ಒಟ್ಟು 66 ಕಡೆಗಳಲ್ಲಿ , 32 ದಾಸರು , 60 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂಥ ಬುದ್ಧಿಯಲ್ಲಿ ಸೇರಿತೊ ಕೃಷ್ಣ ಗೋಕುಲದೊಳುಎಂಥವರೂ ನಿನ್ನ ದೂರು ಹೇಳುತಿಪ್ಪರೊ ಹೀಗಾದರೆ ನಿಲ್ಲರೋ ಪಗಂಡನುಳ್ಳ ನಾರಿಯರಾ ಮಂದಿಯೆಲ್ಲ ನೋಡ ಬಲು ಉ-ದ್ದಂಡತನದಲ್ಲಿ ಸೀರೆ ಸೆರಗ ಪಿಡಿವರೇ ಇಂಥ ದುಡುಕು ಮಾಡುವರೇ ||ಚಂಡಾಡುವಾಗೆನ್ನವಸನ ಮರೆತೆ ಕೊಂಡು ಪೋಗಲವಳು |ಕಂಡು ಕೊಸರಿಕೊಂಡರಿಂಥ ಸುದ್ದಿ ಹುಟ್ಟಿಸಿ ಪೇಳುವಳಮ್ಮ ಹೊಂದಿಸಿ 1ಹಿರಿಯರುಳ್ಳಾ ಸೊಸೆಯ ಕೂಡ ಒಗೆತನವ ಕೆಡಿಸುವಂತೆ |ಸರಸವಾಡುವದು ನಿನಗೆ ಸಲ್ಲುವದೇನೋ ಯನಗೆ ಭೂಷಣವೇನೋ ||ನಿರುತ ಅವಳ ತಾಯಿ ನಂದಗೋಪಗಣ್ಣಾಯೆಂದು ಕರೆಯ- |ಲರಿತೆನತ್ತೆ ದುಗಳು ನಾದಿನಿಯೆಂದು ಮನಸಿಗೆ ಚರ್ಚೆ ಮಾಡಿದೆನೀ ಬಗೆ2ಕುಲದೇವತೆಯ ಮೀಸಲು ತುಪ್ಪ ನೆಲವಿನ ಮೇಲಿಟ್ಟಿರಲು ಮದ್ದು |ಕಲಶವ ಒಡೆದು ಬಾಹುವದೆಲ್ಲ ಚಿನ್ನಾಟವೇನೋ, ಅವರು ಮುದ್ದಿಸುವರೇನೋ ||ತಿಳಿಯದೆ ನೆಳಲಿದುಯೆಂದು ಕಳ್ಳನ ಒಳಗಿರಿಸಿಹಳೇಕೆಂದು ವಡದೆ |ನೆಲಖರಿಧೋಗುವಘೃತನೋಡಲೆ ತಿಂದೆನಮ್ಮಯ್ಯ ತಪ್ಪಿರೆ ಕಟ್ಹ್ಯಾಕು ಕಯ್ಯ 3ಚಿನ್ನನಂತೆಯಾಗಿಯವರ ಮಗ್ಗುಲೊಳು ಮಲಗಿಯೆಂಥ |ಸಣ್ಣ ಕೃತ್ಯ ಮಾಡಿ ಬಾಹುವೆಂತಲ್ಲೋ ಕಂದ ಕೇಳುವರಿಗೇನುಛಂದ||ನಿನ್ನ ಸಲಿಗೆ ಬಹಳ ಕಂಡು ಇಲ್ಲದ್ದೊಂದೆ ಹುಟ್ಟಿಸುವರು |ಯನ್ನ ದಿಸವಕ್ಕೀ ಜಾರತ್ವ ಕಲಿತಿದ್ದೇನೇನೇ ನಿನಗೇನೂ ತಿಳಿಯದೇನೇ 4ಕದ್ದು ಮೊಲೆಯುಂಡು ಕರು ಬಿಟ್ಟು ಹರಕೊಂಡಿತು ನೋಡಿರಿ ಎಂಬೆಯಂತೆ |ದುಗ್ಧವೆಮಾರಿಬಾಳಿವೆ ಮಾಡುವರೆಂತು ತಾಳುವರೋ ಹೀಗಾದರೆ ನಿಲ್ಲರೋ ||ಇದ್ದಾ ಮನೆಯವರಿಗೆ ನಂಬವು ಅಂಥಾಲಾಳ ಮೊಲೆಯ ನಾನುಂಡರೆ ಮೋರೆಗೆ |ಒದ್ದರೆ ರೋದನ ಮಾಡುತ ನಿನ್ನ ಬಳಿಗೊಂದಿನ ಬಾರೆನೇ ಹುಡುಗರಿಗಂಬುವ ಮಾತೇನೇ 5ಇಡಲುದಕವ ಬೆರಸಿ ಮಜ್ಜನಕೆ ಛಲದಿಂದಲಿ ಚಲ್ಲಿ ಬಾಹುವರೇ |ಬಡಿವೆನೊ ನಾ ತಾಳದೆ, ಮುದ್ದಾದರೆ ಮತ್ತೊಮ್ಮೆಯುಣಬೇಕು ಆಡುತ ಮನೆಯೊಳಗಿರಬೇಕು ||ಹುಡುಗರ ಸಂಗಡ ಅಣ್ಣನೂ ನಾನೂ ಇದ್ದೆವೆ, ಅಲ್ಲಾಕೆಯ ಮೊಮ್ಮಗನು |ಗಡಿಗೆಯ ಉರುಳಿಸೆ ನಾ ಕಂಡವರಿಗೆ ಹೇಳಿದೆನೆ ಇಷ್ಟಾ ಯನ್ನನು ಕಾಡುವದದೃಷ್ಟಾ 6ಎದೆಗಳ ಮುಟ್ಟುವದೇಕೋ ಎರಕೊಂಬುವರಲ್ಲಿಗೆ ಪೋಗಿಯಿನ್ನನ್ನಾ |ಹದದಿಂದಲೆ ಯಿರು ಶಿಕ್ಷೆಯ ಮಾಳ್ಪೆ ಎಚ್ಚರಿಕೆಯಿರಲಿ ಕಾಲ್ಪಡಿದರೆ ಬಿಡೆನೋ ಮರಳಿ ||ಮುದದಿಂದಲಿ ಚಂಡೊಗೆಯಲು ಅವಳಾ ಬಚ್ಚಲಿಯೊಳು ಬಿತ್ತು ತಕ್ಕೊಂಡೇ |ಹದ ತಪ್ಪಿದರೀ ಹೆಂಗಸರೆಲ್ಲಾ ಪ್ರಾಣೇಶ ವಿಠಲನಾಣೇ ಸುಳ್ಳಲ್ಲವು ಕಾಣೇ 7
--------------
ಪ್ರಾಣೇಶದಾಸರು
ಎಳೆಯನೆನ್ನದಿರಮ್ಮ ಎಲೆಗೋಪಿಕೃಷ್ಣಗೆಕೆಳದೇರುಟ್ಟಿಹವಸನಕಳೆವ ಜಾರಮಣಿಗೆಪ.ನಡುವಿರುಳೆ ಬಂದೆಮ್ಮ ನಲ್ಲರಂತೆ ಮಾತನಾಡಿಪಿಡಿದು ಚುಂಬಿಸಿ ಪರಿಯಂಕದಲ್ಲಿ ಕೂಡಿಮಡದಿಯರಂತ ನಾವು ಮಾಯ ಮೋಸದಿ ಗೆಲ್ಲುವಒಡನೆ ಗೋವಳನಂತೆ ಒಪ್ಪುವ ಗಾಡಿಕಾರಗೆ 1ಬಾಲಕನಂತೆ ಕಂಗೊಳಿಸಿ ಬೀದಿಯೊಳು ಸುಳಿಯಲುನಲವಿಂದೆತ್ತಿಕೊಂಡು ನೇಹ ತೊಡರಿ ಅಪ್ಪಿಕೊಂಡುನೀಲದ ಹಣ್ಣ ನೀಡೆ ತಾನಾಲದ ಹಣ್ಣು ಬೇಡುವಮೇಲಣ ಮಾತೇನೆ ಬೇಗ ಮೊಳೆಮೊಲೆಗ್ಹೆಣಗುವಗೆ 2ರನ್ನದುಂಗುರ ಬೆರಳ ರತಿಗೆ ಮಾರನ ಸರಳಕನ್ನೆಯರನೆಲ್ಲ ಚೆಲ್ವ ಕಣ್ಣ ಸನ್ನೆಲೆ ಮೋಹಿಸುವಚಿನ್ನನೆನ್ನಬಹುದೆ ಇವಗೆಚಟುಲಪ್ರಾಯದವಗೆ ಪ್ರಸನ್ನ ವೆಂಕಟೇಶ ನಮ್ಮ ಸೇರಿ ಬೆನ್ನಬಿಡನಮ್ಮ 3
--------------
ಪ್ರಸನ್ನವೆಂಕಟದಾಸರು
ಏಳು ಶ್ರೀ ಗುರುರಾಯ ಬೆಳಗಾಯಿತಿಂದುಧೂಳಿ ದರುಶನ ಕೊಡಿರಿ ಈ ವೇಳೆ ಶಿಷ್ಯರಿಗೆ ಪ.ಏಳುಗುರುರಾಘವೇಂದ್ರ ಏಳು ದಯಾಗುಣಸಾಂದ್ರಏಳು ವೈಷ್ಣವ ಕುಮುದಚಂದ್ರ ಶ್ರೀ ರಾಘವೇಂದ್ರ ಅ.ಪ.ಅಶನವಸನಗಳಿಲ್ಲವೆಂಬವ್ಯಸನಗಳಿಲ್ಲಮುಸುಕ್ಹಾಕಿ ಮೋಸದಲೆ ಮೋಹಿಸಿದೆನೆಲ್ಲಅಸುರಾರಿಯ ಸ್ಮರಿಸದೆ ಪಶುವಿನೊಲು ಈ ದೇಹವಸುಮತಿಯೊಳು ಬಹಳ್ಹಸಗೆಟ್ಟಿತಲ್ಲ 1ನಾನು ನನ್ನದು ಎಂದು ಹೀನಮನಸಿಗೆ ತಂದುಏನು ಮಾಡುವಕರ್ಮನಾನೆ ಅಹುದೆಂದುಸ್ವಾಮಿ ಕರ್ತೃತ್ವವನು ತಿಳಿಯಲಿಲ್ಲ ನಾನೊಂದುನೀನೆ ಉದ್ಧರಿಸಯ್ಯ ದೀನ ದಯಾಸಿಂಧು 2ಅನ್ಯರ ಕೈಯಲ್ಲಿ ನಿನ್ನವರನಿರಿಸುವುದುಅನ್ಯಾಯವಾಯ್ತುಪಾವನ್ನಗುರುರಾಯಎನ್ನ ಮಾತಲ್ಲವಿದು ನಿನ್ನ ಮಾತೇ ಸರಿಮನ್ನಿಸಿ ಆಗು ಪ್ರಸನ್ನ ಗುರುರಾಯ 3ವೇದ ಶಾಸ್ತ್ತ್ರಗಳನ್ನು ಓದಿ ಪೇಳ್ದವನಲ್ಲಭೇದಾಭೇದವನು ತಿಳಿಯಲಿಲ್ಲಸಾಧು ಸಜ್ಜನರ ಸಹವಾಸ ಮೊದಲಿಲ್ಲಹಿಂದಾಗಿಮಾನಮಾರಿಸಿದಿ ಉಳಿಸಲಿಲ್ಲ4ಆಸೆಗೊಳಗಾದೆನೊ ಹೇಸಿ ಮನುಜನು ನಾನುಕ್ಲೇಶಭವಸಾಗರದೊಳೀಸುತಿಹೆನೊಏಸುಜನ್ಮದಿ ಎನ್ನಘಾಸಿಮಾಡಿದೆ ಮುನ್ನದಾಸನಾಗುವೆ ತೋರೊ ಪ್ರಸನ್ನವೆಂಕಟನ 5
--------------
ಪ್ರಸನ್ನವೆಂಕಟದಾಸರು
ಕೂಡಲ ಮಾಣಿಕ್ಯ ಕ್ಷೇತ್ರಸ್ಥ ಭರತ ಪ್ರದ್ಯುಮ್ನ60ಶ್ರೀ ರಾಮಚಂದ್ರಾನುಜ ಭರತರಾಜಶರಣಾದೆ ತವಚರಣಯುಗಳ ತೋಯಜಕೆ ಪಉರು ಪರಾಕ್ರಮಿ ದುರ್ಗೆರಮಣ ಹರಿಚಕ್ರದಲಿಇರುವೆ ನೀ ತದ್ರೂಪದಲಿ ಸೇವಿಸುತಲಿಮಾರಶ್ರೀ ಕೃಷ್ಣಸುತ ಸ್ಕಂಧಾದಿರೂಪಿ ನೀಧೀರ ನಿನ್ನಲಿ ಕೃತೀಪತಿಯು ಪ್ರಜ್ವಲಿಪ 1ಉಡುಪಶೇಖರ ಕೊಟ್ಟ ವರಬಲದಿ ಪೌಲಸ್ತ್ಯಕಡು ಕಷ್ಟ ಕೊಡಲಾಗಸುರರುಮೊರೆಯಿಡಲುಕಡಲಶಯನನು ರಾಮ ಪ್ರಾದುರ್ಭವಿಸಲು ನೀನುಹೆಡೆರಾಜ ಅನಿರುದ್ಧಸಹ ಬಂದೆ ಬುವಿಯೊಳ್ 2ಕೇಕಯಕೆ ನೀ ಪೋಗೆ ಕೈಕೇಯಿ ವರದಿಂದರಾಕೇಂದುನಿಭಮುಖನು ನಿಷ್ಕಳ ಶ್ರೀರಾಮನನೂಕಲು ವನಕೆ ನೀ ಬಂದರಿತು ಧಿಕ್ಕರಿಸಿಏಕಾತ್ಮ ರಾಮನಲಿ ಪೋಗಿ ಬೇಡಿದೆಯೊ 3ಸ್ವೀಕರಿಸಿ ರಾಜ್ಯವಾಳೆಂದು ನೀ ಬೇಡಲುಅಖಿಲಾಂಡಕೋಟಿ ಬ್ರಹ್ಮಾಂಡಪತಿ ರಾಮನಾಕಿ ಭೂಸುರರೊಡೆಯ ಹದಿನಾಲ್ಕು ವರ್ಷಗಳುಆಗೆ ತಾ ಬರುವೆನು ಎಂದು ಪೇಳಿದನು 4ದೇವ ಶ್ರೀ ರಾಮನ ಸುಖಜ್ಞಾನಮಯಪಾದಸೇವಿಸಿ ಪ್ರೇಮಪ್ರವಾಹದಲಿ ನೀನುಬುವಿಯನು ಪವಿತ್ರ ಮಾಡುವ ಪಾದಪೀಠವನುನವವಿಧ ಭಕ್ತಿಯಲಿ ತಂದು ಪೂಜಿಸಿದೆ 5ನಂದಿಗ್ರಾಮದಲಿ ನೀ ತಪಶ್ಚರ್ಯದಲಿ ಇದ್ದುಬಂದಿಲ್ಲ ರಾಮನೆಂದಗ್ನಿ ಮುಖದಲಿ ನಿಲ್ಲೆಬಂದ ಇಕ್ಕೋ ಸ್ವಾಮಿ ರಾಮಚಂದ್ರನು ಎಂದಇಂದಿರೇಶನ ಪ್ರಥಮ ದೂತ ಶ್ರೀ ಹನುಮ 6ಅಖಿಲೇಶ ಸುಖಮಯನು ಶ್ರೀ ರಾಮಚಂದ್ರನುಸುಖ ಪೂರ್ಣ ಸೀತಾಸಮೇತ ಬರುವುದನುನೀಕೇಳಿಮುದದಲಿ1 ಮಾತೇರು ಶತ್ರುಘ್ನಭಕುತ ಪುರಜನ ಕೂಡ ಪೋದೆ ಕರೆತರಲು 7ಕಮಲೆ ಜಾನಕಿಪತಿಯ ಮೇಲೆ ಪೂಮಳೆ ಕರೆದುನಮಿಸೆ ನೀ ಭಕ್ತಿಯಲಿ ಕೃತಕೃತ್ಯ ಮನದಿಸ್ವಾಮಿ ರಾಮನು ನಿನ್ನಅಚಲಭಕ್ತಿಯ ಮೆಚ್ಚಿಪ್ರೇಮದಿಂದಲಿ ನಿನಗಾಲಿಂಗನವನಿತ್ತ 8ಸುರರ ನಗರೋಪಮವು ಸರೆಯೂ ತಟಿನಿಯಲ್ಲಿಇರುವುದು ಅಯೋಧ್ಯಾ ಆ ಪುರಿಜನರು ಎಲ್ಲಾಶ್ರೀರಾಮ ಸೀತಾಸಮೇತ ಪರಿವಾರ ಸಹಪುರಿಯೊಳು ಬರಲು ಆನಂದ ಹೊಂದಿದರು 9ಅಘದೂರ ಪೂರ್ಣಕಾಮನ ಮಂದಹಾಸವನುನರಜನರು ನೋಡಿ ಹಿಗ್ಗಿ ಘೋಷಿಸಲುಜಗಜ್ಜನ್ಮ ಸ್ಥಿತ್ಯಾದಿಕರ್ತ ಭೂಕಾಂತ ಶ್ರೀರಾಘವಗೆ ಮಾಡಿಸಿದೆ ರಾಜ್ಯಾಭಿಷೇಕ 10ಶ್ರೀ ರಾಮಭದ್ರನಿಗೆ ಯುವರಾಜನಾಗಿದ್ದುಭರತರಾಯನೆ ನೀನು ಸೇವೆ ಅರ್ಪಿಸಿದೆಸರಸಿಜೋದ್ಭವ ಲೋಕದಂತಾಯಿತೀ ಲೋಕವರವಿಷ್ಣು ಭಕ್ತಿಯು ಸೌಖ್ಯ ಎಲ್ಲೆಲ್ಲೂ11ಶರದಿಂದ ನೀನು ಗಂಧರ್ವರೂಪದಲಿದ್ದಮೂರು ಕೋಟಿ ಕ್ರೂರ ಅಸುರರನು ಕೊಂದೆಕರುಣಿಸಿ ನೀ ಎನ್ನ ಕಷ್ಟಗಳ ಪರಿಹರಿಸೊಶ್ರೀ ರಾಮಪ್ರಿಯ ಭರತ ಎನ್ನ ಗುರುಗಳ ರಾಜ 12ಶ್ರೀ ರಾಮ ಅವತಾರ ಕಾರ್ಯ ತಾ ಪೂರೈಸಿಸುರರುಮುನಿಗಣ ಮುಕ್ತಿಯೋಗ್ಯರ ಸಮೇತತೆರಳೆ ಸ್ವಧಾಮಕ್ಕೆ ಚಕ್ರ ನೀ ಚಕ್ರವನುಶ್ರೀರಾಮನಿಗೆ ದಕ್ಷಪಾಶ್ರ್ವದಲಿ ಪಿಡಿದೆ 13ಗರುಡಮೃಡಶೇಷಸ್ಥ ಭಾರತೀಪತಿ ಹೃಸ್ಥಪರಮಪೂರುಷ ಕೃತೀಪತಿಯು ಪ್ರದ್ಯುಮ್ನಹರಿರಾಮನಲಿ ಸದಾ ಭಕ್ತಿಭರಿತನೆ ಭರತವರನೀನು ಅಹಂಕಾರಿಕ ಪ್ರಾಣಾದ್ಯರಿಗೆ14ಸರಸಿಜಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸನವರಭಕ್ತ ವೃಂದ ಶಿರಮಾಣಿಕ್ಯ ಭರತಧರೆಯೊಳುತ್ತಮ ಕೂಡಲ್ ಮಾಣಿಕ್ಕವೆಂಬುವಕ್ಷೇತ್ರದಲಿ ನಿಂತು ಹರಿಭಕ್ತರನು ಪೊರೆವೆ 15
--------------
ಪ್ರಸನ್ನ ಶ್ರೀನಿವಾಸದಾಸರು
ಚಂದ್ರಗಾವಿಯನುಟ್ಟು ದುಂಡು ಮುತ್ತನೆಕಟ್ಟಿ|ಪೆಂಡೆಯರುಳಿಯನಿಟ್ಟು ||ಕೆಂದಾವಿನ ಹಾಲ ಹರವಿಯ ಹೊತ್ತುಕೊಂಡು |ಬಂದಾಳು ಬೀದಿಗಾಕೆ ಪಹಾಲು ಮಾರುವ ಧ್ವನಿ ಲಾಲಿಸಿ ರಂಗಯ್ಯ |ಮೇಲಿನ ಕೇರಿಯಲಿ ||ನಾಳೆ ನಮ್ಮನೆಯಲಿ ವೀಳೆ-ಪ್ರಸ್ತಗಳುಂಟು |ಹಾಲು ನಿಲ್ಲಿಸೆಂದನು 1ಕೊಂಡವನು ನೀನಲ್ಲ ಡಂಭಕರ ಮಾತೇಕೊ |ಗಂಡನುಳ್ಳವಳ ಕೂಡ ||ಮಂಡಲವಾಳುವ ಅರಸಿನ ಮುಂದೆ ಹೇಳಿ |ದಂಡವ ತೆರಸುವೆನೊ 2ಅಡವಿಹಂಬುಗಳಿಗೆ ಹೆಡಿಗೆ ಸುಂಕವು ಇಲ್ಲ |ತಡೆದವ ನೀನಾರೊ? ||ನಡೆ ಊರ ಮುಂದಕೆ ತಳವಾರರೈದಾರೆ |ಗಡನೆ ಪೇಳುವೆನೆಂದಳು 3ಬಲ್ಲೆ ಬಲ್ಲೆನೆ ನಿನ್ನ ಬಗೆಯ ಮಾತುಗಳೆಲ್ಲ |ಎಲ್ಲಿಹ ತಳವಾರನೆ ||ಅಲ್ಲದಿದ್ದರೆ ಬಂದು ವೀಳ್ಯವ ತಕ್ಕೊಂಡು |ಅಲ್ಲಲ್ಲಿ ದೊರದಿರೆ 4ಕೋಲು ಕೈಯಲಿ ಪಣೆಯಲಿ ಸಿರಿನಾಮವು |ಆಲದ ಮರದಡಿಯೆ ||ಕಾಲಮೊದಲು ಹಾಲ ಮಾರಿದ ಸುಂಕರೆ |ನಿಲ್ಲೆಂದು ಸೆರಗ ಪಿಡಿದ 5ಅಪ್ಪ ಸೆರಗ ಬಿಡೊ, ಅಣ್ಣ ಸೆರಗ ಬಿಡೊ |ಅಪ್ಪಯ್ಯ ಸೆರಗ ಬಿಡೊ ||ಅಪ್ಪನು ನಾನಲ್ಲ, ಅಣ್ನನು ಅಲ್ಲ ನಿ-|ಮ್ಮಪ್ಪನ ಅಳಿಯ ಕಾಣೆ 6ಮಾವ ಸೆರಗ ಬಿಡೊ,ಭಾವಸೆರಗ ಬಿಡೊ |ಭಾವಯ್ಯ ಸೆರಗ ಬಿಡೊ ||ಮಾವನು ನಾನಲ್ಲ, ಭಾವನು ನಾನಲ್ಲ |ಮಾವನ ಮಗನು ಕಾಣೆ 7ಅಣ್ಣ ಸೆರಗ ಬಿಡೊ, ತಮ್ಮ ಸೆರಗ ಬಿಡೊ |ಅಣ್ಣಯ್ಯ ಸೆರಗ ಬಿಡೊ ||ಅಣ್ಣಯ್ಯ ನಾನಲ್ಲ, ತಮ್ಮನು ಅಲ್ಲ ನಿ-|ಮ್ಮಣ್ಣನಭಾವಕಾಣೆ8ಕಂದ ಸೆರಗ ಬಿಡೊ, ತಂದೆ ಸೆರಗ ಬಿಡೊ |ಕಂದಯ್ಯ ಸೆರಗ ಬಿಡೊ ||ಕಂದನು ನಾನಲ್ಲ, ತಂದೆಯು ನಾನಲ್ಲ |ಕಂದನ ತಂದೆ ಕಾಣೆ 9ನೆತ್ತಿಮೇಲಿನ ಕೊಡ ಎತ್ತಿ ಈಡಾಡುತ |ಎತ್ತಿಕೊಂಡಳು ಕೃಷ್ಣನ ||ಭಕ್ತರ ಸಲಹುವ ಪುರಂದರವಿಠಲ |ವತ್ಸವೆಂಕಟರಾಯನ10
--------------
ಪುರಂದರದಾಸರು
ನಾಗರಾಜ ನರಸುರ ನಮಿತೇ |ಸಾಗರ ಕರುಣೀ ಸರಸ್ವತೀ ||ಕೋಗಿಲ ಗಾನವಿನೋದಿತೇ ಬೇಗನೆವರಗಳ ಕೊಡು ಮಾತೇ ಪಶೃಂಗೇರಿ ಪುರವರ ನಿಲಯೇ |ಮಂಗಲಚರಣೆ ಶಾರದೆಯೇ |ಭೃಂಗಕುಂತಲೆಭವಭಂಗನಿವಾರಿಣಿ |ರಂಗನ ಸುತನರ್ಧಾಂಗಿಯೆ ರಕ್ಷಿಸು 1ಪುಸ್ತಕಹಸ್ತಜಗದ್ಭರಿತೇ ಉತ್ತಮಳೆಮಕುಟಾನ್ವಿತದಾತೇ |ಪೃಥ್ವಿಪಾಲ ಮನದರ್ಥಿಯ ಸಲಿಸುವ |ಸ್ವಸ್ತಿಶ್ರೀಮನ್ಮಥನತ್ತಿಗೆ ಶಾರದೆ 2ಕುಂದಮಂದಾರಪುಷ್ಪಗಳ |ಚಂದಣ ಕುಂಕುಮ ಗಂಧಂಗಳಮಂದಗಮನೆ ಅರವಿಂದನಯನೆ ಗೋವಿಂದನ ಸೊಸೆಗಾನಂದದೊಳರ್ಚಿಸಿ 3
--------------
ಗೋವಿಂದದಾಸ
ನಾರಾಯಣ ನಿನ್ನ ನಾಮವನು ನೆನೆದರೆ |ಹಾರಿಹೋಹುದು ಪಾಪ ಜನ್ಮಜನ್ಮಾಂತರದಿ |ಶ್ರೀ ರಮಣ ನಿನ್ನ ಕೃಪೆಯಿತ್ತೆಮಗೆ ಮುಕ್ತಿಯ -ದಾರಿ ತೋರಿಸೊ ಮುರಾರಿ ಪಸಕಲ ವೇದ ಪುರಾಣ _ ಶಾಸ್ತ್ರವನು ತಿಳಿದೋದಿ |ತಿಯಿಂಭಕುತ ತಾಯ್ತಂದೆಗಳ ಚಿತ್ತವಿಡಿದರ |ರಕುಷಣೆಯ ಮಾಡಿ ಜಗದೊಳಗೆ ವಿಖ್ಯಾತ ಸುಕು -ಮಾರ ತಾನೆಸಿಸಿಕೊಂಡ1ಪ್ರಕೃತಿಯಲಿ ಹೋಮಕೋಸ್ಕರ ಸಮಿಥೆ ತರಹೋಗಿ |ಶುಕರುಮಗಳಿಂದ ಚಾಂಡಾಲಿಲೆಯ ಕಂಡು ತಾ - |ಮೂಕನಾಗಿನಿಂದು ಮೈಮರೆದು ಪಾತಾಕಿಯ ಬಹ -ದುರಿತವನು ತಾನರಿಯದೆ 2ನಿಲ್ಲು ನಿಲ್ಲೆಲೆ ಕಾಂತೆ, ನಿನಗೊಲಿದೆ ನೀನಾರೆ |ಸೊಲ್ಲಿಸೆನ್ನೊಡನೆ ಸತಿಯರ ಕುಲಕೆಕಟ್ಟಾಣಿ |ಚೆಲ್ಲೆನ್ನ ಮೇಲೆ ಕರುಣವನಿಂತು ಕೋಮಲೆಯೆನಿಲ್ಲೆಂದು ಸೆರಗ ಪಿಡಿದ 3ಎಲೊವಿಪ್ರ ಕೇಳು ನಾ ಕುಲಹೀನೆ ನಮ್ಮ ಮನೆ |ಹೊಲನೆನದು ಗೋಮಾಂಸ ಚರ್ಮದಾ ಹಾಸಿಕೆಯು |ಎಲುವಿನಾ ರಾಶಿ ಒದರುವ ನಾಯ ಹಿಂಡುಗಳು -ಬಹು ಘೋರಘೋರ ವಿಹುದು 4ಬಲೆಗೆ ಸಿಲ್ಕಿದ ಪಕ್ಷಿ ಬೇಟೆಗಾರನದಲೇ ? |ಕುಲವನ್ನು ಕೂಡೆ ನಾ ಕಾಮಿನೀರನ್ನಳೆ |ಚಲದಿಂದ ಬದುಕುವೆನು ಸುಖದಿಂದಲಿರುವೆ ನೀಒಲವು ನನಗೊಂದೆ ಎಂದ 5ವ್ಯರ್ಥ ಎನ್ನೊಡನೆ ಮಾತೇತಕೆಲೊ ಹಾರುವಾ |ಚಿತ್ತ ನನ್ನಲ್ಲಿ ಇದ್ದರೆ ಹೋಗಿ ನೀ ನಿನ್ನ |ಹೆತ್ತ ತಾಯ್ತಂದೆಯರ ಕೇಳು ಸಮ್ಮತಿಸಿದರೆ -ಮತ್ತೆ ನಿನಗೊಲಿವೆನೆನಲು 6ಅತ್ತ ಕಾಮಿನಿಯ ಒಡಗೊಡಿ ತನ್ನಯ ಪಿತನ |ಹತ್ತಿರಕೆ ಹೋಗಿ ಕೇಳಿದರೆ ಆತನು ಎಂದ |ಉತ್ತಮದ ಕುಲವನೀಡಾಡಿ ಈ ಪಾತಾಕಿಯ -ಹಸ್ತಕೊಳಗಾಗದಲಿರೈ 7ಆಗದಾಗದು ನನ್ನ ಕುಲಬಂಧು - ಬಳಗವನು |ನೀಗಿ ನಿನ್ನೊಡನೆ ಕೂಡುವೆನೆಂಬ ಮತವೆನಗೆ |ನಾಗಭೂಷಣನ ಪಣೆಗಣ್ಣಿಲುರಿದನ ಬಾಣತಾಗಿತೆನ್ನೆದೆಗೆ ಎಂದ 8ಕೂಗಿ ಹೇಳುವೆ ನಿನ್ನ ಕುಲವಳಿಯದಿರು ಎಂದ |ಹೋಗಿ ಕೂಡದೆ ನಿನ್ನ ಹೆತ್ತ ತಾಯ್ತಂದೆಗಳಿ - |ಗಾಗದಿದ್ದರೆ ಆಚೆಯಾ ಮನೆಯೊಳಗೆ ಹೋಗಿಇಬ್ಬರೂ ಇರುವೆವೆಂದ 9ಹಾಲಂತ ಕುಲವ ನೀರೊಳಗದ್ದಿ ಪೂರ್ವದಾ |ಶೀಲವನ್ನಳಿದು ಸತಿಯಳ ಕೂಡಿ ತಾನು ಚಾಂ - |ಡಾಲಿತಿಗೆ ಹತ್ತು ಮಕ್ಕಳನು ಪಡೆಕೊಂಡವರಲೀಲೆ ನೋಡುತಲಿ ಹಿಗ್ಗಿ 10ಬಾಳಿನಲ್ಲೀ ರೀತಿ ಅಜಮಿಳನು ಇರುತಿರಲು |ಕಾಲ ಬಂದೊದಗಿತ್ತು ಕರೆಯಿರೆವೆ ಪಾತಕನ |ಜೋಲುದುಟಿಡೊಂಕು ಮೋರೆಯ ಅಬ್ಬರದಿ ಯಮನ -ಆಳುಗಳು ಬಂದರಾಗ 11ಎಡಗೈಯೊಳಗೆಪಾಶ ಹಿಡಿದು ಚಮ್ಮತಿಗೆಗಳ |ಒಡನೆ ಜಾವಳಿನಾಯಿ ವಜ್ರಮೋತಿಯ ಕಾಯಿ |ತುಡಿಕಿರೋ ಕೆಡಹಿ ಕಟ್ಟಿರೋ ಪಾತಕನನೆಂದುಘುಡುಘುಡಿಸಿ ಬಂದರಾಗ 12ಗಡಗಡನೆ ನುಡುಗಿ ಕಂಗೆಟ್ಟು ಅಜಮಿಳನು ತಾ |ಕಡೆಯ ಕಾಲಕೆ ಅಂಜಿ ಮಗನ ನಾರಗನೆಂದು |ಒಡನೊಡನೆ ಕರೆಯಲ್ಕೆ ಯಮನಾಳ್ಗಳೋಡಿದರುಮುಟ್ಟಿದುದು ಹರಿಗೆ ದೂರು 13ಕೊರಳ ತುಳಸಿಯ ಮಾಲೆಯರಳ ಪೀತಾಂಬರದ |ವರಶಂಖ ಚಕ್ರದ್ವಾದಶನಾಮಗಳನಿಟ್ಟ |ಹರಿಯ ದೂತರು ಅಂಜಬೇಡ ಬೇಡನ್ನುತಲಿಹರಿದೋಡಿಬಂದರಲ್ಲಿ 14ಪುಂಡರೀಕಾಕ್ಷನೀ ಭೃತ್ಯನನು ಬಾಧಿಸುವ |ಲಂಡಿರಿವರಾರು ನೂಕಿರಿ ನೂಕಿರೆಂತೆಂದು |ದಂಡವನು ತೆಗೆದು ಬೀಸಾಡಿ ಯಮನವರಿಗು - |ದ್ದಂಡರಿವರೆಂದರಾಗ 15ತಂದೆ ಕೇಳಿರಿ ಒಂದು ಭಿನ್ನಪವ ಲಾಲಿಸಿರಿ |ಒಂದು ದಿನ ಹರಿಯೆಂದು ಧ್ಯಾನವನ್ನರಿಯ ನಾವ್ - |ಬಂದಾಗ ಆತ್ಮಜನ ನಾರಗನೆ ಎಂದೆನಲುಕುಂದಿದುವೆ ಇವನ ಪಾಪ ? 16ಹಂದೆ - ಕುರಿಗಳಿಗೆ ನಿಮಗಿಷ್ಟು ಮಾತುಗಳೇಕೆ |ನಿಂದಿರದೆ ಹೋಗಿ ನಿಮ್ಮೊಡೆಯನಿಗೆ ಪೇಳೆನಲು |ಸಂದಲಾ ಯಮಭಟರು ಅಜಮಿಳನ ಹರಿಭಟರುತಂದರೈ ವೈಕುಂಠಕೆ 17ಮದ್ಯಪಾನವ ಮಾಡಿ ಪೆಂಗಳನು ಒಡಗೂಡಿ |ಅದ್ದಿದೆನು ನೂರೊಂದು ಕುಲವ ನರಕದೊಳೆಂದು |ಹದ್ದಿನಾ ಬಾಯೊಳಗಿನುರಗನಂತಜಮಿಳನುಇದ್ದನವ ನೆರೆಮರುಗುತ 18ವಿಪ್ರಕುಲದಲಿ ಹುಟ್ಟಿ ವೇದಶಾಸ್ತ್ರವನೋದಿ |ಮುಪ್ಪಾದ ತಾಯಿ - ತಂದೆಗಳೆಲ್ಲರನು ಬಿಟ್ಟು |ಒಪ್ಪಿ ಧಾರೆಯನೆರೆದ ಕುಲಸತಿಯ ಬಿಟ್ಟು ಕಂ -ದರ್ಪನಾ ಬಲೆಗೆ ಸಿಕ್ಕಿ 19ವಿಪ್ರ ನಾನಾದರೂ ಜಗದಿ ನಿಂದ್ಯನು ಆಗಿ |ಇಪ್ಪೆ ನೀ ಪರಿಯೊಳೆನ್ನಂಥ ಪಾತಕಿಯಿಲ್ಲ |ತಪ್ಪಲಿಲ್ಲವೊ ಹಣೆಯಬರೆಹವಿದು ಭುವನದೊಳುಬೊಪ್ಪರೇ ವಿಧಿಯೆಂದನು 20ಇಳೆಯೊಳಗೆ ಶ್ರೀಪುರಂದರ ವಿಠಲನಾಮವನು |ನೆಲೆಯರಿತು ನೆನೆವರಿಗೆ ಯಮನ ಬಾಧೆಗಳಿಲ್ಲ |ಸುಲಭದಿಂದಲ್ಲಿ ಸಾಯುಜ್ಯಪದವಿಯು ಸತ್ಯಬಲುನಂಬಿ ಭಜಿಸಿ ಜನರು21
--------------
ಪುರಂದರದಾಸರು
ಪರಿಪರಿಯಲಿ ವರ್ಣಿಸುವೆ ಕಳಾನಿಧಿಯಾನರಜನರು ಅರಿತವನ ಸ್ಮರಿಸಿರಯ್ಯಾ ಪಕಾಲುಗಳು ಹದಿನೆಂಟು ತೋಳುಗಳುಹತ್ತು ಕಣ್ಣಾಲಿಗಳು ಇಪ್ಪತ್ತ ಒಂದುಸಾಲಾಗಿ ರಂಜಿಸುವ ಶಿರಸಂಗಳೀರೈದುಮೇಲಾದ ಫಣಿಂಗಳಾರ ಹನ್ನೆರಡುನೀಳವಾಗಿಯೆ ಹೊಳೆವ ಕೋರೆದಾಡೆಗಳೆರಡುಗಾಳಿಯನು ಭೇದಿಸುವ ಬಾಲ ನಾಲ್ಕುಪೇಳಲೇನಿದನು ಕೇಳ್ ನಾಲಿಗೆಗಳ್ಹನ್ನೊಂದುಮೂರ್ಲೋಕದೊಡೆಯನ ಪೀಠದಲಿರಂಜಿಸುವ ದೇಹವೇಳು 1ಧರಣಿಯೊಳಗಿನ ಪರಿವಾರದವರಿಗೆಲ್ಲಪರಸ್ಪರನೆ ವೈರತ್ವ ಬೆಳೆಸಿಕೊಂಡಿಹುದೂಉರಗಮೂಷಕನಿಂಗೆ ಕರಿಮುಖಗೆ ಕೇಸರಿಗೆಗಿರಿಜೆ ಭಾಗೀರಥಿಗೆ ಉರಿನಯನ ಚಂದ್ರನಿಗೆಎತ್ತು ವ್ಯಾಘ್ರನ ತೊಗಲಗೆ ಮರೆಯ ಹೊಕ್ಕರೆ ಕಾಯ್ವನರಕೇಸರಿಯ ತೆರದಿ ಕರುಣಾಳು ಭಕ್ತವತ್ಸಲ ದೇವನಾ 2ಬಲಿದಾಗ್ನಿಸಖಸರ್ವ ನಿಳಯದೀವಿಗೆವೈರಿಹಲವು ನಾಸಿಕದ ಸಂಚಾರಿಯಾ ಹಾರದಲಿಬೆಳೆದ ದೇಹದ ಮೇಲೆ ಮಲಗಿ ನಿದ್ರೆಯಗೈವನಳಿನನಿಳಯಳ ರಮಣ ಜಲಜಾಕ್ಷಗೋವಿಂದನನುಜೆಯರಸ ಹಲವುಮಾತೇನು ಕೇಳ್ ತಲೆ ಮೇಲೊಂದುಕೊಂಬಿನ ಋಷಿಯ ಪಿತನ ಚರಣಕೆಕೆೈಂiÀ್ಯು ಮುಗಿದು ತಲೆಬಾಗಿ 3
--------------
ಗೋವಿಂದದಾಸ
ಪಾಹಿಪಾರ್ವತೇ | ಪಾಲಿಸೆನ್ನ ಮಾತೇ ಪಪಾಹಿಲೋಕಭರಿತೇ |ಪಾಹಿಸುಗುಣ ಚರಿತೆ ||ಪಾಹಿಸುಂದರ ಖ್ಯಾತೆ |ಪಾಹಿಶಂಭು ಪ್ರೀತೆ 1ದೇವಿ ನಿನ್ನಪಾದ| ಸೇವೆಮಾಳ್ಪ ಮೋದ- |ನೀವುದೆನಗೆ ಸದಾ | ಮನ್ನಳೆ [?]2ನಾರದಾದಿವಂದ್ಯೆವಾರಿಜಾ ಸುಗಂಧೆಗೋವಿಂದದಾಸನ | ಪಾಲಿಸಂಬಾದೇವಿ 3
--------------
ಗೋವಿಂದದಾಸ
ಬಿದಿಗೆಯ ದಿವಸ(ಹನುಮಂತನನ್ನು ಕುರಿತು)ಸಮನಸನಾಗಿ ತೋರುವನಲ್ಲೆ ನೀರೆ ಪ.ಧನ್ಯನಾಗಿರುವ ದೊರೆಯ ಧರಿಸುತ್ತಚೆನ್ನಿಗನಾಗಿ ತೋರುವನಲ್ಲೆ ಈತ 1ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2ಸೋಮಾರ್ಕಶಿಖಿಯಂತಿರುವುದು ತ್ರಿನಾಮರಾಮಣೀಯಕ ಮನೋಹರ ಪೂರ್ಣಕಾಮ 3ವೀರವೈಷ್ಣವ ಮುದ್ದು ಮೋಹನಕಾಯಭೂರಿಭೂಷಣಭುಜಬಲ ಹರಿಪ್ರಿಯ 4ರೂಪನೋಡಲು ಕಾಮರೂಪನಂತಿರುವಚಾಪಲ ಪ್ರೌಢ ಚಿದ್ರೂಪನಂತಿರುವ 5ಬಾಲವ ನೆಗಹಿ ಕಾಲೂರಿ ಶೋಭಿಸುವನೀಲದುಂಗುರದ ಹಸ್ತವ ನೀಡಿ ಮೆರೆವ 6ಗೆಜ್ಜೆ ಕಾಲುಂಗರ ಪದಕಕಟ್ಟಾಣಿಸಜ್ಜನನಾಗಿ ತೋರುವನು ನಿಧಾನಿ 7ಊರ್ವಶಿ :ತರುಣಿ ಕೇಳೀತನೆ ದೊರೆಮುಖ್ಯಪ್ರಾಣವರನಿಗಮಾಗಮ ಶಾಸ್ತ್ರಪ್ರವೀಣ1ಮಾಯವಾದಿಗಳ ಮಾರ್ಗವ ಖಂಡಿಸಿದವಾಯುಕುಮಾರ ವಂದಿತ ಜನವರದರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆಚಟುಳ ಹನುಮನ ಉತ್ಕಟರೂಪ ಕಾಣೆ 1ವಾಮನನಾದ ಕಾರಣವೇನೆ ಪೇಳೆನಾ ಮನಸೋತೆ ಎಂತುಂಟೊ ಹರಿಲೀಲೆ 2ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳುಸಾಗಿತು ಸೇವೆಯೆಂಬುದು ಮನಸಿನೊಳು 1ವಾದವ ಮಾಡಿ ವಿನೋದದಿ ಹರಿಯಪಾದಸೇವೆಗೆ ಮನನಾದ ಕೇಳಿದೆಯೊ 2ವೀರ ವೇಷವನಿದ ಕಂಡು ಶ್ರೀಹರಿಯದೂರವಾದನೋ ಎಂದು ಮನದೊಳು ನಿಜವು 3ತೋರಲು ಬೇಗದಿ ದೊರೆ ಹನುಮಂತಭೂರಿಭೂಷಣ ಸುಂದರ ರೂಪವಾಂತ 4ಇಂದಿನ ಸೇವೆಯೆನ್ನಿಂದತಿ ದಯದಿಮಂದರಧರಿಸಿಕೊಳ್ವುದು ಎಂದು ಭರದಿ 5ಒಯ್ಯನೆ ಪೇಳುತ್ತ ವಯ್ಯಾರದಿಂದಕೈಯನು ನೀಡಿ ಸಾನಂದದಿ ಬಂದ 6ಕಂತುಪಿತನು ಹನುಮಂತ ಮಾನಸಕೆಸಂತಸ ತಾಳಿ ಆನಂತನು ದಿಟಕೆ 7ಏರುತ ಹನುಮನಭೂರಿವೈಭವದಿಸ್ವಾರಿಯು ಪೊರಟ ಸಾಕಾರವ ಮುದದಿ 8ತೋರಿಸಿ ಭಕ್ತರಘೋರದುರಿತವಸೂರೆಗೊಳ್ಳುವನು ವಿಚಾರಿಸಿ ನಿಜವ 9ಹದನವಿದೀಗೆಲೆ ಬಿದಿಗೆಯ ದಿನದಿಮದನಜನಕನು ಮೈದೋರುವ ಮುದದಿ 10ಪ್ರತಿದಿನದಂತೆ ಶ್ರೀಪತಿ ದಯದಿಂದಅತಿಶಯ ಮಂಟಪದೊಳು ನಲವಿಂದ 11ಎಂತು ನಾ ವರ್ಣಿಪೆ ಕಂತುಜನಕನಅಂತ್ಯರಹಿತ ಗುಣಾನಂಮಹಿಮನ 12ಏಕಾಂತದಿ ಲೋಕೈಕನಾಯಕನುಶ್ರೀಕರವಾಗಿ ನಿಂದನು ನಿತ್ಯಸುಖನು 13* * *ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾ ಪ.ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆತವಕದಿ ಬರುವತ್ತಿತ್ತವರನ್ನು ನೋಡದೆ 1ಅಂದಣವೇರಿ ಮತ್ತೊಂದ ತಾ ನೋಡದೆಒಂದೇ ಮನದಿ ಬೇಗ ಮುಂದೆ ಬರುವನಮ್ಮಾ 2ಬಾಲಬ್ರಹ್ಮಚಾರಿ ಶಿಲೆಯಂತಿರುವನುಅಲೋಚಿಸಲಿವ ಮೂಲಪುರುಷನಮ್ಮಾ 3ಪುಟ್ಟನಾದರು ಜಗಜಟ್ಟಿಯಂತಿರುವನುದಿಟ್ಟನಿವನವನ ಮುಟ್ಟಿ ನೋಡಮ್ಮ 4ಊರ್ವಶಿ :ನಾರೀ ಇವನೀಗಹೊಂತಕಾರಿಲೋಕಕ್ಕಾಧಾರಿಪ.ಕೊಬ್ಬಿದ ದೈತ್ಯರಿಗೀತನೆಕಾಲಹಬ್ಬುವದಾತ್ಮಕ್ಕೀತನೆ ಮೂಲಉಬ್ಬುವ ಹರಿಯೆಂದರೆ ಮೈಯೆಲ್ಲಒಬ್ಬನಿಗಾದರೂ ಬಗ್ಗುವನಲ್ಲ 1ಎಲ್ಲಿರುವನುಹರಿಅಲ್ಲಿಹನೀತಬಲ್ಲಿದನಾರಾಯಣಗಿವ ದೂತಖುಲ್ಲರ ಮನಕತಿ ಝಲ್ಲೆನುವಾತಸುಲ್ಲಭನೆಯಿವ ಮುಂದಿನ ಧಾತ 2ಭೇದವಿಲ್ಲೆಂಬುದವರಿಗೆಯಿವ ತುಂಟಮೇದಿನಿಬಾಧಕರಿಗೆ ಯಿವ ಕಂಟಆದಿ ಮೂರುತಿ ಕೇಶವನಿಗೆಬಂಟಮಾಧವಭಕ್ತರಿಗೀತನೆ ನೆಂಟ 3ದುರಿತಾರಣ್ಯದಹನ ನಿರ್ಲೇಪವರವೆಂಕಟಪತಿಯಿದಿರೊಳಗಿಪ್ಪಪರಮಾತ್ಮನ ಪರತತ್ತ್ವ ಸ್ವರೂಪಮರೆಮಾತೇನಿವ ದೊರೆ ಹನುಮಪ್ಪ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಭಾಗೀರಥೀದೇವಿ ಭಯನಿವಾರಣೆ ಗಂಗೆ |ಸಾಗರನ ನಿಜರಾಣಿ ಸಕಲಕಲ್ಯಾಣಿ ಪಒಮ್ಮೆ ಶ್ರೀಹರಿ ಪಾದಕಮಲದಿಂದುದುಭವಿಸಿ |ಬ್ರಹ್ಮಕರ ಪಾತ್ರೆಯಲಿನಿಂದುಬಂದೆ ||ಶ್ರೀ ಮನ್ನಾರಾಯಣನ ಪಾದತೀರ್ಥವಾಗಿ |ಬೊಮ್ಮಾಂಡವನು ಪಾವನಮಾಡ ಬಂದೆ 1ದೇವಿ ನೀ ವಿಷ್ಣುಪಾದೋದಕವೆಂದೆನಿಸಿ |ದೇವತೆಗಳಿಗೆಲ್ಲ ಅಧಿಕವಾದೆ ||ದೇವರೆಲ್ಲರು ನೆರೆದು ತಲೆಬಾಗಿದರು ಮಹಾ-|ದೇವನ ಶಿರದಿಂದ ಧರೆಗಿಳಿದು ಬಂದೆ 2ಜಹ್ನವಿನುದರದಿ ಪೂಕ್ಕ ಕಾರಣದಿಂದ |ಜಾಹ್ನವಿಯೆಂದು ನೀನೆನಿನೆಕೊಂಡೆ ||ಮುನ್ನ ನರಕಕ್ಕಿಳಿದ ಸಗರರಾಯನ ವಂಶ- |ವನ್ನು ಪಾವನಮಾಡಿ ಪೊರೆಯಲು ಬಂದೆ 3ನಿಟ್ಟಿಸಲು ಮುನ್ನಾರು ಜನ್ನಪಾತಕಹರಣ |ದಿಟ್ಟಿಸಲು ಮೂರುಜನ್ಮದಿ ಮುಕುತಿಯು ||ಮುಟ್ಟಿ ಮಾಡಿದರೊಂದು ಸ್ನಾನಮಾತ್ರದಲಿ |ಸುಟ್ಟು ಹೋಹುದು ಸಾಸಿರಜನ್ಮ ಪಾಪ 4ಹಲವು ಪರಿಯಲಿ ಹರಿಯ ಸ್ಮರಣೆಯಿಲ್ಲದೆ ಭವ-|ದೊಳಗೆ ಸಿಲುಕಿ ಕಡುನೊಂದೆ ನಾನು ||ಹಲವು ಮಾತೇಕೆ ಶ್ರೀ ಪುರಂದರವಿಠಲನ |ಚೆಲುವಪದದಿಂದಿಳಿದು ಒಲಿದು ದಯೆ ಮಾಡೆ 5
