ಒಟ್ಟು 24320 ಕಡೆಗಳಲ್ಲಿ , 137 ದಾಸರು , 9123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸುವೆನನವರತ ಇಂದಿರೇಶಾ ಪ ನೊಂದು ಬಳಲಿದೆನಯ್ಯ ಸಲಹೋ ಶ್ರೀಶಾ ಅ.ಪ ಇಂದು ನರಜನುಮದೊಳು ನೊಂದೆನಯ್ಯ ಮುಂದಿನಾ ಜನುಮಗಳ ಸಂದಣಿಗಳೊಳು ನಿನ್ನ ಸುಂದರ ಪಾದಾಂಬುಜವನೆಂದೆಂದು ತೋರೆಂದು1 ನರಜನ್ಮ ಹಿರಿದೆಂದು ಅರಿತವರು ಪೇಳುವರು ನರನಾಗಿ ನಾ ಜನಿಸಿ ಗರುವದಿಂದಾ ಸಿರಿಯಾಸೆಯಿಂದ ಮದ ಪರವೈರ ಲೋಭಗಳ ದುರಿತಗಳನಾರ್ಜಿಸಿದೆ ಪೊರೆಯೊ ದೇವ 2 ಕಡುಪಾಪ ಕೂಪದೊಳಗಡಗಿರ್ಪೆನೈ ಹರಿಯೆ ಅಡಿಗಳಿಗೆ ಎಡೆಯಿಲ್ಲ ನುಡಿವರಿಲ್ಲಾ ಪಿಡಿವುದಕೆ ತೃಣವಿಲ್ಲ ದಡಕೆ ದಾರಿಯು ಇಲ್ಲ ತಡವೇಕೆ ಎನ್ನ ಕೈಪಿಡಿಯೊ ಗೋಪಾಲ 3 ಖಗರಾಜ ಪೊತ್ತಿಹನು ಸುಗತಿದಾಯಕನೆಂದು ಹೊಗುಳುವವು ಶೃತಿ ಶಾಸ್ತ್ರ ನಗಧರನೆ ನಿನ್ನತಾ ನಗಪುತ್ರಿ ನುತಿಸಿಹಳು ನಗಬೇಡವೈ ಪಾದಯುಗಗಳನು ತೋರೆಂದು4 ನಿನ್ನ ನಾಮದ ಭಜನೆ ಎನ್ನ ರಸನೆಯೊಳಿರಲಿ ಮುನ್ನಿಗಿಂತೆಂಟುಮಡಿ ಜನುಮ ಬರಲಿ ಮುನ್ನ ನಾವಾರ್ಜಿಸಿದ ಘನಪಾಪನಶಿಸಲಿ ಚೆನ್ನ ಮಾಂಗಿರಿವಾಸ ನನ್ನ ಹೃದಯದೊಳಿರಲಿ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಸುವೆನು ನಾ ನರನಾರಯಣ ಭಕ್ತ ಪ- ರಾಧೀನ ನಾನಾರೂಪಿಯೆ ಪ ಈ ಜಗವನೆ ಎತ್ತಿದೆ ವರಾಹನಾಗಿ ಮೂಜಗವನೆ ಅಳೆದ ವಾಮನಮೂರ್ತಿ ಯಾಜಿಪರನು ಕಾಯೋ ಪ್ರಹ್ಲಾದ ಧ್ರುವರೊಲು ಹೇ ಜಗದೋದ್ಧಾರ ಭಕ್ತವತ್ಸಲ 1 ದೇವ ಶ್ರೀಪತಿಯಾಗಿ ಅಸುರರ ಕೊಂದೆ ದೇವಕಿಸುತನಾಗಿ ಕಂಸನ ವಧಿಸಿದೆ ದೇವಜರ ಮೈದುನನಾಗಿ ದೌರ್ಜನ್ಯ ಮುರಿದೆ ದೇವ ಜಾಜಿಪುರೀಶ ದಾಸೋತ್ತಮನೇ 2
--------------
ನಾರಾಯಣಶರ್ಮರು
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ವಂದಿಸುವೆನು ನಿನ್ನ ಅರವಿಂದಲೋಚನ- ದಿಂದ ನೋಡೊ ನೀ ಎನ್ನ ವಂದಿಸುವೆ ಅರವಿಂದಲೋಚನ- ದಿಂದ ನೋಡೊ ದಯಾಸಿಂಧು ಎನಿಸುವೆ ನಂದನಂದನನಾದ ಶ್ರೀ ಮುಕುಂದ ನೀ ಮುಚು- ಕುಂದ ವರದ ವಂದಿಸುವೆನು ನಿನ್ನ ಪ ಅಂಬರೀಷನು ಏನೋ ಮುಚುಕುಂದ ಮುನಿವರ- ನೆಂದು ರಕ್ಷಿಸುವೇನೊ ದ್ವಿಜ ತಂದವಲಕ್ಕಿ ತಿಂದ ಭಿಡೆಯಗಳೇನೊ ನೀನೆ ಸುರಧೇನು ಕಂದ ಧ್ರುವಪ್ರಹ್ಲಾದ ಕರೆಯಲು ಬಂದು ಭರದಿಂದವರ ಸಲಹಿದೆ ಮಂದಮತಿ ನಾ ಮ- ತ್ತೊಂದನರಿಯದೆ ವಂದಿಸುವೆ ನಿನ್ನ 1 ಗಜನು ಅಜಮಿಳನೇನೊ ಪಾದಾಂಬುಜ ಸ್ತುತಿಸ- ಲಜಸುತನು ನಾರದನೇನೊ ನಿಜ ಭಕುತಿಯಿಂದಿರಲ್ವಿದುರ ಉದ್ಧವನೇನೊ ನದಿಯಲ್ಲಿ ನಿನ್ನ ನಿಜಸ್ವರೂಪವ ತೋರಲಿಕ್ಕೆ ನಿನ್ನ ಬಾಂಧವಕ್ರೂರನೇ ನಾ ಕೇಳು ಘನ್ನ ಮಹಿಮ ಪ್ರಸನ್ನನಾಗಲಿಕ್ವಂದಿಸುವೆನು ನಿನ್ನ 2 ಸತ್ವರೊಳು ನಾನಲ್ಲ ಅಹಲ್ಯೆ ದ್ರೌಪದಿ ಭಕ್ತಿ ಮೊದಲೆನಗಿಲ್ಲ ಪಾಂಡವರ ದುರಿತಾಪತ್ತು ಕಳೆದ್ಯೊ ನೀಯೆಲ್ಲ ಕೇಳೆನ್ನ ಸೊಲ್ಲ ಭಕ್ತಾಧೀನನೆ ಭಯನಿವಾರಣ ಇಷ್ಟು ಭವಭಯ ಬಿಡಿಸಿ ಭೀಮೇಶಕೃಷ್ಣ ನಿನ್ನದಯ- ವಿಟ್ಟುಕರುಣಿಸೊ ವಂದಿಸುವೆನು ನಿನ್ನ 3
--------------
ಹರಪನಹಳ್ಳಿಭೀಮವ್ವ
