ಒಟ್ಟು 9343 ಕಡೆಗಳಲ್ಲಿ , 135 ದಾಸರು , 4870 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉದಯವಾಯಿತು ಹೃದಯ ಕಮಲದೊಳಗೆ ಧ್ರುವ ಗುರುಕರುಣಾನಂದಬೋಧ ಅರುಣೋದಯವಾಯಿತು ಸ್ಮರಣಿಗರವು ದೊರೆಯಿತು ಹರಿಯ ಚರಣದ 1 ಸಮ್ಯಜ್ಞಾನದ ಪ್ರಭೆ ಸಮ್ಯವಾಗಿದೋರಿತು ತಾಮಸನಿದ್ರೆ ಹರಿಯಿತು ತಿಮಿರಾಂಧದ 2 ಥಳಥಳಿಸುವ ರವಿಕೋಟಿ ಬೆಳಗಾಯಿತು ಹೊಳೆಯುತ ತೇಜೋನ್ಮಯವು ಒಳಗೊರಗೆಲ್ಲ 3 ಒದಗಿ ಬಂತೆದುರಿಟ್ಟು ಮೊದಲೆ ಪುಣ್ಯದ ಘಲ ಉದಯವಾಯಿತದೃಷ್ಟವು ಸದೃಷ್ಟವಾಗಿ 4 ಸದ್ಗತಿ ಸುಖವಿದು ಸದೋದಿತವಾಯಿತು ಸಾಧಿಸಿ ಮಹಿಪತಿಗೆ ಸದ್ಗರು ಕೃಪೆಯು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉದಯಾದ್ರೀಶ ವಿಠಲ ಮುದವನಿತ್ತವನೀಗೆಉದ್ಧರಿಸ ಬೇಕೆಂದು ಪ್ರಾಥಿಸುವೆ ಹರಿಯೇ ಪ ಸದಯ ನೀನಿರೆದೇವ ಸಂಸ್ಕøತಿಯ ಶೃಂಖಲೆಗೆಬೆದರಿಕಿಲ್ಲವೊ ಇವಗೆ ನರಹರಿಯೆ ಸ್ವಾಮಿಅ.ಪ. ಸ್ವಾಪದಲಿ ನಭದಲ್ಲಿ ರೂಪವನೆ ತೋರಿದ ಯೊಪಯೋನಿಧಿಯಾಗಿ ಮೆರೆವೆ ವೆಂಕಟೇಶ |ಆಪಯೋಜಾಸನ ವಿಷಾದ್ಯರಿಗೆ ನಿಲುಕದಅಪಾರ ತವಮಹಿಮೆ ನಾ ಪೇಳಲೊಶವೇ 1 ಸಾರನಿಸ್ಸಾರವೆನೆ ಜಗದೊಳಗೆ ನೀನೊಬ್ಬಸಾರತಮನೆಂದೆಂಬ ಪಾರಮಾರ್ಥಿಕವ |ತಾರತಮ್ಯ ಜ್ಞಾನ ಮೂರೆರಡು ಭೇಧಗಳಸಾರವನೆ ತಿಳಿಸಿ ಸಂಸಾರ ನಿಧಿ ದಾಟಿಸೋ 2 ಗರ್ವರಹಿತನು ಇವಗೆ ಕವನ ಶಕ್ತಿಯನಿತ್ತುಸರ್ವತ್ರ ಸರ್ವದಾ ಸರ್ವಕಾರ್ಯಗಳಲ್ಲಿಸರ್ವೇಶ ತವನಾಮ ಸ್ಮøತಿಯನ್ನೆ ಕರುಣಿಸುತದರ್ವಿ ಜೀವನಕಾಯೊ ಸರ್ವಾಂತರಾತ್ಮಾ 3 ಶ್ರೀದ ಶ್ರೀ ವೆಂಕಟನ ನೋಡಿದೆ ಎಂಬಂಥಮೋದದಾಯಕ ಪದವು ಉದಯ ವಿಠಲಾಂಕಿತವಾದಿರಾಜರ ಶಿಷ್ಯ ಪಾಡಿ ಪೂರೈಸುತಿರೆನೀದಯದಿ ತವರೂಪ ತೋರ್ದುದನು ಮರೆ ಮಾಡಿದೆ4 ಪಾವಮಾನಿಯ ಪ್ರೀಯ ಭಾವುಕರ ಪರಿಪಾಲಗೋವತ್ಸ ಧ್ವನಿ ಕೇಳಿ ಧಾವಿಸೀ ಬರುವಂತೆತೀವ್ರುಪಾಸನೆ ಇತ್ತು ಇವನ ಹೃತ್ಕಂಜದಲಿದೇವ ಗುರು ಗೋವಿಂದ ವಿಠಲ ತವರೂಪ ತೋರೊ5
--------------
ಗುರುಗೋವಿಂದವಿಠಲರು
ಉದಿಸೀದಾ ರವಿಯು ತಾನುದಿಸಿದ ಪ ಉದಿಸಿದ ರವಿಯು ತಾನೆನಿಸೀ | ಗುರುಮುದಮುನಿ ಮತವ ವಿಸ್ತರಿಸೀ | ಆಹಬುಧಜನರಂತಸ್ಥ ಬಹು ವಿಧ ತಿಮಿರವಒದೆದು ಛೇದಿಸುವಂಥ ವಿಜಯಾರ್ಯ ತರಣಿಯು ಅ.ಪ. ಸುರಮುನಿ ಪಾದವ ಭಜಿಸೀ | ಯುಗವೆರಡರೊಳ್ ಸುರಲೀಲ ನೆನಿಸೀ | ಯುಗಮೂರರೊಳ್ ನಿಕಂಪನೆನಿಸೀ | ಯುಗಮೂರೊಂದರಲಿ ಕರುವೆನಿಸೀ | ಆಹಪುರಂದರ ದಾಸರ ಗೃಹದೊಳಗುದಿಸುತ 1 ಕರಣೀಕ ಶೀನಪ್ಪ ತನು | ತನ್ನವರಪ್ರಿಯ ಸತಿಕೂಸಮ್ಮನು | ಬಲುಪರಿಪರಿ ಸೇವಿಸಿ ವರವನು | ಪೊಂದಿಎರಡೊಂದು ತನಯರುಗಳು | ಆಹಪರಿ ಪಾಲಿಸುತ್ತಲಿ ಪರಿಪರಿ ಭವಣೇಲಿಪೊರೆಯವು ಉದರವ ಸರಿಯಿತು ಕಾಲವು 2 ಬಡತನ ಭವಣೇಲಿ ಬಂದೂ | ಒಂದುಕುಡಿತೆ ಗಂಜಿಗಾಗಿ ನೊಂದೂ | ಛಾಗಿಒಡೆಯನ ಮನೆಯೊಳಗಂದೂ | ಮೆದ್ದುಒಡಲ ತುಂಬಿಕೊಂಡು ಬಂದೂ | ಆಹಬಡಗ ದಿಕ್ಕಿನ ಗಂಗೆ ಮಡುವ ಕಾಣುವೆನೆಂದುಸಡಗರದಲಿ ಪೋದ ಬಡ ಕೂಸೀಮಗದಾಸ 3 ವತ್ಸರ ತರಳ | ತನ್ನಹಿರಯರಿಗ್ಹೇಳದೆ ಪೊಳಲ | ಬಿಟ್ಟುತಿರುಗುತ ತೀರ್ಥ ಕ್ಷೇತ್ರಗಳ | ಮಿಂದುಮರಳಿ ತಾ ಮಾತಾ ಪಿತೃಗಳ | ಆಹಬೆರೆದು ಮಾನವರಂತೆ ಸಂಸಾರ ವೃತ್ತಿಲಿಚರಿಸಿದವೆರಡುಂಟು ವರುಷವ ಕಳೆಯುತ 4 ಮತ್ತೆ ತಾ ವೈರಾಗ್ಯದಲ್ಲಿ | ಹರಿಪೆತ್ತ ಗಂಗೆಯ ಸ್ನಾನದಲ್ಲಿ | ಮನತೆತ್ತು ಗಯಾದೇಶದಲ್ಲಿ | ಪಿಂಡವಿತ್ತು ವಾರಣಾಸಿಯಲ್ಲಿ | ಆಹಉತ್ತಮರ ಸಂಗ ನಿತ್ಯಸ್ನಾನ ಸಂಧ್ಯಕೃತ್ಯವನೆಸಗಿ ಸುಚಿತ್ತದಿ ಮಲಗಿರೆ 5 ಸತ್ಯ ಸ್ವಪ್ನದಿ ನರಹರಿಯು | ತನ್ನಪುತ್ರನೆಬ್ಬಿಸಿದಂತೆ ಪರಿಯು | ದಾಸರಂತೆ ರೂಪವ ತಾಳಿ ಹರಿಯು | ತನ್ನಹತ್ತಿರ ಕರೆಯುತ ಧೊರೆಯು | ಆಹಚಿತ್ತಜ ಪಿತ ಪೆತ್ತ ಸರಿತವ ದಾಂಟಿಸಿಉತ್ತಮ ಕಾಶಿಯ ವ್ಯಾಸರ ಕಂಡವ 6 ಪರಿ ಪರಿಯ | ಆಹಅಚ್ಚ ಕವನ ಪೇಳಿ ನೆಚ್ಚಿನ ಮನದವರಸ್ವಚ್ಛತನಕೆ ತಿದ್ದಿ ಅಚ್ಚ್ಯುತಗಿಂತವ 7 ಎರಡೊಂದನೇ ಬಾರಿ ಪೋಗಿ | ಕಾಶಿಪುರದಿ ಗಂಗಾಸ್ನಾನಕಾಗಿ | ಕೂಡೆಸುರನದಿ ಪೆಚ್ಚಿ ಮೇಲಾಗಿ | ಸಿರಿವರದ್ವಿಜಗಭಿಷೇಕವಾಗಿ | ಆಹಸರಿತವು ಮುಂಚಿನ ಪರಿಯಂತೆ ಪ್ರವಹಿಸೆಸುರನರೋರುಗರೆಲ್ಲ ಪರಿಪರಿ ಕೊಂಡಾಡೆ 8 ತುತಿಸುತಲಲ್ಲಿಂದ ಸೇತು | ಸ್ನಾನರತಿಯಿಂದ ಗೈಯ್ಯುತ ಹೊತ್ತು | ಹರಿಕಥೆಗಳ ಪೇಳಿ ಯಾವತ್ತು | ಜನತತಿಗೆ ಸನ್ಮಾರ್ಗವನಿತ್ತು | ಆಹತೀರ್ಥ ಕ್ಷೇತ್ರಂಗಳ ನತಿಸುತ ದಶಮತಿಮತವ ಬೀರಿದನೀತ ಸುಜನರ ಪೊರೆಯಲು 9 ಸಾರ | ಸೊಳ್ಹಾದಿಗಳ್ ಮೊದಲಾದ ಹಾರ | ದಿಂದಭೇದ ವಾದಿಯ ಮತೋದ್ಧಾರ | ಗೈದುಶ್ರೀಶ ಗೊಪ್ಪಿಸೀದ ಧೀರ | ಆಹನಾದ ಮೂರುತಿ ಗುರು ಗೋವಿಂದ ವಿಠಲನಪಾದವ ಸ್ಮರಿಸುತ್ತ ಮೋದವ ಪಡುತ್ತಿದ್ದ 10
--------------
ಗುರುಗೋವಿಂದವಿಠಲರು
ಉದೋ ಉದೋ ಉದೋ ಉದೋ ಉದೋ ಯನ್ನಲು ಉದ ಮುದೋ ಪ ತಮ್ಮನು ಪೊಗಳಿ ಪಾಲೆನೆ ಅಮ್ಮೊಮ್ಮಾ | ಮೊಮ್ಮನ ಪಡೆದಿಹ ಜಗದಯ್ಯಾ | ಸುಮ್ಮನ ಹೊಂದಿಹ ಬಾಲಕ ನಿಮ್ಮಾ | ಝಮ್ಮನೆ ಸ್ಮರಣೆಗೆ ಬಾನಮ್ಮಾ 1 ಛಂದ ವಿವೇಕದ ಚೌಡಕಿ ಹಿಡಿದು | ಒಂದೇ ನಿಷ್ಠೆಯ ತಂತಿಯ ಬಿಗಿದು | ಸುಂದರ ಭಕ್ತಿಯ ರಂಗಕ ಬಂದು | ಗೊಂದಳ ಹಾಕುವೆ ನಾನಿಂದು 2 ನಾಮಾವಳಿ ಕವಡೆಯ ಸರಥರಿಸಿ | ಪ್ರೇಮದ ಬಂಡಾರವ ಸುರಿಸಿ | ಆಮಹಾಜ್ಞಾನದ ಹೊತ್ತ ಪ್ರಜ್ವಲಿಸಿ | ನಾಮಗೆಜ್ಜಿಲಿ ಕುಣಿವೆನು ಘಲಿಸಿ 3 ಆವನಿಯ ಸುಜನರ ಮೊರೆಯನು ಕೇಳಿ | ಪರಿ ತಾಳಿ | ಭವ ಮಹಿಷಾಸುರ ನಸುವನು ಹೋಳಿ | ಜವದಲಿ ಮಾಡಿದೆ ತುನುಶೀಳಿ 4 ಮುನಿ ಮಾನಸ ತುಳಜಾಪೂರ ಗೇಹಿ | ಖೂನದೊರಿಸೀ ನಿಜ ಸೋಹೀ | ಏನೇ ನರಿಯದವನೆಂದರಿತು ಕಾಯೀ | ಘನಗುರು ಮಹಿಪತಿ ವರದಾಯಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉದ್ಧರಿಸಿರೋ ನೀವು ನಿಮ್ಮ ತಿಳಿಯಬೇಕು ಪರಬೊಮ್ಮ ಪ ಮನುಜ ಜನ್ಮಕೆ ಬಂದು ಮರೆತರೆ ಕಷ್ಟವು ಮುಂದುಇನಿತು ವಿಚಾರವಿಲ್ಲ ಇದುವೆ ವಿವೇಕವದಲ್ಲ 1 ಕೊನಬುಗಳೆಲ್ಲವ ಬಿಡಿರೋ ಕೋಪವನೆಲ್ಲವ ಸುಡಿರೋತನು ಸುಖವಾಗಿಹುದಲ್ಲ ತಪ್ಪಿದರೆ ಬಳಿಕೆಲ್ಲ 2 ಭ್ರಮೆಯೆಲ್ಲವ ಬಿಡಬೇಕು ಬಂಧನ ಹರಿಯಲು ಬೇಕುನಮಗಿದು ನೀತಿಯಿದಲ್ಲ ನಾಚಿಕೆ ಕಿಂಚಿತ್ತು ಇಲ್ಲ 3 ತನ್ನ ತಿಳಿದರೆ ತಾ ಬಂಧು ತನ್ನ ಮರೆತರೆ ಶತ್ರುವಹಸನ್ನುತವಚನವಿದೀಗ ಸಾಧಿಸುವುದು ಬಹುಬೇಗ4 ಚೆನ್ನಾಗಿ ಶ್ರವಣದ ಕೇಳಿ ಚಿತ್ತ ಶುದ್ಧಿಯ ತಾಳಿಚಿನ್ಮಯನನು ನೀವು ಧರಿಸಿ ಚಿದಾನಂದ ತಾವೆಂದು ಸ್ಮರಿಸಿ5
--------------
ಚಿದಾನಂದ ಅವಧೂತರು
ಉದ್ಧವನು ಯಮುನೆಗೆ ಪೋಗುವಾಗಗದ್ದಲವ ಕೇಳಿದನು ಗೋಪನಾರಿಯರ ಪ ಎದ್ದು ಗೋಪಿಯರೆಲ್ಲ ಮುದ್ದು ಮುಖವನೆ ತೊಳೆದುತಿದ್ದಿ ತಿಲ್ಕವನಿಟ್ಟು ಬಾಲ್ಯದಲ್ಲೆಶ್ರದ್ಧೆಪೂರ್ವಕ ಹರಿಯ ಪದ್ಮಂಗಳಿಗೆ ನಮಿಸಿಉದ್ಧಾರ ಮಾಡೆಂದು ಪ್ರಾರ್ಥಿಸಿದರು 1 ಅಂಗಳಕೆ ಥಳಿಹಾಕಿ ರಂಗವಾಲಿಯನಿಕ್ಕಿಮಂಗಳಾತ್ಮಕ ದೀಪ ಮನೆಯ ಮುಂದತೆಂಗುಬಾಳೆ ಸ್ತತ್ಥ ಫಲಂಗಳ್ಹೊಸ್ತಲಿಕಿಟ್ಟುರಂಗಗರ್ಪಿತವೆಂದು ನುಡಿದಲಾಗ 2 ವಾಲೆ ಸರಪಣಿಯಾ ಕಿವಿಯಲಿಟ್ಟುಮಂದಹಾಶ್ಯದಿ ಮುಖದಿ ಮುಖರೆನಿಟ್ಟು3 ಕಾಲಿಕಾಲ್ಕಡ್ಗ ರುಳಿಯು ಘಾಲು ಪೈಝಣಕಾಲುಂಗ್ರಗಳು ಪಿಲ್ಲೆ ಕಾಲಿನಲ್ಲೆಸಾಲುಗೆಜ್ಜೆಗಳುಳ್ಳ ಮೇಲೆ ಕಾಂಚಿಯನುಟ್ಟುಮುಕ್ತಮಾಲೆಗಳು ಕೊರಳಲ್ಲೆ ಲೋಲಪದಕ 4 ಕಂಕಣವು ಕರದಲ್ಲಿ ವಂಕಿ ತಾಯಿತ ಭುಜದಿಬಿಂಕದಿಂದಲೆ ಮಂಲಿ ಹೆರಳ್ಹಾಕಿಅಂಕೆಯಿಲ್ಲದ ಸರ್ವಲಂಕಾರಗಳನಿಟ್ಟುಪಂಕಜಾಕ್ಷನ ಮನದಿ ಸ್ಮರಿಸಿದ 5 ಲೋಲಾಕ್ಷಿ ಗೋಪಿಯರು ಭಾಳ ವಸ್ತ್ರಗಳಿಟ್ಟುಲೋಲ ಲತೆಯಂತೆ ಬಳುಕಾಡುತಮಾಲೆ ಹೆಗಲ್ಹಾಡುತಿರೆ ಮೇಲೆ ಸ್ವರಗಳನೆತ್ತಿನೀಲವರ್ಣನ ಮಹಿಮಿ ಪಾಡಿದರು 6 ಬಂಗಾರದ ತಬಕಿನಲಿ ಮಂಗಳಾರುತಿಯೆತ್ತಿಶೃಂಗಾರ ಪದಗಳನೆ ಪಾಡುತಲೆರಂಗು ನೀಲದ ರತ್ನದುಂಗುರವು ಬೆರಳಲ್ಲೆರಂಗಗಾರತಿ ಬೆಳಗಿ ಬೇಡಿದರು 7 ಕಂದರ್ಪ ಶರಾದರತಿ 8 ಘಿಲ್ಲು ಘಿಲುಕೆಂದು ಮೈಯ್ಯಲ್ಲಿ ವಸ್ತ್ರದ ಶಬ್ದಪುಲ್ಲಾಕ್ಷಿಯರು ಕಡಿದ ಮಥನ ಶಬ್ದನಲ್ಲೆರ್ಹಾಡುವ ಕಂಠದಲ್ಲೆ ಗಾಯನದ ಶಬ್ದಎಲ್ಲ ಶಬ್ದವು ಸ್ವರ್ಗ 9 ನಿಂತು ನಿಜಕರದಿಂದ ಮಂತಧಾಮವ ಪಿಡಿದುಕಂತುಪಿತ ಕೃಷ್ಣನ್ನ ಪಾಡುತಲೆಕಾಂತೆರೆಲ್ಲರು ಮಸರು ಕಡೆವ ಶಬ್ದವ ಕೇಳಿಭ್ರಾಂತಿಯಲಿ ಉದ್ಧವನು ನಿಂತನಲ್ಲೆ 10 ಅವರ ಭಕುತಿಯ ನೋಡಿ ಅನುದಿನದಿ ಉದ್ಧವನುಅವರ ಪಾದದ ಧೂಳಿ ಸ್ವೀಕರಿಸಿದಅವರರುಹದೊಳಗೆನ್ನ ಆಗಲುದಯವು ಎಂದಅವರೊಳಗೆ ಅವರಂತೆ ಅನುಕರಿಸಿದ 11 ಇಂಥ ಪರಿಯಲಿ ಗೋಪಕಾಂತೆ ಕಾಲಾಪಗಳುನಿಂತು ನೋಡುತ ತನ್ನ ಮೈಯ್ಯ ಮುರಿದಭ್ರಾಂತನಾಗುತಲೆ ಅವರಂತೆ ಮಥನವ ಮಾಡಿಅವರಂತೆ ಕರಗಳ ಮಾಡಿ ನಲಿದು ಕುಣಿವ 12 ಎರಡು ಸಾಲಲಿ ದೀಪ ಕರಗಳಂಬಾರಗಳುತುರವು ತರಿಸುವ ದನಿಯು ಮಥನ ಶಬ್ದಸರಸಿಜಾಕ್ಷಿಯರೆಲ್ಲ ಗಾಯನ ಮಾಡುವ ಶಬ್ದಬೆರಗಾಗಿ ಕೇಳಿದನು ಪರಿಹರುಷದಿ 13 ಮಂದ ಸುಗಂಧಡಗಿತು 14 ಸರಸಿಜಾಕ್ಷಿಯರೆಲ್ಲ ಪರಮಪುರುಷನ ಸ್ಮರಿಸಿಸುರಿಸುತಲಿ ಕಣ್ಣೀರು ಪರವಶದಲೇನೆರಗು ಬೀಳಲು ಹೊರದೆ ಹೆರಳ ಮಾಲೆಯ ಮರೆದುಬರೆದ ಚಿತ್ರಗಳಂತೆ ಪರಿಯಾದರು 15 ವಾರಿಜಾಕ್ಷಿಯರ್ಹರಿಯ ಧ್ಯಾನಮನದಲಿ ಕೃಷ್ಣಸಾರ ಸುಂದರ ಮೂರ್ತಿಯಳೆ ಕಾಣುತಮದ ಜಾನಕನ ಮಾತನಾಡುತ ಮನದಿಪಾರುಗಾಣದೆ ಸುಖದ ವಾರಿಧಿಯೊಳು 16 ಮನೆಯ ಹಂಬಲವಿಲ್ಲ ಮಾವನಂಕೆಯಿಲ್ಲಮೊದಲೆಯಿಲ್ಲ ಅತ್ತಿ ಪತಿಗಳಂಜಿಕೆಮಾರಜನಕನ ಕೂಡ ಮೈಯ್ಯಕೈಯನ ಮುರಿದುಮಾಧವನೆ ಪಾಲಿಸೆಂದೊದರಿದಾರು 17 ಮಂದಜಾಕ್ಷರು ಮಾಳ್ಪ ನಂದಬಾಲನ ಕಥೆಯಆನಂದದಲಿ ಕೇಳಿ ಉದ್ಧವನುಇಂದಿರೇಶನ ಚರಣ ದ್ವಂದ್ವ ಸ್ಮರಿಸುತಮಧುರೆಲ್ಹಿಂದ ಬಂದ್ಹೇಳಿದನು ನಂದಸುತಗೆ 18
--------------
ಇಂದಿರೇಶರು
ಉದ್ಧಾರ ಮಾಡಯ್ಯ ಉಡುಪಿ ನಿಲಯ ಹೃದ್ವನಜದಲಿ ನೆಲಸಿ ಅನುಗಾಲ ನಿನ ತೋರಿ ಪ. ಬಂದೆ ಬಹುದೂರದಲಿ ನಿಂದೆ ತವಚರಣದಡಿ ತಂದೆ ಮುದ್ದುಮೋಹನ ಗುರುಕರುಣದಿಂದ ಕುಂದುಗಳನೆಣಿಸದೆಲೆ ಸಿಂಧುಶಯನನೆ ಹೃದಯ ಮಂದಿರದಿ ಮನೆ ಮಾಡು ಸುಂದರಾತ್ಮನೇ 1 ಜನ್ಮಜನ್ಮಾಂತರದ ಅಜ್ಞಾನಗಳ ಕಳೆದು ಕರ್ಮಸಾಸಿರ ಕಡಿದು ಕರುಣದಿಂದ ರಮೆಯರಸನೆ ನಿನ್ನ ಅನುಗಾಲ ಸ್ಮರಿಪಂಥ ಸನ್ಮಾರ್ಗವನೆ ತೋರೊ ಸರ್ವಲೋಕೇಶ 2 ಜಪತಪಗಳೊಂದರಿಯೆ ವ್ರತ ನೇಮಗಳ ಕಾಣೆ ಉಪವಾಸದುಪಟಳವು ಗತಿ ತೋರದೆನಗೆ ಗುಪಿತಮಾರ್ಗದಿ ನಿನ್ನ ನಾಮಾಮೃತವನುಣಿಸಿ ಅಪಹಾಸಗೊಳಿಸದಲೆ ಆದರಿಸೊ ಜೀಯ 3 ಬೇಡಲೇನನು ನಿನ್ನ ಕಾಡಲೇತಕೆ ನಾನು ದಾತ ನೀ ಸರ್ವಜ್ಞನಿರಲು ಮಾಡುವೆನು ಸಾಷ್ಟಾಂಗ ಬೇಡುವೆನು ಪದದಾಸ್ಯ ನೋಡು ಕರುಣಾದೃಷ್ಟಿಯಿಂದೆನ್ನ ಕಡೆಗೆ 4 ಅಂತರಂಗದಲಿಪ್ಪ ಸರ್ವಾಂತರಾತ್ಮಕನೆ ಚಿಂತನೆಗೆ ನೆಲೆತೋರು ಚಿನ್ಮಯಾತ್ಮಕನೆ ಕಂತುಪಿತ ಗೋಪಾಲಕೃಷ್ಣವಿಠ್ಠಲನೆ ಸಿರಿ ಕಾಂತ ಕಾಪಾಡು ಕಡು ಕರುಣಿ ಮಧ್ವೇಶ 5
