವೆಂದು ಭಾವಿಸುತ್ತ 1 ದ್ರಷ್ಟವಾಗಿ ತೋರ್ಪುದೆಲ್ಲ ನಷ್ಟವಾಗಿ ಪೋಪುದೆಂದು ದಿಟ್ಟನಾಗಿ ತಿಳಿದುಜ್ಞಾನ ದೃಷ್ಟಿಯಿಂದಲೆ ದುಷ್ಟಜನರ ಸಂಗವನ್ನು ಬಿಟ್ಟು ಅರಿಗಳರುವರನ್ನು ಕುಟ್ಟಿ ಕೆಡಹಿ ಆಶಪಾಶವೆಂಬ ಹಗ್ಗವನ್ನು ಹರಿದು 2 ಗೇರು ಹಣ್ಣಿನ ಬೀಜ ಹೊರಸಾರಿ ಇರ್ದವೊಲು ಸಂ ಸಾರವೆಂಬ ವಾರಿಧಿಯೊಳು ಕಾಲಗಳೆಯುತ ನೀರ ಮೇಲಕಿದ್ದ ನಳಿನದಂತೆ ಹೊರಗೆ ಬಿದ್ದು ಬಕನ ಚಾರು ಚರಣ ಸ್ಮರಣೆಯಿಂದ 3
--------------
ಕವಿ ಪರಮದೇವದಾಸರು
ಇಂದ್ರರೊ ದೇವೇಂದ್ರರೊಚಂದ್ರನಂತೆ ಹೊಳೆಯುತ ಬಂದರೈವರು ಪ. ರಾಮ ಪಾಂಡವರಿಗೆ ಕ್ಷೇಮಾಲಿಂಗನಕೊಟ್ಟುಪ್ರೇಮದಿ ಕೈಯ ಹಿಡಿದನುಪ್ರೇಮದಿ ಕೈ ಹಿಡಿದು ಮಾತಾಡಿದಸ್ವಾಮಿ ಸನ್ನಿಧಿಗೆ ಬರಬೇಕು 1 ನೊಸಲಲ್ಲೆ ಕಸ್ತೂರಿ ಎಸೆವುತ ಸಂಪಿಗೆಕುಸುಮದ ಮಾಲೆ ಅಲವುತ ಕುಸುಮದ ಮಾಲೆ ಅಲವುತ ಪ್ರದ್ಯುಮ್ನವಸುಧಿಪಾಲಕರ ಕರೆದನು2 ದುಂಡು ಮುತ್ತುಗಳಿಟ್ಟು ಪೆಂಡೆ ಸರ ಹಾಕಿಪುಂಡರೀಕಾಕ್ಷ ಕುಳಿತಿದ್ದಪುಂಡರೀಕಾಕ್ಷ ಕುಳಿತಿದ್ದ ಚರಣಕ್ಕೆಪಾಂಡವರು ಬಂದು ಎರಗಿದರು3 ರನ್ನ ಮಾಣಿಕ ಬಿಗಿದ ಹೊನ್ನ ಮಂಚದ ಮೇಲೆ ಪನ್ನಂಗಶಯನ ಕುಳಿತಿದ್ದಪನ್ನಂಗಶಯನ ಕುಳಿತಿದ್ದ ಚರಣಕ್ಕೆಸುಭದ್ರೆ ಬಂದು ಎರಗಿದಳು 4 ಮಿಂಚಿನಂತೆ ಹೊಳೆಯುತ ಪಂಚಬಾಣನಪಿತ ಮಂಚದ ಮೇಲೆ ಕುಳಿತಿದ್ದಮಂಚದ ಮೇಲೆ ಕುಳಿತಿದ್ದ ಚರಣಕ್ಕೆಪಾಂಚಾಲೆ ಬಂದು ಎರಗಿದಳು5 ಸೂಸು ಮಲ್ಲಿಗೆ ಹೂವ ಹಾಸಿದ ಮಂಚದಿವಾಸುಕಿಶಯನ ಕುಳಿತಿದ್ದವಾಸುಕಿಶಯನ ಕುಳಿತಿದ್ದ ಚರಣಕ್ಕೆಆಶೇಷ ಜನರೆಲ್ಲ ಎರಗಿದರು6 ಸ್ವಾಮಿ ರಾಮೇಶನು ಕ್ಷೇಮ ಕುಶಲವ ಕೇಳಿಬ್ರಾಹ್ಮಣರ ದಯವು ನಿಮಗುಂಟು ಬ್ರಾಹ್ಮಣರ ದಯವು ನಿಮಗುಂಟು ಎನುತಲೆಸ್ವಾಮಿ ಶ್ರೀಕೃಷ್ಣ ನುಡಿದನು7
--------------
ಗಲಗಲಿಅವ್ವನವರು
ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು