ಒಟ್ಟು 191 ಕಡೆಗಳಲ್ಲಿ , 55 ದಾಸರು , 178 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಿ ನೋಡಮ್ಮಾ ಗೋಪೆಮ್ಮಾ ಪ. ಗಡಿಗೆಯ ಒಡೆದಾನು ಕೊಡಹಾಲು ಕುಡಿದಾನು ಹುಡುಗರ ಬಡಿದು ಓಡಿ ಪೋದಾನು ನಿಮ್ಮ ಹುಡುಗಾ ಸಿಕ್ಕಿದ ಮೇಲೆ ಭಿಡಿಯಾವಿಲ್ಲದೆ ಗಿಡದಾ ನೆರಳಿಗೆ ಕಟ್ಟುವೆನು ಬೆನ್ನಟ್ಟುವೆನು 1 ನೆಲವಿನಲ್ಲಿದ್ದ ಪಾಲುಮೊಸರು ಬೆಣ್ಣೆ ಕದ್ದಾನು ಬಾಲಕರೊದ್ದನು ಮುದ್ದು ಹೆಣ್ಣು ಬಾಲೆಯರಿಗೆ ಕಣ್ಣುಸನ್ನೆ ಮಾಡಲಿ ಬಂದಾನು ಭಂಡು ಮಾಡಿದಾನು ದುಂಡ ಕುಚವ ಕರದಿ ಪಿಡಿದಾ ಓಡಿ ಪೋದಾ 2 ಹೆಡೆಯ ಸರ್ಪಾವ ಕರದೊಳು ಹಿಡಿದು ಸಂಜೀಯ ಹೊತ್ತಿಲಿ ತಂದಾನು ನಮ್ಮನ್ನಂಜಿಸಲು ಬಂದಾನು ನಾಗಕನ್ನಿಕೆಯರಿಂದ ಸ್ತೋತ್ರ ಮಾಡಿಸಿಕೊಂಡಾನು ಕಾಲಿಮರ್ಧನಕೃಷ್ಣಾನು 3
--------------
ಕಳಸದ ಸುಂದರಮ್ಮ
ಗೋಪಿದೇವಿ ಎಂತು ಪೇಳಲೆ ನಾನೆಂತು ತಾಳಲೆ ಪ ಶ್ರೀಪತಿ ಬಂದು ನಿಂದು ಏಕಾಂತವನ್ನ ಆಡುತಾನೆ | ಪಾಪ ಇಂಥಾದುಂಟೇನೆ ಕೇಳೆ ಲಕ್ಷ್ಮೀಕಾಂತನೀತನೆ || ಮಂಥನ ಮಾಡುವಲ್ಲಿ ಮಂಥಣಿಯ ಒಡೆದನು | ಕುಂತಳವ ಪಿಡಿದು ಎನ್ನ ಕುಳ್ಳಿರಿಸಿದಾ ಕಿರಿಬೆವರನೊರಸಿದಾ 1 ಚಿಕ್ಕಮಕ್ಕಳ ಕೂಡಿ ಚಕ್ಕನೆ ತಾ ಬಂದು ಬೇಗ | ಬೆಕ್ಕು ಕುನ್ನಿ ಮರ್ಕಟವ ತಂದನಮ್ಮಾ ಇದು ಚಂದವೇನಮ್ಮ || ಉಕ್ಕುತಿಹ ಪಾಲ್ಗೊಡಗಳ ಉರುಳಿಸಿದಾ ಸುಮ್ಮನೆ | ಚೊಕ್ಕವೇನೆ ಸುಮ್ಮನೆ ಮೊಸರ ಸುರಿದಾ ಮೀಸಲು ಮುರಿದಾ 2 ರಕ್ಕಸರ ಗಂಡ ನಮ್ಮ ರಾಜ್ಯದೊಳಗಿವಗಿನ್ನು | ತಕ್ಕ ಬುದ್ದಿಯ ಪೇಳುವರದಾರು ಮೀರಿದ ಗೋಪಗೆ || ಸಿಕ್ಕ ಪಿಡಿದೇವೆಂದರೆ ಸಿಕ್ಕನಮ್ಮ ಇವ ಗುಡಿವಡ್ಡಿ ಬೇಡವೇ | ಕಕ್ಕಸದಲಿ ಬಲು ಕಕ್ಕಲಾತಿಯಲಿ 3 ಬಿರಬಿರನೆ ತಾ ಬಂದು ಬೆದರಿ ಎನಗಂದು | ಹರವಿಯ ಹಾಲು ಕುಡಿದಾ ತಾ ಎತ್ತ ಓಡಿದನೆ || ವಾರಿಗಣ್ಣಿನಿಂದಲಿ ನೋಡಿ ಒದಗಿ ಬಳಿಗೆ ಬಂದು | ತೋರವಾದ ಕುಚಗಳ ಪಿಡಿದಾನೆ ಬಲಿದನೇನೆ 4 ಹಾರ ಪದಕವು ಹಿಡಿ ಹಿಡಿ ಎಂದು ಎನ್ನ ಕೂಡ | ಸರಸವನಾಡಲಿಕ್ಕೆ ಅರಸನೇನೆ ನಮಗೆ ಪುರುಷನೇನೆ || ಪುರುಷರು ಕಂಡರೆನ್ನ ಪರಿಪರಿ ಬಾಧಿಸ್ಯಾರು | ತರಳನ ಕರೆದ್ಹೇಳು ತಿದ್ದಿ ನೀನು ಇವಗೆ ಬುದ್ಧಿ5 ಚಂಡನಾಡುತಲಿ ಚಿಕ್ಕ ಮಿಂಡಿಯರ ಕಂಡು ತಾನು | ಚಂಡು ಅಂತ ಕುಚಗಳ ಪಿಡಿದಾನೆ ಇಂಥದುಂಟೇನೆ || ಭಂಡು ಮಾಡತಾನೆ ಭಂಡಿಯ ಗೋವಳಗಿಂದು | ದಂಡಿಸವ್ವಾ ದಂಡವನು ಕೊಡು ನೀನು 6 ಚಂಡ ಪ್ರಚಂಡನಿವನು ಗೋಪಿಕೆಯರಿಗೆಲ್ಲ | ಉದ್ದಂಡನಿವನು ತಂಡ ತಂಡದಲಿ ತುರು- || ಹಿಂಡುಗಳ ಕಾಯುವ ಗೊಲ್ಲಬಾಲಕನಮ್ಮಾ |ಪಾಂಡುರಂಗ ವಿಜಯವಿಠ್ಠಲರಾಯ ಬಲು ದಿಟ್ಟನಿವನು7
--------------
ವಿಜಯದಾಸ
ಗೋವಿಂದ ಗೋವಿಂದ ಎನ್ನಲರಿಯದೆ - ವೃಥಾನೋವಿಂದ ಭಂಗವ ಪಡುವುದುಚಿತವೆ ? ಪ ಕ್ಷೀಣ ಶಾಸ್ತ್ರಾರ್ಥವನು ಪರಿಗ್ರಹಿಸಿ ನಿಖಿಲ ಕುರಿಕೋಣಗಳ ತಲೆಚೆಂಡ ಕುಟ್ಟಿಸುತಪ್ರಾಣ ಹತ್ಯವ ಮಾಳ್ಪುದಾವ ಸತ್ಕರ್ಮ - ನಾರಾ-ಯಣನ ನಾಮಸ್ಮರಣೆ ಮಾಡು ಮನವೆ 1 ಖಂಡವನು ಕೊಯ್ದು ಕೊಡಬೇಡ ದಳ್ಳುರಿಯಗ್ನಿಕುಂಡವನು ಹೊಕ್ಕು ಹೊರಡುವುದುಚಿತವೆಭಂಡರಂದದಿ ಬತ್ತಲೆಯೆ ಬರುವುದಾವಾಟಪುಂಡರೀಕಾಕ್ಷನ ನೆನೆ ಕಂಡ್ಯ ಮನವೆ 2 ಕುಟ್ಟಿಕೊಳ್ಳದಿರಿ ಜಟ್ಟಿ ಗುಂಡಿನಲಿ, ಶಸ್ತ್ರವನುಚಿಟ್ಟಿ ಕೊಳ್ಳದಿರಿ, ಬೆನ್ನಲಿ ಸಿಡಿಯನುಕಟ್ಟಿ ತೂಗಿಸಿಕೊಳ್ಳದಿರಿ ಕರಟಕದಂತೆಗುಟ್ಟಿನಲಿ ಗೋಪಾಲಕನ ಸ್ಮರಿಸು ಮರುಳೆ 3 ತೊಗಲ ಬಿಲ್ಲೆಗಳ ಕೊರಳಲ್ಲಿ ಕಟ್ಟಿಕೊಂಡುಹಗಲಿರುಳು ಅನ್ನಪಾನಕೆ ಹೋಗದೆಮೃಗವೈರಿಯಂತೇಕೆ ಕಿಸುಕೆಲೆವ ರಂಪಾಟಜಗದಾಧಿಪತಿಯ ನಾಮ ಸ್ಮರಿಸು ಮರುಳೆ 4 ಉತ್ತಮರು ಸುರೆಯನೀಂಟುವರೆ ತರಹರಿಸಿ ಮದೋ-ನ್ಮತ್ತರಾಗಿ ಅಸಭ್ಯ ಶಬ್ದವ ನುಡಿವರೆಸತ್ತ ಹೆಣದಂತೆ ಬಿದ್ದಿಹುದಾವ ನೀತಿ ಪುರು-ಷೋತ್ತಮನ ನಾಮ ಸ್ಮರಣೆಯ ಮಾಡು ಮನವೆ 5 ವೇದೋಕ್ತ ಪೂಜೆಯಲಿ ತೃಪ್ತಿಪಟ್ಟರೆ ನೀವುಅದರಿಂದ ಫಲವೇನು ಪೇಳಿರಯ್ಯನಾದವನು ಕೇಳ್ದ ಹರಿಣದಂದದಿ ಕೆಡದೆ ಮಧುಸೂದನನ ನಾಮ ಸ್ಮರಣೆಯ ಮಾಡು ಮರುಳೆ 6 ನಿಂದಾಪವಾದ ಘಟಿಸುವುದೈಸೆ ಇದರಿಂದಮುಂದೆ ಮುಕ್ತಿಯು ನಿಮಗೆ ಸಾಧ್ಯವಹುದೆತಂದೆ ಶ್ರೀ ಕಾಗಿನೆಲೆಯಾದಿಕೇಶವ ನಾಮಒಂದೇ ವೈಕುಂಠ ಪದವನೈದಿಪುದಯ್ಯ 7
--------------
ಕನಕದಾಸ
ಘಿಲಕು ಅಂದಾವಮ್ಮಗೆಜ್ಜೆ ಗಿಲಕು ಅಂದಾವೆ ಕಲಕು ಮಾಡಿ ದೈತ್ಯರನ್ನನೆಲಕ ಒತ್ತಿದ ಪಾದವಮ್ಮ ಪ. ಸಿಟ್ಟಿಲೆ ದೈತ್ಯರ ಶಿರವ ಕುಟ್ಟಿಸವರಿದ ಪಾದವೆಂದು ಅಷ್ಟ ಸೌಭಾಗ್ಯ ಸುರರಿಗಿಟ್ಟ ಪಾದವೆಂದು1 ಅಂಗಾಲಿಲೆ ಬಲಿರಾಯಗೆ ಹಿಂಗದ ಸುಖವಿತ್ತ ಪಾದಗಂಗಾದೇವಿ ಪಡೆದ ಶ್ರೀರಂಗನÀ ಪಾದವೆಂದು2 ಭಂಡಿಲಿದ್ದ ಸುರನ ಶಿರವ ತುಂಡರಿಸಿದ ಪಾದವೆಂದು ಕೊಂಡಾಡಿ ಅಕ್ರೂರ ತಿಳಿದುಕೊಂಡÀ ಪಾದವೆಂದು3 ಪಾದ ತರುಳೆರ ಕುಚಕಿತ್ತ ಆ ಅರುಣನ ಪಾದವೆಂದು 4 ಪಾದ ಗುಣಪೂರ್ಣ ರಾಮೇಶ ನಮ್ಮ ತಪ್ಪೆಣಿಸದ ಪಾದವೆಂದು5
--------------
ಗಲಗಲಿಅವ್ವನವರು
ಚಿಕ್ಕವನೇನೆ ಮಿಕ್ಕಾದಂಥ | ಮಕ್ಕಳಿಲ್ಲೇನೆ, ನಿಮ್ಮವರೊಳು ||ದಿಕ್ಕಿಲ್ಲವೇನೆ, ಇವಗೆ ತಕ್ಕ |ಬುದ್ಧಿಯ ಕಲಿಸುವವರಿನ್ನು ಪ ತಂಡ ತಂಡದಿ ಬರುತಿಹ ನಮ್ಮನ |ಕಂಡು ಆಡುವ ಆಟಕಿಯ ಬಿಟ್ಟು ||ಚೆಂಡು ಪುಟಿದು ಬಂತು ಬಚ್ಚಿಟ್ಟಿರ್ಯಾಕೆಂದು |ದುಂಡ ತೋಳಗಳೆತ್ತಿ ಭಂಡು ಮಾಡುವನಿವ 1 ಶಿಶುವೆಂದು ಎತ್ತಪ್ಪಿಕೊಂಡು ಮುದ್ದಿಡಲು |ದಶನಗಳಿಂದಧರ ನೋಯಿಸಲು ||ಆಶೆಯಲಸುವ ಪೀರಿದವನಿವನೆಂದಂಜಿ |ಸೊಸಿಯನ್ನಬ್ಬರಿಸಿ ಬೀದಿಯೊಳಂದು 2 ಆರಿಲ್ಲದಾಗೊಬ್ಬವನನ್ನು ಬಾಲಕನೆಂದು |ದ್ವಾರವಿಕ್ಕಿ ನೀರೆ ಮೇಲಿರಿಸಿ ||ಬಾರಯ್ಯ ಮುದ್ದು ಕೊಡಯ್ಯ ಎನೆ ಹದಿ- |ನಾರು ವರುಷದವನಾದ ರುಕ್ಮಭೂಷಾ 3
--------------
ರುಕ್ಮಾಂಗದರು
ಚೋದ್ಯ ಚೋದ್ಯ ಸರ್ವದ ವೇದ ವೇದ್ಯ ನಂಬಿದ ಭಕ್ತ ಜನರಿಗಾಗುವ ಸುಖಸಾಧ್ಯ ಪ. ಶ್ರೀ ಮಹೀಶ ಸತ್ಯಭಾಮೆಯರರಸ ಸು- ಧಾಮ ತಂದವಲಕ್ಕಿ ಪ್ರೇಮದಿಂದಲಿ ಮೆದ್ದ 1 ಅಂಡಜವಾಹ ಬ್ರಹ್ಮಾಂಡಗಣಾತತ ಪಾಂಡುಕುವರನಿಗಾದನು ಭಂಡಿಸೂತ 2 ಆದರೀ ಕೃತಮಾಯ ಕೃತ್ಯಕದಂಡ ಸ- ನ್ಮುದದಿಂದ ವಿದುರನ ಮನೆಯ ಪಾಲುಂಡ 3 ಶ್ರೀವರೀವರಿಯಿಂದ ಸರಸಮಾಡುತಲಿರೆ ಗೋಪಿಯರಿಗೆ ಮೆಚ್ಚಿ ಗೋವುಗಳ ಕಾಯ್ದ 4 ಗೊಲ್ಲರ ಹುಡುಗರ ಪೆಗಲೇರಿ ಮೆರೆದ 5 ಘೋರ ಸಂಸಾರಪಹಾರಿ ನಾರದ ವಂದ್ಯ ಜಾರ ಚೋರ ಕೃತ್ಯ ತೋರಿದ ವರದ 6 ಮಾನವ ದೈತ್ಯ ಗಣರಿಗಾಧಾರ ಮ- ತ್ತಾವ ಕಾಲಕು ಭೇದಭೇದವ ಸೇರಾ 7 ತೇಜಸ್ತಿಮಿರಾದಿ ಸೋಜಿಗ ಶಕ್ತಿಮ- ಹೋಜಸನೀತ ಪರಾಜಯ ರಹಿತಾ 8 ಪರದೇಶಿಯ ಮೇಲೆ ಕರುಣ ಕಟಾಕ್ಷದಿ ಸಿರಿಯೊಡಗೂಡಿ ಬಂದಿರುವ ಶೃಂಗಾರ 9 ಸರ್ವಕಾಲದಿ ತನ್ನ ನೆನವಿತ್ತು ದುಷ್ಕøತ ಪರ್ವತಗಳ ಪುಡಿ ಮಾಡುವ ಧೀರ 10 ತನಯನ ಕಲಭಾಷೆ ಜನನಿ ಲಾಲಿಸುವಂತೆ ಸಾರ 11 ಪೋರಭಾವವ ಶುಭವೇರಿಸುವನು ತುಷ ವಾರಿಯು ಗಂಗೆಯ ಸೇರುವಾಕಾರ 12 ವಿದ್ಯ ಬುದ್ಧಿಗಳಿಲ್ಲದಿದ್ದರು ದಾಸರ ನಿರವದ್ಯ ಬೇಗದಲಿ 13 ಸನ್ನುತ ಕರ್ಮವ ಮನ್ನಿಸನೆಂದಿಗು ಮುರನರಕಾರಿ 14 ಚಿಂತಾಕ್ರಾಂತಿಗಳಿರದಂತೆ ಸರ್ವದ ನಿ- ರಂತರ ಪೂಜೆಗೊಂಬರ ಚಕ್ರಧಾರಿ 15 ನಿರುಪಮಾನಂದ ನಿರ್ಭರ ಪುಣ್ಯಮೂರ್ತಿ ಶ್ರೀವರ ಶೇಷ ಭೂಧರವರನ ಸತ್ಕೀರ್ತಿ 16
--------------
ತುಪಾಕಿ ವೆಂಕಟರಮಣಾಚಾರ್ಯ
ಛೀ ನಿನ್ನ ಮೋರೆ ಮೇಲೆ - ಠೊಣ್ಯಛೀ ನಿನ್ನ ಮೋರೆ ಮೇಲೆ ಪ ನಿತ್ಯ ಪರಿ ಆಯುಷ್ಯವ ವ್ಯರ್ಥ ಕಳೆಯುತಿದ್ದೆ ಠೊಣ್ಯ 1 ಕಂಡ ಕಂಡಲ್ಲಿಗೆ ಪೋಗಿ ಧನಂಗಳ ಕೊಂಡು ಬರುತ್ತಲಿದ್ದೆಹೆಂಡಿರು ಮಕ್ಕಳು ಹಿತದವರೆಂದು ಕೊಂಡಾಡುತಲಿದ್ದೆಖೋಡಿ ಮಾತುಗಳನು ಹೇಳಿ ಮಂದಿಯ ಕುಂಡೆ ಚಿವುಟುತಿದ್ದೆಭಂಡ ಬಾಳು ಇದು ರಂಡೆ ಗಂಡ ಕಂಡ್ಯ ಯಮನ ಬಾಧೆ ಠೊಣ್ಯ2 ಮಾನವ ಜನ್ಮಕೆ ಬಂದು ಪುಣ್ಯ ಮತ್ತೇನೂ ಮಾಡದೆ ಹೋದೆದಾನವಾಂತ ಸತ್ಪಾತ್ರರಿಗೆ ನೀ ದೀನತ್ವವ ಪಡೆದೆಜ್ಞಾನಶೂನ್ಯ ಮದವೇರಿದ ಸೊಕ್ಕಿದ ಕೋಣಕೆ ಹುಟ್ಟಿದ್ದೆದೀನರಕ್ಷಕಾದಿಕೇಶವ ವಿಠಲಂಗೆ ನೀನತಿ ದೂರಾದೆ ಠೊಣ್ಯ 3
--------------
ಕನಕದಾಸ
ಜಯ ಜಯ ಭೀಮಶ್ಯಾಮಾ ಜಯ ಸತ್ಯಾವರ ಪ್ರೇಮಾ ಜಯ ಕೃಷ್ಣಾಗತ ಕಾಮಾ ಜಯ ಪುಣ್ಯನಾಮಾ ಪ. ಪಂಚಬಾಣನ ಜನಕ ಪಾಂಚಾಲೆಯನು ಕರೆದು ಪಂಚ ಮೂರುತಿಗರಿಸಿನವ ಹಚ್ಚೆನಲೂ ಪಂಚರತ್ನಗಳಿಂದ ಮಿಂಚುತ ಭಾವಿ ವಿ- ರಿಂಚಿಯ ಕಡೆಗಾಗಿ ನಡೆತಂದಳಾಗ 1 ಅಣಿಮಾದಿ ಗುಣ ಚಿಂತಾಮಣಿಯ ಹತ್ತಿರೆ ಬಂದು ಮಣಿದು ಪಾದಕೆ ನಾರಿಮಣಿ ನಸುನಗುತಾ ಝಣಝಣವೆನಿಪ ಕಂಕಣ ಶೋಭಿತದಿಂದ ಪುನುಗಿನೆಣ್ಣೆಯ ಕೂಡಿದರಿಶಿಣ ಹಚ್ಚಿದಳು 2 ಕ್ಷತ್ರಿಯ ಗಣ ಶಿರೋರತ್ನನಾಗಿರುವಿ ಸ- ರ್ವತ್ರ ವ್ಯಾಪಕ ಫಾಲನೇತ್ರ ವಂದಿತನೆ ಕೃತ್ರಿಮ ದ್ವಿಜ ಭಿಕ್ಷಾ ಪಾತ್ರ ಸಲ್ಲದು ಕಂಜ ಪತ್ರ ತೋರಿದರೆ ನಾನರಿಶಿಣ ಹಚ್ಚುವೆನು 3 ಖುಲ್ಲ ಬಕಗೆ ಭಂಡಿಯಲ್ಲಿ ತುಂಬಿದ ನಾನಾ ಪಲ್ಯ ಭಕ್ಷಗಳ ಮೇಲೆ ಚೆಲ್ಲಿದನ್ನವನು ಎಲ್ಲ ಉಂಡಸುರನ ನಿಲ್ಲದಂತೊರಸಿದ ಮಲ್ಲ ನಿನ್ನಯ ದಿವ್ಯ ಗಲ್ಲವ ತೋರೊ 4 ಅಂಗಸಂಗದಿ ಶತಶೃಂಗಗಿರಿಯನೊಡದ ಮಂಗಳಮೂರ್ತಿ ಮಾತಂಗ ವೈರಿಗಳ ಭಂಗಿಸಿ ಬಲುಹಿಂದ ರಂಗನರ್ತನ ಗೈವ ಶೃಂಗಾರ ಕರಗಳಿಗರಸಿನ ಹಚ್ಚುವೆನು 5 ಮುಂದೆ ಕೀಚಕಬಾಧೆಯಿಂದ ರಕ್ಷಿಸುವಿ ಸೌ ಗಂಧಿ ಕುಸುಮವನ್ನು ತಂದು ಮುಡಿಸುವಿ ಮಂದಮತಿಯ ಕುರುನಂದ ನರನು ಬೇಗ ಕೊಂದು ಮನ್ಮನಸಿಗಾನಂದ ಪಾಲಿಸುವಿ 6 ಕುಂಡಲೀ ಗಿರೀಶ ಬ್ರಹ್ಮಾಂಡ ನಾಯಕ ಹೃ- ನ್ಮಂಡಲದೊಳಗಿಟ್ಟುಕೊಂಡು ಸಂತಸದಿ ಚಂಡ ವೈರಿಗಳನ್ನು ಖಂಡಿಸಿ ಸುಖದಿಂದ ಶುಂಡಾಲ ಪುರವಾಳಿಕೊಂಡು ನೀನಿರುವಿ7
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ದೇವಿ ಜಗನ್ಮಯೆ ಪಾಹಿ ಜಯ ದೇವಿ ಜಗನ್ಮಯೆ ಪಾಹಿ ಪಜಯ ವಾಗೀಶ್ವರಿ ಜಯ ಕಮಲಾಲಯೆ ಜಯ ಗಿರಿಸುತೆ ಜಯ ಜಾನಕಿ ಅ.ಪಶರಹರಕಲಮಾಯಾಬಿಂದುತ್ರಯಪರಿಶೋಭಿತ ಮನು ಸಂಘಾರಾಧ್ಯೆ 1ಚಂಡಿ ಭಂಡ ಶುಂಭನಿಶುಂಭಾರ್ಧಿನಿಪಂಡಿತವರ್ಧಿನಿ ಪರಮಾರಾಧ್ಯೆ 2ದಶಮುಖ ಪಂಚತ್ವಾಗಮ ಕಾರಣೆದಶದಶವದನಾರ್ದನಿ ನಿರವದ್ಯೆ 3ವಿಧಿ ಹರಿ ಹರ ರುದ್ರೇಶ್ವರ ಭಾವಿತೆಮಧುಸೂದನ ಹೃದಯ ಸದುದವಸಿತೆ 4ವಿಧಿವದನಾಲಯೆ ವಿಧುಧರ ವಾಮಗೆಬುಧ ಹೃನ್ಮುಖ ಕರಣಾಶ್ರಯೆ ಸದಯೆ 5ಷೋಡಶ ಪಂಚಕ ಪಂಚಕ ದಶವಿಧಗೂಢಾಕ್ಷರಮಯ ಶೋಭನ ಗಾತ್ರೆ 6ತಿರುಪತಿ ಕಕುದ್ಗಿರಿ ಪುಣ್ಯ ನದೀ ನದಶರನಿಧಿ ಮಹಿಮಾಸ್ಪದೆ ಶುಭ ವರದೆ 7ಓಂ ಮಾುನೇ ನಮಃ
--------------
ತಿಮ್ಮಪ್ಪದಾಸರು
ಜಯತು ಜಯತು ಜಯತೆಂಬೆನು ವಿಠಲ ಭಯನಿವಾರಣ ನಿರಾಮಯ ನೀನೆ ವಿಠಲಪ. ಮನವೆನ್ನ ಮಾತ ಕೇಳದು ಕಾಣೊ ವಿಠಲ ಮನಸಿಜನಾಯಸ ಘನವಾಯ್ತು ವಿಠಲ ನಿನಗಲ್ಲದಪಕೀರ್ತಿಯೆನಗೇನು ವಿಠಲ ತನುಮನದೊಳಗನುದಿನವಿರು ವಿಠಲ1 ಕದನ ಮುಖದಿ ಗೆಲುವುದ ಕಾಣೆ ವಿಠಲ ಮದನ ಮುಖ್ಯಾದಿ ವೈರಿಗಳೊಳು ವಿಠಲ ವಿಧವಿಧದಿಂದ ಕಷ್ಟಪಟ್ಟೆನು ವಿಠಲ ಇದಕೇನುಪಾಯ ತೋರಿಸಿ ಕಾಯೋ ವಿಠಲ2 ಹುಟ್ಟಿದೆ ನಾನಾ ಯೋನಿಗಳೊಳು ವಿಠಲ ಸುಟ್ಟ ಬೀಜದ ವೋಲ್ ಫಲವಿಲ್ಲ ವಿಠಲ ಇಷ್ಟಾರ್ಥಗಳನಿತ್ತು ಸಲಹಯ್ಯ ವಿಠಲ ಇಷ್ಟಕ್ಕೆ ನೀ ಮನ ಮಾಡಯ್ಯ ವಿಠಲ3 ಬಂಗಾರ ಭಂಡಾರ ಬಯಸೆನು ವಿಠಲ ಮಂಗಲ ಕೊಡು ಯೆನ್ನ ಬುದ್ಧಿಗೆ ವಿಠಲ ರಂಗ ರಂಗನೆಂಬ ನಾಮದಿ ವಿಠಲ ಭಂಗವ ಪರಿಹರಿಸಯ್ಯ ನೀ ವಿಠಲ4 ಏನು ಬಂದರೂ ಬರಲೆಂದಿಗು ವಿಠಲ ಮಾನಾವಮಾನ ನಿನ್ನದು ಕಾಣೊ ವಿಠಲ ನಾನು ನಿನ್ನವನೆಂದು ಸಲಹಯ್ಯ ವಿಠಲ ಲಕ್ಷ್ಮೀನಾರಾಯಣ ನೀನೆ ತಂದೆ ಕೇಳ್ ವಿಠಲ5
