ಒಟ್ಟು 108 ಕಡೆಗಳಲ್ಲಿ , 35 ದಾಸರು , 94 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ನೆನೆವ ದಾಸರ ಕಾಮಧೇನು ನೀನಹುದೊ ಪ ಎಂದು ಕಾಂಬೆನು ನಿನ್ನ ಸುಂದರ ಮೂರುತಿಯ ನೆಂದು ಬಯಸುತಲಿರ್ದೆ ಸಂಧಿಸಿತಿಂದಿಗೆ 1 ಕಮಲನಾಭನೆ ನಿನ್ನಯ ಅಮರ ಮಹಿಮೆ ಕಾಣ್ವ ಭ್ರಮೆಯಪಡುತಲಿರ್ದೆ ಕ್ರಮದಿ ಸಾಧಿಸಿತಿಂದು 2 ಚಿನುಮಯ ಶ್ರೀರಾಮ ಘನ ಮಂದಮತಿ ನಾನು ನೆನವು ಮರೆದೆ ಕ್ಷಮಿಸಿ ಕನಿಕರದಿ ಕಾಯೊ 3
--------------
ರಾಮದಾಸರು
ಪಾದವನು ನಂಬಿದೆನೊ ಪರಮಪುರುಷಾ ಪಾವನನ ಮಾಡೆನ್ನ ಶ್ರೀರಂಗನಾಥ ಪ ಪಾದ ಪಾದ ಬಲಿಯ ಪಾದ ಪಾದ 1 ಪಾದ ಪಾದ ಪಾದ ಪಾದ 2 ಪಾದ ಪಾದ ಪಾದ 3 ಪಾದ ಪಾದ ಪಾದ ಪಾದ 4 ದುರುಳ ಕಂಸಾಸುರನ ಎದೆಯ ತುಳಿದ ಪಾದ ಮುಚುಕುಂದಗೆ ಮುಕ್ತಿಯನಿತ್ತ ಪಾದ ಕಿಚ್ಚು ಬಳಸಲು ಪರ್ವತವನೆತ್ತಿದ ಪಾದ5 ಶಿಲೆಯಾದ ಆಹಲ್ಯೆಯನು ಕಾಯ್ದ ಪಾದ ಪಾದ ಹರನ ಧನುವನು ಮುರಿದು ಜಾನಕಿಯ ತಂದ ಪಾದ ಪಾದ 6 ಪಾದ ಪಾದ ಸೇತುಬಂಧನ ಮಾಡಿ ಸೀತೆಯನು ತಂದ ಪಾದ ಪಾದ 7 ಪಾದ ಪಾದ ಪಾದ 8 ರಾಜಸೂಯಾಗದಲಿ ಪೂಜೆಗೊಂಡ ಪಾದ ಪಾದ ದಂತವಕ್ರಾದಿಗಳನು ಸೆಳೆದುಕೊಂಡ ಪಾದ ಪಾದ 9 ಕÀುರುಪಾಂಡವರಿಗೆ ಸಂಧಿಗೈತಂದ ಪಾದ ವಿದುರನಾ ಮನೆಯಲ್ಲಿ ಭೋಜನಗೈದ ಪಾದ ಪಾದ ದುರುಳ ದುರ್ಯೋಧನನ ಉರುಳಿಸಿದ ಶ್ರೀಪಾದ 10 ರಣದೊಳಗೆ ಅರ್ಜುನಗೆ ಸಾರಥಿಯಾದ ಪಾದ ದೊರೆ ಧರ್ಮಾದಿಗಳ [ನು] ಒಲಿದ ಪಾದ ಪಾದ ಪಾದ 11 ಪಾದ ಇಕ್ಷ್ವಾಕು ಶ್ರೀರಾಮರಾರಾಧಿಸಿದ ಪಾದ ಧರ್ಮವರ್ಮಾದಿ ಚೋಳೇಂದ್ರ ಪೂಜಿತ ಪಾದ ಪಾದ 12 ತೊಂಡಮಾನ್ ಚಕ್ರವರ್ತಿಗೊಲಿದು ಬಂದ ಪಾದ ಶೇಷಾದ್ರಿಗಿರಿಯಲ್ಲಿ ನೆಲೆಸಿರ್ಪ ಪಾದ ಪಾದ ಪಾದ 13 ಅಜನ ಯಜ್ಞಕುಂಡದೊಳಗುದಿಸಿ ಬಂದ ಪಾದ ಪಾದ ವ್ಯಾಧರೂಪಿನಲ್ಲಿ ನಡೆತಂದ ಶ್ರೀಪಾದ ಪಾದ 14 ಪಾದ ಯಾದವಾಗಿರಿಯಲ್ಲಿ ನೆಲೆಸಿರ್ಪ ಪಾದ ವರಸಂಧಿಗೃಹದಲ್ಲಿ ವಾಸವಾಗಿಹ ಪಾದ ಪಾದ 15 ಕರುಣದಿಂದರ್ಜುನಿಗೆ ಸಾರಥಿಯಾದ ಪಾದ ಕೈರವಿಣೀ ತೀರದಲಿ ನೆಲೆಸಿರ್ಪ ಪಾದಾ ರುಕ್ಮಿಣೀ ಬಲಭದ್ರರೊಡನೆ ಒಪ್ಪಿದ ಪಾದ ಕರುಣ ವೆಂಕಟಕೃಷ್ಣನೆಂಬೊ ಬಿರುದರಳ್ಳ ಪಾದಾ 16
--------------
ಯದುಗಿರಿಯಮ್ಮ
ಪಾಹಿ ಮಾಂ ದೇವ ಶ್ರೀಕೃಷ್ಣ ಪಾಹಿ ಮಾಂ ಭಕ್ತವತ್ಸಲ ಪ ದೇಹಿ ಮೇ ಭಕ್ತಿಮಚಲಂ ತ್ರಾಹಿ ಮಾಂ ತ್ವಂ ಕೃಪಾದೃಷ್ಟ್ಯಾ ಪಾಹಿ ಮಾಂ ಅ.ಪ ಬಂಧಿತಂ ಕರ್ಮಭಿರ್ಬಹುನಿಂದಿತಂ ವೃತ್ತಿತೋ ನಿತ್ಯಾಕ್ರಂದಿತಂ ಕ್ಲೇಶಬಾಹುಳ್ಯೈಃಸಂಧಿತಂ ಮಾಂ ಕೃಪಾದೃಷ್ಟ್ಯಾ 1 ಸಂಚಿತಾಗಾಮಿಪ್ರಾರಬ್ಧ ವಂಚಿತಂ ವಿಷಯ ಭೋಗ ಸಿಂಚಿತಂ ನಿತ್ಯಸದ್ಗುಣ ಮುಂಚಿತಂ ಮಾಂ ಕೃಪಾದೃಷ್ಟ್ಯಾ 2 ಬುದ್ಧ ಮುಕ್ತ ಪ್ರತ್ಯಗಾತ್ಮನ್ ತಿರುಪತಿ ಸತ್ಯ ಶ್ರೀವೆಂಕಟ ತವ ಭೃತ್ಯಭೃತ್ಯಂ ಕೃಪಾದೃಷ್ಟ್ಯಾ 3
--------------
ತಿಮ್ಮಪ್ಪದಾಸರು
ಪ್ರಾಣ ನಿನ್ನಂಘ್ರಿ ಸಿರಿರೇಣು ಕಾಣು ಯೋನಿಯಲಿ ಬಂದೆ ನೊಂದೆ ಗುರುವೆ ನೀನೆ ಗತಿಯೊ ಪ ಭರತ ಭಾರತಿರಮಣ ಭಾರತ ಪ್ರತಿಪಾದ್ಯ ಭರದಿಂದಲಿ ಎನ್ನಭಾರ ವಹಿಸುವ ಭರಣ ಭಾರದ್ವಾಜಾತ್ಮಜ ಭಾರಭಂಗಾ 1 ಗತಿ ಅಗತಿ ಗಮನಗರ್ಭ ಸ್ವರ್ಗ ನರಕ ಈ ಕ್ಷಿತಿ ಲೋಕಾಂತದಲ್ಲಿ ಬಳಲಿ ಮತಿಯ ಕಾಣದೇ ಮಂತ್ರಿ ರಾಜ ಮಹಾತತುವೇಶ ಬಲವತ್ವ್ಸರೂಪ2 ಪಂಚಾಹುತಿಯಲಿ ಹಾಕದಿರೋ ಜೀವೇಶ ಸಂಚಿತಾವಳಿ ಸರ್ವನಾಶಾ ಪಂಚದ್ವಾರದಲಿ ಶ್ರೀ ಹರಿಯ ಪೂಜಿಪ ಪುಣ್ಯ ಸಂಚಕನೆ ಪುರುಷಾಕಾರನೀಯೋ 3 ಅಪೂಪ ಬಹುರೂಪ ಹರಿಚಾಪ ಪ್ರತಾಪ ಕಪಿಕುಲಾಂಬುಜ ದಿನಪ ಸುರಪ ರಿಪು ವಿಪಿನಕಾಲ ಮಹಾ ಗುಪುತ ವ್ಯಾಪ್ತ ಸುಪ್ತಿ ಸ್ವಪನ ಜಾಗೃತಕಾರ್ಯಫಲದಾ4 ರಾಜಿಸುವ ರಾಗವಿದೂರಾ ವಾಜಿರೂಪ ವಾಶಿಷ್ಟ ವಂದ್ಯಾ ವರದಾ ಮಜ್ಜಗದ್ಗುರು ಮುಖ್ಯ ಪ್ರಾಣಾ 5 ಪೂರ್ವೋತ್ತರಂಗ ಸಂಧಿ ಸಂಧಾನ ವಿಶಿಷ್ಟಾ ಈರ್ವ ಸ್ಥಾನದಲಿ ನೀನೇ ಸರ್ವದಲಿ ಧ್ಯಾನವನು ಇತ್ತು ಪಾಲಿಸು ನಿತ್ಯ ಮೂರ್ತಿ 6 ಮಾನವ ರೂಪಾ ಮಾನಾಭಿಮಾನಿಗಳೊಡಿಯಾ ಆನಂದತೀರ್ಥಪದ ಭಕ್ತ ಅನಾಥಬಂಧು ವೈರಾಗ್ಯ 7 ಸಮಸ್ತ ಪರಮಾಣು ತಿಳಿಸೋ ಸಾಮ ಸೂರ್ಯಸ್ಥಿತನೆ ಸೂತ್ರಾ8 ಇಪ್ಪತ್ತೆರಡು ಸ್ಥಾನದಲಿ ಪ್ರಭುವೆ ಜಗ ದಪ್ಪ ಚತುರದ್ವಾರವಾಸ ಅಪ್ರತಿಮಲ್ಲ ಶ್ರೀ ವಿಜಯವಿಠ್ಠಲನ್ನ ಅಪ್ಪಿಕೊಂಡು ಮೆರೆದ ಧೀರಾ 9
--------------
ವಿಜಯದಾಸ
ಬಂದನು ಹನುಮಂತ ಗೃಹಕೇ | ಕಾರ್ಯಸಂಧಿಸಲು ಅನುಗ್ರಹಕೇ ಪ ಮಂದಿರವು ಒಂಟೀಲು ವಂಶ ಸಿ | ಕಂದರಾಬಾದಿನಿಂದಲಿಸುಂದರನು ಬಹುನಂದ ವೀಯುತ | ಮಂದವಾರದಿ ಬಂದ ಹನುಮ ಅ.ಪ. ಮಾಸ | ವೈಶಾಖ ನಿಜ ವಿಶಾಖಾಭಾದಾಸನ ಮನೆಗತಿ ಪ್ರಭಾ | ಯುತ | ಆ ಸಮೀರನು ಅಸ್ಮಲ್ಲಾಭಾ ||ಹರ್ಷದಲಿ ಹನುಮಂತರಾಯರ | ವಶದಿ ಇದ್ದವನಲ್ಪ ಕಾಲದಿವಶವ ಪಡಿಸಲು ವೆಂಕಟಾರ್ಯಗೆ | ನಸುಕಿಲೀ ನಸನಗುತ ಬಂದ 1 ಪರಿ ಮಣಿ |ವರ ಖಚಿತ ರತ್ನ ವಿಶಾಲಾಪರಿ ಪರಿಯ ಆಭರಣ ಭೂಷಿತ | ಸುರ ವಿರೋಧಿಗಳ್ಹನನ ಶಕುತನೆರೆ ಸುವಾನರ ಸೈನ್ಯ ಪರಿವೃತ | ಹರಿಯಲಿಂ ಪಟ್ಟಾಭಿಷಕ್ತ 2 ಭೃತ್ಯ ನಿತ್ಯ ಸೇವಾಸಕ್ತ ಮಾರುತ 3
--------------
ಗುರುಗೋವಿಂದವಿಠಲರು
ಬಂದಾನಲ್ಲೆವೆ ಮನೆಗಿಂದು ಕೇಳವ್ವಾ ರಂಗ ಪ ಬಂದಾ ಮನೆಗಿಂದು|ಮುಕುಂದ ದಯಾಸಿಂಧು|ಆ ನಂದವನೆ ತಂದು|ಸಂಧಿಸಿಕೊಟ್ಟಾ ದೀನಬಂಧು 1 ನಂಬಿದವರ ಕಾವಾ|ಅಂಬುಜಾಕ್ಷದೇವಾ| ನೆಂಬ ಬಿರದವಾ|ರಂಬಿ ತೋರಿದಾ ಜೀವರಜೀವಾ2 ತಂದೆ ಮಹಿಪತಿ|ನಂದನ ಸಾರಥಿ| ಬಂದು ನೆರದಾರಥಿ|ಛಂದವಾಯಿತು ಜನ್ಮಕಥೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ಶ್ರೀಗುರುರಾಯ ಬಾರೋ ಬಾರೋ ಭೂಸುರವರ್ಯ ಬಾರೋ ಬಾರೋ ಭಕ್ತಪ್ರೀಯ ಕಾಯ ಪ ಘೋರಾರಣ್ಯದೊಳು ಬಂದು ಸೇರಿದೆನೊ ದುಷ್ಕರ್ಮದಿ] ಕ್ರೂರ ಮೃಗಗಳೆನ್ನತಿ ಬಾಧಿಸುತಿಹವು ಚೋರರುಪದ್ರವವನ್ನು ನಾ ಸಹಿಸಲಾರೆ ಇಷ್ಟೆನುತ ದೂರ ನೋಳ್ವರೆ ವ್ಯಾಳ್ಯಕೆ ಸೂರಿವರೇಣ್ಯ 1 ಮಂದಜನ ಸಂಗದಿಂದ ತಂದೆ ತ್ವತ್ಪಾದಾರ ವಿಂದ ಪೊಂದದಿರೆ ಸಂಧಿಸಿಎನ್ನಗೆ ಬಂದÀ ಬನ್ನ ಹಿಂದೆ ನೀ ನಾಲ್ವರಿಯಲಿಲ್ಲೆ ಸಂದೇಹವ್ಯಾಕೆ 2 ಇಂದ್ರ ಸಮವಿರಾಜಿತ ಇಂದ್ರ ವಿರೋಧಿ ಸಂಭೂತ ಇಂದ್ರ ದೇವಾಧಿ ಮಾನಿತ ಆನಂದ ಪ್ರದಾತ ಇಂದ್ರ ಜಾರಿ ಸೂತ ಶಾಮಸುಂದರವಿಠಲ ದೂತ ಇಂದ್ರ ಜಾತಾಖ್ಯರ ಪ್ರೀತ ಇಂದ್ರಾರ್ಯಪೋತ 3
--------------
ಶಾಮಸುಂದರ ವಿಠಲ
ಬಿಡದೆ ಭಜಿಸೊ ಮನವೆ ದೃಢಭಾವದಿ ಪೂರಿಸೊ ಶ್ರೀಪಾದಾರಾಧಿಸೊ ಧ್ರುವ ನಿತ್ಯಾನಿತ್ಯ ಆವದೆಂದುದ್ದಿತ್ಯರ್ಥ ಶೋಧಿಸೊ ಪಥ್ಯವಾಗುವ ಸತ್ಯಶಾಖತ್ವಪಥವ ಸಾಧಿಸೊ ಕೃತ್ಯಾಕೃತ್ಯವಾಗುವ ನಿತ್ಯನಿಜವು ಭೇದಿಸೊ ಉತ್ತಮೋತ್ತಮವಾದ ವಸ್ತುಮಯದೊಳು ನೀ ಸಂಧಿಸೊ 1 ಇದೆ ನೋಡು ಹಿತವು ನಿನ್ನು ಸುಪಥಸಾಧÀನ ಸಾಧಿಸಿಗೊಡುವ ಸ್ವಾಮಿ ಸದ್ಗುರು ಪತಿತಪಾವನ ಭೇದಿಸಿ ನೋಡಲಕ್ಕೆ ನಿನ್ನೊಳಗಾಗುವದು ಉನ್ಮನ ತಾಂ ನಿಧಾನ 2 ಬೆರಿಯೊ ಭಾವಭಕುತಿವಿಡಿದು ಹಿಡಿಯೊ ಹರಿ ಪಾದವ ಸಾರ ಸವಿಯೊ ಸುಖವ ಅನಭವಾಮೃತವ ಹರಿಯೊ ಪಾಶ ಬೀಳುವ ಭವಜನ್ಮಮೃತ್ಯುವ ನೆರಿಯೊ ಮಹಿಪತಿಸ್ವಾಮಿ ವಸ್ತು ಪರಾತ್ಪರವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಿಡುಮನವೆ ಬಿಡದಿಹ್ಯ ಸಂಸಾರ ಪಡಕೊಂಬುದು ಮಾಡು ನೀ ಸುವಿಚಾರ 1 ವಿಚಾರದೊಳಗದ ಬಲು ವಿವೇಕ ಸೂಚಿಸಿಬಾಹುದು ಸ್ವಾತ್ಮದ ಸುಖ2 ಸ್ವಾತ್ಮದ ಸುಖ ತಿಳಿದವ ಸ್ವತ:ಸಿದ್ಧ ಮತ್ತೆಲ್ಲಿಹದವಗೆ ಭವಬಂಧ 3 ಭವಬಂಧವ ತಿಳಿಯಲುಪಾಯ ಭುವನದಲ್ಯದ ಶುಕನಳಿಕನ್ಯಾಯಾ 4 ನ್ಯಾಯವ ತಿಳಿದರೆ ನೋಯವನೆಂದು ಶ್ರಯ ತಿಳಿಯಲು ತಾ ಬಂಧು 5 ಬಂಧು ಹಗೆಯು ತನಗೆ ತಾಯೆಂದು ಸಂಧಿಸಿ ಪಾರ್ಥಗ್ಹೇಳಿದ ಹರಿ ಬಂದು 6 ಹರಿವಾಕ್ಯವೆ ಗುರುಗುಹ್ಯದ ಗುಟ್ಟು ಪರಮಾನಂದದ ಹೆಜ್ಜೆಯ ಮೆಟ್ಟು 7 ಹೆಜ್ಜೆಲೆ ನಡೆವನು ಕೋಟಿಗೊಬ್ಬವನು ಸಜ್ಜನ ಶಿರೋಮಣೆನಿಸಿಕೊಂಬುನು 8 ಶಿರೋಮಣೆನಿಕೊಂಬುದು ಗುರುಕರುಣ ಗುರುಚರಣಕೆ ಬ್ಯಾಗನೆಯಾಗು ಶರಣು 9 ಶರಣ ಹೊಕ್ಕವಗೆಲ್ಲಿಹುದು ಮರಣ ಮರಣಕ ಮರಣವ ತಂದವ ಜಾಣ 10 ಜಾಣನೆ ಜನ್ಮರಹಿತ ವಾದವನು ಜನವನ ಸಕಲ ಸಮವಗಂಡವನು 11 ಸಮಗಂಡವಗಳದಿಹ್ಯ ಶ್ರಮವೆಲ್ಲಾ ರಾಮ ವಸಿಷ್ಠರೊಳಾಡಿದ ಸೊಲ್ಲ 12 ಸೊಲ್ಲಿಗೆ ಮುಟ್ಟಿದವ ಪ್ರತಿಯಿಲ್ಲ ಎಲ್ಲರೊಳಗ ವಂದಾದವ ಬಲ್ಲ 13 ಬಲ್ಲವನೆ ಬಲ್ಲನು ಬಯಲಾಟ ಎಲ್ಲರಿಗಿದೆ ಅಗಮ್ಯದ ನೋಟ 14 ನೋಟಕ ನೀಟ ಮಾಡಿದವನು ಧನ್ಯ ನೀಟಿಲೆ ನಡೆದವ ಕೋಟಿಗೆ ಮಾನ್ಯ 15 ಕೋಟಿಗೆ ಒಬ್ಬನು ತತ್ವಜ್ಞಾನಿ ನೋಟವಗಂಡಿಹ್ಯ ಮಹಾ ಸುಜ್ಞಾನಿ 16 ಸುಜ್ಞಾನಿಗೆ ಘನಮಯ ಸುಕಾಲ ಸುಗಮ ಸುಪಥವಾಗಿಹುದನುಕೂಲ 17 ಅನುಕೂಲದ ನಿಜ ಮಾತನೆ ಕೇಳು ಅನುದಿನ ಘನಗುರು ಸೇವಿಲೆ ಬಾಳು 18 ಪರಿ ಲೇಸು ಕಳೆವುದು ಮಿಕ್ಕಿನ ಭ್ರಾಂತಿಯ ಸೋಸು 19 ಸೋಸ್ಹಿಡಿದರ ಇದೊಂದೇ ಸಾಕು ವೇಷವದೋರುವದ್ಯಾತಕೆ ಬೇಕು 20 ಬೇಕೆಂಬ ಬಯಕೆಯ ಈಡ್ಯಾಡು ಸೋಕಿ ಶ್ರೀ ಸದ್ಗುರು ಪಾದದಿ ಕೂಡು 21 ಪಡೆವುದಿದೇ ಸ್ವಸುಖ ಸಾಧನ 22
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭವ ಭಾವಿಸುವೊದು ಸೂಚನಾ | ಪಾವನರಂಗಾ | ಜೀವಾಂತರಂಗ | ಜೀವ ತುರಂಗಾ | ಹೃದ್ದಾವರೆಯಲಿ ನಿಲ್ಲು | ಆವಾವ ಬಗೆ ಸು | ರೂಹ | ಆವಾಗ ತೋರುತ ಪ ನಂದನಂದನಾ ಆನಂದಾ | ನಾಗನಾ | ಬಂಧಾ | ಬೀಡಾದೆಕ್ಕೆಂದಾ | ದಾ ಖಳನ ಕೊಂದೆ | ನಂದವ್ರಜದ ಗೋವಿಂದಾ | ಯಶೋದೆ ಕಂದಾ | ಮಂದನು ನಾನು | ಇಂದೀಗ ನೀನು | ಬಂದು ಸುರಧೇನು | ಪೊಂದು | ಇನ್ನೇನು | ಮುಂದಣ ಇಹಸುಖ | ಒಂದು ವಲ್ಲೆನು ಸಖ | ಕಂದ ನಂದದಿ ನೋಡು | ಕುಂದದ ವರವ ಕೊಡು | ಎಂದೆಂದಿಗೆ ಪದದ್ವಂದಾರವಿಂದಕೆ | ವಂದಿಸುವೆನು ಬಾ | ಲೇಂದು ವದನ ಪೊರಿಯೋದೆ ಲೋಕದ ತಂದೆ 1 ಮಂದರಧರ ಮಾಧವಾ | ಮಹದಾದಿ ದೇವಾ | ಬೋವಾ | ಇಚ್ಛೈಸಿದರೆ ಕಾವಾ | ವಾಸುದೇವ | ನಿಂದು ಕರೆವೆನು ಒಂದೆ ಮನಸನು | ತಂದು ವೇಗಾನು | ಸಂಧಿಸೆಂಬೆನು | ಚಂದ ಚಂದದಿ ನಿನ್ನನಂದಕೆ ಹಿಗ್ಗುವೆ | ಪತಿ | ಬಂಧು | ಅತಿ ದಯಾಸಿಂಧು || 2 ಶ್ರೀಲತಾಂಗೀಯ ರಮಣಾ ಶೃಂಗಾರ ಚರಣಾ | ಮಾಲಾ ಕೌಸ್ತುಭಾ ಭರಣಾ | ಶೀಲಾ ಸದ್ಗುಣಗಣ ಸಿದ್ಧಸವ್ಯಾಕಾರಣ | ನೀಲಲೋಹಿತ ಪಾಲಿಪನೆ ಪ್ರೀತ | ಮೂಲೋಕದ ದಾತಾ | ಲಾಲೀಸಿ ಮಾತಾ | ಪಾಲ ಸಾಗರಶಾಯಿ ಪತಿತ ನರನ ಕಾಯಿ | ಮೇಲುಗಿರಿಯಲಿಪ್ಪಾ | ಮೇಲಾದ ತಿಮ್ಮಪ್ಪಾ ವಾಲಗ ವೆಂಕಟ | ಶೈಲಾ ವಿಜಯವಿಠ್ಠಲಾ | ನೀಯೋ ಗೋಪಾಲಾ 3
--------------
ವಿಜಯದಾಸ
ಭಾವಭಕ್ತಿಗೊಲಿವ ತಾಂ ಶ್ರೀಹರಿ ಕಾವ ಕರುಣದಲಿ ಪರೋಪರಿ ಧ್ರುವ ಕಂದ ಪ್ರಹ್ಲಾದನ ಸದ್ಭಾವಕಾಗಿ ಸಂಧಿಸೊದಗಿ ಬಂದ ನರಸಿಂಹನಾಗಿ ತಂದೆ ತಾಯಿ ಬಂಧು ಸಮಸ್ತವಾಗಿ ಬಂದು ರಕ್ಷಿಸಿದ ಪ್ರತ್ಯಕ್ಷವಾಗಿ 1 ಭಾವದಿಂದ ದ್ರೌಪದಿಗಾಗ್ಯಧ್ಯಕ್ಷ ಠಾವಠಾವಿಲಿ ಕಾಯಿದೆ ಪ್ರತ್ಯಕ್ಷ ಭುವನದೊಳಾಗಿ ಪಾಂಡವಪಕ್ಷ ಜೀವ ಪ್ರಾಣಾಗಿ ಮಾಡಿದ ಸಂರಕ್ಷ 2 ಭಾವದಿಂದಾಗುವ ಭಕ್ತರಾಧೀನ ದೇವೋತ್ತಮದ ಬಿಟ್ಟು ಹಿರಿಯತನ ದಾವದೊಂದೇಕಾಗಿ ತಾಂ ಸಾವಧಾನ ಈವ್ಹಾಭಕ್ತರ ಮನಿಲ್ಯನುದಿನ 3 ಭಾವದಿಂದುದಿಸುವ ಸ್ವಯಂಭಾನು ಭಾವಿಕರಿಗಾಗುವ ಶ್ರಯಧೇನು ಭಾವದಿಂದಾಗುವ ಸಫಲ ತಾನು ಭಾವದಿಂದ ಭಾವ ಪೂರಿಸಿದನು 4 ಭಾವವೆಂಬಂಜನ ಕಣ್ಣಿಲೂಡಿ ಭಾವದಲುಂಬುದನು ಒಡಮೂಡಿ ಭಾವದಿಂದ ಮಹಿಪತಿ ಕೈಯಗೂಡಿ ಜೀವ ಪಾವನ್ನಗೈಸÀುತಿಹ್ಯ ನೋಡಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಗಟಖಾನ ಹುಬ್ಬಳ್ಳಿ ಶ್ರೀಯಾದವಾರ್ಯರ ಕರಾರ್ಚಿತ ಶ್ರೀನರಸಿಂಹ ಸ್ತೋತ್ರ ಕರುಣವೆಂತುಂಟೋ ನಿನಗೆ | ಶ್ರೀನಾರಸಿಂಹಾ ಪ ವರತಟನಿ ಮಲಪ್ರಭೆಯ | ತೀರಸ್ಥನೆನಿಸೀ ಅ.