ಒಟ್ಟು 6534 ಕಡೆಗಳಲ್ಲಿ , 130 ದಾಸರು , 4232 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕೆ ನಡುಗಿದೆ ತಾಯೆ ಭೂಮಿ ನಡುರಾತ್ರಿಯೊಳು - ಜಗ ಪ ದೇಕ ಪೊಡವಿಗೊಡೆಯನ ರಾಣಿ ಪರಮ ಕಲ್ಯಾಣಿ ಅ ಗುರು ಹಿರಿಯರನು ಕಂಡು ಮುರುಕಿಸುವ ಮೋರೆಯಲಿಅರೆಮತಿಯ ಕೊಂಕು ಮಾತುಗಳನಾಡಿಚರಣಕೆರಗದ ಮನುಜರಿರಬಾರದೆಂದೆನುತಮರಮುರಿದು ಒರಗಿ ಸಾಯಲಿ ಎಂದು ನಡುಗಿದೆಯ1 ಉತ್ತಮರ ಹೊಟ್ಟೆಯಲಿ ಬಗಳೊ ಶ್ವಾನವು ಹುಟ್ಟಿಹೆತ್ತವರ ನಿರ್ಬಂಧಕೊಳಗು ಮಾಡಿಅತ್ತೆ ಮಾವರ ಕೀರ್ತಿಯ ಕೊಂಡಾಡುವಧಮರಹೊತ್ತು ಇರಲಾರೆನೆನುತ ಮತ್ತೆ ನಡುಗಿದೆಯ2 ಕಳ್ಳತನವನು ಕಲಿತು ಕಾಲೋಚಿತವ ಕೇಳ್ದುಸುಳ್ಳು ಮಾತುಗಳಾಡಿ ಒಡಲ ಪೊರೆದುಕೊಳ್ಳಿ ದೆವ್ವಗಳಂತೆ ಅಲೆದಾಡುತಿರುವಂಥಸುಳ್ಳು ಮನುಜರ ಹೊರಲಾರೆನೆಂದು ನಡುಗಿದೆಯ 3 ಕಲಿಯುಗದಿ ಮುರಹರನ ಸ್ಮರಣೆಯನು ಮಾಡದೆಯೆಸಲೆ ಭಕ್ತಿಯಿಂ ವೇದಶಾಸ್ತ್ರವನೋದದೆಲಲನೆಯರ ಮೇಲೆ ಕಣ್ಣಿಡುವ ಹೊಲೆಯರನು ನಾ-ನೊಲಿದು ಹೊರಲಾರೆನೆಂದು ನಡುಗಿದೆಯ 4 ಧರೆಯೊಳಗೆ ಕರ್ಮಿಗಳು ಹೆಚ್ಚಿ ಕವಿತ್ವವ ಕಲಿತುನರಕುರಿಗಳೆಲ್ಲರು ನಡೆಗೆಟ್ಟರೆಂದುಗುರುವೆ ಕೇಳಯ್ಯ ಕನಕ ಪ್ರಿಯ ತಿರುಪತಿಯಗಿರಿಯಾದಿಕೇಶವನೆ ಒಲಿದು ನಿಲ್ಲಿಸಿದ 5
--------------
ಕನಕದಾಸ
ಏತಕೆ ನೀ ಚಿಂತಿಸುವೆ ಹೇಡಿ ಜೀವವೇ ಪ ವೀತಮೋಹರಾಗನಾಗಿ ವಿಧಿಪಿತ ದಾತತಾನೆಂದು ತಿಳಿಯಲು ಹೃತ್ತಾಪನಾಶನಾ ಅ.ಪ ಹೊನ್ನು ಹೆಣ್ಣು ಮಣ್ಣು ಮೂರು ನಂಬಬ್ಯಾಡಲೊ ನಿನ್ನೊಳಿರುವ ಮೂರ್ತಿಯನ್ನು ಅರಿತು ಬಾಳೆಲೊ 1 ವಂದಿಸುತ ಸಜ್ಜನರ ಕಂಡರಾನಂದ ಪೊಂದುತ ಸಂದೇಹಗಳೆಲ್ಲ ತೊರೆದು ಸತತ ನಲಿಯುತ 2 ಆತ್ಮವತ್ ಸರ್ವಭೂತನೆಂಬೊ ವಚನವು ಆತ್ಮನಲ್ಲಿ ಸಮರ್ಪಿಸಿದರೆ ಪಡೆವೆ ಸೌಖ್ಯವು 3 ಸಾಮಜೇಂದ್ರ ವರದ ಶ್ರೀ ಗುರುರಾಮವಿಠಲನ ಪ್ರೇಮದಿಂ ನಿಷ್ಕಾಮನಾಗಿ ಸೇವಿಸುನುದಿನ 4
--------------
ಗುರುರಾಮವಿಠಲ
ಏತಕೆ ಬಾರದೊ ಹರಿಯೆ ನೀತವೆ ಇದು ಸರಿಯೆ ಪ ನಿಗಮ ಸಂಗೀತನಾಮ ಜಲ ಜಾತನಯನ ಬಹುಪ್ರೀತಿ ಮಾಡಿದರು ಅ.ಪ ಕುಂದರದನ ಕುರುವಿಂದಾಧರ ಪೂ ರ್ಣೇಂದು ವದನ ಮುನಿವಂದ್ಯ ಎಂದಿಗೆ ಈ ಭವಬಂಧ ಬಿಡಿಸಿ ದಯ ದಿಂದ ತೋರುವಿಯಾನಂದ ಕುಂದುಗಳೆಣಿಸದೆ ಚಂದದಿ ಸಲಹಲು ಎಂದೆಂದಿಗು ನೀ ಗತಿಯೆಂತೆಂದರು 1 ಮಾರಜನಕ ಗಂಭೀರ ಹೃದಯ ಸಂ ಚಾರ ಭಜಕ ಮಂದಾರ ತೋರು ನಿನ್ನ ಪದ ಸಾರಸವನು ಮುನಿ ನಾರದಾದಿ ಪರಿವಾರ ಘೋರ ಶರಧಿಯೊಳು ಸೇರಿದವರಿಗಿ ನ್ನಾರು ಬಂದು ಉದ್ಧಾರ ಮಾಡುವರು 2 ಶ್ರೀಶ ಯದುಕುಲಾಧೀಶ ಮೇಘ ಸಂ ಕಾಶ ರೂಪ ಸರ್ವೇಶ ಘಾಸಿಪಡಿಪ ವಿಷಯಾಸೆಗಳೆಲ್ಲವ ನಾಶಗೈಸೊ ಶ್ರೀನಿವಾಸ ದಾಸ ಜನರಿಗುಲ್ಲಾಸವ ಕೊಡುತಿಹ ವಾಸುದೇವವಿಠಲಯ್ಯನೆ ಎನ್ನೊಳು 3
--------------
ವ್ಯಾಸತತ್ವಜ್ಞದಾಸರು
ಏನ ಪೇಳಲಿ ಹರಿಯ ವ್ಯಾಪಾರ ಮಹಿಮೆ ಪ ಆನಂದ ಆಶ್ಚರ್ಯ ಆಗುವುದು ಎನಗೆ ಅ.ಪ. ಮರಳಿಗೋಸುಗ ಪೋಗೆ ಮಾಣಿಕ್ಯ ದೊರೆಯಿತು ಅಮೃತ ಕಳಶವಾಯ್ತು ಇರುಳು ಕತ್ತಲೆಯೊಳಗೆ ಮಣಿದೀಪ ಮಿರುಗಿತು ಕಮಲ ಮಾಲಿಕೆಯಾಯ್ತು 1 ಪಾಪ ಕಾರ್ಯವ ಕೊಳಲು ಪುಣ್ಯ ಸಾಧನವೀವ ಪಾಪ ಸಾಧನವೀವ ಪುಣ್ಯ ಕಾರ್ಯದಲಿ ಪಾಪ ಬೀಜದ ಪುಣ್ಯ ಪುಣ್ಯ ಬೀಜದ ಪಾಪ ಶ್ರೀಪತಿಯ ವ್ಯಾಪಾರ ಈ ಪರಿಯಲಿಹುದು2 ಮೃಗಯಾ ವಿಹಾರದಲಿ ಮನವಿಟ್ಟು ನಾ ಬರಲು ಮೃಗಲಾಂಛನವನ ಕಳೆಯ ಮೀರುವಂಥ ಮಿಗೆ ತೇಜದೀ ಮಗುವು ಎನಗೆ ದೊರೆತುದು ನರ ಮೃಗರೂಪಿ ಕರಿಗಿರೀಶನ ಕರುಣವಿಲ್ಲದಲೆ 3
--------------
ವರಾವಾಣಿರಾಮರಾಯದಾಸರು
ಏನ ಬಣ್ಣಿಪೆನಮ್ಮ ಪ. ಏನ ಬಣ್ಣಿಪೆ ಪೂರ್ಣಪ್ರಜ್ಞ ಪಂಡಿತರಾಯರ ಅ.ಪ. ಮಧ್ವಸರೋವರ ತೀರದ ಮುದ್ದುಕೃಷ್ಣನ ಪ್ರ-ಸಿದ್ಧಿಯಿಂದ ಪೂಜೆಮಾಡಿ ಗೆದ್ದ ಬಲವಂತ ರಾಯರ1 ಭವಬಂಧ ಮಾಯಿಗಳ ಕಾಲಲೊದ್ದು [ಮೂಲೆಲ್ಹಾಕಿ]ಮಧ್ವಶಾಸ್ತ್ರವೆಲ್ಲ ಪ್ರಸಿದ್ಧ ಮಾಡಿದ ಯತಿರಾಯರ 2 ಸಿರಿ ಹಯವದನನ ಚರಣಕಮಲವನುನಿರುತವಾಗಿ ಸೇವಿಸುವ ಅಚ್ಛಿನ್ನ ನಿಜದಾಸರ 3
--------------
ವಾದಿರಾಜ
ಏನ ಬೇಡಲಿ ನಾನು ಏನ ನೀಡುವೆಯೋ ನೀನು ನೀನೆನ್ನ ಪ್ರಭುವಾಗಿರೆ ಹೇಳೋ ರಂಗ ಪ ನಾನಿನ್ನ ವಂದಿಸಿ ಧ್ಯಾನವ ಗೈವಾಗ ಏನನೀ ಕೊಡಲಾರೆ ಹೇಳೋ ರಂಗಯ್ಯಅ.ಪ ಕರಣಕಾರಣ ನೀನು ಕೊರಡಬೊಂಬೆಯು ನಾನು ಕರವ ಪಿಡಿದು ಎನ್ನ ನಡೆಸುವೆ ನೀನು ಕಾನನ ಸಿರಿ ಸುಖ ಭೋಗವು ಸ್ಥಿರವಲ್ಲ ಹರಿ ನಿನ್ನ ಚರಣಸೇವೆಯೆ ಸಾಕೋ 1 ಬೇಡಿ ಬೇಡಿ ನಿನ್ನ ಕಾಡುವ ಮನವೀಯಬೇಡಯ್ಯ ನೀಡಯ್ಯ ಮಂಗಳನಾಮಂಗಳ ಪಾಡಿ ಕೊಂಡಾಡುತ ನಾಡೆ ವಂದನೆಗೈವ ರೂಢಿ ಒಂದಿರಲಿ ಮಾಂಗಿರಿಯ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏನ ಬೇಡಲೊ ನಿನ್ನ ದೇವಾಧಿ ದೇವ ಪ ಏನಹುದೊ ನಿನ್ನೊಳಗೆ ಮಹಾನುಭಾವ ಅ.ಪ ವನಧಿ ಹಾಸಿಗೆಯು ವಟಪತ್ರವನಿತೆಯರ ಬೇಡಲೆ ಬ್ರಹ್ಮಚಾರಿಘನ ಸಖ್ಯವನು ಬಯಸೆ ನೆನೆಯುವರ ಮನದಲಿಹೆತಿನುವುದಕೆ ಕೇಳುವೆನೆ ನವನೀತಚೋರ 1 ಒಡವೆಗಳ ಬಯಸೆ ಶಿಖಿಪಿಂಛ ತುಳಸಿ ಪತ್ರಕಡು ಸೈನ್ಯವನೆ ಬಯಸೆ ಗೋಪಾಲನುಬಿಡದೆ ರೂಪವÀ ಬಯಸೆ ನೀಲಮೇಘಶ್ಯಾಮಉಡುವುದಕೆ ಕೇಳುವೆನೆ ಸ್ತ್ರೀವಸನ ಚೋರ 2 ಶಕ್ತಿಯನು ಗೋಪಿಕಾ ಸ್ತ್ರೀಯರಲಿ ವ್ರಯಗೈದೆಭಕ್ತಿಯನು ಸತ್ಯವಂತರಿಗಿತ್ತಿಹೆಭಕ್ತರನು ವಂಚಿಸುತ ನೀನು ಬಚ್ಚಿಟ್ಟಿರುವಮುಕ್ತಿ ಕಾಂತೆಯ ಕೊಡು ಸುಖಿಪೆನೊ ಶ್ರೀಕೃಷ್ಣ3
--------------
ವ್ಯಾಸರಾಯರು
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏನಾದರಾಗಲಿ ಹರಿ ನಿನ್ನ ಸ್ಮರಣೆ ಮಾತ್ರ ಒಂದಿರಲಿ ಪ ಆಚಾರಿಯೆನಲಿ ಬಹು ದು | ರಾಚಾರಿಯೆನಲಿ ಜನರೆಲ್ಲನೀಚನೆಂದೆನಲಿ ಅನದಿರಲಿ 1 ಜ್ಞಾನಿ ಎಂದೆನಲಿ ದುರ್ಮಾರ್ಗ | ನಾನೆನಲಿ ಜನರೆಲ್ಲ ಬಹು ಮಾನವಂತನೆನಲಿ ಅನದಿರಲಿ 2 ಪಾಪಿಯಾಗಿರಲಿ ಬಹು ಸಂ | ತಾಪಿಯಾಗಿರಲಿ ಜನರೆಲ್ಲಪಾಪಿಯೆಂದೆನಲಿ ಅನದಿರಲಿ 3 ರಾಗವೇ ಬರಲಿ ಬಹು ವೈ | ಭೋಗವೇ ಬರಲಿ ವಿಷಯ ನಿಯೋಗವೇ ಬರಲಿ ಬರದಿರಲಿ 4 ಒಲಿದರೆ ನೀ ವ್ಯಾಸವಿಠಲ ಜನ | ರೆಲ್ಲ ಮತ್ತ್ಹಳಿಯುತಿರಲಿ ಇರದಿರಲಿ ಏನಾದರಾಗಲಿ ಹರಿಯೆ 5
--------------
ವ್ಯಾಸವಿಠ್ಠಲರು
ಏನು ಇಲ್ಲದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕುಹಸನಾದ ಭೂಮಿಯನು ಧಾರೆಯೆರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇ ಬೇಕು1 ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮೆಪಡಬೇಡಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ 2 ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನಚರಣ ಕಮಲವ ಸೇರಿ ಸುಖಿಯಾಗು ಮನುಜ 3 * ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಏನು ಕರ್ಮವ ಮಾಡಿ ನಾ ನಿನ್ನ ಒಲಿಸಲಿ ಶ್ರೀನಿವಾಸ ಧ್ಯಾನಕೆ ನಿಲುಕದ ಜ್ಞಾನಿಗಳರಸ ನೀನು ಶ್ರೀನಿವಾಸ ಪ ಗಂಗೆಯ ತಂದು ಮಂಗಳಸ್ನಾನ ಮಾಡಿಸೆ ಶ್ರೀನಿವಾಸ ಗಂಗೆಯು ನಿನ್ನಂಗುಷ್ಟದಲ್ಲಿಹಳಲ್ಲೊ ಶ್ರೀನಿವಾಸ 1 ಮನಮೆಚ್ಚುವಂತೆ ನಿನ್ನ ಸುಮಗಳಿಂದರ್ಚಿಪೆನೆ ಶ್ರೀನಿವಾಸ ವನಜ ಪುಷÀ್ಪವು ನಿನ್ನ ನಾಭಿಯೊಳಿಹುದಲ್ಲೋ ಶ್ರೀನಿವಾಸ 2 ಅಂಗಿವಸ್ತ್ರಗಳಿಂದ ಶೃಂಗರಿಸುವೆನೆಂದರೆ ಶ್ರೀನಿವಾಸ ಅಂಗನೆ ಲಕುಮಿ ಸಕಲಾಭರಣಂಗಳಾಗಿರುವಳಲ್ಲೊ ಶ್ರೀನಿವಾಸ 3 ಅನ್ನ ಪಾನಗಳಿತ್ತು ಧನ್ಯನಾಗುವೆನೆ ಶ್ರೀನಿವಾಸ ಅನ್ನಪೂರ್ಣಿ ಷಡುರಸದನ್ನವ ಮಾಳ್ಪಳಲ್ಲೊ ಶ್ರೀನಿವಾಸ 4 ಕಡುಭಕ್ತಿಯಿಂದ ನಿನ್ನಡಿ ಸೇವೆ ಮಾಳ್ಪೆನೆ ಶ್ರೀನಿವಾಸ ಎಡಬಿಡÀದೆ ಹನುಮ ನಿನ್ನಡಿಯ ಪಿಡಿದಿಹನಲ್ಲೊ ಶ್ರೀನಿವಾಸ 5 ಜಗದುದರ ನಿನ್ನ ಬಗೆ ಬಗೆ ನಾಮಗಳ ಸ್ತುತಿಸೆ ಶ್ರೀನಿವಾಸ ಅಗಣಿತವಾಗಿಹುದು ಮುಗಿಯದಂತಿಹುದಲ್ಲೊ ಶ್ರೀನಿವಾಸ6 ಶ್ರಿಷ್ಟಿಕರ್ತ ಶ್ರೀ ರಂಗೇಶವಿಠಲನೆ ಎಂಬೆ ಶ್ರೀನಿವಾಸ ಇಷ್ಟೆಂದ ಮಾತ್ರಕೆ ಒಲಿದಿಷ್ಟವ ಸಲಿಸೈಯ್ಯಾ ಶ್ರೀನಿವಾಸ 7
--------------
ರಂಗೇಶವಿಠಲದಾಸರು
ಏನು ಕಾರಣ ಕೃಷ್ಣಾ ಏನು ಕಾರಣ ಪ ಏನು ಕಾರಣ ಎನ್ನ ಕಣ್ಣಿಗೆ ನೀನು ತೋರದಿರುವುದು ಇದು ಅ.ಪ ಖಗ ಮೃಗಾದಿಗಳಿಗೆ ನೀನು ರಘು ಕುಲೇಶ ದರ್ಶನವಿತ್ತೆಸೊಗಸು ಮೋಕ್ಷವಿತ್ತೆ ಅದಕುಖಗವರೂಢ ಕಡಿಮೆಯೇನು 1 ಶಬರಿ ಎಂಜಲುಂಡು ವನದಿಅಬುಜ ಶಯನ ದರುಶವಿತ್ತೆಕುಬುಜೆ ಕೂಡಿದೆಲ್ಲೊ ಅದಕುವಿಬುಧ ವಂದ್ಯ ಕಡಮೆನೋವಾ 2 ಮುರಲಿನೂದಿ ವನದಿ ಹರಿಯುತರುಲತಾದಿಗಳಿಗೆ ದರ್ಶನವಿತ್ತು ಕಾಯ್ದುಅದಕು ಪರಮ ಪುರುಷ ಕಡಿಮೆ ನೋವಾ3 ಹಾದಿಲ್ಹೋಗೋ ಕೀಟನಿಗೆವೇದನಾಥ ದರುಶನಿತ್ತಿಆದಿ ವರ್ಣದವನು ಅದಕುಬಾದರಾಯಣ ಕಡಿಮೆ ಏನೋ 4 ಎಷ್ಟು ಎಷ್ಟು ಜನರಿಗೀಗಭೆಟ್ಟಿ ನೀಡಿ ಸುಖವನಿತ್ತೆಶ್ರೇಷ್ಠನೆಂದು ಸ್ತುತಿಪೆ ನಿನ್ನ ಕೃಷ್ಣ ಕರುಣಿ ಬೇಗನೆ ಬಾ 5 ಇಂಥಾ ಜನುಮದಲ್ಲಿ ನಿನ್ನಕಂತು ಪಿತನೆ ಕಾಣದಿರಲುಪಂಥಗಾಣೆ ಮುಂದಿನ ತನುಎಂಥದಾಗುವುದೋ ತಿಳಿಯೆ 6 ಇಂದಿರೇಶ ಮುರಲಿ ಶೋಭಿತಇಂದು ಬಿಂಬ ವಿಜಯ ವದನತಂದು ತೋರಿಸೆನ್ನ ಮನಕಾ-ನಂದಿಸೀಗ ನಂದನಸುತ 7
--------------
ಇಂದಿರೇಶರು
ಏನು ಕಾರಣ ಬಂದೆ ಗಂಗೆ | ನಾನೇನು ಪುಣ್ಯವನು ಮಾಡಿದವನಲ್ಲ ಪ ಕಾಸೀಪುರದಿಂದಲಿ ದೇಶ ನೋಡಲು ಬಂದ್ಯೋ | ಬೀಸಿ ಬಿಸುಟುವಂಥ ಅಸ್ಥಿಗಾರದೆ ಒಂದ್ಯೋ | ದಾಸರ ಮಹಿಮೆಯನು ನೋಡುವೆನೆಂದು ಬಂದ್ಯೋ | ದೋಷವರ್ಜಿತ ವಾರಣಾಸಿ ಕಡಿಯದಲೆ | ಲೇಸಾಗಿ ತಿಳಿಪುವದು ಭೀಷ್ಮನ ಜನನೀ 1 ತಿಲನೀರು ಕುಡಿದು ಧರಿಸಲಾರದೆ ಬಂದ್ಯೋ | ಮಲಜನರ ದೋಷವನು ಕಳೆವೆನೆಂದು ಬಂದ್ಯೋ | ಕಲಿಯುಗಕೆ ಈ ಕೃಷ್ಣಾ ಅಧೀನಳೆಂದು ಬಂದ್ಯೋ | ಸುಲಭ ತ್ರಿದದೇಶ್ವರಿ ಗಂಗೆ ತಡೆಯದಲೆ | ನೀರಜ ನಯನೇ 2 ನಿತ್ಯ ಕರ್ಮಗಳು ನೋಡಲಿ ಬಂದ್ಯೋ | ಮಜ್ಜನವ ಮಾಡಿಸಿ ಎನ್ನ ಪೊರಿಯಲು ಬಂದ್ಯೋ | ಮೂಜಗದೊಳು ಪೆಸೆರಾಗಿಪ್ಪೆನೆಂದು ಬಂದ್ಯೋ | ನಿರ್ಜನ ತಟನಿ ನಿರ್ಗುಣಸಾಂದ್ರೆ ತಡಿಯದಲೆ | ನಿಜವ ತಿಳುಪುವದು ವಿಜಯವಿಠ್ಠಲಸುತೆ 3
--------------
ವಿಜಯದಾಸ