ಒಟ್ಟು 8035 ಕಡೆಗಳಲ್ಲಿ , 127 ದಾಸರು , 4382 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲ್ಲ ಲೀಲೆ ಇದೆಲ್ಲ ಲೀಲೆಎಲ್ಲ ಲೀಲೆ ರಂಗಗೆಲ್ಲ ಲೀಲೆ ಪ. ಪುಟ್ಟಿಸುವುದು ಮನವಿಟ್ಟು ಕಾವುದುದುಷ್ಟರ ಶಿಕ್ಷೆ ಅಲ್ಲಿ ವಿಶಿಷ್ಟರ ರಕ್ಷೆ1 ನೀರೊಳುಲ್ಲಾಸ ಮತ್ತಾರಣ್ಯವಾಸಹಾರುವರಾಟ ತನ್ನ ನಾರಿಯ ಬೇಟ 2 ಗೊಲ್ಲರಾಕೃತಿ ಬತ್ತಲೆಯ ಸ್ಥಿತಿಬಲ್ಲಿದ ದೈವ ಕಲಿಯ ಗೆಲ್ಲುವ ಭಾಗ 3 ವರನಿಪ್ಪುದು ಕರೆದರೆ ಬಪ್ಪುದುಧರೆಯಜಮ ಪರಿಪರಿಯ ಕರ್ಮ4 ಹೆಂಗಳಕೂಟ ಅಪಾಂಗದ ನೋಟ ಹಾಸ್ಯದಂಗದಿಂದೂಟ ರಣರಂಗದಿಂದೋಟ 5 ಅಂಬಿನ ವೇಧ ನಿನ ತುಂಬಿದ ಕ್ರೋಧ ತ್ರಿ-ಯಂಬಕ ಪೂಜೆ ತ್ರಿವಿಡಂಬನವೋಜೆ6 ಕರ್ತುಮಾಕರ್ತು ಮತ್ತನ್ಯಥಾಕರ್ತು ಎಂಬಶಕ್ತಿದೇವಗೆ ಬಲುಯುಕ್ತಿ ಇವಗೆ7 ನಾವೆಕರ್ತವ್ಯಂ ಸುಪ್ರವೆ ವಕ್ತವ್ಯಂಏಸು ಮಹಿಮೆಗೆ ಕೃತಕೃತ್ಯ ನಮಗೆ 8 ಪ್ರಿಯಮೋದನ ದೈತ್ಯೇಯಭೇದನಹಯವದನ ನಿನ್ನರ್ಥಿ ಕಾಯಿದನ9
--------------
ವಾದಿರಾಜ
ಎಲ್ಲಡಗಿದನೊ ಹರಿ ಎನ್ನಯ ಧೊರಿ ಪ ಎಲ್ಲೆಲ್ಲಿ ಪರಿಪೂರ್ಣನೆಂಬೊ ಸೊಲ್ಲನು ಮುನ್ನಾ ಮಲ್ಲಮರ್ದನ ಪುಲ್ಲಲೋಚನ ಹರಿಅ ಪ ಶರಣೆಂದವರ ಕಾಯ್ವ ಕರುಣಾ ಸಮುದ್ರನು ಕರುಣನ ಅರಿಯದೆ ಹರಿಣಾಂಕ ನಿಭವಕ್ತ್ರ 1 ಕರಿರಾಜನ ಮೊರೆ ಕೇಳಿ ತ್ವರಿತದಿಂದ ಗರುಡನೇರಿ ಬಂದ ಗರ್ವರಹಿತ ದೇವ 2 ವರ ಭುಜದಲಿ ಶಂಖ ಚಕ್ರವ ಧರಿಸಿದ ಪರಮೇಷ್ಠಿ ಜನಕನು 3 ವನಜ ಮಲ್ಲಿಗೆ ಜಾಜಿ ವನದಲ್ಲಿ ಚಲಿಸುವ ವನಿತೆಯರಾಟಕ್ಕೆ ಮನಮೆಚ್ಚಿ ನಡೆದಾನೊ 4 ಹಿಂಡು ಗೋಪಾಲರನು ಕಂಡು ಕಾವ ವಿಷಯಕ್ಕಾಗಿ ಕಮಲಲೋಚನ ಹರಿ5 ಇನ ಚಂದ್ರ ನಿಭವಕ್ತ್ರ ಕನಕಾಂಬರಧರ ವಿನಯದಿಂದಾಡುತ್ತ ಮುನಿಗಳಲ್ಲಿಗೆ ದೇವ 6 ಗಜ ಧ್ರುವ ಬಲಿ ಪಾಂಚಾಲಿ ವರದನೆಂಬ ನಿಜವಾದ ಬಿರುದುಳ್ಳ ವಿಜಯವಿಠ್ಠಲರೇಯ7
--------------
ವಿಜಯದಾಸ
ಎಲ್ಲನು ನಿನಗೆ ಕೂಡಿತಯ್ಯ ಹರಿ ಪುಲ್ಲನಾಭ ದಯ ಮಾಡಯ್ಯ ಪ ಖುಲ್ಲನು ನಾಬಲು ಎಲ್ಲಿಯುಸಲ್ಲದೆ ತಲ್ಲಣಿಸುತ ನಿನ್ನ ಬಲವಂದೆ ದೇವ ದೇವ ಅ.ಪ ಧೃಢಗುಣ ಎನ್ನೊಳಿಲ್ಲಯ್ಯ ಬಲು ನುಡಿ ಹೀನ ನಾಕಡು ಪಾಪ್ಯಯ್ಯ ನಡೆ ನುಡಿ ಇಲ್ಲದೆ ಕಡುನೊಂದೀಗ ನಿಮ್ಮ ನ್ಹುಡುಕುತ ತಿರುಗುವೆ ಜಡಜಾಕ್ಷನೆ ಪೊರೆ 1 ಪರರದ್ರವ್ಯವಪಹರಿಸಿದೆನೊ ನಾ ಪರಮನೀಚನಾಗಿ ಚರಿಸಿದೆನೊ ಅಗಣಿತ ದುರಿತವನುನಾ ಜರೆಯದೆ ಪರಿಪರಿ ಮಾಡಿದೆನೊ ಮರೆವೆಲಿ ಮಾಡಿದ ಪರಮ ಎನ್ನತಪ್ಪು ಕರುಣಾಕರನೆ ನೀಕರುಣದಿ ಕ್ಷಮಿಸಯ್ಯ 2 ಶರಣಾಗತ ವತ್ಸಲನೆಂದು ನಿನ್ನ ಮರೆಯಹೊಕ್ಕೆನೆಯ್ಯ ದಯಾಸಿಂಧು ಮೊರೆಕೇಳು ಭಕ್ತರ ಪ್ರಿಯಬಂಧು ಎನ್ನ ದುರಿತದಿ ಕಡೆ ಹಾಯ್ಸಯ್ ಇಂದು ಶಿರಬಾಗಿ ನಿಮಗೆ ಸೆರೆಗೊಡ್ಡಿ ಬೇಡುವೆ ಕರಪಿಡಿ ಬಿಡಬೇಡ ಸಿರಿವರ ಶ್ರೀರಾಮ 3
--------------
ರಾಮದಾಸರು
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಎಲ್ಲರಂತಲ್ಲ ಹರಿ ಜಗದೊಳಗೆಲ್ಲ ತಿಳಿಯಬೇಡಿರೊ ಪ. ಪುಲ್ಲಲೋಚನ ತನ್ನಲ್ಲೇ ಮನವ ನಿಲ್ಲಿಸಿದಂಥ ತಾ ಅಲ್ಲೆ ಆಟವಾತೋರಿದ ಅ.ಪ. ಮಣ್ಣುತಿಂದನೆಂದ್ಹೊಡೆದರೆ ಗೋಪಿ ಕಣ್ಣು ಮುಚ್ಚುತ ಅಳುವ ಬೆಣ್ಣೆ ಬಾಯ್ತೆರೆಯೆನೆ ಸಣ್ಣ ಮೂರ್ ಲೋಕವೆ ಗೋಪಿ ತಾ ಅಗ್ರಗಣ್ಯ1 ಕಟ್ಟಲು ಹರಿ ಪೋಗಿ ಥಟ್ಟೆರಡು ಮರದೊಳಿಟ್ಟು ವರಳನೆಳೆದು ಇಷ್ಟ ಮೂರುತಿ ಕೃಷ್ಣ ಸಿಟ್ಟು ಮಾಡಿದನೇ2 ಶ್ರೀ ಶ್ರೀನಿವಾಸನನು ತನ್ನರಿ ವಾಸುದೇವನೆಂದು ಘಾಸಿಮಾಡಲು ಕಂಸಾನೇಕ ಖಳರ ಅಟ್ಟಿ ಶ್ರೀಶ ಸಂಹರಿಸಿ ಯಶೋದೆಯ ತೋಷಪಡಿಸಿದನು 3
--------------
ಸರಸ್ವತಿ ಬಾಯಿ
ಎಲ್ಲರೂ ದಾಸರಹರೇ ಪ ಪುಲ್ಲನಾಭನ ದಯವಿಲ್ಲದೆ ಅ.ಪ. ಜ್ಞಾನವಿಲ್ಲ ಭಕುತಿಯಿಲ್ಲ ಧ್ಯಾನ ವೈರಾಗ್ಯ ಮೊದಲೆ ಇಲ್ಲ ಹೀನ ಕರ್ಮಗಳನು ಮಾಡಿ ಶ್ರೀನಿವಾಸನ ಮರೆತವರು 1 ಪರವಧುವಿನ ರೂಪ ಮನದಿ ಸ್ಮರಣೆ ಮಾಡುತ ಬಾಯಿಯೊಳು ಹರಿಯ ಧ್ಯಾನ ಮಾಡುತಿರುವ ಪರಮ ನೀಚರಾದ ಜನರು 2 ಪಟ್ಟೆನಾಮ ಹಚ್ಚಿ ಕಾವಿ ಬಟ್ಟೆಯನ್ನು ಹೊದ್ದುಕೊಂಡು ಅಟ್ಟಹಾಸ ತೋರಿಕೊಳುತ ಗುಟ್ಟು ತಿಳಿಯದಿರುವ ಜನರು 3 ದೊಡ್ಡ ತಂಬೂರಿಯ ಪಿಡಿದು ಅಡ್ಡ ಉದ್ದ ರಾಗ ಪಾಡಿ ದುಡ್ಡುಕಾಸಿಗಾಗಿ ಭ್ರಮಿಸಿ ಹೆಡ್ಡರಾಗಿ ತಿರುಗುವವರು 4 ನೋವು ಬಾರದಂತೆ ಸದಾ ಓವಿಕೊಂಡು ಬರುತಲಿರುವ ದೇವ ರಂಗೇಶವಿಠಲನ ಸೇವೆಯನ್ನು ಮಾಡದಿರುವ 5
--------------
ರಂಗೇಶವಿಠಲದಾಸರು
ಎಲ್ಲಿ ನೋಡಲು ನೀನಂತೆ ನೀ ನಿಲ್ಲದಿಹ್ಯ ಜಗವಿಲ್ಲಂತೆ ಪ ಅಲ್ಲಿ ನೋಡಲು ನೀನಂತೆ ಇಲ್ಲಿ ನೋಡಲು ನೀನಂತೆ ತುಂಬಿ ಬೆಳಗುವ ಬಲ್ಲಿದ ಹರಿ ಸರ್ವೋತ್ತಮನಂತೆ 1 ಕ್ಷೇತ್ರ ತೀರ್ಥವೆಲ್ಲ ನೀನಂತೆ ಮಹಾ ಯಾತ್ರೆ ಫಲಂಗಳು ನೀನಂತೆ ಧಾತ್ರಿ ಈರೇಳಕ್ಕೆ ಸೂತ್ರಧಾರಕನಾದ ಸ್ತೋತ್ರಕ್ಕೆ ಸಿಲುಕದ ಮಹಿಮನಂತೆ 2 ಕಲ್ಲು ಮುಳ್ಳು ಎಲ್ಲ ಬಿಡದಂತೆ ದೇವ ಎಲ್ಲದರೊಳು ಬೆರೆತಿರುವ್ಯಂತೆ ಅಲ್ಲಿ ಮಲ್ಲ ಬೀರ ನೀನಂತೆ ಜಗ ವೆಲ್ಲವು ಶ್ರೀರಾಮಮಯವಂತೆ 3
--------------
ರಾಮದಾಸರು
ಎಲ್ಲಿ ನೋಡಿದರಲ್ಲಿ ರಾಮ - ಇದ ಪ ಬಲ್ಲ ಜಾಣರ ದೇಹದೊಳಗೆ ನೋಡಣ್ಣ ಅ ಕಣ್ಣೇ ಕಾಮನ ಬೀಜ - ಈಕಣ್ಣಿಂದಲೆ ನೋಡು ಮೋಕ್ಷ ಸಾಮ್ರಾಜ್ಯಕಣ್ಣಿನ ಮೂರುತಿ ಬಿಗಿದು - ಒಳಗಣ್ಣಿಂದಲೇ ದೇವರ ನೋಡಣ್ಣ 1 ಮೂಗೇ ಶ್ವಾಸ ನಿಶ್ವಾಸ - ಈಮೂಗಿಂದಲೇ ಕಾಣೊ ಯೋಗ ಸಂನ್ಯಾಸಮೂಗನಾದರೆ ವಿಶೇಷ - ಒಳಮೂಗಲಿ ನೋಡಣ್ಣ ಲೀಲಾವಿಲಾಸ 2 ಕರ್ಮ ಕುಠಾರ - ಒಳಗಿವಿಯಲ್ಲಿ ಕಾಣೊ ನಾದದ ಬೇರ 3 ಬೊಮ್ಮ ಮಾಡಿದ ತನುಬಿಟ್ಟು - ವಿಶ್ವಕರ್ಮನು ಮಾಡಿದ ಬೊಂಬೆಯನಿಟ್ಟುಸುಮ್ಮನೆ ಕೂಗುಗಳಿಟ್ಟು - ಅದನಂಬುವನೆಂಬೋನು ಹೋಹ ಕಂಗೆಟ್ಟು4 ರೂಢಿಯೊಳಗೆ ಶುದ್ಧ ಮೂಢ - ಈಕಾಡುಕಲ್ಲುಗಳನ್ನು ನಂಬಬೇಡನಾಡಾಡಿ ದೈವಗಳನೆಲ್ಲ - ನಮ್ಮಬಡದಾದಿ ಕೇಶವನೊಬ್ಬನೆ ಬಲ್ಲ 5
--------------
ಕನಕದಾಸ
ಎಲ್ಲಿ ಮಾಯಾವಾದನೆ ರಂಗಯ್ಯನುಎಲ್ಲಿ ಮಾಯಾವಾದನೆಪ ಎಲ್ಲಿ ಮಾಯಾವಾದ ಫುಲ್ಲನಾಭಕೃಷ್ಣಚೆಲ್ಲೆ ಗಂಗಳೆಯರು ಹುಡುಕ ಹೋಗುವ ಬನ್ನಿ ಅ.ಪ. ಮಂದ ಗಮನೆಯರೆಲ್ಲ ಕೃಷ್ಣನ ಕೂಡೆಚೆಂದದಿ ಇದ್ದೆವಲ್ಲಕಂದರ್ಪ ಬಾಧೆಗೆ ಗುರಿಯ ಮಾಡಿದನಲ್ಲಮಂದಮತಿ ನಮಗೆ ಬಂದು ಒದಗಿತಲ್ಲ 1 ಸರಸಿಜಾಕ್ಷಿಯರು ಕೂಡಿ ಕೃಷ್ಣನ ಕೂಡೆಸರಸವಾಡುತಲಿದ್ದೆವೆಕರೆಕರೆಗೊಳಿಸಿ ಮನ್ಮಥ ಬಾಧೆಗೊಪ್ಪಿಸಿಚರಣ ಸೇವಕರಾದ ತರಳೆಯರನು ಬಿಟ್ಟು 2 ಭಕ್ತವತ್ಸಲ ದೇವನು ತನ್ನವರನ್ನುಅಕ್ಕರದಲಿ ಪೊರೆವನುಸಿಕ್ಕದೆ ಹೋಗನು ಹುಡುಕುತ್ತ ಹೋಗುವಅಕ್ಕಯ್ಯ ಬನ್ನಿರೆ ಉಡುಪಿ ಶ್ರೀಕೃಷ್ಣನು 3
--------------
ವ್ಯಾಸರಾಯರು
ಎಲ್ಲಿ ಸುವರಗಳು ಇಲ್ಲದಿದ್ದರೆ ಇವ | ನಲ್ಲದೆ ಮತ್ತಾರಾ | ವಲ್ಲಿ ಕಾಣದೆ ಪೋದೆ ಪ ಸಾರುವ ಶರೀರ ಧರಿಸಿ ಬಾಳಿದ ಮಹಾ | ಭಾರವಾಗಿದ್ದ ಪಾಷಾಣವ ಪೊತ್ತವ | ಗೊರುವ ನೆಲನಂದು ಕಾಷ್ಟದಿಂದಲಿ ಬಂದ | ಹಾರುವನಾಗಿ ತಿರದುಂಡು ಕುಲಧರ್ಮ | ಮೀರಿ ನಡೆದವ ಉಪವಾಸದವÀನಿಂದ | ಊರ ಎಂಜಲಿಗೆ ಹೇಸದೆ ಓಡಾಡಿದವ | ನಾರಿಯರ ವ್ರತ ಕೆಡಿಸಿ ರಾವುತನಾಗಿ | ಕಾಯ | ಆರಿಂದ ಜನಿತನಿವ ನೋಡಲಾಗಿ | ಧಾರುಣಿಯೊಳಗಿದ್ದವ ಸರ್ವರನ್ನ | ಮೀರಿ ನಡೆತÀಲಿದ್ದವ ಇವಗೆ ಮೆಚ್ಚಿ | ಧಾರಿ ಎಂದ ನಿನ್ನ ಮಗಳೆ ಬೇಕೆಂದವ 1 ಬಿರಿಗಣ್ಣೆನವನಿವ ಆವಾವ ಕಾಲಕ್ಕೆ | ಶಿರವಾಗಿ ಕೊಂಡಿಪ್ಪ ಶೀಲ ಸ್ವಭಾವದಿ | ಕೊರಳ ತಿರುಹಲಾರ ಕರುಳ ಮಾಲೆಯುವ | ಪರರ ಬಾಗಿಲ ಕಾವರಾಜ್ಯವಿಲ್ಲದವ | ಸುರರ ಕೋತಿಯ ಮಾಡಿ ಕುಣೆಸಾಡಿದವನಿವ | ದಿಗಂಬರನಾಗಿ ಚರಿಸಿದೆನೆಂದು ಕೋಪದಿಂದ | ಕರವಾಳ ಹಸ್ತದವ || ಪರಾಕ್ರಮ ಉರಗನ್ನ ಮೇಲಿದ್ದವ ಇವನ ಖೂನ | ಅರಿಯನು ದಾವದಾವ | ಭೇದವನಿಕ್ಕಿ | ತಿರುಗಿಸುವನು ಲೋಕವ ವಂಚಕನಿಗೆ | ಪರಮ ಪ್ರೀತಿಯಿಂದ ಕೊಟ್ಟದನೆಣಿಸುವ 2 ತನ್ನ ಜಾತಿಗಳನ್ನು ನುಂಗುವನವನಿವ | ಬೆನ್ನ ಮೇಲಿನ ಒಂದೆ ಬುಗುಟಿ ಪಲ್ಲಿನ ತುದಿ | ಮಣ್ಣು ತೋರುವನಿವ ವಿಕಾರ ಮೊಗದವ | ಕಣ್ಣು ಚುಚ್ಚಿದ ಒಬ್ಬ ಹಾರವನ್ನು ನೋಡಿ | ಹೆಣ್ಣಿಗಭಯವಿತ್ತು ಕಾದಿ ಸೋತವನಿವ | ರಣ್ಯ ವಾಗನಿವ ರಣದೊಳೋಡಿದನಿವ | ಅನ್ಯಾಯ ಪೇಳಿದ ನಂಬಿದವರಿಗೆ | ಮುನ್ನೆ ಕುದುರಿಯೇರಿದಾ ಇವನು ತಾನೆ | ಅನಂತ ಮಾಯಮೋದಾ ಎಂಥವರಲ್ಲಿ | ಪಾದ ಇಟ್ಟು ಇದ್ದು | ಕಣ್ಣಿಗೆ ಪೊಳಿಯೆ ಖೇಡ ಬಡಿಸವಂಥ | ಬಣ್ಣಾಣಿಗಾರನು ಬಂದೆಲ್ಲಿ ದೊರಕಿದಾ 3 ಮೀಸಿ ಕಟ್ಟಿಸಿಕೊಂಡಿವನೀವ ಪ್ರಳಯಾದಿ | ದ್ವೇಷವನಿಕ್ಕಿದ ದೇವದಾನವರಿಗೆ | ಏಸು ದಿವಸವಾಗೆ ಅದೋ ದೃಷ್ಠಾಯವನಿವ | ಭಿಕ್ಷೆ ಪಾತ್ರಿಯವ | ಬಿಗಿಯನೆ ಮುರದು ಬಿಟ್ಟವನಿವ | ಕೊಂಡ ಲಜ್ಜೆಗೇಡಿ | ಘಾಸೆತನಕೆ ಶೂರನು ಒಮ್ಮ್ಯಾದರು || ಮಾಡುತಲಿಪ್ಪನು ಇವನು ಹೆಣ್ಣು | ವೇಷ ಧರಿಸಿಕೊಂಬನು ಕೇವಲ ಅವ | ಕಾಶ ಯಿಲ್ಲದ ಸ್ಥಾನದಲ್ಲಿ ವೊಂದಿಪ್ಪನು 4 ದೃಷ್ಟಿ ಮುಚ್ಚದಿಪ್ಪನವನಿವ ಆವಾಗ | ಬೆಟ್ಟವೆ ಗತಿ ಎಂದು ಸೇರಿಕೊಂಡವನಿವ | ದಿಟ್ಟ ಕಠೀಣ ಕಾಯದವನಿವ ಎದುರಿಗೆ | ಎಷ್ಟಗಲ ಬಾಯದೆರೆದಿಪ್ಪ ಪಾದದ | ಬಟ್ಟಿನಿಂದಲಿ ನೀರು ಸುರಿಸುವ ಬಗೆ ಉಂಟು | ಕುಟ್ಟಿ ಮಾತೆಯ ಶಿರ ಕೆಡಹಿದನಿವ ಜಡೆ | ಗಟ್ಟಿಪ್ಪ ಚೋರನಾಯಕ ಮೌನಪ್ರಾಂತಕ್ಕೆ | ದುಷ್ಟನೆನಸಿ ಮೆರೆವ ಹತ್ತದೆಂದು || ಅಟ್ಟಿಬಿಟ್ಟರೆ ಬರುವ ತನ್ನೆಲ್ಲಿಗೆ | ಕೆಟ್ಟವರನ ಕರೆವ ಉತ್ತಮರನ್ನು | ಪಟ್ಟದ ರಾಣಿಗೆ ಪೇಳದೆ ಜವಾ | 5 ಜಲದೊಳಗಾಡುವನಿವ ಹೊರೆ ಹೊತ್ತು | ಕಲೆಪರಟಿಯಾಗಿ ತಿರುಗುವನಿವ ಮೂಗಿಲ್ಲಿ | ಳಿದು ಬಂದವನಿವ ಗೊಗ್ಗರÀ ಧ್ವನಿಯವ | ತಲುವರಿ ಇವ ತಾನೆ ಶಿಷ್ಯಗೆ ವಿದ್ಯವÀ | ಕಲಿಸಿ ಶ್ಯಾಪವ ಕೊಟ್ಟನವನಿವ ವೈರತ್ವ | ಬಳಸದವನ ಮೇಲೆ ಕಲ್ಲು ಹಾಕಿಸಿದವ | ಬಲು ಭಂಡುಗೋವಳ ಅನ ಬರದದು ಬಿಟ್ಟು | ಕಲಿಯಾಗಿ ಓಡಾಡಿದ | ಹೆರರಿಗಾಗಿ ಸ್ತಳ ದ್ರವ್ಯವ ಮಾಡಿದಾ ದಾನವರಿಂದ | ಬಲವಾವನು ಬೇಡಿದಾ ಬೊಮ್ಮಾಂಡದ | ಒಳಗೆ ಹೊರಗೆ ಕಾಡಿದಾ | ಬಹು ಠಕ್ಕನು | ತಿಳಿದು ತಿಳಿದು ಈರ್ವರಿಗೆಯಲ್ಲಿ ನೋಡಿದಾ 6 ಸವಿ ನೋಡದದರ ರೂಪನಾದವನಿವ | ಅವಯವಂಗಳೆಲ್ಲ ಮುದುರಿಕೊಂಡಿಪ್ಪಾನಿವ | ಅವನಿಗೋಡಿ ಪೋದನಿವ ಮೃಗವಲ್ಲ ಮಾ | ನವನಲ್ಲ ವದ್ಭೂತನಾಗಿ ತೋರುವನಿವ | ಬವರಿಗಾದವನಿವ ತನ್ನ ಕಾಲಕೆ ತಪ್ಪ | ಭವನವಿಲ್ಲದೆ ದಿನ ಕಳೆದವ ಯಾಗದ | ನ್ನವನುಂಡು ನಾನಾ ಶಸ್ತ್ರವನ್ನು ನುಂಗಿದವನಿವ || ಯುವತಿ ಧರಿಸಿದ ಸಂಗಾ ಹಾ | ರುವ ಪಕ್ಕಿ ದಿವಸ ದಿವಸ ತುರುಗಾನಾಗಿಪ್ಪದು | ಅವಧೂತ ಮಾರ್ಗ ತುಂಗಾ | ಪರ್ವತವನು | ಲವಕಾಲಬಿಡದೆ ಬಾಯಲಿ ಕಚ್ಚಿದ ರಂಗಾ 7 ಮಾರಧ್ವಜನನವತಾರ ತಾಳಿದನಿವ | ನೀರೋಳಗಡಿಗಿಪ್ಪ ಎರಡು ಭಾಗಗಲ್ಲಿ | ಕೋರೆಗಳದ್ದಿ ಮಸÀದು ಮತ್ಸರಿಸುತಿಪ್ಪ | ಚೀರಿ ಕೂಗುವ ಮಹಾ ಬೊಮ್ಮಾಂಡವಡದಂತೆ | ಮೂರಡಿಯೊಳಗೆ ತ್ರಿಲೋಕವÀನಿಟ್ಟವ | ಬೇರು ಕಡುವನಂತೆ ಕೊಡಲಿಕಾರನಿವ | ಆರೋಗಣಿಗೆ ಶಬರಿಯ ಹಣ್ಣು ಮೆದ್ದವ | ಬುದ್ಧ ಉದ್ದಂಡಾ ಏಕನು ಇವ || ಕೊಂಡ ಬಹು ಕಡೆ | ಬೀರಿದನ್ನವ ಕೈಕೊಂಡಾ ಒಂದು ತುತ್ತು | ಆರಗೀಯದಲೆ ಉಂಡಾ ಇವನನ್ನು | ಹಾರೈಸಿದವರಿಗೆ ಏನು ಲಕ್ಷ ಹೆಚ್ಚಳ ಕಂಡಾ 8 ಉದಕ ಬಿಟ್ಟರೆ ಬದುಕಲಾರದವನಿವ | ಎದೆಗಟ್ಟಿಯವನಲ್ಲಿ ಮುಟ್ಟಿ ನೋಡಿದರೆ | ಪೊದೆ ಪೊದರಿನೊಳು ಸೇರಿ ಕೊಂಡವನಿವ | ಎದುರಿಗೆ ಒಬ್ಬರ ಬರಗೊಡದವ ತನ್ನ | ಪದದ ಕೆಳಗೆ ಕೊಟ್ಟವನ ಇಟ್ಟವನಿವ | ಮದಕಾವ ಮಾಡಿ ತನ್ನೊಳು ತಾನೆ ಸೋತವ | ಸುದತಿಯುಳಟ್ಟಿದ ಪಾರ್ಥಗಾಳಾದ | ಚದುರ ಕ್ರೂರರಿಗೆ ಕ್ರೂರಾ ನಿರಂತರ | ಉದಧಿ ಎಂಬೊದೆ ಮಂದಿರಾ ಇವಗೆ ನೋಡು | ಬದರಿ ಗಿಡವೆ ಆಸರಾ ಏನೆಂಬೆನೊ | ಕದರು ಮೋರಿಯೆ ಶೃಂಗಾರ ತನ್ನಯ ಗುಣ | ಮೊದಲಿದೆ ಕಡೆ ಎಂದು ಆರಾರಿಗೆ ತೋರಾ 9 ಚಪಲಾಕ್ಷದವನಿವ ಚಲುವನೆಂತೆಂಬೆನೆ | ವಿಪರೀತ ನಿದ್ರೆ ಮಾಡುವನಿವ ಕರೆದರೆ | ಕುಪಿತವಾಗುವ ಕಿಡಿ ಉಗುಳುವನಿವ | ಕಪಟದಲ್ಲಿ ಗಟ್ಟಿ ತಲೆ ಹೊಡಕ ರಾಮ | ಕಪಿಯ ಮೋಸದಿಂದ ಕೆಡಹಿದ ಮಾವನ್ನ | ನಿಪತನ ಗೈಸಿದ | ದೋಷಕ್ಕೆ ಶಂಕಿಸಾ | ತ್ರಿಪುರವ ಕೆಡಸಿದ ಹರಗೆ ಸಾಯುಕವಾಗಿ | ಅಪಕಾರಿ ಝಗಳಗಂಟ ಒದಿಸಿಕೊಂಡ || ವಿಪುಳದೋಳೇನು ಒಂಟಾ ಉಚ್ಚರಿಸುವೆ | ಕೃಪಣ ಜನರಿಗೆ ನೆಂಟಾಸನಕ್ಯಾದರ | ಶಪತದಲ್ಲಿಗೆ ಪೊರವಂಟಾ ಉತ್ತಮರಿಂದ | ಉಪದೇಶವಿಲ್ಲದ ಬಾಳುವ ಮಹಾತುಂಟಾ 10 ಇವರೀರ್ವರಿಗೆ ಈಡೆ ತಪ್ಪಿಸಲು ಪದ್ಮ | ಭವಗಳವಲ್ಲವು ನಿನ್ನ ಕುವರಿಗೆ | ಸವಿಗಾರ ಇವನಲ್ಲದೆ ಮತ್ತಾವಾವಾ | ವಿವರಿಪೆ ಎಂಥವರಕೆ ಅಂಥ ಕನ್ನಿಕೆ | ಹವಣವಾಗಿದೆ ಸತ್ಯ ಸಂಕಲ್ಪವೆ ಸಿದ್ಧಾ | ಶ್ರವಣಾದಿ ಇಂದ್ರಿಂಗಳಿಗಗೋಚರಾ | ಸ್ಥವಿರ ಯೌವನ ಬಾಲ ಒಂದಾದರಿವನೆಲ್ಲಾ | ನವನವ ಬಗೆ ಸುಕಾಯಾ || ಮೋಹನ್ನ ಯಾ | ದವರಾಯಾ ಶಿರಿ ವಿಜಯವಿಠ್ಠಲ ಕೃಷ್ಣ | ಶಿವಕುಲ್ಲ್ಯ ಪುರಿ ನಿಲಯಾ ಭಕ್ತರ ಪ್ರೀಯಾ | ಮಾಯಾ ಜಗದ್ಗುರು | ಪವನವತಾರ ಶ್ರೀ ಆನಂದ ಮುನಿಗೇಯಾ11
--------------
ವಿಜಯದಾಸ
ಎಲ್ಲಿಗೆ ಗಮನವಿದು ದುರ್ಗಾಂಬಿಕೆ ಎಲ್ಲಿಗೆ ಗಮನವಿದು ಪ. ಗಮನ ಹರವಲ್ಲಭೆ ನೀ ದಯ- ದಲ್ಲಿ ಬಾಲಕನೊಳು ಮೆಲ್ಲನಿಂದರುಹವ್ವಅ.ಪ. ಚಂಡಿಕೆ ಮಹಮ್ಮಾಯೆ ದೇವಿ ಪ್ರ- ಚಂಡ ಲೋಕತಾಯೆ ಖಂಡಪರಶುಪ್ರಿಯೆ ಅಖಿಲ ಭೂ- ಮಂಡಲಕಧಿಪತಿಯೆ ದಂಡಿಗೆ ಮೇಲೇರಿಕೊಂಡು ದುಷ್ಟರ ಶಿರ- ಚೆಂಡಾಡಿ ಶರಣರ ಕೊಂಡಾಡಿ ಪೊರೆವುತ1 ನಿಲ್ಲು ನಿಲ್ಲು ಜನನಿ ಬಾಲಕ- ನಲ್ಲವೆ ಹೇ ಕರುಣಿ ಪುಲ್ಲನಯನೆ ತ್ರಿಗುಣಿ ದಯವಿನಿ- ತಿಲ್ಲವೆ ನಾರಾಯಣಿ ಮಲ್ಲಿಗೆಗಂಧಿ ಪಥವೆಲ್ಲಿಯು ಕಾಣದೆ ಸಲ್ಲಲಿತಾಂಘ್ರಿಯ ನಿಲ್ಲದೆ ಬೇಡುವೆ 2 ದಾರಿ ಯಾವುದಮ್ಮ ಮುಕ್ತಿಯ ದಾರಿ ತೋರಿಸಮ್ಮ ಸೇರಿದೆ ನಾ ನಿಮ್ಮ ಭವಾಬ್ಧಿಯ ಪಾರುಗಾಣಿಸಮ್ಮ ಚಾರುನಿಗಮ ಶಿರಭೋರೆನಿಪ ವಿಚಾರ- ಸಾರವಿತ್ತು ದಯಪಾಲಿಸು ಶುಭವರ3 ಕಷ್ಟದುರಿತ ಭಯವ ತಾ ಬಡಿ- ದಟ್ಟಿ ಭಕ್ತಕುಲದ ಶ್ರೇಷ್ಠತನದಿ ಪೊರೆವ ತನ್ನ ಇಚ್ಛೆಯ ಕೈಗೊಳುವ ಲಕ್ಷ್ಮೀನಾರಾಯಣದಿಟ್ಟಭಗಿನಿ ಶಿವೆ ಕಟ್ಟಿಲಪುರದೊಳು ಗುಟ್ಟಿನಿಂ ನೆಲಸಿಹೆ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಲ್ಲಿಗೆ ಗಮನವಿದು ದುರ್ಗಾಂಬಿಕೆ ಎಲ್ಲಿಗೆ ಗಮನವಿದುಪ. ಗಮನ ಹರವಲ್ಲಭೆ ನೀ ದಯ- ದಲ್ಲಿ ಬಾಲಕನೊಳು ಮೆಲ್ಲನಿಂದರುಹವ್ವಅ.