ವಂದಿಸುವೆನು ರಘುವರನಾ ಸುರವಂದಿತ ಚರಣಾಂಬುಜನ ಪ ತಂದೆ ಮಾತಿಗೆ ವನಕ್ಹೋಗಿ ಬಂದವನಾಸುಂದರ ಸಹ ಸೀತೆಯಿಂದ ಅನುಜನಾ ಅ.ಪ ಚಾಪ ಭಂಜಕನಾ 1 ವಾರಿಧಿ ಸೇತು ಬಂಧಕನಾ ಸೀತಾ -ಚೋರನ ಶಿರವಳಿದವನಾಚಾರು ಸಿಂಹಾಸನವೇರುತ ಸರಯು -ತೀರದ ಅಯೋಧ್ಯಾ ವಿಹಾರ ಸುಂದರನಾ2 ಕೇಸರಿ ಸುತಗೆ ತನುಧನಮಣಿಆಶ್ರಯವನು ಕೊಟ್ಟವನಾಕೋಸಲ ಜನರಿಗೆ ಮೋಕ್ಷವವಿತ್ತವನಾಇಂದಿರೇಶ ಸುಖಾತ್ಮ ನಿರ್ದೋಷ ಪುರುಷನಾ 3
--------------
ಇಂದಿರೇಶರು
ವಂದಿಸುವೆನೆಲೆ ತಾಯೆ ವಂದಿತಾಮರೆಯೆ ಪ. ಶ್ರೀಕಲಶಾಬ್ಧಿಕನ್ಯೆ ಸುರಕುಲಮಾನ್ಯೆ ಶ್ರೀಕರ ಗುಣಪೂರ್ಣೆ ಶೋಕಾಪಹರಣೆ ಲೋಕನಾಯಕೆ ಘನ್ನೆ ಪಾಕಶಾಸನಸುತೆ ಪವನಜಸೇವಿತೆ ಸಾಕೇತನಿಲಯೆ ಸರಾಗದಿ ರಕ್ಷಿಸು 1 ಆನತನುತ ಗೀರ್ವಾಣಿ ಅಂಬುಜಪಾಣಿ ಮಾನಿನೀಮಣಿ ಕಲ್ಯಾಣಿ ಭಯವಾರಿಣಿ ಭಾವಜಾತ ಜನನೀ ಭಾಗವತಾರ್ಚಿತೆ ಭಕ್ತಾಭಯಪ್ರದಾತೆ ಬಾಗುತೆ ಶಿರ ನಿನಗೇಗಳುಂ ಮನವಾರೆ 2 ಅರಿಯೆನು ನಿನಗೆಣೆಯಾರ ಕಾಣೆನು ಹಿತರ ಚರಣವ ನಂಬಿದೆ ಮನವಾರ ಪಿಡಿಯೆನ್ನ ಕರವ ಕರುಣದಿ ನೋಡೆನ್ನಿರವ ಪರಮಪಾವನ ಶೇಷಗಿರೀಶನ ಕರುಣಾರೂಪಿಣಿ ಜಗತ್ಕಾರಿಣಿ3
--------------
ನಂಜನಗೂಡು ತಿರುಮಲಾಂಬಾ
ವಂದಿಸೋ ಎಲೆ ಮಾನವಾ ಮಾಣದೆ ಸದಾ ಒಂದೆ ಮನದಿ ಶ್ರೀವಿದ್ಯಾಮಾನ್ಯ ಮುನೀಂದ್ರರ ಪ ಧರಣಿಯಂದದಿ ಕ್ಷಮಾಭರಿತ ಮಂಗಲದಾತ | ಶರಧಿಯಂದದಿ ದಯಾಗುಣಶೀಲರೋ | ಸುರ ನದಿಯಂದದಿ ದುರಿತಪರಿಹಾರಕರು | ತರಣಿ ಭಾರ ತಿಮಿರನೋಡಿಸುವರೋ 1 ಈಶನಂದದಿ ಜಿತಪೂಶರವರ | ಕಮ | ಲಾ ಸನನಂತೆ ಭೂಸುರ ಶ್ರೇಷ್ಟರು | ಸಾಸಿರ ಮುಖನಂತೆ ಯೋಗಸುಸಾಧಕರು ಭೇಶನಂದದಿ ಸುಧಾಕರರಾಗಿ ತೋರ್ಪರೋ 2 ಶಾಮಸುಂದರವಿಠಲಸ್ವಾಮಿ ಉಪಾಸನೆ | ನೇಮದಿಂದಲಿ ಸತತಗೈಯುತಲಿ ಶ್ರೀಮಧ್ವಾರ್ಯರ ಶಾಸ್ತ್ರ ಸೋಮಪಾನದ ಸುಖ | ಪ್ರೇಮದಿಂದಲಿ ದ್ವಿಜಸ್ತೋಮಕೆಗರೆವರು 3
