ಒಟ್ಟು 4372 ಕಡೆಗಳಲ್ಲಿ , 120 ದಾಸರು , 2472 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯ ನೆಚ್ಚಿ ಮಾಯಾ- ಡಂಬರಕೊಳಗಾಗಿ------ದುರ್ಜನರು ಪ ಎಂಬತ್ತು ನಾಲ್ಕು ಲಕ್ಷ ಜೀವರಾಶಿಗಳ ಇಂಬಿನಲ್ಲಿ ಹುಟ್ಟಿ ವ್ಯಥೆಯ ಬಿಟ್ಟು ಸಂಭ್ರಮದಿ ಸುಖದು:ಖ ಸಂಸಾರದೊಳು ಬಿದ್ದು ಕುಂಭಿಣೀ ದೇಹಮರೆತು ಕಡೆಗೆ ಹೋಗ್ವದು ತಿಳಿದು 1 ಈ ಶರೀರದ ಭೋಗ ಎನಗೆ ಶಾಶ್ವತವೆಂದು ಏಸೊ ಪರಿಯಿಂದ ಹಾರೈಸಿ ಇನ್ನೂ ಆಸೆಯಿಂದ ನೀ ಬಹಳ ಕಾಲ ಮೃತರಾಗುವದು ತಿಳಿದು 2 ನಿಶ್ಚಯವಿಲ್ಲದ ದೇಹಗಳು ನಿಜವೆಂದು ಮಂದನಾಗಿ ಅಚ್ಯುತ 'ಹೆನ್ನೆವಿಠ್ಠಲ’ನ ಅರಿಯದಿನ್ನು ಎಚ್ಚರಿಕೆಯನು ತಪ್ಪಿ ಇಹಲೋಕವನು ತ್ಯಜಿಸಿ
--------------
ಹೆನ್ನೆರಂಗದಾಸರು
ಕಾಯ ಪ ಗತಿ ನೀನೆ ಎನಗೆ ಸಂತತ ಪರಂಧಾಮಾ ಅ ಕೃಪಣ ವತ್ಸಲನೆ ಎಮ್ಮಪರಾಧಗಳ ನೋಡಿ ಕುಪಿತನಾಗುವರೇನೋ ಸುಫಲದಾಯೀ ನೃಪಗನಿರುದ್ಧ ಬಿನ್ನಪವ ಮಾಡುವೆ ನಿನಗೆ ಚಪಲ ಚಿತ್ತರಾದ ಕಾಶ್ಯಪಿಸುರರನ ಕಾಯೋ 1 ಮಾನ್ಯಮಾನದನೆ ಬ್ರಹ್ಮಣ್ಯದೇವ ನೀನೆಂದು ಉನ್ನತ ಶ್ರುತಿಗಳು ಬಣ್ಣಿಸುವುವು ಸನ್ನುತ ಮಹಿಮನೆ ನಿನ್ನ ಪೊಂದಿದವರ ಬನ್ನ ಬಡಿಸುವುದು ನಿನಗಿನ್ನು ಧರ್ಮವು ಅಲ್ಲ 2 ಹಲವು ಮಾತುಗಳಾಡಿ ಫಲವೇನು ಬ್ರಾಹ್ಮಣರ ಕುಲಕೆ ಮಂಗಳವೀಯೋ ಕಲುಷದೂರ ಸುಲಭ ದೇವೇಶ ನಿನ್ನುಳಿದು ಕಾವರ ಕಾಣೆ ಬಲಿಯ ಬಾಗಿಲ ಕಾಯ್ದ ಜಗನ್ನಾಥ ವಿಠಲಾ 3
--------------
ಜಗನ್ನಾಥದಾಸರು