--------------
ತುಪಾಕಿ ವೆಂಕಟರಮಣಾಚಾರ್ಯ
ಜೋ ಜೋ ಎನ್ನಿ ನಿರ್ವಿಕಾರಿಯಜೋ ಎಂದು ತೂಗಿರಿ ಬ್ರಹ್ಮಾಸ್ತ್ರ ದೊರೆಯ ಪ ವಾದಾತೀತಳಿಗೆ ಹೃದಯ ತೊಟ್ಟಿಲ ಮಾಡಿವೇದ ನಾಲಕು ಎಂಬ ನೇಣನೆ ಹೂಡಿಸಾಧನ ಚತುಷ್ಪಯ ಹಾಸಿಗೆ ಹಾಸಿಬೋಧಾನಂದಳನು ಭಾವದಿ ತಂದು ನೋಡಿ 1 ಶುದ್ಧದ ಚವುರಿ ಸಡಿಲಿಸಿ ಮಗ್ಗುಲಲಿ ಶಾಂತರಸ ದೀಪಗಳ ಹಚ್ಚಿಹೊಡೆಯುತಿಹ ಭೇರಿಗಳ ಘಂಟಾರವ ಹೆಚ್ಚೆಎಡೆಬಿಡದೆ ಓಂಕಾರ ಮಂತ್ರ ಘೋಷಣವು ಮುಚ್ಚಿಕಿಡಿ ನಯನೆಯಳನು ನೋಡಿ ಹರುಷ ತುಂಬೇರಿ 2 ಹಿರಿದಾ ಖಡ್ಗದ ಹಲಗೆ ಬಲ ಭಾಗದಲಿಟ್ಟುಶರಶಾಙರ್É ಬತ್ತಳಿಕೆ ಎಡಭಾಗದಲ್ಲಿಟ್ಟು ದುಷ್ಟ ಶತ್ರುಗಳ ಕಾಲದೆಸೆಗಿಟ್ಟುಪರಮಾಮೃತ ಪಾನ ಪಾತ್ರೆ ತುಂಬಿಟ್ಟು 3 ಜೋ ಜೋ ಶತ್ರು ಸ್ತಂಭಿನಿ ಎನ್ನಿರಿ ನರರೆಲ್ಲಜೋ ಜೋ ಗತಿಮತಿ ಸ್ತಂಭಿನಿ ಎನ್ನಿರಿ ಸುರರೆಲ್ಲಜೋ ಜೋ ಜಿಹ್ವಾ ಸ್ತಂಭಿನಿ ಎನ್ನಿರಿ ಹರರೆಲ್ಲಜೋ ಜೋ ಸ್ತಂಭಿನಿ ಎನ್ನಿರಿ ಧರೆಯೆಲ್ಲ 4 ಜೋ ಜೋ ಸುರಗಿರಿ ಧೈರ್ಯದಾಯಿನಿ ಜೋ ಜೋಜೋ ಜೋ ಹರಿ ಸಮ ಭಾಗ್ಯವೀವಳೆ ಜೋ ಜೋಜೋ ಜೋ ಶಿವ ಸಮ ಸತ್ವವೀವಳೆ ಜೋ ಜೋಜೋ ಜೋ ನಂಬಿದ ರಾಜ್ಯವೀವಳೆ ಜೋ ಜೋ 5 ಭಕ್ತರಭಿಮಾನಿ ಭಕ್ತಮಾತೃಕೆ ಜೋ ಜೋಭಕ್ತವತ್ಸಲೆ ಭಕ್ತ ಕರುಣಾಳು ಜೋ ಜೋಭಕ್ತ ಜೀವನಿ ಭಕ್ತ ಬಂಧುವೆ ಜೋ ಜೋಭಕ್ತ ಚಿಂತಾಮಣಿ ಭಾಗ್ಯಳೇ ಜೋ ಜೋ 6 ಯೋಗಾರೂಢಕೆ ಏಕಾಕ್ಷರಿ ಜೋ ಜೋಯೋಗಿ ಹೃದ್ವಾಸಿನಿ ಯೋಗ್ಯಳೇ ಜೋಜೋಯೋಗಿ ಬೃಹತ್ಯಾಗಿ ವಿರಾಗಿ ಜೋಜೋಯೋಗಿಗಳ ಭಂಡಾರಿ ಯೋಗೀಳೆ ಜೋಜೋ 7 ಚಿದಬಿಂದುಗಳೆಂಬ ಮಂತ್ರ ಪುಷ್ಪ ಚೆಲ್ಲಿಚೆದುರೆಯರು ಮಂಗಳಾರತಿ ಬೆಳಗುತಿಲ್ಲಿಸದಮಳೆ ನೀ ಮಲಗು ಯೋಗ ನಿದ್ರೆಯಲಿಚಿದಾನಂದ ತಾನಾದ ಬಗಳಾಂಬೆ ಸುಖದಲಿ 8
--------------
ಚಿದಾನಂದ ಅವಧೂತರು
ಜೋ ಜೋ ಜೋ ಜೋ ಎನ್ನಿ ನಿರ್ವಿಕಾರಗೆಜೋ ಎಂದು ತೂಗಿರಿ ಚಿದಾನಂದ ದೊರೆಗೆ ಪ ಚಿದ್ಬಯಲಿನೊಳು ಹೃದಯ ತೊಟ್ಟಿಲ ಮಾಡಿಬದ್ಧ ವೇದಾಂತದ ನೇಣ ಬಿಗಿದುಸದ್ಭಾವವೆಂಬ ಹಾಸಿಗೆಯ ಹಾಸಿಶುದ್ಧಾತ್ಮನನು ಭಾವದಿ ತಂದು ನೀಡಿ 1 ಅದ್ವೈತವೆಂಬ ಆಭರಣ ತೊಡಿಸಿಸಿದ್ಧ ಭೂಮಿಕೆ ಎಂಬ ಅಡವನಿಡಿಸಿಬುದ್ಧಿ ನಿರ್ಮಳವಾದ ತಲೆದಿಂಬನಿಡಿಸಿನಿದ್ದೆ ಮಾಡೋ ಬ್ರಹ್ಮಾನಂದ ಬೋಧದಲಿ 2 ಚಿತ್ಪ್ರಭೆಯ ದೀಪವನು ಎಡಬಲದಿ ಹಚ್ಚಿಮೊತ್ತವಹ ದಶನಾದ ಭೇರಿಯರವ ಹಚ್ಚಿಮತ್ತೆ ಓಂಕಾರ ಮಂತ್ರ ಘೋಷದಿ ಮುಚ್ಚಿನಿತ್ಯಾತ್ಮನನು ನೋಡಿ ಹರುಷ ತುಂಬುತಲಿ 3 ವಸ್ತು ಸಾಕ್ಷಾತ್ತೆಂಬ ಮುತ್ತೈದೆಯರೆಲ್ಲಸ್ವಸ್ಥ ಚಿತ್ತೆಂಬುದನೆ ಸಿಂಗರಿಸಿಕೊಂಡುನಿಸ್ಸಂಗನಹ ಆತ್ಮ ಶಿಶುವನೊಡತಂದುಸುಸ್ವರದ ನಾದದಲಿ ಜೋಗುಳವ ಪಾಡುತಲಿ 4 ಜೋ ಜೋ ಕಾಮಸ್ತಂಭವ ಎನ್ನಿ ನರರೆಲ್ಲಜೋ ಜೋ ಕ್ರೋಧ ಸ್ತಂಭನ ಎನ್ನಿ ನರರೆಲ್ಲಜೋ ಜೋ ಮೋಹ ಸ್ತಂಭನ ಎನ್ನಿ ನರರೆಲ್ಲಜೋ ಜೋ ವಿಷಯ ಸ್ತಂಭನ ಎನ್ನಿ ನರರೆಲ್ಲ5 ಜೋ ಜೋ ಯಮನಿಯಮಾಸನ ಅರುಹಿದವನೆಜೋ ಜೋ ಜೋ ಜೋ ಖೇಚರ ಮುದ್ರೆ ನಿಲಿಸಿದವನೆಜೋ ಜೋ ಜೋ ಜೋ ಅವಿದ್ಯೆ ಖಂಡಿಸಿದವನೆಜೋ ಜೋ ಜೋ ಜೋ ಜೀವನ್ಮುಕ್ತಿದಾತನೆ 6 ಜೋ ಜೋ ಪರಮಾರೂಢನೆ ಪರಮೇಶಜೋ ಜೋ ಪರಮ ಪರೇಶನೆ ಪಂಡಿತಜೋ ಜೋ ನಿರುತ ವಸ್ತು ವ್ಯಕ್ತ ಅವ್ಯಕ್ತಜೋ ಜೋ ಶರಣ ರಕ್ಷಕ ರಾಜ ಯೋಗೀಂದ್ರ ಜೋ ಜೋ 7 ಸತ್ಯ ಸನಾಥ ವಿಶ್ವೋತ್ಪತ್ತಿ ಜೋ ಜೋಪ್ರತ್ಯಗಾತುಮ ಪರಬ್ರಹ್ಮನೆ ಜೋ ಜೋನಿತ್ಯ ಸಹಜಾನಂದ ಚಿನ್ಮಾತೃ ಜೋ ಜೋಭಕ್ತರ ಭಂಡಾರಿ ಭಾಗ್ಯನೆ ಜೋ ಜೋ 8 ಮಿಹಿರ ಶತಕಳೆಯೆಂಬ ಮಂತ್ರಪುಷ್ಪವ ಚೆಲ್ಲಿಮಹಾ ಬೆಳಕಿನ ಮಂಗಳಾರತಿಯ ಬೆಳಗುತಲ್ಲಿಅಚಲ ಸಮಾಧಿಯೆ ಆದ ಯೋಗನಿದ್ರೆಯಲಿಮಹಾ ಚಿದಾನಂದಾವಧೂತ ಮಲಗಿರು ಸುಖದಲ್ಲಿ 9
--------------
ಚಿದಾನಂದ ಅವಧೂತರು
ತಂಗಿ ಮೊಸರ ಸುತ್ತ ಚೆಲ್ಲಿದ ಮುದ್ದುರಂಗ ಬೆಣ್ಣೆಯ ಮೆದ್ದ ಬಲ್ಲಿದ ಪ. ಪುಟ್ಟ್ಟಿದಾಗಲೆ ಮೂಲರೂಪವ ತೋರಿಅಟ್ಟಿದ ಸುಜನರ ತಾಪವಕೊಟ್ಟ ನಮಗೆ ಜ್ಞಾನದೀಪವ ಕೃಷ್ಣತೊಟ್ಟ ದುರ್ಜನರೊಳು ಕೋಪವ1 ಯಶೋದೆಯ ಮೊಲೆವಾಲನುಂಬಾಗ ನಸುಬಿಸಿನೀರನೆ ಎರೆಸಿಕೊಂಡಾಗಶಿಶುವು ಪೂತಣಿಯ ಕೊಂದಿತೆಂಬಾಗ ರ-ಕ್ಕಸರಿಗೆ ಇವ ಬಲುದಿಮ್ಮಿಗ 2 ಇಂದಿರೆಯನು ಬಿಗಿದಪ್ಪಿದ ಸಖವೃಂದಾರಕರೊಳಗೊಪ್ಪಿದಕಂದರ ಕಲ್ಲಿಂದ ಜಪ್ಪಿದ ತಾಯಿಹಿಂದಟ್ಟಿ ಬರಲೋಡಿ ತಪ್ಪಿದ3 ಪುಟ್ಟ ಕೃಷ್ಣನ ಕಟ್ಟಬೇಕೆಂದು ತಂ-ದೊಟ್ಟಿ ಹಗ್ಗಗಳ ತಂದುಬೆಟ್ಟವಾಗಿರಲು ದುರ್ಜನರ ಕೊಂದು ಈಗಗಟ್ಟಿಮಾಡಿದಳಿವ ಹರಿಯೆಂದು4 ಒರಳನೆಳೆದ ಬಲುಮತ್ತಿಯ ದೊಡ್ಡಮರನ ಕಿತ್ತಿದ ನೋಡಿವನರ್ಥಿಯತರಳಾಕ್ಷಿ ಕೃಷ್ಣನ ನೆತ್ತಿಯ ಬೆಣ್ಣೆಸುರಿಯೆ ಪಾಡಿದಳವನ ಕೀರ್ತಿಯ5 ಗಗನಕೆ ಏರಿ ವಾತನ ಕೊಂದ ನೀರೊ-ಳಗೆ ಪೊಕ್ಕು ತಂದೆಯ ಕರೆತಂದಖಗನಂತೆ ಕಡಹದಮರದಿಂದ ಹಾರಿವಿಗಡ ಸರ್ಪನ ಹೆಡೆಯೇರಿ ನಿಂದ6 ತುಳಿದಹಿತಲೆಯನು ಬಿಚ್ಚಿದನಾಗಲಲನೆಯರುಕ್ತಿಗೆ ಮೆಚ್ಚಿದ ಅಲರು ಮಳೆಯ ಸುರಿಯ ಹಚ್ಚಿದ ಕೃಷ್ಣಖಳರಳಕೆಗಳ ಕೊಚ್ಚಿದ 7 ನಂದನ ರಾಣಿಗೆ ಮೆಚ್ಚಿದ ತಾಯಚಂದದ ಕೈಗಳಿಂದುಚ್ಚಿದಇಂದೆನ್ನ ಮನೆಯೊಳು ಸಚ್ಚಿದಾ-ನಂದ ಹಿಡಿಯೆ ಕೈಯ್ಯ ಕಚ್ಚಿದ 8 ಕಣ್ಣೊಳು ಪಾಲನುಗುಳಿ ಪೋದ ಈಚಿಣ್ಣಗೆ ನೋಡಿದೆ ವಿನೋದಮಣ್ಣಮೆದ್ದಖಿಳವ ತೋರಿದ ಕೃಷ್ಣಸಣ್ಣ ಬಾಯನು ಮುಚ್ಚಿ ಮಗುವಾದ 9 ಕುಸುಮವೆತ್ತ ಖಡುಗ ವೆತ್ತ ಈಹಸುಗೂಸು ಎತ್ತ ಪರ್ವತವೆತ್ತಹಸಿವು