ಒಟ್ಟು 201 ಕಡೆಗಳಲ್ಲಿ , 53 ದಾಸರು , 178 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಂತಯಾಮಿ | ರಘುರಾಮಂ | ಸುತ ಕೌಸಲ್ಯೋದರಜಂ |ಸಂತತ ಶರಣರ ಕೃಪಾ | ಪಾಂಗವೀಕ್ಷಾ ಹಸಿತಂ ಪ ಸರಿ ಗ ಸರೀ | ಮಪ ಧಪ ಧಾ | ರಿಸ ನಿಧ ನಿಧ | ಪಮ ಗರಿ ಸದದ್ರುತ - ಸರಿಮಾ ಗರಿ | ಮಪ ದಾಪಮ | ಪಧಸಾ ನಿಧ | ನಿಧ ಪದಪಧ ||ಗರಿ ಸಧ | ``ರಿ ಸ ಧಾ ಸ | ಧಾ ಗ ರಿ ನಿಧಮ | ಗರಿಸಧ | ರವಿ ಕುಲಾನ್ವಯತಿಲಕಂ | ಋಷಿ ವಿಶ್ವಾಮಿತ್ರ ಕೃತಹವನ ಹೋಮ, ಬಾಧಾಗ್ರಸ್ತ | ವಿಮೋಚನ, ಶೀಲಂಅವನಿಜೆ ವೈವಾ, ಹಕ್ಕಾನೀತಂ | ಲಕ್ಷ್ಮಣ ಸಹ, ವಿಧಿಲಾಗ5ನಂ |ಶಿವಧನುವಂ, ಮುರಿದು ರಾಜ | ರುಗಳ ಗರ್ವಹರ | ಶ್ರೀರಾಮಂ 1 ಮಗ ಸಾ ನಿóದ | ನಿóಸಾ ರಿಗಮ | ನಿಧ ಮಾಗರಿ | ಗಮ ಪಗರಿಸದ್ರುತ - ನಿಧನಿಸ ರಿಗಮ ಧನಿಪಧ | ನಿಸ ನಿಧ ನಿಸರಿಗ ಮಗಸನಿ ||ಗರಿಸಧ, ರಿಸ ಧಾ, ಸ ಧಾಆ, ಗರಿ || ನಿದಮ | ಗರಿಸಧ || ರಾಗ - ಧನ್ಯಾಸಿ : ಅನುಜ ಸತಿಸಹ | ವನವಾಸಂ |ನಿಶಿಚರ ಹನನ | ಶೂರ್ಪನಖಿ | ನಾಸಛೇದಂ | ಚರಿತಂ 2 ರಾಗ :ಧಾನಿಸಿ :ನಿಸ ಗಾಮ ಪ | ಗಮ ಪಾನಿಸ | ರಿಸ ರಿನಿ ಸಪ | ಧಪಗಾರಿಸನೀ ಸ ಗ ಮಪ ಗಾ ಮಪನಿಸ | ಪಾ ನಿಸ ಗರಿ ಸನಿಧಪ ನಿಸಗರಿಸಧಾ, ಆರಿಸ ಧಾಸ, ಧಾ, ಗರಿ ನಿಧಮ ಗರಿಸದ || ರಾಗ - ಪರ | ಮಾನುಗ್ರಹ ಶೀಲಂ ರಾಮಂ 3 ಗಾ ಪ ಗರಿ, ಗರಿ ಸಧಸರಿ | ಗಾಪ ದಸದಪ ಗರಿ ಸರಿಗಪಗಗ, ರಿಸ | ರಿಗ, ರಿರಿಸ ಧ | ಸರಿಗರಿ ನಪಗಪ ಧಪಧಸ |ಗರಿಸಧಾ, ಆರಿಸ ಧಾ, ಸದಾ, ಗರಿನಿಧಮ, ಗರಿಸದ || ರಾಗ ಪೂರ್ವಕಲ್ಯಾಣಿ : ಲೇಸು ಕಪಿಗಳ ನಿಚಯ | ಸೀತಾಕೃತಿ ಹುಡುಕುತ |ಆ ಸಮೀರನು | ವಾರಿಧಿಯನು | ಹಾರಿ ಲಂಕೆಯ ಪುರದಲ್ಲಿಅಣುರೂಪದಿ ಹುಡುಕುತ | ಸೀತಾಕೃತಿಯ | ಕಂಡನುದೇಶ ಪುಚ್ಛಾಗ್ನಿಯಲಿ | ದಹಿಸಿ ಸೀತೆ | ವಾರ್ತೆ ಪೇಳಿದನು 4 ಗಾಮಗರಿಸ | ಧ ಸರಿ ಗಮ | ಪಾ ಧಪಸ | ನಿಧಪ ಮಗರಿ |ಗಮಪ ಮಾಪಗಾ | ಮರೀಗ | ಸಾರಿಗಆಮ ಪಧ ಪಸಾ ನಿ |ಗರಿಸಧಾ, ಆಸಧಾ ಸಧಾ ಗರಿ ನಿಧ ಮ ಗರಿಸಧ || ರಾಗ :ಮುಖಾರಿ : ಸತಿ ಪರಿವಾರ ಪುಷ್ಪಕವಿ | ಸ್ವಪುರ ಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾಗರಿಸ | ರಿಮ ಪದ ನಿಧ ಸಾ ಸನಿ ಧಪ ಪಾ | ಮಗರಿಸ | ನಿಧಸರಿ ಮಪನಿಧ ಮಪಧಸ ||ಗರಿಸಧಾ ಆರಿಸ ಧಾಅಸ | ಧಾಅ ಗರಿ ನಿಧಮ ಗರಿಸಧ || ರಾಗ ಮಧ್ಯಮಾವತಿ : ಸುರರು ಭಾರ ಕಳೆದ5ುರು ಗೋವಿಂದ ವಿಠಲ 6 ರೀ ಮರಿ ಮಪ | ನೀ ಪಮ ಪನಿ ಸಾ ರಿಸನಿ | ಪಪ ಮಮರಿ ಸ || ರೀಪಮ ರಿಸನಿಪ ರಿಮಪಾ || ರಾಗ :ಪೂರ್ವಕಲ್ಯಾಣಿ || ಧಪ ಸಾ ನಿಧಪಮ | ಮಪಗರಿರಾಗ :ಮೋಹನ || ಸರಿಮಾ ಗರಿ ಸರಿಗಾ | ಪಗರಿ ಸರಿ ಪದಸ ರಾಗ :ಮುಖಾರಿ | ರೀ ಸದಾ ಪದಪ ಗಾರಿ ಸರಾಗ :ನಾಟಿಕುರಂಜಿ || ನಿಸ ಮಗ ಧನಿ ಪಧನಿಸ ರಾಗ : ಸಾವೇರಿ || ಗರಿ ಸದಾ ರಿಸ ಧಾ ಸ | ಧಾ ಗ ರಿ ನಿದಮ ಗರಿಸದ
--------------
ಗುರುಗೋವಿಂದವಿಠಲರು
ಚಿತ್ತಾಭಿಮಾನಿ ನೀನು ಮತ್ತೆ ನಾ ಬಲಗೊಂಡು ದುಷ್ಟವಿಷಯಕ್ಕೆ ಎರಗುವÀ ಮನವನ್ನು ಅಚ್ಚುತನ ಚರಣದಲಿ ಇರಿಸುವೆ1 ಮನದಭಿಮಾನಿಯೆ ಇವನ ನಾ ಬಲಗೊಂಡು ದುರುಳ ವಿಷಯಕೆ ಎರಗುವ ಮನವನ್ನು ನರಹರಿಯ ಚರಣದಲಿ ಇರಿಸುವೆ 2 ಅಚ್ಚುತನೆ ನಾ ನಿನ್ನ ಹೆಚ್ಚು ಬೇಡೋದಿಲ್ಲ ಕಷ್ಟಕಾಲದಲ್ಲಿ ಹರಿಯೆಂಬ ಸ್ಮರಣೀಯೊ ರಕ್ಷಿಸೋ ಲಕ್ಷ್ಮೀರಮಣನೆ 3 ನರಹರಿಯೆ ನಾ ನಿನ್ನ ಹಿರಿದ ಬೇಡೋಳಲ್ಲ ಸರ್ವಕಾಲದಲಿ ಹರಿಯೆಂಬೋ ಸ್ಮರಣೀಯ ಕರುಣಿಸೋ ಲಕ್ಷ್ಮೀರಮಣನೆ 4 ಪಾಲ್ಗಂಜಿಯೆಂದರೆ ಅರಗಂಜಿಯಾಹೋದೆ ಲಕ್ಷ್ಮೀರಮಣಗೆ ಎಂಟುಗುಣಳುಂಟೆಂದರೆ ಮೇಲಿದ್ದ ಗುಣಗಳಡಗೋದೆ 5 ಪಂಚಕನ ದೇಹದಲಿ ನಿಂತೆರಡು ಪಕ್ಷಿಗಳು ಸಂತತ ದುಃಖಿ ಸುಖಿಯೊಬ್ಬ ಜೀವಗೆ ನಿಂತು ಸುಖ ದುಃಖ ಕೊಡುತಿತ್ತು 6 ಪಂಚಮೂರುತಿ ಹರಿಯ ಅಂತರಂಗದಿ ಇಟ್ಟು ಸಂತತ ಸ್ವಪ್ನ ಸುಷುಪ್ತಿ ಏರಿಸುವ ಪ್ರಾರ್ಥಿಸಿ ಪ್ರಾಜ್ಞರಿಗೆ ಸರಿಯೆಂಬೆ7 ಈ ಜಾಗ್ರದವಸ್ಥೆಯಲಿ ನಾನಾವಿಧ ಕರ್ಮಗಳ ಪ್ರೇರಿಸಿ ಸಕಲ ಶ್ರೀಕಾರ ಮಾಡುವೊ ಸ್ವಾಮಿ ಶ್ರೀಹರಿಗೆ ಶರಣೆಂಬೆ 8 ನಡೆವುದು ನಿನ್ನ ಯಾತ್ರೆ ನುಡಿವುದು ನಿನ್ನ ನಾಮಸ್ಮರಣೆ ಅಡಿಯಿಡೋದೆಲ್ಲ ಹರಿಯಾತ್ರೆ ಗುರುಪೂಜೆ ಸ್ಮರಣೇಯ ಪಾಲಿಸೋ ಲಕ್ಷ್ಮೀರಮಣನೆ 9 ವಿಷ್ಣುಭಕ್ತಿಯಿಲ್ಲದೋರ ಹತ್ತಿರ ನಾನಿರೆ ಎಚ್ಚರಿತು ಮಾಡೆ ಗೆಳೆತನವ ಅವರ ಕಂಡರೆ ನಾನು ಕಿಚ್ಚ ಕಂಡಂತೆ ಕೊಲ್ಲಿಸುವೆ 10 ಹರಿಭಕ್ತಿಯಿಲ್ಲದೋರ ಹತ್ತಿರಲಿ ನಾನಿರೆ ಅರೆಘಳಿಗೆ ಮಾಡಿ ಗೆಳೆತನವ ಅವರ ಕಂಡರೆ ತಾನು ಉರಿಯ ಕಂಡಂತೆ ತೊಲಗುವೆ 11 ಕಾಶೀಪಟ್ಟಣ ಶ್ರೀ ವಾಸುದೇವರು ಭೂಮಿ ಹರಿದಾಸರು ಕಟ್ಟಿಸಿದ ಸ್ಥಳದಲ್ಲಿ ಹರಿಯ ನಿಜದಾಸಗೆ ವಿಶ್ವನಾಥನೆಂತೆಂಬೊ ಪೆಸರುಂಟು 12 ಹರಿದಾಸರ ಒಳಗೆ ಪರಮ ವೈಷ್ಣವನ್ಯಾರೆ ಕಿರಿಯ ಕೆಂಜೆÉಡೆಯ ಮಕುಟನೆ ಅಜನ ಸುತನಾ ಶಿವನು ಹರಿದಾಸಕಾಣೆ ಹುಸಿಯಲ್ಲ13 ಗುಣಮಣಿಧಾಮಗೆ ಮಣಿದೊಮ್ಮೆ ಇಕ್ಕದೆ ಹಲವು ದೈವಗಳ ಭಜಿಸಿದ ಪಾಪಿ ನೀನು ಮಣಿಮಂತ ಹೋದಗತಿಗ್ಹೋಗ್ವೆ 14 ಎದ್ದು ತಮಸಿಗೆ ಉರುಳುವೊ ಪಾಪಿ ನೀ ಅದ್ವೈತ ಹ್ಯಾಗೆ ಬಿಡದ್ಹೋದಿ 15 ಅಳಿದ್ಹೋಗೊ ಶರೀರವನು ನರಹರಿಗೆ ಸರಿಯೆಂಬೆ ಬಿಡದೆ ತಮಸಿಗೆ ಉರುಳವೊ ಪಾಪಿ ನೀ ಚಲಹವನು ಹ್ಯಾಗೆ ಬಿಡದ್ಹೋದಿ 16 ನಾಶ್ವಾಗೊ ಶರೀರವನು ವಾಸುದೇವಗೆ ಸರಿಯೆಂಬೆ ಹೇಸದೆ ತಮಸಿಗೆ ಉರುಳವೊ ಪಾಪಿ ನೀ ವಾಸನೆ ಹ್ಯಾಗೆ ಬಿಡದ್ಹೋದಿ 17 ಈ ಸೃಷ್ಟಿಯೊಳಗೆ ಅಚ್ಚುತಗೆ ಸರಿಯುಂಟೆ ಮೆಚ್ಚಿ ನೀ ಮನವೆ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 18 ಭೂಮಿಯೊಳಗೆ ಶ್ರೀರಾಮನಿಗೆ ಸರಿಯುಂಟೆ ಮಾನುನೀ ಮನವೇ ಕೆಡಬೇಡ ಅಲ್ಲಿತ್ತಾರಾ(ಅಲ್ಲದ?)ಎಲೆಯ ಒತ್ತಿ ಹಿಂಡಿದರೆ ರಸವುಂಟೆ 19 ಭೂಮಂಡಲದೊಳಗೆ ರಂಗಗೆ ಸರಿಯುಂಟೆ ಅಂದು ನೀ ಮನವೆ ಕೆಡಬೇಡ ಅಲ್ಲಿತ್ತಾರಾ (ಅಲ್ಲದ?) ಎಲೆಯ ಒತ್ತಿ ಹಿಂಡಿದರೆ ರಸವುಂಟೆ 20 ವಿಷ್ಣು ಸರ್ವೋತ್ತಮನೆಂದು ಇಟ್ಟರೆ ಮುಂಡಿಗೆಯ ಮುಟ್ಟಲಂಜಿದನೆ ಪರವಾದಿ ಪರವಾದಿ ತತ್ವದ ಬಟ್ಟೇನೂ ಕಾಣದಿರುತಿದ್ದ21 ಹರಿಸರ್ವೋತ್ತಮನೆಂದು ಇರಿಸಿದರೆ ಮುಂಡಿಗೆಯ ಹಿಡಿಯಲಂಜಿದನೆ ಪರವಾದಿ ಪರವಾದಿ ತತ್ವದ ವಿವರವನು ಕಾಣದಿರುತಿಹ 22 ಅರಣ್ಯದ ಅಡವೀಲಿ ಗೋಡೇನು ಹಾಕಿದರೆ ಯಾರು ಕೂಲೀನಕೊಡುವೋರು ಸಂಕರನ ಮತವನು ಮಾಯದಿಂ ಮೆಚ್ಚಿ ಕೆಡಬ್ಯಾಡ 23 ಅತ್ತಿಹಣ್ಣಿನಂತೆ ಮಿಥ್ಯವಾದಿಮತ ಬಿಚ್ಚಿನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಮುತ್ತಿನ ಸರವ ತೆಗೆದಂತೆ 24 ಆಲಹಂಣೀನಸಂತೆ ಮಾಯಾವಾದಿಮತ ಸೀಳಿ ನೋಡಿದರೆ ಕ್ರಿಮಿರಾಶಿ ಮಧ್ವರಾಯರ ಮತ ಹೂವ್ವಿನ ಸರವ ತೆಗೆದಂತೆ 25 ಭಾಗವತ ಅರ್ಥಸಾರವೆಲ್ಲವ ತಿಳಿದು ಹೇಳಿದನೆ ತತ್ವ ಕಥೆಗಳ ಜ್ಞಾನ ಭಕ್ತಿವೈರಾಗ್ಯವ ಈವನೆ ನಮ್ಮ ಹಯವದನ 26
--------------
ವಾದಿರಾಜ
ಜಯ ಜಯ ಜಯ ಜಯ ಜಯ ವಿಷ್ಣುಪಾದ ಜಯ ಶೇಷಗಿರಿಯಲ್ಲಿ ಮೆರೆವಂಥಾ ಪಾದ ಜಯ ಭಕ್ತಕೋಟಿ ಜೀವರ ಸಲಹುವ ಪಾದ ಸಿರಿ ಪಾದ 1 ಧ್ವಜ ವಜ್ರಾಂಕುಶ ಪದ್ಮ ಪಾದ ನಿಜದಿ ಸಲಹುವ ಗಂಗಾಜನಕನ ಪಾದ ಮದಗಜಗಮನನ ಪಾದ ಪಾದ 2 ಪೀತಾಂಬರಧರನ ಪಾದ ಪಾದ ಸೀತಾಪÀತೆ ದಿವ್ಯಹನುಮಾನುತ ಪಾದ ಪಾದ 3 ಹಾರ ಪದಕವಿಟ್ಟ ಪಾದ ತನ್ನ ನಾರಿ ಲಕುಮಿ ಸಹ ಮೆರೆವಂಥ ಪಾದ ಪಾರುಗಾಣಿಪ ದಿವ್ಯ ನೋಟದ ಪಾದ ಪಾದ ಭವವಾರುಧಿ ದಾಟಿಸುವ ದಿವ್ಯಪಾದ 4 ಮಕರ ಕುಂಡಲಧರನ ಪಾದ ತನ್ನ ಸಖ ಪಾಂಡವರಿಗೆ ಒಲಿದಂಥ ಪಾದ ಶಿಖೆಯೊಳು ಮಾಣಿಕ್ಯ ಕಿರೀಟನ ಪಾದ ಪಾದ 5 ಪಾದ ಪಾದ ಅಮೃತ ತಂದ ಪಾದ ಅಚ್ಚ ಭೂಮಿಯ ತಂದ ಪಾದ ಪಾದ 6 ಭೂಮಿಯನಳೆದಂಥ ಪಾದ ಭೂವ್ಯೋಮ ತ್ರಿವಿಕ್ರಮ ವಾಮನ ಪಾದ ಸ್ವಾಮಿ ಪರಶುಧರನ ಪಾದ ಪಾದ 7 ಗೋಕುಲನಂದನ ಪಾದ ಶ್ರೀಪತಿ ಬೌದ್ಧನ ಪಾದ ಪರಿ ನೆನಯಲಿ ಶ್ರೀಪ ಕಲ್ಕಿ ಪಾದ ಪಾದ 8 ಹತ್ತಾವತಾರ ಎತ್ತಿದ ಪಾದ ಭಕ್ತರನೆಲ್ಲಾ ಸಲಹುವ ಪಾದ ಮುಕ್ತಿದಾಯಕ ಕೃಷ್ಣನ ಪಾದ ಪಾದ 9 ಮೂರು ಹೆಜ್ಜೆ ಭೂಮಿ ಬೇಡಿದ ಪಾದ ತನ್ನ ಹಾರೈಸಿದ ಭಕ್ತರಿಗೋಸುಗ ಊರಿ ವೆಂಕಟಗಿರಿಯೊಳ್ ಮೆರೆವಂಥಾ ಭಕ್ತ ಪಾದ 10 ಪಾದ ಮಸ್ತಕದಿ ರಾರಾಜಿಸುವ ಕಿರೀಟನ ಪಾದ ಕಸ್ತೂರಿ ರಂಗನ ಪಾದ ಪಾದ 11
--------------
ಸರಸ್ವತಿ ಬಾಯಿ
ಜಯಜಯ ನಂದಕುಮಾರ ಜಯ ವೃಂದಾವನ ವಿಹಾರ ಪ ನಾರಾಯಣ ನಾರಾಯಣ ಜಯ ಗೋವಿಂದ ಹರೆ ಅ.ಪ ವಾಗೀಶಾರ್ಚಿತಪಾದ ಯೋಗೀಧ್ಯಾನವಿನೋದ ನಾರಾಯಣ ನಾರಾಯಣ ಜಯಗೋವಿಂದ ಹರೆ 1 ಲೀಲಾಮಾನುಷರೂಪ ಶ್ರೀಲೋಲಾ ಜಿತಕೋಪ ನಾರಾಯಣ ನಾರಾಯಣ ಜಯಗೋವಿಂದ ಹರೆ 2 ಶ್ರೀ ಶೇಷಾಚಲವಾಸ ಶ್ರೀಶ ಜಯ ಸರ್ವೇಶ ನಾರಾಯಣ ನಾರಾಯಣ ಜಯಗೋವಿಂದ ಹರೆ 3
--------------
ನಂಜನಗೂಡು ತಿರುಮಲಾಂಬಾ
ತನ್ನೊಳು ತಿಳಿಯೊ ಪ್ರಾಣಿ ಪುಣ್ಯಸಾಧನಿ ಧ್ರುವ ತನ್ನಿಂದಲೆ ತಾ ನೋಡುವ ಖೂನ ಚೆನ್ನಾಗ್ಯದನುಭವ ಜ್ಞಾನ ಸನ್ಮತ ಸುಖದೋರುವ ಚಿದ್ಫನ ಭಿನ್ನವಿಲ್ಲದೆ ನೋಡುವದುನ್ಮನ 1 ಮೂಲವಿಡಿದು ನಿಜ ನೋಡುವದರಿಂದ ಮ್ಯಾಲೆ ದೋರುತಲದೆ ಬ್ರಹ್ಮಾನಂದ ಕೀಲು ತಿಳಿದರೆ ಸದ್ಗುರು ಕೃಪೆಯಿಂದ ಒಲಿದು ಬಾಹನು ತಾ ಮುಕುಂದ 2 ಸೆರಗವಿಡಿದು ನೋಡುಲು ಗುರುಮುಖ ಮೂರು ಲೋಕಕ ಬಲು ಪರಮ ವಿವೇಕ ತರಳ ಮಹಿಪತಿ ಆತ್ಮಾನುಭವ ಸುಖ ದೋರುತಲದೆ ತಾ ಘನ ಕೌತುಕ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾ ಕಾಯುತಿದ್ದ ಕೃಷ್ಣನು ಗೋಪಾಲರನೂಗೋಕುಲದಲ್ಲಿ ಗೂಢನೂ ಪುೀಕುಂಭಿನಿಯೊಳಗಿರುತಿಹ ದುಷ್ಟರನೂಕುವ ಬಿಲದಲಿ ಅನುಪಮ ಧೀರಾ ಅ.ಪಅಸಿತ ಪಕ್ಷವು ಬಂದುದೂ ಮಾಸಗಳೊಳುಎಸೆವೇಕಾದಶಿಯೆಂಬುದು ಬರಲು ಅಂದುಬಸವಾಸುರಾನಾ ಬಡಿದು ತಾನಂದು ವ್ರಜದಿ ವಸುಧೇಶ ನಿದ್ದನೊಲಿದು ಅಸುರನು ಅಳಿಯಲು ಆ ವ್ರಜವುಳಿಯಲು ಹಸುಗಳು ಹೆಚ್ಚಲು ಹರಿ ತಾನಲಿಯಲು ವಸಗೆವ್ರಜದೊಳಗೆ ಬಹುಮಸಗೆ ಹೆಸರಾಗೆ 1ದ್ವಾದಶೀ ದಿವಸಾದಲ್ಲಿ ಉದಯಕಾಲವಾದುದು ''ತದಲ್ಲಿ ಶ್ರೀಕೃಷ್ಣನಿಗೆಬೋಧವಾಗಲು ಬೇಗದಲಿ ಬಾಲರು ಸಹಾ ಮಾಧವಾ ಮುದದಿಂದಲಿಕಾದಿರೆ ಗೋವ್ಗಳ ಕಾನನಮಧ್ಯದಿಕಾದಲು ಬಂದಾ ಕೇಶಿಯನುದಯದಿಕಾದಿ ಅಸುವಸಿಗಿದಿ ವೊದ'ದೀ ಈ 'ಧದಿ 2ವೃಂದಾಖ್ಯವಾದವನಾದಿ ಗೋಪಾಲಕರಾ ವೃಂದದಾ ವರಸ್ತೋಮವಾಮದಿ ನಿಂದಿದ್ದನಾಗಾಕಂದರ್ಪಕೋಟಿತೇಜದಿ ಕುಂಭಿನಿಯನ್ನು ಹೊಂದಿಸಿದನು ಹರುಷದಿ ಮಂದರಧಾರನು ಮಂಜುಳ ಮ'ಮನು ನಿಂದಿಹ ನೀರನು ನಿಜಗುಣಧಾಮನು ಅಂದು ಅಜಬಂಧು ತಾನೆಂದೂ ಅಲ್ಲಿನಿಂದು3ಘನ ನೀಲಾಳಕದ ವೃಂದ 'ುಶ್ರಿತವಾದಾಮಣಿಮಯ ಮಕುಟದಿಂದಾ ಮೂಡುವ ಕಾಂತಿಪಣೆಯಲ್ಲಿ ಮೊಳೆಯುವಂದಾ ಕಸ್ತುರಿತಿಲಕ ಗಣನೆಗೆ ಬರುವ ಛಂದಾ ಗುಣಿಸುವರಾರಿದ ಗುಣನಿಧಿಯೊಪ್ಪಿದ ಪ್ರಣತಪ್ರೇಮದ ಪದ ಮುಖ ಪದ್ಮದಗುಣನೂ ಗುರುತರನೂ 'ನಯವನೂ 'ವರಿಪನೂ 4ಸಿಂಗಾರಿಯ ಸೋಲಿಸುವಾ ಸುಭ್ರುವದಿಂದಾಮಂಗಳವಾದ ಮುಖದ ಮನ್ನಿಸುತಿಹಕಂಗಳ ಕೋಡಿವರಿವಾ ಕಟಾಕ್ಷವನ್ನೂ ಸಂಗಿಸಿದ ಸುಸ್ಮಿತವಾ ತೊಂಗುತ ತೋರಲು ತನ್ನಾಸಿಕವೂರಂಗಿಸಿ ರಾಜಿಸೆ ರದನಚ್ಛದವೂಹೊಂಗೆ ುೀರಂಗೆ ನೋಳ್ಪಂಗೆ ಭವ'ಂಗೆ 5ಕುಂಡಲಗಳ ಕಾಂತಿಯೂ ಕರ್ನಾಗಳಲ್ಲಿಮಂಡಿತವಾಗಿ ಮತ್ತೆಯೂ ಮುಕುರದಂಥಾಗಂಡ ಸ್ಥಳಗಳಲ್ಲಿಯೂ ಗೋಚರಿಸುತ ದಿಂಡಾಗಿ ತೋರೆ ದೀಪ್ತಿಯೂ ಪುಂಡರೀಕಾಕ್ಷನು ಪೊಳೆಯುತಲಿದ್ದನು'ಂಡುತ ಖಳರನು ಹೆದರುವ ಜನರನುಕಂಡೂ ಕರಕೊಂಡೂ ಕೈಕೊಂಡೂ ಹುರಿಗೊಂಡೂ6ವೇಣುವ 'ವರಿಸಲು 'ೀರನಾ ಮುದ್ದೂತಾನೊಂದು ತೇಜ ತೋರಾಲು ಅಂಗುಲೀಗಳುಅನುಕೂಲಗಳಾಗಾಲು ಉಂಗುರಗಳೊಳು ಮಾಣಿಕ್ಯಗಳು ಮೂಡಲುಭಾನುವ 'ುೀರಲು ಬಾಹುಗಳೊಪ್ಪಲುಗಾನಗಳಾಗಲು ಗೋವ್ಗಳು ಕೇಳಲುತಾನು ತೋರಿದನು ಜಾಣುವನು ಜಗಧರನೂ 7ಭೋಗಿಯ ಭೋಗದ ಹಾಗೆ ಬಾಹುಗಳಿರೆತೂಗಿ ಜಾನುಗಳ ತಾಗೆ ಕೇಯೂರಗಳರಾಗ ರಂಜಿತಗಳಾಗೆ ಕಂಕಣವಲಯ ಯೋಗದಿಂದಿರೆ 'ೀಗೆಆಗಿನ ಕಾಲದಲಮರಿದ ಶೃಂಗದುೀಗುರು ಕೃಷ್ಣನ ಇಷ್ಟ ಕೊಳಲಿನಯೋಗೀ ಇಹಭಾಗೀ ಗತರಾಗೀ ಗುರಿಯಾಗೀ8ಕಂಬುಕಂಧರದಿಂದಲೂ ಅಲ್ಲಿರುತಿಹತೊಂಬೆ ತಾರಹಾರಗಳು ಲಕ್ಷ್ಮಿಯು ತಾನುಇಂಬೀನುರದಲಿರಲು ಕೌಸ್ತುಭಕಾಂತಿ ತುಂಬಿ ನಾಭಿಯ ತಾಕಲುಅಂಬುಜ ಸಂಭವನಾಲಯ'ರಲುಜೃಂಭಿಸಿ ಮಾಲೆಯು ಜೋಲಿಡುತಿರಲೂನಂಬೀ ಬಹುತುಂಬೀ ುಹವೆಂಬೀ ಜಗದಿಂಬೀ 9ಕಟಿತಟದತಿಶಯವು ಕಾಂಚಿಯಧಾಮಾಸ್ಪುಟವಾಗಿ ಸ್ವರ್ಣವಸ್ತ್ರವು ಊರುಗಳಲ್ಲಿಗೆಘಟಿಸಿರೆ ಗೂಢವಾದವೂ ಜಾನುಗಳಿಂದ ಪಟು ಜಂಘೆ ಪುದುಗಿಹವೂಕಟಕಗಳಿಂದಲು ಕಡುಚೆಲುವೆನ್ನಲುಅಟಸುತಲಡಿಗಳು ಅತಿಮೃದುವೆನ್ನಲುದಿಟನೂ ನರನಟನೂ ಭವತಟನೂ ಪಟುತರನೂ 10ಕಮಲ ಸೋಕಲು ಕಂದುವ ಲಕ್ಷ್ಮೀಯಕರಕಮಲಕೆ ಕಾಂತಿಯನೀವ ಯೋಗಿಯ ಹೃದಯಕಮಲದಿ ಕುಳಿತಿರುವ ುೀ ದಿವ್ಯಪಾದ ಕಮಲವಕಾಣಿಸುವಾಕಮಲೆಯ ಕಾಂತನ ಕಮಲಜ ಜನಕನ ಕಮಲವ ಕಾವನ ಕಾಂತಿಯ 'ುೀರ್ವನಕ್ರಮವೂ ಕಾಮದವೂ ಶ್ರಮ ಶಮವೂ ಶೋಭನವೂ 11ಬಲಿಯ ಬಳಿಗೆ ಬಂಜವು ಭಾಗ್ಯವನಿತ್ತುಸಲ'ದ ಸೌಮ್ಯಗಳಿವು ಬ್ರಹ್ಮನು ಬಂದುತೊಳೆಯಲು ಬಂದು ತೋರುತಿದ್ದವು ಆ ಪಾದಗಳೆ ಇಳೆಯೊಳಗಿರುತಿಹವೂಕಲಿಮಲಹರಗಳು ಕಲಿಗಳ ಕಾವವುತಾಳಿದವು ನಾಗನ ತದ್ವಶವಾಗಲುಸಿಲುಕೀ ಸಿರಿತುಳುಕೀ ಅಘಕಲಕೀ ಅವು ನಿಲುಕೀ 12ಅಂಕುಶವರ'ಂದವು ಧ್ವಜವಜ್ರವಂಕೀತವಾಗಿಯಾಢ್ಯಾವು ಲಕ್ಷ್ಮಿಯ ಕುಚಕುಂಕುಮವನ್ನು ಕದ್ದವು ಭೂ'ುಗೆ ಪಾದ ಪಂಕಜಗಳು ಬಂದಾವುಕಿಂಕರರಭಿಮತ ಕಂಕೆಯನಟ್ಟುತಮಂಕುಗಳೆನಿಸುತ ಮಲೆವರ ಮುರಿಯುತಶಂಕೆ ಸಲೆ ಕೊಂಕೆ ಹೊರೆುಂಕೆ ಸಿರಿಸೋಂಕೆ13ಈ ರೀತಿಯಲಿ ಈಶನು ಇರುತಲಿರೆನಾರದ ಬಂದು ನಿಂದನು ಕಾಣುತ ಕೃಷ್ಣಕಾರುಣ್ಯ ನಿಧಿ ಕೇಳ್ದನು ಕ್ಷೇಮಗಳನು ತೋರುತ ರೂಪವ ತಾನುವಾರಿಜನೇತ್ರನು ವರದವರೇಣ್ಯನು'ುೀರದೆ ಮುನಿಯನು ಮಾತನು ನುಡಿದನುಸಿರೀ ಅನುಸಾರೀ ಬಗೆದೋರೀ ಮುರವೈರೀ 14ಅರಿತನು ಆತನನುವ ಆ ಕಂಸಗಾಗಅರು' ತೋರಿಸಿದರ್ಥವ ಅದು ತನ್ನ ಕಾರ್ಯನೆರವೇರುವತಿಶಯವ ತಾನಾಗಿ ಮುನ್ನ ಪಿರಿದಾಗಿ ಪ್ರೇರಿಸಿರುವಕರುಣಾವನಧಿಯು ಕಾರ್ಯವ ತೋರಿಯುಮುರಹರಮೂರ್ತಿಯು ಮುಂದಿರುವಲ್ಲಿಯುಅರಿತೂ ಅಲ್ಲಿಕುಳಿತೂ ಬರೆಹೊತ್ತೂ ುದಿರಿತ್ತು 15ಕಾಣುತ ಮುನಿಕೃಷ್ಣನ ಮಾನಸದಲ್ಲಿಧ್ಯಾನಿಸಿದನು ದೇವನ ತಾ ಬಂದುದನ್ನುತಾನು ತೋರಿಸಲು ತತ್ತ್ರಾಣ ಬಂದಾಗ ನ'ುಸಿ ಪ್ರಾಣೇಶಗತಿಪ್ರ'ೀಣಾಕೃಷ್ಣಾ ಕಂಸಗೆ ಹೊದ್ದುವ ರೀತಿಗೆಶ್ರೀನಿಧಿಯಾದಗೆ ಸೂಚಿಸಿ ಸ್ವಾ'ುಗೆತಾನು ಅಜಸೂನು ಅರು'ದನು ಅರಿತದನೂ 16ಮಾನುಷಮೂರ್ತಿಯಾಗಿಯೆ ಭೂ'ುಗೆ ಬಂದುಆನತರನು ಆಳಿಯೆ ಅರ್ಥವ ಸಲಿಸಿಧೇನುವಾಗಿಹೆ ಧೊರೆಯೆ ಯೆನ್ನುತ 'ೀಗೆ ಆನತನಾಗುತಲಿಯೆಮಾನಸಪುತ್ರನು ಮಾತನು ನುಡಿದನುಶ್ರೀನಿಧಿ ತಿರುಪತಿ ವೆಂಕಟರಮಣನುತಾನೂ ತಾಳಿದನೂ ಮಾನಸನೂ ಮಾಡ್ದುದನೂ 17
--------------
ತಿಮ್ಮಪ್ಪದಾಸರು
ತಿಳಿ ಸತ್ಯರೂಪವÀ ಪರಮಾನುಭವವ ಸುವಿಚಾರದಿಂದ ಯೋಚಿಸು ಜೀವಾ ಪ ನಾ ನೀನು ಎನುವಾ ಇದು ಅದು ಎನುವ ನಾನಾತ್ಮಭಾವಾ ಪುಸಿಯಿದು ಜೀವಾ ಏನೊಂದು ಮಿಲ್ಲದೆ ತಾನುಳಿದಿರುವ ಸ್ವಾನುಭವಾತ್ಮಾ ಸತ್ಯನಾಗಿರುವ 1 ಕರ್ತೃವೆನಿಸದ ಭೋಕ್ತøವೆನಿಸದ ಅನಿಸಿಕೆಯಳಿದಾ ನಿತ್ಯನಿರಂಜನ ಮಾಯಾವಿಲಾಸದಿ ತೋರುವನೀಪರಿ ಕನಸಿನೊಲಿದುವೇ ಪುಸಿ ಈ ಜಗವು 2 ಅವಿಚಾರಗಳಿಗೆ ಬೇರಾಗಿ ತೋರೇ ಸುವಿಚಾರದಿಂ ನೋಡೇ ತಿಳಿವುದು ಇದುವೇ ಅದೇ ಪರಮಾತ್ಮನೇ ನೀನಿರುವಿಯಿದೋ ಗುರು ಶಂಕರರಾರ್ಯನ ವರಬೋಧವಿದೋ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತೋರಿಸೊ ತವರೂಪ ತೋಯಜ ನೇತ್ರ ಪ ಮಾರಜನಕ ಕರುಣಾರಸಪೂರ್ಣನೆ ನಾರಾಯಣ ಭವತಾರಕ ಮಮ ಸ್ವಾಮಿ ಅ.ಪ. ದಶರಥ ನಂದನ ವಸುಮತಿ ರಮಣ ತ್ರಿ ದಶವಂದಿತ ಚರಣ ಪಶುಪತಿಧನುಭೇದನ ವಸುಧಾಸುತೆರಮಣ ಋಷಿಪತ್ನಿ ಶಾಪಹರಣ ಅಸಮಾ ವಲ್ಕಲ ಚೀರವಸನಾ ಭೂಷಣಸ್ವಾಮಿ ಬಿಸಜಾಪ್ತನ ಸುತಗೊಲಿದವನಗ್ರಜ ನಸುವನು ತೊಲಗಿಸಿ ಅಸುನಾಥನ ಸುತ ಗೊಸೆದು ಬಿಸಜಭವ ಪದವಿಯ ಕರುಣಿಸಿ ವಿಷಧಿಯ ಬಂಧಿಸಿದಸಮ ಸಮರ್ಥ 1 ದಿನಮಣಿವಂಶ ಮಸ್ತಕಮಣಿಯೆಂದೆನಿಸಿ ಮುನಿ ಕೌಶಿಕನ ಯಜ್ಞಫಲವಾಗಿ ರಕ್ಷಿಸಿ ಅನಲಾಕ್ಷಧನು ಮುರಿದು ಮುನಿಪತ್ನಿಯನು ಪೊರೆದು ಜನಕಸುತೆಯ ಕರವನು ಪಿಡಿದ ಧೀರ ಜನಕನಾಜ್ಞೆಯಿಂ ವನವ ಪ್ರವೇಶಿಸಿ ಇನಸುತಗೊಲಿಯುತ ಅನಿಲಜನಿಂದಲಿ ಘನಸೇವೆಯ ಕೊಂಡನಿಮಿಷ ವೈರಿಯ ಹನನಗೈದ ಹೇ ಅನುಪಮ ಶೂರ2 ಲೀಲಾಮಾನುಷರೂಪ ಭೂಲಲನಾಧಿಪ ಫಾಲಾಕ್ಷವಿನುತ ವಿಶಾಲಸುಕೀರ್ತಿಯು ತಾ ಆಲಸ್ಯವಿಲ್ಲದೆ ವಿಶಾಲವನವ ಪೊಕ್ಕು ವಾಲಿಯ ಸಂಹರಿಸಿ ಪಾಲಿಸಿ ಸುಗ್ರೀವನ ಲೋಲಲೋಚನೆಯಿಹ ಮೂಲವ ತಿಳಿದು ಬಂ ದ್ಹೇಳಿದ ಪವನಜಗಾಲಿಂಗನವಿತ್ತು ಖೂಳ ದಶಾಸ್ಯನ ಕಾಲನೆಂದೆನಿಸಿದ ಶ್ರೀಲೋಲನೆ ಶ್ರೀ ಕರಿಗಿರೀಶನೆ3
--------------
ವರಾವಾಣಿರಾಮರಾಯದಾಸರು
ದಂಡಿಸಬೇಡೈ ದಯೆದೋರೈ ಕರದಂಡದಳಾಂಬಕನೆಪ. ಕಂಡೀಶವಿನುತ ಬ್ರಹ್ಮಾಂಡಪಾಲ ಮಾ- ರ್ತಾಂಡಮಂಡಲಗ ಶುಂಡಾಲವರದಅ.ಪ. ಕ್ಷೇಮದಿ ಶ್ರೀಹರಿನಾಮವ ವರ್ಣಿಸೆ ನೇಮಾನುಷ್ಠಾನದೊಳಿರಲು ನಾ ಮಾಡಿದ ನಾನಾವಿಧ ಪಾಪವ ತಾಮಸಗೊಳಿಸುವ ಕಾಮಕ್ರೋಧಗಳಿಂ1 ಶಿಷ್ಟಾಚಾರದೊಳಿಷ್ಟನಾಗಿ ಪರ ಮೇಷ್ಠಿಜನಕ ಜಯ ಜಯವೆನಲು ಭ್ರಷ್ಟಾಲೋಚನೆ ಪುಟ್ಟಿಸಿ ಪಾಪದ ಬಟ್ಟಿಯ ಹೊದ್ದಿಪ ದುಷ್ಟಸಂಗದಿಂ2 ನಾರಾಯಣ ನರಹರಿಯೆನ್ನುವ ವ್ಯಾ- ಪಾರವ ನಾ ಮಾಡುತ್ತಿರಲು ಆರೋಹಣಾವರೋಹಣ ನಾದವಿ- ಕಾರಗೊಳಿಪ ಶಾರೀರಪ್ರಕೃತಿಯಿಂ 3 ಆರ್ಕಾರಣ ರಿಪುಗಳಿಗೈ ಸರ್ವ ದೇ- ವರ್ಕಳ ಮಸ್ತಕಮಣಿ ನೀನೈ ತರ್ಕಾಗಮ್ಯ ಲಕ್ಷ್ಮೀನಾರಾಯಣ ಅರ್ಕಾಮಿತಪ್ರಭ ಕಾರ್ಕಳಪುರವರ4
--------------
ತುಪಾಕಿ ವೆಂಕಟರಮಣಾಚಾರ್ಯ
ದಶರಥರಾಮಹರೆ ಸೀತಾಪತೆ ದಶರಥರಾಮ ಸುಧಾಕರವದನ ¥ರಶುರಾಮ ಬಾಹುಪರಾಕ್ರಮ ಜಿತಶ್ರೀ ಪ ಸುರಮುನಿ ಸೇವಿತ ಶುಭಕರ ಚರಿತ ಕೌಸ್ತುಭ ಶೋಭಿತ ವರ ವಿಶ್ವಾಮಿತ್ರಾಧ್ವರ ಪರಿಪಾಲನ ಖರ ದೂಷಣ ರಾಕ್ಷಸ ಬಲ ಖಂಡನ 1 ವಾಲಿ ಮರ್ದನ ಭಕ್ತವತ್ಸಲ ಮಾಧವ ವಿನುತ ಪಾದ ಪದ್ಮ ನೀಲ ನೀರದ ಸನ್ನಿಭಗಾತ್ರ ಪರಮ ದಯಾಳು ನಾರಾಯಣ ಲೀಲಾ ಮಾನುಷ ವೇಷ 2 ಸಿಂಧು ಬಂಧನ ಪಂಕ್ತಿ ಕಂಧರಾಂತಕ ಗೋವಿಂದ ಮುಕುಂದಾರ ವಿಂದೋದರ ಇಂದಿರಾಧಿಪ ಶ್ರೀ ಹೆನ್ನೆಪುರ ನಿಲಯಾ ನಂದ ವಿಗ್ರಹ ಜಗದ್ವಂದ್ಯ ಮಂದಹಾಸ 3
--------------
ಹೆನ್ನೆರಂಗದಾಸರು
ದಾರಿ ದೋರೆನಗ ಮುಕುಂದಾ ಪ ದಾರಿ ತೋರೆನಗೆ ಶ್ರೀ ಹರಿ ನಿನ್ನ ಭಕುತಿಯಾ| ಸಾರಿದೆ ನಿನ್ನವನಾನು ಮುಕುಂದಾ ಅ.ಪ ಜನುಮಾನುಜನುಮದಲಿ|ನಾಮವಾ| ನೆನೆಯದ ತಪ್ಪಿನಲಿ|| ಜ್ಞಾನದೃಷ್ಟಿಯಲಂಧನಾದೆನು ಹರಿ ನಿಮ್ಮ| ಕಾಣದ ಕಂಗಳನಾ ಮುಕುಂದಾ1 ಭ್ರಾಂತತನವ ಬಿಡಿಸಿ|ವಿವೇಕ| ಶಾಂತಿಯ ನೆಲೆಗೊಳಿಸಿ| ಅಂತರಂಗದ ನಿಜ ಸುಖವ ಸೂರ್ಯಾಡುವ| ಸಂತರೊಳಗ ಕೂಡಿಸೋ ಮುಕುಂದಾ2 ಅರಹುನಯನ ದೆರಿಸಿ|ನಿಜರೂಪ| ಗುರುತದ ನೆಲೆ ತೋರಿಸೀ| ಗುರುವರ ಮಹಿಪತಿ ನಂದನ ಪ್ರಭು ನಂದನ ಪ್ರಭು ನಿಮ್ಮ| ಸ್ಮರಣೆ ಪಡೆಯ ನಡಿಸೋ ಮುಕುಂದಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದೀನರಿಗೆಲ್ಲಾ ಬಂಧು ಕೇಶವ ತಂದೆ ದೀನರಿಗೆಲ್ಲಾ ಬಂಧು ಪ ದಾನವಾಂತಕÀ ನಿನ್ನ ನೇಮಾನುಯಾಯಿಗೆ ಮಾನವ ಕೊಟ್ಟು ರಕ್ಷಿಪ ಬಂಧು ನೀನೇ ಅ ದೀನ ದ್ರೌಪದಿ ದೇವಿಗೇ ಅಕ್ಷಯವಿತ್ತು ಮಾನವ ಕಾಯ್ದೆ ನೀನೇ ಪ್ರಾಣವು ಹಾರುವಾಗ ಜಮಿಳ ಸ್ಮರಿಸಲು ಯೇನನ ಸಲಹೆ ಮೋಕ್ಷವನಿತ್ತ ಹರಿಯೇ 1 ದೀನ ದೇವಿಕಿ ದೇವಿಯ ಗರ್ಭದಿ ಬಂದು ದೈನ್ಯಳ ಸಲಹಿತಿದೆಯೋ ಹೀನ ವಾಲ್ಮೀಕನು ನಾಮವ ಭಜಿಸಲು ಹೀನನಿಗೊಲಿದು ಬುದ್ಧಿಯನಿತ್ತ ಹರಿಯೇ 2 ಸನ್ನುತ ನಮಿಸುವಂಥ ದಾಸರಿಗೆಲ್ಲ ಸನ್ನುತ ಸ್ಮರಿಸುವಂಥ ನಿತ್ಯ ಭಜಿಪ ದೀನರಿಗೆಲ್ಲ ಚನ್ನಕೇಶವ ಸ್ವಾಮಿ ಪೊರೆವಂಥ ಬಂಧೂ 3
--------------
ಕರ್ಕಿ ಕೇಶವದಾಸ
ದೇವತಾಗುರುಸ್ತುತಿ ಆಶೀರ್ವದಿಸು ಗುರುರಾಜ ನಾ ಶೀರ್ಷವನೆ ಬಾಗುತ ನಮಿಸುವೆ ಜ್ಞಾನದಾತ ಕರುಣಿಸು ತಾತಾ ಆತ್ಮಾನುಭವಾ ಪಡೆವ ವರವಾ ಜ್ಞಾನನಿಧಿಯ ಬೇಡುವೆ ನಿನ್ನೋಳ್ ಮನದಿ ಜ್ಞಾನವು ಹೊಳೆಯುವತೆರನಾ ದೇವನಾನೆಂದರಿವತೆರದಿ ಜೀವಭಾವ ಮರೆವತೆರದಿ ಭಾವದಿ ನೀನೆ ನೆಲೆಸುವ ತೆರದಿ ಸಾವಿನಂಜಿಕೆ ಸರಿಯುವತೆರನಾ ಅನುಭವನಿಧಿಯೆ ಚಿನುಮಯರೂಪಾ ಮನವು ನಿನ್ನೋಳ್ ಮುಳುಗುವ ತೆರದಿ ಆ ನಾರಾಯಣ ಶಿಷ್ಯ ಶಿಖಾಮಣಿ
--------------
ಶಂಕರಭಟ್ಟ ಅಗ್ನಿಹೋತ್ರಿ
ದೇವನಾ ದರುಶನಾ ಜೀವನಾ ಪಾವನಾ ಗುರುವಿನಾ ಪ್ರವಚನಾ ಸಾವಿನಾ ನಾಶನಾ ಪ ಸ್ವಾತ್ಮದ ಜ್ಞಾನೋದಯ ಜಗದಿ ಪೂರ್ಣ ನಿರ್ಭಯ ಬ್ರಹ್ಮಪದದ ತನುಮಯ ತಾನೇ ಶುದ್ಧ ಚಿನುಮಯ 1 ಜ್ಞಾನದ ಪೂರ್ಣಾನುಭವ ನಿರ್ವಿಕಲ್ಪ ಸ್ಥಿತಿಯೆ ಶಿವಾ ದುರುಳ ಭವ ಗುರುವಿತ್ತಾತ್ಮಾನುಭವ 2 ಜೀವನ್ಮುಕುತಿ ಆನಂದ ತಿಳಿಯೆ ನೀನೆ ಮುಕುಂದ ಅರಿತು ನೋಡು ಇದನೆಂದ ಗುರುಶಂಕರನಾ ಕಂದಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