ಕಾಯ ಬಲು ಹೇಯವೊ | ಸಾಕು ಸಾಕು ಸಂಸಾರ ನೆಚ್ಚದಿರು ಎಚ್ಚರಿಕೆ ಪ ಊಧ್ರ್ವಾಧೋ ಭಾಗದಿಂದ ಕೂಡಿದಾ ರಕ್ತಶುಕ್ಲ | ಅರ್ಧರ್ಧ ಪ್ರವೇಸಿಯಾಗಿ | ವರ್ಧನಾಗಿ ಮಾಂಸ ಪಿಂಡಿಕೆಯಲಿ ಬೆಳೆದು | ಅರ್ಧವದೊಳಗೆ ಬಳುಲುವುದೇನೊ ಮಹಾ ಕಠೀಣಾ 1 ಸನ್ನಿರೋಧವಾದ ಪ್ರಾದೇಶದಲಿ ನೀನು | ಬನ್ನ ಬಡುವದು ಜನಕೆ ಅರಿಯನಲ್ಲಾ | ಮುನ್ನೆ ಇಂದ್ರನಿಗಾಗಿ ವರವಿತ್ತ ಸಂಪತ್ತು | ಇನ್ನು ನಿನ್ನ ಸುತ್ತ ಬಂದದೆ ತಿಳಿದುಕೋ 2 ವಾತ ಶೈತ್ಯಜ್ವರ ಕೆಮ್ಮು | ಸಪುತ ಧಾತುಗಳಿಂದ ಬರುವ ರೋಗ | ಕ್ಲೇಶ ಮೋಹಗಳೊಡನೆ | ಮಾಯಾ 3 ಕಾಮ ಮದ ಗರ್ವದಲಿ ಪುಂಜನಾಗಿ ದುರಳ ನಿ | ಜ ಮಗಳ ಕೂಡ ಬೆರದಾಡಿ ಬೆರೆದು | ರೋಮರೋಮ ವಿಷಯ ಪೂರ್ತಿಯಾಗಿ ಚರಿಸಿ | ಪಾಮರನಾಗಿ ಬಳಲದಿರು ಬಹು ಜೋಕೆ 4 ಸತಿ ಸುತರು ಮಿಕ್ಕಾದ ಬಂಧುಗಳು ನೆರೆನೆರೆದು | ಪ್ರತಿದಿವಸದಲಿ ಅಟ್ಟುವುದು ನೋಡು| ಮತಿ ಚಂಚಲವಾಗಿ ಸತ್ಕರ್ಮ ವೃತ್ತಿಗೆ | ಪ್ರತಿಕೂಲವಾಗುವದು ಪ್ರೀತಿಯಾಗದು ಮುಂದೆ 5 ಎಂತು ನೋಡಲು ವಿಷಯ ಅನುಭವಿಸಿದರು ಅದರ | ಅಂತು ಕಂಡವರಾರು ವಲ್ಲೆನೆಂದು | ಭ್ರಾಂತಿಯಿಂದಲಿ ತಿರುಗಿ ಬಯಲಾಗೋದಲ್ಲದೆ | ಚಿಂತೆ ಇಷ್ಟಷ್ಟು ಏನೆಂದು ಪೇಳಲಿ 6 ಯಲೋ ಮನವೆ ಸಾರಿ ಪೇಳಿದೆನು ಚನ್ನಾಗಿ ನೀ | ನೆಲೆ ಮಾಡಿಕೋ ಜ್ಞಾನ ಭಕುತಿ ವಿತ್ತಾ | ಸುಲಭ ದೇವರ ದೇವ ವಿಜಯವಿಠ್ಠಲರೇಯ | ಕೆಲಕಾಲ ನೆನೆದು ಸುಖಿಯಾಗು ಸುಜನರಾ ಕೇಳು 7
--------------
ವಿಜಯದಾಸ
ಕಾಯ ಸುತ್ತಿ ಬಾಯ ಹೊಯ್ವುದು ಆಯ ತಪ್ಪಿ ಆಯ ಕೆಟ್ಟ ನ್ಯಾಯಬಪ್ಪುದು ಪ ಹೆತ್ತ ತಾಯಿ ತಂದೆಯನ್ನು ಒತ್ತಿ ಬಯ್ವುದು ಅತ್ತೆಯನ್ನು ಕಂಡು ಹರುಷವಿತ್ತು ನಗುವುದು ಮೃತ್ಯುವನ್ನು ತಂದು ತನ್ನ ಹತ್ತಿರಿಡುವುದು ಒತ್ತಿನವನ ಹೊರಗೆ ಸಾರೆನುತ್ತ ನುಡಿವುದು 1 ಗುರುಗಳನ್ನು ಜರೆದು ಕರೆಕರೆಯ ತಪ್ಪುದು ಕೊರಳು ಕೊಯ್ಕರನ್ನು ತಾನು ಸೆರಗ ಪಿಡಿವುದು ಮರವೆ ತೋರ್ಪುದು ಗರುವತನದಿ ಪರರ ಒಡವೆ ಇರುಳು ಸುಲಿವುದು 2 ದಾನದತ್ತವಾದುದನ್ನು ತಾನು ಸೆಳೆಯುವುದು ಮಾನವನ್ನು ಹಿಡಿದು ಮೇಲೆ ಮಾನಯಿಡುವುದು ಜ್ಞಾನಿಯನ್ನು ಕಂಡು ಮನದಿ ಬೇನೆ ತೋರ್ಪುದು ಅನಾಥರನ್ನು ಕಂಡು ಬಹು ಹೀನ ನುಡಿವುದು 3 ಅನ್ನವನ್ನು ಇತ್ತವರ ಮುನ್ನ ಬೈಯ್ವುದು ಭಿನ್ನ ಭೇದ ತೋರಿ ಮನವ ಕನ್ನ ಕೊರೆವುದು ತನ್ನವರ ಮರೆತು ಪರರ ಕನ್ಯೆಗಳುವುದು ಹೊನ್ನ ಬೊಂಬೆಯಂತೆ ಮಾಯೆ ಬೆನ್ನ ಸುಳಿವುದು 4 ತಪ್ಪಿ ನಡೆಯೆ ಈ ಪರಿಯೊಳಿಪ್ಪೆಯೆಂಬುದು ಅಪ್ಪ ವರಾಹತಿಮ್ಮಪ್ಪನ ಸೇರಿಕೊಂಬುದು ಒಪ್ಪಿ ತೋರ್ಪ ಮಾಯೆಯೆಲ್ಲ ತಪ್ಪಿ ಪೋಪುದು ಉಪ್ಪರದ ದಾಸ ಪೇಳ್ದ ಒಪ್ಪಿಕೊಂಬುದು 5
--------------
ವರಹತಿಮ್ಮಪ್ಪ
ಕಾಯ ಸತ್ಯ ಸತ್ಯ ಸರ್ವ ಜೀವರನಿಟ್ಟುಕೊಂಡು ವಿಸ್ತಾರವಾದೊಂದಾಲದೆಲೆಯಲ್ಲಿ ಮಲಗಿದ್ದು ಅ.ಪ. ಹರಿ ಹ್ಯಾಗೆ ನಿತ್ಯನೊ ಹಾಗೆ ಜೀವನು ನಿತ್ಯ ಹರಿಯೆಂಬೋ ಧಣಿಗೆ ಈ ಜೀವನು ಭೃತ್ಯ ಹರಿ ಜೀವರೊಳಗೆ ಹೀಗೆ ತಿಳಿದವನು ಧರೆಯೊಳಗೆಂದೆಂದಿಗು ಕೃತಕೃತ್ಯನು 1 ಹರಿಯೆಂಬೊ ರಾಜಗೆ ಗುರುಮೂರುತಿ ಮಂತ್ರಿ ಪರಿವಾರ ಇವರಯ್ಯ ಜೀವಂಗಳು ಅರಿತು ಈ ವಿಧದಲ್ಲಿ ನಿರುತ ಪಾಡುವರಿಗೆ ಪರಲೋಕದಲಿ ದಿವ್ಯಭೋಗಂಗಳು 2 ಭಿನ್ನ ಭಿನ್ನ ಜೀವ ಭಿನ್ನ ಭಿನ್ನ ಕರ್ಮ- ವೆನ್ನುವುದೆ ಘನ್ನತತ್ವಂಗಳು ಅನ್ಯಥಾನುಡಿಯಲ್ಲ ಇನ್ನು ಸಂಶಯವಿಲ್ಲ ಎನ್ನೊಡೆಯ ಹಯವದನ ಬಲ್ಲ 3
--------------
ವಾದಿರಾಜ
ಕಾಯವಿದು ನಿತ್ಯವೆಂದು ನೆಚ್ಚಬೇಡ ಮಾಯಾಕಾರ್ಯನಾಗಿ ಮೆರೆವುದಿದು ತಿಳಿದುನೋಡಾಕಾಯವಳಿವ ಮುನ್ನ ಹರಿಯ ಕೃಪೆಯ ಜೋಡ ತೋಡುನಾಯಬಾಯತುತ್ತ ನಂಬಿ ಬೆರೆಯ ಬೇಡ ಪಮಾತಾಪಿತೃರೇತಸ್ಸಿಂದ ಪತನವಾಗಿ ಪಂಚಭೂತಕಾರ್ಯದಿಂದ ಸ್ಥೂಲಾಕಾರವಾಗಿರೇತಸ್ಸು ರಕ್ತಗಳಾರು ಕೋಶವಾಗಿ ಕರ್ಮಜಾತಕಾಯ ಹೀಗೆ ತೋರುತಿಪ್ಪುದಾಗಿ 1ಹುಟ್ಟಿ ಬೆಳೆದು ನಲಿದು ಮುಪ್ಪಿನಿಂದ ಕ್ಷೈಸಿ ಕಡೆಗೆನಷ್ಡವಾಗಿ ಹೋಗಿ ಮಣ್ಣಿನೊಳಗೆ ಬೆರಸಿಇಷ್ಟೂ ಪರಿಯೊಳಾರು ವಿಕಾರವ ತೋರಿಸಿ ವಂದಿಷ್ಟೂ ಫಲವಿಲ್ಲದಂತೆ ುದಕೆ ಭ್ರಮಿಸಿ 2ಕಾಲಕರ್ಮ ಪಂಚಭೂತ ಮಿಳಿತವಾಗಿ ಇದಕೆಮೂಲವಾದ ಕರ್ಮವೆ ಪ್ರಧಾನವಾಗಿಢಾಳಿಸುವಾತ್ಮನ ತೇಜಾಧಾರವಾಗಿ ಕರ್ಮತೇಲಲಾಗಿ ದೀಪದಂತೆ ಪೋಪುದಾಗಿ 3ಬತ್ತಿಯನ್ನು ಎಣ್ಣೆಮುಗಿವ ಸಮಯಕಾಗಿ ಎಣ್ಣೆಯೂಮತ್ತೆ ತಂದು ತುಂಬೆ ದೀಪ ಪೋಗದಾಗಿಇತ್ತೆರದ ಕರ್ಮದಿಂದ ಚಕ್ರವಾಗಿ ಜನ್ಮಮೃತ್ಯುಗಳೀ ದೇಹಕ್ಕವಧಿುಲ್ಲವಾಗಿ 4ತೈಲಮಿಶ್ರವರ್ತಿಯಗ್ನಿ ಸಮ್ಮೇಳದಿಂದಾ ದೀಪಬಾಳಿಬೆಳಗುವುದು ತೈಲದಾಧಾರದಿಂದಾತೈಲಮುಗಿಯೆ ದೀಪ ಕೆಟ್ಟು ಹೋಹ ಛಂದದಂತೆಕೇಳು ದೇಹವೀಪರಿಯೊಳಿಹುದರಿಂದಾ 5ಹುಟ್ಟಿದಲ್ಲಿ ಸೂತಕವು ಹೊಂದಿದಲ್ಲಿ ಸೂತಕವುಮುಟ್ಟಿವಸ್ತುಗಳುಚ್ಚಿಷ್ಟಂಗಳಹವೂನಟ್ಟನಡುವೆ ಬಂದದೆಂದು ಶಿಷ್ಟರಿದ ಮನ್ನಿಸರುನಷ್ಟವಾಗಿ ಕಡೆಗೆ ತಾನು ಹೋಹ ದೇಹವೂ 6ತಾನು ಬಂದ ಬಗೆಯು ತನಗೆ ತಿಳಿಯದಿದ್ದರೂ ನಿನ್ನಸೂನು ಬಂದ ಬಗೆಯ ನೋಡಿ ತಿಳಿದುಕೊಂಡಾರುಹೀನನಾದ ಕಾಯವಭಿಮಾನಿಸದಿರು ಮುಂದೆಶ್ರೀನಾಥನ ಪದವ ಭಜಿಸಿ ಸುಖದಿಂದಿರುತಿರು 7ಮನವೆ ಮಿಥ್ಯದೇಹದಭಿಮಾನವೇತಕೆ ಬಹುಜನುಮ ಜನುಮದಲ್ಲಿ ದುಃಖದಗೆ ನೂಕೆಕೊನೆಗೂ ಹೀಗೆ ಬಂಧವನ್ನು ಕೊಡುವದಕ್ಕೆ ಮಚ್ಚಿಜಿನುಗುವಿರಿಕೆಯೇನು ಇನ್ನೂ ಬಿಡದೆ ಬಯಕೆ 8ಘೋರರೂಪಾಪಾರಸಂಸಾರಾಂಬುಧಿಯನ್ನೂಮೀರಲೇರು ವೆಂಕಟೇಶನಾಮನಾವೆಯನ್ನುಧೀರಗುರು ವಾಸುದೇವರಂಘ್ರಿಯನ್ನು ಬೇಗಸಾರುವ ವಿವೇಕತನವಂದು ಚೆನ್ನೂ 9ಕಂ|| ಜೀವನು ವಿರತಿಯ ಸಾಧಿಪಭಾವಧಿ ಮನದೊಡನೆ ಕಾಯವ ನೆಚ್ಚದಿರೆನ್ನುತಕೈವಲ್ಯದ ಪಥವ ಪೇಳಲುಜೀವನೊಳಾಡಿದುದು ಕಾಯವಚ್ಚರಿಯೆನ್ನಲೂ
--------------
ತಿಮ್ಮಪ್ಪದಾಸರು
ಕಾಯೊನೀನೆ ಕರುಣದಿ ಪ ರಾಮರಾಮಯೆಂದು ಪೊಗಳುವನು ಮಹಾರಾಜ ಸಾರ್ವಭೌಮ ಪೂರ್ಣ ಕಾಮನೆ ದಶರಥಾವನೀಶ ಕುಮಾರ 1 ದೇವದೇವನೆ ಕೃಪಾವಲೋಕನದಿ ದೀನಜನರ ನೋಡೊ ನೀದಯಮಾಡೊ ನೀಡೋಯನ್ನದುರಿ- ಜಯಜಯ ಪ್ರಭೋ ಭಂಜನ ಜಗ ಜ್ಜೀವನ ನತಜನ ಸಂಜೀವನಸು- ಶುಭ ಕುಶೀಲವರತಾತ ಸುಪ್ರೀತ2 ಸರಿಸಿಜೋದ್ಭವಾದ್ಯಮರನಾಯಕ ಸಾಧುರಕ್ಷಸ್ಸದ್ಧರ್ಮ ಪಾಲಕ ಮನುಜವೇಷ ದುರ್ಜನ ಕಾಲ ಶರಧಿ ಸೇತು ಬಂಧನ ಕಂಜೇಕ್ಷಣ ಮಾಂ ಪಾಹಿ ರಘುವೀರ 3
--------------
ಗುರುರಾಮವಿಠಲ
ಕಾರು ಯಾರಮನೆಗುಂಟು ಖೋಡಿ ಚೋರತ್ವದಪಹಾರ ಮಾಡಿ ತಿಂದದ್ದೆಲ್ಲ ಪ ಕಾಯಜನಯ್ಯನ ದಿವ್ಯ ಚರಿತಗಳನ್ನು ಬಾಯಿಂದ ಪೊಗಳುತ ಕೈಯಿಂದ ಬರೆದು ಮಾಯಾಮೋಹವ ಬಿಡದೆ ನ್ಯಾಯಮಾರ್ಗವತಪ್ಪ ನ್ಯಾಯದಿಂ ಪರರೊಡವೆ ಬಾಯ್ಬಡಿದು ತಿಂದದ್ದು 1 ನಳಿನನಾಭನ ವಿಮಲ ಸುಲಲಿತ ಮಹಿಮೆಗಳ ತಿಳಿದು ಆನಂದದಿಂ ನಲಿನಲಿದು ಹಿಗ್ಗದೆ ಇಳೆಯ ವಾಸನೆಯಿಂದ ಅಳಿವ ಸುಖದಾಸೆಗೆ ಇಳೆಜನರ ಗಳಿಕೆಯನು ಕಳವಿನಿಂ ತಿಂದದ್ದು 2 ಭೂಮಿಯೊಳಧಿಕ ಶ್ರೀರಾಮನ ದಾತೃತ್ವ ಹೇ ಮನವೆ ನೀ ತಿಳಿದು ಪಾಮರತ್ವ ಬಿಡದೆ ಕಾಮಿತದೊಳು ಬಿದ್ದು ಭೂಮಿ ಜನರೆದುರಿಗೆ ಸ್ವಾಮಿಭಕ್ತಿಯ ತೋರಿ ಕಾಮಿಸಿ ತಿಂದದ್ದು 3
