ಒಟ್ಟು 1634 ಕಡೆಗಳಲ್ಲಿ , 103 ದಾಸರು , 1095 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತಿ ದೇವಿಯೆ ಮಾರುತಿ ರಾಣಿಯೆ ಪ. ಮಂದಿ ನಾಲ್ವರನು ಹೊಂದಿಸಿ ಉದರÀದಿಒಂದೆ ರೂಪದಿ ಜನರಿಗೆ ತೋರುವ ಸತಿ1 ಸೀತಾಕಾಂತನ ದೂತನಾಗಿ ಪ್ರ-ಖ್ಯಾತಿಯ ಪಡೆದನ ಪ್ರೀತಿಯ ಸತಿಯಳೆ 2 ದುಷ್ಟ ಕಲಿಯ ಕುಲಕುಟ್ಟಿ ಕೆಡಹಿದ ಭಲಕಟ್ಟಾಳು ಭೀಮನ ಪಟ್ಟದಸತಿಯಳೆ 3 ಮೂರುಏಳುಕುಲ ಮಾಯಿಗಳನು ಗೆದ್ದುಬೋರೆಮರದ ಕೆಳಗಿರುವನ ಸತಿಯಳೆ 4 ಹಗಲಿರುಳೆನ್ನದೆ ಹಯವದನನ ಪದಹೃದಯ ಕಮಲದೊಳು ಭಜಿಪನ ಸತಿಯಳೆ 5
--------------
ವಾದಿರಾಜ
ಭಾವದಲ್ಲಿಯೆ ಪೊರೆಯೊ ದೇವ ದೇವ ಪ ಜೀವೋತ್ತಮರಸ ದೇವ ಗೋಪಾಲಕ ಅ.ಪ ಸಂದೇಹ ಭೀತಿಯೊಳ್ ನೊಂದೆನೊ ಬಹುಕಾಲ ಗಂಧವಾಹನ ವಂದ್ಯ ಸರ್ವ ಬಂಧೊ ಭವ ಬೊಮ್ಮ ಸುರರಿಗೆ ಒಂದಿಷ್ಟು ವಶವಲ್ಲವೆಂದು ದಯ ಸಲ್ಲಿಸೊ 1 ಒಳಗಿನಾ ಅಘಮೂಲವಳಿಯದೆ ಇಷ್ಟಾರ್ಥ ಮಳೆಗರೆದರೇನೊ ಗುಣವ ಹೊಂದೆ ಹಲುಬಿ ಬೇಡುವುದೊಂದು ಒಲಿದು ಕೊಡುವುದೊಂದು ಫಲ ಬೇಧವಾದರೆ ಮನ ನಂಬಿಸುವುದೆಂತೊ 2 ಹರಿ ನಿನ್ನ ಇಚ್ಛೆಗೆ ಎದುರಿಲ್ಲವಾದರೆ ಶರಣ ಸುರಧೇನು ಖರೆಯಾದರೆ ನೆರೆ ನಂಬಿದೆ ನಿನ್ನ ಜಯೇಶವಿಠಲ ಸುರರು ಜಯವೆಂಬಂತೆ ಹರಿಕೆಯ ಸಲಿಸೊ 3
--------------
ಜಯೇಶವಿಠಲ
ಭಾಳೆ ಗಾಬರಿಗೊಂಡಳು ಇಂದಿರಾದೇವಿಭಾಳೆ ಗಾಬರಿಗೊಂಡಳು ವ್ಯಾಲಾಶಯನನು ಇವಳ ಪೇಳಿದಂತಿರಲುಏನು ಬಾಳು ಯಾತಕೆ ಎಂದಳು ಪ. ಸಂಡಿಗೆ ಹಪ್ಪಳ ಮಂಡಗಿ ಗುಳ್ಳೋರಿಗೆ ದಿಂಡು ಸೂರಣವು ಮೊದಲಾಗಿದಿಂಡು ಸೂರಣವು ಮೊದಲಾಗಿ ಬಡಿಸೋರುದುಂಡು ಮುತ್ತುಗಳು ಉದುರುತ1 ಅಪಾರ ಮಹಿಮಗೆ ರೂಪಸುಂದರಿಯರು