ಪ. ಪೂರ್ವದಲಿ ಋಷಿ ಚ್ಯವನ | ರಿಂದರ್ಚಿತವು ಎನೆಓರ್ವ ಶಿಲೆಯಲಿ ನಿಂದು ಯಾದವಾರ್ಯಾ |ಪಾರ್ವ ಯೋಗೀಶ ರಚಿ | ತಾಕಾರ ಗಂಧದಲಿಆಹ್ವಾನಿತನು ಆಗಿ ನೀನಿಲ್ಲಿ ಇರುವೇ 1 ಆದಿ ವ್ಯಾಧಿಲಿನೊಂದ | ಬುಧರಿಂದ ಬಹುಸೇವ್ಯಯಾದವಾರ್ಯಾಂತಸ್ಥ | ಶ್ರೀ ನಾರಸಿಂಹಾ |ಬಧಿರ ಮೂಕರು ತಮ್ಮ | ವ್ಯಾಕುಲವ ಕಳೆಯುತ್ತಮುದವಾಂತು ತವ ಮಹಿತಿ ಕೀರ್ತಿಸುತ್ತಿಹರೋ 2 ಮಾಸ ನಿಶಿ ಜೇಷ್ಠದಲಿಮತ್ತೆ ಹರಿದಿನದಲ್ಲಿ | ಮಂದವಾರದಲೀ |ಮತ್ಸರಾದ್ವಿರಹಿತರು | ಸತ್ಸುಜನರಿಂದ ಕೂಡಿಉತ್ಸಹದ ಜಾಗರವ | ನೀ ಮಾಡಿ ಮಾಡಿಸಿದ್ಯೊ 3 ಬೆಟ್ಟದಾಚಾರ್ಯರೆನೆ | ಸುಷ್ಠು ಕೀರ್ತನೆಗೊಂಡಶ್ರೇಷ್ಠ ಹುಚ್ಚಾಚಾರ್ಯ | ರಿಲ್ಲಿ ನೆಲೆಸುತಲೀಇಷ್ಟ ಸಿದ್ಧಿಗಾಗಿ ಶ್ರೇಷ್ಟ | ತಪವನೆ ಗೈದುಇಷ್ಟಾರ್ಥ ಪೊಂದಿತಾ | ಬೆಟ್ಟಕ್ಕೆ ತೆರಳಿದರೋ 4 ಮೋದ ಪಡಿಸುತ ಬುಧರಯಾದವೇಶನ ನೊಲುಮೆ | ಸಂಧಿಸುತ ಮೆರೆದೂ |ಆದರಿಸಿ ಮಂಗಳ ಸು | ಭೋದಗಳ ಬೀರುತಲಿಮೋದ ಬಡಿಸಿದ ಹರಿಯ | ಭೂದೇವ ಆರ್ಯ 5 ಪ್ರೇರ್ಯ ಪ್ರೇರಕರಾಗಿ | ಬೆಳಗಾವ್ಕರು ಎಂಬಪಾರ್ವನಲಿ ನೀ ನಿಂತು | ಅಚ್ಚರಿಯನೆಸಗೀಭಾರ್ಯೆ ತವ ಕೊಲ್ಲಾಪುರ | ಮ್ಮ ಸತ್ಯವ್ರತರಆರ್ಯಗೊಡ ದರ್ಶಿಸುವ | ಯೋಗ ನೀನಿತ್ತೇ 6 ಸೃಷ್ಠ್ಯಾದಿ ಅಷ್ಟಕವ | ದೃಷ್ಟಿ ಮಾತ್ರದಿಗೈವಇಷ್ಟ ಭಕುತಿಗೆ ಮೆಚ್ಚಿ | ಘಟ್ಟಿ ಕಂಬದಿ ಜಿಗಿದೂದುಷ್ಟನ್ನ ಸಂಹರಿಸಿ | ಕಷ್ಟಗಳ ಕಳೆದಂಥಕೃಷ್ಣ ಗುರು ಗೋವಿಂದ ವಿಠಲಾ ಗಾನಮಿಪೇ 7
--------------
ಗುರುಗೋವಿಂದವಿಠಲರು