--------------
ಅಂಬಾಬಾಯಿ
ಉಪಾಧಿ ರಹಿತ ಧ್ರುವ ಆಶ್ರೈಸಿಹ್ಯ ದಾವನು ಶ್ರಯಧೇನು ನಾಸ್ತಿಕ್ಯವಗೆಲ್ಲಿಹುದು ತಾನು 1 ಇವ್ಹದಾವನು ಸುರತರುವಿನ ಬಲಿ(ಳಿ?) ಯು ಅವಗೆಲ್ಲಿಹುದುದರದ ಕಳವಳಿಯು 2 ಸುರನದಿಯಲ್ಲಿ ದಾವನ ಸಹವಾಸ ಧರೆಯೊಳಗವಗೆಲ್ಲಿಹ ಮಹಾ ದೋಷ 3 ರವಿ ಪ್ರಭೆಯೊಳು ದಾವನಿಹನು ಕೂಡಿ ಅವಗೆಗೆಲ್ಲಿಯ ಕಗ್ಗತ್ತಲೆ ನೋಡಿ 4 ದಾವ ಮಹಿಪತಿ ಗುರು ಪಾದ್ಹೊಂದಿಹ್ಯ ಅವಗೆಲ್ಲಿಹದು ತಾ ಭವಬಂಧ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉಪ್ಪವಡಿಸಯ್ಯ ತ್ರಿವಿಕ್ರಮ ನಿನ್ನ ಪುರದೊಳಗೆ ಇಪ್ಪ ಮುಕುತರಿಗೆ ಸಲ್ಲದು ನಿದ್ರೆ ನಿನಗಿಲ್ಲ ಕಲ್ಪಾಂತದಲಿ ನಿತ್ಯವಾದ ವೇದವ ನೆನೆವ ಸುಪ್ರಭಾವನಿಗೇಕೆ ಹೀನಮನುಜರ ಸಾಮ್ಯ ಪ. ಹರಿನಾಲ್ಕು ಮನ್ವಂತ್ರಗಳನು ಹಗಲನು ಮಾಳ್ಪ ವಿಧಿ ನಿನ್ನ ಕುವರನೆ ನಿದ್ರೆಗೊಪ್ಪದೆ ಬಂದ ಇದು ಸರ್ವಸೊಪನ ಅನಿಮಿಷರೆಂಬ ಬಿರುದಿನವ ರಿದಕೆ ಕೋಪಿಸಿ ಬಂದರು ವಿಧಿ ತನ್ನ ಹಗಲ ನಡೆಸುತ ನಿನಗೆ ಈ ತೆರನ ಮದನಪಿತ ತಾಳದೆ ಇಳೆಗೆ ನಡೆತಂದ ಸದುಬುಧರು ತಮ್ಮ ವಿಷಯವ ನೆನೆವ ಜಂತುಗಳು ಇದು ತಾಳೆವೆನುತ ಬಾಗಿಲೊಳು ಬಂದೈದಾರೆ 1 ನಿದ್ರೆಗೈವರ ಹೃದಯದಲ್ಲಿ ಭೂಭೂಯೆಂಬ ಎದ್ದು ಬಹ ಶ್ವಾಸದಭಿಮಾನಿ ಮುಖ್ಯಪ್ರಾಣ ಕ್ಷುದ್ರಗತಿ ತನ್ನಾಳ್ದಗಿದು ಪುಸಿಯೆನುತ ಬಂದ ಮಧ್ವಸದ್ಭಾಷ್ಯಕಾರ ಹೊದ್ದಿ ಕರಗಳ ಮುಗಿದು ಜೀವರಿಗು ನಿನಗು ಪ್ರ- ಬುದ್ಧಜನೆನುತ ಬಂದ ವೇದಾಂತದೇವಿಯರು ನಿರ್ದೋಷ ನೀನೆತ್ತ ನಿದ್ರೆಯೆತ್ತೆನುತ ಪಾದ- ಪದ್ಮಗಳ ಪಿಡಿದು ಪಾಡುವ ಸಾಮಗಳ ಸವಿದು 2 ಅಪ್ರಾಕೃತನೆ ನಿನಗೆ ಈ ಪ್ರಕೃತಿಗುಣಗಳಿಂ- ದಿಪ್ಪ ಯುಕ್ತಿಗಳ ಸುಪ್ತಿಗಳು ಸಲ್ಲವು ದೇವ ಅಪ್ರಬುದ್ಧರ ಮುಂದೆ ಆಡುವಾಟಗಳು ಈ ಸುಪ್ರಬುದ್ಧರ ಸಭೆಯಲಿ ಸರ್ಪತÀಲ್ಪನೆ ತೋರಿದಯ್ಯ ಸಾಕೈನಟನೆ ಸುಪ್ರಭಾತವು ಬಂತು ಹಯವದನ ದಿನದಿನದಿ ತಪ್ಪದೆ ಮಾಡುವಘ್ರ್ಯದಿ ಸತ್ಕರ್ಮಗಳ ಒಪ್ಪುಗೊಳು ಅಪ್ರತಿಮಮಹಿಮ ತ್ರಿವಿಕ್ರಮರಾಯ 3
--------------
ವಾದಿರಾಜ