ಪ. ಚಂಡಿಕೆ ಮಹಮ್ಮಾಯೆ ದೇವಿ ಪ್ರ- ಚಂಡ ಲೋಕತಾಯೆ ಖಂಡಪರಶುಪ್ರಿಯೆ ಅಖಿಲ ಭೂ- ಮಂಡಲಕಧಿಪತಿಯೆ ದಂಡಿಗೆ ಮೇಲೇರಿಕೊಂಡು ದುಷ್ಟರ ಶಿರ- ಚೆಂಡಾಡಿ ಶರಣರ ಕೊಂಡಾಡಿ ಪೊರೆವುತ 1 ನಿಲ್ಲು ನಿಲ್ಲು ಜನನಿ ಬಾಲಕ- ನಲ್ಲವೆ ಹೇ ಕರುಣಿ ಪುಲ್ಲನಯನೆ ತ್ರಿಗುಣಿ ದಯವಿನಿ- ತಿಲ್ಲವೆ ನಾರಾಯಣಿ ಮಲ್ಲಿಗೆಗಂಧಿ ಪಥವೆಲ್ಲಿಯು ಕಾಣದೆ ಸಲ್ಲಲಿತಾಂಘ್ರಿಯ ನಿಲ್ಲದೆ ಬೇಡುವೆ 2 ದಾರಿ ಯಾವುದಮ್ಮ ಮುಕ್ತಿಯ ದಾರಿ ತೋರಿಸಮ್ಮ ಸೇರಿದೆ ನಾ ನಿಮ್ಮ ಭವಾಬ್ಧಿಯ ಪಾರುಗಾಣಿಸಮ್ಮ ಚಾರುನಿಗಮ ಶಿರಭೋರೆನಿಪ ವಿಚಾರ- ಸಾರವಿತ್ತು ದಯಪಾಲಿಸು ಶುಭವರ 3 ಕಷ್ಟದುರಿತ ಭಯವ ತಾ ಬಡಿ- ದಟ್ಟಿ ಭಕ್ತಕುಲದ ಶ್ರೇಷ್ಠತನದಿ ಪೊರೆವ ತನ್ನ ಇಚ್ಛೆಯ ಕೈಗೊಳುವ ಲಕ್ಷ್ಮೀನಾರಾಯಣದಿಟ್ಟಭಗಿನಿ ಶಿವೆ ಕಟ್ಟಿಲಪುರದೊಳು ಗುಟ್ಟಿನಿಂ ನೆಲಸಿಹೆ4
--------------
ತುಪಾಕಿ ವೆಂಕಟರಮಣಾಚಾರ್ಯ
ಎಲ್ಲಿಗೆ ಪೋದಪೆ ಮಲ್ಲಿಮರ್ಧನ ಕೃಷ್ಣ ಗೊಲ್ಲಗೋಪಾಲನೀ ಬಲ್ಲೆನಾನಿದನು ಪ. ದೇವಕಿಯುದರದಿ ಜನಿಸಿ ಯಶೋದೆಯ ಕುವರನೆಂದೆನಿಸಿ ಮೆರೆದಂಥ ಸಾಹಸಿ 1 ಮಧುರೆಯೊಳುದಿಸಿ ನಂದವ್ರಜದಿ ಗೋವ್ಗಳ ಕಾಯ್ದು ಮದಿಸಿದಸುರರ ಸದೆವಡೆದ ಧೀರ 2 ಮಾತೆಯ ಮನಕಂದು ಪ್ರೀತಿಪಡಿಸಲೆಂದು ಮಾತುಲನನೆ ಕೊಂದು ತಾತಗೆ ನೆಲವಿತ್ತ 3 ರುಕ್ಮನ ಭಂಗಿಸಿ ರುಕ್ಮಿಣಿಯನುವರಿಸಿ ಚಕ್ರಧರ ಕೃಷ್ಣ 4 ತರುಣಿಯ ಮಾನಕಾಯ್ದು ನರಗೆ ಸಾರಥಿಯಾಗಿ ಧರೆಯಭಾರವೆಲ್ಲ ಪರಿದುಬಂದ ಮಲ್ಲ 5 ವರಶೇಷಗಿರಿದೊರೆ ನಿನಗೆ ನಾ ಹೊರೆಯೆ ಕರಿ ಧ್ರುವರನೆ ಪೊರೆದ ವರದನೆಂಬುದ ಮರೆಯೆ 6
--------------
ನಂಜನಗೂಡು ತಿರುಮಲಾಂಬಾ
ಎಲ್ಲಿರುವೆ ಬಾರಯ್ಯದೇವ ಬಲ್ಲಿದ ನೀನೆ ಅನಾಥಜನಜೀವ ಪ ಪುಲ್ಲನಾಭ ನೋಡೆನ್ನ ಪರಿಭವದ ದು:ಖವನು ನಿಲ್ಲದೆ ದಯಮಾಡು ಬೇಗದೊಳಭವ ಅ.