ಒಟ್ಟು 6114 ಕಡೆಗಳಲ್ಲಿ , 127 ದಾಸರು , 3568 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಳ್ಳೆವಾಜಿಯ ಕಲಿತಿದ್ದಿತಾಳೊ ಬುದ್ಧಿಲ್ಲ ಕೇಳೊಒಳ್ಳೆ ವಾಜಿಯ ಕಲಿತಿ ತಾಳೊಸುಳ್ಳು ಕೆಲಸವ ಹೇಳಿ ಸುಳಿಯುವಿ ನೆರೆಮನೆಯಚಲುವನರಿಯುತ ಚಲುವೆರಿಬ್ಬರ ಕುಚೋದ್ಯದಲಿ ಪ. ಹೆಣ್ಣು ಕೊಟ್ಟವನಿಗೆ ಕಣ್ಣು ಕಾಣದು ಏನೊಇನ್ನೆಲ್ಲಿ ವರನ ಕಾಣದೆ ಇನ್ನೆಲ್ಲಿ ವರನ ಕಾಣದೆ ಇಂಥವಗೆಹೆಣ್ಣು ಕೊಟ್ಟವನು ಬಲು ಹೇಡಿ 1 ಕೊಟ್ಟರೇನಾಯಿತು ಅಟ್ಟುಣಲು ಬಲ್ಲಹುಟ್ಟು ಗತಿಯಂತು ಮೊದಲಿಲ್ಲಹುಟ್ಟು ಗತಿಯಂತು ಮೊದಲಿಲ್ಲ ದಾನವಕೊಟ್ಟ ಬಲೀಂದ್ರ ಇದು ಬಲ್ಲ 2 ಕುಲವಿಲ್ಲಗೋತ್ರವಿಲ್ಲ ನೆಲೆಯಿಲ್ಲ ಆಚಾರವಿಲ್ಲಬಲುದೈತ್ಯರೊಳು ಹಗೆಯಾದ ಬಲುದೈತ್ಯರೊಳು ಹಗೆಯಾದ ಇಂಥವಗೆ ಜಲನಿಧಿ ಮಗಳ ಕೊಡಬಹುದೆ 3 ಮೂರು ಗುಣಗಳ ಮೀರಿದವ ನೀಚನೆನಿಸುವ ಇವನು ನೀಚನೆನಿಸುವಇವನ ಗುಣಯಾರು ಅರಿಯರು ಧರೆ ಮ್ಯಾಲೆ4 ಹಾಲು ಕೆನೆಯ ಕದ್ದು ಬಾಲೆರೆಲ್ಲರಪೀಡಿಸಿಬಾಲನಾಗಿ ಒರಳ ಎಳೆಯುತಬಾಲನಾಗಿ ಒರಳ ಎಳೆಯುತಜನನಿಗೆ ಚಾಲವರೆದದ್ದು ಮರೆತೇನೊ5 ಬೆಣ್ಣಿ ಮೊಸರು ಕದ್ದು ಹೆಣ್ಣುಮಕ್ಕಳ ಕಾಡಿಸಿ ಮುನ್ನ ತೊತ್ತಿನ ಮನೆಯಲ್ಲಿಮುನ್ನ ತೊತ್ತಿನ ಮನೆಯಲ್ಲಿ ಉಂಡುನೀ ಹೆಣ್ಣಾಗಿದ್ಯಲ್ಲೊ ರಮಿಯರಸು6
--------------
ಗಲಗಲಿಅವ್ವನವರು
ಒಳ್ಳೇದೋ ಒಳ್ಳೇದೋ ಎಲ್ಲ ಸ್ಥಳವ ಬಿಟ್ಟು | ಇಲ್ಲಿ ಅಡಗಿದ ಬಲ್ಲಿದ ತನವೇ ಪ ಬಿಡೆ ಬಿಡೆನೊ ಎನ್ನ ಒಡಿಯ ತಿರುಮಲ ನಿನ್ನ | ಉಡಿಯ ಪೀತಾಂಬರ ಪಿಡಿದು ನಿಲಿಸಿಕೊಂಬೆ 1 ಎರವು ಮಾಡಿ ತಿರುಗಿಸಿದಿ ನೀ ಎನ್ನ ಕೊರಳಿಗೆ ನಿನ್ನ ಚರಣ ಕಟ್ಟಿಕೊಂಬೆ 2 ಅತ್ತ ಇತ್ತಲಿ ನೋಡಿನೆತ್ತ ಪೋಗಲಿ ಎನ್ನ | ಚಿತ್ತದಲಿ ನಿನ್ನ ಹತ್ತೆಗಟ್ಟಿಕೊಂಬೆ 3 ಅತ್ತಿಯ ಮಕ್ಕಳಿಗೆ ತೆತ್ತಿಗ ನೀನಾಗಿ | ವಿತ್ತವಿತ್ತದರಾದ ರಾಸಿ ಸಿರಿಯಲ್ಲಿ 4 ಇರಳು ಹಗಲು ಬಿಡದೆ ಗುರು ಪುರಂದರಗೊಲಿದೆ | ಬಿರಿದು ಏನೊ ಇಷ್ಟು ವಿಜಯವಿಠಲಾ5
--------------
ವಿಜಯದಾಸ
ಓಂ ನಮೋ ರಾ‌ಘವೇಂದ್ರಾಪ ಓಂ ನಮೋ ರಾಘವೇಂದ್ರಾ ಘನದಯ ದಾಸಾಂದ್ರಾ ವಾರಿಧಿ ಪೂರ್ಣಚಂದ್ರಾ1 ಶ್ರೀರಾಮ ಜಯರಾಮ ಸ್ವಾಮಿ ಜಯಜಯ ರಾಮಾ ಈರೀತಿ ಸ್ಮøತಿಸಲಿಕೆ ಕೊಡುವಿ ವೈಕುಂಠ ಧಾಮಾ2 ಉಗ್ರ ವೃತ ತಪದಿಂದಾ ಜಪ ಅನುಷ್ಠಾನದಿಂದಾ ಶ್ರೀಘ್ರದಿಂದ ಪಡಕೊಂಬಾ ಫಲಕಾಮ ಸನ್ನಿಧಾ3 ಹನುಮಬಲ್ಲಾ ಹರಬಲ್ಲಾ ಋಷಿನಾರದ ಬಲ್ಲಾ ನೆನವನಾಮ ಸವಿಯಲೋ ಹೇಳಲಿಕೆ ಅಳವಲ್ಲಾ 4 ಮರಳು ಮಾನವರಂತಾ ಎನ್ನ ನೋಡಬ್ಯಾಡ ಡೊಂಕಾ ಗುರುಮಹಿಪತಿ ಸ್ವಾಮಿ ನಾಮ ವೆನೆವ ನಿ:ಶಂಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಂಕಾರಾ ಕಾರಾ ಶಿವನೇ | ಪಾಲಯ ಮಾಂ ಪ ವೈಕಾರಿಕಾದಿ ತ್ರ್ಯಾಕಾರ ಹರನೆಸ್ವೀಕರಿಸುವುದೀ ತೋಕನ ಬಿನ್ನಪ ಅ.ಪ. ನರ್ಮದೆ ಕಾವೇರೀ ಸಂಗಮಾ | ಶೈಲವಾಸಾ |ಹಮ್ರ್ಯ ದೊಳಗೆ ಇಹ | ಬೊಮ್ಮನಯ್ಯಾ ಪದಕಮ್ಮಲ ಕಾಂಬ ಸು | ಹಮ್ಮ ನೀಯೊ ಹರ 1 ವ್ರಾತ ತುತಿಸೆ ಬಲುಪ್ರೀತಿಲಿ ತ್ರಿಪುರಾ | ರಾತಿ ಎನಿಸಿದೇ 2 ಬದರೀಯಾ ವಾಸವಾ | ನಾರಾಯಣನಾ |ಪದದ ಉದಕ | ಅಭಿಷೇಚಿಸುವೆನುಮುದದಿ ಕೊಳ್ಳೊ ಗುರು | ಗೋವಿಂದ ಪೌತ್ರಾ 3
--------------
ಗುರುಗೋವಿಂದವಿಠಲರು
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದು ಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ 4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದುಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಓಡಿ ಬಾರೋ ರಂಗಯ್ಯ ಓಡಿ ಬಾರೋ ಕೃಷ್ಣಯ್ಯ ಪ. ನೋಡಿ ನಿನ್ನ ಮುತ್ತನೀಡುವೆ ಹಾಡಿ ಜೋಗುಳವ ಪಾಡುವೆ ಅ.ಪ. ಮೊಸರು ಭಾಂಡ ಒಡೆದು ಬೆಣ್ಣೆ ಹಸುಳೆ ಮೆದ್ದು ಬಾಯೆಲ್ಲಾ ರಸಿಕಸಿಯಾಗಿರುವ ಮೈಗೆ ಬಿಸಿ ನೀರೆರೆವೆನೊ ರಂಗ 1 ಬಿಸಿ ದೋಸೆಯ ಕೊಡುವೆನೆ ಮೊಸರೋಗರವ ಉಣಿಸಿ ನಿನಗೆ ಹಸುರಂಗಿಯ ತೊಡಿಸುವೆ ಕೃಷ್ಣಾ 2 ಮುದ್ದು ಮುದ್ದಾದ ಪಾದ ಹೆಜ್ಜೆನಿಟ್ಟು ಬಾರೆಲೊ ಮುದ್ದೆ ಬೆಣ್ಣೆ ಹಣ್ಣು ಕೊಟ್ಟು ಮುದ್ರೆಯುಂಗುರವನಿಟ್ಟು ನೋಡುವೆ 3 ಅಣ್ಣ ಬಲರಾಮನೊಡನೆ ಚಿಣ್ಣ ಆಡಬಾರೆಲೊ ಚಿಣ್ಣಿಕೋಲು ಚಂಡು ಬುಗುರಿ ಚಿಣ್ಣ ಕೊಡುವೆನೋ ಕೃಷ್ಣಾ 4 ಶೃಂಗಾರವ ಮಾಡುವ ಶ್ರೀ ಶ್ರೀನಿವಾಸ ಬಾರೆಲೊ ಮುದ್ದು ಕಂಗಳಿಗೆ ಕಪ್ಪನ್ಹಚ್ಚಿ ರಂಗ ನಿನ್ನ ನೋಡುವೆದಣಿಯ5
--------------
ಸರಸ್ವತಿ ಬಾಯಿ
ಓಹೊ ಎನ ಜೀವ ಮೈಯೆಲ್ಲ ನವಗಾಯ ಪ ಗಾಯ ಕಟ್ಟುವರಿಲ್ಲ ಗಾಳಿ ಹಾಕುವರಿಲ್ಲ ಅ ಮಾಡಿಲ್ಲ ಮಳೆಯಿಲ್ಲ ಮರದ ಮ್ಯಾಲೆ ನೀರ ಕಂಡೆಕಾಡು ಸುಡುವುದ ಕಂಡೆ ಬೂದಿಯ ಕಾಣಲಿಲ್ಲ 1 ಬಿತ್ತಲಿಲ್ಲ ಬೆಳೆಯಲಿಲ್ಲ ನೆಟ್ಟು ನೀರ ತೋರಲಿಲ್ಲಹೊತ್ತುಕೊಂಡು ತಿರುಗಿದೆ ರೊಕ್ಕದಾ ಪ್ರಾಣಿಯನ್ನು 2 ಅಡಿಕೆಯಷ್ಟು ಆಕಳಣ್ಣ ಹಿಡಿಕೆಯಷ್ಟು ಕೆಚ್ಚಲಣ್ಣಒಡನೆ ಕರೆದಾರ ಕರಿತೈತಿ ರಂಜಣಿಗಿ ಹಾಲಣ್ಣ 3 ಮೂರು ಮೊಳದಾ ಬಳ್ಳಿಗೆ ಆರು ಮೊಳದ ಕಾಯಣ್ಣಆರು ಹತ್ತರ ಮೊಳದ, ಕಾಯಿ ಕೊಯ್ಯುವ ಕುಡುಗೋಲಣ್ಣ 4 ಊರ ಮುಂದೆ ಹಿರಣ್ಯಕನ ಕೊರಳ ಕೊಯ್ವುದ ಕಂಡೆಕೊರಳ ಕೊಯ್ವುದ ಕಂಡೆ ರಕುತವ ಕಾಣಲಿಲ್ಲ 5 ಕಾಗಿನೆಲೆಯ ಕನಕದಾಸ ಹೇಳಿದಂಥ ಮುಂಡಿಗೆಯಮಿಗೆ ಒಳ ಹೊರಗೆಲ್ಲ ಬಲ್ಲ ಬಾಡದಾದಿ ಕೇಶವರಾಯ 6
--------------
ಕನಕದಾಸ
ಓಹೋ ಸುಮ್ಮನೆ ಮರುಳಾದೆ ಮಹಿಮೆಯನರಿಯದೆ ಪ. ದೇವಾಧಿ ದೇವ ಬಂದು ಮನೆಯಲಿಂದು ಕಾವಲಾಗಿರುವನೆಂದು ತಾ ತಿಳಿದಿರಲಿಂದು ನಾ ವನಿತೆಯ ಒಡಗೂಡುತ ಪೊರಟರೆ ಕಾವರಿದಾರೆಂಬುದ ಭ್ರಮೆಗೊಂಡು 1 ನೀರಿನ ಮೇಲೆ ಧರೆಯ ನಿಲ್ಲಿಸಿದಂಥ ಈರೇಳು ಲೋಕದ ದೊರೆಯ ವಕ್ಷಸ್ಥಿತ ಸಿರಿಯ ಸೇರಿದ ದಾಸರಿಗಾರಿಂದಲು ಭಯ ಬಾರದೆಂಬ ಶ್ರುತಿಸಾರವ ಗ್ರಹಿಸದೆ 2 ಎಲ್ಲಿ ನೋಡಿದರಲ್ಲಿಪ್ಪ ಶ್ರೀವನಿತೆಯ ನಲ್ಲ ಭೂಪತಿ ನಮ್ಮಪ್ಪ ನೆನೆದಲ್ಲಿಗೆ ಬಪ್ಪ ಅಲ್ಲಿ ಇಲ್ಲಿ ಭಯವೆಲ್ಲವು ಬಿಡಿಸಲು ಬಲ್ಲ ಶೇಷಗಿರಿವಲ್ಲಭನಿರುತಿರೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಔಷಧದ ಬೇರೊಂದನು ನಾರದನು ತಂದ ಪೋಷಣೆಗೆ ಸಕಲರೂ ಸವಿಯಲೆಂದ ಪ ಜ್ವರಭೇದಗಳಿಗೆಲ್ಲ ನರಹರಿ ಎಂಬ ಬೇರು ಶಿರವೇಧೆ ಎಂಬುದಕೆ ಹರಿಹರಿ ಎಂಬ ಬೇರು ವಾತ ರುಜೆಗಳಿಗೆ ಸಿರಿಲೋಲನೀ ಬೇರು ಪರಿಪರಿಯ ಭವಗಳಿಗೆ ನಾರಾಯಣಾ ಎಂಬ ಬೇರು 1 ಪಿತ್ತರೋಗಂಗಳಿಗೆ ಚಿತ್ತಜನಪಿತನೆಂಬ ಪೃಥ್ವಿಯೊಳಗತ್ಯಧಮ ವಿಭಂದ ರೋಗಗಳಿ ಗರ್ಥಿಯಿಂ ಲೇಪಿಸುವ ಸತ್ವಗುಣನಿಧಿಯೆಂಬ ನಿತ್ಯಶೌರಿಯ ನಾಮ ಶಿವಬೇರು 2 ನಾರದನು ಬೇರೂರೆ ನೀರೆರೆದ ಪ್ರಹ್ಲಾದ ಧೀರಬಲಿ ಬೆಳೆಯಿಸಿದ | ನೀರ ಗಜನೆರೆದ ವೀರದಶಶಿರನನುಜನೆಚ್ಚರದೊಳಿದ ಕಾಯ್ದ ನಾರಿ ದ್ರೌಪದಿ ಶಿರದಿ ಮೊಗ್ಗಾಗಿ ಧರಿಸಿದಂಥ 3 ಅರಳಿದ ಸುಮಗಳನು ಅಕ್ರೂರ ಪೋಷಿಸಿದ ತ್ವರಿತದಿ ಕಾಯ್ಗಳನು ಶುಕದೇವ ಕಾಯ್ದ ನರರೆಲ್ಲರೀ ಫಲವ ದಿನದಿನವು ಮೆಲಲೆಂದು ವರದ ಮಾಂಗಿರಿರಂಗ ಪೇಳುತಿಹನು 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು
ಕಂಜಾಕ್ಷ ಕಾಯಯ್ಯ ಕರುಣಾನಿಧಿಯೆ ಬಲಭಂಜನನನುಜನೆ ನೋಡೆನ್ನ ಪ . ಅಂಜದೆ ನಾ ನಿನ್ನ ಅಡಿಳಿಗೆರಗುವೆಕುಂಜರವರದನೆ ಕೂಡೆನ್ನ ಅ.ಪ. ನಿಖಿಳ ಸಂಪದ ತನ್ನಿಂ-ತಾನೆ ಬಹುದು ತಡವಿಲ್ಲಆ ನಳಿನಭವಾದ್ಯಮರರಿದಕೆ ಸಾಕ್ಷಿಭಾನುಸನ್ನಿಭ ಬಾರೊ ನಲ್ಲ1 ಬೋವ ನೀನಾದಂದು 2 ವೃಂದಾರಕೇಂದ್ರ ಶ್ರೀ ಹಯವದನ ಮುಕುಂದಮಂದರೋದ್ಧಾರ ಮತ್ತೊಂದರಿಯೆಇಂದಿರೆಯರಸ ಬಾ ಇಂದುವದನ ದೀನ-ಬಂಧುವೆ ಭಕ್ತರ ಸಿರಿಯೆ 3
--------------
ವಾದಿರಾಜ
ಕಟ್ಟಿದಳು ಕಂಕಣವ ನಾರಿ ಲಕುಮಿವಿಷ್ಣು ಮೂರುತಿ ಕರಕೆ ವೈಕುಂಠರಾಣಿ ಪ.ಅವಿಯೋಗಿಯಾದ ಶ್ರೀ ಸತಿಯ ಸೇವೆಗೆ ಒಲಿದುಪವಮಾನನೊಡೆಯ ವರ ಬೇಡೆನ್ನಲುಭುವನೇಶ ನಿನ್ನ ಕೃಪೆ ಪೂರ್ಣಳಾನೆಂದೆನುತಹವಣೆಯಿಂ ಕೇಳ್ದಳೆರಡೊರವ ಲೋಕೋದ್ಧಾರಿ 1 ಶರಣಾಗತ ರಕ್ಷಕನು ಎಂಬ ಬಿರುದೊಂದುಶರಣಾಗತ ವತ್ಸಲನು ಎಂಬುದೊಂದುಧರಿಸು ಈ ಬಿರುದು ಹರಿ ವರವು ಅದೆ ಎನಗೆನಲುಕಿರುನಗೆಯ ನಗುತ ಒಲಿದನು ಸತಿಯ ನುಡಿಗೆ 2 ನಾರಿರನ್ನಳೆ ನಿನ್ನ ಕೋರಿಕೆಯ ತೆರನಂತೆಆರಾಧನೆಯ ಮಾಳ್ಪ ಶರಣರಿಗೆ ಒಲಿವೆತೋರಲೀ ಬಿರುದುಗಳು ನಿನ್ನ ಕರಗಳಲೆಂದುಶ್ರೀ ರಮೆಯ ಕರಕೆ ಕಂಕಣಗಳನೆ ತೊಡಿಸಿದನು 3 ನಾರಿ ಈ ಕಂಕಣವ ನಿನಗ್ಯಾಕೆ ಅರ್ಪಿಸಲುತೋರದೆನ್ನುತ ನಟನೆಗೈವನಿತರೊಳ್‍ಕ್ಷೀರಸಾಗರ ಮಥನ ಕಾಲದಲಿ ಜನಿಸುತಲಿಶ್ರೀ ರಮೇಶಗೆ ಒಲಿದು ಮಾಲೆ ಹಾಕಿದಳು 4 ಭಕ್ತಿ ಪ್ರೇಮಕೆ ಒಲಿದು ಭಕ್ತವತ್ಸಲ ಅಭಯಹಸ್ತವನು ಶಿರದಲ್ಲಿ ಇಡಲು ನಾರಿಚಿತ್ತದಲಿ ಆನಂದಪುಳಕಾಂಕುರಿತಳಾಗಿಚಿತ್ತದೊಲ್ಲಭನ ಮುಖಕಮಲ ವೀಕ್ಷಿಸುತ 5ಈಕ್ಷಿಸಲು ಶ್ರೀ ಹರಿಯ ಕರಕಮಲ ಲಕ್ಷಣವಲಕ್ಷ್ಮಿ ಬೆರಗಾಗಿ ಮುನ್ನಿನಕಿಂತ ಅಧಿಕಅಕ್ಷಯದ ಸಾಮುದ್ರಿ ಲಕ್ಷಣವ ಕಾಣುತಲಿಪಕ್ಷಿವಾಹನನ ಮೊಗ ಈಕ್ಷಿಸುತ ನಗುತ 6 ನೀನಿತ್ತ ವರದಾನ ಕಂಕಣದ ಬಂಧನವನಿನಗರ್ಪಿಸುತ ಧನ್ಯಳಾಗ್ವೆನೆಂದುಆನಂದದಲಿ ಮಾಡಿ ಕಂಕಣವ ಕಟ್ಟಿದಳು 7 ಜಗವನಾಡಿಸುವಂಥ ಸೂತ್ರವನೆ ಹದಿನಾರುಬಗೆ ಕಲೆಗಳೆಂಬ ಎಳೆ ಮಾಡಿ ಹಳದಿಮಿಗೆ ಕಾಂತಿ ಬಣ್ಣದಲಿ ಮಂಗಳಾಕಾರದಜಗಕೆ ವಿೂರಿಸಿದಂಥ ಕಂಕಣವ ಕಟ್ಟಿದಳು 8 ಕರಿ ಕೆಂಪು ಬಿಳುಪು ವರ್ಣವು ಪ್ರಳಯ ಕಾಲದಲಿಇರಲಾರದೆಂದು ತ್ಯಜಿಸುತ ಹಳದಿಯವರಕಾಂತಿ ಬಣ್ಣವನು ಪೂಸಿ ಮಂಗಳವದನೆಸರದಿಂ ಮೂರು ಗ್ರಂಥಿಯ ಬಿಗಿದಳಾಗ 9 ಪರಿ ಏನು ಪೇಳೆಂದು ಸರಸದಲಿ ಹರಿ ಕೇಳೆ ಹರಿಣಾಕ್ಷಿಯು ಪರಮ ಪುರುಷನೆ ನೀನು ಅರಿಯದಿನ್ನುಂಟೆ ಕೇಳ್ ಸರಸವಾಣಿಯಲಿ ಪೇಳ್ಪೆನು ದೇವ ದೇವ 10 ಒಂದು ಮುಕ್ತಿಯ ಗ್ರಂಥಿ ಒಂದು ಕರ್ಮದ ಗ್ರಂಥಿ ಒಂದು ಅಜ್ಞಾನ ನಿನ್ನ ಬಂಧಕರ ಗ್ರಂಥಿ ಇಂದಿರೇಶನೆ ಇದರ ಗುಟ್ಟು ಅರುಹುವÉ ಕೇಳು ಒಂದೊಂದು ವಿವರಗಳ ವಂದ್ಯ ಬ್ರಹ್ಮಾದಿ 11 ಕರ್ಮಗ್ರಂಥಿಯು ಬ್ರಾಹ್ಮಣರ ಯಜ್ಞದುಪವೀತ ಕರ್ಮ ಬಿಡುಗಡೆ ಇದು ಯತಿರತ್ನಗಳಿಗೆ ನಿಮ್ಮ ಬಂಧಕರ ಗ್ರಂಥಿ ಅಜ್ಞಾನಿ ಹೃದಯಕ್ಕೆ ನಿಮ್ಮ ಕೃಪೆಯಿಂದ ಬಿಡುಗಡೆ ಕೇಳು ಜೀವರಿಗೆ 12 ಮುಕ್ತರಿಗೆ ಸಂಸಾರ ಮತ್ತೆ ಬರದಂದದಲಿ ಕತ್ತರಿಸಿ ಲಿಂಗವನು ಕಾಯ್ದು ನಾನು ಚಿತ್ತಜಾಪಿತನೆ ನಿನ್ನಸ್ತಕೊಪ್ಪಿಸಿ ಬಿಗಿದು ಸುತ್ತಿ ಕಗ್ಗಂಟು ಹಾಕಿರುವೆ ನೀ ಗ್ರಂಥಿ 13 ಬಿಚ್ಚಲಾರೆಯೊ ನೀನು ಬಿಚ್ಚಲಾರೆನೊ ನಾನು ಬಿಚ್ಚಿಕೊಳಲಾರರೊ ಮುಕ್ತ ಜನರು ಅಚ್ಯುತನೆ ಇದೆ ನಿನಗೆ ಹೆಚ್ಚಿನಾ ಬಿರುದು ನಾ ಮೆಚ್ಚಿ ಕಟ್ಟಿರುವೆ ನೀ ಗ್ರಂಥಿ ಕಂಕಣವ 14 ಎರಡು ಗ್ರಂಥಿಯ ತೊಡಕು ಹರಿದು ಭಕ್ತರ ಕಾಯ್ದು ಪರಮ ಆನಂದ ಮುಕ್ತರಿಗೆ ಶರೆ ಮಾಡಿ ಮೆರೆಯೊ ಶರಣಾಗತರ ರಕ್ಷಕನೆ ಎಂದೆನುತ ಸಿರಿ ಮುತ್ತಿನಾರತಿಯನೆತ್ತಿದಳು 15 ಸಿರಿಹರಿಯ ಏಕಾಂತ ಸರಸ ವಚನಗಳಿದನು ಅರಿತವರು ಯಾರೆಂಬ ಅನುಮಾನ ಬೇಡಿ ಹರಿಶಯನನಾದವನು ಅರಿತು ಧೈರ್ಯದಿ ಜಗದಿ ಹರಹಿದುದ ಸಜ್ಜನರು ಅರಿತು ಆನಂದಿಸಲಿ 16 ಸಿರಿ ಒಲಿಯೆ ಶ್ರೀಹರಿಯು ತ್ವರಿತದಲಿ ಒಲಿಯುವನು ಮರುತ ಒಲಿಯಲು ಸಿರಿಯು ತಾ ಒಲಿವಳು ಗುರುವು ಒಲಿಯಲು ಮರುತ ಮರುಕ್ಷಣದಿ ಒಲಿಯುವನು ಅರಿವುದಿದರಿಂ ಗುರುವ ಒಲಿಮೆ ಅಧಿಕೆಂದು 17 ಪರಮ ಸುಜ್ಞಾನದಿಂದರಿತು ತತ್ವಾರ್ಥಗಳ ಶರಣ ನಾ ನಿನಗೆನಲು ವಾತ್ಸಲ್ಯದಿ ಸಿರಿಯರಸ ತನ್ನಭಯ ಹಸ್ತ ಶಿರದಲಿಟ್ಟು ಶರಣರನು ಪಾಲಿಸುವ ಮುಕ್ತಿ ಪದವಿಯನಿತ್ತು 18 ಹರಿಸಿರಿಯ ಲೀಲೆಗಳ ಗುರುಕರುಣ ಬಲದಿಂದ ಅರುಹಿದ ಮಹಿಮೆ ಧರೆಯಲ್ಲಿ ಮೆರೆದು ಪರಮ ಮಂಗಳ ಕೊಡಲಿ ನಿರುತ ಸದ್ಭಕ್ತರಿಗೆ ಕರುಣಾಳು ಗೋಪಾಲಕೃಷ್ಣವಿಠ್ಠಲನ ದಯದಿ 19
--------------
ಅಂಬಾಬಾಯಿ
ಕಂಡದ್ದು ಬಯಸಿ ಕಂಗೆಡು ಬೇಡಾ ಪಾದ ಬಿಡಬೇಡಾ ಪ ಕಾಲನಿನ್ನದಲ್ಲ ಕಡುಮೂರ್ಖ ಆ ಕಾಲ ಪುರುಷ ಮಾಡಿದನೇಕಾ ಪರಿಗಳಿಂದ ಇನ್ನು ಯಾಲೋಕಾದಲಿ ನಡುವುದಲ್ಲಾ ಸುಖದು:ಖ ಪಾಲಿಗೆ ಬಂದದ್ದು ಬಿಡದನಕಾ ಪ್ರಾಪ್ತಿ ಇದ್ದಷ್ಟೇ ಇಲ್ಲಧಿಕಾ ಶ್ರೀಲೋಲನ ನೀನಿರುವತನಕಾ ಸ್ಮರಿಸದೆ ಇರಬೇಡ ಅವಿವೇಕಾ 1 ಘಣಿಯಲ್ಲಿ ಬರದದ್ದು ತಪ್ಪದಲ್ಲೆ ಜಗ ಭಗವಂತ ನೀ ಮಾಡಿದಲ್ಲೆ--- -------- ನಿನ್ನದಲ್ಲೆ ಅನುಗ್ರಹ ಮಾಡುವ ಭರದಲ್ಲೆ ನಗಧರನಾ ನಾಮ ಬಲದಲ್ಲೆ ಅಘಗಳ ಕಳಿ ನೀ ತೀವ್ರದಲ್ಲೆ 2 ಇಷ್ಟಾರ್ಥ ನೀ ಮಾಡಬೇಕಂದಿ ಸಂಚಿತ ಎಲ್ಲೆಂದಿ ಕಷ್ಟವ ಪಡಕೊಂಡು ನೀ ಬಂದಿ ಕಾಮಕೆ ಸುಖವು ಇಲ್ಲೆಂದಿ ಇಷ್ಟದಿ ಶ್ರೀ ಹರಿ ಪದಹೊಂದಿ ಇರದೆ ನೀ ಇರಬೇಡಾ ಇಬ್ಬಂದಿ ಸ್ಪಷ್ಟದಿ 'ಹೊನ್ನಯ್ಯ ವಿಠ್ಠಲಂದಿ’ ಸಾರ್ವದಿ ಮುಂದಕ ನೀ ಬಂದಿ3
--------------
ಹೆನ್ನೆರಂಗದಾಸರು
ಕಡಲಶಯನ ಹರಿಯ ತೊಡೆಯಲ್ಲಿ ಮಡದ್ಯೇರಿಬ್ಬರು ಕುಳಿತು ಪ ಪನ್ನಂಗಶಯನ ಕೇಳೆ ಸ್ವಾಮಿ ನೀ ಎನ್ನ ಮನೆಗೆ ಏಳೊ ನಿನ್ನ ಪಾದಕ್ಕೆ ಎರಗುವೆನೆಂದು ಭಾಮೆ ಕೈ- ಯನ್ನು ಮುಗಿದಳಾಗ 1 ಎನ್ನ ಮನೆಯಲ್ಲಿದ್ದ ಶ್ರೀಹರಿ- ಯನ್ನು ಕರೆಯಲವರ ಕಣ್ಣೇಸೆನುತಲಿ ಕರ್ಣಿ(ನ್ಯೆ?) ರುಕ್ಮಿಣಿ ಕೋಪ- ವನ್ನು ಧರಿಸಲಾಗ 2 ಎಷ್ಟು ಹಣವ ನೀನು ಕೃಷ್ಣಗೆ ಕೊಟ್ಟು ಕೊಂಡಿ ಹೇಳೆ ದಿಟ್ಟತನದ ಮಾತಾಡೋ ರುಕ್ಮಿಣಿ ನಿನ್ನ ಶ್ರೇಷ್ಠತನವೇನ್ಹೇಳೆ 3 ಹತ್ತು ಆರು ಸಾವಿರದಷ್ಟ ಭಾರ್ಯೇರವೊಳಗೆ ಸತ್ಯಭಾಮೆ ಉತ್ಕøಷ್ಟ ಚೆಲುವೆಯೆಂದು ಕೃಷ್ಣ ನಿನ್ನಲ್ಲಿಹನೆ4 ಹದಿನಾಲ್ಕು ಲೋಕದಲಿ ಹರಿ ಪಾದಾಂಬುಜವ ಕಾಂಬುವೋರಿಲ್ಲೆ ಯದುನಾಥನ ಎದೆ ಮ್ಯಾಲ್ಹತ್ತಿರುವೋದು ಇದು ಸೋಜಿಗವಲ್ಲೆ 5 ಇಷ್ಟೆ ಸೋಜಿಗವೆಂದು ಆಡಲು ದಿಟ್ಟೆ ನಿನಗೆ ಅರಿದೆ ಅಷ್ಟದಿಕ್ಪಾಲಕರನೆ ಓಡಿಸಿ ವೃಕ್ಷ ಕಿತ್ತು