ಉಬ್ಬುವದ್ಯಾಕೋ ಮದದಲಿ ಪ ಎರಡು ದಿನದ ಛಂದ ಮರನ್ಯಾಡಿ ತೋರುತ ಜರೆ ಬಂದು ನೂಕಲು ಮರಳುವ ಪ್ರಾಯದಿ 1 ಲೆಕ್ಕವಿಲ್ಲದೆ ಗದ್ದಿಗಿಕ್ಕಿದ ಜಲದಂತೆ ಪುಕ್ಕಟೆ ಜಾರುತ ದಕ್ಕದ ಧನದಿಂದ 2 ಬುದ್ಧಿಲಿ ಬಹುಜನ ಗೆದ್ದನು ಮದದಿ ಬಿದ್ದೋಗು ಕಾಲಕ ಸದ್ದಿಲ್ಲ ವಿದ್ಯದಿ 3 ಉಬ್ಬುವ ಕೊಬ್ಬುವ ಹಬ್ಬುವ ಸುಖದಿಂದ ಜಬ್ಬರ ಮಾಡುತಾ ರುಬ್ಬುವ ಕಾಲನು 4 ತಂದೆ ಮಹಿಪತಿ ನಂದನು ಸಾರಿದಾ ದ್ವಂದ್ವಗಳೆದು ಗೋವಿಂದನ ನೆನೆಯದೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉಮಾರಮಣ ಶಂಭೋ - ಪಾಲಯಉಮಾರಮಣ ಶಂಭೋ ಪ ಕಮಲ ಶಮ | ದಮಾದಿ ಗುಣ ಕೊಡುಅ.ಪ. ಭವ ಭವ ಸನ್ನುತ ಹರ ಹರಾ | ನಮೊ ನಿನ್ನ ಪದ ಪುಷ್ಕರಾ1 ದಿವಿಜ ಪ್ರಿಯ ಉಗ್ರನೇಮೌರ್ವಿ ಪಿನಾಕಿಧರ ಶೂರನೇ | ಶರ್ವಾನೆ ತುತಿಸಲಾಪನೇ 2 ಗುರು ಗೋವಿಂದ ವಿಠಲಾ | ಪೊರೆವನೆಂಬಂಧ ನಿಶ್ಚಲಾವರಮತಿಯನೀಯೊ ತ್ರೈಶೂಲ | ಧರ ಹರಿಸೊ ಮಾಯ ಪಟಲಾ 3
--------------
ಗುರುಗೋವಿಂದವಿಠಲರು
ಉಯ್ಯಾಲೆ ಉತ್ಸವಗೀತೆ ಜೊ ಜೊ ಜೊ ಜೊ ಶ್ರೀರಂಗನಾಥ ಜೊ ಜೊ ರಂಗನಾಯಕಿರಮಣನೆ ಭೂಮಿಕಾಂತ ಪ. ಮಂಟಪವನು ಶೃಂಗರಿಸಿದರಂದು ಎಂಟುದಿಕ್ಕಿಗೆ ಪುಷ್ಪಗಳಲಂಕರಿಸಿ ವೈ ಕುಂಠವಾಸನ ಉಯ್ಯಾಲೆಮಂಟಪವನ್ನು ಭಂಟರು ಬಂದು ಶೃಂಗಾರ ಮಾಡಿದರು 1 ಆಶ್ವೀಜ ಮಾಸದ ಶುಕ್ಲಪಕ್ಷದಲ್ಲಿ ಆ ತುಲಾ ಮಾಸದ ಆರುದಿವಸದಲ್ಲಿ ವಾರಿಜಮುಖಿಯರ ಒಡಗೊಂಡು ರಂಗ ವೈ ಯ್ಯಾರದಿಂದಲೆ ಬಂದನು ಮಂಟಪಕೆ 2 ಮತ್ತೆ ಮರುದಿನದೊಳಗಚ್ಚುತನಂತ ಕುತ್ತನಿಅಂಗಿ ಕುಲಾವಿ ಧರಿಸಿ ರತ್ನದ ಪಾನುಪಟ್ಟಿಯು ಅರಳೆಲೆ ಕಟ್ಟಿ ಭಕ್ತವತ್ಸಲನಾಡಿದನುಯ್ಯಾಲೆ 3 ಮೂರುದಿವಸದಲಿ ಮುರವೈರಿ ತಾನು ಭಾರಿ ವಜ್ರದ ಮಕರಕಂಠಿಯಾ ಧರಿಸಿ ನೀರಜನೇತ್ರನು ನಿಗಮಗೋಚರನು ವೈ ಯ್ಯಾರದಿಂದಲಿ ಆಡಿದನುಯ್ಯಾಲೆ 4 ನಾಲ್ಕು ದಿವಸದಲಿ ನಂದನಕಂದ ನವ ರತ್ನದ ಮಕರಕಂಠಿಯಧರಿಸಿ ಧರಿಸಿ ನಾಗಶಯನನಾಡಿದನುಯ್ಯಾಲೆ 5 ಐದು ದಿವಸದಲಿ ಅಕ್ರೂರವರದಗೆ ಕರಿ ದಾದ ಕುಲಾವಿ ಕಲ್ಕಿಯ ತುರಾಯಿ ಗಂಡಭೇರುಂಡಪಕ್ಷಿಯ ಪದಕವನಿಟ್ಟು ಪುಂಡರಿಕಾಕ್ಪನಾಡಿದನುಯ್ಯಾಲೆ 6 ಆರು ದಿವಸದಲಿ ಅಂಗಜನಯ್ಯಗೆ ಕೂರೆ ಕುಲಾವಿ ವೈಯಾರದಿಂಧರಿಸಿ ಹಾರ ಮಾಣಿಕ ರತ್ನ ಸರಗಳಳವಡಿಸಿ ನೀರಜನೇತ್ರನಾಡಿದನುಯ್ಯಾಲೆ 7 ಸಪ್ತದಿವಸದಲಿ ರತ್ನ ಮೌಳಿಯ ಧರಿಸಿ ಹಸ್ತದಿ ರತ್ನಹಾರ ಗಂಧವಿರಿಸಿ ಅರ್ತಿಯಿಂದಲೆ ತನ್ನ ಮಿತ್ರರು ಸಹಿತಲೆ ಬತ್ತವಳಿಸಿ ಬಂದ ಭಕ್ತವತ್ಸಲನು 8 ಓರೆಗೊಂಡೆಯ ವೈಯಾರದಿಂ ಧರಿಸಿ ನಾರಿಯರೆಡಬಲದಲಿ ಕುಳ್ಳಿರಿಸಿ ವಾರಿಜನೇತ್ರನು ನಡುವೆ ಕುಳ್ಳಿರಲು ವಾರಾಂಗನೆಯರೆಲ್ಲ ಪಾಡುತಿರಲು 9 ಅಷ್ಟಮ ದಿವಸದಿ ಅರ್ತಿಯಿಂದಲೆ ಕೃಷ್ಣಮೂರುತಿಗೆ ರಾಜಮುಡಿಯನು ಧರಿಸಿ ಹಿಂದಿನ ತೋಳಿಗೆ ಬಂದಿ ತಾಯಿತನಿಟ್ಟು ಇಂದಿರೆ ರಮಣನಾಡಿದನುಯ್ಯಾಲೆ 10 ಎಡಬಲದಲಿ ಭಕ್ತರು ನಿಂತಿರಲು ಪಿಡಿದು ಚಾಮರ ವ್ಯಜನವ ಬೀಸುತಿರಲು ಬೆಡಗಿನಿಮ್ಮ[ಡಕೆ]ಲೆ ಕರ್ಪೂರದ ಗುಳಿಗೆಯ ಎ ನ್ನೊಡೆಯಗೆ ಭಕ್ತರು ಪಿಡಿದು ನಿಂದಿರಲು 11 ದಾಸರಿಸಂದವು ಧಗಧಗನುರಿಯೆ ಸಹ ಸ್ರ ಸೂರ್ಯನಂತೆ ಪದಕಗಳೊಳೆಯೆ ಲೇಸಾದ ರತ್ನದ ಪಾದುಕೆಯನು ಧರಿಸಿ ವಾಸುದೇವನು ಆಡಿದನುಯ್ಯಾಲೆ 12 ಇಂದಿರೆ ರಮಣ ಒಂಭತ್ತು ದಿನದೊಳು ಚಂದ್ರ ಪುಷ್ಕರಣೀಲಿ ತೀರ್ಥವನ್ನಿತ್ತು ಬಂದು ಮಜ್ಜನವನ್ನು ಮಾಡಿ ವೆಂಕಟರಂಗ ಇಂದಿರೆಸಹಿತಲೆ ನಿಂದ ಹರುಷದಲಿ 13
--------------
ಯದುಗಿರಿಯಮ್ಮ
ಉರಗೇಂದ್ರನಿಗೂ ಅಳವಲ್ಲ ಪ ಸೂರಿದಾಸನಿಗೆ ಅಳವಹುದೇನೋ ಅ.ಪ ನೀನವತರಿಸಲು ಯೋಚಿಸುತೇ ಅಜ್ಞಾನವನಿತ್ತೆ ನೀ ಜಯವಿಜಯರಿಗೆ 1 ಭವಬಂಧನ ಪಡೆಯುವ ಪರಿಗೈದೆ ನಂದಿಸಿ ಮೆರೆಯುವ ತೆರಗೈವೆ 2 ಹಿರಿಯ ಹಿರಣ್ಯಕ ಧರೆಯ ಕೊಂಡೊಯ್ಯೆ ಸೂ ಕರ ರೂಪವನಾಂತು ವಧೆಗೈದೆ ಕಶಿಪು ವರಗಳ ಪಡೆವಂತೆ ಪ್ರೇರಿಸಿದೆ3 ನರಖಚರಾಸುರ ಹರಿಹರರಿಂದೆ ದುರುಳ ಹಿರಣ್ಯಕ ವಾರಿಜಭವನಿಂದೆ4 ಪರಿಪರಿ ಶಿಕ್ಷೆಯ ವಿಧಿಸಲವು ಕರುಣೆಯ ತೋರ್ದವು ನಿನ್ನ ಮಹಿಮೆಯಿಂದಾ 5 ಕರವಾಳದಿ ಸಂಹರಿಸುವೆನೆಂದು ನರಮೃಗ ರೂಪದಿ ಬಂದೆ ನೀ ತಂದೆ6 ಬಾಗಿಲ ಹೊಸಲಿನಲಿ ಪಿಡಿದೆತ್ತಿದೆಯಯ್ಯ ಮಾಂಗಿರಿಯರಸ 7
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು