ಒಟ್ಟು 1002 ಕಡೆಗಳಲ್ಲಿ , 100 ದಾಸರು , 847 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಸಿರ ನಾಮವ ಹಾಡೆ | ತಂಗಿ ಪ ದಾಸರು ಬಂದರೆ ಕೈ ಜೋಡಿಸಿ ವಂದಿಸೆ ತೋಷದಿ ವರಗಳ ಸೀಡುವರಮ್ಮ ಅ.ಪ ಪರಿಮಳ ಭರದಲಿ ಮೆರೆಯುವ ಹೂಗಳ ಅರಸಿ ತಂದಿರುವಳು ನೀನಲ್ಲವೇ ಪರಮ ಮಂಗಳಕರ ಸರಸಿಜಪಾದಕೆ ಹರುಷದೊಳರ್ಪಿಸೆ ಮರೆಯದಿರಮ್ಮ 1 ಮಂದರಧರ ಗೋವಿಂದನು ಮನದಲಿ ನಿಂದಿರುವನು ತಾನೆಂದೆಣಿಸಮ್ಮ ಬಂಧಿಸಿ ಪಂಚೇಂದ್ರಿಯಗಳನೆಲ್ಲ ವಂದಿಸಿ ಕೈಪಿಡಿ ಎಂದು ಬೇಡಮ್ಮ 2 ಅಂಗನೆಯರ ಭಾವಭಂಗಿಗೆ ನಲಿಯುವ ಮಾಂಗಿರಿಯರಸನು ನಿಜವಮ್ಮ ಇಂಗಿತವರಿತು ಗೋಪಾಂಗನೆಯರಿಗಾ- ಲಿಂಗನವಿತ್ತವನಿವನಮ್ಮ 3 ಇವನಮ್ಮ ಮನದೈವ ಗೋಪಾಲನು ಇವನಮ್ಮ ಪರದೈವ ನೀಲಾಂಗನು ಭವದೂರ ಸುಕುಮಾರ ಸಿರಿಲೋಲನು ನವನೀತ ದಧಿಚೋರ ಸುವಿಲಾಸನು 4 ಪರಮಾರ್ಥ ಚರಿತಾರ್ಥ ವರದಾತನು ಪರತತ್ವ ಚಿರತತ್ವ ಗುರುವೀತನು ದುರಿತಾರಿ ಉಪಕಾರಿ ಪರಮಾತ್ಮನು ಸಿರಿರಂಗ ಮಾಂಗಿರಿಯ ದೊರೆಯೀತನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಿಕ್ಕದೆ ಪೋಪೆಯೇತಕೆ ಮಾಂಗಿರಿರಂಗ ಪ ಸಿಕ್ಕದೆ ಪೋಪೆಯೇಕೆ ಠಕ್ಕುಮಾಡುವೆಯೇಕೆ ಅಕ್ಕರೆಯಿಂದ ನಾ ಸಕ್ಕರೆ ಕೊಡುವೆನೆ ಅ.ಪ ಚಿಣ್ಣರ ಕೂಡಾಡಿ ಕಣ್ಣುಸನ್ನೆಯ ಮಾಡಿ ಸಣ್ಣಕೊಳಲಪಾಡಿ ಬೆಣ್ಣೆಗಳ್ಳ ರಂಗಾ1 ಪಿಡಿದು ಬರುವೆನೆಂದು ಕಡಲಿನೊಳಗೆ ಮಿಂದು ಪೊಡವಿದೇವಿಯ ತಂದು ಕಡುನೊಂದುದಾಯ್ತಿನ್ನು 2 ತರಳ ಪ್ರಹ್ಲಾದನು ಕರೆಯುತಲಿಹನೇ ನಿನ್ನ ಕರದೆ ಬೆಣ್ಣೆಯನಿಟ್ಟು ಕರುಣಾಳು ಬಾರೆನಲ 3 ಕಡುನುಡಿಗಳ ಕೇಳಿ ಪಿಡಿಯಲಾರೆನೇ ನನ್ನ ಕಡೆಗಣಿಸಲಿ ಬೇಡ ಅಡಿಗೆರಗುವೆ ರಂಗಾ 4 ಮಾಂಗಿರಿಮೇಗಿಹ ಶೃಂಗಾರ ದೇವಯ್ಯ ರಂಗ ನೀನೆನ್ನಂತರಂಗ ದೇವದೇವಾ 5 ತಾಮರಸಾಕ್ಷನೆ ಕಾಮಿತ ದಾತನೆ ರಾಮದಾಸಾರ್ಚಿತ ಭೀಮವಿಕ್ರಮ ರಂಗಾ 6
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸಿಕ್ಕಿದನೆಲೆ ಜಾಣೆ ಶ್ರೀ ವೇಣುಗೋಪಾಲಭಕ್ತವತ್ಸಲ ದೇವನು ಪ ಮಕ್ಕಳ ಚೆಂಡಿಕೆ ಮರದ ಕೊನೆಗೆ ಕಟ್ಟಿಘಕ್ಕನೆ ಕೈ ಚಪ್ಪಾಳಿಕ್ಕಿ ನಗುವ ರಂಗ ಅ.ಪ. ಹೆಣ್ಣುಮಕ್ಕಳು ಬಚ್ಚಲೆಣ್ಣೆ ಮಂಡೆಯೊಳುಬಣ್ಣ ವಸ್ತ್ರವ ಬಿಟ್ಟು ಬರಿಮೈಯೊಳಿರಲುಚೆನ್ನಿಗ ಬಿಸಿನೀರ ಚೆಲ್ಲಿ ಸೀರೆಗಳೊಯ್ದುಉನ್ನಂತವಾದ ವೃಕ್ಷವೇರಿ ಕಾಡುವನಮ್ಮ 1 ಪರಿ ಎಷ್ಟೆಂತೆ ಪೇಳಲೆ2 ಸಡಗರದೊಳು ಸೋಳಸಾಸಿರ ಗೋಪೇರಒಡಗೂಡಿ ಕೊಳಲನು ಪಿಡಿದು ತಾ ಮೊಸರಕಡೆವೊ ಗೊಲ್ಲತಿಯರ ಕೈ ಪಿಡಿದಾಡುವಒಡೆಯನೆ ಇವನಮ್ಮ ಉಡುಪಿನ ಶ್ರೀಕೃಷ್ಣ3
--------------
ವ್ಯಾಸರಾಯರು
ಸಿದ್ಧ ನೋಡಿರೋ ಸಾಕ್ಷಾತ್ಕಾರವ ಧ್ರುವ ಸಾಧುಕಾ ದಸ್ತ ಪಂಜ ಲೇಣಾ ಸಾಧುಕೆ ಸಂಗ ಕರನಾ ಸಾಧ್ಯವಾಗದು ಸದ್ಗುರು ಕರುಣಾನಿ ಧರಿಯೊ ಜಾಣಾ 1 ಬಾಹ್ಯಾಂತ್ರಿ ಜೋ ಪಾಹೆ ಗೋವಿಂದಾ ಇಹಪರ ಅವಗಾನಂದಾ ದೇಹಭ್ರಾಂತಿಗೆ ಸಿಲಕದೆಂದಾ ವಹೀ ಖುದಾಕಾ ಬಂದಾ 2 ಪಾಕದಿಲ್ಲಾ ಸುಜೀರ ಕರಣಾ ಯಕೀನ ಸಾಬೀತ ರಾಹಾಣಾ ಟಾಕ ತ್ಯಾಭವ ಮೀ ತೂ ಪಣಾ ಐಕ್ಯವಿದು ಭೂಷಣಾ 3 ನಿಸದಿನ ಕರಿಮಕ ಹೊಯಾರಾ ವಾಸುದೇವ ಸಾಹಕಾರಾ ವಿಶ್ವವ್ಯಾಪಕಾ ಮ್ಹಣುನಿ ಸ್ಮರಾ ಲೇಸು ಅವನ ಸಂಸಾರಾ 4 ಮೂವಿಧ ಪರಿಯಲಿ ಹೇಳಿದ ಭಾಷಾ ಮಹಾಗುರುವಿನ ಉಪದೇಶಾ ಮಹಿಪತಿಗಾಯಿತು ಭವ ಭಯ ನಾಶಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿರಿ ಚರಣದಲ- ಪಾರ ಭಕುತಿಯನೀಯೋ ತವ ಸೇವಕನೆನಿಸಿ ಕೀರುತಿಯನು ಪಡೆಯೋ ಭವಕ್ಲೇಶ ಕಳೆಯೊ ಪ ಸೂರಿ ಸುಬ್ಬಣಾಚಾರ್ಯಕರಸ- ರೋರು ಹಗಲಲಿ ಪೂಜೆಗೊಳುತಲಿ ಚಾರುತರ ಶ್ರೀ ಜಯಮಂಗಳಿಯ ತೀರದೊಳಿರುವ ವೀರ ಮಾರುತಿ ಅ.ಪ. ಪ್ರತಿ ವರುಷ ಮಾಘಸಿತ | ನವಮಿ ದಿನದೊಳು ನೀ- ನತಿವಿಭವದೊಳು ನಗುತ | ಭಕುತರಿಷ್ಟವ ಸಲಿಸೆ ರಥದೊಳಗೆ ಕುಳ್ಳಿರುತ | ವಿಧ ವಿಧ ವಾದ್ಯಗಳ ತತಿಯನಾಲೈಸುತ | ಅತಿ ಮೋದಬಡುತ ಪರಿ ಸಂ- ಸ್ತುತಿಸೆ ಹಿಗ್ಗುತಲವರ ಸ್ವಮನೋ- ರಥಗಳ ನೀ ಸಲಿಸುವೆನೆನುತಲಿ ಅತುಳ ವಿಕ್ರಮದಭಯ ಹಸ್ತದಿ ಕೃತಿರಮಣ ಸಿರಿವರ ಹರಿಯನನು ಮತವ ಪಡೆಯುತ ರಥವ ನಡೆಸಿ ಚತುರ ದಿಕ್ಕಲಿ ಬಿಜಯ ಮಾಡುತ ಸತತ ಹರುಷವಗರೆವ ದೇವ 1 ರಕ್ಕಸಕುಲ ತಮ ಭಾನು | ತಾಮಸರ ಧ್ಯಾನಕೆ ಸಿಕ್ಕುವನಲ್ಲ ನೀನು | ಸುಜನರ ಹೃದಯದೊಳು ಅರ್ಕನೊಲು ಪೊಳೆವನು | ಹರಿಸಿರಿಗಾಳುಳಿದು ಬಕ್ಕ ದಿವಿಜರಿಗಿನ್ನು | ಗುರುಬಲ್ಲೆ ನಾನು ಚಿಕ್ಕ ರೂಪವಗೊಂಡು ಲಂಕೆಯ ಪೊಕ್ಕು ರಾಮನ ಸತಿಯ ಕಂಡು ತುಕ್ಕಿ ವನವನು ಸೂರೆ ಮಾಡಿ ಉಕ್ಕಿನ ಧ್ವಜಸ್ತಂಭದಿಂದ ಸೊಕ್ಕಿ ಬಂದ ದನುಜವ್ರಾತವ ಕುಕ್ಕಿ ಕೆಡಹಿ ಪುರವನುರಹಿ ಅಕ್ಕರದ ಮಣಿಸಹಿತ ಬಂದು ಪಕ್ಕಿದೇರನಿಗೆರಗಿ ನಿಂದೆ 2 ತುತಿಸ ಬಲ್ಲೆನೆ ನಾನು | ನಿನ್ನಯ ಸುಗುಣಗಳ ತತಿಗಳೆಲ್ಲವನು | ತ್ರಿಪುರ ಸುಂದರಿ ಪಾ- ರ್ವತಿ ಪತಿಯ ಪಡೆದವನು | ರಂಗೇಶವಿಠಲಗೆ ಅತಿಪ್ರೀತಿಸುತ ನೀನು | ನಿಷ್ಕಾಮಯುತನು ಪತಿತರನುದ್ಧರಿಸಲು ನೀ ಸಿರಿ ಪತಿಯ ಮತದೊಳು ಹನುಮ ಭೀಮ ಯತಿಯ ರೂಪವ ತಾಳಿ ಹರುಷದಿ ಕ್ಷಿತಿಯ ಭಾರವ ಹರಸಿ ಸಲಹಿದೆ ಅತುಳ ಮಹಿಮ ನಿನ್ನಪರಿಮಿತ ಶ ಕುತಿಗೆ ನಮೊ ನಮೊ ವಾಯುತನಯನೆ ಸತತ ಮುದದೊಳು ನಿನ್ನ ಸ್ಮರಿಸುವ ಮತಿಯ ಪಾಲಿಸು ಪತಿತ ಪಾವನ 3
--------------
ರಂಗೇಶವಿಠಲದಾಸರು
ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಪ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ಗುಪಿತ ಮಹಿಮನ 1 ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ ನಾರದನು ಗಾಯನವ ಗೈಯುತ ಇನಿತು ಸೋಜಿಗ ನೋಡಿ ತನ್ನಯ ಜನಕಗರುಹಲು ನಗುತಲಾ ಮನದಿ ಕೈಕೊಂಡ ಮೂಲ ಮೂರ್ತಿಯ 2 ಪೊಡವಿಯೊಳು ನೀನವತರಿಸಿ ಆ ದೃಢü ಬಕುತನಿಗೆ ದರುಶನವೆ ಇ ತ್ತಡಿಗಡಿಗೆ ಸುಖಬಡಿಸಿ ಅಲ್ಲಲ್ಲಿ ಬಿಡದೆ ನಿಲ್ಲುವೆ ನಿಮ್ಮ ಸಹಿತಲಿ ವಿನುತ ಕಳುಹಿದ ಒಡನೆ ಸಲ್ಲಿಪೆನೆಂದ ಯಮುನಾ ತಡಿಯ ಜನಿಸಿದ ಜಗನ್ಮೋಹನಾ 3 ನಿಧಿಯ ನೋಡುವೆನೆನುತ ಗೋವುಗಳ ಮುದದಿ ಮೇಯಿಸಿಕೊಳುತ ಕಾವುತ ಒದಗಿ ಗೋವಳರೊಡನೆ ಬಂದನು ವಿಧಿ ಸಂಭವಾದ್ಯ ಭಕ್ತನ ಎದುರಲಿ ನೋಡಿದನು ಹೋ ಹೋ ಇದೇ ಸಮಯವೆಂದು ನಿಂದಾ ಹಿಂಭಾ ಗದಲಿ ಭಕ್ತಿಗೆ ಮೆಚ್ಚಿ ಬಲು ವೇಗಾ4 ತಿರುಗಿ ನೋಡದಲಿರಲು ಭಕುತನ ಮರಳೆ ಮಾತಾಡಿಸಲು ಇಟ್ಟಿಗೆ ಭರದಿ ಹಿಂದಕೆ ಒಗಿಯೆ ವಿಠ್ಠಲ ಹರುಷದಲಿ ವಶವಾಗಿ ನಿಲ್ಲಲು ಕರುಣರಸ ಸಂಪೂರ್ಣ ದೇವನ ನಿರೀಕ್ಷಿಸಿದ ಜಯವೆಂದು ಪೊಗಳಿ ವರವ ಬೇಡಿದ ಪುಂಡರೀಕನು ಗಿರಿಯನೆತ್ತಿದ ಗೋಕುಲೇಶನ 5 ಭಕುತ ಮನೋರಥ ಎನ್ನ ಪೆಸರಿಲಿ ಸಕಲ ಲೋಕದೊಳಗೆ ನೀನೆ ಮುಕುತಿ ಕೊಡುತಲಿ ಇಲ್ಲೆ ನಿಲುವದು ಅಖಿಳ ಬಗೆಯಿಂದ ಭಜನೆಗೊಳುತ ನೀ ರುಕ್ಮಿಣಿಪತಿ ಒಲಿದು ಪಾಲಿಸಿ ವ್ಯಕುತವಾದನು ಪೂರ್ವಮುಖನಾಗಿ ಸುಖವಯೋನಿಧಿ ಮೆರೆಯುತಲಿ ಇಂದೂ 6 ಕ್ರೋಶ ಯೋಜನ ಯೋಜನತ್ರಯ ದೇಶ ಪರಿಮಿತ ಕ್ಷೇತ್ರವಿಪ್ಪುದು ವಾಸ ಒಂದಿನಮಲ ಮನುಜರನ ಲೇಸು ಪುಣ್ಯಗಳೆಣಿಸಿ ಸರಸಿ ಜಾಸನನು ಬೆರಗಾಗಿ ನಿಲ್ಲುವ ದೋಷ ವರ್ಜಿತ ಹರಿಯ ನೆನೆಸುತ ಆ ಸೇತು ಮಧ್ಯದಲಿ ವಿಶೇಷವಾಗಿದ್ದ ಈ ಕ್ಷೇತ್ರ ಮೂರ್ತಿಯಾ 7 ನಂದಾ ಮಂದಾಕಿನಿ ಮಧ್ಯಾಹ್ನಕೆ ನಿಂದಿರದೆ ಬರುತಿಪ್ಪ ಪ್ರತಿದಿನ ಚಂದ್ರಭಾಗಾ ಪ್ರಸೂನುವತಿ ಅರ ಕುಂಡಲ ಚತುರ ದಿಕ್ಕಿನಲಿ ಪೊಂದಿಪ್ಪವು ಓರ್ವನಾದರು ಮಿಂದು ತೀರ್ಥದಲಿ ಆ ನಂದ ಸತ್ಕರ್ಮ ಚರಿಸಲಾಕ್ಷಣ ಇಂದಿರೇಶನು ಒಲಿವ ನಿಶ್ಚಯಾ 8 ದ್ವಾರಸ್ಥ ಜಯ ವಿಜಯ ನಾರದ ಭಾರತಿ ಪಂಚ ಕೋಟಿ ದೇವರು ಶ್ರೀರಮಣಿ ಮಿಕ್ಕಾದ ಜನರೆಲ್ಲ ಈರೆರಡು ದಿಕ್ಕಿನಲಿಯಿಹರು ಸುತ್ತಲಿ ಪಾಡುತ್ತ ಕುಣಿಯುತ್ತ ಹಾರುತಲಿ ಹಾರೈಸಿ ನಾನಾ ವಿ ಹಾರದಲಿ ಪುರಿ ಪ್ರದಕ್ಷಣಿ ವಿ ಸ್ತಾರ ಮಾಡುತಲಿಪ್ಪ ಸೊಬಗನಾ 9 ಎರಡು ವಿಂಶತಿ ಗುದ್ದು ಮೊಳವೆ ಕರಿಸಿ ಕೊಂಬೊದೊಂದೆ ನಿಷ್ಕವು ಇರದೆ ಇವು ನಾನೂರುಯಾದಡೆ ವರಧನಸ್ಸು ಪ್ರಮಾಣವೆನಿಸೊದು ಗುರುತು ತಿಳಿವದು ಇಂಥ ಧನಸ್ಸು ಅರವತ್ತು ಪರಿಮಿತಾ ಈ ಭೀಮಾ ಸರಿತೆಗಳು ಪರಿಪರಿ ತೀರ್ಥಗಳಕ್ಕು ನಿರೀಕ್ಷಿಸಿ ವಂದನೆಯ ಮಾಡುತಾ 10 ಜ್ಞಾತಿ ಗೋತುರ ಹತ್ತದೊಂದೆ ಮಾತು ಮನ್ನಿಸಿ ಕೇಳಿ ಸುಜನರು ವಾತದೇವನ ಕರುಣತನವನು ನೀತಿಯಲಿ ಪಡಕೊಂಡು ಸತ್ವದಿ ಜ್ಞಾತ ಅನುಷ್ಠಾನದಲಿ ನಡೆದು ಪು ಮಾನವ ಬಂದರಾದಡೆ ಆತುಮದೊಳು ಹರಿ ಪೊಳೆದು ಬಲು ಕೌತುಕವ ತೋರಿಸುವ ರಂಗನಾ 11 ಶಯ್ಯಾ ಹರಿ ದಿನದಲಿ ಮಾನವ ಕಾಯ ನಿರ್ಮಳನಾಗಿ ಫಂಡರಿ ರಾಯ ರಾಜೀವನೇತ್ರ ತ್ರಿಭುವನ ನಾಯಕನ ಕ್ಷೇತ್ರಕ್ಕೆ ಮನಮುಟ್ಟಿ ಗಾಯನವ ಮಾಡುತಲಿ ಬಂದ ನಿ ರ್ಮಾಯದಲಿ ಕೊಂಡಾಡಿ ದಮ್ಮಯ್ಯ ಕೈಯ ಪಿಡಿಯನೆ ಕರುಣದಿಂದ ಸಾ ಹಾಯವಾಗುವ ವಾಣಿ ಜನಕನಾ 12 ಮಕುಟ ಕುಂಚಿ ಕುಲಾಯ ಕುಂತಳ ಕುಂಡಲ ಮಣಿ ಕಿರಣ ಸ ನ್ನುಖ ಮುಕರ ಸೋಲಿಸುವ ಕಾಂತಿ ಚಂ ನಾಸಿಕ ಮುಖ ಮೃಗನಾಭಿ ಸಣ್ಣ ತಿ ಲಕ ಕೌಸ್ತುಭಗಳ ತುಲಸಿ ಮಾಲಿಕಾ ನಖ ಪದಕ ಕಟೆಕಂಬು ಕರದ್ವಯ ನಖ ಪಾದ ಭೂಷಣ ಮಾ ಣಿಕ ಇಟ್ಟಿಗೆ ಮೇಲೆ ನಿಂದ ವಿಠ್ಠಲನ 12 ಸಂಗಮ ಸುರ ಮಥನ ಕಾಳಿಂಗ ಭಂಗ ಭಾವುಕ ಭಕ್ತಜನಲೋಲ ಶೃಂಗಾರಾಂಬುಧಿ ರೋಮ ಕೋಟಿ ಕೋಟಿ ಲಿಂಗಧರ ಗೌರೀಶ ಸುರಪ ನಂಗ ಮಿಗಿಲಾದ ಮುನಿವಂದಿತಾ ಮಾ ತುಂಗ ವರದ ಗೋವಿಂದ ವರದೇಶ ಸಂಗ ನಿಃಸಂಗ ಸುಪ್ರಸನ್ನ ನೀ ಅನುದಿನ 14 ಪೇಳಲೊಶವೇ ಲೋಹದಂಡಿ ಹಿ ಯ್ಯಾಳಿ ಕ್ಷೇತ್ರದ ಮಹಿಮೆ ಸಾವಿರ ನಾಲಿಗಿಂದಲಿ ಪೊಗಳಿ ಸುಮ್ಮನೆ ವ್ಯಾಳಪತಿ ಬೆರೆಗಾಗಿ ನಿಲ್ಲುವ ಸಲಿಗೆ ನಾ ಮಾಳ್ಪರು ವಿಲಿಂಗರು ಮೇಲು ಮೇಲೀ ಭುವನದೊಳಗಿದ್ದು ಹೇಳಿ ಕೇಳಿದ ಜನರಿಗಾನಂದಾ ಬಾಲಾ ವಿಜಯವಿಠ್ಠಲರೇಯನಾ 15
--------------
ವಿಜಯದಾಸ
ಸಿರಿ ಮನುಜಕೇಸರಿ ಧರಣಿ ಸುಮನಸಗೇಯ | ಮೊರೆಹೊಕ್ಕೆ ನಿನ್ನನು ತರಣಿ ಸನ್ನಿಭಗಾತ್ರ | ಕೀರಾಬ್ಧಿಶಯ್ಯ ಪ ಸರಸಿಜಾನನ ನಜಕ ತವಪದ ಮರೆದ ಪಾಮರನಾಗಿ ನಾ ಭವ ಶರಧಿಯೊಳು ಬಿದ್ದು ಪರಿದು ಪೋಗುವೆ ಎರಗರಿಪುಧ್ವಜನಾಗಿ ನೀ ಬಂದು ಸೂನು | ಸರ್ವೇಶ ರಾಘವ ಭಜಕಜನ ಸುರಧೇನು | ಸ್ವರತ ಸುಖಮಯ ಸುಜನ ವಾರಿಜ ಭಾನು ಖಳವನ ಕೃಶಾನು ತ್ರಿಜಗ ಪೋಷಕ ಪರಮ ಸುಲಭ ನೀ ನಿಜದಯದಿ ಹರಿಮದವ ಖಂಡ್ರಿಸಿ ವೃಜದ ತುರುಗಳ ಕಾಯ್ದ ಸಜನುತ ದ್ವಿಜಪ ಸುತೆ ಪತಿಧ್ವಜನ ಸುತನೆ 1 ಪತಿತ ಪಾವನ ರಂಗ | ಸಂತತದಿ ನಿನ್ನನು ಸ್ತುತಿಪ ಸುಜನರ ಸಂಗ | ನೀನಿತ್ತು ಪಾಲಿಸು ದಿಜ ತತಿ ಮಾತಂಕ ಮರಿಗಳಿಗೆ ಸಿಂಗ ಸಿತ ತುರಂಗನ ರಥದಿ ಶೋಭಿಪ ಅತುಳ ಮಹಿಮನ ಜನನಿ ಅನುಜನಿಗೆ ಹಿತದಿ ಭ್ರಾತದಿ ಭೀತಿ ಬಿಡಿಸಿದ ಶೃತಿಗೆ ನಿಲುಲದ ಚ್ಯುತ ವಿದೂರನೆ 2 ಸಾಮಗಾನ ವಿಲೋಲ ಸುರರಾಜ ಪೂಜಿತ ಕಾಲ | ಕರಿದನುಜ ಹರನುತ ಸ್ವಾಮಿ ಶ್ರೀವನಮಾಲಧರ ಸುಗುಣಶೀಲ ಕಾಮಪಿತ ಹಿಮಧಾಮ ವದನ ಸು ಧಾಮಸಖ ಸುರಸ್ತೋಮ ವಂದಿತ ಯಾಮಿನೀ ಚರವೈರಿ ವಾಮನ ಶ್ರೀಮನೋಹರ ಶಾಮಸುಂದರ 3
--------------
ಶಾಮಸುಂದರ ವಿಠಲ
ಸಿರಿಯ ಮದವೆ ಮುಕುಂದ - ನಿನ್ನಚರಣ ಸೇವಕನ ಬಿನ್ನಹ ಪರಾಕೆಲೊ ದೇವ ಪ ಅಷ್ಟದಿಕ್ಪಾಲಕರ ಮಧ್ಯದಲಿ ವೈಕುಂಠಪಟ್ಟಣವು, ಸಿರಿಯೋಲಗವ ನಿತ್ಯದಿಕಟ್ಟಿ ಓಲೈಸುತಿಹ ದಾಸರನಿಮಿಷರು, ಮನಮುಟ್ಟಿ ಪಾಡುವ ನಾರದರ ಗೀತ ಸಂಭ್ರಮದ 1 ಸಕಲ ಐಸಿರಿಯ ಅಧಿದೇವಿಯೆ ಪಿರಿಯರಸಿಯುಕುತಿಯೊಳು ಲೋಕಗಳ ಸೃಜಿಸುವಂಥಶಕುತ ನಿನ್ನಯ ಹಿರಿಯ ಮಗನು, ಜೀವಿಗಳ ಮೋ-ಹಕದಿ ಮರುಳು ಮಾಳ್ಪಾತ ಕಿರಿಮಗನೆಂಬ 2 ಅರಿ ಹೃದಯದಲ್ಲಣನೆಂಬ ಬಿರುದು ಸಾಹಸಇಲ್ಲ ನಿನಗಾರು ಇದಿರೆಂಬ ಗರ್ವದಿ ಎನ್ನಸೊಲ್ಲು ಕಿವಿ ಕೇಳದಂತಾಯಿತೆ ಹರಿಯೆ ? 3 ಶೇಷ ಹಾಸು ಮಂಚವು, ಗರುಡ ತುರುಗವು, ಪೀತವಾಸದುಡುಗೆಯು, ಕೊರಳಲಿ ವೈಜಯಂತಿಮೀಸಲಳಿಯದ ಪುಷ್ಪಮಾಲೆಗಳ ಧರಿಸಿ ಜಗದೀಶನೆಂಬುವ ಬಿರುದು ಹೊಗಳಿಸಿಕೊಳ್ಳುವ 4 ಭಕ್ತವತ್ಸಲನೆಂಬ ಬಿರುದು ಬಿಡು, ಅಲ್ಲದೊಡೆಶಕ್ತ ಎನ್ನನು ಕಾಯೋ ಸುಲಭದಿಂದಮುಕ್ತಿಯನ್ನು ಪ್ರಕಟಿಸಲು ಲೋಕದೊಳು ಭಜಕರ್ಗೆಯುಕ್ತ ಕರ್ತ ಕಾಗಿನೆಲೆಯಾದಿಕೇಶವರಾಯ5
--------------
ಕನಕದಾಸ
ಸಿರಿವರನ ಕರುಣಕ್ಕೆ ಪಾತ್ರ ನಾನಾದೆ ಪರಮ ಹರಿಭಕ್ತನಾಗಿ ಬಾಗಿ ಶರಣೆಂದು ಪ ಪರಿಪರಿಯಿಂದೊರೆದ ಕುಲಗುರುವಿನ ವಾಕ್ಯಗಳ ತರದೆ ತುಸು ಗಣಿತಕ್ಕೆ ಮರಣಭೀತಿಲ್ಲದೆ ಹರಿಸರ್ವೋತ್ತಮನೆಂಬ ವರಮಂತ್ರ ಪಠಿಸಿದ ಪರಮಪ್ರಹ್ಲಾದರಿಗೆ ನಿರುತ ಶರಣೆಂದು 1 ಪನ್ನಂಗಶಯನ ಉನ್ನತ ಮಹಿಮೆಗಳ ತನ್ನೊಳಗೆ ತಾ ತಿಳಿದು ಭಿನ್ನ ಭೇದವಿಲ್ಲದೆ ಗನ್ನಗತಕನಾದ ಅಣ್ಣನಿಗೆ ಮಹ ನೀತಿ ಯನ್ನು ಪೇಳಿದ ವಿಭೀಷಣಗಿನ್ನು ಶರಣೆಂದು 2 ವನಧಿಯನ್ನು ಲಂಘಿಸಿ ದನುಜಕುಲ ಸಂಹರಿಸಿ ವನಜನಾಭನ ಸೇವೆ ಮನುಮುಟ್ಟಿ ಗೈದು ಜನನಮರಣವ ಗೆಲಿದು ಘನಪದವಿ ಗಳಿಸಿದ ಹನುಮರಾಯರ ಪದಕೆ ಮಣಿದು ಶರಣೆಂದು 3 ತರಳತನದಲಿ ನಿಖಿಲ ಧರೆಭೋಗಗಳ ತೊರೆದು ಹರಿಮಂತ್ರ ಜಪಮಾಡಿ ಸ್ಥಿರಪದವ ಪಡೆದ ಪರಮಕಂಟಕ ಗೆಲಿದವರಿಗರಿತು ಶರಣೆಂದು 4 ನಿತ್ಯನಿರ್ಮಲ ನಿಖಿಲಕರ್ತ ಶ್ರೀರಾಮನಡಿ ಭಕ್ತರೆನಿಸಿದ ಮಹ ನಿತ್ಯಾತ್ಮರ ಸತ್ಯಪಾದಗಳೆನ್ನ ನೆತ್ತಿಯೊಳ್ಪೊತ್ತು ನಿಜ ಚಿತ್ತದಿಂ ನೆನೆನೆನೆದು ನಿತ್ಯಶರಣೆಂದು 5
--------------
ರಾಮದಾಸರು
ಸೀತಾ ಕಲ್ಯಾಣ ಪಾಕ ಶೇಷಾದ್ರಿ ಬ್ರಹ್ಮಕೆ ಶರಣು ಲೋಕನಾಯಕ ಹೆಳವನಕಟ್ಟೆ ವೆಂಕಟ ನೀ ಕರುಣಿಸಿ ಸಲಹುವುದೆನಗೆ ಜಯ ಜಯ ಪ. ಮದುವೆಯ ನಾಲ್ಕು ದಿವಸದಲ್ಲಿ ಮದುವಣಿಗನು ರಾಮ ಜಾನಕಿಗೆ ಪದನ ಹೇಳುವೆ ಸುಜನರು ಕೇಳಿ ಜಯ ಜಯ 1 ಚಿತ್ತಜಪಿತ ಶ್ರೀರಾಮರಿಗೆ ಅರ್ತಿಯಿಂದರಿಷಿಣೆಣ್ಣೆಯ ಮಾಡ್ವ ಮಿತ್ರೆ ಕೌಸಲ್ಯದೇವಿ ಕೇರಿ ಕೇರಿಯ ಗುಂಟ ಮುತ್ತೈದೇರನು ಕರೆಸಿದಳು ಜಯ ಜಯ 2 ಪೀತಾಂಬರದುಡುಗೆಯನುಟ್ಟು ಜ್ಯೋತಿಯಂದದಿ ಥಳಥಳಿಸುತಲಿ ಜಾತಿಮಾಣಿಕದಾಭರಣವಿಟ್ಟು ರಾಮರ ಮಾತೆಯರೆಲ್ಲ ಶೃಂಗಾರವಾಗಿ ಜಯ ಜಯ 3 ಚೀಣ ಚೀಣಾಂಬರಗಳನುಟ್ಟು ವೇಣಿ ಕಸ್ತೂರಿಯ ಪಣೆಗಿಟ್ಟು ಜಾಣೆಯರೆಲ್ಲ ಶೃಂಗಾರವಾಗಿ ಮಲ್ಲಿಗೆ ಬಾಣನ ಪಟ್ಟದಾನೆಗಳಂತೆ ಜಯ ಜಯ 4 ಪೊಂಬಣ್ಣದ ಹಳದಿಯ ಕಲೆಸಿ ತುಂಬಿದ ಹರಿವಾಣದೊಳಗೆ ಅಂಬುಜನಾಭಗೆ ಅರಿಷಿಣೆಣ್ಣೆಯ ಮಾಡ್ವ ಸಂಭ್ರಮಕೆ ನಡೆತಂದರಾಗ ಜಯ ಜಯ 5 ಗರುಡನ್ವಲ್ಲಭ ಸೌಂದರದೇವಿ ವರುಣನ್ವಲ್ಲಭೆ ಕಾಳಕದೇವಿ ಹರನ್ವಲ್ಲಭೆ ಪಾಪ[ನಾ] ಶಿಗಂಗೆ ಸಹಿತಲಿ ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ 6 ಬ್ರಹ್ಮವಲ್ಲಭೆ ಶಾರದಾದೇವಿ ವಾ- ಯುರಮಣಿ ಅಂಜನಾದೇವಿ ಹರುಷದಿ ಕೌಸಲ್ಯೆ ಕೈಕೆಸೌಮಿತ್ರೆಯರು ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ7 ಅಲ್ಲಲ್ಲಿ ನಡೆವ ನಾಟಕಶಾಲೆ ಬಿಲ್ಲಾಳು ಬೆತ್ತ ಕಾಟನವರು ಸೊಲ್ಲುಸೊಲ್ಲಿಗೆ ಹಿಡಿಹೊನ್ನನು ತ್ಯಾಗವ ಚೆಲ್ಲುತ ದಶರಥ ನಡೆದನಾಗ ಜಯ ಜಯ 8 ಹೊಡೆವ ತಂಬಟೆ ಭೇರಿ ನಿಸ್ಸಾಳೆ ಬಿಡದೆ ಚೀರುವ ಹೆಗ್ಗಾಳೆಗಳು ಸಿಡಿಲು ಗರ್ಜಿಸುವಂತೆ ಪಂಚಮವಾದ್ಯದಿ ನಡೆದರು ಜನಕರಾಯನ ಮನೆಗೆ ಜಯ ಜಯ 9 ಕುಸುಮಬಾಣನ ಮಾರ್ಬಲದಂತೆ ಹಸುರು ಪಚ್ಚೆಯ ಪಲ್ಲಕ್ಕಿಗಳು ಮುಸುಕಿದ ಪರಿಮಳದೊಳಪ[ಸಾ]ತಕೆ ದಶರಥ ಬಂದನೆಂದರೆ ಜನರು ಜಯ ಜಯ 10 ಭರದಿಂದಲೆದ್ದು ಜನಕರಾಯ ತರಿಸಿ ನಿವಾಳಿಗಳನು ಹಾಕಿ ಹರುಷದಿ ಕೈಲಾಗವ ಕೊಟ್ಟಯೋಧ್ಯದ ಅರಸ[ನ] ಮನ್ನಿಸಿ ಒಡಗೊಂಡನಾಗ ಜಯ ಜಯ11 ಬೇಗದಿ ಗದ್ದುಗೆಯನು ಹಾಸಿ ಬೀಗನ ಉಪಚರಿಸಿದ ಜನಕ ಭಾಗೀರಥಿ ಪಾರ್ವತಿ ಗಂಗೆ ಸಹಿತಲಿ ನಾಗಭೂಷಣನು ಕುಳಿತನಾಗ ಜಯ ಜಯ 12 ಸುತ್ತಣ ರಾಯರಾಯರಿಗೆಲ್ಲ ರತ್ನಗಂಬಳಿಗಳ ಹರಹಿದರು ಅರ್ತಿಯಿಂದಲಿ ಸುರರೆಲ್ಲರು ಕುಳಿತರು ವಿಸ್ತರಿಸಿದ ಮಂಟಪದೊಳಗೆ ಜಯ ಜಯ 13 ಮಣಿಮಂಟಪದೊಳು ಹಸೆಹಾಸಿ ಕನಕ ಮಣಿಯ ತಂದಿಳುಹಿದರು ದಿನಕರಕುಲರಾಮ ಹಸೆಗೇಳೆನುತಲಿ ಗುಣಾವಳಿಗ[ಳ] ಕೊಂಡಾಡಿದರು ಜಯ ಜಯ 14 ಪೊಕ್ಕಳೊಳಜನ ಪೆತ್ತವನೇಳು ಅಕ್ರೂರಜನ ಪೆತ್ತವನೇಳು ಮುಕ್ಕಣ್ಣನ ರಿಪುಬಲವ ಸಂಹರಿಸಿದ ಭಕ್ತವತ್ಸಲ ಹಸೆಗೇಳೆಂದರು ಜಯ ಜಯ 15 ದಶರಥರಾಜನಂದನನೇಳು ಅಸುರಸಂಹಾರ ಕಾರಣನೇಳು ವಸುಧೆಗೊಡೆಯ ರಾಮ ಹಸೆಗೇಳೆನುತಲಿ ಋಷಿಗಳೆಲ್ಲರು ಶ್ರುತಿಗರೆದರಾಗ ಜಯ ಜಯ 16 ಋಷಿವಾಲ್ಮೀಕಿ[ಯ]ರೆಲ್ಲರು ಕೂಡಿ ಕುಶಲದ ಬಾಸಿಂಗವ ಪಿಡಿದು ಅಸುರಾರಿಯ ಮಸ್ತಕಕಳವಡಿಸೋರು ವಸುದೇವನಾಗೆಂದು ಹರಸುತಲಿ ಜಯ ಜಯ 17 ತಂಡತಂಡದ ರತ್ನ ಅಡಸಿದಾಗ ಮಣಿ ಬಿಗಿದಿದಾಗ ತೊಂಡಿಲ ಮುತ್ತೈದೇರಳವಡಿಸೋರು ಕೋ- ದಂಡ ಪಾಣಿಸತಿಜಾನಕಿಗೆ ಜಯ ಜಯ 18 ಬೆರಳಿಗೆ ಮುದ್ರೆ ಉಂಗುರವಿಟ್ಟು ಕೊರಳಿಗೆ ಏಕಾವಳಿಯನೆ ಹಾಕೋರು ತರಳಾಕ್ಷಿಯರಾ ಜಾನಕಿಗೆ ಜಯ ಜಯ 19 ಬೊಂಬೆಯ ತೊಂಡಿಲ ಮುಡಿದಿರ್ದು ಕುಂಭಿಣಿಸುತೆ ಕುಳ್ಳಿರಲಾಗಿ ಅಂಬುಜಾಂಬಕ ರಘುರಾಮನ ಹರುಷದಿ ರಂಭೆಯಿದ್ದೆಡೆಗೆ ಬಂದನೆ ನಗುತ [ಜಯ ಜಯ]20 ಬಂದನೆ ಭಾಗ್ಯಲಕ್ಷ್ಮೀರಮಣ ಬಂದನೆ ಭಕ್ತವತ್ಸಲ ಸ್ವಾಮಿ ಬಂದನೆ ಜಾನಕಿಯಡೆ ರಾಮನು ತಾ ಬಂದನೆ ಮಣಿಮಂಟಪದೆಸೆಗೆ [ಜಯ ಜಯ] 21 ಧೂರ್ಜಟಿ ಜಪಿಸುವ ನಾಮವಿಗ್ರಹ ಬಂದ ವಜ್ರಮಾಣಿಕದ್ಹಸೆಯಿದ್ದೆಡೆಗೆ ಜಯ ಜಯ 22 ಕೌಸಲ್ಯಸುತ ಕುಮಾರ ಬಂದ ಹಂಸವಾಹನಪಿತ ರಾಮ ಬಂದ ಕಂಸಾರಿ ದುಃಖವಿ [ನಾಶ] ರವಿಕುಲ ವಂಶೋದ್ಧಾರಕ ಬಂದನಾಗ [ಜಯ ಜಯ] 23 ಭಕ್ತವತ್ಸಲ ರಾಘವ ಬಂದ ಮುಕ್ತಿದಾಯಕ ಶ್ರೀರಾಮ ಬಂದ ಅರ್ಕನು ಶತಕೋಟಿತೇಜನು ಜಗಕತಿ- ಶಕ್ತ ತಾ ಬಂದನೆಂದವೆ ಕಹಳೆ ಜಯ ಜಯ 24 ಸಿಂಧುಬಂಧನ ರಾಘವ ಬಂದ ಪು- ರಂದರವರದ ಶ್ರೀರಾಮ ಬಂದ ಇಂದುವದನೆಪತಿ ರಾಮ ಬಂದನು ರಾಮ- ಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 25 ಯಜ್ಞಶಿಕ್ಷಾಮಿತ್ರ ರಾಮ ಬಂದ ಸುಗ್ರೀವರಕ್ಷಕಾರಣ ಬಂದ ಲಕ್ಷ್ಮ- ಣಾಗ್ರಜ ಬಂದನೆಂದವೆ ಕಹಳೆ ಜಯ ಜಯ 26 ಯಂತ್ರವಾಹಕ ರಾಘವ ಬಂದ ಮಂತ್ರಮೂರುತಿ ರಾಮ ಬಂದ ಕಾಂತೆ ಶ್ರೀ ಜಾನಕಿರಮಣ ಬಂದನು ರಾಮ ತಂತ್ರಿ ತಾ ಬಂದನೆಂದವೆ ಕಹಳೆ ಜಯ ಜಯ 27 ದೂಷಕಹರಣ ಶ್ರೀರಾಮ ಬಂದ ವಿ- ಭೀಷಣವರದ ರಾಘವ ಬಂದ ಭಾಷೆ ಪಾಲಿಪ ರಾಮಚಂದ್ರ ಬಂದನು ಜಗ- ದೀಶ ತಾ ಬಂದನೆಂದವೆ ಕಹಳೆ ಜಯ ಜಯ 28 ತಾಟಕಪ್ರಾಣಾಪಹಾರ ಬಂದ ಜಟÁಯುಮುಕ್ತಿಕಾರಣ ಬಂದ [ತಾಟಂಕ] ಧರ ನಾರಾಯಣ ರವಿಕುಲ ಕೋಟಿ ತಾ ಬಂದನೆಂದವೆ ಕಹಳೆ ಜಯ ಜಯ 29 ವೀರ ವಿಕ್ರಮ ರಾಘವ ಬಂದ ಮಾರೀಚಮರ್ದನ ರಾಮ ಬಂದ ನಾರಿ ಶ್ರೀ ಜಾನಕಿರಮಣ ಬಂದನು ಹರಿ ರಾಮ ತಾ ಬಂದನೆಂದವೆ ಕಹಳೆ ಜಯ ಜಯ 30 ದೇವಕುಮಾರ ರಾಘವ ಬಂದ ದೇವರ ದೇವನು ರಾಮ ಬಂದ ಭಾವೆ ಶ್ರೀ ಜಾನಕಿರಮಣ ಬಂದನು ರಾಮಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 31 ನಿರುಪಮಚರಿತ ರಾಘವ ಬಂದ ದುರಿತದಲ್ಲಣ ರಾಮದೇವ ಬಂದ ಭರತಶತ್ರುಘ್ನರ ಸಹೋದರಯೋಧ್ಯದ ಸುರಪತಿ ಬಂದನೆಂದವೆ ಕಹಳೆ ಜಯ ಜಯ 32 ಹೇಮಖಚಿತ ರತ್ನ ಪೀಠದಲಿ ಭೂಮಿಜೆ ಸಹಿತ ಕುಳಿತ ರಾಮ ವಾಮ ಭಾಗದಿ ಒಪ್ಪಿರ್ದಳು ಜಾನಕಿ ಆ ಮಹಾಸಭೆಯನು ಬೆಳಗುತಲಿ ಜಯ ಜಯ 33 ಕುಂದಣ ರತ್ನದಡ್ಡಿಕೆಯೊಳಗೆ ಹೊಂದಿಸಿ ನವರತ್ನ ಇರುವಂತೆ ಇಂದುವದನೆ ಜಾನಕಿ ಹರುಷದಿ ರಾಮ ಚಂದ್ರನ ಮಧ್ಯದೊಳೊಪ್ಪಿದಳು ಜಯ ಜಯ 34 ಹೇಮದ್ಹರಿವಾಣದೊಳಗ್ನಿಯನು ಕಾಮಿನಿಯರು ತಂದಿಳುಹಿದರು ರಾಮ ಮನ್ನಿಸಿ ಉಡುಗೊರೆಯಿತ್ತು ಅವರಿಗೆ ಹೇಮಾರ್ಚನೆಗಳ ತೊಡಗಿದನು ಜಯ ಜಯ 35 ಲಾಜತೊಂಡಿ[ತಂಡು?]ಲ ಆಹುತಿಗೊಟ್ಟು ಪೂಜಿಸಿದನೆ ವಿಘ್ನೇಶ್ವರನ ರಾಜವದನೆಯ ಒಡಗೊಂಡು ರಾಘವ ಪೂಜಿಸಿದನೆ ಋಷಿಮುನಿವರರ ಜಯ ಜಯ 36 ಇಂದ್ರಾದಿ ಮುನಿಗಳು ಕೈಹೊಡೆದು ಚಂದ್ರ ಸೂರ್ಯರು ಉಘೇಉಘೇಯೆನಲು ಮಂದಾರ ಮಲ್ಲಿಗೆ ಮಳೆಗಳ ಕರೆದರು ಅಂದದಿ ಸುರಜನರೆಲ್ಲರಾಗ ಜಯ ಜಯ 37 ಅರಳುವ ಕೆಂದಾವರೆ ಕುಸುಮ ಪರಿಮಳ ಸುರಮ್ಯ ಕಣ್ಗೆಸೆಯೆ ಎರಗುವ ಮರಿದುಂಬಿಗಳಂತೆ ರಾಘವ ಕರಗಳ ಪಿಡಿದೆÀತ್ತಿದ ಸತಿಯ [ಜಯ ಜಯ] 38 ಇಳೆಯ ಜಗಂಗಳನುದರದಲಿ ಅಳವಡಿಸಿದ ಮಹಾತ್ಮಕನು ಇಳೆಯ ಮಗಳನು ಎತ್ತಲಾರದೆ ರಾಮ ಬಳಲಿದನೆಂದು ನಕ್ಕರು ಜನರು ಜಯ ಜಯ 39 ಪರಾಕು ಸ್ವಾಮಿ ಪರಾಕು ದೇವ ಪಾದ ಎಚ್ಚರಿಕೆ ಸೀತಾಪತಿ ರಾಮನೆ<
--------------
ಹೆಳವನಕಟ್ಟೆ ಗಿರಿಯಮ್ಮ
ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಸುಖ ಪೂರ್ಣ ವಿಠಲನೆ | ಸಲಹ ಬೇಕಿವಳಾ ಪ ವಿಖನ ಸಾಂಡವ ಬಾಹ್ಯ | ಒಳಗೆಲ್ಲಾ ವ್ಯಾಪ್ತ ಅ.ಪ. ನಾರಿಮಣಿ ಪತಿಸೇವೆ | ಸಾರತರದಲಿಗೈದುಭೂರಿಭಕ್ತಿಯಲಿಂದ | ಸಂತಾನಕಾಗೀಶ್ರೀ ರಮಣ ತವಪಾದ | ದಾರಾಧನೆಯಗೈದುಭೋರಿಟ್ಟು ಪ್ರಾರ್ಥಿಪಳು ಕಾರುಣ್ಯ ಮೂರ್ತೇ 1 ಭಕುತರ್ಗಭೀಷ್ಟಗಳ | ನೀ ಕೊಡುವಿ ಎಂತೆಂಬಉಕುತಿಯನೆ ನಾ ಕೇಳಿ | ಅರಿಕೆಯನೆ ಮಾಳ್ವೇಈಕೆಯ ಮನೋರಥವ | ನೀ ಕೊಟ್ಟು ಸಾಧನವವೈಖರಿಯಲಿಂದೆಸಗೊ | ರುಕುಮಿಣೀ ಪತಿಯೇ 2 ಉಚ್ಛನೀಚಾದಿಗಳು | ಸ್ವಚ್ಛ ತಿಳಿಸಿವಳೀಗೆಅಚ್ಛ ಕನ್ನಿಕೆ ರಮಣ | ಅಚ್ಯುತಾನಂತಾಮುಚ್ಚು