ಒಟ್ಟು 51 ಕಡೆಗಳಲ್ಲಿ , 29 ದಾಸರು , 47 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಥಳವಲ್ಲದ ಸ್ಥಳದಲ್ಲಿ ಕಸ್ತೂರಿಯನಿಟ್ಟ ಬ್ರಹ್ಮಬಳಿಕ ಬೈದರೆ ವಿವೇಕವಹುದೇ ಎಲೆ ತಮ್ಮಪಶೀಲಮೃಗ ನಾಭಿಯಲಿ ಕಸ್ತೂರಿಯನಿಡುವುದುಖೂಳರ ಜಿಹ್ವೆಯಲಿ ಅದನಿಡಲು ನೀತಿಯಹುದುನಾಲಗೆಯ ಲೋಕೋಪಕಾರವಹುದುಮೇಲೆ ಕಸ್ತೂರಿಬಹುದು ಜಗಸಮ್ಮತವಹುದು1ಕಸ್ತೂರಿಗೋಸ್ಕರವೆ ಧರ್ಮ ಮೃಗವಾದುದನು ಬಿಡದೆಕೊಲ್ಲುವವನು ವ್ಯಾಧನೀಗಸಂಚಲ ಚಿತ್ತವುಳ್ಳವನು ವಿಧಿವರವರಿಯನುಅಸ್ತವ್ಯಸ್ತದಿ ಪಶುಗೆ ನೀರತಿದ್ದಿದನು2ಧರಿಸಿದನು ದೋಷವನು ತಾನೀಗ ಎರಡನ್ನಹಿರಿಯರನು ನಿಂದಿಪುದು ಮೃಗವ ಕೊಂದವನುಕರುಣೆ ಚಿದಾನಂದ ಸದ್ಗುರುವಿಗೆ ಮೆಚ್ಚಿಸು ಅದುಮರವಾದ ಮುಪ್ಪಿನಲಿ ವಿಧಾತ್ರನು3
--------------
ಚಿದಾನಂದ ಅವಧೂತರು
ಸ್ಥಳವಿಲ್ಲವೈ ಭಾಗವತರೇ - ಈಗಒಳಗೆ ಹೊರಗೆಸಂದಣಿತುಂಬಿದೆ ನೋಡಿಪ.ಆಯ್ದೊಕ್ಕಲಿದರೊಳಗುಂಟು - ಮತ್ತೆಆಯ್ಕು ಮಂದಿಯ ಬೇರೆ ಉಂಟುಆಯ್ದು ನಾಲ್ಕು ಇದರೊಳಗುಂಟು - ನೀವುಬೈದರೆ ಏನು ತೆಗೆಯಿರಿ ನಿಮ್ಮ ಗುಂಟು 1ಆರುಮಂದಿ ಕಳ್ಳರುಂಟು - ಮತ್ತಾರು ಮಂದಿಗೆ ಮತ್ತೆ ಪ್ರೇರಕರುಂಟುಪ್ರೇರಕರಿಗೆ ಕರ್ತರುಂಟು - ವಿಚಾರಿಸುವುದಕೆ ನಿಮಗೇನುಂಟು ? 2ಅತ್ತೆಯವಳು ಬಲುಖೋಡಿ - ಎನ್ನಒತ್ತಿ ಆಳುವ ಪುರುಷನು ಬುಲುಹೇಡಿಮತ್ತೆ ಮಾವನು ಅಡನಾಡಿ - ಸರಿಹೊತ್ತಿಗೆಬರುವ ಮೈದುನ ಬಲುಕೇಡಿ3ನಗೆಹೆಣ್ಣು ಎಂಬುವಳು ಕೋಪಿ - ಮಲಮಗಳು ಕಂಡರೆ ಸೇರಳು ಬಲು ಪಾಪಿಹಗೆಗಾತಿಅತ್ತಿಗೆ ಶಾಪಿ - ಸುತ್ತಬೊಗಳುವಳು ತಾಳೆನು ನಾನು ಮುಂಗೋಪಿ 4ಎಷ್ಟು ಹೇಳಲಿ ನಿಮಗೆಲ್ಲ - ಈಕಷ್ಟ ಸಂಸಾರದೊಳಗೆ ಸುಖವಿಲ್ಲಸ್ಪಷ್ಟವಾಗಿ ಪೇಳ್ಪೆ ಸೊಲ್ಲ - ದೇವಸೃಷ್ಟೀಶ ಪುರಂದರವಿಠಲ ಬಲ್ಲ 5
--------------
ಪುರಂದರದಾಸರು