ಒಟ್ಟು 4153 ಕಡೆಗಳಲ್ಲಿ , 122 ದಾಸರು , 2491 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೈಮುಗಿದು ಕೇಳಿಕೊಂಬೆ ಕರುಣಾಸಾಗರ ಶ್ರೀಕರ ಪ ಶ್ರೀಮನೋಹರ ಭಾವಿಸುತ್ತ ಭಕ್ತಿಯೀವುದೈ ಶುಭಕರ ಅ.ಪ ಕಣ್ಣ ತುಂಬ ನೋಡುವೆ ಚನ್ನ ಪಾದಯುಗಳ ನೀನಿಡುನಾ ನನ್ನಿಯಿಂ ನಮಿಪೆ ನಾರಾಯಣ 1 ಎನ್ನೊಳೆರಡು ಮಾತನಾಡು ಮೃದುನುಡಿ ಕೇಳುವೆ ಸಂ ಪನ್ನ ಕೃಪಾದೃಷ್ಟಿಯ ನೀಡು ಧನ್ಯನಾಗುವೆ ದೀನಬಂಧು2 ಬಾಲಗೋಪಾಲ ಲೀಲೆ ತೋರೋ ನಲಿಯುವೆ ಶ್ರೀಲೋಲ ಮುದ್ದಾಡುವೆ ಮುದ್ದು ಕೃಷ್ಣ3 ಎನ್ನ ಬಿನ್ನಪವ ಕೇಳು ಜನ್ಮ ಸಾರ್ಥಕವ ಮಾಡು ಇನ್ನು ಸಾವಕಾಶವೇಕೊ ಜಾಜೀಕೇಶವ ಸುವೈಭವ 4
--------------
ಶಾಮಶರ್ಮರು
ಕೈಲಾಸದ ಹುಲಿಯೇ ಕಲಿಕಲುಶವ ಕಳೆಯೊಕಾಳಿಯಾಗಿಳಿಯೇ ಪ ಕಾಲಕಾಲಕೆ ನಿನ್ನ ಕಾಲಿಗೆರಗುವೆ ಕರುಣಾಲಯತೋರೋ ಕರುಣಾಳುಗಳರಸನೆ ಅ.ಪ. ತುಳಸಿಗೆ ಕಳಸೀದರೆನ್ನ ತುಳಸಿಯ ತಾರದೆ ನಾ ಹೊಲಸಿನೊಳಳುತಿರೆ ಘಳಿಗೆಯಾ ತಾಳದೆ ಘಳಿಸಿದೆ ತುಳಸಿಯಾ ಕಳಸವ ಕಳ್ಳ ನಾ ಗೆಳೆಯನೆ ಕಳವಳಿಗಳು ಕಳುಹಿಸಿ ಕಾಳ್ವಗೈಸುವ ಕಾಳಿರಮಣ ನಿನ್ನ ಧೂಳಿ ಧರಿಸುವಂತೆ ಖೂಳನಾ ಮಾಡದೆ 1 ಚಲುವ ಚನ್ನಿಗ ನೀನಹುದೋ ಚಂಚಲ ನಯನಾ ಕರುಣಾ ಚಲ ನೀನಹುದೊ ಚಾಲೂವರಿಯಲು ಎನಗೆ ಕಾಲವು ತಿಳಿಯದು ಶೂಲಿ ಚಂಚಲ ಎನ್ನ ಸಂಚಿತಗಾಮಿ ವಂಚಿಸದೆ ಕಾಯ್ವುದೊ ಇದೇ ಕೊಡುವುದೋಕಂಬು ಕಂಧರಮಣಿ ಹಂಚುವುಗಾಣದೆ ಚಂಚಲೂ ನಯನದಿ ಸುರವಂಚಕನಾಗಿ ಪ್ರಪಂಚದಿ ಶರಪಂಚನ ಚಿಂತಿಸಿಸಂತೆಯಾನರುಹಿದ 2 ಅಕಳಂಕ ಮಹಿಮನೆ ದೋಷದೂರ ನೀ ಗುಣವಂತನೇ ಸಹಸ ಬಲವಂತನೆ ಕಾಂತಿಯ ತಂದನೆ ಕಾಂತಿಯುಳ್ಳ ಕಂತಿಯು ಧರಿಸಿದ ದಿಗಂತ ನಿಷ್ಕಿಂಜನರ ಕಾಂತನೆ ಭುಜಬಲ ಮಹಬಲವಂತನೆ ಕುರುಕಂತನೆ ಅಂತು ಇಂತು ತಂತು ಬಿಡದೆ ನಿಜ ಕುಂತಿಯ ಮಗನನ ಕಂತೆಯುಪೂಜಿಪ ಮಂತ್ರಿಯೆನಿಸಿ ಸುಖತಂತ್ರ ಪಠಿಸಿ ಶೃತಿಪಂಶವಿಂಶತಿ ದ್ವಿಪಿಂಚಕಲ್ಪವ ಮಿಂಚಿನಂದದಿ ತಪವಗೈದು ಪಂಚಪದವಿಯ ಪೊ0ದುಕೊಂಡು ಪಂಚ ಬಾಣನ ಪಿತನು ಯನಿಸಿದ ಮಾಂಗಲ್ಯ ಲಕುಮಿಯ ರಮಣ ಯೆನ ತಂದೆವರದಗೋಪಾಲವಿಠ್ಠಲನ ಆತಂಕವಿಲ್ಲದೇ ಚಿಂತಿಸುವ ನಾರಾಯಣಾಚಾರ್ಯನೇ3
--------------
ತಂದೆವರದಗೋಪಾಲವಿಠಲರು
ಕೈಲಾಸವಾಸ ಗೌರೀಶ ಈಶ ಪ ತೈಲ ಧಾರೆಯಂತೆ ಮನಸುಕೊಡು ಹರಿಯಲ್ಲಿ ಶಂಭೋ ಅ ಅಹೋ ರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ ಮಹಿಯೊಳಗೆ ಚರಿಸಿದೆನೊ ಮಹದೇವನೆ ಅಹಿಭೂಷಣನೆ ಎನ್ನವಗುಣಗಳೆಣಿಸದಲೆ ವಿಹಿತ ಧರ್ಮದಿ ಕೊಡು ವಿಷ್ಣುಭಕುತಿಯ ಶಂಭೋ 1 ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ ಅನಲಾಕ್ಷ ನಿನ್ನ ಪ್ರೇರಣೆಯಲ್ಲದೆ ದನುಜ ಗಜಮದ ಹರಿಯೆ ದಂಡ ಪ್ರಣಾಮವ ಮಾಳ್ಪೆ ಮಣಿಸು ಈ ಮನವ ಸಜ್ಜನರ ಚರಣದಿ ಶಂಭೋ2 ಭಾಗೀರಥೀಧರನೆ ಭಯವ ಪರಿಹರಿಸೈಯ ಲೇ ಸಾಗಿ ಒಲಿದು ಸಂತತ ಶರ್ವದೇವ ಭಾಗವತ ಜನಪ್ರೀಯ ವಿಜಯವಿಠ್ಠಲನಂಘ್ರಿ ಜಾಗುಮಾಡದೆ ಭಜಿಪ ಭಾಗ್ಯವನು ಕೊಡೋ ಶಂಭೋ3
--------------
ವಿಜಯದಾಸ
ಕೈವಲ್ಯ ಕೃಪೆಯ ಸುಜ್ಞಾನ ಸಾಧುಜನರ ನಿಜಸ್ಥಾನ ಅನುದಿನ 1 ವರ್ಣದೋರುವದನೇಕ ತುಂಬಿ ವರಮುನಿಗಳಿಗೆ ಕೌತುಕ ಪರಿಪೂರ್ಣಗಿಹ್ಯ ಮೂರು ಲೋಕ ದೋರುತಿಹದು ಬ್ರಹ್ಮಸುಖ 2 ಎನ್ನೊಳಗಾನಂದ ಭರಿತ ಜನವನದೊಳು ತಾ ಸಾಕ್ಷಾತ ತನ್ನೊಳಗದೆ ತಾ ಸ್ವಹಿತ ಕೈವಲ್ಯನಿಧಿ ಗುರುನಾಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1 ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2 ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3 ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4 ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5
--------------
ಕನಕದಾಸ
ಕೊಂಡಾಡಬಹುದೆ ಯತೀಂದ್ರ ಎನ್ನಾ ಪಾಂಡವಪ್ರಿಯನಾಭಜಕ ವಾದಿರಾಜಯತಿ ಪ ನಾನಾ ಜನುಮದಾ ಯೋನಿಮುಖದಲಿ ಬಂದು ಮಾನವಳಿದು ಜ್ಞಾನಶೂನ್ಯನಾಗಿಹ ಶ್ವಾನಮನದ ಮೂಢಮನುಷ್ಯನಾಗಿ ಹೀನ ಅಹಂಕಾರಪೂರಿತ ದೋಷಿಂiÀi1 ಅರಿಷಡ್ವರ್ಗದೊಳು ಸಿಲುಕಿ ನರಗುರಿಯಾಗಿ ಪರರವಾರ್ತೆಯ ಸವಿವ ಹಗಲು ಇರಳೂ ದುರುಳ ದುಶ್ಚೇಷ್ಟಿಕನು ಬಹುದುರಾತ್ಮನು ನಾನು ಗುರುಹಿರಿಯರಿಗೆ ಎರಗದ ಗೂಢಪಾಪಿಯನು 2 ಒಡೆಯ ವೈಕುಂಠ ವಿಠಲನ ಭಜಿಸದೆ ಪೊಡವಿಯೊಳು ಕ್ಷುದ್ರ ದೈವಗಳಿಗೆಲ್ಲ ಪೊಡಮಡುತಿಹೆ ಸ್ವಾಮಿದ್ರೋಹಿ ಗರುವಿಯಾ ಕಡುಪಾತಕನ್ನ ನಡತೆಯನು ನೀನರಿಯದಲೇ 3
--------------
ಬೇಲೂರು ವೈಕುಂಠದಾಸರು
ಕೊಡು ಕೃಷ್ಣನೇ ಎನ್ನ ಸಾಲವ ಬೇಗ ಕೊಡದಿದ್ದರೆ ಬಿಡೆನೊ ಪ. ತಡ ಮಾಡಿದೊಡೆ ನಿನ್ನಾಟದ ಬೆಡಗನು ಪೊಡವಿಗೆ ತಿಳಿಸುವೆನು ಜೋಕೆ ಅ.ಪ. ನೀರ ಪೊಕ್ಕರು ಬಿಡೆ ನಿನ್ನ ಭವ ವಾರಿಧಿ ದಾಟಿಸುವೆಂಬೆ ಭಾರ ಪೊತ್ತರೆ ನೀನೇ ಎನ್ನ ಸಂಸಾರ ಭಾರಕೆಂಬೇ ದೇವ ಕೋರೆ ತೋರಲು ಅಂಜುವೆನೆ ಭೂಮಿಯ ಮೇರೆ ಸಿಲಿಕದೋಡಿದರೂ ದೃಢವನು ಕೊಡದಿದ್ದರೂ ಬಿಡೆ ನಾ 1 ಕಂಬದೊಳಡಗಲು ಬಿಡೆನು ನಿನ್ನ ಡಿಂಬ ಭಜಿಪೆ ನರಹರಿಯೆ ಸಂಭ್ರಮದೊಳು ಬ್ರಹ್ಮಚಾರಿಯಾಗಲು ನಿನ್ನ ಹಂಬಲು ಬಿಡೆ ಕೊಡಲಿಯನು ತೋರಲು ಕದಂಬ ಬಾಹು ಛೇದಿಸಲು ರಾಮ ಕೊಡದಿದ್ದರೆ ದೃಢನಾ ದೇವ 2 ಒಂದು ಸ್ಥಳದಿ ಪುಟ್ಟಿ ತಿಳಿಸದೆ ಇ ನ್ನೊಂದು ಸ್ಥಳಕೆ ಪೋಗೆ ಕೃಷ್ಣಾ ಅಂದದ್ವಸನ ಬಿಟ್ಟು ಸುಂದರಿಯರ ವ್ರತ ಛಂದದಿ ಕಳೆದುನೀ ತೇಜೀಯೇರಲು ಸುಂದರ ಶ್ರೀ ಶ್ರೀನಿವಾಸ ನಿನ್ನಡಿ ದೃಢ ಕೊಡದಿದ್ದರೆ ಬಿಡೆನಾ 3
--------------
ಸರಸ್ವತಿ ಬಾಯಿ
ಕೊಡು ಕೊಡು ಕೊಡು ಹರಿಯೆ ಕೆಡದಂಥ ಪದವಿಯ ಒಡನೆ ನಿಮ್ಮಂಘ್ರಿಯ ಕಡುದೃಢ ಭಕುತಿಯ ಪ ತ್ರಿಜಗ ಪರಿಪಾಲಕ ಭಜಿಸಿಬೇಡುವೆ ನಿಮ್ಮ ಭಜನೆಸವಿಸುಖಲಾಭ 1 ಪರಕೆ ಪರತರವೆನಿಪ ಪರಮಪಾವನ ನಿಮ್ಮ ಚರಿತ ಪೊಗಳಿ ಬಾಳ್ವ ಪರಮಾನಂದದ ಜೋಕು 2 ಯತಿತತಿಗಳು ಬಿಡದೆ ಅತಿ ಭಕ್ತಿಯಿಂ ಬೇಡ್ವ ಪತಿತ ತವಸೇವೆಯಭಿರುಚಿ ಎನ್ನೊಡಲಿಗೆ ಸತತ 3 ಪರಿಭವ ಶರಧಿಯ ಕಿರಿಯಾಗಿ ತೋರಿಪ ಪರಮಪುರುಷ ನಿಮ್ಮ ಕರುಣ ಚರಣ ಮೊರೆ 4 ದುಷ್ಟ ಭ್ರಷ್ಟತೆಯಳಿದು ಶಿಷ್ಟರೊಲುಮೆಯಿತ್ತು ಅಷ್ಟಮೂರುತಿ ನಿಮ್ಮ ಶಿಷ್ಟಪಾದದ ನಿಷ್ಠೆ 5 ಕನಸು ಮನಸಿನೊಳೆನ್ನ ಕೊನೆಯ ನಾಲಗೆ ಮೇಲೆ ನೆನಹು ನಿಲ್ಲಿಸಿ ನಿಮ್ಮ ಕರುಣಘನ ಕೃಪೆ 6 ನಾಶನಸಂಸಾರದಾಸೆಯಳಿದು ನಿಜ ಸಿರಿ 7 ಮೂರ್ಹತ್ತು ಮೂರುಕೋಟಿ ವಾರಿಜಾಸನ ಸುರರು ಸೇರಿ ಭಜಿಪ ನಿಮ್ಮ ಮೂರುಕಾಲದ ನೆನಪು 8 ಅಂತರ ಶೋಧಿಸಿ ಅಂತರಾತ್ಮನ ಕಂಡು ಸಂತಸದ್ಹಿಗ್ಗುವ ಸಂತರ ಮತವರ್ಣ 9 ಸರ್ವಜ್ಞರೆನಿಸಿದವರ ಶರಣರ ಸಂಗಕರುಣಿಸಿ ಕರುಣದಿ ಪರಮ ಜ್ಞಾನೆನುವ ಪದವಿ 10 ಮಿಗಿಲಾಗಿ ನಿರ್ಧರಿಸಿ ಸಿರಿವರನಂಘ್ರಿಯೇ ಜಗಮೂರಧಿಕೆಂಬ ಸುಗುಣಗುಣಾಶ್ರಮ11 ಧರೆಮೂರು ತಲೆಬಾಗಿ ಪರಮಾದರದಿ ಪಾಡ್ವ ಹರಿನಾಮ ಕೀರ್ತನೆ ಪರಮಾದರದಿ ಪಾಡ್ವ 12 ಶಮೆಶಾಂತಿದಯೆಭಕ್ತಿ ವಿಮಲಗುಣಭೂಷಣತೆ ಸುಮನಸಸಮನಿಷ್ಠೆ ಅಮಿತಮತಿವರ ಶ್ರೀ 13 ಮಿಥ್ಯೆವರ್ಜಿತವಖಿಲ ಸತ್ಯತೆ ಸದಮಲ ನಿತ್ಯ ನಿರ್ಮಲವೆನಿಪ ತತ್ವದರ್ಥದ ವಿವರ 14 ತನುನಿತ್ಯ ಸ್ವಸ್ಥತೆ ಘನಕೆ ಘನತರವಾಗಿಮಿನುಗುವ ಘನಮುಕ್ತಿ ಮನುಮುನಿಗಳ ಪ್ರೇಮ ಶ್ರೀರಾಮ15
--------------
ರಾಮದಾಸರು
ಕೊಡು ತೊಡಿಯ ಮೇಲೆ ನೋಡು ಗಿಣಿಯು ತನ್ನಗೂಡಿನೊಳಗೆ ಹ್ಯಾಂಗೆ ಆಡುತಲಿಹುದು ಪ ಅತ್ತರೆ ನೀನು ಎನ್ಹತ್ತಿರನಿರುವನು ಗುಮ್ಮಾಪಟ್ಟಣದೊಳಗೆ ಪುತ್ರರನೊಯ್ಯುವನು 1 ಓಡಿ ಬರುತಲುಣ್ಣು ಜೋಡು ಮಾವಿನ ಹಣ್ಣುನೀಡುವೆ ರಂಗಣ್ಣಿ ನೋಡು ಬಾ ಸಖಿಯೆ 2 ಬುತ್ತಿ ಉಣ್ಣಿಸುವೆನು ವಕ್ರ ತೇಜಿಯನೇ ಎನ್ನಹಿತ್ತಲ ಗುಬ್ಬಿಯೇ ಎನ್ನ ಹತ್ತಿರ ಕೂಡೋ 3 ಪುಟ್ಟ ಮಗುವೆ ನೀರು ಗುಟುಕು ಕುಡಿದು ಉಣ್ಣುಕೊಟ್ಟು ಹೋಗೆಲೋ ಉಮ್ಮ ಅಷ್ಟು ಹುಡುಗರೊಳು 4 ಕೂಸು ಪಡೆದವಳಿಂಥಾ ಏಸು ತಪಸು ಮಾಡಿಬೇಸರಾಗದೆ ಇಂದಿರೇಶನ ಸಲಹುವಳು 5
--------------
ಇಂದಿರೇಶರು
ಕೊಡು ನಿನ್ನ ಧ್ಯಾನ ಒಡೆಯ ಶ್ರೀರಮಣ ಎಡಬಿಡದಲೆ ತವಅಡಿಭಕ್ತಿಜ್ಞಾನ ಪ ವನವಸೇರಿರಲಿ ಮತ್ತನುಗಾಲ ಬಡತನ ವನುಭವಿಸುತಿರಲಿ ಘನಸುಖದಿರಲಿ 1 ಸತಿಯಳೊಂದಿಗೆ ಬಿಡದೆ ರತಿಕ್ರೀಡೆಲಿರಲಿ ಸತತದಿ ತವಭಕ್ತಿ ಹಿತಾಹಿತದ ಚಿಂತನೆಯನು 2 ಚಳಿ ಮಳೆಯೊಳು ಬಿದ್ದು ಕಳವಳಗೊಳ್ಳುತಿರಲಿ ಹುಲಿಯ ಬಾಯೊಳು ಸಿಲ್ಕಿ ಹಲುಬಿ ಎದೆಯೊಡೆದು 3 ಕೊಟ್ಟ ಒಡೆಯರು ಬಂದು ಕಟ್ಟಿ ಕಾದಲಿ ಜನ ಬೆಟ್ಟ ಬೇಸರಮಾಡಿ ಅಟ್ಟಬಡಿಯುತಿರಲಿ 4 ಬೇನೆಯೊಳ್ ಬಿದ್ದಿರಲಿ ಹಾನಿಯಾಗಲಿ ಮಾನ ಕಾಣದೆ ಸುಳ್ಳನೆಂದು ಹೀನನುಡಿಯಲಿ ಬಿಡದೆ 5 ಹಗೆಗಳು ಬಂದೆನ್ನ ಬಗೆ ಬಗೆ ನಿಂದಿಸಿ ನಗೆಗೇಡು ಮಾಡೆನ್ನ ಜಗದೆಳಡಾಡುತಿರಲಿ 6 ಅವ ಪರಿಯಲಿರಲಿ ದೇವ ಶ್ರೀರಾಮ ನಿನ್ನ ಸಾವಿರನಾಮ ಎನ್ನ ಭಾವದಿ ನುಡೀತಿರಲಿ 7
--------------
ರಾಮದಾಸರು
ಕೊಡು ಬ್ಯಾಗಭೀಷ್ಟವ ತ್ವರದೀ - ನೀ ಸನ್ಮನದೀ ಪ ಕೊಡುವೊದೆನುತ ನಿನ್ನಡಿಯನು ಭಜಿಸುವ ಬಡವನ ಕರವನು ಪಿಡಿದೀ ಕಾಲದೀ ಅ.ಪ ವಡೆಯ ನೀನೆನುತತಿ ಹರುಷದಲಿ ನಂಬಿದೆ ನಿನ್ನಾ ಬಿಡದಲೆ ಪೊರೆ ಎನ್ನ ಕರುಣದಲಿ ಎನ್ನಯ ಕರವ ಪಿಡಿದು ಭವಶ್ರಮ ಕಳಿಯುತಲಿ - ಬಹು ತೋಷದಲೀ ನುಡಿದ ವಚನವ ಚಿತ್ತಕೆ ತಂದು ಪತಿ ಗುರುರಾಯನೆ ನೀ 1 ನಮಿಪ ಜನರಿಗೆ ಸುರಧೇನು ಭಜಿಸುವ ಜನಕೆ ಸುಮನಸೋತ್ತಮ ವರತರು ನೀನು - ಚಿಂತಿಪ ಜನಕೆ ಅಮರೋತ್ತಮ ರತುನವು ನೀನು - ಎನುತಲಿ ನಾನು ಅಮಿತ ಮಹಿಮವ ತೋರುತಲೀಗ ಶ್ರಮವ ಕಳೆದು ಸುಖಸುರಿಸುತ ನೀ 2 ಭೂತಳ ಮಧ್ಯದಲತಿ ಖ್ಯಾತ - ನೆನಿಸಿದ ನಾಥ ಪಾತಕ ಕುಲವನ ನಿರ್ಧೂತಾ - ಮಾಡುತ ನಿಜಪದ ದೂತಜನ ತತಿಮನೋರಥ - ಪೂರ್ತಿಪ ದಾತಾ ವಾತ ಗುರುಜಗನ್ನಾಥ ವಿಠಲಗತಿ ಪ್ರೀತಿಪಾತ್ರ ಸುಚರಿತ್ರ ಸುರಮಿತ್ರ3
--------------
ಗುರುಜಗನ್ನಾಥದಾಸರು
ಕೊಡುಕೊಡು ವರವನು ತಡವು ಮಾಡದೆ ಎ ನ್ನೊಡೆಯ ಶ್ರೀಹರಿ ಕೃಪೆ ಮಾಡಯ್ಯ ಪ ಬಿಡದಿರೆನ್ನನು ಜಗದೊಡತಿಯಾಣೆ ನಿ ನ್ನಡಿಗಳನೆಂದಿಗೂ ಬಿಡೆನಯ್ಯಾ ಅ.ಪ ಕ್ಷಿತಿಯೊಳಗತಿಶಯ ಪತಿತ ಪಾವನ ಶ್ರೀ ಪತಿ ನೀಗತಿ ಎನುತಿಹೆನಯ್ಯ ರತಿಪತಿಪಿತನೆ ಸುಮತಿಯನು ಪಾಲಿಸಿ ಗತಿಯನು ತೋರಿಪುದೆನಗಯ್ಯ1 ನಿನ್ನ ಪದವ ನಂಬಿ ನಿನ್ನವನೆನಿಸಿದ ಎನ್ನನುಪೇಕ್ಷಿಪರೇನಯ್ಯ ಸನ್ನುತ ನಿನ್ನನು ಮನ್ನಿಸಿ ಕೇಳುವ ಬಿನ್ನಪವಿನಿತೆ ಕೇಳಯ್ಯ 2 ಎಲ್ಲರ ಹೃದಯದೊಳಲ್ಲಿ ನೆಲೆಸಿರುವ ಫುಲ್ಲನಯನ ನೀ ಪೇಳಯ್ಯ ಕಲ್ಲುಮನದಿ ನೀನೊಲ್ಲದೊಡೀ ಜಗ ದಲ್ಲಿ ಪೋಪುದಿನ್ನೆಲ್ಲಯ್ಯ 3 ಪತಿಯಗಲಿದ ಪತಿವ್ರತೆಗೆ ಇತರರಲಿ ರತಿ ಸಂಜನಿಸುವದೇನಯ್ಯ ಗತಿಪತಿಯೆಲ್ಲರಪತಿ ನೀನೆನ್ನುತ ಶ್ರುತಿನುತಿಪುದು ಪುಸಿಯೇನಯ್ಯ 4 ಜಗದೊಳು ನಿನ್ನನೆ ಸುಗುಣಿಯು ಎನ್ನುತ ನಿಗಮವು ಪೊಗಳುತಲಿಹುದಯ್ಯ ಖಗಪತಿಗಮನನೆ ಬಗೆ ಬಗೆಯಲಿ ರತಿ ಸೊಗಯಿಸು ನಿನ್ನೊಳು ಎನಗಯ್ಯ 5 ಸೃಷ್ಟಿನಾಥಪದ ವಿಷ್ಟರ ಭಕ್ತಿಯ ಕೊಟ್ಟರಭೀಷ್ಟವು ಎನಗಯ್ಯ ಇಷ್ಟರ ಮೇಲಿನ್ನು ಲಕ್ಷ ಕೊಟ್ಟರೂ ಎನ ಗಿಷ್ಟವಲ್ಲ ಶ್ರೀ ಕೃಷ್ಣಯ್ಯ 6 ಚರಣಕಮಲದೊಳಗೆರಗುವೆ ಪುಲಿಗಿರಿ ವರದವಿಠಲ ದಯೆಯಿರಿಸಯ್ಯ ಚರಣಶರಣನಿಗೆ ಕರುಣಿಸದಿದ್ದರೆ ಕರುಣಿಗಳರಸರಿನ್ನಾರಯ್ಯ 7
--------------
ವೆಂಕಟವರದಾರ್ಯರು
ಕೊಡುವುದನೆ ಕೊಡುಮತ್ತೆ ಎಷ್ಟಾದರಭವ ಪ ಅಸುವನೀಗಲು ನಾನ್ಹಸಗೆಟ್ಟು ಬೇಡದ ಅಸಮಶುಚಿಮನ ನೀಡೊ ಕುಸುಮಾಕ್ಷ ಹರಿಯೆ 1 ಅತಿಶಯದ ಬಡತನವು ಸತತ ಪೀಡಿಸಲೆನಗೆ ಗತಿಯಿಲ್ಲದವವೆನುತ ಸತಿಸುತರು ಜರಿಲಿ ಧೃತಿಗುಂದಿ ಮತಿಗೆಟ್ಟು ವ್ಯಥೆಬಡುವ ಸ್ಥಿತಿಯನ್ನು ಹಿತದಿಂದ ತೊಲಗಿಸೈ ರತಿಪತಿಪಿತನೆ 2 ಬಿರುಕಿನೊಳು ಬಂದು ಈ ಮುರುಕು ಕಾಯದ ಇರುವು ಹರಕೊಂಡು ಹೋಗಲಿ ಹರಿ ಕರುಣದೋರೊ ನರಕಿಯೆನಿಸುವ ಮಹ ತಿರಕಿ ಸಂಸಾರದ ಮರುಕವನು ಪರಿಹರಿಸೊ ಪರಕೆ ಪರತರನೆ 3 ಊರು ನಾ ಸೇರಿರಲಿ ಅರಣ್ಯದೊಳಗಿರಲಿ ಮೀರಿದ ರೋಗದಿಂ ಘೋರ ಬಡುತಿರಲಿ ಆರೈಸದಾರನ್ನು ಸಾರಸಾಕ್ಷನೆ ನಿನ್ನ ಪಾರನಾಮದ ಸವಿ ಸುಸಾರ ಎನಗಿರಲಿ 4 ಕೊಡೋಧರ್ಮ ನಿನ್ನದಿದೆ ಬೇಡುವುದು ನನ್ನ ಧರ್ಮ ಕೊಡುವುದಾದರೆ ನೀನೆ ಕೊಡು ಎನಗೆ ಇದನು ಪೊಡವಿಯವರಿಗೆ ಬಾಗಿ ಬೇಡದ ಪದವಿಯನು ಪಿಡಿವೆ ತವಪಾದ ಎನ್ನೊಡೆಯ ಶ್ರೀರಾಮ 5
--------------
ರಾಮದಾಸರು
ಕೊಳಲಕೃಷ್ಣ ಬಂದು ನಿಲ್ಲೊ ಹೃದಯ ಕಮಲದಿ ನಳಿನನಾಭ ನಿನ್ನ ದಿವ್ಯ ಚಲುವ ರೂಪದಿ ಪ. ಶಿರದಿ ಮಕುಟ ಫಣೆಯ ತಿಲುಕ ಒಲಿವ ಮುಂಗುರುಳು ನಾಸಿಕ ಗಲ್ಲ ಹೊಳೆಯುತ 1 ಕರ್ಣದಲಿ ಕುಂಡಲಗಳು ಸ್ವರ್ಣ ಕಂಠವು ನಿನ್ನ ದಂತ ಹೊಳೆಯುತಿರಲು ಚನ್ನ ಶ್ರೀಹರಿಯೆ 2 ಅಧರ ಉರದಿ ಲಕ್ಷಿಯು ನಳಿತೋಳಿನಲಿ ಶಂಖ ಚಕ್ರ ವೇಣು ಪಿಡಿದಿಹ 3 ಕಮಲ ಮಾಲೆ ಮೇಲೆ ತುಳಸಿಯು ಮಾರಜನಕ ಹೊಳೆವೊ ಜರಿಯ ಪೀತ ವಸನವು 4 ರಕ್ತವರ್ಣ ವಸನ ಉಟ್ಟು ಕಟ್ಟಿ ಕಿರುಗೆಜ್ಜೆ ಮುಕ್ತರೊಡೆಯ ಮುಕ್ತಿಕೊಡುವ ಪಾದಕಮಲವು 5 ಕ್ಲೇಶ ಕಳೆಯುತ ದಾಸ ಜನರ ಕಾಯ್ವ ಕೃಷ್ಣ ಘಾಸಿಗೊಳಿಸದೆ 6 ಗುರುಗಳಲ್ಲಿ ನಿಂತು ಎನ್ನ ಹರುಷಪಡಿಸೊ ನೀ ಪರಮಪುರುಷ ನರಹರಿಯೆ ದುರಿತದೂರನೆ 7 ನೀರೊಳಾಡಿ ಭಾರಪೊತ್ತು ಕೋರೆ ತೋರಿದೆ ಘೋರರೂಪಿ ಬ್ರಹ್ಮಚಾರಿ ಕ್ಷತ್ರಿಯಾರಿ ನೀ 8 ಶ್ರೀ ಹರಿ ರಾಮ ಕೃಷ್ಣ ಬೌದ್ಧ ಕಲ್ಕಿಯೆ ಗೋಪಾಲಕೃಷ್ಣವಿಠ್ಠಲ ರೂಪ ತೋರೊ ನೀ 9
--------------
ಅಂಬಾಬಾಯಿ
ಕೊಳಲನೂದುವ ನಮ್ಮ ಚಲುವ ಕೃಷ್ಣಯ್ಯ ನಳಿನಾಕ್ಷಿಯರ ಮಧ್ಯೆ ಪೊಳೆವ ರಂಗಯ್ಯ ಪ. ಕರದ್ವಯದಲಿ ಶಂಖ ಚಕ್ರಪಿಡಿದಿಹ ಕಿರುನಗೆ ನಗುತ ಸುಲಿಪಲ್ಲಿನ ಚಲುವ ಸ್ವರಗಳ ಪಿಡಿಯುತ ವೇಣು ನುಡಿಸುವ ಸರಸಿಜನಾಭ ಹೃನ್ಮಂದಿರದಿ ಮೆರೆವ 1 ಜಗವ ಮೋಹಿಸುವಂಥ ನಗೆಯ ಮೊಗ ಚೆಲುವ ಹೆಗಲು ಎಡದಲ್ಲಿ ಗಲ್ಲ ತಗುಲಿಸಿ ಇರುವ ಸತಿ ಹೆಗಲಲಿ ಇಡುವ ನಗಧರ ನರ್ತನವಾಡಿ ಮುದವೀವ 2 ಕಾಲಕಡಗ ಗೆಜ್ಜೆ ಪಾಡಗರುಳಿಯು ಮೇಲೆ ಪೀತಾಂಬರ ಜರಿಯ ವೈಭವವು ಸಾಲ ಮುತ್ತಿನಹಾರ ಪದಕದ್ವಜ್ರಗಳು ಓಲಾಡುವ ನೀಲಾಂಬರ ಹೊದ್ದಿಹ ಒಲಪು 3 ಕಂಠ ಕೌಸ್ತುಭಮಣಿ ಅಧರದ ಕೆಂಪು ಕರ್ಣ ಕದಪು ಕನ್ನಡಿಯು ಬಂಟರಾದವರನ್ನು ಪೊರೆಯುವ ದೃಷ್ಟಿ ವೈ - ನಾಸಿಕ ಫಣೆಯ ತಿಲುಕವು 4 ಶ್ರೀಪತಿ ಮುಂಗುರುಳು ಶಿರದಲ್ಲಿ ಮಕುಟ ಪಾಪವ ದಹಿಸುವ ಪಾವನ ವೇಣು ಆಪಾದ ಮೌಳಿಯ ರೂಪದ ಚಲುವ ಗೋಪಾಲಕೃಷ್ಣವಿಠ್ಠಲ ಎನ್ನ ಕಾವ 5
--------------
ಅಂಬಾಬಾಯಿ