--------------
ರಾಮದಾಸರು
ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು
ಕಾಲಬೆರಳು ಬಾಯೊಳೇತಕೊ ರಂಗಯ್ಯ ನಿನ್ನ ಪ ಸಾಲದಾಯ್ತೆ ಭಕ್ತರಿತ್ತ ಕಾಲೋಚಿತ ಶಾಲ್ಯನ್ನವುಹಾಲೋಗರ ಭಕ್ಷ್ಯಗಳು ಅ.ಪ. ಆಲದೆಲೆಯ ಮೇಲೆ ಮಲಗಿರೆ ಚೆಲುವ ನಿನ್ನಕಾಲುಚಾಚಲನುವೆ ಇಲ್ಲವೆಬಾಲನಿನ್ನ ನಾಭಿಕಮಲ ಕಾಲಿವಾಲಿದಲ್ಲಿ ಗಂಗೆಜಲವ ಬಿಡುತಲಿರುವೆಯೇನು 1 ಹಸಿವೆ ಬಹಳವಾಗಿರುವದೆ ನಿನ್ನಮ್ಮ ಆಯಶೋದೆ ನಿನಗೆ ಮೊಲೆಯನುಣಿಸಳೆನಿಶಾಚರಿ ಪೂತನಿಯ ಮೊಲೆಯವಿಷವನುಂಡ ಕಾರಣದಲಿ ನೀರಡಿಸುತಲಿರುವೆಯೇನು 2 ಪದದಿಂದಲಿ ಬರುವ ಗಂಗೆಯ ಉದಕದಿಂದಉದರದೊಳಿಹ ಜೀವರಾಶಿಯಮುದದಿಂದುದ್ಧರಿಸಲೆಂದುಪದುಮಾಕ್ಷನೆ ಜುರುಜುರು ನೀ ಚೀಪಲಿರುವೆಯೇನು ಹೇಳು 3 ಹಸುಳ ನಿನ್ನ ಪದದೊಳಿಡುತಿಹ ಭಕ್ತರ ಭಕ್ತಿರಸವ ಸವಿದು ನೋಡುತಿರುವೆಯಾಪೆಸರನೆತ್ತ ಗದುಗಿನ ಶ್ರೀ ವೀರನಾರಾಯಣನೆದಯವ ತೋರಿ ಹೇಳು ಬೇಡುತಿಹೆನು 4
--------------
ವೀರನಾರಾಯಣ
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾವನಯ್ಯಾ ಜಗವನನುದಿನ | ದೇವ ತಿರುಪತಿಯ ದಾಸಾ ಶ್ರೀ ವಲ್ಲಭವೆಂಕಟೇಶಾ ಪ ತರಳ ಉತ್ತಾನಪಾದಿಯ ನೋಡು | ಮಂದ ಕಾಯನ್ನ | ಕುರೂಪಿಯಾದ ಕುಬಜೆ ವ್ಯಭಿ | ಚರಿಯ ಅಜಮಿಳನ ಕಾಯದ 1 ಬಡವನಾಗಿದ್ದ ಸುಧಾಮ ಕೊಲೆ ಗಡಿಕನಾದ ಕಿರಾತನ್ನ ನೋಡು | ನಡತೆ ತಪ್ಪಿದ ಸುಗ್ರೀವ ಕುಲವ | ಕಡಿದ ಪಾರ್ಥನ್ನ ಕಾಯದಾ 2 ಇಟ್ಟಿಗೆ ವಗೆದ ಪುಂಡಲೀಕನ | ಬೆಟ್ಟಲೆ ಬೆಟ್ಟವ ನೆತ್ತಿಸಿದವನಾ | ಪೆಟ್ಟನು ಫಣಿಗೆಯಿಟ್ಟ ಭೀಷ್ಮನ | ಕಟ್ಟಿಬಿಗಿದ ಗೋಪಿಯ ಕಾಯದಾ3 ಜನನ ನೋಡು ವಿದುರನ್ನ ಕ ರುಣಿ ಎಂಬೆನೆ ರುಕುಮಾಂಗದ | ಮನೆ ಉಳ್ಳವರೆ ಸನಕಾದಿಗಳು | ಮಣಿಹಾಕಿಸಿದ ಭೂಪತಿಯ ಕಾಯದಾ4 ಶಕುತಿ ಮಿಕ್ಕಾದ ಕರ್ಮಗಳು ನೋಡಾ | ಭಕುತಿಗೆ ಮಾತ್ರ ಸಿಲುಕುವವನು | ಭಕುತವತ್ಸಲ ಶ್ರೀನಿವಾಸಾ | ಅಕಳಂಕ ರೂಪ ವಿಜಯವಿಠ್ಠಲ 5
--------------
ವಿಜಯದಾಸ
ಕಾವವನೆ ಕರ್ಮಜಯ ಬಳಿಕಂ ಸಾವವನೆ ಉಣ್ಣುವರು ಜನರು ಭಾವವನೆ ಅರಿದಿರಿಸು ಜೀವರ ನಿನ್ನಂಘ್ರಿಯಲಿ ಪ ದಾಸವೃಂದವು ತೋಷದಿಂದಲೆ ಪೂಶರಯ್ಯನ ವಿಡಿದು ಘನ ಸಂ- ಸುಕೃತ ಫಲವಿಹುದೋ ಶ್ರೀಶನಲಿ ನಿಜದಾಸ ಭಕುತಿಯ ಮೀಸಲಿರಿಸೀ ಮನವ ಮೋಹದೆ ಆಶೆ ಗಳಿಸದೆ ಶ್ರೀಹರಿಯ ನಿಜವಾಸ ಕೈಯ್ಯುವರು 1 ಮೃಗಜಲಕೆ ನೀರೆಂದು ಭಾವಿಸಿ ಪೊಗಲೆಳಿಸುವೆರಳೆಗಳ ಪರಿಯಲಿ ಮೃಗನಯನೇರತಿ ಚೆಲ್ವಿಕೆಗೆ ಜಗವೆಳಸಿ ಬಳಲುವದು ಮಿಗಿಲಾಗಿದ ವಿಷಯಲನಲದಿ ಧಗಧಗಿಸಿ ಜನಗಳು ಪೋಪರಲ್ಲದೆ ಖಗಪತೀ ವಾಹನನ ನೆನೆಯರು ಜಗವ ಪಾವನನು 2 ನೀರಜಾಸನ ಪಿತನೆ ಅಕ್ಷಯ ಶ್ರೀ ರಮಾವಲ್ಲಭನೆ ತವ ಪರಿ ವಾರವಲ್ಲದೆ ಸತಿಸುತರು ಮೇಣ್ ದೇಹ ಬಾಂಧವರು ಸಾರಸುಮತಿಯನಿತ್ತೆಮಗೆ ಹರೆ ಸೇರಿಸೆಮ್ಮನು ನಿನ್ನ ಅಡಿಯಲಿ ಧೀರ ಶ್ರೀ ನರಸಿಂಹವಿಠ್ಠಲ ಪಾರಗಾಣಿಪುದು 3
--------------
ನರಸಿಂಹವಿಠಲರು
ಕಾಳ ಬೆಳದಿಂಗಳು ಈ ಸಂಸಾರ ಕತ್ತಲೆ ಬೆಳದಿಂಗಳು ಪ ಸತ್ಯಕ್ಕೆ ಧರ್ಮನು ಲೆತ್ತವನಾಡಲುಅರ್ಥ ಭಾಂಡರವೆಲ್ಲವ ಸೋತುಮತ್ತೆ ವಿರಾಟರಾಯನ ಮನೆಯಲ್ಲಿತೊತ್ತಾದಳು ದ್ರೌಪದಿ ಒಂದು ವರುಷ1 ಪುಂಡರೀಕಾಕ್ಷ ಪುರುಷೋತ್ತಮ ಹರಿಯಬಂಡಿಬೋವನಾದ ಪಾರ್ಥನಿಗೆ ಭೂ -ಮಂಡಲನಾಳುವ ಹರಿಶ್ಚಂದ್ರರಾಯನುಕೊಂಡವ ಕಾಯ್ದನು ಹೊಲೆಯನಾಳಾಗಿ2 ಉಂಟಾದ ಕಾಲಕ್ಕೆ ನೆಂಟರು ಇಷ್ಟರುಬಂಟರಾಗಿ ಬಾಗಿಲ ಕಾಯ್ವರುಉಂಟಾದತನ ತಪ್ಪಿ ಬಡತನ ಬಂದರೆಒಂಟೆಯಂತೆ ಗೋಣ ಮೇಲೆತ್ತುವರು 3 ಉಂಬಾಗ ಉಡುವಾಗ ಕೊಂಬಾಗ ಕೊಡುವಾಗಬೆಂಬಲದಲಿ ನಲಿನಲಿವುತಿಹರುಬೆಂಬಲತನ ತಪ್ಪಿ ಬಡತನ ಬಂದರೆಇಂಬು ನಿನಗಿಲ್ಲ ನಡೆಯೆಂಬರು4 ಏರುವ ದಂಡಿಗೆ ನೂರಾಳು ಮಂದಿಯುಮೂರು ದಿನದ ಭಾಗ್ಯ ಝಣ ಝಣವುನೂರಾರು ಸಾವಿರ ದಂಡವ ತೆತ್ತರೆರಂಗವಿಠಲನೆ ಸರಿಯೆಂಬೊರಯ್ಯ5
--------------
ಶ್ರೀಪಾದರಾಜರು
ಕೀರ್ತನೆಗಳು ಅಪರಾಧಿ ನಾನಲ್ಲ ಅಪವಾದಯನಗಿಲ್ಲಾ ಪ. ಕಪಟನಾಟಕ ಕೃಷ್ಣ ಯನಗೆ ನೀನಪರಾಧಿ ಅ.ಪ. ನೀನು ಆಡಿಸಲು ಜೀವಗಳನುದಿನದ ಬೊಂಬೆ ಆನೆ ಬಲ್ಲೆನೆ ಬ್ಯಾರೆ ಪಥವನೊಂದಾ ನೀನಿಟ್ಟ ಸೂತ್ರದಂತಿರಲು ಕೈಕಾಲುಗಳು ನೀನು ಮುಗ್ಗಿಸಲು ಮುಗ್ಗುವ ಜೀವ ನಾನಾದೆ 1 ಒಂಬತ್ತು ಬಾಗಿಲುವುಳ್ಳ ಪಟ್ಟಣದೊಳಗೆ ತುಂಬಿದಿಪ್ಪತ್ನಾಲ್ಕು ಮೊನೆಯಾಳ್ಗಳ ನಂಬಿಸಿ ಕಾವಲು ನೀನು ಎನ್ನೊಳಗಿದ್ದು ಕಂಬುದಾ (?) ಯೇರಿ ಕೊಲಿಸುವುದು ನಿನಗನ್ಯಾಯ 2 ಅಂತರಾತ್ಮಕ ನೀನು ಒಳಗಿದ್ದಾ ಬರಿ ತಂತ್ರಿಯೆಂದೆನ್ನ ಕೊಲ್ಲಿಸುವರೇನೊ ಹೇಳೋ ಕಂತುವಿನ ಜನಕ ಲಕ್ಷ್ಮೀರಮಣ ಕಾಯಬೇ- ಕೆಂತೆಂದೆನ್ನ ಅಚಲಾನಂದವಿಠಲ ಪುರಂದರ ವಿಠಲ ಅಂಕಿತದಲ್ಲೂ ಇದೆ.
--------------
ಅಚಲಾನಂದದಾಸ