--------------
ಪುರಂದರದಾಸರು
ವನಜಾಲಯ ಮಾಂಪಾಲಯ ಶ್ರೀವನಜಾಲಯ ಮಾಂಪಾಲಯವಾಸುದೇವಸುಪ್ರಿಯಪವಸುಮತಿ ತನಯೆ ವರದಾಭಯಕರೆಕುಸುಮಶರಾಬ್ಜಜಕುಶಲವಮಾತೇ1ಮಣಿಮಯಾಲಂಕೃತೆ ಮಂಜುಳ ಭಾಷೇಅಣಿಮಾಮಹಿಮಾದ್ಯಷ್ಟಭಾಗ್ಯಾನ್ವಿತೇ2ಜಲರುಹ ನಯನೇ ಚಂದ್ರಗೀರಿಶ್ವರೆತುಲಸೀರಾಮದಾಸ ದುರಿತನಿವಾರಣೆ 3
--------------
ತುಳಸೀರಾಮದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ಸಂಗಾವೇತಕೆ ಅಲ್ಪರೊಡನೆ ಗುಣವಿಲ್ಲಮಂಗ ಮನುಜನ ಕೂಡ ಮಾತಾಡಸಲ್ಲ ಪ.ಪರರ ಕೆಣಕಿ ತನ್ನ ಹಿರಿಯತನ ಕೆಡಲೇಕೆ ?ಹರಕೆಯಿಲ್ಲದ ಮೇಲೆ ಹಾದಿಯಿಸಲೇಕೆ ?ಮುರುಕು ಮನೆಯಲಿ ತಾ ಕಷ್ಟವ ಪಡಲೇಕೆ ?ಸರಿಬಾರದವರೊಡನೆ ಸರಸ ಮಾತುಗಳೇಕೆ ? 1ತೊತ್ತಿನ ಕೂಡಾಡಿ ಅತಿದೀಕ್ಷೆ ಕೆಡಲೇಕೆ ?ಹೊತ್ತಿಗಲ್ಲದವನ ಕೂಡ ಗೆಳೆತನದ ಮಾತೇಕೆ ?ರತ್ನವನು ನಾಯ ಕೊರಳಿಗೆ ಸುತ್ತಿ ಬಿಡಲೇಕೆ ?ಕತ್ತೆಯ ಮೇಲೇರಿ ಕೆಡಲೇಕೆ ಮನುಜಾ ? 2ನೆಲೆ ತಪ್ಪಿದ ಮೇಲೆ ನಂಟ - ಬಂಧುಗಳೇಕೆ?ಸಲುಗೆಯಿಲ್ಲದ ಮೇಲೆ ಛಲವು ತನಗೇಕೆ ?ಬುಲುದೈವ ಪುರಂದರವಿಠಲನಿರಲಿಕ್ಕೆ ?ಹಲವು ದೈವದಗೊಡವೆನವಗೇಕೆ ಮನುಜಾ ?3
--------------
ಪುರಂದರದಾಸರು
ಸುಮ್ಮನೆ ಕಾಲವ ಕಳೆವರೆ - ಯಮ - |ಧರ್ಮರಾಯನ ದೂತರೆಳೆಯರೆ ಪ.ನರಿ - ನಾಯಿ ಜನುಮವು ಬಾರದೆ - ಹಾಗೆ - |ನರಜನ್ಮದಲಿ ಬಂದು ಸೇರದೆ ||ಹರಿಯ ಸ್ಮರಣೆ ಮಾಡಲಾರದೆ - ಸುಮ್ಮ |ನಿರಲು ಪಾಪದ ವಿಷವೇರದೆ 1ಬಾಲನಾಗಿದ್ದಾಗ ಬಹುಲೀಲೆ - ಮುಂದೆ |ಲೋಲನಾಗಿ ಬಾಳಿದ ಮೇಲೆ ||ಮೂಳ ವೃದ್ಧಾಪ್ಯ ಬಂತಾಮೇಲೆ - ಇನ್ನು - |ಬಾಳುವುದೆಲ್ಲ ನೂಲಮಾಲೆ 2ಮಡದಿ - ಮಕ್ಕಳ ಕೂಡಣ ಬಾಳು - ತನ್ನ |ಒಡಲಿಗಾಗೆ ತಾನು ಕರವಾಳು ||ಬಿಡದೆ ಸಂಕೀರ್ತನೆ ಮಾಡೇಳು - ಮಿಕ್ಕ - |ನುಡಿದ ನುಡಿಗಳೆಲ್ಲವು ಬೀಳು 3ಮನೆಮನೆ ವಾರ್ತೆಯು ಸ್ಥಿರವಲ್ಲ - ಈ |ಮನುಜರ ಮಾತೇನು ಘನವಲ್ಲ ||ವನಜಸಂಭವಗೂ ನಿಶ್ಚಯವಿಲ್ಲ - ಮುಂದೆ |ಹನುಮಂತ ಪಟ್ಟಕೆ ಬಹನಲ್ಲ 4ಇಂದಿನಹಮ್ಮು ನಾಳೆಗೆ ಇಲ್ಲ -ಭವ |ಬಂಧನದೊಳು ಸಿಕ್ಕಿ ನರಳಿದೆನಲ್ಲ ||ಮುಂದನರಿತು ನಡೆದುದಿಲ್ಲ - ಮೃತ್ಯು |ಬಂದಾಗ ಬಿಡಿಸಿಕೊಳ್ಳುವರಿಲ್ಲ 5ಮರಣವುಆವಾಗ ಬರುವುದೋ - ತನ್ನ |ಶರೀರವುಆವಾಗ ಮುರಿವುದೊ ||ಕರಣಂಗಳೆಲ್ಲವು ಜರಿವುದೊ - ತನ್ನ |ಗರುವದುಬ್ಬಸವೆಲ್ಲ ಮುರಿವುದೊ 6ಮರಣಕಾಲಕೆ ಅಜಮಿಳನಾಗ - ತನ್ನ |ತರಳನನಾರಗನೆಂದು ಕರೆದಾಗ ||ಕರುಣದಿ ವೈಕುಂಠ ಪದವೀಗ -ನಿತ್ಯ - |ಪುರಂದರವಿಠಲನ ನೆನೆ ಬೇಗ 7
--------------
ಪುರಂದರದಾಸರು