ಒಟ್ಟು 142 ಕಡೆಗಳಲ್ಲಿ , 46 ದಾಸರು , 134 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಾಣರಾಯಗೆ ಇಟ್ಟ ಕಾಣಿಕೆಯನು ಕೊಟ್ಟು ಪ ಕಷ್ಟಗಳೆಲ್ಲವು ಬೆನ್ನಟ್ಟಿ ಬರುವಾಗ ಕಟ್ಟಿದ ಹರಕೆಗಳೆಲ್ಲವನು ಸಿಟ್ಟು ಮಾಡುವ ಸ್ವಾಮಿ ಇಟ್ಟುಕೊಂಡರೆ ಇನ್ನು ಮುಟ್ಟಿಸಿಕೊಡಬೇಕಲ್ಲಿ ತಿಮ್ಮಪ್ಪನಲ್ಲಿ 1 ಗಂಡ ಹೆಂಡತಿಯು ಮಕ್ಕಳು ಸಹವಾಗಿ ದಂಡು ಮಾಳ್ಪೆವು ತಾವು ಎನುತಲಿ ಉಂಡೆವು ಸ್ಥಿರವಾರ ಊಟವ ಏಕವ ಕಂಡು ಬಹರೆ ಹೋಗುವ ದಯವಾಗುವ 2 ಕಟ್ಟಿದ ಕಾಣಿಕೆ ಇಟ್ಟು ಚರಣದಲ್ಲಿ ಸಾಷ್ಟಾಂಗವು ಎರಗಿದರೆ ದೃಷ್ಟಿಯಿಂದಲೆ ನೋಡಿ ದಯಮಾಡಿ ಕಳುಹುವ ವರಾಹ ನಮ್ಮಪ್ಪ ತಿಮ್ಮಪ್ಪನು 3
--------------
ವರಹತಿಮ್ಮಪ್ಪ
ಜ್ಞಾನಭ್ಯಾಸವ ಮಾಡಿ ಹೀಗೆ ತಾನೊಲಿದು ಜ್ಞಾನ ಗುರು ಖೂನಾಗುವ್ಹಾಂಗೆ ಧ್ರುವ ಮನದಲಿ ಬಾವ್ಹಾಂಗ ನೆನೆದಲಿ ಕಾಂಬ್ಹಾಂಗೆ ತನುವಿನಲಿ ನಿಜಗೊಂಡು ತಾ ನೆಲೆಯಗೊಂಬ್ಹಾಂಗೆ ಅನುದಿನನದಲ್ಯನುಭವಿಸುವ್ಹಾಂಗೆ ಕನಗರಸಿದಲಿ ಮನೋಹರ ಮಾಡುವ್ಹಾಂಗೆ 1 ಅರ್ವಿನಲಿರುವ್ಹಾಂಗೆ ಕುರುಹುದೋರುವ್ಹಾಂಗೆ ಇರುವ್ಹ ನೆಲೆಗೊಂಡು ತಾನೆವೆ ಸ್ಥಿರವಾಗುವ್ಹಾಂಗೆ ಮರವು ಮರದೀಡ್ಯಾಡುವ್ಹಾಂಗೆ ಗುರು ಚರಣ ಕಮಲವನು ಗುರುತಾಗುವ್ಹಾಂಗೆ 2 ಧ್ಯಾಸ ನೀಜ ಬಲುವ್ಹಾಂಗೆ ವಾಸನೆ ಪೂರಿಸುಹಾಂಗೆ ಭಾಸ್ಕರ ಕೋಟಿ ಪ್ರಕಾಶ ಭಾಸಿಸುವ್ಹಾಂಗೆ ಭಾಸ್ಕರ ಬಾಹ್ಯಾಂತ್ರಲಿವ್ಹಾಂಗೆ ಲೇಸಾಗಿ ಮಹಿಪತಿ ಸ್ವಾಮಿಒಲುವ್ಹಾಂಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಂಗಿ ಮೊಸರ ಸುತ್ತ ಚೆಲ್ಲಿದ ಮುದ್ದುರಂಗ ಬೆಣ್ಣೆಯ ಮೆದ್ದ ಬಲ್ಲಿದ ಪ. ಪುಟ್ಟ್ಟಿದಾಗಲೆ ಮೂಲರೂಪವ ತೋರಿಅಟ್ಟಿದ ಸುಜನರ ತಾಪವಕೊಟ್ಟ ನಮಗೆ ಜ್ಞಾನದೀಪವ ಕೃಷ್ಣತೊಟ್ಟ ದುರ್ಜನರೊಳು ಕೋಪವ1 ಯಶೋದೆಯ ಮೊಲೆವಾಲನುಂಬಾಗ ನಸುಬಿಸಿನೀರನೆ ಎರೆಸಿಕೊಂಡಾಗಶಿಶುವು ಪೂತಣಿಯ ಕೊಂದಿತೆಂಬಾಗ ರ-ಕ್ಕಸರಿಗೆ ಇವ ಬಲುದಿಮ್ಮಿಗ 2 ಇಂದಿರೆಯನು ಬಿಗಿದಪ್ಪಿದ ಸಖವೃಂದಾರಕರೊಳಗೊಪ್ಪಿದಕಂದರ ಕಲ್ಲಿಂದ ಜಪ್ಪಿದ ತಾಯಿಹಿಂದಟ್ಟಿ ಬರಲೋಡಿ ತಪ್ಪಿದ3 ಪುಟ್ಟ ಕೃಷ್ಣನ ಕಟ್ಟಬೇಕೆಂದು ತಂ-ದೊಟ್ಟಿ ಹಗ್ಗಗಳ ತಂದುಬೆಟ್ಟವಾಗಿರಲು ದುರ್ಜನರ ಕೊಂದು ಈಗಗಟ್ಟಿಮಾಡಿದಳಿವ ಹರಿಯೆಂದು4 ಒರಳನೆಳೆದ ಬಲುಮತ್ತಿಯ ದೊಡ್ಡಮರನ ಕಿತ್ತಿದ ನೋಡಿವನರ್ಥಿಯತರಳಾಕ್ಷಿ ಕೃಷ್ಣನ ನೆತ್ತಿಯ ಬೆಣ್ಣೆಸುರಿಯೆ ಪಾಡಿದಳವನ ಕೀರ್ತಿಯ5 ಗಗನಕೆ ಏರಿ ವಾತನ ಕೊಂದ ನೀರೊ-ಳಗೆ ಪೊಕ್ಕು ತಂದೆಯ ಕರೆತಂದಖಗನಂತೆ ಕಡಹದಮರದಿಂದ ಹಾರಿವಿಗಡ ಸರ್ಪನ ಹೆಡೆಯೇರಿ ನಿಂದ6 ತುಳಿದಹಿತಲೆಯನು ಬಿಚ್ಚಿದನಾಗಲಲನೆಯರುಕ್ತಿಗೆ ಮೆಚ್ಚಿದ ಅಲರು ಮಳೆಯ ಸುರಿಯ ಹಚ್ಚಿದ ಕೃಷ್ಣಖಳರಳಕೆಗಳ ಕೊಚ್ಚಿದ 7 ನಂದನ ರಾಣಿಗೆ ಮೆಚ್ಚಿದ ತಾಯಚಂದದ ಕೈಗಳಿಂದುಚ್ಚಿದಇಂದೆನ್ನ ಮನೆಯೊಳು ಸಚ್ಚಿದಾ-ನಂದ ಹಿಡಿಯೆ ಕೈಯ್ಯ ಕಚ್ಚಿದ 8 ಕಣ್ಣೊಳು ಪಾಲನುಗುಳಿ ಪೋದ ಈಚಿಣ್ಣಗೆ ನೋಡಿದೆ ವಿನೋದಮಣ್ಣಮೆದ್ದಖಿಳವ ತೋರಿದ ಕೃಷ್ಣಸಣ್ಣ ಬಾಯನು ಮುಚ್ಚಿ ಮಗುವಾದ 9 ಕುಸುಮವೆತ್ತ ಖಡುಗ ವೆತ್ತ ಈಹಸುಗೂಸು ಎತ್ತ ಪರ್ವತವೆತ್ತಹಸಿವು ತೃಷೆಯ ಬಿಟ್ಟು ಗಿರಿಯ ಪೊತ್ತ ಈಶಶಿಮುಖಿ ಜನಕಿವನು ಸುಖವಿತ್ತ10 ಮೂರು ಲೋಕವಾಳುವ ಸಖಿಯರ ಗಂಡ ನೀಲ-ವರ್ಣನು ತೊಂಡರತೊಂಡ ಬಾಲಕನೀತಸರ್ವೇಶ ಕಂಡಾ ಇವಕೀಳೆಂದವ ಜಗದಲಿ ಭಂಡ 11 ಅರಳೆಲೆ ಮಾಗಾಯಿ ಮುಂಗೈಯ್ಯಲಿಟ್ಟುಸರಭಂಗಿ ಕೂಡಿ ತ್ರಿಭಂಗಿಯವರವೇಣುವನು ತನ್ನಂಗೈಯಲಿಟ್ಟ-ಧರದಲ್ಲೂದಿದ ನಮ್ಮ ರಂಗಯ್ಯ12 ಪಶುಪಕ್ಷ್ಷಿಗಳು ತರತರದಲ್ಲಿಎಸೆವ ಗೀತವ ಕೇಳಿ ವನದಲ್ಲಿಹಸುಳೆಯ ನೆನೆಯುತ್ತ ಮನದಲ್ಲಿ ಪರ-ವಶವಾದುವು ಆಕ್ಷಣದಲ್ಲಿ13 ಕೊಳಲೂದಿ ಸುರರನ್ನು ಸೋಲಿಸಿದ ರಾಗಕಲೆಗಳಿಂದೆಲ್ಲವ ಒಲಿಸಿದಇಳೆಯೊಳು ಗೀತವ ಕಲಿಸಿದ ಇಂತುಒಲಿದು ವಿಠಲ ನಮ್ಮ ಪಾಲಿಸಿದ14 ತÀರುಲತೆಗಳು ಪುಳಕಿತವಾಗೆ ಈಚರ ಪ್ರಾಣಿಗಳೆಲ್ಲ ಸ್ಥಿರವಾಗೆಹರಿಯ ವೇಣುನಾದ ಹೊಸಬಗೆ ಅತಿಹರುಷವ ನೋಡಲೈದಿದೆವೀಗ 15 ಚೆಲ್ಲಿದ ಕೈಯಿಂದಮಲ ನೀರ ನಮ್ಮೆಲ್ಲರ ನೀರಿಗಂಜನು ಧೀರನಲ್ಲ ನಾವಂದ ಮಾತನು ಮೀರನಿವಸುಲಭನೊಮ್ಮೆ ಮೊಗವ ತೋರ 16 ಪಾಲನೊಲೆಯೊಳಿಟ್ಟು ಪೋದೆವು ಈಕಾಲಭೂಷಣ ಕೈಗಾದವುಬಾಲರ ಕೆಲರು ಮರೆತು ಪೋದೆವು ಗೋ-ಪಾಲ ಸಂಗಕ್ಕೆ ಮರುಳಾದೆವು 17 ಉಂಬುವರಿಗೆ ಬಡಿಸಲಿಲ್ಲ ಪತಿಎಂಬುವನಾಜ್ಞೆಯೊಳಗೆ ನಿಲ್ಲದೆನಂಬಿದೆವು ನಾವು ಹರಿಯಲ್ಲದೆ ಅನ್ಯರೆಂಬುದು ಭಕ್ತ ವರ್ಗಕೆ ಸಲ್ಲದೆ18 ಧೇನು ಮಾತ್ರದಿಂದ ಫಲವೇನು ಕಾಮ-ಧೇನು ಶ್ರೀಕೃಷ್ಣನ್ನ ಕರೆದೆನುಮಾನಿನಿ ಮೊದಲು ಕರೆವಧೇನು ಬಿಟ್ಟುಜಾಣೆ ಸೇರಿದಳು ಕೃಷ್ಣನ ಪದವನು 19 ಶಿಶುವ ಬಿಟ್ಟೊಬ್ಬಳು ನಿಜಕನ್ಯೆತನದೆಸೆಯ ತೋರಿಸಬಂದಳಚ್ಚುತನ್ನಎಸೆವ ಶ್ರೀಪತಿ ತನ್ನ ರಮಣನು ಎಂದುಸುಟಳು ಮೊದಲಾಳ್ದ ಗಂಡನ 20 ಲಲನೆ ಕಣ್ಣಂಜನವಬಿಟ್ಟಳು ಜ್ಞಾನಚೆಲುವನಂಜನಕೊಡಂಬಟ್ಟಳುಒಲೆಯಪಾಲಗ್ನಿಗೆ ಕೊಟ್ಟಳು ಕೃಷ್ಣ-ಗೊಲಿದಧರ ಮನವಿಟ್ಟಳು21 ಇಂತು ತೊರೆದು ವಿಷಯಂಗಳ ಆ ಶ್ರೀ -ಕಾಂತನೆ ಕಾವ ಜಗಂಗಳಚಿಂತೆಯ ತೊರೆದೆವು ಮಂಗಳ ಲಕ್ಷ್ಮೀ -ಕಾಂತನೆ ಕಾಯೊ ಜಗಂಗಳ 22 ಕೇಶಿಯೆಂಬ ದೈತ್ಯನ ಕೊಂದ ಖಳನಾಶದಲಿ ಸದಾ ಮುಕುಂದಆ ಸಮಯದಲಿ ಅಕ್ರೂರ ಬಂದ ಅವಂಗೆಲೇಸÀಪಾಲಿಸಿ ಕೃಷ್ಣ ನಡೆತಂದ 23 ಮಧುರೆಯಲಿ ಮಲ್ಲರ ಸೋಲಿಸಿದ ತನ-ಗಿದಿರಾದ ಕಂಸÀನನೊರೆಸಿದಕದನಕೋಲಾಹನೆನಿಸಿದ ನಮ್ಮಮದನಶರಕೆ ಗುರಿಮಾಡಿದ24 ಎಲ್ಲ ದೇವರನಿವ ಮೀರಿದ ಸಖಿಬಲ್ಲವರಿಷ್ಟವ ಬೀರಿದಕಲ್ಲಕಂಬದಿ ಬಂದು ತೋರಿದ ಖಳರೆÉಲ್ಲಿದ್ದರಲ್ಲಿಗೆ ಹಾರಿದ 25 ದಯದಿಂದ ಸಖನಮಗಾದವ ಚೆಲ್ವಹಯವದನ್ನ ಕೃಪೆಯಾದವನಯದಿ ಜಲವ ಪೊಕ್ಕು ಪೋದವ ವೈ-ರಿಯ ಕೊಂದು ವೇದವ ಕಾಯ್ದವ 26
--------------
ವಾದಿರಾಜ
ತಾಂಬೂಲ ಪ್ರತಿಗ್ರಹವ ಮಾಡು ಮಾರಮಣಾಜಾಂಬೂನದಾಕಾರ ಜಲಜದಳನಯನಾ ಪಜಾಂಬವತಿ ಮೊದಲಾದ ಅಷ್ಟಮಹಿಯರೆಲ್ಲಸಾಂಬಾದಿ ಪುತ್ರರೊಡಗೂಡಿ ಸೇವಿಸಲುಸಾಂಬರಾಲಂಕಾರ ಸಕಲ ಭೋಗಂಗಳನುತಾಂಬೂಲವಿದು ಶೋಭನವ ಮಾಡುತಿಹುದಾಗಿ 1ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದಖ್ಯಾತಿವಡೆದಿಹ ಕ್ರಮುಕಫಲಗಳಿವರಿಂದನೂತನದ ಮೌಕ್ತಿಕದ ಚೂರ್ಣ ಕರ್ಪುರದಿಂದಪ್ರೀತಿುಡುವಂದದಲಿ ರಮ್ಯವಾಗಿರುತಿರುವ 2ಸ್ಫುರಿಸುತಿದೆ ನಿನ್ನ ಮಂಗಳಕಾಂತಿ ಸೂರ್ಯನಲಿಸ್ಫುರಿಸುತಿದೆ ಚಂದ್ರಾಗ್ನಿಗಳಲೀ ಪರಿಯಲಿಸ್ಮರಿಸಿದರೆ ಕೈವಲ್ಯ ಮೊದಲಾದ ಪದವೀವತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ 3 ಓಂ ನವನೀತ ನಟಾಯ ನಮಃ
--------------
ತಿಮ್ಮಪ್ಪದಾಸರು
ತಾಳಲಾರೆನು ದೇವ ಪಾಪ ತಪ್ಪಿಸಿ ಬೇಗ ಸಂಜೀವ ಕಾಳಭೈರವನಿಗಪ್ಪಣೆಯ ಕೊಡೊ ದೈತ್ಯಕುಲ ಕಾಲ ಬಿಡಿಸುವುದೆನ್ನ ನೋವ ಪ. ನರಹರಿಯೆ ಸರ್ವತ್ರ ಇರುವಂಥ ನಿನಗೆ ನಾ- ನರುಹಲೇನಿಹುದಿನ್ನು ಜೀಯ ಉರಿಯನುಗುಳುವ ಘೋರ ಶರಗಳೋಲ್ ಪ್ರತಿನಿಮಿಷ ವಿರಿವುತಿದೆ ಬಲ್ಲಿ ಮಹರಾಯ ತರಹರಿಸಿ ದಿನದಿನಕೆ ಕರುಗುತಿಹ ಮದ್ದೇಹ ಸ್ಥಿರವಾಗಲೀ ನಿನ್ನ ಪಾಯ ದರ ಚಕ್ರ ಶಾಙ್ರ್ಗನಂದಕ ಚರ್ಮಗದೆಗಳನು ಧರಿಸಿ ವೋಡಿಸು ಶತ್ರುಮಾಯ 1 ಕಾಶೀಶ ಕಳುಹಿಸಿದ ಪೈಶಾಚ ದಕ್ಷಿಣಾಗ್ನಿಯನು ದೋಷವೆಣಿಸದ ಅಂಬರೀಷನಲಿ ಮುನಿದ ದು- ರ್ವಾಸ ಮುನಿಕೃತ ಕೃತ್ರಿಮವನು ನಾಶಗೈದಖಿಳಗುಣ ಭೂಷಣನೆ ನಿನಗೆನ್ನ ಪೋಷಣೆಯು ಬಹು ಭಾರವೇನು 2 ಸರ್ವಶಕ್ತಿಯೆ ನಿನಗೆದುರ್ವಾದ್ಯವುಂಟೆ ಗುರು ಶರ್ವ ಸುರನಾಥ ಮುಖವಂದ್ಯ ಗೀರ್ವಾಣ ಪಕ್ಷಜನ ನಿರ್ವಹಿಸಿ ನೀನೆ ಯೆನ- ಗಿರ್ವೆ ಗತಿಯಾಗಿ ಸುರವಂದ್ಯ ಬರ್ವ ದುರಿತಗಳ ಮಹದೂರ್ವಣೆಗೆ ಪುಡಿಗೈದು ಗರ್ವಿ ವೈರಿಗಳ ಸದೆ ಬಡಿದು ಪೂರ್ವದಿಂದಲಿ ಸೇವೆ ಸ್ವೀಕರಿಸು ಸರ್ಪವರ ಪರ್ವತೇಶನೆ ಬೇಗ ಒಲಿದು 3
--------------
ತುಪಾಕಿ ವೆಂಕಟರಮಣಾಚಾರ್ಯ
ತುಂಗಾತೀರದಿ ಕಂಗೊಳಿಸುವ ಮುನಿ ಪುಂಗವರಾಯರ ನಯನದಿ ನೋಡೆ | ಮನದಿ ಕೊಂಡಾಡೆ ವರಗಳ ಬೇಡೆ ಪ ಆದಿ ಯುಗದಿ ಪ್ರಹ್ಲಾಲದನೆನಿಸಿ ಕ ಯಾದವಿನುದರದಿ ಜನಿಸುತಲಿ | ಸಖಿಜನಿಸುತಲಿ ಮಾಧವ ಪರನೆಂದುಮೋದದಿ ಸ್ತಂಭದಿ ತೋರಿದ ಧೀರನೆ 1 ಅದ್ವೈತಾಟವಿ ದಗ್ಧಕೃತಾನಲ ಮಧ್ವಮತಾಬ್ಧಿಗೆ ಭೇಶನೆಂದೆನಿಸಿ ಸದ್ವೈಷ್ಣ ವರುದ್ಧಾರಕನಾದ ಪ್ರ ಸಿದ್ಧನಾದ ವ್ಯಾಸಕರ್ಮಂದ ಕುಲೇಂದ್ರನೆ 2 ಧರಣಿ ತಳದಿ ರಾಘವೇಂದ್ರ ಸುನಾಮದಿ ಮರಳಿ ಜನಿಸಿ ದಿವ್ಯ ಪರಿಮಳ ರಚಿಸಿ | ಪರಿಮಳ ರಚಿಸಿ ಕರುಣದಿ ದ್ವಿಜರಿಗೆ ಎರದು ಪೊರೆವಗುರು ಮರುತಾವೇಶದ ದೇವಸ್ವಭಾವನೆ 3 ಸ್ವಾಂತÀದಿ ಭಜಿಪರ ಚಿಂತೆಯ ಕಳೆಯಲು ಚಿಂತಾಮಣಿಯಂತೆ ಸತತ ಸಖಿಯೇ | ಸಂತತ ಸಳಿಯೇ ಮಂತ್ರನಿಕೇತನ ಕ್ಷೇತ್ರದಿ ಸ್ಥಿರವಾಗಿ ನಿಂತ ಪರಮ ಸುಶಾಂತ ಮೂರುತಿಯೆ 4 ವಂದಿಸಿ ಸ್ತವಿಸುವ ವಂದ್ಯಾಂಧಕರಿಗೆ ಕಂದ ರಕ್ಷಿಗಳ ಕರುಣಿಸಿಹರೇ | ಕರುಣಿಸಿಹರೇ ಇಂದು ಧರಾಮರ ವಂದಿತ ಶಾಮ ಸುಂದರ ವಿಠಲನ ದಾಸೋತ್ತಮನೆ 5
--------------
ಶಾಮಸುಂದರ ವಿಠಲ