ಒದರು(ರುವು?) ದಲ್ಲೆ 6 ಜಲಪ್ರಳಯ ಕಾಲದಲಿ ಜನರಿಲ್ಲದ ಅಂಧಕಾರದಲಿ ಎಲೆಯಾಗಾ ಪರಮಾತ್ಮನ ಮನವ ನೀ ಮೊ- ದಲೆ ಒಲಿಸಿಕೊಂಡೆ 7 ಕಾದು ಸೇವಿಸೆ ಹರಿಯ ಪಾದದ- ಲ್ಲಾದರವಿಲ್ಲದಲೆ ದಾನ ಮಾಡುತ ಮುನಿಹಿಂದಟ್ಟಿದರ್ಹರಿ ಹ್ಯಾಗೆ ಬರುವನ್ಹೇಳೆ 8 ಮೂರು ಲೋಕದ ದೊರೆಯ ಮೂರೆಲೆ ತುಳಸಿ- ಸರಿಯ ಮಾಡಿ ಮುಕುತಿದಾಯಕ ಕೈವಶವಾ- ಗಿರಲು ನೀ ಸಕಲ ಮಾಯವ ಬಲ್ಲೆ 9 ಪಟ್ಟದ್ವೊಲ್ಲಭೆ ನಾನು ಕೃಷ್ಣಗೆ ಮೆಚ್ಚಿ ಬಂದೆಯೆ ನೀನು ಅಚ್ಚುತ ತಾ ಪರಮಾನುಗ್ರ(ಹ)ವ ಮಾಡಿ ಬಂ- ದಿಚ್ಛೆಲಿರುವ ತಾನು10 ಮಾತಾಪಿತರು ಅನುಜನನ್ವಂಚಿಸಿ ಈತಗ್ವಾಲೆಯ ಬರೆದು ಯಾತಕಂಜಿಕೆ ವಲಿಸ್ಯೋಡಿ ಬಂದವಳೆಂದು ಕೀರ್ಹೊಗಳುವುದಲ್ಲೆ 11 ತಂದು ಕೊಡಲು ಮಣಿಯ ಸಭೆಯೊಳು ಅಂದು ತಗ್ಗಿಸಿ ತಲೆಯ ನಿಂದ್ಯದ ಮಾತಿಗೆ ತಂದು ನಿಮ್ಮಯ್ಯ ಮುಂದಿಟ್ಟು ಪೋದನೆ ನಿನ್ನ 12 ಕೇಳೊ ಕೇಳೊ ನುಡಿಯ ನೀನೀ- ರೇಳು ಲೋಕದ ಒಡೆಯ ಹೇಳೋ ಬುದ್ಧಿ ನಿನ್ನಯ ವಲ್ಲಭೆ ಮಾತಾ- ಡೋಳೊ ನಿರ್ಭಿಡೆಯ 13 ರಕ್ಕಸಾಂತಕ ಕೇಳೊ ನಿನ್ನ ಚಿಕ್ಕವಲ್ಲಭೆ ಮ(ಹಿ)ಮೆ ಉಕ್ಕಿ ಉಕ್ಕಿ ಎನ್ನ ಮ್ಯಾಲೆ ಬರಲು ನಿನ- ಗಕ್ಕರ ತೋರುವುದೆ 14 ಆರ್ಯಳೆಂದು ನಾನು ತಾಳಿದೆ- ನಕ್ಕ ರುಕ್ಮಿಣಿ ಮಾತ ಏರಿ ಏರಿ ಏನ್ನಮ್ಯಾಲೆ ಬರಲು ಇದು ನ್ಯಾಯವೇನೊ ನಿನಗೆ 15 ನಾಲ್ಕು ತೋಳಿನಿಂದ ಆಲಿಂಗಿಸಿ ಕಾಂತೆಯರಿಬ್ಬರನು ಯಾತಕಿಂಥ ಕದನವು ಘನವಾಯಿತು ಸಾಕು ಸಾಕುಯೆನುತ16 ವಾರಿಜಾಕ್ಷ ಕೇಳೋ ನಾರದ- ರ್ಹೂಡಿದರೀ ಜಗಳ ಪಾರಿಜಾತ ಸರಿಸವತಿಗೆ ಕೊಟ್ಟ- ರಿನ್ಯಾರು ಸೈರಿಸೋರ್ಹೇಳೊ 17 ನಂದನವನ ತರುವ ನಾ ತಂದಿಟ್ಟೆನಂಗಳದಲ್ಲೆ ಅಂದಿಬ್ಬರನಾನಂದವ ಬಡಿಸಿದ ಚೆಂದದಿಂದಲಿ ನಗುತ 18 ಭಾಮೆ ರುಕ್ಮಿಣಿ ಸಹಿತ ನಡುವೆ ಭೀಮೇಶ ಕೃಷ್ಣನು ಕುಳಿತ ಕಾಮನಯ್ಯನ ಚರಿತ್ರೆಯ ಪಾಡ- ಲಮೃತ ಪಾನವು ನಿರುತ 19
--------------
ಹರಪನಹಳ್ಳಿಭೀಮವ್ವ