ಮನವೆ ಶ್ರೀಗುರು ಪಾದವ ನಂಬು ನಿನಗಲ್ಯಾಹುದು ಘನ ಸುಖದಿಂಬು 1 ಅನುದಿನ ನೋಡಾ ನಂಬದೆ ನಿಜವನು ನೀ ಕೆಡಬ್ಯಾಡ 2 ಬ್ಯಾಡೆಂಬುದು ಈ ಮಾತನೆ ಕೇಳು ಬೇಡದೆ ಬಯಸದೆ ನಿಜದಲಿ ಬಾಳು 3 ಬಾಳುವದೀಪರಿ ಜನದಲಿ ಲೇಸು ತಿಳಿಯದೆ ಬಯಸುವದ್ಯಾತಕೆ ಸೋಸು 4 ಸೋಸ್ಹಿಡಿದರ ಬೇಕಾಹುದು ಜನ್ಮ ಕರ್ಮ 5 ಭವ ಬಂಧ ಮರ್ಮವ ತಿಳಿಯದವನೆ ತಾ ಅಂಧ 6 ಅಂಧಗ ತಿಳಿಯದು ಆತ್ಮದ ಗೂಢ ಸಂಧಿಸಿ ಬೀಳಲು ವಿಷದಲಿ ಮೂಢ 7 ಮೂಢಗೆಲ್ಲಿಹ್ಯ ಆತ್ಮದ ವಿಚಾರ ನೋಡುವ ನೋಟವು ಇದು ಬಲುದೂರ 8 ದೂರಕೇ ನೀ ದೂರಾಗಿಬ್ಯಾಡ ಅರಿಯಲು ತನ್ನೊಳು ಸಾರವೆ ನೋಡಾ 9 ನೋಡುವುದಿದು ಗುರುಙÁ್ಞನದ ಗುಟ್ಟು ಆಡಿದ ಅನುಭವ ಮಾತಿಗೆ ಮುಟ್ಟು 10 ಮುಟ್ಟಿದ ಖೂನವು ಮಿಸುಕಲಿ ಬ್ಯಾಡ ಘಟ್ಯಾಗಿ ನಿಜಘನ ಬೆರೆ ಗಾಢಾ 11 ಗಾಢಾಗಿಹುದು ನಿಜಗುರು ಙÁ್ಞನ ಮಾಡುವ ಧ್ಯಾನಕೆ ಅನುಸಂಧಾನ 12 ಉನ್ಮನದಲಿ ತಿಳಿವುದು ಗುರುಮುಖ 13 ಗುರು ಮುಖದಲಿ ಬೆಳಗಾಹುದು ಪೂರ್ಣ ಬೀರುವ ಪ್ರಭೆ ಸದ್ಗುರು ಕರುಣ 14 ಕರುಣದ ಸಾಗರ ಗುರುವರ ಮೂರ್ತಿ ಇರುಳ್ಹಗಲೆ ಕೊಂಡಾಡುವೆ ಕೀರ್ತಿ 15 ಕೀರ್ತಿಯ ಕೊಂಡಾಡುವನೀ ಮಹಿಪತಿ ಸಾರ್ಥಕವಿದು ಅನುಭವ ಮನೆಮೂರ್ತಿ 16
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮರದೆನೋ ಯನ್ನ ಶ್ರೀಹರಿಯೇ ಭಕ್ತರಿಸಿರಿಯೇ ಸ್ಮರಿಸುವರ ಧೊರಿಯೇ ಭಜಿಸವರನ ಬಿಡದಲೆ ಬಿರುದು ನಿನ್ನದೆಂದು ಪೇಳುತಿರೆ ಶೃತಿ ಪ ತಂದೆ ಕಂದನ ಭಾದಿಸಲು ಶ್ರೀಧರ ಬೇಗ ಬಂದೆನ್ನ ಸಲಹೆನ್ನಲು ಮಂದರಧರ ವಳಿ- ತೆಂದು ಸಂಧಿಸಿ ಕಾಲದ್ವಂದ್ವ ರೂಪವನೇ ಕರುಣಾಸಿಂಧು ಶ್ರೀಹರಿ 1 ಅಂದು ಅಜಾಮಿಳನು ಅಕ್ಷರದ್ವಯದಿಂದ ಮುಕ್ತನಾದನು ಕುಂದರದನ ದ್ರೌಪದಿ ಮಾನಕಾಯಿದಿ ಇಂದಿರೇಶನೆ ಮುದದಿ ಭವ ಬಂಧನದಿ ಬಲುನೊಂದೆನೋ ಇಂದು ವದನ 2 ಘನತರ ಶಿಲೆಯಾಗಿರಲು ಪಾದಸ್ಮರಿಸಲಾಕೆಯು ದುರಿತ ಕರಿವರದ 'ಹೆನ್ನೆಯ ಉರಗಶಯನಾಂಬುರುಹ ನಯನ 3
--------------
ಹೆನ್ನೆರಂಗದಾಸರು