ಸೂಪ ಪರಮಾನ್ನ ಮೊದಲಾಗಿಸೂಪÀ ಪರಮಾನ್ನ ಮೊದಲಾಗಿ ಬಡಿಸುವವರಭಾಪುರಿ ಮುತ್ತು ಉದುರುತ 2 ಘೃತ ಘೃತ ಮೊದಲಾಗಿ ಬಡಿಸುವವರತೋರ ಮುತ್ತುಗಳು ಉದುರುತ 3 ನಗಧರನ ಪುರದೊಳಗೆ ಹಗಲು ರಾತ್ರಿಯು ಬಂದೆಝಗ ಝಗಿಸುವ ಮಣಿಯು ಖಚಿತದಝಗ ಝಗಿಸುವ ಮಣಿಯು ಖಚಿತವಾದುದರಿಂದಹಗಲು ರಾತ್ರಿಗಳು ತಿಳಿಯವು4 ಮಂದ ಗಮನೆಯರೆಲ್ಲ ಮಿಂದು ಮಡಿಯುಟ್ಟು ಇಂದಿರಾಪತಿಯ ಸರಿಯಾಗಿಇಂದಿರಾಪತಿಯ ಸರಿಯಾಗಿ ಊಟಕ್ಕೆ ಬಂದುಕುಳಿತವರು ಕಡೆಯಿಲ್ಲ5 ಪುಂಡರಿಕಾಕ್ಷÀನು ಉಂಡು ಕೈತೊಳೆದನು ದುಂಡುಮಲ್ಲಿಗೆಯ ಸೆಳಿಮಂಚದುಂಡು ಮಲ್ಲಿಗೆಯ ಸೆಳಿ ಮಂಚವನೇರಿದ ಪಾಡವಪ್ರಿಯ ಹರುಷದಿ 6 ಹದಿನಾರುಸಾವಿರ ಚದುರೆಯರು ಒಂದಾಗಿಚಲುವ ರಾಮೇಶನ ಉಪಚಾರಚಲುವ ರಾಮೇಶನ ಉಪಚಾರ ಮಾಡುವ ಸುದತೆಯರ ಸುಖಕೆ ಎಣೆಗಾಣೆ7
--------------
ಗಲಗಲಿಅವ್ವನವರು
ಭಿಕ್ಷಾಂ ದೇಹಿಮೇ ಸ್ವಾಮಿನ್ ಕುಕ್ಷಿಯು ತುಂಬುವ ತೆರದಲಿ ಭಕ್ತಿಯ ಪ ಭಿಕ್ಷೆಯ ಬೇಡಲು ಶಿಕ್ಷಿತನಲ್ಲವೊ ಕುಕ್ಷಿಯು ಬರಿದಾಗಿಹುದು ಭಕ್ತಿಯ ಅ.ಪ ಆರುಮಂದಿ ಶತ್ರುಗಳಿರುವರು ಬಲು ಕ್ರೂರರಿವರು ಎನ್ನನು ಬಿಡರೊ ದೂರ ಕಳುಹಲಾಹಾರವು ಸಾಲದು ಶಮ ದಮ 1 ನಮ್ಮವರಿರುವರು ಹತ್ತುಮಂದಿಗಳು ಸುಮ್ಮನಿರರು ಒಂದರಘಳಿಗೆ ಸಮ್ಮತಿಗೊಡದಿರೆ ಬಳಲಿಸುವರು ಇವ ರ್ಹಮ್ಮನು ಮುರಿಯುವೆ ವಿಷಯ ವಿರಕ್ತಿಯ 2 ಕತ್ತಲೆಯಲಿ ಬಂದಿರುವೆನು ಹೊಟ್ಟೆಯು ಹತ್ತಿ ಹೋಯಿತೊ ಹಸಿವಿನಲಿ ಎತ್ತ ಸುತ್ತಿದರೂ ತುತ್ತನು ಕಾಣೆನೊ ಭಕ್ತ ಪ್ರಸನ್ನ ದಯಾಜಲನಿಧೇ ಜ್ಞಾನ 3
--------------
ವಿದ್ಯಾಪ್ರಸನ್ನತೀರ್ಥರು
ಭೀಮಸೇನನ ಸ್ತ್ರೀವೇಷ ಭೀಮನು ಸರ್ವಜನಾ ಮೋಹಿಸುವಂಥಕಾಮಿನಿ ರೂಪವ ತೊಟ್ಟನು ಪ ಸೋಮ ಸಮಾನನ ತಾಮರಸಾಂಬಕಹೇಮಾಂಬರ ಕಂಠೀಮಣಿ ಗಣ ಸು -ತ್ರಾಮ ಕಾಮಿನಿಯಾ ಮೋಹಿಪ ಅಬಿ -ರಾಮರೂಪ ನಿಸ್ಸೀಮ ಬಲಾಢ್ಯ ಅ.ಪ. ಬಟಕುಚಪಟ ಕರಪುಟದಿಂದ ಹಿಗ್ಗಿಸಿ ತೀಡುತ ಅಂ-ಗುಟ ತುದಿಲೆಳೆದೆಳೆದುಟಿ ರಕ್ತಿಮೆಯನು ನೋಡುತಕುಟಿಲಾಳಕನ್ಯಾವರಿಸುತ ಪಟುಮಾತಾಡುತವಿಟರಿಗೆ ಸ್ಮರಸಂಕಟವನು ಹೃದಯದಲೂಡುತ ಪುಟ್ಟಚಂಡ ಹಾರಿಸಿ ನಟನೆ ಮಾಡುವಾ -ರ್ಭಟಕಂಜಿಹ ವಿಟಪಟಲ ಹಾಂಗಿರಲದುವಟುರಿದ್ದರು ಯತಿ ಮಠಮಂದಿರ ಲಂ -ಪಟವ ಬಿಟ್ಟ ಮಿಟಿಮಿಟಿ ನೋಡುವರೋ 1 ಕರಿಕಲಭಗಮನ ಸೊರಗಿದ ಕಟಿಕಂಠೀರವುವಿಠಲ ನಯನಜತ ಎರಳೆಗಳ್ ಮನೆಯನು ಸೇರವುಸರಸ ಸ್ವರದಿಂದ ಪರಿಭ್ರಮಿಸಿತು ಕಲಕಿರವುಸುರನರವರ ಸುಂದರಿಯರ ಚಲುವಿಕೆ ಮಾರವು ಹೆರಳ್ ಬಂಗಾರವು ಮಲ್ಲಿಗೆ ಸರಗೀ ಸರಹರಳ್ ಕಂಕಣ ಬಳೆ ಸರಳ್ ಬೆರಳುಂಗುರಅರಳ್ ಮಲ್ಲಿಗೆ ಸರ ಕೊರಳ್ ಗಂಧವ ಕಂಡುಮರುಳ್‍ಗೊರಡ ಜನ ಹಗಲಿರುಳು ಧೇನಿಪರೊ 2 ಮೃಗಮದತಿಲಕವು ಮುಗುಳ್ ನಗೆಮೊಗ ಬಿಂಬಾಧರಖಗಯುಗದಂದದಿ ಝಗಝಗಿಸುತಿಹ ಪಯೋಧರಅಘಹರ ರಾಜಗೋಪಗ ಸಖ ಪಾರ್ಥ ಸಹೋದರಬಗೆ ಬಗೆಯಲಿ ಮನದಗ ಅಘಹರನ ಕೃತಾದರಮುಗುಳ್ ಮಲ್ಲಿಗೆ ಸರ ತೆಗೆತೆಗೆದ್ಹಾಕುತಸೊಗಸು ಸುಗುಣರೂಪ ತಗುಬುಗಿಲೆನುತಿರೆಜಗದ ಜನರ ಮನ ಭುಗಿಭುಗಿಲೆನುತಿರೆಬಗೆ ಬಗೆಯಲಿ ಒಂದ್ಹಗಲ್ಯುಗವಾಗೆ 3
--------------
ರಾಜಗೋಪಾಲದಾಸರು
ಭೂತರಾಜರು ಭಜಿಸಿ ಬದುಕಿರೋ ದಿವ್ಯ ಪಾದಕೆರಗಿರೊಭಕುತಿಯಿತ್ತು ಪೊರೆವೊ ಭೂತರಾಜರೆಂಬರಾ ಪ ಭಾವ ಶುದ್ಧದಿ ಓದಿ ಗ್ರಂಥಸಾರವಾ ವಾದಿರಾಜರ ಕೂಡಿ ತಾನು ವ್ಯಾಸ ಮುನಿಯಲಿ 1 ಅಷ್ಟ ಮಂದಿಯಾ ಅಮೃತವೃಷ್ಟಿಗರೆವರೂ ಶ್ರೀ ಕೃಷ್ಣಮಹಿಮೆಯ ತಾವು ಕೂಡಿ ಪಾಡೊರೊ2 ತಂದೆ ಎಂಬೊದೂ ತಾನು ಒಂದನರಿಯದೆ ನಿಂದೆ ಮಾಡಿ ತಾನೆ ಬಲುಕುಂದಿಗಳುಕುವಾ 3 ಶಿಷ್ಟ ಜನರೊಳು ಇವನೇ ಶ್ರೇಷ್ಠವೇನಿದೂ ಸಿಟ್ಟಿನಿಂದ ಬೈದು ಬಹು ಕಷ್ಟಬಡುವನೊ 4 ಛಂಡಿ ಮನುಜನೇ ಪ್ರಚಂಡ ತಪಶಿಯೋಕೆಂಡ ತುಳಿದು ವ್ಯರ್ಥ ನೀನು ದಂಡಕಳುಕುವಿ 5 ಏನು ಪೇಳಲಿ ಇನ್ನೇನು ಹೇಳಲೀಜ್ಞಾನ ಶೂನ್ಯನಂತೆ ಶಿಕ್ಕಿ ನುಡಿಯ ಬ್ಯಾಡೆಲೋ 6 ಖುಲ್ಲ ಕೇಳೆಲೋ ಎಲೋ ಘಲ್ಲ ತೊಡದಿರೋನಿಗಮವೆಲ್ಲ ಪೇಳಿಸುವಾ ಕಲ್ಲಿನಿಂದಲೇ 7 ಶರಣು ಪೊಕ್ಕೆನೊ ಸ್ವಾಮಿ ಮರೆಯ ಪೊಕ್ಕೆನೊ ಕರುಣ ಮಾಡಿರೀ ಕಂಣು ತೆರೆದು ನೋಡಿರೀ 8 ಪಾದ ಸೋಂಕಲೂ9 ಭೀತಿಗೊಳಿಸುತಾನೇಕ ಭೂತ ಪ್ರೇತಕೇರಾಜನಾಗಿ ನೀನು ಭೂತ ಪ್ರೇತ ಗಣದೊಳು 10 ನಂದಿವಾಹನಾಪದಕೆ ಮುಂದೆ ಬಾಹುವೀ ಯನ್ನ ಕಂದ ನೀನು ನಾನೇ ಭಾವಿ ಮಂದಜಾಸನಾ 11 ಪಂಚವೃಂದದೀ ಸದ್ವøಂದ ಪೂಜ್ಯನಾ ದ್ವಂದ್ವ ಪೊಂದಿ ತಾನು ಸ್ವಾನಂದ ಪಡೆದನೂ 12 ಸ್ವಾದಿನಿಲಯನಾ ಬಲು ಪ್ರೀತಿ ಪಡೆದು ತಾ ತ್ರಿಶೂಲ ಧರಿಸಿದಾ ಭಾವಿ ಶೂಲ ರಮಣನೂ 13 ರೇಣು ಪಾದ ಫಣಿಯಲೀ ಪ್ರಾಣಿನಿಡದನಾ ಅವನ ಪ್ರಾಣ ಸೆಳೆವನಾ14 ಎಂತು ಪೇಳಲೀ ಇವರ ಅಚಿಂತ್ಯಮಹಿಮೆಯಾ ಶಾಂತಮೂರುತಿ ಶಶಿಕಾಂತ ಕೀರುತೀ15 ದೂಷಜನರನಾ ಬಲು ಘಾಸಿಗೊಳಿಸಿದಾ ಶಕ್ತಿದಾಯಕ ತಂದೆವರದಗೋಪಾಲವಿಠಲನು 16
--------------
ತಂದೆವರದಗೋಪಾಲವಿಠಲರು
ಭೃಂಗ ಭಕ್ತ ಕಾಮಿತಾರ್ಥದ ಮಂಗಳಾಂಗ ತಾಮಸಬಲ ನಿಗ್ರಹಣ ಪತಂಗ ಭ ವಾಮಯಹರ ಭಾರತಿ ಮುಖ ಸಂಗ ಪ. ಮಾನ ಸೇವರಾತಿ ಭೂಪ ಭಾನುಸರಣ ಸುಪ್ರತಾಪ ದೈತ್ಯ ಕ್ಷೋಣಿ ಸಂದರ್ಶಿತ ಕೋಪ ಜಾನಕಿವರನ ನಿಜಾನುಗನೆನಿಪ ಮ- ಹಾನುಭಾವ ಪವಮಾನ ದಯಾಪರ 1 ಇಂದು ಕುಲದಿ ತಾ ಜನಿಸಿ ನಿಜ ಬಂಧುಗಳನು ಸತ್ಕರಿಸಿ ಇಂದಿರೆಯರಸನ ಒಲಿಸಿ ಜರಾ- ಸಂಧ ಮುಖರನು ಸಂಹರಿಸಿ ಒಂದೇ ಕ್ಷಣದಿ ಸೌಗಂಧಿಕ ಕುಸುಮವ ತಂದು ಮಡದಿಗಾನಂದ ತೋರಿದ 2 ಕಲಿಯುಗದೊಳು ತಾ ಬಂದು ಮಾಯಿ ಬಲಿ ಭುಜರನು ಗೆಲವಂದು ಜಲಜನಾಭವ ಕರೆತಂದು ರೌಪ್ಯ ನಿಲಯದಿ ಸ್ಥಾಪಿಸಿ ನಿಂದು ಚೆಲುವ ಶೇಷಗಿರಿ ಪತಿಗತಿಯೆಂದು ನೆಲೆಯ ತೋರಿದ ಪುರುಕರುಣಾಸಿಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭೋಯತಿ ವರದೇಂದ್ರಾ ಶ್ರೀಗುರುರಾಯ ರಾಘವೇಂದ್ರಾ ಪ ಕಾಯನಿನ್ನ ಶುಭಕಾಯ ಭಜಿಸುವ ಕಾಯೊ ತವಕ ಚಂದ್ರಾ ಅ.ಪ ನೇಮವು ಎನಗೆಲ್ಲಿ ಇರುವದು ಕಾಮಿಯಾದವನಲ್ಲಿ ಭೂಮಹಾಮಹಿಮನ ಪಾಮರನೊ ನಿನ್ನ ನಾಮ ಒಂದೆ ಬಲ್ಲೆ 1 ಕಂಡ ಕಂಡ ಕಡೆಗೆ ತಿರುಗುತ ಬೆಂಡಾದೆನು ಕೊನೆಗೆ ಕಂಡ ಕಂಡವರನು ಬಲು ಕೊಂಡಾಡುತ ದಣ ಕೊಂಡೆ ಕಟ್ಟಕಡೆಗೆ 2 ಮಂತ್ರವು ನಾನರಿಯೆ ಶ್ರೀಮನ್ ಮಂತ್ರಾಲಯ ಧೊರಿಯೆ ಅಂತರಂಗದಲಿ ನಿಂತು ಪ್ರೇರಿಸುವ ನಂತಾದ್ರೀಶಧೊರಿಯೆ3
--------------
ಅನಂತಾದ್ರೀಶರು
ಮಕ್ಕಳ ಮಾಣಿಕವೆ ಮೋಹನ್ನ ಬಾ ರಂಗೈಯ್ಯಾ ಮಕ್ಕಳ ಮಾಣಿಕವೆ ಮೋಹನ್ನ ಎನ್ನಕ್ಕರದ ಗುಣನಿಧೆ ಬಾ ರಂಗೈಯ್ಯಾ ಪ. ಅಪ್ಪುತಪ್ಪು ಹೆಜ್ಜೆನಿಕ್ಕುತ ಬಾಯೊಳು ಜೊಲ್ಲು ಸುಪ್ಪಾಣಿಮುತ್ತಂತೆ ಸುರಿಯುತಾ ಬಾರಂಗೈಯ್ಯಾ ನಿನಗೊಪ್ಪುವಾಭರಣ ನೀಡುವೆನೊ ಅದನೊಲ್ಲದಿದ್ದರೆ ತುಪ್ಪಾಕಜ್ಜಾಯ ಕೊಡುವೆನೂ 1 ಅಂದಿಗೆ ಕಿರುಗೆÉಜ್ಜೆ ಅಲಗೊತ್ತು ಕೈಯೊಳಗಿದ್ದು ಬಿಂದುಲಿ ಬಾಜುಬಂದು ತಿರುಹೂತ ಬಾರಂಗೈಯ್ಯಾ ಬಂದೆನ್ನ ಬಿಗಿಯಪ್ಪಿಕೊಳ್ಳಯ್ಯ ಅದನೊಲ್ಲದಿದ್ದರೆ ಅಂದವಾದ ಒಂದು ಮುದ್ದು ತಾರಯ್ಯ 2 ಓಡಿಓಡಿ ಬಾರೋ ವಸುದೇವನಂದನಾ ಕಂದ ನೋಡಿ ನೋಡಿ ನಗುತ ಬಾರೊ ರಂಗಯ್ಯ ಕೋಡಗಲ್ಲವಾಸ ವೆಂಕಟ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ಜಯ ಮಂಗಳಂ ರಾಮ ಸಜ್ಜನರ ಪ್ರೇಮ ಮಂಗಳಂ ಲೋಕಾಭಿರಘುರಾಮ ಪಟ್ಟಾಭಿರಾಮ ಪ ಮಂಗಳಂ ಶ್ರೀ ದಶರಥಾತ್ಮಜಗೆ ಮಂಗಳಂ ಅಯೋಧ್ಯವಾಸಿಗೆ ಮಂಗಳಂ ಜನಕಜಾಮಾತೆಗೆ ಮಂಗಳಂ ಶ್ರೀ ರಾಮಚಂದ್ರಗೆ ಅ.ಪ ದೇವದೇವೋತ್ತಮ ವೈಕುಂಠದೊಳಗೆ ಶ್ರೀ ಭೂಮೇರಿಂದ ಸೇವೆಗಳ ಕೈಗೊಳ್ಳುತ ಮಲಗಿರಲು ದೇವಋಷಿ ಬ್ರಹ್ಮೇಂದ್ರಾದಿಗಳು ಸಹಿತ ಶ್ರೀಧರನ ಸ್ತುತಿಸುತ ರಾವಣಾಸುರನುಪಟಳ ವರ್ಣಿಸಲು ಸಂತೈಸಿ ಅವರನು ಭೂಮಿಪತಿ ದಶರಥನ ಪ್ರೇಮ ಕುಮಾರನಾಗುದಿಸುತಲಯೋಧ್ಯದಿ ಪ್ರೇಮ ತೋರುತ ಮೆರೆದವಗೆ ಜಯ1 ದಶರಥನ ಸುತರಾಗಿ ಬೆಳೆಯುತಲಿ ಕೌಶಿಕನÀಯಜ್ಞವ ಕುಶಲದಲಿ ರಕ್ಷಿಸುತ ಹರುಷದಲಿ ಶಶಿಮುಖಿಯ ಕೂಡುತ ಕುಶಲದಲಿ ವನವಾಸ ಚರಿಸುತಲಿ ದಶಶಿರನು ಜಾನಕಿಯ ಕದಿಯಲು ಶಶಿಮುಖಿಯನರಸುತಲಿ ವನವನ ವಸುಧಿಪತಿ ಕಪಿಗಳ ಕಳುಹಿ ಸತಿ ಕುಶಲ ತಿಳಿಯುತ ನಲಿದವಗೆ ಜಯ 2 ಬಂದ ಕಪಿ ಕಟಕವನೆ ನೋಡುತ್ತ ಸಾಗರಕೆ ಸೇತುವೆ ಒಂದೇ ನಿಮಿಷದಿ ರಚಿಸಿ ಶೀಘ್ರದಲಿ ಮಂದಮತಿ ರಾಕ್ಷಸರ ವಧಿಸುತಲಿ ಅಂದಣವ ಕಳುಹಿ ಮಂದಗಮನೆಯ ಕರೆಸಿ ಬೇಗದಲಿ ಬಂದ ರಾಮನು ಎಂದು ಮಾರುತಿ ಮುಂದೆ ಭರತಗೆ ಕುಶಲ ತಿಳಿಸಲು ತಂದೆ ಕಮಲನಾಥ ವಿಠಲ ಮುಂದೆ ಪ್ರಜೆಗಳ ಪೊರೆದವಗೆ ಜಯ 3
--------------
ನಿಡಗುರುಕಿ ಜೀವೂಬಾಯಿ
ಮಂಗಳದೇವಿಯರರಸಗೆ ತುಂಗಮಹಿಮ ತ್ರಿವಿಕ್ರಮಗೆ ಅಂಗನೆಯರು ಸಿರಿರಂಗಗಾರತಿಯನೆತ್ತಿದರೆ ಪ. ಶ್ರೀರುಕುಮಿಣಿ ಮೊದಲಾದ ನಾರಿಯರೆಲ್ಲರು ನೆರೆದು ವಾರಿಜದಳಲೋಚನಗಾರತಿಯನೆತ್ತಿದರೆ 1 ಮುತ್ತಿನ ಹರಿವಾಣದಲಿ ರತ್ನದ ಸಾಲ್ಗಳ ನೆರಪಿ ಚಿತ್ತಜನಯ್ಯಗೆ ಮುತ್ತ್ತಿನಾರತಿಯನೆತ್ತಿದÀರೆ 2 ಚಿನ್ನದ ಹರಿವಾಣದಲಿ ರನ್ನದ ಸಾಲ್ಗಳ ನೆರಪಿ ಚೆನ್ನಕೇಶವನಿಗೆ ಚಿನ್ನದಾರತಿಯನೆತ್ತಿದರೆ 3 ಹೃದಯದ ತಮವ ಗೆಲುವಗೆ ಸದುಗತಿಪಥವ ತೋರುವಗೆ ಸುದತಿಯರೆಲ್ಲರು ಮಂಗಳಾರತಿಯನೆತ್ತಿದರೆ 4 ಚಂದದ ಭೂಷಣಮಣಿಯೊಳು ನಂದಾದೀಪಗಳೆಲ್ಲ ಹೊಳೆಯೆ ಒಂದನಂತವ ಮಾಡಿಕೊಂಬಗಾರತಿಯನೆತ್ತಿದರೆ 5 ಕಂದರ್ಪಕೋಟಿಲಾವಣ್ಯಗೆ ಸೌಂದರ್ಯವಾದ ಮೂರುತಿಗೆ ಇಂದುಮುಖಿಯರೆಲ್ಲ ಮಂಗಳಾರತಿಯನೆತ್ತಿದರೆ 6 ಅಗಣಿತ ಗುಣಸಾಗರಗೆ ನಿಗಮವಂದಿತ ವೈಭವಗೆ ಅಘಕುಲದೂರಗೆ ಮಂಗಳಾರತಿಯೆನೆತ್ತಿದರೆ 7 ನಳಿತೋಳ್ಗಳ ನಸುನಗೆಯ ಹೊಳೆವ ಕಡಗ ಕಂಕಣದ ಸುಲಲಿತ ಕಾಂತಿಗೆ ಮಂಗಳಾರತಿಯೆತ್ತಿದರೆ 8 ಶೇಷವಂದಿತಪದಗೆ ಸುರೇಖಾದಿಗಳೊಡೆಯನಿಗೆ ಭಾಸುರಸುರಮಯಪೀಠಗಾರತಿಯನೆತ್ತಿದರೆ9 ಶ್ರೀಸತಿಯಪ್ಪಿಕೊಂಡಿಪ್ಪಗೆ ವಾಸುದೇವಾದಿವಿಗ್ರಹಗೆ ಕೇಶವ ನಾರಾಯಣಗಾರತಿಯನೆತ್ತಿದರೆ 10 ನಿಖಿಳ ಖಳರ ಸೀಳ್ದನಿಗೆ ಅಕುತೋಭಯನಿಗೆ ಮಂಗಳಾರತಿಯನೆತ್ತಿದರೆ 11 ಕೂರ್ಮ ವರಾಹನಿಗೆ ಕುತ್ಸಿತರೊಲ್ಲದ ಹರಿಗೆ ಚಿತ್ಸುಖರೂಪಗೆ ಮಂಗಳಾರತಿಯನೆತ್ತಿದರೆ12 ಶಂಕೆಯಿಲ್ಲದ ಹಯವದನಗೆ ಕಿಂಕರವರದ ಶ್ರೀಹರಿಗೆ ಪಂಕಜಮುಖಿಯರು ಮಂಗಳಾರತಿಯೆತ್ತಿದರೆ 13
--------------
ವಾದಿರಾಜ
ಮಟಮಾಯ ಮಟಮಾಯ ದಿಟ್ಟಿಸಿ ನೋಡೆಲೊ ಪ ದುಷ್ಟ ಸಂಸಾರವ ಕುಟ್ಟಿಕುಟ್ಟಿಕೊಂ ದೆಷ್ಟು ಮಾಡಿದರು ಕಟ್ಟಕಡೆಗೆಯಿದು ಅ.ಪ ಕೋಟಿಧನವ ನೀಟಾಗಿ ಗಳಿಸಲೇನು ಸಾಟಿಯಿಲ್ಲದ ಸಂಪತ್ತು ಇರ್ದರೇನು ಕಾಟುಮಾಡಿ ಯಮಗೂಟ ಒದಗಲಾಗ ದಾಟಿ ಹೋಗಬೇಕು ಅಷ್ಟು ಸಂಪದ ಬಿಟ್ಟು 1 ಆನೆಕುದುರೆ ಒಂಟೆ ವಾಹನವಿರಲು ಏನು ನಾನಾಸಿರಿಯು ಮಾನ್ಯ ಮಿರಾಸಿಗಿರಲೇನು ತ್ರಾಣಗುಂಡಿಸಿ ಯಮ ಪ್ರಾಣ ಸೆಳೆಯುವಾಗ ನಾನಾಭಾಗ್ಯ ಬಿಟ್ಟು ತಾನೆ ಹೋಗಬೇಕು 2 ಮಾನಪಾನದಿ ತಾನೆ ಹಿರಿಯನೆನಿಸಲೇನು ನಾನಾಪೊಡವಿಗೋರ್ವ ದಣಿಯಾಗಾಳಿದರೇನು ಪ್ರಾಣೇಶ ಶ್ರೀರಾಮಧ್ಯಾನವೊಂದಿಲ್ಲದಿರೆ ಏನು ಗಳಿಸಿದ್ದೆಲ್ಲ ಹಾನಿಯೆನಿಪುದೆಲೋ 3
--------------
ರಾಮದಾಸರು
ಮಣಿಗಣ ಭೂಷಣ ಅಣಿಗಾಣೆನಿಮಗಿನ್ನು ಗಣರಾಯ ಗಣರಾಯ ಪ. ರುದ್ರ ಕುಮಾರನೆ ಸಿದ್ಧಿ ನಿನಾಯಕ ವಿದ್ಯವಪಾಲಿಸೊಬುದ್ಧಿದಾತನೆ ಅ.ಪ. ಆನೆಯ ಮುಖದವನ ಧೇನಿಸಿನಮಿಸುವೆ ಗಣರಾಯ1 ಶ್ರೀನಿವಾಸನ ಪ್ರಿಯ ನೀನಮ್ಮಗೆಲಿಸೆಂದು ಗಣರಾಯ2 ಹಸ್ತಿಯ ಮುಖದವಗೆ ಹಸ್ತವ ಮುಗಿದೆವಸ್ವಸ್ಥ ಮನಸು ಕೊಡು ವಿಸ್ತರ ಉದರನೆ ಗಣರಾಯ3 ಗಂಧ ಅಕ್ಷತೆ ಪುಷ್ಪ ತಂದೆ ದುರ್ವಾಂಕುರ ಚಂದದ ವಸ್ತ್ರಗಳ ಒಂದೊಂದು ಕೈಕೊಳ್ಳೊ ಗಣರಾಯ 4 ರನ್ನ ಮಾಣಿಕ ಬಿಗಿದ ಚಿನ್ನದಾಭರಣವ ನಿನ್ನ ಪೂಜೆಗೆ ತಂದೆ ಚೆನ್ನಾಗಿ ಕೈಕೊಳ್ಳೊ ಗಣರಾಯ 5 ಚಕ್ಕಲಿ ತರುಗುಮಿಕ್ಕಾಗಿ ಲಡ್ಡುಗೆ ಚಿಕ್ಕಗಣಪ ಉಂಡು ಚಕ್ಕನೆ ವರಕೊಡು ಗಣರಾಯ 6 ಚಲ್ವ ರಾಮೇಶನನೆಲೆಕಂಡ ಪುರುಷನೆಇಲಿವಾಹನ ನಮ್ಮ ಸಲುಭದಿ ಗೆಲಿಸಯ್ಯ7
--------------
ಗಲಗಲಿಅವ್ವನವರು
ಮತವಿದು ಮುಚ್ಚಿ ಮುಚ್ಚಿಲ್ಲಾ | ಹುಚ್ಚರಾದರು ಈ ಜನರೆಲ್ಲಾ ಪ ಶಿವ ಹೇಳಿದನೋ ಶಾಂಭವಿಗೆ | ಜವನ ಭಯವಿಲ್ಲಾ ಅನುಭವಿಗೆ1 ನಡೆದರೆಲ್ಲಾ ಸಂತರು ಹಿಂದೆ | ಪಡೆದರು ಸದ್ಗತಿ ಇದರಲಿ ಒಂದೆ 2 ಭವಪಾತಕಿಗೆ ಅರಿವೇ ಇಲ್ಲಾ | ಭವತಾರಕ ತಾ ಮರೆ ಮಾಡಿಲ್ಲಾ 3
--------------
ಭಾವತರಕರು