ತೋರುವನೂ | ದಯ ದೋರುವನೂ|| ಭಕ್ತರಿಗೆ | ದಯ| ದೋರುವನು ಪ ತೋರುತಲವರನು | ಪರಿಪರಿವಿಧದೊಳು ಪೊರೆಯುವನೂ | ಹರಿ | ಮೆರೆಯುವನೂಅ. ಪ ಆದಿಯೊಳಾ| ತಮನೆಂಬಾಸುರನನು || ಭೇದಿಸಿ ವೇದವ ತಂದವನು || ಮೋದದಿ ಗಿರಿಯನು | ಕೂರ್ಮವತಾರದಿ | ಸಾಧಿಸಿ ಬೆನ್ನೊಳು ಪೊತ್ತವನು 1 ಧರಣಿಯ ಕದ್ದೊಯ್ದಸುರನ ಬಗಿಯಲು | ವರಾಹವತಾರವ ತಳೆದವನು|| ನರಮೃಗರೂಪದೊ| ಳುದಿಸುತ ಕಂಬದಿ| ವರ ಪ್ರಹ್ಲಾದನ ಪೊರೆದವನು 2 ಬಲಿಯೊಳು ದಾನವ |ಬೇಡುತ ಮೂರಡಿ| ಯೊಳಗಿಳೆಯನು ತಾನಳೆದವನು|| ಭಾರ್ಗವನೂ ಭೃಗು ಮೊಮ್ಮಗನು| 3 ಶರಣಗೆ ಲಂಕಾ| ಪುರದೊಡೆತನವನು| ಸ್ಥಿರವಾಗಿತ್ತಿಹ ರಾಘವನು|| ತುರುಗಳ ನಿಕರವ ಪೊರೆದವನು 4 ಬೌದ್ದವತಾರವ | ಧರಿಸಿದ ಮಹಿಮನು| ಕಲ್ಕಿಸ್ವರೂಪದಿ ಮೆರೆಯುವನು|| ಶ್ರಧ್ದೆಯೋಳವನನು | ಭಜಿಸಲು ಮುದದಲಿ | ಅಬ್ಧಿವಾಸ ಮೈದೋರುವನು 5 ಮಧುವನದಲಿ ಧ್ರುವ | ತಪವಾಚರಿಸಲು | ಮುದದೊಳು ಧ್ರುವಪದವಿತ್ತವನು | ಸುದತಿಯು ಮೊರೆಯಿಡ | ಲಕ್ಷಯ ಸೀರೆಯ | ಇತ್ತವನೂ ದಯವಿತ್ತವನು6 ಶೇಷಗಿರೀಶನು | ದಾಸರಿಗೊಲಿದವ | ರಾಸೆಯ ಸಲಿಸಿದ | ಶ್ರೀವರನು || ಶೇಷಶಯನ ಹರಿ | ದಾಸದಾಸನೆ | ನ್ನಾಸೆಯನೂ ತಾನೀಯುವನು 7 ಪಂಕಜನಾಭನು | ಪರಮಪವಿತ್ರನು | ಕಿಂಕರಜನಪರಿಪಾಲಕನು || ಶಂಕಚಕ್ರಂಗಳ ಧರಿಸಿದ ಶ್ರೀಪತಿ | ವೆಂಕಟೇಶ ದಯದೋರುವನು 8
--------------
ವೆಂಕಟ್‍ರಾವ್
ದೂರು ಯಾತಕ್ಕೆ ತರಲ್ಯಮ್ಮಾ | ಯಶೋದಮ್ಮ || ವಾರಿಜ ಮುಖಿಯರು ಶೇರದೆ ಹೇಳ್ವರು ಪ ವಂದು ದಿನ ನಾ ಮನಿಯ ಬಿಟ್ಟು ಹೋಗುವೆನೆಯಲ್ಲ್ಯೊ | ಬಂದು ಹೇಳುವರೆಲ್ಲ ಕೇಳು ಗೋಕುಲದೊಳು | ಸಂದು ಸಂದನೆ ತಿರುಗಿ ಮಂದಗಮನಿಯರು | ಹೊಂದಿ ಒದಗಿ ಬಾಯಂದದ್ದು ನಿಜಮಾತು 1 ಯನ್ನ ಮಾತನ್ನು ಸುಳ್ಳಾದರೆ | ಗೋವಳ್ಹಾರೇ ಮನ್ನಿಸಿ ಬದಿಗೆ ಕರೆದುಕೇಳು | ಅವರಿಗೆ ಹೇಳು ಕನ್ಯೆಯರೆಲ್ಲಾ ಬಂದು ಬೆಣ್ಣೆಗಳ್ಳನೆಂದು ಕಣ್ಣಿಲಿ ನೋಡದೆಯನ್ನ ದಂಡಿಸುವರೇ2 ಪರರ ಮನೆಯೊಳಗಿರುವ ಮಡಿಕೆ ಪಾತ್ರೆ ನಿನಗ್ಯಾಕೆ | ಸ್ಥಿರ ಕ್ಷೀರಾಂ ಬುಧಿಶಯನನಾಗಿ | ಇರವದು ಆಗಿ | ಪುರದ ಸ್ತ್ರೀಯರು ಯಲ್ಲ ದೊರೆ ಹೆನ್ನೆ ವಿಠಲನೆಂದು ಮರೆತು ಹೇಳಲಿ ಬಹು ಸ್ಥಿರವಾಗಿ ಮಾಡುವರೇನೆ 3
--------------
ಹೆನ್ನೆರಂಗದಾಸರು
