ಒಟ್ಟು 2434 ಕಡೆಗಳಲ್ಲಿ , 116 ದಾಸರು , 1874 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೂತನಾ ಮನೆಗೆ ಬಂದ ಕಾರಣ ಪೇಳೋ ದಾತಾ ಪ ಪಾತಕವ ಪರಿಹರಿಸಿ ಪರಿಪಾಲಿಸುವುದಲ್ಲದೇ ಮತ್ತಾವಕಾರಣ ಅ.ಪ. ಸಂಸಾರಿಗೆ ಇನ್ನು ಘೋರ ದುರಿತಕೊಳಗಾಗಿರುವ ಶರಣರಿಘರುಷ ವರ್ಷಗರೆಯುವುದಲ್ಲದೇ 1 ತವ ಚರಣದಲಿ ಕುಳಿತು ನೀರು ಕುಡುವೆನೆಂದರೆ ದಾರಿಗಾಣೆಯೋ ರಾಯಾ 2 ಸುಮನಸರ ಪ್ರೀಯಶ್ವಾಸ ಜಾಪಕ ಪ್ರಾಶ ವಿಷನನುಜ ತಂದೆವರದಗೋಪಾಲವಿಠಲನ ದಾಸಾ 3
--------------
ತಂದೆವರದಗೋಪಾಲವಿಠಲರು
ದೂರ ನೋಡುವರೆ ರಂಗಯ್ಯ ಎನ್ನ ಪ ದೂರ ನೋಡುವರೇನೋ ಸಂಸಾರ ಶರಧಿಯೊಳಗೆ ಮುಳುಗಿ ದಾರಿಗಾಣದೆ ನೀನೆ ಗತಿ ಮು-ರಾರಿಯೆಂದು ಸಾರಿದ ಮೇಲೆ ಅ.ಪ ಆಸೆ ಬಿಡದೆಲೊ ಕಾಸುವೀಸಕೆ-ಕ್ಲೇಶ ಘನ್ನವೆಲೊ ಈಶ ಯಾರಿಗೆ ಪೇಳಲೊಶವೆಲೊ-ಶ್ರೀಶ ಎನ್ನ ಮನಸಿನಲ್ಲಿ ಬಹಳ ಘಾಸಿಪಟ್ಟೆನೊ-ದಾಶರಥಿ 1 ಭಕುತಿಯಿಲ್ಲವೊ ಅದರ ಹೊರತು-ಮುಕುತಿಯಿಲ್ಲವೊ ಯುಕುತಿಯಿಂದಲಿ ವಲಿವನಲ್ಲವೊ- ಮುಕುತಿದಾಯಕ ನಿನ್ನ ಕಾಣದೆ ಭಕುತಿಗೋಸುಗ ಪರರ ತುತಿಸಿ, ಕಕುಲಾತಿಯಿಂದಲೆನ್ನ- ಶಕುತಿಯೆಲ್ಲ ನಷ್ಟವಾಯಿತು 2 ಪೊರೆಯದಿರುವರೆ ಕರುಣಾಳುಯೆಂಬ-ಬಿರುದ ಬಿಡುವರೆ ಹರಿಯೆ ಯೆನ್ನ ಮರೆತು ಬಿಡುವರೆ- ಕರಿಯು ಹರಿಯೇ ಎಂದು ಕರೆಯೆ ಸಿರಿಗೆ ಪೇಳದೆ ಭರದಿ ಬಂದು, ಪೊರೆದೆಯೆಂಬ ವಾರ್ತೆಕೇಳಿ -ಮರೆಯ ಹೊಕ್ಕೆನೊ ವಿಜಯವಿಠ್ಠಲ 3
--------------
ವಿಜಯದಾಸ