ಕಾಣಿಕೆಗೊಂಡು | ಇಚ್ಛೆ ಪೂರೈಸುವುದುಸಚ್ಚದಾನಂದಾತ್ಮ | ಚಿತ್ಸುಖಪ್ರದನೇ3 ಹರಿಗುರು ಸದ್ಭಕ್ತಿ | ದುರ್ವಿಷಯ ವೀರಕ್ತಿಹರಿಯ ವಿಷಯಕ ಜ್ಞಾನ | ಕರೋಣಿಸೋ ದೇವಾನಿರುತನಾಮ ಸ್ಮರಣೆ | ಇರಲಿವಳ ಮುಖದಲ್ಲಿಮರುತಾಂತರಾತ್ಮಕನೆ | ಶಿರಿ ರಮಣ ಹರಿಯೇ 4 ಶ್ರೀವತ್ಸಲಾಂಚನನೇ | ಭಾವುಕರ ಪರಿಪಾಲಗೋವತ್ಸದನಿ ನಾವು | ತೀವ್ರ ಬರುವಂತೇಶ್ರೀವರ ಶ್ರೀಗುರೂ | ಗೋವಿಂದ ವಿಠಲನೆನೀವೊಲಿಯ ಬೇಕೆಂದು ಬೇಡ್ವೆ ಗೋಪಾಲ 5
--------------
ಗುರುಗೋವಿಂದವಿಠಲರು
ಸುಂದರ ಕೃಷ್ಣನು ಕರೆಯುವ ಬನ್ನಿರೆ ಇಂದುಮುಖಿಯರೆಲ್ಲ ಪ ಚಂದದಿ ವಿಹರಿಸುವ ಬನ್ನಿರಿ ಇಂದುಮುಖಿಯರೆಲ್ಲ ಅ.ಪ ಭಾಸುರಾಂಗನ ಕೂಡಿ ನಾವು ರಾಸಕ್ರೀಡೆಯಲಿ ಈ ಸಂಸಾರದ ಕ್ಲೇಶಗಳನು ಪರಿ ಹಾಸ ಮಾಡುವ ಬನ್ನಿ 1 ಪರಿಮಳ ಕುಸುಮಗಳ ಸೊಗಸಿನ ತರುಲತೆ ಬುಡದಲ್ಲಿ ಮುರಹರ ಕೃಷ್ಣನ ಮುರಳಿಯನೂದುವ ತರಳೆಯ ಅಂಬನ್ನಿ 2 ನಂದಕುಮಾರನಿಗೆ ನಾವು ಮಂದಹಾಸದಲ್ಲಿ ಗಂಧ ತಾಂಬೂಲಗಳಂದದಿ ನೀಡುತಾ ನಂದಪಡುವ ಬನ್ನಿ 3 ಯಮುನಾ ತೀರದಲಿ ನಾವು ಸುಮಬÁಣನ ಸೊಲ್ಲನು ಮುರಿಯುವ ಬನ್ನಿ ಕಮಲಾಕ್ಷಿಯರೆಲ್ಲಾ 4 ಪನ್ನಗವೇಣಿಯರೇ ಈಗ ಪ್ರ ಸನ್ನವದನ ಕೃಷ್ಣ ತನ್ನ ಇಂಗಿತವನರುಹಲು ಎಮ್ಮನು ಸನ್ನೆಯ ಮಾಡುತಿಹ 5
--------------
ವಿದ್ಯಾಪ್ರಸನ್ನತೀರ್ಥರು
ಸುಮ್ಮನೆ ಗತಿಯ ಬಯಸಿದರಾಹುದೇ | ಹಮ್ಮ ನೀಗಿ ಕ್ಷಿತಿಯೊಳು ವಮ್ಮನವಾಗಿ ನಿಲ್ಲದೇ ಪ ಭಕುತಿಯಂಕುರವಿಲ್ಲಾ ಯುಕುತಿ ಸಾಧನವಿಲ್ಲಾ | ಮುಖದಲಿ ಸ್ತುತಿ ಸ್ತವನಗಳಿಲ್ಲಾ | ಪ್ರಕಟದಿ ಶೋಡಷ | ಸುಕಲೆಯಾರ್ಚನೆಯಿಲ್ಲಾ | ಅಕಳಂಕ ದೇವ ನಂಬುಗೆ ದೃಢ ವಿಡಿಯಲಿಲ್ಲಾ 1 ವೇದ ಪುರಾಣವನು ಓದಿ ಕೇಳಿದರೇನು | ವಾದಗುಣದಿ ಹಿಂಗಲಿಲ್ಲಾ ತಾನು | ಸಾಧಿಸಿಕೊಳ್ಳದೇ | ಸಾಧುರ ಬೋಧವನು | ಗಾರ್ದಭ ಚಂದನ ಹೊತ್ತಂತೆ ಏನಾದರೇನು 2 ಗುರುಪಾದಕೆರಗದೆ | ಗುರುಮಾರ್ಗವರಿಯದೆ | ಮೊರೆವಾರು ಅರಿಮದವ ಮುರಿಯದೇ | ಪರವಸ್ತು ಇದೆಯೆಂದು | ನರಭಾವ ಮರೆಯದೆ | ಗುರುಮಹಿಪತಿ ಸುತ ಪ್ರಭು ಗುರುತ ದೋರದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುರಪನಾಲಯದಂತೆ ಮಂತ್ರಾಲಯ ಕರೆಸುವುದು ಕಂಗೊಳಿಸುವುದು ನೋಳ್ಪ ಜನಕೆ ಪ ಕಾಮಧೇನುವಿನಂತೆ ಇಪ್ಪ ಗುರುವರ ಸಾರ್ವ ಭೌಮ ಸುಧೀಯೀಂದ್ರಸುತ ರಾಘವೇಂದ್ರ ಆಮಯಾಧಿಪ ಖಳತಮಿಶ್ರ ಓಡಿಸುವ ಚಿಂ ತಾಮಣಿ ಪ್ರಕಾಶದಂತಿಪ್ಪ ವೃಂದಾವನದಿ 1 ಸುರತರುವಿನಂತಿಪ್ಪ ಕೀರ್ತಿ ಸಚ್ಚಾಯಾಶ್ರಿ ತರ ಮನೋರಥಗಳನು ಪೂರೈಸುವಾ ಧರಣಿಸುರಾಖ್ಯ ಷಟ್ಟದಗಳಿಗೆ ಸತ್ಯದಾ ಪರಿಮಳದಿ ತೃಪ್ತಿಬಡಿಸುವ ಮರುತನಂತೆ 2 ವಾರಾಹಿ ಎಂಬ ನಂದನ ವನದಿ ಜನರತಿ ವಿ ಹಾರ ಮಾಳ್ಪರು ಸ್ನಾನಪಾನದಿಂದಾ ಶ್ರೀ ರಾಘವೇಂದ್ರನಿಲ್ಲಿಪ್ಪ ಕಾರಣ ಪರಮ ಕಾರುಣ್ಯ ನಿಧಿ ಜಗನ್ನಾಥ ವಿಠಲನಿಹನು 3
--------------
ಜಗನ್ನಾಥದಾಸರು