ದೇವಾದಿ ದೇವ ನೀನವಧರಿಸು ಭಿನ್ನಪವ ಪ ಈ ವಿವಿಧ ಸುರರೊಳಗೆ ಸರಿಯಲ್ಲ ನಿನಗೆ ಅ.ಪ. ಸರಸಿಜಾಸನ ಶಂಭು ಮೊದಲಾದ ಸುರರೆಲ್ಲಾ ಪರತಂತ್ರರವರಲಿ ಕೊರತೆಯುಂಟು ನಿರ್ದೋಷ ನಿರವಧಿಕ ಕಲ್ಯಾಣಗುಣಪೂರ್ಣ ನಿರ್ದುಃಖ ನಿರತಿಶಯ ನಿರುಪಮಾನಂದಾತ್ಮ ಸರ್ವಜ್ಞ ಸರ್ವೇಶ ಸರ್ವತಂತ್ರ ಸ್ವತಂತ್ರ ಸರ್ವವಸ್ತುಗಳಲಿ ಸರ್ವದಾ ಪರಿಪೂರ್ಣ ಪರಿಪೂರ್ಣಕಾಮ ನಿನ್ನುರದಲೆನಗೆ ಸ್ಥಿರವಾಸಕೆಡೆಯ ನೀ ಕರುಣದಿಂದಿತ್ತು ಹರುಷಪಡಿಸುವುದೆನ್ನ ಶರಧಿಮಂದಿರನೆ ಗಿರಿಯ ಧರಿಸಿದೆ ಕರಿಗಿರೀಶನೆ
--------------
ವರಾವಾಣಿರಾಮರಾಯದಾಸರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ಧರೆಯೊಳಗೆ ಹೆಳವನಕಟ್ಟೆಯಲಿ ನೆಲಸಿ ಪರಿಪೂರ್ಣಕಳೆಯಿಂದ ಭಕುತರನು ಒಲಿಸಿ ಸ್ಥಿರವಾಗಿ ಪೂಜೆಯನು ನೆಲಸಿ ನೀನಿಂದೆ ಕರುಣ ದೃಷ್ಟಿಯಲಿ ಭಕ್ತರನು ಮನ್ನಿಸುವೆ 1 ಹತ್ತು ಅವತಾರದಲಿ ಇದಿರಾಂತವರ ಗೆಲಿದು ಮತ್ತೆ ಪದವಿಯ ಕೊಟ್ಟುರಕ್ಷಿಸಿ ಕಾಯ್ದೆ ವಿಸ್ತರಿಸಿ ಪೂಜೆಯನು ಮಾಡಿಸಿಕೊಂಬೆ ತೆತ್ತೀಸಕೋಟಿ ದೇವರ್ಕಳನು ರಕ್ಷಿಸಿದೆ 2 ಉದಯ ಮದ್ಯಾಹ್ನ ಸಂಜೆಯಲಿ ಪೂಜೆಯನು ವಿಧವರಿತು ಸೇವೆಯನು ಅನುಸರಿಸಿಕೊಂಬೆ ಸ- ಹೃದಯ ಭಕ್ತರನು ಕಾಯ್ದು ಪಾಲಿಸುವೆ ಮುದದಿಂದ ಹೆಳವನಕಟ್ಟೆಯಲಿ ನೆಲಸಿರುವೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಧ್ಯಾನವನು ಮಾಡಿ ತ್ರಿವೇಣಿ ಕ್ಷೇತ್ರವ ಬಿಡದೆ | ಙÁ್ಞನಭಕ್ತಿ ವೈರಾಗ್ಯ ನಾನಾ ಸತ್ಕರ್ಮ ನಿ | ಸಿರಿ | ಪ್ರಾಣೇಶ ಕುಣಿಯುವನಯ್ಯಾ ಅಯ್ಯಯ್ಯಾ ಪ ಹರಿವೀರ ದ್ರುಪದನುದ್ಧರಿಸಿವಾಗಲು ತನ್ನ | ಶರೀರದಿಂದಲಿ ಅಷ್ಟಕೇತ್ರಗಳ ಪುಟ್ಟಿಸಿ | ವರದೇಶ ವೈಕುಂಠದಲ್ಲಿಟ್ಟನು ಸಪ್ತ | ಪಿರಿಸಹಿತ ತೀರ್ಥರಾಜಾ || ಮೆರೆವದಿದೆ ಪುಂ ಕ್ಷೇತ್ರ ಉಳಿದವೇಳು ಸ್ತ್ರೀ | ಇರುತಿಪ್ಪವಲ್ಲಿ ಮಿಗಿಲಿದಾದಕೆ ಅತಿಶಯವೊ | ಧರಣಿಯೊಳಗಿದಿ ಕಾಲಾಂತರಕೆ ಹರಿತಂದ ವಟ | ತರು ಸಹವಾಗಿ ಅಯ್ಯಾ ಅಯ್ಯಾ ಅಯ್ಯಾ 1 ತರಣಿಸುತೆ ಮಾನಸೋತ್ತರ ಶೈಲದಲಿ ಕುಳಿತು | ವರರಾಜ ತೀರ್ಥ ಮಾಧವನ ಸಾರುವೆನೆಂದು | ಭರದಿಂದ ತಪವು ಮಾಡೆ ಸರಸಿಜೋದ್ಭವನೊಲಿದು | ವರವಿತ್ತ ಮುಂದೆ ನೀನು ಧರೆಯೊಳು ಕಾಳಿಂ || ದ ರಾಯಗೆ ಕುವರಿ ಎನಿಸಿ ಮಹಾಸರತಿಯಾಗಿ ಪೋಗಿ | ಸಿರಿ ಮಾಧವನ ಚರಣ | ನೆರೆ ಮೆರೆದಳೈಯ್ಯಾ ಅಯ್ಯಾ ಅಯ್ಯಾ ಅಯ್ಯಾ 2 ತುರುಗಮ ನೆವದಿಂದ ಅರವತ್ತು ಸಾವಿರ ಸ | ಗರನ ಕುಲದವರು ಕಪಿಲಾಖ್ಯಾ ಹರಿ ಮುನಿಯಿಂದ | ಉರಿದು ಪೋಗೆನಲಾಗಿ ಭಗೀರಥ ಭೂಪತಿ ಉಗ್ರ | ಧುರಧಿ ತಪವನ್ನೆ ಮಾಡೇ | ಹರಿ ನಿರೂಪವ ತಾಳಿ ಗಿರಿಗಹ್ವರವನೊಡದು | ಸಿರಿ | ಚರಣದೆಡೆಯಲ್ಲಿ ನಿಂದು ಯಮುನೆ ವಡಗೊಡಿ ಬಾ | ಮರವಾದವಳಂದು ಅಯ್ಯ ಅಯ್ಯಾ ಅಯ್ಯಾ3 ಸರಸ್ವತಿಯ ಬೆರೆದು ತ್ರಿವೇಣಿ ಸಂಗಮವೆಂದು | ಕರಿಸಿಕೊಂಡಿತು ವಿಕರ ಸೋಮೇಶ್ವರನ ತನಕ | ಪರಮೇಷ್ಠಿಯಿಲ್ಲಿಗೈತಂದು ಬೊಮ್ಮಾಂಡವನು | ಸರಿ ಮಾಡಿ ತೊಲಗಲಾಗೀ || ಸುರರು ಶಿರದೂಗುತಿರೆ | ವರರಾಜತೀರ್ಥ ಮಹಾಭಾರವಾಗಲು ಇದಕೆ | ಸರಿ ಮಿಗಿಲು ಇಲ್ಲೆನುತ ಪೊಗಳಿ ಕರದರು ಮಹ | ವರದ ಪ್ರಯಾಗವೆಂದಯ್ಯಾ ಅಯ್ಯಾ ಅಯ್ಯಾ 4 ಪುರವೈರಿ ನಟಣೆ ಪೂ ತುಲಸಿ ಸುರಪತಿ ವೈಶ್ವಾ | ನರನು ತಿಲ ಹೋಮ ಯಮರಾಯಕಿಂಚಿತು ದಾನ | ನಿಋರುತಿತ ಪೈತೃಕಕರ್ಮ ವರುಣ ಜಲದಾನಸ್ತುತಿ | ಮರುತ ಭೂತನು ಕುಬೇರ || ಅರಗಳಿಗೆ ವಸತಿ ಈ ವಟನಿಕಟ್ಟಿಯಲಿಯಿದ್ದು | ಪರಿಪರಿಯಿಂದಲಿ ಒಲಿಸಿ ಮಾಧವನಿಂದ | ಪುರಷಾರ್ಥ ಪಡೆದು ಸುಖಿಸಿದರು ಸಮಸ್ತ ಬಗೆ | ಅರಿತು ಕೊಂಡಾಡಿ ಜನರೈಯ್ಯ ಅಯ್ಯಾ ಅಯ್ಯಾ5 ಎರಡೊಂದು ಮೂರು ಕುಲದ ಮಧ್ಯ ನಿಂದು | ಕರ್ತಾರಿಯೊಳಗೆ ಮಿಂದು ಸತ್ಕರ್ಮವನೆಸಗಿ ಭೂ | ಸುರರ ಮೆಚ್ಚಿಸಿ ಮನದಿ ಪಾಪಗಳ ಉಚ್ಚರಿಸಿ | ಕರಣ ನಿರ್ಮಲಿನರಾಗಿ | ವಿಪ್ರ ಚಂಡಾಲ || ಪರಿಯಂತ ವಪನವೆ ಮುಖ್ಯವೆಂದು ತಿಳಿದು | ಚರಿಸಿದರೆ ಅನಂತ ಜನ್ಮಕ್ಕೆ ಮಹಾಸೌಖ್ಯ | ಬರಿದೆ ಆಗದು ಕಾಣಿರೈಯ್ಯ ಅಯ್ಯ ಅಯ್ಯಾ6 ಧರೆಯ ಮೇಲೆ ಬಿದ್ದ ಶಿಶುಗಳ ತಂದು ಮುಂಡಣವ | ಉರುತರ ಬುದ್ದಿಯಿಂದ ಮಾಡಿಸಲಿ ಬೇಕು ವಿ | ಸ್ತರಿಸುವೆನಯ್ಯಾ ಯೌವನ ವಾರ್ಧಿಕರಿಗೆ ನಿಜ | ವರನಾರಿಯರಿಗೆ ವೇಣಿ ಸರಿ ಎನ್ನಿ ಸಾತ್ವೀಕ || ಪುರಾಣದಲಿ ಪೇಳಿದ ಎರಡು ಭುಜದಲಿ ತಪ್ತ ಚಕ್ರ | ವಿರಹಿತರಾಗಿ ಬರಲು ಷಣ್ಮುತ ಜನಕ ಗತಿಯಿಲ್ಲ ಮತಿಯಿಲ್ಲ | ಸ್ಥಿರವಾಕ್ಯ ಲಾಲಿಪುದು ಅಯ್ಯಾ ಅಯ್ಯಾ ಅಯ್ಯಾ 7 ಎರಡೈದು ತುರಗ ಕೃತು ಮೊದಲಾದ ತೀರ್ಥಗಳು | ಪರಿಪರಿ ದೇವ ಮುನಿಗಳು ನಾಮದಲಿ ಉಂಟು | ಪರಮಭಕುತಿಯಿಂದ ಮಜ್ಜನಾದಿಯ ಮಾಡೆ | ಪರಲೋಕ ಕರತಳದೊಳು || ಇರುತಿಪ್ಪದು ನಿತ್ಯಾ ಪ್ರಯಾಗರಾಜನ | ಸ್ಮರಣೆ ಮಾಡಿದ ಮನುಜನು ಆವಾವಲ್ಲ್ಯಾದರು ಇರಲು | ಮಾಧವ ವೊಳಗೆ ಮೊಳೆವ | ದರುಶನವ ಕೊಡುತಲಯ್ಯ ಅಯ್ಯಾ ಅಯ್ಯಾ 8 ಅರುಣೋದಯಲೆದ್ದು ಶುದ್ಧಾತ್ಮರಾಗಿ | ಪರಿಪರನೆಂಬೊ ಙÁ್ಞನದಲಿ ಹಾಡಿಪಾಡಿದವರ | ದುರಿತ ರಾಸಿಗಳ ದಹಿಸಿ ನಿಂ | ದಿರದೆ ಸಂತರ ಕೊಡಿಸಿ || ಮೊರೆವುತಿಪ್ಪುದು ಗಡಾ ಸಿದ್ದಾರ್ಥ ಕ್ಷೇತ್ರವಿದು | ನೆರೆನಂಬಿ ಮಾನವನು ಮಾನಸದಲಿ ಭಜಿಸಿ | ಸಿರಿ ವಿಜಯವಿಠ್ಠಲ ಕರುಣವುಳ್ಳವನಿಗೆ | ದೊರಕುವದು ದೊರಕುವದಯ್ಯಾ ಅಯ್ಯಾ ಅಯ್ಯಾ 9
--------------
ವಿಜಯದಾಸ
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ನಡಿ ನೀರೇ ಪೋಪಾ ದೇವಿ ಇದ್ದೆಡೆಗೆ| ಕಡು ಕೋಪವ್ಯಾಕ ಶ್ರೀರಮೆ ಕೂಡ ಎನಗೆ ಪ ಫುಲ್ಲ ಲೋಚನೆ ಕುಂದರದನೆ ಸುಫಣಿ ವೇಣಿ| ಮಲ್ಲಿಕಾ ಮಂದಸ್ಮಿತೆ ಚಲ್ಪಕದಪು| ಬಿಲ್ಲು ಕಾಮನ ಸೋಲಿಪ ಭ್ರೂಲತೆಯುಳ್ಳ| ಸಲ್ಲಲಿತಾಂಗಿಯಾವಾಗ ಕಂಡೆಪೆನೆ 1 ಹುಣ್ಣಿಮೆ ಚಂದ್ರನ ಮಂಡಲ ಪೊಳೆವಾ|ಪೊಂ| ಬಣ್ಣವದನೆ ಮಹಾಸಿಂಹನ ಜರೆವಾ| ಸಣ್ಣ ನಡುವಿನಿಂದೊಪ್ಪುವ ಸಿರಿಯನು| ಕಣ್ಣಾರೆನೋಡಿ ಮತಾಡುವೆ-ನೇಳೆ 2 ಬರಬಾರದು ದೇವಿಯಗಲಿ ಬಂದರ| ಸ್ಥಿರವಾಗದು ಅರಫಳಿಗೆನ್ನ ಮನಸು| ಗುರುಮಹಿಪತಿ ಸುತ ವರದ ದೇವತೆಯಾಗಿ| ಧರೆಯೊಳು ಮೆರವಾ ಶ್ರೀ ಲಕ್ಷೀಯ ತೋರೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂಬು ನಾರಾಯಣನ ನಂಬೋ ನರಹರಿಯನಂಬಿದಾ ಭಕ್ತರ ಕುಟುಂಬ ಸಾರಥಿಯ ಪ ಬಲಿ ನಂಬಿ ಪಾತಾಳಲೋಕಕರಸಾದನದೆಕುಲದ ಪ್ರಹ್ಲಾದನು ನಿಜವ ಕಂಡಕಲಿ ವಿಭೀಷಣ ನಂಬಿ ಲಂಕೆಯಲಿ ಸ್ಥಿರವಾದಛಲದ ಪಾರ್ಥನು ನಂಬಿ ವಿಶ್ವರೂಪವ ಕಂಡ1 ಅಂಬರೀಷನು ನಂಬಿ ವೈಕುಂಠವೇರಿದನುಹಂಬಲಿಸಿ ಶಶಿಧರನು ಉರಿಯ ಗೆದ್ದಕುಂಭಿನೀದೇವಿ ತಾ ಬಂಧನವ ಕಳೆದಳುಅಂಬುಜಾಕ್ಷಿ ದ್ರೌಪದಿಯು ಮಾನ ಉಳುಹಿಕೊಂಡಳು 2 ಅತಿ ಭಕುತರಿಗೆ ಮೆಚ್ಚಿ ಗತಿಮೋಕ್ಷವನಿತ್ತನುಮತಿಭ್ರಷ್ಟ ಅಜಮಿಳನ ಉದ್ಧರಿಸಿದನುಕ್ಷಿತಿಯೊಳಗೆ ಕಾಗಿನೆಲೆಯಾದಿಕೇಶವರಾಯಪತಿತ ಪಾವನ ಪರಮಪುರುಷೋತ್ತಮನನು 3
--------------
ಕನಕದಾಸ