ಪ ಕ್ಷಣಕ್ಷಣಕೆ ಒದಗುತಿಹ್ಯ ದಣಿವು ಬೇನ್ಯಾಪತ್ತು ಅನುಪಮ ಬಡತನದ ಘನ ಘನ ವಿಪತ್ತು ದಿನದಿನ ಪರರನು ಮಣಿದುಬೇಡುವ ಹೊತ್ತು ಇನಿತೆಲ್ಲ ಕನಿಕರದಿ ನೀನೆ ಕಳೆಯಭವ 1 ಕನಕ ವಸ್ತ್ರಾಭರಣ ವನಿತೆಗ್ಹಾಕುವ ಚಿಂತೆ ಧನಧಾನ್ಯವಿಲ್ಲೆಂಬ ಎಣಿಕಿಲ್ಲದ ಚಿಂತೆ ಮನಕೆ ತುಸುಗೊಡದ ರಿಣಬಾಧದ್ದತಿ ಚಿಂತೆ ವನಜಾಕ್ಷ ಕೃಪೆಯಿತ್ತು ನೀನೆ ಬಿಡಿಸಯ್ಯ 2 ಧರೆಯಸುಖೆನಗಿಲ್ಲೆಂಬ ಪರಿಪರಿಯು ಉರಿ ತಾಪ ಪರರಸೇವೆಯ ಮಾಡ್ವ ಪರಮ ಪರಿತಾಪ ಜರಜರಕೆ ಬಂದು ಆವರಿಸುವುವು ಮಹಪಾಪ ಪರಹರಿಸೆಲವೋ ಶ್ರೀರಾಮಪ್ರಭು ಭೂಪ 3
--------------
ರಾಮದಾಸರು
ಎಲ್ಲಿರುವೆಯೊ ಎಂದು | ತಲ್ಲಣಗೊಳುತ್ತಿದ್ದೆ ಇಲ್ಲೆ ಬಂದೆಯೊ ದೇವನೆ ಪ. ಪುಲ್ಲಲೋಚನ ಎನ್ನ ಉಲ್ಲಾಸಗೊಳಿಸುತ ನಿಲ್ಲೊ ಹೃತ್ಕಮಲದಿ ನೀ ಬಹು ಮುದದಿ ಅ.ಪ. ಕಪಟನಾಟಕ ದೇವ | ಅಪರಿಮಿತ ಮಹಿಮ ಗುಪಿತರೂಪನೆ ನಿನ್ನನು ವಿಪುಲಮತಿಯಿಂದ ವರ್ಣಿಸಲಾಪೆನೆ ಸಪುತ ಸಪುತ ಭುವನೇಶ ಕೃಪೆಮಾಡೊ ಕೃಪಣವತ್ಸಲ ನಿನ್ನ ಕಾಣದೆ ಅಪರಿಮಿತವಾಗಿ ನೊಂದೆನಯ್ಯ ತಪಿಸುವುದು ನಿನಗುಚಿತವೆ ಹರಿ ಕೃಪೆ ಮಾಡೊ ಬೇಗ ಶ್ರೀನಿವಾಸ 1 ಹರಿ ನಿನ್ನ ಪಾದವ | ನಿರುತದಿ ಧ್ಯಾನಿಪ ವರಮತಿ ಎನಗೆ ನೀಡೊ ಗರುವಿಕೆಯನೆ ಬಿಡಿಸು ಶರಣಳ ಪೋಷಿಸು ಸುರವರ ನಿನ್ನಂಘ್ರಿಗೆರಗಿ ಬಿನ್ನೈಸುವೆ ಕರೆಕರೆಗೊಳಿಸುವುದುಚಿತವೆ ತೊರೆದರೆ ಎನ್ನ ಪೊರೆವರ್ಯಾರೊ ಥರವಲ್ಲ ನಿನಗಿನ್ನು ಕೇಳಿದು ಪೊರೆಯದಿದ್ದರೆ ನಗರೆ ಭಕ್ತರು 2 ಮಂದಮತಿಯಿವಳೆಂದು | ಹಿಂದು ಮಾಡಿದರÉನ್ನ ಕುಂದು ನಿನಗೆ ತಪ್ಪದೊ ಬಂಧನ ಬಿಡಿಸು ನೀ ಬಂಧನದೊಳಗಿಡು ಮಂದಿರ ಹೃದಯದಿ ಎಂದೆಂದಿಗಗಲದೆ ಮಂದಭಾಗ್ಯೆಯ ಮಾತು ಕಿವಿಗೆ ಮಂದಗಮನೆಯ ಮಧ್ಯೆ ಇರುವಗೆ ಮಂದಹಾಸ ಮುಖೇಂದು ವದನನೆ 3 ಅಜಸುರ ವಂದ್ಯನೆ | ಭಜಿಸಲಾಪೆನೆ ನಿನ್ನ ತ್ರಿಜಗದೊಡೆಯ ಹರಿಯೆ ವಿಜಯಸಾರಥಿ ಎನ್ನ ರಜತಮವನೆ ಕಳೆದು ಕುಜನರೊಳಿಡದಲೆ ನಿಜಗತಿ ಪಾಲಿಸೊ ಗಜವರದ ಗಂಭೀರ ದೇವನೆ ಧ್ವಜವಜ್ರೌಕುಶ ಪಾದಕಮಲನೆ ಭಜಿಸಿದವರಿಗೊಲಿವ ದೇವನೆ ಭುಜಗಭೂಷಣನಿಂದ ವಂದ್ಯನೆ 4 ಸೃಷ್ಟ್ಯಾದಿ ಕರ್ತನೆ | ಎಷ್ಟು ಬೇಡಲೊ ನಾನು ಇಷ್ಟ ದೈವÀವೆ ಕೇಳಲೊ ಭ್ರಷ್ಟತನವನೆಣಿಸದೆ ದೃಷ್ಟಿಯಿಂದಲಿ ನೋಡಿ ಕಷ್ಟಬಿಡಿಸಿದರೆ ಮುಟ್ಟಿಪೂಜಿಸುವೆನೊ ದಿಟ್ಟ ಗೋಪಾಲಕೃಷ್ಣವಿಠ್ಠಲ ಇಷ್ಟು ಬಿನ್ನಪ ನಷ್ಟ ಮಾಡದೆ ಕೊಟ್ಟು ಧೈರ್ಯವ ಮೆಟ್ಟಿ ಪಾಪವ ಸುಟ್ಟು ಕರ್ಮವ ಕೃಷ್ಣ ಸಲಹೊ 5
--------------
ಅಂಬಾಬಾಯಿ