ದೂರ ಮಾಡುವರೇ ಶ್ರೀಶ ಪ ದೂರ ಮಾಡುವರೇದೂರ ಮಾಡುವರೇನೋ ಶ್ರೀಶದಾರಿ ಕಾಣದೆ ಮೊರೆಯನಿಡುವೆಆರು ಕಾಯುವರಿಲ್ಲ ಶ್ರೀಶಸಾರಸಾಕ್ಷ ಸಲಹೆ ಬೇಡುವೇ ಅ.ಪ. ಸಕ್ತಿ ಇಲ್ಲವೋ | ನಿನ್ನೊಳಾಸಕ್ತಿ ಇಲ್ಲವೋ |ಸಕ್ತಿ ನಿನ್ನಲ್ಲಿಲ್ಲದೇಲೇಮುಕ್ತಿ ಇಲ್ಲವೆಂದು ಶೃತಿಯಉಕ್ತಿ ಕೇಳಿ ಕೇಳಿದಾಗ್ಯೂ ವಿ-ರಕ್ತಿ ಪುಟ್ಟಲಿಲ್ಲ ಎನಗೆ ಭಕ್ತಿಮಾರ್ಗ ದೂರವಾಯ್ತೊ 1 ದುಷ್ಟ ವಿಷಯದೀ | ಮನವುಅಟ್ಟಿ ಪೋಗೋದೋ |ಎಷ್ಟು ಪೇಳಿದಾರೂ ಮನವುನೆಟ್ಟಗಾಗೋ ಪರಿಯ ಕಾಣೆಸೃಷ್ಠಿಗೀಶ ಮನವ ಅಭಿಧಸೊಟ್ಟ ಮನವ ಸರಿಯ ಪಡಿಸಿ | ಶ್ರೇಷ್ಠ ನನ್ನ ಮಾಡದ್ಹಾಂಗೆ 2 ಕೈಯ್ಯ ಬಿಡುವರೇ | ದಯಾಳು ವಿಷಯಧುಯ್ಯಲು ಕಳೆಯದೇ |ಪ್ರೇರ್ಯ ಪ್ರೇರಕನಾಗಿ ನೀನುಮಯ್ಯ ಮರೆಸಿ ಧೈರ್ಯಗೆಡಿಸೆಆರ್ಯರಿದನ ಸಯ್ಯೆಂಬೊರೇನೋಅಯ್ಯ ಕೈಯ್ಯ ಬಿಡದೆ ಕಾಯೋ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ದೃಢತರದ ಭಕುತಿಯಾ ತವದ್ವಾರದಿಂದಲಿ ದೊರಕುವುದು ನಿಶ್ಚಯಾ ತರಿ ಎನ್ನ ಮಾಯಾ ಪರಿಹರಿಸೋ ಈ ಭವತಾಪವ ಪರಿಹರಿಸದಲೇ ಭರದಿ ಬಂದೆನು ಪರಮ ಪಾವನ ಸತ್ಯಜ್ಞಾನ ಶ್ರೀ ಗುರುವರನೇ ತವ ಚರಣಕೆರಗುವೆ ಪ ಕರ್ಮಗಳೊಂದು ನಾನರಿಯೇ ನಿನ್ನಯ ಪಾಲಿಗೆ ಇಂದು ಚರಣಗಳ ದ್ವಂದ್ವಕೆ ಮಾಡದಲೆ ಸಲಹೋ ಆನಂದತೀರ್ಥರ ಪೀಠಪೂಜನೇ 1 ಭ್ರಷ್ಟನಾದವ ನಾನು ಸೃಷ್ಟಿಸಿದ ಹರಿಯನು ಮರೆತು ದಿನಗಳೆದನು ಪಡ್ಡೆರಧೊಟ್ಟಿ(ಪಡ್ಡೆರದು+ಹೊಟ್ಟಿ) ಹೊರಕೊಂಡೆನು ಪಾಪಿಷ್ಟ ನಾನು ಇಷ್ಟದಾಯಕ ಮುಟ್ಟಿ ಭಜಿಸುವೆ ಸುದೃಷ್ಟಿಯಲಿ ನೋಡಿ ಎನ್ನಯ ಕೆಟ್ಟ ಮನವನು ಕಳೆದು ಜ್ಞಾನದ ದೃಷ್ಟಿ ಕೊಡುವುದು ಶ್ರೇಷ್ಠ ಮಹಿಮನೆ 2 ದಾನಧರ್ಮಗಳನ್ನು ಈ ಕರಗಳಿಂದಲಿ ಮಾಡಲಿಲ್ಲವೊ ನಾನು ಹನುಮೇಶವಿಠಲನ ಸ್ಮರಣೆ ಎಂಬುವುದನ್ನು ಧನವನಿತೆಸುತರಾ ಮೋಹದೊಳು ಮರೆತೆನು ಗುರುವರನೆ ನೀನು ಜ್ಞಾನವಿಲ್ಲದ ದೀನದಾಸನ ಹೀನಗುಣ ಎಣಿಸದಲೆ ಪಾಲಿಸೊ ದೀನಜನ ಮಂದಾರನಿಲಯನೆ ಕಾಮಿತಾರ್ಥವನೀವ ದಾತನೇ 3
--------------
ಹನುಮೇಶವಿಠಲ
ದೃಷ್ಟಿ ತಾಕೀತೋ ಬೀದಿ ಮೆಟ್ಟಬ್ಯಾಡವೋಸೃಷ್ಟಿಯ ನಾರಿಯರೆಲ್ಲ ಕಣ್ಣಿಟ್ಟು ಹೀರುವರೋ ನಿನ್ನ ಪ ಪುಟ್ಟ ಪದಕಮಲದಿ ಮೆಟ್ಟಿ ರತುನ ಪಾದುಕಾಇಟ್ಟ ಕಿರುಗೆಜ್ಜೆ ಪೆಂಡ್ಯೆ ದಿಟ್ಟತನದಿಘಟ್ಟಿ ಸಾಸಿರ ಬಾಳುವ ಪಟ್ಟೆಯನೆ ಬಿಗಿದುಟ್ಟು ಮೇಗಿಲ್ಲದ ಬೆಲೆಯಾದ ಪಟ್ಟದುಡುದಾರವಿಟ್ಟು 1 ಸಿರಿಯಿರುವ ಉರದಲ್ಲಿ ಪರಿಮಳ ಗಂಧವ ಪೂಸಿಪರಿಪರಿ ಪದಕ ಮುತ್ತು ಸರ ವೈಜಯಂತಿಕೊರಳ ಕೌಸ್ತುಭದ ಕಾಂತಿ ನಿರುಪಮ ಶ್ರೀವತ್ಸಲಾಂಛನ ಸರಿಗೆ ತಾಳಿ ಪದಕವು ಸೇರಿದ ಮುತ್ತಿನ ಜಲ್ಲೆ 2 ಉಗುರ ಗೋರಂಟಿ ಛಾಯಾ ಚಿಗುರು ಪೋಲುವ ಬೆರಳುಬಗೆಬಗೆ ರತುನಂಗಳ ನಗಗಳನಿಟ್ಟುನಗವನೆತ್ತಿದ ಭುಜಕೆ ಬಿಗಿದ ಬಾಹುಪುರಿ ಕೆಂಪುನಿಗಿನಿಗಿಗುಟ್ಟುವ ಕಾಂತಿ ನಗುತಿದೆ ಬಾಲಭಾನುವ 3 ನಾಸಿಕ ಲಲಾಟಚೆಲುವ ಪುಬ್ಬು ಕಸ್ತೂರಿಯ ತಿಲಕ ಒಪ್ಪುವ ಮುಖದಿ 4 ಕೋಟಿ ಹೊನ್ನು ಬಾಳುವ ಕಿರೀಟವಿಟ್ಟು ಕಡೆಗಣ್ಣನೋಟದಿಂದ ತರುಣೇರ ಪೋಟಿ ಮಾಡುತಚಾಟು ಮಾತುಗಳಾಡುತ ಪೊಟ್ಟನಂತೆ ತಿರುಗಿದರೆನೀಟಲ್ಲವೋ ನಿನಗದು ಪಾಟಲಾಧರನೆ ಕೇಳು 5 ಬಿಂಕದಿಂದ ಎರಡು ಕರದಿ ಶಂಖ ಚಕ್ರವ ಪಿಡಿದುಅಂಕಿತ ವೇಣುನೂದುತ ಶಂಕೆ ಇಲ್ಲದೆ ಮಂಕು ಮಾಡುತ ಬಾಲೇರ ಪಂಕಜಾಕ್ಷ ಸುಳಿದರೆÉಮಂಕುಗಾರನೆಂದು ನಿನ್ನ ಅಂಕಿತ ಮಾಡುವರಲ್ಲೋ 6 ಮಂಗಳಮೂರುತಿ ಮುಂಚೆ ಶೃಂಗಾರಗಳನೆ ಮಾಡಿಪೊಂಗೊಳಲನೂದುತ ಶ್ರೀರಂಗ ಸುಳಿದರೆಹೆಂಗಳ ರಂಭೇರೊಂದಾಗಿ ಕಂಗಳಿಡಲು ಉನ್ನಂತರಂಗವಿಠಲಗಲದಿರೋ ಹಿಂಗದೆ ನರಸಿಂಗನೇ 7
--------------
ಶ್ರೀಪಾದರಾಜರು
ದೃಷ್ಟಿಯೊಳಗೆ ದೃಷ್ಟಿ ನಿಂತಿತು | ನೋಡಲಿನ್ನು ದೃಶ್ಯ ನಷ್ಟವಾಯಿತು | ಕಷ್ಟವೆಲ್ಲ ಕಡೆಗೆ ಸಾರಿ | ಅದೃಷ್ಟವನ್ನು ಮೀರಿ ನಿಂದು ನಿಷ್ಠೆಯಲ್ಲಿ ತುಷ್ಟಿಯಾಯ್ತು ನೀ ನೋಡು ಸಖಿಯೆ ಪ ಐದು ಮಂದಿ ಅಗಲಿ ಹೋದರೆ | ಐದಕೈದು ಕೂಡಿ ಬಂದು ಕೂಡದಾದರೆ | ಐದರೊಳಗೆ ನೋಡಲಿನ್ನು || ಐದು ಐದು ತಾನೆ ಅಲ್ಲ | ಐದನೇದರಲ್ಲಿ ನಿಂತೆನೇ | ನೀ ಕೇಳಿದೇನೆ ? 1 ಕರ್ಮವೆಲ್ಲ ಕಾಣದಾಯ್ತು | ಧರ್ಮವೊಂದು ಸರ್ವಕಾಲ ತೂಗಿ ನಿಂತಿತು |ಶರ್ವನಲ್ಲದಿನ್ನು ಮತ್ತೆ | ಉರ್ವಿಯಲಿ ಪೇಳದಾಗಿ ಪರ್ವತಾಗ್ರ ಭೂಮಿ ಒಂದು ನಿರ್ವಿಕಾರ ತೋರಿತಲ್ಲಾ 2 ಹಿಂದೆ ಎಂದು ಕಂಡಿದಿಲ್ಲ | ಈ ಸೋಜಿಗವನ | ಮುಂದೆ ದಾರಿಗುಸುರಲೀಗತೀ | ತಂದೆ ಭವತಾರಕನ | ಹೊಂದಿದವರ ಕೇಳಿದೇನೆ | ಎಂದು ಎಂದು ಹೀಗೆಂಬರೆ | ನೀ ಬಲ್ಲಿಯೇನೇ 3
--------------
ಭಾವತರಕರು
ದೇವನಲ್ಲವೇನೋ ಸದ್ಗುರು ಮಹಾದೇವನಲ್ಲವೇನೋ | ಆದಿಯೋಳ್ ಸಿದ್ಧರು ಹೋದ ದಾರಿಯ | ತೋರಿ ಭೇದವ ಬಿಡಿಸಿದ ಮೂರುತಿ ಪ ನರಜನ್ಮದೊಳಗೆ ಬಂದು ನೀನು | ಪ್ರಪಂಚದ ಕಡಲು ಮಧ್ಯದಿ ನಿಂದು | ಅರಿತು ಮರೆತು ಒಮ್ಮೆ ಗುರುವೆಂದು ನೆನೆದರೆ | ಗುರುತಿಟ್ಟು ಅವರಿಗೆ ಪರತರ ತೋರುವ 1 ಆಶಾಪಾಶವ ಬಿಡಿಸಿ ಮಾಡಿದ | ದೋಷ ಭವಂಗಳ ಕರ್ಮವ ಕೆಡಿಸಿ | ನ್ಯಾಸ ಧ್ಯಾಸದಿ ಜಪ ಮಾಡೆ ಗುರು |ಬೋಧ ಪ್ರಕಾಶವ ತೋರಿದ ಈಶನು 2 ಭಕ್ತಿ ಜ್ಞಾನವ ಹಿಡಿದು ನಂಬಿದಗೆ | ಮುಕ್ತಿಯ ನಿಶ್ಚಯದಿ ಪಾಲಿಸುವ | ಕರ್ತೃ ಸದ್ಗುರು ಭವತಾರಕ ಧರೆಯಲಿ | ಪ್ರತ್ಯಕ್ಷವಾದಂಥ ಪರಬ್ರಹ್ಮರೂಪನು 3
--------------
ಭಾವತರಕರು
ದೇವರಾಜ ನುತನೆ ಖಗಪಾ | ಬಲ | ದೇವ ಚರಣ ಮಧುಪ ಪ ಭಾವಜಾರಿ ಸಮನು ಎನಿಪ | ತಾವಕನ್ನ ಸಲಹೊ ಕಾಶ್ಯಪ ಅ.ಪ. ಜಲಧಿ ಗಾರುಡ ಮುಖ ಕಾರುಣ್ಯದಿ | ಹೊರಡೂಡುತ | ಹಾರಿದೆ ವಿ | ಸ್ತಾರಾಮೆಗೆ 1 ಕೂರ್ಮ ದ್ವೇಷದಿಂದಾ | ನೆರೆಹೊರೇಯ ದುಃಖದಿಂದಾ |ಇರಲು ಕಳೆಯೆ ಗರುಡನಿಂದಾ | ವರಮುನಿ ಪೇಳ್ದ ಮುದದಲಿಂದಾ ||ಭಾರಿಲಿ ಇಹ | ಕೂರಮ ಕರ್ಯ | ಹರವ ಮೇಲೆ | ಢೋರದ ತರುಕ್ಹಾರಲದೂ | ದಾರಿತ ವಿ | ಸ್ತಾರದ ಮಹಿ | ಮೋರುಗುಣಿ2 ಅಮೃತ ಕಲಶ ತಂದಾ ||ಕಾರುಣಿ ದಿತಿ | ಜಾರಿಗೆ ಮಾತೆ | ಕಾರಾಗೃಹ | ತಾರಣ ಮುರವೈರಿಯ ವಹ | ತೋರೈ ಹೃ | ದ್ವಾರಿಜದಿ | ಶ್ರೀಹರಿಪದ 3
--------------
ಗುರುಗೋವಿಂದವಿಠಲರು
ದೇವಾ ನೀ ಪಾಲಿಪುದೂ ಓ ಹರಿಯೆ ಹರಿಯೆ ಪ ಮದನ ಜನಕ ರಂಗಾ ಪಾವನಾಂಗನೆ ನಿಜಸೇವೆಯೊಳಿರಿಸೆಂದೂ 1 ದಾರುಧಿ ಭೀಕರನ್ಯಾರೊ ವೈಷ್ಣವೋತ್ತಮ ಬಾರೊ ಸಾಧುಶಿಖರನಾರೊ ಸತ್ವರೂಪನು ತೋರೊ 2 ಧರಣೀನಾಗನಗರಿ ಕರುಣವಾರುಧಿಯಾದಾ ಗುರುವೆ ತುಳಶೀರಾಮ ಪರಮಾತ್ಮನೆ ನೀ ಬಾರೊ 3
--------------
ಚನ್ನಪಟ್ಟಣದ ಅಹೋಬಲದಾಸರು
ದೇವಾದಿ ದೇವಗೆಭಕ್ತ ಸಂಜೀವಗೆಶ್ರೀ ವಿಘ್ನೇಶ್ವರಗೆ ಜಯವೆಂದುಜಯವೆಂದು ಪಾರ್ವತೀಪುತ್ರಗೆಪಾವನಗಾತ್ರಗೆಫಣಿಯಜ್ಞ ಸೂತ್ರಗೆಹೂವಿನಾರತಿಯ ಬೆಳಗಿರೆ 1 ಸಿಂಧುರಗಮನೆಯರುಕುಂದಾಭರದನೆಯರುಇಂದುಶೇಖರಗೆ ಜಯವೆಂದುಜಯವೆಂದು ಇಂದ್ರಾದಿವಂದ್ಯಗೆನಿರ್ಜಿತಚಂದ್ರಗೆ ಸದ್ಗುಣಸಾಂದ್ರಗೆಕುಂದಣದಾರತಿಯ ಬೆಳಗಿರೆ 2 ವಾರಣದವನೆಗೆಧೀರಹೇರಂಬಗೆರಾವಣಾಸುರನ ಜಯಿಸಿದಜಯಿಸಿದಶರಣ ಮಂದಾರಗೆಶರಧಿ ಗಂಭೀರಗೆಕೌಸ್ತುಭಹಾರಗೆಮೇರುವೆಯಾರತಿಯ ಬೆಳಗಿರೆ 3 ಸುರರು ಹೂಮಳೆಗರೆಯೆತರುಣಿಯರ್ಪಾಡಲುಸುರದುಂದುಭಿ ಮೊಳಗೆ ಜಯವೆಂದುಜಯವೆಂದುಸಿಂಧುರವರ್ನಗೆಶೂರ್ಪಸುಕರ್ನಗೆಸರ್ವತ್ರಪೂರ್ಣಗೆಕುರುಜಿನಾರತಿಯ ಬೆಳಗಿರೆ 4 ಪಂಕಜಾಂಬಿಕೆಯರುಭೋಂಕನೆ ಪಾಡಲುಶಂಕರನ ಪುತ್ರ ಜಯವೆಂದುಪಾವನವೇಷಗೆವರದ ಗಣೇಶಗೆಕುಂಕುಮದಾರತಿಯ ಬೆಳಗಿರೆ 5 ರಮ್ಯವಾದಲತಿಗೆಯರಸವ ಪಾದಕೆ ತೊಡೆದುಕಮ್ಮೆಣ್ಣೆಯನು ಕಂಠಕನುಲೇಪಿಸಿಸುಮ್ಮಾನದಿಂದ ಪಟವಾಸ ಚೂರ್ಣವತಳಿದುನಿಮ್ಮ ಪೂಜಿಸುವೆನು ಗೌರಿದೇವಿ 6 ವರಧೂಪದೀಪ ಪರಿಪರಿಯ ನೈವೇದ್ಯ ಭಾ-ಸುರ ಸುತಾಂಬೂಲ ಸೀಗುರಿದರ್ಪಣನಿರುಪಮ ಛತ್ರ ಚಮರಾದಿ ಸೇವೆಯನು ಸ್ವೀ-ಕರಿಸಿ ಪಾಲಿಸೆ ಎನ್ನ ಗೌರಿ ದೇವಿ ಜಯ 7 ಇಂತು ಪರಿಪರಿಯ ರಾಜೋಪಚಾರಗಳಿಂದಸಂತತವು ನಿಮ್ಮ ಪಾದವ ಪೂಜಿಸಿನಿಂತು ಕರವನೆ ಮುಗಿದು ಧ್ಯಾನಿಸುತ ನಲಿನಲಿದುಸಂತಸದಿ ನಿಮ್ಮ ಸ್ತುತಿಸುವೆನು ಗೌರಿ ಜಯ 8 ಮತ್ತೇಭಗಮನೆಗೆ ಮಾಹೇಂದ್ರಸನ್ನುತೆಗೆಅತ್ಯಂತ ಪರಮ ಪಾವನ ಚರಿತೆಗೆನಿತ್ಯ ಸೇವೆಯನು ಮಾಡುವರ ರಕ್ಷಿಸುವಂಥಪ್ರತ್ಯಕ್ಷಮೂರ್ತಿ ಶ್ರೀಗೌರಿ ನಿಮಗೆ ಜಯ9 ಕಲಕೀರವಾಣಿಗೆ ಕಾಳಾಹಿವೇಣಿಗೆಕಲಧೌತಕಮಲ ಶೋಭಿತಪಾಣಿಗೆನಳಿನದಳನೇತ್ರೆಗೆ ನಾರಾಯಣೆಗೆ ನಮ್ಮ-ನೊಲಿದು ರಕ್ಷಿಸುವಂಥಾ ಶ್ರೀಗೌರಿಗೆ ಜಯ 10 ಕುಂಭಸಂಭವನುತೆಗೆ ಜಂಭಾರಿಪೂಜಿತೆಗೆರಂಭಾಸುನರ್ತನಪ್ರಿಯೆಗೆ ಶಿವೆಗೆರಂಭೋರುಯುಗಳೆಗೆ ಬಿಂಬಾಧರೆಗೆ ನಮ್ಮಬೆಂಬಿಡದೆ ರಕ್ಷಿಸುವ ಗಿರಿಜಾತೆಗೆ ಜಯ 11 ಮುತ್ತೈದೆತನಗಳನು ನಿತ್ಯಸಂಪದಗಳನುಉತ್ತಮಾಂಬರ ಛತ್ರಚಾರಮವನುಅತ್ಯಂತ ಪ್ರೀತಿಯಿಂದಿತ್ತು ರಕ್ಷಿಸಿ ಭಕ್ತವತ್ಸಲೆ ಶ್ರೀ ಗೌರಿದೇವಿ ತಾಯೆ12 ಎಂದೆಂದು ಈ ಮನೆಗೆ ಕುಂದದೈಶ್ವರ್ಯವನುಚಂದವಾಗಿಹ ಪುತ್ರ ಪೌತ್ರರನ್ನುಸಾಂದ್ರಕೃಪೆಯಿಂದಿತ್ತು ಸಲಹೆ ಕೆಳದಿಯ ಪುರದಿನಿಂದ ಶ್ರೀ ಪಾರ್ವತಾದೇವಿ ತಾಯೆ ಜಯ 13
--------------
ಕೆಳದಿ ವೆಂಕಣ್ಣ ಕವಿ
ದೇವಾಧಿದೇವ ನೀನಹುದು ಸಾಕ್ಷಾತ ಭಾವಿಸುವರಾತ್ಮ ಭಜಕರ ಪ್ರಾಣದಾತ ಧ್ರುವ ಸುಜನ ಮನೋಹರ ಮೂಜಗ ಆಧಾರ ಭಜಕ ಭಯಹರ 1 ಕರುಣಸಾಗರ ಪರಮ ಉದಾರ ದುರಿತ ಸಂಹಾರ 2 ಬಾಹ್ಯಂತ್ರಲಿವ್ಹ ಇಹಪರ ಕಾವ ಮಹಿಪತಿಯ ರಕ್ಷಿಸುವ ಶ್ರೀ ದೇವ ದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇವಾನಾ ಮೂರು ಲೋಕಂಗಳನುನೆರೆ ಕಾವಾನಾ ಶರಣಾಗತ ಸಂ ಜೀವಾನ ರೂಪ ಕಂಡೆ ಕೈಯಡಿಯಾ ಪ ಧಗಧಗಿಸುವ ಕೋಟಿ ದಿವಾಕರ ಕಿರಣಗಳ ಧೃಗುಳುಗಳ ಕಾಂತಿಯ ಮೊಗೆದು ಚೆಲ್ಲುತ ಪಾ ಲೊಗುವ ಕದಪಿಲಿ ಢಾಳಿಪ ಕುಂಡಲಂಗಳಾ 1 ತಿಲಕದ ಕುಡಿವರಿದಿಹ ಪುರ್ಬುಗಳ ಮಂ ಹೇಮ ಚಂಪಕದ ನಾಸಿಕದಾ ಜಲಜ ಕಸ್ತೂರಿ ಕಪ್ಪುರದ ಕಂಪಿನ ಸುಲಿಪಲ್ಲಿನ ಬಾಯಿದೆರೆಯ ಚೆಲುವನುಳ್ಳಾ 2 ತೋರಮಂದಾರ ತುಲಸೀ ವನಮಾಲೆ ಕೊರಳ ಹಾರ ಪೇರುರದಾ ಶ್ರೀ ಚಂದನದಾ ವಾರಿಜಪಾಣಿಯುಗದೆ ಶಂಖಚಕ್ರ ಸ- ರೋರುಹ ಕರದಲಭಯವಿತ್ತು ಸಲಹುವಾ 3 ಅಂದು ಜಘನದಿ ಕರವಿಟ್ಟು ಪೊಂಬಟ್ಟೆಯನುಟ್ಟು ಮಣಿ ಬಿರುಡೆಯವಿಟ್ಟು ಸ ನ್ಮುದದಿ ವೀರಮುದ್ರಿಕೆ ಮಂಡಿಕಾಗಳನಿವಿಟ್ಟು ಮೃದುಪಾದನಖದಿ ಮೂಜಗವ ಬೆಳಗುತಿಹ4 ಪಾವಕ ವರಕಾಂತಿಯ ಗೆಲುವಾ ಜಾಜಿ ಸೇವಂತಿಗೆ ಮೃದುವನು ಸೋಲಿಪಡಿಗಳಾ ಶ್ರೀ ವೆಲಾ ಪುರದ ವೈಕುಂಠೇಶ ವೇಂಕಟಾದ್ರೀಶಾ 5
--------------
ಬೇಲೂರು ವೈಕುಂಠದಾಸರು