ತೃಷೆಯ ಬಿಟ್ಟು ಗಿರಿಯ ಪೊತ್ತ ಈಶಶಿಮುಖಿ ಜನಕಿವನು ಸುಖವಿತ್ತ10 ಮೂರು ಲೋಕವಾಳುವ ಸಖಿಯರ ಗಂಡ ನೀಲ-ವರ್ಣನು ತೊಂಡರತೊಂಡ ಬಾಲಕನೀತಸರ್ವೇಶ ಕಂಡಾ ಇವಕೀಳೆಂದವ ಜಗದಲಿ ಭಂಡ 11 ಅರಳೆಲೆ ಮಾಗಾಯಿ ಮುಂಗೈಯ್ಯಲಿಟ್ಟುಸರಭಂಗಿ ಕೂಡಿ ತ್ರಿಭಂಗಿಯವರವೇಣುವನು ತನ್ನಂಗೈಯಲಿಟ್ಟ-ಧರದಲ್ಲೂದಿದ ನಮ್ಮ ರಂಗಯ್ಯ12 ಪಶುಪಕ್ಷ್ಷಿಗಳು ತರತರದಲ್ಲಿಎಸೆವ ಗೀತವ ಕೇಳಿ ವನದಲ್ಲಿಹಸುಳೆಯ ನೆನೆಯುತ್ತ ಮನದಲ್ಲಿ ಪರ-ವಶವಾದುವು ಆಕ್ಷಣದಲ್ಲಿ13 ಕೊಳಲೂದಿ ಸುರರನ್ನು ಸೋಲಿಸಿದ ರಾಗಕಲೆಗಳಿಂದೆಲ್ಲವ ಒಲಿಸಿದಇಳೆಯೊಳು ಗೀತವ ಕಲಿಸಿದ ಇಂತುಒಲಿದು ವಿಠಲ ನಮ್ಮ ಪಾಲಿಸಿದ14 ತÀರುಲತೆಗಳು ಪುಳಕಿತವಾಗೆ ಈಚರ ಪ್ರಾಣಿಗಳೆಲ್ಲ ಸ್ಥಿರವಾಗೆಹರಿಯ ವೇಣುನಾದ ಹೊಸಬಗೆ ಅತಿಹರುಷವ ನೋಡಲೈದಿದೆವೀಗ 15 ಚೆಲ್ಲಿದ ಕೈಯಿಂದಮಲ ನೀರ ನಮ್ಮೆಲ್ಲರ ನೀರಿಗಂಜನು ಧೀರನಲ್ಲ ನಾವಂದ ಮಾತನು ಮೀರನಿವಸುಲಭನೊಮ್ಮೆ ಮೊಗವ ತೋರ 16 ಪಾಲನೊಲೆಯೊಳಿಟ್ಟು ಪೋದೆವು ಈಕಾಲಭೂಷಣ ಕೈಗಾದವುಬಾಲರ ಕೆಲರು ಮರೆತು ಪೋದೆವು ಗೋ-ಪಾಲ ಸಂಗಕ್ಕೆ ಮರುಳಾದೆವು 17 ಉಂಬುವರಿಗೆ ಬಡಿಸಲಿಲ್ಲ ಪತಿಎಂಬುವನಾಜ್ಞೆಯೊಳಗೆ ನಿಲ್ಲದೆನಂಬಿದೆವು ನಾವು ಹರಿಯಲ್ಲದೆ ಅನ್ಯರೆಂಬುದು ಭಕ್ತ ವರ್ಗಕೆ ಸಲ್ಲದೆ18 ಧೇನು ಮಾತ್ರದಿಂದ ಫಲವೇನು ಕಾಮ-ಧೇನು ಶ್ರೀಕೃಷ್ಣನ್ನ ಕರೆದೆನುಮಾನಿನಿ ಮೊದಲು ಕರೆವಧೇನು ಬಿಟ್ಟುಜಾಣೆ ಸೇರಿದಳು ಕೃಷ್ಣನ ಪದವನು 19 ಶಿಶುವ ಬಿಟ್ಟೊಬ್ಬಳು ನಿಜಕನ್ಯೆತನದೆಸೆಯ ತೋರಿಸಬಂದಳಚ್ಚುತನ್ನಎಸೆವ ಶ್ರೀಪತಿ ತನ್ನ ರಮಣನು ಎಂದುಸುಟಳು ಮೊದಲಾಳ್ದ ಗಂಡನ 20 ಲಲನೆ ಕಣ್ಣಂಜನವಬಿಟ್ಟಳು ಜ್ಞಾನಚೆಲುವನಂಜನಕೊಡಂಬಟ್ಟಳುಒಲೆಯಪಾಲಗ್ನಿಗೆ ಕೊಟ್ಟಳು ಕೃಷ್ಣ-ಗೊಲಿದಧರ ಮನವಿಟ್ಟಳು21 ಇಂತು ತೊರೆದು ವಿಷಯಂಗಳ ಆ ಶ್ರೀ -ಕಾಂತನೆ ಕಾವ ಜಗಂಗಳಚಿಂತೆಯ ತೊರೆದೆವು ಮಂಗಳ ಲಕ್ಷ್ಮೀ -ಕಾಂತನೆ ಕಾಯೊ ಜಗಂಗಳ 22 ಕೇಶಿಯೆಂಬ ದೈತ್ಯನ ಕೊಂದ ಖಳನಾಶದಲಿ ಸದಾ ಮುಕುಂದಆ ಸಮಯದಲಿ ಅಕ್ರೂರ ಬಂದ ಅವಂಗೆಲೇಸÀಪಾಲಿಸಿ ಕೃಷ್ಣ ನಡೆತಂದ 23 ಮಧುರೆಯಲಿ ಮಲ್ಲರ ಸೋಲಿಸಿದ ತನ-ಗಿದಿರಾದ ಕಂಸÀನನೊರೆಸಿದಕದನಕೋಲಾಹನೆನಿಸಿದ ನಮ್ಮಮದನಶರಕೆ ಗುರಿಮಾಡಿದ24 ಎಲ್ಲ ದೇವರನಿವ ಮೀರಿದ ಸಖಿಬಲ್ಲವರಿಷ್ಟವ ಬೀರಿದಕಲ್ಲಕಂಬದಿ ಬಂದು ತೋರಿದ ಖಳರೆÉಲ್ಲಿದ್ದರಲ್ಲಿಗೆ ಹಾರಿದ 25 ದಯದಿಂದ ಸಖನಮಗಾದವ ಚೆಲ್ವಹಯವದನ್ನ ಕೃಪೆಯಾದವನಯದಿ ಜಲವ ಪೊಕ್ಕು ಪೋದವ ವೈ-ರಿಯ ಕೊಂದು ವೇದವ ಕಾಯ್ದವ 26
--------------
ವಾದಿರಾಜ
ತತ್ವನಿರೂಪಣೆ ಆಟವಾಡುವ ಕೂಸು ನಾನು | ಕೃಷ್ಣ ಕಾಟಬಡಿಸುವೆ ನಿನ್ನ ಸಾಧನವ ನೀಡೊ ಪ. ಗುರುಗಳು ತಂದು ನಿನಗೊಪ್ಪಿಸಿದರೆಲೊ ದೇವ ಸರಿಯ ಸಖನೆಂದು ಅನುಗಾಲವೂ ಸಿರಿಯರಸ ಕೇಳಿನ್ನು ಹಿರಿಯನೆ ನೀನಹುದೊ ಕಿರಿಯತನದಿಂದ ನಾ ಆಟವಾಡುವೆನೊ 1 ಹೃದಯವೆಂಬೋ ಪುಟ್ಟ ಮನೆಯ ಕಟ್ಟಿ ಅಲ್ಲಿ ಮುದದಿಂದ ಅಷ್ಟದಳ ಪದುಮ ರಚಿಸಿ ಒದಗಿ ಬರುತಿಹ ದುಷ್ಟ ಅರಿಗಳನೆ ನುಗ್ಗೊತ್ತಿ ಪದುಮನಾಭನೆ ನಿನ್ನ ಜೊತೆಯವರೊಡನೆ2 ಅಂಬರ ಮಧ್ಯದಲಿ ಬಿಂಬವೆನ್ನುವ ದಿವ್ಯ ಬೊಂಬೆಯನೆ ಇಟ್ಟು ಸಂಭ್ರಮದಿ ಶೃಂಗರಿಸಿ ಹಾಡಿ ಪಾಡಿ ಕುಣಿದು ಆಂಬ್ರಣಿನುತ ನಿನ್ನ ನೋಡಿ ದಣಿಯುವೆನೊ 3 ಪುಂಡರೀಕಾಕ್ಷ ನಿನ್ನ ಕೊಂಡಾÀಡುವೊ ಬಹಳ ತಿಂಡಿಯನೆ ನೀಡೆನಗೆ ಅನುಗಾಲವೂ ಭಂಡು ಮಾಡುವರೊ ಬರಿಕೈಲಿದ್ದರೆ ಸಖರು ಕಂಡು ಕಂಡೂ ನೀನು ಸಮ್ಮನಿರಬೇಡೊ 4 ಎಷ್ಟು ಜನ ಸ್ನೇಹಿತರೊ ಈ ಮನೆಯೊಳೆಲೆ ದೇವ ಪುಟ್ಟನಾಗಿರುವೆ ನಾನೆಲ್ಲರಿಗೆ ಇನ್ನು ಕೊಟ್ಟರೆ ಸಲಕರಣೆ ಆಟವಾಡುವೆ ಅಳದೆ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀ ಚಪ್ಪರ ಶ್ರೀನಿವಾಸಪ. ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆ ದರ್ಪಕತಾತನೆ ತಾ ಸಜ್ಜನಪ್ರೀತಅ.ಪ. ಮಾಧವ ನಿನ್ನಯ ಮಹಿಮೆ ತಿಳಿಯದಪ- ರಾಧವ ಮಾಡಿದೆ ದಾರಿದ್ರ್ಯದ ಪಾದ ದರುಶನದ ಗಾದಿಯ ಕಾಣದಾದೆ ನಾ ದ್ರೋಹಿಯಾದೆ1 ತ್ರಾಣವಿರುವಾಗ ಕಾಣಿಕೆ ಹಾಕಿದೆ ದೀನದಾರಿದ್ರ್ಯದ ಹೊತ್ತಿನಲಿ ಮೇಣದರಿಂದಲಿ ತೆಗೆದು ತೆಗೆದು ಪಂಚ ಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ2 ಮಂದವಾರದಿಕ್ಕೊಂದೂಟವ ಸತ್ತ್ವ ದಿಂದಿರುವಾಗ ನಾ ನೇಮಗೈದೆ ಮಂದಭಾಗ್ಯ ಜ್ವರದಿಂದ ಪೀಡಿತನಾದ- ರಿಂದೆರಡೂಟವನೂ ಮಾಡಿದೆ ನಾನು3 ಶನಿವಾರಕ್ಕೊಂದಾಣೆ ಕಾಣಿಕೆ ಹಾಕುತ್ತ ಮಿನುಗುವ ಡಬ್ಬಿಯ ನಾ ಮಾಡಿದೆ ಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದ ಹಣವೆಲ್ಲ ಗುಣ ನುಂಗಿತು ಪಾದಕೆ ಗೊತ್ತು4 ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದ ದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿ ಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣ ಗುಡ್ಡೆಯ ಮೇಲಿರುವ ಮಹಾನುಭಾವ5 ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯು ಮಂಡೆಯೊಳುರಿವುದು ಖಂಡಿತದಿ ಪುಂಡರೀಕಾಕ್ಷನೆ ಕರುಣಾಮೃತರಸ ಕುಂಡದೊಳ್ ಮೀಯಿಸಯ್ಯ ವೆಂಕಟರಾಯ6 ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆ ಕೆಡುಕು ಮಾಡುವುದೇನು ಜಡಜನಾಭ ಕಡಲಶಯನ ಲಕ್ಷ್ಮೀನಾರಾಯಣ ನ- ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ7
--------------
ತುಪಾಕಿ ವೆಂಕಟರಮಣಾಚಾರ್ಯ