--------------
ಶಾಮಸುಂದರ ವಿಠಲ
ವಂದೇ ಗೋಪಾಲಂ ಕೃಷ್ಣಾನಂದ ಜಲಪಾಲಂ ಮಂದಹಾಸ ಮುನಿವೃಂದ ವಿಶಾಲಂ ಇಂದಿರೇಶ ಯದುನಂದನ ಬಾಲಂ ಪ ಸಾರಿದನು ಸಾರಂ ಕೃಷ್ಣ ಚಾರು ಮೋಹನಾ ಕಾರಂ ಸಾರೋದ್ದಾರಂ ಸುಜನಮಂದಾರಂ ಶ್ರೀರಮಣೀ ಮುಖ ಚಂದ್ರ ಚಕೋರಂ 1 ಕಾಂಚೀ ಮಣಿಹಾರಂ ಕೃಷ್ಣ ವಾಂಛಿತದನುಸಾರಂ ಪಂಚಭೂತ ಪಂಚಸ್ಯಾಕಾರಂ ಪಾಂಚ ಜನ್ಯ ಭೃಗುಲಾಂಛನ ಧಾರಂ 2 ಚಾಪಲ ಗುಣಧಾಮಂ ಕೃಷ್ಣ ಗೋಪೀಜನ ಕಾಮಂ ನೀ ಪರಮಾತ್ಮ ಸ್ವರೂಪ ಸುನಾಮಂ ಶ್ರೀಪತಿ ಯದು ಕುಲದೀಪ ನಿಸ್ಸೀಮಂ 3 ಪಾಂಡವ ಸಾಕಾರಂ ಕೃಷ್ಣ ಪಂಡಿತನುಸಾರಂ ಚಂಡ ಕಿರಣ ಮಣಿಕುಂಡಲ ಧಾರಂ ಮಂಡಲದೊಡೆಯ ಉದ್ದಂಡತಿ ಶೂರಂ 4 ಶರಣರ ಭವದೂರಂ ಕೃಷ್ಣ ಸುರಜನ ಸಾಕಾರಂ ಹರಿಸೂನು ಕೋಣೆ ಲಕ್ಷ್ಮೀಶ ಶೃಂಗಾರಂ ಪರಮಾತ್ಮಕ ಸದ್ಗುರು ಮಂದಾರಂ 5
--------------
ಕವಿ ಪರಮದೇವದಾಸರು
ವಂದೇ ಹಂ ಶ್ರೀವರ ಕರಿವರದಂ ವೃಂದಾರಕನುತ ಸುಂದರಪಾದಂ ಪ ಈಶ ಭಕ್ತ ಭವಪಾಶನಾಶ ವಾಗೀಶ ಜನಕ ಲಕ್ಷ್ಮೀಶ ಪರೇಶ 1 ರಾಮತ್ರಿಜಗದಭಿರಾಮ ನೀರದ ಶ್ಯಾಮ ಸುರಾರಿಸ್ತೋಮ ವಿರಾಮ 2 ವಿಹಂಗ ಗಮನಯದು ಪುಂಗವ `ಹೆನ್ನೆರಂಗ ' ಕೃಪಾಂಗ 3
--------------
ಹೆನ್ನೆರಂಗದಾಸರು
ವಂದ್ಯಗೆ ನಮೋ ನಮೋ ನಮೋ ನಮೋ ಪ ದೇಶಿಕವರ್ಯಗೆ ನಮೋ ನಮೋ ದೋಷವಿದೂರಿಗೆ ನಮೋ ನಮೋ ಭಾಸುರ ಚರಿತಗೆ ನಮೋ ನಮೋ 1 ವಸುಧೀಂದ್ರರ ಕರಜಾತನಿಗೆ ವಸುದಿಜೀವರ ಸಂಪ್ರೀತನಿಗೆ ದಶದಿಶೆಯೊಳು ವಿಖ್ಯಾತನಿಗೆ ಕಸವರಭಾಂಗ ಪ್ರಖ್ಯಾತನಿಗೆ 2 ಮರುತ ಮತಾಂಬುಧಿ ಸೋಮನಿಗೆ ತಿಮಿರ ತರಣಿ ನಿಭಗೆ ವರದೇಶ ವಿಠಲನ ಸ್ಮರಿಸುತ ಲಿಂಗಸು - ಗುರುಸುಕ್ಷೇತ್ರ ನಿವಾಸನಿಗೆ 3
--------------
ವರದೇಶವಿಠಲ
ವಧು ವರರ ಯದ್ಧರಿಸೊ ಉದಧಿಶಯನ ಒದಗಿಸುತಲಾಯುರಾರೋಗ್ಯ ಸುಜ್ಞಾನ ಪ ಯತಿಪೂಜೆ ಕ್ಷಿತಿದೇವ ತತಿಸೇವೆ ತಿಥಿತ್ರಯದ ವೃತನೇಮ ಮೊದಲಾದ ಸತ್ಕಕರ್ಮವ ಮತಿಯಿಂದ ಗೈಯುತಲಿ ಪತಿತಪಾವನ ನಿನ್ನ ಕಥೆಗಳನು ಕೇಳ್ವದಕೆÉ ರತಿಯಿತ್ತು ಪ್ರತಿದಿನದಿ 1 ಹಿರಿಯರಲಿ ವಿಶ್ವಾಸ ಗುರುಮುಖದಿ ಉಪದೇಶ ಮರುತ ಸಚ್ಛ್ಯಾಸ್ತ್ರದಔಯಾಸವ ಸ್ಥಿರವಾದ ಮನವಿತ್ತು ಮರಿಯದಲೆ ಮಾರಮಣ 2 ಸಾಮಗಾನವಿಲೋಲ ಶಾಮಸುಂದರವಿಠಲ ಸ್ವಾಮಿಮನ್ನಿಸಿ ಎನ್ನ ಎನ್ನ ವಿಜ್ಞಾಪನೆ ಯಾಮಯಾಮಕೆ ನಾಮಸುಧೆಯನು ಸವಿಪ ಈ ಮಹಾಸುಖ ಗರೆದು ಪ್ರೇಮದಿಲಿ ಕೈಪಿಡಿದು 3
--------------
ಶಾಮಸುಂದರ ವಿಠಲ
ವನಜ ಮುಖಿಯರ ಮನದಿಷ್ಟಾರ್ಥವನೀವನ - ಶ್ರೀ ಕೃಷ್ಣ ಎನ್ನಿರೊಮನು ಮುನಿಜನರನು ಅನುದಿನದೊಳು ಪೊರೆವನ - ಶ್ರೀ ಕೃಷ್ಣ ಎನ್ನಿರೊ ಪ ಪಣ್ಣ ಕೊಯ್ದನನುಜಗೆ ಸಹಾಯನಾದನ _ ಶ್ರೀ ಕೃಷ್ಣ ಎನ್ನಿರೊಸಣ್ಣ ಸೀರೆಯ ನಲ್ವೆಣ್ಣು ರೂಪಾದನ _ ಶ್ರೀ ಕೃಷ್ಣ ಎನ್ನಿರೊಅಣ್ಣನ ವೈರಿಯ ಮಗನ ಕೊಂದಾತನ _ ಶ್ರೀ ಕೃಷ್ಣ ಎನ್ನಿರೊಬಣ್ಣಿಸಲರಿಯೆ ನಾನಿವನ ಮಹಿಮೆಯ _ ಶ್ರೀ ಕೃಷ್ಣ ಎನ್ನಿರೊ 1 ಮುತ್ತಯ್ಯನಿರೆ ಮೊಮ್ಮಗಗೆ ಪಟ್ಟಗಟ್ಟಿದನ _ ಶ್ರೀ ಕೃಷ್ಣ ಎನ್ನಿರೊಹೆತ್ತವಳಿರೆ ತಾಯ ಬೇರೆ ಪಡೆದಾತನ _ ಶ್ರೀ ಕೃಷ್ಣ ಎನ್ನಿರೊಮತ್ತೇಭಗಾಮಿನಿಗಾಗಿ ವನವಾಸ ಪೋದನ _ ಶ್ರೀ ಕೃಷ್ಣ ಎನ್ನಿರೊಮತ್ತೆ ಹಿರಣ್ಯಕಗೆ ಕಂಬದಲಿ ತೋರ್ದನ - ಶ್ರೀ ಕೃಷ್ಣ ಎನ್ನಿರೊ 2 ಉಗುರು ಕೊನೆಗಳಿಂದ ನಗವನೆತ್ತಿದನ _ ಶ್ರೀ ಕೃಷ್ಣ ಎನ್ನಿರೊಬೊಗಸೆಗಂಗಳ ಬಾಲೆಯರ ತಂದಾತನ _ ಶ್ರೀ ಕೃಷ್ಣ ಎನ್ನಿರೊಮಗಳ ಗಂಡನ ಶಿರವನೆ ಛೇದಿಸಿದನ _ ಶ್ರೀ ಕೃಷ್ಣ ಎನ್ನಿರೊಸುಗುಣ ತನ್ನ ಕಾಗಿನೆಲೆಯಾದಿಕೇಶವನ _ ಶ್ರೀ ಕೃಷ್ಣ ಎನ್ನಿರೊ 3
--------------
ಕನಕದಾಸ
ವನಜನಯನನ ಮನವ ಮಧುಪ ನಂಬುವರೆಮನದೆಗೆದ ಮದನಪಿತ ವಿಠಲರೇಯಾ ಪ ಅರಿಯದ ಬಾಲೇರಿಗೆ ತನ್ನ ಪರಿಯನರುಹಿಸಿ ಮುನ್ನನೆರೆದು ರತಿಪತಿಯ ಸುಖ ನೆರೆದೋರಿದತೊರೆದು ಬದುಕುವೆವೆಂತೋ ರತಿಪತಿಯ ಪಿತನಗಲಿವಿರಹದುರಿ ತಾನಳವಡರಿ ಸುಡುತಿಹುದು 1 ನಡೆ ನಗೆಯ ತುದಿನೋಟ ಬಲೆಯನೆಮ್ಮೊಳು ಬೀಸಿಬಿಡದೆ ಯೆಮ್ಮನು ತನ್ನ ವಶಮಾಡಿದಪಡಿಯಿಲ್ಲದನುಭವದ ಸುಖದ ಸವಿಯನೆ ತೋರಿಮಡದಿ ತಡೆದಳೊ ಮಧುರೆಯಲಿ ನಲ್ಲನ2 ಎಂದೆಂದು ನಿಮ್ಮ ವಶದಲ್ಲಿಹೆನೆಂದಭಯವಿತ್ತುಇಂದುಮುಖಿ ನಾರಿಯರ ನೆರೆ ನಂಬಿಸಿನಂದನಂದನ ನಮ್ಮ ಕಾನನದೊಳೀಡ್ಯಾಡಿಇಂದು ಮಧುರೆಯ ನಾರಿಯರ ನೆಚ್ಚಿದ 3 ಕಪಟ ತಿಳಿಯಲರಿಯದೆ ನಾವುನವ ಹರಿಣಿಯಂತೆ ಮರುಳಾಗಿ ಕೇಳಿವಿವರವರಿಯದೆ ನಾವು ಕಡು ನೊಂದೆವೆಲೊ ಮಧುಪಇವನ ಗುಣವರಿಯದೆ ಕಡುಕರುಣಿ ಎಂಬುವರು 4 ಭವ ಬಂಧನಗಳೆಲ್ಲ ಈಡ್ಯಾಡಿಗತಿ ನಮಗೆ ಅವನೆಂದು ಮನಸೋತೆವೋಕೃತಕವರಿಯದೆ ನಮ್ಮ ವನದೊಳು ನಿಲ್ಲಿಸಿ ಪೋದಪತಿಯೊಡನೆ ಸಂಧಾನವೆಂತೊ ಎಲೊ ಮಧುಪ 5 ಮರುಳುಗಳು ನಾವು ಶ್ರೀಪತಿಯ ಕೂಟವ ಬಯಸಿಇರುಳು ಹಗಲು ಜರಿಜರಿದಳಲುವೆವುಸಿರಿಯವನ ಉಂಗುಟದ ಉಗುರು ಗುಣ ಕಾಣಳೆಲೋಹರಿ ನಮ್ಮ ನೆನೆವುದಚ್ಚರಿಯಲ್ಲವೆ6 ಭೃಂಗ ಮಧುರೆಗೆ ಪೋಗಿರಂಗವಿಠಲನ ತಂದೆಮ್ಮನುಳುಹುವುದೋ 7
--------------
ಶ್ರೀಪಾದರಾಜರು
ವನಜನಾಭ ನೀನೆ ದಯಾನಿಧಿ ಮೂರು ಜಗದೊಳಗೆ ಮಣಿದುಬೇಡ್ವೆ ಕನಿಕರದೆನ್ನ ರಿಣಮುಕ್ತನೆನಿಸು ಬೇಗ ಪ ಭಾವಿಗಳ ಭಾವಪೂರ್ಣ ದೇವ ದೇವ ವಿಮಲಮಹಿಮ ಸಾವು ಹುಟ್ಟುಯಿಲ್ಲದ ಘನ ಸ್ವಾಮಿಯೆನ್ನ ಮಾಡೋ ಪಾವನ 1 ವೇದವೇದ್ಯನೀತ ಅ ನಾದಿಕಾಲದ್ವಸ್ತುವೇ ನೀ ಸಾಧುಸುಜನೈಕ್ಯನೆನ್ನ ಮೋದದಿಂದ ಸಲಹೋ ಮುದ 2 ಭೂಮಿಗಧಿಕ ನಿಸ್ಸೀಮ ಸುಖಧಾಮ ಭೀಮ ಗಂಭೀರ ಎನ್ನ ಕಾಮಿತಾರ್ಥ ಕರುಣೆಗೈದು ಪ್ರೇಮದಾಳೆನ್ನೊಡೆಯ ಶ್ರೀರಾಮ3
--------------
ರಾಮದಾಸರು
ವನಜನಾಭನ ಅಡಿಯು ಮನುಜಾನೀಪತಿಯು ಪ ಅನುದಿನದೊಳೈತಂದು ಘನಸಿಂಧುಶಯನನು ಮಿಂದು ದ್ವಾದಶಿಯೊಳಿಂದು ಸನುಮತದಿಯರ್ಪಿಸಿದ ಎಡೆಯನು ಘನತರದ ಸಂಭ್ರಮದಿ ಭುಂಜಿಸಿ ಜನಿಸಿ ಭಕುತಿಯನೆನ್ನ ಮನದಿ ಪ್ರ- ಸನ್ನನಾದನು ಎನಿತು ಪೇಳಲಿ 1 ರಕ್ಕಸರಿಗತಿ ವೈರಿ ಮಿಕ್ಕಾನತರ ಸಹಕಾರಿ ಶ್ರೀಹರಿ ಮುರಾರಿ ತಕ್ಕ ವಿಜಯಗೆ ಸಾರಥ್ಯಾಗಿ ಇಕ್ಕರಿಸಿ ಕುರುಪತೀಯನನ್ವಯ ಅಕ್ಕರದಿ ದ್ರುಪದಸುತೆಯ ಸಲಹಿ ರುಕ್ಮಿಣೀಶನು ರಕ್ಷಿಪನು ಸಲೆ 2 ಕರಿವರದ ಶಿರಿಲೋಲಾ ಪರಮಾತ್ಮ ಶ್ರೀಘನಲೀಲಾ ಜರರಹಿತ ವಿಮಲಾ ನಿರುತದೀಪರಿ ಸ್ಮರಿಪ ನರನಿಗೆ ಕರುಣಸಾಗರನಾಗಿ ಸುರವರ ತ್ವರಿತದೀವನು ಹರಸಿ ವರಗಳ ಹರಗೊಲಿದ ನರಸಿಂಹವಿಠಲಾ 3
--------------
ನರಸಿಂಹವಿಠಲರು