ಒಟ್ಟು 209 ಕಡೆಗಳಲ್ಲಿ , 53 ದಾಸರು , 160 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧೇನುಪಾಲ ದಾಸಾರ್ಯಾ | ನುತಿಸುವೆಮಾನವೀಶನ ಪೊರೆದಾರ್ಯಾ ಪ ಕಾಣೆ ನಿನಗೆ ಸಮ ಕರುಣಾಳುಗಳನುಶ್ರೀನಿವಾಸರ ಪೊರೆದಾರ್ಯಾ ಅ.ಪ. ಯತಿವರ ವರದೇಂದ್ರರ ವರಬೋಧ ಪಡೆದು ಸಚ್ಛಾಸ್ತ್ರಗತಿಯನೆ ತಾ ಗಳಿಸುತಹಂ ಮತಿ ವಿಶಿಷ್ಟ ತಚ್ಛಾತ್ರ |ಹಿತವ ನುಡಿಯೆ ವಿಜಯಾರ್ಯಾಗತ ತಿಳಿದು ಸುಪಾತ್ರಕೃತಕನಟಿಸಿ ತಾ ಕಳುಹಿದವರ ಉಪಚಾರದಿ ಮಾತ್ರ 1 ಉತ್ತಮ ನಿಂದೆಯ ಕೃತಿಗೆ ಪ್ರಾಪ್ತಿ ಇವಗೆ ಅತಿರೋಗಇತ್ತ ಮಾತೆಗರಿವಾಯ್ತು ಸುತನ ಕ್ಷೀಣಾರ್ಯುರ್ಯೋಗ |ಅತ್ತ ಅನಿಲಾಜ್ಞೆ ಪೊತ್ತು ವಿಜಯಾರ್ಯಪದ ಸುಯೋಗಪ್ರಾಪ್ತಿಗೈಸಿ ಕ್ಷಮೆಯಾಚಿಸಿ ಆಯ್ತಿವಗೆ ತವಪದ ಯೋಗ 2 ಪರಿ ಯೋಗದಿಂದ ಮೆರೆದೆ ಸುರ ಭೂಸುರ ವೃಂದವು ಪೊಗಳುತಿರಲು ಆಗ 3 ಮೂರ್ತಿ ಕಂಡದೇವ |ರಂಗನೊಲಿಮೆಯಿಂದಂಗ ಜನಸ್ತ್ರದ ಸಂಗರಹಿತ ಭೂದೇವಇಂಗಿತಜ್ಞ ಎನಗೀಯೊ ಗುರುವೆ ದ್ವಂದ್ವ ಸಮರ್ಪಣ ಭಾವ 4 ಹೊತ್ತಿಹೆ ಬಿರುದನು ಭಕ್ತಿರೂಪಿ ಎನೆ ಗುರು ಭಾಗಣ್ಣಹತ್ತು ಎಂಟು ಮತ್ತೊಂದು ಮೊಗದವನ ವಿಶ್ವಮೂರ್ತಿಯನ್ನ |ಪೊತ್ತು ನೀನು ಹೃತ್ಕಂಜದೊಳಗೆ ಬಹು ತುತ್ತಿಪೆಯೊ ಅವನಕೃತ್ತಿವಾಸ ಸಖ ಸರ್ವೋತ್ತಮನೆನುತೊತ್ತಿ ಪೇಳ್ದ ಅಣ್ಣ 5 ಪರಿ ಮೆರೆದೆ ನೀನು ಅಂದುಯೋಗ ಇದನ ಕಂಡಾಗ ಜನರು ಭಯ ಭ್ರಾಂತರಾದರಂದು6 ಮೂರ್ತಿ ಗುರು ಗೋವಿಂದ ವಿಠಲನ ಪಾದತೋರೊ ಭೂಪ 7
--------------
ಗುರುಗೋವಿಂದವಿಠಲರು
ನಾನೊರಲುವಾ ದನಿಯು ಕೇಳದೆ ರಂಗಾ ಭಂಗ ಪ ನಾರಿಯೊಬ್ಬಳು ಬಾಲರಿಬ್ಬರು ಕರಿಯೊಂದು ಕ್ಷೀರಾಬ್ಧಿಯೆಡೆಗೈದಿ ಬಾರೋವರೇನೋ ನಾರದನಾ ಯೆನ್ನಂಗ ಬಾರೆಂದೊಡೇನಾಯ್ತೋ ನೀರಜಾಂಬಕ ನೀನು ಪರಿದೋಡಲೇಕೋ 1 ಒಂದೆಲೆಯ ನೈವೇದ್ಯ ಒಂದು ಹಿಡಿಯವಲಕ್ಕಿ ಒಂದು ಹನಿಗೋಕ್ಷೀರ ಒಂದು ದಳ ಶ್ರೀತುಳಸಿ ಒಂದು ಫಲವರ್ಪಣಕೆ ತೇಗಲಿಲ್ಲವೆ ಸ್ವಾಮಿ ತಂದೆಯೆನ್ನಾತ್ಮನೈವೇದ್ಯ ಸಾಲದೆ ರಂಗಾ 2 ಕಾಲು ಕೈ ಕಣ್ಣು ಬೆನ್ನು ಸೋಲುವಂತಾದಾಗಾ ನೀಲಾಂಗ ನಿನ್ನ ಸೇವೆಯು ಸಾಧ್ಯವಲ್ಲ ಕಾಲ ಎಂದೊಳ್ಳಿತೈ ನಾಲಗೆಗೆ ನೋವಿಲ್ಲ ಬಾಲ ಗೋಪಾಲ ಮಾಂಗಿರಿಯ ರಂಗ ದಯಮಾಡೊ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿತ್ಯ ಶುಭಮಂಗಳಂ ಪ. ಮಂಗಳಂ ಶ್ರೀ ಭೂಮಿದೇವಿಯ ರಮಣಗೆ ಮಂಗಳಂ ಸದ್ಗುಣಗಣಪೂರ್ಣಗೆ ಮಂಗಳಂ ನಿರ್ದೋಷ ನಿಗಮತತಿ ವೇದ್ಯನಿಗೆ ಮಂಗಳಂ ಶ್ರೀ ವೇಂಕಟಾಧೀಶಗೆ 1 ವಂದಾರು ಸುರವೃಂದ ರುಚಿರಮಣಿಮಯ ಮಕುಟ ಸಂದೋಹ ಸಂಘಟಿತಪದಪೀಠಗೆ ಇಂದಿರಾಕರಕಮಲರಂಜಿತ ಧ್ವಜವಜ್ರ ಸಂದಿಪ್ಪ ಪಾದಾದಿ ಶುಭರೇಖಗೆ 2 ದಿವ್ಯನಖಮಣಿರಾಗರಂಜಿತಾಂಗುಲಿ ರಮ್ಯ ಭವ್ಯ ಮಂಗಳದಾಯಿ ಭಯಹಾರಿಗೆ ನವ್ಯ ಜಲರುಹಭಾಸ ಮುನಿಜನಾರ್ಚಿತ ಪುಣ್ಯ ಸೇವ್ಯ ಗಂಗಾಜನಕ ಶ್ರೀಚರಣಗೆ 3 ವರಕನಕವನಯುತ ಉರುನಿತಂಬದ್ವಯಗೆ ಸರಸಕೇಳೀವಾಸಸಜ್ಜಘನಕೆ ಸ್ಥಿರರತ್ನ ಮೇಖಲಾ ಸುಕಲಾಪ ಭೃತ್ಕಟಿಗೆ ಹೃ- ತ್ಸರಸಿಜಾಸನಜನಿತ ಶುಭನಾಭಿಗೆ 4 ಭುವನ ಪೂರಿತ ವಳಿತ್ರಯರಾಜದುದರಗೆ ವಿವಿಧ ಕುಸುಮಾಕಲಿತ ಸುಮಮಾಲಿಗೆ ಕೌಸ್ತುಭ ಶ್ರೀವತ್ಸ ನವಹಾರಕೃತ ರಮಾಶ್ರಿತ ವಕ್ಷಕೆ 5 ದೈತ್ಯಜನತಿಮಿರಹರ ವರದೀಪ್ತಿ ಚಕ್ರಕೆ ಶತ್ರುಭೀಷಣ ಘನಧ್ವನಿ ಶಂಖಕೆ ಗೋತ್ರÀಪತಿ(ತಿಯ?) ಸಮಬಲ ಪ್ರೋದ್ಭಾಸಿ ಸದ್ಗದೆಗೆ ಶ್ರಿತಜನ ಭಯಹಾರಿ ವರಪದ್ಮಕ್ಕೆ 6 ಕಂದರ ವದನಕೆ ನಾಸಿಕ ಕಾಲ ಸನ್ಮುಖಕಮಲಕೆ ಅರುವಾರಿಜನೇತ್ರ ಶೋಭನ ಭ್ರೂಯುಗಳ ವರ ಫಾಲತಿಲಕ ಕುಂತಳರಾಯಗೆ 7 ಕಮನೀಯ ಕರ್ಣಯುಗ ರಕ್ತಕುಂಡಲ ಲಲಿತ ವಿಮಲದರ್ಪಣ ಭಾಸ ಗಂಡಯುಗಕೆ ಸುಮಮಾಲಿಕಾಸ್ಥಿತಿತ ವೃತ್ತಕೇಶ ಸಂತತಿಗೆ ರಮಣೀಯ ಗುಣರಚಿತ ವರ ಮಕುಟಕೆ 8 ಉದಯಗಿರಿನಿಕರ ವಿಸ್ಫುರಿತ ಶುಭಗಾತ್ರಕೆ ಮದನಮದಗಜಶೀಲ ಲಾವಣ್ಯಕೆ ಸದಭೀಷ್ಟÀದಯ ಪೂರ್ಣಪ್ರಜ್ಞಮುನಿಸೇವ್ಯ ಪದ ಹಯವದನ ವೆಂಕಟರಮಣಗೆ 9
--------------
ವಾದಿರಾಜ
ನಿನಗೆ ನಿನ್ನ ನಾಮ ಗುಣಗಳಿಂದರ್ಚನೆ ಗೈವೆನು ಸ್ವಾಮಿ ಪ ಎನಗೊಂದು ಪದಾರ್ಥವು ದೊರೆಯದು ಮನ್ಮನದಿ ನೀನೆ ನಿಂತು ಮಾಡಿಸನುದಿನಾ ಅ.ಪ ಧೇನುಸುವೆನು ವಾಙ್ಮಯನೆನ್ನುತ ಜೀವ ದೇವ ನಿನ್ನಾ ನಾನಾ ದಿವ್ಯ ಸ್ವರೂಪನೆನ್ನುತಾವಾಹನೆಯನುಗೈವೆ ಗಾನಲೋಲ ಗಂಗಾಜನಕನು ಎಂದಾನು ಪಾದ್ಯವನು ಸಮರ್ಪಣೆ ಮಾಳ್ಪೆನು 1 ಶರಣರಿಗಭಯವ ಕೊಡುವನೆಂದು ಅಘ್ರ್ಯಗಳ ಸಮರ್ಪಿಸುವೆನು ಪರಮ ಪವಿತ್ರನು ನೀನೆನ್ನುತಲಾಚಮನ ಮಾಡಿಸುವೆನು ಸಮರ್ಪಣೆಗೈವೆನು 2 ಹನುಮತ್ಪ್ರಿಯನಿಗೆ ದಿವ್ಯ ಚಂದನಾಕ್ಷತೆಗಳ ಧರಿಸುವೆನೂ ಮುದದಲಿ 3 ಭಕ್ತವತ್ಸಲನು ನೀನೆನ್ನುತ ಧೂಪವನೀವೆನು ಸ್ವಾಮಿ ಭವ ಭಯಹರ ನೀನೆಂದೂ ನಿತ್ಯತೃಪ್ತಗೆ ಮಹಾ ನೈವೇದ್ಯ ತಾಂಬೂಲವನೀವೆ ನೀರಾಜನವರ್ಪಿಸುವೆನು 4 ಸೇವೆಯ ಕೊಡೊ 5
--------------
ಗುರುರಾಮವಿಠಲ
ನೆನಿ ವನಜನಾಭನ ಮನವೇ ಪ ಭವ | ದಣಿವಿರೆ ಹಿಂಗಿಸು ಮನವೇ | ಈ ತನುವಾ ಸುಖದನುವಾ | ನಿಜ ಘನವಾ ಮಾಡರ್ಪಣವಾ 1 ಭವ | ಶರಧಿಲಿ ಕೈಯ್ಯಾ ಜರಿಯಾ | ಆಕರಿಯ ಕೇಳಿ ಮೊರಿಯಾ | ಬಂದರಿಯಾ ನೀ ಮರೆಯದೇ 2 ನುತ ಮಹಿಪತಿ ಸುತ ಸಾರಥಿಯ ಪಾ ಡುತ ನಿರ್ಮಳ ಕೀರುತಿಯಾ | ಶ್ರೀಪತಿಯ ಮೂರುತಿಯಾ | ಪದ ದ್ವಿತಿಯಾದಿ ರತಿಯಾಲಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆಲೆಯು ನೋಡಿ ಧ್ರುವ ಕರ್ಮಕ ಮಂದದಿ ಸಿಲುಕಲಿ ಬ್ಯಾಡಿ ವರ್ಮನರುವ್ಹ ಗುರುಯೋಗ ಧರ್ಮವ ಮಾಡಿ ನಿರ್ಮನದಲಿ ನಿಜಘನ ಬೆರೆದಾಡಿ ನಿರ್ಮಳ ನಿಶ್ಚಳ ನಿರ್ಗುಣ ಆತ್ಮನ ಕೂಡಿ 1 ಅನುದಿನ ಅನುಭವಾಮೃತವನು ಸೂರ್ಯಾಡಿ ತನುಮನಧನ ಶ್ರೀಗುರುವಿನರ್ಪಣೆ ಮಾಡಿ ಅನುಭವದಲಿ ಆತ್ಮದ ನೆಲೆನಿಭ ನೋಡಿ ಘನಬ್ರಹ್ಮಾನಂದದ ಸುಖದಲಿ ಲೋಲ್ಯಾಡಿ2 ಮಹಾಮಹಿಮನ ಸುಸೇವೆಯ ಮಾಡಿ ಮಹಿಪತಿ ಒಡಿಯನ ಶ್ರೀಪಾದವ ನೋಡಿ ಇಹಪರ ಸಾಯೋಜ್ಯ ಸದ್ಗತಿ ಮುಕ್ತಿಯ ಕೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೈವೇದ್ಯ ಸಮರ್ಪಣೆ ಸುಳಾದಿ ಸಿರಿ ದಧಿ ವರುಣಧನ್ಯ ಸುಗಂಧಿನೀ ವಾಮನ್ನರೂಪವನ್ನು ಚಿಂತಿಸು ಸೂಪಕೆ ಗರುಡ - ನೀರನ್ನ ತಿಳಿದು ಸುಂದರಿ ಶ್ರೀಧರನೆನ್ನುಪನ್ನಂಗಶಯ್ಯ ಗುರು ಗೋವಿಂದ ವಿಠಲನುಮನ್ನಿಸಿ ಕೈಗೊಂಡು ಉನ್ನತ ಪದ ಕೊಡುವ 1 ಹುಳಿ ತೊವ್ವೆಯಲಿ ಸೌಪರಣಿ ಮತ್ತೆ ಪ್ರತಾಪಓಲೈಸು ಸುಂದರೀ ಶ್ರೀಧರ ದೇವನ್ನತಿಳಿ ಪತ್ರ ಶಾಖಕೆ ಮಿತ್ರನೆಂಬಿನನಗಾಳಿ ದೇವನೆ ಸಾಧು ಅವನೊಳಗೆ ವಿದ್ಯಾಒಲಿಸು ಹೃಷಿಕೇಶ ದೇವನ್ನಫಲಶಾಖಕೆ ಶೇಷ ಶೂರಾಧಭಿನ ಸು-ಶೀಲಾದೇವಿ ಪದ್ಮನಾಭನ್ನ ತಿಳಿದುಹುಳಿ ಸೊಪ್ಪು ಗೊಜ್ಜು ಸಾರು ಇವುಗಳೊಳ್‍ಶೈಲಜೆ ಕಪಿ ಸಲಕ್ಷಣಾ ದಾಮೋದರತಿಳಿ ಅನಾಮ್ಲ ಸಪ್ಪೆ ಭಕ್ಷಗಳಲ್ಲಿ ರುದ್ರ - ಅ-ನಿಲನು ಜಗತ್ಪತಿ ಜಯಲಕ್ಷ್ಮೀ - ಇವಳಲ್ಲಿ ಶ್ರೀ ಜಯಾಪತಿಯ ಚಿಂತಿಸೆವಲಿವ ಗುರುಗೋವಿಂದ ವಿಠಲ ಆನಂದ 2 ಶರ್ಕರ ಗುಡ ಭಕ್ಷ ಇಂದ್ರನು ಮಹಾಬಲಲಕ್ಕೂಮಿಯಾ ರೂಪ ಶ್ರೀ ವಾಸುದೇವನು ಸೋ-ಪಸ್ಕರಕೆ ಗುರು ಆಕಾಶಾಶ್ರಯ ಮನೋಜವರಲೆಕ್ಕಿಸು ಕಮಲೆಯ ಪ್ರದ್ಯುಮ್ನ ದೇವನಮಿಕ್ಕ ಕಟು ದ್ರವ್ಯವು ಖಾರಕೆ ಯಮಧರ್ಮಸತ್ಕರಿಸೆ ಜಿತನ ಪದ್ಮಾನಿರುದ್ದರಸೊಕ್ಕವರರಿ ಗುರು ಗೋವಿಂದ ವಿಠಲಯ್ಯಸಿಕ್ಕಾ ಸುಳಿವ ಮುಂದೆ ಕಕ್ಕುಲಾತಿಯ ಸಲ್ಲ 3 ಅಚ್ಯುತ ದೇವನ್ನ ಚಿಂ-ತಿಸು ಉಪ್ಪು ಉಪ್ಪಿನಕಾಯಿ ನಿರಋತಿ ಚಿರಚೀವಿವಾಸುವು ಧನ್ಯಾದೇವಿ ಜನಾರ್ಧನನು ಫಲರಸವು ಫಲೋದಕ ಶೀಕರಣೀತ್ಯಾದಿರಸದೊಳ ಹಂಪ್ರಾಣ ಣ್ರಾಣನು ಆದ್ವಯರುಭಾಸಿಸುವಳು ವೃದ್ಧೀದೇವಿ ಉಪೇಂದ್ರನುದೋಷದೂರನು ಗುರು ಗೋವಿಂದ ವಿಠಲ ಪ್ರ-ಕಾಶಿಸುವನು ಬಿಡದೆ ಈಪರಿ ಗುಣಪರ್ಗೆ 4 ಸದನ ಯಜ್ಞಾದೇವಿಯರರಂಗನು ಹರಿ ರೂಪದಲ್ಲಿರುವನು ಉತ್-ತುಂಗ ಸ್ವಾದೋದಕದೊಳಗಿರುವನು ಬುಧನುಪಿಂಗ ಕಣ್ಣಿನ ಮತಿಮತನ ಸುಧಾದೇವಿಅಂಗಜನಯ್ಯ ಶ್ರೀಕೃಷ್ಣನ್ನಧೇನಿಸೆಗಂಗಾಜನಕ ಗುರು ಗೋವಿಂದ ವಿಠಲನುಮಂಗಳ ಕೊಡುವನು ಸಂದೇಹವಿಲ್ಲದೆ5 ಭೋಜನ ದ್ರವ್ಯದಿ ಯೋಚಿಸ್ಯಭಿಮಾನಿಗಳಭೋಜ್ಯ ಗುರು ಗೋವಿಂದ ವಿಠಲನೆ ಭೋಜಕ6
--------------
ಗುರುಗೋವಿಂದವಿಠಲರು
ನೋಡಿದ್ಯ ರಂಗೈಯನ ನೋಡಿದ್ಯ ಪ ನೋಡಿದ್ಯ ಮನವೆ ನೀನಿಂದು ಕೊಂ- ಡಾಡಿದ್ಯ ಎದುರಲ್ಲಿ ನಿಂದು ಆಹ ಮಾ- ತಾಡಿದ್ಯ ವರಗಳ ಬೇಡಿದ್ಯ ನಿನ್ನೊಳು ಕೂಡಿ ನಲಿನಲಿದಾಡುವ ಶ್ರೀ ರೂಪ ಅ.ಪ. ಚರಣತಳದಲ್ಲಿ ಕೆಂಪು- ಶುದ್ದ ಅರವಿಂದ ಧ್ವಜ ವಜ್ರಸೊಂಪು- ಸ್ತುತಿ ಪÀರಿಗೆ ಸುರಂಘ್ರಿಪ ತಂಪು- ನೋಡ- ಲರಸಿ ಕಾಣದೊ ವೇದಗುಂಪು, ಆಹ ಹರಡಿ ಹಿಂಬಳೆ ಸಾಲ್ಬೆರಳೈದರ ಮೇಲೆ ಸುರುಚಿರ ರೇಖೆ ಚಂದ್ರಮನ ಸೋಲಿಪ ನಖ1 ಸರಸ ನೂಪುರ ಗೆಜ್ಜೆ ಪೆಂಡ್ಯ - ಹೊನ್ನ ಸರಪಳಿ ಪಾಡಗ ಕಂಡ್ಯ - ಹಿಂದೆ ಧರೆಗೆ ಮುಟ್ಟಿದ ಜಡೆಗೊಂಡ್ಯ - ಇದು ತರುಣಿ ಎನ್ನದಿರು ಕಂಡ್ಯ - ಆಹ ಬೆರಳಲ್ಲಿ ಇಟ್ಟ ಸುಂದರ ಪಿಲ್ಲಿಮೆಂಟಿಕೆ ಕಿರಿಪಿಲ್ಲಿ ಅಡಿಮೆಟ್ಟು ಮೆರೆವ ಕಾಲುಂಗರ2 ಝಣ ಝಣ ಗೆಜ್ಜೆನಾದ - ವನ್ನು ಎಣಿಸಲಾರದು ನೋಡಿ ವೇದಾ - ನಂತ - ಮೋದ - ಇದು ಅಣುರೇಣು ತೃಣಕಾಷ್ಠ ಭೇದ, ಆಹ ಪ್ರಣತಾರ್ತಿ ಹರವಾದ ಮಿನುಗುವ ಜಾನುದ - ರ್ಪಣ ನಾಚಿಪ ಜಂಘೆ ಎಣೆಗಾಣೆ ಸ್ತ್ರೀರೂಪ 3 ಊರುದ್ವಯಂಗಳು ರಂಭಾ - ಸ್ತಂಭ ಚಾರು ಪೊಕ್ಕುಳ ಸುಳಿಗುಂಭ - ತಂತ್ರಾ - ಸಾರೋಕ್ತದಿ ಪೂಜೆಗೊಂಬ - ವಿ ಸ್ತಾರ ಮಹಿಮೆ ಗುಣತುಂಬ, ಆಹ ನಾರಿ ಲಾವಣ್ಯದ ಪಾರ ಮೀರಿದ ಕಾಂತಿ ಆರಾರ ಮನಸಿಗೆ ತೋರದ ಪೆಣ್ಣಿನ4 ಉದಯರಾಗದ ದಿವ್ಯವಸನ - ಮೇಲೆ ಉದರ ತ್ರಿವಳಿ ಬಂದಿ ಹಸನ - ಕೇಳು ಮುದದಿಂದ ವಡ್ಯಾಣ ಬೆಸನ - ನೋಡು ಯದುಕುಲ ಜಾತ ಮಾನಿಸನ, ಆಹ ಮದಕರಿಯಂದದಿ ವಲಿದೊಲಿದಾಡಲು ಮದನಾರಿ ಮರುಳಾದ ಅದುಭುತ ಚರಿಯನ್ನ 5 ದೋರ್ಯ ಹರಡಿ ಕೈಕಟ್ಟು - ಚೂಡ್ಯ ಈರೈದುಂಗುರವುಳ್ಳ ಬೆಟ್ಟು - ಬಂ - ಗೀರು ಗಂಧವು ಗಂಬೂರ ಕರ್ಪೂರ ಕ- ಸ್ತೂರಿ ಲೇಪನ ಶೃಂಗಾರ ತ್ರಿವಳಿಯ 6 ತಾಯಿತು ಮುತ್ತ ಕಟ್ಟಾಣಿ - ತೋಳ ಮಣಿ - ವಂಕಿ ಕೇಯೂರ ಪಲ್ಲವ ಪಾಣಿ - ಉ ಪಾಯದಲ್ಲಿ ಘಟ್ಟಿ ಕಾಣಿ, ಆಹ ನೋಯದೆ ಸುರರಿಗೆ ಪೀಯೂಷ ವುಣಿಸಿ ದೈ- ತೇಯರ ಮಡುಹಿದ ಮಾಯದ ಕನ್ನಿಕೆ 7 ಸರಿಗೆ ಮುತ್ತಿನ ಚಿಂತಾಕ - ಕುಚ- ಕಂಚುಕ - ತೊಟ್ಟ ಭರದಿ ತೂಗುವ ಪಚ್ಚೆಪದಕ - ಕೆಳಗೆ ಹರಿ ನಡುಕಿಂಕಿಣಿ ಕನಕ, ಆಹ ಹರಳು ಕೆತ್ತಿದ ಚಿತ್ತರ ಮಾಟ ಕಟಿಸೂತ್ರ ಧರೆಗೆ ಶೋಭಿಪ ಸೀರೆ ನೆರೆಯ ವೈಭವವನು 8 ರನ್ನ ಪವಳ ಸರ ಥಳಕು - ಜೋಡು ಕನ್ನಡಿ ಹಾಕಿದ ಮಲಕು - ನೋಡು ಅನ್ನಂತ ಸೂರ್ಯರ ಝಳಕು - ಲೋಕ ಚನ್ನಾಗಿ ತುಂಬಿದ ಬೆಳಕು ಹೇಮ ಸಣ್ಣ ಮುತ್ತಿನ ಮೋ ಹನ್ನ ಏಕಾವಳಿ ಚಿನ್ನದ ಸರಗಳು 9 ಸಿರಿವತ್ಸ ಕೌಸ್ತಭ ಹಾರ-ವೊಪ್ಪೆ ವೈಜಯಂತಿ ಮಂದಾರ - ಮೇಲೆ ತರುಣ ತುಲಸಿ ಜನಿವಾರ - ಇಟ್ಟು ವರಭುಜಕೀರ್ತಿ ಕುಂಜರ, ಆಹ ಕರದಂತೆರಡು ತೋಳು ಎರಡೊಂದಾರು ಸಾ- ವಿರ ರೂಪನಾಗಿ ಶರೀರದೊಳಿಪ್ಪನ 10 ಕೂರ್ಮ ಕದಪು - ಕಣ್ಣಿ- ಗಿಕ್ಕಿದ ಸೊಬಗಿನ ಕಪ್ಪು - ತಲೆ - ಹಿಕ್ಕಿ ಬಾಚಿದ ಕೇಶ ಥಳಪು - ಸರ್ವ ಲಕ್ಕುಮಿ ದೇವಿಯ ಲೆಕ್ಕಿಸದೇ ಮಗನ ಪೊಕ್ಕುಳಿಂದಲಿ ವೆತ್ತ ಅಕ್ಕಜದಬಲೆಯ11 ಸೂಸುವ ದಾಡಿಯ ದಂತ - ಪಙÂ್ತ- ನಾಸ ಮೂಗುತಿಯಿಟ್ಟ ಶಾಂತ - ಸುಖ ಲೇಸು ಹಾಸ ಜಗದಂತ - ರಂಗ ಭಾಸ ಮಿಗಿಲು ಚಂದ್ರಕಾಂತ, ಆಹ ಸುಷುಪ್ತಿಯಲ್ಲಿ ಭೂಶ್ವಾಸ ಬಿಡುವರನ್ನು ಲೇಸಾಗಿ ಸಲಹುವ ದೋಷನಾಶನ ರೂಪ12 ಎಸೆವ ಪಂಜರದೋಲೆ ಕಿವಿಯ-ಹೊನ್ನ ಕುಸುಮ ಕೂಡಿದ ಬಾವಲಿಯ - ತಿದ್ದಿ ಕುಸುರಿಯಿಕ್ಕಿದ ಸರಪಣಿಯ - ಚಿನ್ನ ಸೋಸಲು ಕುಂಕುಮ ರ್ಯಾಕಟೆಯ, ಆಹ ಎಸಳು ಕೇದಿಗೆ ಬಹು ಕುಸುಮವ ಮುಡಿದದ್ದು ವಶವಲ್ಲ ಚೌರಿ ಅರಸಿನ ಪೂಸಿದ ಹೆಣ್ಣ13 ಕಪೋಲ - ಪೊಸ- ಮೌಳಿ ಕೈಯಲ್ಲಿ ಕಡೆÀಗೋಲ - ನೇಣು ಪಾಲಯ ಪಿಡಿದ ಸುಶೀಲ - ಧರೆಯ - ಶೂಲಿಯ ನೆಲೆಸಿದ ಖೂಳನ ಸದೆದು ಹಿ- ಯ್ಯಾಳಿಸಿ ಮೆರೆದ ಗೋಪಾಲನೆಂಬ ಹೆಣ್ಣ14 ರಜತ ಪೀಠ ಪುರಾಧೀಶ - ನಂದ ವ್ರಜದೊಳಾಡಿದ ಸರ್ವೇಶ - ನಮ್ಮ ವಿಜಯವಿಠ್ಠಲ ನಾರಿವೇಷ - ತನ್ನ ನಿಜಭಕ್ತ ಮಧ್ವಮುನೀಶ, ಆಹ ತ್ರಿಜಗ ಮಧ್ಯದಲಿ ನಿಜ ಪದವಿಯನಿತ್ತು ಸುಜನರಿಗೊಲಿದನ್ನ15
--------------
ವಿಜಯದಾಸ
ನ್ಯಾಯವೆ ನಿನಗೆ ಎನಗೆ ಸಿರಿಕೃಷ್ಣ ಪ ಬಾಯಾಡಬಹುದೆ ಕೈಯೊಳಿತ್ತ ಹಣಗಳ ಅ.ಪ ಆರು ಅರಿಯದ್ಹಾಂಗೆ ಒಂಭತ್ತು ಕೊಡುವಾಗತೋರಿಯಾಡಿದೆ ಒಮ್ಮೆ ನಿನ್ನ ಹೆಸರಗಾರುಮಾಡದೆ ಬಡ್ಡಿ ತೆತ್ತು ಬರುವೆನೆಂದುಹಾರೈಸಿ ಕೊಡದೆ ಚುಂಗುಡಿಯ ನಿಲಿಸುವರೆ 1 ಸಾಲವ ಬೇಡಿದರೆ ಕೋಪವೇ ಕಮಲಾಕ್ಷಕಾಲಿಗೆ ಎನ್ನ ಕೊರಳ ಕಟ್ಟಿಕೊಂಬೆಆಲಯದವರ ಕೇಳದೆ ನಿನಗೊಳಗಾದೆಭೋಳೆಯತನದಲ್ಲಿ ನಿನ್ನ ನಂಬಿದೆ ಹರಿ2 ಅಸಲು ನಿನಗೆ ಸಮರ್ಪಣೆಯಾಯಿತೆಲೊ ದೇವಮೀಸಲು ಪೊಂಬೆಸರು ನಿರುತ ನಡೆಯಲಿಶಶಿಧರ ಬ್ರಹ್ಮಾದಿ ವಂದ್ಯ ಸತ್ಯವೆಂಬಮೀಸಲುಳುಹಿ ಎನ್ನ ಸಲಹೊ ಶ್ರೀಕೃಷ್ಣ 3
--------------
ವ್ಯಾಸರಾಯರು
ಪಂಚಮುಖ ಹನÀುಮತೇ ಶರಣುಮಾಂಪಾಹಿ ಪ ಜ್ಞಾನ ಬಲ ರೂಪನೇ ಹನುಮ ಮುಖ್ಯಪ್ರಾಣ ಅನಿಮಿಷವೃಂದದಲಿ ಪ್ರವರನೇ ಶರಣು ಅನುಪಮಾನಂದಮಯ ಅನಘ ಸೀತಾಪತಿಯ ಅನುಪಮ ಮಹಾದಾಸ ಹನುಮ ಪಾಲಯಮಾಂ 1 ನಿರುಪಮಮಹಾತೇಜ ಸರ್ವತೋಮುಖ ಉಗ್ರ ವೀರ ಭೀಕರ ಮೃತ್ಯುಮಾರಕ ಮಹಾವಿಷ್ಣು ನರಸಿಂಹ ಶುಭಕರಗೆ ಪ್ರಿಯತಮನೆ ಶರಣಾದೆ ಕರುಣದಿಂದಲಿ ಎನ್ನ ತ್ರುಟಿ ಬಿಡದೆ ಸಲಹೋ 2 ಬಂಗಾರಮಯ ಸುಧಾ ಪೂರ್ಣ ಕುಂಭವುಕರದಿ ಜಂಗಮದ ಸ್ಥಾವರದ ವಿಷಹರ ಅಭಯದ ಖಗರಾಜನಿಗೆ ವರನೆ ತದ್ರೂಪಮುಖಧರನೆ ಗಮನ ಶ್ರೀಕರನ ಒಲಿಸೆನಗೆ 3 ಅರಿ ಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನು ಮನ್ಮನದಿ ಪೊಳೆವಂತೆ ನೀದಯ ಮಾಡೋ 4 ಜ್ಞಾನ ವಿದ್ಯಾಕಾಂತಿ ಪ್ರತಿ ವಾದಿಜಯದಾತ ಮನಬುಧ್ಧಿದೇಹ ದಾರುಢ್ಯ ಸ್ಥೈರ್ಯ ಘನ ಭಕ್ತಿ ಮುಕ್ತಿ ಸಾಧನ ವೀವ ಹಯಶೀರ್ಷ ಪ್ರಸನ್ನ ಶ್ರೀನಿವಾಸನ ಒಲಿಸೆನಗೆ ಗುರುತಮನೇ 5 || ಶ್ರೀ ಭಾರತೀರಮಣ ಮುಖ್ಯ ಪ್ರಾಣಾಂತರ್ಗತ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಪಂಪಾಪತಿಯೆ ಶಂಭೋ - ಪಾಲಿಯ ಪ ಶಂಫಲಿ ಪುರಗ ವಿರಂಚಿ ಪಿತ ಪದನೋಂಪಿಗೈವ ಮನ | ಇಂಪಾಗಿ ಕೊಡು ಹರ ಅ.ಪ. ಪಂಚ ಬಾಣಾರಿ ಮಹದೇವಾ | ತ್ವರ್ಯಸಂಚುಗೊಳಿಸೊ ಹರಿ ಭಾವಾ |ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಸಂಚಿತಾಗಾಮಿ ಕಳೆ | ವಾಂಛಿತಾರ್ಥವ ಶಿವ 1 ಸಯ5ೂ ಮನಕಭಿಮಾನಿಯೆ 5sÁವಿಶಯ್ಯ ಹರಿಗೆ ಎಂಬೊ ರೂಪಿಯೇ ||ಸ್ಥೈರ್ಯ ವನದಿ ಹರಿ | ಪ್ರೀಯ ಪಾಲಿಸಿನ್ನುಕೈಯ್ಯ ಪಿಡಿದು ಕಾಯೊ | ಅಯ್ಯ ನಿನಗೆ ಶರಣು 2 ದಿವಿಜ ಪ್ರಿಯಸರ್ವಾರ್ಪಣೆಂಬ ಮನ | ಭಾವವ ಪಾಲಿಸು 3 ಮಾಧವ ಪ್ರಿಯಚಂದ್ರಾರ್ಕಾನಲ ಚಕ್ಷು | ತಂದೆ ಕಾಯೋ ಹರ4 ಪರಿ ಪರಿ ಪಾಲಕಾ ಗುರು |ಗೋವಿಂದ ವಿಠಲನ ಅರ್ಚಕಾ ||ತೀವರದಲಿ ಮನ | ಮಾವಾರಿ ಪದ ಸ್ಮøತಿಭಾವದಲಿಡು ಶಿವ | ಆವ ದನ್ಯವನೊಲ್ಲೆ 5
--------------
ಗುರುಗೋವಿಂದವಿಠಲರು
ಪರಾಕು ಮಹಾಸ್ವಾಮಿ ಸಜ್ಜನಪ್ರೇಮಿಪ. ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯ ಚಾರು ಪದಾಬ್ಜದ್ವಯ ದನು- ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮ ದೂರನು ಲಾಲಿಸು ಚಿನ್ಮಯ ಜಯ1 ದುಷ್ಟ ನಿಶಾಚರರಟ್ಟುಳಿ ಘನ ಕಂಗೆಟ್ಟುದು ಸುರಮುನಿಗಣ ಆ ಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ- ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮ ಕಷ್ಟವು ಪದಕರ್ಪಣ ಪರಾಯಣ 2 ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲು ಧುರೀಣರ್ಸಂತಾಪಿಪರು ಮುರಾರಿ ನಮ್ಮ ಶೌರಿ ಜಗ- ದಂತ ವಿಹಾರಿ ನಿರಂತ ಪರಂತಪ3 ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮ ಸನ್ನುತ ಶುಭಾಂಗ ಸ- ತಿಮಿರ ಪತಂಗ ಸುಪ್ರ ವಿಹಂಗ ತುರಂಗ4 ಕಾಲನಿಯಾಮಕ ಪ್ರಾಣ ನಿ ನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣ ನತ ಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ- ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಾರ್ವತಿಪತಿ ಆರ್ವರಾಭಿಷ್ಟಿಯ ಸರ್ವಪೂರಿಸಿ ತನ್ನಿಜಪದ ಸೇವಕನಿಗೆ ಕರುಣವ ಬೀರ್ವನಿಗೆ ಚರಿತ ಆ ಪೂರ್ವನಿಗಾರತಿಯಾ ಬೆಳಗಿರೇ ಸೋ 1 ತಾರ್ಕು ಪದೇಶಿತಾ ಸರ್ಕನೆ ಕರ್ಕಶ ಮಾರ್ಗವ ಬಿಡಿಸುವ ಅತಕ್ರ್ಯನಿಗೆ ಅಘತಮರ್ಕನಿಗೆ ಸುರಸ ಪರ್ಕನಿಗಾರತಿಯಾ ಬೆಳಗೀರೇ ಸೋ 2 ಅಂಬುಶಶಿಬಿಂಬಾಂಕಿತ ಜಟೆ ಅಂಬಕತ್ರಯ ಶಾಂಭವ ವಾಸೆ ಚಿದಂಬರಗೆ ಗಜಚರ್ಮಾಂಬರಗೆ ಹರಸಿ ಶ್ವಂಭರಗಾರತಿಯ ಬೆಳಗಿರೇ ಸೋ3 ಕರ್ಪುರ ಗೌರವತನು ತೋರ್ಪುವ ಸರ್ಪಾಭರಣಗಳಲಿ ಶೋಭಿಸುತಿರ್ಪನಿಗೆ ಹತ ಕಂರ್ದಪನಿಗೆ ಸುಜ್ಞಾನ ದರ್ಪಣೆಗಾರತಿಯಾ ಬೆಳಗೀರೆ ಸೋ 4 ಕುಂದದಿ ಆನಂದದಿ ಮಹೀಪತಿ ನಂದನ ಸಲಹುವ ಘನ ಅಶಿತ ಕಂದರಿಗೆ ಪೂಜಿತ ಇಂದರಗೆ ಸದ್ಗುಣ ಸಾಂದರ ಗಾರತಿಯಾಬೆಳಗೀರೆ ಸೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪಾಲಿಸು ಅವಾಂತರೇಶಾ ಪಾವನ ಕೋಶಾ ಪಾಲಾಬ್ದಿ ಶಯನನ ದಾಸಾ ಕಾಲ ಜನಕ ವಿಶಾಲಮಹಿಮಾರೈಯಿ ಲೋಲಾ ಜೀವೋತ್ತಮ ಕಾಲಕಾಲಕೆ ಎನ್ನ ಪ ಪುಣ್ಯಗಾತುರ ಮಾರುತಾ ಪುಂಜಿತ ಜೀವಾ ಗಣ್ಯರಹಿತ ಗುಣಜಾತಾ ಮನ್ಯುದಾನವ ಕುಲಘಾತಾ ಮಹಾತತ್ವ ದಾತಾ ಸನ್ನ್ಯಾಯಮಣಿ ಶ್ರುತಿಗೀತಾ ಧನ್ಯನ ಮಾಡೊ ಅನ್ಯನೇನೊ ನಾನು ಕಾ ರುಣ್ಯದಿ ದುರಿತಾರಣ್ಯ ಮನ್ಮಥ ಲಾ ಗುಣ್ಯ ಮನದಾ ಕಾರ್ಪಣ್ಯವ ಓಡಿಸಿ 1 ದ್ವಿತೀಯ ನಿರ್ಜರವರೇಣ್ಯ ದೀನನುಗಣ್ಯ ದಿತಿಜಾವಳಿಗೆ ಕಾಠಿಣ್ಯ ಸತತ ಅಪ್ರತಿರಾಜ್ಯನ್ಯಾಸ ಚರಾಚರಮಾನ್ಯಾ ತುತಿಸುವೆ ಕೇಳು ದೈನ್ಯ ಗತಿ ನೀನೆ ಕ್ಷಿತಿಯೊಳಗಿತರರ ಕಾಣೆನೊ ಸತಿಪತಿ ಮಿಗಿಲಾದ ತುತುವೇಶ ತತಿಗಳ ಜಿತ ಸದ್ಗುರು ಭಾರಿತ ಪ್ರತಿಪಾದ್ಯ ಮಾರುತಿ ಮತಿಯಲಿ ನಿನ್ನ ಮತದಲಿ ಪೊಂದಿಸಿ 2 ವಿಕಸಿತ ಸದನಾ ಜ್ಞಾನ ವಿಶೇಷ ಧ್ಯಾನಾ ಅಖಿಳ ವಿಚಾರ ನಿದಾನಾ ಅಕಳಂಕವಾದ ಬಹುಮಾನಾ ಅಮೃತಪ್ರಾಣಾ ಸಕಲಕ್ಕು ನೀನೇ ಪವಮಾನಾ ಸುಖಸಾಗರ ಸುರನಿಕರವಿನುತ ಮಹಾ ಭಕುತ ಭವಾಬ್ಧಿತಾರಕ ವಿಷಭಂಜನ ಲಕುಮಿವಲ್ಲಭ ನಮ್ಮ ವಿಜಯವಿಠ್ಠಲನ್ನ ನಖ ಕೊನೆ ಪೊಗಳುವ ಉಕುತಿ ನೀಡಿಂದು 3
--------------
ವಿಜಯದಾಸ