ಒಟ್ಟು 632 ಕಡೆಗಳಲ್ಲಿ , 84 ದಾಸರು , 563 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಕ್ಕೊ ಇಲ್ಲೆಹಾನೆ ಅಖಂಡ ಗುರುತಾನೆ ಬೇಕಯೆಂದವರಿಗೆ ಪೂರ್ಣ ಸಿಕ್ಕುತಾನೆ ಧ್ರುವ ಅರವ್ಹಿನ ಮುಂಧಾನೆ ಮರವ್ಹಿನ ಹಿಂಧಾನೆ ಕುರಹು ತಿಳಿದರೆ ತಾನೆ ಸ್ಥಿರವಾಗ್ಯಾನೆ 1 ಗುರುತ ಕಂಡವಘಾನೆ ಗುರುಸ್ವರೂಪಧ್ಯಾನೆ ಗುರುಕೃಪ್ಯಾದವಘಾನೆ ಗುರುತಾನೆ 2 ಅಣುರೇಣುದೊಳಘಾನೆ ಜನವನ ತುಂಬ್ಯಾನೆ ಅನುಭವಕ ತಾನೆ ಖೂನಾಘ್ಯಾನೆ 3 ಮನದ ಕೊನಿಲಿಹಾನೆ ಘನವೆ ಘನವಾಘ್ಯಾನೆ ದೀನ ಮಹಿಪತಿ ಸ್ವಾಮಿ ತಾನೆ ತಾನೆ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂಥಾ ಬಾಲನೆಲ್ಲು ಕಾಣೆನೊ ಪ ಉದಿಸಿದೇಳನೆ ದಿನದಿ ತ್ರಿದಶರೊಡನೆ ಕೂಡಿ ಮದಮುಖತಾರಕ | ಸದನವನೇರಿ ಕದನವಗೈಯುತ | ಹದವಿಹ ಶಸ್ತ್ರದಿ ಅಧಮ ದೈತ್ಯನ ಯಮ | ಸದನಕಟ್ಟಿರುವಂಥ 1 ಅಸಿತನ ಶಾಪದಿ | ಅಸುರೆಯಾದದಿತಿಯು ನಿಶಿಚರ ತಮನ ವರಿಸಿಕೊಂಡು ಇರಲು | ಅಸುರ ಹರನು ಖಳ | ನನು ಸೆಳೆಯಲಿಕೆನು-ತಿಸುವದಿತಿಗೆ ಪೂರ್ವ | ದೆಸೆಯನಿತ್ತಿರುವಂತಾ 2 ದುರುಳ ರಕ್ಕಸನಾಶಿ | ಧರಣಿಯೊಳ್ತೊಳಲುವ ದೊರೆ ಸುಧರ್ಮನ ಶಾಪ | ಪರಿಹರಿಸುತಲೇ | ನಿರತ ತನ್ನಯನಾಮ | ಸ್ಮರಿಪ ದಾಸರ ಸದಾ ಪೊರೆಯೆ ಪಾವಂಜೆಯೊಳು | ಸ್ಥಿರವಾಗಿನಿಂತ ತಾ 3
--------------
ಬೆಳ್ಳೆ ದಾಸಪ್ಪಯ್ಯ
ಇದಕು ಸಮ್ಮತನಾಗೆಲೋ ನೀ ನದಕುನು ಸಮ್ಮತನಾಗೆಲೊ ಪ ಇದು ಅದು ಎಂಬುದರ್ವಿಧವ ತಿಳಿದು ನೀ ನೆದಕುನು ಸಮ್ಮತನಾಗೆಲೊ ಅ.ಪ ಕಡುಸಿರಿಯೆಂಬುದು ಮರವೆಕುಣಿ ಬಡತನವೆಂಬುದು ಅರಿವಿನಮನೆ ಒಡೆತನವೆಂಬುದು ಪಾಪದ ಗೋಣು ದುಡಿತವೆಂಬುವುದು ಜ್ಞಾನದ ಖನಿ ದೃಢದಿಂದರಿದು ಹುಡುಕಾಡಿದರೋ ಳ್ಹಿಡಕೋ ನಿನಗೆ ಹಿತವಾವುದು ನೋಡಿ1 ಕೆಟ್ಟ ಸಂಸಾರ ಹೇಯಮೂತ್ರ ಕುಣಿ ನಿಷ್ಠೆ ಭಕ್ತಿ ಆನಂದಾಮೃತ ಖಣಿ ದುಷ್ಟಜನರ ಸಂಗ ನರಕಕುಣಿ ಶಿಷ್ಟ ಸಜ್ಜನಸಂಗ ಮುಕ್ತಿಮನೆ ನಿಷ್ಠೆಯಿಂದರಿತು ಇಷ್ಟರೊಳಗೆ ನೀ ಇಷ್ಟಕೆ ಬಂದದ್ದು ಹಿಡಕೋ ನೋಡಿ 2 ನರರ ಸೇವೆ ಮಹ ದುರಿತಬೇರು ಶರಣರ ಸೇವೆ ಸ್ಥಿರಸುಖದ ತವರು ಬರಿದೆ ಕೆಡದೆ ಹರಿಚರಣ ಕೋರು ಮರುಳು ಗುಣಗಳೆಲ್ಲ ತರಿದು ತೂರು ಧೀರ ಶ್ರೀರಾಮನ ಚಾರುಚರಣ ಸೇರಿ ಪರಮಪದವಿಯೊಳು ಲೋಲ್ಯಾಡು 3
--------------
ರಾಮದಾಸರು
ಇದಕೊ ಕಾಶಿಯನು ಮನವೇ ಬೆದಕುಗೊಳ್ಳಲು ಬೇಡ ತೋರುವೆನು ಪ ಬಲ್ಲವನಾದರೆ ಇಲ್ಲಿಯೆ ಕಾಶಿ ಕಲ್ಲೆದೆಯಾದವನಲ್ಲವೆ ದೋಷಿ ಎಲ್ಲವ ತಿಳುಹುವೆ ಚಲ್ವ ಸಂತೋಷಿ ಸೊಲ್ಲ ಲಾಲಿಸಿ ಕೇಳು ಪೇಳ್ವೆ ನಿರ್ದೋಷಿ 1 ಕಾಶಿಯ ದರುಶನವಿಲ್ಲದ ಜನರು ವಿ- ಶೇಷವಾಗಿಯೆ ಇಲ್ಲಿ ನಡೆಕೊಂಬುತಿಹರು ದೂಷಣ ಮಾಡದೆ ಪೋಷಿಸುವವರು ಕಾಶಿಗಿಮ್ಮಡಿಯಾಗಿ ಲೇಸ ಪಡೆಯುವರು 2 ವೇದವನೋದಿದ ವಿಪ್ರನೆ ಕಾಶಿ ವಾದಗಳಿಲ್ಲದ ಸೋದರನೆ ಕಾಶಿ ಆ ಧನ ಕೈಯೊಳು ಇದ್ದರೆ ಕಾಶಿ ಮಾಧವ ಧ್ಯಾನವು ಮನದೊಳು ಕಾಶಿ 3 ಅವ್ವೆ ತಂದೆಯ ಸೇವೆ ಮಾಳ್ಪುದೆ ಕಾಶಿ ದೇವರ ಪೂಜೆಯ ನೋಳ್ಪುದೆ ಕಾಶಿ ಜೀವರಕ್ಷಣ್ಯವ ಮಾಳ್ಪುದೆ ಕಾಶಿ ಭಾವಶುದ್ಧತ್ವದಿ ಇಪ್ಪುದೆ ಕಾಶಿ 4 ಗುರುಗಳಿಗೆರಗುವ ಪರಿಯೊಂದು ಕಾಶಿ ಹಿರಿಯರ ಆಜ್ಞೆಯೊಳಿರುವುದು ಕಾಶಿ ಪರವುಪಕಾರವು ಸ್ಥಿರವಾದ ಕಾಶಿ ಕರೆದು ಮೃಷ್ಟಾನ್ನವನೆರೆವುದು ಕಾಶಿ 5 ಅರಳಿಯ ವೃಕ್ಷವ ನೆಟ್ಟರೆ ಕಾಶಿ ಕೆರೆ ಬಾವಿ ಕಟ್ಟಲು ಇಷ್ಟದ ಕಾಶಿ ಅರವಟ್ಟಿ ನೀರಿರಿಸಲು ದೃಷ್ಟ ಕಾಶಿ ಸಿರಿಲಕ್ಷ್ಮಿಯರಸನ ಕರೆವುದು ಕಾಶಿ 6 ದುಷ್ಟರ ಸಂಗವ ಬಿಡುವುದೆ ಕಾಶಿ ಕಷ್ಟದ ಮಾರ್ಗವ ತೊರೆವುದು ಕಾಶಿ ಶಿಷ್ಟರ ಸೇರುವುದು ಇಷ್ಟದ ಕಾಶಿ ಬೆಟ್ಟದ ಒಡೆಯನ ನೆನೆವುದೆ ಕಾಶಿ 7 ಏಕಾದಶಿ ಉಪವಾಸವೆ ಕಾಶಿ ಆಕಳ ದಾನವ ಮಾಳ್ಪುದೆ ಕಾಶಿ ಬೇಕಾದುದಿದ್ದರೆ ಮನೆಯೆಲ್ಲ ಕಾಶಿ ಕಾಕು ಸೇವೆಯಿಲ್ಲದ ಮನುಜನೆ ಕಾಶಿ 8 ಉದಯದಿ ಸ್ನಾನವ ಮಾಳ್ಪುದೆ ಕಾಶಿ ಪದುಮನಾಭನ ಧ್ಯಾನ ಮೃದುವಾದ ಕಾಶಿ ಕದನವಿಲ್ಲದ ಊರ ನೋಡಲು ಕಾಶಿ ಉದರವು ತುಂಬಲು ಬಡವಗೆ ಕಾಶಿ 9 ರುದ್ರ ದೇವನ ಪೂಜೆ ಇದ್ದಲ್ಲಿ ಕಾಶಿ ವಿಧ್ಯುಕ್ತ ಮಾರ್ಗದಿ ನಡೆವುದು ಕಾಶಿ ಬದ್ಧವಾಗೈವರ ಕಟ್ಟಲು ಕಾಶಿ ಶುದ್ಧವಾದ ಹೆಂಡತಿ ಮುದ್ದಿನ ಕಾಶಿ 10 ಸನ್ಯಾಸ ಮಾರ್ಗವು ಚೆನ್ನಾದ ಕಾಶಿ ಅನ್ಯಾಯವಿಲ್ಲದ ಅರಸನೆ ಕಾಶಿ ಕನ್ಯಾದಾನವು ಮುನ್ನಿನ ಕಾಶಿ ಮನ್ನಿಸಿಕೊಂಡರೆ ತನ್ನಲ್ಲೆ ಕಾಶಿ 11 ಅಧ್ಯಾತ್ಮ ವಿದ್ಯೆಯ ಹೊದ್ದಲು ಕಾಶಿ ಬದ್ಧ ನಡೆನುಡಿ ಇದ್ದರೆ ಕಾಶಿ ಮಧ್ವರಾಯನು ಕುಳಿತಿದ್ದಲ್ಲಿ ಕಾಶಿ ಪದುಮನಾಭನ ನೆನವಿದ್ದರೆ ಕಾಶಿ 12 ದಾನದೊಳಗೆ ಸಮಾಧಾನವೆ ಕಾಶಿ ಮಾನದೊಳಗೆ ಅಭಿಮಾನವೆ ಕಾಶಿ ಸ್ನಾನದೊಳಗೆ ಭಕ್ತಿ ಸ್ನಾನವೆ ಕಾಶಿ ಜ್ಞಾನದೊಳಗೆ ಶುದ್ಧಜ್ಞಾನವೆ ಕಾಶಿ 13 ದೇವರೊಳಗೆ ಸಾಲಿಗ್ರಾಮವೆ ಕಾಶಿ ಜೀವರೊಳಗೆ ಗೋವುಚಯವೆಲ್ಲ ಕಾಶಿ ಹೂವಿನೊಳಗೆ ಬಿಲ್ವಪತ್ರಿಯೆ ಕಾಶಿ 14 ಹಲವು ಮಾತುಗಳೇನೀಪರಿ ಕಾಶಿ ಛಲ ಭಕ್ತಿಯಿದ್ದರೆ ಜಲವೆಲ್ಲ ಕಾಶಿ ಒಲವುಳ್ಳ ವರಾಹತಿಮ್ಮಪ್ಪನೆ ಕಾಶಿ ಕುಲವೃಕ್ಷವೆಂಬುದು ಫಲವಾದ ಕಾಶಿ 15
--------------
ವರಹತಿಮ್ಮಪ್ಪ
ಇಂದಿನ ದಿನ ಸುದಿನ ನಾಳೆಗೆಂದರೆಂದು ಕಠಿಣ ಮಂದಮತಿಯು ನೀನಾಗದೆ ಈಗ ಮುಕುಂದನ ನಾಮ ಕೀರ್ತನೆಯ ಮಾಡುವುದಕೆ ಪ ಯೋಗಿಗಳೊಡನಾಡು ವಿಷಯದ ಭೋಗವ ನೀಡಾಡು ನಿನ್ನ ನೀ ತಿಳಿವುದಕೆ 1 ಅಸ್ಥಿರ ದೇಹವಿದುನಾನಾವಸ್ಥೆ ಬಾಧಿಸುತಿಹುದು ಬಿಡನೊಡನಾಡುವುದಕೆ 2 ಸಾಧು ಸಂಗತಿಯಿಂದ ಪಾಪವಿಚ್ಛೆದನವದರಿಂದ ಲಕ್ಷ್ಮೀರಮಣನ ಪೂಜಿಸಲಿಕೆ 3
--------------
ಕವಿ ಪರಮದೇವದಾಸರು
ಇನ್ನಾರೆ ತಿಳಿದು ನೋಡು ಮನರಾಯಾ | ನಿನ್ನ ಕಣ್ಣದೆರೆದು ಸ್ವ ಹಿತದ ಉಪಾಯಾ ಪ ನಾನಾ ಜನ್ಮದಲ್ಲಿ ಬಂದು ಧರೆಯಲ್ಲಿ ಸುಖ | ವೇನು ಪಡೆದಿ ಹರಿಯ ಸ್ಮರಣೆ ಮರೆದಿಲ್ಲಿ 1 ಶರಗೊಡ್ಡಿ ಬೇಡಿಕೊಂಬೆ ನಾನೀಗಾ | ಸ್ಥಿರವಾದರಿಲ್ಲ ದೂರ ಶಿವಯೋಗಾ 2 ಇಂದು ನಾಳೆವೆನ್ನಬೇಡಿ ನಿಶ್ಚಯಾ ನಿನಗ | ಮುಂದ ಮತ್ತ ದೊರೆಯದಿದ ನರದೇಹಾ 3 ತಂದೆ ಮಹಿಪತಿಸ್ವಾಮಿ ದಯದಿಂದ | ನಂದವ ಪಡೆದು ಗೆಲಿಯೋ ಭವದಿಂದಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನೇನು ಬಲ್ಲವನು ನಾನಲ್ಲ ಹರಿಯೆ ನಿನ್ನ ಧ್ಯಾನಧಿಕೆಂಬುದೊಂದೆ ನಾ ಬಲ್ಲೆ ಪ ನಿನ್ನ ಧ್ಯಾನವೆ ಮರೆವ ತರಿದ್ಹಾಕುವುದೆಂಬೆ ನಿನ್ನ ಧ್ಯಾನವೆ ಅರಿವ ಸ್ಥಿರ ಮಾಳ್ಪುದೆಂಬೆ ಶರಧಿ ಹೀರುವುದೆಂಬೆ ಸಿರಿ ನೀಡ್ವುದೆಂಬೆ 1 ನಿನ್ನ ಧ್ಯಾನವೆ ದು:ಖದೂರ ಮಾಡುವುದೆಂಬೆ ನಿನ್ನ ಧ್ಯಾನವೆ ಸುಖದ ವಾರಿಧಿಯೆಂಬೆ ನಿನ್ನ ಧ್ಯಾನವೆ ಮುಖ್ಯ ಚಾರುವೇದಗಳೆಂಬೆ ನಿನ್ನ ಧ್ಯಾನವೆ ಜ್ಞಾನಮೂಲಸಾರೆಂಬೆ 2 ನಿನ್ನ ಧ್ಯಾನವೆ ತತ್ವರೂಪವಾಗಿಹ್ಯದೆಂಬೆ ನಿನ್ನ ಧ್ಯಾನವೆ ಮುಕ್ತಿಮೂಲಾಧಾರೆಂಬೆ ನಿನ್ನ ಧ್ಯಾನವೆ ಭಕ್ತ ಜನಪ್ರಾಣಪದಕೆಂಬೆ ಎನ್ನಯ್ಯ ಶ್ರೀರಾಮ ನಿನ್ನಿಂದೆ ನಾನೆಂಬೆ 3
--------------
ರಾಮದಾಸರು
ಈ ನೀಚಮನಸಿಗೆ ಮಾಡಲಿನ್ನೇನು ಥೂ ನಾಚಿಕಿಲ್ಲದಕೆ ಉಪಾಯವೇನು ಪ ಹರಿಚರಣ ಸ್ಮರಿಸುವುದು ಹರಿದಾಟ ಮರಿವಲ್ಲದು ಪಿರಿದುನುಡಿಯಾಡುವುದು ಕಿರಿಗುಣವ ಬಿಡದು ಪರಲೋಕ ಬಯಸುವುದು ನಿರುತದಿಂ ನಡಿವಲ್ಲದು ಶರಣರೊಡನೆನದಿಹ್ಯದು ಪರನಿಂದೆ ಬಿಡದು 1 ಜ್ಞಾನನುಡಿ ಪೇಳುವುದು ನಾನೆಂಬುದಳಿವಲ್ಲದು ಧ್ಯಾನದೊಳಗಿರುತಿಹ್ಯದು ಶ್ವಾನಕಲ್ಪನ್ಹಿಂಗದು ದಾನಗುಣ ಬೋಧಿಪುದು ಜೀನತ್ವ ತೊರಿವಲ್ಲದು ಆನಂದ ಬೇಡುವುದು ಹೀನಭ್ರ್ರಾಂತಿ ಬಿಡದು 2 ಸಾದುಪಥದಾಡುವುದು ಭೇದ ಕಡಿವಲ್ಲದು ವೇದಾಂತ ಕೇಳುವುದು ಸಾಧನಕೆ ಒಲ್ಲದು ಪಾದಭಕ್ತಿ ಬೇಡುವುದು ಕ್ರೋಧ ತೊಡಿವಲ್ಲದು 3 ನಾಮಭಜನೆ ಮಾಡುವುದು ತಾಮಸವ ತುಳಿವಲ್ಲದು ಸ್ವಾಮಿಯೊಲುಮೆ ಕೋರುವುದು ಪಾರತ್ವ ಬಿಡದು ಕಾಮಿತೊಲ್ಲೆನೆನ್ನುವುದು ಭಾಮೆ ಭೂಮಿಪ್ರೇಮ ಬಿಡದು ಕ್ಷೇಮ ಸದಾ ಬೇಡುವುದು ನೇಮನಿತ್ಯ ಒಲ್ಲದು 4 ಶಾಸನವ ಪೇಳುವುದು ತಾಸು ಸ್ಥಿರ ನಿಲ್ಲದು ನಾಶಜಗವೆನುತಿಹ್ಯದು ಕಾಸು ಒಲ್ಲೆನ್ನದು ದೋಷನಾಶನ ಜಗದೀಶ ಶ್ರೀರಾಮನಡಿ ದಾಸನಾನೆಂಬುವುದು ವಾಸನೆಯ ಬಿಡದು 5
--------------
ರಾಮದಾಸರು
ಈ ಸಾಧನೆಯ ಈ ಧರ್ಮಗಳ ಗುರಿಯೊಂದÉ ಕೇಳಿರಿ ಇಂದೇ ಪರಮಾತ್ಮಪ್ರಾಪ್ತಿ ಇದರಿಂದೇ ಪ ನಿಷ್ಕಾಮ ಕರ್ಮವ ಮಾಡುವನು ನಿಷ್ಕಾಮ ಬಕುತಿಯ ಮಾಡುವದು ಆ ವೈರಾಗ್ಯ ಆ ಸುವಿವೇಕ ಮನದಲ್ಲಿ ಮೂಡುವದಿಂದೇ ಪರಮಾತ್ಮಪ್ರಾಪ್ತಿ 1 ವಿಷಯಾಭಿಲಾಷಾ ಬಿಡುವುದಕೆ ಮನದಲ್ಲಿ ಸ್ಥಿರತೆಯು ನಿಲುವುದಕೆ ಗುರು ಬೋಧೆಯಲಿ ಮನ ರಮಿಸುತಲಿ ಜಿಜ್ಞಾಸೆ ಮೂಡುವದಿಂದೇ ಪರಮಾತ್ಮಪ್ರಾಪ್ತಿ 2 ಹಗುರಾದ ಸಾಧನವಿದಕೆಲ್ಲ ಜಗದಲ್ಲಿ ಇರುವ ಜನಕೆಲ್ಲ ಅಘನಾಶಕ ಶ್ರೀಶಿವಶಂಕರನೋಳ್ ಘನಪ್ರೇಮ ಬಕುತಿಯಿದೋಂದೇ ಪರಮಾತ್ಮಪ್ರಾಪ್ತಿ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಊರ್ವಶಿ : ಬಂದ ಕಾಣೆ ಗೋವಿಂದ ಕ್ಷೀರ- ಸಿಂಧುಶಯನ ವನದಿಂದ ಇಂದಿರೇಶ ಮುದದಿಂದ ಮೌನಿಮುನಿ- ವೃಂದದಿಂದ ಸ್ತುತಿವಂದನೆಗೊಳ್ಳುತ1 ಏಸು ಲೋಭಿಯೊ ತಿಮ್ಮಶೆಟ್ಟಿ ಒಂದು ಕಾಸಿಗೆ ಮಾರುವ ರೊಟ್ಟಿ ದಾಸರ ಕೂಡಿ ಜಗಜಟ್ಟಿ ಬಹು ದೇಶವ ತಿರುಗುವ ಶೆಟ್ಟಿ ದೂಷಣಾರಿ ಪಾದಾಶ್ರಿತಜನರಭಿ- ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ2 ದೊಡ್ಡವನೈ ಮಹಾರಾಯ ಹಳೆ ದುಡ್ಡಿಗೆ ನೀಡುವ ಕೈಯ ಅಡ್ಡಿಗೈದರೆ ಬಿಡನಯ್ಯ ಇವ ಬಡ್ಡಿಕೇಳುವ ತಿಮ್ಮಯ್ಯ ದಡ್ಡುಕೇಸಕ್ಕಿಯ ಮಡ್ಡಿಪ್ರಸಾದವ ಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ3 ತಿರುಪತಿಗೆ ಪ್ರತಿಯಾಗಿ ಪಡು ತಿರುಪತಿಯೆಂದಿಹ ಯೋಗಿ ಮೆರಸುವನೈ ಸ್ಥಿರವಾಗಿ ಶ್ರೀ ವರ ವೆಂಕಟ ಲೇಸಾಗಿ ಶರಣರು ಏನೆಂದು ಸಂತೋಷಿಪ ಕರುಣಾಕರ ಚಪ್ಪರ ಶ್ರೀನಿವಾಸನು4 ಈ ಪರಿಯಲಿ ಒಲಿದಿಪ್ಪಾ ಬಹು ಕಾಪಟ್ಯರಿಗೆ ತಾನೊಪ್ಪನಮ್ಮ ಗೋಪಾಲಕ ಜಗದಪ್ಪ ಶ್ರೀಪರಮಾತ್ಮ ನಾನಾಪರಿ ವಿಭವದಿ ಗೋಪುರದಲಿ ತಾ ವ್ಯಾಪಿಸಿ ನಿಂದನು5 ರಂಭೆ : ನಾರೀವರ್ಯಾರಮ್ಮ ನೋಡಲು ಸಾರಹೃದಯರಮ್ಮ ತೋರಣಛತ್ರಚಾಮರ ಬಿರುದುಗಳಿಂದ ಭೂರಿ ವಿಭವದಿಂದ ಸಾರಿಬರುವರಮ್ಮ1 ಕರದಿ ಕಲಶವಿಹುದು ಶಾಲಿನ ನಿರಿ ಮುಂದಿರುತಿಹುದು ಬೆರಳಿನೊಳುಂಗುರು ವರ ದ್ವಾದಶನಾಮ ಧರಿಸಿ ಸಮಂತ್ರೋಚ್ಚರಿಸುತ ಬರುವರು2 ಮಂದಿಗಳೊಡ್ಡಿನಲಿ ಬರುವರು ಮಂದಸ್ಮಿತದಲಿ ಚಂದದಿ ಜನಗಳ ಸಂದಣಿ ಮಧ್ಯದಿ ಇಂದಿರೆಯರಸನ ಧ್ಯಾನದಿ ಬರುವರು3 ಹಿಂಗದೆ ಬರುತಿಲ್ಲಿ ಮನಸಿನ ಇಂಗಿತವರಿತಿಲ್ಲಿ ಬಂಗಾರದ ಭೂಷಣಸಮುದಾಯದಿ ಅಂಗಜಪಿತನಿಗೆ ಶೃಂಗಾರಗೈವರು4 ವಿಪ್ರೋತ್ತಮರ ಗುಣ- ಕೆಂತು ಸೈರಣೆಯಾಂತು ನಾನಿರಲಿ ಚಿಂತಿತಾರ್ಥವನೀವ ಲಕ್ಷ್ಮೀ- ಸಂತಸದಿ ಪೂಜಾದಿ ಸತತಿ- ಯಾಂತಕೊಂಡಿಹೇಕಾಂತಭಕ್ತರು1 ಕೀರ್ತಿಯನು ಧರಿಸಿ ಮ- ತಾವೆಂದು ಧರ್ಮವನು ಪಾಲಿಸಿ ಸಿಂಧುಶಯನನ ಚಾರುಚರಣ- ದ್ವಂದ್ವಕಾನತರಾಗಿ ಲೋಕದಿ ವಂದ್ಯರೆನಿಸಿಯಾನಂದ ಪರರಿವ- ರೆಂದು ಶ್ರೀಗೋವಿಂದ ನಡೆಸುವ2 ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿ ಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿ ವಾದಗೈವ ಕುವಾದಿಗಳ ಮನ- ಭೇದಿಸುತ ನಿಜವಾದ ಮಾರ್ಗವ ಸಾಧುಗಳಿಂದ ದೃಢವಾದ ಮಾತಿದು3 ಮೇಗರೆಡಂಭಮಾತಲ್ಲ ಧನಿಯ ಕು- ಗೊಂಬರೆ ಎಲ್ಲ ಸಂತಸ ಸಂಭ್ರಮದಿ ವೇದ್ಯಾಂಬುನಿಧಿಯಲಿ ತುಂಬಿರುವರೀ ಕುಂಭಿನಿಯೊಳು ಜ- ಸಂಬಡುವುದು ವಾಸಿಷ್ಠಗೋತ್ರಜ- ರೆಂಬ ವಿಪ್ರಕದಂಬಪೂಜ್ಯರು4 ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆ ಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1 ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆ ಮಹಾಲೀಲೆ2 ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇ ಲೀಲೆಯ ನಾನರಿಯೆ3 ಫಾಲೇಂದು ಕುಂದದ ವರ್ಣಕೋಲು ಚಾಮರಗಳ ನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು4 ಚಂಡವೈಶ್ವಾನರನ ತೇಜಾಖಂಡದಿಂದೋರಂತೆ ಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ5 ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿ ಆದಿನಾರಾಯಣ ಮದುಸೂದನನೆ ಮುದದಿ6 ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರು ನಾದಿನಿ ಕೇಳಿದರ ಪರಿಯನೀ ದಯದಿಂದುಸುರು7 ಊರ್ವಶಿ :ಭಾವೇ ನೀ ಕೇಳೆ ಇದನು ತ್ರೈಲೋಕ್ಯ- ದೇವನಾಗಮನವೆಲ್ಲನೂ ದೀವಟಿಗೆ ಸೇವೆಯೆಂದು ಪೇಳುವರು ಭಾವುಕರು ಮನದೊಳಂದು1 ಸಾಯನವನು ಸುರಿದು ಸಾವಿರ ಸಾಲದು ಶ್ರೀಯರಸನ ಮಹಿಮೆಯರಿವದಾರಿಗಳವಲ್ಲ3 ದೈತ್ಯವಿನಾಶನ ಜಯಜಯ ಜಾಹ್ನವಿತಾತ ಜಯಜಯ ಜಗದಾತ ಆಶ್ರಿತ ಸುರಭೂಜ ತೋರುತ ಒಲಿದು4 * * * ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ- ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ1 ಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2 ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ- ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ3 ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ- ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ4 ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥ ಮೌರಿ ಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5 ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ- ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ6 ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ- ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ7 ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ- ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ8 ನಿತ್ಯ ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ9 ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದ ಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ10 ನೋಡೆ ತಂಗಿ ನಮ್ಮ ದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ11 ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ- ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12