ದೇವೀ ಸಲಹೆನ್ನನೂ | ತವ ಬಾಲಕನನೂ | ದೇವೀ ಸಲಹೆನ್ನನೂ ಪ ಕಾವ ನಿಜ ಸುಖವೀವ ಶಕ್ತಿಯೆ | ದೇವ ವಿಶ್ವೇಶ್ವರನ ಸುಪ್ರೀಯೆ ಅ.ಪ ಚಂಡನಾಡುತ ರಕ್ತಬೀಜರ | ಹಿಂಡಿ ರಕ್ತನುಂಡ ಶಂಕರೀ 1 ದುರಿತ ಹರೆ ಆರ್ಯಾ ಕಾತ್ರ್ಯಾಯನಿಯೇ | ಗೌರಿ ಹೈಮಾವತಿ | ಸುರಮುನೀ ಸುತೆ ಸರ್ವಮಂಗಲೆ | ಶರಣು ಶರ್ವಾಣಿಯೆ ರುದ್ರಾಣಿಯೆ 2 ಭವ ಸರ್ವ ಕಾರಣ ಭೂತೆ ಮುನಿ ಸುತೆ | ಸರ್ವ ಸೌಖ್ಯ ಸುಖ ಪ್ರದಾಯಕಿ 3 ಜಗದ್ಭರಿತೆ ಸದ್ಗುಣ | ಶುಭ ತತ್ವಾತೀತೆ ನಿರುಪಮ ಶಕ್ತಿ ದೇವತೆ | ಸೋತೆ ನೀ | ದಾರಿದ್ರ ದುಃಖ ವ್ರಾತವನು ಪರಿಹರಿಸಿ ರಕ್ಷಿಸೆ4 ತಂದೆ ತಾಯೆನ್ನ ಬಂಧು ಬಳಗಗಳೂ | ನಾರಾಯಣಿಯನೀ- | ಹೊಂದಿರುವ ತಾಪತ್ರಯವನಾ | ನಂದದಿಂದಲಿ ಪಾರಗಾಣಿಸಿ | ತಿಂದೆನ್ನನು ಸದಾನಂದನೆನಿಸುತ 5
--------------
ಸದಾನಂದರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ದೈವ ಭಕ್ತಿ ಸಂಸಾರದೊಳಿಲ್ಲ ಪ ಜೀವಗಭಿಮಾನವು ಬಿಡದಲ್ಲ ಅ.ಪ ವನಜಲೋಚನನ ಅರ್ಚನೆಗೆ ಆಲಸ್ಯ 1 ದಾನಕ್ಕೆ ದಾರಿದ್ರ್ಯ ತನಗೋಸುಗ ಸಾಲ ಮಾನವ ಜನಕೆ 2 ಮಕ್ಕಳ ಮದುವೆಗೆ ರೊಕ್ಕಸಾವಿರ ಹೊನ್ನು ಪಕ್ಕಿವಾಹನಗೆ ದೊರೆಯದೊಂದು ಕಾಸು 3 ಮತ್ತೆ ತನ್ನ ಹೆಂಡತಿಗೆ ಹತ್ತುವರಹದ ಸೀರೆ ಮುತ್ತೈದೆಗೀವರೆ ಮೂರಾಣೆಯ ಕುಬಸ 4 ಮದುವೆ ಮುಂಜಿಗೆ ಸಾಲ ಮಾಡದಿದ್ದರೆ ಹ್ಯಾಂಗೆ ಬುಧರು ಯಾಚಿಸಿದರೆಯಿಲ್ಲ ಎಂಬುವುದೇ? 5 ಎಷ್ಟು ಬಂದರು ಸಂಸಾರಕ್ಕೆ ಸಾಲದು ಭ್ರಷ್ಟ ಯಾಚಕರಿಗೇತಕೆ ಕೊಡಬೇಕು 6 ಸತಿಸುತನು ನಾವು ಸಲಹಿದರೆ ಸಾಕು ಅತಿಶಯದಾನ ಧರ್ಮಂಗಳು ಬೇಡ 7 ದಾಕ್ಷಿಣ್ಯಗಾರರಿಗೆ ಭಕ್ಷ್ಯ ಭೋಜ್ಯಗಳ ಊಟ ಕುಕ್ಷಿಂಭರರು ಕೇಳೆ ಭಕ್ಷ್ಯವೂ ಇಲ್ಲ 8 ಶ್ರೀನಿಧಿ ಗುರುರಾಮ ವಿಠಲ ವಲಿವನೆ? 9
--------------
ಗುರುರಾಮವಿಠಲ