ಒಟ್ಟು 384 ಕಡೆಗಳಲ್ಲಿ , 71 ದಾಸರು , 335 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗ್ಹ್ಯೋದೀತಯ್ಯಾ ಹರಿ ಹರೀ ಎಂದು ಮುಳುಗೀತಯ್ಯಾ ಪ ಎಂದಿಗ್ಹೋದೀತು ಸುಖ ಅಂದಗೆಡಿಪ ಮಹ ಮಂದಮತಿಯು ಎನ್ನಿಂದ ಬಿಟ್ಟು ದೂರ ಅ.ಪ ಕತ್ತಲ ಕಾಳಿದು ಎನ್ನನು ಸುತ್ತಿಕೊಂಡು ಸೆಳೆದು ಸತ್ಯಮರೆಸಿ ಸ್ಥಿರಚಿತ್ತ ಕೆಡಿಸಿ ಪಿಡಿ ದೆತ್ತಿ ಹಾಕುತಿದೆ ಮತ್ತೆ ಭವಬಂಧದಿ 1 ಮುಂದರಿಗೊಡದಿದು ನಿರುತದ ಅಂದವ ತಿಳಿಗೊಡದು ಬಂಧಿಸಿ ಬಲುಘೋರಾಂಧಕಾರ ಮುಚ್ಚಿ ಸಂದಿನೊಳ್ನೂಕೆನ್ನ ಕೊಂದು ತಿನ್ನುತಿದೆ 2 ತೆರೆದು ನೋಡಲೀಯದು ಕಣ್ಣಿಗೆ ಪರದೆಯ ಹಾಕುವುದು ನರಹರಿಶರಣರ ಕರುಣಮಂ ತಪ್ಪಿಸಿ ಪರಮ ಶ್ರೀರಾಮ ನಿಮ್ಮ ಚರಣ ದೂರೆನಿಪುದು 3
--------------
ರಾಮದಾಸರು
ಎಂದು ಕಾಂಬೆನೊ ನಿನ್ನ ಹೇ ಶ್ರೀನಿವಾಸಾ ಪ ನಗೆಮೊಗದ ನತಜನ ಬಂಧು ಬಾಬಾರೆನ್ನ ಬಿ - ಟ್ಟಗಲದಲೆ ಮನ ಮಂದಿರದೊಳಿರು ಮುನ್ನಾದರು ಸುಪ್ರಸನ್ನ ಮುಂದೆ ಗತಿ ಏನಯ್ಯ ಮುಕುತರ ಹಿಂದುಳಿದವನಲ್ಲದಲೆ ತನು ಸಂ - ಬಂಧಿಗಳ ವಶನಾಗಿ ದುರ್ವಿಷ - ಯಾಂಧಕಾರದಿ ಮುಳುಗಿದೆನೊ ನಾ ಅ.ಪ. ಹಲವು ಜನ್ಮದ ನೋವಾ ನಾ ಹೇಳಿಕೊಳಲೇನೆಲವೊ ದೇವರ ದೇವಾ ನೀ - ನಲ್ಲದಲೆ ಭೂವಲಯದೊಳಿಗಿನ್ನಾವಾ ನಂಬಿದರ ಕಾವ ಸುಲಭರೊಳಗತಿ ಸುಲಭನೆಂಬುವ ಅಲವಬೋಧಮತಾನುಗರು ಎನ - ಗೊಲಿದು ಪೇಳಲು ಕೇಳಿ ನಿಶ್ಚಂ - ಚಲದಿ ನಿನ್ನನೆ ಧೇನಿಸುವೆ ನಾ ಕಲುಷ ಸಂಸ್ಕಾರಗಳ ವಶದಿಂ ಹೊಲಬುಗಾಣದೆ ಹರುಷಗುಂದುವೆ ಹೊಲೆ ಮನದ ಹರಿದಾಟ ತಪ್ಪಿಸಿ ನೆಲೆಗೆ ನಿಲ್ಲಿಸದಿರ್ದ ಬಳಿಕಿನ್ನೆಂದು 1 ಭಾರತೀಪತಿಪ್ರೀಯಾ ಎಂದೆಂದು ಭಕುತರ ಭಾರ ನಿನ್ನದೊ ಜೀಯಾ ಜಗವರಿಯೆ ಕರುಣಾ - ವಾರಿಧಿಯೆ ಪಿಡಿ ಕೈಯ್ಯಾ ಫಣಿರಾಜಶಯ್ಯಾ ತಾರಕನು ನೀನೆಂದು ತಿಳಿಯದ ಕಾರಣದಿ ಸುಖ ದುಃಖಮಯ ಸಂ - ಸಾರ ದುಸ್ತರ ಶರಧಿಯೊಳು ನಾ ಪಾರಗಾಣದೆ ಪರಿದು ಪೋಪೆನೊ ದೂರನೋಳ್ಪದು ಧರ್ಮವಲ್ಲವೊ ದ್ವಾರಕಾಪುರನಿಲಯ ಪರಮೋ - ದಾರ ತನುವೆಂದೆನ್ನ ಪಾಲಿಗೆ ಬಾರದಲ್ಲದೆ ಭವವಿಮೋಚನ 2 ವಿಕಸನಾರ್ಚಿತಪಾದ ವಿಶ್ವೇಶ ಜನ್ಮಾ - ದ್ಯಖಿಲ ಕಾರಣನಾದ ನಿರ್ದೋಷ ಸತ್ಯಾ - ಸುಖಗುಣಾರ್ಣವ ಶ್ರೀದವಿಠಲಪ್ರಸೀದ ಸಕಲ ಕ್ರಿಯ ಯೋಗಗಳು ತನು ಬಂ- ಧಕವು ನಿನಗೊಪ್ಪಿಸದಿರಲು ಎನೆ ನಿಖಿಳ ಜೀವರ ಭಿನ್ನ ನಿನ್ನಯ ಯುಕುತಿಗೆ ನಮೊ ಎಂಬೆನಲ್ಲದೆ ಯುಕುತ ಯುಕ್ತಿಗಳೊಂದರಿಯದ - ರ್ಭಕನ ಬಿನ್ನಪ ಸಲಿಸಿ ನವವಿಧ ಭಕುತಿ ಭಾಗ್ಯವ ಕೊಟ್ಟು ತವ ಸೇ - ವಕರ ಸೇವಕನೆನಿಸದಿರ್ದೊಡೆ 3
--------------
ಶ್ರೀದವಿಠಲರು
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಎಲ್ಲಾಪರಾಧವೈಯ್ಯಾ ಹರಿಪ್ರೀತಿ ಯಿಲ್ಲದಿಹ ಕರ್ಮಗಳು ಝಲ್ಲರಿಯ ಛಾಯಾ ಪ. ಸಾಧುಲಿಂಗವ ಧರಿಸಿ ವೇದ ವೇದಾಂತ ಸ- ದ್ಬೋಧೆಯನು ಕೇಳಿದರು ಪೇಳಿದರು ಸುಪವಿತ್ರ ಮೇದಿನಿಯ ಸರ್ವತೀರ್ಥಸ್ನಾನ ಮಾಡಿದರು ಓದಿದರು ಸರ್ವಶಾಸ್ತ್ರ ಸಾಧಿಸುತ ಕಾಮ ಕ್ರೋಧಾದಿಗಳ ಜೈಸಿ ವನ ಕೈದಿ ತಪಗೈದರು ಮಹಾದಾನಿಯಾದರು ವಿ- ರಾಧವಧ ಪಂಡಿತನ ಪಾದಕರ್ಪಣ ವಿನಹ ಬಾಧಿಸದೆ ಬಿಡದು ಜನ್ಮ 1 ಹರಿಯೆ ಸರ್ವೋತ್ತಮ ಚರಚರಾತ್ಮಕ ಜಗ- ದ್ಗುರುತಮ ಮಹಾಮಹಿಮ ಕರುಣಾರ್ಣವನ ನಾಮ ಸ್ಮರಣೆಯಿಲ್ಲದೆ ಮಾಳ್ಪ ಪರಿಪರಿಯ ಕರ್ಮಗಳು ನರಕ ಸ್ವರ್ಗದ ಭ್ರಮಣವು ಸ್ಥಿರವೆಂದು ನಂಬಿ ದುಸ್ತರ ಭವಾರ್ಣವದಿ ಮುಳುಗಿ ತಿರುತಿರುಗಿ ಜನ್ಮಮಂ ಧರಿಸಿ ಬಹುದುಃಖ ಸಾ ಗರದಿ ತೇಲಾಡುವುದನರಿಯದತಿ ದುರ್ಮೋಹ ಸೆರೆಯೊಳಗೆ ಬಿದ್ದ ಮೇಲೆ 2 ಸರ್ವತಂತ್ರಸ್ವತಂತ್ರ ಸರ್ವತ್ರ ವ್ಯಾಪ್ತ ಸುರ ಸಾರ್ವಭೌಮಸುನಾಮ ಸಾಮಗಾನಪ್ರೇಮ ದೂರ್ವಾದಳಶ್ಯಾಮ ದುರ್ಗಾರಮಣ ಜಗವ ಗರ್ವದಿಂ ತಾ ಕರ್ತುವೆಂದಹಂಕರಿಸಿ ಜಗ ಕೊರ್ವನೆ ಹೃಷೀಕೇಶ ಕೇಶವ ದೈತ್ಯ ಪೂರ್ವಕವೆ ನಿರಪರಾಧ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಾಪರಾಧವೈಯ್ಯಾ ಹರಿಪ್ರೀತಿ ಯಿಲ್ಲದಿಹ ಕರ್ಮಗಳು ಝಲ್ಲರಿಯ ಛಾಯಾಪ. ಸಾಧುಲಿಂಗವ ಧರಿಸಿ ವೇದ ವೇದಾಂತ ಸ- ದ್ಬೋಧೆಯನು ಕೇಳಿದರು ಪೇಳಿದರು ಸುಪವಿತ್ರ ಮೇದಿನಿಯ ಸರ್ವತೀರ್ಥಸ್ನಾನ ಮಾಡಿದರು ಓದಿದರು ಸರ್ವಶಾಸ್ತ್ರ ಸಾಧಿಸುತ ಕಾಮ ಕ್ರೋಧಾದಿಗಳ ಜೈಸಿ ವನ ಕೈದಿ ತಪಗೈದರು ಮಹಾದಾನಿಯಾದರು ವಿ- ರಾಧವಧ ಪಂಡಿತನ ಪಾದಕರ್ಪಣ ವಿನಹ ಬಾಧಿಸದೆ ಬಿಡದು ಜನ್ಮ 1 ಹರಿಯೆ ಸರ್ವೋತ್ತಮ ಚರಚರಾತ್ಮಕ ಜಗ- ದ್ಗುರುತಮ ಮಹಾಮಹಿಮ ಕರುಣಾರ್ಣವನ ನಾಮ ಸ್ಮರಣೆಯಿಲ್ಲದೆ ಮಾಳ್ಪ ಪರಿಪರಿಯ ಕರ್ಮಗಳು ನರಕ ಸ್ವರ್ಗದ ಭ್ರಮಣವು ಸ್ಥಿರವೆಂದು ನಂಬಿ ದುಸ್ತರ ಭವಾರ್ಣವದಿ ಮುಳುಗಿ ತಿರುತಿರುಗಿ ಜನ್ಮಮಂ ಧರಿಸಿ ಬಹುದುಃಖ ಸಾ ಗರದಿ ತೇಲಾಡುವುದನರಿಯದತಿ ದುರ್ಮೋಹ ಸೆರೆಯೊಳಗೆ ಬಿದ್ದ ಮೇಲೆ 2 ಸರ್ವತಂತ್ರಸ್ವತಂತ್ರ ಸರ್ವತ್ರ ವ್ಯಾಪ್ತ ಸುರ ಸಾರ್ವಭೌಮಸುನಾಮ ಸಾಮಗಾನಪ್ರೇಮ ದೂರ್ವಾದಳಶ್ಯಾಮ ದುರ್ಗಾರಮಣ ಜಗವ ಗರ್ವದಿಂ ತಾ ಕರ್ತುವೆಂದಹಂಕರಿಸಿ ಜಗ ಕೊರ್ವನೆ ಹೃಷೀಕೇಶ ಕೇಶವ ದೈತ್ಯ ಪೂರ್ವಕವೆ ನಿರಪರಾಧ 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಳ್ಳು ಕಾಳಿನಷ್ಟು ಭಕ್ತಿ ಎನ್ನೊಳಗಿಲ್ಲ ಪ ಕಳ್ಳರಿಗೆ ಕಳ್ಳನಂತೆ - ಬೆಳ್ಳಕ್ಕಿಯಂದದಿ ಡಂಭಅ ಗಾಣದೆತ್ತಿನಂತೆ ಕಣ್ಣಮುಚ್ಚಿ ಪ್ರದಕ್ಷಿಣೆಯ ಮಾಡಿಕಾಣದೆ ತಿರುಗುವೆನೆರಡು ಕಣ್ಣಿದ್ದು ನಾನುಮಾಣಿಕ್ಯದ ರಾಶಿಯಲ್ಲಿ ಅಂಧಕರೈವರು ಕೂಡಿಆಣಿಮುತ್ತ ಹಿಡಿದು ಹಿಡಿದು ಬಿಡುವ ಭ್ರಮಿತನಯ್ಯ1 ಗುಂಡು ಮುಳುಗನ ಹಕ್ಕಿಯಂತೆ ಕಂಡ ಕಂಡ ನೀರ ಮುಳುಗಿಮಂಡೆ ಶೂಲೆ ಬಾಹೋದಲ್ಲದೆ ಗತಿಯ ಕಾಣೆನೊಮಂಡೂಕನಂದದಲಿ ನೀರ ತಡಿಯಲಿ ಕುಳಿತುಕೊಂಡುಮುಂಡೆ ಮುಸುಕನಿಕ್ಕಿ ಮೂಗು ಹಿಡಿದು ಬಿಡುವ ಭ್ರಮಿತನಯ್ಯಾ 2 ಇಕ್ಕುಳದ ಕೈಯಲ್ಲಿ ಹಿಡಿದ ಕಾದ ಕಬ್ಬಿಣದಂತೆಸಿಕ್ಕಿ ಸಿಡಿಮಿಡಿಗೊಂಬೆ ಗತಿಯ ಕಾಣದೆಹೊಕ್ಕುಳ ಹೂವಿನ ಬಾಡದಾದಿಕೇಶವನ ಮೊರೆಹೊಕ್ಕೆನಿಂದು ಮನ್ನಿಸಿ ಕಾಯೋ ದೇವದೇವೋತ್ತಮನೆ 3
--------------
ಕನಕದಾಸ
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏಕೆ ಬೇಕಾಗಿತ್ತೊ ನಿನಗೆ ಈ ಆಟಲೋಕೇಶ ಸಾಕಯ್ಯ ಇಲಿ ಬೆಕ್ಕಿನಾಟಾ ಪ ಸುಷ್ಟು ಜಲಧಿಶಯನ ಬಿಸುಟಿ ಬಿಸಲ್ಯಾಕೆಸೃಷ್ಟಿಪುದು ಮೊದಲ್ಯಾಕೆ ಸೃಷ್ಟಿಸಲು ಪ್ರಾಣಿಗಳಕಷ್ಟ ಪಡಿಸುವುದ್ಯಾಕೆ ಕಷ್ಟವನು ನೋಡಿತುಷ್ಟಪಡುವುದು ಯಾಕೆ ಇಷ್ಟಕೆ ಬಯಕೆ 1 ಸ್ವರ್ಗ ನರಕಗಳೇಕೆ ಜನ್ಮ ಜನ್ಮಾಂತರಕೆವರ್ಗ ಮಾಡುವುದೇಕೆ ಪಾಪಪುಣ್ಯಗಳೇಕೆದುರ್ಗಮದ ವೈಕುಂಠದಾಸೆ ತೋರುವುದೇಕೆನಿರ್ಗುಣನೆ ಸಲ್ಲದಿ ಉದ್ಯೋಗವ್ಯಾಕೆ 2 ಉದಧಿಶಯನದೊಳಾತ್ಮಾನಂದದಲಿ ಮುಳುಗಿಹೃದಯದೊಳು ನೀನೊಂದು ನೀನೇಯೇ ನೀನಾಗಿಮೋದ ಪಡುವುದು ಬಿಟ್ಟು ವೀರನಾರಾಯಣನೆಗದುಗಿನೊಳು ಬಂದಿಲ್ಲಿ ನಿಂತಿರುವುದೇಕೇ 3
--------------
ವೀರನಾರಾಯಣ
ಏನಾದರೇನಲ್ಲಿ ಇರಕೂಡದು ಹೋಗಿ ಆನಂದ ಕಾನನದೊಳಿರೆ ಸುಖವದು ಪ ನರಮನುಜರೊಳಗಿಲ್ಲಿ ಜನಿಸಿಭೂತಳಕೆಲ್ಲ ದೊರೆಯೆನಿಸಿ ಭೋಗ ಪಡಿಸುವುದರಿಂದಲು ಮಣಿ ಕರ್ಣಿಕೆಯ ಸರಸಿಯೊಳು ಚರಿಸಿ ಮಡಿದರೆ ಮುಕ್ತಿಯಹುದು 1 ಕೊಕ್ಕದಲಿ ವನಿತೆ ಮನೆಮಕ್ಕಳಲಿ ಪಶುಗಳಲಿ ಹೆಕ್ಕಳದೊಳಿಲ್ಲಿ ಸಾವುದರಿಂದಲು ಹೊಕ್ಕು ಮನೆ ಮನೆ ಬಿಡದೆ ಕಾಶಿಯಲಿ ತಿರಿದುಂಡು ಡೊಕ್ಕೆಯನು ಬಿಡೆ ಮೋಕ್ಷ ಪದವಿಯಹುದು 2 ಹರಿ ಸುತನ ಕೋಣೆ ಲಕ್ಷ್ಮೀಪತಿಯ ಪಾದ ಸರಸಿರುಹದಲಿ ಜನಿಸಿರ್ದ ಜಾಹ್ನವಿಯಲಿ ನರ ಮುಳುಗಿ ಕಾಶಿ ವಿಶ್ವೇಶ್ವರನ ಸನ್ನಿಧಿಯೊಳೊರಗಿದರೆ ಮರಳೆ ಜನ್ಮಕೆ ಬಾರೆನೋ 3
--------------
ಕವಿ ಪರಮದೇವದಾಸರು
ಏನು ಖೋಡ್ಯಾದಲ್ಲೋ ಸಂಸಾರ ನಾನು ನೋಡಿದ್ದಿಲ್ಲ ಪ ಏನು ಖೋಡಿದು ವಿಚಾರ ತಪ್ಪಿಸಿ ಎನ್ನ ಶ್ವಾನದಂದದಿ ಖೂನವಿಲ್ಲದೆ ಕೂಗಿಸಿತೇನು ಅ.ಪ ತಾನೆ ನಿಜವಿಲ್ಲ ಎನ್ನನು ಏನು ಕೆಡಿಸಿತಲ್ಲ ನಾನಾಪರಿಲಿ ಮಾಯಮೋಹದಿ ಮುಳುಗಿಸಿ ಜ್ಞಾನ ಕೆಡಿಸಿ ಹೀನಬವಣೆಗೆ ತಂದಿತ್ತು 1 ಕನಸಿನಪರಿಯಂತೀಜಗಸುಖ ಕ್ಷಣಹೊತ್ತಿನ ಸಂತಿ ಇನಿಸು ತಿಳಿಗೊಡದೆನ್ನ ಮನಸು ಸೆಳೆದುಕೊಂಡು ಕುಣಿಸಿ ಕುಣಿಸಿ ಮಹ ನರಕಿಯೆನಿಸಿತ್ತು 2 ಸತ್ಯಮಾರ್ಗ ಮರೆಸಿ ಎನ್ನನಸತ್ಯಮಾರ್ಗಕೆಳಸಿ ನಿತ್ಯನಿರ್ಮಲನ ಸತ್ಯ ಚರಿತೆಗಳ ಗುರ್ತು ತಿಳಿಸದೆಮಮೃತ್ಯುತೀಡೆನಿಸಿತ್ತು3 ಮರವೆಯು ಮುಚ್ಚಿತ್ತು ಭವಪಾಶ ಕೊರಳಿಗೆ ಹಾಕಿತ್ತು ಅರಿವಿನ ಕುರುಹನು ತೋರಿಸದೆ ಪರದಿರವು ಮರೆಸಿ ಧರೆಭೋಗ ಅಹುದೆನಿಸಿತ್ತು 4 ನೇಮನಿತ್ಯಕೆಡಿಸಿ ಎನಗೆ ಶ್ರೀರಾಮಪಾದಮರೆಸಿ ಕಾಮಿಸಬಾರದ ಕಾಮಿತಗಳಿಂದ ಪಾಮರನೆನಿಸೆನ್ನ ಕೊಲ್ಲುತಲಿತ್ತು 5
--------------
ರಾಮದಾಸರು
ಏನು ನಡತೆಯೋ ಏಕೆ ಕೆಡುವೆಯೋಮನುಜ ಜನ್ಮವನ್ನು ವ್ಯರ್ಥಮಾಡಿಬಿಟ್ಟೆ ಮೂರ್ಖ ಪ ಹಂಡತಿ ಕದಪನು ನೀನು ಸವರಿ ನೋಡುವಂತೆ ಮೊನ್ನೆಕೊಂಡ ಸಾಲಗ್ರಾಮವನ್ನು ಮುಟ್ಟಬಾರದೇ ತಡಹಬಾರದೇರಂಡೆಯರ ವಿಷಯವಾಗಿ ಕಾಲಿಗೆರಗಿದಂತೆ ತತ್ತ್ವಪಂಡಿತರ ಚರಣಕ್ಕೆ ಬೀಳಬಾರದೆ ಹೊರಳಬಾರದೆದುಂಡು ಮುತ್ತಿನ ಸರವ ಸತಿಗೆ ಕೊಂಡು ಹಾಕಿದಂತೆಪಿಂಡಾಂಡ ವಿವರಿಪರಿಗೆ ವಂದನೆ ಮಾಡಬಾರದೇಭಂಡ ಮಾತನು ನಾರಿ ಕಿವಿಯ ಖಂಡಿ ಯೊಳು ಪೇಳ್ದ ತೆರದಿಸುವಚನ ಸಾಧುಗಳೊಳು ಉಸುರಬಾರದೇ ಅರುಹಬಾರದೆ 1 ನನ್ನ ಮಕ್ಕಳೆಂದು ನೀನು ಬನ್ನಬಟ್ಟ ತೆರದಿ ಇತರಸಣ್ಣವರ ಮೇಲೆ ನೀನು ಕರಗಬಾರದೆ ತೋರಬಾರದೆಹೊನ್ನು ಹಣವು ಬಿದ್ದುಯಿರೆ ಹೆಂಟೆಯೆನುತಲಾಗ ಎರಡುಕಣ್ಣು ತೆರೆದು ದೃಷ್ಟಿಸಿ ನೋಡಬಾರದೆ ಕಾಣಬಾರದೆಮನ್ನಣೆ ಎಂಬುದನ್ನು ಸೂಕರನ ವಿಷೈ ಸಮನುಎನ್ನುತಲಿ ಚಿತ್ತದಲ್ಲಿ ಎಣಿಸಬಾರದೆ ಹತ್ತಬಾರದೆಉನ್ನತದ ಜೀವರಾಶಿ ಎಲ್ಲ ಒಬ್ಬ ಶಿವನು ಎಂದುಭಿನ್ನ ಕಳೆದು ಆತ್ಮ ಸುಖದಿ ಮುಳುಗಬಾರದೆ ಬೆಳಗಬಾರದೆ 2 ನಾನಾ ಜನ್ಮ ಜನ್ಮ ತಿರುಗಿ ನರನ ಜನುಮ ಬಂದುನಾನಾರೋ ಎಂದು ನಿನ್ನ ತಿಳಿಯಬಾರದೆ ಅರಿಯಬಾರದೆಜ್ಞಾನಿಗಳ ಮುಖಗಳಿಂದ ನಿನ್ನ ಒಳಗೆ ನಿನ್ನ ಕಂಡುನಾನೆ ಬ್ರಹ್ಮವೆಂದು ನಿಜವ ಕಾಣಬಾರದೆ ಕೂಡಬಾರದೆನಾನಾಧ್ವನಿಯು ನಾನಾಕಳೆಯು ದೇಹದೊಳು ತೋರುತಿರಲುಆನೆಯಂತೆ ನೀನು ಈಗ ತೊನೆಯಬಾರದೆ ತೂಗಬಾರದೆತಾನಾದ ಚಿದಾನಂದ ಗುರುವು ತಾನೆ ತಾನೆಯಾಗಿನಾನು ನೀನು ಎಂಬುದನ್ನು ತಿಳಿಯಬಾರದೆ ಕಳೆಯಬಾರದೆ 3
--------------
ಚಿದಾನಂದ ಅವಧೂತರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏಸುಬಾರಿ ಬೇಡಿದರೆ ಹೇಗಾಯಿತು ಹರೇ ವಾಸುದೇವನೆ ನಿನ್ನ ಧ್ಯಾನಕೆ ಸರಿಬಾರದಿರೆ ಪ ಪರಿ ಘಾಸಿಗೊಳಗಾಗಿ ಬಹು ಕ್ಲೇಶದಿಂದಲಿ ನಿನ್ನ ಆಶಿಸಿದವನಾ ಭೂಸುರ ಧೊರಿಯೆ ಶ್ರೀನಿವಾಸ ವೇಣುಗೋಪಾಲ ಕೂಸಿನಂದದಿ ಎತ್ತಿ ಪೋಷಿಸುವುದು ನಿನಗೆ ಹುಟ್ಟದೊ 1 ಸಂಸಾರ ವೆಂಬಂಥ ಶರಧಿಯೊಳು ಮುಳುಗಿ ಬಹು ಹಿಂಸೆ ಬಡುತಲಿ ಬಹಳ ಹೀನನಾಗಿ ಕಂಸಮರ್ದನನಾದ ಘನಮಹಿಮಗೋವಿಂದ ಸಂಶಯವಿಲ್ಲದೆ ನಿಮ್ಮ ಸ್ಮರಿಸುತಲಿ ಅನುದಿನವೂ 2 ಅಘಹರನೆ ನಗಧರನೆ ಆದಿ ಪರಾಕ್ರಮನೆ ನಿಗಮಗೋಚರನಾದ ಘನ 'ಹೊನ್ನ ವಿಠ್ಠಲ 'ನೆ ಜಗತ್ಕರ್ತನೆ ನಿನ್ನ ಚಿಂತನೆಯೆ ಅನುದಿನವೂ ಕರುಣಹುಟ್ಟದೇನು 3
--------------
ಹೆನ್ನೆರಂಗದಾಸರು
ಐಸಿರಿಯನೇನೆಂದು ಪಾಡಲಿ ಶ್ರೀಹರಿಯ ಮೈಸಿರಿಯ ಪಾದಾದಿ ಕೇಶ ಪರ್ಯಂತ ಪ ಸಿರಿಯ ಕರಾಬ್ಜ ಪರಾಗದಿಂ ರಂಜಿಪ ಸರಸಿಜ ಕುಂಕುಮರಜ ರಮ್ಯವೆಂದೆನಿಪ ನಿರುತ ಯೋಗೀಂದ್ರ ಹೃತ್ಕಮಲವನರಳಿಪ ತರುಣಾತಪದ ಕಾಂತಿಯೆನೆ ಕಂಗೊಳಿಪ ವರಶ್ರುತಿ ಸೀಮಂತ ಸಿಂಧೂರವೆನೆ ತೋರ್ಪ ಫಣಿ ರತುನಾರತಿಯೆನಿಪ ಸುರುಚಿರ ಶೋಣ ಪ್ರವಾಳವ ಸೋಲಿಪ ಅರುಣಾಂಬುರುಹದಂದದಿ ಥಳಥಳಿಪ 1 ಚರಣತಳಂಗಳೊಪ್ಪುವ ತನಿ ಕೆಂಪಿನ ಶರಣ ಚಿಂತಾಮಣಿಯ ನಸುಗೆಂಪಿನ ಧರಣಿಯನೀರಡಿ ಮಾಡಿದ ಪೆಂಪಿನ ಕರುಣದಿ ಕಲ್ಲ ಪೆಣ್ಮಾಡಿದ ಸೊಂಪಿನ ಕರ ಶಂಖ ಪದ್ಮ ರೇಖಾಂಕಿತದಿಂಪಿನ ಕುರುನೃಪಗರ್ವ ನಿರ್ವಾಹಾಪಗುಂಪಿನ ಸುರಮಣೀಮಕುಟ ನಾಯಕದ ಸೊಂಪಿನ ಪರಮಪಾವನ ಪಾದದುಂಗುಟದಲಂಪಿನ 2 ಕಂಜಭವಾಂಡ ಸೋಂಕದ ಮುನ್ನ ಬೆಳಗುವ ಸಂಜನಿಸಿಹ ಗಂಗೆ ಮುದದಲ್ಲಿ ಮುಳುಗುವ ಭುಂಜಿಸಿತಮಸ ಜಗಂಗಳ ಬೆಳಗುವ ಮಂಜೀರ ಕಡಗ ಭಾಪುರಿಗಳಿಂ ಮೊಳಗುವ ಮಂಜುಳಾಂಗದಿ ನಖಪಂಕ್ತಿಗಳ್ ತೊಳಗುವ ರಂಜನೆಯಿಂ ಶ್ರೀಮದಂಘ್ರಿಗಳೆಸೆವ ವಂಚಿತ ಸೌಮ್ಯ ಜಂಘೆಗಳಿಂ ಸೊಗಯಿಸುವ ಕುಂಜರ ರುಚಿಯ ಪೂರ್ಣೇಂದು ರಂಜಿಸುವ 3 ಅಳವಟ್ಟ ಪೀತಾಂಬರದ ಸುಮಧ್ಯದ ಕಳಕಾಂಚಿದಾಮದುನ್ನತ ಕಟಿತಟದ ನಳಿನಾಲವೋದಿತ ನಾಭಿಪಂಕರುಹದ ಇಳೆಯ ಜನಂಗಳಿಗೆನಿಸುವ ವುದರದ ವಿಳಸದಲಂಕೃತ ಬಾಹು ಚತುಷ್ಟದ - ಮಳ ಶಂಕಚಕ್ರ ಸದಬ್ಜ ಸಂಭೃತದ ಪೊಳೆವ ಕೌಸ್ತುಭಮಣಿ ಶ್ರಿವತ್ಸೋದರದ ತುಳಸಿ ಮಂದಾರ ಮಾಲೆಗಳ ಕಂಧರದ 4 ಘನ ಸೌಭಗ ಗಂಡಮಂಡಲಯುಗ್ಮದ ಮಕರಕುಂಡಲ ಕರ್ಣಯುಗ್ಮದ ವನಜ ನೇತ್ರಂಗಳ ಕರುಣಾಕಟಾಕ್ಷದ ವಿನುತ ಮೌಕ್ತಿಕದಿಂದ ಮೆರೆವ ನಾಸಿಕದ ನಸು ಮೋಹನದಿ ಸಮನಿಪ ಚುಬುಕಾಗ್ರದ ತನಿರಸ ತುಳುಕುವ ಚೆಲುವಿನಧರದ (?)ಲಲಿತ ವದನದ ವರದಂತಪಂಙ್ತಯ ಇನಿಗೆದರುವೆಳನಗೆಯ ಸಿರಿಮೊಗದ 5 ಸಿಂಗಾಡಿಯಿಂ ಮಿರುಗುವ ಪುರ್ಬುಗಳ ಸ - ನಾಸಿಕ ಬೆಳ ದಿಂಗಳ ಪೊಂಗಿನ ಕಸ್ತೂರಿ ತಿಲಕ ರ ತ್ನಾಂಗದ ರಂಗಿನ ಮಕುಟ ಮಸ್ತಕದ ನೀ ಲಾಂಗದಳಾಂಗನೆಯರು ಸುರಪುರ ಮಧ್ಯ ನಿಖಿಳ ಜ ಗಂಗಳ ಹಿಂಗದೆ ಪೊರೆವ ಶ್ರೀ ಲಕ್ಷ್ಮೀಶ ಮಂಗಳೋತ್ತುಂಗ ಮೂರುತಿಗೆ ನಮೋ ನಮೋ 6
--------------
ಕವಿ ಲಕ್ಷ್ಮೀಶ
ಒಂದೆ ಸಾಕೆನಗೆ ನಿನ್ನಯ ಸೇವೆಯೊಂದೆ ಸಾಕೆನಗೆ ಪಒಂದೆ ಸಾಕು ನಿನ್ನಯ ಸೇವೆ ನಿರತವುಮಂದರಧರ ಶ್ರೀ ವೆಂಕಟರಮಣನೆ ಅ.ಪದೇವಕಿನಂದನನೆ ಎನ್ನನು ನೀಕಾವ ಕೃಪಾಕರನೆಭಾವಜನಯ್ಯನೆ ಭಾನುಪ್ರಕಾಶನೆದೇವರದೇವ ಶ್ರೀ ವೆಂಕಟರಮಣನೆ 1ವಾರಿಧಿರೂಪವಾದ ಭವದೊಳು ಮುಳುಗಿದಾರಿಗಾಣದೆ ುಹೆನುತೋರಿಸಿ ದಾರಿಯ ಜ್ಞಾನದ ನಾಮೆಂಸೇರಿಸು ತಡಿಯ ಶ್ರೀ ವೆಂಕಟರಮಣನೆ 2ತಿರುಪತಿುಂದ ಬಂದು ತರುಣನಾಗಪುರದೊಳು ಗುರು ರೂಪಲಿಕರುಣದಿಂದ ನಾರಾಯಣದಾಸನಿಗೆ ಬೇಗಸ್ಥಿರಸುಖ'ೀವ ಶ್ರೀ ವೆಂಕಟರಮಣನೆ 3
--------------
ನಾರಾಯಣದಾಸರು