--------------
ತುಪಾಕಿ ವೆಂಕಟರಮಣಾಚಾರ್ಯ
ಋ. ದೇವತಾ ತಾರತಮ್ಯ ದೇವ - ದೇವತಾ ತಾರತಮ್ಯ ವಾರುಣಿ ಸತಿ ಪರ್ಜನ್ಯ ಸುರರು ಸುರರು ಅಜಾನಜರು (ಸುರಸೇವೆ ಮಾಡುವರು)ಹರಿಯ ಹೃದಯಕಾಂಬುವರು ಚಿರ ಪಿತೃಗಳವರು ದೇವರಗಾಯಕ ಗಣವುನರ ಗಾಯಕರು ಭೂಮಿಧರರು ನರಸೋತ್ತಮರುಚಿರ ಜೀವ ಸ್ಥಿರ ಜೀವ ಸರ್ವಜೀವಿಗಳಿಂದ ಪರಮಸೇವೆಯಕೊಂಡುಪುರುಷಾರ್ಥಗಳ ನೀವ ಹರಿಯ ನುತಿಸುವೆ ನಿನ್ನಾ ಕರುಣದಲಿನೋಡೆನ್ನ ವರ ಇಂದಿರೇಶಜತೆ :ತಾರತಮ್ಯಾದಿ ನುತಿ ಸಾರುವ ಜನರಿಗೆ ಮಾರಮಣ ಇಂದಿರೇಶ ತೋರುವನು
--------------
ಇಂದಿರೇಶರು
ಎಣಿಸಲೆನ್ನಳವೆ ನಿನ್ನ ಮಹಿಮೆಗಳ ಗುಣಗಣನುತ ನಾಮ ಕೋದಂಡರಾಮ ಪ. ಲಲನೆ ಧರಿತ್ರಿಯ ಪೊರೆದೆ ಛಲದಿ ಹಿರಣ್ಯಕಶಿಪುವ ಸಂಹರಿಸಿದೆ ಇಳೆಯಾಪೇಕ್ಷಿಸಿದೆ ಬಲಿಯ ಭಂಜಿಸಿದೆ 1 ದುರುಳ ರಾಯರ ತರಿದೆ ಹರನ ಬಿಲ್ಲ ಮುರಿದೆ ನರಗೆ ಸಾರಥಿಯಾಗಿ ಮೆರೆದೆ ತರುಣಿಯರ ವ್ರತ ಗೆಲಿದೆ ತುರಗವನೇರಿ ಶರಣಾಗತರನ್ನು ಪೊರೆವುದು ನಿನ್ನ ಬಿರುದೆ 2 ಕರುಣಾಸಾಗರ ನಿನ್ನ ಚರಣಸೇವೆಗೆ ಎನ್ನ ಕರುಣಿಸು ಗುಣಸಂಪನ್ನ ಸ್ಮರನಜನಕÀ ಚೆನ್ನ ಧರಣಿಜೆಯ ಮೋಹನ್ನ ಸ್ಥಿರವಾದ ಲಕ್ಷ್ಮೀಶ ಕರುಣಿಸೊ ಹಯವದನ 3
--------------
ವಾದಿರಾಜ
ಎಂತಹುದೊ ನಿನ್ನಯ ಭಕುತಿ ಎನಗೆ - ಶ್ರೀ-ಕಾಂತ ನಿನ್ನಯ ಒಲುಮೆಯಿಲ್ಲದ ಮೂಢಾತ್ಮನಿಗೆ ಪ ಸುಕೃತ ಫಲವು ಮೊದಲಿನಿತಿಲ್ಲಇಂದು ಬಂದಡೆ ಒಳ್ಳೆ ಮತಿಯ ಕೊಡಲಿಲ್ಲಸಂದ ವಯಸನು ತಿಳಿದು ಕುಂದುತಿದೆ ಎನ್ನ ಮನ-ದಂಧಕಾರವ ಬಿಡಿಸಿ ಹೊಂದಿಸು ಜ್ಞಾನವನು 1 ವೇದಶಾಸ್ತ್ರ ಶಬ್ದ ತರ್ಕ ಮೀಮಾಂಸೆಗಳಓದಿದವನಲ್ಲ ನಿನ್ನಯ ಭಕುತಿಗಧಿಕವಾದ ಇನ್ನೊಂದೇನನುಸುರುವೆನು ನಾ ಮುನ್ನ ಸಂ-ಪಾದಿಸುವ ಭಕುತಿ ಇನ್ನೆಂತಿಹುದೊ ದೇವ 2 ಇಂದು ಪರಿಯಂತರವುಭ್ರಷ್ಟನಾಗಿ ಪರರ ಸೇವೆಯಿಂದಿರುತಿಹೆನುಇಷ್ಟಲ್ಲದಿನ್ನೆನಗೆ ತೃಪ್ತಿ ಇನ್ನೆಂತಹುದೀಕಷ್ಟ ಶರೀರದೊಳು ತೊಳಲಲಾರೆನು ಹರಿಯೆ 3 ನರಜನ್ಮವೆಂಬ ಪಾತಕದ ಪಂಜರದೊಳಗೆಸ್ಥಿರವೆಂಬೊ ಅಹಂಕೃತಿ ಜೀವನವ ನಿರ್ಮಿಸಿಎರವಿನ ಮಾತಾಪಿತರನುಜರೆಂಬಉರಿಕಾವು ಕ್ಷಯವೆಂಬ ಸರಿಗಳನು ವಂದಿಸುವೆನು 4 ಇನಿತುಪರಿಯಲಿ ನಾನು ಹಲುಬಿದೊಡೆನೀನು ಸುಮ್ಮನಿದ್ದೊಡೆ ಬಹು ಅಪಕೀರ್ತಿಯುನಿನ್ನ ದಾಸಗೊಲಿದು ಸಲಿಸಯ್ಯ ಮನದಿಷ್ಟಕನಕಾದ್ರಿಯೊಳು ನೆಲಸಿದಾದಿಕೇಶವರಾಯ 5
--------------
ಕನಕದಾಸ
ಎಂತು ಬಣ್ಣಿಸಲಮ್ಮಯ್ಯಾ ಈ ಗುರುವರರ ಪ ಎಂತು ಬಣ್ಣಿಪೆ ನಾ ನಂತನಾಂಶ ಜಗ - ದಂತರದೊಳಗಾ - ನಂತ ಮಹಿಮರಅ.ಪ ಸುರವರನಗರಸಮ - ವರಮಂತ್ರಸದನ ಜರಿದು ಸ್ಥಿರವಾಗೀ ಪುರದಲ್ಲಿ ಮೆರೆಯುತಲಿಹರನ್ನ 1 ಪೂರ್ವಯುಗದೊಳು ಸಾರ್ವಭೌಮನೆನಿಸಿ ಪಾರ್ವರ ಪೊರೆವದಕ್ಕ ಪೂರ್ವ ಯತಿ ಎನಿಸಿಹರನ್ನ 2 ದಿನ ದಿನದಲ್ಲಿ ಮಹ ಕನಕಾಭೀಷೇಕ ಮಾಳ್ಪ ಧನಿಕರ ತೆಜಿಸಿ ನಿ - ರ್ಧನಿಕ ಗೊಲಿದಿಹರನ್ನ 3 ಕ್ಷೀರಶೇಚನ ನಿತ್ಯ-ಸಾರ ಪಂಚಾಮೃತ ಬಿಟ್ಟು ಕೀರುತಿ ಮಾಳ್ಪಜನರ ಸೇರಿ ಕೊಂಡಿಹರನ್ನ 4 ದಾತರೆನಿಸಿ ಜಗದಿ - ಖ್ಯಾತರಾಗಿ ಗುರುಜಗ ನಾಥ ವಿಠಲನೊಲಿಸಿ ದೂತಜನರ ಪೊರೆವೊರನ್ನ 5
--------------
ಗುರುಜಗನ್ನಾಥದಾಸರು
ಎಂತು ಮರುಳಾದೆ ನೀ ಯದಿಯ ಬಿಗುವಿನಲಿ ತಿರುಗಿ | ಪಂಥದಲ್ಲಿ ಕೆಡಲಿಬೇಡ ಎರಡು ದಿನ | ಸಂತೆ ನೆರೆದಂತೆ ಮೂಢ ಇಪ್ಪದಿದು | ಸಂತತ ತೊರೆದು ಬಾಡೊ ಪ್ರಾಣಿ ಪ್ರಾಣಿ ಪ ವಿಂಚುಗೂಳನು ತಿಂದು ಮನೆ ಮನೆಗಳು ತಿರುಗಿ | ಸಂಚಿತಾರ್ಥವ ತಿಳಿಯದೆ ಮರುಳಾದ | ಪರ | ಪಂಚವನು ನೀ ಕಳಿಯದೆ ವ್ಯರ್ಥಾಯ | ವಂಚನಿಂದಲಿ ನಡೆದು ಬಾಯಿ ತೆರೆದು | ಹಲ್ಲನು | ಹಂಚಿಕೆ ತೋರಿದಂತೆ ಮೃತ್ಯುವಿನ | ಪಂಚದಲಿ ಸೇರಿದಂತೆ | ಆಗುವುದು | ಕಂಚು ಕೆಳಗೆ ಬಿದ್ದಂತೆ ಪ್ರಾಣಿ 1 ನುಗ್ಗು ನುಸಿಯಾಗದಿರು | ನೂಕು ನಿನ್ನಹಂಕಾರ | ಮುಗ್ಗದಿರು ಈ ಬಲಕಿಗೆ ಸ್ಥಿರವಾಗಿ | ಬಗ್ಗು ನಡೆವಳಿ ನಡೆದು | ವೆಗ್ಗಳದ ನಡೆವಳಿ ನಡೆದು | ವೆಗ್ಗಳದ ಧರ್ಮದಾ ಸುಗ್ಗಿಯಲಿ ದಿನವ ಹಾಕೊ | ಬಿಡು ಬಿಡು ಅಗ್ಗಳಿಕೆತನವೆ | ಸಾಕು ಆವಾಗ ತೆಗ್ಗಿಕೊಂಡಿರಲಿ ಬೇಕು | ಪ್ರಾಣಿ 2 ಇನ್ನಾದರೂ ಕೇಳು | ಪುಣ್ಯವಂತರ ಕೂಡು | ನಿನ್ನವರು ನಿನಗೆ ದಾರೊ | ಕಣ್ಣಾಗೆ ಎಣ್ಣೆ ಬಿದ್ದಂತೆ ಸಾರೊ ಬಾಯಿಂದ | ಬೆನ್ನಿಗೆ ಬಂದ ವಿಚಾರೊ ತುದಿಯಲಿ | ಮಣ್ಣು ಮಣ್ಣನೆ ಕಲಿತು ಹೋಗುವುದು ನಿಶ್ಚಯವು | ಚೆನ್ನಾಗಿ ಎಚ್ಚೆತ್ತುಕೋ ಈ ಮಾತಿಗೆ | ಖಿನ್ನನಾಗುವದೇತಕೊ ಸಾವಿರಕು | ಮುನ್ನಿಲ್ಲವೊ ಮನಸಿತೊ ಪ್ರಾಣಿ 3 ವೇದಶಾಸ್ತ್ರವನರಿಯೆ ಆದಿಪುರಾಣಗಳು | ಅದ್ವೈತ | ವಾದವರ ಕೂಡದಿರು ಇದೆ ಮಿಗಿ ಲಾದರು ಮರಿಯದಿರು ಉತ್ತಮ | ಸಿರಿ ವಿಜಯವಿಠ್ಠಲನ ಶ್ರೀ | ಪಾದವನು ಒಂದೇ ಭಕ್ತಿಯಿಂದಲಾ | ರಾಧಿಸು ಇದಕೆ ಯುಕ್ತಿ ಕಡಿಯದಲೆ | ಮಾಧವನು ಕೊಡುವ ಮುಕ್ತಿ ಪ್ರಾಣಿ4
--------------
ವಿಜಯದಾಸ