ಒಟ್ಟು 3668 ಕಡೆಗಳಲ್ಲಿ , 115 ದಾಸರು , 2357 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ಮಂಗಳ ಮುನಿಜನ ಪಾಲ ಜಯ ಜಯ ಸ್ವಾಮಿ ಸದ್ಗುರು ಕೃಪಾಲ ಧ್ರುವ ತೇಜ:ಪುಂಜವು ನಿಮ್ಮ ಘನಸುಖಸಾಂಧ್ರ ರಾಜ ತೇಜೋನಿಧಿ ರಾಜ ರಾಜೇಂದ್ರ ಸುಜನರ ಹೃದಯ ಸುಜ್ಞಾನ ಸಮುದ್ರ ಅಜಸುರವಂದ್ಯ ಶ್ರೀ ದೇವದೇವೇಂದ್ರ 1 ಪತಿತ ಪಾವನ ಪೂರ್ಣ ಅತಿಶಯಾನಂದ ಯತಿ ಮುನಿಗಳಿಗೆ ನೀ ದೋರುವೆ ಚಂದ ಪಿತಾಮಹನ ಪಿತನಹುದೊ ಮುಕುಂದ ಸತತ ಸುಪಥದಾಯಕ ನೀ ಗೋವಿಂದ 2 ದೇಶಿಕರಿಗೆ ದೇವ ನಿಮ್ಮ ಸ್ವಭಾವ ಋಷಿ ಮುನಿಗಳಿಗೆ ನೀ ಜೀವಕೆ ಜೀವ ದಾಸ ಮಹಿಪತಿಗೇನಹುದೊ ಮನದೈವ ವಾಸುದೇವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯ ಮಂಗಳಜಯ ಮಂಗಳ ಶುದ್ಧಾದೈತನಿಗೆ ಪ ಅಗಣಿತ ಮಹಿಮಗೆ ಅಕ್ಷಯರೂಪಗೆಅಖಂಡ ಸಹಜಾನಂದನಿಗೆಝಗಿ ಝಗಿತಾತ್ಮಗೆ ಝಳುಕಿಸಿ ಕರ್ಣದಿಝಣನಾದವ ಕೇಳ್ವನಿಗೆಸೊಗಯಿಸಿ ಚಂದ್ರನ ಶತಕೋಟಿಯಪ್ರಭೆ ಸಾರವ ಸವಿಸವಿದುಣ್ಣುವಗೆಬಗೆ ಆನಂದದಿ ಸುಖಿಸುವ ದೇವಗೆಭಾಸ್ಕರ ತೇಜಃಪುಂಜನಿಗೆ1 ನಿತ್ಯಾನಂದಗೆ ನಿರ್ಮಲರೂಪಗೆನಿಶ್ಚಲ ಪರಬ್ರಹ್ಮಾತ್ಮನಿಗೆನಿತ್ಯಶುದ್ಧಗೆ ನಿಜನಿರ್ಮಾಯಗೆನಿಜಬೋಧ ಜ್ಞಾನೈಕ್ಯನಿಗೆಪ್ರತ್ಯಗಾತ್ಮಗೆ ಪೂರ್ಣಬ್ರಹ್ಮನಿಗೆಪರಮ ಪರತರ ಪಂಡಿತಗೆನಿತ್ಯತೃಪ್ತಗೆ ನಿಗಮಾಗಮನಿಗೆನಿಶ್ಚಿಂತಾತ್ಮ ನಿಸ್ಪøಹಗೆ 2 ಕೈಯಲಿ ಪಿಡಿದಿಹ ಜಪಮಾಲೆಯಸರ ಕರ್ಣಕುಂಡಲವಿಟ್ಟಿಹಗೆಮೈಯೊಳು ಪೊದ್ಹಿಹ ಕಾಷಾಯಂಬರಮಿರುಪಿನ ಕೌಪೀನವುಟ್ಟಿಹಗೆಮೈಯೊಲೆದಾಡುವ ಸ್ವಾತ್ಮಾನಂದದಿನಲಿವ ಸದ್ಗುಣ ಶಾಂತನಿಗೆಮೈಯನೆ ಸದ್ಗತಿ ಭಕ್ತರಿಗೀಯುವವ್ಯಾಪಿತ ಜೀವನ್ಮುಕ್ತನಿಗೆ3 ಆರವಸ್ಥೆಯ ಧರಿಸಿಯೆ ಜಗದಲಿಅನಂತರೂಪ ತಾನಾಗಿಹಗೆಮೀರಿಯೆ ಸದ್ಗುಣ ನಿರ್ಗುಣ ರೂಪವಮೆರೆದಿಹ ಮುಮುಕ್ಷಾಂಗನಿಗೆತೋರುವ ತ್ವಂಪದ ತತ್ತ್ವಮಸಿಪದತೋರಿ ವಿರಾಜಿಪ ತುಷ್ಟನಿಗೆಧೀರೋದ್ಧಾರಗೆ ದೀನರನಾಥಗೆದೃಶ್ಯಾದೃಶ್ಯ ವಿದೂರನಿಗೆ 4 ನಿರುಪಮ ನಿರಮಯ ನಿಜ ನಿರ್ಲಿಪ್ತಗೆನಿರ್ಭಯ ನಿರ್ವಿಕಲ್ಪನಿಗೆಪರಮಪುರುಷಗೆ ನಿಗಮೋದರನಿಗೆಪರಮಾರೂಢಾ ಮಾರ್ಗನಿಗೆಗುರುಚಿದಾನಂದ ಅವಧೂತಾತ್ಮಗೆಗುಣನಿಧಿ ತುರಿಯಾತೀತನಿಗೆಸ್ಥಿರಸಿದ್ಧ ಪರ್ವತದಾಸ ಶ್ರೀಪುರುಷಗೆಬಗಳಾ ಶ್ರೀಗುರು ರೂಪನಿಗೆ 5
--------------
ಚಿದಾನಂದ ಅವಧೂತರು
ಜಯ ಜಯ ರಾಮಕೃಷ್ಣಾರ್ಯ ಭವಭಯ 'ವರ್ಜಿತ ಮಾಮವ ಗುರುವರ್ಯ ಪಶ್ರೀಮದುತ್ತಮ ನಿಜಚರ್ಯ ಗುಣಸ್ತೋಮರಾಜಿತ ಸರ್ವ ಪಂಡಿತಾಚಾರ್ಯ ರಾಮಣೀಯಕ ಗಾಂಭೀರ್ಯ ಯುತಮಾಮಕ ಮಾನಸ ಜಲರುಹಸೂರ್ಯ 1ಕೀರ್ತಿನಿಂದಿತ ಪೂರ್ಣ ಸೋಮ 'ಷ್ಪೂರ್ತಿ ಮಾಯಾ ನಘ ನಂದಾಭಿರಾಮಆರ್ತಿಹರಣ ಪೂರ್ಣಕಾಮ ಪುಣ್ಯಮೂರ್ತೆ 'ನಿಗೃ'ೀತೇಂದ್ರಿಯ ಗ್ರಾಮ 2ಶ್ರೀಮಂಗಳಗಿರಿ ನಿಲಯ ರೂಪಕಾ'ುತ ಫಲದಾನ ನಿಪುಣಾ ಪ್ರಮೇಯಕಾಮರ'ತ ಜಿತಮಾಯಾ ಬಾಲರಾಮಕೃಷ್ಣಾರ್ಯಗುರೋ ಪಾ' ದಯಯಾ3
--------------
ತಿಮ್ಮಪ್ಪದಾಸರು
ಜಯ ಜಯ ವೈಷ್ಣವ ಪಯನಿಧಿ ಚಂದ್ರಗೆ ಜಯ ಜಯ ವ್ಯಾಸಯತೀಂದ್ರರಿಗೆ ಪ ಜಯ ಜಯ ವರ ಕರ್ಣಾಟಕ ಪತಿಗೆ ಜಯ ಸಿಂಹಾಸನವೇರಿದಗೆ ಅ.ಪ ನಾಕು ಶಾಸ್ತ್ರಗಳ ಪಾರಂಗತರಿಗೆ ಕಾಕುಮತಗಳನು ತುಳಿದವಗೆ ಆ ಕಮಲಾಪತಿ ಭಕುತವರೇಣ್ಯಗೆ ಶ್ರೀಕರ ಚಂದ್ರಿಕಾಚಾರ್ಯರಿಗೆ 1 ಹನುಮನ ಭಾಷ್ಯವ ಅಣಿಮಾಡಿದಗೆ ಹನುಮಗೆ ಭವನಗಳನು ಕಟ್ಟಿದಗೆ ಹನುಮನ ಯಂತ್ರದಿ ಬಿಗಿದಪ್ಪಿದಗೆ ಮುನಿತ್ರಯದಲಿ ಸೇರಿದ ದೊರೆಗೆ 2 ಮಾಯಾವಾದಗಳನು ಗೆಲಿದವಗೆ ನ್ಯಾಯಾಮೃತಧಾರೆಯ ಅಭಿಷೇಕದಿ ಆ ಯದುಪತಿಯನು ಕುಣಿಸಿದಗೆ 3 ಚಕ್ರಧರನ ಸುಳುಗಳ ತಿಳಿದವಗೆ ಮಿಕ್ಕಮತಗಳನು ಅಳಿದವಗೆ ವಕ್ರಯುಕುತಿಗಳನು ತುಕ್ಕುಡಗೈಯ್ಯವ ತರ್ಕ ತಾಂಡವದಿ ನಲಿದವಗೆ 4 ಕೃಷ್ಣದೇವರಾಯನ ಕುಲಪತಿಗೆ ಕಷ್ಟದ ಕುಹಯೋಗವ ಕೊಂದವಗೆ ಶಿಷ್ಟಜನಗಳಿಗೆ ಇಷ್ಟಾರ್ಥಗಳನು ವೃಷ್ಟಿಯಗೈವ ಪ್ರಸನ್ನರಿಗೆ 5
--------------
ವಿದ್ಯಾಪ್ರಸನ್ನತೀರ್ಥರು
ಜಯ ಜಯ ಸ್ವರಸತಿ ಜಯವರ ಪೂರಣಮತಿ ತ್ರಯಲೋಕ್ಯದಲಿ ಖ್ಯಾತಿ ಜಯ ಸುಕೀರ್ತಿ ಧ್ರುವ ವಿದ್ಯಾವರದಾಯಿನಿ ಸಿದ್ಧಿಗೆ ಶಿಖಾಮಣಿ ಬುದ್ಧಿ ಪ್ರಕಾಶಿನಿ ಸದ್ಭೂಷಿಣಿ 1 ಕರಕಮಲದಲಿ ವೀಣೆ ಸುರಸ ಅಮೃತವಾಣಿ ವರವಿದ್ಯದಲಿ ದಾನಿ ಸುಪ್ರವೀಣೆ 2 ಪ್ರಸನ್ನವದನಿ ವಿಶ್ವದಲಿ ನೀ ಪೂರ್ಣೆ ಹಂಸವಾಹಿನಿ ಪೂರ್ಣಿ ಸ್ವಸಿದ್ಧಿಣಿ 3 ಸದಾ ಸದ್ಗುರುಸ್ತುತಿ ಒದುಗುವ್ಹಾಂಗ ಸ್ಫೂರ್ತಿ ಇದೇ ಮಹಿಪತಿ ಕುರ್ತಿ ಬೋಧಿಸುವ ಮತಿ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯಜಗತ್ಪ್ರಾಣತ್ರಾಣ ಜನನ ಮರಣಕ್ಲೇಶಹರಣ ಜಯ ಪಾವನ ದಿವ್ಯಚರಣ ಪ. ಸರ್ವದೇವತಾಗ್ರಗಣ್ಯ ಸರ್ವಜೀವೋತ್ತಮ ಶರಣ್ಯ ಪೂರ್ವಾಮರಪುರದಹನ ಪೂರ್ಣಗುಣಗಣ 1 ವೈಷ್ಣವ ಜನ ಶಿರೋರತುನ ವಿಶ್ವಾಂತರ್ಗತಭಾವನ ತೀಕ್ಷ್ಣಮನೋದುಷ್ಟದಮನ ಶಿಷ್ಟಜೀವನ 2 ಭಕುತಿಜ್ಞಾನನಿಧಿ ಕಲ್ಯಾಣ ಭಜಕಜನಭವಾಬ್ಧಿತರಣ ಲಕುಮಿನಾರಾಯಣಶರಣ ಬಕವಿದಾರಣ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯತು ಕಾಮಾಕ್ಷಿ ಜಯ ಜಯ ವಿಶಾಲಕ್ಷಿ ಪ ಜಯ ಜಯತು ಮೀನಾಕ್ಷಿ ಜಯತು ಹರಿಣಾಕ್ಷಿ ಅ.ಪ ಸತಿ ಜಯ ಕೃಪಾಪೂರ್ಣಾಕ್ಷಿ ಜಯ ಜಯತು ಕಮಲಾಕ್ಷಿ ಜಯ ಚಂಚಲಾಕ್ಷಿ 1 ಜಯ ಜಯ ಸ್ವರ್ಣಾಂಬೇ ಜಯತು ಚಾಮುಂಡಾಂಬೆ ಜಯತು ಜಯ ಜಗದಂಬೆ ಜಯತು ದುರ್ಗಾಂಬೆ 2 ಜಯತು ಜಯ ಶಶಿಬಿಂಬೆ ಜಯತು ವರ ಗಿರಿಜಾಂಬೆ ನಿತ್ಯ ಶುಭ ಮಂಗಳಂ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಜಯವೆನ್ನಿ ಕೈಯ ಮುಗುಬನ್ನಿ ದಯವುಳ್ಳ ಮಹಿಮಗಾರುತಿ ಮಾಡುವ ಬನ್ನಿ ಧ್ರುವ ಮನವೆ ಬತ್ತಿ ತನುವಾರತಿ ಘನಕೆ ಮಾಡವ ಬನ್ನಿ ನೆನವು ತುಪ್ಪ ಙÁ್ಞನದೀಪವನ್ನು ಬೆಳಗುವ ಬನ್ನಿ 1 ಭಾವಗುಟ್ಟು ಠಾವಿಲಿಟ್ಟು ದೈವ ನೋಡು ಬನ್ನಿ ಮಾವಮಕರಗುಣ ಬಿಟ್ಟು ಸೇವೆಮಾಡು ಬನ್ನಿ 2 ಮಹಿಪತಿಸ್ವಾಮಿಗಿನ್ನು ಜಯಜಯವೆನ್ನಿ ಬಾಹ್ಯಾಂತ್ರ ಬೆಳಗಿ ಪೂರ್ಣ ಧನ್ಯವಾಗು ಬನ್ನಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯವೆನ್ನಿ ಗುರು ಜಗದೀಶಗೆ ಜಯ ಜಯ ಜಗತ್ರಯ ಪಾವನಗೆ ಧ್ರುವ ಆನಂದೊ ಬ್ರಹ್ಮ ಆನಂದ ಕಂದಗೆ ಅನುದಿನ ಜಯ ಜಯ ಅನುಪಮಗೆ ಸನಕ ಸನಂದನ ವಂದಿತಗೆ ಮುನಿಜನ ಹೃದಯ ನಿವಾಸಗೆ 1 ನಿತ್ಯ ನಿರ್ಗುಣಗೆ ಅಗಣಿತಗುಣ ಪರಿಪೂರ್ಣಗೆ ಝಗಿಝಗಿಸುವ ಜಗನ್ಮೋಹನಗೆ ಜಗಜ್ಜೀವ ಜಗದಾತ್ಮಗೆ 2 ಜಯ ಜಯ ಮಂಗಳ ಮಹಾಮುನಿಗೆ ಮಹಿಮಾನಂದ ಗುರುಮೂರ್ತಿಗೆ ಮಹಿಪತಿ ಸ್ವಾಮಿ ಸರ್ವೋತ್ತಮಗೆ ಜಯ ಜಯವೆನ್ನಿರೊ ಜಗದೊಳಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯವೆನ್ನಿರೊ ಶ್ರೀ ಗುರುವಿಗೆ ದಯಾಸಿಂಧು ಶ್ರೀಸ್ವಾಮಿ ಸದ್ಗುರುವಿಗೆ ಧ್ರುವ ಗುಹ್ಯಗುರುತ ದೋರುವ ಗುರುಮಣಿಗೆ ಮಾಯರಹಿತ ನಿರಾಳ ನಿರ್ವಾಣೆಗೆ ತ್ರೈಲೋಕ್ಯವಂದಿತ ವರಮುನಿಗೆ ದಯಯುಳ್ಳ ಶ್ರೀ ದೇವಶಿಖಾಮಣಿಗೆ 1 ತ್ರಿಗುಣಾತೀತ ತಾರಕ ನಿರಂಜನಗೆ ಝಗಿ ಝಗಿಸುವ ಜಗನ್ಮೋಹನಗೆ ಜಾಗಿಸುವ ಜಗತ್ರಯ ಜೀವನಿಗೆ ಯೋಗಿಜನ ಧ್ಯಾಯಿಸುವ ನಿರ್ವಾಣೆಗೆ 2 ಜಯ ಜಯವೆನ್ನಿರೊ ಗುರುಮೂರ್ತಿಗೆ ಇಹಪರ ಪೂರ್ಣ ಪರಂಜ್ಯೋತಿಗೆ ಬಾಹ್ಯಾಂತ್ರ ಭಾಸುವ ಶ್ರೀಪತಿಗೆ ಮಹಿಪತಿಯ ಶ್ರೀ ಸ್ವಾಮಿ ಜಗತ್ಪಿತಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯಾನಂದ ಕಂದ ಜಯ ನಿರ್ಗುಣ ನಿದ್ರ್ವಂದ್ವ ಧ್ರುವ ಒಳಗೆ ಹೊರಗೆ ನೀನೆ ಪೂರ್ಣ ಬೆಳಗಿ ಬೆಳಗಾಗಿಹುದ ಥಳಥಳಿಸುವ ಗುಣ ಹೊಳವು ಸುಳವು ಪಾವನ 1 ದೇವಾಧಿದೇವ ದೇವ ಭುವನತ್ರಯಕೆ ಜೀವ ಭಾವಿಕರಿಗೆ ಕಾವ ಭವನಾಶಗೈಸುವ 2 ಅಜ ಸುರವರ ಮುನೀಂದ್ರ ನಿಜಘನಸುಖಮುದ್ರ ರಾಜ ರಾಜರಾಜೇಂದ್ರ 3 ಮುನಿಜನರ ಪ್ರಾಣಪದಕ ಅನುಭವದ ನಿಜಸುಖ ಖೂನ ವಿಶ್ವತೋಮುಖ ಅಣುರೇಣು ವ್ಯಾಪಕ 4 ಮೂರು ಗುಣಕೆ ರಹಿತ ಗುರುಮೂರ್ತಿ ಸಾಕ್ಷಾತ ತರಳ ಮಹಿಪತಿದಾತ ಹೊರಿಯೊ ನೀ ಸದೋದಿತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಗುರು ನಾಗೇಶ ದಯಗುಣದಲಿ ನೀ ಮಾಡೊ ಭವತಾಪ ನಾಶ ದ್ರುವ ಜನ್ಮ ಮರಣಗಳೆಂಬ ಖಚ್ಚಿಖವಡಿಗಳು ನಿಮ್ಮ ನಾಮಸ್ಮರಣಿಲೆ ಓಡುದು ದುರಿತಗಳು ಬ್ರಹ್ಮಾನಂದದ ಸುಖ ಭಾಸುದು ಮನದೊಳು ನಮ್ಮ ಸ್ವಾಮಿ ನೀನೆ ಅಹುದೊ ಕೃಪಾಳು 1 ತಾಪತ್ರಯವೆಂಬುದು ಬಲು ಪೀಡಿಯ ಗುಣ ಆಶೆÀ ನೀನೆ ಪರಿಹಾರ ಮಾಡೊ ಘನ ಕರುಣ ಕೋಪತಾಪವೆಂಬುದು ತದ್ದುದುರೀಯ ಗುಣ ಕೃಪೆಯಿಂದಲಿ ಮಾಡುದು ನಿಮ್ಮ ಶ್ರಮ ನಿರ್ವಾಣ 2 ದುರಿತ ಸಂಹಾರ ಸುರಜನ ಸಹಕಾರ ಕರುಣಾಕರ ಗುರುಮೂರ್ತಿ ಮುನಿಜನ ಮಂದಾರ ತರಳ ಮಹಿಪತಿಸ್ವಾಮಿ ಘನ ಕೃಪಾಕರ ಶರಣ ರಕ್ಷಕ ಪೂರ್ಣ ನೀ ಜಗದೋದ್ಧಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ಧ್ರುವ ಖಡ್ಗವ ಕರದಲಿ ಪಿಡಿದು ಖಂಡಿಸಿದಙÁ್ಞನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ 1 ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನಮಾಡುವ ಸಹಕಾರ ಸಲಹುವೆ ಭಕ್ತಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿಶೂರ 2 ಪತಿ ಅಹದು ಶ್ರೀಗುರು ಭೂಪತಿ ಬಾಹ್ಯಾಂತ್ರಿ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೊ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಜಗಜೀವನ ಕರ ರತ್ನ ಧ್ರುವ ಅಜ ಸುರ ಮುನಿ ಪ್ರಾಣ ರಾಜೀವ ನಯನ ಸುಜನ ಸುಭೂಷಣ ತ್ರಿಜಗ ಪಾವನ 1 ಭಕ್ತ ಜನ ಉದ್ಧಾರ ಘನಗುರು ದಾತಾರ ಪತಿತಪಾವನಮೂರ್ತಿ ಮುನಿಜನ ಮಂದಾರ ಅತಿಶಯಾನಂದ ಅನುಪಮ ವ್ಯಾಪಕ ನಿರ್ಧಾರ ಸತತ ಸುಪಥ ಸದ್ಗುರು ಸಹಕಾರ 2 ಸಹ್ಯಾದ್ರಿ ಗಿರಿವಾಸ ಶ್ರೀಗುರು ಸರ್ವೇಶ ಬಾಹ್ಯಾಂತ್ರ ಪರಿಪೂರ್ಣ ಜಗದೀಶ ಮಹಿಪತಿಸ್ವಾಮಿ ಶ್ರೀ ದೇವದೇವೇಶ ದಾತ ಭಾಸ್ಕರಕೋಟಿ ಪ್ರಕಾಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಜಗನ್ನಾಥ ದಯಗುಣದಲಿ ಪರಿಪೂರ್ಣ ಶ್ರೀಗುರು ಮನ್ನಾಥ ಧ್ರುವ ಅಂದಿಗಿಂದಿಗೆ ನೀನೆ ನಿತ್ಯನುಭವದಿಂದ ತಂದಿ ತಾಯಿ ನೀನೆ ಶ್ರೀಹರಿ ಮುಕುಂದ ಬಂಧುಬಳಗ ನೀನೆ ಕುಲಕೋಟಿಗಳಿಂದ ಎಂದೆಂದೆನಗೆ ನೀನೆ ಫಲದೊಲವಿಂದ 1 ಸೃಷ್ಟಿ ಜನ ಪಾಲಕ ನೀನೆ ಸದ್ಗುರು ರನ್ನ ಸೃಷ್ಟಿಯಲಿ ಪೊಗಳುತಲಿ ಶ್ರುತಿಸ್ಮøತಿಗಳು ನಿನ್ನ ಇಷ್ಟ ಕುಲದೈವಗಳೆಂಬುದು ನೀ ಎನ್ನ ದೃಷ್ಟಿಸಿ ಮಾಡುವ ಭಕ್ತಜನರಿಗೆ ಪಾವನ್ನ 2 ಮನೋಹರ ಮಾಡುವ ಮಂಗಳಕರಮೂರ್ತಿ ಘನ ಸುಖದಾಯಕ ನೀನೆ ಜ್ಞಾನದ ನಿಜಸ್ಫೂರ್ತಿ ಭಾನುಕೋಟಿತೇಜ ನೀನೆ ಸಕಲಸಾರ್ಥಿ ಅನುದಿನ ಮಾಡೊ ಮಹಿಪತಿ ಶ್ರೀಪಾದಕೆ ಆರ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು